Tag: ಆಯ್ಕೆ

  • Bigg Boss: ಸ್ಪರ್ಧಿಗಳ ಆಯ್ಕೆ ಹೇಗೆ ನಡೆಯುತ್ತೆ? ಮೋಸ ಮಾಡುವವರೂ ಇದ್ದಾರೆ ಹುಷಾರ್

    Bigg Boss: ಸ್ಪರ್ಧಿಗಳ ಆಯ್ಕೆ ಹೇಗೆ ನಡೆಯುತ್ತೆ? ಮೋಸ ಮಾಡುವವರೂ ಇದ್ದಾರೆ ಹುಷಾರ್

    ಗತ್ತಿನ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ (Bigg Boss Kannada)… ಅನುಮಾನವೇ ಬೇಡ.. ಅತೀ ಹೆಚ್ಚು ಸೀಸನ್ ಮುಗಿಸಿದ, ಹೆಚ್ಚು ಭಾಷೆಗಳಲ್ಲಿ ತಯಾರಾದ, ಸುದೀರ್ಘ 24 ವರ್ಷಗಳ ಇತಿಹಾಸ ಹೊಂದಿರುವ ಈ ಕಾರ್ಯಕ್ರಮಕ್ಕೆ ತನ್ನದೇ ಆದ ವಿಶೇಷತೆ ಇದೆ. ಅಷ್ಟು ಸುಲಭವಾಗಿ ಈ ಕಾರ್ಯಕ್ರಮವನ್ನು ನಡೆಸುವುದು ಕಷ್ಟ ಕಷ್ಟ. ಕೋಟಿ ಕೋಟಿ ಹಣ ಬೇಡುವಂತಹ ಈ ಶೋ ಅತೀ ಶ್ರೀಮಂತ ಶೋಗಳಲ್ಲಿ ಒಂದಾಗಿದೆ.

    ಹೌದು, ಈ ಕಾರ್ಯಕ್ರಮ ಮೊದಲು ಶುರುವಾಗಿದ್ದು, ಡಚ್ ಭಾಷೆಯಲ್ಲಿ. ಹೊರದೇಶದಲ್ಲಿ ‘ಬಿಗ್ ಬ್ರದರ್’ ಹೆಸರಿನಿಂದ ಪ್ರಾರಂಭವಾದ ಈ ಶ್ರೀಮಂತ ಕಾರ್ಯಕ್ರಮ, ನಾನಾ ದೇಶಗಳನ್ನು ಸುತ್ತಿ, ಭಾರತಕ್ಕೆ ಬರುತ್ತಿದ್ದಂತೆಯೇ ತನ್ನ ಹೆಸರಿನ್ನು ಬದಲಾಯಿಸಿಕೊಂಡಿತು. ‘ಬಿಗ್ ಬ್ರದರ್’ ಹೆಸರಿನಲ್ಲಿ 63 ಭಾಷೆಗಳಲ್ಲಿ ನಿರ್ಮಾಣವಾದರೆ, ಭಾರತದಲ್ಲಿ ‘ಬಿಗ್ ಬಾಸ್’ ಆಗಿ ಬದಲಾಯಿತು. ಹಿಂದಿ, ತೆಲುಗು, ಮಲಯಾಳಂ, ತಮಿಳು, ಬೆಂಗಾಲಿ, ಮರಾಠಿ, ಕನ್ನಡ  ಹೀಗೆ ಭಾರತದ ಏಳು ಭಾಷೆಗಳಲ್ಲಿ ಇದು ಪ್ರಸಾರವಾಗುತ್ತಿದೆ.

    ಇಂಥದ್ದೊಂದು ಶೋನಲ್ಲಿ ಭಾಗಿಯಾಗಲು ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ? ದೊಡ್ಮನೆ ಕದ ತಟ್ಟೋಕೆ ಕನಸು ಕಟ್ಟಿಕೊಂಡವರು ಹಲವರು. ಸೂಟ್ ಕೇಸ್ ರೆಡಿ ಮಾಡಿಕೊಂಡು ಕಾದವರು ಅನೇಕರು. ಆದರೆ, ಬಿಗ್ ಬಾಸ್ ಆಯ್ಕೆ (Selection) ಸುಲಭದ್ದಲ್ಲ, ಹಾಗಂತ ಕಠಿಣವೂ ಅಲ್ಲ.  ಬಿಗ್ ಬಾಸ್ ಮನೆಗೆ ಹೋಗಲು ಅರ್ಹತೆಗಳೇನು? ನಾವೂ ಬಿಗ್ ಬಾಸ್ ಮನೆಗೆ ಹೋಗಬಹುದಾ? ಆಯ್ಕೆಯ ಪ್ರಕ್ರಿಯೆ ಹೇಗಿರುತ್ತದೆ? ಯಾರು ಆಯ್ಕೆ ಮಾಡುತ್ತಾರೆ? ಯಾರನ್ನು ಭೇಟಿ ಮಾಡಬೇಕು? ಇಂತಹ ಪ್ರಶ್ನೆಗಳು ಏಳುವುದು ಸಹಜ. ಬಿಗ್ ಬಾಸ್ ಮನೆಗೆ ಹೋಗಲು ನಮಗೂ ಅರ್ಹತೆ ಇದೆಯಾ? ಈ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ.

    ಕನ್ನಡದಲ್ಲಿ ಈವರೆಗೂ ಒಂಬತ್ತು ಸೀಸನ್ ಗಳು ಮುಗಿದಿವೆ. ಹತ್ತನೇ ಸೀಸನ್ ಇನ್ನಷ್ಟೇ ಶುರುವಾಗಬೇಕಿದೆ. ಬಹುತೇಕ ಸೀಸನ್ ಗಳಲ್ಲಿ ವಾಹಿನಿಯು ಸಿಲೆಬ್ರಿಟಿಗಳಿಗೇ ಆದ್ಯತೆ ನೀಡಿದ್ದರೆ, ಕೆಲವು ಸೀಸನ್ ಗಳಲ್ಲಿ ಸಾಮಾನ್ಯರಿಗೂ ಅವಕಾಶ ಕೊಟ್ಟಿದೆ. ಈ ಸಾಮಾನ್ಯರು ಆಯ್ಕೆಯಾಗಿದ್ದು ಮಾತ್ರ ರೋಚಕ. ತಮ್ಮ ತಮ್ಮ ಕ್ಷೇತ್ರಗಳ ಸಾಧನೆಯನ್ನು ವಾಹಿನಿಗೆ ತಿಳಿಸಿ ಎಂದು ಕೇಳಲಾಗಿತ್ತು. ಬಂದ ಅರ್ಜಿಗಳಲ್ಲಿ ವಿಶೇಷ ಅನಿಸಿದವರನ್ನು ವಾಹಿನಿಯೇ ಕಾಂಟ್ಯಾಕ್ಟ್ ಮಾಡಿ, ಅವರನ್ನು ಆಯ್ಕೆ ಮಾಡಲಾಯಿತು.

