Tag: ಆಯುರ್ವೇದ

  • ಡೆಹ್ರಾಡೂನ್‌ನಲ್ಲಿ 10ನೇ ವಿಶ್ವ ಆಯುರ್ವೇದ, ಆರೋಗ್ಯ Expo – ಪ್ರಹ್ಲಾದ್‌ ಜೋಶಿ ಮಾಹಿತಿ

    ಡೆಹ್ರಾಡೂನ್‌ನಲ್ಲಿ 10ನೇ ವಿಶ್ವ ಆಯುರ್ವೇದ, ಆರೋಗ್ಯ Expo – ಪ್ರಹ್ಲಾದ್‌ ಜೋಶಿ ಮಾಹಿತಿ

    – ಡಿ.12-15ರವರೆಗೆ 50 ರಾಷ್ಟ್ರ, 5,000 ಆಯುರ್ವೇದ ತಜ್ಞರು ಭಾಗವಹಿಸುವ ನಿರೀಕ್ಷೆ

    ಹುಬ್ಬಳ್ಳಿ: ಕೇಂದ್ರ ಆಯುಷ್ ಸಚಿವಾಲಯ ಡೆಹ್ರಾಡೂನ್‌ನಲ್ಲಿ (Dehradoon) 10ನೇ ವಿಶ್ವ ಆಯುರ್ವೇದ ಕಾಂಗ್ರೆಸ್ ಆಂಡ್ ಆರೋಗ್ಯ ಎಕ್ಸ್ಪೋ (Health Expo) ಆಯೋಜಿಸಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ (Prahlad Joshi) ತಿಳಿಸಿದರು.

    ಹುಬ್ಬಳ್ಳಿಯ (Hubballi) ಆಯುರ್ವೇದ ಸೇವಾ ಸಮಿತಿಯ ಆಯುರ್ವೇದ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ ವತಿಯಿಂದ ಭಾನುವಾರ ಕೆಎಲ್ಇ ಟೆಕ್ ಆಡಿಟೋರಿಯಂನಲ್ಲಿ ಆಯೋಜಿಸಿದ್ದ ಸ್ಯಾಟೆಲೈಟ್ ಸೆಮಿನಾರ್ ಉದ್ಘಾಟಿಸಿ ಮಾತನಾಡಿದರು.ಇದನ್ನೂ ಓದಿ: ಹರಾಜಿನಲ್ಲಿ ಆಯ್ಕೆಯಾಗಿ ಅಲಭ್ಯರಾಗುವ ಆಟಗಾರರಿಗೆ ಖಡಕ್‌ ವಾರ್ನಿಂಗ್‌; ನಿಯಮ ಕಡೆಗಣಿಸಿದ್ರೆ 2 ವರ್ಷ ಬ್ಯಾನ್‌

    ಕೇಂದ್ರದ ಆಯುಷ್ ಸಚಿವಾಲಯ ಡಿ. 12ರಿಂದ 15ರವರೆಗೆ ಉತ್ತರಾಖಂಡದ ಡೆಹ್ರಾಡೂನಿನಲ್ಲಿ 10ನೇ ವರ್ಲ್ಡ್ ಆಯುರ್ವೇದ- ಆರೋಗ್ಯ ಎಕ್ಸ್ಪೋ ನಡೆಸುತ್ತಿದೆ. ಈ ಎಕ್ಸ್ಪೋದಲ್ಲಿ 50 ರಾಷ್ಟ್ರಗಳು, 5000 ಆಯುರ್ವೇದ ತಜ್ಞರು ಭಾಗವಹಿಸುವ ನಿರೀಕ್ಷೆಯಿದೆ. ಇದರ ಅಂಗವಾಗಿ ದೇಶದೆಲ್ಲೆಡೆ 20 ಸ್ಯಾಟಲೈಟ್ ಸೆಮಿನಾರ್ ಗಳನ್ನು ನಡೆಸಲಾಗುತ್ತಿದ್ದು, ಇಂದಿನ ಕಾರ್ಯಕ್ರಮವೂ ಇದರ ಅಂಗವಾಗಿದೆ ಎಂದು ಹೇಳಿದರು.

    ಆಯುರ್ವೇದವು ಭಾರತದ ಅತ್ಯಂತ ಪ್ರಾಚೀನ ಸಂಸ್ಕೃತಿ ಮತ್ತು ಔಷಧಿ ಪದ್ಧತಿ ಕೂಡ ಹೌದು. ಇಂತಹ ಆಯುರ್ವೇದವನ್ನು ಉತ್ತೇಜಿಸಿ, ಉಳಿಸಿ ಬೆಳೆಸುವ ಕಾರ್ಯವನ್ನು ಭಾರತ ಸರ್ಕಾರ ಆಯುಷ್ ಸಚಿವಾಲಯದ ಮೂಲಕ ಮಾಡುತ್ತಿದೆ. ಜೊತೆಗೆ ಆಯುರ್ವೇದದ ಬಗ್ಗೆ ದೇಶ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಾ ಬಂದಿದೆ. ಪರಿಣಾಮ ನಮ್ಮ ಭಾರತದ (India) ಆಯುರ್ವೇದ ಜಗತ್ತಿನಲ್ಲೆಲ್ಲಾ ಪಸರಿಸುತ್ತಿದೆ ಎಂದರು.

    ಆಯುರ್ವೇದ ಔಷಧಿಗೆ ಹೆಚ್ಚು ಉತ್ತೇಜನ:
    2014ರಲ್ಲಿ ಆಯುರ್ವೇದಕ್ಕೆ ಅಷ್ಟು ಮಹತ್ವ ಇರಲಿಲ್ಲ. ಆಯುರ್ವೇದ ಔಷಧಿ ಕೇವಲ 24,000 ಕೋಟಿ ವಹಿವಾಟು ಇತ್ತು. ನಮ್ಮ ಸರ್ಕಾರ ಬಂದ ಮೇಲೆ ಈಗ 1.40 ಲಕ್ಷ ಕೋಟಿ ದಾಟಿದೆ. 500 ಕೋಟಿ ಇದ್ದ ಬಜೆಟ್ ಈಗ 3,000 ಕೋಟಿ ಕೊಟ್ಟಿದ್ದೇವೆ ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಆಯುರ್ವೇದ ಸೇವಾ ಸಮಿತಿ ಅಧ್ಯಕ್ಷ ಗೋವಿಂದ ಜೋಶಿ, ಕಾರ್ಯದರ್ಶಿ ಸಂಜೀವ್ ಜೋಶಿ, ಆಯುರ್ವೇದ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಎ.ಎಸ್.ಪ್ರಶಾಂತ್, ಆಯುರ್ವೇದ ಮಹಾವಿದ್ಯಾಲಯದ ಪ್ರಮುಖರಾದ ಡಾ.ಜೆ.ಆರ್.ಜೋಶಿ, ಡಾ. ಪ್ರಮೋದ್ ಕಟ್ಟಿ ಹಾಗೂ ಆಡಳಿತ ವರ್ಗ ಉಪಸ್ಥಿತರಿದ್ದರು.ಇದನ್ನೂ ಓದಿ: ಚಿತ್ರದುರ್ಗ| ಶಾರ್ಟ್ ಸರ್ಕ್ಯೂಟ್‌ನಿಂದ ಧಗಧಗನೇ ಹೊತ್ತಿ ಉರಿದ ಟ್ಯಾಂಕರ್ – ಚಾಲಕ, ನಿರ್ವಾಹಕ ಪಾರು

     

  • ಆಯುರ್ವೇದ ಪಥ್ಯ; 22 ಕೆಜಿ ತೂಕ ಕಡಿಮೆ ಮಾಡಿಕೊಂಡ ಕೇಂದ್ರ ಸಚಿವ

    ಆಯುರ್ವೇದ ಪಥ್ಯ; 22 ಕೆಜಿ ತೂಕ ಕಡಿಮೆ ಮಾಡಿಕೊಂಡ ಕೇಂದ್ರ ಸಚಿವ

    ನವದೆಹಲಿ: ಆಯುರ್ವೇದ ಆಹಾರ ಪಥ್ಯದಿಂದಾಗಿ (Ayurvedic diet) ಕೇಂದ್ರ ಸಚಿವ (Union Minister) ಕೌಶಲ್ ಕಿಶೋರ್ (Kaushal Kishore) ಅವರು 22 ಕೆ.ಜಿ ತೂಕ ಕಡಿಮೆ ಮಾಡಿಕೊಂಡಿದ್ದಾರೆ.

