Tag: ಆನೆ ದಾಳಿ

  • 4 ದಿನದಿಂದ ಪ್ರತಿಭಟನೆ ನಡೆಸಿದ್ರು ಕೇರ್ ಮಾಡ್ತಿಲ್ಲ : ಸಿಎಂಗೆ ಹಾಸನ ಮಹಿಳೆ ಅವಾಜ್

    4 ದಿನದಿಂದ ಪ್ರತಿಭಟನೆ ನಡೆಸಿದ್ರು ಕೇರ್ ಮಾಡ್ತಿಲ್ಲ : ಸಿಎಂಗೆ ಹಾಸನ ಮಹಿಳೆ ಅವಾಜ್

    ಹಾಸನ: ಕಳೆದ ನಾಲ್ಕು ದಿನಗಳಿಂದ ಆನೆ ಹಾವಳಿ ತಡೆಯುವಂತೆ ಪ್ರತಿಭಟನೆ ನಡೆಸುತ್ತಿದ್ದು, ಆದರೆ ಯಾವ ಅಧಿಕಾರಿಗಳು ಕೇರ್ ಮಾಡಿಲ್ಲ. ರೈತ ಪರ ಏನ್ನೋ ಸಿಎಂ ಎಲ್ಲಿ ಹೋದ್ರು ಎಂದು ಮಹಿಳೆಯೊಬ್ಬರು ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.

    ಆನೆ ಹಾವಳಿ ನಿಯಂತ್ರಣ ಮಾಡುವಂತೆ ಕಳೆದ 4 ದಿನಗಳಿಂದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ವೇಳೆ ರೈತರ ಸಮಸ್ಯೆ ಬಗ್ಗೆ ಅಸಡ್ಡೆ ತೋರುವ ಅಧಿಕಾರಿಗಳು ಹಾಗೂ ಸಿಎಂ ಕುಮಾರಸ್ವಾಮಿ ಅವರ ವಿರುದ್ಧ ಪ್ರತಿಭಟನಾ ನಿರತ ಮಹಿಳೆ ಜ್ಯೋತಿ ಎಂಬವರು ಆಕ್ರೋಶ ವ್ಯಕ್ತಪಡಿಸಿದರು.

    ಆನೆ ದಾಳಿಯಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಸರ್ಕಾರ 5 ಲಕ್ಷ ಪರಿಹಾರ ನೀಡುತ್ತದೆ. ಆದರೆ ಗಂಡನ ಕಳೆದುಕೊಂಡ ಮಹಿಳೆ ಹಾಗೂ ಆ ಕುಟುಂಬದ ನೋವು ನಿಮಗೆ ತಿಳಿಯುತ್ತಾ? ಸತ್ತ ರೈತ ಬದುಕಿದ್ರೆ ಅದರ ಹತ್ತರಷ್ಟು ದುಡಿತಾನೆ. ನಾನು ರೈತರ ಪರ, ಜನರ ಪರ ಎಂದು ಸಿಎಂ ಕುಮಾರಸ್ವಾಮಿ ಅವರು ಹೇಳುತ್ತಾರೆ. ಆದರೆ ಈಗ ಅವರು ಎಲ್ಲಿ ಹೋಗಿದ್ದಾರೆ? ಅವರೂ, ಅವರ ಹೆಂಡತಿ ಮಕ್ಕಳು ಎಸಿ ಕಾರಲ್ಲಿ ಓಡಾಡಿಕೊಂಡು ಸುಖವಾಗಿರೋದಲ್ಲ. ಇಲ್ಲಿಗೆ ಬಂದು ನಮಗೆ ನ್ಯಾಯ ಕೊಡಲಿ. ಪ್ರತಿಭಟನಾ ಸ್ಥಳಕ್ಕೆ ಸಿಎಂ ಕುಮಾರಸ್ವಾಮಿ ಅವರನ್ನ ಕರೆಸಿ ಎಂದು ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡರು.

