Tag: ಆಪರೇಷನ್‌ ಸಿಂಧೂರ

  • ʼಪಾಕ್‌ ಸೆರೆ ಹಿಡಿದʼ ರಫೇಲ್‌ ಪೈಲಟ್‌ ಜೊತೆ ಫೋಟೋ ಕ್ಲಿಕ್ಕಿಸಿದ ದ್ರೌಪದಿ ಮುರ್ಮು!

    ʼಪಾಕ್‌ ಸೆರೆ ಹಿಡಿದʼ ರಫೇಲ್‌ ಪೈಲಟ್‌ ಜೊತೆ ಫೋಟೋ ಕ್ಲಿಕ್ಕಿಸಿದ ದ್ರೌಪದಿ ಮುರ್ಮು!

    ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು (President Droupadi Murmu) ಅವರು ಸ್ಕ್ವಾಡ್ರನ್ ಲೀಡರ್ ಶಿವಾಂಗಿ ಸಿಂಗ್ (Squadron Leader Shivangi Singh) ಅವರ ಜೊತೆ ಫೋಟೋ ತೆಗೆಸಿಕೊಳ್ಳುವ ಮೂಲಕ ಪಾಕಿಸ್ತಾನಕ್ಕೆ ಟಾಂಗ್‌ ಕೊಟ್ಟಿದ್ದಾರೆ.

    ಸಶಸ್ತ್ರ ಪಡೆಗಳ ಅಧ್ಯಕ್ಷೆ ಮತ್ತು ಸುಪ್ರೀಂ ಕಮಾಂಡರ್ ಆಗಿರುವ 67 ವರ್ಷದ ದ್ರೌಪದಿ ಮುರ್ಮು ಅವರು ಇಂದು ಹರ್ಯಾಣದ ಅಂಬಾಲಾ ವಾಯುನೆಲೆಗೆ ತೆರಳಿ ರಫೇಲ್‌ ಯುದ್ಧ ವಿಮಾನದಲ್ಲಿ (Rafale Fighter Jet) ಹಾರಾಟ ನಡೆಸಿದರು. ಹಾರಾಟ ನಡೆಸಿದ ಬಳಿಕ ಶಿವಾಂಗಿ ಸಿಂಗ್ ಅವರ ಜೊತೆ ದ್ರೌಪದಿ ಮುರ್ಮು ಫೋಟೋ ಕ್ಲಿಕ್ಕಿಸಿದರು.


    ಯಾರಿದು ಶಿವಾಂಗಿ ಸಿಂಗ್‌?
    ಆಪರೇಷನ್‌ ಸಿಂಧೂರದ (Operation Sindoor) ಸಮಯದಲ್ಲಿ ಪಾಕಿಸ್ತಾನ (Pakistan) ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸುಳ್ಳು ಸುದ್ದಿಗಳನ್ನು ಪ್ರಕಟಿಸುತ್ತಿತ್ತು. ಅದರಲ್ಲಿ ಶಿವಾಂಗಿ ಸಿಂಗ್ ಅವರನ್ನು ನಾವು ಸೆರೆ ಹಿಡಿದಿದ್ದೇವೆ ಎಂದು ಹೇಳಿತ್ತು. ಪತನಗೊಂಡ ರಫೇಲ್‌ ಯುದ್ಧ ವಿಮಾನದಿಂದ ಹಾರಿದ್ದ ಶಿವಾಂಗಿ ಸಿಂಗ್‌ ಅವರನ್ನು ನಾವು ಸೆರೆ ಹಿಡಿದಿದ್ದೇವೆ ಎಂದು ಹೇಳಿತ್ತು. ಇದನ್ನೂ ಓದಿರಫೇಲ್‌ನಲ್ಲಿ ಹಾರಾಟ ನಡೆಸಿ ದಾಖಲೆ ಬರೆದ ರಾಷ್ಟ್ರಪತಿ ದ್ರೌಪದಿ ಮುರ್ಮು

    ಭಾರತ ಇದಕ್ಕೆ ಪ್ರತಿಕ್ರಿಯಿಸಿ ನಮ್ಮ ಯಾವುದೇ ಪೈಲಟ್‌ಗಳನ್ನು ಪಾಕಿಸ್ತಾನ ಸೆರೆ ಹಿಡಿದಿಲ್ಲ. ಕಾರ್ಯಾಚರಣೆ ನಡೆಸಿ ನಮ್ಮ ಎಲ್ಲಾ ಪೈಲಟ್‌ಗಳು ಸುರಕ್ಷಿತವಾಗಿ ಮರಳಿದ್ದಾರೆ ಎಂದು ತಿಳಿಸಿತ್ತು.

    2023ರ ಏಪ್ರಿಲ್ 8ರಂದು ಅಸ್ಸಾಂನ ತೇಜ್‌ಪುರ ಏರ್‌ಬೇಸ್‌ನಲ್ಲಿ ಸುಖೋಯ್ -30 ಯುದ್ಧ ವಿಮಾನದಲ್ಲಿ ದ್ರೌಪದಿ ಮುರ್ಮು ಹಾರಾಟ ನಡೆಸಿದ್ದರು. ಇದಕ್ಕೂ ಮುನ್ನ ಭಾರತದ ಮಾಜಿ ರಾಷ್ಟ್ರಪತಿಗಳಾದ ಪ್ರತಿಭಾ ಪಾಟೀಲ್ ಮತ್ತು ಅಬ್ದುಲ್ ಕಲಾಂ ಅವರು ಸುಖೋಯ್-30 ಫೈಟರ್ ಜೆಟ್‌ಗಳಲ್ಲಿ ಹಾರಾಟ ನಡೆಸಿದ್ದರು.

    `ಆಪರೇಷನ್ ಸಿಂಧೂರ’ದ (Operation Sindoor) ವೇಳೆ ಅಂಬಾಲಾ ಏರ್‌ಬೇಸ್‌ನಿಂದ ಟೇಕಾಫ್ ಆದ ನಮ್ಮ ಫೈಟರ್ ಜೆಟ್‌ಗಳು ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳ ಮೇಲೆ ಏರ್‌ಸ್ಟ್ರೈಕ್‌ ಮಾಡಿದ್ದವು.

  • ನಾಳೆ ರಫೇಲ್‌ನಲ್ಲಿ ಹಾರಲಿದ್ದಾರೆ ರಾಷ್ಟ್ರಪತಿ ಮುರ್ಮು

    ನಾಳೆ ರಫೇಲ್‌ನಲ್ಲಿ ಹಾರಲಿದ್ದಾರೆ ರಾಷ್ಟ್ರಪತಿ ಮುರ್ಮು

    – ರಫೇಲ್ ಏರಿದ ಮೊದಲ ರಾಷ್ಟ್ರಪತಿ

    ಚಂಡೀಗಢ: ಭಾರತೀಯ ಸಶಸ್ತ್ರ ಪಡೆಗಳ ಸುಪ್ರೀಂ ಕಮಾಂಡರ್ ಆಗಿರುವ ರಾಷ್ಟ್ರಪತಿ ದ್ರೌಪದಿ (Droupadi Murmu) ಮುರ್ಮು ಬುಧವಾರ (ಅ.29) ರಫೇಲ್ ಫೈಟರ್ ಜೆಟ್‌ನಲ್ಲಿ (Rafale Fighter Jet) ಹಾರಾಟ ನಡೆಸಲಿದ್ದಾರೆ.

    67 ವರ್ಷದ ದ್ರೌಪದಿ ಮುರ್ಮು ಬುಧವಾರ (ಅ.29) ಹರಿಯಾಣದ ಅಂಬಾಲಾ ಏರ್‌ಬೇಸ್‌ಗೆ (Ambala Airbase) ತೆರಳಿ ಅಲ್ಲಿ ರಫೇಲ್ ಫೈಟರ್ ಜೆಟ್‌ನಲ್ಲಿ ಹಾರಾಟ ನಡೆಸಲಿದ್ದಾರೆ. ಈ ಮೂಲಕ ಮೊದಲ ಬಾರಿಗೆ ರಫೇಲ್ ಏರಿದ ರಾಷ್ಟ್ರಪತಿ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.ಇದನ್ನೂ ಓದಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೀತಿಪಾಠ: ಪ್ರಹ್ಲಾದ್ ಜೋಶಿ

    ಈ ಮೊದಲು 2023ರ ಏಪ್ರಿಲ್ 8ರಂದು ಅಸ್ಸಾಂನ ತೇಜ್‌ಪುರ ಏರ್‌ಬೇಸ್‌ನಲ್ಲಿ ಸುಖೋಯ್ -30 ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದರು. ಇದಕ್ಕೂ ಮುನ್ನ ಭಾರತದ ಮಾಜಿ ರಾಷ್ಟ್ರಪತಿಗಳಾದ ಶ್ರೀಮತಿ ಪ್ರತಿಭಾ ಪಾಟೀಲ್ ಮತ್ತು ಅಬ್ದುಲ್ ಕಲಾಂ ಅಬ್ದುಲ್ ಅವರು ಸುಖೋಯ್-30 ಫೈಟರ್ ಜೆಟ್‌ಗಳಲ್ಲಿ ಹಾರಾಟ ನಡೆಸಿದ್ದರು.