    ಸಾಧನೆಯಷ್ಟೇ ಆಯ್ಕೆಯ ಮಾನದಂಡವಾ? ಕಂಡಿತಾ ಇಲ್ಲ. ನೀವು ಎಷ್ಟೇ ಸಾಧನೆ ಮಾಡಿದರೂ, ಬಿಗ್ ಬಾಸ್ ತಂಡ ನಡೆಸುವ ಕೆಲ ಪರೀಕ್ಷೆಗಳನ್ನು ಎದುರಿಸಲೇಬೇಕು. ದೊಡ್ಮನೆಯಲ್ಲಿ ನೂರು ದಿನ ಉಳಿಯುವಂತಹ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ಇದೆಯಾ ಅಂತ ಪರೀಕ್ಷೆ ಮಾಡಲಾಗತ್ತೆ. ದೊಡ್ಮನೆ ಒಳಗೆ ಹೋಗುವ ಮುನ್ನ ಸೈಕಿಯಾಟಿಸ್ಟ್ ಕೌನ್ಸಲಿಂಗ್ ಮಾಡ್ತಾರೆ. ಜೊತೆಗೆ ನಿಮಗೆ ಕ್ರಿಮಿನಲ್ ಹಿನ್ನೆಲೆ ಏನಾದರೂ ಇದೆಯಾ ಅಂತ ತಿಳಿದುಕೊಳ್ಳಲಾಗುತ್ತೆ. ವೈದ್ಯಕೀಯ ಪರೀಕ್ಷೆ ಮಾಡಲಾಗತ್ತೆ… ಬಿಗ್ ಬಾಸ್ ಶೋ ನಿಯಮಗಳನ್ನು ತಿಳಿಸಲಾಗತ್ತೆ. ಈ ಎಲ್ಲದರಲ್ಲೂ ಪಾಸಾದರೆ ಮಾತ್ರ ಬಿಗ್ ಬಾಸ್ ಮನೆ ಪ್ರವೇಶ ದೊರೆಯುತ್ತದೆ. ನಿಮ್ಮಲ್ಲೂ ಈ ಎಲ್ಲ ಅರ್ಹತೆಗಳು ಇದ್ದರೆ ಟ್ರೈ ಮಾಡಬಹುದು.

    ಒಂದು ವಿಷಯ ನೆನಪಿಡಿ, ಬಿಗ್ ಬಾಸ್ ಹೆಸರಿನಲ್ಲಿ ಹಲವಾರು ಮೋಸಗಳು ನಡೆದಿವೆ. ಮಧ್ಯವರ್ತಿಗಳು ಹಣ ದೋಚಿದ್ದಾರೆ. ಕೆಲವರು ಹಣ ಕೊಟ್ಟು ಮೋಸ ಹೋಗಿದ್ದಾರೆ. ವಾಹಿನಿಯು ಈ ವಿಷಯದಲ್ಲಿ ಯಾವುದೇ ಮಧ್ಯವರ್ತಿಗಳನ್ನು ಇಟ್ಟುಕೊಂಡಿರುವುದಿಲ್ಲ. ಆಯ್ಕೆ ಏನೇ ಇದ್ದರೂ ಅದು ಬಿಗ್ ಬಾಸ್ ತಂಡದಲ್ಲೇ ನಡೆಯುತ್ತೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಧಾನ ಪರಿಷತ್ 7 ಸ್ಥಾನಗಳಿಗೆ ಅವಿರೋಧ ಆಯ್ಕೆ – ಅಧಿಕೃತ ಘೋಷಣೆ

    ವಿಧಾನ ಪರಿಷತ್ 7 ಸ್ಥಾನಗಳಿಗೆ ಅವಿರೋಧ ಆಯ್ಕೆ – ಅಧಿಕೃತ ಘೋಷಣೆ

    ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ನಿಗಧಿಯಾಗಿದ್ದ ಚುನಾವಣೆಗೆ ಸ್ಪರ್ಧಿಸಿದ್ದ 7 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಶುಕ್ರವಾರ ಘೋಷಿಸಿದರು.

    ಮೇ 24 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿತ್ತು. ಮೇ 25 ರಂದು ಪರಿಶೀಲನೆ ಹಾಗೂ ಮೇ 27 ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿತ್ತು. 7 ಸ್ಥಾನಗಳಿಗೆ 7 ಅಭ್ಯರ್ಥಿಗಳು ಮಾತ್ರ ಅಂತಿಮ ಕಣದಲ್ಲಿ ಉಳಿದಿದ್ದ ಕಾರಣಕ್ಕೆ 7 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: ಯುದ್ಧ ನೌಕೆಗಳು ತಯಾರಾಗೋ ಮೂಲಕ ಮೋದಿ ಆತ್ಮನಿರ್ಭರ್ ಅಭಿಯಾನಕ್ಕೆ ಬಲ ಬಂದಿದೆ: ರಾಜನಾಥ್ ಸಿಂಗ್