    ಹಾಸನ ಜಿಲ್ಲೆಯ ಮಲೆನಾಡು ಪ್ರದೇಶದಲ್ಲಿ ಆನೆ ಹಾಗೂ ಮಾನವನ ನಡುವಿನ ಸಂಘರ್ಷ ಮುಂದುವರಿದಿದ್ದು, ರೈತರ ಬೆಳೆಗೆ ಉಂಟಾಗಿರುವ ನಷ್ಟವನ್ನು ತುಂಬಿಕೊಡುವಂತೆ ಪ್ರತಿಭಟನೆ ನಡೆಸಲಾಗಿತ್ತು. ನಾಲ್ಕು ದಿನಗಳ ಬಳಿಕ ಇಂದು ವಲಯ ರಕ್ಷಣಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾ ನಿರತರ ಮನವೊಲಿಕೆ ಮಾಡಲು ಯತ್ನಿಸಿದರು. ಆದರೆ ಈ ವೇಳೆ ಅಧಿಕಾರಿಗಳ ಉತ್ತರಕ್ಕೆ ತೃಪ್ತರಾಗದ ಪ್ರತಿಭಟನಕಾರರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ದಾರಿ ಮಧ್ಯೆ ಸಚಿವರ ಕಾರು ತಡೆದು ದೂರು ಕೊಟ್ಟ ಸನ್ಯಾಸಿನಿ- ವಿಡಿಯೋ ವೈರಲ್

    ದಾರಿ ಮಧ್ಯೆ ಸಚಿವರ ಕಾರು ತಡೆದು ದೂರು ಕೊಟ್ಟ ಸನ್ಯಾಸಿನಿ- ವಿಡಿಯೋ ವೈರಲ್

    ತಿರುವನಂತಪುರಂ: ಕ್ಯಾಥೋಲಿಕ್ ಸನ್ಯಾಸಿನಿಯೊಬ್ಬರು ಕೇರಳದ ಅರಣ್ಯ ಸಚಿವ ಕೆ. ರಾಜುರವರ ಕಾರನ್ನು ದಾರಿಯ ಮಧ್ಯದಲ್ಲೇ ಅಡ್ಡ ನಿಲ್ಲಿಸಿ ದೂರು ನೀಡಿದ್ದಾರೆ.

    ಪಾಲಕ್ಕಾಡು ಜಿಲ್ಲೆಯಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮಕ್ಕೆಂದು ಅರಣ್ಯ ಸಚಿವರಾದ ಕೆ. ರಾಜು ರವರು ಕಾರಿನಲ್ಲಿ ಹೋಗುತ್ತಿದ್ದರು. ಅವರೊಂದಿಗೆ ಹಲವು ಕಾರು ಮತ್ತು ಪೊಲೀಸ್ ವಾಹನಗಳು ತೆರಳುತಿತ್ತು. ಈ ವಾಹನಗಳ ಪೈಕಿ ಸಚಿವರ ಕಾರು ಬರುತ್ತಿದ್ದಂತೆ ಅಡ್ಡಗಟ್ಟಿದ್ದ ಸನ್ಯಾಸಿನಿ ದೂರು ನೀಡಿದ್ದಾರೆ.

    ಉತ್ತರ ಪಲಾಕ್ಕಾಡ್‍ನಲ್ಲಿರುವ ಕಾನ್ವೆಂಟ್ ಕ್ಯಾಂಪಸ್ ಆನೆಗಳ ದಾಳಿಯಿಂದ ನಾಶವಾಗಿದೆ ನೀವು ಕಾರಿನಿಂದ ಇಳಿದು ಬಂದು ನೋಡಬೇಕು. ಇವುಗಳ ದಾಳಿಯಿಂದ ನಮಗೆ ಬದುಕಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಏನಾದರೂ ಕ್ರಮಕೈಗೊಳ್ಳಬೇಕು ಎಂದು ಸಿಸ್ಟರ್ ಅರಣ್ಯ ಸಚಿವರಲ್ಲಿ ಮನವಿ ಮಾಡಿಕೊಂಡರು.

    ಈ ವೇಳೆ ಕಾರ್ಯಕ್ರಮದ ಉಸ್ತುವಾರಿಯನ್ನು ಹೊತ್ತ ವ್ಯಕ್ತಿಗಳು ಮತ್ತು ಪೊಲೀಸರು ಆಕೆಯನ್ನು ತಡೆದು ಕಾರ್ಯಕ್ರಮಕ್ಕೆ ಸಚಿವರು ಹಾಜರಾಗಬೇಕಿದೆ. ಬಳಿಕ ಸಮಸ್ಯೆ ಪರಿಹಾರ ನಡೆಸಲು ಕ್ರಮ ಕೈಗೊಳ್ಳುತ್ತಾರೆ ಎಂದು ಭರವಸೆ ನೀಡಿ ಆಕೆಯನ್ನು ಕಳುಹಿಸಿದ್ದಾರೆ. ಸದ್ಯ ಕಾರನ್ನು ಅಡ್ಡಗಟ್ಟಿ ನಿಲ್ಲಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    https://www.facebook.com/Attappady.in/videos/1992187084149072/

  • ಜಲಕ್ರೀಡೆ ವಿಡಿಯೋ ಮಾಡ್ತಿದ್ದ ಪ್ರವಾಸಿಗರ ಮೇಲೆ ಎರಗಿಬಂದ ಆನೆಗಳು: ವಿಡಿಯೋ ವೈರಲ್

    ಜಲಕ್ರೀಡೆ ವಿಡಿಯೋ ಮಾಡ್ತಿದ್ದ ಪ್ರವಾಸಿಗರ ಮೇಲೆ ಎರಗಿಬಂದ ಆನೆಗಳು: ವಿಡಿಯೋ ವೈರಲ್

    ಚಿಕ್ಕಮಗಳೂರು: ತಾಯಿ ಆನೆ ತನ್ನ ಮರಿ ಆನೆಗಳೊಂದಿಗೆ ನೀರಲ್ಲಿ ಆಟವಾಡ್ತಿದ್ದ ದೃಶ್ಯ ಸೆರೆ ಹಿಡಿಯುತ್ತಿದ್ದ ಪ್ರವಾಸಿಗರ ಜೀಪಿನ ಮೇಲೆ ಆನೆಯೊಂದು ದಾಳಿಗೆ ಮುಂದಾದ ಘಟನೆ ವಿಡಿಯೋ ವೈರಲ್ ಆಗಿದೆ.

    ಜಿಲ್ಲೆಯ ಮುತ್ತೋಡಿ ಭದ್ರಾ ಅರಣ್ಯ ವ್ಯಾಪ್ತಿಯ ಪ್ರದೇಶದಲ್ಲಿ ಜೂನ್ 5 ರಂದು ಸಫಾರಿ ಹೋಗಿದ್ದ ಪ್ರವಾಸಿಗರ ತಂಡವೊಂದು ಆನೆಗಳ ವಿಡಿಯೋ ಮಾಡುವ ವೇಳೆ ಈ ಘಟನೆ ನಡೆದಿದೆ.

    ಹೊಂಡದಲ್ಲಿ ಐದು ಆನೆಗಳು ನೀರಿನಲ್ಲಿ ಆಟವಾಗುತ್ತಿದ್ದವು. ಆ ಹಿಂಡಿನಲ್ಲಿ ಎರಡು ದೊಡ್ಡ ಆನೆ ಹಾಗೂ ಮೂರು ಮರಿ ಆನೆಗಳು ಇದ್ದವು. ನೀರಿನಲ್ಲಿ ಆಟವಾಡುತ್ತಿದ್ದ ಆನೆಗಳನ್ನು ಕಂಡ ಪ್ರವಾಸಿಗರು ವಿಡಿಯೋ ಮಾಡುತ್ತಿದ್ದರು. ಇದನ್ನು ಗಮನಿಸಿದ ಆನೆಯೊಂದು ತನ್ನ ಮೂರು ಮರಿಗಳೊಂದಿಗೆ ಕೆರೆಯಿಂದ ಹೊರ ಬಂದು, ದಾಳಿಗೆ ಮುಂದಾಗಿವೆ. ಇದರಿಂದ ತಬ್ಬಿಬ್ಬಾದ ಪ್ರವಾಸಿಗರು ಜೀಪನ್ನು ವೇಗವಾಗಿ ಚಾಲನೆ ಮಾಡುವ ಮೂಲಕ ದಾಳಿಯಿಂದ ತಪ್ಪಿಸಿಕೊಂಡಿದ್ದಾರೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    https://www.youtube.com/watch?v=yxSVOXIWmpk

  • ಆನೆ ದಾಳಿಗೆ ರೈತ ಬಲಿ ಪ್ರಕರಣ- ಇದೇ ಮೊದಲ ಬಾರಿಗೆ ಮೂವರು ಅಧಿಕಾರಿಗಳ ವಿರುದ್ಧ ಎಫ್‍ಐಆರ್

    ಆನೆ ದಾಳಿಗೆ ರೈತ ಬಲಿ ಪ್ರಕರಣ- ಇದೇ ಮೊದಲ ಬಾರಿಗೆ ಮೂವರು ಅಧಿಕಾರಿಗಳ ವಿರುದ್ಧ ಎಫ್‍ಐಆರ್

    ಮಡಿಕೇರಿ: ಆನೆ ದಾಳಿಗೆ ರೈತ ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಮೂವರು ಅರಣ್ಯಾಧಿಕಾರಿಗಳ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

    ಕೊಡಗು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಲಿಂಗರಾಜ್, ವಿರಾಜಪೇಟೆ ಉಪ ಅರಣ್ಯಸಂರಕ್ಷಣಾಧಿಕಾರಿ ಮರಿಯಾ ಕೃಷ್ಟರಾಜ್, ಆರ್.ಎಫ್.ಓ ಗಂಗಾಧರ್ ವಿರುದ್ಧ ಕೇಸ್ ದಾಖಲಾಗಿದೆ.

    ಅರಣ್ಯಾಧಿಕಾರಿಗಳ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿರುವುದಾಗಿ ಅರಣ್ಯ ಇಲಾಖೆ ವಿರುದ್ಧವೇ ರೈತ ಸಂಘದ ಮುಖಂಡ ಸೋಮಯ್ಯ ಎಂಬವರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯದ ಅನುಮತಿ ಪಡೆದ ಸಿದ್ದಾಪುರ ಪೊಲೀಸರು ಮೂವರು ಅಧಿಕಾರಿಗಳ ವಿರುದ್ಧ ಇದೀಗ ಎಫ್‍ಐಆರ್ ದಾಖಲಿಸಿದ್ದಾರೆ. ಇದನ್ನೂ ಓದಿ: ಕೊಡಗಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ

    ಜನವರಿ 22 ರಂದು ವಿರಾಜಪೇಟೆ ತಾಲೂಕಿನ ಕರಡಿಗೋಡಿನಲ್ಲಿ ಮೋಹನ್ ದಾಸ್ ಎಂಬವರು ಆನೆ ದಾಳಿಗೆ ಬಲಿಯಾಗಿದ್ದರು. ಹೀಗಾಗಿ ನಿರಂತರ ಕಾಡಾನೆ ಹಾವಳಿ ತಡೆಯದ ಅರಣ್ಯ ಇಲಾಖೆ ವಿರುದ್ಧ ರೈತರು ನಿರ್ಲಕ್ಷ್ಯತೆಯ ದೂರು ನೀಡಿದ್ದರು.

  • ದಾವಣಗೆರೆಯಲ್ಲಿ ಹಸು ಮೇಲೆ ಆನೆ ದಾಳಿ – ಆನೇಕಲ್ ಗಡಿಯಲ್ಲಿ ಬೀಡುಬಿಟ್ಟ 30ಕ್ಕೂ ಹೆಚ್ಚು ಆನೆಗಳು

    ದಾವಣಗೆರೆಯಲ್ಲಿ ಹಸು ಮೇಲೆ ಆನೆ ದಾಳಿ – ಆನೇಕಲ್ ಗಡಿಯಲ್ಲಿ ಬೀಡುಬಿಟ್ಟ 30ಕ್ಕೂ ಹೆಚ್ಚು ಆನೆಗಳು

    ದಾವಣಗೆರೆ/ಬೆಂಗಳೂರು: ಜಿಲ್ಲೆಯಲ್ಲಿ ಮತ್ತೆ ಕಾಡಾನೆಗಳ ದಾಳಿ ಮುಂದುವರೆದಿದೆ. ಹೊನ್ನಾಳಿ ತಾಲೂಕು ವ್ಯಾಪ್ತಿಯಲ್ಲಿ ಬೆಳಗಿನ ಜಾವದಿಂದ ಕಾಡಾನೆಗಳು ದಾಂಧಲೆ ನಡೆಸಿದ್ದು, ಹೊನ್ನಾಳಿ ಸಮೀಪ ಹಸುಗಳನ್ನ ತಿವಿದು ಗಾಯಗೊಳಿಸಿವೆ.

    ದೇವರಹೊನ್ನಾಳಿಯಲ್ಲಿ ಗ್ರಾಮದಲ್ಲಿ ಕಾಡಾನೆಗಳು ಎರಡು ಹಸುಗಳಿಗೆ ತೀವ್ರವಾಗಿ ಇರಿದಿವೆ. ಇದರಿಂದ ಹಸುವಿನ ಕರುಳು ಹೊರಬಂದಿದ್ದು, ಒದ್ದಾಡುತ್ತಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.

    ಕಾಡಾನೆ ದಾಳಿಯಿಂದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ದೇವರಹೊನ್ನಾಳಿ ಗ್ರಾಮದ ಭರಮಪ್ಪ, ಬೆನಕನಹಳ್ಳಿ ಗ್ರಾಮದ ಮಳಲಿ ರಾಜಪ್ಪ ಎಂಬವರಿಗೆ ಗಂಭೀರ ಗಾಯಗಳಾಗಿವೆ.

    ಗಾಯಾಳುಗಳನ್ನ ಹೊನ್ನಾಳಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸದ್ಯ ಹೊನ್ನಾಳಿ ತಾಲೂಕಿನಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

    ಸುಗ್ಗಿ ಕಾಲ ಬಂತೆಂದರೆ ಸಾಕು ಅರಣ್ಯದಂಚಿನ ಪ್ರದೇಶಗಳಲ್ಲಿ ಕಾಡಾನೆಗಳ ಗುಂಪು ಪ್ರತ್ಯಕ್ಷವಾಗುತ್ತವೆ. ಇಂದು ಮುಂಜಾನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ತಳಿ, ಡೆಂಕಣಿಕೋಟೆ ಹೊಂದಿಕೊಂಡಿರುವ ಅರಣ್ಯ ಪ್ರದೇಶದಲ್ಲಿ ಬೀಡುಬಿಟ್ಟಿದ್ದ 30 ಆನೆಗಳು ಗುಂಪು ಕರ್ನಾಟಕ ಗಡಿ ಪ್ರದೇಶವಾದ ಆನೇಕಲ್ ತಾಲೂಕಿನ ಮುತ್ಯಾಲಮಡುವು ಅರಣ್ಯ ಪ್ರದೇಶದತ್ತ ಮುಖ ಮಾಡಿವೆ. ಈ ಕಾಡಾನೆಗಳು ಇಷ್ಟು ದಿನ ಡೆಂಕಣಿಕೋಟೆ ಗ್ರಾಮದ ಸುತ್ತ ಮುತ್ತ ಹಾವಳಿ ನೀಡಿ, ಬೆಳೆಹಾನಿ ಮಾಡಿ ರೈತರಲ್ಲಿ ಅತಂಕ ಮೂಡಿಸಿದ್ದವು.

    ಆನೆಗಳ ಹಾವಳಿಯನ್ನು ತಪ್ಪಿಸುವ ನಿಟ್ಟಿನಲ್ಲಿ ತಮಿಳುನಾಡು ಅರಣ್ಯ ಸಿಬ್ಬಂದಿ ಆನೆಗಳನ್ನು ಕರ್ನಾಟಕದತ್ತ ಒಡಿಸಿದ್ದು ಸದ್ಯ ಮುತ್ಯಾಲಮಡುವು ಅರಣ್ಯ ಪ್ರದೇಶದಲ್ಲಿ ಕಾಡಾನೆಗಳ ಗುಂಪು ಬೀಡು ಬಿಟ್ಟಿವೆ. ಇದರಲ್ಲಿ ಮರಿ ಆನೆಗಳು ಇರಿವುದು ವಿಶೇಷವಾಗಿದೆ.

  • ಮುಂದಿನ ವಾರ ರಜೆ ಮೇಲೆ ಬರೋದಾಗಿ ಹೇಳಿದ್ದ ಹಾವೇರಿ ಯೋಧ ಹುತಾತ್ಮ

    ಮುಂದಿನ ವಾರ ರಜೆ ಮೇಲೆ ಬರೋದಾಗಿ ಹೇಳಿದ್ದ ಹಾವೇರಿ ಯೋಧ ಹುತಾತ್ಮ

    ಹಾವೇರಿ: ಮುಂದಿನ ವಾರ ರಜೆ ಮೇಲೆ ಊರಿಗೆ ಬರೋದಾಗಿ ಹೇಳಿದ್ದ, ಯೋಧ ಇಂದು ಶವವಾಗಿ ಮನೆಗೆ ಬಂದಿದ್ದಾರೆ.

    ಆಹಾರ ಅರಸಿ ಬನ್ನೇರುಘಟ್ಟ ಅರಣ್ಯ ಕಾಡಿಗೆ ಬಂದಿದ್ದ ಕಾಡಾನೆ ದಾಳಿಗೆ ಇಬ್ಬರು ಸಿಆರ್ ಪಿಎಫ್ ಯೋಧರು ಭಾನುವಾರ ಬಲಿಯಾಗಿದ್ದರು. ಕಾಡಾನೆ ದಾಳಿಗೆ ಮೃತಪಟ್ಟ ಪುಟ್ಟಪ್ಪ ಅವರ ಪಾರ್ಥಿವ ಶರೀರ ಇಂದು ಜಿಲ್ಲೆಯ ಸವಣೂರು ತಾಲೂಕಿನ ಶಿರಬಡಗಿ ಸ್ವಗ್ರಾಮ ಬಂದು ತಲುಪಿದೆ.

    ಪುಟ್ಟಪ್ಪ ಅವರ ಸಾವಿನಿಂದ ಶಿರಬಡಗಿ ಗ್ರಾಮ ದುಃಖದಲ್ಲಿ ಮುಳುಗಿದೆ. 2005 ರಲ್ಲಿ ಸಿಆರ್ ಪಿಎಫ್ ಗೆ ಸೇರಿದ್ದ ಪುಟ್ಟಪ್ಪ, ಎರಡು ವರ್ಷಗಳ ಹಿಂದೆ ಬನ್ನೇರುಘಟ್ಟ ಶಿಬಿರ ಸೇರಿದ್ದರು. ಪುಟ್ಟಪ್ಪ ಅವರು ತಂದೆ, ತಾಯಿ, ಪತ್ನಿ ಮೂವರು ಮಕ್ಕಳು ಹಾಗೂ ಸಹೋದರರನ್ನು ಅಗಲಿ ಬಾರದ ಲೋಕಕ್ಕೆ ತೆರಳಿದ್ದಾರೆ.

    ಇದನ್ನೂ ಓದಿ: ಆಹಾರ ಅರಸಿ ಸಿಆರ್‍ಪಿಎಫ್ ಕ್ಯಾಂಪ್‍ಗೆ ಬಂದ ಕಾಡಾನೆಗಳ ದಾಳಿಗೆ ಇಬ್ಬರು ಯೋಧರು ಹುತಾತ್ಮ

    ಶಿರಬಡಗಿ ಗ್ರಾಮದ ಸರ್ಕಾರಿ ಶಾಲೆಯ ಆವರಣದಲ್ಲಿ ಪುಟ್ಟಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದೆ. ತಾಲೂಕು ಆಡಳಿತವು ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಯಲಿದೆ.