Tag: ಆಮ್ ಆದ್ಮಿ

  • `ಬೆಳಗಾವಿ ಫೈಲ್ಸ್’ ಕಾರ್ಟೂನ್ ಹಂಚಿಕೊಂಡ ರಾವತ್- `ಶಿವಸೇನಾ ಫೈಲ್ಸ್’ ನೋಡುವಂತೆ ಆಪ್ ತಿರುಗೇಟು

    `ಬೆಳಗಾವಿ ಫೈಲ್ಸ್’ ಕಾರ್ಟೂನ್ ಹಂಚಿಕೊಂಡ ರಾವತ್- `ಶಿವಸೇನಾ ಫೈಲ್ಸ್’ ನೋಡುವಂತೆ ಆಪ್ ತಿರುಗೇಟು

    ಬೆಳಗಾವಿ: ದಿ ಕಾಶ್ಮೀರ್ ಫೈಲ್ಸ್ ಚಲನಚಿತ್ರ ಕುರಿತು ರಾಷ್ಟ್ರವ್ಯಾಪಿ ವಿವಾದಗಳು ನಡೆಯುತ್ತಿರುವ ಬೆನ್ನಲ್ಲೇ ಇಲ್ಲಿನ ಶಿವಸೇನಾ ಸಂಸದ ಸಂಜಯ್ ರಾವತ್ `ಬೆಳಗಾವಿ ಫೈಲ್ಸ್’ ವ್ಯಂಗ್ಯಚಿತ್ರವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ಟೀಕಿಸಿದ್ದಾರೆ. ಜೊತೆಗೆ ಮತ್ತೆ ಬೆಳಗಾವಿಯ ಗಡಿ ವಿವಾದವನ್ನು ಕೆಣಕಿದ್ದಾರೆ.

    ವ್ಯಂಗ್ಯಚಿತ್ರವೊಂದನ್ನು ಪೋಸ್ಟ್ ಮಾಡಿ `ಬೆಳಗಾಂ ಫೈಲ್ಸ್’ ಎಂದು ಬರೆದಿದ್ದಾರೆ. ಬೆಳಗಾಂ ಫೈಲ್ಸ್ ಏನು ಕಡಿಮೆ ಇದೆಯೇ ಎಂದು ಪ್ರಶ್ನಿಸಲಾಗಿದೆ. ಪ್ರಜಾಪ್ರಭುತ್ವದ ಹತ್ಯೆ ನಡೆದಿದೆ ಎಂದು ಬಿಂಬಿಸಲಾಗಿದೆ. ಮರಾಠಿ ಯುವಕರು ಅಸಹಾಯಕರಾಗಿದ್ದಾರೆ ಎಂದು ಚಿತ್ರಿಸಲಾಗಿದೆ. ಗಡಿ ಬೆಳಗಾವಿಯಲ್ಲಿ ಮರಾಠಿ ಭಾಷಿಗರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದೆ ಎಂದು ಬಿಂಬಿಸುವ ಯತ್ನವನ್ನು ವ್ಯಂಗ್ಯಚಿತ್ರದ ಮೂಲಕ ಮಾಡಲಾಗಿದೆ. ಬೆಳಗಾವಿ ಮರಾಠಿಗರ ಮೇಲೆ ಕರ್ನಾಟಕ ಸರ್ಕಾರ ಹಾಗೂ ಪೋಲಿಸರು ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಪ್ರತಿಬಿಂಬಿಸುವ ಪೋಸ್ಟ್ ಹಾಕುವ ಮೂಲಕ ಪುಂಡಾಟಿಕೆ ಮೆರೆದಿದ್ದಾರೆ.

    ಎಂಎಸ್‍ಎಂಇ ಹಾಗೂ ಶೀವಸೇನೆ ನಾಯಕರು ಹಲವು ಬಾರಿ ಬೆಳಗಾವಿ ಗಡಿ ವಿಚಾರ ಕೆಣಕಿ ಮುಖಭಂಗ ಅನುಭವಿಸಿದ್ದರು. ಇದೀಗ `ದಿ ಕಾಶ್ಮೀರ್ ಫೈಲ್ಸ್’ ಗಿಂತಲೂ ಬೆಳಗಾವಿ ಫೈಲ್ಸ್ ಭಯಾನಕವಾಗಿದೆ ಎನ್ನುವ ಮೂಲಕ ಉದ್ಧಟತನ ಮೆರೆದಿದ್ದಾರೆ. ಇದರ ವಿರುದ್ಧ ಬೆಳಗಾವಿ ಕನ್ನಡಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಇದನ್ನೂ ಓದಿ: ಜನರೇ ಬಿಜೆಪಿ ಆಡಳಿತ ಮೆಚ್ಚಿದ್ದಾರೆ, ಅದ್ಕೆ ನಾವು ಜಾಸ್ತಿ ಮಾತಾಡಲ್ಲ: ಡಿ.ಕೆ ಸುರೇಶ್ ವ್ಯಂಗ್ಯ

    ಸಂಜಯ್ ರಾವತ್ ಟ್ವೀಟ್‍ಗೆ ಕಿಡಿಕಾರಿರುವ ಕನ್ನಡಪರ ಹೋರಾಟಗಾರರು, ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಸೇರಿಸುತ್ತೇವೆ ಅನ್ನೋರಿಗೆ ದೇಶದ್ರೋಹಿ ಅಂತೀವಿ. ಇನ್ನೂ ಕರ್ನಾಟಕದ ಅವಿಭಾಜ್ಯ ಅಂಗವಾಗಿರೋ ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಅನ್ನುವವರಿಗೆ ಏನೆಂದು ಕರೆಯಬೇಕು? ಜಟ್ಟಿ ನೆಲಕ್ಕೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎಂಬ ಗಾದೆಮಾತು ಶಿವಸೇನೆ ಮುಖಂಡರಿಗೆ ಸರಿಯಾಗಿಯೇ ಅನ್ವಯಿಸುತ್ತದೆ. ಎಷ್ಟು ಬಾರಿ ಮುಖಭಂಗ ಅನುಭವಿಸಿದರೂ ಕ್ಯಾತೆ ತೆಗೆಯೋದು ಮಾತ್ರ ನಿಲ್ಲಿಸುತ್ತಿಲ್ಲ ಎಂದು ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    SUPREME COURT

    2004ರಿಂದಲೂ ಸುಪ್ರೀಂ ಕೋರ್ಟ್ ಎದುರು ಬಾಕಿಯಿರುವ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದವನ್ನು ಮಹಾರಾಷ್ಟ್ರ ಸರ್ಕಾರ ಪದೇ ಪದೇ ಕೆಣಕುತ್ತಿದೆ. ಅಲ್ಲಿನ ವಿಧಾನಮಂಡಲ ಅಧಿವೇಶನದಲ್ಲಿ ವಿಸ್ತೃತವಾಗಿ ಚರ್ಚಿಸಲಾಗಿದೆ. ಅಲ್ಲದೇ ಕರ್ನಾಟಕ ಸರ್ಕಾರ ಮತ್ತು ಕನ್ನಡಿಗರ ವಿರುದ್ಧ ವಾಗ್ದಾಳಿ ನಡೆಸಲಾಗಿದೆ. ಈ ಮೂಲಕ ನ್ಯಾಯಾಂಗ ನಿಂದನೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಹಲವು ಪಾಕಿಸ್ತಾನಗಳನ್ನು ಹುಟ್ಟುಹಾಕಲು ಬಿಜೆಪಿ ಬಯಸುತ್ತಿದೆ: ಮೆಹಬೂಬಾ ಮುಫ್ತಿ

