Tag: ಆಪರೇಷನ್ ಕಮಲ

  • “ಸರ್, ವಿ ಅರ್ ಹೆಲ್ಪ್ ಲೆಸ್ ಬಿಟ್ಟು ಬಿಡಿ”

    “ಸರ್, ವಿ ಅರ್ ಹೆಲ್ಪ್ ಲೆಸ್ ಬಿಟ್ಟು ಬಿಡಿ”

    ಬೆಂಗಳೂರು: ಕಣ್ಣೆದುರೆ ಎಲ್ಲಾ ನಡೆಯುತ್ತಿದ್ದರೂ ಏನು ಗೊತ್ತೆ ಇಲ್ಲ ಎಂಬಂತೆ ಸೈಲೆಂಟಾಗಿರುವ ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈ ಕಮಾಂಡ್ ಕಿವಿ ಹಿಂಡಿದೆ. ಸ್ವತಃ ಹೈಕಮಾಂಡ್ ನಾಯಕರು ಕರೆ ಮಾಡಿ ಹೇಳಿದರು ಮುನ್ನುಗ್ಗಲು ದಂಡ ನಾಯಕರಿಲ್ಲದೆ ಒಬ್ಬರಿಗೊಬ್ಬರು ಮುಖ ಮುಖ ನೋಡಿಕೊಂಡು ಕೈ ನಾಯಕರುಗಳು ಸೈಲೆಂಟಾಗಿ ಅಚ್ಚರಿ ಮೂಡಿಸಿದ್ದಾರೆ.

    ಆಪರೇಷನ್ ಕಮಲಕ್ಕೆ ಒಳಗಾದ ಮಧ್ಯಪ್ರದೇಶ ಕಾಂಗ್ರೆಸ್ ನ 19ಕ್ಕೂ ಹೆಚ್ಚು ಶಾಸಕರು ಕರ್ನಾಟಕಕ್ಕೆ ಬಂದಿದ್ದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ತಂಗಿದ್ದಾರೆ. ಕೇಂದ್ರ ಕಾಂಗ್ರೆಸ್ ನಾಯಕರುಗಳು ಸೇರಿದಂತೆ ಮಧ್ಯಪ್ರದೇಶ ಸಿಎಂ ಕಮಲನಾಥ್ ಸಹ ರಾಜ್ಯ ಕಾಂಗ್ರೆಸ್ ನಾಯಕರುಗಳಿಗೆ ಕರೆ ಮಾಡಿ ಸಹಾಯ ಮಾಡುವಂತೆ ಕೇಳಿಕೊಂಡಿದ್ದಾರೆ. ಸಿದ್ದರಾಮಯ್ಯ, ಪರಮೇಶ್ವರ್, ದಿನೇಶ್ ಗುಂಡೂರಾವ್ ಮತ್ತು ಡಿ.ಕೆ.ಶಿವಕುಮಾರ್ ಗೆ ಕರೆ ಮಾಡಿ ಕೆ.ಸಿ.ವೇಣುಗೋಪಾಲ್ ಹಾಗೂ ಕಮಲನಾಥ್ ಮಾತನಾಡಿದ್ದಾರೆ. ಏನಾದರು ಮಾಡಿ ಬೆಂಗಳೂರಿನಲ್ಲಿ ಉಳಿದುಕೊಂಡಿರುವ ಮಧ್ಯಪ್ರದೇಶ ಕಾಂಗ್ರೆಸ್ ಶಾಸಕರನ್ನ ಸಂಪರ್ಕಿಸುವಂತೆ ಅವರನ್ನ ಮನವೊಲಿಸುವಂತೆ ಕೇಳಿಕೊಂಡಿದ್ದಾರೆ ಎನ್ನಲಾಗಿದೆ.

    ಆದರೆ ಸಿದ್ದರಾಮಯ್ಯ, ಪರಮೇಶ್ವರ್ ಹಾಗೂ ದಿನೇಶ್ ಗುಂಡೂರಾವ್ ಎಲ್ಲರೂ ತಮ್ಮ ಅಸಹಾಯಕತೆಯನ್ನ ವ್ಯಕ್ತಪಡಿಸಿದ್ದಾರೆ. ಇಲ್ಲಿ ಬಿಜೆಪಿ ಸರ್ಕಾರವಿದೆ ಅವರ ಅಧಿಕಾರದ ವ್ಯಾಪ್ತಿಯಲ್ಲಿ ಅವರ ರಕ್ಷಣೆಯಲ್ಲಿರುವ ಶಾಸಕರನ್ನ ಸಂಪರ್ಕ ಮಾಡೋದು ಕಷ್ಟ ಎಂದು ಅಸಹಾಯಕತೆಯನ್ನ ವ್ಯಕ್ತಪಡಿಸಿದ್ದಾರೆ. ಇಂತಹ ಸಂದರ್ಭದಲ್ಲೆ ಮುನ್ನುಗ್ಗುವ ಸ್ಪೆಷಲಿಸ್ಟ್ ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಸ್ವತಃ ಐ ಆಮ್ ಹೆಲ್ಪ್ ಲೆಸ್ ಅಂತ ಹೇಳಿ ಕೈ ಚೆಲ್ಲಿದ್ದಾರಂತೆ. ಅಲ್ಲಿಗೆ ಮಧ್ಯಪ್ರದೇಶ ಸಿಎಂ, ಹೈ ಕಮಾಂಡ್ ನಾಯಕರುಗಳು ಕರೆ ಮಾಡಿದರು. ರಾಜ್ಯ ಕಾಂಗ್ರೆಸ್ ನಾಯಕರು ಅಸಹಾಯಕತೆಯಿಂದ ಕೈ ಚೆಲ್ಲಿ ಕುಳಿತಿದ್ದಾರೆ ಎಂದು ತಿಳಿದು ಬಂದಿದೆ.

  • ಮಧ್ಯಪ್ರದೇಶದ ಕೈ ಶಾಸಕರ ಕಾವಲಿಗೆ ಒನ್ ಟು ಒನ್- ಒನ್ ಕನೆಕ್ಷನ್ ಆಪರೇಷನ್

    ಮಧ್ಯಪ್ರದೇಶದ ಕೈ ಶಾಸಕರ ಕಾವಲಿಗೆ ಒನ್ ಟು ಒನ್- ಒನ್ ಕನೆಕ್ಷನ್ ಆಪರೇಷನ್

    ಬೆಂಗಳೂರು: ಮಧ್ಯಪ್ರದೇಶದ ಕೈ ಶಾಸಕರನ್ನು ಬೆಂಗಳೂರಿಗೆ ಶಿಫ್ಟ್ ಮಾಡುವ ವಿಚಾರದಲ್ಲಿ ಬಿಜೆಪಿ ಹೈಕಮಾಂಡ್ ಎಚ್ಚರಿಕೆಯ ಅಸ್ತ್ರ ಪ್ರಯೋಗಿಸಿದೆ. ರಾಜ್ಯ ಬಿಜೆಪಿಯ ಯಾರೊಬ್ಬರನ್ನ ಗಣನೆಗೆ ತೆಗೆದುಕೊಳ್ಳದೇ ಹೈಕಮಾಂಡ್ ಪ್ಲ್ಯಾನ್ ಅನುಷ್ಠಾನಕ್ಕೆ ತರುವ ಕೆಲಸಕ್ಕೆ ರಹಸ್ಯ ಸೂತ್ರ ಹೆಣೆದಿರುವುದು ಗೊತ್ತಾಗಿದೆ. ಅದೇ ಒನ್ ಟು ಒನ್ – ಒನ್ ಕನೆಕ್ಷನ್ ಆಪರೇಷನ್ ತಂತ್ರ.

    ಅಂದಹಾಗೆ ಮಧ್ಯಪ್ರದೇಶದ ಕೈ ಶಾಸಕರು ಕರ್ನಾಟಕದಲ್ಲಿ ಸೇಫ್ ಎನ್ನುವ ವರದಿಯನ್ನು ಹೈಕಮಾಂಡ್ ತರಿಸಿಕೊಂಡಿತ್ತು. ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಗಮನಕ್ಕೆ ಮಾತ್ರ ತಂದು ಶಾಸಕರನ್ನು ಶಿಫ್ಟ್ ಮಾಡುವ ಕೆಲಸ ಮಾಡಿತ್ತು. ಆ ಶಾಸಕರ ಕಾವಲಿಗೆ ನಾಯಕರನ್ನು ಗುಡ್ಡೆ ಹಾಕದೇ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಅವರನ್ನು ಮಾತ್ರ ನೇಮಿಸಿ ಉಳಿದವರಿಗೆ ಪ್ಲ್ಯಾನ್ ಗೊತ್ತಾಗದಂತೆ ರಹಸ್ಯ ಕಾಪಾಡಿಕೊಂಡು ಬಂದಿದೆ.

    ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಅಥವಾ ಬೇರೆ ಯಾವುದೇ ನಾಯಕರಿಗಾಗಲೀ ಶಾಸಕರನ್ನ ಕಾವಲು ಕಾಯುವ ತಂತ್ರ ಗೊತ್ತಾಗದಂತೆ ರಹಸ್ಯ ಕಾಪಾಡಿಕೊಂಡು ಬರಲಾಗುತ್ತಿದೆ ಎನ್ನಲಾಗಿದೆ. ಪೊಲೀಸ್ ರಕ್ಷಣೆ ಕೊಡುವ ಕೆಲಸವನ್ನಷ್ಟೇ ಗೃಹ ಸಚಿವರು ಮಾಡಬೇಕು ಹೊರತು, ಶಾಸಕರ ಕಾಯುವ ತಂತ್ರದಲ್ಲಿ ಇರಬಾರದು ಎನ್ನುವುದು ಹೈಕಮಾಂಡ್ ಆದೇಶ ಎನ್ನಲಾಗಿದೆ.

    ಮಧ್ಯಪ್ರದೇಶದ ಶಾಸಕರ ಬಳಿ ಕರ್ನಾಟಕದ ಯಾವುದೇ ಬಿಜೆಪಿ ನಾಯಕರಾಗಲಿ, ಯಡಿಯೂರಪ್ಪ ಕ್ಯಾಬಿನೆಟ್ ಸಚಿವರು ಭೇಟಿ ಆಗಬಾರದು ಅಂತಾ ಹೈಕಮಾಂಡ್ ಫರ್ಮಾನು ಹೊರಡಿಸಿದೆ ಎನ್ನಲಾಗಿದೆ. ಯಡಿಯೂರಪ್ಪ ಸಂಪುಟದ ಇಬ್ಬರು ಪಕ್ಷನಿಷ್ಠ ಸಚಿವರನ್ನು ಮಧ್ಯಪ್ರದೇಶದ ಶಾಸಕರ ಕಾವಲಿಗೆ ನೇಮಿಸಿ ಎಂಬ ರಾಷ್ಟ್ರೀಯ ನಾಯಕರ ಸಲಹೆ ಕೂಡ ಬಿಜೆಪಿ ಹೈಕಮಾಂಡ್ ತಿರಸ್ಕರಿಸಿದೆ ಎನ್ನಲಾಗುತ್ತಿದೆ.

    ದೆಹಲಿಯಿಂದ ಬರುವ ಪ್ಲ್ಯಾನ್ ಅನ್ನು ಮಾತ್ರ ಅನುಷ್ಠಾನಕ್ಕೆ ತರುವ ಕೆಲಸವನ್ನ ಮಾತ್ರ ಅರವಿಂದ ಲಿಂಬಾವಳಿ ಮಾಡಬೇಕು ಎನ್ನುವ ಸಂದೇಶ ರಾಜ್ಯ ಬಿಜೆಪಿ ನಾಯಕರಿಗೆ ಶಾಕ್ ಕೊಟ್ಟಿದೆ. ರಾಜ್ಯದಲ್ಲಿ ಆಪರೇಷನ್ ಕಮಲ ಎರಡು, ಮೂರು ಬಾರಿ ವಿಫಲವಾದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದೆ.

  • ಮಧ್ಯಪ್ರದೇಶದಲ್ಲಿ ಕಮಲನಾಥ್ ಸಂಪುಟದ ಎಲ್ಲ ಸಚಿವರ ರಾಜೀನಾಮೆ

    ಮಧ್ಯಪ್ರದೇಶದಲ್ಲಿ ಕಮಲನಾಥ್ ಸಂಪುಟದ ಎಲ್ಲ ಸಚಿವರ ರಾಜೀನಾಮೆ

    ಭೋಪಾಲ್: ಮಧ್ಯಪ್ರದೇಶದಲ್ಲಿ ಸರ್ಕಾರ ಉಳಿಸಲು ಶತಾಯಗತಾಯ ಪ್ರಯತ್ನ ನಡೆಸುತ್ತಿರುವ ಸಿಎಂ ಕಮಲನಾಥ್ ಅವರು ಎಲ್ಲ ಸಂಪುಟದ ಎಲ್ಲ ಸಚಿವರಿಂದ ರಾಜೀನಾಮೆ ಪಡೆದುಕೊಂಡಿದ್ದಾರೆ.

    ಈಗಾಗಲೇ 18 ಮಂದಿ ಕೈ ಶಾಸಕರು ಬೆಂಗಳೂರು ತಲುಪಿದ್ದಾರೆ. ಈ ಶಾಸಕರಿಗೆ ಮಂತ್ರಿ ಸ್ಥಾನ ನೀಡಲು ಕೊನೆಯ ಪ್ರಯತ್ನವಾಗಿ  ಕಮಲನಾಥ್ ಈ ದಾಳ ಉರುಳಿಸಿದ್ದಾರೆ ಎಂದು ವರದಿಯಾಗಿದೆ.

    ಒಂದು ವೇಳೆ ಕಮಲನಾಥ ಸರ್ಕಾರ ಪತನಗೊಂಡರೆ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಸಿಎಂ ಹುದ್ದೆಯ ಆಫರ್ ಅನ್ನು ಬಿಜೆಪಿ ನೀಡಿದೆ ಎನ್ನಲಾಗುತ್ತಿದೆ. ಈ ವಿದ್ಯಮಾನಗಳ ನಡುವೆ  ರಾಜೀನಾಮೆ ಪಡೆದುಕೊಂಡಿದ್ದು ರಾತ್ರಿ ಭಾರೀ ಬೆಳವಣಿಗೆ ನಡೆಯುತ್ತಿದೆ.

    ಮಧ್ಯಪ್ರದೇಶದ 6 ಸಚಿವರು, 12 ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಬಂದು, ಮಾರತಹಳ್ಳಿಯ ಖಾಸಗಿ ಹೋಟೆಲ್‍ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಬೆಂಗಳೂರಿಗೆ ಬಂದ ಕೈ ನಾಯಕರು ಜ್ಯೋತಿರಾದಿತ್ಯ ಸಿಂಧಿಯಾ ಬೆಂಬಲಿಗರಾಗಿದ್ದು ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದ್ದಾರೆ. ಈ ಎಲ್ಲ ನಾಯಕರ ಫೋನ್ ಸ್ವಿಚ್ ಆಫ್ ಆಗಿದೆ.

    ಮಧ್ಯಪ್ರದೇಶದಲ್ಲಿ ಅಧಿಕಾರಕ್ಕೆ ಏರಿದ ಬಳಿಕ ಮುಖ್ಯಮಂತ್ರಿ ಪಟ್ಟದ ವಿಚಾರದಲ್ಲಿ ಕಮಲನಾಥ್ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ನಡುವೆ ಸ್ಪರ್ಧೆ ಏರ್ಪಟಿತ್ತು. ಕೊನೆಗೆ ಕಾಂಗ್ರೆಸ್ ಹೈಕಮಾಂಡ್ ಕಮಲನಾಥ್ ಅವರಿಗೆ ಮುಖ್ಯಮಂತ್ರಿ ಹುದ್ದೆಯನ್ನು ನೀಡಿತ್ತು.

     

    ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಶಾಸಕರ ಮಧ್ಯೆ 2 ಬಣಗಳಿದ್ದು 23 ಮಂದಿ ನಾಯಕರು ಸಿಎಂ ಹುದ್ದೆಗೆ ಜ್ಯೋತಿರಾದಿತ್ಯ ಸಿಂಧಿಯಾ ಪರ ಬ್ಯಾಟಿಂಗ್ ಮಾಡಿದ್ದರು. ಈ ಶಾಸಕರ ಪೈಕಿ ಹಲವು ಶಾಸಕರು ಈಗ ಬೆಂಗಳೂರಿಗೆ ಆಗಮಿಸಿದ್ದಾರೆ ಎನ್ನಲಾಗುತ್ತಿದೆ.

