Tag: ಆಪರೇಷನ್ ಕಮಲ

  • ಸಿಎಂ ತವರು ಕ್ಷೇತ್ರ ಶಿಕಾರಿಪುರದಲ್ಲಿ ಆಪರೇಷನ್ ಕಮಲ?

    ಸಿಎಂ ತವರು ಕ್ಷೇತ್ರ ಶಿಕಾರಿಪುರದಲ್ಲಿ ಆಪರೇಷನ್ ಕಮಲ?

    ಶಿವಮೊಗ್ಗ : ಈ ಕೊರೊನಾ ಮಹಾಮಾರಿ ತಲೆ ಮೇಲೆ ಹತ್ತಿ ಕುಣಿಯುತ್ತಿದೆ. ಯಾರು, ಎಲ್ಲಿ, ಏನು ಮಾಡಬೇಕೆಂಬ ಯೋಚನೆ ಮಾಡಲು ಸಾಧ್ಯವಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆಯೂ ಸಿಎಂ ತವರು ಜಿಲ್ಲೆ ಶಿವಮೊಗ್ಗದಲ್ಲಿ ರಾಜಕೀಯ ಮೇಲಾಟಗಳು ಮುಂದುವರಿದಿವೆ. ಇದೀಗ ಶಿಕಾರಿಪುರ ಪುರಸಭೆಯಲ್ಲಿ ಆಪರೇಷನ್ ಕಮಲ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು, ಕೊರೋನಾ ಸಂಕಷ್ಟದ ನಡುವೆಯೂ ಸಿಎಂ ಮತ್ತು ಸಂಸದರ ವಿರುದ್ಧ ಕಾಂಗ್ರೆಸ್ ಕೆಂಡಾಮಂಡಲವಾಗಿದೆ.

    ಶಿಕಾರಿಪುರ ಎಂದಾಕ್ಷಣ ಬಿ.ಎಸ್. ಯಡಿಯೂರಪ್ಪ, ಬಿ.ಎಸ್. ಯಡಿಯೂರಪ್ಪ ಅಂದರೆ ಶಿಕಾರಿಪುರ ಎಂಬ ಮಾತಿದೆ. ಆದರೆ ಶಿಕಾರಿಪುರ ಪುರಸಭೆಯಲ್ಲಿ ಮಾತ್ರ ಕಳೆದ ಒಂದೂವರೆ ವರ್ಷದಿಂದ ಕಾಂಗ್ರೆಸ್ ಅಧಿಕಾರ ನಡೆಸುತ್ತಿದೆ. ಆದರೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ನೇಮಕ ಇದುವರೆಗೂ ಆಗಿಲ್ಲ ಎಂಬುದು ಇಲ್ಲಿ ಪ್ರಮುಖ ಸಂಗತಿ. ಮೀಸಲಾತಿ ಪ್ರಕಟಗೊಂಡಿದ್ದರೂ ಇದನ್ನು ಪ್ರಶ್ನಿಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿತ್ತು. ಕಳೆದ ಡಿಸೆಂಬರ್ ನಲ್ಲಿ ನ್ಯಾಯಾಲಯದ ತಡೆಯಾಜ್ಞೆ ಇದ್ದರೂ ಸಹ ಸರ್ಕಾರ ಮೀಸಲಾತಿ ಪ್ರಕಟಿಸಿತ್ತು. ಇದಕ್ಕೂ ಸಹ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಪುರಸಭೆಯಲ್ಲಿ ಕಾಂಗ್ರೆಸ್ ಗೆ ಬಹುಮತ ಇದ್ದರೂ ಸಹ ಅಧಿಕಾರ ಮಾತ್ರ ಅನುಭವಿಸಲು ಸಾಧ್ಯವಾಗಿಲ್ಲ. ಆದರೆ ಇದೀಗ ಬಿಜೆಪಿ ಆಪರೇಷನ್ ಕಮಲ ಮಾಡಿದೆ ಎಂಬ ಆರೋಪ ಕೇಳಿ ಬಂದಿದ್ದು, ಇದಕ್ಕೆ ಕಾಂಗ್ರೆಸ್ ನಿಗಿ ನಿಗಿ ಕೆಂಡವಾಗಿದೆ.

    ಶಿಕಾರಿಪುರ ಪುರಸಭೆಯಲ್ಲಿ ವಾಮಮಾರ್ಗದಿಂದ ಅಧಿಕಾರ ಹಿಡಿಯಲು ಆಪರೇಷನ್ ಕಮಲ ಮಾಡಲಾಗಿದೆ ಎಂಬ ಆರೋಪವನ್ನು ಕಾಂಗ್ರೆಸ್ ಕಾರ್ಯಕರ್ತರು ಮಾಡುತ್ತಿದ್ದಾರೆ. ಖುದ್ದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಪುತ್ರ ಸಂಸದ ಬಿ.ವೈ. ರಾಘವೇಂದ್ರ ಅವರು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರ ಆರೋಪವಾಗಿದೆ.

    ಅಂದಹಾಗೆ ಶಿಕಾರಿಪುರ ಪುರಸಭೆಯಲ್ಲಿ ಕಳೆದ 20 ವರ್ಷದಿಂದ ಬಿಜೆಪಿ ಅಧಿಕಾರದಲ್ಲಿತ್ತು. ಬಿಜೆಪಿಯ ಆಡಳಿತ ಬೇಸತ್ತು ಕಳೆದ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್‍ಗೆ ಆಶೀರ್ವದಿಸಿ ಬಹುಮತ ನೀಡಿದ್ದರು. ಚುನಾವಣೆಯಲ್ಲಿ ಕಾಂಗ್ರೆಸ್ 12 ಸ್ಥಾನ, ಬಿಜೆಪಿ-8 ಹಾಗೂ ಮೂವರು ಪಕ್ಷೇತರರು ಆಯ್ಕೆಯಾಗಿದ್ದರು. ಇದರಿಂದ ಯಡಿಯೂರಪ್ಪ ಹಾಗೂ ಬಿ.ವೈ.ರಾಘವೇಂದ್ರ ಅವರಿಗೆ ಮುಖಭಂಗವಾಗಿತ್ತು. ಹಾಗೂ ಯಡಿಯೂರಪ್ಪ ಅವರ ನಿವಾಸದ ವಾರ್ಡ್‍ನಲ್ಲೂ ಸಹ ಬಿಜೆಪಿ ಅಭ್ಯರ್ಥಿ ಸೋಲು ಕಂಡಿದ್ದರು. ಇದೀಗ ಮರ್ಯಾದೆ ಉಳಿಸಿಕೊಳ್ಳಲು ಹಾಗೂ ಬಿಜೆಪಿ ಆಡಳಿತದಲ್ಲಿ ಆಗಿರುವ ಭ್ರಷ್ಟಾಚಾರವನ್ನು ಮರೆ ಮಾಚಲು ಆಪರೇಷನ್ ಕಮಲಕ್ಕೆ ಕೈಹಾಕಿ ಕಾಂಗ್ರೆಸ್ ಸದಸ್ಯರಾದ ರಮೇಶ್ ಹಾಗೂ ಉಮಾವತಿ ಅವರಿಂದ ರಾಜೀನಾಮೆ ಕೊಡಿಸಲಾಗಿದೆಯಂತೆ.