    ಭಾರತೀಯ ಜನತಾ ಪಕ್ಷದಿಂದ ಸ್ಪರ್ಧಿಸಿದ್ದ ಸವದಿ ಲಕ್ಷ್ಮಣ, ಟಿ ನಾರಾಯಣ ಸ್ವಾಮಿ, ಹೇಮಾಲತಾ ನಾಯಕ್ ಹಾಗೂ ಕೇಶವ್ ಪ್ರಸಾದ್ ಎಸ್, ಭಾರತೀಯ ಕಾಂಗ್ರೆಸ್ ಪಕ್ಷದಿಂದ ಕೆ ಅಬ್ದುಲ್ ಜಬ್ಬಾರ್ ಹಾಗೂ ಎಂ ನಾಗರಾಜು, ಜೆಡಿಎಸ್ ಪಕ್ಷದಿಂದ ಶರವಣನ್ ಟಿ ಅವಿರೋಧವಾಗಿ ಆಯ್ಕೆಯಾದ ಅಭ್ಯರ್ಥಿಗಳಾಗಿದ್ದಾರೆ. ಇದನ್ನೂ ಓದಿ: ಐತಿಹಾಸಿಕ ಮುರುಘಾ ಮಠಕ್ಕೆ ನೂತನ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಸ್ವಾಮೀಜಿ ಆಯ್ಕೆ

    ಇಂದು ನಾಮಪತ್ರ ಹಿಂಪಡೆಯುವ ಸಮಯ ಮೀರಿದ ನಂತರ ನಾಮಪತ್ರ ಸಲ್ಲಿಸಿದ್ದ 7 ಅಭ್ಯರ್ಥಿಗಳಿಗೆ ಚುನಾವಣಾಧಿಕಾರಿ ಹಾಗೂ ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಅವರು ಅವಿರೋಧ ಆಯ್ಕೆಯ ಪ್ರಮಾಣ ಪತ್ರಗಳನ್ನು ವಿತರಿಸಿದರು.

  • ಸರ್ಕಾರಿ ನೌಕರರ ಕ್ರೀಡಾಕೂಟ – ಬ್ಯಾಡ್ಮಿಂಟನ್‍ನಲ್ಲಿ ಬ್ಯಾಡಗಿಯ ಇಬ್ಬರು ರಾಜ್ಯಮಟ್ಟಕ್ಕೆ ಆಯ್ಕೆ

    ಸರ್ಕಾರಿ ನೌಕರರ ಕ್ರೀಡಾಕೂಟ – ಬ್ಯಾಡ್ಮಿಂಟನ್‍ನಲ್ಲಿ ಬ್ಯಾಡಗಿಯ ಇಬ್ಬರು ರಾಜ್ಯಮಟ್ಟಕ್ಕೆ ಆಯ್ಕೆ

    ಹಾವೇರಿ: ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ಶಂಕರ್ ಕಿಚಡಿ ಹಾಗೂ ಬಿ.ಸುಭಾಷ್ ಇವರಿಗೆ ಹಾವೇರಿ ಜಿಲ್ಲೆ ಬ್ಯಾಡಗಿ ಬ್ಯಾಡ್ಮಿಂಟನ್ ಕ್ಲಬ್‍ನ ಸದಸ್ಯರು ಅಭಿನಂದಿಸಿದ್ದಾರೆ.

    ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಜಿಲ್ಲಾ ಮಟ್ಟದ ಸ್ಫರ್ಧೆಗಳಲ್ಲಿ ಶಂಕರ ಕಿಚಡಿ ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸನಲ್ಲಿಯೂ ಪುರುಷರ 400 ಮೀ ಮತ್ತು 800 ಮೀ ರನ್ನಿಂಗ್‍ನಲ್ಲಿ ಬಿ. ಸುಭಾಷ್ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪುರುಷರ ಬ್ಯಾಡ್ಮಿಂಟನ್ ಡಬಲ್ಸ್‍ನಲ್ಲಿ ಶಂಕರ ಕಿಚಡಿ ಶಂಭು ಬಿದರಕಟ್ಟಿ ಅವರೊಂದಿಗೆ ಜಿಲ್ಲಾ ಮಟ್ಟದಲ್ಲಿ ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

    ವಿಜೇತ ಕ್ರೀಡಾಪಟುಗಳಿಗೆ ಬ್ಯಾಡಗಿ ಬ್ಯಾಡ್ಮಿಂಟನ್ ಕ್ಲಬ್‍ನ ಅಧ್ಯಕ್ಷ ನೇಮಿಚಂದ ಜೈನ್, ಸದಸ್ಯರಾದ ವನರಾಜ ಅಕ್ಕಿ ವಿಶಾಲ್ ಜಿಂಗಾಡೆ, ಮಹೇಶ ನಾಯಕ್, ಬಸವರಾಜು ನವಲೆ, ಐ.ಎಂ.ಮುಲ್ಲಾ, ಶಿವರಾಜ ಚೂರಿ, ಡಾ.ಶಿವಕುಮಾರ್, ಶಿವಾನಂದ ಮಲ್ಲನಗೌಡ್ರ, ಎಸ್.ಬಿ.ಖಾನಗೌಡ್ರ, ಉಜ್ಜನಗೌಡ ನಂದಿಗೌಡ್ರ, ಸತೀಶ್ ಚೂರಿ, ಪ್ರಕಾಶ್ ತಾರೀಕೊಪ್ಪ, ಚಾಲ್ರ್ಸ ಚಾಕೋ, ಶಾಂತರಾಜ್ ಕರ್ಕುಂದಿ, ವಿರೇಶ್ ಪೂಜಾರ, ಮನೋಹರ, ಶಿವಪ್ರಸಾದ್ ಇನ್ನಿತರರು ಅಭಿನಂದಿಸಿದ್ದಾರೆ.

  • ಫಿಬಾ ಏಷ್ಯಾಕಪ್ ಮಹಿಳಾ ಬಾಸ್ಕೆಟ್ ಬಾಲ್ ಟೂರ್ನಿ- ಭಾರತ ತಂಡಕ್ಕೆ ಕೊಡಗಿನ ನವನೀತಾ ಆಯ್ಕೆ

    ಫಿಬಾ ಏಷ್ಯಾಕಪ್ ಮಹಿಳಾ ಬಾಸ್ಕೆಟ್ ಬಾಲ್ ಟೂರ್ನಿ- ಭಾರತ ತಂಡಕ್ಕೆ ಕೊಡಗಿನ ನವನೀತಾ ಆಯ್ಕೆ

    ಮಡಿಕೇರಿ: ಸುಂಟಿಕೊಪ್ಪದ ಬಾಸ್ಕೆಟ್ ಬಾಲ್ ಆಟಗಾರ್ತಿಯೊಬ್ಬರು ಫಿಬಾ ಏಷ್ಯಾಕಪ್ ಮಹಿಳಾ ಬಾಸ್ಕೆಟ್ ಬಾಲ್ ಟೂರ್ನಿಗೆ ಭಾರತ ತಂಡದಲ್ಲಿ ಸ್ಥಾನ ಪಡೆಯುವ ಮೂಲಕ ಎಲ್ಲರ ಚಿತ್ತವನ್ನು ಮತ್ತೊಮ್ಮೆ ಕೊಡಗಿನತ್ತ ಹರಿಯುವಂತೆ ಮಾಡಿದ್ದಾರೆ.

    ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಗದ್ದೆಹಳ್ಳದ ಕೃಷಿಕರಾಗಿರುವ ಉದಯಕುಮಾರ್ ಮತ್ತು ಗಿರಿಜ ದಂಪತಿಯ ಪುತ್ರಿ, ಏಕಲವ್ಯ ಪ್ರಶಸ್ತಿ ಪುರಸ್ಕೃತೆ ನವನೀತಾ ಅವರು ಫಿಬಾ ಏಷ್ಯಾ ಕಪ್ ಮಹಿಳಾ ಬಾಸ್ಕೆಟ್ ಬಾಲ್ ಟೂರ್ನಿಗೆ ಭಾರತ ತಂಡದಲ್ಲಿ ಸ್ಥಾನ ಪಡೆದವರಾಗಿದ್ದಾರೆ. ಸೆಪ್ಟಂಬರ್ 27 ರಿಂದ ಅಕ್ಟೋಬರ್ 30 ರವರೆಗೆ ಜೋರ್ಡಾನ್ ನ ಅಮ್ಮಾನ್ ನಲ್ಲಿ ಈ ಟೂರ್ನಿ ನಡೆಯಲಿದೆ. ಸೆಪ್ಟಂಬರ್ 27 ರಂದು ನಡೆಯುವ ಮೊದಲ ಹಣಾಹಣಿಯಲ್ಲಿ ಭಾರತ ತಂಡವು ಜಪಾನ್ ಎದುರು ಹಾಗೂ 29 ರಂದು ನ್ಯೂಜಿಲೆಂಡ್ ತಂಡದ ವಿರುದ್ಧ ಸೆಣಸಾಡಲಿದೆ. ಇದನ್ನೂ ಓದಿ: ಐಪಿಎಲ್ ನಿಯಮಿತ ಪ್ರೇಕ್ಷಕರಿಗೆ ಗ್ಯಾಲರಿ ಪ್ರವೇಶ ಪಡೆಯಲು ಅನುಮತಿ

    ರಾಷ್ಟ್ರೀಯ ಟೂರ್ನಿಗಳಲ್ಲಿ ರೈಲ್ವೇಸ್ ತಂಡವನ್ನು ಪ್ರತಿನಿಧಿಸುತ್ತಿರುವ ನವನೀತಾ ಅವರು, ಪ್ರಾಥಮಿಕ ಶಿಕ್ಷಣವನ್ನು ಸುಂಟಿಕೊಪ್ಪ ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೂರೈಸಿದ್ದಾರೆ. ಬಾಸ್ಕೆಟ್ ಬಾಲ್ ಕ್ರೀಡೆಯಲ್ಲಿ ಆಸಕ್ತಿ ಹೊಂದಿದ್ದರಿಂದ ಬೆಂಗಳೂರಿನ ದೇವನಹಳ್ಳಿ ವಿದ್ಯಾನಗರದ ಡಿವೈಇಎಸ್ ಕ್ರೀಡಾ ಶಾಲೆಯಲ್ಲಿ ಪ್ರೌಢಶಾಲಾ ಶಿಕ್ಷಣ ಪಡೆದರು. ಮೈಸೂರು ಮರಿಮಲ್ಲಪ್ಪ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣ ಮುಗಿಸಿದ ನಂತರ ಮೈಸೂರು ಕ್ರೀಡಾ ಹಾಸ್ಟೆಲ್ ಗೆ ಸೇರಿ ಬೇರೆ ರಾಜ್ಯಗಳಲ್ಲಿ ತರಬೇತಿ ಪಡೆದರು. ಮೈಸೂರು ಟೆರಿಷನ್ ಕಾಲೇಜಿನಲ್ಲಿ ಪದವಿ ಹಾಗೂ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದಲ್ಲಿ ಸಮಾಜಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರೈಸಿದ್ದಾರೆ. ಬಾಸ್ಕೆಟ್ ಬಾಲ್ ನಲ್ಲಿನ ಇವರ ಕ್ರೀಡಾ ಸಾಧನೆಗಾಗಿ 2015ರಲ್ಲಿ ಭಾರತೀಯ ರೈಲ್ವೇ ಇಲಾಖೆಯಲ್ಲಿ ಉದ್ಯೋಗ ಅರಸಿಕೊಂಡು ಬಂದಿದೆ. ಇದನ್ನೂ ಓದಿ: ಎಬಿಡಿ ಸಿಡಿಲಬ್ಬರದ ಶತಕಕ್ಕೆ ಬೆಚ್ಚಿಬಿದ್ದ ಆರ್​ಸಿಬಿ ಬೌಲರ್ಸ್

    ಗೆದ್ದು ಬನ್ನಿ: ನವನೀತಾ ಅವರು ಆಯ್ಕೆಗೊಂಡಿರುವ ಭಾರತ ಮಹಿಳಾ ಬಾಸ್ಕೆಟ್ ಬಾಲ್ ತಂಡವು ಫಿಬಾ ಏಷ್ಯಾಕಪ್ ಮಹಿಳಾ ಬಾಸ್ಕೆಟ್ ಬಾಲ್ ಟೂರ್ನಿಯಲ್ಲಿ ಉತ್ತಮ ಸಾಧನೆ ಮಾಡಲಿ. ವಿಜಯಮಾಲೆ ಧರಿಸಿ ಬರಲೆಂದು ಕೊಡಗಿನ ಜನರು ಹಾಗೂ ಸುಂಟಿಕೋಪ್ಪ ಗ್ರಾಮಸ್ಥರು ಹಾರೈಸಿದ್ದಾರೆ.

