Tag: ಆಮ್ ಆದ್ಮಿ ಪಾರ್ಟಿ

  • ಕಾಂಗ್ರೆಸ್‍ಗೆ ಕೈಕೊಟ್ಟ ಆಪ್: ಲೋಕಸಭಾ ಚುನಾವಣೆಯಲ್ಲಿ ಎಎಪಿ ಏಕಾಂಗಿ ಸ್ಪರ್ಧೆ

    ಕಾಂಗ್ರೆಸ್‍ಗೆ ಕೈಕೊಟ್ಟ ಆಪ್: ಲೋಕಸಭಾ ಚುನಾವಣೆಯಲ್ಲಿ ಎಎಪಿ ಏಕಾಂಗಿ ಸ್ಪರ್ಧೆ

    ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಾರ್ಟಿ (ಎಎಪಿ) ದೆಹಲಿಯಲ್ಲಿ ಮೈತ್ರಿ ತಂತ್ರ ಅನುಸರಿಸುತ್ತಾರೆ ಎನ್ನುವುದು ಭಾರೀ ಚರ್ಚೆಯಾಗುತ್ತಿತ್ತು. ಆದರೆ ಈಗ ಏಕಾಂಗಿಯಾಗಿ ಸ್ಪರ್ಧಿಸುವ ನಿರ್ಧಾರವನ್ನು ಎಎಪಿ ಸ್ಪಷ್ಟಪಡಿಸಿದೆ.

    ದೆಹಲಿಯ ಒಟ್ಟು 7 ಲೋಕಸಭಾ ಕ್ಷೇತ್ರಗಳಿಂದಲೂ ಎಎಪಿ ಅಭ್ಯರ್ಥಿ ಸ್ಪರ್ಧಿಸಲಿದೆ. ಈ ನಿಟ್ಟಿನಲ್ಲಿ ಆರು ಜನರ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಎಎಪಿ ದೆಹಲಿ ಸಂಚಾಲಕ ಗೋಪಾಲ್ ರೈ ತಿಳಿಸಿದ್ದಾರೆ.

    ಯಾರು ಯಾವ ಕ್ಷೇತ್ರ?:
    ಪೂರ್ವ ದೆಹಲಿಯಿಂದ ಸ್ಪರ್ಧಿಸಲು ಅತಿಶಿ ಮಾರ್ಲೆನಾ ಅವರನ್ನು ನಾಮನಿರ್ದೇಶನ ಮಾಡಲಾಗಿದ್ದು, ಗುಗ್ಗಾನ್ ಸಿಂಗ್ ವಾಯುವ್ಯ ದೆಹಲಿಯಿಂದ ಸ್ಪರ್ಧಿಸಲಿದ್ದಾರೆ. ಎಎಪಿ ರಾಜಕೀಯ ವ್ಯವಹಾರಗಳ ಸಮಿತಿಯ ಸದಸ್ಯ ರಾಘವ್ ಚಧಾ ಅವರು ದಕ್ಷಿಣ ದೆಹಲಿಯಿಂದ ಸ್ಪರ್ಧಿಸಲಿದ್ದು, ಪಂಕಜ್ ಗುಪ್ತಾ ಚಾಂದನಿ ಚೌಕ್ ಕ್ಷೇತ್ರದಿಂದ ಸ್ಪರ್ಧಿಸಲು ನಾಮನಿರ್ದೇಶನಗೊಂಡಿದ್ದಾರೆ. ದಿಲೀಪ್ ಪಾಂಡೆ ಮತ್ತು ಬ್ರಿಜೆಶ್ ಗೋಯಲ್ ಕ್ರಮವಾಗಿ ಈಶಾನ್ಯ ದೆಹಲಿ ಮತ್ತು ನವದೆಹಲಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಗೋಪಾಲ್ ರೈ ಮಾಹಿತಿ ನೀಡಿದ್ದಾರೆ.

