Tag: ಆಯುಕ್ತ

  • ಕಾಫಿನಾಡ ನಗರಸಭೆ ಅಧ್ಯಕ್ಷ, ಆಯುಕ್ತರ ಮೇಲೆ ಕೇಸ್ ದಾಖಲು

    ಕಾಫಿನಾಡ ನಗರಸಭೆ ಅಧ್ಯಕ್ಷ, ಆಯುಕ್ತರ ಮೇಲೆ ಕೇಸ್ ದಾಖಲು

    ಚಿಕ್ಕಮಗಳೂರು: ನಗರಸಭೆ ಸದಸ್ಯರೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಹಿನ್ನೆಲೆ ನಗರಸಭೆ ಅಧ್ಯಕ್ಷರು ಹಾಗೂ ಆಯುಕ್ತರ ಮೇಲೆ ಪ್ರಕರಣ ದಾಖಲಾಗಿದೆ.

    ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಹಾಗೂ ಆಯುಕ್ತ ಬಸವರಾಜ್ ಮೇಲೆ ದೂರು ದಾಖಲಿಸಲಾಗಿದೆ. ನಗರಸಭೆ ಸದಸ್ಯ ಗೋಪಿ ಅವರನ್ನು ಜಿಲ್ಲೆಯ ನಗರಸಭೆಯ ಅಧಿಕೃತ ವಾಟ್ಸಾಪ್ ಗ್ರೂಪಿನಿಂದ ತೆಗೆದು ಹಾಕಲಾಗಿತ್ತು. ಆ ವಿಚಾರದ ಬಗ್ಗೆ ಹಾಗೂ ತಮ್ಮ ವಾರ್ಡಿನ ಕೆಲಸದ ನಿಮಿತ್ತ ಅಧ್ಯಕ್ಷರ ಬಳಿ ಚರ್ಚಿಸಲು ಹೋಗಿದ್ದರು. ಈ ವೇಳೆ ನಗರಸಭೆ ಆಯುಕ್ತ ಬಸವರಾಜ್ ಕೂಡ ಅಲ್ಲೇ ಇದ್ದರು. ಇದನ್ನೂ ಓದಿ: ಗೋಮಾಂಸವನ್ನು ಹಿಂದೂಗಳು, ಕ್ರಿಶ್ಚಿಯನ್ ಕೂಡ ತಿನ್ನುತ್ತಾರೆ: ಸಿದ್ದರಾಮಯ್ಯ

    ಈ ವೇಳೆ ಅಧ್ಯಕ್ಷರು ಗೋಪಿ ಅವರಿಗೆ ಏನು ಮಾಡಿಕೊಳ್ಳುತ್ತೀಯಾ ಮಾಡಿಕೋ ಎಂದು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಆಗ ಅಲ್ಲೇ ಇದ್ದ ಆಯುಕ್ತ ಬಸವರಾಜ್ ಕೂಡಾ ನೀನು ಸಿಎಂಸಿ ಗ್ರೂಪಿನಲ್ಲಿ ಇರಲು ಲಾಯಕ್ಕಿಲ್ಲ. ಅದಕ್ಕೆ ತೆಗೆದು ಹಾಕಿದ್ದೇನೆ. ನಿನ್ನ ಕೈಯಲ್ಲಿ ಏನು ಮಾಡಲು ಸಾಧ್ಯ. ಏನು ಬೇಕಾದರು ಮಾಡಿಕೋ ಎಂದು ಅವರೂ ಕೂಡ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ಇದನ್ನೂ ಓದಿ: ಮದುವೆ ದಿಬ್ಬಣದಲ್ಲಿ ಟ್ರ್ಯಾಕ್ಟರ್ ಚಾಲಕನಾದ ಶಾಸಕ ರೇಣುಕಾಚಾರ್ಯ

    POLICE JEEP

    ನಗರಸಭೆ ಸದಸ್ಯರ ದೂರಿನ ಅನ್ವಯ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಅಧ್ಯಕ್ಷ ವೇಣು ಹಾಗೂ ಆಯುಕ್ತ ಬಸವರಾಜ್ ವಿರುದ್ಧ ಕಲಂ 504, (ಉದ್ದೇಶಪೂರ್ವಕ ಅವಮಾನ) 506 (ವಂಚನೆ)ರ ಅಡಿ ಪ್ರಕರಣ ದಾಖಲಾಗಿದೆ.