    `ಆಪರೇಷನ್ ಸಿಂಧೂರ’ದ (Operation Sindoor) ವೇಳೆ ಅಂಬಾಲಾ ಏರ್‌ಬೇಸ್‌ನಿಂದ ಟೇಕಾಫ್ ಆದ ನಮ್ಮ ಫೈಟರ್ ಜೆಟ್‌ಗಳು ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳ ಮೇಲೆ ಏರ್‌ಸ್ಟ್ರೈಕ್‌ ಮಾಡಿದ್ದವು.ಇದನ್ನೂ ಓದಿ:ಮೊಂಥಾ ಎಫೆಕ್ಟ್: 100ಕ್ಕೂ ಹೆಚ್ಚು ರೈಲುಗಳು, 35 ವಿಮಾನಗಳ ಹಾರಾಟ ರದ್ದು

     

  • ಐಎನ್‌ಎಸ್‌ ವಿಕ್ರಾಂತ್‌ ಪಾಕ್‌ಗೆ ನಿದ್ರೆಯಿಲ್ಲದಂತೆ ಮಾಡಿತು, ಬ್ರಹ್ಮೋಸ್‌ ತನ್ನ ಸಾಮರ್ಥ್ಯ ತೋರಿತು – ನರೇಂದ್ರ ಮೋದಿ

    ಐಎನ್‌ಎಸ್‌ ವಿಕ್ರಾಂತ್‌ ಪಾಕ್‌ಗೆ ನಿದ್ರೆಯಿಲ್ಲದಂತೆ ಮಾಡಿತು, ಬ್ರಹ್ಮೋಸ್‌ ತನ್ನ ಸಾಮರ್ಥ್ಯ ತೋರಿತು – ನರೇಂದ್ರ ಮೋದಿ

    – ನೌಕಾಪಡೆ ಸೈನಿಕರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ

    ಪಣಜಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದು ಗೋವಾ ಕರಾವಳಿಯಲ್ಲಿ (Goa Coast) ಭಾರತೀಯ ನೌಕಾಪಡೆಯೊಂದಿಗೆ ದೀಪಾವಳಿ ಆಚರಿಸಿದರು. ಗೋವಾದ ಕಾರವಾರ ಕರಾವಳಿಯಲ್ಲಿರುವ ಐಎನ್ಎಸ್ ವಿಕ್ರಾಂತ್‌ಗೆ ಭೇಟಿ ನೀಡಿದ ಅವರು ನೌಕಾಪಡೆ ಸೇನಾ ಸಿಬ್ಬಂದಿಗೆ ಸಿಹಿ ತಿನ್ನಿಸುವ ಮೂಲಕ ದೀಪಾವಳಿ ಆಚರಿಸಿದ್ರು. ಈ ವೇಳೆ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯಲ್ಲಿ ಐಎನ್‌ಎಸ್‌ ವಿಕ್ರಾಂತ್‌ ಹಾಗೂ ಬ್ರಹ್ಮೋಸ್‌ (BrahMos), ಆಕಾಶ್‌ ಕ್ಷಿಪಣಿಗಳ ಸಾಮರ್ಥ್ಯವನ್ನು ಕೊಂಡಾಡಿದರು.

    ಇಂದು ಅದ್ಭುತ ದಿನ, ಈ ದೃಶ್ಯ ಅವಿಸ್ಮರಣೀಯ. ಈ ದಿನ ನನ್ನ ಬಳಿ ಒಂದು ಕಡೆ ಸಾಗರವಿದೆ, ಮತ್ತೊಂದೆಡೆ ಭಾರತ ಮಾತೆಯ ವೀರ ಸೈನಿಕರ ಬಲವಿದೆ. ಇನ್ನೊಂದೆಡೆ ಅನಂತ ದಿಗಂತ, ಅನಂತ ಆಕಾಶ ಹಾಗೂ ಅನಂತ ಶಕ್ತಿಯ ಸಂಕೇತವಾದ ಐಎನ್ಎಸ್ ವಿಕ್ರಾಂತ್ (INS Vikrant) ಇದೆ. ಸಾಗರ ನೀರಿನ ಮೇಲೆ ಹೊಳೆಯುವ ಸೂರ್ಯನ ಕಿರಣಗಳು ವೀರ ಸೈನಿಕರು ಬೆಳಗಿದ ದೀಪಾವಳಿ ದೀಪಗಳಂತೆ ಎಂದು ಪ್ರಧಾನಿ ಮೋದಿ ಬಣ್ಣಿಸಿದರು.

    ನೌಕಾಪಡೆಯ ಎಲ್ಲಾ ವೀರ ಸೈನಿಕರೊಂದಿಗೆ ಪವಿತ್ರ ಹಬ್ಬ ದೀಪಾವಳಿ (Deepavali Festival) ಆಚರಿಸುತ್ತಿರುವುದು ನನ್ನ ಅದೃಷ್ಟ. ಐಎನ್ಎಸ್ ವಿಕ್ರಾಂತ್ ಸ್ವಾವಲಂಬಿ ಭಾರತದ ಸಂಕೇತ, ನಾನು ನಮ್ಮ ಸಶಸ್ತ್ರ ಪಡೆಗಳಿಗೆ ವಿಶೇಷವಾಗಿ ವಂದನೆಗಳನ್ನು ಸಲ್ಲಿಸುತ್ತೇನೆ. ಏಕೆಂದ್ರೆ ಈ ಮೂರು ಪಡೆಗಳ ಪ್ರಚಂಡ ಸಮನ್ವಯವು ಪಾಕಿಸ್ತಾನವನ್ನು (Pakistan) ಆಪರೇಷನ್ ಸಿಂಧೂರದಲ್ಲಿ ಶರಣಾಗುವಂತೆ ಮಾಡಿತು. ಬ್ರಹ್ಮೋಸ್‌ ಆಕಾಶ್‌ ನಂತರ ಕ್ಷಿಪಣಿಗಳು ಆಪರೇಷನ್‌ ಸಿಂಧೂರದಲ್ಲಿ ತಮ್ಮ ಸಾಮರ್ಥ್ಯವನ್ನ ಸಾಬೀತುಪಡಿಸಿವೆ. ಹೀಗಿ ಇಂದು ಪ್ರಪಂಚದಾದ್ಯಂತ ಹಲವಾರು ದೇಶಗಳು ಈಗ ಬ್ರಹ್ಮೋಸ್‌ ಕ್ಷಿಪಣಿ ಖರೀದಿಸಲು ಆಸಕ್ತಿ ತೋರಿವೆ ಎಂದು ಮೋದಿ ಹೇಳಿದರು.

    ನಾನು ಮಿಲಿಟರಿ ಉಪಕರಣಗಳ ಶಕ್ತಿಯನ್ನು ನೋಡುತ್ತಿದ್ದೆ, ಈ ಬೃಹತ್ ಹಡಗುಗಳು, ಗಾಳಿಗಿಂತಲೂ ವೇಗವಾಗಿ ಹಾರುವ ವಿಮಾನಗಳು, ಜಲಾಂತರ್ಗಾಮಿ ನೌಕೆಗಳು ಅವು ತಮ್ಮಲ್ಲಿಯೇ ಪ್ರಭಾವಶಾಲಿಯಾಗಿವೆ. ಇದರ ಜೊತೆಗೆ ಅವುಗಳನ್ನು ನಿರ್ವಹಿಸುವವರ ಶೌರ್ಯ ಸಾಹಸ, ಅವುಗಳನ್ನು ಇನ್ನಷ್ಟು ಶಕ್ತಿಶಾಲಿಯಾಗಿ ಮಾಡುತ್ತವೆ. ಉದಾಹರಣೆಗೆ ಈ ಹಡಗುಗಳು ಕಬ್ಬಿಣದಿಂದಲೇ ಮಾಡಿರಬಹುದು ಆದ್ರೆ, ನೀವು ಹತ್ತಿದಾಗ ಅವು ಜೀವಂತ ಹಾಗೂ ಉಸಿರಾಟ ಇರುವ ಶಕ್ತಿಶಾಲಿ ಅಸ್ತ್ರಗಳಾಗಿ ಬದಲಾಗುತ್ತವೆ ಎಂದು ಸೈನಿಕರನ್ನ ಶೌರ್ಯವನ್ನು ಹಾಡಿಹೊಗಳಿದರು.

