Tag: ಆರಗ ಜ್ಞಾನೆಂದ್ರ

  • `ಕಾಂತಾರ’ ವಿವಾದದ ಬಗ್ಗೆ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ

    `ಕಾಂತಾರ’ ವಿವಾದದ ಬಗ್ಗೆ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ

    ಚಿತ್ರರಂಗದಲ್ಲಿ `ಕಾಂತಾರ’ (Kantara Film) ಭರ್ಜರಿಯಾಗಿ ಸೌಂಡ್ ಮಾಡುತ್ತಿದೆ. `ಕಾಂತಾರ’ ಆರ್ಭಟಕ್ಕೆ ಇತರೆ ಸಿನಿಮಾಗಳು ಡಲ್ ಹೊಡೆದಿದೆ. ದೈವ ಅಪ್ಪಟ ಕಥೆಗೆ ಸಿನಿಪ್ರೇಕ್ಷಕರು ಫಿದಾ ಆಗಿದ್ದಾರೆ. ಈ ನಡುವೆ ಭೂತಕೋಲ ಹಿಂದೂ ಸಂಸ್ಕೃತಿಯಲ್ಲ ಎಂಬ ಚೇತನ್ ಹೇಳಿಕೆ ವಿವಾದ ಸೃಷ್ಟಿಸಿದೆ. ಇದೀಗ ಚೇತನ್ ಹೇಳಿಕೆಯನ್ನ ನಾನು ಒಪ್ಪೋದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ (Araga Gnanendra) ಪ್ರತಿಕ್ರಿಯೆ ನೀಡಿದ್ದಾರೆ.

    ಚಂದನವನದಲ್ಲಿ ಸದ್ದು ಮಾಡುತ್ತಿರುವ ಕಾಂತಾರ ಸಿನಿಮಾಗೆ ಇಡೀ ಚಿತ್ರರಂಗವೇ ತಲೆಬಾಗಿದೆ. ಪರಭಾಷೆಯ ಸ್ಟಾರ್‌ಗಳು ಕೂಡ ಕನ್ನಡದ `ಕಾಂತಾರ’ ಸಿನಿಮಾವನ್ನು ಹಾಡಿಹೊಗಳಿದ್ದಾರೆ. ಹೀಗಿರುವಾಗ ನಟ ಚೇತನ್ ಮಾತಿಗೆ ಆರಗ ಜ್ಞಾನೇಂದ್ರ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ:BREAKING:`ಕಾಂತಾರ’ ಪಾರ್ಟ್ 2 ಬಗ್ಗೆ ಬಿಗ್ ಅಪ್‌ಡೇಟ್ ಕೊಟ್ರು ನಟ ಪ್ರಮೋದ್ ಶೆಟ್ಟಿ

    ಎಲ್ಲರಿಗೂ ವಾಕ್ ಸ್ವಾತಂತ್ರ‍್ಯ ಇರುತ್ತೆ ಮಾತಾಡಿಕೊಳ್ಳಲಿ  ಬೇಕಾದ್ರೆ. ಆದರೆ ಚೇತನ್‌ ಮಾತನ್ನ ನಾನು ಒಪ್ಪೋದಿಲ್ಲ ಎಂದು ಖಡಕ್‌ ಉತ್ತರ ಕೊಟ್ಟಿದ್ದಾರೆ. `ಕಾಂತಾರ’ (Kantara Film) ಸಿನಿಮಾ ನಾನು ನೋಡಿದೆ ತುಂಬಾ ಚೆನ್ನಾಗಿದೆ. ನಮ್ಮ ಮಲೆನಾಡಿನ ಸೊಗಡನ್ನ ತೋರಿಸಿದ್ದಾರೆ ಎಂದು ಹೇಳಿದ್ದಾರೆ. ಸಿನಿಮಾವೊಂದರ ಟ್ರೈಲರ್ ಲಾಂಚ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಗೃಹ ಸಚಿವ ಆರಗ ಜ್ಞಾನೇಂದ್ರ ಚೇತನ್ ವಿವಾದ ಕುರಿತು ಮಾತನಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಆರ್‌ಎಸ್‌ಎಸ್’ ದೇಶದ ಶ್ರೀಮಂತ ಎನ್‍ಜಿಓ, ಅದಕ್ಕೆ ಹಣ ಎಲ್ಲಿಂದ ಬರುತ್ತೆ?: ಬಿ.ಕೆ ಹರಿಪ್ರಸಾದ್

