Tag: ಆನಂದ್ ನ್ಯಾಮಗೌಡ

  • ನಮ್ಮ ತಂದೆ ಕಾಂಗ್ರೆಸ್‍ನಲ್ಲಿ ಇದ್ರೂ ನಾನು ಇರುತ್ತೇನೆ, ಕಾಂಗ್ರೆಸ್ ಬಿಡಲ್ಲ – ಆನಂದ್ ನ್ಯಾಮಗೌಡ

    ನಮ್ಮ ತಂದೆ ಕಾಂಗ್ರೆಸ್‍ನಲ್ಲಿ ಇದ್ರೂ ನಾನು ಇರುತ್ತೇನೆ, ಕಾಂಗ್ರೆಸ್ ಬಿಡಲ್ಲ – ಆನಂದ್ ನ್ಯಾಮಗೌಡ

    – ಕ್ಷೇತ್ರದ ಜನರೇ ನನಗೆ ದೇವರಿದ್ದಂತೆ

    ಬಾಗಲಕೋಟೆ: ನಮ್ಮ ತಂದೆಯೂ ಕೂಡ ಕಾಂಗ್ರೆಸ್ಸಿನಲ್ಲಿದ್ದರು. ನಾನು ಸಹ ಪಕ್ಷದಲ್ಲೇ ಇರುತ್ತೇನೆ. ಕಾಂಗ್ರೆಸ್ ಬಿಡಲ್ಲ ಎಂದು ದಿವಂಗತ ಸಿದ್ದು ನ್ಯಾಮಗೌಡ ಅವರ ಪುತ್ರ ಹಾಗೂ ಜಮಖಂಡಿ ಕೈ ಶಾಸಕ ಆನಂದ್ ನ್ಯಾಮಗೌಡ ರಾಜೀನಾಮೆ ವದಂತಿಗೆ ಸ್ಪಷ್ಟನೆ ನೀಡಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ನಾನು ಕಾಂಗ್ರೆಸ್ ಪಕ್ಷ ಬಿಟ್ಟು ಹೋಗಲ್ಲ. ಯಾವ ಆಧಾರದ ಮೇಲೆ ನನ್ನ ಹೆಸರನ್ನು ಇದರಲ್ಲಿ ಬಹಿರಂಗ ಪಡಿಸಿದ್ದಾರೆ ನನಗೆ ಗೊತ್ತಿಲ್ಲ ಎಂದು ಹೇಳಿದರು.

    ಮೂರು ದಿನಗಳಿಂದ ಬಿಜೆಪಿ ಶಾಸಕರು ನನನ್ನು ಸಂಪರ್ಕ ಮಾಡುತ್ತಿದ್ದಾರೆ. ಆದರೆ ಅವರ ಹೆಸರನ್ನು ನಾನು ಬಹಿರಂಗ ಪಡಿಸಲ್ಲ. ಜನರ ಆಶೀರ್ವಾದದಿಂದ ಮೊದಲ ಬಾರಿಯೇ ಕ್ಷೇತ್ರದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ರಾಜೀನಾಮೆ ನೀಡಿ ಜನರ ಭಾವನೆಗೆ ಧಕ್ಕೆ ತರುವಂತಹ ಕೆಲಸ ಮಾಡಲ್ಲ ಎಂದು ತಿಳಿಸಿದರು.

    ನಮ್ನ ತಂದೆಯೂ ಕಾಂಗ್ರೆಸ್‍ನಲ್ಲಿಯೇ ಇದ್ದರು. ನಾನೂ ಕಾಂಗ್ರೆಸ್‍ನಲ್ಲಿಯೇ ಇರುತ್ತೇನೆ. ನಮ್ಮ ತಂದೆಯ ಹೆಸರು ಉಳಿಸಲು ರಾಜಕೀಯಕ್ಕೆ ಬಂದಿದ್ದೇನೆ. ಅವರ ಹೆಸರಿಗೆ ಕಪ್ಪು ಚುಕ್ಕೆ ತರಲು ಬಂದಿಲ್ಲ. ಇದರಲ್ಲಿ ಯಾವುದೇ ಸಂಶಯವಿಲ್ಲ. ನನ್ನನ್ನು ನಲವತ್ತು ಸಾವಿರ ಮತಗಳ ಅಂತರದಿಂದ ಗೆಲ್ಲಿಸಿದ್ದಾರೆ. ಕ್ಷೇತ್ರದ ಜನರೇ ನನಗೆ ದೇವರಿದ್ದಂತೆ ಎಂದು ಹೇಳಿದರು.