  • ಬೆಂಗಳೂರಲ್ಲಿ ಕೊರೊನಾ ನಿಯಂತ್ರಣಕ್ಕೆ 15 ದಿನ ಬೇಕು: ಮೋದಿ ಸಭೆಯಲ್ಲಿ ಬಿಬಿಎಂಪಿ ಆಯುಕ್ತರ ಹೇಳಿಕೆ

    ಬೆಂಗಳೂರಲ್ಲಿ ಕೊರೊನಾ ನಿಯಂತ್ರಣಕ್ಕೆ 15 ದಿನ ಬೇಕು: ಮೋದಿ ಸಭೆಯಲ್ಲಿ ಬಿಬಿಎಂಪಿ ಆಯುಕ್ತರ ಹೇಳಿಕೆ

    – ಬೆಂಗಳೂರು ನಗರದಲ್ಲಿ ಲಾಕ್‍ಡೌನ್ ವಿಸ್ತರಣೆ ಪಕ್ಕಾ, ಸಿಎಂ ಸಭೆಯಲ್ಲಿ ನಿರ್ಧಾರ

    ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಲಾಕ್‍ಡೌನ್ ಮತ್ತಷ್ಟು ವಿಸ್ತರಣೆಯಾಗುವ ಸಾಧ್ಯತೆ ನಿಚ್ಚಳವಾಗಿದೆ. ಪ್ರಧಾನಿ ನರೇಂದ್ರ ಮೋದಿ ಜೊತೆ ನಡೆದ ಸಂವಾದದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ನೀಡಿರುವ ಇನ್ನೂ 15 ದಿನ ನಮಗೆ ಅವಶ್ಯಕತೆ ಎಂದಿರುವುದು ಲಾಕ್‍ಡೌನ್ ವಿಸ್ತರಣೆಯನ್ನು ಖಚಿತಪಡಿಸುತ್ತಿದೆ.

    ಬೆಂಗಳೂರು ನಗರದಲ್ಲಿ ಶೇ.40 ರಷ್ಟು ಕೇಸ್ ಇಳಿದಿದೆ. ಆದ್ರೆ ಇನ್ನು 15 ದಿನದೊಳಗಾಗಿ ಕಂಟ್ರೋಲ್‍ಗೆ ಬರಬಹುದು. ಬೆಂಗಳೂರಿನ ಪಾಸಿಟಿವಿಟಿ ರೇಟ್ ಕೂಡ ಅಲ್ಪ ಇಳಿಕೆ ಕಾಣ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಪಿಎಂ ವಿಡಿಯೋ ಕಾನ್ಫರೆನ್ಸ್‍ನಲ್ಲಿ ಮಾಹಿತಿ ನೀಡಿದರು. ಬೆಂಗಳೂರಲ್ಲಿ ಹಲವು ನಿಯಂತ್ರಣ ಕ್ರಮಗಳನ್ನ ತೆಗೆದುಕೊಳ್ಳಲಾಗಿದೆ. ಈಗಾಗಲೇ ಮೇ 24ರ ತನಕ ಲಾಕ್‍ಡೌನ್ ಇದೆ. ಮುಂದೆ ವಿಸ್ತರಣೆ ಮಾಡುವ ಬಗ್ಗೆ ರಾಜ್ಯ ಸರ್ಕಾರ, ಮುಖ್ಯಮಂತ್ರಿಗಳು ನಿರ್ಧಾರ ಮಾಡ್ತಾರೆ ಎಂದು ಮಾಹಿತಿ ನೀಡಿದರು.

    ಚಿಕಿತ್ಸಾ ವ್ಯವಸ್ಥೆಯಲ್ಲಿ ಸುಧಾರಣೆ ತಂದಿದ್ದೇವೆ. ಅಂಬುಲೆನ್ಸ್ ಸಮಸ್ಯೆ, ಆಕ್ಸಿಜನ್ ಸಮಸ್ಯೆ ಕಡಿಮೆಯಾಗಿದೆ. ವಿಧಾನಸಭಾ ಕ್ಷೇತ್ರವಾರು ಕೋವಿಡ್ ಕೇರ್ ಕೇಂದ್ರಗಳನ್ನ ತೆರೆಯಲಾಗಿದೆ, ಉಳಿದೆಡೆಗಳಲ್ಲಿ ಶೀಘ್ರ ತೆರೆಯುತ್ತೇವೆ. ಹೋಂ ಐಸೋಲೇಶನ್ ಬಗ್ಗೆ ಹೆಚ್ಚು ನಿಗಾ ವಹಿಸಲಾಗಿದೆ. ಸಾವಿನ ಪ್ರಮಾಣವನ್ನ ಇಳಿಕೆ ಮಾಡಲು ಅಗತ್ಯ ಕ್ರಮಕೈಗೊಂಡಿದ್ದೇವೆ. ಬಿಗಿಯಾದ ಕ್ರಮಗಳನ್ನು ಇನ್ನಷ್ಟು ಕಾರ್ಯರೂಪಕ್ಕೆ ತರುತ್ತೇವೆ. ನಮಗೆ ಇನ್ನು 15 ದಿನಗಳ ಕಾಲ ಅವಶ್ಯಕತೆ ಇದೆ ಎಂದು ಪ್ರಧಾನಿ ಮೋದಿಗೆ ಮನವರಿಕೆ ಮಾಡಿದರು.

