Tag: ಆಭರಣ

  • ಚಿಕ್ಕಬಳ್ಳಾಪುರ | ತುಂಬಿದ ಬಸ್‌ಗಳಲ್ಲಿ ಕೈಚಳಕ ತೋರಿಸ್ತಿದ್ದ ಕಳ್ಳಿಯರ ಗ್ಯಾಂಗ್‌‌ ಲಾಕ್‌

    ಚಿಕ್ಕಬಳ್ಳಾಪುರ | ತುಂಬಿದ ಬಸ್‌ಗಳಲ್ಲಿ ಕೈಚಳಕ ತೋರಿಸ್ತಿದ್ದ ಕಳ್ಳಿಯರ ಗ್ಯಾಂಗ್‌‌ ಲಾಕ್‌

    ಚಿಕ್ಕಬಳ್ಳಾಪುರ: ಶಕ್ತಿ ಯೋಜನೆ (Shakti Scheme) ಮೂಲಕ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿದ್ದೇ ತಡ.. ಕೆಲ ಮಹಿಳೆಯರು ಪ್ರವಾಸ, ತವರು ಮನೆ, ನೆಂಟರ ಮನೆಗಳಿಗೆ ಅಂತ ಮೈತುಂಬಾ ಚಿನ್ನಾಭರಣ ಹಾಕಿಕೊಂಡು ಬಸ್ ಹತ್ತುತ್ತಾರೆ. ಆದ್ರೆ ಅಂಥವರನ್ನೆ ಟಾರ್ಗೆಟ್ ಮಾಡಿದ್ದ ಅದೊಂದು ಕಳ್ಳಿಯರ ಗ್ಯಾಂಗ್, ತುಂಬಿದ್ದ ಬಸ್ ಹತ್ತಿ ಮಹಿಳೆಯರ ಚಿನ್ನಾಭರಣಗಳಿಗೆ (Gold Jewelry) ಕನ್ನ ಹಾಕ್ತಿದ್ರು. ಈಗ ಆ ಗ್ಯಾಂಗ್ ಪೊಲೀಸರ ಅತಿಥಿಯಾಗಿದೆ.

    ಈ ಗ್ಯಾಂಗ್‌ನ ಕಳ್ಳಿಯರು (Women Theft Gang) ಬಸ್ ಹತ್ತಿದ್ರೆ ಸಾಕು ಪ್ರಯಾಣಿಕರ ಜೇಬಲ್ಲಿ ಇರೋ ದುಡ್ಡು ಕ್ಷಣ ಮಾತ್ರದಲ್ಲಿ ಮಾಯವಾಗ್ತಿತ್ತು. ಇನ್ನೂ ಮೈಮೇಲೆ ಇರೋ ಒಡವೆಗಳು ಮಂಗಮಾಯ ಆಗ್ತಿತ್ತು. ಆಕೆಯ ಹೆಸರು ತುಳಸಿ (22), ಮತ್ತಿಬ್ಬರ ಹೆಸರು ಪ್ರೇಮಾ (21), ಸೋನಿಯಾ (25). ಮೂವರೂ ಕಲಬುರಗಿ ಮೂಲದವರು. ಶಕ್ತಿ ಯೋಜನೆಯಡಿ ಮಹಿಳೆಯರು ಮುಗಿಬಿದ್ದು ಬಸ್‌ಗಳಲ್ಲಿ ಪ್ರಯಾಣ ಮಾಡ್ತಿದ್ದಂತೆ ಇವರ ಆದಾಯ ಏರಿಕೆಯಾಗಿದೆಯಂತೆ. ತುಂಬಿದ ಬಸ್‌ಗಳಲ್ಲಿ ಮಹಿಳೆಯರು ಬಸ್ ಹತ್ತುವಾಗ ಇಳಿಯುವಾಗ ಈ ಮೂವರು ಸುಂದರಿಯರು. ಮಹಿಳೆಯರ ಬ್ಯಾಗ್‌ನಲ್ಲಿದ್ದ ಹಣ, ಕತ್ತಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡ್ತಿದ್ರು. ಇದನ್ನೂ ಓದಿ: ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ದಿ ನೇಣು ಬಿಗಿದುಕೊಂಡು ಆತ್ಮಹತ್ಯೆ

    ಇನ್ನೂ ಚಿಕ್ಕಬಳ್ಳಾಪುರ ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣವೇ ಈ ಮೂವರು ಕಳ್ಳಿಯರ ಅಡ್ಡೆಯಾಗಿತ್ತು. ಇತ್ತೀಚಿಗೆ ಎರಡು ಕಳ್ಳತನ ಪ್ರಕರಣಗಳು ದಾಖಲಾಗಿದ್ದವು. ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು, ಸಿಸಿಟಿವಿಯಲ್ಲಿ ದಾಖಲಾದ ವಿಡಿಯೊ ಜಾಡು ಹಿಡಿದು ತನಿಖೆ ಕೈಗೊಂಡಿದ್ರು. ಕೊನೆಗೆ ಚಿಕ್ಕಬಳ್ಳಾಪುರದಿಂದ ಕಲಬುರಗಿವರೆಗೂ ಪ್ರಯಾಣ ಮಾಡಿ ಮೂವರು ಕಳ್ಳಿಯರನ್ನ ಬಂಧಿಸಿದ್ದಾರೆ. ಬಂಧಿತರಿಂದ 7 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

    ಒಟ್ಟಿನಲ್ಲಿ ಮಹಿಳೆಯರು ತುಂಬಿದ ಬಸ್‌ಗಳನ್ನೇ ಬಂಡವಾಳ ಮಾಡಿಕೊಂಡಿರುವ ಕೆಲ ಕಳ್ಳಿಯರು ಕಳ್ಳತನ ಮಾಡುವುದನ್ನೇ ವೃತ್ತಿ ಮಾಡಿಕೊಂಡಿದ್ರು. ಆದ್ರೆ ಪೊಲೀಸರು ಈಗ ಆರೋಪಿಗಳನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಎಣ್ಣೆಯಲ್ಲಿ ಫ್ಯಾಟ್ ಚೆಕಿಂಗ್‌ಗೆ ಮುಂದಾದ ಹೋಟೆಲ್‌ ಮಾಲೀಕರು – ಡಿವೈಸ್ ಬೆಲೆ ಕೇಳಿ ಸುಸ್ತು!

  • Fashion | ಮತ್ತೆ ಟ್ರೆಂಡ್ ಸೆಟ್ ಮಾಡುತ್ತಿದೆ ‘ಮಾಟಿ’ ಕರ್ಣಾಭರಣ!

    Fashion | ಮತ್ತೆ ಟ್ರೆಂಡ್ ಸೆಟ್ ಮಾಡುತ್ತಿದೆ ‘ಮಾಟಿ’ ಕರ್ಣಾಭರಣ!

    – ಈ ಮಾಟಿಗಳು ಮಾಡ್ರನ್ ಗೂ ಸೈ, ಎತ್ನಿಕ್ ಗೂ ಸೈ

    ಗಿನ ಫ್ಯಾಶನ್‌ ಲೋಕದಲ್ಲಿ ಹುಡುಗಿರು ಡಿಫರೆಂಟ್‌ ಆಗಿ ಕಾಣಲು ಬಯಸುತ್ತಾರೆ. ಇತ್ತೀಚೆಗೆ ಚಿನ್ನದ ಆಭರಣಗಳನ್ನು ಇಷ್ಟ ಪಡದೆ ಹೆಚ್ಚಾಗಿ ಆರ್ಟಿಫೀಶಿಯಲ್‌ ಜ್ಯುವೆಲ್ಲರಿಗಳನ್ನು ಹಾಕಲು ಬಯಸುತ್ತಾರೆ. ಮಾರುಕಟ್ಟೆಗೆ ವಿವಿಧ ಬಗೆಯ ಆಭರಣಗಳು ಲಗ್ಗೆ ಇಟ್ಟಿವೆ. ಫ್ಯಾಶನ್‌ ಪ್ರಿಯರು ಆರ್ಟಿಫೀಶಿಯಲ್‌ ಜ್ಯುವೆಲ್ಲರಿಗಳನ್ನು ಪಾರ್ಟಿ, ಇತರ ಸಮಾರಂಭಗಳಿಗೆ ಧರಿಸಲು ಈ ಆಭರಣಗಳನ್ನು ಇಷ್ಟ ಪಡುತ್ತಾರೆ.