    ಈ ಮೂಲಕ 6 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಎಎಪಿ ಬಿಡುಗಡೆ ಮಾಡಿದ್ದು, ಪಶ್ಚಿಮ ದೆಹಲಿಯ ಸ್ಥಾನವನ್ನು ಕಾಯ್ದಿರಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಡಿಮೆ ಅವಧಿಯಲ್ಲಿಯೇ ಪ್ರಧಾನಿ ಮೋದಿಗಿಂತ ಹೆಚ್ಚು ಅಭಿವೃದ್ಧಿ ಕೆಲಸ ಮಾಡಿದ್ದೇವೆ: ಕೇಜ್ರಿವಾಲ್

    ಕಡಿಮೆ ಅವಧಿಯಲ್ಲಿಯೇ ಪ್ರಧಾನಿ ಮೋದಿಗಿಂತ ಹೆಚ್ಚು ಅಭಿವೃದ್ಧಿ ಕೆಲಸ ಮಾಡಿದ್ದೇವೆ: ಕೇಜ್ರಿವಾಲ್

    ನವದೆಹಲಿ: ಕಡಿಮೆ ಅವಧಿಯಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ಅವರಿಗಿಂತ ಹೆಚ್ಚು ಅಭಿವೃದ್ಧಿ ಕೆಲಸ ಮಾಡಿದ್ದೇವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಹೇಳಿದ್ದಾರೆ.

    ಆಮ್ ಆದ್ಮಿ ಪಕ್ಷದ ಆರನೇ ವರ್ಷಾಚರಣೆಯಲ್ಲಿ ಮಾತನಾಡಿದ ಸಿಎಂ ಕೇಜ್ರಿವಾಲ್ ಅವರು, ಗುಜರಾತ್ ಮುಖ್ಯಮಂತ್ರಿಯಾಗಿ ನರೇಂದ್ರ ಮೋದಿ 12 ವರ್ಷಗಳ ಕಾಲ ಆಡಳಿತ ಮಾಡಿದ್ದಾರೆ. ಆಗ ಅವರು ಮಾಡಿರುವ ಅಭಿವೃದ್ಧಿ ಕೆಲಸಕ್ಕಿಂತ ಹೆಚ್ಚು ಆಪ್ ಸರ್ಕಾರ ದೆಹಲಿಯಲ್ಲಿ ಮಾಡಿದೆ ಎಂದು ಅವರು, ಸರ್ಕಾರದ ಸಾಧನೆಗೆ ಶ್ರಮಿಸಿದ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರಿಗೆ ಅಭಿನಂದನೆ ಸಲ್ಲಿಸಿದರು.

    ನಮ್ಮ ಆಡಳಿತಕ್ಕೆ ದೆಹಲಿಯ ಪ್ರಜೆಗಳು, ನಾವು ಪ್ರಾಮಾಣಿಕ ಮುಖ್ಯಮಂತ್ರಿಯನ್ನು ಹೊಂದಿದ್ದೇವೆ ಅಂತ ಮೆಚ್ಚುಗೆ ವ್ಯಕ್ತಪಡಿಸುತ್ತಾರೆ. ಈಗ ಹೇಳಿ ನಿಮ್ಮ ಪ್ರಧಾನಿ ನರೇಂದ್ರ ಮೋದಿ ಪ್ರಾಮಾಣಿಕರೇ ಎಂದು ಕೇಜ್ರಿವಾಲ್, ದೇಶದ ಜನತೆಯನ್ನು ಪ್ರಶ್ನಿಸಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಅವರು, ರಫೇಲ್ ಹಗರಣ ಎದುರಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ಅವರ ಆಡಳಿತ ಅವಧಿಯಲ್ಲಿ ಉದ್ಯಮಿ ವಿಜಯ್ ಮಲ್ಯ ಹಾಗೂ ವಜ್ರ ವ್ಯಾಪಾರಿ ನೀರವ್ ಮೋದಿ ಬ್ಯಾಂಕ್ ಸಾಲ ಮರುಪಾವತಿಸದೆ ವಿದೇಶಕ್ಕೆ ಹೋಗಿದ್ದಾರೆ ಎಂದು ವ್ಯಂಗ್ಯವಾಡಿದರು.