    ಪುರಸಭೆಯಲ್ಲಿ 35 ಸಿಬ್ಬಂದಿಗಳ ಹುದ್ದೆ ಖಾಲಿ ಇದ್ದರೂ ಸಹ ಇದುವರೆಗೆ ಭರ್ತಿ ಮಾಡಿಲ್ಲ. ಇದರಿಂದಾಗಿ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ. ಚುನಾವಣೆ ನಡೆದು ಒಂದು ವರ್ಷ ಎರಡು ತಿಂಗಳು ಆಗಿದ್ದರೂ ಸಹ ಇದುವರೆಗೂ ಅಧ್ಯಕ್ಷ-ಉಪಾಧ್ಯಕ್ಷರ ನೇಮಕವಾಗಿಲ್ಲ. ಸದಸ್ಯರಿಗೆ ಗೌರವವೂ ಸಿಗುತ್ತಿಲ್ಲ ಹಾಗೂ ಕೆಲಸವೂ ಆಗುತ್ತಿಲ್ಲ ಎಂದು ಸಿ.ಎಂ. ಯಡಿಯೂರಪ್ಪ ವಿರುದ್ಧ ಶಿಕಾರಿಪುರ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

    ಒಟ್ಟಾರೆ ಮುಖ್ಯಮಂತ್ರಿ ತವರು ಕ್ಷೇತ್ರ ಶಿಕಾರಿಪುರದ ಪುರಸಭೆಯಲ್ಲಿ ಕಾಂಗ್ರೆಸ್ ಆಡಳಿತ ನಡೆಸಿದ್ದಲ್ಲಿ ಹಿಂದಿನ ಬಿಜೆಪಿ ಆಡಳಿತದ ಭ್ರಷ್ಟಾಚಾರ ಬೆಳಕಿಗೆ ಬರಬಹುದು ಎಂಬ ಉದ್ದೇಶವಿದ್ದು, ಹೀಗಾಗಿ ಆಪರೇಷನ್ ಕಮಲಕ್ಕೆ ಕೈ ಹಾಕಿ ಹಿಂಬಾಗಿಲಿನಿಂದ ಅಧಿಕಾರ ಪಡೆಯಲು ಯತ್ನಿಸಿದ್ದಾರೆ ಎಂಬ ಆರೋಪ ಕಾಂಗ್ರೆಸ್ ನದ್ದಾಗಿದೆ. ಏನೇ ಆಗಲಿ ಕೊರೊನಾ ಬಂದು ತಲೆ ಮೇಲೆ ಕೂತಿರುವ ಇಂತಹ ಸಂದರ್ಭದಲ್ಲಿ ಇಂತಹ ಕ್ಷುಲ್ಲಕ ರಾಜಕೀಯ ಬೇಕಾ ಎಂಬುದು ಸಾರ್ವಜನಿಕರ ಮಾತಾಗಿದೆ.

  • ರಾಜಸ್ಥಾನದಲ್ಲಿ ಹೈಡ್ರಾಮಾ – 25 ಶಾಸಕರ ಜೊತೆ ದೆಹಲಿ ತಲುಪಿದ ಪೈಲಟ್‌

    ರಾಜಸ್ಥಾನದಲ್ಲಿ ಹೈಡ್ರಾಮಾ – 25 ಶಾಸಕರ ಜೊತೆ ದೆಹಲಿ ತಲುಪಿದ ಪೈಲಟ್‌

    ಮತ್ತೆ ಆಪರೇಷನ್‌ ಕಮಲ ನಡೆಯುತ್ತಾ?
    – ಬಿಜೆಪಿಯಿಂದ ಶಾಸಕರಿಗೆ 25 ಕೋಟಿ ಆಫರ್‌
    – ಸಿಎಂ ಗೆಹ್ಲೋಟ್‌ ಗಂಭೀರ ಆರೋಪ

    ಜೈಪುರ/ನವದೆಹಲಿ: ರಾಜಸ್ಥಾನ ಕಾಂಗ್ರೆಸ್‌ ಸರ್ಕಾರದಲ್ಲಿ ಹೈಡ್ರಾಮಾ ಸೃಷ್ಟಿಯಾಗಿದ್ದು, ಮಧ್ಯಪ್ರದೇಶದಲ್ಲಿ ನಡೆದಂತೆ ಇಲ್ಲಿಯೂ ಬಿಜೆಪಿ ಅಧಿಕಾರಕ್ಕೆ ಬರುತ್ತಾ ಎಂಬ ಪ್ರಶ್ನೆ ಎದ್ದಿದೆ. ಇಲ್ಲಿಯವರೆಗೆ ತೆರೆ ಮರೆಯಲ್ಲಿ ನಡೆಯುತ್ತಿದ್ದ ನಾಯಕರ ನಡುವಿನ ಗುದ್ದಾಟ ಈಗ ಬಹಿರಂಗವಾಗಿದ್ದು ಬಿಕ್ಕಟ್ಟು ಈಗ ದೆಹಲಿ ಹೈಕಮಾಂಡ್‌ ಅಂಗಳಕ್ಕೆ‌ ತಲುಪಿದೆ.

    2018ರ ಚುನಾವಣೆಯಲ್ಲಿ ಕಾಂಗ್ರೆಸ್‌ ಜಯಗಳಿಸಿದ ಬಳಿಕ 69 ವರ್ಷದ  ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಮತ್ತು 42 ವರ್ಷದ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್‌ ನಡುವೆ ಭಿನ್ನಮತ ಎದ್ದಿತ್ತು. ಆಗ ಹೇಗೂ ಕಾಂಗ್ರೆಸ್‌ ಹೈಕಮಾಂಡ್‌ ಭಿನ್ನಮತವನ್ನು ಶಮನ ಮಾಡಲು ಸಚಿನ್ ಪೈಲಟ್‌ಗೆ ಉಪಮುಖ್ಯಮಂತ್ರಿ ಸ್ಥಾನವನ್ನು ನೀಡಿ ಸಮಾಧಾನ ಮಾಡಿತ್ತು. ಆದರೆ ಈಗ ಭಿನ್ನಮತ ಮತ್ತಷ್ಟು ಉಲ್ಬಣಗೊಂಡಿದ್ದು ಪೈಲಟ್‌ ಅವರು ತಮ್ಮ ಆಪ್ತ 25 ಶಾಸಕರ ಜೊತೆ ಹೈಕಮಾಂಡ್‌ ಭೇಟಿಯಾಗಲು ದೆಹಲಿಗೆ ಬಂದಿದ್ದಾರೆ ಎಂದು ವರದಿಯಾಗಿದೆ.

    ದಿಢೀರ್‌ ಬೆಳವಣಿಗೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ಸಿಎಂ ಗೆಹ್ಲೋಟ್‌ ತನ್ನ ಮಂತ್ರಿಗಳು, ಆಪ್ತ ಶಾಸಕರು ಮತ್ತು ಪಕ್ಷೇತರ ಶಾಸಕರ ಜೊತೆ ಸಭೆ ನಡೆಸಿ ಪತ್ರದ ಮೂಲಕ ಸರ್ಕಾರಕ್ಕೆ ಬೆಂಬಲ ನೀಡುವಂತೆ ಸೂಚಿಸಿದ್ದರು.

    ಕಾಂಗ್ರೆಸ್‌ ಶಾಸಕರ ಖರೀದಿಗೆ ಕುದುರೆ ವ್ಯಾಪಾರ ನಡೆಸಿ ಸರ್ಕಾರ ಉರುಳಿಸಲು ಮುಂದಾಗಿದ್ದಾರೆ ಎಂಬ ಆರೋಪದ ಮೇರೆಗೆ ಇಬ್ಬರು ವ್ಯಕ್ತಿಗಳ ವಿರುದ್ಧ ವಿಶೇಷ ಕಾರ್ಯಾಚರಣೆ ಪಡೆಯು (ಎಸ್‌ಒಜಿ) ಪ್ರಕರಣ ದಾಖಲಿಸಿ ಬಂಧಿಸಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡುವಂತೆ ಪೊಲೀಸರು ಸಚಿನ್ ಪೈಲಟ್‌ಗೆ ನೋಟಿಸ್‌ ಕಳುಹಿಸಿದ್ದರು.

    ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಆರೋಪಿಸಿದ್ದಾರೆ. ಕಾಂಗ್ರೆಸ್‌ ಶಾಸಕರನ್ನು ಖರೀದಿಸಲು ಬಿಜೆಪಿ 25 ಕೋಟಿ ನೀಡುವ ಆಮಿಷ ಒಡ್ಡಿದೆ ಎಂದು ಹೇಳಿದ್ದಾರೆ.

    ಈ ಬಗ್ಗೆ ರಾಜಸ್ಥಾನ ಬಿಜೆಪಿ ರಾಜ್ಯಾಧ್ಯಕ್ಷ ಸತೀಶ್‌ ಪುನಿಯಾ ಪ್ರತಿಕ್ರಿಯಿಸಿ, ಮಧ್ಯಪ್ರದೇಶದಲ್ಲಿ ಉತ್ತಮ ಆಡಳಿತ ನೀಡಲು ಕಾಂಗ್ರೆಸ್‌ ವಿಫಲವಾಗಿದೆ. ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ಗೆಹ್ಲೋಟ್‌ ಬಿಜೆಪಿ ವಿರುದ್ಧ ಮಾತನಾಡಿದ್ದಾರೆ. ಸರ್ಕಾರದಲ್ಲಿ ಎಲ್ಲವೂ ಸರಿ ಇದ್ದರೆ ಹೆದರಿಕೆ ಯಾಕೆ ಎಂದು ಪ್ರಶ್ನಿಸಿದ್ದಾರೆ.