    ಇತ್ತೀಚೆಗೆ ಮುಕ್ತಾಯಗೊಂಡ ಟೋಕಿಯೋ ಒಲಂಪಿಕ್ಸ್ ನಲ್ಲಿ ಭಾರತ ಮಹಿಳಾ ಹಾಕಿ ತಂಡದ ಸಹಾಯಕ ಕೋಚ್ ಆಗಿ ಇದೇ ಸುಂಟಿಕೊಪ್ಪದ ಕಂಬಿಬಾಣೆಯ ಅಂಕಿತಾ ಸುರೇಶ್ ಅವರು ಕಾರ್ಯ ನಿರ್ವಹಿಸಿದ್ದರು. ಈ ಮೂಲಕ ದೇಶದ ಗಮನ ಸೆಳೆದಿದ್ದರು. ಇದೀಗ ನವನೀತಾ ಅವರು ಸಹ ಬಾಸ್ಕೆಟ್ ಬಾಲ್ ನಲ್ಲಿ ಮತ್ತೊಂದು ಸಾಧನೆಗೆ ಮುಂದಾಗಿದ್ದಾರೆ.

  • ವಿಶ್ವಕಪ್ ಆಯ್ಕೆಗೆ ‘ಆರೋಗ್ಯಕರ ತಲೆನೋವಾದ’ ರಿಷಬ್ ಪಂತ್

    ವಿಶ್ವಕಪ್ ಆಯ್ಕೆಗೆ ‘ಆರೋಗ್ಯಕರ ತಲೆನೋವಾದ’ ರಿಷಬ್ ಪಂತ್

    – ಆಯ್ಕೆಯ ರೇಸ್‍ನಲ್ಲಿ ರಹಾನೆ, ವಿಜಯ್ ಶಂಕರ್: ಎಂಎಸ್‍ಕೆ ಪ್ರಸಾದ್

    ಮುಂಬೈ: ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ವಿರುದ್ಧ ಸರಣಿಗಳಲ್ಲಿ ಉತ್ತಮ ಪ್ರದರ್ಶನ ನೀಡಿರುವ ಟೀಂ ಇಂಡಿಯಾ ಯುವ ಆಟಗಾರ ರಿಷಬ್ ಪಂತ್ ಮುಂದಿನ ವಿಶ್ವಕಪ್ ಸರಣಿಗೆ ಆಯ್ಕೆ ಆಗುವುದು ಬಹುತೇಕ ಖಚಿತ ಆಗಿದೆ ಎನ್ನಲಾಗಿದೆ.

    ಈ ಕುರಿತು ಟೀಂ ಇಂಡಿಯಾ ಆಯ್ಕೆ ಸಮಿತಿಯ ಅಧ್ಯಕ್ಷ ಎಂಎಸ್‍ಕೆ ಪ್ರಸಾದ್ ಅವರು ಮಾಹಿತಿ ನೀಡಿದ್ದು, ವಿಶ್ವಕಪ್ ತಂಡದ ಆಯ್ಕೆ ವೇಳೆ ರಿಷಬ್ ಪಂತ್‍ರನ್ನು ಪರಿಗಣಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಅಲ್ಲದೇ ರಿಷಬ್ ಪಂತ್ ಆಯ್ಕೆ ಆರೋಗ್ಯಕರ ತಲೆನೋವಾಗಿದೆ ಎಂದು ತಿಳಿಸಿದ್ದಾರೆ.

    ರಿಷಬ್ ಟೀಂ ಇಂಡಿಯಾಗೆ ಆಯ್ಕೆಯಾದ ಬಳಿಕ ಅವರ ಬ್ಯಾಟಿಂಗ್‍ನಲ್ಲಿ ಉತ್ತಮ ಸುಧಾರಣೆ ಆಗಿದೆ. ಮತ್ತಷ್ಟು ಪರಿಪಕ್ವತೆ ಸಾಧಿಸಲು ಟೀಂ ಇಂಡಿಯಾ ಎ ತಂಡ ಸೇರುವಂತೆ ಸಾಕಷ್ಟು ಅವಕಾಶಗಳನ್ನು ಅವರಿಗೆ ನೀಡಿದ್ದೇವೆ. ಮೊದಲು ರಿಷಬ್‍ರನ್ನು ದಪ್ಪ ಚರ್ಮದ ವ್ಯಕ್ತಿ ಎಂದು ತಿಳಿದಿದ್ದೇವು. ಆದರೆ ಇಂದು ಆತ ಅನುಭವಿ ಆಟಗಾರರಂತಾಗಿದ್ದು, ತಂಡಕ್ಕೆ ಸಾಕಷ್ಟು ಬದ್ಧತೆಯನ್ನು ತೋರಿದ್ದಾರೆ ಎಂದರು.

    ಇದೇ ವೇಳೆ ರಹಾನೆ ಹಾಗೂ ವಿಜಯ್ ಶಂಕರ್ ಅವರನ್ನು ಆಯ್ಕೆ ವೇಳೆ ಪರಿಗಣಿಸಲಾಗುತ್ತದೆ. ಏಕೆಂದರೆ ಅವರು ದೇಶಿಯ ಕ್ರಿಕೆಟ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು. ಅಂದಹಾಗೇ ಕಳೆದ 11 ಇನ್ನಿಂಗ್ಸ್ ಗಳಲ್ಲಿ ರಹಾನೆ 74.62 ಸರಾಸರಿಯಲ್ಲಿ 597 ರನ್ ಗಳಿಸಿದ್ದಾರೆ. 2018 ಫೆಬ್ರವರಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಅಂತಿಮ ಏಕದಿನ ಪಂದ್ಯಗಳನ್ನು ಆಡಿದ್ದರು. ತಂಡದಲ್ಲಿ ಸದ್ಯ ಮಧ್ಯಮ ಕ್ರಮಾಂಕದ ಆಯ್ಕೆ ಕುರಿತು ಹೆಚ್ಚಿನ ಒತ್ತು ನೀಡಲಾಗುತ್ತಿದೆ.

