Tag: ಆಮ್ ಅದ್ಮಿ

  • ಉತ್ತರ ಪ್ರದೇಶ ಚುನಾವಣೆ – ಎಸ್‍ಪಿ ಜೊತೆಗೆ ಕೈ ಜೋಡಿಸಲಿರುವ ಆಮ್ ಆದ್ಮಿ

    ಉತ್ತರ ಪ್ರದೇಶ ಚುನಾವಣೆ – ಎಸ್‍ಪಿ ಜೊತೆಗೆ ಕೈ ಜೋಡಿಸಲಿರುವ ಆಮ್ ಆದ್ಮಿ

    ಲಕ್ನೋ: ಮುಂಬರುವ ವಿಧಾನಸಭೆ ಚುನಾವಣೆಗೆ ಸಿದ್ಧವಾಗುತ್ತಿರುವ ರಾಜಕೀಯ ಪಕ್ಷಗಳು ಮೈತ್ರಿ ಲೆಕ್ಕಾಚಾರದಲ್ಲಿ ಮಗ್ನವಾಗಿದೆ. ಆಡಳಿತರೂಢ ಬಿಜೆಪಿಯನ್ನು ಸೋಲಿಸಲು ಈ ಬಾರಿಯೂ ಘಟಬಂಧನ್ ಮಾಡಿಕೊಳ್ಳಲು ಸಿದ್ಧತೆಗಳು ನಡೆಯುತ್ತಿದ್ದು, ಸದ್ಯ ಉತ್ತರ ಪ್ರದೇಶದಲ್ಲಿ ಚುನಾವಣಾ ಪೂರ್ವ ಭಾರೀ ತಯಾರಿಗಳು ನಡೆಯುತ್ತಿದೆ.

    ಈ ಬಾರಿ ಸಮಾಜವಾದಿ ಪಾರ್ಟಿ ಆಮ್ ಅದ್ಮಿ ಜೊತೆಗೆ ಮೈತ್ರಿ ಮಾಡಿಕೊಳ್ಳಲು ಉತ್ಸುಕವಾಗಿದ್ದು, ಮಾಜಿ ಸಿಎಂ ಸಮಾಜವಾದಿ ಪಕ್ಷದ ನಾಯಕರ ಅಖಿಲೇಶ್ ಯಾದವ್ ಅವರನ್ನು ಎಎಪಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಮಹತ್ವದ ಚರ್ಚೆಯ ಬಳಿಕ ಸಂಜಯ್ ಸಿಂಗ್, ಎಸ್‍ಪಿ ಜೊತೆಗೆ ಮಾಡಿಕೊಳ್ಳುತ್ತಿರುವ ಮೈತ್ರಿಯ ಬಹಿರಂಗವಾಗಿ ಮಾತನಾಡಿದ್ದಾರೆ. ಇದನ್ನೂ ಓದಿ: ಕತ್ರಿನಾ ಕೈಫ್‌ ಕೆನ್ನೆಯಷ್ಟು ರಸ್ತೆ ನೈಸ್‌ ಆಗಿರಬೇಕು: ರಾಜೇಂದ್ರ ಸಿಂಗ್ ಗುಧಾ

    ಆಮ್ ಆದ್ಮಿ ಸಮಾಜವಾದಿ ಪಕ್ಷದ ಜೊತೆಗೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಚುನಾವಣಾ ಪೂರ್ವ ಮೈತ್ರಿಕೊಳ್ಳುತ್ತಿದ್ದು, ಸೀಟು ಹಂಚಿಕೆಯ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದು ಸಂಜಯ್ ಸಿಂಗ್ ಹೇಳಿದ್ದಾರೆ. ಹಿಂದೆಯೂ ಮೈತ್ರಿಯ ಬಗ್ಗೆ ಚರ್ಚೆ ನಡೆದಿತ್ತು ಅದನ್ನು ಮುಚ್ಚಿಡಲಾಗಿದೆ ಎಂದ ಅವರು, ಬಿಜೆಪಿಯ ದುರಾಡಳಿತ ಅಂತ್ಯಗೊಳಿಸುವುದು ನಮ್ಮ ಗುರಿ ಎಂದು ಅವರು ಹೇಳಿದ್ದಾರೆ.