    ಕಮಲನಾಥ್ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ ಆಪರೇಷನ್ ಕಮಲ ಮಾಡ್ತಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿದೆ. ಬಿಜೆಪಿ ಈ ಆರೋಪವನ್ನು ನಿರಾಕರಿಸಿದ್ದು, ನಮಗೂ ಇದಕ್ಕೂ ಸಂಬಂಧ ಇಲ್ಲ ಎನ್ನುತ್ತಿದೆ. ಕಳೆದ ಒಂದು ವಾರದಿಂದ ಮಧ್ಯಪ್ರದೇಶದ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿದ್ದು, ಸರ್ಕಾರ ಉಳಿಸಿಕೊಳ್ಳಲು ಕಮಲ್‍ನಾಥ್ ಭಾರೀ ಕಸರತ್ತು ನಡೆಸಿದ್ದಾರೆ.

    ಇಂದು ಬೆಳಗ್ಗೆ ಸೋನಿಯಾ ಗಾಂಧಿ ಅವರನ್ನು ಕಮಲನಾಥ್ ಭೇಟಿ ಮಾಡಿ ಸಂಪುಟ ವಿಸ್ತರಣೆ ಮತ್ತು ರಾಜ್ಯಸಭಾ ಚುನಾವಣೆ ವಿಚಾರವಾಗಿ ಚರ್ಚೆ ನಡೆಸಿದ್ದಾರೆ. ಬೆಳಗ್ಗೆ ಕಮಲನಾಥ್ ಚರ್ಚೆ ನಡೆಸಿದ್ದರೆ ಸಂಜೆಯ ವೇಳೆ ಕಾಂಗ್ರೆಸ್ ಶಾಸಕರು ಬೆಂಗಳೂರಿನಲ್ಲಿ ಲ್ಯಾಂಡ್ ಆಗಿದ್ದಾರೆ.

    ಒಟ್ಟು 230 ವಿಧಾನಸಭಾ ಕ್ಷೇತ್ರಗಳಿರುವ ಮಧ್ಯಪ್ರದೇಶದಲ್ಲಿ 2018ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 114, ಬಿಜೆಪಿ 109, ಪಕ್ಷೇತರ 1, ಬಿಎಸ್‍ಪಿ 2, ಎಸ್‍ಪಿ 2 ಕ್ಷೇತ್ರದಲ್ಲಿ ಜಯಗಳಿಸಿದೆ. 2019ರ ಲೋಕಸಭಾ ಚುನಾವಣೆಯ ಒಟ್ಟು 29 ಕ್ಷೇತ್ರಗಳ ಪೈಕಿ ಬಿಜೆಪಿ 28 ರಲ್ಲಿ ಗೆದ್ದಿದ್ದರೆ 1 ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಗಳಿಸಿತ್ತು.

    ಕಾಂಗ್ರೆಸ್ ಅಧಿಕಾರಕ್ಕೆ ಏರಿದ ಬಳಿಕ ಕಮಲನಾಥ್ ಮತ್ತು ಸಿಂಧಿಯಾ ನಡುವಿನ ಮುಸುಕಿನ ಗುದ್ದಾಟ ಬೀದಿಗೆ ಬಂದಿತ್ತು. ಚುನವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಭರವಸೆ ಈಡೇರಿಸದೇ ಇದ್ದಲ್ಲಿ ಬೀದಿಯಲ್ಲಿ ನಿಂತು ಹೋರಾಟ ಮಾಡುವುದಾಗಿ ಸಿಂಧಿಯಾ ಬಹಿರಂಗವಾಗಿ ಹೇಳಿಕೆ ನೀಡಿದ್ದರು.

    ಜಮ್ಮುಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಮೋದಿ ಸರ್ಕಾರವನ್ನು ಸಿಂಧಿಯಾ ಶ್ಲಾಘಿಸಿ ಬೆಂಬಲಿಸಿ ಟ್ವೀಟ್ ಮಾಡಿದ್ದು ಕೈ ನಾಯಕರ ಕೆಂಗಣ್ಣಿಗೆ ಗುರಿಯಾಗಿತ್ತು.

    https://twitter.com/JM_Scindia/status/1158729410507182080?

    2019ರ ಅಕ್ಟೋಬರ್ ನಲ್ಲಿ ಐಸಿಸಿ ಪ್ರಧಾನ ಕಾರ್ಯದರ್ಶಿ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಸ್ವಾಗತ ಕೋರಿ ಬಿಜೆಪಿ ಫ್ಲೆಕ್ಸ್ ಹಾಕಿತ್ತು. ಸಿಂಧಿಯಾ ಅವರ ಬಿಂಡ್ ಜಿಲ್ಲೆಯ ಭೇಟಿಯ ಸಂದರ್ಭದಲ್ಲಿ ಸ್ಥಳೀಯ ಬಿಜೆಪಿ ಮುಖಂಡರೊಬ್ಬರು ಈ ಪ್ಲೆಕ್ಸ್ ಹಾಕಿಸಿದ್ದರು. ಸಿಂಧಿಯಾ ಅವರ ಜೊತೆಗೆ, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿತ್ರಗಳು ಅದರಲ್ಲಿ ರಾರಾಜಿಸಿದ್ದವು.

  • ಪತನದತ್ತ ಕಮಲ್ ಸರ್ಕಾರ- ಬೆಂಗಳೂರಿನಲ್ಲಿ 18 ಕಾಂಗ್ರೆಸ್ ಶಾಸಕರು

    ಪತನದತ್ತ ಕಮಲ್ ಸರ್ಕಾರ- ಬೆಂಗಳೂರಿನಲ್ಲಿ 18 ಕಾಂಗ್ರೆಸ್ ಶಾಸಕರು

    – ಬಂದವರೆಲ್ಲ ಜ್ಯೋತಿರಾದಿತ್ಯ ಸಿಂಧಿಯಾ ಬೆಂಬಲಿಗರು
    – ಬಿಜೆಪಿಯಿಂದ ಆಪರೇಷನ್ ಕಮಲ

    ಬೆಂಗಳೂರು/ನವದೆಹಲಿ: ಮಧ್ಯಪ್ರದೇಶದ ಕಮಲನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನದಂಚಿಗೆ ಬಂದು ನಿಂತಿದೆ. ಕರ್ನಾಟಕ ಮಾದರಿಯಲ್ಲೇ ಆಪರೇಷನ್ ಕಮಲದ ವಾಸನೆ ಬಡಿದಿದೆ.

    6 ಸಚಿವರು, 12 ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಬಂದು, ಮಾರತಹಳ್ಳಿಯ ಖಾಸಗಿ ಹೋಟೆಲ್‍ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಬೆಂಗಳೂರಿಗೆ ಬಂದ ಕೈ ನಾಯಕರು ಜ್ಯೋತಿರಾದಿತ್ಯ ಸಿಂಧಿಯಾ ಬೆಂಬಲಿಗರಾಗಿದ್ದು ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದ್ದಾರೆ. ಈ ಎಲ್ಲ ನಾಯಕರ ಫೋನ್ ಸ್ವಿಚ್ ಆಫ್ ಆಗಿದೆ.

    ಮಧ್ಯಪ್ರದೇಶದಲ್ಲಿ ಅಧಿಕಾರಕ್ಕೆ ಏರಿದ ಬಳಿಕ ಮುಖ್ಯಮಂತ್ರಿ ಪಟ್ಟದ ವಿಚಾರದಲ್ಲಿ ಕಮಲನಾಥ್ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ನಡುವೆ ಸ್ಪರ್ಧೆ ಏರ್ಪಟಿತ್ತು. ಕೊನೆಗೆ ಕಾಂಗ್ರೆಸ್ ಹೈಕಮಾಂಡ್ ಕಮಲನಾಥ್ ಅವರಿಗೆ ಮುಖ್ಯಮಂತ್ರಿ ಹುದ್ದೆಯನ್ನು ನೀಡಿತ್ತು.

    ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಶಾಸಕರ ಮಧ್ಯೆ 2 ಬಣಗಳಿದ್ದು 23 ಮಂದಿ ನಾಯಕರು ಸಿಎಂ ಹುದ್ದೆಗೆ ಜ್ಯೋತಿರಾದಿತ್ಯ ಸಿಂಧಿಯಾ ಪರ ಬ್ಯಾಟಿಂಗ್ ಮಾಡಿದ್ದರು. ಈ ಶಾಸಕರ ಪೈಕಿ ಹಲವು ಶಾಸಕರು ಈಗ ಬೆಂಗಳೂರಿಗೆ ಆಗಮಿಸಿದ್ದಾರೆ ಎನ್ನಲಾಗುತ್ತಿದೆ.

    ಕಮಲನಾಥ್ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ ಆಪರೇಷನ್ ಕಮಲ ಮಾಡ್ತಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿದೆ. ಬಿಜೆಪಿ ಈ ಆರೋಪವನ್ನು ನಿರಾಕರಿಸಿದ್ದು, ನಮಗೂ ಇದಕ್ಕೂ ಸಂಬಂಧ ಇಲ್ಲ ಎನ್ನುತ್ತಿದೆ. ಕಳೆದ ಒಂದು ವಾರದಿಂದ ಮಧ್ಯಪ್ರದೇಶದ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿದ್ದು, ಸರ್ಕಾರ ಉಳಿಸಿಕೊಳ್ಳಲು ಕಮಲ್‍ನಾಥ್ ಭಾರೀ ಕಸರತ್ತು ನಡೆಸುತ್ತಿದ್ದಾರೆ.

    ಇಂದು ಬೆಳಗ್ಗೆ ಸೋನಿಯಾ ಗಾಂಧಿ ಅವರನ್ನು ಕಮಲನಾಥ್ ಭೇಟಿ ಮಾಡಿ ಸಂಪುಟ ವಿಸ್ತರಣೆ ಮತ್ತು ರಾಜ್ಯಸಭಾ ಚುನಾವಣೆ ವಿಚಾರವಾಗಿ ಚರ್ಚೆ ನಡೆಸಿದ್ದಾರೆ. ಬೆಳಗ್ಗೆ ಕಮಲನಾಥ್ ಚರ್ಚೆ ನಡೆಸಿದ್ದರೆ ಸಂಜೆಯ ವೇಳೆ ಕಾಂಗ್ರೆಸ್ ಶಾಸಕರು ಬೆಂಗಳೂರಿನಲ್ಲಿ ಲ್ಯಾಂಡ್ ಆಗಿದ್ದಾರೆ.

    ಒಟ್ಟು 230 ವಿಧಾನಸಭಾ ಕ್ಷೇತ್ರಗಳಿರುವ ಮಧ್ಯಪ್ರದೇಶದಲ್ಲಿ 2018ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 114, ಬಿಜೆಪಿ 109, ಪಕ್ಷೇತರ 1, ಬಿಎಸ್‍ಪಿ 2, ಎಸ್‍ಪಿ 2 ಕ್ಷೇತ್ರದಲ್ಲಿ ಜಯಗಳಿಸಿದೆ. 2019ರ ಲೋಕಸಭಾ ಚುನಾವಣೆಯ ಒಟ್ಟು 29 ಕ್ಷೇತ್ರಗಳ ಪೈಕಿ ಬಿಜೆಪಿ 28 ರಲ್ಲಿ ಗೆದ್ದಿದ್ದರೆ 1 ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಗಳಿಸಿತ್ತು.

    ಕಾಂಗ್ರೆಸ್ ಅಧಿಕಾರಕ್ಕೆ ಏರಿದ ಬಳಿಕ ಕಮಲನಾಥ್ ಮತ್ತು ಸಿಂಧಿಯಾ ನಡುವಿನ ಮುಸುಕಿನ ಗುದ್ದಾಟ ಬೀದಿಗೆ ಬಂದಿತ್ತು. ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಭರವಸೆ ಈಡೇರಿಸದೇ ಇದ್ದಲ್ಲಿ ಬೀದಿಯಲ್ಲಿ ನಿಂತು ಹೋರಾಟ ಮಾಡುವುದಾಗಿ ಸಿಂಧಿಯಾ ಬಹಿರಂಗವಾಗಿ ಹೇಳಿಕೆ ನೀಡಿದ್ದರು.

    https://twitter.com/JM_Scindia/status/1158729410507182080?

    ಜಮ್ಮುಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಮೋದಿ ಸರ್ಕಾರವನ್ನು ಸಿಂಧಿಯಾ ಶ್ಲಾಘಿಸಿ ಬೆಂಬಲಿಸಿ ಟ್ವೀಟ್ ಮಾಡಿದ್ದು ಕೈ ನಾಯಕರ ಕೆಂಗಣ್ಣಿಗೆ ಗುರಿಯಾಗಿತ್ತು.

    2019ರ ಅಕ್ಟೋಬರ್ ನಲ್ಲಿ ಐಸಿಸಿ ಪ್ರಧಾನ ಕಾರ್ಯದರ್ಶಿ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಸ್ವಾಗತ ಕೋರಿ ಬಿಜೆಪಿ ಫ್ಲೆಕ್ಸ್ ಹಾಕಿತ್ತು. ಸಿಂಧಿಯಾ ಅವರ ಬಿಂಡ್ ಜಿಲ್ಲೆಯ ಭೇಟಿಯ ಸಂದರ್ಭದಲ್ಲಿ ಸ್ಥಳೀಯ ಬಿಜೆಪಿ ಮುಖಂಡರೊಬ್ಬರು ಈ ಪ್ಲೆಕ್ಸ್ ಹಾಕಿಸಿದ್ದರು. ಸಿಂಧಿಯಾ ಅವರ ಜೊತೆಗೆ, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿತ್ರಗಳು ಅದರಲ್ಲಿ ರಾರಾಜಿಸಿದ್ದವು.

  • ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರಿಗೆ ಲಿಂಬಾವಳಿ ಕಾವಲು?

    ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರಿಗೆ ಲಿಂಬಾವಳಿ ಕಾವಲು?

    ಬೆಂಗಳೂರು: ಮಧ್ಯಪ್ರದೇಶದಲ್ಲಿ ಆಪರೇಷನ್ ಕಮಲಕ್ಕೆ ಒಳಗಾಗಿರುವ 10 ಜನ ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿನಲ್ಲಿ ಇರಿಸಲಾಗಿದ್ದು, ಅವರ ಜವಾಬ್ದಾರಿಯನ್ನು ಬಿಜೆಪಿ ಮುಖಂಡ ಅರವಿಂದ ಲಿಂಬಾವಳಿ ವಹಿಸಿಕೊಂಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭಿಸಿದೆ.

    ಮಧ್ಯಪ್ರದೇಶದಲ್ಲಿ ರಾಜಕೀಯ ಹೈಡ್ರಾಮಾ ನಡೆಯುತ್ತಿದೆ. ಆಪರೇಷನ್ ಕಮಲಕ್ಕೆ ಒಳಗಾಗಿ ಬಂಡಾಯ ಎದ್ದಿರುವ ಕಾಂಗ್ರೆಸ್ ಶಾಸಕರಿಗೆ ಸಚಿವ ಸ್ಥಾನ ನೀಡುವುದಾಗಿ ಮಧ್ಯಪ್ರದೇಶ ಸಿಎಂ ಕಮಲ್‍ನಾಥ್ ಹೇಳಿದ್ದು, ಬಂಡಾಯ ಶಮನ ಮಾಡುವ ಯತ್ನ ನಡೆಸುತ್ತಿದ್ದಾರೆ. ಜೊತೆಗೆ ಬಿಜೆಪಿಯ ರೆಬೆಲ್ ಶಾಸಕರನ್ನು ಸೆಳೆಯುವ ಪ್ರಯತ್ನವನ್ನು ಕಮಲ್‍ನಾಥ್ ಸರ್ಕಾರ ಮಾಡುತ್ತಿದೆ. ಇದನ್ನೂ ಓದಿ: ಆಪರೇಷನ್ ಮಧ್ಯಪ್ರದೇಶಕ್ಕೆ ಕರ್ನಾಟಕವೇ ಹೆಡ್ ಆಫೀಸ್

    ಬೆಂಗಳೂರಿನ ಸರ್ಜಾಪುರ ರಸ್ತೆಯ ಓಕ್‍ವುಡ್ ಹೋಟೆಲ್‍ನಲ್ಲಿ ಮಧ್ಯಪ್ರದೇಶದ ಸುಮಾರು 10 ಕಾಂಗ್ರೆಸ್ ಶಾಸಕರನ್ನು ಬಿಜೆಪಿ ಇರಿಸಿದೆ ಎಂದು ಹೇಳಲಾಗುತ್ತಿದೆ. ಇವರ ಜವಾಬ್ದಾರಿಯನ್ನು ಅರವಿಂದ ಲಿಂಬಾವಳಿ ವಹಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಆದರೆ ಕಾಂಗ್ರೆಸ್‍ನ ದಿನೇಶ್ ಗುಂಡೂರಾವ್ ಅವರು ಮಾತ್ರ ಬೆಂಗಳೂರಿಗೆ ಬಂದಿದ್ದ ಶಾಸಕರು ಭೋಪಾಲ್‍ಗೆ ವಾಪಸ್ ಆಗಿದ್ದಾರೆ ಎಂದು ತಿಳಿಸಿದ್ದಾರೆ.

