Tag: ಆಧ್ಯಾತ್ಮ

  • Hathras Tragedy: ಇಬ್ಬರು ಮಹಿಳೆಯರು ಸೇರಿ ಸತ್ಸಂಗ ಸಂಘಟನಾ ಸಮಿತಿಯ 6 ಮಂದಿ ಅರೆಸ್ಟ್‌

    Hathras Tragedy: ಇಬ್ಬರು ಮಹಿಳೆಯರು ಸೇರಿ ಸತ್ಸಂಗ ಸಂಘಟನಾ ಸಮಿತಿಯ 6 ಮಂದಿ ಅರೆಸ್ಟ್‌

    ಲಕ್ನೋ: ಹತ್ರಾಸ್‌ ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ (Hathras Stampede) ಸಂಭವಿಸಿ 121 ಮಂದಿ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ 6 ಮಂದಿಯನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು (UP Police) ಗುರುವಾರ ತಿಳಿಸಿದ್ದಾರೆ.

    ಸತ್ಸಂಗ ಕಾರ್ಯಕ್ರಮ ಸಂಘಟನಾ ಸಮಿತಿಯ 6 ಮಂದಿ ಸದಸ್ಯರನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮಂಗಳವಾರ (ಜು.2) ಸ್ವಯಂ ಘೋಷಿತ ಗುರು ಭೋಲೆ ಬಾಬಾ ನಾರಾಯಣ್ ಸಾಕರ್ ಹರಿ (Bhole Baba aka Narayan Saakar Hari) ಪ್ರವಚನ ಕಾರ್ಯಕ್ರಮದ ನಂತರ ಕಾಲ್ತುಳಿತ ಸಂಭವಿಸಿ 121 ಮಂದಿ ಸಾವನ್ನಪ್ಪಿದ್ದರು. 31 ಮಂದಿ ಗಾಯಗೊಂಡಿದ್ದರು.

    ಈ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಪುರುಷರು, ಇಬ್ಬರು ಮಹಿಳೆಯರು ಸೇರಿ 6 ಮಂದಿಯನ್ನು ಬಂಧಿಸಲಾಗಿದೆ. ಅವರೆಲ್ಲರೂ ಸಂಘಟನಾ ಸಮಿತಿಯ ಸದಸ್ಯರಾಗಿದ್ದು, ಸೇವಾದಾರರಾಗಿ ಕೆಲಸ ಮಾಡುತ್ತಿದ್ದರು ಎಂದು ಅಲಿಗಢ್ ಇನ್ಸ್‌ಪೆಕ್ಟರ್ ಜನರಲ್ ಶಲಭ್ ಮಾಥುರ್ ಹೇಳಿದ್ದಾರೆ. ಇದನ್ನೂ ಓದಿ: ಹುತಾತ್ಮ ಅಗ್ನಿವೀರ್‌ ಕುಟುಂಬಕ್ಕೆ 98.39 ಲಕ್ಷ ನೀಡಲಾಗಿದೆ – ರಾಹುಲ್‌ ಆರೋಪದ ಬೆನ್ನಲ್ಲೇ ಸೇನೆ ಸ್ಪಷ್ಟನೆ

    ಪ್ರಮುಖ ಆರೋಪಿ ಸುಳಿವು ಕೊಟ್ಟರೆ 1 ಲಕ್ಷ ರೂ. ಬಹುಮಾನ:
    ಎಫ್‌ಐಆರ್‌ನಲ್ಲಿ ಮುಖ್ಯ ಸೇವಾದಾರ ದೇವಪ್ರಕಾಶ್ ಮಧುಕರ್‌ನನ್ನ ಪ್ರಮುಖ ಆರೋಪಿ ಎಂದು ಗುರುತಿಸಲಾಗಿದೆ. ಈತ ನಾಪತ್ತೆಯಾಗಿದ್ದು, ಮಧುಕರ್‌ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ನೀಡುವುದಾಗಿ ಪೊಲೀಸರು ಘೋಷಿಸಿದ್ದಾರೆ. ಅಲ್ಲದೇ ಕೋರ್ಟ್‌ ಜಾಮೀನು ರಹಿತ ಬಂಧನ ವಾರಂಟ್‌ ಜಾರಿಗೊಳಿಸಿದೆ ಎಂದೂ ತಿಳಿಸಿದ್ದಾರೆ. ಇದನ್ನೂ ಓದಿ: ತವರಿಗೆ ಮರಳಿದ ʼವಿಶ್ವʼ ಚಾಂಪಿಯನ್ಸ್‌! – ಇಂದು ಸಂಜೆ ಮುಂಬೈನಲ್ಲಿ ರೋಡ್‌ ಶೋ

    ಕಾಲ್ತುಳಿತ ಸಂಭವಿಸಿದ್ದು ಹೇಗೆ?
    ಸತ್ಸಂಗ (Satsang) ಕಾರ್ಯಕ್ರಮ ಮುಗಿದ ಬಳಿಕ ಸ್ವಯಂ ಘೋಷಿತ ಗುರು ಭೋಲೆ ಬಾಬಾ ನಾರಾಯಣ್ ಸಾಕರ್ ಹರಿ ಕಾರು ಹತ್ತಿದ್ದಾರೆ. ಕಾರು ಮುಂದಕ್ಕೆ ಹೋಗುತ್ತಿದ್ದಂತೆ ಚಕ್ರದ ಧೂಳನ್ನು ಸಂಗ್ರಹಿಸಲು ಅನುಯಾಯಿಗಳು ಮುಗಿಬಿದ್ದಿದ್ದಾರೆ. ಭಾರೀ ಸಂಖ್ಯೆಯಲ್ಲಿದ್ದ ಅನುಯಾಯಿಗಳು ಧೂಳು ಸಂಗ್ರಹಿಸಲು ಓಡಿದ ಪರಿಣಾಮ ಪುರುಷರು, ಮಹಿಳೆಯರು ಮತ್ತು ಮಕ್ಕಳು ಒಬ್ಬರ ಮೇಲೊಬ್ಬರು ಬಿದ್ದಿದ್ದಾರೆ. ಬಿದ್ದವರ ಮೇಲೆಯೇ ಜನರು ಓಡಿದ್ದರಿಂದ ಸಾವು, ನೋವಿನ ಸಂಖ್ಯೆ ಹೆಚ್ಚಾಗಿದೆ.