    ‘ಆರ್‌ಎಸ್‌ಎಸ್’ ದೇಶದ ಶ್ರೀಮಂತ ಎನ್‍ಜಿಓ, ಅದಕ್ಕೆ ಹಣ ಎಲ್ಲಿಂದ ಬರುತ್ತೆ?: ಬಿ.ಕೆ ಹರಿಪ್ರಸಾದ್

    ಬೆಂಗಳೂರು: ಆರ್‌ಎಸ್‌ಎಸ್ ದೇಶದ ಶ್ರೀಮಂತ ಎನ್‍ಜಿಓ ಆಗಿದ್ದು, ಅದಕ್ಕೆ ಹಣ ಎಲ್ಲಿಂದ ಬರುತ್ತದೆ ಎಂದು ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಪ್ರಶ್ನಿಸಿದ್ದಾರೆ.

    ಮಲ್ಲೇಶ್ವರಂನಲ್ಲಿ ಹಮ್ಮಿಕೊಳ್ಳಲಾಗಿದ್ದ ಪದರತಿಭಟನೆಯಲ್ಲಿ ಭಾಗವಹಿಸಿ ಸಚಿವರಾದ ಅಶ್ವತ್ಥನಾರಾಯಣ್ ಮೇಲೆ ವಾಗ್ದಾಳಿ ನಡೆಸಿದ ಅವರು, ಬಿಜೆಪಿ ಸರ್ಕಾರ 40% ಕಮಿಷನ್ ಸರ್ಕಾರವಾಗಿದೆ. ಪ್ರತಿಯೊಂದು ಯೋಜನೆಯಲ್ಲಿ ಮಂತ್ರಿಗಳಿಗೆ ಕಮಿಷನ್ ಹೋಗುತ್ತಿದೆ. ಮಲ್ಲೇಶ್ವರಂನಲ್ಲಿ ಪ್ರತಿಯೊಂದು ಕಾಮಗಾರಿಗಳಲ್ಲಿ ಅಶ್ವತ್ಥ ನಾರಾಯಣನಿಗೆ ಕಮಿಷನ್ ಹೋಗುತ್ತಿದೆ. ಮಲ್ಲೇಶ್ವರಂನ ಬಹುತೇಕ ಗುತ್ತಿಗೆದಾರರು ಸಚಿವರ ಸಂಬಂಧಿಗಳೇ ಇದ್ದಾರೆ. ಈಗ ಪಿಎಸ್‍ಐ ನೇಮಕಾತಿಯಲ್ಲಿ ಸಚಿವರ ಸಹೋದರನೇ ಭಾಗಿಯಾಗಿರುವ ಗಂಭೀರ ಆರೋಪ ಕೇಳಿ ಬಂದಿದೆ ಎಂದು ಆರೋಪ ವ್ಯಕ್ತಪಡಿಸಿದರು. ಇದನ್ನೂ ಓದಿ: 10 ದಿನಗಳ ಬಂಧನದ ಬಳಿಕ ರಾಣಾ ದಂಪತಿಗೆ ಜಾಮೀನು

    ಅಶ್ವತ್ಥ ನಾರಾಯಣ್ ಮಲ್ಲೇಶ್ವರಂನಲ್ಲಿ ಗುಳಂ ನಾರಾಯಣ ಎಂದು ಖ್ಯಾತಿ ಪಡೆದಿದ್ದಾರೆ. ಭ್ರಷ್ಟಾಚಾರಕ್ಕೆ ಆರ್‍ಎಸ್‍ಎಸ್‍ನ ಕುಮ್ಮಕ್ಕು ಇದೆ. ಅದರ ಹಣದಿಂದಲೇ ಶ್ರೀಮಂತ ಎನ್‍ಜಿಓ ಆಗಿ ಆರ್‍ಎಸ್‍ಎಸ್ ಬೆಳೆಯುತ್ತಿದೆ. ಪ್ರತಿಯೊಬ್ಬ ಸಚಿವರ ಬಳಿ ಆರ್‍ಎಸ್‍ಎಸ್‍ನ ಒಎಸ್‍ಡಿ ಇದ್ದಾರೆ. ಹಣ ಕಲೆಕ್ಷನ್ ಮಾಡುವುದೇ ಒಎಸ್‍ಡಿಗಳ ಪೂರ್ಣಾವಧಿಯ ಕೆಲಸವಾಗಿದೆ. ಹಾವಿನಪುರದಲ್ಲಿ ಕುಳಿತು ಅವರು ಹಣ ಕಲೆಕ್ಷನ್ ಮಾಡುತ್ತಾರೆ ಎಂದರು.

