Tag: ಆನೆಗಳು

  • ತಾನು ಸಾಕಿದ್ದ ಎರಡು 2 ಆನೆಗಳಿಗೆ ಇಡೀ ಆಸ್ತಿಯನ್ನೇ ಬರೆದ

    ತಾನು ಸಾಕಿದ್ದ ಎರಡು 2 ಆನೆಗಳಿಗೆ ಇಡೀ ಆಸ್ತಿಯನ್ನೇ ಬರೆದ

    – ರೌಡಿಗಳಿಂದ ಮಾಲೀಕನ ಪ್ರಾಣ ಉಳಿಸಿದ್ದ ಆನೆ
    – ನಾನು ಇಲ್ಲದಿದ್ದಾಗ ಹಸಿವಿನಿಂದ ಬಳಲಬಾರದು

    ಪಾಟ್ನಾ: ಇತ್ತೀಚೆಗೆ ಕೇರಳದಲ್ಲಿ ಪಟಾಕಿ ತುಂಬಿದ್ದ ಪೈನಾಪಲ್ ಹಣ್ಣು ತಿಂದು ಗರ್ಭಿಣಿ ಆನೆಯೊಂದು ಸಾವನ್ನಪ್ಪಿತ್ತು. ಆದರೆ ಬಿಹಾರದ ಪ್ರಾಣಿ ಪ್ರೇಮಿಯೊಬ್ಬರು ತಮ್ಮ ಸಂಪೂರ್ಣ ಆಸ್ತಿಯನ್ನು ತಾವು ಸಾಕಿದ್ದ ಎರಡು ಆನೆಗಳಿಗೆ ಕೊಟ್ಟಿದ್ದಾರೆ.

    ಪಾಟ್ನಾದ ಮೊಹಮ್ಮದ್ ಅಖ್ತರ್ ಇಮಾಮ್ (50) ತಾವು ಸಾಕಿರುವ 20 ಮತ್ತು 15 ವರ್ಷ ವಯಸ್ಸಿನ ಎರಡು ಆನೆಗಳಿಗೆ ಕೋಟ್ಯಂತರ ಬೆಲೆ ಬಾಳುವ ಜಮೀನನ್ನು ಕೊಟ್ಟಿದ್ದಾರೆ. ಅಲ್ಲದೇ ಅಖ್ತರ್ ಮೋತಿ ಮತ್ತು ರಾಣಿ ಎಂಬ ಹೆಸರಿನ ತನ್ನ ಎರಡು ಆನೆಗಳೊಂದಿಗೆ ವಾಸಿಸುತ್ತಿದ್ದಾರೆ.

    “ಕುಟುಂಬ ಪರಂಪರೆಯಾಗಿ ಈ ಎರಡು ಆನೆಗಳು ನನಗೆ ಸಿಕ್ಕಿವೆ. ಮೋತಿ ಮತ್ತು ರಾಣಿ ನನ್ನ ಮಕ್ಕಳಂತೆ. ನನ್ನ ಬಾಲ್ಯದಿಂದಲೂ ನಾನು ಅವರೊಂದಿಗೆ ವಾಸಿಸುತ್ತಿದ್ದೇನೆ. ಇಬ್ಬರು ನನ್ನ ಕುಟುಂಬ ಸದಸ್ಯರು. ನಾನು ಜೀವಂತವಾಗಿರದಿದ್ದಾಗ ಎರಡು ಆನೆಗಳು ಹಸಿವಿನಿಂದ ಬಳಲುವಂತಾಗಬಾರದು. ಹೀಗಾಗಿ ನನ್ನ 6.25 ಎಕರೆ ಭೂಮಿಯನ್ನು ಎರಡು ಆನೆಗಳಿಗೆ ವಿಲ್ ಬರೆದಿದ್ದೇನೆ” ಎಂದು ಅಖ್ತರ್ ತಿಳಿಸಿದರು.

    ಎರಡು ಆನೆಗಳಲ್ಲಿ ಮೋತಿ ನನ್ನ ಜೀವವನ್ನು ಉಳಿಸಿದ್ದಾನೆ. ಮೋತಿ ಭೋಜಪುರ ಜಿಲ್ಲೆಯ ಶಹಪುರ್ ಪ್ರದೇಶಕ್ಕೆ ಮಾವುತನ ಜೊತೆಗೆ ಹೋಗಿದ್ದನು. ಅಲ್ಲಿ ಅವನು ಅನಾರೋಗ್ಯಕ್ಕೆ ಒಳಗಾಗಿದ್ದ. ಆತನಿಗೆ ಚಿಕಿತ್ಸೆ ನೀಡಲು ನಾನು ಅಲ್ಲಿಗೆ ಹೋದೆ. ಒಂದು ದಿನ ನಾನು ಅಲ್ಲಿ ನಿದ್ದೆ ಮಾಡುವಾಗ ಮೋತಿ ಜೋರಾಗಿ ಕೂಗಿಕೊಂಡ. ತಾನು ತಕ್ಷಣ ಎಚ್ಚರಕೊಂಡೆ, ಆಗ ಯಾರೋ ರೌಡಿಗಳು ನನ್ನನ್ನು ಕೊಲೆ ಮಾಡಲು ಯತ್ನಿಸಿದ್ದರು. ಆಗ ನನ್ನ ಜೀವವನ್ನು ಉಳಿಸಿಕೊಳ್ಳಲು ಓಡಿ ಹೋಗಿದ್ದೆ ಎಂದು ಅಖ್ತರ್ ನಡೆದ ಘಟನೆಯ ಬಗ್ಗೆ ವಿವರಿಸಿದರು.

    ನನ್ನ ಸ್ವಂತ ಕುಟುಂಬ ಸದಸ್ಯರು ಪ್ರಾಣಿ ಕಳ್ಳಸಾಗಾಣಿಕೆದಾರರೊಂದಿಗೆ ಕೈಜೋಡಿಸಿದ್ದಾರೆ. ಈ ಆನೆಗಳನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ಎರಡು ಆನೆಗಳಿಗೆ ನನ್ನ ಆಸ್ತಿಯನ್ನು ಬರೆದಿರುವುದರಿಂದ ನನ್ನ ಕುಟುಂಬ ಸದಸ್ಯರಿಂದ ನನಗೆ ಜೀವ ಭಯವಿದೆ ಎಂದು ಅಖ್ತರ್ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಖ್ತರ್ ವನ್ಯಜೀವಿ ವಾರ್ಡನ್ ಮತ್ತು ಪಾಟ್ನಾ ಪೊಲೀಸ್ ಮುಖ್ಯಸ್ಥರಿಗೆ ಈ ಬಗ್ಗೆ ಪತ್ರ ಬರೆದಿದ್ದಾರೆ.

    ಸರ್ಕಾರ ಆನೆಯನ್ನು ರಕ್ಷಿಸಬೇಕು. ಇಲ್ಲವಾದರೆ ಮುಂದೆ ನಾವು ಆನೆಗಳು ಇದ್ದವು ಎಂದು ಪುಸ್ತಕಗಳಲ್ಲಿ ಮಾತ್ರ ನೋಡಬೇಕಾಗುತ್ತದೆ. ಆನೆಗಳು ಆಹಾರವನ್ನು ಹುಡುಕಿಕೊಡು ಗ್ರಾಮಗಳಿಗೆ ಬರುತ್ತವೆ. ಹೀಗಾಗಿ ನಾವು ಕಾಡನ್ನ ಉಳಿಸಬೇಕು ಎಂದು ಸರ್ಕಾರದ ಬಳಿ ಅಖ್ತರ್ ಮನವಿ ಮಾಡಿದರು.