    ಕೇಂದ್ರ ವಸತಿ ಹಾಗೂ ನಗರ ವ್ಯವಹಾರಗಳ ರಾಜ್ಯ ಸಚಿವ ಕೌಶಲ್ ಕಿಶೋರ್ ಅವರು ತೂಕ ಕಡಿಮೆ (Weight Loss) ಮಾಡಿಕೊಂಡಿರುವ ವಿಷಯವನ್ನು ಖುದ್ದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?: ಸಚಿವರು ತಮ್ಮ ಮೊದಲ ಹಾಗೂ ನಂತರದ ಫೋಟೋಗಳನ್ನು ಟ್ವೀಟ್ ಮಾಡಿದ್ದು, ತೂಕ ಇಳಿಸಲು 2021ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆ ಮೇರೆಗೆ ಅಖಿಲ ಭಾರತ ಆಯುರ್ವೇದ ಸಂಸ್ಥೆಗೆ ಪ್ರವೇಶ ಪಡೆದೆ. ಅದಾದ ಬಳಿಕ ಸಂಸ್ಥೆಯ ಸೂಚಿಸಿದ ಆಹಾರ ಕ್ರಮವನ್ನು ಅನುಸರಿಸಲು ಪ್ರಾರಂಭಿಸಿದೆ. ಇದರಿಂದಾಗಿ 2021ರ ಮೊದಲು 96 ಕೆಜಿ ಇದ್ದ ನಾನು, ಈಗ 22 ಕೆಜಿ ಕಳೆದುಕೊಂಡು 74 ತೂಕ ಹೊಂದಿದ್ದೇನೆ. ನಾನು ಮೊದಲಿಗಿಂತ ಫಿಟ್ ಆಗಿದ್ದೇನೆ ಎಂದು ಟ್ವೀಟ್‍ನಲ್ಲಿ ಹೇಳಿದ್ದಾರೆ. ಇದನ್ನೂ ಓದಿ: ಬುರುಡೆ, ಬೊಗಳೆ ಬಿಟ್ಕೊಂಡು ಓಡಾಡಿದವರಿಗೆ ಚಾಮುಂಡೇಶ್ವರಿ ಜನ ಪಾಠ ಕಲಿಸಿದ್ದಾರೆ: ಸಿದ್ದುಗೆ ಸಿಂಹ ತಿರುಗೇಟು

    ಆಯುರ್ವೇದದಿಂದ ತೂಕ ಇಳಿಕೆ: ಪ್ರಾಚೀನ ಭಾರತೀಯ ವಿಜ್ಞಾನದ ಪ್ರಕಾರ, ಅಧಿಕ ತೂಕ ಅಥವಾ ಬೊಜ್ಜು, ಅಧಿಕ ಕಫ ದೋಷದ ಕಾರಣದಿಂದ ಉಂಟಾಗುತ್ತದೆ. ಆದ್ದರಿಂದ ಕೆಲವು ಪಥ್ಯಗಳನ್ನು ಅನುಸರಿಸುವ ದೇಹದ ಬೊಜ್ಜನ್ನು ಕರಗಿಸಬಹುದು. ಆಯುರ್ವೇದ ತಜ್ಞರ ಪ್ರಕಾರ, ಕಫ ದೋಷವಿರುವ ಜನರು ಹಸಿವಿನಿಂದ ಬಳಲಬಾರದು ಬದಲಿಗೆ ಅವರ ದೇಹ ಪ್ರಕಾರ ಮತ್ತು ಅಗತ್ಯಗಳಿಗೆ ಅನುಗುಣವಾಗಿ ತಿನ್ನಬೇಕು. ಇದನ್ನೂ ಓದಿ: ಮಂಗಳೂರು ಕುಕ್ಕರ್‌ ಸ್ಫೋಟ ಕೇಸ್‌ – ಎರಡೂವರೆ ತಿಂಗಳ ಬಳಿಕ ಶಾರೀಕ್ ಡಿಸ್ಚಾರ್ಜ್‌

  • ರಾಜಭವನದಲ್ಲಿ ಆಯುರ್ವೇದ ವೈದ್ಯಕೀಯ ಶಿಬಿರಕ್ಕೆ ರಾಜ್ಯಪಾಲರಿಂದ ಚಾಲನೆ

    ರಾಜಭವನದಲ್ಲಿ ಆಯುರ್ವೇದ ವೈದ್ಯಕೀಯ ಶಿಬಿರಕ್ಕೆ ರಾಜ್ಯಪಾಲರಿಂದ ಚಾಲನೆ

    ಬೆಂಗಳೂರು: ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ವತಿಯಿಂದ ರಾಷ್ಟ್ರೀಯ ಆಯುರ್ವೇದ ದಿನಾಚರಣೆ (National Ayurveda Day) ನಿಮಿತ್ತ ಪ್ರತಿ ದಿನ ಪ್ರತಿ ಮನೆಯಲ್ಲೂ ಆಯುರ್ವೇದ (ಹರ್ ದಿನ ಹರ್ ಗರ್ ಆಯುರ್ವೇದ) ಕಾರ್ಯಕ್ರಮದ ಅಂಗವಾಗಿ ರಾಜಭವನ (Rajabhavana) ದಲ್ಲಿ ಆಯೋಜಿಸಲಾಗಿದ್ದ ಆಯುರ್ವೇದ ವೈದ್ಯಕೀಯ ಶಿಬಿರಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಚಾಲನೆ ನೀಡಿದರು.

    ನಂತರ ಮಾತನಾಡಿದ ಅವರು, ಆಯುರ್ವೇದವನ್ನು ಅತ್ಯುತ್ತಮ ಮತ್ತು ಪುರಾತನವಾದ ವೈದ್ಯಕೀಯ ವ್ಯವಸ್ಥೆ ಎಂದು ಪರಿಗಣಿಸಲಾಗಿದೆ. ಇದು ಇಂದಿಗೂ ಪ್ರಸ್ತುತವಾಗಿದೆ. ಆಯುರ್ವೇದದ ಬಗ್ಗೆ ಅರಿವು ಮೂಡಿಸಲು ಮತ್ತು ಅದರ ಪ್ರಯೋಜನಗಳನ್ನು ತಳಮಟ್ಟದವರೆಗೆ ಕೊಂಡೊಯ್ಯಲು, ಭಾರತ ಸರ್ಕಾರದ ಆಯುಷ್ ಸಚಿವಾಲಯವು 2016 ರಿಂದ ಧನ್ವಂತರಿ ಜಯಂತಿ (ಧಂತೇರಸ್) ಸಂದರ್ಭದಲ್ಲಿ ಪ್ರತಿ ವರ್ಷ ಆಯುರ್ವೇದ ದಿನವನ್ನು ಆಚರಿಸುತ್ತಿದೆ ಎಂದರು.

    ಆಯುಷ್ ಸಚಿವಾಲಯವು ಆಯುರ್ವೇದ ದಿನವನ್ನು ಸಾಮೂಹಿಕ ಆಂದೋಲನವನ್ನಾಗಿ ಮಾಡಲು ಈ ವರ್ಷದ ಥೀಮ್ ‘ಹರ್ ದಿನ್ ಹರ್ ಘರ್ ಆಯುರ್ವೇದ’ (ಪ್ರತಿ ದಿನ ಪ್ರತಿ ಮನೆಯಲ್ಲೂ ಆಯುರ್ವೇದ) ಆಗಿದೆ. ಆಯುರ್ವೇದ ದಿನದ ನಿಮಿತ್ತ ಆಯೋಜಿಸಲಾಗುತ್ತಿರುವ ಕಾರ್ಯಕ್ರಮಗಳ ಸರಣಿಯಲ್ಲಿ ಆಯುರ್ವೇದ ವೈದ್ಯಕೀಯ ಶಿಬಿರವನ್ನು ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಯುರ್ವೇದ ಆಸ್ಪತ್ರೆ, ಬೆಂಗಳೂರು ರವರು ರಾಜಭವನದಲ್ಲಿ ಆಯೋಜಿಸಿರುವುದು ಸಂತಸ ತಂದಿದೆ ಎಂದರು.