    ವಲಯವಾರು ವಾರ್ ರೂಂ ಆರಂಭಿಸಲಾಗಿದೆ. ಟೆಸ್ಟಿಂಗ್ ಹೆಚ್ಚಳ ಮಾಡಿದ್ದೇವೆ. ವ್ಯಾಕ್ಸಿನ್ ಪ್ರಮಾಣದಲ್ಲಿ ಬೆಂಗಳೂರೇ ನಂಬರ್ 1 ಎನ್ನುವ ಬಗ್ಗೆಯೂ ಮಾಹಿತಿ ನೀಡಿ, ಬೆಂಗಳೂರಿಗೆ ಇನ್ನಷ್ಟು ವ್ಯಾಕ್ಸಿನ್ ಪೂರೈಕೆ ಮಾಡಬೇಕೆಂದು ಮನವಿ ಮಾಡಿದರು. ಕೊರೊನಾ ಹಬ್ ಆಗಿದ್ದ ಕೆ.ಆರ್. ಮಾರ್ಕೆಟ್ ವಿಕೇಂದ್ರೀಕರಣ, ಬಡ ಕಾರ್ಮಿಕರಿಗೆ ಉಚಿತ ಆಹಾರ ನೀಡುತ್ತಿರುವ ಬಗ್ಗೆಯೂ ಮಾಹಿತಿ ನೀಡಿದರು. ಜಿಲ್ಲಾಧಿಕಾರಿಗಳ ಸಭೆಯಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿಗಿಂತ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಅವರೇ ಹೆಚ್ಚು ವಿವರಣೆ ನೀಡಿದ್ದು ವಿಶೇಷವಾಗಿತ್ತು.

    ವೀಡಿಯೋ ಕಾನ್ಫರೆನ್ಸ್‍ನಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್, ವಿಶೇಷ ಆಯುಕ್ತ ರಾಜೇಂದ್ರ ಚೋಳನ್, ಮುಖ್ಯ ಆರೋಗ್ಯಾಧಿಕಾರಿ ವಿಜಯೇಂದ್ರ, ಗೃಹಕಚೇರಿ ಕೃಷ್ಣಾದಿಂದ ಸಿಎಂ ಯಡಿಯೂರಪ್ಪ, ಡಿಸಿಎಂ ಅಶ್ವಥನಾರಾಯಣ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಚಿವರಾದ ಡಾ.ಕೆ.ಸುಧಾಕರ್, ಜಗದೀಶ್ ಶೆಟ್ಟರ್, ಮುಖ್ಯಕಾರ್ಯದರ್ಶಿ ರವಿಕುಮಾರ್ ಹಾಗೂ 17 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಭಾಗಿಯಾಗಿದ್ದರು.