    ಆಮ್ ಆದ್ಮಿ ಪಕ್ಷ ಆಡಳಿತಕ್ಕೆ ಬಂದು ಆರು ವರ್ಷ ಕಳೆದಿದೆ. ದೇಶದಲ್ಲಿ ರಾಜಕೀಯ ಭ್ರಷ್ಟಾಚಾರ ಹಾಗೂ ಕೋಮುವಾದದ ವಿರುದ್ಧ ಹೋರಾಟ ಮುಂದುವರಿಸಲಿದೆ ಎಂದು ಟ್ವೀಟ್ ಕೂಡ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಚುನಾವಣಾ ಆಯೋಗದ ಶಿಫಾರಸಿಗೆ ರಾಷ್ಟ್ರಪತಿ ಅಂಕಿತ-ಶಾಸಕತ್ವ ಸ್ಥಾನ ಕಳೆದುಕೊಂಡ ಆಪ್ 20 ಶಾಸಕರು

    ಚುನಾವಣಾ ಆಯೋಗದ ಶಿಫಾರಸಿಗೆ ರಾಷ್ಟ್ರಪತಿ ಅಂಕಿತ-ಶಾಸಕತ್ವ ಸ್ಥಾನ ಕಳೆದುಕೊಂಡ ಆಪ್ 20 ಶಾಸಕರು

    ನವದೆಹಲಿ: ಚುನಾವಣಾ ಆಯೋಗ ದೆಹಲಿಯ ಆಮ್ ಆದ್ಮಿ ಸರ್ಕಾರದ 20 ಶಾಸಕರನ್ನು ಅನರ್ಹಗೊಳಿಸಲು ಶಿಫಾರಸ್ಸು ಮಾಡಿದ ಕಡತಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಅಂಕಿತ ಹಾಕಿದ್ದಾರೆ.

    ಆಪ್ ಶಾಸಕರು ಲಾಭದಾಯಕ ಹುದ್ದೆ ಹೊಂದಿದ್ದಾರೆ ಎಂಬ ಆರೋಪದ ಹಿನ್ನೆಲೆ ಚುನಾವಣಾ ಆಯೋಗ ಶಾಸಕರನ್ನು ಅನರ್ಹಗೊಳಿಸಲು ರಾಷ್ಟ್ರಪತಿಗಳಿಗೆ ಶಿಫಾರಸ್ಸು ಮಾಡಿತ್ತು. ಆದರೆ ಆಪ್ ಶಾಸಕರು ಸಂಸದೀಯ ಕಾರ್ಯದರ್ಶಿ ಹುದ್ದೆ ಹೊಂದಿದ್ದರೂ, ಯಾವುದೇ ರೀತಿಯ ಸಂಬಳ, ಸವಲತ್ತು ಪಡೆದಿಲ್ಲ ಎಂಬ ಕಾರಣ ನೀಡಿ ಚುನಾವಣೆ ಆಯೋಗದ ಶಿಫಾರಸನ್ನು ಪ್ರಶ್ನೆ ಮಾಡಿದ್ದರು. ಚುನಾವಣಾ ಆಯೋಗದ ಶಿಫಾರಸನ್ನು ಪ್ರಶ್ನಿಸಿ ಆಪ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ.

    ರಾಷ್ಟ್ರಪತಿಗಳ ಅಂಕಿತ ಕುರಿತು ಪ್ರತಿಕ್ರಿಯೆ ನೀಡಿದ ದೆಹಲಿ ಆಪ್ ಶಾಸಕ ಗೋಪಾಲ್ ರಾಯ್, ಶಾಸಕರ ಅನರ್ಹತೆಯನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್ ನಲ್ಲಿ ಪ್ರಶ್ನಿಸುವುದಾಗಿ ತಿಳಿಸಿದರು. ಅಲ್ಲದೇ ಈ ಕುರಿತು ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಲು ಸಿದ್ಧ. ರಾಷ್ಟ್ರಪತಿಗಳ ನಿರ್ಧಾರ ಅಸಂವಿಧಾನಿಕವಾಗಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾಯಕಾರಿ ಎಂದು ಆರೋಪಿಸಿದರು.