    ಸಿಎಂ ಯೋಗಿ ಆದಿತ್ಯನಾಥ್‌ ಅವರ ಸೂಚನೆ ನಂತರ ಪ್ರಕರಣಕ್ಕೆ ಸಂಬಂಧಿಸಿದ 6 ಮಂದಿಯನ್ನ ಬಂಧಿಸಲಾಗಿದೆ. ಅಗತ್ಯವಿದ್ದರೆ, ಸ್ವಯಂ ಘೋಷಿತ ದೇವಮಾನವ ಭೋಲೆ ಬಾಬಾ ಅವರನ್ನೂ ಸಹ ವಿಚಾರಣೆಗೆ ಒಳಪಡಿಸಬಹುದು. ಸದ್ಯಕ್ಕೆ ಅವರ ಹೆಸರು ಎಫ್‌ಐಆರ್‌ನಲ್ಲಿ ಉಲ್ಲೇಖವಾಗಿಲ್ಲ, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: MUDA Site Allotment Scam | ನನಗೆ 62 ಕೋಟಿ ಕೊಡಬೇಕು: ಸಿಎಂ

  • 2.5 ಲಕ್ಷ ಮಂದಿ ಭಾಗಿ, ದೇವಮಾನವನ ಕಾರಿನ ಚಕ್ರದ ಧೂಳನ್ನು ಸಂಗ್ರಹಿಸಲು ಮುಗಿಬಿದ್ದ ಅನುಯಾಯಿಗಳು!

    2.5 ಲಕ್ಷ ಮಂದಿ ಭಾಗಿ, ದೇವಮಾನವನ ಕಾರಿನ ಚಕ್ರದ ಧೂಳನ್ನು ಸಂಗ್ರಹಿಸಲು ಮುಗಿಬಿದ್ದ ಅನುಯಾಯಿಗಳು!

    ಲಕ್ನೋ: 80 ಸಾವಿರ ಮಂದಿಗೆ ಅನುಮತಿ ಪಡೆದು 2.5 ಲಕ್ಷ ಜನರನ್ನು ಸಂಘಟಕರು ಸೇರಿಸಿದ ಪರಿಣಾಮ ಉತ್ತರ ಪ್ರದೇಶದ (Uttar Pradesh) ಹತ್ರಾಸ್‌ ಸತ್ಸಂಗ (Hathras Satsang) ಕಾರ್ಯಕ್ರಮದಲ್ಲಿ ಕಾಲ್ತುಳಿತ ಸಂಭವಿಸಿ 121 ಮಂದಿ ಮೃತಪಟ್ಟಿದ್ದಾರೆ.

    ಹೌದು. ಈ ಪ್ರಕರಣ ಸಂಬಂಧ ಎಫ್‌ಐಆರ್‌ (FIR) ದಾಖಲಾಗಿದೆ. ಸಂಘಟಕರು 80 ಸಾವಿರ ಮಂದಿ ಭಾಗವಹಿಸುವ ಕಾರ್ಯಕ್ರಮಕ್ಕೆ ಅನುಮತಿ ನೀಡಬೇಕು ಎಂದು ಕೋರಿ ಮನವಿ ಮಾಡಿದ್ದರು. ಆದರೆ ಕಾರ್ಯಕ್ರಮಕ್ಕೆ 2.5 ಲಕ್ಷ ಮಂದಿ ಭಾಗವಹಿಸಿದ್ದರು ಎಂದು ಎಂಬ ಅಂಶ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

    ಕಾಲ್ತುಳಿತ ಸಂಭವಿಸಿದ್ದು ಹೇಗೆ?
    ಸತ್ಸಂಗ (Satsang) ಕಾರ್ಯಕ್ರಮ ಮುಗಿದ ಬಳಿಕ ಸ್ವಯಂ ಘೋಷಿತ ಗುರು ಭೋಲೆ ಬಾಬಾ ನಾರಾಯಣ್ ಸಾಕರ್ ಹರಿ (Bhole Baba aka Narayan Saakar Hari) ಕಾರು ಹತ್ತಿದ್ದಾರೆ. ಕಾರು ಮುಂದಕ್ಕೆ ಹೋಗುತ್ತಿದ್ದಂತೆ ಚಕ್ರದ ಧೂಳನ್ನು ಸಂಗ್ರಹಿಸಲು ಅನುಯಾಯಿಗಳು ಮುಗಿಬಿದ್ದಿದ್ದಾರೆ. ಭಾರೀ ಸಂಖ್ಯೆಯಲ್ಲಿದ್ದ ಅನುಯಾಯಿಗಳು ಧೂಳು ಸಂಗ್ರಹಿಸಲು ಓಡಿದ ಪರಿಣಾಮ ಪುರುಷರು, ಮಹಿಳೆಯರು ಮತ್ತು ಮಕ್ಕಳು ಒಬ್ಬರ ಮೇಲೊಬ್ಬರು ಬಿದ್ದಿದ್ದಾರೆ. ಬಿದ್ದವರ ಮೇಲೆಯೇ ಜನರು ಓಡಿದ್ದರಿಂದ ಸಾವು, ನೋವಿನ ಸಂಖ್ಯೆ ಹೆಚ್ಚಾಗಿದೆ. ಇದನ್ನೂ ಓದಿ: ಭಾಷಣಕ್ಕೆ ಕಿರುಚಿ ಅಡ್ಡಿಪಡಿಸಿ ಸುಸ್ತಾಗಿದ್ದ ಪ್ರತಿಪಕ್ಷ ಸದಸ್ಯರಿಗೆ ನೀರು ನೀಡಿದ ಮೋದಿ – ವಿಡಿಯೋ ವೈರಲ್‌