  • ಅನಗತ್ಯ ಆತಂಕ ಹುಟ್ಟಿಸಬೇಡಿ- ಬಿಬಿಎಂಪಿ ಆಯುಕ್ತರಿಗೆ ಸಿಎಂ ತರಾಟೆ

    ಅನಗತ್ಯ ಆತಂಕ ಹುಟ್ಟಿಸಬೇಡಿ- ಬಿಬಿಎಂಪಿ ಆಯುಕ್ತರಿಗೆ ಸಿಎಂ ತರಾಟೆ

    ಬೆಂಗಳೂರು: ಕೊರೊನಾ ವಿಚಾರದಲ್ಲಿ ಸಾರ್ವಜನಿಕರಲ್ಲಿ ಅನಗತ್ಯ ಆತಂಕ ಹುಟ್ಟಿಸಬೇಡಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಕೊರೊನಾ ಬಿಗಿ ನಿಯಮಗಳ ಜಾರಿಗೆ ಬಿಬಿಎಂಪಿಯಿಂದ ಪ್ರಸ್ತಾವನೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಪಾರ್ಕ್, ಸ್ವಿಮ್ಮಿಂಗ್ ಪೂಲ್ ಬಂದ್ ಮಾಡುವುದು, ಥೀಯೇಟರ್ ಗಳಲ್ಲಿ ಶೇ.50ರಷ್ಟು ಭರ್ತಿಗೆ ಮಾತ್ರ ಅವಕಾಶ ನೀಡುವುದು. ವಿವಾಹ ಸಮಾರಂಭಗಳಲ್ಲಿ ಹೆಚ್ಚು ಜನ ಸೇರದಂತೆ ಕ್ರಮ ವಹಿಸುವ ಅಗತ್ಯವಿದೆ ಎಂದು ಮಂಜುನಾಥ್ ಪ್ರಸಾದ್ ಸರ್ಕಾರಕ್ಕೆ ಸಲ್ಲಿಸಿದ ಪ್ರಸ್ತಾವನೆಯಲ್ಲಿ ತಿಳಿಸಲಾಗಿದೆ ಎಂದು ಮಾಹಿತಿ ನೀಡಿದ್ದರು. ಇದನ್ನೂ ಓದಿ: ಥೀಯೇಟರ್‌ಗಳ ಸಾಮರ್ಥ್ಯ ಶೇ.50ಕ್ಕೆ ಇಳಿಸಿ- ಬಿಬಿಎಂಪಿಯಿಂದ ಸರ್ಕಾರಕ್ಕೆ ಪ್ರಸ್ತಾವನೆ

    ಇದಕ್ಕೆ ಸಿಎಂ ಕೆಂಡಾಮಂಡಲವಾಗಿದ್ದು, ಅನಗತ್ಯ ಆತಂಕ ಹುಟ್ಟಿಸೋದು ಯಾಕೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಕೊರೊನಾ ನಿಯಮಗಳ ಜಾರಿ ಬಗ್ಗೆ ಈಗಾಗಲೇ ತಾಂತ್ರಿಕ ಸಲಹಾ ಸಮಿತಿ ಸಭೆ ಆಗಿದೆ. ಪ್ರಧಾನಿ ನರೇಂದ್ರ ಮೋದಿಯವರಿಗೂ ಕೊರೊನಾ ವಸ್ತುಸ್ಥಿತಿಯ ಬಗ್ಗೆ ಮಾಹಿತಿ ನೀಡಲಾಗಿದೆ. ಖುದ್ದು ಪ್ರಧಾನಿಯವರೇ ಜನರಲ್ಲಿ ಆತಂಕ ಹುಟ್ಟಿಸೋದು ಬೇಡ ಎಂದಿದ್ದಾರೆ. ಈ ಮಧ್ಯೆ ಅನಗತ್ಯ ಹೇಳಿಕೆ ಯಾಕೆ ಕೊಡಬೇಕಿತ್ತು ಎಂದು ಆಯುಕ್ತರಿಗೆ ಸಿಎಂ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

    ಇನ್ನೊಂದು ವಾರ ಪರಿಸ್ಥಿತಿ ಅವಲೋಕನ ಮಾಡುವುದಾಗಿ ನಿರ್ಧರಿಸಲಾಗಿದೆ. ಪ್ರಸ್ತಾವನೆ ಕೊಟ್ಟ ಮೇಲೆ ತಜ್ಞರು ಪರಿಸ್ಥಿತಿ ಅವಲೋಕಿಸಿ ವರದಿ ನೀಡುತ್ತಾರೆ. ಅದಕ್ಕೂ ಮುನ್ನ ಮಾಧ್ಯಮಗಳಿಗೆ ಹೇಳಿಕೆ ಕೊಟ್ಟು ಜನರಲ್ಲಿ ಆತಂಕ ಹುಟ್ಟಿಸುವ ಪ್ರಯತ್ನ ಬೇಡ. ಏನೇ ಇದ್ದರೂ ತಜ್ಞರ ಜೊತೆ ಚರ್ಚಿಸಿ, ತೀರ್ಮಾನಿಸಲಾಗುತ್ತದೆ. ಅನಗತ್ಯ ಆತಂಕ ಹುಟ್ಟಿಸಿ ಜನರನ್ನು ಭೀತಿಗೆ ತಳ್ಳುವುದು ಬೇಡ ಎಂದು ಸಿಎಂ ತಾಕೀತು ಮಾಡಿದ್ದಾರೆ.

