Tag: ಆಮ್ ಆದ್ಮಿ

  • ಕಾಗ್ರೆಸ್, ಆಪ್ ಅಪರಾಧದ ಪಾಲುದಾರರು: ಮೋದಿ

    ಕಾಗ್ರೆಸ್, ಆಪ್ ಅಪರಾಧದ ಪಾಲುದಾರರು: ಮೋದಿ

    ಚಂಡೀಗಢ: ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷಗಳು ಅಪರಾಧದ ಪಾಲುದಾರರು ಎಂದು ಪ್ರಧಾನಿ ನರೇಂದ್ರ ಮೋದಿ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.

    ಚುನಾವಣಾ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಎಎಪಿ ಕಾಂಗ್ರೆಸ್‍ನ ಫೋಟೋಕಾಪಿಯಾಗಿದೆ. ಅಯೋಧ್ಯೆಯಲ್ಲಿ ರಾಮಮಂದಿರ ಸೇರಿದಂತೆ ಸೇನೆಯಲ್ಲಿ ಏನನ್ನಾದರೂ ಸಾಧಿಸದರೂ ಆ ಎರಡು ಪಕ್ಷಗಳಿಗೆ ಸಂತೋಷವಾಗುವುದಿಲ್ಲ ಎಂದ ಅವರು ಒಂದು ಪಕ್ಷ ಪಂಜಾಬ್‍ನ್ನು ಲೂಟಿ ಮಾಡಿದರೆ ಮತ್ತೊಂದು ಪಕ್ಷ ದೆಹಲಿಯಲ್ಲಿ ಭ್ರಷ್ಟಾಚಾರ ಮಾಡುತ್ತಿದೆ ಎಂದು ಕಿಡಿಕಾರಿದರು.

    2016ರಲ್ಲಿ ಪಠಾಣ್‍ಕೋಟ್ ದಾಳಿಯಲ್ಲಿ ಹುತಾತ್ಮರಾದ ಯೋಧರ ತ್ಯಾಗವನ್ನು ಕಾಂಗ್ರೆಸ್ ಅವಮಾನಿಸಿದೆ. ಕಾಂಗ್ರೆಸ್ ನಾಯಕರು ಸರ್ಕಾರವನ್ನು, ಪಂಜಾಬ್‍ನ ಜನತೆಯನ್ನು ಹಾಗೂ ನಮ್ಮ ಸೈನ್ಯದ ಶೌರ್ಯದ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಸೈನಿಕರ ತ್ಯಾಗವನ್ನು ಅವಮಾನಿಸಿದ್ದಾರೆ. 2019ರಲ್ಲಿ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯ ವಾರ್ಷಿಕೋತ್ಸವದ ಸಂದರ್ಭದಲ್ಲಿಯೂ ಕಾಂಗ್ರೆಸ್ ಅದನ್ನೇ ಮಾಡಿದೆ. ಪುಲ್ವಾಮಾ ವಾರ್ಷಿಕೋತ್ಸವದಂದು ಸಹ ಅವರು ತಮ್ಮ ಬುದ್ಧಿಯನ್ನು ಮುಂದುವರಿಸಿದ್ದಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಯುಪಿ, ಬಿಹಾರದ ಜನತೆಗೆ ಪಂಜಾಬ್ ಪ್ರವೇಶಿಸಲು ಬಿಡಬೇಡಿ: ಚನ್ನಿ ವಿರುದ್ಧ ಬಿಜೆಪಿ, ಆಪ್ ಕೆಂಡ

    2019 ಫೆಬ್ರವರಿ 14ರಂದು, ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ (ಜೆಇಎಂ) ಭಯೋತ್ಪಾದಕ ಗುಂಪು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್‍ಪಿಎಫ್‍ನ ಬೆಂಗಾವಲು ಪಡೆ ಮೇಲೆ ದಾಳಿ ಮಾಡಿ 40 ಪಡೆಯ ಸಿಬ್ಬಂದಿ ಹುತಾತ್ಮರಾಗಿದ್ದರು. ಪುಲ್ವಾಮಾ ದಾಳಿಗೆ ಪ್ರತಿಯಾಗಿ ಭಾರತೀಯ ಪಡೆಗಳು ನಡೆಸಿದ ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸರ್ಜಿಕಲ್ ಸ್ಟ್ರೈಕ್‍ನ ಪುರಾವೆಯನ್ನು ನೀಡಲು ಕೇಳಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿಯಿಂದ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಇದನ್ನೂ ಓದಿ: NSA ಅಜಿತ್ ದೋವಲ್ ನಿವಾಸಕ್ಕೆ ಅಕ್ರಮ ಪ್ರವೇಶ – ವ್ಯಕ್ತಿ ಬಂಧನ

  • ಸಿದ್ದರಾಮಯ್ಯನವ್ರೇ ಈ ಬಾರಿ ನಿಮ್ಮದು ಕ್ಷೇತ್ರಾಂತರವೋ ಪಕ್ಷಾಂತರವೋ: ಬಿಜೆಪಿ ವ್ಯಂಗ್ಯ

    ಸಿದ್ದರಾಮಯ್ಯನವ್ರೇ ಈ ಬಾರಿ ನಿಮ್ಮದು ಕ್ಷೇತ್ರಾಂತರವೋ ಪಕ್ಷಾಂತರವೋ: ಬಿಜೆಪಿ ವ್ಯಂಗ್ಯ

    ಬೆಂಗಳೂರು: ಸಿದ್ದರಾಮಯ್ಯನವರೇ ಈ ಬಾರಿ ನಿಮ್ಮದು ಕ್ಷೇತ್ರಾಂತರವೋ ಪಕ್ಷಾಂತರವೋ ಎಂದು ಬಿಜೆಪಿ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಕುಟುಕಿದೆ.

    ಟ್ವೀಟ್‍ನಲ್ಲಿ ಏನಿದೆ?: ನಿಮ್ಮ ಆಪ್ತ ವಲಯದಲ್ಲಿರುವ ಕೆಲವರು ಈಗ ಸಮಾಜವಾದಿ ಪಕ್ಷ ಹಾಗೂ ಆಮ್ ಆದ್ಮಿ ಪಕ್ಷದ ನಾಯಕರ ಸುತ್ತಮುತ್ತ ಕಾಣಿಸಿಕೊಳ್ಳುತ್ತಿರುವುದು ಈ ಅನುಮಾನಕ್ಕೆ ಪುಷ್ಠಿ ನೀಡುತ್ತಿದೆ. ಸಿದ್ದರಾಮಯ್ಯನವರೇ ನಿಮ್ಮ ಆಪ್ತರು ಆಪ್ ಹಾಗೂ ಸಮಾಜವಾದಿ ಪಕ್ಷದ ನಾಯಕರ ಭೇಟಿ ಮಾಡಿರುವುದು ಆಕಸ್ಮಿಕ ಘಟನೆಯಾಗಿರಲು ಸಾಧ್ಯವಿಲ್ಲ. ಇದೊಂದು ವ್ಯವಸ್ಥಿತ ನಡೆ. ಉತ್ತರ ಪ್ರದೇಶ ಚುನಾವಣೆಯ ಫಲಿತಾಂಶದ ಬಳಿಕ ಕರ್ನಾಟಕದಲ್ಲೂ ಇದರ ಪ್ರತಿಫಲನ ಕಾಣಬಹುದೇ ಎಂದು ಪ್ರಶ್ನಿಸಿದೆ. ಇದನ್ನೂ ಓದಿ: ಕಾಂಗ್ರೆಸ್‍ಗೆ ಕೊರೊನಾ ಬಂದಿದೆ – ಇಬ್ರಾಹಿಂ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ಆಕ್ರೋಶ

    ನಮ್ಮ ಸಂಪರ್ಕದಲ್ಲಿ ಆ ಪಕ್ಷದವರು ಇದ್ದಾರೆ. ಈ ಪಕ್ಷದವರು ಇದ್ದಾರೆ ಎಂದು ಸಿದ್ದರಾಮಯ್ಯ ಅವರು ಕಳೆದ ಕೆಲ ದಿನಗಳಿಂದ ನಿರಂತರ ಬುರುಡೆ ಬಿಟ್ಟಾಗಲೇ ಅನುಮಾನವಿತ್ತು. ಈಗ ನೋಡಿದರೆ ತಮ್ಮ ಆಪ್ತರನ್ನೇ ಬೇರೆಯವರ ಸಂಪರ್ಕಕ್ಕೆ ಬಿಟ್ಟಿದ್ದಾರೆ. ಸಿದ್ದರಾಮಯ್ಯನವರೇ, ಮತ್ತೊಮ್ಮೆ ವಲಸೆಗೆ ವೇದಿಕೆ ಸೃಷ್ಟಿಸಿಕೊಳ್ಳುತ್ತಿದ್ದೀರಾ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ:  ಮುಗಿದ ಅಧ್ಯಾಯ – ಕಾಂಗ್ರೆಸ್‍ಗೆ ಸಿಎಂ ಇಬ್ರಾಹಿಂ ಗುಡ್‍ಬೈ