    ಪ್ರತ್ಯಕ್ಷದರ್ಶಿಗಳ ಪ್ರಕಾರ, ಈ ಬೃಹತ್ ಕಾರ್ಯಕ್ರಮಕ್ಕೆ ಭದ್ರತೆಗಾಗಿ ಕೇವಲ 40 ಪೊಲೀಸ್‌ ಸಿಬ್ಬಂದಿ ಮಾತ್ರ ಕರ್ತವ್ಯದಲ್ಲಿದ್ದರು. ಈ ಬಗ್ಗೆ ರಾಜ್ಯ ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭರವಸೆ ನೀಡಿದ್ದರೂ ಪ್ರಕರಣ ಸಂಬಂಧ ಇನ್ನೂ ಯಾರನ್ನೂ ಬಂಧಿಸಿಲ್ಲ.

    ಎಫ್‌ಐಆರ್‌ನಲ್ಲಿ ಸ್ವಯಂಘೋಷಿತ ದೇವಮಾನವನ ಸಹಾಯಕ, ಕಾರ್ಯಕ್ರಮದ ಮುಖ್ಯ ಸಂಘಟಕ ದೇವಪ್ರಕಾಶ್‌ ಮತ್ತು ಇತರರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ. ಆದರೆ ಗುರು ಭೋಲೆ ಬಾಬಾ ನಾರಾಯಣ್ ಸಾಕರ್ ಹರಿ ಹೆಸರು ಎಫ್‌ಐಆರ್‌ನಲ್ಲಿ ಇಲ್ಲ.

    ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (BNS) ಅನೇಕ ಸೆಕ್ಷನ್‌ಗಳ ಅಡಿಯಲ್ಲಿ ನರಹತ್ಯೆಗೆ ಸಂಬಂಧಿಸಿ ಕೊಲೆಗೆ ಸಮನಾದ  ಇತ್ಯಾದಿ ಸೆಕ್ಷನ್‌ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    ಸ್ವಯಂ ಘೋಷಿತ ದೇವಮಾನವನನ್ನು ಬಂಧಿಸಲಾಗುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿದ ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರಶಾಂತ್ ಕುಮಾರ್, ಸದ್ಯ ಈಗ ಪ್ರಕರಣ ತನಿಖಾ ಹಂತದಲ್ಲಿದೆ. ಈಗಲೇ ಯಾವುದೇ ತೀರ್ಮಾನ ತಗೆದುಕೊಂಡು ತನಿಖೆಯ ಮೇಲೆ ಪ್ರಭಾವ ಬೀರಲು ಬಯಸುವುದಿಲ್ಲ ಎಂದು ಹೇಳಿದರು.

     

  • ಹತ್ರಾಸ್‌ ಕಾಲ್ತುಳಿತಕ್ಕೆ 116 ಮಂದಿ ಬಲಿ – ಅಂದು ಹೆಡ್‌ ಕಾನ್‌ಸ್ಟೇಬಲ್‌ ಈಗ ಸ್ವಯಂಘೋಷಿತ ಗುರು!

    ಹತ್ರಾಸ್‌ ಕಾಲ್ತುಳಿತಕ್ಕೆ 116 ಮಂದಿ ಬಲಿ – ಅಂದು ಹೆಡ್‌ ಕಾನ್‌ಸ್ಟೇಬಲ್‌ ಈಗ ಸ್ವಯಂಘೋಷಿತ ಗುರು!

    ಲಕ್ನೋ: ಹತ್ರಾಸ್‌ ಸತ್ಸಂಗ (Satsang) ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ (Stampede) 116 ಮಂದಿ ಬಲಿಯಾಗಿದ್ದಾರೆ. ಈ ಸತ್ಸಂಗ ಕಾರ್ಯಕ್ರಮದ ಕೇಂದ್ರಬಿಂದು ಆಗಿರುವ ಸ್ವಯಂ ಘೋಷಿತ ಗುರು ಭೋಲೆ ಬಾಬಾ ನಾರಾಯಣ್ ಸಾಕರ್ ಹರಿ (Bhole Baba aka Narayan Saakar Hari) ಅವರು ಈ ಹಿಂದೆ ಗುಪ್ತಚರ ಬ್ಯೂರೋದಲ್ಲಿ (Intelligence Bureau) ಕೆಲಸ ಮಾಡಿದ್ದರು.

    ಸರ್ಕಾರಿ ಸೇವೆಯಲ್ಲಿದ್ದಾಗ ಆಧ್ಯಾತ್ಮದತ್ತ ಒಲವು ಹೊಂದಿದ್ದ ಅವರು ಆಧ್ಯಾತ್ಮಿಕ ಮಾರ್ಗವನ್ನು ಅನುಸರಿಸಲು ಹುದ್ದೆಗೆ ರಾಜೀನಾಮೆ ನೀಡಿದ್ದರು.