  • ಬ್ರಾಹ್ಮಣರನ್ನು ಹೀಯಾಳಿಸಿ ಕ್ಷಮೆ ಕೇಳಿದ ಶಾಸಕ ಆನಂದ್ ನ್ಯಾಮಗೌಡ

    ಬ್ರಾಹ್ಮಣರನ್ನು ಹೀಯಾಳಿಸಿ ಕ್ಷಮೆ ಕೇಳಿದ ಶಾಸಕ ಆನಂದ್ ನ್ಯಾಮಗೌಡ

    ಬಾಗಲಕೋಟೆ: ಜಮಖಂಡಿ ಕ್ಷೇತ್ರದ ನೂತನ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾದ ಆನಂದ್ ನ್ಯಾಮಗೌಡ ಅವರು ಅಲ್ಪಸಂಖ್ಯಾತರನ್ನು ಒಲೈಸಲು ಹೋಗಿ ಬ್ರ್ರಾಹ್ಮಣರನ್ನು ಹೀಯಾಳಿಸಿ ಬಳಿಕ ಕ್ಷಮೆಯಾಚಿಸಿದ ಘಟನೆ ಇಂದು ನಡೆದಿದೆ.

    ಜಮಖಂಡಿಯಲ್ಲಿ ಇಂದು ನಡೆದ ಅಲ್ಪಸಂಖ್ಯಾತ ಸಮುದಾಯದ ಅಭಿನಂದನಾ ಸಭೆಯಲ್ಲಿ ಮಾತನಾಡಿದ ಆನಂದ್ ನ್ಯಾಮಗೌಡ, 1990 ರಲ್ಲಿ ನಮ್ಮ ತಂದೆ ಸಿದ್ದು ನ್ಯಾಮಗೌಡ ಬ್ರಾಹ್ಮಣ ಸಮುದಾಯದ ರಾಮಕೃಷ್ಣ ಹೆಗಡೆ ಅವರನ್ನು ಸೋಲಿಸಿ ದೇಶಕ್ಕೆ ಚಿರಪರಿಚಿತರಾಗಿದ್ರು. ಸದ್ಯ ನಾನು ಬ್ರಾಹ್ಮಣ ವ್ಯಕ್ತಿಯನ್ನು ಸೋಲಿಸಿ ಶಾಸಕನಾಗಿದ್ದೇನೆ. ಬಿಜೆಪಿ ಅಭ್ಯರ್ಥಿ ಶ್ರೀಕಾಂತ್ ಕುಲಕರ್ಣಿ ಬ್ರಾಹ್ಮಣ ಸಮುದಾಯಕ್ಕೆ ಸೇರಿದವರು ಅವರನ್ನು ಸೋಲಿಸಿ ಇಂದು ಅಧಿಕಾರದಲ್ಲಿದ್ದೇನೆ ಎಂದು ವ್ಯಂಗ್ಯವಾಡಿದ್ದರು.

    ಆನಂದ್ ನ್ಯಾಮಗೌಡರ ಹೇಳಿಕೆಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬ್ರಾಹ್ಮಣ ಸಮಾಜದವರಿಂದ ಆನಂದ್ ನ್ಯಾಮಗೌಡರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗುತ್ತಿತ್ತು. ಈ ವಿಡಿಯೋ ಪಬ್ಲಿಕ್ ಟಿವಿಗೆ ಲಭಿಸಿದ್ದು, ಪ್ರಸಾರವಾದ ಬೆನ್ನಲ್ಲೇ ಶಾಸಕರು ಕ್ಷಮೆ ಕೋರಿದ್ದಾರೆ.

    ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಶಾಸಕರು, `ಬ್ರಾಹ್ಮಣ ಸಮುದಾಯವನ್ನು ಹೀಯಾಳಿಸುವುದು ನನ್ನ ಉದ್ದೇಶವಾಗಿರಲಿಲ್ಲ. ನನಗಿಂತ ಮೊದಲು ಭಾಷಣ ಮಾಡಿದವರು ಹೇಳಿದ ಮಾತನ್ನು ನಾನು ಮತ್ತೊಮ್ಮೆ ಹೇಳಿದ್ದೆ ಅಷ್ಟೆ. ಬ್ರಾಹ್ಮಣರನ್ನ ಸೋಲಿಸೋದು ನನ್ನ ಉದ್ದೇಶವಲ್ಲ ಚುನಾವಣೆ ಗೆಲ್ಲೋದು ನನಗೆ ಮುಖ್ಯವಾಗಿತ್ತು ಎಂದು ಸ್ಪಷ್ಟ ಪಡೆಸಲು ಆ ಮಾತು ಹೇಳಿದ್ದೆ. ಎಲ್ಲ ಸಮುದಾಯವನ್ನು ನಾವು ಸಮನಾಗಿ ನೋಡುತ್ತೇವೆ. ನನ್ನ ಹೇಳಿಕೆಯಿಂದ ಬ್ರಾಹ್ಮಣ ಸಮಾಜದವರಿಗೆ ನೋವಾಗಿದ್ದರೆ ಕ್ಷಮೆ ಕೇಳಲು ನಾನು ಸಿದ್ಧ ಎಂದು ಆನಂದ್ ನ್ಯಾಮಗೌಡ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಜಮಖಂಡಿ ಕ್ಷೇತ್ರದ ಕಾಂಗ್ರೆಸ್-ಬಿಜೆಪಿ ಅಭ್ಯರ್ಥಿಗಳಿಂದ ಇಂದು ನಾಮಪತ್ರ ಸಲ್ಲಿಕೆ