  • ಆನೆಗೂ ಕೊರೊನಾ ವೈರಸ್ ಭೀತಿ – ಮಠದಲ್ಲೇ ಐಸೋಲೇಷನ್

    ಆನೆಗೂ ಕೊರೊನಾ ವೈರಸ್ ಭೀತಿ – ಮಠದಲ್ಲೇ ಐಸೋಲೇಷನ್

    ಗದಗ: ದೈತ್ಯ ಆನೆಗೆ ಇರುವೆಯೊಂದು ಕಾಟ ಕೊಡುವ ಕಥೆ ಕೇಳಿದ್ದೆವು. ಆದರೆ ಈಗ ಕಣ್ಣಿಗೆ ಕಾಣದ ಕೊರೊನಾ ವೈರಸ್ ಆನೆಗಳಲ್ಲೂ ಭೀತಿ ಹುಟ್ಟಿಸಿದ್ದು, ಆನೆಗಳಿಗೆ ಕೊರೊನಾ ಹರಡಬಾರದು ಎಂದು ಜಿಲ್ಲೆಯ ಶಿರಹಟ್ಟಿಯ ಫಕೀರೇಶ್ವರ ಮಠ ಹಾಗೂ ಲಕ್ಷ್ಮೇಶ್ವರ ಸಮೀಪದ ಮುಕ್ತಿ ಮಂದಿರದ ಆನೆಗಳನ್ನು ಮಠದಲ್ಲೇ ಐಸೋಲೇಷನ್‍ನಲ್ಲಿ ಇಡಲಾಗಿದೆ.

    ಪ್ರತಿದಿನ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪಶುವೈದ್ಯರು ಬಂದು ಎರಡೂ ಆನೆಗಳ ಆರೋಗ್ಯವನ್ನು ಪರೀಕ್ಷೆ ಮಾಡುತ್ತಿದ್ದಾರೆ. ಈ ಮೊದಲು ಎರಡೂ ಆನೆಗಳನ್ನು ಪ್ರತಿದಿನ ನಾಲ್ಕಾರು ಕಿಲೋಮೀಟರ್ ವಾಕಿಂಗ್ ಹಾಗೂ ಆಹಾರಕ್ಕಾಗಿ ಕರೆದುಕೊಂಡು ಹೋಗಲಾಗುತಿತ್ತು. ಆದರೆ ಸರ್ಕಾರದ ಲಾಕ್‍ಡೌನ್ ಆದೇಶದ ನಂತರ ಎರಡು ಆನೆಗಳಿಗೆ ಮಠದಲ್ಲೇ ಆರೈಕೆ ಮಾಡಲಾಗುತ್ತಿದೆ. ಅರಣ್ಯ ಇಲಾಖೆಯವರು ಎರಡು ಆನೆಗಳ ಆರೋಗ್ಯದ ಬಗ್ಗೆ ಸಾಕಷ್ಟು ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ.

    ಪ್ರತಿದಿನ ಮಠಗಳಿಗೆ ಭೇಟಿ ನೀಡಿ ಎರಡು ಆನೆಗಳ ಆರೋಗ್ಯದ ಬಗ್ಗೆ ಪಶುವೈದ್ಯರು ನಿಗಾ ವಹಿಸಿದ್ದಾರೆ. ಅಷ್ಟೇ ಅಲ್ಲದೇ ಆನೆಗಳನ್ನು ನೋಡಿಕೊಳ್ಳುತ್ತಿರುವ ಮಾವುತರಿಗೆ ಮಾಸ್ಕ್ ಧರಿಸಿಯೇ ಆನೆಗಳ ಆರೈಕೆ ಮಾಡಬೇಕು ಹಾಗೂ ಹೊರಗಿನ ಯಾವುದೇ ವ್ಯಕ್ತಿಗಳನ್ನು ಭೇಟಿ ಮಾಡದಂತೆ ಸೂಚನೆ ನೀಡಿದ್ದಾರೆ. ಸದ್ಯ ಎರಡೂ ಆನೆಗಳ ಆರೋಗ್ಯವು ಚೆನ್ನಾಗಿದೆ.

    ಈ ಹಿಂದೆ ನ್ಯೂಯಾರ್ಕ್‍ನಲ್ಲಿನ ಬ್ರಾನ್ಸ್ ಮೃಗಾಲಯದಲ್ಲಿನ ಹುಲಿಗೆ ಕೊರೊನಾ ವೈರಸ್ ತಗುಲಿರುವುದು ವರದಿಯಾಗಿತ್ತು. ಮನುಷ್ಯನಿಂದ ವನ್ಯ ಜೀವಿಗೆ ಕೊರೊನಾ ವೈರಸ್ ತಗುಲಿರುವುದು ಇದೇ ಮೊದಲ ಪ್ರಕರಣವಾಗಿದ್ದು, ಬಹುಶಃ ಝೂನಲ್ಲಿ ಕೆಲಸ ಮಾಡುತ್ತಿದ್ದ ಸೋಂಕಿತ ಸಿಬ್ಬಂದಿಯಿಂದ ಹುಲಿಗೆ ಸೋಂಕು ಹರಡಿದೆ ಎಂದು ಶಂಕಿಸಲಾಗಿತ್ತು. ಅಷ್ಟೇ ಅಲ್ಲದೆ ಕೊರೊನಾ ವೈರಸ್ ಬೆಕ್ಕುಗಳಿಗೂ ಹರಡಿರುವುದು ವರದಿಯಾಗಿತ್ತು. ಬೆಕ್ಕಿನ ಮಾಲೀಕನಿಗೆ ಕೊರೊನಾ ಬಂದಿದ್ದು ಆತ ಹೋಮ್ ಕ್ವಾರಂಟೈನ್‍ನಲ್ಲಿದ್ದ. ಇದರಿಂದಾಗಿ ವೈರಸ್ ಬೆಕ್ಕಿಗೂ ಬಂದಿದೆ. ಬೆಕ್ಕಿನಲ್ಲಿ ಕೊರೊನಾ ಸೋಂಕು ಬಂದಿರುವುದನ್ನು ಬೆಲ್ಜಿಯಂನ ಆರೋಗ್ಯ ಅಧಿಕಾರಿಗಳು ಖಚಿತ ಪಡಿಸಿದ್ದರು.

    ಹಾಗೆಯೇ ಹಾಂಕಾಂಗ್‍ನಲ್ಲಿ ಕೊರೊನಾ ಪೀಡಿತರ ಸಂಪರ್ಕಕ್ಕೆ ಬಂದಿದ್ದ 17 ನಾಯಿ ಮತ್ತು 8 ಬೆಕ್ಕುಗಳನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ 2 ನಾಯಿಗಳಲ್ಲಿ ಕೊರೊನಾ ಪಾಸಿಟಿವ್ ಬಂದಿತ್ತು. ವೈರಸ್ ಮನುಷ್ಯನಿಂದ ಪ್ರಾಣಿಗಳಿಗೆ ಹೋಗಬಹುದು. ಆದರೆ ಪ್ರಾಣಿಗಳಿಂದ ಮನುಷ್ಯನಿಗೆ ಬರಬಹುದು ಎನ್ನುವುದನ್ನು ನಾನು ಒಪ್ಪುವುದಿಲ್ಲ ಎಂದು ಬೆಲ್ಜಿಯಂ ಆರೋಗ್ಯ ಅಧಿಕಾರಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದರು.