    2014ರಲ್ಲಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಾಗಿನಿಂದ ಪ್ರಧಾನಿ ಮೋದಿ ಅವರು ಸಶಸ್ತ್ರ ಪಡೆಗಳ ಸೈನಿಕರೊಂದಿಗೆ ದೀಪಾವಳಿಯನ್ನು ಆಚರಿಸುತ್ತಿದ್ದಾರೆ. 2014ರಲ್ಲಿ ಲಡಾಖ್‌ನಲ್ಲಿರುವ ಸಿಯಾಚಿನ್ ಹಿಮನದಿಗೆ ಭೇಟಿ ನೀಡಿದ್ದರು. 2015 ರಲ್ಲಿ, ಅವರು 1965ರ ಭಾರತ-ಪಾಕಿಸ್ತಾನ ಯುದ್ಧದ ವೀರರಿಗೆ ಗೌರವ ಸಲ್ಲಿಸಲು ಪಂಜಾಬ್‌ನ ಅಮೃತಸರದಲ್ಲಿರುವ ಡೋಗ್ರೈ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದರು. 2016 ರಲ್ಲಿ, ದೀಪಾವಳಿಯಂದು ಹಿಮಾಚಲ ಪ್ರದೇಶದ ಭಾರತ-ಚೀನಾ ಗಡಿಯ ಬಳಿ ಗಡಿ ಭದ್ರತಾ ಪಡೆ ಮತ್ತು ಸೇನಾ ಸಿಬ್ಬಂದಿಯನ್ನು ಭೇಟಿ ಮಾಡಿದರು. 2017ರಲ್ಲಿ ಜಮ್ಮು ಮತ್ತು ಕಾಶ್ಮೀರದ ಗುರೆಜ್ ವಲಯದಲ್ಲಿ ಭದ್ರತಾ ಪಡೆಗಳನ್ನು ಭೇಟಿ ಮಾಡಿದರು. 2018 ರಲ್ಲಿ, ಪ್ರಧಾನಿಯವರು ಉತ್ತರಾಖಂಡದ ಹರ್ಷಿಲ್‌ನಲ್ಲಿ ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಸಿಬ್ಬಂದಿಯೊಂದಿಗೆ ದೀಪಾವಳಿಯನ್ನು ಕಳೆದರು. 2019 ರಲ್ಲಿ, ಅವರು ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ಸೈನಿಕರನ್ನು ಭೇಟಿ ಮಾಡಿದರು.

    2020ರಲ್ಲಿ, ಪ್ರಧಾನ ಮಂತ್ರಿಗಳು ರಾಜಸ್ಥಾನದ ಜೈಸಲ್ಮೇರ್‌ನ ಲೋಂಗೆವಾಲಾದಲ್ಲಿದ್ದರು. 2021 ರಲ್ಲಿ, ಪ್ರಧಾನ ಮಂತ್ರಿಗಳು ಜಮ್ಮು ಮತ್ತು ಕಾಶ್ಮೀರದ ನೌಶೇರಾದಲ್ಲಿ ಸೈನಿಕರೊಂದಿಗೆ ದೀಪಾವಳಿಯನ್ನು ಆಚರಿಸಿದರು. 2022 ರಲ್ಲಿ, ಪ್ರಧಾನ ಮಂತ್ರಿ ಮೋದಿ ಹುತಾತ್ಮರಿಗೆ ಗೌರವ ಸಲ್ಲಿಸಲು ಕಾರ್ಗಿಲ್‌ಗೆ ಭೇಟಿ ನೀಡಿದರು. 2023 ಮತ್ತು 2024 ರಲ್ಲಿ, ಅವರು ಹಿಮಾಚಲ ಪ್ರದೇಶದ ಲೆಪ್ಚಾ ಮತ್ತು ಗುಜರಾತ್‌ನ ಸರ್ ಕ್ರೀಕ್‌ನಲ್ಲಿ ನಿಯೋಜಿಸಲಾದ ಸೈನಿಕರೊಂದಿಗೆ ದೀಪಾವಳಿಯನ್ನು ಆಚರಿಸಿದ್ದರು.

  • ಪಾಕ್‌ನ ಪ್ರತಿಯೊಂದು ಭೂಪ್ರದೇಶ ಈಗ ಬ್ರಹ್ಮೋಸ್‌ನ ವ್ಯಾಪ್ತಿಯಲ್ಲಿದೆ – ರಾಜನಾಥ್ ಸಿಂಗ್

    ಪಾಕ್‌ನ ಪ್ರತಿಯೊಂದು ಭೂಪ್ರದೇಶ ಈಗ ಬ್ರಹ್ಮೋಸ್‌ನ ವ್ಯಾಪ್ತಿಯಲ್ಲಿದೆ – ರಾಜನಾಥ್ ಸಿಂಗ್

    ಲಕ್ನೋ: ಪಾಕಿಸ್ತಾನದ ಪ್ರತಿಯೊಂದು ಭೂಪ್ರದೇಶವೂ ಈಗ ನಮ್ಮ ಬ್ರಹ್ಮೋಸ್‌ನ ವ್ಯಾಪ್ತಿಯಲ್ಲಿದೆ. `ಆಪರೇಷನ್ ಸಿಂಧೂರ’ (Operation Sindoor) ಸಮಯದಲ್ಲಿ ಬ್ರಹ್ಮೋಸ್ ಕ್ಷಿಪಣಿ ವ್ಯವಸ್ಥೆಯ ಮೂಲಕ ಭಾರತ ತನ್ನ ಶತ್ರುಗಳನ್ನು ಬಿಡುವುದಿಲ್ಲ ಎಂಬುದನ್ನು ಸಾಬೀತುಪಡಿಸಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಹೇಳಿದರು.

    ಉತ್ತರ ಪ್ರದೇಶದ (Uttara Pradesh) ಲಕ್ನೋದಲ್ಲಿರುವ ಬ್ರಹ್ಮೋಸ್ ಏರೋಸ್ಪೇಸ್ ಘಟಕದಲ್ಲಿ ತಯಾರಾದ ಬ್ರಹ್ಮೋಸ್ ಕ್ಷಿಪಣಿಗಳ ಮೊದಲ ಬ್ಯಾಚ್‌ಗೆ ಹಸಿರು ನಿಶಾನೆ ನೀಡಿದರು. ಬಳಿಕ ಮಾತನಾಡಿದ ಅವರು, `ಆಪರೇಷನ್ ಸಿಂಧೂರ’ ಇದು ಕೇವಲ `ಟ್ರೇಲರ್’ ಮಾತ್ರ ಎಂದು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದರು.ಇದನ್ನೂ ಓದಿ: ಪಾಕ್‌ನಲ್ಲಿರುವ ಆಫ್ಘನ್ನರಿಗೆ ದೇಶ ತೊರೆಯುವಂತೆ ರಕ್ಷಣಾ ಸಚಿವ ಖವಾಜಾ ವಾರ್ನಿಂಗ್‌

    ಆಪರೇಷನ್ ಸಿಂಧೂರ ಗೆಲುವು ಒಂದು ಸಣ್ಣ ಘಟನೆಯಲ್ಲ. ಗೆಲುವು ನಮಗೆ ಅಭ್ಯಾಸವಾಗಿದೆ, ನಮ್ಮ ವಿರೋಧಿಗಳು ಬ್ರಹ್ಮೋಸ್‌ನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ, ಬ್ರಹ್ಮೋಸ್ ಕೇವಲ ಕ್ಷಿಪಣಿಯಲ್ಲ, ಬದಲಾಗಿ ಭಾರತದ ಬೆಳೆಯುತ್ತಿರುವ ಸ್ಥಳೀಯ ಸಾಮರ್ಥ್ಯಗಳ ಸಂಕೇತವಾಗಿದೆ. ವೇಗ, ನಿಖರತೆ ಮತ್ತು ಶಕ್ತಿಯ ಈ ಸಂಯೋಜನೆಯು ಬ್ರಹ್ಮೋಸ್ ಅನ್ನು ವಿಶ್ವದ ಅತ್ಯುತ್ತಮ ಕ್ಷಿಪಣಿಗಳಲ್ಲಿ ಒಂದನ್ನಾಗಿ ಮಾಡುತ್ತಿದೆ. ಬ್ರಹ್ಮೋಸ್ ಭಾರತೀಯ ಸಶಸ್ತ್ರ ಪಡೆಗಳ ಬೆನ್ನೆಲುಬಾಗಿ ಮಾರ್ಪಟ್ಟಿದೆ. ಭಾರತ ತನ್ನ ಭದ್ರತಾ ಅಗತ್ಯಗಳನ್ನು ಪೂರೈಸುವ ಸಾಮರ್ಥ್ಯ ಹೊಂದಿದೆ ಎಂದು ತಿಳಿಸಿದರು.

    ನಂತರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತನಾಡಿ, ಭಾರತವು ಈಗ ತನ್ನ ಭದ್ರತಾ ಅಗತ್ಯಗಳನ್ನು ಮಾತ್ರವಲ್ಲದೆ ಪ್ರಪಂಚದಾದ್ಯಂತದ ತನ್ನ ಸ್ನೇಹಪರ ರಾಷ್ಟ್ರಗಳ ಭದ್ರತಾ ಅಗತ್ಯಗಳನ್ನು ಪೂರೈಸುವ ಸಾಮರ್ಥ್ಯವನ್ನು ಹೊಂದಿದೆ. ಲಕ್ನೋದ ಬ್ರಹ್ಮೋಸ್ ಏರೋಸ್ಪೇಸ್ ಘಟಕದಲ್ಲಿ ತಯಾರಾದ ಬ್ರಹ್ಮೋಸ್ ಕ್ಷಿಪಣಿಗಳ ಮೊದಲ ಬ್ಯಾಚ್‌ಗೆ ಚಾಲನೆ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ‘ಮೇಕ್ ಇನ್ ಇಂಡಿಯಾ’ ಪ್ರತಿಜ್ಞೆಯನ್ನು ಈಡೇರಿಸುವ ಅದೃಷ್ಟಶಾಲಿ ನಾನು. ಇದು ಆತ್ಮನಿರ್ಭರದ ಅಡಿಪಾಯ ಎಂದರು.ಇದನ್ನೂ ಓದಿ: ಪಂಜಾಬ್‌ | ಗರೀಬ್ ರಥ ಎಕ್ಸ್‌ಪ್ರೆಸ್ ರೈಲು ಬೋಗಿಗೆ ಬೆಂಕಿ – ಧಗಧಗಿಸಿದ ಜ್ವಾಲೆ; ಪ್ರಯಾಣಿಕರು ಸೇಫ್‌

  • Operation Sindoor| ಪಾಕಿನ 100ಕ್ಕೂ ಹೆಚ್ಚು ಸೈನಿಕರು ಸಾವನ್ನಪ್ಪಿದ್ದಾರೆ:DGMO

    Operation Sindoor| ಪಾಕಿನ 100ಕ್ಕೂ ಹೆಚ್ಚು ಸೈನಿಕರು ಸಾವನ್ನಪ್ಪಿದ್ದಾರೆ:DGMO

    ನವದೆಹಲಿ: ಆಪರೇಷನ್ ಸಿಂಧೂರ (Operation Sindoor) ಕಾರ್ಯಾಚರಣೆಯ ಸಂದರ್ಭದಲ್ಲಿ ಪಾಕಿಸ್ತಾನದ 100ಕ್ಕೂ ಹೆಚ್ಚು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಸೇನೆಯ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ (DGMO) ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ (Lt Gen Rajiv Ghai) ಹೇಳಿದ್ದಾರೆ.

    ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಗಳಿಗೆ ಸೈನ್ಯವನ್ನು ಕೊಡುಗೆ ನೀಡುವ 34 ರಾಷ್ಟ್ರಗಳ ಸೇನಾ ಮುಖ್ಯಸ್ಥರ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದ ಅವರು, ಪಾಕಿಸ್ತಾನಕ್ಕೆ ಭಾರೀ ಪ್ರಮಾಣದ ಮಿಲಿಟರಿ ನಷ್ಟವನ್ನು ಅನುಭವಿಸಿದೆ. ನಾಲ್ಕು ದಿನಗಳ ಸಂಘರ್ಷದ ಸಮಯದಲ್ಲಿ ಪಾಕಿಸ್ತಾನದ(Pakistan) ಕನಿಷ್ಠ 12 ವಿಮಾನಗಳನ್ನು ಕಳೆದುಕೊಂಡಿದೆ ಎಂದು ತಿಳಿಸಿದರು. ಇದನ್ನೂ ಓದಿ:  ಟಾಟಾ ಮೋಟಾರ್ಸ್ ಷೇರು ಮೌಲ್ಯ 40% ಕುಸಿತವಾದ್ರೂ ಆತಂಕ ಪಡೋ ಅಗತ್ಯವಿಲ್ಲ: ನಿಜವಾಗಿ ಆಗಿದ್ದೇನು?

    ಸಾವುನೋವುಗಳಿಗೆ ಸಾಕ್ಷಿಯಾಗಿ ಪಾಕಿಸ್ತಾನದ ಮರಣೋತ್ತರ ಮಿಲಿಟರಿ ಪ್ರಶಸ್ತಿಗಳ ಪಟ್ಟಿಯನ್ನು ಉಲ್ಲೇಖಿಸಿದ ಅವರು, ಆಗಸ್ಟ್ 14 ರಂದು ಪಾಕಿಸ್ತಾನವು ತಿಳಿಯದೆಯೇ ಈ ಪ್ರಶಸ್ತಿ ಪಟ್ಟಿಯನ್ನು ಬಿಡುಗಡೆ ಮಾಡಿರಬಹುದು. ಅವರು ನೀಡಿದ ಮರಣೋತ್ತರ ಪ್ರಶಸ್ತಿಗಳ ಸಂಖ್ಯೆಯಿಂದ ಗಡಿಯಲ್ಲಿ ಸಾವನ್ನಪ್ಪಿದ ಸೈನಿಕರ ಸಂಖ್ಯೆ 100 ಕ್ಕಿಂತ ಹೆಚ್ಚಿವೆ ಎಂಬುದನ್ನು ಸೂಚಿಸುತ್ತಿವೆ ಎಂದರು.

    ನಾವು ಭಯೋತ್ಪಾದಕರ ನೆಲೆಗಳನ್ನು ಗುರಿಯಾಗಿಸಿ ದಾಳಿ ಮಾಡಿದ್ದೆವು. ಆದರೆ ಪಾಕಿಸ್ತಾನ ಈ ದಾಳಿಗೆ ಪ್ರತಿಯಾಗಿ ನಮ್ಮ ಸೇನಾ ನೆಲೆಗಳನ್ನು ಗುರಿಯಾಗಿಸಿ ದಾಳಿ ನಡೆಸಿದ್ದಕ್ಕೆ ಪ್ರತಿ ದಾಳಿ ನಡೆಸಿದೆವು. ನಾವು ಅವರ 11 ವಾಯು ನೆಲೆಗಳನ್ನು ಹೊಡೆದು ಹಾಕಿದ್ದೇವೆ. ನಾಲ್ಕು ರಾಡಾರ್‌ಗಳನ್ನು ಧ್ವಂಸ ಮಾಡಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ:  ಬಿಹಾರ ಚುನಾವಣೆಗೆ 71 ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದ ಬಿಜೆಪಿ – ಸ್ಪೀಕರ್‌ಗೆ ಕೊಟ್ಟಿಲ್ಲ ಟಿಕೆಟ್

    ಭಯೋತ್ಪಾದಕ ದಾಳಿ ನಡೆದರೆ ನಿರ್ಣಾಯಕ ಪ್ರತೀಕಾರ ಇರುತ್ತದೆ. ನಾವು ಪರಮಾಣು ಬ್ಲ್ಯಾಕ್‌ಮೇಲ್‌ಗೆ ಬಲಿಯಾಗುವುದಿಲ್ಲ. ಭಯೋತ್ಪಾದಕರು ಮತ್ತು ಭಯೋತ್ಪಾದನೆಯ ಪ್ರಾಯೋಜಕರ ನಡುವೆ ಯಾವುದೇ ವ್ಯತ್ಯಾಸವಿಲ್ಲ. ಮೂರು ವಿಚಾರದ ಬಗ್ಗೆ ಪ್ರಧಾನಿಯವರು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದಾರೆ ಎಂದರು.

  • ಭಯೋತ್ಪಾದಕ ಗುಂಪು ಜೆಇಎಂ ಮಹಿಳಾ ವಿಭಾಗ ಆರಂಭ – ‘ಆಪರೇಷನ್‌ ಸಿಂಧೂರ’ದಲ್ಲಿ ಗಂಡನ ಕಳೆದುಕೊಂಡ ಮಹಿಳೆಗೆ ಚುಕ್ಕಾಣಿ

    ಭಯೋತ್ಪಾದಕ ಗುಂಪು ಜೆಇಎಂ ಮಹಿಳಾ ವಿಭಾಗ ಆರಂಭ – ‘ಆಪರೇಷನ್‌ ಸಿಂಧೂರ’ದಲ್ಲಿ ಗಂಡನ ಕಳೆದುಕೊಂಡ ಮಹಿಳೆಗೆ ಚುಕ್ಕಾಣಿ

    – ಮಹಿಳಾ ವಿಂಗ್‌ ಮುನ್ನಡೆಸಲಿರೋ ಮಸೂದ್‌ ಅಜರ್‌ ಸಹೋದರಿ

    ಇಸ್ಲಾಮಾಬಾದ್: ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಜೈಶ್-ಎ-ಮೊಹಮ್ಮದ್ (Jaish-e-Mohammed) ತನ್ನ ಮೊದಲ ಮಹಿಳಾ ವಿಭಾಗ ‌’ಜಮಾತ್-ಉಲ್-ಮೊಮಿನಾತ್’ ಅನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ.

