Tag: ಆದ್ಯವೀರ್

  • ಪುತ್ರನ ಜೊತೆಗಿದ್ದ ಪತ್ನಿಯ ಫೋಟೋ ಹಾಕಿ ವರ್ಧಂತಿಯ ಶುಭ ಕೋರಿದ್ರು ಯದುವೀರ್

    ಪುತ್ರನ ಜೊತೆಗಿದ್ದ ಪತ್ನಿಯ ಫೋಟೋ ಹಾಕಿ ವರ್ಧಂತಿಯ ಶುಭ ಕೋರಿದ್ರು ಯದುವೀರ್

    ಮೈಸೂರು: ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತಮ್ಮ ಪತ್ನಿ ತ್ರಿಶಿಕಾ ಮತ್ತು ಮಗ ಆದ್ಯವೀರ್ ನ ಮುದ್ದಾದ ಫೋಟೋ ಹಾಕಿ ಶುಭಾಶಯ ಕೋರಿದ್ದಾರೆ.

    ಪ್ರುತನ ಜೊತೆ ಪತ್ನಿ ತ್ರಿಶಿಕಾ ಕುಮಾರಿ ಇರುವ ಫೋಟೋವನ್ನು ಪೋಸ್ಟ್ ಮಾಡಿ ಅವರಿಗೆ ವರ್ಧಂತಿಯ ಶುಭಾಶಯವನ್ನು ಯದುವೀರ್ ಕೋರಿದ್ದಾರೆ. ಪತ್ನಿ ಮತ್ತು ಆದ್ಯವೀರ್ ಮಾತ್ರವಲ್ಲದೇ ಫೋಟೋದಲ್ಲಿ ಆನೆ ಅರ್ಜುನ ಕೂಡ ಇದ್ದಾನೆ.

    ಯದುವೀರ್ ಅವರು, “ನನ್ನ ಧರ್ಮಪತ್ನಿಯಾದ, ಸನ್ನಿಧಾನ ಸವಾರಿಯವರು ಮಹಾರಾಣಿ ಶ್ರೀಮತಿ ತ್ರಿಶಿಕಾ ಕುಮಾರಿ ಒಡೆಯರ್ ಅವರ ವರ್ಧಂತಿಯಂದು ಶುಭ ಕೋರುತ್ತೇನೆ. ಜಗನ್ಮಾತೆಯಾದ ಶ್ರೀ ಚಾಮುಂಡೇಶ್ವರಿ ದೇವಿಯು ಅವರಿಗೆ ಸಮಸ್ತ ಸನ್ಮಂಗಳವನ್ನುಂಟು ಮಾಡಲಿ ಎಂದು ಪ್ರಾರ್ಥಿಸುತ್ತೇನೆ” ಅಂತ ಬರೆದುಕೊಂಡಿದ್ದಾರೆ.

    ಅರ್ಜುನ ಆನೆಯ ಮುಂದೆ ತ್ರಿಶಿಕಾ ಅವರು ಅವರು ಮಗ ಆದ್ಯವೀರ್ ಜೊತೆ ಇದ್ದ ಸಂತಸದ ಕ್ಷಣದಲ್ಲಿ ಈ ಫೋಟೋವನ್ನು ಸೆರೆ ಹಿಡಿಯಲಾಗಿದೆ. ಈ ಫೋಟೋದಲ್ಲಿ ಆದ್ಯವೀರ್ ಮುದ್ದಾಗಿ ನಗುತ್ತಿರುವುದು ಸೆರೆಯಾಗಿದೆ. ಇವರಿಬ್ಬರ ನಗುವನ್ನು ಆನೆ ಅರ್ಜುನ ಕೂಡ ನೋಡುತ್ತಾ ನಿಂತಿರುವ ರೀತಿ ಕಾಣುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮೊದಲ ದಸರಾಗೆ ಸಜ್ಜಾದ ಆದ್ಯವೀರ್ – ಈಗ ಅರಮನೆ ಒಡೆಯರ್ ಹೀಗಿದ್ದಾರೆ