  • ಕಾಂಪೌಂಡ್ ದಾಟಿ ಮನೆ ಆವರಣ ಪ್ರವೇಶ ಮಾಡಿದ ಜೋಡಿ ಆನೆ: ವಿಡಿಯೋ

    ಕಾಂಪೌಂಡ್ ದಾಟಿ ಮನೆ ಆವರಣ ಪ್ರವೇಶ ಮಾಡಿದ ಜೋಡಿ ಆನೆ: ವಿಡಿಯೋ

    ಹಾಸನ: ಕಾಂಪೌಂಡ್ ದಾಟಿ ಜೋಡಿ ಆನೆ ಮನೆ ಆವರಣ ಪ್ರವೇಶ ಮಾಡಿದ ಘಟನೆಯೊಂದು ಸಕಲೇಶಪುರ ತಾಲೂಕಿನ ಯಸಳೂರಿನಲ್ಲಿ ನಡೆದಿದೆ.

    ಇಂದು ಮುಂಜಾನೆ 6 ಗಂಟೆಗೆ ಜೋಡಿ ಆನೆ ಮನೆ ಎದುರು ಬಂದಿದೆ. ಬಳಿಕ ಕ್ಲೋಸ್ ಮಾಡಲಾಗಿದ್ದ ಗೇಟ್ ಮುರಿದು ಒಳ ನುಗ್ಗಲು ಯತ್ನಿಸಿದೆ. ಒಳನುಗ್ಗಲು ಸಾಧ್ಯವಾಗದೇ ಇದ್ದಾಗ ಆನೆಗಳು ಕಾಂಪೌಂಡ್ ದಾಟಿ ಮನೆ ಆವರಣ ಪ್ರವೇಶ ಮಾಡಿದೆ.

    ಆನೆ ಕಾಂಪೌಂಡ್ ಒಳಗೆ ಬಂದಿರುವುದನ್ನು ಮನೆಯವರು ನೋಡಿದ್ದಾರೆ. ಬಳಿಕ ಮನೆಯವರು ಮನೆಯಿಂದ ಹೊರಕ್ಕೆ ಬಾರದೇ ತಮ್ಮ ಪ್ರಾಣವನ್ನು ಉಳಿಸಿಕೊಂಡಿದ್ದಾರೆ. ರಾಜ್ಯ ಹೆದ್ದಾರಿಯಲ್ಲಿ ಸಂಚರಿಸಿ, ಆನೆಗಳು ಅಲ್ಲಿದ್ದ ಮನೆ ಆವರಣದೊಳಗೆ ಎಂಟ್ರಿ ಕೊಟ್ಟಿದೆ.

    ಎರಡು ಸಲಗಗಳು ಕಾಂಪೌಂಡ್ ಒಳಗೆ ನುಗ್ಗಿ ಮನೆ ಪಕ್ಕದ ತೋಟದ ಕಡೆ ತೆರಳಿದೆ. ಆನೆ ಕಾಂಪೌಂಡ್ ಒಳಗೆ ನುಗ್ಗಿದ ದೃಶ್ಯವನ್ನು ಸ್ಥಳೀಯರು ಜೆಸಿಬಿಯೊಳಗೆ ಕುಳಿತು ತಮ್ಮ ಮೊಬೈಲಿನಲ್ಲಿ ಚಿತ್ರೀಕರಿಸಿದ್ದಾರೆ.

    https://www.youtube.com/watch?v=Zrl-2cpdWYA

  • ಮೃತಪಟ್ಟ ಮರಿಯನ್ನು ಶವಸಂಸ್ಕಾರಕ್ಕೆ ಹೊತ್ತೊಯ್ದ ಆನೆಗಳು- ವಿಡಿಯೋ ವೈರಲ್

    ಮೃತಪಟ್ಟ ಮರಿಯನ್ನು ಶವಸಂಸ್ಕಾರಕ್ಕೆ ಹೊತ್ತೊಯ್ದ ಆನೆಗಳು- ವಿಡಿಯೋ ವೈರಲ್

    ನವದೆಹಲಿ: ವನ್ಯಜೀವಿಗಳಿಗೂ ಭಾವನೆಗಳಿವೆ, ತಮ್ಮವರಿಗಾಗಿ ಅವುಗಳು ಕೂಡ ಪರಿತಪಿಸುತ್ತವೆ ಎನ್ನುವುದಕ್ಕೆ ಸದ್ಯ ಕಾಡಾನೆಗಳ ಹಿಂಡೊಂದು ಮೃತಪಟ್ಟ ಮರಿ ಆನೆಯ ಶವವನ್ನು ಹೊತ್ತೊಯ್ದ ವಿಡಿಯೋ ಸಾಕ್ಷಿಯಾಗಿದೆ.

    ಕಾಡಿನ ಮಧ್ಯದಲ್ಲಿ ಹಾದು ಹೋಗುವ ರಸ್ತೆಯಲ್ಲಿ ಆನೆಯೊಂದು ಮೃತಪಟ್ಟ ಮರಿ ಆನೆಯನ್ನು ಕಚ್ಚಿಕೊಂಡು ಹೋಗುತಿತ್ತು. ಈ ವೇಳೆ ಅದರ ಹಿಂದೆಯೇ ಶವ ಸಂಸ್ಕಾರಕ್ಕೆ ಆನೆಯ ಹಿಂಡೇ ನಾಯಕ ಆನೆಯನ್ನು ಹಿಂಬಾಲಿಸುತ್ತಿರುವ ವಿಡಿಯೋವನ್ನು ಭಾರತೀಯ ಅರಣ್ಯ ಸೇವೆಯ ಅಧಿಕಾರಿ ಪ್ರವೀಣ್ ಕಾಸ್ವಾನ್ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದ್ದು, ಆನೆಗಳ ಮೂಕವೇದನೆ ಕಂಡು ನೆಟ್ಟಿಗರು ಮರುಗಿದ್ದಾರೆ.

    ವಿಡಿಯೋದಲ್ಲಿ ಆನೆಯೊಂದು ಸತ್ತ ಮರಿಯನ್ನು ಕಚ್ಚಿಕೊಂದು ಬರುತ್ತಿದ್ದು, ಮೊದಲಿಗೆ ರಸ್ತೆ ದಾಟಿ ಮರಿಯ ಶವವನ್ನು ಅಲ್ಲಿಯೇ ಇಡುತ್ತದೆ. ಬಳಿಕ ಕೆಲ ಕ್ಷಣದ ನಂತರ ಮತ್ತೊಂದು ಆನೆ ಬಂದು ಮರಿ ಬಳಿ ನಿಲ್ಲುತ್ತದೆ. ಇದಾದ ನಂತರ ಆನೆಗಳ ಹಿಂಡೊಂದು ಸ್ಥಳಕ್ಕೆ ಬಂದು ಮರಿಯನ್ನು ಹೊತ್ತುಕೊಂಡು ಕಾಡಿನ ಮತ್ತೊಂದು ದಿಕ್ಕಿಗೆ ಹೋಗಿರುವ ದೃಶ್ಯ ಸೆರೆಯಾಗಿದೆ.