  • ಪಂಜಾಬ್‌ ಸಿಎಂ ಅಭ್ಯರ್ಥಿ ಘೋಷಣೆಗೆ ಚರಣ್‌ಜಿತ್‌ ಸಿಂಗ್‌ ಚನ್ನಿ ಒತ್ತಡ

    ಪಂಜಾಬ್‌ ಸಿಎಂ ಅಭ್ಯರ್ಥಿ ಘೋಷಣೆಗೆ ಚರಣ್‌ಜಿತ್‌ ಸಿಂಗ್‌ ಚನ್ನಿ ಒತ್ತಡ

    ಚಂಡೀಗಢ: ವಿಧಾನಸಭೆ ಚುನಾವಣೆಗೆ ಒಂದು ತಿಂಗಳು ಬಾಕಿ ಇರುವಾಗಲೇ ಮುಂದಿನ ಸಿಎಂ ಅಭ್ಯರ್ಥಿಯನ್ನು ಘೋಷಿಸಬೇಕು ಎಂದು ಪಂಜಾಬ್‍ನ ಹಾಲಿ ಸಿಎಂ ಚರಣ್‌ಜಿತ್‌ ಸಿಂಗ್ ಚನ್ನಿ ಒತ್ತಾಯಿಸಿದ್ದಾರೆ. ಈ ಬಗ್ಗೆ ಹೈಕಮಾಂಡ್ ಜೊತೆಗೆ ಮಾತುಕತೆ ನಡೆಸಿರುವ ಅವರು, ಚುನಾವಣಾ ದೃಷ್ಟಿಯಿಂದ ಸಿಎಂ ಅಭ್ಯರ್ಥಿ ಘೋಷಣೆ ಸೂಕ್ತ ಎಂದು ಮನವಿ ಮಾಡಿದ್ದಾರೆ.

    ಪ್ರತಿಸ್ಪರ್ಧಿಯಾಗಿರುವ ಆಮ್ ಆದ್ಮಿಯಲ್ಲಿ ಸಿಎಂ ಅಭ್ಯರ್ಥಿಯನ್ನು ಮುಂದಿನ ವಾರ ಘೋಷಣೆ ಮಾಡಲಾಗುವುದು ಎಂದು ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಕೇಜ್ರಿವಾಲ್ ಅವರೇ ಪಂಜಾಬ್‍ನಲ್ಲಿ ಸಿಎಂ ಆಗಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಈ ಗೊಂದಲಗಳಿಗೆ ತೆರೆ ಎಳೆಯುವ ದೃಷ್ಟಿಯಿಂದ ಅರವಿಂದ್ ಕೇಜ್ರಿವಾಲ್ ಸಿಎಂ ಅಭ್ಯರ್ಥಿಯನ್ನು ಘೋಷಿಸಲು ಮುಂದಾಗಿದ್ದಾರೆ.

    ಮೂಲಗಳ ಪ್ರಕಾರ ಸಂಸದ ಭಗವಂತ್ ಮಾನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಬಹುದು ಎಂದು ಹೇಳಲಾಗುತ್ತಿದೆ. ಹಿರಿಯ ನಾಯಕರು ಮತ್ತು ವರ್ಚಸ್ಸು ಹೊಂದಿರುವ ನಾಯಕರಾಗಿರುವ ಹಿನ್ನೆಲೆ ಅವರ ಆಯ್ಕೆ ಬಹುತೇಕ ಖಚಿತ ಎಂದು ವಿಶ್ಲೇಷಿಸಲಾಗುತ್ತಿದೆ. ಇದನ್ನೂ ಓದಿ:  ಯುಪಿಯಲ್ಲಿ 50-100 ಕ್ಷೇತ್ರಗಳಲ್ಲಿ ಶಿವಸೇನೆ ಸ್ಪರ್ಧೆ- ಮೈತ್ರಿ ಮಾಡಲ್ಲ ಎಂದ ರಾವತ್

    ಆಮ್ ಆದ್ಮಿಯಲ್ಲಿ ಸಿಎಂ ಅಭ್ಯರ್ಥಿ ಘೋಷಣೆ ಸುದ್ದಿ ಖಚಿತವಾಗುತ್ತಿದ್ದಂತೆ ಇತ್ತ ಚನ್ನಿ ಕೂಡಾ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡಲು ಒತ್ತಡ ಹಾಕುತ್ತಿದ್ದಾರೆ. ಇದರಿಂದ ಆಮ್ ಆದ್ಮಿಗೆ ತಿರುಗೇಟು ನೀಡಬಹುದು. ಕಾಂಗ್ರೆಸ್‍ನಲ್ಲಿ ಭಿನ್ನಾಭಿಪ್ರಾಯಗಳಿದೆ. ಕಾಂಗ್ರೆಸ್ ಅಧ್ಯಕ್ಷ ನವಜೋತು ಸಿಂಗ್ ಸಿಧು ಕೂಡಾ ಸಿಎಂ ರೇಸ್‍ನಲ್ಲಿದ್ದು ಹಲವು ನಾಯಕರು ಆಕಾಂಕ್ಷಿಗಳಾಗಿದ್ದಾರೆ ಎಂದು ಆಮ್ ಆದ್ಮಿ ಪ್ರಚಾರ ಮಾಡುತ್ತಿದೆ. ಇವುಗಳಿಗೆ ತೆರೆ ಎಳೆಯಲು ಸಿಎಂ ಅಭ್ಯರ್ಥಿ ಘೋಷಣೆಯಾಗಬೇಕು ಎಂದು ಚನ್ನಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಪಾದಯಾತ್ರೆ ಕೈ ಬಿಡುವಂತೆ ಸಿದ್ದರಾಮಯ್ಯ, ಡಿಕೆಶಿಗೆ ಸಿಎಂ ಬೊಮ್ಮಾಯಿ ಪತ್ರ

  • 10ನೇ ತರಗತಿವರೆಗೂ ಆರ್‌ಟಿಇ ವಿಸ್ತರಣೆಗೆ ಆಮ್ ಆದ್ಮಿ ಪಾರ್ಟಿ ಆಗ್ರಹ

    10ನೇ ತರಗತಿವರೆಗೂ ಆರ್‌ಟಿಇ ವಿಸ್ತರಣೆಗೆ ಆಮ್ ಆದ್ಮಿ ಪಾರ್ಟಿ ಆಗ್ರಹ

    ಬೆಂಗಳೂರು: ಶಿಕ್ಷಣ ಹಕ್ಕು (ಆರ್‌ಟಿಇ) ಕಾಯ್ದೆಗೆ ತಿದ್ದುಪಡಿ ತಂದು, ಅದರ ವ್ಯಾಪ್ತಿಯನ್ನು 9 ಹಾಗೂ 10ನೇ ತರಗತಿಗಳಿಗೂ ವಿಸ್ತರಿಸಬೇಕೆಂದು ಆಮ್ ಆದ್ಮಿ ಪಾರ್ಟಿ ಆಗ್ರಹಿಸಿದೆ.

    ಪಕ್ಷದ ಮಾಧ್ಯಮ ಕಚೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿಯ ಮಹಿಳಾ ಮುಖಂಡರಾದ ಉಷಾ ಮೋಹನ್, ಪ್ರಸ್ತುತ ಎಂಟನೇ ತರಗತಿಯವರೆಗೆ ಮಾತ್ರ ಆರ್‍ಟಿಇ ಕಾಯ್ದೆ ಅನ್ವಯಿಸುತ್ತಿದೆ. ಆದ್ದರಿಂದ 9 ಹಾಗೂ 10ನೇ ತರಗತಿ ಸೇರುವ ಬಡ ಕುಟುಂಬದ ವಿದ್ಯಾರ್ಥಿಗಳಿಂದ ಖಾಸಗಿ ಶಾಲೆಗಳು ಭಾರೀ ಮೊತ್ತದ ಶುಲ್ಕ ಪಡೆಯುತ್ತಿವೆ. ಶುಲ್ಕ ಪಾವತಿಸಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ, ಮುಂದಿನ ಶಿಕ್ಷಣದಿಂದ ವಂಚಿತರಾಗಬೇಕಾದ ಅನಿವಾರ್ಯ ಸ್ಥಿತಿ ಎದುರಾಗುತ್ತಿದೆ. ಆದ್ದರಿಂದ ರಾಜ್ಯ ಸರ್ಕಾರವು ಶೀಘ್ರವೇ ಕಾಯ್ದೆಗೆ ತಿದ್ದುಪಡಿ ತಂದು ಬಡ ವಿದ್ಯಾರ್ಥಿಗಳ ಹಿತ ಕಾಪಾಡಬೇಕು ಎಂದು ಆಗ್ರಹಿಸಿದರು.