    ಜೆಇಎಂ ಮುಖ್ಯಸ್ಥ ಮತ್ತು ಭಯೋತ್ಪಾದಕ ಮೌಲಾನಾ ಮಸೂದ್ ಅಜರ್ (Masood Azhar) ಹೆಸರಿನಲ್ಲಿ ನೀಡಲಾದ ಪತ್ರದ ಮೂಲಕ ಈ ನಡೆಯನ್ನು ಬಹಿರಂಗಪಡಿಸಲಾಗಿದೆ. ಹೊಸ ಘಟಕಕ್ಕೆ ನೇಮಕಾತಿ ಅ.8 ರಂದು ಪಾಕಿಸ್ತಾನದ ಬಹವಾಲ್ಪುರದ ಮರ್ಕಜ್ ಉಸ್ಮಾನ್-ಒ-ಅಲಿಯಲ್ಲಿ ಪ್ರಾರಂಭವಾಗಿದೆ. ಇದನ್ನೂ ಓದಿ: ಕತಾರ್‌ ಏರ್‌ವೇಸ್‌ ವಿಮಾನದಲ್ಲಿ ಸಸ್ಯಾಹಾರಿಗೆ ಮಾಂಸಾಹಾರ ನೀಡಿ ಯಡವಟ್ಟು – ಉಸಿರುಗಟ್ಟಿ ಪ್ರಯಾಣಿಕ ಸಾವು

    ಜೆಇಎಂನ ಪ್ರಚಾರ ಸಂಸ್ಥೆ ಅಲ್-ಕಲಾಮ್ ಮೀಡಿಯಾ ಹಂಚಿಕೊಂಡ ಪತ್ರದ ಪ್ರಕಾರ, ಜಮಾತ್-ಉಲ್-ಮೊಮಿನಾತ್ ಸಂಘಟನೆಯ ಮಹಿಳಾ ಬ್ರಿಗೇಡ್ ಆಗಿ ಕಾರ್ಯನಿರ್ವಹಿಸಲಿದೆ.

    ಮೇ 7 ರಂದು ಭಾರತೀಯ ಪಡೆಗಳು ಜೆಇಎಂನ ಮರ್ಕಜ್ ಸುಭಾನಲ್ಲಾ ನೆಲೆಯನ್ನು ಗುರಿಯಾಗಿಸಿಕೊಂಡು ನಡೆಸಿದ ಕಾರ್ಯಾಚರಣೆಯಲ್ಲಿ ಮಸೂದ್ ಅಜರ್‌ನ ಸಹೋದರಿಯ ಪತಿ ಯೂಸುಫ್‌ ಹಜರ್‌ ಹತ್ಯೆಯಾಗಿದ್ದ. ಹೀಗಾಗಿ, ಮಸೂದ್‌ ಅಜರ್‌ನ ಸಹೋದರಿ ಈ ವಿಭಾಗವನ್ನು ಮುನ್ನಡೆಸಲಿದ್ದಾರೆ. ಇದನ್ನೂ ಓದಿ: ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಘರ್ಷಣೆ; 11 ಪಾಕಿಸ್ತಾನಿ ಸೈನಿಕರು, ಟಿಟಿಪಿಯ 19 ಉಗ್ರರು ಸಾವು

    ಬಹಾವಲ್ಪುರ್, ಕರಾಚಿ, ಮುಜಫರಾಬಾದ್, ಕೋಟ್ಲಿ, ಹರಿಪುರ್ ಮತ್ತು ಮನ್ಸೆಹ್ರಾದಲ್ಲಿರುವ ಜೆಇಎಂ ಕೇಂದ್ರಗಳಲ್ಲಿ ಅಧ್ಯಯನ ಮಾಡುತ್ತಿರುವ ಜೆಇಎಂ ಕಮಾಂಡರ್‌ಗಳ ಪತ್ನಿಯರು ಮತ್ತು ಆರ್ಥಿಕವಾಗಿ ದುರ್ಬಲ ಮಹಿಳೆಯರನ್ನು ನೇಮಕಾತಿಗೆ ಪರಿಗಣಿಸಲಾಗುತ್ತದೆ.

    ಭಾರತೀಯ ಸೇನೆಯು ಆಪರೇಷನ್ ಸಿಂಧೂರ ಸಮಯದಲ್ಲಿ ದಕ್ಷಿಣ ಪಂಜಾಬ್‌ನ ಬಹಾವಲ್ಪುರದಲ್ಲಿರುವ ಜೆಇಎಂ ಪ್ರಧಾನ ಕಚೇರಿಯನ್ನು ಗುರಿಯಾಗಿಸಿಕೊಂಡಿತ್ತು. ದಾಳಿಯ ನಂತರ, ಜೆಇಎಂ ಕಮಾಂಡರ್ ಇಲ್ಯಾಸ್ ಕಾಶ್ಮೀರಿ ಕಳೆದ ತಿಂಗಳು ಬಿಡುಗಡೆ ಮಾಡಿದ ವೀಡಿಯೊದಲ್ಲಿ ಮಸೂದ್ ಅಜರ್ ಕುಟುಂಬದ ಹಲವಾರು ಸದಸ್ಯರು ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಿಕೊಂಡಿದ್ದ.

  • ಪಾಕಿನ ಎಫ್‌-16 , ಜೆಎಫ್‌-17 ಯುದ್ಧ ವಿಮಾನಗಳನ್ನು ಹೊಡೆದಿದ್ದೇವೆ: ಏರ್ ಚೀಫ್ ಮಾರ್ಷಲ್

    ಪಾಕಿನ ಎಫ್‌-16 , ಜೆಎಫ್‌-17 ಯುದ್ಧ ವಿಮಾನಗಳನ್ನು ಹೊಡೆದಿದ್ದೇವೆ: ಏರ್ ಚೀಫ್ ಮಾರ್ಷಲ್

    ನವದೆಹಲಿ: ಆಪರೇಷನ್‌ ಸಿಂಧೂರ (Operation Sindoor) ಕಾರ್ಯಾಚರಣೆ ವೇಳೆ ಪಾಕಿಸ್ತಾನದ (Pakistan) ಎಫ್‌-16 ಮತ್ತು ಜೆಎಫ್‌-17 ಯುದ್ಧ ವಿಮಾನಗಳನ್ನು ನಾಶ ಮಾಡಲಾಗಿದೆ ಎಂದು ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎಪಿ ಸಿಂಗ್ (AP Singh) ಹೇಳಿದ್ದಾರೆ.

    ಪಹಲ್ಗಾಮ್‌ ದಾಳಿಗೆ (Pahalgam Attack) ಪ್ರತಿಯಾಗಿ ಭಾರತ ನಡೆಸಿದ ಕಾರ್ಯಾಚರಣೆಯ ಬಳಿಕ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, F-16 ಮತ್ತು JF-17 ವರ್ಗದ ನಡುವಿನ 5 ಪಾಕಿಸ್ತಾನಿ ಹೈಟೆಕ್ ಯುದ್ಧವಿಮಾನಗಳನ್ನು ಹೊಡೆದು ಹಾಕಿದ್ದೇವೆ ಎಂದಿದ್ದಾರೆ.

     

    4 ಸ್ಥಳಗಳಲ್ಲಿದ್ದ ರಾಡಾರ್‌ಗಳು, 2 ಕಮಾಂಡ್ ಮತ್ತು ನಿಯಂತ್ರಣ ಕೇಂದ್ರಗಳು, 2 ರನ್‌ವೇಗಳು, 3 ಹ್ಯಾಂಗರ್‌ಗಳು ನಾಶಮಾಡಿದ್ದೇವೆ. ಈ ಹ್ಯಾಂಗರ್‌ನಲ್ಲಿದ್ದ ಎಫ್‌-16 ಮತ್ತು ಜೆಎಫ್‌-17 ವಿಮಾನಗಳು ನಾಶವಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ:  ಪ್ರಧಾನಿ ಮೋದಿ ಆಧುನಿಕ ರಾವಣ, ಶೀಘ್ರವೇ ಅವರ ಲಂಕಾದಲ್ಲಿ ಬೆಂಕಿ ಹೊತ್ತಿ ಉರಿಯುತ್ತೆ: ಕಾಂಗ್ರೆಸ್‌ ನಾಯಕ

    ಭಾರತೀಯ ಪಡೆಗಳು ಸುಮಾರು 300 ಕಿಲೋಮೀಟರ್ ದೂರದ ಗುರಿಗಳನ್ನು ಯಶಸ್ವಿಯಾಗಿ ಹೊಡೆದುರುಳಿಸುವ ಮೂಲಕ ಈ ಕಾರ್ಯಾಚರಣೆ ಇತಿಹಾಸ ನಿರ್ಮಿಸಿದೆ. ನಮ್ಮ ವಾಯುರಕ್ಷಣಾ ವ್ಯವಸ್ಥೆ S-400 ಉತ್ತಮ ಶಸ್ತ್ರಾಸ್ತ್ರ ವ್ಯವಸ್ಥೆ ಎನ್ನುವುದು ಸಾಬೀತಾಗಿದೆ ಎಂದರು.