  • ಸರಗಳ್ಳತನ, ಪುಡಿ ರೌಡಿಗಳ ಹೆಡೆಮುರಿ ಕಟ್ಟಲು ಸಜ್ಜಾದ ಪೊಲೀಸ್ ಪಡೆ

    ಸರಗಳ್ಳತನ, ಪುಡಿ ರೌಡಿಗಳ ಹೆಡೆಮುರಿ ಕಟ್ಟಲು ಸಜ್ಜಾದ ಪೊಲೀಸ್ ಪಡೆ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸರಣಿ ಸರಗಳ್ಳತನ ಹಾಗೂ ಪುಡಿ ರೌಡಿಗಳ ಹಾವಳಿಯಿಂದ ರಾಜಧಾನಿ ಪೊಲೀಸರು ಎಚ್ಚೆತ್ತುಕೊಂಡಿದ್ದು, ಎಂಟು ವಿಭಾಗೀಯ ಡಿಸಿಪಿಗಳಿಗೆ ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಖಡಕ್ ಸೂಚನೆ ನೀಡಿದ್ದಾರೆ.

    ಆಕ್ಟಿವ್ ಆಗಿರುವ ಅಪರಾಧ ಹಿನ್ನೆಲೆ ಹೊಂದಿರುವವರ ಪಟ್ಟಿ(ಎಂಒಬಿ)ಯಲ್ಲಿರುವರ ಮೇಲೆ ಹದ್ದಿನ ಕಣ್ಣಿಡುವಂತೆ ಅಲೋಕ್ ಕುಮಾರ್ ಸೂಚಿಸಿದ್ದಾರೆ. ಆಯುಕ್ತರ ಆದೇಶ ಮೇರೆಗೆ ಬೆಂಗಳೂರು ಸೂಪರ್ ಕಾಪ್ ಮೈಗೊಡವಿ ನಿಂತಿದ್ದು, ಬೆಳ್ಳಂಬೆಳಗ್ಗೆ ಎಂಒಬಿಗಳ ಮನೆ ಮೇಲೆ ಡಿಸಿಪಿಗಳು ದಾಳಿ ಮಾಡಿದ್ದಾರೆ. ಪೊಲೀಸರು ನಗರದ ಎಂಟು ವಿಭಾಗಗಳಲ್ಲಿರುವ ಎಂಒಬಿಗಳ ಚಳಿ ಬಿಡಿಸಿದ್ದಾರೆ. ಇದೇ ವೇಳೆ ಆಕ್ಟಿವ್ ಆಗಿರುವ ಎಂಒಬಿಗಳಿಗೆ ಎಚ್ಚರಿಕೆ ನೀಡಿದ್ದು, ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ಖಡಕ್ಕಾಗಿ ಸೂಚಿಸಿದ್ದಾರೆ.

    ತಮ್ಮ ಠಾಣೆ ವ್ಯಾಪ್ತಿಯಲ್ಲಿರುವ ಎಂಒಬಿಗಳನ್ನು ಪಟ್ಟಿ ಮಾಡಿ ಎಲ್ಲರ ಮನೆ ಮೆಲೂ ದಾಳಿ ನಡೆಸಿದ್ದು, ಆಕ್ಟಿವ್ ಇರುವ ಎಂಒಬಿಗಳ ಪ್ರತ್ಯೇಕ ಪಟ್ಟಿ ತಯಾರಿಸಿದ್ದಾರೆ. ಆಕ್ಟಿವ್ ಆಗಿರುವ ಎಂಒಬಿಗಳ ಪಟ್ಟಿಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಇವರ ಚಲನವಲನದ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಅಲ್ಲದೆ, ನಗರದಲ್ಲಿ ಎಲ್ಲೇ ಸರಗಳ್ಳತನದಂತಹ ಪ್ರಕರಣಗಳೂ ನಡೆದರೂ ಬೇಗನೆ ಪತ್ತೆಹಚ್ಚು ರೀತಿಯಲ್ಲಿ ವ್ಯವಸ್ಥಿತವಾಗಿ ತಮ್ಮ ಠಾಣೆ ವ್ಯಾಪ್ತಿಯ ಎಂಒಬಿಗಳ ಪಟ್ಟಿಯನ್ನು ಸಿದ್ಧಪಡಿಸಿದ್ದಾರೆ.