    ಕೋವಿಡ್ ಹಾಗೂ ಲಾಕ್‍ಡೌನ್‍ನಿಂದಾಗಿ ಬಡ ಪೋಷಕರು ಎರಡು ವರ್ಷಗಳ ಕಾಲ ಆದಾಯವಿಲ್ಲದೇ ಆರ್ಥಿಕವಾಗಿ ದುರ್ಬಲವಾಗಿದ್ದಾರೆ. ಆದ್ದರಿಂದ 2020-21ನೇ ಸಾಲಿನಿಂದಲೇ ಅನ್ವಯಿಸುವಂತೆ ಶಿಕ್ಷಣ ಹಕ್ಕು ಕಾಯ್ದೆಗೆ ತಿದ್ದುಪಡಿ ತರಬೇಕು. ಅಂದರೆ ಆರ್‍ಟಿಎ ವಿದ್ಯಾರ್ಥಿಗಳ 9 ಹಾಗೂ 10ನೇ ತರಗತಿಗಳ ಕೋವಿಡ್ ಅವಧಿಯ ಎರಡು ವರ್ಷದ ಶಾಲಾ ಶುಲ್ಕವನ್ನು ಸರ್ಕಾರವೇ ಭರಿಸಬೇಕು. ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‍ರವರು ಈ ಬಗ್ಗೆ ನಿರ್ಲಕ್ಷ್ಯ ಮುಂದುವರಿಸಿದರೆ ಆಮ್ ಆದ್ಮಿ ಪಾರ್ಟಿ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡಲಿದೆ ಎಂದು ಉಷಾ ಮೋಹನ್ ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಅಪ್ಪು ಸಮಾಧಿ ಬಳಿ ನೃತ್ಯ ನಮನ ಸಲ್ಲಿಸಿದ ಪುಟಾಣಿಗಳು

    BC Nagesh

    ಚಿಕ್ಕಪೇಟೆ ವಾರ್ಡ್ ಎಎಪಿ ಅಧ್ಯಕ್ಷರಾದ ಗೋಪಿನಾಥ್‍ರವರು ಮಾತನಾಡಿ, ಖಾಸಗಿ ಶಾಲೆಯ ದುಬಾರಿ ಶುಲ್ಕ ಕಟ್ಟಲು ಸಾಧ್ಯವಾಗದ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳನ್ನು ಸೇರಲು ಬಯಸುತ್ತಿದ್ದಾರೆ. ಆದರೆ ಅವರಿಗೆ ವರ್ಗಾವಣೆ ಪತ್ರ (ಟಿಸಿ) ನೀಡಲು ಕೆಲವು ಖಾಸಗಿ ಶಾಲೆಗಳು ಸತಾಯಿಸುತ್ತಿವೆ. ಭಾರೀ ಹಣ ಪಡೆದು ವರ್ಗಾವಣೆ ಪತ್ರ ನೀಡುತ್ತಿರುವ ಘಟನೆಗಳು ಅಲ್ಲಲ್ಲಿ ಕಂಡುಬರುತ್ತಿವೆ. ಬಡವರ ಅಸಹಾಯಕತೆಯ ಲಾಭ ಪಡೆಯುವ ಅಂತಹ ಶಿಕ್ಷಣ ಸಂಸ್ಥೆಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಾರ್ಟಿ ಸರ್ಕಾರವು ವರ್ಗಾವಣೆ ಪತ್ರ ಇಲ್ಲದೆಯೇ ಸರ್ಕಾರಿ ಶಾಲೆ ಸೇರುವ ವ್ಯವಸ್ಥೆ ಕಲ್ಪಿಸಿದ್ದು, ರಾಜ್ಯದಲ್ಲೂ ಅದೇ ಮಾದರಿಯ ವ್ಯವಸ್ಥೆ ಅಳವಡಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಅವನು ಇನ್ನೂ ನನ್ನ ಮಡಿಲಲ್ಲಿ, ಆಲೋಚನೆಗಳಲ್ಲಿ ಶಾಶ್ವತವಾಗಿದ್ದಾನೆ: ರಾಘವೇಂದ್ರ ರಾಜ್‍ಕುಮಾರ್

  • ಬಿಜೆಪಿ ಸರ್ಕಾರದಲ್ಲಿ ಬಿಜೆಪಿ ಶಾಸಕರಿಗೇ ರಕ್ಷಣೆ ಇಲ್ಲ, ಇನ್ನು ಜನಸಾಮಾನ್ಯನಿಗೆ ಎಲ್ಲಿಯ ರಕ್ಷಣೆ: ಎಎಪಿ

    ಬಿಜೆಪಿ ಸರ್ಕಾರದಲ್ಲಿ ಬಿಜೆಪಿ ಶಾಸಕರಿಗೇ ರಕ್ಷಣೆ ಇಲ್ಲ, ಇನ್ನು ಜನಸಾಮಾನ್ಯನಿಗೆ ಎಲ್ಲಿಯ ರಕ್ಷಣೆ: ಎಎಪಿ

    ಬೆಂಗಳೂರು: ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ವಿಪರೀತ ಹೆಚ್ಚಾಗಿದ್ದು, ಬಿಜೆಪಿ ಸರ್ಕಾರದಲ್ಲಿ ಬಿಜೆಪಿ ಶಾಸಕರಿಗೇ ರಕ್ಷಣೆ ಇಲ್ಲ, ಇನ್ನು ಜನಸಾಮಾನ್ಯನಿಗೆ ಎಲ್ಲಿಯ ರಕ್ಷಣೆ? ಗೃಹ ಖಾತೆಯನ್ನು ನಿಭಾಯಿಸುವುದರಲ್ಲೇ ವಿಫಲರಾಗಿರುವ ಬಸವರಾಜ ಬೊಮ್ಮಾಯಿಯವರಿಗೆ ಮುಖ್ಯಮಂತ್ರಿ ಹುದ್ದೆಗೆ ನ್ಯಾಯ ಒದಗಿಸಲು ಸಾಧ್ಯವೇ ಎಂದು ಆಮ್ ಆದ್ಮಿ ಪಾರ್ಟಿಯ ಕಾನೂನು ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡ ಪ್ರಶ್ನಿಸಿದರು.

    ಆಮ್ ಆದ್ಮಿ ಪಾರ್ಟಿಯ ಮಾಧ್ಯಮ ಕಚೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ನಂಜಪ್ಪ ಕಾಳೇಗೌಡ ಅವರು, “ರಾಜ್ಯದಲ್ಲಿ ಕೊಲೆ, ಸುಲಿಗೆ, ದರೋಡೆ ಪ್ರಕರಣಗಳು ವ್ಯಾಪಕವಾಗಿ ಏರಿಕೆಯಾಗುತ್ತಿವೆ. ಮಕ್ಕಳು ಮಹಿಳೆಯರು ಮಾತ್ರವಲ್ಲದೇ ಸಣ್ಣಪುಟ್ಟ ಜನಪ್ರತಿನಿಧಿಗಳು ಕೂಡ ಹೆದರಿಕೆಯಿಂದ ತಿರುಗಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ತಮ್ಮ ಶಾಸಕರಿಗೆ ರಕ್ಷಣೆ ಕೊಡಲಾಗದ ಬಿಜೆಪಿ ಸರ್ಕಾರ ಯಾವ ಮಟ್ಟದಲ್ಲಿ ಜನಸಾಮಾನ್ಯನಿಗೆ ರಕ್ಷಣೆ ಕೊಡಲು ಸಾಧ್ಯ? ಇಷ್ಟೆಲ್ಲಾ ಅಪರಾಧಗಳು ನಡೆಯುವಾಗ ಪೊಲೀಸ್ ಇಲಾಖೆ ಯಾವ ಮಟ್ಟಿನ ಭಯವನ್ನು ಕ್ರಿಮಿನಲ್ ಗಳಲ್ಲಿ ಪೊಲೀಸ್ ಇಲಾಖೆ ಇಟ್ಟಿದೆ? ಇಂದು ಮುಖ್ಯಮಂತ್ರಿ ಆಗಿರುವ ಬೊಮ್ಮಾಯಿ ಅವರು ಗೃಹ ಸಚಿವ ಆಗಿದ್ದಾಗ ಅಪರಾಧ ಪ್ರಕರಣಗಳು ಶೇ.20ರಷ್ಟು ಹೆಚ್ಚಾಗಿದೆ ಎಂದು ಬೊಮ್ಮಾಯಿಯವರೇ ಒಪ್ಪಿಕೊಂಡಿದ್ದರು. ಆದರೂ ಅಪರಾಧಗಳಿಗೆ ಕಡಿವಾಣ ಹಾಕಲು ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ತನಿಖೆ ನಡೆಸಬೇಕಾಗುತ್ತದೆ ಎಂಬ ಕಾರಣಕ್ಕೆ ಅನೇಕ ಠಾಣೆಗಳಲ್ಲಿ  ಪೊಲೀಸರು ಎಫ್‍ಐಆರ್ ದಾಖಲಿಸಲು ನಿರಾಕರಿಸುತ್ತಿದ್ದಾರೆ” ಎಂದು ಹೇಳಿದರು. ಇದನ್ನೂ ಓದಿ: ಬೆಂಗಳೂರಲ್ಲಿ ವೀಕೆಂಡ್ ಕರ್ಫ್ಯೂ ಇಲ್ಲ – ಸೋಂಕು ಕಡಿಮೆ ಇರುವ ಜಿಲ್ಲೆಗಳಲ್ಲಿ ಶಾಲೆ, ಕಾಲೇಜು ಆರಂಭ