    ರಾಷ್ಟ್ರಪತಿಗಳ ಅಂಕಿತದಿಂದಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಭಾರಿ ಮುಖಭಂಗವಾಗಿದ್ದು, ಶೀಘ್ರದಲ್ಲಿಯೇ ದೆಹಲಿಯ 20 ವಿಧಾನಸಭಾ ಕ್ಷೇತ್ರಗಳಿಗೂ ಉಪಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ. ಆದರೆ ಪ್ರಸ್ತುತ 70 ಸ್ಥಾನಗಳನ್ನು ಹೊಂದಿರುವ ದೆಹಲಿ ವಿಧಾನಸಭೆಯಲ್ಲಿ ಆಪ್ ಪಕ್ಷ 66 ಸ್ಥಾನಗಳನ್ನು ಹೊಂದಿದೆ. ರಾಷ್ಟ್ರಪತಿಗಳ ಅಂಕಿತದ ನಂತರ 20 ಅನರ್ಹರಾದ ಕಾರಣ ಆಪ್ ಸ್ಥಾನಗಳ ಸಂಖ್ಯೆ 46ಕ್ಕೆ ಇಳಿಕೆಯಾಗಲಿದೆ. ಶಾಸಕರ ಸಂಖ್ಯೆ ಕಡಿಮೆಯಾದರೂ ಕೇಜ್ರಿವಾಲ್ ಆಡಳಿತದಲ್ಲಿ ಮುಂದುವರಿಯಲಿದ್ದಾರೆ. 35ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಶಾಸಕರು ಇರುವ ಕಾರಣ ಸರ್ಕಾರಕ್ಕೆ ಯಾವುದೇ ಸಮಸ್ಯೆಯಿಲ್ಲ.

    ಏನಿದು ಪ್ರಕರಣ?
    2016ರ ನಂತರ ಕೇಜ್ರಿವಾಲ್ ಮುಂದಾಳತ್ವದ ಆಪ್ ಪಕ್ಷ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿತ್ತು. ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಕೇಜ್ರಿವಾಲ್ 21 ಶಾಸಕರನ್ನು ವಿಧಾನಸಭಾ ಕಾರ್ಯದರ್ಶಿಗಳಾಗಿ ನೇಮಕ ಮಾಡಿದ್ದರು. ಈ ಕುರಿತು ಪ್ರಶಾಂತ್ ಪಟೇಲ್ ಎಂಬವರು ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದರು. ಈ ದೂರನ್ನು ರಾಷ್ಟ್ರಪತಿಗಳು ಚುನಾವಣಾ ಆಯೋಗಕ್ಕೆ ವರ್ಗಾವಣೆ ಮಾಡಿದ್ದರು.

    2016ರಲ್ಲಿ ಆಪ್ ವಿರುದ್ಧ ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಕೆ ಮಾಡಿತ್ತು. ಆಪ್ 21 ಶಾಸಕರು ಲಾಭದಾಯಕ ಹುದ್ದೆ ಹೊಂದಿದ್ದು, ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿತ್ತು. ಈ ಬಗ್ಗೆ ದೂರು ಸ್ವೀಕರಿಸಿದ್ದ ಆಯೋಗ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್ ಪಕ್ಷದಿಂದ ಸ್ಪಷ್ಟನೆ ಕೇಳಿತ್ತು. ಆದರೆ ತಮ್ಮ ವಿರುದ್ಧ ಪ್ರಕರಣವನ್ನು ಕೈ ಬಿಡುವಂತೆ ಆಪ್ ನ ಶಾಸಕರು ಆಯೋಗಕ್ಕೆ ಮನವಿ ಮಾಡಿದ್ದರಾದರೂ, ಆಯೋಗ ಅವರ ಅರ್ಜಿಯನ್ನು ತಿರಸ್ಕರಿಸಿತ್ತು.

     

  • ದೆಹಲಿ ಮಹಾನಗರ ಪಾಲಿಕೆಯಲ್ಲಿ ಕಮಲ ಕಿಲಕಿಲ – ಇವಿಎಂ ದೋಷ ಎಂದು ಆಪ್ ಕ್ಯಾತೆ

    ದೆಹಲಿ ಮಹಾನಗರ ಪಾಲಿಕೆಯಲ್ಲಿ ಕಮಲ ಕಿಲಕಿಲ – ಇವಿಎಂ ದೋಷ ಎಂದು ಆಪ್ ಕ್ಯಾತೆ

    ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯ ಮೂರು ಮಹಾನಗರ ಪಾಲಿಕೆ ಚುನಾವಣೆಯ ಮತಿ ಎಣಿಕೆ ಕಾರ್ಯ ಕೊನೆಯ ಹಂತ ತಲುಪಿದೆ. ಈಗಾಗಲೇ ಬಿಜೆಪಿ ಭಾರೀ ಬಹುಮತದತ್ತ ಹೆಜ್ಜೆ ಹಾಕುತ್ತಿದ್ದು, ಗೆಲುವು ಖಚಿತವಾಗಿದೆ. ಇನ್ನು ಕಾಂಗ್ರೆಸ್ ಆಡಳಿತ ಪಕ್ಷವಾದ ಆಮ್ ಆದ್ಮಿ ಪಾರ್ಟಿಯನ್ನ ಹಿಮ್ಮೆಟ್ಟಿಸಿ ಎರಡನೇ ಸ್ಥಾನದಲ್ಲಿದೆ. ಸದ್ಯದ ಮಾಹಿತಿಯ ಪ್ರಕಾರ 270 ಸೀಟ್‍ಗಳಲ್ಲಿ ಬಿಜೆಪಿ 181, ಕಾಂಗ್ರೆಸ್-31,  ಆಪ್ – 46 ಹಾಗೂ ಇತರೆ-12 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ.