    ಸಂಘಟಕರು ಮಾಡುತ್ತಿರುವ ಉತ್ತಮ ಕಾರ್ಯಗಳಿಗಾಗಿ ಅವರನ್ನು ಅಭಿನಂದಿಸುತ್ತೇನೆ ಮತ್ತು ‘ಹರ್ ದಿನ್ ಹರ್ ಘರ್ ಆಯುರ್ವೇದ’ ವಿಷಯವನ್ನು ಅರ್ಥಪೂರ್ಣವಾಗಿಸುವಲ್ಲಿ ಸಾರ್ವಜನಿಕರು ಕೈಜೋಡಿಸಬೇಕೆಂದು ನೀಡುವಂತೆ ಮನವಿ ಮಾಡುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ದೇವ್ರಾಣೆ ಹೇಳ್ತೀನಿ, 31 ವರ್ಷದೊಳಗೆ ಕರ್ನಾಟಕ ಮೂರು ಭಾಗ ಆಗುತ್ತೆ : ಬ್ರಹ್ಮಾಂಡ ಗುರೂಜಿ ಭವಿಷ್ಯ

    ಶಿಬಿರದಲ್ಲಿ ರಾಜಭವನದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಆಯುರ್ವೇದ ಮಹತ್ವದ ಮಾಹಿತಿ ನೀಡಿದ ಅಧಿಕಾರಿಗಳು ಆರೋಗ್ಯ ತಪಾಸಣೆ ನಡೆಸಿ, ಆಯುರ್ವೇದ ಔಷಧಿಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಸರ್ಕಾರಿ ಆರ್ಯುವೇದ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ.ಅಹಲ್ಯ.ಎಸ್, ಉಪ ಪ್ರಾಂಶುಪಾಲರಾದ ಡಾ.ಸುರೇಖ, ಆರ್ ಎಂ ಓ ಡಾ.ವೆಂಕಟರಾಮಯ್ಯ, ಹಿರಿಯ ವೈದ್ಯಾಧಿಕಾರಿ ಡಾ.ವೀಣಾ ಕೃಷ್ಣಮೂರ್ತಿ, ವೈದ್ಯಾಧಿಕಾರಿ ಡಾ.ಶಿವಪ್ರಸಾದ್, ಫಾರ್ಮಸಿ ಅಧಿಕಾರಿ ಯೋಗೇಶ್ ಪಿ ಎಂ, ಭಾರತಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

    Live Tv
    [brid partner=56869869 player=32851 video=960834 autoplay=true]

  • ಭಾರತದ ಆಯುರ್ವೇದ ಚಿಕಿತ್ಸೆಯನ್ನು ಆಫ್ರಿಕಾದಲ್ಲಿ ಆರಂಭಿಸಿಲು ಕೀನ್ಯಾ ಮಾಜಿ ಪ್ರಧಾನಿ ಮನವಿ

    ಭಾರತದ ಆಯುರ್ವೇದ ಚಿಕಿತ್ಸೆಯನ್ನು ಆಫ್ರಿಕಾದಲ್ಲಿ ಆರಂಭಿಸಿಲು ಕೀನ್ಯಾ ಮಾಜಿ ಪ್ರಧಾನಿ ಮನವಿ

    ನೈರೋಬಿ: ಭಾರತದ ಆಯುರ್ವೇದ ಚಿಕಿತ್ಸೆಗೆ ಕೀನ್ಯಾ ಮಾಜಿ ಪ್ರಧಾನಿ ರೈಲಾ ಒಡಿಂಗಾ ಮಾರು ಹೋಗಿದ್ದಾರೆ. ಇವರ ಪುತ್ರಿಗೆ ಕೇರಳದಲ್ಲಿ ನೀಡಿರುವ ಕಣ್ಣಿನ ಚಿಕಿತ್ಸೆಯಿಂದ ದೃಷ್ಟಿ ಬಂದಿದೆ. ಹೀಗಾಗಿ ಇವರು ಒಂದು ಉತ್ತಮ ನಿರ್ಧಾರವನ್ನು ಮಾಡುವ ಮೂಲಕವಾಗಿ ಸುದ್ದಿಯಾಗಿದ್ದಾರೆ.

    ಖಾಸಗಿ ವಾಹಿನಿ ಜೊತೆಗೆ ಮಾತನಾಡಿದ ಅವರು, ಆಯುರ್ವೇದ ಶಕ್ತಿಯಿಂದ ನನ್ನ ಮಗಳು ಮರಳಿ ದೃಷ್ಟಿ ಪಡೆದಿದ್ದಾಳೆ. ಈ ಅಮೂಲ್ಯ ಚಿಕಿತ್ಸೆಯನ್ನು ಆಫ್ರಿಕಾದಲ್ಲಿ ಆರಂಭಿಸಬೇಕು. ಇಲ್ಲಿನ ಔಷಧಿ ಸಸ್ಯಗಳನ್ನು ಬೆಳೆಯಲು ಪೂರಕ ವಾತಾವರಣವಿದೆ. ಈ ಮೂಲಕ ವಿಶ್ವದ ಆರೋಗ್ಯ ಸಮಸ್ಯೆಗೆ ಭಾರತದ ಆಯುರ್ವೇದ ಚಿಕಿತ್ಸೆ ಮೂಲಕ ಶಾಶ್ವತ ಪರಿಹಾರ ನೀಡಬೇಕು ಎಂದು ರೈಲಾ ಒಡಿಂಗಾ, ಮೋದಿ ಭೇಟಿಯಲ್ಲಿ ಮನವಿ ಮಾಡಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪ್ರಧಾನಿಗೆ ಭದ್ರತೆ ನೀಡಲು ಸಾಧ್ಯವಾಗದ ಚನ್ನಿ ಪಂಜಾಬ್‍ನ್ನು ಹೇಗೆ ಕಾಪಾಡಿಕೊಳ್ಳುವರು: ಅಮಿತ್ ಶಾ

    2017ರಲ್ಲಿ ಟ್ಯೂಮರ್ ಆರೋಗ್ಯ ಸಮಸ್ಯೆಗೆ ತುತ್ತಾದ ರೋಸಮೇರೆ ಕಣ್ಣಿನ ದೃಷ್ಟಿ ಕಳೆದೆಕೊಂಡರು. ಬಳಿಕ ಆಫ್ರಿಕಾ, ಜರ್ಮನಿ, ಇಸ್ರೇಲ್, ಚೀನಾ ಸೇರಿದಂತೆ ಕೆಲ ದೇಶಗಳ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಕೊನೆಗೆ ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿರುವ ಶ್ರೀಧಾರೀಯಂ ಆಯುರ್ವೇದ ಕಣ್ಣಿ ಆಸ್ಪತ್ರೆ ಕುರಿತು ಮಾಹಿತಿ ಪಡೆದು ನೇರವಾಗಿ ಕೇರಳಕ್ಕೆ ಆಗಮಿಸಿ ಚಿಕಿತ್ಸೆ ಪಡೆದಿದ್ದಾರೆ. ಪರಿಣಾಮ ರೋಸಮೇರಿ ಇದೀಗ ಬಹುತೇಕ ಕಣ್ಣಿನ ದೃಷ್ಟಿ ಪಡೆದಿದ್ದಾರೆ. ಓದಲು ಸಾಧ್ಯವಾಗುತ್ತಿದೆ ಎಂದು ರೈಲಾ ಒಡಿಂಗಾ ಹೇಳಿದ್ದಾರೆ.   

    ರೋಸಮೆರಿ ಒಡಿಂಗಾ 2019ರಿಂದ ಶ್ರೀಧಾರೀಯಂ ಆಯುರ್ವೇದಾ ಕಣ್ಣಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 2019ರಲ್ಲಿ ಸಂಪೂರ್ಣ ದೃಷ್ಟಿ ಕಳೆದುಕೊಂಡಿದ್ದ ರೋಸಮೇರಿ, ಸತತ ಚಿಕಿತ್ಸೆಯಿಂದ ಮರಳಿ ದೃಷ್ಟಿ ಪಡೆದಿದ್ದಾರೆ. ನನಗೆ ಓದಲು ಸಾಧ್ಯವಾಗುತ್ತಿದೆ. ಫೋನ್ ರಿಸೀವ್ ಮಾಡಲು ಸಾಧ್ಯವಾಗುತ್ತಿದೆ. ಇದಕ್ಕಿಂತ ಸಂತಸ ಇನ್ನೇನು ಬೇಕು. ನಾನು ಕೇರಳದ ಶ್ರೀಧಾರೀಯಂ ಆಯುರ್ವೇದ ಕಣ್ಣಿ ಆಸ್ಪತ್ರೆಗೆ ಆಭಾರಿಯಾಗಿದ್ದೇನೆ ಎಂದು ರೋಸಮೇರಿ ಹೇಳಿದ್ದಾರೆ.