    ಉತ್ತರ ಪ್ರದೇಶದ ಇಟಾ ಜಿಲ್ಲೆಯ ಬಹದ್ದೂರ್ ನಗರಿ ಗ್ರಾಮದ ರೈತ ನನ್ನೆ ಲಾಲ್ ಮತ್ತು ಕಟೋರಿ ದೇವಿಯವರ ಮಗನಾಗಿ ಜನಿಸಿದ್ದರು. ಗುರು ಭೋಲೆ ಬಾಬಾ ಅವರ ಮೂಲ ಹೆಸರು ಸೂರಾಜ್‌ ಪಾಲ್‌. ಇವರಿಗೆ ಇಬ್ಬರು ಸಹೋದರರಿದ್ದು ಒಬ್ಬರು ಮೃತಪಟ್ಟಿದ್ದಾರೆ.

     

    ಹಳ್ಳಿಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ನಂತರ ಕಾಲೇಜ್‌ ಶಿಕ್ಷಣ ಓದಿ ಉತ್ತರ ಪ್ರದೇಶ ಪೊಲೀಸ್‌ನ ಸ್ಥಳೀಯ ಗುಪ್ತಚರ ಘಟಕದಲ್ಲಿ ಹೆಡ್ ಕಾನ್‌ಸ್ಟೆಬಲ್ ಆಗಿ ನೇಮಕಗೊಂಡಿದ್ದರು. ಗುಪ್ತಚರ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾಗ ಇವರ ಮನಸ್ಸು ಆಧ್ಯಾತ್ಮಿಕತೆಯ ಕಡೆಗೆ ತಿರುಗಿತು. 1999 ರಲ್ಲಿ ಪೊಲೀಸ್ ಕೆಲಸವನ್ನು ತೊರೆದ ಬಳಿಕ ತನ್ನ ಹೆಸರನ್ನು ನಾರಾಯಣ್ ಸಾಕರ್ ಹರಿ ಎಂದು ಬದಲಾಯಿಸಿ ಧಾರ್ಮಿಕ ಉಪನ್ಯಾಸ ನೀಡಲು ಆರಂಭಿಸಿದರು. ಇದನ್ನೂ ಓದಿ: ಹತ್ರಾಸ್‌ ದುರಂತ- ಮೃತರ ಕುಟುಂಬಕ್ಕೆ ತಲಾ 2 ಲಕ್ಷ, ಗಾಯಾಳುಗಳಿಗೆ ತಲಾ 50 ಸಾವಿರ ನೆರವು

    ಇವರು ಕೇಸರಿ ಬಟ್ಟೆಯನ್ನು ಧರಿಸುತ್ತಿರಲಿಲ್ಲ. ಬಿಳಿ ಬಣ್ಣದ ಶರ್ಟ್‌ ಮತ್ತು ಪ್ಯಾಂಟ್‌ ಧರಿಸುತ್ತಿದ್ದರು. ತನಗೆ ಸಿಕ್ಕಿದ ದೇಣಿಗೆಯನ್ನು ನಾನು ಇಟ್ಟುಕೊಳ್ಳುವುದಿಲ್ಲ. ಅದನ್ನು ಭಕ್ತರಿಗೆ ನೀಡುತ್ತೇನೆಂದು ಭೋಲೆ ಬಾಬಾ ಉಪದೇಶದಲ್ಲಿ ಹೇಳುತ್ತಿರುತ್ತಾರೆ. ಅಷ್ಟೇ ಅಲ್ಲದೇ ವೇದಿಕೆಯಲ್ಲಿ ಉಪನ್ಯಾಸ ನೀಡುವಾಗ ಹತ್ತಿರದಲ್ಲೇ ಪತ್ನಿ ಸಹ ಇರುತ್ತಾರೆ.

    ನಾನು ಹರಿ(ವಿಷ್ಣು) ಭಕ್ತ ಎಂದು ಹೇಳಿಕೊಳ್ಳುವ ಇವರಿಗೆ ಉತ್ತರ ಪ್ರದೇಶದ ಪಶ್ಚಿಮ ಭಾಗದಲ್ಲಿ ಭಾರೀ ಸಂಖ್ಯೆಯಲ್ಲಿ ಅನುಯಾಯಿಗಳನ್ನು ಹೊಂದಿದ್ದಾರೆ. ಕಾಲ್ತುಳಿತವಾದ ನಂತರ ಭೋಲೆ ಬಾಬಾ ನಾಪತ್ತೆಯಾಗಿದ್ದು ಅವರ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ.

    ಮಂಗಳವಾರ ಹತ್ರಾಸ್ ಜಿಲ್ಲೆಯ ಫುಲ್ರೈ ಗ್ರಾಮದಲ್ಲಿ ನಡೆದ ಸತ್ಸಂಗ ಕಾರ್ಯಕ್ರಮದಲ್ಲಿ ನಡೆದ ಕಾಲ್ತುಳಿತಕ್ಕೆ 116 ಮಂದಿ ಸಾವನ್ನಪ್ಪಿದ್ದಾರೆ. ಕಾರ್ಯಕ್ರಮ ನಡೆದ ಸ್ಥಳ ತುಂಬಾ ಚಿಕ್ಕದಾಗಿದ್ದು ಅಲ್ಲಿ ನೆರೆದಿದ್ದ ಜನಸಮೂಹಕ್ಕೆ ಅವಕಾಶ ಕಲ್ಪಿಸಲು ಸಾಧ್ಯವಾಗುತ್ತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ತನಿಖೆಗೆ ಸಮಿತಿಯನ್ನು ರಚಿಸಲಾಗಿದ್ದು, ಆಯೋಜಕರ ವಿರುದ್ಧ ಪ್ರಕರಣ ದಾಖಲಾಗಿದೆ.