    ಜಮಖಂಡಿ ಕ್ಷೇತ್ರದ ಕಾಂಗ್ರೆಸ್-ಬಿಜೆಪಿ ಅಭ್ಯರ್ಥಿಗಳಿಂದ ಇಂದು ನಾಮಪತ್ರ ಸಲ್ಲಿಕೆ

    ಬಾಗಲಕೋಟೆ: ಜಮಖಂಡಿ ವಿಧಾನಸಭಾ ಉಪಚುನಾವಣೆ ತಾರಕಕ್ಕೇರಿದೆ. ಬಿಜೆಪಿಯ ಶ್ರೀಕಾಂತ್ ಕುಲಕರ್ಣಿ ಹಾಗೂ ಕಾಂಗ್ರೆಸ್ ಪಕ್ಷದ ಆನಂದ್ ನ್ಯಾಮಗೌಡ ಅಭ್ಯರ್ಥಿಗಳಿಬ್ಬರು ಬೃಹತ್ ಮರೆವಣಿಗೆ ಮೂಲಕ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

    ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗಾಗಿ ಎರಡು ಪಕ್ಷದ ಘಟಾನುಘಟಿ ನಾಯಕರು ಇಂದು ಜಮಖಂಡಿಗೆ ಆಗಮಿಸಲಿದ್ದಾರೆ. ಇತ್ತ ಕೈ ಪಕ್ಷದ ಅಭ್ಯರ್ಥಿ ಆನಂದ್ ನ್ಯಾಮಗೌಡ ಬೆಳಗ್ಗೆಯೇ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಖನ ಬೆಳ್ಳುಬ್ಬಿ ಗ್ರಾಮದ ಮಳೆಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ, ನಂತರ ಕಡಪಟ್ಟಿ ಬಸವೇಶ್ವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಮೆರವಣಿಗೆಯಲ್ಲಿ ಭಾಗಿಯಾಗಲಿದ್ದಾರೆ.

    ಆನಂದ್ ನ್ಯಾಮಗೌಡ ಪರ ನಾಮಪತ್ರ ಸಲ್ಲಿಕಾ ಕಾರ್ಯಕ್ರಮಕ್ಕಾಗಿ ಸೋಮವಾರವೇ ಜಮಖಂಡಿ ನಗರಕ್ಕೆ ಆಗಮಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಬೆಳ್ಳಂ ಬೆಳಿಗ್ಗೆ ಪೊಲೋ ಮೈದಾಣದಲ್ಲಿ ಭರ್ಜರಿ ವಾಕಿಂಗ್ ಮಾಡಿದರು. ಸತತ ಒಂಬತ್ತು ರೌಂಡ್ ವಾಕ್ ಮಾಡಿದ ಸಿದ್ದರಾಮಯ್ಯ, ನಗರದ ಜನರಿಗೆ ಕುತೂಹಲ ಮೂಡಿಸಿತು. ಈ ಮೂಲಕ ಮಾಜಿ ಸಿಎಂ ಸಿದ್ಧರಾಮಯ್ಯ ಚುನಾವಣಾ ಪ್ರಚಾರಕ್ಕೆ ಭರ್ಜರಿಯಾಗಿ ತಯಾರಾದಂತೆ ಭಾಸವಾದರು. ಮಾಜಿ ಸಿಎಂ ವಾಕ್ ಮಾಡುತ್ತಿದ್ದರೆ, ಇತ್ತ ಸೇರಿದ ಜನರು ಸೆಲ್ಫಿ ತೆಗೆಸಿಕೊಳ್ಳಲು ಮುಗಿಬಿದ್ದಿದ್ದರು.

     

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv