Tag: ಆಪರೇಷನ್ ಅಜಯ್

  • ಆಪರೇಷನ್ ಅಜಯ್ ತಂಡದಲ್ಲಿ ಕಾರವಾರದ ಮಹಿಮಾ

    ಆಪರೇಷನ್ ಅಜಯ್ ತಂಡದಲ್ಲಿ ಕಾರವಾರದ ಮಹಿಮಾ

    ಕಾರವಾರ: ಇಸ್ರೇಲ್‌ನಿಂದ (Israel) ಭಾರತೀಯರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ ಸರ್ಕಾರ ಇತ್ತೀಚೆಗೆ ನಡೆಸಿದ ‘ಆಪರೇಷನ್ ಅಜಯ್’ (Operation Ajay) ತಂಡದಲ್ಲಿ ಕಾರವಾರ (Karwar) ತಾಲೂಕಿನ ಬಿಣಗಾದ ಮಹಿಮಾ ಶೆಟ್ಟಿಯವರು (Mahima Shetty) ಭಾಗವಹಿಸಿ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರಲು ಶ್ರಮವಹಿಸುವ ಮೂಲಕ ಜಿಲ್ಲೆಯ ಹಿರಿಮೆ ಹೆಚ್ಚಿಸಿದ್ದಾರೆ.

    ಸದ್ಯ ಗೋವಾದ ಪರ್ವೊರಿಮ್‌ನಲ್ಲಿ ನೆಲೆಸಿರುವ ದುರ್ಗಪ್ಪ ಶೆಟ್ಟಿ ಮತ್ತು ನಯನಾ ದಂಪತಿಯ ಪುತ್ರಿ ಮಹಿಮಾ ಶೆಟ್ಟಿ ಆಪರೇಷನ್ ಅಜಯ್ ತಂಡದಲ್ಲಿ ಭಾಗಿಯಾಗಿದ್ದರು. ಏರ್ ಇಂಡಿಯಾದಲ್ಲಿ (Air India) ಗಗನಸಖಿ (Air Hostess) ಆಗಿರುವ ಅವರು ಇಸ್ರೇಲ್‌ನಲ್ಲಿ ಸಿಲುಕಿದ್ದ ಭಾರತೀಯರನ್ನು ಕರೆತರುವ ಆರು ಮಂದಿಯ ತಂಡದಲ್ಲಿ ಇವರು ಸಹ ಭಾಗಿಯಾಗಿದ್ದರು. ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್ – ತುಟ್ಟಿ ಭತ್ಯೆ ಶೇ. 3.75 ಹೆಚ್ಚಳ

    ಮಹಿಮಾರವರು ಇಸ್ರೇಲ್‌ಗೆ ತೆರಳಿದ್ದಾಗ ಕ್ಷಿಪಣಿ ದಾಳಿ ನಡೆಯುತ್ತಿದ್ದುದರಿಂದ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಆದರೂ ಯಾವುದೇ ಹಿಂಜರಿಕೆಯಿಲ್ಲದೇ 236 ಮಂದಿ ಭಾರತೀಯರನ್ನು ಕರೆತಂದಿದ್ದಾಗಿ ಮಹಿಮಾರವರು ಮಾಹಿತಿ ನೀಡಿದ್ದು, ಈ ಕೆಲಸಕ್ಕೆ ಅವಕಾಶ ಸಿಕ್ಕಿದ್ದು ನಮ್ಮ ಪುಣ್ಯ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ನಕಲಿ ವೋಟರ್ ಐಡಿ ಪ್ರಕರಣ; ಸಚಿವ ಭೈರತಿ ಸುರೇಶ್ ರಾಜೀನಾಮೆ ಕೊಡಬೇಕು: ರವಿಕುಮಾರ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದೆಹಲಿಗೆ ಬರ್ತಿದ್ದಂತೆ ಎಲ್ಲ ಭಾರ ಇಳಿದು ನೆಮ್ಮದಿ ಸಿಕ್ಕಿತು: ಇಸ್ರೇಲ್‌ ಯುದ್ಧ ಭೀಕರತೆ ಬಿಚ್ಚಿಟ್ಟ ಕನ್ನಡಿಗರು