    ಇತ್ತೀಚೆಗೆ ಫ್ಯಾಷನ್ ಲೋಕದಲ್ಲಿ ಸಂಸ್ಕೃತಿಯ ಛಾಯೆ ಕಳೆದುಕೊಳ್ಳದೆ ಆಧುನಿಕತೆಯನ್ನು ತೋರಿಸುವ ಶೈಲಿ ಹೆಚ್ಚು ಮೆಚ್ಚುಗೆ ಪಡೆಯುತ್ತಿದೆ. ಆ ಶೈಲಿಯ ಉತ್ತಮ ಉದಾಹರಣೆ ಎಂದರೆ ಮಾಟಿ ಆಭರಣಗಳೊಂದಿಗೆ ಮಾಡ್ರನ್ ಡ್ರೆಸ್‌ಗಳ ಕಾಂಬಿನೇಷನ್.

    ಮಾಟಿ ಆಭರಣಗಳು ಮತ್ತೆ ಫ್ಯಾಷನ್ ಲೋಕದಲ್ಲಿ ಗಮನ ಸೆಳೆಯುತ್ತಿವೆ. ಇವು ಸಾಂಪ್ರದಾಯಿಕ ಸೀರೆಗಳಿಂದ ಹಿಡಿದು ಆಧುನಿಕ ಉಡುಪುಗಳವರೆಗೆ ಎಲ್ಲದಕ್ಕೂ ಒಪ್ಪುತ್ತದೆ. ಇತ್ತೀಚೆಗೆ, ಎರಡು ಅಥವಾ ಮೂರು ಎಳೆಯ ಮಾಟಿಗಳು ಹೆಚ್ಚು ಜನಪ್ರಿಯವಾಗಿವೆ. ಏಕೆಂದರೆ ಇವು ಮುಖದ ಆಕರ್ಷಕತೆಯನ್ನು ಹೆಚ್ಚಿಸುತ್ತವೆ ಅಲ್ಲದೇ ಹೆವಿ ವರ್ಕ್‌ಗಳಿರುವ ಮಾಟಿಗಳು ಗ್ರ್ಯಾಂಡ್ ಲುಕ್ ನೀಡುತ್ತವೆ. ಅಲ್ಲದೇ ಸ್ಟೋನ್ ಅಥವಾ ಮುತ್ತಿನ ಕೆಲಸದ ಮಾಟಿಗಳು ವಿಶೇಷವಾಗಿ ಆಕರ್ಷಕವಾಗಿವೆ.

    ಟ್ರೆಂಡಿಂಗ್ ಮಾಟಿಗಳನ್ನು ಧರಿಸುವುದರಿಂದ ದೊಡ್ಡ ನೆಕ್ಲೆಸ್‌ ಧರಿಸುವ ಅಗತ್ಯವಿಲ್ಲದೆ ರಿಚ್ ಲುಕ್ ಪಡೆಯಬಹುದು. ಚಿನ್ನದ ಜೊತೆಗೆ ಬೆಳ್ಳಿ ಮಾಟಿಗಳೂ ಮಾರುಕಟ್ಟೆಯಲ್ಲಿ ಲಭ್ಯವಿದ್ದು, ವಿಭಿನ್ನ ಆಯ್ಕೆಗಳನ್ನು ನೀಡುತ್ತವೆ. 2025ರಲ್ಲಿ ಮಾಟಿ ಆಭರಣಗಳು ಮತ್ತೆ ಫ್ಯಾಷನ್‌ನಲ್ಲಿ ಪ್ರಮುಖ ಸ್ಥಾನ ಪಡೆದಿವೆ. ಹಳೆಯ ಕಾಲದ ಮಾಟಿಗಳು ಈಗ ನವೀಕೃತ ರೂಪದಲ್ಲಿ ಮಾರುಕಟ್ಟೆಯಲ್ಲಿ ಲಭ್ಯವಿದ್ದು, ಸಾಂಪ್ರದಾಯಿಕ ಹಾಗೂ ಆಧುನಿಕ ಉಡುಪುಗಳಿಗೆ ಹೊಂದಿಕೊಳ್ಳುವಂತೆ ವಿನ್ಯಾಸಗೊಳಿಸಲಾಗಿದೆ.

    ಸೀರೆ, ಗ್ರ್ಯಾಂಡ್‌ ಸೆಲ್ವಾರ್ ಅಥವಾ ಸ್ಕರ್ಟ್‌-ಬ್ಲೌಸ್‌ ಧರಿಸಿದಾಗ ಮಾಟಿ ಆಭರಣಗಳು ರಿಚ್‌ ಲುಕ್‌ ನೀಡುತ್ತವೆ. ಇವು ಫ್ರೀ ಹೇರ್ ಅಥವಾ ಬನ್‌ ಹೇರ್‌ಸ್ಟೈಲ್‌ಗೂ ಚೆನ್ನಾಗಿ ಹೊಂದುತ್ತವೆ. ಸಾಂಪ್ರದಾಯಿಕ ಉಡುಗೆಗಳಿಗೂ ವಿಭಿನ್ನ ರೀತಿಯ ಸ್ಟೈಲಿಶ್ ಮಾಟಿಗಳು ಹೊಸ ಲುಕ್ ಅನ್ನು ನೀಡುತ್ತದೆ. ಒಂದೆಳೆಯ ಮಾಟಿಗಳಿಂದ ಹಿಡಿದು ಎರಡು-ಮೂರೆಳೆಯ ಮಾಟಿಗಳವರೆಗೆ ವಿವಿಧ ವಿನ್ಯಾಸಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ. ಬಜೆಟ್‌ ಮತ್ತು ಶೈಲಿಗೆ ಅನುಗುಣವಾಗಿ ಆಯ್ಕೆಮಾಡಬಹುದು. ಹೀಗಾಗಿ, ಮಾಟಿ ಆಭರಣಗಳು ಇಂದಿನ ಫ್ಯಾಷನ್‌ ಪ್ರಿಯರಿಗೆ ಹೊಸ ಆಯ್ಕೆಯಾಗಿ ಹೊರಹೊಮ್ಮಿವೆ.

    ಅದರಲ್ಲೂ ಫ್ಯಾಷನ್‌ ಕ್ಷೇತ್ರದಲ್ಲಿರುವ ಮಾಡೆಲ್‌ಗಳು, ಸೆಲೆಬ್ರೆಟಿಗಳು ಅತಿ ಹೆಚ್ಚಾಗಿ ಇಂತಹ ಆಭರಣಗಳನ್ನು ಧರಿಸುತ್ತಾರೆ. ಫೋಟೋಶೂಟ್‌ನಲ್ಲಿ ಧರಿಸುವ ಮಾಟಿ ಇಯರಿಂಗ್ ಇಡೀ ಲುಕ್‌ ಅನ್ನು ಬದಲಿಸುತ್ತವೆ ಹಾಗೂ ನೋಡಲು ಆಕರ್ಷಕವಾಗಿ ಬಿಂಬಿಸುತ್ತವೆ. ಈಗಿನ ಟ್ರೆಂಡ್‌ಗೆ ಮ್ಯಾಚ್‌ ಆಗುವಂತಾ ಮಾಟಿಗಳನ್ನು ಡಿಸೈನರ್ಸ್ ಮಾರುಕಟ್ಟೆಗೆ ಪರಿಚಯಿಸಿದ್ದಾರೆ

    ಮಾಡ್ರನ್ ಡ್ರೆಸ್‌ಗಳಿಗೆ ಒಪ್ಪುವ ಮಾಟಿಗಳು

    ಸಿಂಪಲ್ ಡ್ರೆಸ್‌ಗಳು, ಶರ್ಟ್ಸ್ ಅಥವಾ ವೆಸ್ಟರ್ನ್ ಗೌನ್ಸ್‌ಗಳಿಗೆ ಸ್ಟೈಲಿಶ್ ಮಾಟಿಗಳು ಎತ್ನಿಕ್ ಟಚ್ ಕೊಡುತ್ತವೆ. ಹಾಗೆಯೇ ಯುನೀಕ್ ಆಗಿ ಕೂಡ ಕಾಣಿಸುತ್ತದೆ. ಕಚೇರಿ, ಕಾಲೇಜು ಅಥವಾ ಕಾಫಿ ಡೇಟ್‌ಗೆ ಬಳಸಬಹುದಾದ ಮಾಟಿಗಳು ಲಭ್ಯವಿವೆ. ಹ್ಯಾಂಡ್‌ಪೈಂಟೆಡ್ ಅಥವಾ ಪ್ಯಾಟ್‌ಟರ್ನ್ಡ್ ಮಾಟಿಗಳು ಶರ್ಟ್‌ ಡ್ರೆಸ್‌ಗಳಿಗೆ ತುಂಬಾ ಆಕರ್ಷಕವಾಗಿ ಕಾಣುತ್ತದೆ.