  • ನಾನು ಮಾಜಿ ಕಾರ್ಪೋರೇಟರ್ ಮಗ ಎಂದು ಅವಾಜ್ – 2 ಕೊಂಬಿದ್ಯಾ ಅಂತ ಚಳಿ ಬಿಡಿಸಿದ ಆಯುಕ್ತ

    ನಾನು ಮಾಜಿ ಕಾರ್ಪೋರೇಟರ್ ಮಗ ಎಂದು ಅವಾಜ್ – 2 ಕೊಂಬಿದ್ಯಾ ಅಂತ ಚಳಿ ಬಿಡಿಸಿದ ಆಯುಕ್ತ

    ತುಮಕೂರು: ಸರಿಯಾಗಿ ನಿರ್ವಹಣೆ ಮಾಡದ ಶುದ್ಧ ನೀರಿನ ಘಟಕವನ್ನು ವಶಪಡಿಸಿಕೊಳ್ಳಲು ಮುಂದಾದಾಗ ಅಡ್ಡಿಪಡಿಸಿದ ಮಾಜಿ ಉಪಮೇಯರ್ ಮಗನಿಗೆ ತುಮಕೂರು ಪಾಲಿಕೆ ಆಯುಕ್ತರು ಸರಿಯಾಗಿಯೇ ಚಳಿ ಬಿಡಿಸಿದ್ದಾರೆ.

    ಮಾಜಿ ಮೇಯರ್ ಫರ್ಜಾನ್ ಖಾನ್ ಪುತ್ರ ವಸೀಂ ಖಾನ್ ಶೇರಾನಿಗೆ ಆಯುಕ್ತ ಭೂಬಾಲನ್ ಸಖತಾಗಿ ಬಿಸಿ ಮುಟ್ಟಿಸಿದ್ದಾರೆ. ಶುದ್ಧ ನೀರಿನ ಘಟಕಗಳು ಸರಿಯಾಗಿ ನಿರ್ವಹಿಸುತ್ತಿಲ್ಲ ಎಂದು ದೂರು ಬಂದಿತ್ತು. ಹೀಗಾಗಿ ವಿದ್ಯುತ್ ಬಿಲ್ ಸರಿಯಾಗಿ ಪಾವತಿಸದ ಜೊತೆಗೆ ನೀರಿನ ಘಟಕಗಳನ್ನ ಸರಿಯಾಗಿ ನಿರ್ವಹಿಸದ ಹಿನ್ನೆಲೆಯಲ್ಲಿ ಹಲವು ನೀರಿನ ಘಟಕಗಳನ್ನ ವಶಕ್ಕೆ ಪಡೆದು ಪಾಲಿಕೆ ಮೀಟರ್ ಅಳವಡಿಸಲು ಮುಂದಾಗಿತ್ತು.

    24ನೇ ವಾರ್ಡ್ ನ ಶುದ್ಧ ನೀರಿನ ಘಟಕ ಉಸ್ತುವಾರಿಯನ್ನು ವಸೀಂ ಖಾನ್ ಶೇರಾನಿ ವಹಿಸಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿ ಮಾಜಿ ಉಪಮೇಯರ್ ಪುತ್ರ ಎಂಬ ಪ್ರಭಾವ ಬಳಸಲು ಮುಂದಾಗಿದ್ದಾರೆ. ಆಗ ಸಿಡಿಮಿಡಿಗೊಂಡ ಆಯುಕ್ತ ಭೂಬಾಲನ್ ವಸೀಂ ಖಾನ್‍ನಿಗೆ ನೀನು ಮಾಜಿ ಉಪಮೇಯರ್ ಮಗನಾದರೆ ನಿನಗೆ ಎರಡು ಕೊಂಬು ಇದೆಯಾ ಎಂದು ಪ್ರಶ್ನಿಸಿ ಅವರ ಚಳಿ ಬಿಡಿಸಿದ್ದಾರೆ.

    ಪೊಲೀಸರ ಭದ್ರತೆ ಪಡೆದು ಒಟ್ಟು 21 ಶುದ್ಧ ನೀರಿನ ಘಟಕಗಳನ್ನು ಆಯುಕ್ತರು ವಶಪಡಿಸಿಕೊಂಡಿದ್ದು, ಬಳಿಕ ಮೀಟರ್ ಅಳವಡಿಸಲಾಗಿದೆ.