    ಒಟ್ಟು 200 ವಿಧಾನ ಸಭಾ ಕ್ಷೇತ್ರಗಳ ಪೈಕಿ 2018ರ ಚುನಾವಣೆಯಲ್ಲಿ ಕಾಂಗ್ರೆಸ್‌ ಏಕಾಂಗಿಯಾಗಿ 100 ಕ್ಷೇತ್ರಗಳನ್ನು ಗೆದ್ದಿದ್ದರೆ ಬಿಜೆಪಿ 72 ಸ್ಥಾನವನ್ನು ಗೆದ್ದಿತ್ತು. ಬಳಿಕ ಬಿಎಸ್‌‌ಪಿಯ 6 ಮಂದಿ ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. 13 ಮಂದಿ ಪಕ್ಷೇತರ ಶಾಸಕರ ಪೈಕಿ 12 ಮಂದಿ ಕಾಂಗ್ರೆಸ್ ಸರ್ಕಾರವನ್ನು ಬೆಂಬಲಿಸಿದ್ದಾರೆ. ಇತ್ತ ಬಿಜೆಪಿ ಬಳಿ 72 ಶಾಸಕರು ಇದ್ದಾರೆ. ಬಿಜೆಪಿಗೆ ಆರ್‌ಎಲ್‌ಪಿಯ ಒಬ್ಬರು ಮತ್ತು ಪಕ್ಷೇತರ ಶಾಸಕರು ಬೆಂಬಲ ನೀಡಿದ್ದಾರೆ.

    ದೆಹಲಿಗೆ ಬಂದಿದ್ದು ಯಾಕೆ?
    ಸಚಿನ್‌ ಪೈಲಟ್‌ 25 ಶಾಸಕರೊಂದಿಗೆ ದೆಹಲಿ ತಲುಪಿದ್ದು, ಈಗಾಗಲೇ ಐಟಿಸಿ ಹೋಟೆಲ್‌‌ ಬುಕ್‌ ಮಾಡಲಾಗಿದೆ ಎಂದು ವರದಿಯಾಗಿದೆ. ಶಾಸಕರ ಜೊತೆ ದೆಹಲಿಗೆ ಬಂದಿರುವ ಪೈಲಟ್ ಸರ್ಕಾರವನ್ನು ಉರುಳಿಸಲು ಕರೆದುಕೊಂಡು ಬಂದಿದ್ದಾರಾ ಅಥವಾ ಹೈಕಮಾಂಡ್‌ಗೆ ತನ್ನ ಶಕ್ತಿ ಪ್ರದರ್ಶನ ಮಾಡಿ ಮುಖ್ಯಮಂತ್ರಿ ಪಟ್ಟ ನೀಡಲು ಒತ್ತಡ ಹೇರಲು ಕರೆ ತಂದಿದ್ದಾರಾ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ.

    ಮಧ್ಯಪ್ರದೇಶದಲ್ಲೂ ಕಾಂಗ್ರೆಸ್‌ ಅಧಿಕಾರದಲ್ಲಿತ್ತು. ಆದರೆ ಕಮಲ್‌ನಾಥ್‌ ಮತ್ತು ಜ್ಯೋತಿರಾದಿತ್ಯ ಸಿಂದಿಯಾ ನಡುವಿನ ಭಿನ್ನಾಭಿಪ್ರಾಯದಿಂದಾಗಿ ಸರ್ಕಾರ ಪತನಗೊಂಡಿತ್ತು. ಜುಲೈನಲ್ಲಿ ನಡೆದ ಸಂಪುಟ ವಿಸ್ತರಣೆಯಲ್ಲಿ ಸಿಂದಿಯಾ ಬಣದ 12 ಮಂದಿ ಶಾಸಕರಿಗೆ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಮಂತ್ರಿಸ್ಥಾನ ನೀಡಿದ್ದರು.

  • ರಾಜಸ್ಥಾನದ ‘ಕೈ’ ಶಾಸಕರಿಗೆ ಬಿಜೆಪಿಯ 25 ಕೋಟಿಯ ಬಲೆ!

    ರಾಜಸ್ಥಾನದ ‘ಕೈ’ ಶಾಸಕರಿಗೆ ಬಿಜೆಪಿಯ 25 ಕೋಟಿಯ ಬಲೆ!

    ಜೈಪುರ: ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸಲು ಹುನ್ನಾರ ನಡೆಸಲಾಗುತ್ತಿರುವ ಸಂಬಂಧ ಎಸ್‍ಓಜಿ (ಸ್ಪೆಷಲ್ ಆಪರೇಷನ್ ಗ್ರೂಪ್) ಪ್ರಕರಣ ದಾಖಲಿಸಿಕೊಂಡಿದೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಯಾರಿಗೆ ಸಿಎಂ ಪಟ್ಟಕ್ಕೇರಲು ಇಷ್ಟವಿರಲ್ಲ ಹೇಳಿ. ಆದ್ರೆ ಇದು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಸಚಿನ್ ಪೈಲಟ್‍ಗೆ ತಿರುಗೇಟು ನೀಡಿದ್ದಾರೆ.

    ಮುಂದಿನ ಚುನಾವಣೆಯಲ್ಲಿಯೂ ಕಾಂಗ್ರೆಸ್ ಗೆಲ್ಲಲಿದೆ. ರಾಜಸ್ಥಾನದ ಜನತೆ ಶಾಸಕರ ಖರೀದಿಗೆ ಮುಂದಾಗಿರುವ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ. ನಾವು ಕೊರೊನಾ ವಿರುದ್ಧದ ಹೋರಾಟದಲ್ಲಿ ತೊಡಿಗಿದ್ದರೆ ಬಿಜೆಪಿ ಸಾವಿರಾರು ಕೋಟಿ ಖರ್ಚು ಮಾಡಿ ಶಾಸಕರನ್ನು ಖರೀದಿಸುವ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಮುಂದಾಗಿದೆ ಎಂದು ಸಿಎಂ ಅಶೋಕ್ ಗೆಹ್ಲೋಟ್ ಆರೋಪಿಸಿದ್ದಾರೆ.

    ಇಬ್ಬರು ಶಾಸಕರಿಗೆ ಬಿಜೆಪಿ 25 ಕೋಟಿಯ ಆಫರ್ ನೀಡಿದೆ ಎಂದು ವರದಿಯಾಗಿದೆ. ಕಾಂಗ್ರೆಸ್ ಶಾಸಕರ ಖರೀದಿಯಲ್ಲಿ ಡಿಸಿಎಂ ಸಚಿವ ಪೈಲಟ್ ಹಸ್ತಕ್ಷೇಪವಿದೆ ಎಂಬ ಮಾತುಗಳು ರಾಜಸ್ಥಾನದ ರಾಜಕೀಯ ಅಂಗಳದಲ್ಲಿ ಕೇಳಿ ಬರುತ್ತಿವೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಎಸ್‍ಓಜಿ, ಸಿಎಂ ಅಶೋಕ್ ಗೆಹ್ಲೋಟ್, ಡಿಸಿಎಂ ಸಚಿನ್ ಪೈಲಟ್ ಮತ್ತು ಸರ್ಕಾರದ ಮುಖ್ಯ ಸಚೇತಕ ಮಹೇಶ್ ಜೋಶಿ ಅವರಿಗೆ ಹೇಳಿಕೆ ದಾಖಲಿಸಲು ಕರೆದಿದೆ.

    ಫೋನ್ ಮೂಲಕ ಕುದುರೆ ವ್ಯಾಪಾರ ನಡೆಸಿ ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನಿಸಲಾಗುತ್ತಿದೆ ಎಂಬ ಆರೋಪದಡಿ ಎಸ್‍ಓಜಿ ಪ್ರಕರಣ ದಾಖಲಿಸಿಕೊಂಡಿದೆ. ರಾಜಸ್ಥಾನದ ವಿಧಾನಸಭೆ 200 ಶಾಸಕರ ಪೈಕಿ ಕಾಂಗ್ರೆಸ್ ಬಳಿ 107 ಬಲವಿದೆ. 13 ಪಕ್ಷೇತರ ಪೈಕಿ 12 ಶಾಸಕರು ಕಾಂಗ್ರೆಸ್ ಗೆ ಬೆಂಬಲ ನೀಡಿದ್ದಾರೆ. ಬಿಜೆಪಿ 72 ಶಾಸಕರನ್ನು ಹೊಂದಿದೆ.