    ಘಟನೆ ಹೇಗಾಯ್ತು?
    ಅಯೋಜಕರು 80 ಸಾವಿರ ಮಂದಿ ನಡೆಸುವ ಕಾರ್ಯಕ್ರಮ ಎಂದು ಹೇಳಿದ್ದರು. ಆದರೆ 1 ಲಕ್ಷಕ್ಕೂ ಹೆಚ್ಚು ಮಂದಿ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಕಾರ್ಯಕ್ರಮದ ನಿರ್ಗಮನ ಜಾಗ ಬಹಳ ಕಿರಿದಾಗಿತ್ತು. ಜನ ಮರಳುತ್ತಿದ್ದಾಗ ಸಣ್ಣ ಮೋರಿ ಬಳಿ ಕಾಲ್ತುಳಿತ ಸಂಭವಿಸಿದೆ.

  • ಸದ್ಗುರು ಹುಡುಕಿಕೊಂಡು ಭಾರತಕ್ಕೆ ಬಂದ ಆಸ್ಕರ್ ಪ್ರಶಸ್ತಿ ವಿಜೇತ ನಟ ವಿಲ್ ಸ್ಮಿತ್

    ಸದ್ಗುರು ಹುಡುಕಿಕೊಂಡು ಭಾರತಕ್ಕೆ ಬಂದ ಆಸ್ಕರ್ ಪ್ರಶಸ್ತಿ ವಿಜೇತ ನಟ ವಿಲ್ ಸ್ಮಿತ್

    ಸ್ಕರ್ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ನಿರೂಪಕರಿಗೆ ಕಪಾಳಮೋಕ್ಷ ಮಾಡುವ ಮೂಲಕ ದೊಡ್ಡ ಸುದ್ದಿ ಮಾಡಿದ್ದ ಹಾಲಿವುಡ್ ನಟ ವಿಲ್ ಸ್ಮಿತ್ ಮೊನ್ನೆಯಷ್ಟೇ ಭಾರತಕ್ಕೆ ಆಗಮಿಸಿದ್ದಾರೆ. ವಿಲ್ ಸ್ಮಿತ್ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಅದು ಭಾರೀ ಅಚ್ಚರಿಗೂ ಕಾರಣವಾಗಿತ್ತು. ಕಪಾಳಮೋಕ್ಷ ಪ್ರಕರಣದ ನಂತರ ಬಹಿರಂಗವಾಗಿ ಸ್ಮಿತ್ ಕಾಣಿಸಿಕೊಂಡಿದ್ದು, ಅದರೂ ಭಾರತದಲ್ಲಿ ಕಾಣಿಸಿಕೊಂಡಿದ್ದು ಕುತೂಹಲ ಮೂಡಿಸಿತ್ತು. ಇದನ್ನೂ ಓದಿ : ಮಂದಣ್ಣಗಾಗಿ ಮುಂಬೈನಲ್ಲಿ ಮುಗಿಬಿದ್ದ ಫ್ಯಾನ್ಸ್ : ಬಾಲಿವುಡ್ ನಲ್ಲೂ ರಶ್ಮಿಕಾ ಹವಾ

    ಮೊನ್ನೆಯಷ್ಟೇ ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಮೂಲಕ ಭಾರತಕ್ಕೆ ಬಂದಿದ್ದಾರೆ. ಸ್ಮಿತ್ ಇಲ್ಲಿಗೆ ಬರಲು ಕಾರಣವೇನು ಎನ್ನುವ ಹುಡುಕಾಟ ಕೂಡ ನಡೆದಿತ್ತು. ಈ ಹಿಂದೆ ಸ್ಮಿತ್ ಭಾರತ‍ಕ್ಕೆ ಬಂದದ್ದು ರಿಯಾಲಿಟಿ ಶೋವೊಂದರ ಶೂಟಿಂಗ್ ಗಾಗಿ ಆಗಿದ್ದರೂ, ಈ ಬಾರಿ ಅವರು ಯಾವ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನುವ ಕುತೂಹಲ ಮೂಡಿತ್ತು. ಆದರೆ, ಭಾರತಕ್ಕೆ ಅವರು ಈ ಬಾರಿ ಬಂದಿದ್ದು ಚಿತ್ರೀಕರಣಕ್ಕೆ ಅಲ್ಲವಂತೆ. ಇದನ್ನೂ ಓದಿ : ಬಾಲಿವುಡ್ ಎಂದರೆ ಭಾರತೀಯ ಸಿನಿಮಾರಂಗವಲ್ಲ: ಮೆಗಾಸ್ಟಾರ್ ಚಿರಂಜೀವಿಗೂ ಆಗಿತ್ತು ಅವಮಾನ

    ವಿಲ್ ಸ್ಮೀತ್ ಅಧ್ಯಾತ್ಮಿಕ ಜೀವಿ. ಅವರು ಭಾರತದ ಅಧ್ಯಾತ್ಮಿಕ ಪರಂಪರೆಯನ್ನು ಫಾಲೋ ಮಾಡುತ್ತಾರಂತೆ. ಹಾಗಾಗಿ ಸದ್ಗುರುವನ್ನು ಹುಡುಕಿಕೊಂಡು ಸ್ಮಿತ್ ಭಾರತಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದೆ. ಆಸ್ಕರ್ ಸಮಾರಂಭದಲ್ಲಿ ಆದ ಘಟನೆಯಿಂದ ಅವರ ಮನಸ್ಸಿಗೆ ತುಂಬಾ ಬೇಸರವಾಗಿದ್ದು, ಅದನ್ನು ಕಳೆಯುವುದಕ್ಕಾಗಿ ಅವರು ಭಾರತಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ : ಕೆಜಿಎಫ್ 2 : ಗೋವಾದಲ್ಲಿ ಸಕ್ಸಸ್ ಪಾರ್ಟಿ