  • ಆಯುರ್ವೇದ ವಿದ್ಯಾರ್ಥಿಗಳ 24 ಲಕ್ಷ ರೂ. ವಿದ್ಯಾರ್ಥಿ ವೇತನ ನಕಲಿ ಖಾತೆಗೆ ಜಮೆ

    ಆಯುರ್ವೇದ ವಿದ್ಯಾರ್ಥಿಗಳ 24 ಲಕ್ಷ ರೂ. ವಿದ್ಯಾರ್ಥಿ ವೇತನ ನಕಲಿ ಖಾತೆಗೆ ಜಮೆ

    ಹುಬ್ಬಳ್ಳಿ: ಹೆಗ್ಗೇರಿ ಆಯುರ್ವೇದ ಕಾಲೇಜಿನ ಹೆಸರಿನಲ್ಲಿ ನಕಲಿ ಬ್ಯಾಂಕ್ ಖಾತೆ ತೆರೆದ ಹಿಂದುಳಿದ ವರ್ಗ ಇಲಾಖೆಯ ಸಿಬ್ಬಂದಿಯೊಬ್ಬ ಬರೋಬ್ಬರಿ 24 ಲಕ್ಷ ರೂ. ಹಿಂದುಳಿದ ವರ್ಗದ ವಿದ್ಯಾರ್ಥಿ ವೇತನವನ್ನು ಆ ಖಾತೆಗೆ ಜಮಾ ಮಾಡಿಸಿ ವಂಚಿಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

    ಈ ಬಗ್ಗೆ ಕಾಲೇಜಿನ ಪ್ರಾಂಶುಪಾಲ ಪ್ರಶಾಂತ್ ಎ.ಎಸ್.ಅವರು ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ನಕಲಿ ಖಾತೆ ತೆರೆದು ಸಿಎಂ ವಿರುದ್ಧ ಪೋಸ್ಟ್ ಹಾಕಿದ್ದ ಮಂಡ್ಯದ ಟೆಕ್ಕಿಯ ಬಂಧನ

    ದೂರಿನಲ್ಲಿ ಏನಿದೆ?
    ಹಿಂದುಳಿದ ವರ್ಗದ ವಿದ್ಯಾರ್ಥಿ ವೇತನವನ್ನು ಕಾಲೇಜಿನ ಪ್ರಾಚಾರ್ಯರ ಖಾತೆಗೆ ಜಮೆ ಮಾಡುತ್ತಾರೆ. ಹೀಗಿರುವಾಗ ಇಲಾಖೆಯ ಸಿಬ್ಬಂದಿ ಹುಬ್ಬಳ್ಳಿ ಪ್ರವಾಸಿ ಮಂದಿರ ರಸ್ತೆಯಲ್ಲಿರುವ ಐಸಿಐಸಿಐ ಬ್ಯಾಂಕ್‍ನಲ್ಲಿ ಆಯುರ್ವೇದ ಕಾಲೇಜಿನ ಹೆಸರಿನಲ್ಲಿ ಖಾತೆ ತೆರೆದ್ದಿದ್ದಾನೆ. ಖಾತೆಗೆ 2017ರ ಏ.1ರಿಂದ 2018ರ ಮಾ. 31ರವರೆಗಿನ ಅವಧಿಯಲ್ಲಿ 24,04,090 ರೂ. ವಿದ್ಯಾರ್ಥಿ ವೇತನವನ್ನು ಪ್ರಾಚಾರ್ಯರ ಖಾತೆ ಬದಲಾಗಿ ನಕಲಿ ಖಾತೆಗೆ ಜಮಾ ಮಾಡಿಸಿಕೊಂಡು ಕಾಲೇಜು, ವಿದ್ಯಾರ್ಥಿಗಳಿಗೆ ವಂಚಿಸಿ ಸ್ವಂತಕ್ಕೆ ಬಳಸಲಾಗಿದೆ ಎಂದು ದೂರು ದಾಖಲಾಗಿದೆ.

    ಬೆಳಕಿಗೆ ಬಂದಿದ್ದು ಹೇಗೆ?
    ಕಳೆದ ಆಡಿಟ್ ವೇಳೆ ವಂಚನೆ ಆಗಿರುವುದು ಪತ್ತೆಯಾಗಿದೆ. ಹಿಂದುಳಿದ ವರ್ಗ ಇಲಾಖೆಯಿಂದ ಕಾಲೇಜಿನ ಖಾತೆಗೆ ಆಗಬೇಕಿದ್ದ ಹಣ ಎಲ್ಲಿ ಜಮಾ ಆಗಿದೆ ಎಂದು ಪತ್ತೆಗೆ ಮುಂದಾದಾಗ ವಿಷಯ ಬೆಳಕಿಗೆ ಬಂದಿದೆ. ಸುಮಾರು 100 ವಿದ್ಯಾರ್ಥಿಗಳಿಗೆ ಬರಬೇಕಾದ ವಿದ್ಯಾರ್ಥಿವೇತನ ಇದು. ಯಾವ ಸಿಬ್ಬಂದಿ ವಂಚನೆ ಎಸಗಿದ್ದಾನೆ ಎನ್ನುವುದು ತನಿಖೆಯಿಂದ ತಿಳಿದು ಬರಬೇಕಿದೆ ಎಂದು ಪ್ರಾಚಾರ್ಯ ಪ್ರಶಾಂತ್ ಎ.ಎಸ್. ತಿಳಿಸಿದ್ದಾರೆ.

  • ಆಯುರ್ವೇದದಲ್ಲಿ ಹೆಚ್ಚು ಸಂಶೋಧನೆ ನಡೆಸಿ: ಸುಧಾಕರ್

    ಆಯುರ್ವೇದದಲ್ಲಿ ಹೆಚ್ಚು ಸಂಶೋಧನೆ ನಡೆಸಿ: ಸುಧಾಕರ್

    -ಕುಲಪತಿ ನೇಮಕ ಕುರಿತು ರಾಜ್ಯಪಾಲರೊಂದಿಗೆ ಚರ್ಚೆ
    – ನಾನು ಮಂತ್ರಿಯಾಗಿರುವವರೆಗೂ ಅಪವಾದ ಹೊತ್ತುವರು ಕುಲಪತಿಯಾಗಲು ಸಾಧ್ಯವಿಲ್ಲ

    ಬೆಂಗಳೂರು: ರೋಗ ಬಾರದಂತೆ ತಡೆಯುವ ಆಯುರ್ವೇದ ವೈದ್ಯ ಪದ್ಧತಿಯಲ್ಲಿ ಹೆಚ್ಚು ಸಂಶೋಧನೆಗಳನ್ನು ನಡೆಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸಲಹೆ ನೀಡಿದರು.

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ರಜತ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಅಲೋಪತಿಯಲ್ಲಿ ಸಂಶೋಧನೆಗಳನ್ನು ಮಾಡುವಂತೆ ಆಯುರ್ವೇದದಲ್ಲೂ ಹೆಚ್ಚು ಸಂಶೋಧನೆಗಳು ನಡೆಯಬೇಕು. ಎಷ್ಟೇ ನಂಬಿಕೆ ಇದ್ದರೂ ಅದನ್ನು ಸಾಕ್ಷಿ ಸಮೇತ ನಿರೂಪಿಸಬೇಕು. ಸಂಶೋಧನೆ ಮತ್ತು ಆವಿಷ್ಕಾರವನ್ನು ಹೆಚ್ಚಾಗಿ ಮಾಡಬೇಕು. ಪ್ರತಿ ಮೆಡಿಕಲ್ ಕಾಲೇಜುಗಳಲ್ಲಿ ಕೂಡ ಸಂಶೋಧನೆಗಳನ್ನು ಹೆಚ್ಚಿಸಬೇಕಿದೆ. ಸಂಸ್ಥೆಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಸಲು ಸಂಶೋಧನೆ ಅಗತ್ಯ ಎಂದರು.

    ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯ ಕೋವಿಡ್ ಲಸಿಕೆ ತಯಾರಿಸಿದೆ. ಅದೇ ರೀತಿ, ರಾಜೀವ್ ಗಾಂಧಿ ವಿವಿ ಕೂಡ ಯಾವುದೇ ರೋಗಗಳಿಗೆ ಪರಿಹಾರ ಕಂಡು ಹಿಡಿಯುವಂತೆ ಸಂಶೋಧನೆ ನಡೆಸಬೇಕು. ಎನ್‍ಸಿಡಿ ಸಮಸ್ಯೆಯಿಂದಾಗಿ ಬಡ ರಾಷ್ಟ್ರಗಳಲ್ಲಿ ವಾರ್ಷಿಕ 28 ದಶಲಕ್ಷ ಜನರು ಮೃತರಾಗುತ್ತಿದ್ದಾರೆ. ಭಾರತದಲ್ಲಿ ಕೂಡ ಈ ಸಮಸ್ಯೆ ಹೆಚ್ಚಿದೆ. ಈ ರೋಗಗಳಿಗೆ ಆಯುರ್ವೇದ ಪದ್ಧತಿ ಹೆಚ್ಚು ಪರಿಹಾರ ನೀಡುತ್ತದೆ ಎಂದು ತಿಳಿಸಿದರು.