  • ‘ಆಪರೇಷನ್ ಕಮಲದ ಫಲ, ವಿಶ್ವನಾಥ್ ಕೈ ಬಿಟ್ಟ ಬಿಜೆಪಿ’- ಕೃಷ್ಣ ಬೈರೇಗೌಡ ವ್ಯಂಗ್ಯ

    ‘ಆಪರೇಷನ್ ಕಮಲದ ಫಲ, ವಿಶ್ವನಾಥ್ ಕೈ ಬಿಟ್ಟ ಬಿಜೆಪಿ’- ಕೃಷ್ಣ ಬೈರೇಗೌಡ ವ್ಯಂಗ್ಯ

    ಕೋಲಾರ: ಕರ್ನಾಟದಲ್ಲಿ ಬಿಜೆಪಿಯವರು ಆಪರೇಷನ್ ಕಮಲ ಮಾಡಿದರ ಫಲವಾಗಿ ವಿಶ್ವನಾಥ್ ಅವರನ್ನು ಎಲ್ಲೂ ಇಲ್ಲದಂತೆ ಮಾಡಿ ಕೈಬಿಟ್ಟಿದ್ದಾರೆಂದು ಮಾಜಿ ಸಚಿವ ಕೃಷ್ಣಬೈರೇಗೌಡ ಲೇವಡಿ ಮಾಡಿದ್ದಾರೆ.

    ಕೋಲಾರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರ ಮಾಡುವುದಕ್ಕೆ ವಿಶ್ವನಾಥ್ ಅವರೇ ಕಾರಣ ಎಂದು ಹೇಳಲಾಗುತ್ತಿತ್ತು. ಅಂತಹ ಪಕ್ಷದ ಅಧ್ಯಕ್ಷರಾಗಿದ್ದವರನ್ನು ಕರೆದುಕೊಂಡು ಹೋಗಿ, ನಂಬಿಸಿ ಭರವಸೆ ನೀಡಿದ್ದರು. ಆದರೆ ಇವತ್ತು ಅವರನ್ನು ನಡು ನೀರಿನಲ್ಲಿ ಕೈ ಬಿಟ್ಟಿದ್ದಾರೆ ಎಂದರು.

    ಬಿಜೆಪಿ ಅವರ ಅಧಿಕಾರ ದಾಹಕ್ಕೆ ಇದೇ ತಾಜಾ ಉದಾಹರಣೆ. ಸಮಯ ಬಂದಾಗ ಯಾರನ್ನ ಬೇಕಾದರು ಬಳಸಿಕೊಂಡು, ಅವರ ಕೆಲಸವನ್ನು ಸಾಧನೆ ಮಾಡಿಕೊಂಡು ಏನು ಮಾಡುತ್ತಾರೆ ಎನ್ನುವುದಕ್ಕೆ ಇದೇ ನಿದರ್ಶನ. ಬೇರೆಯವರು ಇದನ್ನು ನೋಡಿ ಕಲಿಯಬೇಕು, ಅಧಿಕಾರದ ಅಸೆಗೆ ಒಳಗಾಗುವಂತಹವರಿಗೆ ಇದೆ ನೀತಿ ಪಾಠ ಎಂದು ತಿಳಿಸಿದರು.

  • ಜಾರಕಿಹೊಳಿಗೆ ಗಾಳಿಯಲ್ಲಿ ಮಾತಾಡುವ ಚಾಳಿ ಇದೆ: ಈಶ್ವರ್ ಖಂಡ್ರೆ

    ಜಾರಕಿಹೊಳಿಗೆ ಗಾಳಿಯಲ್ಲಿ ಮಾತಾಡುವ ಚಾಳಿ ಇದೆ: ಈಶ್ವರ್ ಖಂಡ್ರೆ

    ಕೊಪ್ಪಳ: ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಗಾಳಿಯಲ್ಲಿ ಮಾತಾಡುವ ಚಾಳಿ ಇದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಿರುಗೇಟು ನೀಡಿದ್ದಾರೆ.

    ಇಂದು ಕೊಪ್ಪಳದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಈಶ್ವರ್ ಖಂಡ್ರೆ, ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬರುತ್ತಾರೆ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆಗೆ ತಿರುಗೇಟು ನೀಡಿದ್ರು. ಬಿಜೆಪಿಗೆ ಹೋಗಿ ರಮೇಶ್ ಜಾರಕಿಹೊಳಿ ಸುಖವಾಗಿದ್ದಾರೆ ಅಂತ ಆತ್ಮಸಾಕ್ಷಿಯಾಗಿ ಹೇಳಲಿ ಎಂದು ಸವಾಲ್ ಹಾಕಿದರು.

    ಬಿಜೆಪಿಯ ಹಿರಿಯ ನಾಯಕ, ಶಾಸಕ ಉಮೇಶ್ ಕತ್ತಿ ಜನಪರ ಕಾಳಜಿ ಹೊಂದಿದ್ದಾರೆ. ಬಿಜೆಪಿ ಅಕ್ರಮದ ಬಗ್ಗೆ ಸಾರ್ವಜನಿಕ ಲೆಕ್ಕಪತ್ರ ಸಮಿತಿಯಲ್ಲಿ ಪ್ರಶ್ನೆ ಮಾಡಿದಂತವರು. ಯಾರಿಗೆ ಜನಪರ ಕಾಳಜಿ ಇರುತ್ತೋ ಅವರು ಪ್ರಶ್ನೆ ಮಾಡುತ್ತಾರೆ ಎಂದು ಹೇಳುವ ಮೂಲಕ ಉಮೇಶ್ ಕತ್ತಿ ಪರ ಬ್ಯಾಟ್ ಬೀಸಿದರು. ನಾವೆಲ್ಲ ಕೊರೊನಾ ಸಂಕಷ್ಟದಲ್ಲಿದ್ದೇವೆ. ಈಗಾಗಲೇ ಕಾಂಗ್ರೆಸ್ ನೊಂದವರಿಗೆ ಸಹಾಯ ಹಸ್ತ ಚಾಚುತ್ತಿದೆ. ಆದ್ರೆ ಬಿಜೆಪಿಯ ಕೆಲ ಶಾಸಕರು ತಮ್ಮ ಕ್ಷೇತ್ರಗಳಿಗೆ ಹೋಗಿಲ್ಲ. ಸರ್ಕಾರ ವಿತರಣೆ ಮಾಡುವ ಅಹಾರ ಕಿಟ್ಟನಲ್ಲಿ ಬಿಜೆಪಿ ಸಿಂಬಲ್ ಮತ್ತು ಫೋಟೋ ಹಾಕಿಕೊಂಡು ಪೋಸ್ ಕೊಟ್ಟಿದ್ದಾರೆ ಎಂದು ವ್ಯಂಗ್ಯವಾಡಿದರು.

    ಕಾಂಗ್ರೆಸ್ ನೀಡಿದ ಚೆಕ್ ಬೌನ್ಸ್ ಆಗಿದೆ ಎಂದು ಬಿಜೆಪಿಯವರು ಹೇಳುತ್ತಿರುವುದು ಸುಳ್ಳು, ಬಿಜೆಪಿಯವರಿಗೆ ಸುಳ್ಳನ್ನೆ ಸತ್ಯ ಎಂದು ಬಿಂಬಿಸುವುದು ರೂಡಿಯಾದಂತಾಗಿದೆ. ಹಿಂದೆ ದಿನೇಶ್ ಗುಂಡುರಾವ್ ರವರೆ ಅಧ್ಯರಾಗಿದ್ದರು, ಇನ್ನೂ ಡಿಕೆ ಶಿವಕುಮಾರ್ ಅಧಿಕಾರ ಹಸ್ತಾಂತರ ಆಗದಿರುವ ಕಾರಣ ಬ್ಯಾಂಕ್ ಖಾತೆ ಬದಲಾವಣೆಯಾಗಿಲ್ಲ. ಅದರಿಂದ ಹಣ ಖಾತೆಗೆ ಜಮಾ ಆಗಿಲ್ಲ, ಇದೇ ಜೂನ್ 7 ರಂದು ಅಧಿಕಾರ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ಹೇಳಿದರು.