    ಸೀಟು ಹಂಚಿಕೆಯ ಬಗ್ಗೆ ಗುಟ್ಟು ಬಿಟ್ಟುಕೊಡದ ಅವರು, ಆ ಬಗ್ಗೆ ಈಗಲೇ ಸ್ಪಷ್ಟವಾಗಿ ಹೇಳುವುದಿಲ್ಲ ಎಂದಿದ್ದಾರೆ. ಅಲ್ಲದೇ ಇದೇ ವೇಳೆ ಬಿಜೆಪಿ ವಿರುದ್ಧ ಎಲ್ಲ ಪಕ್ಷಗಳು ಒಂದಾಗಬೇಕಿದೆ ಎಂದು ಕರೆ ಕೊಟ್ಟಿದ್ದಾರೆ. ಎಸ್‍ಪಿ(SP) ಮತ್ತು ಆರ್‍ಎಲ್‍ಡಿ(RLD) ಎರಡು ಪಕ್ಷಗಳ ನಡುವಿನ ಸೀಟು ಹಂಚಿಕೆ ಮಾತುಕತೆ ಕೊನೆಯ ಹಂತಕ್ಕೆ ತಲುಪಿದೆ ಮತ್ತು ಶೀಘ್ರದಲ್ಲೇ ಒಪ್ಪಂದವನ್ನು ಪ್ರಕಟಿಸಲಾಗುವುದು ಎಂದು ಸೂಚಿಸಿದ ಒಂದು ದಿನದ ನಂತರ ಈ ಮಹತ್ವದ ಬೆಳವಣಿಗೆ ನಡೆದಿದೆ. ಇದನ್ನೂ ಓದಿ: ತಾಯಿಯಾಗ್ತಿದ್ದಾರಾ ಪ್ರಿಯಾಂಕಾ ಚೋಪ್ರಾ?

    2017 ರ ಚುನಾವಣೆಯಲ್ಲಿ ಬಿಜೆಪಿ ಮಿತ್ರ ಪಕ್ಷವಾದ ಓಂ ಪ್ರಕಾಶ್ ರಾಜ್‍ಭರ್ ಅವರ ಸುಹೇಲ್‍ದೇವ್ ಭಾರತೀಯ ಸಮಾಜ ಪಕ್ಷ (SBSP) ನೊಂದಿಗೆ SP ಈಗಾಗಲೇ ಮೈತ್ರಿ ಮಾಡಿಕೊಂಡಿದೆ. ಎಸ್‍ಬಿಎಸ್‍ಪಿ ಜೊತೆಗೆ, ಭಾಗಿದರಿ ಸಂಕಲ್ಪ್ ಮೋರ್ಚಾ, ರಾಜ್‍ಭರ್ ನೇತೃತ್ವದ ಸಣ್ಣ ಸಣ್ಣ ಪಕ್ಷಗಳ ಗುಂಪು, ಎಸ್‍ಪಿ ನೇತೃತ್ವದ ಮೈತ್ರಿಕೂಟದ ಭಾಗವಾಗಲಿದೆ.

  • ದೆಹಲಿ ಚುನಾವಣೆ – ಸಿಎಎ, ಎನ್.ಆರ್.ಸಿ ವಿಚಾರದಲ್ಲಿ ಆಪ್ ಗಪ್ ಚುಪ್

    ದೆಹಲಿ ಚುನಾವಣೆ – ಸಿಎಎ, ಎನ್.ಆರ್.ಸಿ ವಿಚಾರದಲ್ಲಿ ಆಪ್ ಗಪ್ ಚುಪ್

    ನವದೆಹಲಿ: ದೇಶದ್ಯಾಂತ ವಿವಾದಕ್ಕೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ ವಿಚಾರದಲ್ಲಿ ಆಮ್ ಆದ್ಮಿ ಪಕ್ಷ ಅಂತರ ಕಾಯ್ದುಕೊಳ್ಳುತ್ತಿದೆ. ವಿಪಕ್ಷಗಳ ಸಭೆಯಿಂದ ದೂರ ಉಳಿದಿದ್ದ ಆಮ್ ಅದ್ಮಿ ಚುನಾವಣಾ ಪ್ರಚಾರಗಳಲ್ಲೂ ಈ ಬಗ್ಗೆ ಸೊಲ್ಲೇತ್ತುತ್ತಿಲ್ಲ.