    ಬಿಜೆಪಿ ಅಧಿಕಾರಕ್ಕೆ ಬಂದಮೇಲೆ ಕಾನೂನಿನ ಮೇಲೆ ಭಯ ಇಲ್ಲದ ಹಾಗೆ ಆಗಿದೆ. ಶಾಸಕ ಅಖಂಡ ಶ್ರೀನಿವಾಸ್ ಮನೆ ಧ್ವಂಸ, ಪೊಲೀಸ್ ಮೇಲೆ ಹಲ್ಲೆ ನಡೆಯಿತು. ಬಿಜೆಪಿ ಕರ್ಪೊರೇಟರ್ ರೇಖಾ ಖದಿರೇಶ್ ಹತ್ಯೆ ನಡೆಯಿತು. ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಹಚ್ಚಿದ್ದಾರೆ. ಪ್ರಾಣ ಹಾನಿಯಾನಿಯಾಗದೆ ಅನಾಹುತ ತಪ್ಪಿದೆ. ತಮ್ಮ ಶಾಸಕರಿಗೆ ರಕ್ಷಣೆ ಕೊಡಲಾಗದ ಬಿಜೆಪಿ ಸರ್ಕಾರ ಯಾವ ಮಟ್ಟದಲ್ಲಿ ಜನಸಾಮಾನ್ಯನಿಗೆ ರಕ್ಷಣೆ ಕೊಡಲು ಸಾಧ್ಯ? ಇಷ್ಟೆಲ್ಲಾ ಅಪರಾಧಗಳು ನಡೆಯುವಾಗ ಪೊಲೀಸ್ ಇಲಾಖೆ ಯಾವ ಮಟ್ಟಿನ ಭಯವನ್ನು ಕ್ರಿಮಿನಲ್ ಗಳಲ್ಲಿ ಪೊಲೀಸ್ ಇಲಾಖೆ ಇಟ್ಟಿದೆ? ಎಂದು ಪ್ರಶ್ನೆ ಮಾಡಿದರು.

    ಬೆಂಗಳೂರಿನಲ್ಲಿ ಅಲ್ಲಲ್ಲಿ ಲೆಕ್ಕವಿಲ್ಲದಷ್ಟು ಚೈನ್ ಹಾಗೂ ಮೊಬೈಲ್ ಕಳ್ಳತನ ನಡೆಯುತ್ತಿದೆ. ಪೊಲೀಸರು ಈ ಪ್ರಕರಣಗಳನ್ನು ಎಫ್‍ಐಆರ್ ಮಾಡುತ್ತಿಲ್ಲ. ಪೊಲೀಸ್ ಇಲಾಖೆ ಇಂದು ರಸ್ತೆಗಳಲ್ಲಿ ನಿಂತುಕೊಂಡು ವಾಹನ ಸವಾರರನ್ನು ನಿಲ್ಲಿಸಿ ದಂಡ ಹಾಕಿ ಹಣ ವಸೂಲಿ ಮಾಡುವ ಕೆಲಸದಲ್ಲಿ ನಿರತರಾಗಿದ್ದು ಕಳ್ಳತನ, ಕೊಲೆ ಮೊದಲಾದ ಅಪರಾಧಗಳನ್ನು ತಡೆಯುವ ಕೆಲಸವನ್ನು ಮಾಡುತ್ತಿಲ್ಲ. ಇಲಾಖೆ ಇದ್ದು ಏನು ಪ್ರಯೋಜನ ಎಂದರು.

    ಪತ್ರಿಕಾಗೋಷ್ಠಿಯ ಉಪಸ್ಥಿತರಿದ್ದ ಫಿರೋಜ್ ಅವರು ಮಾತನಾಡಿ, ರಾಜ್ಯದಲ್ಲಿ ಸೈಬರ್ ಅಪರಾಧಗಳು ಕೂಡ ಹೆಚ್ಚಾಗುತ್ತಿದೆ. ಫೇಸ್ ಬುಕ್‍ನಲ್ಲಿ ನಕಲಿ ಖಾತೆ ತೆರೆದು, ಅವರ ಸ್ನೇಹಿತರಿಗೆಲ್ಲ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ ಹಣ ಕೇಳುವ ದೊಡ್ಡ ಜಾಲವಿದೆ. ಸುರೇಶ್ ಕುಮಾರ್ ಸೇರಿದಂತೆ ರಾಜ್ಯದ ಲಕ್ಷಕ್ಕೂ ಅಧಿಕ ಸಾಮಾಜಿಕ ತಾಣ ಬಳಕೆದಾರರು ಇದರಿಂದ ತೊಂದರೆ ಅನುಭವಿಸಿದ್ದಾರೆ. ಆದರೆ ಪೊಲೀಸರು ಮಾತ್ರ ಇಂತಹ ಯಾವುದೇ ಪ್ರಕರಣವನ್ನು ಬೇಧಿಸಿಲ್ಲ. ದಕ್ಷತೆಗೆ ಹೆಸರಾಗಿರುವ ಕರ್ನಾಟಕ ಪೊಲೀಸ್ ಇಲಾಖೆ ಇಂದು ಕೈಕಟ್ಟಿ ಕುಳಿತಿದೆ. ಹೀಗೆ ಮುಂದುವರಿದಲ್ಲಿ ಕರ್ನಾಟಕ ಕೂಡ ಇನ್ನೊಂದು ಉತ್ತರ ಪ್ರದೇಶ ಆಗುವುದರಲ್ಲಿ ಅಚ್ಚರಿ ಇಲ್ಲ ಎಂದು ತಿಳಿಸಿದರು.

  • ಬಿಜೆಪಿ ಮಾಜಿ ಶಾಸಕ ಎಚ್.ಡಿ ಬಸವರಾಜು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ

    ಬಿಜೆಪಿ ಮಾಜಿ ಶಾಸಕ ಎಚ್.ಡಿ ಬಸವರಾಜು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ

    ಬೆಂಗಳೂರು: ಆಮ್ ಆದ್ಮಿ ಪಕ್ಷದ ತತ್ವ, ಸಿದ್ಧಾಂತಗಳು ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‍ರವರ ಜನಪರ ಆಡಳಿತವನ್ನು ಮೆಚ್ಚಿ, ಸ್ವಪಕ್ಷ ಬಿಜೆಪಿಯಲ್ಲಿನ ಭ್ರಷ್ಟಾಚಾರ, ಆಂತರಿಕ ಕಿತ್ತಾಟದಿಂದ ಬೇಸತ್ತು ವಿರಾಜಪೇಟೆ ಕ್ಷೇತ್ರದ ಮಾಜಿ ಬಿಜೆಪಿ ಶಾಸಕರಾದ ಎಚ್.ಡಿ ಬಸವರಾಜುರವರು ಇಂದು ಎಎಪಿಯನ್ನು ಸೇರಿದ್ದಾರೆ.