  • ಲಾಕ್‍ಡೌನ್ ನಡುವೆ ಆಪರೇಷನ್ ಕಮಲ – ಜೆಡಿಎಸ್‍ಗೆ ಶಾಕ್ ನೀಡಿದ ಮಾಜಿ ಬಿಜೆಪಿ ಶಾಸಕ

    ಲಾಕ್‍ಡೌನ್ ನಡುವೆ ಆಪರೇಷನ್ ಕಮಲ – ಜೆಡಿಎಸ್‍ಗೆ ಶಾಕ್ ನೀಡಿದ ಮಾಜಿ ಬಿಜೆಪಿ ಶಾಸಕ

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್‍ನ ಭೀತಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಈ ನಡುವೆ ಬಿಜೆಪಿಯ ಮಾಜಿ ಶಾಸಕ ಜೆಡಿಎಸ್ ಪಕ್ಷಕ್ಕೆ ಶಾಕ್ ನೀಡಿದ್ದಾರೆ.

    ಬೆಂಗಳೂರು ನಗರದ ಹೊರವಲಯ ಟಿ.ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಹಾಲಿ ಶಾಸಕ ಆರ್. ಮಂಜುನಾಥ್‍ಗೆ ಮಾಜಿ ಶಾಸಕ ಎಸ್. ಮುನಿರಾಜು ಶಾಕ್ ನೀಡಿದ್ದಾರೆ. ಟಿ.ದಾಸರಹಳ್ಳಿ ವಿಧಾನ ಸಭಾ ಕ್ಷೇತ್ರದ ರಾಜಗೋಪಾಲ ನಗರದ ಜೆಡಿಎಸ್ ಪಕ್ಷದ ಮಾಜಿ ಉಪಮೇಯರ್ ಪದ್ಮಾವತಿ ಪತಿ ನರಸಿಂಹಮೂರ್ತಿ ಸೇರಿದಂತೆ ರಾಜ್ಯ ಜೆಡಿಎಸ್ ಯುವ ಘಟಕದ ಹಿರಿಯ ಉಪಾಧ್ಯಕ್ಷ ಗೋಪಾಲಕೃಷ್ಣ ಹಾಗೂ ನೂರಾರು ಸಂಗಡಿಗರು ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

    ದಾಸರಹಳ್ಳಿಯ ಮಾಜಿ ಶಾಸಕ ಎಸ್. ಮುನಿರಾಜು ನೇತೃತ್ವದಲ್ಲಿ ಬಿಜೆಪಿ ಪಕ್ಷಕ್ಕೆ ಇಂದು ಅಧಿಕೃತವಾಗಿ ಸೇರ್ಪಡೆಯಾದರು. ಈ ವೇಳೆ ಕ್ಷೇತ್ರ ಬಿಜೆಪಿ ಮಂಡಲ ಅಧ್ಯಕ್ಷ ಎನ್ ಲೋಕೇಶ್, ಮುಖಂಡರಾದ ಸಿ.ಎಂ ನಾಗರಾಜು ಮತ್ತಿತರರು ಹಾಜರಿದ್ದರು.

  • ಹೋಟೆಲ್‍ನಲ್ಲಿರುವ ಶಾಸಕರ ಭೇಟಿಯಾಗಲು ಕಾಂಗ್ರೆಸ್ ನಾಯಕರ ಹೈಡ್ರಾಮ

    ಹೋಟೆಲ್‍ನಲ್ಲಿರುವ ಶಾಸಕರ ಭೇಟಿಯಾಗಲು ಕಾಂಗ್ರೆಸ್ ನಾಯಕರ ಹೈಡ್ರಾಮ

    – ಡಿಜಿ ಭೇಟಿಯಾದರೂ ಪ್ರಯೋಜನವಾಗಲಿಲ್ಲ
    – ವೈಯಕ್ತಿಕ ನಿರ್ಧಾರ ಎಂದು ಅರ್ಜಿ ವಜಾ ಮಾಡಿದ ಹೈ ಕೋರ್ಟ್

    ಬೆಂಗಳೂರು: ಮಧ್ಯ ಪ್ರದೇಶದ ಕಾಂಗ್ರೆಸ್ ಶಾಸಕರನ್ನು ಭೇಟಿ ಮಾಡಲು ಅವಕಾಶ ನೀಡಬೇಕು ಎಂದು ಮಧ್ಯ ಪ್ರದೇಶದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್ ಇಂದು ಬೆಂಗಳೂರಿನ ಯಲಹಂಕದ ಖಾಸಗಿ ರೆಸಾರ್ಟ್ ಬಳಿ ಪ್ರತಿಭಟನೆ ನಡೆಸಿದರು.

    ಯಲಹಂಕದ ಖಾಸಗಿ ಹೋಟೆಲ್ ಬಳಿ ದಿಗ್ವಿಜಯ್ ಸಿಂಗ್ ಧಾವಿಸುತ್ತಿದ್ದಂತೆ ಶಾಸಕರ ಭೇಟಿಗೆ ಅವಕಾಶ ಕೇಳಿದರು. ಆದರೆ ಪೊಲೀಸರು ಶಾಸಕರ ಭೇಟಿಗೆ ಅವಕಾಶ ನೀಡಲಿಲ್ಲ. ಇದರಿಂದ ಬೇಸತ್ತ ದಿಗ್ವಿಜಯ್ ಸಿಂಗ್ ರೆಸಾರ್ಟ್ ಮುಂಭಾಗದಲ್ಲಿ ಪ್ರತಿಭಟನೆಗೆ ಮುಂದಾದರು. ಈ ವೇಳೆ ಅಮೃತಹಳ್ಳಿ ಪೊಲೀಸರು ದಿಗ್ವಿಜಯ್ ಸಿಂಗ್ ಮತ್ತು ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಎಲ್ಲ ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದರು.

    ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ನಿಯೋಜಿತ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪೊಲೀಸರ ಕ್ರಮವನ್ನು ಖಂಡಿಸಿದರು. ನಂತರ ದಿಗ್ವಿಜಯ್ ಸಿಂಗ್ ಅವರನ್ನು ಬೆಂಗಳೂರು ನಗರ ಪೊಲೀಸರ ಕಚೇರಿಗೆ ಕರೆದುಕೊಂಡು ಹೋಗಿ ರೆಸಾರ್ಟ್‍ನಲ್ಲಿರುವ ಶಾಸಕರ ಭೇಟಿಗೆ ಅವಕಾಶ ನೀಡುವಂತೆ ಮನವಿ ಮಾಡಿದರು. ಅಲ್ಲೂ ಕೂಡ ಭೇಟಿಗೆ ಅವಕಾಶ ನೀಡಲು ನಿರಾಕರಿಸಲಾಯಿತು.

    ನಂತರ ಡಿಜಿ ಪ್ರವೀಣ್ ಸೂದ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದರು. ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಕೊನೆಗೆ ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದರು. ಹೈಕೋರ್ಟ್ ಸಹ ಭೇಟಿಗೆ ಅವಕಾಶ ನೀಡಲು ಸಾಧ್ಯವಿಲ್ಲ. ಅದು ಅವರ ಖಾಸಗಿ ನಿರ್ಧಾರ ಎಂದು ಅರ್ಜಿ ವಜಾಗೊಳಿಸಿತು. ಬಿಜೆಪಿ ಸರ್ಕಾರ ಮತ್ತು ನಗರ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ನಾಯಕರು, ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಮರಳಿದರು.