    ರಾಜ್ಯಪಾಲರೊಂದಿಗೆ ಚರ್ಚೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ನೇಮಕಕ್ಕೆ ಸಂಬಂಧಿಸಿದಂತೆ ಚರ್ಚಿಸಬೇಕಾಗಿತ್ತು. ಆದರೆ ಕೋವಿಡ್ ನಿಂದಾಗಿ ರಾಜ್ಯಪಾಲರು ಚರ್ಚೆ ನಡೆಸಲು ಆಗಿಲ್ಲ. ಈ ಕುರಿತು ರಾಜ್ಯಪಾಲರಿಗೆ ಪತ್ರ ಬರೆದಿದ್ದೇನೆ. ರಾಜ್ಯಪಾಲರ ಭೇಟಿಗೆ ಸಮಯ ಕೇಳಿ ನಂತರ ಚರ್ಚೆ ಮಾಡುತ್ತೇನೆ. ಮುಖ್ಯಮಂತ್ರಿಗಳೊಂದಿಗೆ ಈ ಬಗ್ಗೆ ಚರ್ಚಿಸಲಾಗಿದೆ. ಅವರು ಕೆಲವು ವಿಷಯಗಳನ್ನು ಹೇಳಿದ್ದಾರೆ. ಆ ವಿಷಯಗಳನ್ನು ರಾಜ್ಯಪಾಲರ ಗಮನಕ್ಕೆ ತರಲಾಗುವುದು ಎಂದು ಹೇಳಿದರು.

    ಶುದ್ಧ ಚಾರಿತ್ರ್ಯವಿರುವವರು ಕುಲಪತಿಯಾಗಲು ಸಾಧ್ಯ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಸ್ಥಾನ ತುಂಬುವ ಬಗ್ಗೆ ಚರ್ಚಿಸಲಾಗುವುದು. ಈ ಸ್ಥಾನಕ್ಕೆ ಯಾವ ರೀತಿಯ ಸಂಸ್ಕಾರ, ಯಾವ ರೀತಿಯ ಶೈಕ್ಷಣಿಕ ಅರ್ಹತೆ ಇರುವ ಉತ್ತಮರನ್ನು ತರಬೇಕೆಂಬ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಸ್ಪಷ್ಟತೆ ಇದೆ. ಆ ನಿಟ್ಟಿನಲ್ಲಿ ಸ್ಥಾನ ತುಂಬಬೇಕೆಂಬುದನ್ನು ರಾಜ್ಯಪಾಲರ ಗಮನಕ್ಕೆ ತರಲಾಗುವುದು. ಅನುಮಾನಕ್ಕೂ ಅವಕಾಶವಿಲ್ಲದ ಶುದ್ಧ ಚಾರಿತ್ರ್ಯವಿರುವ ವ್ಯಕ್ತಿ ಮಾತ್ರ ಕುಲಪತಿಯಾಗಲು ಯೋಗ್ಯವೇ ಹೊರತು ಯಾವುದೇ ಅಪವಾದ ಹೊತ್ತುಕೊಂಡವರು ಕುಲಪತಿ ಕುರ್ಚಿಯಲ್ಲಿ ಕೂರಲು ಸಾಧ್ಯವಿಲ್ಲ. ಕನಿಷ್ಠಪಕ್ಷ ನಾನು ಸಚಿವನಾಗಿರುವವರೆಗೂ ಅದು ಸಾಧ್ಯವಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

    ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣ, ಬಸ್ ನಿಲ್ದಾಣ ಸೇರಿದಂತೆ ವಿವಿಧೆಡೆ ರಾಂಡಮ್ ಪರೀಕ್ಷೆ ಮಾಡಬೇಕೆಂದು ಸೂಚಿಸಲಾಗಿದೆ. ಅನ್ ಲಾಕ್ ಹಂತದಲ್ಲೇ ಬಹಳಷ್ಟು ಜನರು ಹೊರಗೆ ಓಡಾಡುತ್ತಿದ್ದಾರೆ. ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು. ಮಾಲ್, ಥಿಯೇಟರ್, ಹೋಟೆಲ್ ಎಲ್ಲವನ್ನೂ ತೆರೆಯಲು ಅವಕಾಶ ನೀಡಿಲ್ಲ. ಆದರೂ ಕೈಗಾರಿಕೆಗೆ ಅವಕಾಶ ನೀಡಿರುವುದರಿಂದ ಜನರು ಹೊರಗೆ ಓಡಾಡುತ್ತಿರಬಹುದು. ಇದಕ್ಕೆ ಪೂರಕವಾಗಿ ಪರೀಕ್ಷೆ ಸಂಖ್ಯೆಯನ್ನೂ ಹೆಚ್ಚಿಸಲಾಗುವುದು ಎಂದರು.

    ರಾಜ್ಯದಲ್ಲಿ ಕೋವಿಡ್ ನಿಂದ 25 ಲಕ್ಷಕ್ಕೂ ಹೆಚ್ಚು ಜನರು ಗುಣಮುಖರಾಗಿದ್ದಾರೆ. 1.70 ಕೋಟಿ ಕೋವಿಡ್ ಲಸಿಕೆ ನೀಡಲಾಗಿದೆ. ಡಿಸೆಂಬರ್ ಅಂತ್ಯದ ವೇಳೆಗೆ ಎಲ್ಲರಿಗೂ ಲಸಿಕೆ ನೀಡಲಾಗಿರುತ್ತದೆ. ಕೋವಿಡ್ ಮೂರನೇ ಅಲೆಗೆ ಸಿದ್ಧತೆಯಾಗಿ ಜಿಲ್ಲಾಸ್ಪತ್ರೆಗಳಲ್ಲಿ ಮಕ್ಕಳ ವಿಭಾಗ ಬಲಪಡಿಸಲಾಗುತ್ತಿದೆ. 1,763 ವೈದ್ಯರು, ವೈದ್ಯಾಧಿಕಾರಿಗಳನ್ನು ಐತಿಹಾಸಿಕದಂತೆ ಅತಿ ಕಡಿಮೆ ಅವಧಿಯಲ್ಲಿ ನೇಮಿಸಲಾಗಿದೆ. ವೈದ್ಯ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾದರೂ ಗ್ರಾಮೀಣ ಪ್ರದೇಶಗಳಲ್ಲಿ ವೈದ್ಯರ ಲಭ್ಯತೆ ಕಡಿಮೆ. ವೈದ್ಯರು ನಗರಗಳಲ್ಲೇ ಆಯ್ಕೆ ಮಾಡಿಕೊಳ್ಳುತ್ತಾರೆ. ಹೆಚ್ಚಿನ ವೈದ್ಯರು ಹಳ್ಳಿಗಳಲ್ಲಿ ಕೆಲಸ ಮಾಡುವ ಛಲ ಹೊಂದಬೇಕು ಎಂದು ತಿಳಿಸಿದರು.  ಇದನ್ನೂ ಓದಿ: ನೋಡ ನೋಡುತ್ತಿದ್ದಂತೆ ಬಾವಿ ಪಾಲಾದ ಕಾರು

  • ಬಾಬಾ ರಾಮ್‍ದೇವ್ ಬಹಿರಂಗ ಚರ್ಚೆಗೆ ಬರಲಿ- ಐಎಂಎ ಸವಾಲು

    ಬಾಬಾ ರಾಮ್‍ದೇವ್ ಬಹಿರಂಗ ಚರ್ಚೆಗೆ ಬರಲಿ- ಐಎಂಎ ಸವಾಲು

    – ದಿನ ಅವರು ನಿಗದಿಪಡಿಸಲಿ, ಸ್ಥಳ ನಾವು ಹುಡುಕುತ್ತೇವೆ

    ಡೆಹ್ರಾಡೂನ್: ಯೋಗ ಗುರು ಬಾಬಾ ರಾಮ್‍ದೇವ್ ಬಹಿರಂಗ ಚರ್ಚೆಗೆ ಆಗಮಿಸಲಿ ಎಂದು ಭಾರತೀಯ ವೈದ್ಯಕೀಯ ಮಂಡಳಿ (ಐಎಂಎ)ಯ ಉತ್ತರಾಖಂಡ್ ವಿಭಾಗ ಆಹ್ವಾನಿಸಿದೆ.

    ಅಲೋಪತಿ ಹಾಗೂ ವೈಜ್ಞಾನಿಕ ವೈದ್ಯಕೀಯ ಪದ್ಧತಿ ವಿರುದ್ಧ ಬಾಬಾ ರಾಮ್‍ದೇವ್ ಹೇಳಿಕೆ ನೀಡಿದ್ದರು. ಬಳಿಕ ಅವರ ಮಾತನ್ನು ಹಿಂಪಡೆದಿದ್ದರು. ಆದರೆ ಸುಮ್ಮನಾಗದ ಐಎಂಎ, ಬಾಬಾ ರಾಮ್‍ದೇವ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ಲಿಖಿತ ರೂಪದಲ್ಲಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿತ್ತು. ಇದೀಗ ಬಹಿರಂಗ ಚರ್ಚೆಗೆ ಆಗಮಿಸುವಂತೆ ರಾಮ್‍ದೇವ್ ಅವರನ್ನು ಆಹ್ವಾನಿಸಿದೆ. ಇದನ್ನೂ ಓದಿ: ಬಾಬಾ ರಾಮ್‍ದೇವ್ ಅವರಿಗೆ 1000 ಕೋಟಿ ರೂ. ಮಾನನಷ್ಟ ನೋಟಿಸ್ ನೀಡಿದ ಐಎಂಎ

    ಬಾಬಾ ರಾಮ್‍ದೇವ್ ಅವರಿಗೆ ಬಹಿರಂಗ ಪತ್ರ ಬರೆದಿರುವ ಉತ್ತರಾಖಂಡ್‍ನ ವಿಭಾಗದ ಐಎಂಎ ಅಧ್ಯಕ್ಷ ಡಾ.ಅಜಯ್ ಖನ್ನಾ, ಯೋಗಗುರುವಿನ ಹೇಳಿಕೆ ಉದ್ಧಟತನ, ಬೇಜವಾಬ್ದಾರಿ ಹಾಗೂ ಸ್ವಾರ್ಥದಿಂದ ಕೂಡಿದೆ. ಹೀಗಾಗಿ ಮಾಧ್ಯಮ ಮಿತ್ರರ ಸಮ್ಮುಖದಲ್ಲಿ ಐಎಂಎ ಹಾಗೂ ಯೋಗಪೀಠದ ನಡುವೆ ಬಹಿರಂಗ ಚರ್ಚೆ ನಡೆಯಲಿ ಎಂದು ಪತ್ರದಲ್ಲಿ ತಿಳಿಸಲಾಗಿದೆ.