    ಮೊದಲ ದಸರಾಗೆ ಸಜ್ಜಾದ ಆದ್ಯವೀರ್ – ಈಗ ಅರಮನೆ ಒಡೆಯರ್ ಹೀಗಿದ್ದಾರೆ

    ಮೈಸೂರು: ಐತಿಹಾಸಿಕ ಹಬ್ಬ ದಸರಾಗೆ ನಾಡಿನ ಜನತೆ ಸಿದ್ಧರಾಗುತ್ತಿದ್ದಾರೆ. ಇತ್ತ ಗಜಪಡೆಗಳು ಕೂಡ ಸಜ್ಜಾಗುತ್ತಿದ್ದು, ಯದುವಂಶದ ಆದ್ಯವೀರ್ ನರಸಿಂಹರಾಜ ಒಡೆಯರ್ ಕೂಡ ತನ್ನ ಮೊದಲ ದಸರಾ ಹಬ್ಬಕ್ಕೆ ತಯಾರಾಗುತ್ತಿದ್ದಾರೆ.

    ಆದ್ಯವೀರ್ ಡಿಸೆಂಬರ್ 6 2017ರಲ್ಲಿ ಜನಿಸಿದ್ದರು. ಆದ್ದರಿಂದ ಆದ್ಯವೀರ್ ಗೆ ಇದೇ ಮೊದಲ ದಸರವಾಗಿದೆ. ಈ ಬಾರಿಯ ದಸರಾ ವಿಶೇಷವಾಗಿದೆ. ಆದ್ದರಿಂದ ಮೈಸೂರಿನ ಸಂಸ್ಥಾನದ ಯದುವಂಶಕ್ಕೆ ಸುಮಾರು 6 ದಶಕಗಳಿಂದ ಸಂತಾನ ಇರಲಿಲ್ಲ. ಆದರೆ ಕಳೆದ ವರ್ಷ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ತ್ರಿಷಿಕಾ ದಂಪತಿಗೆ ಆದ್ಯವೀರ್ ಜನಿಸುವ ಮೂಲಕ ರಾಜಮನೆತನಕ್ಕೆ ಸಂತಾನ ಪ್ರಾಪ್ತಿಯಾಗಿತ್ತು. ಈ ಸಂತಸವನ್ನು ಇಡೀ ನಾಡಿನ ಜನತೆಯೂ ಸಂಭ್ರಮಿಸಿತ್ತು.

    ಆದ್ಯವೀರ್ ಜನಿಸಿ ಸುಮಾರು ಒಂಭತ್ತು ತಿಂಗಳಾಗಿದೆ. ಇದುವರೆಗೂ ಅವರ ಫೋಟೋ ಎಲ್ಲಿಯೂ ಲಭ್ಯವಾಗಿರಲಿಲ್ಲ. ಆದರೆ ಈಗ ಅವರು ಹೇಗಿದ್ದಾರೆ ಎಂಬುದನ್ನು ಈ ಫೋಟೋ ಮೂಲಕ ತಿಳಿಯಬಹುದು. ಆದ್ಯವೀರ್ ಅವರು ತಮ್ಮ ತಾಯಿ ತ್ರಿಷಿಕಾ ಅವರ ಆರೈಕೆಯಲ್ಲಿದ್ದಾರೆ.

    ಈಗಾಗಲೇ ದಸರಾಗೆ ಅರ್ಜುನ ಮತ್ತು ತಂಡ ಅರಮನೆಗೆ ಬಂದಿದ್ದು, ಅವುಗಳಿಗೆ ಪೌಷ್ಠಿಕ ಆಹಾರ ನೀಡುವ ಮೂಲಕ ಆರೈಕೆ ಮಾಡಲಾಗುತ್ತಿದೆ. ಪ್ರತಿದಿನ ಆನೆಗಳಿಗೆ ರಸ್ತೆಗಳಲ್ಲಿ ತಾಲೀಮು ನಡೆಯುತ್ತಿದೆ. ತೂಕವನ್ನು ಕೂಡ ಅಳತೆ ಮಾಡಲಾಗಿದೆ. ಇತ್ತೀಚೆಗಷ್ಟೆ ಅರ್ಜುನ ಮತ್ತು ತಂಡದ ಆನೆಗಳು ಅರಮನೆ ಮುಂದೆ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದವು. ನಾಡಿನ ಹಬ್ಬವಾದ ದಸರಾಗೆ ಸಕಲ ಸಿದ್ಧತೆ ಕೂಡ ನಡೆಯುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ತಾಯಿ ಚಾಮುಂಡಿ ದೇವಿಯ ಸನ್ನಿಧಾನದಲ್ಲಿ ಆದ್ಯವೀರ್ ತೊಟ್ಟಿಲು ಶಾಸ್ತ್ರ