  • ಮಧ್ಯ ಪ್ರದೇಶ ಹೈಡ್ರಾಮಾ ಮುಂದುವರಿಕೆ – ಸಿಎಂ, ರಾಜ್ಯಪಾಲ, ಸ್ಪೀಕರ್‌ಗೆ ಸುಪ್ರೀಂ ನೋಟಿಸ್

    ಮಧ್ಯ ಪ್ರದೇಶ ಹೈಡ್ರಾಮಾ ಮುಂದುವರಿಕೆ – ಸಿಎಂ, ರಾಜ್ಯಪಾಲ, ಸ್ಪೀಕರ್‌ಗೆ ಸುಪ್ರೀಂ ನೋಟಿಸ್

    – ಬುಧವಾರ ಬೆಳಗ್ಗೆ ವಿಚಾರಣೆ ಮುಂದೂಡಿಕೆ

    ನವದೆಹಲಿ: ಮಧ್ಯಪ್ರದೇಶದಲ್ಲಿ ಹೈಡ್ರಾಮಾ ಮುಂದುವರಿದಿದ್ದು, ಸುಪ್ರೀಂ ಕೋರ್ಟ್ ಸಹ ವಿಶ್ವಾಸ ಮತಯಾಚನೆ ಕುರಿತ ಅರ್ಜಿಯ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ. ಅಷ್ಟೇ ಅಲ್ಲದೆ ರಾಜ್ಯದ ಪ್ರಮುಖರಿಗೆ ನೋಟಿಸ್ ಜಾರಿ ಮಾಡಿದೆ.

    ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಸಲ್ಲಿಸಿರುವ ಅರ್ಜಿಯನ್ನು ಬುಧವಾರ ಬೆಳಗ್ಗೆ 10.30ಕ್ಕೆ ವಿಚಾರಣೆ ನಡೆಸುವುದಾಗಿ ಕೋರ್ಟ್ ತಿಳಿಸಿದೆ.

    ವಿಚಾರಣೆ ವೇಳೆ ವಿಶ್ವಾಸ ಮತಯಾಚನೆ ಅಗತ್ಯ ಎಂಬುದನ್ನು ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅಭಿಪ್ರಾಯಪಟ್ಟರು. ಇದರ ಜೊತೆಗೆ ಮಧ್ಯಪ್ರದೇಶದ ವಿಧಾನಸಭೆ ಸ್ಪೀಕರ್, ಪ್ರಧಾನ ಕಾರ್ಯದರ್ಶಿ, ಮುಖ್ಯಮಂತ್ರಿ ಕಮಲ್‍ನಾಥ್ ಹಾಗೂ ರಾಜ್ಯಪಾಲ ಲಾಲ್‍ಜಿ ಟಂಡನ್ ಅವರಿಗೆ ನೋಟಿಸ್ ಜಾರಿ ಮಾಡಿದರು.

    ರಾಜ್ಯಪಾಲರು ಸೋಮವಾರವೇ ವಿಶ್ವಾಸ ಮತಯಾಚನೆಯಾಗಬೇಕೆಂದು ಸೂಚಿಸಿದ್ದರು. ಆದರೆ ಕೊರೊನಾ ವೈರಸ್ ಕಾರಣದಿಂದಾಗಿ ಸ್ಪೀಕರ್ ಅಧಿವೇಶನವನ್ನು ಮಾರ್ಚ್ 26ರ ವರೆಗೆ ಮುಂದೂಡಿದರು. ಇದರ ಮಧ್ಯೆಯೇ ಬಿಜೆಪಿ ಸುಪ್ರಿಂ ಕೋರ್ಟ್ ಮೊರೆ ಹೋಗಿತ್ತು.

    ಸ್ಪೀಕರ್ ಈ ಕ್ರಮ ಕೈಗೊಳ್ಳುತ್ತಿದ್ದಂತೆ ರಾಜ್ಯಪಾಲರು ಮತ್ತೊಂದು ಪತ್ರ ಬರೆದು, ಮಂಗಳವಾರ ವಿಶ್ವಾಸ ಮತಯಾಚನೆಯಾಗಲೇಬೇಕು. ಇಲ್ಲವಾದಲ್ಲಿ ಸರ್ಕಾರ ಅಲ್ಪ ಮತಕ್ಕೆ ಕುಸಿದಿದೆ ಎಂದು ಪರಿಗಣಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಕಮಲ್‍ನಾಥ್, ಎಲ್ಲ ಸಂಗತಿಗಳನ್ನು ಪರಿಗಣಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ನಿಮ್ಮ ನಿರ್ದೇಶನವನ್ನು ವಿಧಾನಸಭೆ ಸ್ಪೀಕರ್‍ಗೆ ಕಳುಹಿಸಿದ್ದೇನೆ ಎಂದು ಪತ್ರದ ಮೂಲಕ ತಿಳಿಸಿದ್ದಾರೆ ಎಂದು ವರದಿಯಾಗಿದೆ.

    ಆರು ಸಚಿವರ ರಾಜೀನಾಮೆ ಅಂಗೀಕಾರ
    ಕಾಂಗ್ರೆಸ್ಸಿನ 22 ಶಾಸಕರ ರಾಜೀನಾಮೆ ಪೈಕಿ ಆರು ಬಂಡಾಯ ಮಂತ್ರಿಗಳ ರಾಜೀನಾಮೆಯನ್ನು ಮಧ್ಯಪ್ರದೇಶದ ವಿಧಾನಸಭಾ ಸ್ಪೀಕರ್ ನರ್ಮದಾ ಪ್ರಸಾದ್ ಪ್ರಜಾಪತಿ ಅವರು ಶನಿವಾರ ಅಂಗೀಕರಿಸಿದ್ದಾರೆ. ಗೋವಿಂದ್ ಸಿಂಗ್ ರಜಪೂತ್, ಮಹೇಂದ್ರ ಸಿಂಗ್ ಸಿಸೋಡಿಯಾ, ಪ್ರಭುರಾಮ್ ಚೌಧರಿ, ಪ್ರದುಮನ್ ತೋಮರ್, ತುಳಸಿರಾಮ್ ಸಿಲಾವತ್ ಹಾಗೂ ಇಮಾರ್ತಿ ದೇವಿ ಅವರನ್ನು ರಾಜ್ಯಪಾಲರು ಸಚಿವ ಸಂಪುಟದದಿಂದ ವಜಾ ಮಾಡಿದ್ದಾರೆ.

    ಇತ್ತೀಚೆಗಷ್ಟೇ ಜ್ಯೋತಿರಾದಿತ್ಯ ಸಿಂಧಿಯಾ ಕಾಂಗ್ರೆಸ್ ಪಕ್ಷಕ್ಕೆ ಗುಡ್‍ಬೈ ಹೇಳಿದ್ದರು. ಅವರೊಂದಿಗೆ ಸಿಂಧಿಯಾ ಆಪ್ತರಾಗಿದ್ದ 22 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ದರು. ನಂತರ ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಸೇರಿದ್ದರು. ಒಟ್ಟು 22 ಶಾಸಕರ ರಾಜೀನಾಮೆಯಿಂದ ಕಮಲನಾಥ್ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. 230 ಬಲದ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಇಬ್ಬರು ಶಾಸಕರ ನಿಧನದಿಂದ ಸದ್ಯ 228 ಶಾಸಕರಿದ್ದಾರೆ. ಸದ್ಯ 22 ಮಂದಿ ಕಾಂಗ್ರೆಸ್ ಶಾಸಕರ ರಾಜೀನಾಮೆಯಿಂದ ಸಿಎಂ ಕಮಲನಾಥ್ ಸರ್ಕಾರ ಅಲ್ಪ ಮತಕ್ಕೆ ಕುಸಿದಿದೆ. ಈಗ ಸದನದಲ್ಲಿ 206 ಶಾಸಕರಿದ್ದು ಬಹುಮತ ಸಾಧಿಸಲು 104 ಶಾಸಕರ ಬೆಂಬಲ ಬೇಕಿದೆ. ಬಿಜೆಪಿ ಬಳಿ 107 ಶಾಸಕರಿದ್ದರೆ, ಕಾಂಗ್ರೆಸ್ ಬಳಿ 92 ಶಾಸಕರಿದ್ದಾರೆ.

    ಒಟ್ಟು 230 ವಿಧಾನಸಭಾ ಕ್ಷೇತ್ರಗಳಿರುವ ಮಧ್ಯಪ್ರದೇಶದಲ್ಲಿ 2018ರ ಚುನಾವಣೆಯಲ್ಲಿ ಕಾಂಗ್ರೆಸ್ 114, ಬಿಜೆಪಿ 109, ಪಕ್ಷೇತರ 1, ಬಿಎಸ್‍ಪಿ 2, ಎಸ್‍ಪಿ 2 ಕ್ಷೇತ್ರದಲ್ಲಿ ಜಯಗಳಿಸಿತ್ತು. 2019ರ ಲೋಕಸಭಾ ಚುನಾವಣೆಯ ಒಟ್ಟು 29 ಕ್ಷೇತ್ರಗಳ ಪೈಕಿ ಬಿಜೆಪಿ 28 ರಲ್ಲಿ ಗೆದ್ದಿದ್ದರೆ 1 ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಗಳಿಸಿತ್ತು.