    ಸದ್ಗುರು ಹುಡುಕಿಕೊಂಡು ಭಾರತಕ್ಕೆ ಬಂದ ಮೇಲೆ ಅವರು ಯಾವ ಆಶ್ರಮದಲ್ಲಿದ್ದಾರೆ. ಏನು ಮಾಡುತ್ತಿದ್ದಾರೆ ಎನ್ನುವ ಯಾವ ಮಾಹಿತಿಯೂ ಇಲ್ಲ. ಸದ್ಗುರು ಕೂಡ ಈ ಕುರಿತು ತಾವುದೇ ಮಾಹಿತಿ ಹಂಚಿಕೊಂಡಿಲ್ಲ. ಆದರೆ, ಹಲವು ದಿನಗಳ ಕಾಲ ಸ್ಮಿತ್ ಭಾರತದಲ್ಲೇ ತಂಗಲಿದ್ದಾರೆ ಎನ್ನುವ ಮಾಹಿತಿ ಇದೆ.

  • ಅಜಿತಾಬ್ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್: ಆಧ್ಯಾತ್ಮದ ಕಡೆಗೆ ಟೆಕ್ಕಿ ಚಿತ್ತ!

    ಅಜಿತಾಬ್ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್: ಆಧ್ಯಾತ್ಮದ ಕಡೆಗೆ ಟೆಕ್ಕಿ ಚಿತ್ತ!

    ಬೆಂಗಳೂರು: ನಗರದ ಟೆಕ್ಕಿ ಅಜಿತಾಬ್ ನಾಪತ್ತೆ ಪ್ರಕರಣ ರೋಚಕ ತಿರುವು ಪಡೆದುಕೊಂಡಿದ್ದು, ಬೇಕು ಅಂತಾಲೇ ನಾಪತ್ತೆಯಾಗಿರಬಹುದು ಎಂದು ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

    ಮೂಲತಃ ಬಿಹಾರದ ಪಾಟ್ನಾ ಮೂಲದ ಟೆಕ್ಕಿ ಅಜಿತಾಬ್ ಗೆ 25 ವರ್ಷವಾಗಿದ್ದು, ಆಧ್ಯಾತ್ಮ ಕಡೆ ಇನ್ನಿಲ್ಲದ ಒಲವು ಹೊಂದಿದ್ದರು. ಅಲ್ಲದೇ ತಮ್ಮ ಕೆಲ ಸ್ನೇಹಿತರಿಗೆ ಆರ್ ವಿಎಸ್(ರಾಜು ವಿಕಾಸ ಕೇಂದ್ರ)ದ ಚಿಂತನೆಗಳ ಬಗ್ಗೆ ಒಲವು ಬೆಳೆಸಿಕೊಳ್ಳುವಂತೆ ಸಲಹೆ ನೀಡುತ್ತಿದ್ದರು ಎಂದು ತನಿಖೆ ವೇಳೆ ತಿಳಿದು ಬಂದಿದೆ ಎಂದು ಸಿಐಡಿ ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.

    ಆರ್ ವಿಎಸ್ ಆಧ್ಯಾತ್ಮ ಕೇಂದ್ರಗಳು ಭಾರತ ಸೇರಿದಂತೆ ವಿದೇಶದ ಹಲವು ಕಡೆಗಳಲ್ಲಿದ್ದು, ಸಾಕಷ್ಟು ಭಾರೀ ವಿದೇಶಗಳಲ್ಲಿರುವ ಆರ್ ವಿಎಸ್ ಆಶ್ರಮಗಳಿಗೆ ಹೋಗಿ ಬಂದಿದ್ದಾರೆ. ಇದಲ್ಲದೇ ಟೆಕ್ಕಿ ಮನೆಯಲ್ಲಿ ಮದುವೆ ವಿಚಾರ ಕೂಡ ಪ್ರಸ್ತಾಪ ಮಾಡಿದ್ದಾರೆ. ಮೊದಲೇ ಆಧ್ಯಾತ್ಮದ ಕಡೆ ಹೆಚ್ಚು ಒಲವು ತೋರಿದ್ದ ಟೆಕ್ಕಿ ಇದರಿಂದ ತಪ್ಪಿಸಿಕೊಳ್ಳಲು ತಾನೇ ಸುವ್ಯವಸ್ಥಿತವಾಗಿ ಪ್ಲಾನ್ ಮಾಡಿ ಮಿಸ್ಸಿಂಗ್ ಆಗಿರಬಹುದು ಎಂದು ಸಿಐಡಿ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

    ಸಿಐಡಿ ಪೊಲೀಸರು ಈ ದಿಕ್ಕಿನಲ್ಲಿ ತನಿಖೆ ನಡೆಸುತ್ತಿದ್ದು, ಕೆಲ ದೇಶಿ ಆರ್ ವಿಎಸ್ ಆಧ್ಯಾತ್ಮ ಕೇಂದ್ರಗಳಲ್ಲಿ ತನಿಖೆ ನಡೆಸಿದ್ದಾರೆ. ತನಿಖೆ ವೇಳೆ ದೇಶಿ ಆಧ್ಯಾತ್ಮ ಕೇಂದ್ರಗಳು ಟೆಕ್ಕಿ ಬಗ್ಗೆ ಸರಿಯಾದ ಮಾಹಿತಿಯನ್ನು ನೀಡಲು ನಿರಾಕರಿಸಿವೆ. ಅಲ್ಲದೇ ವಿದೇಶಿ ಆಧ್ಯಾತ್ಮ ಕೇಂದ್ರಗಳಿಗೆ ಹೋಗಿ ತನಿಖೆ ನಡೆಸಲು ಮುಂದಾಗಲು ಅರ್ಥಿಕವಾಗಿ ತೊಂದರೆಯಿದೆ ಎಂದು ಸಿಐಡಿ ತಿಳಿಸಿದೆ.