    ನಿನ್ನೆ ಅಮಿತ್ ಶಾ ಬಂದಿದ್ದರು ಸಹ ಬಿಜೆಪಿಯವರು ಯಾವುದೇ ಕ್ರಮ ಕೈಗೊಂಡಿಲ್ಲ. 40% ಕಮಿಷನ್ ಹಾಗೂ ಅಕ್ರಮ ಪಿಎಸ್‍ಐ ನೇಮಕಾತಿಯಲ್ಲಿ ಅಮಿತ್ ಶಾ ಪಾಲು ತೆಗೆದುಕೊಳ್ಳಲು ಬಂದಿದ್ದಾರೆ. ಶಾ ಆಗಮನದಿಂದ ರಾಜ್ಯದ ಜನರಿಗೆ ನಯಾಪೈಸೆ ಪ್ರಯೋಜನವಾಗಿಲ್ಲ. ಈ ಕೂಡಲೇ ಅಶ್ವಥ್ ನಾರಾಯಣ್ ರಾಜೀನಾಮೆ ನೀಡಬೇಕು ಎಂದು ಹೇಳಿದರು. ಇದನ್ನೂ ಓದಿ: ಶಿವಸೇನೆಗೆ ಹಿಂದುತ್ವವನ್ನು ಕಲಿಸುವ ಅಗತ್ಯವಿಲ್ಲ: ಸಂಜಯ್ ರಾವತ್

    ಸ್ವ-ಇಲಾಖೆಯಲ್ಲಿ ಗಂಭೀರವಾದ ಆರೋಪ ಎದುರಿಸುತ್ತಿರುವ ಗೃಹ ಸಚಿವ ಆರಗ ಜ್ಞಾನೆಂದ್ರ ರಾಜೀನಾಮೆ ನೀಡಬೇಕು. ಸಂಪೂರ್ಣವಾಗಿ ತನಿಖೆಯಾಗಬೇಕು, ಗೃಹ ಸಚಿವರ ಮೇಲೆ ತನಿಖೆ ನಡೆಯಬೇಕು ಎಂದರು.

     

  • ಸಂತೋಷ್ ಪ್ರಕರಣ ಎಲ್ಲಾ ಆ್ಯಂಗಲ್‌ನಲ್ಲೂ ತನಿಖೆಯಾಗುತ್ತಿದೆ: ಆರಗ ಜ್ಞಾನೇಂದ್ರ

    ಸಂತೋಷ್ ಪ್ರಕರಣ ಎಲ್ಲಾ ಆ್ಯಂಗಲ್‌ನಲ್ಲೂ ತನಿಖೆಯಾಗುತ್ತಿದೆ: ಆರಗ ಜ್ಞಾನೇಂದ್ರ

    ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಎಲ್ಲಾ ರೀತಿಯಿಂದಲೂ ತನಿಖೆ ನಡೆಸಲು ತಿಳಿಸಿದ್ದಾರೆ. ಕಮೀಷನ್ ಕೊಟ್ಟಿದ್ದು ಯಾರು, ತೆಗೆದುಕೊಂಡಿದ್ದು ಯಾರು ಎಂಬುದು ಸಾಬೀತು ಆಗಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

    ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಚಿವ, ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಹೋಟೆಲ್‌ಗೆ ಪೊಲೀಸರು ಭೇಟಿ ನೀಡಿದ್ದಾರೆ. ಎಫ್‌ಎಸ್‌ಎಲ್ ತಂಡ ಹಾಗೂ ಸಂತೋಷ್ ಪಾಟೀಲ್ ಕುಟುಂಬಸ್ಥರು ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಹೋಟೆಲ್‌ನ ಕೊಠಡಿ ತೆಗೆಯುವುದಾಗಿ ಪೊಲೀಸರು ತಿಳಿಸಿದ್ದಾರೆ ಎಂದರು. ಇದನ್ನೂ ಓದಿ: ಈಶ್ವರಪ್ಪ ರಾಜೀನಾಮೆಗೆ ಒತ್ತಾಯ- ಬಿಎಸ್‌ವೈಗೆ ಫೋನ್ ಕರೆ ಮಾಡಿ ಬೊಮ್ಮಾಯಿ ಮಾತುಕತೆ

    ನಾನು ಕೂಡಾ ಘಟನೆ ಬಳಿಕ ಉಡುಪಿಯ ಎಸ್‌ಪಿ ಜೊತೆ ಮಾತನಾಡಿದ್ದೇನೆ. ಘಟನೆ ಕುರಿತು ಎಲ್ಲಾ ಆ್ಯಂಗಲ್‌ನಲ್ಲೂ ತನಿಖೆ ನಡೆಸುವಂತೆ ಸೂಚಿಸಿದ್ದೇನೆ. ಕಾಂಗ್ರೆಸ್‌ನವರು ಏನೋ ಹೇಳುತ್ತಾರೆ ಎಂದು ಯಾರನ್ನೂ ಅರೆಸ್ಟ್ ಮಾಡುವುದು ಅಸಾಧ್ಯ. ತನಿಖೆ ಬಳಿಕ ಪೊಲೀಸರು ತಮ್ಮ ಕಾರ್ಯ ಮಾಡುತ್ತಾರೆ. ಸಂತೋಷ್ ಡೆತ್ ನೋಟ್ ಬರೆದಿಟ್ಟಿರುವ ಬಗ್ಗೆ ನನಗೆ ತಿಳಿದಿಲ್ಲ. ಅವರು ಸೋಷಿಯಲ್ ಮೀಡಿಯಾದಲ್ಲಿ ಏನೋ ಮೆಸೇಜ್ ಹಾಕಿದ್ದರಂತೆ. ನನ್ನ ಜೊತೆ ಇಬ್ಬರು ಸ್ನೇಹಿತರನ್ನು ಕರೆದುಕೊಂಡು ಬಂದಿದ್ದೇನೆ, ಅವರಿಗೂ ನನ್ನ ಸಾವಿಗೂ ಸಂಬಂಧವಿಲ್ಲ ಎಂದು ಬರೆದಿರುವಬಗ್ಗೆ ಕೇಳಿದ್ದೇನೆ. ಆ ದೃಷ್ಟಿಯಿಂದಲೂ ತನಿಖೆ ನಡೆಯುತ್ತದೆ ಎಂದರು. ಇದನ್ನೂ ಓದಿ: ಸಾಲ ಸೋಲ ಹೆಚ್ಚಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು: ಈಶ್ವರಪ್ಪ ಪರ ಯತ್ನಾಳ್ ಬ್ಯಾಟಿಂಗ್

    ಈ ಘಟನೆಯಿಂದ ಸರ್ಕಾರಕ್ಕೆ ಕೆಟ್ಟ ಹೆಸರೋ ಅಥವಾ ಒಳ್ಳೆ ಹೆಸರು ಬರುತ್ತದೋ ಎಂಬುದು ತನಿಖೆಯಿಂದ ಗೊತ್ತಾಗುತ್ತದೆ. ಯಾರೋ ಆರೋಪ ಮಾಡಿದ ಕೂಡಲೆ ಸಾಬೀತು ಆಗುವುದಿಲ್ಲ. ಕಮಿಷನ್ ಯಾರು ಕೊಟ್ಟಿದ್ದು, ಯಾರು ತೆಗೆದುಕೊಂಡಿದ್ದು ಎಂಬುದು ಮೊದಲು ಸಾಬೀತು ಆಗಬೇಕು. ಇದೆಲ್ಲಾ ಸಾಬೀತು ಆದರೆ ಅವರ ಮೇಲೆ ಕ್ರಮ ಕೈಗೊಳ್ಳಬಹುದು ಎಂದರು.