    ಆರೋಗ್ಯಕರ ಚರ್ಚೆಯ ದಿನಾಂಕ ಹಾಗೂ ಸಮಯವನ್ನು ನೀವೇ ನಿರ್ಧರಿಸಿ, ಚರ್ಚೆಯ ಸ್ಥಳವನ್ನು ನಾವು ನಿರ್ಧರಿಸುತ್ತೇವೆ. ಬಾಬಾ ರಾಮ್‍ದೇವ್ ಅವರ ಹೇಳಿಕೆಯಿಂದಾಗಿ ಅಲೋಪತಿ ಹಾಗೂ ಆಯುರ್ವೇದದ ನಡುವಿನ ಸಾಮರಸ್ಯಕ್ಕೆ ಧಕ್ಕೆಯಾಗಿದೆ. ಇದನ್ನು ಮರುಸ್ಥಾಪಿಸುವ ಉದ್ದೇಶದಿಂದ ಬಹಿರಂಗ ಚರ್ಚೆ ನಡೆಯಬೇಕಿದೆ ಎಂದು ಐಎಂಎ ಹೇಳಿದೆ. ಅಲ್ಲದೆ ಪತಂಜಲಿ ಔಷಧಿಯನ್ನು ಆಸ್ಪತ್ರೆಗಳಲ್ಲಿ ಬಳಸಿದ್ದೇವೆ ಎಂಬುದಕ್ಕೆ ಸಂಬಂಧಿಸಿದಂತೆ ವಿವರಣೆ ನೀಡುವಂತೆ ಸಹ ಮತ್ತೊಂದು ಪತ್ರದಲ್ಲಿ ಕೋರಲಾಗಿದೆ.

  • ಯಶವಂತಪುರ, ಆರ್‍ಆರ್ ವಲಯದ ಕೋವಿಡ್ ಕೇರ್ ಸೆಂಟರ್‌ಗೆ  ಡಿವಿಎಸ್, ಎಸ್‌ಟಿಎಸ್‌ ಭೇಟಿ

    ಯಶವಂತಪುರ, ಆರ್‍ಆರ್ ವಲಯದ ಕೋವಿಡ್ ಕೇರ್ ಸೆಂಟರ್‌ಗೆ ಡಿವಿಎಸ್, ಎಸ್‌ಟಿಎಸ್‌ ಭೇಟಿ

    – ಕೋವಿಡ್ ಕೇರ್ ಸೆಂಟರ್ ಗಳ ಮೂಲ ಸೌಕರ್ಯ, ಸ್ಥಿತಿಗತಿ ವಿಕ್ಷಣೆ
    – ಸರ್ಕಾರದಿಂದ ಕೈಗೊಳ್ಳಲಾದ ಕ್ರಮಗಳ ವಿವರಿಸಿದ ಸಚಿವ ಸೋಮಶೇಖರ್
    – ಜನಸೇವಾ ವಿದ್ಯಾಕೇಂದ್ರದ ನೂತನ ಕೇರ್ ಸೆಂಟರ್ಗೆ 16 ಬೆಡ್‍ಗಳಿಗೆ ಆಕ್ಸಿಜನ್ ಕಾನ್ಸಂಟ್ರೇಟರ್ ವ್ಯವಸ್ಥೆ ಮಾಡಿಸಿದ ಎಸ್‍ಟಿಎಸ್
    – ಶಾಶ್ವತ ಸೌಕರ್ಯಗಳ ಬಗ್ಗೆ ಚಿಂತನೆ

    ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರ ಹಾಗೂ ರಾಜರಾಜೇಶ್ವರಿ ನಗರ ವಲಯದ ಕೋವಿಡ್ ಕೇರ್ ಸೆಂಟರ್‌ಗಳ   ವ್ಯವಸ್ಥೆಗಳ ಬಗ್ಗೆ ಶನಿವಾರ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರಗಳ ಖಾತೆ ಸಚಿವರಾದ ಡಿ.ವಿ.ಸದಾನಂದ ಗೌಡ ಹಾಗೂ ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರು, ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಕೇಂದ್ರೀಯ ಆಯುರ್ವೇದ ಸಂಶೋಧನಾ ಸಂಸ್ಥೆಗೆ ಭೇಟಿ ನೀಡಿದ ಸಚಿವರುಗಳು, ಅಲ್ಲಿ ನೂತನವಾಗಿ ಪ್ರಾರಂಭಿಸಲು ಉದ್ದೇಶಿಸಿರುವ 100 ಆಕ್ಸಿಜನ್ ಬೆಡ್‍ಗಳ ಪರಿಶೀಲನೆ ನಡೆಸಿದರು. ಜೊತೆಗೆ ಮೂಲ ಸೌಕರ್ಯ ವ್ಯವಸ್ಥೆಗಳನ್ನು ಹೇಗೆ ಮಾಡಿಕೊಳ್ಳಲಾಗಿದೆ. ಸರ್ಕಾರದಿಂದ ಯಾವ ಯಾವ ವ್ಯವಸ್ಥೆಗಳನ್ನು ಮಾಡಲಾಗಿದೆ. ಇನ್ನೂ ಏನೇನು ಬೇಡಿಕೆಗಳು ಇವೆ ಎಂಬೆಲ್ಲ ಮಾಹಿತಿಗಳನ್ನು ಸಚಿವರಾದ ಸೋಮಶೇಖರ್ ಅವರು ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ ಅವರಿಗೆ ವಿವರಿಸಿದರು.

    ಮೂಲ ಸೌಲಭ್ಯ ಬಗ್ಗೆ ಮಾಹಿತಿ :
    ಜ್ಞಾನಭಾರತಿ ಕೋವಿಡ್ ಕೇರ್ ಸೆಂಟರ್‍ಗೆ ಭೇಟಿ ನೀಡಿದ ಕೇಂದ್ರ ಸಚಿವರಾದ ಸದಾನಂದಗೌಡ ಅವರು ಹಾಗೂ ಸೋಮಶೇಖರ್ ಅವರು, ಅಲ್ಲಿನ ಮೂಲ ಸೌಲಭ್ಯಗಳ ಬಗ್ಗೆ ಚರ್ಚೆ ನಡೆಸಿದರು. ಜೊತೆಗೆ ಆಕ್ಸಿಜನ್ ಬೆಡ್‍ಗಳ ವ್ಯವಸ್ಥೆ, ಆಕ್ಸಿಜನ್ ಸಿಲಿಂಡರ್‍ಗಳ ಪೂರೈಕೆ, ರೋಗಿಗಳಿಗೆ ಲಭ್ಯವಾಗುತ್ತಿರುವ ಚಿಕಿತ್ಸೆ, ಔಷಧಗಳು, ವೈದ್ಯಕೀಯ ಕಿಟ್‍ಗಳು, ನೀರು-ಊಟದ ವ್ಯವಸ್ಥೆ ಸೇರಿದಂತೆ ಇನ್ನಿತರ ಸೌಕರ್ಯಗಳನ್ನು ಯಾವ ರೀತಿಯಾಗಿ ಕಲ್ಪಿಸಲಾಗಿದೆ. ತುರ್ತು ಅಗತ್ಯವಿರುವ ರೋಗಿಗಳಿಗೆ ಚಿಕಿತ್ಸೆ ನೀಡಲು ಯಾವ ರೀತಿ ಆಸ್ಪತ್ರೆ ಸಜ್ಜಾಗಿದೆ ಎಂಬ ಬಗ್ಗೆ ಸಚಿವರಾದ ಸೋಮಶೇಖರ್ ಅವರು ಕೇಂದ್ರ ಸಚಿವರಿಗೆ ವಿವರಣೆ ನೀಡಿದರು. ಅಲ್ಲದೆ, ಅಚ್ಚುಕಟ್ಟಿನ ವ್ಯವಸ್ಥೆ ಬಗ್ಗೆ ಈ ವೇಳೆ ಕೇಂದ್ರ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