    ದೆಹಲಿ ವಿಧಾನಸಭೆ ಚುನಾವಣೆ ಹಿನ್ನೆಲೆ ಆಪ್ ಎಚ್ಚರಿಕೆ ಹೆಜ್ಜೆ ಇಡಲು ಆರಂಭಿಸಿದೆ. ಸಿಎಎ ಮತ್ತು ಎನ್.ಆರ್.ಸಿ ವಿಚಾರದಲ್ಲಿ ತಟಸ್ಥವಾಗುವ ಮೂಲಕ ತನ್ನ ಮತಗಳನ್ನು ಕ್ರೋಡಿಕರಿಸುವ ಕೆಲಸಕ್ಕೆ ಮುಂದಾಗಿದೆ. ಬಿಜೆಪಿ ಸಿಎಎ ಎನ್.ಆರ್.ಸಿಯನ್ನೆ ಬಂಡವಾಳ ಮಾಡಿಕೊಂಡು ಮತ ಬೇಟೆಗೆ ಇಳಿದಿದೆ. ಇತ್ತ ಕಾಂಗ್ರೆಸ್ ಈ ಎರಡು ಅಂಶಗಳನ್ನು ತೀವ್ರವಾಗಿ ವಿರೋಧಿಸಿದೆ. ಆಪ್ ಮಾತ್ರ ತಟಸ್ಥ ನೀತಿ ಅನುಸರಿಸುವ ಮೂಲಕ ಎರಡು ಬದಿಯ ಮತಗಳನ್ನು ಸೆಳೆಯುವ ತಂತ್ರ ಮಾಡುತ್ತಿದೆ.

    ಸಿಎಎ ಮತ್ತು ಎನ್.ಆರ್.ಸಿ ವಿರೋಧದಿಂದ ದೆಹಲಿಯಲ್ಲಿರುವ ಹೆಚ್ಚಿನ ಸಂಖ್ಯೆಯ ಜಾಟ್, ಗುಜ್ಜರ್, ಪಂಜಾಬಿ ಮತ್ತು ಪೂರ್ವಾಂಚಲ ಮತಗಳಲ್ಲಾಗುವ ಬದಲಾವಣೆಗಳನ್ನು ಊಹಿಸಲು ಕ್ಲಿಷ್ಟವಾಗಿದ್ದರಿಂದ ಆಪ್ ಪಕ್ಷವು ಸಿಎಎ ಮತ್ತು ಎನ್.ಆರ್.ಸಿ ಕುರಿತು ಪರ-ವಿರೋಧದ ನಿಲುವು ತಾಳದೆ ತಟಸ್ಥವಾಗಿದೆ. ಸಿಎಎ ತಿದ್ದುಪಡಿ ಕಾಯ್ದೆ ಜಾರಿ ಆದ ನಂತರ ನಡೆದ ಜಾರ್ಖಂಡ್ ಚುನಾವಣೆಯಲ್ಲಿ ಬಿಜೆಪಿ ಪರಾಭವಗೊಂಡರು ಮತಗಳಿಕೆಯಲ್ಲಿ ಕಳೆದ ಬಾರಿಗಿಂತ ಈ ಚುನಾವಣೆಯಲ್ಲಿ ಏರಿಕೆ ಕಂಡಿದೆ. ಇದೇ ಕಾರಣದಿಂದ ಆಪ್ ಈ ನಿಲುವು ತಾಳಿದೆ ಎನ್ನಲಾಗಿದೆ.

    ಸಿಎಎ ಎನ್.ಆರ್.ಸಿ ತಟಸ್ಥ ನೀತಿಯಿಂದ ದೆಹಲಿಯಲ್ಲಿರುವ ಮುಸ್ಲಿಂ ಹಾಗೂ ಹಿಂದೂಳಿದ ವರ್ಗಗಳ ಮತಗಳನ್ನು ಸೆಳೆಯಬಹುದು. ಜೊತೆಗೆ ಆಪ್ ಸರ್ಕಾರವನ್ನು ಶ್ಲಾಘಿಸುವ ಮೇಲ್ವರ್ಗದ ವೋಟ್‍ಗಳು, ದೆಹಲಿ ಹೊರ ವಲಯದಲ್ಲಿರುವ ನಿರಾಶ್ರಿತರ ವೋಟ್‍ಗಳನ್ನು ಗಳಿಸಬಹುದು ಎಂಬುದು ಆಪ್ ಲೆಕ್ಕಾಚಾರ. ಸಿಎಎ ಅಥವಾ ಎನ್.ಆರ್.ಸಿ ವಿಚಾರದಲ್ಲಿ ಯಾವುದಾದರೂ ಒಂದು ನಿರ್ಧಾರಕ್ಕೆ ಬಂದಲ್ಲಿ ವೋಟ್ ಬ್ಯಾಂಕ್‍ಗೆ ಧಕ್ಕೆ ಆಗಬಹುದು ಎನ್ನುವ ಲೆಕ್ಕಾಚಾರದಲ್ಲಿ ಎಚ್ಚರಿಯ ಹೆಜ್ಜೆ ಇಡುತ್ತಿದೆ.