Tag: ಆಯುರ್ವೇದ ಕಿಟ್

  • ಶಿವಮೊಗ್ಗದಲ್ಲಿ ಆಯುಷ್ ಕಿಟ್ ವಿತರಣೆಗೆ ಸಚಿವ ಈಶ್ವರಪ್ಪ ಚಾಲನೆ

    ಶಿವಮೊಗ್ಗದಲ್ಲಿ ಆಯುಷ್ ಕಿಟ್ ವಿತರಣೆಗೆ ಸಚಿವ ಈಶ್ವರಪ್ಪ ಚಾಲನೆ

    – ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಕಿಟ್ ಸಹಕಾರಿ

    ಶಿವಮೊಗ್ಗ: ಕೊರೊನಾ ಸೋಂಕು ತಡೆಗೆ ರೋಗ ನಿರೋಧಕ ಶಕ್ತಿ ವೃದ್ಧಿಸುವ ಆಯುಷ್ ಕಿಟ್ ವಿತರಣೆಗೆ ಗ್ರಾಮೀಣಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಚಾಲನೆ ನೀಡಿದರು.

    ನಗರದ ಕೋಟೆ ಆಂಜನೇಯಸ್ವಾಮಿ ದೇವಾಲಯಕ್ಕೆ ಆಗಮಿಸಿದ ಸಚಿವ ಕೆ.ಎಸ್.ಈಶ್ವರಪ್ಪ ಶ್ರೀಸೀತಾರಾಮ ದೇವರಿಗೆ ಪೂಜೆ ಸಲ್ಲಿಸಿ, ನಂತರ ಕಿಟ್ ವಿತರಣೆಗೆ ಚಾಲನೆ ನೀಡಿದರು. ಇದೇ ವೇಳೆ ದೇವಸ್ಥಾನದ ಪ್ರಧಾನ ಅರ್ಚಕ ರಾಮ್ ಚರಣ್ ಅವರಿಗೆ ಆಯುಷ್ ಕಿಟ್ ವಿತರಿಸಿದರು. ನಂತರ ಹಿರಿಯರಾದ ನಾಗಭೂಷಣ ಭಟ್ಟರಿಗೆ ಮೊಬೈಲ್ ನಲ್ಲಿದ್ದ ಆಧಾರ್ ಕಾರ್ಡ್ ಪರಿಶೀಲಿಸಿ ಕಿಟ್ ವಿತರಣೆ ಮಾಡಿದರು.

    ದೇವಸ್ಥಾನದ ಎದುರಿನ ಕಾಂಡಿಮೆಂಟ್ಸ್ ಗೆ ತೆರಳಿ ಅಲ್ಲಿನ ಎಲ್ಲ ನಿವಾಸಿಗಳ ಆಧಾರ್ ಕಾರ್ಡ್ ಪರಿಶೀಲಿಸಿ ಕಿಟ್ ನೀಡಲಾಯಿತು. ನಂತರ ಪುತ್ರ ಜಿ.ಪಂ.ಸದಸ್ಯ ಕಾಂತೇಶ್, ಪಾಲಿಕೆ ಆಡಳಿ ಪಕ್ಷದ ನಾಯಕ ಚನ್ನಬಸಪ್ಪ ಆಯುರ್ವೇದಿಕ್ ಕಿಟ್ ಹಂಚಿಕೆಯನ್ನು ಮುಂದುವರೆಸಿದರು. ಕಾರ್ಯಕ್ರಮದಲ್ಲಿ ಆರ್ಯ ವೈಶ್ಯ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಿ.ಎಸ್.ಅರುಣ್, ಪಾಲಕೆ ಮೇಯರ್ ಸುವರ್ಣ ಶಂಕರ್, ಉಪಮೇಯರ್ ಸುರೇಖಾ ಮುರುಳೀಧರ್ ಉಪಸ್ಥಿತರಿದ್ದರು.

  • ಕೊರೊನಾ ಸೋಂಕು ಹೆಚ್ಚಳ- ಮನೆ ಮನೆಗೂ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಯುರ್ವೇದ ಕಿಟ್

    ಕೊರೊನಾ ಸೋಂಕು ಹೆಚ್ಚಳ- ಮನೆ ಮನೆಗೂ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಯುರ್ವೇದ ಕಿಟ್

    ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಾಗರಿಕರ ರೋಗನಿರೋಧಕ ಶಕ್ತಿ ಹೆಚ್ಚಿಸುವ ಸಲುವಾಗಿ ಆಯುರ್ವೇದ ಕಿಟ್ ವಿತರಣೆ ಮಾಡುತ್ತಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

    ಇಂದು ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ 85 ಸಾವಿರ ಮನೆಗಳಿದ್ದು, ಸುಮಾರು 4 ಲಕ್ಷ ಜನರಿಗೆ ಆಯುರ್ವೇದ ಕಿಟ್ ವಿತರಣೆ ಮಾಡಲು ಉದ್ದೇಶಿಸಲಾಗಿದೆ. ಇದೇ 29 ರಂದು ಕಿಟ್ ವಿತರಣಾ ಕಾರ್ಯಕ್ಕೆ ಆಯುರ್ವೇದ ತಜ್ಞ ಡಾ.ಗಿರಿಧರ್ ಕಜೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.

    ಆಯುರ್ವೇದ ಕಿಟ್ ಪಡೆಯಲು ಆಧಾರ್ ಕಾರ್ಡ್ ಕಡ್ಡಾಯವಾಗಿದ್ದು, ಯಾರ ಬಳಿ ಆದರೂ ಆಧಾರ್ ಕಾರ್ಡ್ ಇಲ್ಲದಿದ್ದರೆ ಅದನ್ನು ಮಾಡಿಕೊಡುತ್ತೇವೆ. ಜುಲೈ 29 ರಿಂದ ಆಯುರ್ವೇದ ಕಿಟ್ ವಿತರಣೆ ಮಾಡುವ ಕಾರ್ಯ ಆರಂಭವಾಗಲಿದೆ. ಒಮ್ಮೆಗೆ 4 ಲಕ್ಷ ಕಿಟ್ ನೀಡುವುದು ಕಷ್ಟ ಎಂದು ಹೇಳಿದ ಹಿನ್ನೆಲೆಯಲ್ಲಿ ವಾರ್ಡ್ ಹಂತದಲ್ಲಿ ವಿತರಣೆ ಕಾರ್ಯ ಮಾಡಲಿದ್ದೇವೆ. ಈ ಕಾರ್ಯಕ್ರಮ ದೇಶದಲ್ಲೇ ಮೊದಲು ಎಂದು ಭಾವಿಸಿದ್ದೇನೆ. ಪ್ರತಿ ಕಿಟ್ ಬೆಲೆ 380 ರೂ. ಇದ್ದು, ನಮ್ಮ ಮನವಿ ಮೇರೆಗೆ ಕೇವಲ 100 ರೂ.ಗೆ ನೀಡಲಾಗುತ್ತಿದೆ ಎಂದು ವಿವರಿಸಿದರು.