  • ಮಧ್ಯಪ್ರದೇಶದ ಬೆನ್ನಲ್ಲೇ ಗುಜರಾತ್‍ನಲ್ಲಿ ಇಕ್ಕಟ್ಟಿಗೆ ಸಿಲುಕಿದ ಕಾಂಗ್ರೆಸ್

    ಮಧ್ಯಪ್ರದೇಶದ ಬೆನ್ನಲ್ಲೇ ಗುಜರಾತ್‍ನಲ್ಲಿ ಇಕ್ಕಟ್ಟಿಗೆ ಸಿಲುಕಿದ ಕಾಂಗ್ರೆಸ್

    – ರಾಜ್ಯಸಭೆ ಚುನಾವಣೆಗೂ ಮುನ್ನ 5 ಶಾಸಕರು ರಾಜೀನಾಮೆ
    – ಶಾಸಕರನ್ನು ಉಳಿಸಿಕೊಳ್ಳಲು ರೆಸಾರ್ಟ್ ಮೊರೆ

    ಗಾಂಧಿನಗರ: ಮಧ್ಯಪ್ರದೇಶದ ಸಿಎಂ ಕಮಲ್‍ನಾಥ್ ಸರ್ಕಾರವನ್ನು ಅತಂತ್ರಕ್ಕೆ ಸಿಲುಕಿದ ಬೆನ್ನಲ್ಲೇ ಗುಜರಾತ್‍ನಲ್ಲಿ ಕಾಂಗ್ರೆಸ್ ಶಾಸಕರ ಹೈಜಾಕ್‍ಗೆ ‘ಕಮಲ ಪಡೆ’ ಸರ್ವಪ್ರಯತ್ನ ನಡೆಸಿದೆ.

    ರಾಜ್ಯಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಗುಜರಾತ್‍ನ 5 ಜನ ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ದಾರೆ. ಶಾಸಕರ ನಡೆಯಿಂದ ಕಾಂಗ್ರೆಸ್ ಹೈಕಮಾಂಡ್ ಕಂಗೆಟ್ಟು ಹೋಗಿದ್ದು, ಉಳಿದ ಶಾಸಕರನ್ನು ಪಕ್ಷದಲ್ಲೇ ಇರಿಸಿಕೊಳ್ಳಲು ರೆಸಾರ್ಟ್ ಮೊರೆ ಹೋಗಿದೆ. ಇದನ್ನೂ ಓದಿ:  ನಾಳೆ ಬೆಳಗ್ಗೆಯೇ ಬಹುಮತ ಸಾಬೀತುಪಡಿಸಿ- ಕೈ ಸರ್ಕಾರಕ್ಕೆ ಎಂಪಿ ರಾಜ್ಯಪಾಲ ಆದೇಶ

    ಗುಜರಾತ್‍ನ 4 ರಾಜ್ಯಸಭಾ ಸ್ಥಾನಗಳಿಗೆ ಮಾರ್ಚ್ 26ರಂದು ಚುನಾವಣೆ ನಡೆಯಲಿದೆ. ಈ ಮಧ್ಯೆ ಕಾಂಗ್ರೆಸ್ ಶಾಸಕರಾದ ಪ್ರವೀಣ್ ಮಾರು, ಮಂಗಲ್ ಗವಿತ್, ಸೋಮಭಾಯ್ ಪಟೇಲ್, ಜೆ.ವಿ.ಕಾಕಾಡಿಯಾ ಹಾಗೂ ಪ್ರದ್ಯುಮನ್ ಜಡೇಜಾ ಭಾನುವಾರ ರಾಜೀನಾಮೆ ನೀಡಿದ್ದಾರೆ.

    ಇದಕ್ಕೂ ಮೊದಲು ಆಪರೇಷನ್ ಕಮಲದ ಭಯದಿಂದ ಕಾಂಗ್ರೆಸ್ ತನ್ನ 14 ಶಾಸಕರನ್ನು ಜೈಪುರಕ್ಕೆ ಕಳುಹಿಸಿತ್ತು. ಜೊತೆಗೆ 36 ಶಾಸಕರನ್ನು ರಾಜಸ್ಥಾನಕ್ಕೆ ಕಳುಹಿಸಲಾಗಿದೆ. ಈ ಮೂಲಕ ಎಲ್ಲ ಶಾಸಕರನ್ನು ರೆಸಾರ್ಟಿಗೆ ಕರೆದೊಯ್ಯಲಾಗಿದೆ. ಮೊಬೈಲ್ ಬಳಸದಂತೆ ಹಾಗೂ ತಮ್ಮ ಬಳಿ ಇಟ್ಟುಕೊಳ್ಳದಂತೆ ಶಾಸಕರಿಗೆ ಕಾಂಗ್ರೆಸ್ ನಾಯಕರು ಸೂಚನೆ ನೀಡಿದ್ದಾರೆ. ಒಂದು ರೀತಿ ಬಂಧನಕ್ಕೆ ಒಳಗಾಗಿರುವ ಶಾಸಕರು ಕುಟುಂಬ ಅಥವಾ ಪರಿಚಯಸ್ಥರನ್ನು ಭೇಟಿಯಾಗಲು ಸಹ ಸಾಧ್ಯವಾಗುತ್ತಿಲ್ಲ. ರಾಜಸ್ಥಾನದ ಅಶೋಕ್ ಗೆಹ್ಲೋಟ್ ಸರ್ಕಾರವು ಕಾಂಗ್ರೆಸ್ ಹೈಕಮಾಂಡ್ ಆದೇಶದಂತೆ ಗುಜರಾತ್‍ನ ‘ಕೈ’ ಶಾಸಕರಿಗೆ ರಕ್ಷಣೆ ಒದಗಿಸಿದೆ ಎಂದು ವರದಿಯಾಗಿದೆ.

    14 ಶಾಸಕರನ್ನು ಜೈಪುರಕ್ಕೆ ಕಳುಹಿಸಲಾಗಿದೆ. 36 ಶಾಸಕರನ್ನು ರಾಜಸ್ಥಾನಕ್ಕೆ ಕಳುಹಿಸಲಾಗಿದ್ದು, ಅವರನ್ನು ಉದಯಪುರಕ್ಕೆ ಸ್ಥಳಾಂತರಿಸುವ ಸಾಧ್ಯತೆಯಿದೆ. ಉಳಿದ 5 ಶಾಸಕರನ್ನು ಗುಜರಾತ್‍ನ ರೆಸಾರ್ಟಿಗೆ ಕರೆದೊಯ್ಯಲು ಕಾಂಗ್ರೆಸ್ ನಿರ್ಧರಿಸಿದೆಯಂತೆ.

    ಅಂಕಿ ಅಂಶ:
    * ಗುಜರಾತ್ ವಿಧಾನಸಭೆಯಲ್ಲಿ ಒಟ್ಟು ಸ್ಥಾನಗಳು- 180
    * ಕಾಂಗ್ರೆಸ್ 5 ಶಾಸಕರ ರಾಜೀನಾಮೆಯಿಂದ 175ಕ್ಕೆ ಕುಸಿತ
    * ಬಿಜೆಪಿಯ ಬಲ 106 (ಬಿಜೆಪಿ ಶಾಸಕರು 103, ಎನ್‍ಸಿಪಿ 1, ಭಾರತೀಯ ಬುಡಕಟ್ಟು ಪಕ್ಷ2 )
    * ಕಾಂಗ್ರೆಸ್‍ನ ಬಲ 69 (ಕಾಂಗ್ರೆಸ್ 68, ಪಕ್ಷೇತರ ಶಾಸಕ ಜಿಗ್ನೇಶ್ ಮೇವಾನಿ 1)
    * ಗುಜರಾತ್‍ನಲ್ಲಿ ರಾಜ್ಯಸಭೆಯ ಎಷ್ಟು ಸ್ಥಾನಗಳಲ್ಲಿ ಚುನಾವಣೆ – 4

    ಅಭಯ್ ಭಾರದ್ವಾಜ್, ರಾಮಿವಾ ಬೆನ್ ಬಾರಾ ಮತ್ತು ನರ್ಹಾರಿ ಅಮೀನ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಶಕ್ತಿ ಸಿಂಗ್ ಗೋಹಿಲ್ ಮತ್ತು ಭಾರತ್ ಸಿಂಗ್ ಸೋಲಂಕಿ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.