    ಮಾಟಿ ಆಭರಣಗಳ ತೂಕವು ಕಡಿಮೆಯಿದ್ದು, ವಿನ್ಯಾಸದ ವೈವಿಧ್ಯತೆ ಹೆಚ್ಚಾಗಿದೆ. ಜೀನ್ಸ್‌-ಟಾಪ್‌ ಅಥವಾ ಜಂಪ್‌ಸೂಟ್‌ ಜೊತೆ ಕಲರ್ ಫುಲ್ ಮಾಟಿಗಳು ಹಾಗೂ ಮ್ಯಾಚಿಂಗ್ ಬಳೆ ಹಾಕಿದರೆ ಕ್ಲಾಸೀ ಲುಕ್ ನೀಡುತ್ತದೆ. ಈ ಸ್ಟೈಲ್‌ಗಳನ್ನು ಬಳಸುವುದರಿಂದ ನವೀನತೆಯ ಜೊತೆಗೆ ಸಂಸ್ಕೃತಿಯ ಹಳೆಯ ಆಭರಣಗಳ ವಿನ್ಯಾಸಗಳೂ ಚಾಲ್ತಿಯಲ್ಲಿರುತ್ತದೆ.

    ಸ್ಟೋನ್‌ ಅಥವಾ ಮುತ್ತಿನ ಮಾಟಿ

    ಸ್ಟೋನ್‌ ಅಥವಾ ಮುತ್ತಿನ (Pearl) ಮಾಟಿ ತುಂಬಾನೇ ಆಕರ್ಷಕವಾಗಿ ಕಾಣುವುದು. ಮುತ್ತಿನ ಡಿಸೈನ್‌ಗಳ ಮಾಟಿಗಳು ಸೀರೆ, ಲಂಗ ದಾವಣಿಗೆ ಹೇಳಿ ಮಾಡಿಸಿದ ಆಭರಣವಾಗಿದೆ. ಇದು ಉಡುಪಿನ ರೂಪುರೇಷೆಯನ್ನೇ ಬದಲಾಯಿಸುತ್ತದೆ. ಹಾಗಾಗಿ ತುಂಬಾ ಜನ ಮುತ್ತಿನ ಡಿಸೈನ್‌ನಲ್ಲಿ ಮಾಟಿ ಖರೀದಿಸಲು ಇಷ್ಟಪಡುತ್ತಾರೆ.

     ಮಾಟಿ ಆಭರಣಗಳು ನಾವಿನ್ಯತೆಯೊಂದಿಗೆ ಸಂಸ್ಕೃತಿಯ ಸೌಂದರ್ಯವನ್ನೂ ಪ್ರತಿಬಿಂಬಿಸುತ್ತವೆ. ವಿಭಿನ್ನ ವಿನ್ಯಾಸಗಳೊಂದಿಗೆ ಆಧುನಿಕ ಫ್ಯಾಶನ್‌ಗೂ ಸೂಕ್ತವಾಗಿವೆ. ಸ್ಟೈಲಿಶ್ ಆಯ್ಕೆಯಾಗಿರುವ ಈ ಆಭರಣಗಳು ನಿತ್ಯ ಉಡುಪುಗಳಿಗೆ ಆಕರ್ಷಕವಾಗಿವೆ. ನೀವು ಸಾಂಪ್ರದಾಯಿಕ ಉಡುಗೆ ಹಾಗೂ ಮಾಡನ್ ಡ್ರೆಸ್ ಗಳಲ್ಲಿ ರಿಚ್ ಲುಕ್ ನಲ್ಲಿ ಕಾಣಿಸಿಕೊಳ್ಳಬೇಕೆಂದರೆ ಇಂತಹ ಆಧುನಿಕ ಮಾಟಿಗಳನ್ನ ಬಳಸಿ.

  • ಕುಂಭಮೇಳದ ಬ್ಯೂಟಿ ಮೊನಾಲಿಸಾ ಈಗ ಚಿನ್ನದ ಆಭರಣ ರಾಯಭಾರಿ – ಸಂಭಾವನೆ ಎಷ್ಟು ಗೊತ್ತಾ?

    ಕುಂಭಮೇಳದ ಬ್ಯೂಟಿ ಮೊನಾಲಿಸಾ ಈಗ ಚಿನ್ನದ ಆಭರಣ ರಾಯಭಾರಿ – ಸಂಭಾವನೆ ಎಷ್ಟು ಗೊತ್ತಾ?

    ಲಕ್ನೋ: ಮಹಾ ಕುಂಭಮೇಳದ (Maha Kumbh Mela) ವೈರಲ್‌ ಸೆನ್ಸೇಷನ್‌ ಬ್ಯೂಟಿ ಮೊನಾಲಿಸಾ (Monalisa) ಈಗ ಮತ್ತೊಂದು ವಿಚಾರಕ್ಕೆ ಸುದ್ದಿಯಲ್ಲಿದ್ದಾರೆ. ತಮ್ಮ ಬಹುನಿರೀಕ್ಷಿತ ಬಾಲಿವುಡ್‌ ಚೊಚ್ಚಲ ಪ್ರವೇಶಕ್ಕೆ ತಯಾರಿ ನಡೆಸುತ್ತಿದ್ದಾರೆ. ಇದರ ಜೊತೆಗೆ ಪ್ರಸಿದ್ಧ ಆಭರಣ ಬ್ರ್ಯಾಂಡ್‌ನ ರಾಯಭಾರಿಯಾಗಿಯೂ ನೇಮಕಗೊಂಡಿದ್ದಾರೆ.

    ಕೇರಳದ ಚೆಮ್ಮನೂರ್‌ ಜ್ಯುವೆಲ್ಲರಿ ತನ್ನ ಪ್ರಚಾರಕ್ಕೆ ಮೊನಾಲಿಸಾಳನ್ನು ರಾಯಭಾರಿ ಮಾಡಿಕೊಳ್ಳಲು ನಿರ್ಧರಿಸಿದೆ. ಈ ಬಗ್ಗೆ ಬಾಬಿ ಚೆಮ್ಮನೂರ್‌ ಮಾತನಾಡಿ, ಮೊನಾಲಿಸಾ ಶುಕ್ರವಾರ ಕೇರಳದ ಕಲ್ಲಿಕೋಟೆಗೆ ಆಗಮಿಸಲಿದ್ದಾರೆ. ಅವರನ್ನು ಕಂಪನಿಯ ಪ್ರಚಾರ ರಾಯಭಾರಿಯಾಗಿ ಘೋಷಿಸಲಾಗುವುದು. ಅವರಿಗೆ 15 ಲಕ್ಷ ರೂ. ಸಂಭಾವನೆ ನೀಡಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: WPL 2025 | ಇಂದಿನಿಂದ ಮಹಿಳಾ ಪ್ರೀಮಿಯರ್‌ ಲೀಗ್‌ – ಪಂದ್ಯ ಎಲ್ಲಿ, ಯಾವಾಗ ಪ್ರಸಾರ?