    ಈ ವಿಡಿಯೋ ಪೋಸ್ಟ್ ಮಾಡಿರುವ ಅಧಿಕಾರಿ, ಶವ ಸಂಸ್ಕಾರಕ್ಕೆ ಆನೆಗಳ ಹಿಂಡು ಮೃತಪಟ್ಟ ಮರಿ ಆನೆಯನ್ನು ಹೊತ್ತೊಯ್ಯುತ್ತಿದೆ. ಮರಿಯನ್ನು ಬಿಟ್ಟು ಹೋಗಲು ಈ ಕುಟುಂಬ ಬಯಸುತ್ತಿಲ್ಲ ಎಂದು ಬರೆದು ವಿಡಿಯೋ ಜೊತೆ ಟ್ವೀಟ್ ಮಾಡಿದ್ದಾರೆ.

    ಅಲ್ಲದೆ ಮತ್ತೊಂದು ಟ್ವೀಟ್‍ನಲ್ಲಿ, ಹಿಂದಿನ ಕಾಲದಲ್ಲಿ ಅರಣ್ಯಗಳಲ್ಲಿ ಆನೆಗಳು ಶವ ಸಂಸ್ಕಾರ ಮಾಡಿರುವ ಬಗ್ಗೆ ಸಿದ್ಧಾಂತಗಳಿವೆ. ಸ್ಟ್ರೆಸಿ ಸೇರಿದಂತೆ ಹಲವರು ಈ ಬಗ್ಗೆ ತಮ್ಮ ಪುಸ್ತಕಗಳಲ್ಲಿ ಬರೆದಿದ್ದಾರೆ. ಆದರೆ ಈವರೆಗೆ ಈ ಬಗ್ಗೆ ನನಗೆ ಯಾವುದೆ ಸಾಕ್ಷಿ ಸಿಕ್ಕಿಲ್ಲ. ಬಹುತೇಕ ಪ್ರಕರಣದಲ್ಲಿ ಆನೆಗಳು ಹೆಚ್ಚಾಗಿ ನೀರು ಹರಿಯುವ ಸ್ಥಳದಲ್ಲೇ ಕೊನೆಯುಸಿರು ಎಳೆಯುತ್ತವೆ ಎಂದು ತಿಳಿದ್ದಾರೆ.

    https://twitter.com/ParveenKaswan/status/1137553283596185602

    ಅದು ಏನೆಯಾಗಲಿ, ಈ ಆನೆಗಳ ಮೂಕವೇದನೆಯ ವಿಡಿಯೋ ನೋಡಿದವರು ಮಾತ್ರ ಮನುಷ್ಯರಿಗಿಂತ ಪ್ರಾಣಿಗಳೇ ಲೇಸು. ಪ್ರಾಣಿಗಳಿಂದ ಮನುಷ್ಯ ಕಲಿಯಬೇಕಾದದ್ದು ಬಹಳಷ್ಟಿದೆ ಎಂದು ವಿಡಿಯೋಗೆ ಕಮೆಂಟ್ ಮಾಡಿದ್ದಾರೆ. ಜೂನ್ 7ರಂದು ಈ ವಿಡಿಯೋ ಅಪ್ಲೋಡ್ ಮಾಡಲಾಗಿದ್ದು, ಸದ್ಯ ಎಲ್ಲೆಡೆ ಸಖತ್ ಸದ್ದು ಮಾಡುತ್ತಿದೆ.

  • ಕಾಡಾನೆ ಕಾಲ್ತುಳಿತಕ್ಕೆ ವೃದ್ಧೆ ಸಾವು..!- ಹೆದ್ದಾರಿ ತಡೆದು ಗ್ರಾಮಸ್ಥರ ಆಕ್ರೋಶ

    ಕಾಡಾನೆ ಕಾಲ್ತುಳಿತಕ್ಕೆ ವೃದ್ಧೆ ಸಾವು..!- ಹೆದ್ದಾರಿ ತಡೆದು ಗ್ರಾಮಸ್ಥರ ಆಕ್ರೋಶ

    ಚಾಮರಾಜನಗರ: ಬಹಿರ್ದೆಸೆಗೆಂದು ತೆರೆಳಿದ್ದ ವೃದ್ಧೆ ಮನೆಗೆ ಮರಳುವಾಗ ದಾರಿ ಮಧ್ಯೆ ಆನೆ ತುಳಿದು ಆಕೆ ಸಾವನ್ನಪ್ಪಿರುವ ದುರ್ಘಟನೆ ಜಿಲ್ಲೆಯ ಮಹಂತಾಳಪುರ ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

    ಮಹಂತಾಳಪುರ ಗ್ರಾಮದ ನಿವಾಸಿ ಶಿವಮ್ಮ(65) ಆನೆ ದಾಳಿಗೆ ಬಲಿಯಾದ ವೃದ್ಧೆ. ಮಹಾಂತಾಳಪುರದ ಸುತ್ತಮುತ್ತ ಕಾಣಿಸಿಕೊಂಡಿದ್ದ ಕಾಡಾನೆಗಳನ್ನು ಓಡಿಸುವ ವೇಳೆ ಬಹಿರ್ದೆಸೆಗೆಂದು ತೆರೆಳಿದ್ದ ಗ್ರಾಮದ ಶಿವಮ್ಮ ಎಂಬ ವೃದ್ಧೆಯನ್ನು ಕಾಡಾನೆಗಳು ತುಳಿದು ಸಾಯಿಸಿವೆ. ಮೂರು ಕಾಡಾನೆಗಳು ಮೂರು ದಿನಗಳಿಂದ ಈ ಭಾಗದಲ್ಲಿ ಬೀಡು ಬಿಟ್ಟಿವೆ. ಆದರೆ ಅವುಗಳನ್ನು ಸಮರ್ಪಕ ರೀತಿಯಲ್ಲಿ ಕಾಡಿಗಟ್ಟುವಲ್ಲಿ ಅರಣ್ಯ ಇಲಾಖೆ ನಿರ್ಲಕ್ಷ್ಯ ವಹಿಸಿದ್ದೆ ಈ ಘಟನೆಗೆ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

    ಅಷ್ಟೇ ಅಲ್ಲದೆ ರಾಷ್ಟ್ರೀಯ ಹೆದ್ದಾರಿ 209ರಲ್ಲಿ ರಸ್ತೆ ತಡೆ ನಡೆಸಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೂರು ದಿನಗಳ ಹಿಂದೆ ಯಳಂದೂರು ಸುತ್ತಮುತ್ತ ಕಾಣಿಸಿಕೊಂಡಿದ್ದ ಈ ಕಾಡಾನೆಗಳು ನಿನ್ನೆ ಮಹಾಂತಾಳಪುರದ ಕಡೆಗೆ ಬಂದು ಇಲ್ಲಿನ ಜಾಲಿಮುಳ್ಳಿನ ಪೊದೆಯಲ್ಲಿ ಬೀಡು ಬಿಟ್ಟಿದ್ದವು. ಗ್ರಾಮಸ್ಥರ ಕೂಗಾಟ ಅರಚಾಟದಿಂದ ಗಾಬರಿಯಾಗಿದ್ದ ಈ ಕಾಡಾನೆಗಳನ್ನು ಅರಣ್ಯ ಸಿಬ್ಬಂದಿ ನಿನ್ನೆ ಸಂಜೆ ಓಡಿಸುವ ಕಾರ್ಯಾಚರಣೆ ನಡೆಸಿದರು. ಆದರೆ ಈ ಸಂದರ್ಭದಲ್ಲಿ ಗ್ರಾಮದ ಕೆರೆಯ ಬಳಿ ವೃದ್ಧೆ ಶಿವಮ್ಮ ಮೇಲೆ ಕಾಡಾನೆಗಳು ದಾಳಿ ನಡೆಸಿ ಹೋಗಿವೆ.