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಆಮ್ ಆದ್ಮಿ ಪಕ್ಷದ ಮುಖಂಡ ರಾಜಕುಮಾರ್ ಟೋಪಣ್ಣ, ಶಿವಸೇನಾದವರು ಗಡಿ ವಿವಾದವನ್ನು ಜೀವಂತವಿಡಲು ಯತ್ನಿಸುತ್ತಿದ್ದಾರೆ. ಪದೇ ಪದೇ ಕೆಣಕುತ್ತಿದೆ. ಬೆಳಗಾವಿಯಲ್ಲಿ ಕನ್ನಡಿಗರು- ಮರಾಠಿಗರು ಒಗ್ಗಟ್ಟಾಗಿದ್ದಾರೆ. ಮಹಾರಾಷ್ಟ್ರದಲ್ಲಿ ಶಿವಸೇನಾ ಭಾಗಿಯಾಗಿರುವ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಸಂಜಯ್ ರಾವತ್ ಮೊದಲು `ಶಿವಸೇನಾ ಫೈಲ್ಸ್’ ನೋಡಲಿ ಎಂದು ತಿರುಗೇಟು ನೀಡಿದ್ದಾರೆ.

  • ಆರೋಗ್ಯ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: ಸುಧಾಕರ್ ರಾಜೀನಾಮೆಗೆ ಎಎಪಿ ಆಗ್ರಹ

    ಆರೋಗ್ಯ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: ಸುಧಾಕರ್ ರಾಜೀನಾಮೆಗೆ ಎಎಪಿ ಆಗ್ರಹ

    ಬೆಂಗಳೂರು: ರಾಜ್ಯ ಆರೋಗ್ಯ ಇಲಾಖೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ವಿವಿಧ ಅಕ್ರಮಗಳಿಗೆ ಸಂಬಂಧಿಸಿ ರಾಜ್ಯಪಾಲರು ಮಧ್ಯಪ್ರವೇಶ ಮಾಡಿ, ಆರೋಗ್ಯ ಸಚಿವ ಡಾ. ಸುಧಾಕರ್‌ರವರಿಂದ ರಾಜೀನಾಮೆ ಪಡೆದು ನಿಷ್ಪಕ್ಷಪಾತ ತನಿಖೆಗೆ ಆದೇಶಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ ಆಗ್ರಹಿಸಿದೆ.

    ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಮ್ ಆದ್ಮಿ ಪಾರ್ಟಿಯ ಕಾನೂನು ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡ, ಆರೋಗ್ಯ ಇಲಾಖೆಯ ವೈದ್ಯರು, ಅರೆವೈದ್ಯಕೀಯ ಸಿಬ್ಬಂದಿಗಳ ನೇಮಕಾತಿ, ಬಡ್ತಿ ಹಾಗೂ ವರ್ಗಾವಣೆಯಲ್ಲಿ ಭ್ರಷ್ಟಾಚಾರವು ಎಗ್ಗಿಲ್ಲದೇ ನಡೆಯುತ್ತಿದೆ. ವೈದ್ಯಕೀಯ ಉಪಕರಣಗಳು ಹಾಗೂ ಔಷಧಿಗಳ ಖರೀದಿ, ನಿರ್ಮಾಣ ಕಾಮಗಾರಿ, ಹಾಗೂ ಮೂಲಸೌಕರ್ಯ ಕಲ್ಪಿಸುವುದರಲ್ಲಿ ಭಾರೀ ಪ್ರಮಾಣದ ಅಕ್ರಮವಾಗುತ್ತಿದೆ. ವೈದ್ಯಕೀಯ ಮಹಾವಿದ್ಯಾಲಯ, ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸೇವೆ ಪಡೆಯಲು ರೋಗಿಗಳು ಲಂಚ ನೀಡಬೇಕಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಯುದ್ಧಭೂಮಿಯಿಂದ ಕನ್ನಡಿಗರನ್ನು ಕರೆತಂದದ್ದು ಮೋದಿ ಭಗೀರಥ ಪ್ರಯತ್ನ: ಸಿಎಂ

    ನಿವೃತ್ತ ಜಿಲ್ಲಾ ವೈದ್ಯಾಧಿಕಾರಿ ಹಾಗೂ ಬಿಜೆಪಿಯ ಮಾಜಿ ಶಾಸಕ ಡಾ. ಸಾರ್ವಭೌಮ ಬಗಲಿಯವರು ಕೋವಿಡ್ ಮೊದಲ ಮತ್ತು ಎರಡನೇ ಅಲೆಯ ಸಂದರ್ಭದಲ್ಲಿ ವೈದ್ಯಕೀಯ ಉಪಕರಣ ಹಾಗೂ ಔಷಧಿ ಖರೀದಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿ ಲೋಕಾಯುಕ್ತಕ್ಕೆ 40 ದೂರು ನೀಡಿದ್ದಾರೆ. ಈ ಸಂಬಂಧ ತನಿಖೆಯೇ ನಡೆಯದಿರುವುದು ದುರದೃಷ್ಟಕರ. ಆರೋಗ್ಯ ಸಚಿವರು ರಾಜೀನಾಮೆ ನೀಡಿ, ನಿಷ್ಪಕ್ಷಪಾತ ತನಿಖೆ ನಡೆದರೆ ಆರೋಗ್ಯ ಇಲಾಖೆಯಲ್ಲಿನ ಕೋಟಿಗಟ್ಟಲೆ ಅವ್ಯವಹಾರ ಬಯಲಾಗುತ್ತದೆ. ರಾಜ್ಯಪಾಲರು ಶೀಘ್ರವೇ ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

    ನಿವೃತ್ತ ಕೆಎಎಸ್ ಅಧಿಕಾರಿ ಹಾಗೂ ಎಎಪಿಯ ರಾಜ್ಯ ಕಾರ್ಮಿಕ ಘಟಕದ ಅಧ್ಯಕ್ಷರಾದ ರವಿಶಂಕರ್ ಮಾತನಾಡಿ, ಆರೋಗ್ಯ ಸಚಿವರು ಹಾಗೂ ಅಧಿಕಾರಿಗಳ ಹಣದ ದಾಹಕ್ಕೆ ಸಾಮಾನ್ಯ ರೋಗಿಗಳು ಜೀವ ಕಳೆದುಕೊಳ್ಳುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಯಿಂದ ರೋಗಿಯ ಶವವನ್ನು ಹೊರತರಬೇಕಾದರೂ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಲಂಚ ನೀಡಬೇಕಾಗಿದೆ. ಆರೋಗ್ಯ ಇಲಾಖೆಯ ಟೆಂಡರ್ ಪ್ರಕ್ರಿಯೆಗಳಲ್ಲಿ ನಿಯಮಗಳನ್ನು ಗಾಳಿಗೆ ತೂರುವುದು ಸಾಮಾನ್ಯವಾಗಿದ್ದರೂ, ಯಾರ ವಿರುದ್ಧವೂ ತನಿಖೆ ನಡೆಯುತ್ತಿಲ್ಲ. ಭಷ್ಟ ಸಚಿವರಿಂದಾಗಿ ಇಲಾಖೆಯ ಇಡೀ ವ್ಯವಸ್ಥೆಯೇ ಭ್ರಷ್ಟವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಇದನ್ನೂ ಓದಿ: ಗುಜರಿ ಅಂಗಡಿಯಲ್ಲಿ ಸಿಲಿಂಡರ್ ಸ್ಫೋಟ – ಇಬ್ಬರು ಸಜೀವ ದಹನ ಓರ್ವ ಗಂಭೀರ

    ಆಮ್ ಆದ್ಮಿ ಪಾರ್ಟಿ ರಾಜ್ಯ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾದ ರಾಜಶೇಖರ್ ದೊಡ್ಡಣ್ಣ ಹಾಗೂ ಪಕ್ಷದ ಮಹಿಳಾ ಮುಖಂಡರಾದ ಅರ್ಚನಾ ಭಾಗವಹಿಸಿದ್ದರು.

  • ಪಂಜಾಬ್‍ನಲ್ಲಿ ಇಂದು ಭಗವಂತ್ ಮಾನ್‍ಗೆ ಪಟ್ಟಾಭಿಷೇಕ

    ಪಂಜಾಬ್‍ನಲ್ಲಿ ಇಂದು ಭಗವಂತ್ ಮಾನ್‍ಗೆ ಪಟ್ಟಾಭಿಷೇಕ

    ಚಂಡೀಗಢ: ಸಿಖ್ಖರ ನಾಡಿನಲ್ಲಿ ಇದೇ ಮೊದಲ ಬಾರಿ ಆಮ್ ಆದ್ಮಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದ್ದು, ಇಂದು ಸಿಎಂ ಆಗಿ ಭಗವಂತ್ ಮಾನ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

    ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಹುಟ್ಟೂರಾದ ಖಾಟ್ಕರ್ ಕಲಾನ್‍ನಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದ್ದು, ಆಪ್ ನಾಯಕರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ರಾಜಧಾನಿಯ ಹೊರಗೆ ಪ್ರಮಾಣ ವಚನ ನಡೀತಿರೋದು ವಿಶೇಷವಾಗಿದ್ದು, ಸಿಎಂ ಜೊತೆ 18 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 3 ಲಕ್ಷ ಮಂದಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಇದನ್ನೂ ಓದಿ: ಹೃದಯಸ್ಪರ್ಶಿ ಫೋಟೋ ಜೊತೆಗೆ ಭಗವಂತ ಮಾನ್‌ಗೆ ಶುಭಕೋರಿದ ಹರ್ಭಜನ್ ಸಿಂಗ್

    ಭಗವಂತ್ ಮಾನ್ ದುರಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಇವರ ವಿರುದ್ಧ ಸ್ಪರ್ಧಿಸಿದ್ದ ಕಾಂಗ್ರೆಸ್‍ನ ದಲ್ವಿರ್ಸಿಂಗ್ ಗೋಲ್ಡಿ 24,306 ಮತಗಳಿಸಿದ್ದು, ಭಗವಂತ್ ಮಾನ್‍ಗೆ 82,023 ಮತಗಳನ್ನು ಗಳಿಸಿಸುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದರು. ಅಧಿಕಾರ ವಹಿಸಿಕೊಂಡ ನಂತರ ಅವರ ಮೊದಲ ವ್ಯವಹಾರದ ಆದೇಶವೆಂದರೆ ಶಾಲೆಗಳು, ಆರೋಗ್ಯ, ಉದ್ಯಮ, ಕೃಷಿಯನ್ನು ಲಾಭದಾಯಕವಾಗಿಸುವುದಾಗಿದೆ ಎಂದು ಗೆಲುವಿನ ಬಳಿಕ ಘೋಷಿಸಿದ್ದರು. ಇದನ್ನೂ ಓದಿ: ಅಲ್ಲಿ ಝೆಲೆನ್ಸ್ಕಿ ಇಲ್ಲಿ ಮಾನ್ – ಒಂದೇ ಹಿನ್ನೆಲೆಯ ರಾಜಕಾರಣಿಗಳು ಟ್ವಿಟ್ಟರ್‌ನಲ್ಲಿ ಟ್ರೆಂಡ್

    ಜೊತೆಗೆ ಮಹಿಳೆಯರ ಸುರಕ್ಷತೆ ಮತ್ತು ಕ್ರೀಡಾ ಮೂಲಸೌಕರ್ಯಗಳನ್ನು ಸುಧಾರಿಸುವುದಾಗಿದೆ. ಅಲ್ಲದೆ ಒಂದು ತಿಂಗಳೊಳಗೆ ಪಂಜಾಬ್‍ನಲ್ಲಿ ಬದಲಾವಣೆಯನ್ನು ಕಾಣುತ್ತೀರಿ ಎಂದು ಭರವಸೆ ನೀಡಿದ್ದರು. ಆಮ್ ಆದ್ಮಿ ಪಕ್ಷವು ಪಂಜಾಬ್‍ನಲ್ಲಿ 117 ವಿಧಾನಸಭಾ ಸ್ಥಾನಗಳ ಪೈಕಿ 91 ರಲ್ಲಿ ಮುನ್ನಡೆ ಸಾಧಿಸುವ ಮೂಲಕ ಕ್ಲೀನ್ ಸ್ವೀಪ್ ಮಾಡಿತ್ತು.

    ಇತ್ತ ಗೋವಾದಲ್ಲಿ ಇಂದು ಶಾಸಕಾಂಗ ಸಭೆ ನಡೆಯಲಿದ್ದು, ಮುಂದಿನ ಸಿಎಂ ಆಯ್ಕೆ ನಡೆಯಲಿದೆ. ಹಾಲಿ ಸಿಎಂ ಪ್ರಮೋದ್ ಸಾವಂತ್ ಹಾಗೂ ಸಚಿವ ವಿಶ್ವಜಿತ್ ರಾಣೆ ರೇಸ್‍ನಲ್ಲಿದ್ದಾರೆ. ಇದನ್ನೂ ಓದಿ: ದೇಶದ ಭದ್ರತೆಗಾಗಿ ಕೇಂದ್ರ ಸರ್ಕಾರದೊಂದಿಗೆ ಕೆಲಸ ಮಾಡುತ್ತೇವೆ: ಕೇಜ್ರಿವಾಲ್‌

  • ಮೊಬೈಲ್ ರಿಪೇರಿ ಮಾಡುವ ವ್ಯಕ್ತಿ, ಸಮಾಜ ಸೇವಕಿ ಎದುರು ಸೋಲನುಭವಿಸಿದ ಘಟಾನುಘಟಿಗಳು

    ಮೊಬೈಲ್ ರಿಪೇರಿ ಮಾಡುವ ವ್ಯಕ್ತಿ, ಸಮಾಜ ಸೇವಕಿ ಎದುರು ಸೋಲನುಭವಿಸಿದ ಘಟಾನುಘಟಿಗಳು

    ಚಂಡೀಗಢ: ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ನೇತೃತ್ವದ ಆಮ್ ಆದ್ಮಿ ಪಕ್ಷ ಜಯಬೇರಿ ಬಾರಿಸಿದೆ. ಪಂಜಾಬ್ ಹಾಲಿ ಮುಖ್ಯಮಂತ್ರಿ ಕಾಂಗ್ರೆಸ್ ಮುಖಂಡ ಚರಣ್ ಜಿತ್ ಸಿಂಗ್ ಚೆನ್ನಿ (Charanjit Singh Channi), ಮೊಬೈಲ್ ರಿಪೇರಿ ಮಾಡುವ ಅಂಗಡಿಯ ವ್ಯಕ್ತಿಯ ವಿರುದ್ಧವಾಗಿ ಹೀನಾಯವಾಗಿ ಸೋತಿದ್ದಾರೆ.

    ಮೊಬೈಲ್ ರಿಪೇರಿ ಮಾಡುವ ಲಾಭ್ ಸಿಂಗ್ ಉಗೋಕೆ ಅವರು ಚನ್ನಿಯನ್ನು 40,000 ಮತಗಳ ಅಂತರದಿಂದ ಸೋಲಿಸಿದ್ದಾರೆ. ಲಾಭ್ ಸಿಂಗ್ ತಾಯಿ ಶಾಲೆಯಲ್ಲಿ ಕೆಲಸ ಮಾಡುತ್ತಾರೆ. ಈತನ ತಂದೆ ಕೂಲಿ ಕಾರ್ಮಿಕರಾಗಿದ್ದಾರೆ.  ಇದನ್ನೂ ಓದಿ:  ಬುಲ್ಡೋಜರ್ ಮುಂದೆ ಯಾರು ಬರಲು ಸಾಧ್ಯವಿಲ್ಲ: ಹೇಮಾ ಮಾಲಿನಿ

    ಪಂಜಾಬ್‍ನಲ್ಲಿ ಅದ್ಭುತ ನಡೆದಿದೆ. ಚುನಾವಣೋತ್ತರ ಸಮೀಕ್ಷೆಗಳು ನಿಜವಾಗಿವೆ. ಪೊರಕೆ ಗುರುತಿನ ಪಕ್ಷ ಆಮ್ ಆದ್ಮಿಗಳ ಅಖಂಡ ಆಪ್ ಕಿ ಸರ್ಕಾರ್ ಬಂದಿದೆ. ಕೇಜ್ರಿವಾಲ್ ಅವರ ಏಕ್ ಮೌಕಾ ನಿನಾದ ಫಲಿಸಿದೆ. ಆಮ್ ಆದ್ಮಿ ಕನ್ವಿನರ್ ಕೇಜ್ರಿವಾಲ್ ಪ್ರಕಟಿಸಿದ ಮ್ಯಾನಿಫೆಸ್ಟೋ ಮತ್ತು ಭರವಸೆಗಳಿಗೆ ಪಂಜಾಬಿಗಳು ಫಿದಾ ಆಗಿದ್ದಾರೆ. ಮುಖ್ಯವಾಗಿ ಏಕ್ ಮೌಕಾ ಕೇಜ್ರಿವಾಲ್, ಏಕ್ ಮೌಕಾ ಭಗವಂತ್ ಮನ್ ಘೋಷಣೆಗಳು ಜನ ಮನಗೆದ್ದಿದೆ. ಇದನ್ನೂ ಓದಿ: ಯುಪಿಯಲ್ಲಿ ‘ಬುಲ್ಡೋಜರ್ ಬಾಬಾ’ ಅಬ್ಬರ – ಮೋದಿ, ಯೋಗಿ ಆರ್ಭಟಕ್ಕೆ ಧೂಳೀಪಟ

    ಆಮ್ ಆದ್ಮಿ ಪಂಜಾಬ್‍ನಲ್ಲಿ ಲ್ಯಾಂಡ್‍ಸ್ಲೈಡ್ ವಿಕ್ಟರಿ ಸಾಧಿಸಿದ್ದಾರೆ. ಮೊದಲೇ ನಾಯಕತ್ವ ಕಚ್ಚಾಟದಲ್ಲಿ ಮುಳುಗಿದ್ದ ಕಾಂಗ್ರೆಸ್ ಪಕ್ಷವನ್ನು ಮತದಾರರು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ. ಶತಮಾನದ ಪಕ್ಷ ಧೂಳೀಪಟವಾಗಿದೆ. ಪಂಜಾಬ್‍ನಲ್ಲಿನ ಎಎಪಿ ವೇವ್ 2015ರ ದೆಹಲಿ ಫಲಿತಾಂಶವನ್ನು ನೆನಪಿಸಿದೆ. ಸಿಎಂ ಚನ್ನಿ, ಸಿಧು, ಅಮರಿಂದರ್ ಸಿಂಗ್, ಪ್ರಕಾಶ್ ಸಿಂಗ್ ಬಾದಲ್ ಸೇರಿ ಘಟಾನುಘಟಿಗಳೆಲ್ಲಾ ಮನೆ ಸೇರಿದ್ದಾರೆ. ಇಲ್ಲಿ ಗಮನಿಸಬೇಕಾದ ಅಂಶ ಅಂದ್ರೆ, ಸಿಎಂ ಚನ್ನಿಯನ್ನು ಸೋಲಿಸಿದ್ದು ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡ್ತಿದ್ದ ಓರ್ವ ಕಾಮನ್ ಮ್ಯಾನ್. ಇದನ್ನೂ ಓದಿ: ಬಿಜೆಪಿಗೆ ಗೆಲುವು – 4 ದಾಖಲೆ ಬರೆದ ಸಿಎಂ ಯೋಗಿ

    ಸಿಧುರನ್ನು (Navjot Singh Sidhu) ಸೋಲಿಸಿದ್ದು ಸಮಾಜ ಸೇವಕಿ ಜೀವನ್‍ ಜ್ಯೋತ್ ಕೌರ್. ಫೋನ್ ಕಾಲ್ ಸ್ಪಂದನೆ ಮೂಲಕ ಸಿಎಂ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದ ಭಗವಂತ್ ಮನ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಆದರೆ ರಾಜಭವನದಲ್ಲಿ ಅಲ್ಲ. ತಮ್ಮ ಪೂರ್ವಿಕರ ಗ್ರಾಮ ಕಟ್ಕರ್ ಕಲನ್‍ನಲ್ಲಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದು ಭಗತ್ ಸಿಂಗ್ ಹುಟ್ಟೂರು ಕೂಡ ಹೌದು. ಅಂದ ಹಾಗೇ, ಭಗವಂತ್ ಮನ್ ಒಂದು ಕಾಲದಲ್ಲಿ ಹಾಸ್ಯ ನಟ. ಇನ್ನು ಸಿಎಂ ಚನ್ನಿ ನಾಳೆ ರಾಜಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸಲಿದ್ದಾರೆ.

  • ಬಿಜೆಪಿ ಗೆಲುವನ್ನು ಜೀರ್ಣಿಸಿಕೊಳ್ಳುವುದನ್ನು ಕಲಿಯಬೇಕು: ಸಂಜಯ್ ರಾವತ್

    ಬಿಜೆಪಿ ಗೆಲುವನ್ನು ಜೀರ್ಣಿಸಿಕೊಳ್ಳುವುದನ್ನು ಕಲಿಯಬೇಕು: ಸಂಜಯ್ ರಾವತ್

    ಮುಂಬೈ: ಸೋಲನ್ನು ಒಪ್ಪಿಕೊಳ್ಳುವುದು ಕೆಲವೊಮ್ಮೆ ಸುಲಭವಾಗುತ್ತದೆ ಆದರೆ ಬಿಜೆಪಿ ಗೆಲುವನ್ನು ಜೀರ್ಣಿಸಲು ಕಲಿಯಬೇಕು ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಜಾಬ್‍ನಲ್ಲಿ ಎಎಪಿ ಐತಿಹಾಸಿಕ ಗೆಲುವು ಸಾಧಿಸಿದೆ. ಆದರೆ ಕಾಂಗ್ರೆಸ್ ಪಂಚರಾಜ್ಯ ಚುನಾವಣೆಯಲ್ಲಿ ಹೀನಾಯವಾಗಿ ಸೋಲನುಭವಿಸಿದೆ. ಕಾಂಗ್ರೆಸ್ ಪಕ್ಷದ ಚುನಾವಣಾ ನಿರ್ವಹಣೆ ಸಾಕಷ್ಟು ಉತ್ತಮವಾಗಿಲ್ಲ ಎಂದು ತಿಳಿಸಿದರು.

    ಅಖಿಲೇಶ್ ಯಾದವ್ ಉತ್ತಮವಾಗಿ ಕಾರ್ಯನಿರ್ವಹಿಸುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಅದು ಸಾಧ್ಯವಾಗಲಿಲ್ಲ. ಎಸ್‍ಪಿ ಹಾಗೂ ಕಾಂಗ್ರೆಸ್ ಮೈತ್ರಿ ಮಾಡಿಕೊಂಡರೆ ಉತ್ತರಪ್ರದೇಶದ ಸಂಖ್ಯಾಬಲ ಹೆಚ್ಚಾಗುತ್ತಿತ್ತು ಎಂದರು. ಇದನ್ನೂ ಓದಿ: ಗೋವಾಗೂ ಎಂಟ್ರಿ ಕೊಟ್ಟ AAP

    ಪಂಚರಾಜ್ಯಗಳ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಎಲ್ಲರಿಗೂ ಅಭಿನಂದನೆಯನ್ನು ಸಲ್ಲಿಸಿದ ಅವರು, ಗೋವಾ ಚುನಾವಣೆಗೂ ಮುನ್ನ ಶಿವಸೇನೆ ಹಾಗೂ ಎನ್‍ಸಿಪಿ ಮೈತ್ರಿ ಮಾಡಿಕೊಳ್ಳುವುದಾಗಿ ಘೋಷಿಸಿದ್ದೆವು. ಆದರೆ ಉತ್ತರಪ್ರದೇಶ ಹಾಗೂ ಗೋವಾದಲ್ಲಿ ಶಿವಸೇನೆ ಸೋತಿದೆ. ಇದು ಕೇವಲ ಆರಂಭ. ನಮ್ಮ ಹೋರಾಟ ಮುಂದುವರೆಯುತ್ತದೆ. ನಾವು ಮಹಾರಾಷ್ಟ್ರದ ಹೊರಗೆ ಹೋರಾಟವನ್ನು ಮುಂದುವರಿಸುತ್ತೇವೆ. ಇದನ್ನೂ ಓದಿ: 16 ಚಿನ್ನದ ಪದಕ ಪಡೆಯುವ ಮೂಲಕ ಹೊಸ ದಾಖಲೆ ಮಾಡಿದ ಚಿನ್ನದ ಹುಡುಗಿ!

  • ವ್ಯವಸ್ಥೆ ಬದಲಾಗದ ಹೊರತು ಏನು ಮಾಡಲು ಆಗಲ್ಲ: ಟಬು ರಾವ್

    ವ್ಯವಸ್ಥೆ ಬದಲಾಗದ ಹೊರತು ಏನು ಮಾಡಲು ಆಗಲ್ಲ: ಟಬು ರಾವ್

    ಬೆಂಗಳೂರು: ವ್ಯವಸ್ಥೆ ಬದಲಾಗದ ಹೊರತು ಮಾಡಲು ಆಗುವುದಿಲ್ಲ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪತ್ನಿ ಟಬು ರಾವ್ ಹೇಳಿದ್ದಾರೆ.

    ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಈ ಬಗ್ಗೆ ಟ್ವೀಟ್ ಮಾಡಿದ ಅವರು ಕಾಂಗ್ರೆಸ್, ಬಿಜೆಪಿ, ಆಮ್ ಆದ್ಮಿ ಪಕ್ಷದ ಕುರಿತಾಗಿ ಹಂಚಿಕೊಂಡಿದ್ದಾರೆ. ಅದರಲ್ಲೂ ಪಂಜಾಬ್‍ನಲ್ಲಿ ಆಮ್ ಆದ್ಮಿ ಪಕ್ಷದ ಗೆಲುವನ್ನು ಬಗ್ಗೆ ಶ್ಲಾಘಿಸಿದ್ದಾರೆ. ಇದನ್ನೂ ಓದಿ: ಪಂಜಾಬ್ ಚುನಾವಣಾ ಫಲಿತಾಂಶ ಕರ್ನಾಟಕ ಕಾಂಗ್ರೆಸ್‌ಗೆ ಪಾಠವಾಗುತ್ತಾ?

    ಟ್ವೀಟ್‍ನಲ್ಲಿ ಏನಿದೆ?
    ಬಿಜೆಪಿಯೂ ಮತ್ತೊಮ್ಮೆ ಎಲ್ಲವನ್ನು ಧೂಳಿಪಟ ಮಾಡಿದೆ. ಆದರೆ ಆಮ್ ಆದ್ಮಿ ಪಕ್ಷವು ಅಸಾಧಾರಣ ಗೆಲುವು ಸಾಧಿಸಿದ್ದು, ನಿಜಕ್ಕೂ ಅರವಿಂದ್ ಕೇಜ್ರಿವಾಲ್ ಅವರು ಸಮರ್ಥ ನಾಯಕರಾಗಿ ಹೊರಹೊಮ್ಮಿದ್ದಾರೆ. ವ್ಯವಸ್ಥೆ ಬದಲಾಗದೇ ಜನರೂ ಎಷ್ಟೇ ಕಷ್ಟ ಪಟ್ಟರೂ ಯಾವುದೇ ಪ್ರಯೋಜನವಿಲ್ಲ. ವ್ಯವಸ್ಥೆ ಬದಲಾಗದ ಹೊರತು ಏನನ್ನು ತರಲಾಗುವುದಿಲ್ಲ ಎಂದು ಕಾಂಗ್ರೆಸ್ ಕುರಿತಾಗಿ ತಿಳಿಸಿದರು. ಇದನ್ನೂ ಓದಿ:  Bulldozer is Back – ಟ್ರೆಂಡ್‌ ಆಯ್ತು ಬುಲ್ಡೋಜರ್‌

  • ಈ ಕ್ರಾಂತಿಗಾಗಿ ಪಂಜಾಬ್ ಜನತೆಗೆ ಧನ್ಯವಾದಗಳು: ಕೇಜ್ರಿವಾಲ್

    ಈ ಕ್ರಾಂತಿಗಾಗಿ ಪಂಜಾಬ್ ಜನತೆಗೆ ಧನ್ಯವಾದಗಳು: ಕೇಜ್ರಿವಾಲ್

    ನವದೆಹಲಿ: ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಜಯ ಹೊಸ್ತಿಲಲ್ಲಿದ್ದು, ಪಂಜಾಬ್ ಜನತೆಗೆ ಆಮ್ ಆದ್ಮಿ ಮುಖ್ಯಸ್ಥ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದರು.

    ಪಂಜಾಬ್‍ನಲ್ಲಿ ಎಎಪಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಅವರನ್ನು ಭೇಟಿಯಾದ ಅವರು, ಆಮ್ ಆದ್ಮಿ ಪಕ್ಷದ ಕೇಂದ್ರಾಡಳಿತವಾಗಿರುವ ದೆಹಲಿಗಿಂತ ಭಿನ್ನವಾಗಿ ಹಾಗೂ ಪೂರ್ಣ ರಾಜ್ಯವನ್ನು ನಡೆಸುವ ಅವಕಾಶವನ್ನು ಪಂಜಾಬ್ ಗೆಲುವು ನೀಡಿದೆ. ಈ ಕ್ರಾಂತಿಗಾಗಿ ಪಂಜಾಬ್‍ನ ಜನತೆಗೆ ಧನ್ಯವಾದವನ್ನು ತಿಳಿಸಿದರು.

    ಈ ಬಗ್ಗೆ ಟ್ವೀಟ್ ಮಾಡಿರುವ ಕೇಜ್ರಿವಾಲ್ ಅವರು ಭಗವಂತ್ ಮಾನ್ ಅವರ ಜೊತೆ ವಿಜಯದ ಸಂಕೇತ ತೋರಿಸುವ ಫೋಟೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಪಂಜಾಬ್‍ನಲ್ಲಿ ಎಎಪಿ ಮುನ್ನಡೆ – ಭಗವಂತ್ ಮಾನ್ ಮನೆಯಲ್ಲಿ ಸಂಭ್ರಮಾಚರಣೆ ಶುರು

    ಮಧ್ಯಾಹ್ನ 1ಗಂಟೆಯ ಟ್ರೆಂಡ್ ಪ್ರಕಾರ ಆಪ್ 91, ಕಾಂಗ್ರೆಸ್ 17, ಶಿರೋಮಣಿ ಅಖಾಲಿ ದಳ 06, ಬಿಜೆಪಿ 2, ಇತರರು 1 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಈಗಾಗಲೇ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಅವರ ಮನೆಯಲ್ಲಿ ಸಂಭ್ರಮಾಚರಣೆ ಪ್ರಾರಂಭವಾಗಿದೆ. ಇದನ್ನೂ ಓದಿ:  ಪಂಜಾಬ್‌ನಲ್ಲಿ AAP ಗೆದ್ದಿದ್ದು ಹೇಗೆ?

  • ಆಮ್ ಆದ್ಮಿ ಪಕ್ಷಕ್ಕೆ ಯಾವ ಸಿದ್ಧಾಂತ, ದಿಕ್ಕಿಲ್ಲ, ಸ್ಪಷ್ಟತೆಯೂ ಇಲ್ಲ: ಸಚಿವ ಅಶ್ವಥ್ ನಾರಾಯಣ

    ಆಮ್ ಆದ್ಮಿ ಪಕ್ಷಕ್ಕೆ ಯಾವ ಸಿದ್ಧಾಂತ, ದಿಕ್ಕಿಲ್ಲ, ಸ್ಪಷ್ಟತೆಯೂ ಇಲ್ಲ: ಸಚಿವ ಅಶ್ವಥ್ ನಾರಾಯಣ

    ಧಾರವಾಡ: ಆಮ್ ಆದ್ಮಿ ಪಕ್ಷಕ್ಕೆ ಯಾವ ಸಿದ್ಧಾಂತ, ದಿಕ್ಕಿಲ್ಲ, ಸ್ಪಷ್ಟತೆಯೂ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಹೇಳಿದರು.

    ಪಂಚ ರಾಜ್ಯ ಚುನಾವಣೆಯ ಮತ ಏಣಿಕೆಯಲ್ಲಿ ಪಂಜಾಬ್‍ನಲ್ಲಿ ಆಮ್ ಆದ್ಮಿ ಮುನ್ನಡೆ ಸಾಧಿಸಿದ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಮ್ ಆದ್ಮಿ ದೆಹಲಿಯಂತಹ ಸಿಟಿಯಲ್ಲಿ ರಾಜಕೀಯ ಮಾಡಿದೆ. ಅದು ಕೂಡಾ ನಮ್ಮ ರಾಜಧಾನಿ ಬೆಂಗಳೂರಿನಂತಹ ಸಿಟಿ ಇದ್ದ ಹಾಗೇ ಎಂದು ಹೇಳಿದರು.

    ಉಚಿತ ವಿದ್ಯುತ್, ಶಾಲೆ, ಮೌಲಾ ಕ್ಲಿನ್ ಮಾಡಿದ್ದೇವೆ ಎಂದು ಆಪ್ ನವರು ಹೇಳುತ್ತಾರೆ. ಅದೆಲ್ಲವೂ ನಗರ ಪ್ರದೇಶದಲ್ಲಿ ನಡೆದಿರುವುದು. ಪಂಜಾಬ್‍ದಂತಹ ರಾಜ್ಯದಲ್ಲಿ ಅವರಿಗೆ ಪ್ರಾರಂಭ ಅಷ್ಟೇ. ಸರ್ಕಾರ ಬಂದರೂ ಅದು ಒಂದೇ ಸರ್ಕಾರದಲ್ಲಿ ಕೊನೆಯಾಗುತ್ತದೆ. ಪ್ರಾರಂಭವೇ ಅವರಿಗೆ ಕೊನೆ ಆಗುತ್ತದೆ ಎಂದರು.

    ಆಮ್ ಆದ್ಮಿ ಅಂತ ಪಕ್ಷಗಳು ಅಲ್ಲಿ ನೆಲ ಊರಲು ಸಾಧ್ಯವಿಲ್ಲ. ಇಂತಹ ಪಕ್ಷಗಳು ಬರುತ್ತವೆ, ಹೋಗುತ್ತವೆ, ಆ ಪಕ್ಷಕ್ಕೆ ಮಾನ್ಯತೆ ಕೊಡುವ ಅವಶ್ಯಕತೆ ಇಲ್ಲ. ಈ ಪಕ್ಷಕ್ಕೆ ಭವಿಷ್ಯವಿಲ್ಲ, ಯಾವ ಸಿದ್ಧಾಂತ, ದಿಕ್ಕಿಲ್ಲ, ಸ್ಪಷ್ಟತೆಯೂ ಇಲ್ಲ, ಸಣ್ಣ ಮಟ್ಟದಲ್ಲಿ ನಗರದ ಪ್ರದೇಶದಲ್ಲಿ ಕೆಲಸ ಮಾಡಿದೆಯಷ್ಟೇ ಎಂದು ವ್ಯಂಗ್ಯವಾಡಿದರು.

  • ಪಂಜಾಬ್‍ನಲ್ಲಿ ಆಪ್‍ಗೆ ಸಿಗುತ್ತಾ ಅಧಿಕಾರ..?- ಉತ್ತರಾಖಂಡ್, ಮಣಿಪುರ ಕತೆಯೇನು..?

    ಪಂಜಾಬ್‍ನಲ್ಲಿ ಆಪ್‍ಗೆ ಸಿಗುತ್ತಾ ಅಧಿಕಾರ..?- ಉತ್ತರಾಖಂಡ್, ಮಣಿಪುರ ಕತೆಯೇನು..?

    ಚಂಡೀಗಢ: ಪಂಜಾಬ್‍ನಲ್ಲಿ ಆಮ್ ಆದ್ಮಿ (Aam Aadmi) ಪಕ್ಷ ಅಧಿಕಾರಕ್ಕೆ ಏರಲಿದೆ, ಕಾಂಗ್ರೆಸ್ (Congress) ಧೂಳೀಪಟವಾಗಲಿದೆ ಎಂದು ಎಲ್ಲಾ ಎಕ್ಸಿಟ್ ಪೋಲ್‍ (Exit Poll) ಗಳು ಹೇಳಿವೆ. ಆದರೆ ಕಾಂಗ್ರೆಸ್ ವಿಶ್ವಾಸ ಕಳೆದುಕೊಂಡಂತೆ ಕಾಣುತ್ತಿಲ್ಲ. 2017ರಲ್ಲಿಯೂ ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಹೇಳಿದ್ದು ಕೂಡ ಎಎಪಿ (AAP) ಬರುತ್ತೆ ಎಂದು. ಆದರೆ ಗೆದ್ದಿದ್ದು ಮಾತ್ರ ಕಾಂಗ್ರೆಸ್ ಆಗಿತ್ತು. ಹೀಗಾಗಿ ಈ ಬಾರಿಯೂ ಅದೇ ಮ್ಯಾಜಿಕ್ ನಿರೀಕ್ಷೆಯಲ್ಲಿ ಕಾಂಗ್ರೆಸ್ ಇದೆ.

    Exit Poll- ಪಂಜಾಬ್‍ನಲ್ಲಿ ಆಪ್ ಸರ್ಕಾರ 
    ಪೋಲ್ ಆಫ್ ದಿ ಪೋಲ್ಸ್ ಪ್ರಕಾರ ಆಪ್‍ಗೆ ಸ್ಪಷ್ಟ ಬಹುಮತ ಬರುತ್ತದೆ. ಸರ್ವೇ ಪ್ರಕಾರ ಆಪ್- 68, ಕಾಂಗ್ರೆಸ್ 28 ಸ್ಥಾನ ಸಿಗಲಿದ್ದು, ಅಕಾಲಿದಳ 19, ಬಿಜೆಪಿ (BJP)ಗೆ 4 ಸ್ಥಾನ ಸಾಧ್ಯತೆ ಇದೆ. ಕಾಂಗ್ರೆಸ್ ಒಳಜಗಳದಿಂದ ಅಧಿಕಾರ ನಷ್ಟವಾಗಬಹುದು. ಇಲ್ಲಿ ಬಿಜೆಪಿಗೆ ಕ್ಯಾಪ್ಟನ್ ಮೈತ್ರಿ ವರ್ಕೌಟ್ ಆಗಿಲ್ಲ. ಅತಂತ್ರವಾದಲ್ಲಿ ಅಕಾಲಿಗಳ ಜೊತೆ ಆಪ್ ಮೈತ್ರಿ ಸಾಧ್ಯತೆ ಇದೆ. ಇದನ್ನೂ ಓದಿ: ಗುರುವಾರ ಪಂಚರಾಜ್ಯ ಚುನಾವಣಾ ಫಲಿತಾಂಶ- ಯುಪಿಯಲ್ಲಿ ಯಾರಿಗೆ ಒಲಿಯುತ್ತೆ ಅದೃಷ್ಟ..?

    ಒಟ್ಟು ಸ್ಥಾನಗಳು 117, ಬಹುಮತಕ್ಕೆ 59
    ಇಂಡಿಯಾ ಟುಡೇ:
    ಆಪ್‌ 76-90, ಕಾಂಗ್ರೆಸ್‌ 19-31, ಅಕಾಲಿ ದಳ 7-11, ಬಿಜೆಪಿ + 1-4, ಇತರರು 01

    ರಿಪಬ್ಲಿಕ್‌:
    ಆಪ್‌ 62-70, ಕಾಂಗ್ರೆಸ್‌ 23-31, ಅಕಾಲಿ ದಳ 16-24, ಬಿಜೆಪಿ+ 1-3,ಇತರರು 1-3

    ಟೈಮ್ಸ್‌ ನೌ:
    ಆಪ್‌ 70, ಕಾಂಗ್ರೆಸ್‌ 22, ಅಕಾಲಿ ದಳ 19, ಬಿಜೆಪಿ 05, ಇತರರು 0-1

    ಟುಡೇಸ್ ಚಾಣಕ್ಯ
    ಆಪ್‌ 100, ಕಾಂಗ್ರೆಸ್‌ 10, ಅಕಾಲಿ ದಳ 06, ಬಿಜೆಪಿ 01, ಇತರರು 00

    ಜನ ಕೀ ಬಾತ್‌
    ಆಪ್‌ 72, ಕಾಂಗ್ರೆಸ್‌ 24, ಅಕಾಲಿ ದಳ 15, ಬಿಜೆಪಿ + 05, ಇತರರು 01

    2017ರ ಫಲಿತಾಂಶ:
    ಕಾಂಗ್ರೆಸ್ 77, ಆಪ್ 20, ಎಸ್‍ಎಡಿ+ ಬಿಜೆಪಿ  18, ಇತರರು 02

    ಉತ್ತರಾಖಂಡ್ ಮತ್ತು ಮಣಿಪುರದ ಕತೆ ಏನು ಎಂಬುದನ್ನು ಸಂಕ್ಷಿಪ್ತವಾಗಿ ನೋಡೋದಾದ್ರೆ
    Exit Poll- ಬಿಜೆಪಿಗೆ ‘ಮಣಿ'(60)… ಅತಂತ್ರ ‘ಖಂಡ`!(70)
    ಪೋಲ್ ಆಫ್ ದಿ ಪೋಲ್ಸ್ ಪ್ರಕಾರ ಮಣಿಪುರದಲ್ಲಿ ಬಿಜೆಪಿ ಅಧಿಕಾರಕ್ಕೇರುವ ಸಾಧ್ಯತೆ ಇದೆ. ಬಿಜೆಪಿ- 30, ಕಾಂಗ್ರೆಸ್- 13, ಇತರರಿಗೆ 17 ಸ್ಥಾನಗಳು ಬರಬಹುದು. ಅತಂತ್ರವಾದಲ್ಲಿ ಪ್ರಾದೇಶಿಕ ಪಕ್ಷಗಳ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳುವ ಸಂಭವವೂ ಇದೆ.

    ಒಟ್ಟು ಸ್ಥಾನಗಳು 70, ಬಹುಮತಕ್ಕೆ 36
    ಇಂಡಿಯಾ ಟುಡೇ
    ಬಿಜೆಪಿ + 41, ಕಾಂಗ್ರೆಸ್‌ 25, ಆಪ್ 0, ಬಿಎಸ್‌ಪಿ 3, ಇತರರು 4

    ರಿಪಬ್ಲಿಕ್‌
    ಬಿಜೆಪಿ+ 35-39, ಕಾಂಗ್ರೆಸ್‌ 28-24, ಆಪ್‌ 0-3, ಬಿಎಸ್‌ಪಿ 0, ಇತರರು 0

    ಟೈಮ್ಸ್‌ ನೌ
    ಬಿಜೆಪಿ+ 37, ಕಾಂಗ್ರೆಸ್‌ 31, ಆಪ್‌ 01, ಬಿಎಸ್‌ಪಿ, ಇತರರು 0

    ಟುಡೇಸ್‌ ಚಾಣಕ್ಯ
    ಬಿಜೆಪಿ 43, ಕಾಂಗ್ರೆಸ್‌ 24, ಇತರರು 3

    ಜನ ಕೀ ಬಾತ್‌
    ಬಿಜೆಪಿ 32 -41, ಕಾಂಗ್ರೆಸ್‌ 27-35, ಆಪ್‌ 0-1, ಇತರರು 0

    ಒಟ್ಟು ಸ್ಥಾನ 70 ಬಹುಮತಕ್ಕೆ 36
    2017ರ ಫಲಿತಾಂಶ ಬಿಜೆಪಿ 57, ಕಾಂಗ್ರೆಸ್ 11, ಇತರರು 2

    ಪೋಲ್ ಆಫ್ ದಿ ಪೋಲ್ಸ್ ಪ್ರಕಾರ ಉತ್ತರಾಖಂಡ (Uttarakhand) ಅತಂತ್ರವಾಗಲಿದೆ. ಸರ್ವೇ ಪ್ರಕಾರ ಬಿಜೆಪಿ 35, ಕಾಂಗ್ರೆಸ್ 32, ಎಎಪಿ 1, ಇತರೆ 2 ಸ್ಥಾನಗಳು ಬರಲಿದೆ. ಸಮೀಕ್ಷೆ ನಿಜವಾದ್ರೆ ಎರಡೂ ಪಕ್ಷಗಳಿಗೂ ಸರ್ಕಾರ ರಚನೆ ಸಮಾನ ಅವಕಾಶ ಇರಲಿದೆ. ಇಲ್ಲಿಯೂ ಕುದುರೆ ವ್ಯಾಪಾರ ಸಾಧ್ಯತೆ, ಕಾಂಗ್ರೆಸ್-ಬಿಜೆಪಿ ರಣತಂತ್ರ ಹೂಡುವ ಸಾಧ್ಯತೆಗಳಿವೆ.

    ಒಟ್ಟು ಸ್ಥಾನಗಳು 60, ಬಹುಮತಕ್ಕೆ 31
    ಇಂಡಿಯಾ ಟುಡೇ
    ಬಿಜೆಪಿ 33-43, ಕಾಂಗ್ರೆಸ್‌ 4-8, ಎನ್‌ಪಿಎಫ್‌ 0, ಎನ್‌ಪಿಪಿ 4-8, ಇತರರು 6-15

    ರಿಪಬ್ಲಿಕ್‌
    ಬಿಜೆಪಿ 27-31, ಕಾಂಗ್ರೆಸ್‌ 11-17, ಎನ್‌ಪಿಎಫ್‌ 6-10, ಎನ್‌ಪಿಪಿ 2-6, ಇತರರು 3-7

    ಟೈಮ್ಸ್‌ ನೌ
    ಬಿಜೆಪಿ 32-38, ಕಾಂಗ್ರೆಸ್‌ 12-17, ಎನ್‌ಪಿಎಫ್‌ 3-5, ಎನ್‌ಪಿಪಿ 2-5, ಇತರರು 0

    ಜನಕೀ ಬಾತ್‌
    ಬಿಜೆಪಿ 23-28, ಕಾಂಗ್ರೆಸ್‌ 14-10, ಎನ್‌ಪಿಎಫ್‌ 8-5, ಎನ್‌ಪಿಪಿ 7-8, ಇತರರು 0

    2017ರ ಫಲಿತಾಂಶ
    ಬಿಜೆಪಿ 21, ಕಾಂಗ್ರೆಸ್ 28, ಇತರರು 11

  • ಆಮ್ ಆದ್ಮಿ, ಕಾಂಗ್ರೆಸ್ ಪಕ್ಷದ Xerox Copy: ಮೋದಿ ವ್ಯಂಗ್ಯ

    ಆಮ್ ಆದ್ಮಿ, ಕಾಂಗ್ರೆಸ್ ಪಕ್ಷದ Xerox Copy: ಮೋದಿ ವ್ಯಂಗ್ಯ

    ಚಂಡೀಗಢ: ಪಂಜಾಬ್ ಚುನಾವಣೆ ಅಖಾಡಕ್ಕೆ ಇಳಿದಿರುವ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಮತ್ತು ಆಮ್ ಆದ್ಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಇಂದು ಫಾಜಿಲ್ಕಾ ಜಿಲ್ಲೆಯ ಅಬೋಹರ್ ನಗರದಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಆಮ್ ಆದ್ಮಿ ಪಕ್ಷವೂ ಕಾಂಗ್ರೆಸ್‍ನ ಜೆರಾಕ್ಸ್ ಕಾಪಿ ಎಂದು ಟೀಕಿಸಿದ್ದಾರೆ. ಕಾಂಗ್ರೆಸ್ ಮತ್ತು ಆಮ್ ಆದ್ಮಿ ಭ್ರಷ್ಟಾಚಾರದ ಪಾಲುದಾರರು. ಒಬ್ಬರು ಪಂಜಾಬ್ ಲೂಟಿ ಮಾಡುತ್ತಿದ್ದರೇ ಮತ್ತೊಬ್ಬರು ದೆಹಲಿಯಲ್ಲಿ ಲೂಟಿ ಆರಂಭಿಸಿದ್ದಾರೆ ಎಂದು ಕುಟುಕಿದ್ದಾರೆ.

    ಈ ಎರಡು ಪಕ್ಷಗಳು ಪ್ರಸ್ತುತ ಪಂಜಾಬ್ ನಲ್ಲಿ WWF ಆಡುತ್ತಿವೆ ಎಂದು ವ್ಯಂಗ್ಯ ಮಾಡಿದ್ದು, ಕಾಂಗ್ರೆಸ್ ಮತ್ತು ಆಮ್ ಆದ್ಮಿ ಅಯೋಧ್ಯೆಯಲ್ಲಿ ರಾಮಮಂದಿರವನ್ನು ಪ್ರಶ್ನೆ ಮಾಡುತ್ತಿವೆ. ರಾಮನನ್ನು ವಿರೋಧಿಸುತ್ತವೆ. ಮತ್ತೊಂದು ಕಡೆ ನಮ್ಮ ಸೈನಿಕರ ಶೌರ್ಯವನ್ನು ಪ್ರಶ್ನೆ ಮಾಡುತ್ತವೆ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ವಿಭಜಕ ಮನಸ್ಥಿತಿಯ ಜನರನ್ನು ಪಂಜಾಬ್‍ನಲ್ಲಿ ಆಳಲು ಬಿಡಬೇಡಿ: ಮೋದಿ

    ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹ: ಆ.5ರಂದು 'ಆಪ್' ನಾಯಕರಿಂದ ಉಪವಾಸ ಸತ್ಯಾಗ್ರಹ- Kannada Prabha

    ಪಂಜಾಬ್‍ಗೆ ಈಗ ಅಭಿವೃದ್ಧಿಗೆ ಪೂರಕವಾದ ಮತ್ತು ದೇಶಭಕ್ತಿಯ ಸರ್ಕಾರದ ಅವಶ್ಯಕತೆ ಇದೆ. ಹೀಗಾಗಿ ಹೊಸ ಅಭಿವೃದ್ಧಿಯ ಸಂಕಲ್ಪದೊಂದಿಗೆ ಬಿಜೆಪಿ ಬಂದಿದ್ದು, ಮತ ನೀಡುವ ಮೂಲಕ ಬೆಂಬಲಿಸಬೇಕು ಎಂದು ಜನರಿಗೆ ಮನವಿ ಮಾಡಿಕೊಂಡಿದ್ದಾರೆ.