    ಆಂಗ್ಲ ಮಾಧ್ಯಮ ವರದಿಗಳ ಪ್ರಕಾರ, ಮೊನಾಲಿಸಾ ತಮ್ಮ ಚೊಚ್ಚಲ ಚಿತ್ರಕ್ಕಾಗಿ 21 ಲಕ್ಷ ರೂಪಾಯಿಗಳ ಗಣನೀಯ ಸಂಭಾವನೆಗೆ ಸಹಿ ಹಾಕಿದ್ದಾರೆ. 1 ಲಕ್ಷ ರೂಪಾಯಿಗಳ ಮುಂಗಡವಾಗಿ ಪಡೆದಿದ್ದಾರೆ. ತಮ್ಮ ಜೀವನವನ್ನು ಬದಲಾಯಿಸುವ ಅವಕಾಶದ ಬಗ್ಗೆ ಮೊನಾಲಿಸಾ ಭಾವನಾತ್ಮಕ ಸಂದೇಶವನ್ನು ಹಂಚಿಕೊಂಡಿದ್ದಾರೆ.

    ‘ನಮಸ್ತೆ. ನಾನು ಮಹಾಕುಂಭಕ್ಕೆ ಹೋಗಿ ರುದ್ರಾಕ್ಷಿಗಳನ್ನು ಮಾರುತ್ತಿದ್ದೆ. ಆದರೆ ವಿಧಿ ನನಗಾಗಿ ಬೇರೆ ಯೋಜನೆಗಳನ್ನು ಹೊಂದಿತ್ತು. ಶಿವ ಮತ್ತು ಸಂತರ ಆಶೀರ್ವಾದದಿಂದ, ನಾನು ಜನಪ್ರಿಯತೆಯನ್ನು ಗಳಿಸಿದೆ. ನಾನು ನಿಮ್ಮೆಲ್ಲರಿಗೂ ನಿಜವಾಗಿಯೂ ಕೃತಜ್ಞಳಾಗಿದ್ದೇನೆ. ಈ ಕಾರಣದಿಂದಾಗಿ, ನನಗೆ ಬಾಲಿವುಡ್ ಚಿತ್ರವೊಂದರ ಆಫರ್‌ ಬಂದಿದೆ. ಚಿತ್ರದ ನಿರ್ದೇಶಕ ಸನೋಜ್ ಮಿಶ್ರಾ ಅವರು ವೈಯಕ್ತಿಕವಾಗಿ ನನ್ನ ಮನೆಗೆ ಭೇಟಿ ನೀಡಿ ಈ ಅವಕಾಶವನ್ನು ನೀಡಿದ್ದಾರೆ. ನಾನು ಯಾವಾಗಲೂ ನಾಯಕಿಯಾಗುವ ಕನಸು ಕಂಡಿದ್ದೆ. ಇಂದು ಆ ಕನಸು ನನಸಾಗಿದೆ. ಈ ಕ್ಷಣವನ್ನು ನಾನು ಎಂದಿಗೂ ಮರೆಯುವುದಿಲ್ಲ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ: ಪುಲ್ವಾಮಾ ದಾಳಿಗೆ 6 ವರ್ಷ – 2019ರ ಫೆ.14 ರಂದು ನಡೆದಿದ್ದು ಏನು?

  • ಚಿನ್ನದಂಗಡಿ ಗೋಡೆ ಒಡೆದು 25 ಕೋಟಿ ರೂ. ಮೌಲ್ಯದ ಆಭರಣ ದರೋಡೆ

    ಚಿನ್ನದಂಗಡಿ ಗೋಡೆ ಒಡೆದು 25 ಕೋಟಿ ರೂ. ಮೌಲ್ಯದ ಆಭರಣ ದರೋಡೆ

    ನವದೆಹಲಿ: ಚಿನ್ನದಂಗಡಿ ಒಂದರ ಗೋಡೆ ಒಡೆದು 25 ಕೋಟಿ ರೂ. ಮೌಲ್ಯದ ಚಿನ್ನಾಭರಣ (Jewellery) ದೋಚಿದ ಪ್ರಕರಣ ದೆಹಲಿಯ (Delhi) ಭೋಗಲ್ ಪ್ರದೇಶದಲ್ಲಿ ನಡೆದಿದೆ.

    ಸಂಜೀವ್ ಜೈನ್ ಎಂಬವರಿಗೆ ಸೇರಿದ ಅಂಗಡಿಯಲ್ಲಿ ಈ ಕಳ್ಳತನವಾಗಿದೆ. ಅವರು ಎರಡು ದಿನಗಳಿಂದ ಅಂಗಡಿ ಮುಚ್ಚಿದ್ದರು. ಇಂದು (ಮಂಗಳವಾರ) ಅಂಗಡಿ ತೆರೆದಾಗ ಇಡೀ ಅಂಗಡಿಯಲ್ಲಿ ಧೂಳು ತುಂಬಿತ್ತು. ಅಲ್ಲದೇ ಸಿಸಿ ಕ್ಯಾಮೆರಾಗಳಿಗೆ ಹಾನಿ ಮಾಡಲಾಗಿತ್ತು. ಬಳಿಕ ಅಂಡಿಯನ್ನು ಪರೀಶೀಲಿಸಿದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ ಸಂಜೀವ್ ತಿಳಿಸಿದ್ದಾರೆ. ಇದನ್ನೂ ಓದಿ: ತಾಯಿಯ ಕುತ್ತಿಗೆಗೆ 30 ಬಾರಿ ಚುಚ್ಚಿ, ಕಬ್ಬಿಣದ ಬಾಣಲೆಯಲ್ಲಿ ಹೊಡೆದು ಕೊಂದ ಪಾಪಿ ಮಗಳು!

    ಸ್ಟ್ರಾಂಗ್ ರೂಮ್‍ನ ಗೋಡೆಯಲ್ಲಿ ರಂಧ್ರ ಕೊರೆದಿದ್ದಾರೆ. ಬಳಿಕ ಟೆರೇಸ್ ಮೂಲಕ ಬಂದು ಸಿಸಿಟಿವಿಗಳಿಗೆ ಹಾನಿಮಾಡಿದ್ದಾರೆ. ಬಳಿಕ ಅಂಗಡಿಯಲ್ಲಿದ್ದ ಚಿನ್ನಾಭರಣ ದೋಚಿದ್ದಾರೆ.

    ಈ ಪ್ರಕರಣದ ಬಗ್ಗೆ ಮಾತನಾಡಿರುವ ಡಿಸಿಪಿ ರಾಜೇಶ್ ಡಿಯೋ, ಪ್ರಕರಣದ ತನಿಖೆ ನಡೆಯುತ್ತಿದೆ. ಅಂಗಡಿಯನ್ನು ಎರಡು ದಿನ ಮುಚ್ಚುವ ವಿಚಾರ ತಿಳಿದವರೇ ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು ಬಂದ್ – ಹೋಟೆಲ್ ತೆರೆದಿದ್ದಕ್ಕೆ ಮಾಲೀಕನ ಮೇಲೆ ಹಲ್ಲೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬರೋಬ್ಬರಿ 9 ವರ್ಷಗಳ ಬಳಿಕ ದೇಗುಲದಲ್ಲಿ ಕದ್ದ ಆಭರಣ ವಾಪಸ್ ನೀಡಿದ ಕಳ್ಳ!

    ಬರೋಬ್ಬರಿ 9 ವರ್ಷಗಳ ಬಳಿಕ ದೇಗುಲದಲ್ಲಿ ಕದ್ದ ಆಭರಣ ವಾಪಸ್ ನೀಡಿದ ಕಳ್ಳ!

    ಭುವನೇಶ್ವರ: ಕಳ್ಳನೊಬ್ಬ ದೇಗುಲದಿಂದ ಆಭರಣ (Ornaments) ಗಳನ್ನು ಕದ್ದು ಬರೋಬ್ಬರಿ 9 ವರ್ಷಗಳ ಬಳಿಕ ಅದನ್ನು ವಾಪಸ್ ಮಾಡಿದ ಪ್ರಸಂಗವೊಂದು ಭುವನೇಶ್ವರದ ಹೊರವಲಯದಲ್ಲಿರುವ ಗೋಪಿನಾಥಪುರದಲ್ಲಿ ನಡೆದಿದೆ.