    ಇಂದು ಬೆಳಗ್ಗೆ ಈ ಘಟನೆ ಬೆಳಕಿಗೆ ಬಂದಿದ್ದು, ಗ್ರಾಮದ ಕೆರೆಯ ಬಳಿ ಶಿವಮ್ಮ ಅವರ ಶವ ಪತ್ತೆಯಾಗಿದೆ. ಘಟನೆ ನಡೆದು ಸಾಕಷ್ಟು ಸಮಯವಾದರೂ ಅರಣ್ಯಾಧಿಕಾರಿಗಳು ಇತ್ತ ತಲೆ ಹಾಕದ ಕಾರಣ ಆಕ್ರೋಶಗೊಂಡ ಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಬಳಿಕ ಎಚ್ಚೆತ್ತ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮೃತ ವೃದ್ಧೆಯ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹಿಂಡುಹಿಂಡಾಗಿ ನಾಡಿನತ್ತ ಲಗ್ಗೆಯಿಟ್ಟ ಆನೆಗಳು.!

    ಹಿಂಡುಹಿಂಡಾಗಿ ನಾಡಿನತ್ತ ಲಗ್ಗೆಯಿಟ್ಟ ಆನೆಗಳು.!

    ಬೆಂಗಳೂರು: ಕರ್ನಾಟಕ-ತಮಿಳುನಾಡು ಗಡಿ ಭಾಗದಲ್ಲಿ ಆನೆಗಳ ಹಾವಳಿ ಮಿತಿಮೀರಿದ್ದು, ಅವುಗಳನ್ನು ನಾಡಿನತ್ತ ಬರದಂತೆ ತಡೆಯಲು ಅರಣ್ಯ ಇಲಾಖೆ ವಿಫಲವಾಗಿದೆ. ಪರಿಣಾಮ ರೈತರು ಕಷ್ಟಪಟ್ಟು ಬೆಳೆದಿದ್ದ ಬೆಳೆಗಳು ಆನೆಗಳ ಪಾಲಾಗುತ್ತಿದೆ.

    ತಮಿಳುನಾಡಿನ ಕೆಲಮಂಗಲಂ, ಕರ್ನಾಟಕದ ವಣಕನಹಳ್ಳಿ ಸೋಲುರು ಚೂಡಹಳ್ಳಿ ಗ್ರಾಮದಲ್ಲಿ ತಮಿಳುನಾಡಿನ ಅರಣ್ಯದಿಂದ ಸುಮಾರು 30ಕ್ಕೂ ಹೆಚ್ಚಿನ ಆನೆಗಳ ಹಿಂಡು ರಾಜ್ಯ ಪ್ರವೇಶಿಸಿದೆ. ಅಲ್ಲಿಯೇ ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತರೊಬ್ಬರು ಆನೆಗಳು ಬರುವುದನ್ನು ಕಂಡು ಪಕ್ಕದಲ್ಲೇ ಇದ್ದ ಹೈ ಟೆನ್ಷನ್ ವಿದ್ಯುತ್ ಗೋಪುರ ಏರಿ ಪ್ರಾಣ ಉಳಿಸಿಕೊಂಡಿದ್ದಾರೆ. ಬಳಿಕ ತನ್ನ ಮೊಬೈಲ್ ನಲ್ಲಿ ಆನೆಗಳು ಹಾದು ಹೋಗುವ ದೃಶ್ಯಗಳನ್ನು ಸೆರೆಹಿಡಿದ್ದಾರೆ.

    ನವೆಂಬರ್ ನಿಂದ ಮಾರ್ಚ್ ವರೆಗೂ ಆನೆಗಳು ಆಹಾರ ಅರಸಿ ತಮಿಳುನಾಡು-ಕರ್ನಾಟಕ ಅರಣ್ಯ ಪ್ರದೇಶದಲ್ಲಿ ಬೀಡುಬಿಡುತ್ತವೆ. ಅರಣ್ಯದಂಚಿನ ಗ್ರಾಮಗಳತ್ತ ನುಗ್ಗುವ ಆನೆಗಳು ರೈತರು ಬೆಳೆದ ಬೆಳೆಗಳನ್ನು ತಿಂದು ತುಳಿದು ಹಾಳು ಮಾಡುತ್ತವೆ. ಈ ಬಾರಿ ಬರಗಾಲವಿದ್ದು, ಮಳೆಯಿಲ್ಲದೆ ಬೇಳೆ ನಾಶವಾಗಿದೆ. ಉಳಿದ ಬೆಳೆಯನ್ನು ಉಳಿಸಿಕೊಳ್ಳಲು ರೈತರು ಕಷ್ಟಪಡಬೇಕಾದ ಪರಿಸ್ಥಿತಿ ಎದುರಾಗಿದೆ. ಇನ್ನು ಆನೆಗಳನ್ನು ಕಾಡಿನತ್ತ ಓಡಿಸಬೇಕಾದ ಅರಣ್ಯ ಇಲಾಖೆ ಸಿಬ್ಬಂದಿ ಅದೇಕೋ ನಿರ್ಲಕ್ಷ್ಯಕ್ಕೆ ಒಳಗಾಗಿದ್ದಾರೆ ಎಂದು ಕಾಡಂಚಿನ ರೈತ ಮಂಜಪ್ಪ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಬರಗಾಲದಿಂದ ನೊಂದಿದ್ದ ರೈತರಿಗೆ ಇದೀಗ ಆನೆಗಳು ಮತ್ತಷ್ಟು ಸಂಕಷ್ಟ ನೀಡುತ್ತಿದ್ದು, ಇನ್ನಾದರೂ ಅರಣ್ಯ ಇಲಾಖೆ ಆನೆಗಳು ಗ್ರಾಮಗಳಿಗೆ ನುಗ್ಗದಂತೆ ತಡೆಯುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಕ್ಯಾಪ್ಟನ್ ಅರ್ಜುನನಿಗೆ ಇಂದು ಮರದ ಅಂಬಾರಿ ಹೊರಿಸಿ ತಾಲೀಮು!

    ಕ್ಯಾಪ್ಟನ್ ಅರ್ಜುನನಿಗೆ ಇಂದು ಮರದ ಅಂಬಾರಿ ಹೊರಿಸಿ ತಾಲೀಮು!

    ಮೈಸೂರು: ಮೈಸೂರು ದಸರಾ ಮಹೋತ್ಸವ 2018 ಕ್ಕೆ ದಿನಗಣನೆ ಶುರುವಾಗಿದ್ದು, ಇಂದು ಕ್ಯಾಪ್ಟನ್ ಅರ್ಜುನನಿಗೆ ಮರದ ಅಂಬಾರಿ ಹೊರಿಸಿ ತಾಲೀಮು ನಡೆಸಲಾಗುತ್ತಿದೆ.