    ಆಮ್ ಆದ್ಮಿ ಪಾರ್ಟಿಯು ಆರಂಭದ ದಿನದಿಂದಲೂ ಪ್ರಾಮಾಣಿಕತೆಯೊಂದಿಗೆ ಯಾವುದೇ ರಾಜಿ ಮಾಡಿಕೊಳ್ಳದೇ ಮುನ್ನಡೆಯುತ್ತಿದೆ. ಕಳಂಕರಹಿತ ಹಾಗೂ ಪಾರದರ್ಶಕ ವ್ಯಕ್ತಿತ್ವವನ್ನು ಮೈಗೂಡಿಸಿಕೊಂಡು ಸಾಮಾನ್ಯ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿದೆ. ಈ ಕಾರಣದಿಂದ ಅನೇಕರು ಎಎಪಿಯತ್ತ ಆಕರ್ಷಿತರಾಗುತ್ತಿದ್ದಾರೆ. ದೇಶಾದ್ಯಂತ ಅನೇಕ ಸಾಧಕರು, ಗಣ್ಯ ವ್ಯಕ್ತಿಗಳು ಹಾಗೂ ವಿವಿಧ ಪಕ್ಷಗಳು ಮುಖಂಡರು ನಮ್ಮ ಪಕ್ಷವನ್ನು ಸೇರಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ನಮಗೆ ಬೆಂಬಲ ವ್ಯಕ್ತವಾಗಲಿದ್ದು, ಕರ್ನಾಟಕದ ಅನೇಕ ಶಾಸಕರು, ಮಾಜಿ ಶಾಸಕರು ಎಎಪಿಯನ್ನು ಸೇರಲಿದ್ದಾರೆ ಎಂದು ಬಸವರಾಜು ತಿಳಿಸಿದರು.

    ಎಚ್.ಡಿ ಬಸವರಾಜುರವರು 1994 ಮತ್ತು 2004ರಲ್ಲಿ ವಿರಾಜಪೇಟೆಯ ಶಾಸಕರಾಗಿ ಉತ್ತಮ ಕೆಲಸಗಳನ್ನು ಮಾಡಿದ ಅನುಭವ ಹೊಂದಿದ್ದಾರೆ. 2005ರಿಂದ 2007ರವರೆಗೆ ಕರ್ನಾಟಕ ಸರ್ಕಾರ ಭರವಸೆಗಳ ಸಮಿತಿಯ ಅಧ್ಯಕ್ಷರಾಗಿ, 2003ರಿಂದ 2005ರ ತನಕ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆರ್ಥಿಕ ಹಾಗೂ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ, 2005ರಿಂದ 2007ರವರೆಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಕಾವಲು ಹಾಗೂ ನಿರ್ವಹಣೆ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಜಯದೇವ ಇನ್ಸ್ಟಿಟ್ಯೂಟ್ ಆಫ್ ಕಾರ್ಡಿಯೋವಸ್ಕುಲಾರ್ ಸೈನ್ಸಸ್ ಆ್ಯಂಡ್ ರಿಸರ್ಚ್ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾಗಿ ಹಾಗೂ ಚಿಕ್ಕಮಗಳೂರು ಮತ್ತು ಕೊಡಗು ಗ್ರಾಮೀಣ ಬ್ಯಾಂಕಿನ ನಿರ್ದೇಶಕರಾಗಿ ಕೂಡ ಸೇವೆ ಸಲ್ಲಿಸಿದ್ದರು. ಇದನ್ನೂ ಓದಿ: ನಮ್ಮ ತಂದೆಯ ಸಾವನ್ನು ರಾಜಕೀಯ ಮಾಡಬೇಡಿ: ಅಭಿಷೇಕ್ ಅಂಬರೀಶ್ 

    ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಕರ್ನಾಟಕ ಅಹಿಂದ ಪರಿಷತ್‍ನ ಅಧ್ಯಕ್ಷರಾಗಿ ಬಸವರಾಜುರವರು ಪ್ರಸ್ತುತ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಮಸ್ತ ಅಹಿಂದ ವರ್ಗದ, ವಿಶೇಷವಾಗಿ ಪರಿಶಿಷ್ಟ ಪಂಗಡದ ಆಶಾಕಿರಣವಾಗಿದ್ದಾರೆ. ದಲಿತರು, ಶೋಷಿತರು, ಬಡವರು, ನೊಂದವರ ಸಹಾಯಕ್ಕಾಗಿ ಜೀವನವನ್ನು ಮುಡಿಪಾಗಿಟ್ಟಿರುವ ಇಂತಹ ಅನುಭವಿ ಹಾಗೂ ಪ್ರಾಮಾಣಿಕ ನಾಯಕ ಎಎಪಿಯನ್ನು ಸೇರಿರುವುದರಿಂದ ಪಕ್ಷಕ್ಕೆ ಆನೆಬಲ ಬಂದಂತಾಗಿದೆ ಎಂದು ಎಎಪಿ ಪಕ್ಷದ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದ್ದಾರೆ.

  • ಶೈಕ್ಷಣಿಕ ಗೊಂದಲಗಳ ನಿವಾರಣೆಗಾಗಿ ರಾಜ್ಯಾದ್ಯಂತ ಆಮ್ ಆದ್ಮಿ ಪಕ್ಷದಿಂದ ಸಹಿ ಸಂಗ್ರಹ

    ಶೈಕ್ಷಣಿಕ ಗೊಂದಲಗಳ ನಿವಾರಣೆಗಾಗಿ ರಾಜ್ಯಾದ್ಯಂತ ಆಮ್ ಆದ್ಮಿ ಪಕ್ಷದಿಂದ ಸಹಿ ಸಂಗ್ರಹ

    – ಬೃಹತ್ ಜನಜಾಗೃತಿ ಕಾರ್ಯಕ್ರಮ

    ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ಶೈಕ್ಷಣಿಕ ಶುಲ್ಕಗಳು, ಸರ್ಕಾರಿ ಶಾಲೆಗಳ ದುವ್ರ್ಯವಸ್ಥೆ, ಖಾಸಗಿ ಶಿಕ್ಷಕರ ಸಮಸ್ಯೆ, ಶುಲ್ಕ ನಿಯಂತ್ರಣ ಪ್ರಾಧಿಕಾರದ ರಚನೆ ಸೇರಿದಂತೆ ಹಲವಾರು ಶೈಕ್ಷಣಿಕ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರವು ಸಂಪೂರ್ಣ ವೈಫಲ್ಯಗೊಂಡಿದೆ. ಈ ಗೊಂದಲ ನಿವಾರಣೆಗಾಗಿ ಆಮ್ ಆದ್ಮಿ ಪಕ್ಷದಿಂದ ಸಹಿ ಸಂಗ್ರಹ ಮತ್ತು ಜನಗಾಗೃತಿ ಕಾರ್ಯಕ್ರಮ ನಡೆಯಲಿದೆ.

    ಸರ್ಕಾರದ ಹೊಣೆಗೇಡಿತನದ ಪರಿಣಾಮವಾಗಿ ಇಂದು ರಾಜ್ಯದಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ವ್ಯವಸ್ಥೆ ಸಾಕಷ್ಟು ಸಂಕಷ್ಟಕ್ಕೀಡಾಗಿದೆ. ಶಾಲಾ ಶುಲ್ಕ ಗಳ ವಿಚಾರದಲ್ಲಿಯೂ ಸಹ ಪೋಷಕ ವರ್ಗ ಸಮಸ್ಯೆಗೀಡಾಗಿದೆ. ಈ ಎಲ್ಲ ಗೊಂದಲಗಳಿಂದಾಗಿ ಲಕ್ಷಾಂತರ ಮಕ್ಕಳು ಶಿಕ್ಷಣ ವಂಚಿತರಾಗುತ್ತಿದ್ದಾರೆ. ಸರ್ಕಾರದ ಈ ಎಲ್ಲಾ ವೈಫಲ್ಯಗಳನ್ನು ಬಗೆಹರಿಸಲು ಒತ್ತಾಯಿಸುವ ನಿಟ್ಟಿನಲ್ಲಿ ಆಮ್ ಆದ್ಮಿ ಪಕ್ಷದ ಸಾವಿರಾರು ಕಾರ್ಯಕರ್ತರು ಸತತ 15 ದಿನಗಳ ಕಾಲ ರಾಜ್ಯದಾದ್ಯಂತ ಎಲ್ಲ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಕನಿಷ್ಠ 5 ಲಕ್ಷ ಮನೆಗಳಿಗೆ ತೆರಳಿ ಸಹಿ ಸಂಗ್ರಹಣೆ ಹಾಗೂ ಬೃಹತ್ ಜನಾಂದೋಲನ ಕಾರ್ಯ ಕ್ರಮವನ್ನು ನಡೆಸುವವರಿದ್ದಾರೆ ಎಂದು ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಪತ್ರಿಕಾಗೋಷ್ಠಿ ನಡೆಸಿ ಸಮಗ್ರ ಚಿತ್ರಣ ನೀಡಿದರು. ಇದನ್ನೂ ಓದಿ: ಕರ್ನಾಟಕ ನಂಬರ್ 1 ಕೈಗಾರಿಕಾ ಸ್ನೇಹಿ ರಾಜ್ಯವಾಗುತ್ತೆ: ಜಗದೀಶ್ ಶೆಟ್ಟರ್

    ಕರಪತ್ರ, ಎಲ್.ಇ.ಡಿ ವಾಹನ, ವಿಚಾರಗೋಷ್ಠಿಗಳು, ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಈ ಅಭಿಯಾನವನ್ನು ಯಶಸ್ವಿಯಾಗಿಸಲು ಈಗಾಗಲೇ ಹಲವು ರೂಪುರೇಷೆಗಳನ್ನು ಪಕ್ಷವು ಕೈಗೊಂಡಿದೆ ಎಂದು ಮಾಹಿತಿ ಹಂಚಿಕೊಂಡರು.