    ಹೌದು. ಕಳ್ಳನೊಬ್ಬ ದೇವಸ್ಥಾನದಿಂದ ಕೆಲವು ಆಭರಣಗಳನ್ನು ಕದಿದ್ದನು. ಇದಾದ 9 ವರ್ಷಗಳ ನಂತರ ಇದೀಗ ಆತ ಕದ್ದ ಮಾಲನ್ನು ಹಿಂದಿರುಗಿಸಿದ್ದಾನೆ. ಈ ಘಟನೆಯ ನಂತರ ಇದೀಗ ದೇಗುಲದ ಸ್ಥಳೀಯ ನಿವಾಸಿಗಳಲ್ಲಿ ದೇವರ ಮೇಲಿದ್ದ ಭಕ್ತಿ ಇನ್ನಷ್ಟು ಹೆಚ್ಚಾಗುವಂತೆ ಮಾಡಿದೆ. ಕಳ್ಳನು ದೇವಾಲಯದ ಅರ್ಚಕನಿಗೆ 200 ರೂಪಾಯಿಯ ದಕ್ಷಿಣೆ (ದೇಣಿಗೆ) ಮತ್ತು ಮಾಡಿದ ತಪ್ಪಿಗೆ ದಂಡವಾಗಿ 100 ರೂಪಾಯಿಯನ್ನು ಸಹ ಬಿಟ್ಟು ಹೋಗಿದ್ದಾನೆ.

    ವರದಿಗಳ ಪ್ರಕಾರ, 2014 ರಲ್ಲಿ ಗೋಪಿನಾಥಪುರ ದೇವಸ್ಥಾನದಲ್ಲಿ ಕಳ್ಳತನವಾಗಿತ್ತು. ಯಜ್ಞದ ವೇಳೆ ಅರ್ಚಕರು ಸಮೀಪದ ದೇವಸ್ಥಾನಕ್ಕೆ ಹೋಗಿದ್ದಾಗ  ಕಳ್ಳರು ರಾಧಾ-ಕೃಷ್ಣರ ಬೆಳ್ಳಿ ಆಭರಣಗಳನ್ನು ಕದ್ದೊಯ್ದಿದ್ದರು ಎಂದು ಸ್ಥಳೀಯ ನಿವಾಸಿ ಶಶಿಭೂಷಣ ಮೊಹಾಂತಿ ತಿಳಿಸಿದ್ದಾರೆ. ಇದನ್ನೂ ಓದಿ: ಯಾದಗಿರಿಯಲ್ಲಿ ಬಿಜೆಪಿ ಕಾರ್ಯಕರ್ತನಿಗೆ ಚಾಕುವಿನಿಂದ ಇರಿದು ಹತ್ಯೆ

    ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿತ್ತು. ಇತ್ತ ಎಲ್ಲಾ ಕಡೆ ಹುಡುಕಿದರೂ ಗ್ರಾಮಸ್ಥರಿಗೆ ಕಳ್ಳನ ಬಗ್ಗೆ ಯಾವುದೇ ಮಾಹಿತಿ ಸಿಗಲಿಲ್ಲ. ಅಲ್ಲದೆ ಕಳ್ಳತನವಾದ ಆಭರಣಗಳು ಕೂಡ ಪತ್ತೆಯಾಗಲಿಲ್ಲ. ಹೀಗಾಗಿ ಕಳವಾದ ಸೊತ್ತನ್ನು ಮರಳಿ ಪಡೆದೇ ಪಡೆಯುತ್ತೇವೆ ಎಂದು ಗ್ರಾಮದ ಜನ ನಂಬಿದ್ದರು. ಇದೀಗ ದೇಗುಲದ ಆಭರಣಗಳನ್ನು ವಾಪಸ್ ಪಡೆದಿರುವುದು ಪವಾಡ ಅಂತ ಜನ ಮಾತನಾಡಿಕೊಳ್ಳುತ್ತಿದ್ದಾರೆ.

     

  • ಕೂದಲು ಉದುರಿದವರು ಫುಲ್ ಶೇವ್ ಮಾಡ್ಬೇಕು- ಏರ್ ಇಂಡಿಯಾ ನ್ಯೂ ರೂಲ್ಸ್

    ಕೂದಲು ಉದುರಿದವರು ಫುಲ್ ಶೇವ್ ಮಾಡ್ಬೇಕು- ಏರ್ ಇಂಡಿಯಾ ನ್ಯೂ ರೂಲ್ಸ್

    ನವದೆಹಲಿ: ಟಾಟಾ ಒಡೆತನದ ಏರ್ ಇಂಡಿಯಾ (Air India) ತನ್ನ ಕ್ಯಾಬಿನ್ ಸಿಬ್ಬಂದಿಗೆ ಹೊಸ ವಸ್ತ್ರಸಂಹಿತೆ ಜಾರಿ ಮಾಡಿದೆ.

    ಹೊಸ ನಿಯಮದ ಪ್ರಕಾರ ಕೂದಲು ಉದುರಿರುವ ಪುರುಷ ಸಿಬ್ಬಂದಿ ಸಂಪೂರ್ಣವಾಗಿ ತಲೆ ಕೂದಲನ್ನು ತೆಗೆಸಿಕೊಂಡು ಕೆಲಸಕ್ಕೆ ಬರುವಂತೆ ಸೂಚಿಸಿದೆ. ಇನ್ನೂ ಮಹಿಳೆಯರು (Women’s) ಅರಳು ಇರುವ ಕಿವಿ ಓಲೆಗಳನ್ನು ಧರಿಸದಂತೆ ಸೂಚಿಸಿದೆ. ಇದನ್ನೂ ಓದಿ: ವಿದ್ಯಾಭರಣ್ ಬಗ್ಗೆ ಮೊದಲೇ ಗೊತ್ತಾಗಿದ್ದು ಒಳ್ಳೆಯದಾಯ್ತು: ನಟಿ ವೈಷ್ಣವಿ ಸ್ಪಷ್ಟನೆ

    ದಶಕಗಳ ಕಾಲದಿಂದ ವಿಮಾನ ಸೇವೆ ಒದಗಿಸುತ್ತಿರುವ ಏರ್ ಇಂಡಿಯಾ ತನ್ನ ಸಿಬ್ಬಂದಿ ವಸ್ತ್ರಸಂಹಿತೆ ಅಂತಾರಾಷ್ಟ್ರೀಯ ಮಾನದಂಡಕ್ಕೆ ಅನುಗುಣವಾಗಿಲ್ಲ ಎಂಬ ಕಾರಣಕ್ಕೆ ಅದನ್ನು ಬದಲಾಯಿಸಲು ತೀರ್ಮಾನಿಸಿದೆ. ತಲೆಯಲ್ಲಿ ಹೆಚ್ಚು ಕೂದಲು ಉದುರಿ ತಲೆ ಬೋಳು-ಬೋಳಾಗಿ ಕಾಣುವ ಸಿಬ್ಬಂದಿ ಪೂರ್ಣವಾಗಿ ತಮ್ಮ ತಲೆಕೂದಲನ್ನು ಪ್ರತಿನಿತ್ಯ ಶೇವ್ ಮಾಡಬೇಕು. ಅಲ್ಲದೇ ಗುಂಪಿನಲ್ಲಿದ್ದಾಗ ಅಸಭ್ಯ ವರ್ತನೆ ನಿಲ್ಲಿಸಬೇಕು ಎಂದು ಸೂಚಿಸಿದೆ. ಇದನ್ನೂ ಓದಿ: ವೈಷ್ಣವಿ ಜೊತೆಗಿನ ವಿದ್ಯಾಭರಣ್ ಫೋಟೋ ವೈರಲ್ ಬೆನ್ನಲ್ಲೇ ‘ರಹಸ್ಯ’ ನಟಿ ಗಂಭೀರ ಆರೋಪ!