    2019 ವಿಶ್ವಕಪ್ ಟೂರ್ನಿಗೆ 15 ಆಟಗಾರರ ಪಟ್ಟಿಯನ್ನು ಪ್ರಕಟ ಮಾಡಲು ಏಪ್ರಿಲ್ 23 ಅಂತಿಮ ದಿನಾಂಕವಾಗಿದೆ. ಜೂನ್ 05 ರಂದು ಟೀಂ ಇಂಡಿಯಾ ದಕ್ಷಿಣ ಆಫ್ರಿಕಾರನ್ನು ಎದುರಿಸುವ ಮೂಲಕ ವಿಶ್ವಕಪ್ ಜರ್ನಿಯನ್ನು ಆರಂಭಿಸಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪೂಜಾರಿಯನ್ನ ನೇಮಿಸಿದ ಬಸವ – ಮಳವಳ್ಳಿಯಲ್ಲಿ ಅಚ್ಚರಿಯ ಘಟನೆ

    ಪೂಜಾರಿಯನ್ನ ನೇಮಿಸಿದ ಬಸವ – ಮಳವಳ್ಳಿಯಲ್ಲಿ ಅಚ್ಚರಿಯ ಘಟನೆ

    ಮಂಡ್ಯ: ದೇವಾಲಯದ ಪೂಜೆ ಮಾಡಲು ಪೂಜಾರಿಯನ್ನು ದೇವಾಲಯದ ಬಸವನೇ ನೇಮಿಸಿದ ಅಚ್ಚರಿ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ರಾಗಿ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಮದ್ದೂರು ತಾಲ್ಲೂಕಿನ ಚಿಕ್ಕರಸಿನಕೆರೆ ಗ್ರಾಮದ ಕಾಲ ಭೈರವೇಶ್ವರ ಸ್ವಾಮಿ ದೇವಾಲಯದ ಬಸವನನ್ನು ರಾಗಿ ಬೊಮ್ಮನಹಳ್ಳಿ ಗ್ರಾಮಕ್ಕೆ ವಿಶೇಷ ಪೂಜೆಗೆಂದು ಕರೆತರಲಾಗಿತ್ತು. ಈ ವೇಳೆ ಗ್ರಾಮಸ್ಥದ ಮಂಚಮ್ಮ ದೇವಸ್ಥಾನದ ನಿತ್ಯ ಪೂಜೆಗೆ ಅರ್ಹ ವ್ಯಕ್ತಿಯನ್ನು ನೇಮಿಸುವಂತೆ ಬಸವನಲ್ಲಿ ಮನವಿ ಮಾಡಿದ್ದು, ಗ್ರಾಮಸ್ಥರ ಮನವಿ ಮೇರೆಗೆ ಬಸವ ಊರಿನ ಯುವಕನನ್ನು ಪೂಜಾರಿಯಾಗಿ ನೇಮಕ ಮಾಡಿದೆ.

    ಗ್ರಾಮಸ್ಥರು ಮನವಿ ಮಾಡುತ್ತಿದಂತೆ ಬಸವ ಗುಂಪಿನಲ್ಲಿದ್ದ ರವಿಕುಮಾರ್ ಯುವಕನ ಬಳಿ ತೆರಳಿ ಆತನನ್ನು ಕೊಂಬಿನಿಂದ ತಳ್ಳಿ ಆಯ್ಕೆ ಮಾಡಿದೆ. ಅಲ್ಲದೇ ದೇವಾಲಯದ ಪಕ್ಕದಲ್ಲಿ ಇರುವ ಕೆರೆಯಲ್ಲಿ ಆತನನ್ನು ಮುಳುಗಿಸಿ ಬಳಿಕ ಮೇಲಕ್ಕೆ ಕರೆತಂದಿದೆ. ಸಂಪೂರ್ಣ ಘಟನೆಯನ್ನು ಕಂಡ ಭಕ್ತರು ಅಚ್ಚರಿಗೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಶಿರೂರು ಮಠಕ್ಕೆ ಸಮಿತಿ ಆಯ್ಕೆ- ಉತ್ತರಾಧಿಕಾರಿಯಾಗಲು ವಟುಗಳು ನಿರಾಸಕ್ತಿ

    ಶಿರೂರು ಮಠಕ್ಕೆ ಸಮಿತಿ ಆಯ್ಕೆ- ಉತ್ತರಾಧಿಕಾರಿಯಾಗಲು ವಟುಗಳು ನಿರಾಸಕ್ತಿ

    ಉಡುಪಿ: ಶಿರೂರು ಮಠದ ಒಂದು ತಿಂಗಳ ಆಡಳಿತ ನಿರ್ವಹಣೆಗೆ ಐವರು ಸದಸ್ಯರ ಆಡಳಿತ ಸಮಿತಿ ಸೋಮವಾರ ರಚನೆಯಾಗಲಿದೆ ಎಂಬ ಮಾಹಿತಿ ಸೋದೆ ಮಠದ ಮೂಲಗಳಿಂದ ಲಭಿಸಿದೆ.

    ಈ ಕುರಿತು ಪಬ್ಲಿಕ್ ಟಿವಿಗೆ ಮಠದ ಮೂಲಗಳಿಂದ ಮಾಹಿತಿ ಲಭಿಸಿದ್ದು, ಮಠದ ಆಡಳಿತ ವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಈ ವ್ಯವಸ್ಥೆ ಮಾಡುತ್ತೇವೆ. ಸೋದೆ ವಿಶ್ವವಲ್ಲಭ ಸ್ವಾಮಿಗಳ ನೇತೃತ್ವದಲ್ಲಿ ಸಮಿತಿ ರಚನೆಯಾಗುತ್ತದೆ. ಸೋದೆಮಠವೂ ಶಿರೂರು ಮಠದ ದ್ವಂದ್ವ ಮಠ ಆಗಿರುವುದರಿಂದ ಜವಾಬ್ದಾರಿ ವಹಿಸುತ್ತೇವೆ ಎಂದಿದ್ದಾರೆ. ಆದರೆ ಶಿರೂರು ಮಠದ ಮುಂದಿನ ಉತ್ತರಾಧಿಕಾರಿಯಾಗಲು ವಟುಗಳು ನಿರಾಸಕ್ತಿ ವಹಿಸಿದ್ದಾರೆ ಎನ್ನಲಾಗಿದೆ.