    ಏನಿದು ಪ್ರಕರಣ?
    ಬೆಳ್ಳಂದೂರಿನ ಬ್ರಿಟೀಷ್ ಟೆಲಿಕಾಂ ನಲ್ಲಿ ಐದು ವರ್ಷದಿಂದ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಅಜಿತಾಬ್ ತನ್ನ ಸಿಯಾಜ್ ಕಾರನ್ನು ಮಾರಾಟ ಸಂಬಂಧ ಓಎಲ್ ಎಕ್ಸ್ ನಲ್ಲಿ ಮಾಹಿತಿ ಹಾಕಿದ್ದರು. ಓಎಲ್ ಎಕ್ಸ್ ನಲ್ಲಿ ಪ್ರಕಟಿಸಿದ ಬಳಿಕ ಕುಮಾರ್ ಅಜಿತಾಬ್ ಕರೆ ಬಂದಾಗಲೆಲ್ಲ ಕಾರು ಸಮೇತ ಹೊರ ಹೋಗಿ ಬರುತ್ತಿದ್ದರು. ಹೀಗೆ ಕಳೆದ ವರ್ಷ ಡಿಸೆಂಬರ್ 18 ರಂದು ಅವರ ಮೊಬೈಲ್ ಗೆ ಕರೆ ಬಂದಿತ್ತು. ಎಂದಿನಂತೆಯೇ ಅಜಿತಾಬ್, ಕೆಎ 03 ಎನ್‍ಎ 1751 ನಂಬರಿನ ತನ್ನ ಸಿಯಾಜ್ ಕಾರಿನಲ್ಲಿ ಹೊರ ಹೋಗಿದ್ದರು. ಹೊರ ಹೋದವರು ಇದೂವರೆಗೂ ಎಲ್ಲಿದ್ದಾರೆ ಎನ್ನುವುದು ತಿಳಿದು ಬಂದಿಲ್ಲ.

    ವೈಟ್ ಫಿಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಜಿತಾಬ್ ನಾಪತ್ತೆಯಾಗಿದ್ದು, ಅವರ ಪತ್ತೆಗಾಗಿ ವಿಶೇಷ ತನಿಖಾ ತಂಡ ರಚನೆ ಮಾಡಲಾಗಿತ್ತು. ನಂತರ ಪೋಷಕರ ಒತ್ತಡ ಹೆಚ್ಚಾಗುತ್ತಿದ್ದಂತೆ ಈ ಕೇಸನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿತ್ತು. ತನಿಖೆ ಕೈಗೊಂಡ ಸಿಐಡಿ ಪೊಲೀಸರು ಸ್ಫೋಟಕ ಮಾಹಿತಿಯನ್ನು ಕಲೆಹಾಕಿದ್ದಾರೆ.

  • 11 ಮಂದಿ ಆತ್ಮಹತ್ಯೆ ಕೇಸ್: ಮನೆಯಲ್ಲಿ 11 ಪೈಪ್, 11 ರಾಡ್, 11 ಕಿಟಕಿ ಪತ್ತೆ!

    11 ಮಂದಿ ಆತ್ಮಹತ್ಯೆ ಕೇಸ್: ಮನೆಯಲ್ಲಿ 11 ಪೈಪ್, 11 ರಾಡ್, 11 ಕಿಟಕಿ ಪತ್ತೆ!

    ದೆಹಲಿ: ಜುಲೈ 1ರಂದು ನಡೆದಿದ್ದ ದೆಹಲಿಯ ಬುರಾರಿ ಪ್ರದೇಶದಲ್ಲಿ ಒಂದೇ ಕುಟುಂಬದ 11 ಮಂದಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಿನದಿಂದ ದಿನಕ್ಕೆ ತಿರುವು ಪಡೆದುಕೊಳ್ಳುತ್ತಿದೆ.

    ಮನೆಯಲ್ಲಿ 11 ಕಿಟಕಿಗಳು, 11 ಪೈಪುಗಳು ಸಿಕ್ಕಿದ್ದು 11 ಮಂದಿಯ ಸಾವಿನ ಹಿಂದೆ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ತನಿಖೆ ವೇಳೆ ಮನೆಯಲ್ಲಿ ಸಿಕ್ಕ ಚೀಟಿಯ ಪ್ರಕಾರ ಮೃತ 11 ಮಂದಿಯು 10 ಕ್ರಮಗಳನ್ನು ಅನುಸರಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೇ ಇವರ ಮನೆಯಲ್ಲಿ ಬಾಗಿಲುಗಳು ಸಹ 11 ಕಬ್ಬಿಣದ ರಾಡ್‍ಗಳನ್ನು ಒಳಗೊಂಡಿದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