    ಮಧ್ಯಪ್ರದೇಶದ ಕಾಂಗ್ರೆಸ್‍ನ ರೆಬಲ್ ಶಾಸಕ ಹರ್ದೀಪ್ ಸಿಂಗ್ ನಿನ್ನೆಯಷ್ಟೇ ಪತ್ರದ ಮೂಲಕ ಸ್ಪೀಕರ್ ಪ್ರಜಾಪತಿ ಅವರಿಗೆ ಪತ್ರದ ಮೂಲಕ ರಾಜೀನಾಮೆ ಸಲ್ಲಿಸಿದ್ದಾರೆ. ‘ಎರಡನೇ ಬಾರಿ ಜನರಿಂದ ಆಯ್ಕೆಯಾದರೂ ಪಕ್ಷದಲ್ಲಿ ಕಡೆಗಣಿಸಲಾಗುತ್ತಿದೆ. ಪ್ರತಿಯೊಬ್ಬ ಸಚಿವರೂ ತಾವು ಭ್ರಷ್ಟಾಚಾರದ ಭಾಗವಾಗಿ ಕೆಲಸ ಮಾಡುತ್ತಿದ್ದಾರೆ’ ಎಂದು ಹರ್ದೀಪ್ ಸಿಂಗ್ ಪತ್ರದಲ್ಲಿ ತಿಳಿಸಿದ್ದರು.

  • ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲ – ಈ ಬಾರಿ ಒಂದು ಅಂಶ ಮಾತ್ರ ಮಾನದಂಡ

    ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲ – ಈ ಬಾರಿ ಒಂದು ಅಂಶ ಮಾತ್ರ ಮಾನದಂಡ

    ಬೆಂಗಳೂರು: ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲ ಶುರುವಾಗಿದೆ. ರಾಜಕೀಯ ಧ್ರುವೀಕರಣದ ಹೆಸರಲ್ಲಿ ಆಪರೇಶನ್ ಕಮಲ-2 ಸದ್ದಿಲ್ಲದೇ ಆರಂಭವಾಗಿದೆ.

    ಹೌದು, ಈಗಾಗಲೇ ಬಂಡಾಯ ಶಾಸಕರನ್ನು ಸೆಳೆದು ದೋಸ್ತಿ ಸರ್ಕಾರವನ್ನು ಉರುಳಿಸಿ ಅಧಿಕಾರವನ್ನು ಏರಿದ ಬಿಜೆಪಿ ಈಗ ಮತ್ತೊಂದು ಸುತ್ತಿನ ಆಪರೇಷನ್ ಕಮಲ ನಡೆಸಲು ಸಿದ್ಧತೆ ನಡೆಸುತ್ತಿದೆ. ಒಂದು ಪ್ರಮುಖ ಅಂಶವನ್ನು ಮಾತ್ರ ಮಾನದಂಡವನ್ನಾಗಿಟ್ಟುಕೊಂಡು ಈ ಬಾರಿ ಆಪರೇಷನ್ ನಡೆಸಲು ಬಿಜೆಪಿ ಕೈ ಹಾಕಿದೆ.

    ಜೆಡಿಎಸ್, ಕಾಂಗ್ರೆಸ್ ಪೈಕಿ ಈ ಬಾರಿ ಸ್ಟಾರ್ ಶಾಸಕರಿಗೆ ಮಾತ್ರ ಗಾಳ ಹಾಕುತ್ತಿದೆ. ಡೈನಾಮಿಕ್ ಶಾಸಕರೇ ಬಿಜೆಪಿ ಟಾರ್ಗೆಟ್ ಆಗಿದ್ದು ಯಾವಾಗ ಪಕ್ಷ ಬಿಟ್ಟು ಬಂದರೂ ಆ ಶಾಸಕರು ಗೆಲ್ಲಬೇಕು. ವೈಯಕ್ತಿಕ ವರ್ಚಸ್ಸು, ಜಾತಿ ಹಿಡಿತ ಹೆಚ್ಚಾಗಿರಬೇಕು. ಅಂತಹ ಶಾಸಕರಿಗೆ ಮಾತ್ರ ಬಿಜೆಪಿ ಡೋರ್ ಓಪನ್ ಮಾಡಲು ಪ್ಲ್ಯಾನ್ ಮಾಡಿಕೊಂಡಿದೆ.

    ಜೆಡಿಎಸ್‍ನ 5, ಕಾಂಗ್ರೆಸ್ 4 ಜನ ಶಾಸಕರ ಮೇಲೆ ಬಿಜೆಪಿ ಕಣ್ಣು ಹಾಕಿದೆ. ಈಗಾಗಲೇ ಜಿಟಿ ದೇವೇಗೌಡರ ಜೊತೆ ಮಾತುಕತೆ ನಡೆಸಿರುವ ಬಿಜೆಪಿ ನಾಯಕರು ಬಳ್ಳಾರಿ ಕಾಂಗ್ರೆಸ್ ಶಾಸಕ ನಾಗೇಂದ್ರ ಬಗ್ಗೆಯೂ ಮೃದುಧೋರಣೆ ತೋರುತ್ತಿದ್ದಾರೆ.

    ಕಾಂಗ್ರೆಸ್, ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಳಿಕ ಉಪಚುನಾವಣೆಗೆ ಸ್ಪರ್ಧಿಸಿದವರ ಪೈಕಿ ಎಂಟಿಬಿ ನಾಗರಾಜ್ ಮತ್ತು ಎಚ್ ವಿಶ್ವನಾಥ್ ಮಾತ್ರ ಸೋತಿದ್ದಾರೆ. ಹೀಗಾಗಿ ಪಕ್ಷವನ್ನು ಸಂಘಟಿಸುವ ನಿಟ್ಟಿನಲ್ಲಿ ರಾಜ್ಯ ಬಿಜಪಿ ನಾಯಕರು ಮತ್ತೊಮ್ಮೆ ಆಪರೇಷನ್ ಕಮಲ ಮಾಡಲು ಮುಂದಾಗುತ್ತಿದ್ದಾರೆ.

  • ‘ಹಳ್ಳಿಹಕ್ಕಿ’ ಪುಸ್ತಕದ ಬಗ್ಗೆ ಸಿದ್ದರಾಮಯ್ಯ ವ್ಯಂಗ್ಯ

    ‘ಹಳ್ಳಿಹಕ್ಕಿ’ ಪುಸ್ತಕದ ಬಗ್ಗೆ ಸಿದ್ದರಾಮಯ್ಯ ವ್ಯಂಗ್ಯ

    ಮೈಸೂರು: ಆಪರೇಷನ್ ಕಮಲದ ಬಗ್ಗೆ ಎಚ್.ವಿಶ್ವನಾಥ್ ಪುಸ್ತಕ ಬರೆಯುವ ವಿಚಾರದ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ವಿಶ್ವನಾಥ್ ಅವರು ಪುಸ್ತಕ ಬರೆಯಲಿ ಬಿಡಿ, ದೊಡ್ಡ ಬರಹಗಾರರು. ಅವರು ಪುಸ್ತಕ ಬರೆದರೆ ನಾವು ಓದೋಣ ಎಂದು ವ್ಯಂಗ್ಯವಾಡಿದರು.