    ಒಂದು ತಿಂಗಳೊಳಗೆ ಶಿರೂರು ಮಠಕ್ಕೆ ಉತ್ತರಾಧಿಕಾರಿ ಆಯ್ಕೆಯಾಗಬೇಕು. ಉತ್ತರಾಧಿಕಾರಿ ಆಯ್ಕೆಗೆ ಸೋದೆ ಮಠದ ಪ್ರಯತ್ನ ನಡೆಸುತ್ತಿದ್ದು, ಹಲವಾರು ವಟುಗಳ ಜಾತಕ ಪರಿಶೀಲನೆ ನಡೆಸುತ್ತಿದ್ದಾರೆ. ವಟು ಆಯ್ಕೆಯ ಸಂಪೂರ್ಣ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಉತ್ತರಾಧಿಕಾರಿ ನೇಮಕವಾಗಲಿದೆ. ಆದರೆ ನೂತನ ಉತ್ತರಾಧಿಕಾರಿಯಾಗಿ ಬರಲು ಹಲವರ ನಿರಾಸಕ್ತಿ ವಹಿಸುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ.

    ಶಿರೂರು ಮಠದ ಆರ್ಥಿಕ ನಷ್ಟವೇ ಈ ನಿರಾಸಕ್ತಿಗೆ ಕಾರಣವಾಗಿದ್ದು, ಸನ್ಯಾಸ ಯೋಗವಿದ್ದರೂ ಉತ್ತರಾಧಿಕಾರಿಯಾಗಲು ಹಲವರ ನಿರಾಸಕ್ತಿ ವಹಿಸಿದ್ದಾರೆ. ಈ ಕುರಿತು ಕಳೆದ ಕೆಲ ವಾರಗಳಿಂದ ಮೂಡಿರುವ ಗೊಂದಲಗಳೇ ಕಾರಣ ಎನ್ನಲಾಗಿದೆ.

    ಮಠಾಧೀಶರುಗಳ ಚಾತುರ್ಮಾಸ್ಯದ ನಂತರ ಉತ್ತರಾಧಿಕಾರಿ ನೇಮಕ ಪ್ರಕ್ರಿಯೆಗೆ ಚಾಲನೆ ದೊರೆಯಲಿದ್ದು, ಉತ್ತರಾಧಿಕಾರಿ ಆಯ್ಕೆ ಸಮಿತಿಯಲ್ಲಿ ಶಿರೂರು ಮಠದ ವಿದ್ವಾಂಸರಿಗೂ ಅವಕಾಶ ನೀಡಲಾಗಿದೆ ಎನ್ನಲಾಗಿದೆ.

  • 2018ರ ಕಾಮನ್‍ವೆಲ್ತ್ ಕ್ರೀಡಾಕೂಟಕ್ಕೆ ಸಾಕ್ಷಿ ಮಲಿಕ್ ಆಯ್ಕೆ

    2018ರ ಕಾಮನ್‍ವೆಲ್ತ್ ಕ್ರೀಡಾಕೂಟಕ್ಕೆ ಸಾಕ್ಷಿ ಮಲಿಕ್ ಆಯ್ಕೆ

    ನವದೆಹಲಿ: ರಿಯೋ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದು ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿದ್ದ ಕುಸ್ತಿಪಟು ಸಾಕ್ಷಿ ಮಲಿಕ್ ಸೇರಿದಂತೆ ಐವರು ಮಹಿಳಾ ಕುಸ್ತಿಪಟುಗಳು 2018ರ ಕಾಮನ್‍ವೆಲ್ತ್ ಕೂಟಕ್ಕೆ ಅರ್ಹತೆ ಪಡೆದುಕೊಂಡಿದ್ದಾರೆ.

    ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ 2018ರಲ್ಲಿ ನಡೆಯಲಿರೋ ಕಾಮನ್‍ವೆಲ್ತ್ ಕೂಟದಲ್ಲಿ ಭಾಗವಹಿಸುವ ಅರ್ಹತೆ ಪಡೆಯಲು ಶನಿವಾರ ಲಕ್ನೋ ಕ್ರೀಡಾಂಗಣದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.

    62 ಕೆ.ಜಿ ವಿಭಾಗದಲ್ಲಿ ಸಾಕ್ಷಿ ಮಲಿಕ್ ಆರ್ಹತೆ ಪಡೆಯುವುದರೊಂದಿಗೆ, ವಿನಿಶ್ ಫೊಗತ್ (50ಕೆ.ಜಿ), ಬಬಿತಾ ಕುಮಾರಿ (54ಕೆ.ಜಿ), ಪೂಜಾ ಧಂಡಾ(57ಕೆ.ಜಿ), ದಿವ್ಯ ಕರಣ್ (68 ಕೆ.ಜಿ) ಮತ್ತು ಕಿರಣ್ (76ಕೆ.ಜಿ) ವಿಭಾಗಗಳಲ್ಲಿ ಸ್ಪರ್ಧಿಸುವ ಅವಕಾಶ ಪಡೆದರು.

    ಇಲ್ಲಿನ ಭಾರತೀಯ ಕ್ರೀಡಾ ಪ್ರಾಧಿಕಾರದ ತರಬೇತಿ ಕೇಂದ್ರದಲ್ಲಿ ಒಟ್ಟು 6 ವಿಭಾಗಗಳಲ್ಲಿ ಆಯ್ಕೆ ಪ್ರಕ್ರಿಯೇ ನಡೆಯಿತು. ಇದೇ ಸಂದರ್ಭದಲ್ಲಿ ಮುಂದಿನ ವರ್ಷ ಕಿರ್ಗಿಸ್ತಾನದಲ್ಲಿ ನಡೆಯುವ ಸೀನಿಯರ್ ಏಷ್ಯನ್ ಕುಸ್ತಿ ಚಾಂಪಿಯನ್‍ಷಿಪ್‍ನಲ್ಲಿ ಸ್ಪರ್ಧಿಸಲಿರುವ ಭಾರತ 6 ಫ್ರೀಸ್ಟೈಲ್ ಕುಸ್ತಿಪಟುಗಳು ಆಯ್ಕೆಯಾಗಿದ್ದಾರೆ.

  • ಆಸ್ಟ್ರೇಲಿಯಾ ವಿರುದ್ಧದ ಟಿ-20 ಸರಣಿಗೆ ನೆಹ್ರಾ ಆಯ್ಕೆ ಆಗಿದ್ದು ಹೇಗೆ?