    ಭಾರತಕ್ಕೆ ರಫೇಲ್ ಅಥವಾ ಸು-57 ವಿಮಾನಗಳು ಬೇಕಾಗಿವೆ ಮತ್ತು ಸರ್ಕಾರವು ಉತ್ತಮವಾದದ್ದನ್ನು ಖರೀದಿಸುತ್ತದೆ. ನಮಗೆ ಹೆಚ್ಚಿನ ಎಸ್-400ಗಳು ಬೇಕು. ಆದರೆ ಎಷ್ಟು ಎಂದು ನಾವು ಹೇಳುವುದಿಲ್ಲ ಎಂದು ಹೇಳಿದರು.

    ಪಾಕಿಸ್ತಾನದ ಉಗ್ರರು ಬೇರೆ ಕಡೆ ಸ್ಥಳಾಂತರವಾಗುತ್ತಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ದೊಡ್ಡ ದೊಡ್ಡ ಶಿಬಿರಗಳಿಂದ ಈಗ ಸಣ್ಣ ಸಣ್ಣ ಶಿಬಿರಗಳಿಗೆ ಸ್ಥಳಾಂತರವಾಗುತ್ತಿದ್ದಾರೆ. ಇದರಿಂದಾಗಿ ಅವರನ್ನು ಗುರಿಯಾಗಿಸುವುದು ಕಷ್ಟವಾಗುತ್ತದೆ. ಆದರೆ ಅಗತ್ಯವಿದ್ದಾಗ ಆ ನೆಲೆಗಳ ಮೇಲೆ ಭಾರತ ದಾಳಿ ಮಾಡಬಹುದು ಎಂದರು.

  • ಕ್ರೀಡಾ ಮೈದಾನದಲ್ಲಿ `ಆಪರೇಷನ್‌ ಸಿಂಧೂರ’ – ಫಲಿತಾಂಶ ಒಂದೇ, ಭಾರತಕ್ಕೆ ಜಯ: ಮೋದಿ ಬಣ್ಣನೆ

    ಕ್ರೀಡಾ ಮೈದಾನದಲ್ಲಿ `ಆಪರೇಷನ್‌ ಸಿಂಧೂರ’ – ಫಲಿತಾಂಶ ಒಂದೇ, ಭಾರತಕ್ಕೆ ಜಯ: ಮೋದಿ ಬಣ್ಣನೆ

    ನವದೆಹಲಿ: ಏಷ್ಯಾಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧ ಜಯಗಳಿಸಿದ್ದನ್ನು ಪ್ರಧಾನಿ ನರೇಂದ್ರ ಮೋದಿ (PM Modi) ಆಪರೇಷನ್‌ ಸಿಂಧೂರಕ್ಕೆ ಹೋಲಿಸಿ ಭಾರತ ತಂಡವನ್ನು ಅಭಿನಂದಿಸಿದ್ದಾರೆ.

    “ಕ್ರೀಡಾ ಮೈದಾನದಲ್ಲಿ ಆಪರೇಷನ್‌ ಸಿಂಧೂರ – ಫಲಿತಾಂಶ ಒಂದೇ, ಭಾರತಕ್ಕೆ ಜಯ” ಎಂದು ಬರೆದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಇದನ್ನೂ ಓದಿ: ಏಷ್ಯಾಕಪ್‌ನಲ್ಲಿ ಭಾರತಕ್ಕೆ ಸಿಂಧೂರ ʼತಿಲಕʼ!

    ಪಹಲ್ಗಾಮ್‌ ದಾಳಿಯ ನಂತರ ಭಾರತ ನಡೆಸಿದ ಕಾರ್ಯಾಚರಣೆಗೆ `ಆಪರೇಷನ್‌ ಸಿಂಧೂರ’ ಹೆಸರನ್ನು ಇಟ್ಟಿತ್ತು. ಈಗ ತಿಲಕ್‌ ವರ್ಮಾ ಸ್ಫೋಟಕ ಅರ್ಧಶತಕದ ನೆರವಿನಿಂದ ಭಾರತ 5 ವಿಕೆಟ್‌ಗಳ ಜಯ ಸಾಧಿಸಿ 9ನೇ ಬಾರಿ ಚಾಂಪಿಯನ್‌ ಪಟ್ಟವನ್ನು ಅಲಂಕರಿಸಿದೆ.

    ವಿಶೇಷ ಏನೆಂದರೆ ಸಿಂಧೂರಕ್ಕೆ ಹೆಸರು ʼತಿಲಕʼ ಎಂಬ ಇನ್ನೊಂದು ಸಮನಾರ್ಥಕ ಪದವಿದೆ. ಹೀಗಾಗಿ ಈಗ ನೆಟ್ಟಿಗರು ಭಾರತ ಸೇನೆ ಪಾಕಿಸ್ತಾನದ ವಿರುದ್ಧ ಆಪರೇಷನ್‌ ಸಿಂಧೂರ ಮಾಡಿದರೆ ಭಾರತೀಯ ಕ್ರಿಕೆಟ್‌ ತಂಡ ಆಪರೇಷನ್‌ ತಿಲಕ್‌ ಮಾಡಿ ಹೊಡೆದು ಹಾಕಿದೆ ಎಂದು ಕಮೆಂಟ್‌ ಮಾಡುತ್ತಿದ್ದಾರೆ.

    ಈ ಬಾರಿಯ ಏಷ್ಯಾಕಪ್‌ನಲ್ಲಿ ಭಾರತ ತಂಡ ಮೂರು ಬಾರಿ ಪಾಕ್‌ ತಂಡವನ್ನು ಎದುರಿಸಿತ್ತು. ಲೀಗ್‌, ಸೂಪರ್‌ 4, ಫೈನಲ್‌ ಪಂದ್ಯದಲ್ಲಿ ಪಾಕಿಸ್ತಾನವನ್ನು ಬಗ್ಗು ಬಡೆದಿದ್ದು ಮಾತ್ರವಲ್ಲ ಅಜೇಯವಾಗಿ ಈ ಟೂರ್ನಿ ಮುಗಿಸಿದ್ದು ವಿಶೇಷ.ಇದನ್ನೂ ಓದಿ: ಹ್ಯಾರಿಸ್‌ ರೌಫ್‌ ವಿಕೆಟ್‌ ಉಡೀಸ್‌ ಮಾಡಿ ‘ಪ್ಲೇನ್‌ ಕ್ರ್ಯಾಶ್’‌ ಸನ್ನೆ ಮೂಲಕವೇ ಬುಮ್ರಾ ಟಕ್ಕರ್‌

  • ಟ್ರಂಪ್‌ ದಿಟ್ಟತನದಿಂದ ಭಾರತದ ಜೊತೆ ಕದನ ವಿರಾಮ ಸಾಧ್ಯವಾಯ್ತು: ಹಾಡಿ ಹೊಗಳಿದ ಪಾಕ್‌ ಪ್ರಧಾನಿ

    ಟ್ರಂಪ್‌ ದಿಟ್ಟತನದಿಂದ ಭಾರತದ ಜೊತೆ ಕದನ ವಿರಾಮ ಸಾಧ್ಯವಾಯ್ತು: ಹಾಡಿ ಹೊಗಳಿದ ಪಾಕ್‌ ಪ್ರಧಾನಿ

    – ಭಯೋತ್ಪಾದನೆ ತಡೆಗೆ ಪಾಕ್‌ನಲ್ಲಿ ಸ್ಥಾಪನೆಯಾಗಲಿದೆಯಂತೆ ಸ್ಪೆಷಲ್‌ ಕಮಾಂಡ್‌
    – ಅಮೆರಿಕ-ಪಾಕ್‌ ನಡುವೆ ದ್ವಿಪಕ್ಷೀಪ ಒಪ್ಪಂದ