    ದೆಹಲಿಗೆ ಬರ್ತಿದ್ದಂತೆ ಎಲ್ಲ ಭಾರ ಇಳಿದು ನೆಮ್ಮದಿ ಸಿಕ್ಕಿತು: ಇಸ್ರೇಲ್‌ ಯುದ್ಧ ಭೀಕರತೆ ಬಿಚ್ಚಿಟ್ಟ ಕನ್ನಡಿಗರು

    ನವದೆಹಲಿ: ಆಪರೇಷನ್ ಅಜಯ್ ಮಿಷನ್ (Operation Ajay) ಮುಂದುವರಿದ್ದು, ಇಸ್ರೇಲ್‌ನಲ್ಲಿ (Israel) ಸಿಲುಕಿರುವ ಭಾರತೀಯರನ್ನು ಹೊತ್ತ 4ನೇ ವಿಮಾನ ಭಾರತಕ್ಕೆ ಬಂದಿಳಿದಿದೆ. 274 ಭಾರತೀಯರು ತಾಯ್ನಾಡಿಗೆ ವಾಪಸ್ ಆಗಿದ್ದಾರೆ.

    ಎಲ್ಲರನ್ನೂ ಕೇಂದ್ರ ಸಚಿವ ವಿ.ಕೆ. ಸಿಂಗ್ ಸ್ವಾಗತಿಸಿದ್ದಾರೆ. ಈ ಪೈಕಿ 8 ಮಂದಿ ಕನ್ನಡಿಗರು ತಮ್ಮ ಮನೆ ಸೇರಿಕೊಂಡಿದ್ದಾರೆ. ‘ಪಬ್ಲಿಕ್ ಟಿವಿ’ ಜೊತೆ ಇಸ್ರೇಲ್‌ನಿಂದ ಆಗಮಿಸಿದ ಕನ್ನಡಿಗರು ತಮ್ಮ ಅನುಭವ ಬಿಚ್ಚಿಟ್ಟಿದ್ದಾರೆ. ಇದನ್ನೂ ಓದಿ: ಅಖಾಡಕ್ಕಿಳಿದ ಇಸ್ರೇಲ್ ಪ್ರಧಾನಿ – ಹಮಾಸ್ ಬಂಡುಕೋರರಿಗೆ ನೇರ ಎಚ್ಚರಿಕೆ

    ನಂದಾ ಹಾಗೂ ರೇಣುಕಾ ದಂಪತಿ ಮಾತನಾಡಿ, ದೆಹಲಿ ಬರ್ತಿದ್ದಂತೆ ಎಲ್ಲ ಭಾರ ಇಳಿದು ಮಾನಸಿಕ ನೆಮ್ಮದಿ ಸಿಕ್ಕಿತು. ಇಸ್ರೇಲ್‌ನಿಂದ ಬಂದಿದ್ದು, ನಮಗೆ ಯುದ್ಧದ ಅನುಭವೇ ಆಯ್ತು. ಈಗಲೂ ಸೈರನ್ ಸೌಂಡ್, ಕಟ್ಟಡ ಅಲುಗಾಡಿದಂತೆ ಭಾಸವಾಗುತ್ತಿದೆ ಎಂದು ಯುದ್ಧದ ಭೀಕರತೆ ಬಗ್ಗೆ ಕನ್ನಡಿಗರು ಬಿಚ್ಚಿಟ್ಟಿದ್ದಾರೆ.

    ಅತ್ತ, ಹುಬ್ಬಳ್ಳಿಗೆ ಬಂದ ಡಾ. ಅಖಿಲೇಶ್ ಕಾರಗದ್ದೆ-ಕೃತಿ ದಂಪತಿ ಕನ್ನಡಿಗರಿಗೆ ಜಿಲ್ಲಾಡಳಿತ ಸ್ವಾಗತ ಕೋರಿದೆ. ಲೇಸರ್ ಟೆಕ್ನಾಲಜಿ ಪೋಸ್ಟ್ ಡಾಕ್ಟರಲ್ ಫೆಲೋ ವ್ಯಾಸಂಗಕ್ಕಾಗಿ ಕಳೆದ ಜೂನ್ ವೇಳೆ ದಂಪತಿ ಇಸ್ರೇಲ್‌ಗೆ ತೆರಳಿತ್ತು. ಇದನ್ನೂ ಓದಿ: ಯುದ್ಧ ಪೀಡಿತ ಇಸ್ರೇಲ್‍ನಿಂದ 197 ಜನರನ್ನು ಹೊತ್ತು ದೆಹಲಿಯೆಡೆಗೆ ಹಾರಿದ 3ನೇ ವಿಮಾನ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಯುದ್ಧ ಪೀಡಿತ ಇಸ್ರೇಲ್‍ನಿಂದ 197 ಜನರನ್ನು ಹೊತ್ತು ದೆಹಲಿಯೆಡೆಗೆ ಹಾರಿದ 3ನೇ ವಿಮಾನ