    ಮನೆಯ ಪೈಪ್‍ಗಳು ಹಾಗೆಯೇ ಯಾರು ಬಿಡುವುದಿಲ್ಲ. ಬಿಟ್ಟರೂ ಒಂದು ಮೂರು ನಾಲ್ಕು ಪೈಪ್ ಗಳನ್ನು ಬಿಡುವುದಿಲ್ಲ. ಆದರೆ ಗೋಡೆಯಲ್ಲಿ 11 ಪೈಪ್‍ಗಳು ಕಂಡುಬಂದಿದ್ದು, ಈ ಪೈಪ್‍ಗಳಿಗೆ ಹೊರಗಡೆಯಿಂದ ಯಾವುದೇ ಸಂಪರ್ಕ ಇಲ್ಲ. ಅಷ್ಟೇ ಅಲ್ಲದೇ ಒಂದೊಂದು ಪೈಪ್ ಗಳ ಗಾತ್ರ ಸಹ ಭಿನ್ನವಾಗಿದೆ. ಯಾಕೆ ಈ ರೀತಿಯಾಗಿ 11 ಪೈಪ್ ಗಳನ್ನು ಹಾಗೆಯೇ ಬಿಟ್ಟಿದ್ದಾರೆ ಎನ್ನುವುದು ನಿಗೂಢವಾಗಿದೆ.

    11 ಮಂದಿಯೂ ಆಧ್ಯಾತ್ಯದ ಮೊರೆ ಹೋಗಿ ಮೋಕ್ಷ ಸಿಗುತ್ತದೆ ಎಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ. ಈ ಆತ್ಮಹತ್ಯೆಗೆ ಪ್ರೇರೇಪಿಸಿದ ಗುರುಗಳ ಸುಳಿವು ಸಿಕ್ಕಿದ್ದು, ಅಧ್ಯಾತ್ಮಿಕ ಗುರುವಾದ ಜಾನೆಗಡಿ ಎಂದು ತಿಳಿದು ಬಂದಿದೆ. ಆಧ್ಯಾತ್ಮಿಕ ಗುರುಗಳಾದ ಜಾನೆಗಡಿಯನ್ನು ವಿಚಾರಣೆಗೆ ಒಳಪಡಿಸಿದರೆ ಪ್ರಕರಣದ ಸತ್ಯ ಹೊರಬೀಳಬಹುದು. ಹೀಗಾಗಿ ಜಾನೆಗಡಿ ಪತ್ತೆ ಕಾರ್ಯವನ್ನು ಪೊಲೀಸರು ಆರಂಭಿಸಿದ್ದಾರೆ.

    ಜಾನೆಗಡಿಯನ್ನು ಪತ್ತೆಹಚ್ಚಲು ಪೊಲೀಸರು ರಾಜಸ್ಥಾನ, ದೆಹಲಿ ಹಾಗೂ ಉತ್ತರ ಪ್ರದೇಶಕ್ಕೆ ತೆರಳಿದ್ದಾರೆ ಎಂದು ವರದಿಯಾಗಿದೆ.

    ಅಕ್ಕಪಕ್ಕದವರ ಹೇಳಿಕೆಯ ಪ್ರಕಾರ ಕುಟುಂಬವು ಆತ್ಮಹತ್ಯೆಗೂ ಮುಂಚೆ ಪ್ರಿಯಾಂಕ ಎಂಬವರ ಮದುವೆಗೆ ತಯಾರು ಮಾಡಿಕೊಳ್ಳುತ್ತಿದ್ದರು. ಭಾನುವಾರ ತಮ್ಮ ದಿನಸಿ ಅಂಗಡಿಯನ್ನು ಸುಮಾರು 11.45ಕ್ಕೆ ಮುಚ್ಚಿದ್ದಾರೆ. ನಂತರ ಅವರ ಮನೆಗೆ 10.40ಕ್ಕೆ ಫುಡ್ ಡೆಲಿವರಿ ಮಾಡುವ ವ್ಯಕ್ತಿ ಮಾತ್ರ ಬಂದಿದ್ದ ಎಂದು ತಿಳಿಸಿದ್ದಾರೆ.

    ಸೋಮವಾರ ಬೆಳಗ್ಗೆ ಅಕ್ಕಪಕ್ಕದ ಮನೆಯವರು ಕಿಟಕಿ ಮೂಲಕ ನೋಡಿದಾಗ ಮನೆಯ ಎಲ್ಲಾ ಸದಸ್ಯರು ನೇಣುಹಾಕಿಕೊಂಡು ಮೃತಪಟ್ಟಿರುವುದು ತಿಳಿದು ಬಂದಿತ್ತು. ಅವರು ಮನೆಯ ಎಲ್ಲಾ ಕಿಟಕಿ, ಬಾಗಿಲುಗಳನ್ನು ತೆರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಲ್ಲದೆ ತಾವು ಸಾಕಿದ್ದ ನಾಯಿಗೆ ಯಾವುದೇ ತೊಂದರೆ ಕೊಡದೆ, ಅದನ್ನು ಮನೆಯ ಮೇಲೆ ಕಟ್ಟಿಹಾಕಿದ್ದಾರೆ ಎಂದು ಹೇಳಿದ್ದಾರೆ.

    ಮರಣೋತ್ತರ ಪರೀಕ್ಷೆಯ ವರದಿ ಪ್ರಕಾರ ಮೃತರು ಒತ್ತಡಕ್ಕೊಳಗಾಗಿ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಕುಟುಂಬದ ನಾರಾಯಣ ದೇವಿ ಎಂಬ ವೃದ್ಧೆ ನೆಲದ ಮೇಲೆಯೇ ಸಾವನ್ನಪ್ಪಿದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. ಆದರೆ ಬೆರಳಚ್ಚು ತಜ್ಞರ ವರದಿಯ ಪ್ರಕಾರ ಅವರು ಬೆಲ್ಟ್ ಸಹಾಯದಿಂದ ಸ್ವತಃ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಿಸಿಬಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.