    ಸದ್ಯದ ಪರಿಸ್ಥಿಯ ಪ್ರಕಾರ ಬಿಜೆಪಿ 2 ಮತ್ತು ಕಾಂಗ್ರೆಸ್ 1 ಸುಲಭವಾಗಿ ಸ್ಥಾನವನ್ನು ಗೆಲ್ಲುತ್ತವೆ. ಆದರೆ ಕಾಂಗ್ರೆಸ್‍ನ ಇಬ್ಬರು ಶಾಸಕರು ಅಡ್ಡ ಮತ ಚಲಾಯಿಸಿದರೆ ಬಿಜೆಪಿ 3 ಸ್ಥಾನಗಳನ್ನು ಗೆಲ್ಲುತ್ತದೆ. ಬಿಜೆಪಿಯಲ್ಲಿ 106 ಶಾಸಕರು ಇದ್ದಾರೆ. ಈ ಮೂಲಕ 3 ರಾಜ್ಯಸಭಾ ಸ್ಥಾನಗಳನ್ನು ಗೆಲ್ಲಲು ಅವರಿಗೆ ಇನ್ನೂ 2 ಮತಗಳು ಬೇಕಾಗುತ್ತವೆ. ಹೀಗಾಗಿ ಕಾಂಗ್ರೆಸ್‍ನ ಇಬ್ಬರು ಶಾಸಕರ ಅಡ್ಡ ಮತದಾನ ಬಿಜೆಪಿಗೆ ಅಗತ್ಯವಿದೆ.

    2017ರಲ್ಲಿ ಗುಜರಾತ್‍ನ 3 ರಾಜ್ಯಸಭಾ ಸ್ಥಾನಗಳ ಚುನಾವಣೆಯ ಸಂದರ್ಭದಲ್ಲಿ ಇದೇ ರೀತಿಯ ಪರಿಸ್ಥಿತಿ ಸೃಷ್ಟಿಯಾಗಿತ್ತು. ಅಹ್ಮದ್ ಪಟೇಲ್ ಅವರ ವಿಜಯವನ್ನು ನಿರ್ಧರಿಸಲು ಕಾಂಗ್ರೆಸ್ ತನ್ನ ಶಾಸಕರನ್ನು ಕರ್ನಾಟಕಕ್ಕೆ ಕಳುಹಿಸಿತ್ತು. ಕೆಲವು ಶಾಸಕರು ಸಹ ಅಡ್ಡ ಮತದಾನ ಮಾಡಿದರು. ಆದರೆ ಅಹ್ಮದ್ ಪಟೇಲ್ ಮೇಲುಗೈ ಸಾಧಿಸಿದ್ದರು.

  • ಮಧ್ಯಪ್ರದೇಶದ ವೈರಸ್‍ಗೆ ಮಹಾರಾಷ್ಟ್ರಕ್ಕೆ ಪ್ರವೇಶವಿಲ್ಲ: ಶಿವಸೇನೆ

    ಮಧ್ಯಪ್ರದೇಶದ ವೈರಸ್‍ಗೆ ಮಹಾರಾಷ್ಟ್ರಕ್ಕೆ ಪ್ರವೇಶವಿಲ್ಲ: ಶಿವಸೇನೆ

    -ನಮ್ಮ ಸಮ್ಮಿಶ್ರ ಸರ್ಕಾರ ಸೇಫ್ ಎಂದ ರಾವತ್

    ಮುಂಬೈ: ನಮ್ಮ ಸಮ್ಮಿಶ್ರ ಸರ್ಕಾರ ಸೇಫ್ ಆಗಿದೆ. ಮಹಾರಾಷ್ಟ್ರಕ್ಕೆ ಮಧ್ಯಪ್ರದೇಶದ ಆಪರೇಷನ್ ಲೋಟಸ್ ವೈರಸ್‍ಗೆ ಪ್ರವೇಶವಿಲ್ಲ ಎಂದು ಶಿವಸೇನೆಯ ಸಂಸದ ಸಂಜಯ್ ರಾವತ್ ತಿಳಿಸಿದ್ದಾರೆ.

    ಶಿವಸೇನೆಯ ಮುಖ್ಯಸ್ಥ, ಸಿಎಂ ಉದ್ಧವ್ ಠಾಕ್ರೆ ಸಮ್ಮಿಶ್ರ ಸರ್ಕಾರದಲ್ಲಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರಿಂದಲೂ ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ. ಕೆಲವರು ನಮ್ಮ ಮೈತ್ರಿ ಮಹಾರಾಷ್ಟ್ರ ವಿಕಾಸ್ ಅಘಾಡಿ (ಎಂವಿಎ)ಯನ್ನು ಬೀಳಿಸಲು ಪ್ರಯತ್ನಿಸುತ್ತಿದ್ದಾರೆ. ಅಂತಹವರನ್ನು ನಾವು ತಡೆಯಲ್ಲ ಎಂದು ಪರೋಕ್ಷವಾಗಿ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದರು.

    ಮಧ್ಯಪ್ರದೇಶದ ಸಿಎಂ ಕಮಲನಾಥ್ ವಿಶ್ವಾಸಮತ ಸಾಬೀತು ಪಡಿಸಬಹುದು. ವಿಶ್ವಾಸಮತ ಯಾಚನೆಗೂ ಮುನ್ನ ಸರ್ಕಾರ ಇರುತ್ತಾ ಅಥವಾ ಇಲ್ವಾ ಎಂಬುದರ ಬಗ್ಗೆ ಹೇಳಲಾರೆ. ಮೊದಲು ವಿಶ್ವಾಸಮತ ಸಾಬೀತು ಆಗಲಿ ಎಂದರು.

    ಜ್ಯೋತಿರಾದಿತ್ಯ ಸಿಂಧಿಯಾ ರಾಜೀನಾಮೆ ಬಗ್ಗೆ ಪ್ರತಿಕ್ರಿಯಿಸಿದ ಸಂಜಯ್ ರಾವತ್, ಅದು ಕಾಂಗ್ರೆಸ್ ಆಂತರಿಕ ವಿಷಯ. ಸಿಂಧಿಯಾ ರಾಜೀನಾಮೆಯನ್ನು ಬಿಜೆಪಿ ಸಾಧನೆ ಎಂದು ತೆಗೆದುಕೊಳ್ಳಬಾರದು. ಸಿಂಧಿಯಾ ರಾಜೀನಾಮೆ ಹಿಂಪಡೆದುಕೊಳ್ಳುವಂತೆ ಮನವೊಲಿಸುವಲ್ಲಿ ಕಾಂಗ್ರೆಸ್ ವಿಫಲವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಇನ್ನು ಮಹಾರಾಷ್ಟ್ರಕ್ಕೆ ಮಧ್ಯಪ್ರದೇಶದ ಆಪರೇಷನ್ ಲೋಟಸ್ ವೈರಸ್‍ಗೆ ಪ್ರವೇಶವಿಲ್ಲ. 100 ದಿನಗಳ ಹಿಂದೆ ಬಿಜೆಪಿ ಆಪರೇಷನ್ ಮಾಡಲು ಹೋಗಿ ಕೈ ಸುಟ್ಟಿಕೊಂಡಿರುವುದು ಎಲ್ಲರಿಗೂ ಗೊತ್ತಿದೆ. ಮಾಹಾರಾಷ್ಟ್ರ ವಿಕಾಸ ಅಘಾಡಿ ಸರ್ಕಾರಕ್ಕೆ ಯಾವುದೇ ಬೈಪಾಸ್ ಸರ್ಜರಿಯೂ ನಡೆಯಲ್ಲ. ಮಹಾರಾಷ್ಟ್ರದ ಜನತೆ ನಮ್ಮ ಸರ್ಕಾರವನ್ನು ರಕ್ಷಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.