    ಮಹಿಳಾ ಸಿಬ್ಬಂದಿ ಕೇವಲ ಚಿನ್ನ (Gold) ಮತ್ತು ವಜ್ರದ ವೃತ್ತಾಕಾರದ ಕಿವಿ ಓಲೆಗಳನ್ನು ಮಾತ್ರ ಧರಿಸಬೇಕು. 0.5 ಸೆಂ.ಮೀ. ಅಗಲದ ಬಿಂದಿ ಮತ್ತು 1 ಸೆಂ.ಮೀ. ಗಿಂತ ಹೆಚ್ಚು ಅಗಲವಿಲ್ಲದ ಉಂಗುರ ಧರಿಸಬೇಕು. 1 ಕೈಗೆ 1 ಉಂಗುರ ಮಾತ್ರ ಧರಿಸಬೇಕು. ಡಿಸೈನ್‌ಗಳಿಲ್ಲದ 1 ಬಳೆ ಮಾತ್ರ ಧರಿಸಬೇಕು ಎಂದು ತನ್ನ ಸಿಬ್ಬಂದಿಗೆ ಸೂಚಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಅ.13 ರಿಂದ 27ರವರೆಗೆ ಹಾಸನಾಂಬ ಜಾತ್ರೆ – ದೇವಿಯ ಆಭರಣ, ಖಜಾನೆಯಿಂದ ದೇಗುಲಕ್ಕೆ ಆಗಮನ

    ಅ.13 ರಿಂದ 27ರವರೆಗೆ ಹಾಸನಾಂಬ ಜಾತ್ರೆ – ದೇವಿಯ ಆಭರಣ, ಖಜಾನೆಯಿಂದ ದೇಗುಲಕ್ಕೆ ಆಗಮನ

    ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸಲಿರುವ ಇತಿಹಾಸ ಪ್ರಸಿದ್ಧ ಹಾಸನಾಂಬ (Hasanamba) ದೇವಿಯ ಜಾತ್ರಾ ಮಹೋತ್ಸವ ಅ.13 ರಿಂದ ಅ.27 ರವರೆಗೆ ನಡೆಯಲಿದ್ದು, ಇಂದು ದೇವಿಯ ಒಡವೆಗಳನ್ನು ದೇವಾಲಯಕ್ಕೆ (Temple) ಕೊಂಡೊಯ್ಯಲಾಯಿತು.

    HASANAMBA

    ಹಾಸನ (Hassana) ತಹಶೀಲ್ದಾರ್ ನಟೇಶ್ ಸಮ್ಮುಖದಲ್ಲಿ ಸಾಲಗಾಮೆ ರಸ್ತೆಯಲ್ಲಿರುವ ಜಿಲ್ಲಾ ಖಜಾನೆಯಿಂದ ಒಡವೆಗಳನ್ನು ಹೊರತಂದು ಪುಷ್ಪಾಲಂಕೃತ ಅಡ್ಡ ಪಲ್ಲಕ್ಕಿಯಲ್ಲಿ ಇರಿಸಲಾಯಿತು. ಸಂಪ್ರದಾಯಂತೆ ಮಡಿವಾಳರು ಪಂಜು ಹಿಡಿದು ಮತ್ತು ಮುತ್ತೈದೆಯರು ಆರತಿ ಬೆಳಗಿದರು. ಈ ವೇಳೆ ಭಕ್ತರು ಹಾಸನಾಂಬೆ ದೇವಿಗೆ ಜೈಕಾರ ಕೂಗಿದರು. ಬೆಳ್ಳಿ ರಥದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಮಂಗಳ ವಾದ್ಯಗಳೊಂದಿಗೆ ಮೆರವಣಿಗೆ ಮೂಲಕ ಹಾಸನಾಂಬೆ ದೇಗುಲಕ್ಕೆ ತರಲಾಯಿತು. ಇದನ್ನೂ ಓದಿ: ಟೈರ್ ಬ್ಲಾಸ್ಟ್ ಆಗಿ ಬಸ್ ಪಲ್ಟಿ- ಚಾಲಕ ಸಾವು, 25 ಪ್ರಯಾಣಿಕರಿಗೆ ಗಾಯ

    ಒಡವೆ ಕೊಂಡೊಯ್ಯುವ ರಸ್ತೆಗಳಲ್ಲಿ ಬಿಗಿ ಪೊಲೀಸ್ (Police) ಬಂದೋಬಸ್ತ್ ಮಾಡಲಾಗಿತ್ತು. ಈ ಬಾರಿ ಹದಿನೈದು ದಿನಗಳ ಕಾಲ ದೇವಾಲಯ ಬಾಗಿಲು ತೆರಯಲಿದ್ದು, ಮೊದಲ ದಿನ ಹಾಗೂ ಕೊನೆಯ ದಿನ ಮತ್ತು ಅ. 25 ರಂದು ಗ್ರಹಣ ಹಿನ್ನೆಲೆಯಲ್ಲಿ ಭಕ್ತರಿಗೆ ದರ್ಶನ ಇರುವುದಿಲ್ಲ. ಉಳಿದ ಹನ್ನೆರಡು ದಿನಗಳ ಕಾಲ ಗರ್ಭಗುಡಿಯ ಬಾಗಿಲು ತೆರಯಲಿದೆ. ಇದನ್ನೂ ಓದಿ: ತಾನು ಸುಧಾಕರ್‌ಗೆ ಆಶೀರ್ವಾದ ಮಾಡಲು ಬಂದಿದ್ದೇನೆ- ಮಹಿಳೆಯ ವಿಚಿತ್ರ ವರ್ತನೆ

    Live Tv
    [brid partner=56869869 player=32851 video=960834 autoplay=true]

  • ವೃದ್ಧೆಯ ಕಾಲು ಕತ್ತರಿಸಿ ಆಭರಣ ಕದ್ದೊಯ್ದ ದುಷ್ಕರ್ಮಿಗಳು

    ವೃದ್ಧೆಯ ಕಾಲು ಕತ್ತರಿಸಿ ಆಭರಣ ಕದ್ದೊಯ್ದ ದುಷ್ಕರ್ಮಿಗಳು

    ಜೈಪುರ: ಬೆಳ್ಳಿ ಕಡಗವನ್ನು ಕದಿಯಲು ಬಂದಿದ್ದ ಗುಂಪೊಂದು ವೃದ್ಧೆಯ ಕಾಲನ್ನು (Leg) ಕತ್ತರಿಸಿದ ಅಮಾನವೀಯ ಘಟನೆ ಜೈಪುರದಲ್ಲಿ ನಡೆದಿದೆ.

    ಜೈಪುರದ (Jaipur) ಪಟ್ಲಾ ಪೊಲೀಸ್ ಠಾಣೆ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಸುಮಾರು 100 ವರ್ಷ ವಯಸ್ಸಿನ ವೃದ್ಧೆಯ (Old Woman) ಕಾಲಿನಲ್ಲಿರುವ ಬೆಳ್ಳಿಯ ಕಡಗವು ಕಳ್ಳರ ಗುಂಪಿನ ಕಣ್ಣಿಗೆ ಬಿದ್ದಿದೆ. ಮನೆಯಲ್ಲಿ ವೃದ್ಧೆಯೊಬ್ಬಳೇ ಇದ್ದುದ್ದನ್ನು ಗಮನಿಸಿದ್ದ ಗುಂಪು ವೃದ್ಧೆಯ ಕಾಲನ್ನು ಕತ್ತರಿಸಿ ಕಡಗವನ್ನು ಕದ್ದೊಯ್ದಿದ್ದಾರೆ.

    crime

    ಘಟನೆಗೆ ಸಂಬಂಧಿಸಿ ವೃದ್ಧೆಯ ಕಾಲು ಕತ್ತರಿಸಿರುವುದನ್ನು ನೋಡಿ ಮನೆ ಮಾಲೀಕರು ಕೂಡಲೇ ವೃದ್ಧೆಯ ಮೊಮ್ಮಗಳಿಗೆ ತಿಳಿಸಿದ್ದಾರೆ. ಮೊಮ್ಮಗಳು ಆಕೆಯ ತಾಯಿಗೆ ತಿಳಿಸಿ ಇಬ್ಬರು ಆ ಸ್ಥಳಕ್ಕೆ ಹೋಗುವ ವೇಳೆಗೆ ವೃದ್ಧೆಯು ರಕ್ತದ ಮಡಿಲಿನಲ್ಲಿ ಬಿದ್ದಿದ್ದಳು.