    ಬಿಜೆಪಿ ಬಹುಮತದತ್ತ ಹೆಜ್ಜೆ ಹಾಕುತ್ತಿರುವ ಹಿನ್ನೆಲೆಯಲ್ಲಿ ಇದು ಮೋದಿ ಅಲೆ ಅಲ್ಲ, ಇವಿಎಂ ದೋಷ ಎಂದು ಆಪ್ ಮುಖಂಡರು ಕ್ಯಾತೆ ತೆಗೆದಿದ್ದಾರೆ.

    ಕಳೆದ 14 ವರ್ಷಗಳಿಂದ ದೆಹಲಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಯೇ ಅಧಿಕಾರದಲ್ಲಿದ್ದು, ಆಡಳಿತರೂಢ ಆಪ್‍ಗೆ ಭಾರೀ ಮುಖಭಂಗವಾಗಿದೆ. ಈ ಚುನಾವಣೆಯಲ್ಲಿ ಬಿಜೆಪಿ ಅತ್ಯಧಿಕ ಸ್ಥಾನಗಳನ್ನು ಗಳಿಸಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿತ್ತು. ಈ ಸಮೀಕ್ಷೆ ಫಲಿತಾಂಶವೇ ನಿಜವಾದಲ್ಲಿ ಮುಂದೆ ಇವಿಎಂ ವಿರುದ್ಧ ಭಾರೀ ಹೋರಾಟ ನಡೆಸುವುದಾಗಿ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ತಿಳಿಸಿದ್ದರು.

    ದೆಹಲಿಯಲ್ಲಿ ಮೂರು ಮಹಾನಗರ ಪಾಲಿಕೆಗಳಿದ್ದು, ಒಟ್ಟು 272 ವಾರ್ಡ್ ಗಳಿವೆ. 2012ರಲ್ಲಿ ಉತ್ತರ ದೆಹಲಿ ಮಹಾನಗರ ಪಾಲಿಕೆ, ದಕ್ಷಿಣ ಮಹಾನಗರ ಪಾಲಿಕೆ, ಪೂರ್ವ ದೆಹಲಿ ಮಹಾನಗರ ಪಾಲಿಕೆ ಅಸ್ತಿತ್ವಕ್ಕೆ ಬಂದಿದೆ. 2012ರ ಫಲಿತಾಂಶಲ್ಲಿ ಬಿಜೆಪಿ 138, ಕಾಂಗ್ರೆಸ್ 77, ಬಿಎಸ್‍ಪಿ 5ಸ್ಥಾನಗಳನ್ನು ಗೆದ್ದುಕೊಂಡಿತ್ತು.

    2012 ಫಲಿತಾಂಶ:
    ಉತ್ತರ ದೆಹಲಿ ಮಹಾನಗರ ಪಾಲಿಕೆಯಲ್ಲಿ ಒಟ್ಟು 104 ಸ್ಥಾನಗಳಿದ್ದು, ಬಿಜೆಪಿ 59, ಕಾಂಗ್ರೆಸ್ 29, ಬಿಎಸ್‍ಪಿ 07, ಇತರೆ 09 ಸ್ಥಾನಗಳನ್ನು. ದಕ್ಷಿಣ ದೆಹಲಿ ಮಹಾನಗರ ಪಾಲಿಕೆಯಲ್ಲಿ ಒಟ್ಟು 104 ವಾರ್ಡ್ ಗಳಿದ್ದು, ಬಿಜೆಪಿ 44, ಕಾಂಗ್ರೆಸ್ 29, ಬಿಎಸ್‍ಪಿ 05, ಇತರೆ 26 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಪೂರ್ವ ದೆಹಲಿ ಮಹಾನಗರ ಪಾಲಿಕೆಯಲ್ಲಿ ಒಟ್ಟು 64 ವಾರ್ಡ್ ಗಳಿದ್ದು, ಬಿಜೆಪಿ 39, ಕಾಂಗ್ರೆಸ್ 19, ಬಿಎಸ್‍ಪಿ 03 ಸ್ಥಾನಗಳನ್ನು ಗೆದ್ದುಕೊಂಡಿತ್ತು.