    ಜಂಬೂ ಸವಾರಿ ಮೆರವಣಿಗೆ ದಿನ ಚಿನ್ನದ ಅಂಬಾರಿ ಕಟ್ಟುವ ಕಾರಣ ಮರದ ಅಂಬಾರಿ ಕಟ್ಟಿ ತಾಲೀಮು ನಡೆಸಲಾಗುತ್ತಿದೆ. ಪೂಜೆ ಬಳಿಕ ಅರ್ಜುನನಿಗೆ ಮರದ ಅಂಬಾರಿಯನ್ನು ಮಾವುತರು ಕಟ್ಟಿದರು. ಸುಮಾರು 280 ಕೆ.ಜಿ ತೂಕದ ಮರದ ಅಂಬಾರಿಯ ಜೊತೆಗೆ, 350 ರಿಂದ 400 ಕೆ.ಜಿ ಮರಳಿನ ಚೀಲ ಹೊರಿಸಿ ತಾಲೀಮು ನಡೆಸಿದರು. ಒಟ್ಟು ಅರ್ಜುನ 650 ರಿಂದ 700 ಕೆ.ಜಿ ಭಾರ ಹೊತ್ತು ಸಾಗಿದನು.

    ಮಂಗಳವಾರ ಮಹತ್ಮಾ ಗಾಂಧೀಜಿ ಅವರ ಜನ್ಮದಿನವಾದ ಹಿನ್ನೆಲೆಯಲ್ಲಿ ಭಾರ ಹೊರಿಸದೆ ಆನೆಗಳು ಬರಿ ಮೈಯಲ್ಲಿ ತಾಲೀಮು ನಡೆಸಿದ್ದವು. ಈವರೆಗೂ 400 ರಿಂದ 500 ಕೆಜಿ ತೂಕದ ಭಾರ ಹೊತ್ತು ತಾಲೀಮು ನಡೆಸುತ್ತಿದ್ದ ಆನೆಗಳು, ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಅಹಿಂಸೆ ದೃಷ್ಟಿಯಿಂದ ಆನೆಗೆ ಭಾರ ಹೊರಿಸದೆ ತಾಲೀಮು ನಡೆಸಲಾಗಿತ್ತು.

    ಪ್ರತಿ ವರ್ಷ ದಸರಾ ಸಂದರ್ಭದಲ್ಲಿ ಗಾಂಧಿ ಜಯಂತಿ ಇದ್ದರೆ ಭಾರವಿಲ್ಲದೇ ತಾಲೀಮು ನೀಡುವ ಅಧಿಕಾರಿಗಳು, ಗಾಂಧೀಜಿಗೆ ಗೌರವ ಸಲ್ಲಿಸುವ ಸಲುವಾಗಿ ಖಾಲಿ ಮೈಯಲ್ಲಿ ಭಾರವಿಲ್ಲದೆ ಅರಮನೆಯಿಂದ ಬನ್ನಿಮಂಟಪದವರೆಗೆ ಆನೆಗಳು ಸಾಗಿದ್ದವು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಗಾಂಧೀಜಿ ಜನ್ಮದಿನ- ದಸರಾ ಗಜಪಡೆಗೆ ಇಂದು ಭಾರವಿಲ್ಲದೆ ತಾಲೀಮು!

    ಗಾಂಧೀಜಿ ಜನ್ಮದಿನ- ದಸರಾ ಗಜಪಡೆಗೆ ಇಂದು ಭಾರವಿಲ್ಲದೆ ತಾಲೀಮು!

    ಮೈಸೂರು: ಮಹತ್ಮಾ ಗಾಂಧೀಜಿ ಅವರ ಜನ್ಮದಿನವಾದ ಹಿನ್ನೆಲೆಯಲ್ಲಿ ಇಂದು ದಸರಾ ಗಜಪಡೆಗಳಿಗೆ ಭಾರವಿಲ್ಲದೆ ತಾಲೀಮು ನಡೆಸಲಾಗುತ್ತಿದೆ.

    ಗಾಂಧಿ ಜಯಂತಿ ಆದ್ದರಿಂದ ಭಾರ ಹೊರಿಸದೆ ಆನೆಗಳು ಬರಿ ಮೈಯಲ್ಲಿ ತಾಲೀಮು ನಡೆಸಿದವು. ಈವರೆಗೂ 400 ರಿಂದ 500 ಕೆಜಿ ತೂಕದ ಭಾರ ಹೊತ್ತು ತಾಲೀಮು ನಡೆಸುತ್ತಿದ್ದ ಆನೆಗಳು, ಇಂದು ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಅಹಿಂಸೆ ದೃಷ್ಟಿಯಿಂದ ಆನೆಗೆ ಭಾರ ಹೊರಿಸದೆ ತಾಲೀಮು ನಡೆಸಲಾಗುತ್ತಿದೆ. ಪ್ರತಿ ವರ್ಷ ದಸರಾ ಸಂದರ್ಭದಲ್ಲಿ ಗಾಂಧಿ ಜಯಂತಿ ಇದ್ದರೆ ಭಾರವಿಲ್ಲದೆ ತಾಲೀಮು ನೀಡುವ ಅಧಿಕಾರಿಗಳು, ಗಾಂಧೀಜಿಗೆ ಗೌರವ ಸಲ್ಲಿಸುವ ಸಲುವಾಗಿ ಖಾಲಿ ಮೈಯಲ್ಲಿ ಭಾರವಿಲ್ಲದೆ ಅರಮನೆಯಿಂದ ಬನ್ನಿಮಂಟಪದವರೆಗೆ ಆನೆಗಳು ಸಾಗಿದವು.

    ಈ ಮೊದಲು ಧನಂಜಯ ಆನೆಗೆ ಭಾರ ಹೊರುವ ತಾಲೀಮು ನೀಡಲಾಗಿತ್ತು. ಧನಂಜಯನ ಬೆನ್ನಿಗೆ ಸುಮಾರು 300 ಕೆ.ಜಿ. ತೂಕದ ಭಾರವನ್ನು ಹೊರಿಸಲಾಗುತ್ತಿತ್ತು. ಅರ್ಜುನ ಆನೆಗೂ ಮರಳು ಮೂಟೆ ಹೊತ್ತುಕೊಟ್ಟು ತಾಲೀಮು ನಡೆಸಲಾಗಿತ್ತು. ಅರಣ್ಯ ಇಲಾಖೆ ಅಂಬಾರಿ ಹೊರಲು ಅರ್ಜುನ, ಧನಂಜಯ, ಬಲರಾಮನಿಗೆ ಪ್ರಾಕ್ಟೀಸ್ ಮಾಡಿಸುತ್ತಿದ್ದರು.