    ಘಟನೆಗೆ ಸಂಬಂಧಿಸಿದಂತೆ ವೃದ್ಧೆಯು ಚಿಂತಾಜನಕ ಸ್ಥಿತಿಯಲ್ಲಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಷ್ಟೇ ಅಲ್ಲದೇ ವೃದ್ಧೆಯ ಕುತ್ತಿಗೆ ಮೇಲೆ ಗಾಯದ ಗುರುತುಗಳಿದ್ದು, ಆಕೆಯ ಕಾಲುಗಳನ್ನು ಕತ್ತರಿಸಿದ್ದರು. ಇದನ್ನೂ ಓದಿ: ಹಿರಿಯರಿಗೆ ಸಹಾಯ ಮಾಡೋ ನೆಪದಲ್ಲಿ ಪಿನ್ ನಂಬರ್ ತಿಳಿದುಕೊಂಡು ಹಣ ಲಪಟಾಯಿಸುತ್ತಿದ್ದಾತ ಅಂದರ್ 

    POLICE JEEP

    ಘಟನೆಗೆ ಸಂಬಂಧಿಸಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಪ್ರಕರಣ ಕೈಗೊಂಡು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಜಮೀನು ವಿವಾದ- ಮಾತುಕತೆಗೆ ಬಂದಾತನ ಕಾಲಿಗೆ ಗುಂಡು ಹೊಡೆದ ರೈತ ಸಂಘದ ಜಿಲ್ಲಾಧ್ಯಕ್ಷ

    Live Tv
    [brid partner=56869869 player=32851 video=960834 autoplay=true]

  • ಹಳೆಯ ಆಭರಣಗಳಿಗೆ ಹೊಸ ಹುರುಪು – ಟ್ರೆಂಡಿಯಾಗಿ ಧರಿಸುವ ಬೆಳ್ಳಿ ಒಡವೆಗಳ ಬಗ್ಗೆ ಇಲ್ಲಿದೆ ಸಿಂಪಲ್ ಟಿಪ್ಸ್

    ಹಳೆಯ ಆಭರಣಗಳಿಗೆ ಹೊಸ ಹುರುಪು – ಟ್ರೆಂಡಿಯಾಗಿ ಧರಿಸುವ ಬೆಳ್ಳಿ ಒಡವೆಗಳ ಬಗ್ಗೆ ಇಲ್ಲಿದೆ ಸಿಂಪಲ್ ಟಿಪ್ಸ್

    ಹೆಂಗಳೆಯರ ಫ್ಯಾಷನ್‌ಗೆ ಕೊನೆಯೇ ಇಲ್ಲ. ಹೊಸತು ಹಳೆಯದ್ದಾಗುತ್ತಿದ್ದಂತೆ ಈಗ ಹಳೆಯ ಕಾಲದ ಆಭರಣಗಳೇ ಟ್ರೆಂಡ್ ಆಗಿವೆ. ಯುವತಿಯರೂ ಸಹ ಅಜ್ಜ – ಅಜ್ಜಿ ಕಾಲದ ಒಡವೆಗಳಿಗೆ ಚಿತ್ತಾಕರ್ಷಕ ರೂಪಕೊಟ್ಟು ಧರಿಸುತ್ತಿದ್ದಾರೆ. ಬೆಳ್ಳಿ ಬಂಗಾರ ಎಂದರೆ ಕಣ್ಣರಳಿಸುವ ಹೆಣ್ಣುಮಕ್ಕಳು ಪ್ರತೀ ಒಡವೆಯನ್ನೂ ಟ್ರೆಂಡಿಯಾಗಿ ಹೇಗೆ ಧರಿಸಬಹುದು ಎಂದೇ ಲೆಕ್ಕಾಚಾರ ಹಾಕುತ್ತಿದ್ದಾರೆ.

    ಇತ್ತೀಚಿನ ದಿನಗಳಲ್ಲಿ ಬೆಳ್ಳಿ-ಬಂಗಾರ ಎಲ್ಲರ ಮನಗೆಲ್ಲುತ್ತಿದೆ. ಬೆಳ್ಳಿಯ ಆಭರಣಗಳು ಧರಿಸುವವರ ಸಂಖ್ಯೆಯೂ ಹೆಚ್ಚಾಗಿದೆ. ಎಲ್ಲಾ ರೀತಿಯ ಧಿರಿಸಿಗೆ ಒಪ್ಪುವಂತಹ ಚೆಂದದ ಡಿಸೈನ್ ಬೆಳ್ಳಿ ಪ್ರಿಯರಿಗೆ ಅಚ್ಚುಮೆಚ್ಚು. ಅನಾದಿ ಕಾಲದಿಂದಲೂ ಬೆಳ್ಳಿಯ ಬಳಕೆ ಚಾಲ್ತಿಯಲ್ಲಿದೆ. ಇಂದಿನ ದಿನಮಾನಗಳಲ್ಲೂ ಬೆಳ್ಳಿ ತನ್ನ ಬೇಡಿಕೆಯನ್ನು ಉಳಿಸಿಕೊಂಡಿದೆ. ಕೆಲವರು ಇದೇ ಬೆಳ್ಳಿ ಆಭರನಣಕ್ಕೆ ಚಿನ್ನದ ಹೊಳಪು ನೀಡಿ ಧರಿಸುತ್ತಾರೆ.

    ಬೆಳ್ಳಿ ಆಭರಣಗಳಲ್ಲಿ ಕಿವಿಯೋಲೆಗಳು, ಉಂಗುರಗಳು, ಮೂಗಿನ ನತ್ತುಗಳು, ಬೆಳ್ಳಿಯ ನೆಕ್ಲೆಸ್‌ಗಳು, ಬಳೆ, ಖಡಗಗಳು ಸೇರಿ ಇನ್ನೂ ಅನೇಕವು ಫ್ಯಾಷನ್ ಪ್ರಿಯರ ಲಗ್ಗೆ ಇಟ್ಟಿದೆ. ಅಲ್ಲದೆ ಬೆಳ್ಳಿ ಆರೋಗ್ಯಕ್ಕೂ ಒಳ್ಳೆಯದು. ಹಾಗಾದ್ರೆ ಯಾವೆಲ್ಲ ರೀತಿಯಲ್ಲಿ ಈ ಬೆಳ್ಳಿ ಆಭರಣಗಳನ್ನು ಟ್ರೆಂಡಿಯಾಗಿ ಧರಿಸಬಹುದು ಎನ್ನುವ ಬಗ್ಗೆ ಇಲ್ಲಿದೆ ನೋಡಿ ಸಿಂಪಲ್ ಟಿಪ್ಸ್.

    ಆಫೀಸ್‌ಗಳಲ್ಲೂ ಟ್ರೆಂಡಿ ಲುಕ್:
    ಬೆಳ್ಳಿ ಆಭರಣಗಳು ಒಂದೇ ರೀತಿಯದಲ್ಲ. ಹೀಗಾಗಿ ನೀವು ಅದನ್ನು ಆಫೀಸ್‌ಗೂ ಧರಿಸಿ ಹೋಗಬಹುದು. ಇದನ್ನು ನಿಮ್ಮ ಡೆನಿಮ್ ಶರ್ಟ್ ಅಥವಾ ಫಾರ್ಮಲ್ ಮೇಲೆ ಧರಿಸಬಹುದು. ಅಥವಾ ಕಾಟನ್ ಸೀರೆಗಳ ಮೇಲೂ ಧರಿಸಬಹುದಾಗಿದೆ. ಬೆಳ್ಳಿ ಖಡಗ, ಬೆಳ್ಳಿ ಉಂಗುರ, ನೆಕ್ಲೆಸ್ ಸೇರಿದಂತೆ ಬೆಳ್ಳಿ ನತ್ತುಗಳನ್ನು ಧರಿಸಿದರೆ ಸಖತ್ ಸ್ಟೈಲಿಷ್ ಲುಕ್ ನೀಡುತ್ತದೆ.

    ದೇಸಿ ಸ್ಟೈಲ್‌:
    ಬೆಳ್ಳಿಯ ಆಭರಣಗಳು ಕುರ್ತಾ ಮತ್ತು ಸಲ್ವಾರ್ ಕಮೀಜ್‌ಗಳೊಂದಿಗೆ ಉತ್ತಮವಾಗಿ ಕಾಣುತ್ತವೆ. ಜೊತೆಗೆ ಪಲಾಜೋಸ್ ಮತ್ತು ಇತರ ಟ್ರೆಡೀಷನಲ್ ಉಡುಪುಗಳೊಂದಿಗೆ ಬೆಳ್ಳಿ ಚೆನ್ನಾಗಿ ಒಪ್ಪುತ್ತದೆ. ಬೆಳ್ಳಿ ಬಳೆಗಳು, ಕಿವಿಯೋಲೆಗಳು, ಚೋಕರ್ ಅಥವಾ ನೆಕ್ಲೆಸ್ ರೂಪದಲ್ಲಿ ಧರಿಸಿ ಸ್ಟೈಲಿಷ್ ಆಗಿ ಕಾಣಬಹುದಾಗಿದೆ.