    ಪುಣ್ಯಾತ್ಮ ಪಕ್ಷ ಬಿಟ್ಟು ಹೋಗಿ ಇವನೇನು ಪುಸ್ತಕ ಬರೆಯೋದು. ನೀನು ಶುದ್ಧವಾಗಿದ್ದರೆ ಇನ್ನೋಬ್ಬರ ಬಗ್ಗೆ ಆರೋಪ ಮಾಡಬಹುದು. ಇವರೇ ಸರಿಯಿಲ್ಲ ಅಂದರೆ ಏನ್ ಬರೆಯೋದು ಎಂದು ಪ್ರಶ್ನಿಸಿದರು. ಅಲ್ಲದೇ ಬರೆಯೋವಾಗ ಯಾರ್ಯಾರು ಎಷ್ಟು ದುಡ್ಡು ತಗೊಂಡಿದ್ದೀರಿ ಅಂತಾನು ಎಂದು ಬರೆಯಲು ಹೇಳಿ ಎಂದರು.

    ಇದೇ ವೇಳೆ ಸಂಸದ ಅನಂತ್‍ಕುಮಾರ್ ಹೆಗ್ಡೆ ಅವರು ಮಹಾತ್ಮ ಗಾಂಧೀಜಿ ಅವರ ಕುರಿತಂತೆ ನೀಡಿರುವ ವಿವಾದಾತ್ಮಕ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ ಅವರು, ಗೂಡ್ಸೆ, ಸಾರ್ವಕರ್ ಪೂಜೆ ಮಾಡುವವರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ. ಕ್ರೂರತ್ವ ಮನೋಭಾವದವರಿಗೆ ಸತ್ಯ, ಅಹಿಂಸೆ ಅರ್ಥ ಆಗುವುದಿಲ್ಲ. ಅನಂತ್ ಕುಮಾರ್ ಹೆಗ್ಡೆಗೆ ಎಷ್ಟು ವರ್ಷ? ಇವನು ಸ್ವಾತಂತ್ರ್ಯ ಪೂರ್ವದಲ್ಲಿ ಹುಟ್ಟಿದ್ನಾ? ಸ್ವಾತಂತ್ರ್ಯ ಹೋರಾಟದ ಬಗ್ಗೆ ಇವನಿಗೇನು ಗೊತ್ತು? ನಾನು ಆಗಸ್ಟ್ 3, 1947ರಂದು ಹುಟ್ಟಿದ್ದೇನೆ. ನಾನು ಸ್ವಾತಂತ್ರ್ಯ ಪೂರ್ವದಲ್ಲಿ ಹುಟ್ಟಿದ್ದೇನೆ. ಹೆಗಡೆ ಸ್ವಾತಂತ್ರ್ಯ ಹೋರಾಟದಲ್ಲಿ ಬಲಿದಾನ ಆದವರ ಹೆಸರು ಹೇಳಲಿ ನೋಡೋಣ ಎಂದು ಸವಾಲು ಎಸೆದರು.

    ಮಹಾತ್ಮ ಗಾಂಧಿ ಎಷ್ಟು ಜೈಲಿನಲ್ಲಿ ಇದ್ರು ಗೊತ್ತಾ? ಗಾಂಧಿ ಕೊಂದಿದ್ದು ದೇಶದ್ರೋಹಾನ, ದೇಶ ಭಕ್ತಿನಾ? ವಲ್ಲಭಾಯಿ ಪಟೇಲ್ ಪ್ರತಿಮೆ ಮಾಡಿದ್ದು ಯಾರು? ಅದೇ ಪಟೇಲರು ಆರ್.ಎಸ್.ಎಸ್ ಬ್ಯಾನ್ ಮಾಡಿದ್ದರು. ಈ ಬಗ್ಗೆ ಇವನಿಗೆ ಗೊತ್ತಾ? ಜಗತ್ತಿನಲ್ಲಿ ರಕ್ತಪಾತ ಇಲ್ಲದೆ ಸ್ವಾತಂತ್ರ್ಯ ಪಡೆದ ದೇಶ ಭಾರತ ದೇಶ. ಇದರ ಇತಿಹಾಸದ ಅನಂತ್ ಕುಮಾರ್ ಹೆಗ್ಡೆಗೆ ಏನ್ ಗೊತ್ತು? ಇತಿಹಾಸ ಗೊತ್ತಿಲ್ಲ ಎಂದರೇ ಹಿರಿಯರಿಂದ ಕೇಳಿ ತಿಳಿದುಕೊಳ್ಳಲಿ ಎಂದು ತಿರುಗೇಟು ನೀಡಿದರು.

  • ಆಶಾದಾಯಕವಲ್ಲದ ಬಜೆಟ್- ಅನ್ನಭಾಗ್ಯದ ಅಕ್ಕಿ ಉಳಿಸಿ ಆಪರೇಷನ್ ಕಮಲ ಮಾಡ್ತಾರಾ?: ಸಿದ್ದು ಪ್ರಶ್ನೆ

    ಆಶಾದಾಯಕವಲ್ಲದ ಬಜೆಟ್- ಅನ್ನಭಾಗ್ಯದ ಅಕ್ಕಿ ಉಳಿಸಿ ಆಪರೇಷನ್ ಕಮಲ ಮಾಡ್ತಾರಾ?: ಸಿದ್ದು ಪ್ರಶ್ನೆ

    ಮೈಸೂರು: ಇಂದು ಮಂಡನೆಯಾದ ಕೇಂದ್ರ ಸರ್ಕಾರದ ಬಜೆಟ್ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದು, ಇದು ಆಶಾದಾಯಕ ಬಜೆಟ್ ಅಲ್ಲ. 30 ಲಕ್ಷ ಗಾತ್ರದ ಬಜೆಟ್ ಮಂಡಿಸಿದ್ದಾರೆ. ಕಳೆದ ಬಜೆಟ್‍ಗೂ ಈ ಬಾರಿಯ ಬಿಜೆಟ್‍ಗೂ 3 ಲಕ್ಷ ಕೋಟಿ ರೂ. ವ್ಯತ್ಯಾಸ ಇದೆ ಎಂದು ಹೇಳಿದ್ದಾರೆ.

    ಕಳೆದ ಬಜೆಟ್ ಅಂದಾಜು ವೆಚ್ಚದಲ್ಲಿ 2 ಲಕ್ಷ ಕೋಟಿ ರೂ. ಕಡಿಮೆ ಖರ್ಚಾಗಿದೆ. ತೆರಿಗೆ ಸಂಗ್ರಹದಲ್ಲಿ ನಿರೀಕ್ಷಿಯ ಆದಾಯ ಬಂದಿಲ್ಲ. ಇದರಿಂದ ರಾಜ್ಯಗಳಿಗೆ ಬರಬೇಕಾದ ಪಾಲು ಖೋತಾ ಆಗಿದೆ. ದೇಶದ ಆದಾಯವನ್ನು 5 ಟ್ರಿಲಿಯನ್ ಡಾಲರ್ ಮಾಡುತ್ತೇವೆ ಎಂದಿದ್ದರು. ಆದರೆ ಇದು ಅದು ಸಾಧ್ಯವಿಲ್ಲ ಎಂದು ಎಲ್ಲರಿಗೂ ಗೊತ್ತಾಗುತ್ತಿದೆ. ಜಿಡಿಪಿ ಕುಸಿತಗೊಂಡಿದೆ. ದೇಶದ ಆದಾಯ ಪಾತಾಳಕ್ಕೆ ಹೊರಟು ಹೋಗಿದೆ. ಇದರಿಂದ ಹೆಚ್ಚು ಸಾಲ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂದೆ ಜಿಡಿಪಿ 6% ತರ್ತಿವಿ ಅಂತಿದ್ದಾರೆ. ಆದ್ರೆ ಅದು ಗಗನ ಕುಸುಮ ಆಗಲಿದೆ. ಜಿಡಿಪಿ ಹೆಚ್ಚಿಸಲು ಸಾಧ್ಯವಿಲ್ಲ ಎಂದು ಹೇಳಿದರು.

    ಇದೇ ವೇಳೆ ಅನ್ನಭಾಗ್ಯ ಯೋಜನೆಯ ಅಕ್ಕಿ ಕೊಡುವುದು ಬಡವರ ಯೋಜನೆ. ಬಡವರ ಪರವಾದ ಯೋಜನೆ ಮುಂದುವರಿಸಲು ಸರ್ಕಾರಕ್ಕೆ ಇಷ್ಟ ಇಲ್ಲ. ಹಾಗಾಗಿ ಅನ್ನಭಾಗ್ಯದ ಅಕ್ಕಿ ಕಡಿತಕ್ಕೆ ಮುಂದಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅನ್ನಭಾಗ್ಯ ಅಕ್ಕಿ ಕಡಿತದ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿದರು.