  • ರಾಮ ಮಂದಿರ ಜಮೀನು ಖರೀದಿಯಲ್ಲಿ ಕೋಟ್ಯಂತರ ರೂ. ಭ್ರಷ್ಟಾಚಾರ- ಎಸ್‍ಪಿ, ಆಪ್ ಆರೋಪ

    ರಾಮ ಮಂದಿರ ಜಮೀನು ಖರೀದಿಯಲ್ಲಿ ಕೋಟ್ಯಂತರ ರೂ. ಭ್ರಷ್ಟಾಚಾರ- ಎಸ್‍ಪಿ, ಆಪ್ ಆರೋಪ

    ಲಕ್ನೋ: ಅಯೋಧ್ಯೆಯ ರಾಮ ಮಂದಿರ ನಿರ್ಮಾಣದ ಜಮೀನು ಖರೀದಿಯ ಸಂದರ್ಭ ನಿಮಿಷಗಳ ಅಂತರದಲ್ಲಿ 2 ಕೋಟಿಯಿಂದ 18 ಕೋಟಿ ರೂಪಾಯಿ ಭ್ರಷ್ಟಾಚಾರ ನಡೆದಿದೆ. ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಸದಸ್ಯರು ಮತ್ತು ಪದಾಧಿಕಾರಿಗಳು ಸೇರಿಕೊಂಡು ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಸಮಾಜವಾದಿ ಪಕ್ಷ ಮತ್ತು ಆಮ್ ಆದ್ಮಿ ಪಕ್ಷ ಗಂಭೀರವಾಗಿ ಆರೋಪಿಸಿದೆ.

    ಈ ಕುರಿತು ಲಕ್ನೋದಲ್ಲಿ ಆಮ್ ಆದ್ಮಿ ಪಕ್ಷದ ಶಾಸಕ ಸಂಜಯ್ ಸಿಂಗ್ ಮತ್ತು ಅಯೋಧ್ಯೆಯಲ್ಲಿ ಸಮಾಜವಾದಿ ಪಕ್ಷದ ನಾಯಕ ಪವನ್ ಪಾಂಡೆ ಪ್ರತ್ಯೇಕ ಸುದ್ದಿಗೋಷ್ಠಿ ನಡೆಸಿ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಸದಸ್ಯರು ಮತ್ತು ಪದಾಧಿಕಾರಿಗಳ ವಿರುದ್ಧ ಆರೋಪ ನಡೆಸಿದ್ದಾರೆ. ಇದನ್ನೂ ಓದಿ:ರಾಮ ಮಂದಿರ ನಿರ್ಮಾಣಕ್ಕೆ ಈವರೆಗೆ 25,000 ಮಿಲಿಯನ್ ರೂ. ದೇಣಿಗೆ ಸಂಗ್ರಹ: ವಿಎಚ್‍ಪಿ

    ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಂಜಯ್ ಸಿಂಗ್ ಅವರು, ಅಯೋಧ್ಯೆಯಲ್ಲಿ ಸುಮಾರು 5.8ಕೋಟಿ ರೂಪಾಯಿ ಬೆಲೆಯ ಭೂಮಿಯನ್ನು ಕುಸುಮ್ ಪಾಠಕ್ ಮತ್ತು ಹರೀಶ್ ಪಾಠಕ್ ಎಂಬುವವರು ಸುಲ್ತಾನ್ ತಿವಾರಿ ಮತ್ತು ರವಿ ಮೋಹನ್ ತಿವಾರಿ ಎಂಬುವವರಿಗೆ 2 ಕೋಟಿ ಬೆಲೆಗೆ ಕಳೆದ ಮಾರ್ಚ್ 18ರಂದು ಮಾರಾಟಮಾಡಿದ್ದರು. ಬಳಿಕ ಕೇವಲ 5 ನಿಮಿಷ ಕಳೆದ ನಂತರ ಜಮೀನು ಪಡೆದುಕೊಂಡಿದ್ದ ಅನ್ಸಾರಿ ಮತ್ತು ತಿವಾರಿಯವರು ಅದೇ ಭೂಮಿಯನ್ನು ರಾಮಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಗೆ 18.5 ಕೋಟಿ ರೂಪಾಯಿಗೆ ಮಾರಾಟ ಮಾಡಿದ್ದಾರೆ. ಮಾರಾಟದ ಮೊತ್ತದಲ್ಲಿ 17 ಕೋಟಿ ರೂಪಾಯಿಗಳನ್ನು ಆರ್‍ಟಿಜಿಎಸ್ ಮೂಲಕ ಪಾವತಿ ಮಾಡಿದ್ದಾರೆ. ಇದಲ್ಲದೇ ಈ ಎರಡೂ ಭೂಮಿ ಖರೀದಿಯ ದಾಖಲಾತಿಗೆ ಸಾಕ್ಷಿಯಾಗಿ ಒಬ್ಬರೇ ಇರುವುದು, ಅದು ಅಯೋಧ್ಯೆಯ ಮೇಯರ್ ರಿಶಿಕೇಶ್ ಉಪಾಧ್ಯ ಮತ್ತು ದೇವಸ್ಥಾನದ ಟ್ರಸ್ಟ್ ಸದಸ್ಯ ಅನಿಲ್ ಮಿಶ್ರಾ ಹೀಗಾಗಿ ಈ ಕುರಿತು ಕೇಂದ್ರ ಸರ್ಕಾರ, ಸಿಬಿಐ ತನಿಖೆಗೆ ಆದೇಶ ನೀಡಬೇಕು, ಟ್ರಸ್ಟ್ ನ್ನು ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಕೇಸಿನ ಮೇಲೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.  ಇದನ್ನೂ ಓದಿ: ರಾಮ ಮಂದಿರ ನಿರ್ಮಾಣವಾಗುತ್ತಿದ್ದಂತೆ ಹಿರಿಯರಿಗೆ ಉಚಿತ ಪ್ರಯಾಣ: ಕೇಜ್ರಿವಾಲ್ ಭರವಸೆ

    ಪವನ್ ಪಾಂಡೆ ಅವರು ಸುದ್ದಿಗೋಷ್ಠಿ ನಡೆಸಿ ಸಂಜಯ್ ಸಿಂಗ್ ಅವರ ಮಾದರಿಯಲ್ಲೇ ಆರೋಪ ನಡೆಸಿದ್ದು, ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ದೇಶದ 120 ಕೋಟಿ ಜನರಿಗೆ ಅವಮಾನ ಮಾಡಿದೆ. ಈ ಕುರಿತು ಸೂಕ್ತ ತನಿಖೆ ನಡೆಸಬೇಕೆಂದು ಆಗ್ರಹಿಸಿದರು.

    ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಬಗ್ಗೆ ಆರೋಪ ಕೇಳಿ ಬರುತ್ತಿದ್ದಂತೆ ಟ್ರಸ್ಟ್‍ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಪ್ರತಿಕ್ರಿಯಿಸಿ, ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದ ಟ್ರಸ್ಟ್ ನ ಸಭೆಯ ಬಗ್ಗೆ ನನಗೆ ಸರಿಯಾಗಿ ತಿಳಿದಿದೆ. ಆರೋಪಗಳು ಮಾಡುವುದು ಅವರಿಗೆ ಅಭ್ಯಾಸವಾಗಿ ಹೋಗಿದೆ. ಮಹಾತ್ಮ ಗಾಂಧಿಯವರ ಹತ್ಯೆಯ ಆರೋಪಗಳನ್ನು ಒಳಗೊಂಡಂತೆ 100 ವರ್ಷಗಳಿಂದ ನಮ್ಮ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

  • ಲಸಿಕೆ ದುರ್ಬಳಕೆ ಮಾಡುತ್ತಿರೋ ಅಶ್ವಥ್ ನಾರಾಯಣರನ್ನು ಕೂಡಲೇ ವಜಾಗೊಳಿಸಿ: ಮೋಹನ್ ದಾಸರಿ ಆಗ್ರಹ