    ತಾಲೀಮು ಏಕೆ?
    ಆನೆಗಳಿಗೆ ಜನರ ಗದ್ದಲ, ವಾಹನಗಳ ಧ್ವನಿ ಮತ್ತು ರಸ್ತೆಯ ಪರಿಚಯ ಮಾಡುವ ಉದ್ದೇಶದಿಂದ ಈ ತಾಲೀಮು ಮಾಡಿಸಲಾಗುತ್ತದೆ. ಅಲ್ಲದೆ ಕಾಡಿನಲ್ಲಿ ಓಡಾಡುವ ಆನೆಗಳು ಸಿಮೆಂಟ್ ಹಾಗೂ ಕಾಂಕ್ರಿಟ್ ರಸ್ತೆ ಮೇಲೆ ನಡೆಯುವುದನ್ನು ಅಭ್ಯಾಸ ಮಾಡಿಸುವುದು ಈ ತಾಲೀಮಿನ ಉದ್ದೇಶವಾಗಿದೆ. ತಾಲೀಮು ಮುಗಿದ ನಂತರ ಆನೆಗಳಿಗೆ ಪೌಷ್ಠಿಕ ಆಹಾರ ನೀಡಿ ಅವು ಸದೃಢವಾಗಿರುವಂತೆ ನೋಡಿಕೊಳ್ಳಲಾಗುತ್ತದೆ. ಯಾವುದೇ ಹಂತದಲ್ಲೂ ಆನೆಗಳು ಸಿಮೆಂಟ್ ಹಾಗೂ ಕಾಂಕ್ರಿಟ್ ರಸ್ತೆ ಮೇಲೆ ಸಾಗಿ ಸುಸ್ತಾಗದಂತೆ ನೋಡಿಕೊಳ್ಳುವುದು ಅತಿ ಮುಖ್ಯವಾಗಿದೆ ಎಂದು ಆನೆ ವೈದ್ಯರಾದ ಡಾ. ನಾಗರಾಜ್ ಹೇಳಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮೈಸೂರೊಳಗೆ ದಸರಾ ಆನೆ ಟೀಂ ವಾಕಿಂಗ್- ವಿಡಿಯೋ ನೋಡಿ

    ಮೈಸೂರೊಳಗೆ ದಸರಾ ಆನೆ ಟೀಂ ವಾಕಿಂಗ್- ವಿಡಿಯೋ ನೋಡಿ

    ಮೈಸೂರು: ನಾಡಹಬ್ಬ ದಸರಾಗೆ ದಿನಗಣನೆ ಶುರುವಾಗಿದೆ. ಹೀಗಾಗಿ ದಸರಾ ಗಜಪಡೆಯ ತಾಲೀಮು ಕೂಡ ಮೈಸೂರಿನಲ್ಲಿ ಆರಂಭವಾಗಿದೆ. ಮೈಸೂರು ಅರಮನೆ ಆವರಣದಲ್ಲಿ ಬೀಡು ಬಿಟ್ಟಿರುವ ಕ್ಯಾಪ್ಟನ್ ಅರ್ಜುನ ನೇತೃತ್ವದ ಗಜಪಡೆ ತಾಲೀಮು ಆರಂಭಿಸಿದೆ.

    ಮೈಸೂರಿನ ಒಳಗೆ ಇನ್ನು 40 ದಿನ ಗಜಪಡೆಯೂ ವಾಕಿಂಗ್ ಮಾಡುತ್ತದೆ. ದಸರಾ ತಾಲೀಮು ರೂಪದ ವಾಕಿಂಗ್ ಅನ್ನು ಗಜಪಡೆಯೂ ಬೆಳಗ್ಗೆ ಮತ್ತು ಸಂಜೆ ಮಾಡಲಿವೆ. ಕ್ಯಾಪ್ಟನ್ ಅರ್ಜುನ ನೇತೃತ್ವದ ಗಜಪಡೆಯ ವಾಕಿಂಗ್ ಪ್ರತಿದಿನ ಅರಮನೆಯ ಆವರಣದಿಂದ ಆರಂಭವಾಗಲಿದೆ. ಇದನ್ನೂ ಓದಿ: ರಾಜಬೀದಿಯಲ್ಲಿ ತಾಲೀಮು ಆರಂಭ: ದಸರಾ ಆನೆಗಳ ತೂಕ 1 ವರ್ಷದ ಹಿಂದೆ ಎಷ್ಟಿತ್ತು? ಈಗ ಎಷ್ಟಾಗಿದೆ?

    ದಸರಾ ಮೆರವಣಿಗೆ ಸಾಗುವ ಚಾಮರಾಜ ವೃತ್ತ, ಕೆ.ಆರ್. ವೃತ್ತ, ಸಯ್ಯಾಜಿರಾವ್ ರಸ್ತೆ ಮೂಲಕ ಹೈವೆ ವೃತ್ತದವರೆಗೆ ಇಂದು ಐದು ಕಿ.ಮೀ. ವಾಕಿಂಗ್ ಮಾಡಿದವು. ಕ್ಯಾಪ್ಟನ್ ಅರ್ಜುನ ಹಿಂದೆ ಧನಂಜಯ, ವಿಕ್ರಮ, ಗೋಪಿ, ಚೈತ್ರಾ, ವರಲಕ್ಷ್ಮಿ ಆನೆಗಳು ಹೆಜ್ಜೆ ಹಾಕಿದವು.

    ಆನೆಗಳಿಗೆ ಜನರ ಗದ್ದಲ, ವಾಹನಗಳ ಧ್ವನಿ ಮತ್ತು ರಸ್ತೆಯ ಪರಿಚಯ ಮಾಡುವ ಉದ್ದೇಶದಿಂದ ಈ ತಾಲೀಮು ಮಾಡಿಸಲಾಗುತ್ತದೆ. ಅಲ್ಲದೆ ಕಾಡಿನಲ್ಲಿ ಓಡಾಡುವ ಆನೆಗಳು ಸಿಮೆಂಟ್ ಹಾಗೂ ಕಾಂಕ್ರಿಟ್ ರಸ್ತೆ ಮೇಲೆ ನಡೆಯುವುದನ್ನು ಅಭ್ಯಾಸ ಮಾಡಿಸುವುದು ಈ ತಾಲೀಮಿನ ಉದ್ದೇಶವಾಗಿದೆ. ತಾಲೀಮು ಮುಗಿದ ನಂತರ ಆನೆಗಳಿಗೆ ಪೌಷ್ಠಿಕ ಆಹಾರ ನೀಡಿ ಅವು ಸದೃಢವಾಗಿರುವಂತೆ ನೋಡಿಕೊಳ್ಳಲಾಗುತ್ತದೆ. ಯಾವುದೇ ಹಂತದಲ್ಲೂ ಆನೆಗಳು ಸಿಮೆಂಟ್ ಹಾಗೂ ಕಾಂಕ್ರಿಟ್ ರಸ್ತೆ ಮೇಲೆ ಸಾಗಿ ಸುಸ್ತಾಗದಂತೆ ನೋಡಿಕೊಳ್ಳುವುದು ಅತಿ ಮುಖ್ಯವಾಗಿದೆ ಎಂದು ಆನೆ ವೈದ್ಯರಾದ ಡಾ. ನಾಗರಾಜ್ ಹೇಳಿದ್ದಾರೆ.