    ಅಕ್ಕಿ ಕಡಿತ ಮಾಡುತ್ತೇವೆ ಎಂದು ಸಚಿವೆ ಶಶಿಕಲ್ಲಾ ಜೊಲ್ಲೆ ಹೇಳಿಲ್ಲ. ಇದನ್ನ ಯಡಿಯೂರಪ್ಪ ಹೇಳಿಸಿರೋದು. ಅಕ್ಕಿ ದುಡ್ಡು ಉಳಿಸಿ ಏನ್ ಮಾಡ್ತಾರಂತೆ? ಆಪರೇಷನ್ ಕಮಲ ಮಾಡೋಕಾ ಎಂದು ಪ್ರಶ್ನಿಸಿದರು. ಒಬ್ಬೊಬ್ಬ ಶಾಸಕರನ್ನು ಕರೆದುಕೊಂಡು ಹೋಗಲು 25 ಕೋಟಿ ರೂ. ವೆಚ್ಚ ಮಾಡಿದ್ದಾರೆ. ಎಲೆಕ್ಷನ್‍ಗೆ 35 ಕೋಟಿ ನೀಡಿದ್ದರು. ಅಷ್ಟೊಂದು ದುಡ್ಡು ಎಲ್ಲಿಂದ ಬಂತು. ಇದನೇಲ್ಲಾ ನೋಡಿದ ಮೇಲೂ ನಿರ್ಮಲಾ ಸೀತರಾಮನ್ ಭ್ರಷ್ಟಾಚಾರ ಮುಕ್ತ ಸರ್ಕಾರ ನೀಡುತ್ತೇವೆ ಎಂದು ಹೇಳುತ್ತಾರೆ ಎಂದು ವ್ಯಂಗ್ಯವಾಡಿದರು.

  • ಜೆಡಿಎಸ್‍ನ ಮತ್ತೆರಡು ವಿಕೆಟ್ ಪತನ – ಬಿಜೆಪಿಗೆ ಶಾಸಕರ ಜಂಪ್?

    ಜೆಡಿಎಸ್‍ನ ಮತ್ತೆರಡು ವಿಕೆಟ್ ಪತನ – ಬಿಜೆಪಿಗೆ ಶಾಸಕರ ಜಂಪ್?

    ಮಂಡ್ಯ: ಉಪಚುನಾವಣೆಯಲ್ಲಿ ಮೊದಲ ಬಾರಿಗೆ ಜಿಲ್ಲೆಯ ಕೆ.ಆರ್.ಪೇಟೆ ಕ್ಷೇತ್ರದ ಮೂಲಕ ಖಾತೆ ತೆರೆದಿದ್ದ ಬಿಜೆಪಿ ಸದ್ಯ ಜಿಲ್ಲೆಯಲ್ಲಿ ಭದ್ರ ಬುನಾದಿ ನಿರ್ಮಿಸುವತ್ತ ಸಾಗಿದೆ. ಬಿಜೆಪಿ ಇದೀಗ ಜಿಲ್ಲೆಯ ಮತ್ತೆರಡು ಕ್ಷೇತ್ರಗಳಲ್ಲಿ ಕಮಲ ಅರಳಿಸಲು ಮುಂದಾದಂತೆ ಕಾಣುತ್ತಿದೆ. ಈ ನಿಟ್ಟಿನಲ್ಲಿ ಜೆಡಿಎಸ್ ಶಾಸಕರಾದ ನಾಗಮಂಗಲದ ಸುರೇಶ್‍ಗೌಡ ಹಾಗೂ ಶ್ರೀರಂಗಪಟ್ಟಣದ ರವೀಂದ್ರ ಶ್ರೀಕಂಠಯ್ಯ ಅವರು ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆಗಳ ಕುರಿತ ಚರ್ಚೆ ಜಿಲ್ಲೆಯಲ್ಲಿ ದಟ್ಟವಾಗಿ ಕಾಣುತ್ತಿದೆ.

    ಜೆಡಿಎಸ್ ಭದ್ರ ಕೋಟೆಯಾಗಿರುವ ಮಂಡ್ಯ ಜಿಲ್ಲೆಯನ್ನು ಸಂಪೂರ್ಣವಾಗಿ ಬಿಜೆಪಿ ಕೋಟೆಯನ್ನಾಗಿ ಮಾಡಿಕೊಳ್ಳಲು ಬಿಜೆಪಿ ಚಿಂತನೆ ನಡೆಸಿದೆ ಎನ್ನಲಾಗಿದೆ. ಪರಿಣಾಮ ರಾಜ್ಯ ಬಿಜೆಪಿ ಸರ್ಕಾರ ಸೇಫ್ ಆದರೂ ಮತ್ತೊಂದು ಆಪರೇಷನ್ ಕಮಲ ಮಾಡಲು ಮಾತುಕತೆ ನಡೆಯುತ್ತಿದೆ ಎಂಬ ಮಾತು ಜಿಲ್ಲೆಯ ರಾಜಕೀಯ ಪಡಸಾಲೆಯಲ್ಲಿ ಕೇಳಿ ಬಂದಿದೆ. ಜೆಡಿಎಸ್‍ನ ಶಾಸಕರಾಗಿರುವ ಸುರೇಶ್‍ಗೌಡ ಮತ್ತು ರವೀಂದ್ರ ಶ್ರೀಕಂಠಯ್ಯ ಇಬ್ಬರು ಕೂಡ ಜೆಡಿಎಸ್‍ಗೆ ಗುಡ್ ಬಾಯ್ ಹೇಳಿ ಬಿಜೆಪಿ ಬಾವುಟ ಹಿಡಿಯಲು ಮನಸ್ಸು ಮಾಡಿದ್ದಾರೆ ಎಂದು ಅವರ ಆಪ್ತ ಮೂಲಗಳು ಹೇಳುತ್ತಿವೆ.

    ಕೆ.ಆರ್.ಪೇಟೆ ಕ್ಷೇತ್ರದಲ್ಲಿ ನಾರಾಯಣಗೌಡ ಅವರ ಗೆಲುವು ನೋಡಿರುವ ಜೆಡಿಎಸ್ ಶಾಸಕರು ತಮ್ಮ ಭವಿಷ್ಯ ಕಟ್ಟಿಕೊಳ್ಳಲು ಇದೇ ಸೂಕ್ತ ಎಂಬ ನಿರ್ಧಾರಕ್ಕೆ ಬಂದಂತೆ ಕಾಣುತ್ತಿದೆ. ಹೀಗಾಗಿ ಬಿಜೆಪಿಗೆ ಸೇರಿ ತಮ್ಮ ರಾಜಕೀಯ ಭವಿಷ್ಯವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನ ಪಡುತ್ತಿದ್ದಾರೆ ಎನ್ನಲಾಗುತ್ತಿದೆ. ಈ ಹಿಂದೆ ಆಪರೇಷನ್ ಕಮಲ ಆದ ವೇಳೆಯೂ ಈ ಇಬ್ಬರೂ ಬಿಜೆಪಿಗೆ ಹೋಗುತ್ತಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಆದರೆ ಕಾರಣಾಂತರಗಳಿಂದ ಈ ಇಬ್ಬರೂ ಬಿಜೆಪಿಗೆ ಹೋಗಲಿಲ್ಲ, ಈಗ ಖಂಡಿತವಾಗಿಯೂ ಹೋಗುತ್ತಾರೆ ಎಂದು ಆಪ್ತ ಮೂಲಗಳು ಹೇಳುತ್ತಿವೆ. ಇಬ್ಬರು ಶಾಸಕರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಸಿಎಂ ಯಡಿಯೂರಪ್ಪ ಅವರು ಮನಸ್ಸು ಮಾಡಿದ್ದು, ಸಚಿವ ಸಂಪುಟ ವಿಸ್ತರಣೆ ಬಳಿಕ 2ನೇ ಆಪರೇಷನ್‍ಗೆ ಕೈ ಹಾಕುವ ಸಾಧ್ಯತೆ ಹೆಚ್ಚಿವೆ.