    ಲಸಿಕೆ ದುರ್ಬಳಕೆ ಮಾಡುತ್ತಿರೋ ಅಶ್ವಥ್ ನಾರಾಯಣರನ್ನು ಕೂಡಲೇ ವಜಾಗೊಳಿಸಿ: ಮೋಹನ್ ದಾಸರಿ ಆಗ್ರಹ

    ಬೆಂಗಳೂರು: ಕೊರೊನಾ ನಿಯಂತ್ರಣ ಕಾರ್ಯಪಡೆಯ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವಥ್ ನಾರಾಯಣ್ ಪ್ರಾರಂಭದಿಂದಲೂ ಲಸಿಕೆ ವಿತರಣೆಯಲ್ಲಿ ದುರ್ಬಳಕೆ, ಸ್ವಜನಪಕ್ಷಪಾತ, ಗೊಂದಲಗಳು, ತಾರತಮ್ಯ ಧೋರಣೆಯನ್ನು ಅನುಸರಿಸುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಬೆಂಗಳೂರಿನ ಪ್ರತಿಯೊಂದು ವಿಧಾನಸಭಾ ಕ್ಷೇತ್ರಗಳಲ್ಲೂ ಇಂದು ಲಸಿಕೆ ವಿತರಣೆಯನ್ನು ಬಿಜೆಪಿಯ ವೋಟ್ ಬ್ಯಾಂಕ್ ರಾಜಕಾರಣಕ್ಕೆ ಬಳಸಿಕೊಳ್ಳಲು ಅನುವು ಮಾಡಿಕೊಟ್ಟಿದ್ದಾರೆ. ತಮ್ಮ ಸಾಂವಿಧಾನಿಕ ಹುದ್ದೆಯನ್ನು ಸಂಪೂರ್ಣ ದುರುಪಯೋಗ ಪಡಿಸಿಕೊಳ್ಳುತ್ತಿರುವ ಅಶ್ವಥ್ ನಾರಾಯಣ್ ಅವರನ್ನು ಈ ಕೂಡಲೇ ಕಾರ್ಯಪಡೆ ಅಧ್ಯಕ್ಷ ಹುದ್ದೆಯಿಂದ ವಜಾಗೊಳಿಸಬೇಕೆಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ರಾಜ್ಯಪಾಲರಿಗೆ ಒತ್ತಾಯಿಸಿದ್ದಾರೆ.

    ಉಪ ಮುಖ್ಯಮಂತ್ರಿಗಳು ತಾವು ಸಮಸ್ತ ಕರ್ನಾಟಕ ರಾಜ್ಯಕ್ಕೆ ಕೊರೊನಾ ಮಹಾಮಾರಿಯನ್ನು ನಿಯಂತ್ರಿಸುವ ಕಾರ್ಯಪಡೆಯ ಅಧ್ಯಕ್ಷರು ಎಂಬುದನ್ನು ಮರೆತು ಕೇವಲ ತಾವು ಪ್ರತಿನಿಧಿಸುವ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರವನ್ನು ಗಮನದಲ್ಲಿಟ್ಟುಕೊಂಡು ಡಾ. ಸಿ. ಎನ್. ಅಶ್ವತ್ಥನಾರಾಯಣ ಫೌಂಡೇಷನ್ ಹೆಸರಿನಲ್ಲಿ ತಮ್ಮ ಬೆಂಬಲಿಗರು ಇರುವ ಪ್ರದೇಶಗಳಲ್ಲಿ ಮಾತ್ರ ಟೋಕನ್ ಗಳನ್ನು ಮೊದಲೇ ವಿತರಿಸಿ ಲಸಿಕೆಯನ್ನು ಹಾಕುತ್ತಿರುವುದು ಎಲ್ಲೆಡೆ ಕಂಡುಬರುತ್ತಿದೆ.

    ಫ್ರಂಟ್ ಲೈನ್ ವಾರಿಯರ್ಸ್ ಗಳ ನೆಪದಲ್ಲಿ ಆದ್ಯತೆಯ ನಿಯಮ ಹಾಗೂ ಕಂಪನಿಗಳ ಸಾಮಾಜಿಕ ಜವಾಬ್ದಾರಿಯ ನಿಧಿ ಅಡಿಯಲ್ಲಿ ದುರ್ಬಳಕೆ ಮಾಡಿಕೊಂಡು ಈ ರೀತಿಯ ಲಸಿಕೆ ವಿತರಣೆಯನ್ನು ಬಿಜೆಪಿ ತನ್ನ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಬಳಸಿಕೊಳ್ಳುತ್ತಿದೆ. ನಗರದ 27 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಈ ಅನೈತಿಕ ಚಟುವಟಿಕೆಗಳು ಅವ್ಯಾಹತವಾಗಿ ನಡೆಯುತ್ತಿದ್ದು ಇದಕ್ಕೆ ಉಪ ಮುಖ್ಯಮಂತ್ರಿಗಳು ತಮ್ಮ ಹುದ್ದೆಯನ್ನು ದುರ್ಬಳಕೆ ಮಾಡಿಕೊಂಡು ಸಾಕಷ್ಟು ಇಂಬು ನೀಡುತ್ತಿದ್ದಾರೆ. ಜನತೆ ಬೆಳ್ಳಂಬೆಳಗ್ಗೆ 8 ಗಂಟೆಗೆ ಲಸಿಕಾ ಕೇಂದ್ರಗಳಿಗೆ ಹೋದರೂ ಯಾರಿಗೂ ಲಸಿಕೆ ಸಿಗುವುದಿಲ್ಲ. ಕೇವಲ ಟೋಕನ್ ಹೊಂದಿರುವವರಿಗೆ ಮಾತ್ರ ಲಸಿಕೆ ನೀಡುತ್ತಿರುವದು ಎಲ್ಲಾ ಲಸಿಕಾ ಕೇಂದ್ರಗಳಲ್ಲಿ ಕಾಣಸಿಗುತ್ತದೆ.

    ಈಗಾಗಲೇ ಆಮ್ ಆದ್ಮಿ ಪಕ್ಷವು ಈ ರೀತಿಯ ಲಸಿಕೆ ವಿತರಣೆ ಯಲ್ಲಿನ ಬಿಜೆಪಿಗರ ರಾಜಕಾರಣ, ಅಸಮಾನತೆ ತಾರತಮ್ಯ ಧೋರಣೆಯ ವಿರುದ್ಧ ವಿರುದ್ಧ ಸರ್ ಸಿ.ವಿ.ರಾಮನ್ ನಗರ, ಜಯನಗರ, ಬಸವನಗುಡಿ, ಬೊಮ್ಮನಹಳ್ಳಿ, ಗೋವಿಂದರಾಜನಗರ ಮುಂತಾದ ವಿಧಾನಸಭಾ ಕ್ಷೇತ್ರಗಳಲ್ಲಿ ಜನಸಾಮಾನ್ಯರೊಂದಿಗೆ ಜೊತೆಗೂಡಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ತಮ್ಮ ಅಸಮಾಧಾನವನ್ನು, ಪ್ರತಿಭಟನೆಯನ್ನು ವ್ಯಕ್ತಪಡಿಸುತ್ತಿದ್ದಾರೆ.

    ಜನಸಾಮಾನ್ಯನಿಗೆ ನ್ಯಾಯೋಚಿತವಾಗಿ ಸಿಗಬೇಕಿದ್ದ ಲಸಿಕೆಗಳು ಇಂದು ಕೇವಲ ರಾಜಕೀಯ ಉದ್ದೇಶಗಳಿಗಾಗಿ ಸಿಗದೆ ವಂಚಿತರಾಗುತ್ತಿದ್ದಾರೆ. ಈ ಗೊಂದಲಗಳಿಗೆ ನೇರ ವಾಗಿ ಕಾರಣಕರ್ತರಾಗಿರುವ ಕಾರ್ಯಪಡೆ ಅಧ್ಯಕ್ಷರನ್ನು ಈ ಕೂಡಲೇ ವಜಾಗೊಳಿಸಬೇಕೆಂದು ರಾಜ್ಯಪಾಲರಲ್ಲಿ ದೂರನ್ನು ಸಹ ನೀಡಲಾಗುವುದೆಂದು ಎಂದು ಮೋಹನ್ ದಾಸರಿ ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ರಾಜ್ಯ ಹಿಂದುಳಿದ ವರ್ಗಗಳ ವಿಭಾಗದ ಉಪಾಧ್ಯಕ್ಷ ರಾಜಶೇಖರ ದೊಡ್ಡಣ್ಣ ಹಾಗೂ ಬೆಂಗಳೂರು ನಗರ ಎಸ್‍ಸಿ, ಎಸ್ ಟಿ ವಿಭಾಗದ ಅಧ್ಯಕ್ಷ ಜಯಕುಮಾರ್ ಅವರು ಸಹ ಭಾಗವಹಿಸಿದ್ದರು.