    ಯುದ್ಧ ಪೀಡಿತ ಇಸ್ರೇಲ್‍ನಿಂದ 197 ಜನರನ್ನು ಹೊತ್ತು ದೆಹಲಿಯೆಡೆಗೆ ಹಾರಿದ 3ನೇ ವಿಮಾನ

    ಟೆಲ್ ಅವೀವ್: ಯುದ್ಧ ಪೀಡಿತ ಇಸ್ರೇಲ್‍ನಿಂದ (Israel) ಭಾರತೀಯರನ್ನು (India) ಹೊತ್ತ ಮೂರನೇ ವಿಮಾನ ನವದೆಹಲಿಗೆ ಹೊರಟಿದೆ ಎಂದು ಭಾರತೀಯ ರಾಯಭಾರ ಕಚೇರಿ ಶನಿವಾರ ತಿಳಿಸಿದೆ.

    197 ಜನರನ್ನು ವಿಮಾನ ಹೊರಟಿದೆ ಎಂದು ಇಸ್ರೇಲ್‍ನಲ್ಲಿರುವ ರಾಯಭಾರ ಕಚೇರಿ ಮಾಹಿತಿ ನೀಡಿದೆ. `ಆಪರೇಷನ್ ಅಜಯ್’ (Operation Ajay) ಅಡಿಯಲ್ಲಿ ಇಸ್ರೇಲ್‍ನಿಂದ ಭಾರತೀಯರನ್ನು ಕರೆತರುವ ಕಾರ್ಯ ನಡೆಯುತ್ತಿದೆ. ಇಂದು ಬೆಳಗ್ಗೆ ಇಸ್ರೇಲ್‍ನ ಟೆಲ್ ಅವೀವ್‍ನಿಂದ 235 ಭಾರತೀಯ ಪ್ರಜೆಗಳನ್ನು ಹೊತ್ತ ಎರಡನೇ ವಿಮಾನವು ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು. ಇದಕ್ಕೂ ಮೊದಲು ಬಂದಿದ್ದ ವಮಾನದಲ್ಲಿ 230 ಜನ ಬಂದಿದ್ದರು.

    ಇಸ್ರೇಲ್‍ನಲ್ಲಿರುವ ಸುಮಾರು 18,000 ಭಾರತೀಯರನ್ನು ಮರಳಿ ಕರೆತರಲು ಕೇಂದ್ರ ಸರ್ಕಾರ ಆಪರೇಷನ್ ಅಜಯ್‍ನ್ನು ಪ್ರಾರಂಭಿಸಿದೆ. ಗುರುವಾರದಿಂದ ಭಾರತೀಯರ ನೋಂದಣಿ ಆರಂಭವಾಗಿದೆ. ಇಸ್ರೇಲ್‍ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯು ಭಾರತೀಯ ಕಂಪನಿಗಳಿಗೆ ನೆರವು ನೀಡುತ್ತಿದೆ. ಸಹಾಯದ ಅಗತ್ಯವಿರುವ ಭಾರತೀಯರಿಗೆ ಸಹಾಯವಾಣಿಯನ್ನು ಸ್ಥಾಪಿಸಿದೆ…

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆಪರೇಷನ್ ಅಜಯ್ – ಇಂದು ರಾತ್ರಿ ಇಸ್ರೇಲ್‌ನಿಂದ ಆಗಮಿಸಲಿದೆ ಭಾರತೀಯರನ್ನು ಹೊತ್ತ ಮೊದಲ ವಿಮಾನ