    ಈ ಕುರಿತು ಬಿಜೆಪಿ ಸೇರುವ ಬಗ್ಗೆ ಮಾತನಾಡಿದ್ದ ಸುರೇಶ್ ಗೌಡ ಅವರು ಈ ಸುದ್ದಿಯನ್ನು ಅಲ್ಲಗೆಳೆದಿದ್ದರು. ಅಲ್ಲದೇ ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಎಲ್ಲರೊಂದಿಗೂ ಸ್ನೇಹದಿಂದ ಇರುವುದಾಗಿ ಹೇಳಿದ್ದರು. ನನಗೆ ಆಫರ್ ಬಂದಿತ್ತು ಎಂದಷ್ಟೇ ನಾನು ಹೇಳಿದ್ದೇನೆ. ಆದರೆ ಪಕ್ಷ ಬಿಡುವುದಿಲ್ಲ, ಮೈತ್ರಿ ಸರ್ಕಾರ ಬಿದ್ದು ಹೋದ ಬಳಿಕ ನಾವ್ಯಾಕೆ ಬಿಜೆಪಿಗೆ ಹೋಗಲಿಲ್ಲ ಅನಿಸುತ್ತಿತ್ತು. ಆದರೆ ಇದೀಗ ಅನರ್ಹ ಶಾಸಕರ ಬಗ್ಗೆ ಆತ್ಮಾವಲೋಕನ ಮಾಡಿಕೊಂಡರೆ ನಾವು ತೆಗೆದುಕೊಂಡ ನಿರ್ಧಾರವೇ ಸರಿ ಎಂದನಿಸುತ್ತಿದೆ ಎಂದು ಸುರೇಶ್ ಗೌಡ ಹೇಳಿದ್ದರು. ಆದರೆ ಕೆಲ ದಿನಗಳ ಹಿಂದೆಯಷ್ಟೇ ಕ್ಷೇತ್ರಕ್ಕೆ ಭೇಟಿ ನೀಡಿದ್ದ ಬಿಎಸ್‍ವೈ ಅವರ ಕಾಲಿಗೆ ಸುರೇಶ್ ಗೌಡ ಅವರು ನಮಸ್ಕರಿಸಿ ಅಚ್ಚರಿ ಮೂಡಿಸಿದ್ದರು.

    ಜೆಡಿಎಸ್ ಸೇರ್ಪಡೆಯಾಗುವ ಸುದ್ದಿ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ರವೀಂದ್ರ ಶ್ರೀಕಂಠಯ್ಯ ಅವರು, ಈ ಬಾರಿಯ ಚುನಾವಣೆಯಲ್ಲಿ ನಾನು ಎಚ್‍ಡಿಕೆ ಅವರ ನೇತ್ರತ್ವದಲ್ಲಿ ಗೆದ್ದು ಬಂದಿದ್ದೇನೆ. ಯಾವುದೇ ಕಾರಣಕ್ಕೂ ನಾನು ಶಾಸಕ ಸ್ಥಾನ ಕೊನೆಯಾಗುವ ಅವಧಿಯವರೆಗೂ ಪಕ್ಷ ಬಿಡುವ ನಿರ್ಧಾರ ಮಾಡಲ್ಲ. ಕುಮಾರಸ್ವಾಮಿ ಅವರ ಮನಸ್ಸಿಗೆ ನೋವುಂಟು ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

  • ಆಪರೇಷನ್ ಕಮಲ ಪಾರ್ಟ್-2 ಗಾಳಕ್ಕೆ ಸಿಲುಕಿದ್ರಾ ನಾಗೇಂದ್ರ?

    ಆಪರೇಷನ್ ಕಮಲ ಪಾರ್ಟ್-2 ಗಾಳಕ್ಕೆ ಸಿಲುಕಿದ್ರಾ ನಾಗೇಂದ್ರ?

    ಬಳ್ಳಾರಿ: ಶತಾಯಗತಾಯ ಹೇಗಾದ್ರೂ ಮಾಡಿ ಮುಖ್ಯಮಂತ್ರಿ ಪಟ್ಟಕ್ಕೆ ಏರಲೇಬೇಕು ಅಂತ ಪಟ್ಟು ಹಿಡಿದು, ಸುಮಾರು 8 ಬಾರಿ ಆಪರೇಷನ್ ಕಮಲ ಮಾಡುವ ಮೂಲಕ ಬಿಎಸ್‍ವೈ ಸಿಎಂ ಆಗಿಯೇ ಬಿಟ್ಟರು. 17 ಜನ ಶಾಸಕರ ರಾಜೀನಾಮೆ ಕೊಡಿಸುವ ಮೂಲಕ ಮೊದಲ ಹಂತದ ಆಪರೇಷನ್ ಕಮಲ ಮಾಡಿದ್ರು. ಆದರೆ ರಾಜೀನಾಮೆ ಕೊಟ್ಟು ಮತ್ತೊಂದು ಚುನಾವಣೆ ಈಗ ಆರಂಭ ಆಗಿದೆ. ಒಂದು ವೇಳೆ ಉಪ ಚುನಾವಣೆಯಲ್ಲಿ ಸೋತರೆ ಈ ರಾಜ್ಯದ ಜನತೆ ಮತ್ತೊಂದು ಆಪರೇಷನ್ ಕಮಲ ನೋಡುವುದು ಪಕ್ಕಾ ಆಗಿದೆ.

    ಮಾಜಿ ಸಿಎಂ ಸಿದ್ದರಾಮಯ್ಯ ಗುರುವಾರವಷ್ಟೇ ವಿಜಯನಗರ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ಮಾಡಿದರು. ಆದರೆ ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕೈ ಶಾಸಕ ಬಿ ನಾಗೇಂದ್ರ ಮಾತ್ರ ಎಲ್ಲೂ ಕಾಣಿಸಿಕೊಳ್ಳಲಿಲ್ಲ. ಕೈ ಪಕ್ಷದಿಂದ ಬೇಕಂತಲೇ ಅಂತರ ಕಾಯ್ದುಕೊಳ್ತಿದ್ದಾರೆ. ತಮಗೂ ಚುನಾವಣೆಗೂ ಸಂಬಂಧವೇ ಇಲ್ಲ ಎಂಬಂತೆ ವರ್ತಿಸುತ್ತಿದ್ದಾರೆ. ನಾಗೇಂದ್ರ ಅವರ ಈ ನಡೆ ಹಲವು ಅನುಮಾನಗಳಿಗೆ ಎಡೆ ಮಾಡಿ ಕೊಟ್ಟಿದೆ.

    ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲ ನಡೆಯುತ್ತಾ, ಉಪ ಫಲಿತಾಂಶದ ಮೇಲೆ ಆಪರೇಷನ್ ನಿಂತಿದ್ಯಾ, ಅಥವಾ ಒಳಗೊಳಗೆ ಆಪರೇಷನ್ ಕಮಲ ತಯಾರಿ ನಡೆದಿದ್ಯಾ ಎಂಬ ಪ್ರಶ್ನೆಗಳು ನಾಗೇಂದ್ರ ಅವ್ರ ನಡವಳಿಕೆಯಿಂದ ಉದ್ಭವಿಸುತ್ತವೆ. ಸಿಎಂ ಏನೋ ಬಂದಲ್ಲಿ ಹೋದಲ್ಲಿ 15ಕ್ಕೆ 15 ಸೀಟ್ ಗೆಲ್ಲೋದು ಪಕ್ಕಾ ಅಂತಿದ್ದಾರೆ. ಆದರೂ ಬಿಜೆಪಿ ನಾಯಕರಿಗೆ ಒಳಗೊಳಗೆ ಒಂಥರಾ ಭಯ ಆರಂಭವಾಗಿದೆ. ಒಂದು ವೇಳೆ ಸರ್ಕಾರಕ್ಕೆ ಅಗತ್ಯವಿರುವ ಸ್ಥಾನಗಳನ್ನು ಗೆಲ್ಲಲು ಆಗದಿದ್ದರೆ ಮತ್ತೊಂದು ಸುತ್ತಿನ ಆಪರೇಷನ್ ಕಮಲಕ್ಕೆ ಸ್ಕೆಚ್ ಹಾಕಿದ್ದಾರೆ. ಬಿಜೆಪಿಗೆ ಜಿಗಿಯಲು ನಾಗೇಂದ್ರ ಕೂಡ ರೆಡಿ ಆಗುತ್ತಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.