    ತಾಯಿ ಚಾಮುಂಡಿ ದೇವಿಯ ಸನ್ನಿಧಾನದಲ್ಲಿ ಆದ್ಯವೀರ್ ತೊಟ್ಟಿಲು ಶಾಸ್ತ್ರ

    ಮೈಸೂರು: ಮೈಸೂರಿನ ರಾಜವಂಶಸ್ಥ ಯದುವೀರ್ ದಂಪತಿ ಕೆಲ ದಿನಗಳ ಹಿಂದೆ ಪುತ್ರನೊಂದಿಗೆ ಅರಮನೆಗೆ ಆಗಮಿಸಿದ್ದು, ಇಂದು ಚಾಮುಂಡಿ ಬೆಟ್ಟದಲ್ಲಿ ಶಾಸ್ತ್ರೋಕ್ತವಾಗಿ ತೊಟ್ಟಿಲು ಪೂಜೆ ನೆರವೇರಿದೆ.

    ಪುತ್ರನ ಜನನದ ನಂತರ ಯದುವೀರ್ ದಂಪತಿ ಚಾಮುಂಡಿ ದೇವಿಯ ದರ್ಶನ ಪಡೆದಿದ್ದು, ಕುಟುಂಬ ಸಮೇತ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಮಗನ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಾಲಯದ ಆವರಣದಲ್ಲಿ ಸಂಪಿಗೆ ಮರಕ್ಕೆ ಗಂಧದ ತೊಟ್ಟಿಲು ಕಟ್ಟಿ ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸಿದರು.

    ಫೆ.25ರಂದು ಬೆಂಗಳೂರು ಅರಮನೆಯಲ್ಲಿ ಯದುವೀರ್ ಪುತ್ರನಿಗೆ ನಾಮಕರಣ ಕಾರ್ಯಕ್ರಮ ನೆರವೇರಿತ್ತು. ಆದ್ಯವೀರ್ ನರಸಿಂಹರಾಜ ಒಡೆಯರ್ ಎಂದು ಮಗುವಿಗೆ ನಾಮಕರಣ ಮಾಡಲಾಗಿತ್ತು. ನಂತರ ಮೈಸೂರು ಅರಮನೆಗೆ ಬಂದ ದಂಪತಿಗೆ ಅರಮನೆಯಲ್ಲಿದ್ದ ಮುತ್ತೈದೆಯರು ಆರತಿ ಬೆಳಗಿ ಸ್ವಾಗತ ಕೋರಿದ್ದರು. ಮಗನಿಗೆ ಆದ್ಯವೀರ್ ಎಂದು ನಾಮಕರಣ ಮಾಡಲು ಕಾರಣ ಕೇಳಿದಾಗ ಯದುವೀರ್ ಅವರು, ಆದ್ಯಾ ಎಂದರೆ ದುರ್ಗಿ, ಚಾಮುಂಡಿ ಎಂದರ್ಥ. ಮಗುವಿನ ಒಳಿತಿಗಾಗಿ ಆ ಹೆಸರು ಇಡಲಾಗಿದೆ ಎಂದು ತಿಳಿಸಿದ್ದರು.

    ಯದುವೀರ್ ದಂಪತಿ ಶೀಘ್ರದಲ್ಲೇ ಪುತ್ರನ ಜೊತೆ ದೇವಾಲಯಗಳಿಗೆ ಪ್ರವಾಸ ಮಾಡಲಿದ್ದಾರೆ.

     

  • ನಾಮಕರಣ ಮುಗಿಸಿ ಬಂದ ಯದುವೀರ್ ದಂಪತಿ, ಆದ್ಯವೀರ್ ಗೆ ಮೈಸೂರು ಅರಮನೆಯಲ್ಲಿ ಅದ್ಧೂರಿ ಸ್ವಾಗತ!

    ನಾಮಕರಣ ಮುಗಿಸಿ ಬಂದ ಯದುವೀರ್ ದಂಪತಿ, ಆದ್ಯವೀರ್ ಗೆ ಮೈಸೂರು ಅರಮನೆಯಲ್ಲಿ ಅದ್ಧೂರಿ ಸ್ವಾಗತ!

    ಮೈಸೂರು: ಪುತ್ರ ಆದ್ಯವೀರ್ ಜೊತೆ ಮೈಸೂರು ಅರಮನೆಗೆ ಯದುವೀರ್ ದಂಪತಿ ಆಗಮಿಸಿದ್ದು, ತ್ರಿಷಿಕಾ ಹಾಗೂ ಯದುವೀರ್ ಅವರಿಗೆ ಆರತಿ ಬೆಳಗಿ ಸ್ವಾಗತ ಮಾಡಲಾಗಿದೆ.

    ಕಳೆದ ವಾರವಷ್ಟೆ ಬೆಂಗಳೂರು ಅರಮನೆಯಲ್ಲಿ ಯದುವೀರ್ ಪುತ್ರನಿಗೆ ನಾಮಕರಣ ಕಾರ್ಯಕ್ರಮ ನೆರವೇರಿತ್ತು. ಆದ್ಯವೀರ್ ನರಸಿಂಹರಾಜ ಒಡೆಯರ್ ಎಂದು ಮಗುವಿಗೆ ನಾಮಕರಣ ಮಾಡಲಾಗಿತ್ತು. ನಂತರ ಮೈಸೂರು ಅರಮನೆಗೆ ಬಂದ ದಂಪತಿಗೆ ಅರಮನೆಯಲ್ಲಿದ್ದ ಮುತ್ತೈದೆಯರು ಆರತಿ ಬೆಳಗಿ ಸ್ವಾಗತ ಕೋರಿದ್ದಾರೆ.

    ಯದುವೀರ್ ಕುಟುಂಬ ನಾಮಕರಣ ಕಾರ್ಯಕ್ರಮ ಮುಗಿಸಿ ಮೈಸೂರು ಅರಮನೆಗೆ ಬಂದಿದ್ದು, ಇದೀಗ ಮೈಸೂರು ಅರಮನೆಯಲ್ಲಿ ಸಂಭ್ರಮದ ವಾತಾವರಣ ಮನೆ ಮಾಡಿದೆ. ಆದ್ಯವೀರ್ ನನ್ನು ನೋಡಿ ಅರಮನೆ ಸಿಬ್ಬಂದಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮೈಸೂರು ಯದುವಂಶದ ಯುವರಾಜನಿಗೆ ನಾಮಕರಣ

    ಆದ್ಯವೀರ್ ತುಂಬಾ ಚೆನ್ನಾಗಿದ್ದಾನೆ. ನಾಮಕರಣ ಮುಗಿಸಿ ಮೈಸೂರಿಗೆ ಆಗಮಿಸಿದ್ದೇವೆ. ಬೆಂಗಳೂರಿನಲ್ಲಿ ನಾಮಕರಣ ಮಾಡಿದ್ದು ನಮ್ಮ ಅನುಕೂಲಕ್ಕಾಗಿ ಅಷ್ಟೇ. ಅದನ್ನು ಹೊರತುಪಡಿಸಿ ಬೇರೆ ಯಾವುದೇ ಉದ್ದೇಶವಿಲ್ಲ ಎಂದು ಮೈಸೂರಿನಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.

    ಶೀಘ್ರದಲ್ಲೇ ಚಾಮುಂಡಿ ಬೆಟ್ಟಕ್ಕೆ ಹೋಗಲಿದ್ದೇವೆ. ಆದ್ಯಾ ಎಂದರೆ ದುರ್ಗಿ, ಚಾಮುಂಡಿ ಎಂದರ್ಥ. ಮಗುವಿನ ಒಳಿತಿಗಾಗಿ ಆ ಹೆಸರು ಇಡಲಾಗಿದೆ. ಮಗು ಆದ್ಯವೀರ್ ಚೆನ್ನಾಗಿದ್ದಾನೆ. ಇಂದು ಬೆಂಗಳೂರಿನಿಂದ ಮೈಸೂರಿಗೆ ಕರೆತಂದಿದ್ದೇವೆ. ಮುಂದಿನ ಕಾರ್ಯಕ್ರಮಗಳೆಲ್ಲ ಅಮ್ಮನ ಸೂಚನೆಯಂತೆ ನಡೆಯಲಿದೆ ಎಂದು ಯದುವೀರ್ ತಿಳಿಸಿದ್ದಾರೆ.

    ಯದುವೀರ್ ದಂಪತಿ ಶೀಘ್ರದಲ್ಲೇ ಪುತ್ರನ ಜೊತೆ ದೇವಾಲಯಗಳಿಗೆ ಪ್ರವಾಸ ಮಾಡಲಿದ್ದಾರೆ.