    ಆನೆಗಳ ವಾಕಿಂಗ್ ಕಂಡ ಜನರು ಸಾಮಾನ್ಯವಾಗಿ ಪುಳಕಿತಗೊಂಡಿದ್ದು, ಆನೆಗಳ ಫೋಟೋ ಮತ್ತು ಸೆಲ್ಫಿ ತೆಗೆದುಕೊಳ್ಳುತ್ತಾ ಆನೆಗಳ ವಾಕಿಂಗ್ ನೋಡಿ ಜನರು ಎಂಜಾಯ್ ಮಾಡಿದ್ದಾರೆ. ದಸರಾವರೆಗೂ ಈ ವಾಕಿಂಗ್ ಮೈಸೂರಲ್ಲಿ ನಡೆಯಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=cziWRBz4mkg

  • ರಿಲ್ಯಾಕ್ಸ್ ಮೂಡ್‍ನಲ್ಲಿ ಅರ್ಜುನ ಆಂಡ್ ಟೀಂ

    ರಿಲ್ಯಾಕ್ಸ್ ಮೂಡ್‍ನಲ್ಲಿ ಅರ್ಜುನ ಆಂಡ್ ಟೀಂ

    ಮೈಸೂರು: ಕಾಡನಿಂದ ನಾಡಿಗೆ ಬಂದಿರುವ ದಸರಾ ಗಜಪಡೆ ಈಗ ಫುಲ್ ರಿಲ್ಯಾಕ್ಸ್ ಮೂಡಿನಲ್ಲಿವೆ. ಕಾಡಿನಿಂದ ಬಂದಿರುವ ಅತಿಥಿಗಳಿಗೆ ನಾಡಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ. ಕಾಡಿನಲ್ಲಿ ಬೇಕಾದ್ದನ್ನು ತಿನ್ನುತ್ತಿದ್ದ ಗಜಪಡೆಗೆ ಇಲ್ಲಿ ಅತಿ ಪೌಷ್ಠಿಕವಾದ ಆಹಾರ ನೀಡಿ ಆರೈಕೆ ಮಾಡಲಾಗುತ್ತಿದೆ.

    ದಸರೆಗಾಗಿ ಕಾಡನಿಂದ ಬಂದಿರುವ ದಸರಾ ಗಜಪಡೆ ಈಗ ಮೈಸೂರಿನ ಅಶೋಕ್‍ಪುರಂನಲ್ಲಿನ ಅರಣ್ಯ ಭವನದಲ್ಲಿ ವಿಶ್ರಾಂತಿ ಪಡೆಯುತ್ತಿವೆ. ಕ್ಯಾಪ್ಟನ್ ಅರ್ಜುನ, ಧನಂಜಯ, ಚೈತ್ರ, ಗೋಪಿ, ವಿಕ್ರಮ, ವರಲಕ್ಷ್ಮಿ ಆನೆಗಳು ಸಂಪೂರ್ಣವಾಗಿ ವಿಶ್ರಾಂತಿಯಲ್ಲಿವೆ. ಈ ಆನೆಗಳು ಮೊದಲ ತಂಡದಲ್ಲಿ ಮೈಸೂರಿಗೆ ಬಂದಿದ್ದು, ಎರಡನೇ ತಂಡದಲ್ಲಿ ಇನ್ನೂ ಆರು ಆನೆಗಳು ಮುಂದಿನ ವಾರ ಮೈಸೂರಿಗೆ ಬರಲಿವೆ. ಇದನ್ನೂ ಓದಿ: ನಾಡಹಬ್ಬಕ್ಕೆ ಸಿದ್ಧತೆ ಶುರು- 4,050 ಕೆ.ಜಿ ತೂಕದ ಧನಂಜಯನಿಗೆ ಮೊದ್ಲ ದಸರಾ

    ಈಗ ಬಂದಿರುವ ಆನೆಗಳಿಗೆ ಭತ್ತ, ಹಸಿ ಹುಲ್ಲು, ಸೊಪ್ಪು, ಕಾಯಿ ಬೆಲ್ಲ ನೀಡಿ ಹಾರೈಕೆ ಮಾಡಲಾಗುತ್ತಿದೆ. ಬೆಳಗ್ಗೆ, ಮಧ್ಯಾಹ್ನ, ಸಂಜೆ ಮತ್ತು ರಾತ್ರಿ ಹೀಗೆ ನಾಲ್ಕು ಹಂತಗಳಲ್ಲಿ ಆನೆಗಳಿಗೆ ಪೌಷ್ಠಿಕವಾದ ಆಹಾರ ನೀಡಿ ಪರಿಪೂರ್ಣವಾಗಿ ಆರೈಕೆ ಮಾಡಲಾಗುತ್ತಿದೆ. ಅಲ್ಲದೆ ಆನೆಗಳ ಆರೋಗ್ಯದ ಬಗ್ಗೆಯೂ ವೈದ್ಯರು ತಪಾಸಣೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಮೈಸೂರಿಗೆ ಹೊರಟ ದಸರಾ ಆನೆಗಳು – ಇಷ್ಟವಾದ ಆಹಾರ ಕೊಟ್ಟ ನಂತ್ರ ಲಾರಿ ಹತ್ತಿದ ಧನಂಜಯ

    ಈ ಆನೆಗಳನ್ನು ನಾಳೆ ಸಂಜೆ 4 ಗಂಟೆಗೆ ಮೈಸೂರಿನ ಅರಮನೆಗೆ ಬರ ಮಾಡಿಕೊಳ್ಳಲಾಗುತ್ತದೆ. ಆನೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಿ,ಟಿ. ದೇವೇಗೌಡ ಅರಮನೆಯ ಬಲರಾಮ ದ್ವಾರದಲ್ಲಿ ಸಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಅರಮನೆ ಆವರಣಕ್ಕೆ ಸ್ವಾಗತಿಸಲಿದ್ದಾರೆ ಎಂದು ಆನೆಯ ವೈದ್ಯರಾದ ನಾಗರಾಜ್ ತಿಳಿಸಿದರು.

    ಅರಣ್ಯ ಭವನದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಆನೆಗಳನ್ನು ನೋಡಲು ಜನರು ತಂಡೋಪಡವಾಗಿ ಬರುತ್ತಿದ್ದಾರೆ. ಅದರಲ್ಲೂ ಇದೇ ಮೊದಲ ಬಾರಿಗೆ ದಸರೆಗೆ ಬಂದಿರುವ ಧನಂಜಯ ಆನೆ ಎಲ್ಲರ ಆರ್ಕಷಣೆಯಾಗಿದೆ. ಆನೆಗಳ ಜೊತೆ ಸೆಲ್ಫಿ ತೆಗೆಸಿಕೊಂಡು ಜನ ಸಂಭ್ರಮ ಪಡುತ್ತಿದ್ದಾರೆ ಎಂದು ಸ್ಥಳೀಯ ಗೋಪಿ ಹೇಳಿದರು.

    ಆನೆಗಳು ನಾಳೆ ಅರಮನೆ ಆವರಣ ಪ್ರವೇಶಿಸಿದ ಮೇಲೆ ಆನೆಗಳಿಗೆ ತಾಲೀಮು ಶುರುವಾಗಲಿದೆ. ಬೆಳಗ್ಗೆ ಮತ್ತು ಸಂಜೆ ಎರಡು ಬಾರಿ ಆನೆಗಳಿಗೆ ದಸರಾ ಮೆರವಣಿಗೆ ಸಾಗುವ ಹಾದಿಯಲ್ಲಿ ತಾಲೀಮು ಮಾಡಿಸಿ ನಗರದ ಪರಿಸರಕ್ಕೆ ಅವುಗಳ ಮನ:ಸ್ಥಿತಿಯನ್ನು ಹೊಂದಿಸಲಾಗುತ್ತದೆ. ಈ ಮೂಲಕ ಮೈಸೂರಲ್ಲಿ ಆನೆ ದರ್ಬಾರ್ ಶುರುವಾಗಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=ufz9ZpgsZ_o