    ಇಸ್ಲಾಮಾಬಾದ್‌: ಪಾಕಿಸ್ತಾನದ ಪ್ರಧಾನಿ ಶೆಹಬಾಜ್‌ ಷರೀಫ್‌ (Shehbaz Sharif), ಫೀಲ್ಡ್‌ ಮಾರ್ಷಲ್‌ ಅಸೀಮ್‌ ಮುನೀರ್‌ ಶ್ವೇತಭವನದ ಓವಲ್‌ ಕಚೇರಿಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಅವರನ್ನು ಭೇಟಿಯಾಗಿದ್ದು, ಸುಮಾರು 90 ನಿಮಿಷಗಳ ಕಾಲ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

    ವಿಶ್ವಸಂಸ್ಥೆಯ (United Nations) ಸಾಮಾನ್ಯ ಸಭೆಯ 80ನೇ ಅಧಿವೇಶನದಲ್ಲಿ ಭಾಗಿಯಾಗಲು ಅಮೆರಿಕ ಪ್ರವಾಸದಲ್ಲಿರುವ ಷರೀಫ್ ಅವರಿಂದು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಅದಕ್ಕೂ ಮುನ್ನವೇ ಸೇನಾ ಮುಖಸ್ಥರೊಟ್ಟಿಗೆ ಟ್ರಂಪ್‌ ಅವರನ್ನ ಭೇಟಿಯಾಗಿದ್ದು, ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ. ಭದ್ರತೆ ಮತ್ತು ಆರ್ಥಿಕತೆಗೆ ಸಂಬಂಧಿಸಿದ ಅನೇಕ ಒಪ್ಪಂದಗಳಿಗೆ ಸಹಿ ಮಾಡಿದ್ದಾರೆ. ಭಯೋತ್ಪಾದನೆ ನಿಗ್ರಹ ಒಪ್ಪಂದಕ್ಕೂ ಸಹಿ ಮಾಡಲಾಗಿದ್ದು, ಪರಸ್ಪರ ಸಹಕಾರದೊಂದಿಗೆ ಮುಂದುವರಿಯಲು ಒಪ್ಪಿಕೊಂಡಿರುವುದಾಗಿ ತಿಳಿದುಬಂದಿದೆ. ಈ ಸಂದರ್ಭದಲ್ಲಿ ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್, ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಕೂಡ ಉಪಸ್ಥಿತರಿದ್ದರು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಸುಂಕ ಸುಂಕ ಸುಂಕ; ಔಷಧಗಳ ಆಮದಿನ ಮೇಲೆ 100% ಸುಂಕ ಘೋಷಿಸಿದ ಟ್ರಂಪ್‌ – ಭಾರತಕ್ಕೇನು ಎಫೆಕ್ಟ್‌?

    ಉಭಯ ದೇಶಗಳ ಒಪ್ಪಂದಗಳು ಭದ್ರತೆ, ಆರ್ಥಿಕತೆ, ಕಾರ್ಯತಂತ್ರದ ಪಾಲುದಾರಿಕೆ, ಭಯೋತ್ಪಾದನಾ ನಿಗ್ರಹ ಹಾಗೂ ಪಾಕ್‌ನಲ್ಲಿ (Pakistan) ಖನಿಜ ಸಂಪತ್ತಿನ ಶೋಧನೆ ತೈಲ ಪರಿಶೋಧನೆಯನ್ನು ಕೇಂದ್ರೀಕರಿಸಿತ್ತು. ಜೊತೆಗೆ ಬಾಗ್ರಾಮ್‌ ವಾಯುನೆಲೆ ಹಾಗೂ ಆ ಪ್ರದೇಶದಲ್ಲಿ ಹೆಚ್ಚುತ್ತಿರುವ ಚೀನಾ ಪ್ರಭಾವದ ಕುರಿತು ಚರ್ಚೆಗಳು ನಡೆದಿವೆ ಎನ್ನಲಾಗಿದೆ. ಇದನ್ನೂ ಓದಿ: ಟ್ರಂಪ್‌ H-1B ವೀಸಾ ಟಫ್‌ ರೂಲ್ಸ್‌ ನಡುವೆಯೂ ಭಾರತೀಯರಿಗೆ ಮಣೆ ಹಾಕಿದ ಕಂಪನಿಗಳು – ಮೈಸೂರಲ್ಲಿ ಓದಿದ್ದ ವ್ಯಕ್ತಿಗೆ ಸಿಇಒ ಪಟ್ಟ

    ಪಾಕ್‌ನಲ್ಲಿ ಜಂಟಿ ಭಯೋತ್ಪಾದನಾ ನಿಗ್ರಹ ಘಟಕ ಸ್ಥಾಪನೆ
    ಪಹಲ್ಗಾಮ್‌ ಉಗ್ರರಿಗೆ ಕುಮ್ಮಕ್ಕು ನೀಡಿದ್ದ ಪಾಕಿಸ್ತಾನ ಇದೀಗ ಅಮೆರಿಕದೊಟ್ಟಿಗೆ ಭಯೋತ್ಪಾದನೆ ನಿಗ್ರಹ ಒಪ್ಪಂದ ಮಾಡಿಕೊಂಡಿದೆ. ಅದಕ್ಕಾಗಿ ಪಾಕಿಸ್ತಾನದಲ್ಲಿ ಜಂಟಿ ಭಯೋತ್ಪಾದನಾ ನಿಗ್ರಹ ಘಟಕ ಸ್ಥಾಪಿಸುವ ನಿರ್ಧಾರವನ್ನೂ ಕೈಗೊಂಡಿದೆ. ‌ಇದೇ ವೇಳೆ ಟ್ರಂಪ್‌ ಅಫ್ಘಾನ್‌ನಿಂದ ಬರುತ್ತಿರುವ ಉಗ್ರ ಬೆದರಿಕೆಗಳನ್ನು ಪರಿಹರಿಸುವುದಾಗಿ ಟ್ರಂಪ್‌ ಪಾಕ್‌ ಪ್ರಧಾನಿ, ಅಸಿಮ್‌ ಮುನೀರ್‌ಗೆ ಭರವಸೆ ನೀಡಿದ್ದಾರೆ.

    ಇನ್ನೂ ಸಭೆಯ ಬಳಿಕ ಮಾತನಾಡಿದ ಟ್ರಂಪ್‌, ಭಾರತ ಪಾಕಿಸ್ತಾನ ನಡುವಿನ ಭೀಕರ ಯುದ್ಧ ನಿಲ್ಲಿಸಿದ್ದು ನಾನೇ ಅಂತ ಬಾಯಿ ಬಡಿದುಕೊಂಡಿದ್ದಾರೆ. ಇದನ್ನೂ ಓದಿ: ಭಾರತ ನಮ್ಮ ಶಿಬಿರವನ್ನ ನಾಶಮಾಡಿದೆ – ಜೈಶ್ ಬಳಿಕ ಆಪರೇಷನ್ ಸಿಂಧೂರ ಸತ್ಯ ಒಪ್ಪಿಕೊಂಡ ಲಷ್ಕರ್ ಉಗ್ರ

    ಕದನ ವಿರಾಮ ಹೇಳಿಕೆಗೆ ಪಾಕ್ ಪ್ರಧಾನಿ ಪ್ರತಿಧ್ವನಿ
    ಟ್ರಂಪ್‌ ಭೇಟಿ ಬಳಿಕ ಮಾತನಾಡಿದ ಷರೀಫ್‌, ಕದನ ವಿರಾಮ ಉಲ್ಲೇಖಿಸಿ ಟ್ರಂಪ್‌ ಅವರನ್ನ ಶ್ಲಾಘಿಸಿದ್ದಾರೆ. ಅಧ್ಯಕ್ಷ ಟ್ರಂಪ್ ಅವರ ದಿಟ್ಟತನ ಮತ್ತು ನಿರ್ಣಾಯಕ ನಾಯಕತ್ವ ಭಾರತ-ಪಾಕಿಸ್ತಾನ ಕದನ ವಿರಾಮಕ್ಕೆ ಅನುಕೂಲ ಮಾಡಿಕೊಟ್ಟಿತು. ಅಲ್ಲದೇ ಗಾಜಾದಲ್ಲಿನ ಸಂಘರ್ಷ ಕೊನೆಗೊಳಿಸಲು ಹಾಗೂ ಮಧ್ಯಪ್ರಾಚ್ಯದಲ್ಲಿ ಶಾಂತಿ ಪುನಸ್ಥಾಪಿಸುವ ನಿರ್ಧಾರ ಕೈಗೊಂಡಿರುವುದು ಶ್ಲಾಘನೀಯ ಎಂದು ಟ್ರಂಪ್‌ ಪರ ಹಾಡಿಹೊಗಳಿದರು.