    ಚುನಾವಣೋತ್ತರ ಸಮೀಕ್ಷೆ ಏನು ಹೇಳಿತ್ತು?
    ಉತ್ತರ ದೆಹಲಿ ಮಹಾನಗರ ಪಾಲಿಕೆ – ಒಟ್ಟು ಸ್ಥಾನಗಳು 104
    ಇಂಡಿಯಾ ಟುಡೇ-ಆಕ್ಸಿಸ್ ಬಿಜೆಪಿ 78-84 ಸ್ಥಾನ, ಆಪ್ 8-12, ಕಾಂಗ್ರೆಸ್ 8-12 ಸ್ಥಾನಗಳನ್ನು ಗೆಲ್ಲಲಿದೆ ಎಂದು ತಿಳಿಸಿದ್ದರೆ, ಎಬಿಪಿ ನ್ಯೂಸ್-ಸಿ ವೋಟರ್ ಬಿಜೆಪಿ 88, ಆಪ್ 06, ಕಾಂಗ್ರೆಸ್ 07 ಸ್ಥಾನಗಳನ್ನು ಗೆಲ್ಲಲಿದೆ ಎಂದು ತಿಳಿಸಿತ್ತು.

    ದಕ್ಷಿಣ ದೆಹಲಿ ಮಹಾನಗರ ಪಾಲಿಕೆ – ಒಟ್ಟು ಸ್ಥಾನಗಳು 104
    ಇಂಡಿಯಾ ಟುಡೇ-ಆಕ್ಸಿಸ್ ಬಿಜೆಪಿ 79-85, ಆಪ್ 9-13 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ 7-11 ಸ್ಥಾನ ಗೆಲ್ಲಲಿದೆ ಎಂದು ತಿಳಿಸಿದ್ದರೆ, ಎಬಿಪಿ ನ್ಯೂಸ್-ಸಿ ವೋಟರ್ ಬಿಜೆಪಿ 83, ಆಪ್ 09, ಕಾಂಗ್ರೆಸ್ 09 ವಾರ್ಡ್ ಗಳಲ್ಲಿ ಗೆಲ್ಲಲಿದೆ ಎಂದು ಹೇಳಿತ್ತು.

    ಪೂರ್ವ ದೆಹಲಿ ಮಹಾನಗರ ಪಾಲಿಕೆ: 64
    ಇಂಡಿಯಾ ಟುಡೇ-ಆಕ್ಸಿಸ್ ಬಿಜೆಪಿ 45-51, ಆಪ್ 6-10, ಕಾಂಗ್ರೆಸ್ 04-08 ಸ್ಥಾನಗಳನ್ನು ಗೆಲ್ಲಲಿದೆ ಎಂದು ತಿಳಿಸಿದ್ದರೆ, ಎಬಿಪಿ ನ್ಯೂಸ್-ಸಿ ವೋಟರ್ ಸಮೀಕ್ಷೆ ಬಿಜೆಪಿ 47, ಆಪ್ 09, ಕಾಂಗ್ರೆಸ್ 06 ಸ್ಥಾನಗಳನ್ನು ಗಳಿಸಲಿದೆ ಎಂದು ಹೇಳಿತ್ತು.

    2015ರ ಚುನಾವಣೆಯಲ್ಲಿ ಯಾರಿಗೆ ಎಷ್ಟು ಸ್ಥಾನ?
    ಒಟ್ಟು 70 ವಿಧಾನಸಭಾ ಕ್ಷೇತ್ರಗಳಿದ್ದು, ಆಮ್ ಆದ್ಮಿ ಪಾರ್ಟಿ 63, ಬಿಜೆಪಿ 03ರಲ್ಲಿ ಗೆದ್ದಿದ್ದಾರೆ, ಕಾಂಗ್ರೆಸ್ ಶೂನ್ಯ ಸಂಪಾದಿಸಿತ್ತು.

    ಈಗ ಚುನಾವಣೆ ನಡೆದ್ರೆ ಎಷ್ಟು ಸ್ಥಾನ?
    ಇಂಡಿಯಾ ಟುಡೇ-ಆಕ್ಸಿಸ್ ದೆಹಲಿ ವಿಧಾನಸಭಾ ಚುನಾವಣಾ ಪೂರ್ವ ಸಮೀಕ್ಷೆಯ ಪ್ರಕಾರ ಈಗ ಚುನಾವಣೆ ನಡೆದರೆ, ಬಿಜೆಪಿ 56-62, ಆಪ್ 6-7, ಕಾಂಗ್ರೆಸ್ 4-7 ಸ್ಥಾನಗಳನ್ನು ಗಳಿಸಲಿದೆ ಎಂದು ತಿಳಿಸಿದೆ.

    ಗಮನಿಸಬೇಕಾದ ವಿಚಾರಗಳು
    – ಸರೈ ಪಿಪಾಲ್ ಥಲಾ ಮತ್ತು ಮೌಜ್‍ಪುರ್ ವಾರ್ಡ್‍ಗಳ ಅಭ್ಯರ್ಥಿಗಳು ನಿಧನರಾದ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದಿನ ತಿಂಗಳಿಗೆ ಮುಂದೂಡಲಾಗಿದೆ.
    É- ಪ್ರಸ್ತುತ ಪೂರ್ವ ದೆಹಲಿ ಮೇಯರ್ ಸತ್ಯ ಶರ್ಮಾ, ದಕ್ಷಿಣ ದೆಹಲಿ ಪಾಲಿಕೆ ಮೇಯರ್ ಶ್ಯಾಮ್ ಶರ್ಮಾ, ಉತ್ತರ ದೆಹಲಿ ಮಹಾನಗರ ಪಾಲಿಕೆ ಮೇಯರ್ ಡಾ ಸಂಜೀವ್ ನಯ್ಯಾರ್ ಇದ್ದಾರೆ
    – ಇದೇ ಮೊದಲ ಬಾರಿಗೆ ಆಮ್ ಆದ್ಮಿ ಪಾರ್ಟಿ ದೆಹಲಿ ಮಹಾನಗರ ಪಾಲಿಕೆಗಳ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಬಿಜೆಪಿ-ಶಿರೋಮಣಿ ಅಕಾಲಿದಳದ ಮೈತ್ರಿ ಇದೆ.
    – 267 ವಾರ್ಡ್‍ಗಳಲ್ಲಿ ಬಿಜೆಪಿ ಹೊಸ ಮುಖಗಳನ್ನು ಕಣಕ್ಕಿಳಿಸಿತ್ತು. ಯಾವ ಹಳೆಯ ಕಾರ್ಪೋರೇಟರ್‍ಗೂ ಟಿಕೆಟ್ ಕೊಟ್ಟಿಲ್ಲ
    – ಆಮ್ ಆದ್ಮಿ ಪಾರ್ಟಿ ಶಾಸಕ ವೇದ್ ಪ್ರಕಾಶ್ ಬಿಜೆಪಿಗೆ ಹಾರಿದ್ದರು. ದೆಹಲಿ ಕಾಂಗ್ರೆಸ್ ಘಟಕದ ಅಧ್ಯಕ್ಷ, ಮಾಜಿ ಸಚಿವ ಅರವಿಂದರ್ ಸಿಂಗ್ ಲವ್ಲಿ ಕೂಡಾ ಬಿಜೆಪಿ ಸೇರಿದ್ದರು.
    – ಇದೇ ತಿಂಗಳು ನಡೆದ ಉಪ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ ತನ್ನ ತೆಕ್ಕೆಯಲ್ಲಿದ್ದ ರಜೌರಿ ಗಾರ್ಡನ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಎದುರು ಸೋಲು ಅನುಭವಿಸಿತ್ತು.
    – 2015ರ ಫೆಬ್ರವರಿಯಲ್ಲಿ ಅಧಿಕಾರಕ್ಕೆ ಬಂದ ಆಮ್ ಆದ್ಮಿ ಪಾರ್ಟಿ ಸರ್ಕಾರಕ್ಕೆ ದೆಹಲಿ ಜನತೆ ನೀಡುತ್ತಿರುವ ಮಧ್ಯಂತರ ತೀರ್ಪು ಇದಾಗಿದೆ.