    ಆಕ್ಸಿಜನ್ ಕಾನ್ಸಂಟ್ರೇಟರ್ ಕೊಡಿಸಿದ ಎಸ್ ಟಿ ಎಸ್:
    ಜನಸೇವಾ ವಿದ್ಯಾ ಕೇಂದ್ರದಲ್ಲಿ ನೂತನವಾಗಿ ಪ್ರಾರಂಭವಾಗಿರುವ 100 ಬೆಡ್‍ಗಳ ಕೋವಿಡ್ ಕೇರ್ ಸೆಂಟರ್‍ಗೆ ಭೇಟಿ ನೀಡಿದ ಕೇಂದ್ರ ಸಚಿವರಾದ ಸದಾನಂದಗೌಡ ಅವರು ಹಾಗೂ ಸಚಿವರಾದ ಸೋಮಶೇಖರ್ ಅವರು, ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದರು. ಇದೇ ವೇಳೆ 16 ಬೆಡ್‍ಗಳಲ್ಲಿ ಆಕ್ಸಿಜನ್ ಕಾನ್ಸಂಟ್ರೇಟರ್‌ಗಳ ವ್ಯವಸ್ಥೆಗೆ ಬಿಬಿಎಂಪಿ ಮೂಲಕ ಸಚಿವರಾದ ಸೋಮಶೇಖರ್ ಅವರು ವ್ಯವಸ್ಥೆ ಮಾಡಿದ್ದರ ಬಗ್ಗೆ ವೈದ್ಯಾಧಿಕಾರಿಗಳು ಕೇಂದ್ರ ಸಚಿವರ ಗಮನಕ್ಕೆ ತಂದರು.

    ಯಶವಂತಪುರ ವಿಧಾನಸಭಾ ಕ್ಷೇತ್ರ ಹಾಗೂ ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯಲ್ಲಿ ಹಾಲಿ ಎಲ್ಲ ಕಡೆಗಳಿಂದ ಸೌಲಭ್ಯಗಳನ್ನು ಒದಗಿಸಿಕೊಂಡು ಕೋವಿಡ್ ಕೇರ್ ಸೆಂಟರ್ ಗಳನ್ನು ತೆರೆಯಲಾಗಿದೆ. ಕೆಲವು ಆಸ್ಪತ್ರೆಗಳಲ್ಲಿ ತಾತ್ಕಾಲಿಕ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಆದರೆ, ಆಕ್ಸಿಜನ್ ಬೆಡ್ ಗಳು, ಆಕ್ಸಿಜನ್ ಕಾನ್ಸಂಟ್ರೇಟರ್‌ಗಳು, ಮೆಡಿಕಲ್ ಕಿಟ್ ಗಳು ಸೇರಿದಂತೆ ಆಸ್ಪತ್ರೆಗಳಲ್ಲಿ ಕೋವಿಡ್‍ಗೆ ಸಂಬಂಧಪಟ್ಟಂತೆ ಮೂಲಸೌಕರ್ಯವನ್ನು ಶಾಶ್ವತವಾಗಿ ಒದಗಿಸುವ ನಿಟ್ಟಿನಲ್ಲಿ ಚಿಂತನೆ ನಡೆಸುತ್ತಿದ್ದೇನೆ. ಈ ಬಗ್ಗೆ ಸರ್ಕಾರದೊಂದಿಗೆ ಮಾತನಾಡಿ ಮುಂಬರುವ ದಿನಗಳಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವರಾದ ಸೋಮಶೇಖರ್ ಅವರು ತಿಳಿಸಿದರು.

    ಈ ಸಂದರ್ಭದಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರ ಹಾಗೂ ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯ ವೈದ್ಯಾಧಿಕಾರಿಗಳು, ಬಿಬಿಎಂಪಿ ಅಧಿಕಾರಿಗಳು, ಆರೋಗ್ಯಾಧಿಕಾರಿಗಳು ಸೇರಿದಂತೆ ವೈದ್ಯರು ಹಾಗೂ ಸಿಬ್ಬಂದಿ ಹಾಜರಿದ್ದರು.

  • ರೋಗ ನಿರೋಧಕ ಶಕ್ತಿ ವರ್ಧನೆಗೆ ಆಯುರ್ವೇದ ಚಿಕಿತ್ಸೆ – ನಾಳೆ ಅಂತಿಮ ನಿರ್ಧಾರ ಸಾಧ್ಯತೆ

    ರೋಗ ನಿರೋಧಕ ಶಕ್ತಿ ವರ್ಧನೆಗೆ ಆಯುರ್ವೇದ ಚಿಕಿತ್ಸೆ – ನಾಳೆ ಅಂತಿಮ ನಿರ್ಧಾರ ಸಾಧ್ಯತೆ

    ಬೆಂಗಳೂರು: ಆಯುರ್ವೇದ ಚಿಕಿತ್ಸಾ ಕ್ರಮವನ್ನು ರೋಗ ನಿರೋಧಕ ಶಕ್ತಿ ವರ್ಧನೆಗೆ ಬಳಕೆ ಮಾಡುವ ಸಂಬಂಧ ರಾಜ್ಯ ಸರ್ಕಾರದ ಅಂತಿಮ ನಿರ್ಧಾರ ಸೋಮವಾರ ಪ್ರಕಟವಾಗಲಿದೆ.

    ಸಂಜೆ 4 ಗಂಟೆಗೆ ವಿಧಾನ ಸಭೆಯಲ್ಲಿ ಟಾಸ್ಕ್‌ ಫೋರ್ಸ್‌ ಸಭೆ ನಡೆಯಲಿದೆ. ಈ ವೇಳೆ ಕೊರೊನಾ ಸೋಂಕಿತರಿಗೆ ಆಯುರ್ವೇದ ಚಿಕಿತ್ಸಾ ಕ್ರಮವನ್ನು ರೋಗ ನಿರೋಧಕ ಶಕ್ತಿ ವರ್ಧನೆಗೆ ಬಳಕೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ. ಲಾಕ್‌ಡೌನ್‌ ಸಂದರ್ಭದಲ್ಲಿ ಕೋವಿಡ್ ನಿಯಂತ್ರಣಕ್ಕೆ ಮಾಡಿಕೊಂಡ ಸಿದ್ಧತಾ ಕ್ರಮ, ಲಾಕ್‌ಡೌನ್‌ ಸಾಧಕ ಬಾಧಕದ ಬಗ್ಗೆ ಚರ್ಚೆ ನಡೆಯಲಿದೆ.

    ಹೋಂ ಐಸೋಲೇಷನ್ ನಿಂದ ಕೋವಿಡ್‌ ಕೇರ್‌ ಸೆಂಟರ್‌ಗಳಿಗೆ ದಾಖಲಿಸುವ ವಿಚಾರದಲ್ಲಿ ಈಗ ಗೊಂದಲ ಸೃಷ್ಟಿಯಾಗಿದೆ. ಈ ವಿಚಾರದ ಬಗ್ಗೆಯೂ ಸ್ಪಷ್ಟತೆ ಸಿಕ್ಕಿಲ್ಲ. ಈ ಎಲ್ಲ ವಿಚಾರದ ಬಗ್ಗೆ ಚರ್ಚೆ ನಡೆದು ಸರ್ಕಾರದ ನಿರ್ಧಾರ ಪ್ರಕಟವಾಗಲಿದೆ.

  • ಫ್ಯಾಕ್ಟ್ ಚೆಕ್: ಬ್ರಿಟನ್ ರಾಜಕುಮಾರನಿಗೆ ಬೆಂಗಳೂರು ವೈದ್ಯ ಚಿಕಿತ್ಸೆ

    ಫ್ಯಾಕ್ಟ್ ಚೆಕ್: ಬ್ರಿಟನ್ ರಾಜಕುಮಾರನಿಗೆ ಬೆಂಗಳೂರು ವೈದ್ಯ ಚಿಕಿತ್ಸೆ

    ನವದೆಹಲಿ: ಬೆಂಗಳೂರಿನ ಆಯುರ್ವೇದಿಕ್ ವೈದ್ಯ ಬ್ರಿಟನ್ ರಾಜಕುಮಾರನಿಗೆ ಆಯುರ್ವೆದಿಕ್ ಔಷಧಿ ಮೂಲಕ ಕೊರೊನಾದಿಂದ ಪಾರು ಮಾಡಿದ್ದಾರೆ ಎಂಬ ಕೇಂದ್ರ ಆಯುಷ್ ಖಾತೆ ರಾಜ್ಯ ಸಚಿವ ಶ್ರೀಪಾದ್ ನಾಯ್ಕ್ ಅವರ ಹೇಳಿಕೆ ಸುಳ್ಳು ಎಂಬುದು ಇದೀಗ ಬಹಿರಂಗವಾಗಿದೆ.