  • ಭಾರತ ನಮ್ಮ ಶಿಬಿರವನ್ನ ನಾಶಮಾಡಿದೆ – ಜೈಶ್ ಬಳಿಕ ಆಪರೇಷನ್ ಸಿಂಧೂರ ಸತ್ಯ ಒಪ್ಪಿಕೊಂಡ ಲಷ್ಕರ್ ಉಗ್ರ

    ಭಾರತ ನಮ್ಮ ಶಿಬಿರವನ್ನ ನಾಶಮಾಡಿದೆ – ಜೈಶ್ ಬಳಿಕ ಆಪರೇಷನ್ ಸಿಂಧೂರ ಸತ್ಯ ಒಪ್ಪಿಕೊಂಡ ಲಷ್ಕರ್ ಉಗ್ರ

    – ದೇವರ ದಯೆಯಿಂದ ಮೊದಲಿಗಿಂತ ದೊಡ್ಡ ಮಸೀದಿ ನಿರ್ಮಾಣವಾಗ್ತಿದೆ; ವಿಡಿಯೋದಲ್ಲಿ ಹೇಳಿಕೆ

    ಇಸ್ಲಾಮಾಬಾದ್‌: ಆಪರೇಷನ್ ಸಿಂಧೂರದಲ್ಲಿ (Operation Sindoor) ಭಾರತೀಯ ಸೇನೆಯ ಶೌರ್ಯ, ಸಾಹಸ ಇಡೀ ವಿಶ್ವಕ್ಕೇ ಗೊತ್ತಾಗಿದೆ. ಭಾರತ ನಡೆಸಿದ ವಾಯುದಾಳಿಗೆ ಸಿಲುಕಿ ಪಾಕಿಸ್ತಾನ ಹಿಂಡಿ ಹಿಪ್ಪೆಯಾಗಿದೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷ ಮುಗಿದು ಹಲವು ದಿನಗಳು ಕಳೆದರೂ ಅದರ ಪರಿಣಾಮಗಳು ಮಾತ್ರ ಇನ್ನೂ ಮುಗಿದಿಲ್ಲ. ಅದ್ರಲ್ಲೂ ಭಾರತದ ದಾಳಿಯಲ್ಲಿ ಏನೂ ಆಗೇ ಇಲ್ಲ ಎಂದು ಮೀಸೆ ತಿರುವುತ್ತಿರುವ ಪಾಕಿಸ್ತಾನದ (Pakistan) ಸುಳ್ಳುಗಳನ್ನು ಸ್ವತಃ ಅಲ್ಲಿನೇ ಉಗ್ರರೇ ಬಟಾಬಯಲು ಮಾಡುತ್ತಿದ್ದಾರೆ.

    ಈ ಹಿಂದೆ ಪಾಕಿಸ್ತಾನದ ಸುಳ್ಳುಗಳನ್ನು ಜೈಶ್-ಎ-ಮೊಹಮ್ಮದ್ (JeM) ಉಗ್ರ ಸಂಘಟನೆ ಬಯಲು ಮಾಡಿತ್ತು. ಇದೀಗ ಲಷ್ಕರ್-ಎ-ತೊಯ್ಬಾ (Lashkar-e-Taiba) ಕೂಡ ಆಪರೇಷನ್‌ ಸಿಂಧೂರಕ್ಕೆ ಸಾಕ್ಷ್ಯ ನೀಡಿದೆ. ಭಾರತದ ‘ಆಪರೇಷನ್ ಸಿಂಧೂರ’ದ ಯಶಸ್ಸನ್ನು ಈ ಉಗ್ರಗಾಮಿ ಸಂಘಟನೆಯೇ ಒಪ್ಪಿಕೊಂಡಿದೆ. ಭಾರತೀಯ ಸೇನೆಯು ತಮ್ಮ ಪ್ರಮುಖ ಭಯೋತ್ಪಾದಕ ಶಿಬಿರವನ್ನು ನಾಶಪಡಿಸಿರುವುದಾಗಿ ಲಷ್ಕರ್ ಕಮಾಂಡರ್ ಖಾಸಿಂ ವೀಡಿಯೋ ಮೂಲಕ ಸತ್ಯ ಬಾಯ್ಬಿಟ್ಟಿದ್ದಾನೆ. ಇದನ್ನೂ ಓದಿ: ಪಾಕಿಸ್ತಾನ ನನ್ನ ಮನೆಯಂತೆ ಭಾಸವಾಗುತ್ತೆ, ಭಾರತ ಶಾಂತಿ ಮಾತುಕತೆ ನಡೆಸಬೇಕು: ಸ್ಯಾಮ್ ಪಿತ್ರೋಡಾ ಹೇಳಿಕೆ ವಿವಾದ

    ವಿಡಿಯೋವೊಂದನ್ನು ಬಿಡುಗಡೆ ಮಾಡಿರುವ ಖಾಸಿಂ, ನಾನೀಗ ಭಾರತ ದಾಳಿ ಮಾಡಿ ನಾಶಪಡಿಸಿದ ಮುರಿಡ್ಕೆಯ ಮರ್ಕಜ್ ತೈಬಾ ಕ್ಯಾಂಪ್ ಮುಂದೆ ಇದ್ದೀನಿ. ಈ ಶಿಬಿರವನ್ನ ಭಾರತೀಯ ಪಡೆಗಳು ಹೊಡೆದುರುಳಿಸಿವೆ. ಆದ್ರೆ ಕಟ್ಟಡದ ಮರುನಿರ್ಮಾಣ ಕಾರ್ಯ ನಡೆಯುತ್ತಿದೆ. ದೇವರ ದಯೆಯಿಂದ ಮೊದಲಿಗಿಂತಲೂ ದೊಡ್ಡ ಮಸೀದಿ ನಿರ್ಮಾಣವಾಗಲಿದೆ ಎಂದು ಹೇಳಿದ್ದಾನೆ.

    ಆಪರೇಷನ್‌ ಸಿಂಧೂರಕ್ಕೆ ಕಾರಣ ಏನು?
    ಏಪ್ರಿಲ್‌ 22ರಂದು ಸೈನಿಕರ ಸೋಗಿನಲ್ಲಿ ಬಂದಿದ್ದ ಪಾಕ್‌ ಮೂಲದ ಉಗ್ರರು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನೆತ್ತರ ಕೋಡಿ ಹರಿಸಿದ್ದರು. ಓರ್ವ ವಿದೇಶಿಗ ಸೇರಿ 26 ಪ್ರವಾಸಿಗರ ನರಮೇಧ ನಡೆಸಿದ್ದರು. ಇದಕ್ಕೆ ಪ್ರತೀಕಾರ ತೀರಿಸಿಕೊಂಡ ಭಾರತ ಮೇ 7ರ ರಾತ್ರಿ ಪಾಕ್‌ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ 9 ಅಡಗು ತಾಣಗಳ ಮೇಲೆ ದಾಳಿ ನಡೆಸಿತ್ತು. ಇದನ್ನೂ ಓದಿ: ಉಗ್ರ ಹಫೀಜ್‌ ಸಯೀದ್‌ ಜೊತೆ ಸಭೆ ನಡೆಸಿದ್ದಕ್ಕೆ ಸಿಂಗ್‌ ನನಗೆ ಥ್ಯಾಂಕ್ಸ್‌ ಹೇಳಿದ್ದರು: ಭಯೋತ್ಪಾದಕ ಯಾಸಿನ್ ಮಲಿಕ್

    ಇತ್ತ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜರಲ್ ಅನಿಲ್ ಚೌಹಾಣ್ ಮಧ್ಯರಾತ್ರಿ 1 ಗಂಟೆಗೆ ಯಾಕೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಲಾಯ್ತು ಅನ್ನೋದರ ಬಗ್ಗೆ ಮಾಹಿತಿ ಬಿಚ್ಚಿಟ್ಟಿದ್ದಾರೆ. ಬೆಳಗಿನ ಜಾವದ ನಮಾಜ್ ಮಾಡುವ ಸಮಯವನ್ನು ತಪ್ಪಿಸುವ ಸಲುವಾಗಿ ಈ ಯೋಜನೆ ಮಾಡಬೇಕಾಯ್ತು. ಆ ಸಮಯದಲ್ಲಿ ಅಲ್ಲಿನ ಸಾಕಷ್ಟು ಜನ ತೊಂದರೆಗೆ ಸಿಲುಕಬಹುದು ಅಂತ ಮಧ್ಯರಾತ್ರಿ ವೇಳೆ ಕಾರ್ಯಾಚರಣೆ ಮಾಡಿದ್ದೇವು ಎಂದಿದ್ದಾರೆ. ಇದನ್ನೂ ಓದಿ: ನ.30 ರ ನಂತರ ಭಾರತದ ಮೇಲಿನ ಶೇ.25 ರಷ್ಟು ದಂಡ ಸುಂಕವನ್ನು ಅಮೆರಿಕ ತೆಗೆಯಬಹುದು: CEA