    ಆಸ್ಟ್ರೇಲಿಯಾ ವಿರುದ್ಧದ ಟಿ-20 ಸರಣಿಗೆ ನೆಹ್ರಾ ಆಯ್ಕೆ ಆಗಿದ್ದು ಹೇಗೆ?

    ನವದೆಹಲಿ: ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಟಿ-20 ಸರಣಿಗೆ ಆಶಿಶ್ ನೆಹ್ರಾ(38) ರನ್ನು ಅಯ್ಕೆ ಮಾಡಿ ಟೀಂ ಇಂಡಿಯಾ ಆಯ್ಕೆ ಸಮಿತಿ ಅಭಿಮಾನಿಗಳಲ್ಲಿ ಅಚ್ಚರಿಯನ್ನು ಮೂಡಿಸಿದೆ.

    ಯುವರಾಜ್ ಸಿಂಗ್ ಹಾಗೂ ಸುರೇಶ್ ರೈನಾ ಫಿಟ್ ನೆಸ್ ಪರೀಕ್ಷೆಯಲ್ಲಿ ಫೇಲ್ ಆದ ಹಿನ್ನೆಲೆಯಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದರೆ, ನೆಹ್ರಾ ಫಿಟ್‍ನೆಸ್ ಪರೀಕ್ಷೆಯಲ್ಲಿ ಪಾಸ್ ಆಗಿದ್ದು 8 ತಿಂಗಳ ಬಳಿಕ ತಂಡಕ್ಕೆ ಕಮ್‍ಬ್ಯಾಕ್ ಮಾಡಿದ್ದಾರೆ.

    ನೆಹ್ರಾ ಕಳೆದ ಐಪಿಎಲ್‍ನಲ್ಲಿ ಗಾಯಗೊಂಡು ಕೆಲವು ದಿನಗಳ ಕಾಲ ವಿಶ್ರಾಂತಿಯನ್ನು ಪಡೆದಿದ್ದರು. ಆಸ್ಟ್ರೇಲಿಯಾ ವಿರುದ್ಧದ ಟಿ-20 ಸರಣಿಗೆ ಕಮ್‍ಬ್ಯಾಕ್ ಮಾಡಿರುವ ನೆಹ್ರಾರ ವೃತ್ತಿ ಬದುಕಿನ ಸೆಕೆಂಡ್ ಇನಿಂಗ್ಸ್ ಆರಂಭವಾಗಿದೆ. ಕ್ರೀಡಾಂಗಣದಲ್ಲಿ ಅಪಾರ ಅನುಭವನ್ನು ಹೊಂದಿರುವ ನೆಹ್ರಾ ಯುವ ಬೌಲರ್‍ಗಳಿಗೆ ಉತ್ತಮ ಮಾರ್ಗದರ್ಶನ ನೀಡಲಿದ್ದಾರೆ.

    ಈ ಕುರಿತು ಪ್ರತಿಕ್ರಿಯೆಯನ್ನು ನೀಡಿರುವ ಟೀಮ್ ಹಿರಿಯ ಅಧಿಕಾರಿಯೊಬ್ಬರು ನೆಹ್ರಾ ಕಳೆದ ಐಪಿಎಲ್‍ನಲ್ಲಿ ಉತ್ತಮ ಪ್ರದರ್ಶನವನ್ನು ನೀಡಿದ್ದು, ಫಿಟ್‍ನೆಸ್ ಪರೀಕ್ಷೆಯಲ್ಲಿ ಪಾಸ್ ಆಗಿದ್ದಾರೆ. ವರ್ಷದ ಆರಂಭದಲ್ಲಿ ಇಂಗ್ಲೆಡ್ ವಿರುದ್ಧ ನಡೆದ ಸರಣಿಯಗೆ ಆಯ್ಕೆಯಾಗಿ ಉತ್ತಮ ಪ್ರದರ್ಶನವನ್ನು ನೀಡಿದ್ದರು. ಈ ಸರಣಿಯಲ್ಲಿ ಗಾಯಗೊಂಡ ನೆಹ್ರಾ ಅವರಿಗೆ ವೆಸ್ಟ್‍ಇಂಡಿಸ್ ಹಾಗೂ ಶ್ರೀಲಂಕಾ ವಿರುದ್ಧ ಸರಣಿಗಳಿಂದ ಕೆಲವು ದಿನಗಳ ಕಾಲ ವಿಶ್ರಾಂತಿಯನ್ನು ನೀಡಲಾಗಿತ್ತು. ಪ್ರಸ್ತುತ ಅವರು ಸಂಪೂರ್ಣ ಫಿಟ್ ಆಗಿದ್ದು ಆಯ್ಕೆಯಾಗಿದ್ದಾರೆ ಎಂದು ಅಧಿಕಾರಿ ತಿಳಿಸಿದರು.

    ನೆಹ್ರಾ ಅವರು ಇದುವರೆಗೂ 26 ಟಿ-20 ಪಂದ್ಯಗಳನ್ನು ಆಡಿದ್ದು, 34 ವಿಕೆಟ್‍ಗಳನ್ನು ಪಡೆದಿದ್ದಾರೆ. ಮೈದಾನದಲ್ಲಿ ಉತ್ತಮ ಪ್ರದರ್ಶವನ್ನು ನೀಡಲು ವಯಸ್ಸಿಗೆ ಸಂಬಂಧವಿಲ್ಲ ಎಂದು 38 ವರ್ಷದ ನೆಹ್ರಾ ಸಾಬೀತುಪಡಿಸಿದ್ದಾರೆ. ನೆಹ್ರಾ ತಮ್ಮ ವೃತ್ತಿ ಬದುಕಿನಲ್ಲಿ ಎಂದೂ ಕೆಟ್ಟ ಪ್ರದರ್ಶನವನ್ನು ನೀಡಿ ತಂಡದಿಂದ ಹೊರಗುಳಿದಿರಲಿಲ್ಲ ಹೆಚ್ಚಿನ ಸಮಯ ಗಾಯ ಸಮಸ್ಯೆಯಿಂದ ತಂಡದಿಂದ ದೂರ ಉಳಿದಿದ್ದರು.

    https://publictv.in/where-is-yuvraj-singh-furious-fans-ask-bcci-after-veteran-cricketer-gets-t20i-snub/