    ಬೊಹಿಮಿಯನ್ ಶೈಲಿ:
    ಬೋಹೀಮಿಯನ್ ಬೆಳ್ಳಿ ಆಭರಣಗಳು ಟ್ರೆಂಡಿ ಮತ್ತು ಆರಾಮದಾಯಕ ಶೈಲಿಯಾಗಿದೆ. ದೊಡ್ಡ ಮೂಗುತಿ ಉಡುಪಿನೊಂದಿಗೆ ಧರಿಸಬಹುದು. ಅಲ್ಲದೇ ಬೆಳ್ಳಿ ಬಳೆ ಮತ್ತು ನೆಕ್ಲೆಸ್‌ಗಳನ್ನು ಕೂಡ ಶರ್ಟ್‌ಗಳ ಮೇಲೆ ಧರಿಸಬಹುದಾಗಿದೆ.

    ಸ್ಟ್ರೀಟ್‌ ಸ್ಟೈಲ್‌:
    ಇಂಡೋ-ವೆಸ್ಟರ್ನ್ ಮತ್ತು ಬೋಹೀಮಿಯನ್ ಶೈಲಿಗಳು ಇಂದು ಹೆಚ್ಚು ಟ್ರೆಂಡಿಂಗ್ ಶೈಲಿಗಳಾಗಿವೆ. ವಿಶೇಷ ಸಂದರ್ಭಗಳಲ್ಲಿ ಅಥವಾ ಶಾಪಿಂಗ್‌ಗೆ ಹೋಗುವಾಗ ನೀವು ಆಭರಣಗಳನ್ನು ಧರಿಸಬಹುದು. ಇದು ಹೀಲ್ಸ್, ಜೆಗ್ಗಿಂಗ್‌ಗಳು ಮತ್ತು ಸಡಿಲವಾದ ಟಾಪ್‌ಗಳೊಂದಿಗೆ ಸಖತ್ ಫ್ಯಾಷನೇಬಲ್ ಆಗಿ ಕಾಣುತ್ತದೆ.

    Live Tv
    [brid partner=56869869 player=32851 video=960834 autoplay=true]

  • ಈದ್ ಪಾರ್ಟಿಗೆ ಬಂದ ಗೆಳೆಯ ಬಿರಿಯಾನಿ ಜೊತೆ 1.45 ಲಕ್ಷದ ಚಿನ್ನವನ್ನೂ ನುಂಗಿದ

    ಈದ್ ಪಾರ್ಟಿಗೆ ಬಂದ ಗೆಳೆಯ ಬಿರಿಯಾನಿ ಜೊತೆ 1.45 ಲಕ್ಷದ ಚಿನ್ನವನ್ನೂ ನುಂಗಿದ

    ಚೆನ್ನೈ: ಈದ್ ಹಬ್ಬದ ಪ್ರಯುಕ್ತ ಸ್ನೇಹಿತರನ್ನು ಮನೆಗೆ ಔತಣಕ್ಕೆಂದು ಆಹ್ವಾನಿಸಿದ್ದ ವೇಳೆ 32 ವರ್ಷದ ವ್ಯಕ್ತಿಯೋರ್ವ ಬಿರಿಯಾನಿ ಜೊತೆಗೆ 1.45 ಲಕ್ಷ ರೂಪಾಯಿ ಮೌಲ್ಯದ ಆಭರಣಗಳನ್ನು ನುಂಗಿದ್ದಾನೆ. ನಂತರ ಆತನ ಹೊಟ್ಟೆಯನ್ನು ವೈದ್ಯರು ಸ್ಕ್ಯಾನಿಂಗ್ ಮಾಡಿದಾಗ ಆಭರಣಗಳು ಪತ್ತೆಯಾಗಿದೆ.

    ಆಭರಣದ ಅಂಗಡಿಯಲ್ಲಿ ಕೆಲಸ ಮಾಡುವ ವ್ಯಕ್ತಿಯೋರ್ವ ಮೇ 3ರಂದು ಈದ್ ಪ್ರಯುಕ್ತ ತನ್ನ ಸ್ನೇಹಿತರನ್ನು ಔತಣಕ್ಕೆಂದು ಮನೆಗೆ ಕರೆದಿದ್ದರು. ಈ ವೇಳೆ ಬಿರಿಯಾನಿ ಜೊತೆಗೆ 1.45 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವ್ಯಕ್ತಿಯೋರ್ವ ನುಂಗಿ ಹಾಕಿದ್ದಾನೆ. ಅಲ್ಲದೇ ಈ ಸಮಯದಲ್ಲಿ ಆತ ಮದ್ಯ ಸೇವಿಸಿದ್ದ. ಇದನ್ನೂ ಓದಿ: ಮಸೀದಿಗಳಲ್ಲಿ ಧ್ವನಿವರ್ಧಕ ಅಳವಡಿಸುವುದು ಮೂಲಭೂತ ಹಕ್ಕಲ್ಲ: ಅರ್ಜಿ ವಜಾ

    ಊಟ ಮುಗಿದು ಅತಿಥಿಗಳು ಮನೆಗೆ ತೆರಳಿದ ನಂತರ ಬೀರುವಿನಲ್ಲಿದ್ದ ವಜ್ರದ ನೆಕ್ಲೇಸ್, ಚಿನ್ನದ ಸರ ಮತ್ತು ವಜ್ರದ ಪೆಂಡೆಂಟ್ ಕಾಣೆಯಾಗಿರುವುದನ್ನು ಗಮನಿಸಿದ್ದಾರೆ. ಈ ಕುರಿತಂತೆ ಅತಿಥಿಗಳನ್ನು ವಿಚಾರಿಸಿದಾಗ, ಯುವತಿಯೊಬ್ಬಳು ತನ್ನ ಸ್ನೇಹಿತೆಯ ಗೆಳೆಯ ಚಿನ್ನಾಭರಣಗಳನ್ನು ಕದ್ದಿರಬಹುದು ಎಂದು ಶಂಕಿಸಿ ವಿರುಗಂಬಾಕ್ಕಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಇದನ್ನೂ ಓದಿ: ಮೋದಿ ಏನೇ ಮಾಡಿದರೂ, ವಿಜ್ಞಾನ ಸುಳ್ಳು ಹೇಳುವುದಿಲ್ಲ: ರಾಹುಲ್ ಗಾಂಧಿ 

    ನಂತರ ಮೇ 4 ರಂದು ಬುಧವಾರ ಆತನನ್ನು ಪೊಲೀಸರು ವಿಚಾರಣೆ ನಡೆಸಿದಾಗ, ಆರೋಪಿ ತಪ್ಪೋಪ್ಪಿಕೊಂಡಿದ್ದಾನೆ. ಬಳಿಕ ಪೊಲೀಸರು ಆತನ ಹೊಟ್ಟೆಯನ್ನು ಸ್ಕ್ಯಾನ್ ಮಾಡಿಸಿದಾಗ ಆಭರಣಗಳು ಹೊಟ್ಟೆಯಲ್ಲಿರುವುದು ದೃಢಪಟ್ಟಿದೆ. ಇದೀಗ ವೈದ್ಯರು ಆತನಿಗೆ ಎನಿಮಾ (ಮಲ ಮತ್ತು ಉದರವಾಯುವನ್ನು ಹೊರಹಾಕಲು ಎನಿಮಾ ಚಿಕಿತ್ಸೆ ನೀಡಲಾಗುತ್ತದೆ) ನೀಡಿದ್ದು, ಗುರುವಾರ ಆತನಿಂದ 95,000 ರೂ.ಮೌಲ್ಯದ ಸರ ಹಾಗೂ 25,000 ರೂ.ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಆದರೆ ಪೆಂಡೆಂಟ್ ಆತನ ಹೊಟ್ಟೆಯಲ್ಲಿಯೇ ಉಳಿದಿದ್ದು, ಅದನ್ನು ಹೊರ ತೆಗೆಯಲು ವೈದ್ಯರು ಆತನಿಗೆ ಔಷಧಿ ನೀಡಿದ್ದಾರೆ.