  • ದೆಹಲಿಯಲ್ಲಿ ಕಾಂಗ್ರೆಸ್ ಸೊನ್ನೆ ಸುತ್ತಲು ಕಾರಣವೇನು?

    ದೆಹಲಿಯಲ್ಲಿ ಕಾಂಗ್ರೆಸ್ ಸೊನ್ನೆ ಸುತ್ತಲು ಕಾರಣವೇನು?

    ನವದೆಹಲಿ: 15 ವರ್ಷಗಳ ಕಾಲ ರಾಜ್ಯಭಾರ ಮಾಡಿದ್ದ ಕಾಂಗ್ರೆಸ್ ಇಂದು ದೆಹಲಿಯಲ್ಲಿ ನೆಲೆ ಕಳೆದುಕೊಂಡಿದೆ. ಈ ಬಾರಿ ನಡೆಯುತ್ತಿರುವ ವಿಧಾನಸಭೆ ಚುನಾವಣೆಯಲ್ಲಿ ಖಾತೆ ತೆರೆಯಲು ಕಷ್ಟಪಡುವ ಪರಿಸ್ಥಿತಿಗೆ ಕಾಂಗ್ರೆಸ್ ಬಂದಿದೆ.

    ದೆಹಲಿಯಲ್ಲಿ ಭರ್ಜರಿ ಚುನಾವಣಾ ಪ್ರಚಾರ ಆರಂಭವಾಗಿದೆ. ಆಮ್ ಆದ್ಮಿ, ಕಾಂಗ್ರೆಸ್, ಬಿಜೆಪಿ ಈ ಬಾರಿ ದೆಹಲಿ ಗದ್ದುಗೆ ಏರಲು ಸಿದ್ಧತೆ ನಡೆಸಿಕೊಂಡಿದೆ. ಆಮ್ ಆದ್ಮಿ ಮತ್ತು ಬಿಜೆಪಿ ನಡುವೆ ನೇರಾ ಹಣಾಹಣಿ ವಾತಾವರಣ ಸೃಷ್ಟಿಯಾಗಿದ್ದು, ಕಾಂಗ್ರೆಸ್ ಲೆಕ್ಕಕ್ಕುಂಟು ಆಟಕ್ಕಿಲ್ಲ ಎನ್ನುವ ಪರಿಸ್ಥಿತಿ ಬಂದಿದೆ.

    ಮೂರು ಅವಧಿಗೆ ಆಡಳಿತ ನಡೆಸಿದ್ದ ಕಾಂಗ್ರೆಸ್ ದೆಹಲಿಯಲ್ಲಿ ಕಳೆದ ಬಾರಿ ಖಾತೆ ತೆರೆದಿಲ್ಲ ಹೀಗೆ ನೆಲೆ ಕಳೆದುಕೊಂಡಿದ್ದು ಯಾಕೆ ಎನ್ನುವ ಕಾರಣ ಹುಡುಕಿದರೆ ಅಲ್ಲಿ ಉತ್ತರ ಆಮ್ ಆದ್ಮಿ ಪಕ್ಷ ದೆಹಲಿಯಲ್ಲಿ ಸೃಷ್ಟಿಸಿದ್ದ ಸಂಚಲನ. 2013ಕ್ಕೆ ಚುನಾವಣಾ ಕಣಕ್ಕಿಳಿದ ಆಮ್ ಆದ್ಮಿ 2015ರ ಚುನಾವಣಾ ಬಳಿಕ ಇಡೀ ಕಾಂಗ್ರೆಸ್ ವೋಟ್ ಬ್ಯಾಂಕ್ ಅನ್ನು ಕಸಿದುಕೊಂಡಿದೆ. ಕಾಂಗ್ರೆಸ್ ಬಹುತೇಕ ವೋಟ್ ಬ್ಯಾಂಕ್ ಆಪ್‍ಗೆ ಶಿಫ್ಟ್ ಆಗಿದ್ದು, ಕಾಂಗ್ರೆಸ್ ಮತ್ತು ಆಪ್ ಒಂದೇ ಮತ ಬ್ಯಾಂಕಿಗೆ ಕೈ ಹಾಕಿದೆ.

    2013ರ ಚುನಾವಣೆಯಲ್ಲಿ ಎಎಪಿ 70ರಲ್ಲಿ 28 ಸ್ಥಾನಗಳನ್ನು ಗೆದ್ದು ಶೇ. 29.49 ರಷ್ಟು, 2015ರಲ್ಲಿ 67 ಸ್ಥಾನಗಳನ್ನು ಗಳಿಸಿ ಶೇ. 54.3ರಷ್ಟು ಮತಗಳನ್ನು ಗಳಿಸಿತ್ತು. ಕಾಂಗ್ರೆಸ್ 2013ರಲ್ಲಿ ಎಂಟು ಸ್ಥಾನಗಳನ್ನು ಗೆದ್ದು 24.55ರಷ್ಟು ಮತಗಳನ್ನು ಗಳಿಸಿತ್ತು. ಆದರೆ 2015ರಲ್ಲಿ ಶೇ 9.8ಕ್ಕೆ ಕುಸಿಯಿತು. 2013ರಲ್ಲಿ ಬಿಜೆಪಿ 31 ಸ್ಥಾನಗಳನ್ನು ಗೆದ್ದಿದ್ದು, ಶೇ. 33.07ರಷ್ಟು ಮತಗಳನ್ನು ಗಳಿಸಿದೆ. 2015ರಲ್ಲಿ ಕೇವಲ ಒಂದು ಶೇ. ಕಡಿಮೆಯಾಗಿದೆ ಮತ್ತು ಶೇಕಡಾ 32.1 ರಷ್ಟಿತ್ತು ಆದರೆ ಪಕ್ಷವು ಕೇವಲ ಮೂರು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಯಿತು.

    ದೆಹಲಿಯಲ್ಲಿ ಕಾಂಗ್ರೆಸ್ ಸಾಂಪ್ರದಾಯಿಕ ಎದುರಾಳಿ ಬಿಜೆಪಿ ಬದಲು ಆಡಳಿತರೂಢಿ ಆಮ್ ಆದ್ಮಿ ವಿರುದ್ಧ ಹೋರಾಟ ನಡೆಸಬೇಕಿತ್ತು. ಆದರೆ ಆಪ್ ಜೊತೆಗೆ ಮೃದು ಧೋರಣೆ ಹೊಂದಿದ್ದು ಸರ್ಕಾರದ ವಿರುದ್ಧ ದೊಡ್ಡ ಹೋರಾಟಗಳೇನು ನಡೆಯುತ್ತಿಲ್ಲ. ಇವೆರಡು ಪಕ್ಷಗಳ ನಡುವೆ ಪ್ರತಿ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಾರದಿದ್ದರೂ ಶೇಕಡವಾರು ಮತಗಳಿಕೆಯಲ್ಲಿ ಬಿಜೆಪಿ ಉತ್ತಮವಾಗಿದೆ.

    ಈ ನಡುವೆ ಮತ್ತೆ ಕಾಂಗ್ರೆಸ್ ಬಿಜೆಪಿ ವಿರುದ್ಧ ಕ್ಯಾಂಪೇನ್ ಆರಂಭಿಸಿದೆ. ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‍ಆರ್ ಸಿ) ವಿರೋಧವನ್ನು ಬಳಸಿಕೊಂಡು ಕಳೆದುಕೊಂಡ ಮತಗಳನ್ನು ತನ್ನತ್ತ ಸೆಳೆಯುವ ಪ್ರಯತ್ನ ಮಾಡಿದೆ. ಅಲ್ಲದೇ ಬಿಹಾರಿ ಮತದಾರರನ್ನು ಸೆಳೆದುಕೊಳ್ಳಲು ಆರ್‍ಜೆಡಿ ಜೊತೆಗೂ ಮೈತ್ರಿ ಮಾಡಿಕೊಂಡಿದೆ. ಇದಕ್ಕೆ ತದ್ವಿರುದ್ಧವಾಗಿ ಆಪ್ ಸಿಎಎ ಮತ್ತು ಎನ್‍ಆರ್‍ಸಿ ವಿಚಾರದಲ್ಲಿ ಸ್ಥಿರತೆ ಕಾಯ್ದುಕೊಂಡಿದ್ದು ಚದುರಿ ಹೋಗಿದ್ದ ವೋಟ್ ಕಾಂಗ್ರೆಸ್‍ಗೆ ಮರಳುತ್ತಾ, ಈ ಬಾರಿ ಖಾತೆ ಓಪನ್ ಆಗುತ್ತಾ ಎನ್ನವುದು ಫೆಬ್ರವರಿ 11ಕ್ಕೆ ತಿಳಿಯಲಿದೆ.