    ಈ ಕುರಿತು ಲಂಡನ್ ನಲ್ಲಿರುವ ಬ್ರಿಟನ್ ರಾಜಕುಮಾರರ ವಕ್ತಾರರು ಸ್ಪಷ್ಟಪಡಿಸಿದ್ದು, ಆಯುರ್ವೇದಿಕ್ ಔಷಧಿ ಮೂಲಕ ಬ್ರಿಟನ್ ರಾಜ ಗುಣಮುಖರಾಗಿದ್ದಾರೆ ಎಂಬುದನ್ನು ಅಲ್ಲಗಳೆದಿದ್ದಾರೆ. ಬ್ರಿಟಿನ್ ರಾಜಕುಮಾರ ಪ್ರಿನ್ಸ್ ಚಾರ್ಲ್ಸ್‌ ಅವರಿಗೆ ಕೊರೊನಾ ಇರುವುದು ಕಳೆದ ತಿಂಗಳು ದೃಢಪಟ್ಟಿತ್ತು. ಅಲ್ಲದೆ ಸಾರ್ಸ್-ಕೋವಿ-2 ವೈರಸ್ ನಿಂದ ಚೇತರಿಸಿಕೊಂಡಿದ್ದಾರೆ. ನಂತರ ನೆಗಿಟಿವ್ ವರದಿ ಬಂದಿದೆ.

    ಇದೆಲ್ಲದರ ಮಧ್ಯೆಯೇ ಕೇಂದ್ರ ಆಯುಷ್ ಖಾತೆ ರಾಜ್ಯ ಸಚಿವ ಶ್ರೀಪಾದ್ ನಾಯ್ಕ್ ಅವರು ಗುರುವಾರ ಗೋವಾದಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಕುರಿತು ಮಾಹಿತಿ ನೀಡಿದ್ದರು. ಆಯುರ್ವೇದಿಕ್ ವೈದ್ಯ ಐಸಾಕ್ ಮಥಾಯ್ ಅವರಿಂದ ನನಗೆ ಕರೆ ಬಂತು. ಇವರು ಬೆಂಗಳೂರಿನಲ್ಲಿ ‘ಸೌಖ್ಯ’ ಆಯುರ್ವೇದ ರೆಸಾರ್ಟ್ ನಡೆಸುತ್ತಿದ್ದಾರೆ. ಪ್ರಿನ್ಸ್ ಚಾರ್ಲ್ಸ್‌ ಅವರಿಗೆ ನೀಡಿದ ಆಯುರ್ವೇದ ಹಾಗೂ ಹೋಮಿಯೋಪಥಿ ಚಿಕಿತ್ಸೆ ಯಶಸ್ವಿಯಾಗಿದೆ ಎಂದು ನನಗೆ ತಿಳಿಸಿದರು ಎಂದು ನಾಯ್ಕ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು.

    ಬೆಂಗಳೂರಿನ ಆಯುರ್ವೇದಿಕ್ ವೈದ್ಯ ಐಸಾಕ್ ಮಿಥಾಯ್ ಸಹ ಈ ಕುರಿತು ಮಾಹಿತಿ ನೀಡಿದ್ದು, ಬ್ರಿಟನ್ ರಾಜ ಹಾಗೂ ಅವರ ಪತ್ನಿ ನನ್ನ ಪೇಷೆಂಟ್. ನಮ್ಮ ಆಯುರ್ವೇದ ರೆಸಾರ್ಟ್‍ನ ವೆಬ್‍ಸೈಟ್‍ಗೆ ಪ್ರಿನ್ಸ್ ಚಾರ್ಲ್ಸ್‌ ಅವರು ವಿಡಿಯೋ ಸಂದೇಶ ಕಳುಹಿಸಿದ್ದರು. ಇದು ಸಹ ನಮ್ಮ ವೆಬ್‍ಸೈಟ್ ಮುಖಪುಟದಲ್ಲಿದೆ ಎಂದಿದ್ದಾರೆ. ಆದರೆ ರೋಗಿಯ ಗೌಪ್ಯತೆಯನ್ನು ಉಲ್ಲೇಖಿಸಿ, ಚಿಕಿತ್ಸೆ ನೀಡಿರುವುದರ ಕುರಿತು ಅವರು ದೃಢಪಡಿಸಿಲ್ಲ.

    ಪ್ರಿನ್ಸ್ ಚಾರ್ಲ್ಸ್‌ ಅವರು ನನ್ನ ರೋಗಿಯಾಗಿದ್ದರಿಂದ ಯಾವುದೇ ಸಾರ್ವಜನಿಕ ವೇದಿಕೆಯಲ್ಲಿ ಅವರ ಬಗ್ಗೆ ನಾನು ಮಾತನಾಡಲು ಸಾಧ್ಯವಾಗುವುದಿಲ್ಲ. ಕೆಲವು ತಿಂಗಳ ಹಿಂದೆ ಅವರು ಇಲ್ಲಿಯೇ ಇದ್ದರು. ಕಳೆದ ತಿಂಗಳಲ್ಲಿ ನಾನು ಲಂಡನ್‍ನಲ್ಲಿ ಅವರನ್ನು ಭೇಟಿಯಾಗಿದ್ದೆ. ಅವರಿಗೆ ಏನು ಔಷಧಿ ಸಲಹೆ ನೀಡಿದೆ ಎಂಬುದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದಿದ್ದಾರೆ.

    ಐಸಾಕ್ ಮಥಾಯ್ ಅವರು ಜ್ವರದ ರೀತಿಯ ರೋಗ ಲಕ್ಷಣಗಳನ್ನು ಹೊಂದಿರುವ ಯಾವುದೇ ವೈರಲ್ ವಿರುದ್ಧ ಹೋರಾಡುವ ಔಷಧಿಯ ಕುರಿತು ಸಲಹೆ ನೀಡಿದ್ದಾರೆ. ಆದರೆ ಈ ವರೆಗೆ ಕೋವಿಡ್-19(ಕೊರೊನಾ ವೈರಸ್) ರೋಗಿಗೆ ಚಿಕಿತ್ಸೆ ನೀಡಿಲ್ಲ.

    ಪ್ರಿನ್ಸ್ ಚಾರ್ಲ್ಸ್‌ ಅವರು ಕೊರೊನಾ ವೈರಸ್ ವಿರುದ್ಧ ಹೋರಾಡಲು ಬೆಂಗಳೂರಿನ ಆಯುರ್ವೇದ ವೈದ್ಯರು ಸಲಹೆ ನೀಡಿದ್ದಾರೆಯೇ ಎಂದು ಲಂಡನ್‍ನ ಪ್ರಿನ್ಸ್ ಆಫ್ ವೇಲ್ಸ್ ನ ವಕ್ತಾರರನ್ನು ಪ್ರಶ್ನಿಸಲಾಗಿದ್ದು, ಈ ವೇಳೆ ಇದು ಸುಳ್ಳು ಮಾಹಿತಿ ಎಂದು ಬಹಿರಂಗವಾಗಿದೆ. ಈ ಕುರಿತು ವಕ್ತಾರರು ಸ್ಪಷ್ಟಪಡಿಸಿದ್ದು, ಇದು ತಪ್ಪು ಮಾಹಿತಿ, ಲಂಡನ್‍ನ ನ್ಯಾಷನಲ್ ಹೆಲ್ತ್ ಸರ್ವಿಸ್(ಎನ್‍ಎಚ್‍ಎಸ್)ನ ವೈದ್ಯಕೀಯ ಸಲಹೆಯನ್ನು ಪಡೆದಿದ್ದಾರೆಯೇ ಹೊರತು ಇನ್ನಾವುದೇ ಚಿಕಿತ್ಸೆಯನ್ನು ಪಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಬೆಂಗಳೂರಿನ ವೈದ್ಯರು ಆಯುರ್ವೇದಿಕ್ ಚಿಕಿತ್ಸೆ ಮೂಲಕ ಪ್ರಿನ್ಸ್ ಚಾರ್ಲ್ಸ್‌ ಅವರನ್ನು ಗುಣಪಡಿಸಿದ್ದಾರೆ ಎಂಬ ಸುದ್ದಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಈ ಕುರಿತು ಬೆಳಗ್ಗೆಯಿಂದಲೂ ಚರ್ಚೆ ನಡೆಯುತ್ತಿತ್ತು. ಇದೀಗ ಸ್ವತಃ ಪ್ರಿನ್ಸ್ ಚಾಲ್ಸ್ ಅವರ ಲಂಡನ್ ವಕ್ತಾರರು ಈ ಕುರಿತು ಸ್ಪಷ್ಟಪಡಿಸಿದ್ದಾರೆ.