    ಆಪರೇಷನ್ ಅಜಯ್ – ಇಂದು ರಾತ್ರಿ ಇಸ್ರೇಲ್‌ನಿಂದ ಆಗಮಿಸಲಿದೆ ಭಾರತೀಯರನ್ನು ಹೊತ್ತ ಮೊದಲ ವಿಮಾನ

    ನವದೆಹಲಿ: ಇಸ್ರೇಲ್-ಹಮಾಸ್ ಯುದ್ಧದ ನಡುವೆ ಸಿಲುಕಿರುವ ಭಾರತೀಯರನ್ನು ಕರೆತರಲು ಆಪರೇಷನ್ ಅಜಯ್ (Operation Ajay) ಅನ್ನು ಪ್ರಾರಂಭಿಸಲಾಗಿದೆ. ಭಾರತೀಯರನ್ನು ಹೊತ್ತ ಮೊದಲ ವಿಮಾನ ಇಂದು ರಾತ್ರಿ ಟೆಲ್ ಅವಿವ್‌ನ ಬೆನ್ ಗುರಿಯಾನ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಲಿದೆ.

    ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಟೆಲ್ ಅವಿವ್‌ನಿಂದ ದೆಹಲಿಗೆ ಚಾರ್ಟರ್ಡ್ ಫ್ಲೈಟ್ ಅನ್ನು ಕಳುಹಿಸಿರುವುದಾಗಿ ವಿದ್ಯಾರ್ಥಿಗಳಿಗೆ ಮೇಲ್ ಸಂದೇಶ ಕಳುಹಿಸಿದೆ. ಈ ವಿಮಾನ ಇಂದು ಇಸ್ರೇಲ್ (Israel) ಕಾಲಮಾನ ರಾತ್ರಿ ಸುಮಾರು 9 ಗಂಟೆಗೆ ಬೆನ್ ಗುರಿಯಾನ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಲಿದೆ.

    ಭಾರತೀಯ ವಿದ್ಯಾರ್ಥಿಗಳಿಗೆ ಮೇಲ್‌ನಲ್ಲಿ ಗೂಗಲ್ ಫಾರ್ಮ್ ಅನ್ನು ಭರ್ತಿ ಮಾಡಲು ಕೇಳಲಾಗಿದೆ. ನಂತರ ಅವರು ದೃಢೀಕರಣ ಸಂದೇಶವನ್ನು ಸ್ವೀಕರಿಸುತ್ತಾರೆ. ಒಂದು ಚೆಕ್ ಇನ್ ಲಗೇಜ್ 23 ಕೆ.ಜಿ ಗಿಂತ ಹೆಚ್ಚಿರಬಾರದು ಮತ್ತು ಒಂದು ಕ್ಯಾಬಿನ್ ಲಗೇಜ್ ಅನ್ನು ಅನುಮತಿಸಲಾಗುವುದು ಎಂದು ಮೇಲ್‌ನಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಮಹಿಳೆಯರನ್ನ ರೇಪ್‌ ಮಾಡ್ತಿದ್ದಾರೆ, ಮಕ್ಕಳನ್ನ ಕೊಲ್ತಿದ್ದಾರೆ- ಹಮಾಸ್‌ ಉಗ್ರರ ಕರಾಳ ಮುಖ ಬಿಚ್ಚಿಟ್ಟ ಭಾರತದ ಇಸ್ರೇಲ್‌ ಮಹಿಳೆ

    ಇಸ್ರೇಲ್ ಮೇಲೆ ಹಮಾಸ್ (Hamas) ಉಗ್ರರು ದಾಳಿ ನಡೆಸಿದ ಬಳಿಕ ಎರಡೂ ಪ್ರದೇಶಗಳಲ್ಲಿ ಯುದ್ಧದ ಸ್ಥಿತಿ ತೀವ್ರಗೊಂಡಿದೆ. ಸಾವಿನ ಸಂಖ್ಯೆ 4,000ಕ್ಕೆ ಹತ್ತಿರವಾಗುತ್ತಿದ್ದಂತೆ ಭಾರತೀಯ ನಾಗರಿಕರನ್ನು ಇಸ್ರೇಲ್‌ನಿಂದ ಏರ್‌ಲಿಫ್ಟ್ ಮಾಡಲು ಭಾರತ ಆಪರೇಷನ್ ಅಜಯ್ ಅನ್ನು ಪ್ರಾರಂಭಿಸಿದೆ. ಇದನ್ನೂ ಓದಿ: ಗಾಝಾ ನಗರಕ್ಕೆ ಇಸ್ರೇಲ್ ದಿಗ್ಬಂಧನ – ಅನ್ನ, ನೀರಿಗೂ ಪ್ಯಾಲೆಸ್ತೀನಿಯರ ಪರದಾಟ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]