ಸ್ಯಾಂಡಲ್ವುಡ್ ನಟ ಧ್ರುವ ಸರ್ಜಾ (Dhruva Sarja) ಅವರ ವಿಶೇಷ ಫೋಟೋವೊಂದು ಇಂಟರ್ನೆಟ್ನಲ್ಲಿ ಸದ್ದು ಮಾಡುತ್ತಿದೆ. ಧ್ರುವ, ರಿಯಲ್ ಸ್ಟಾರ್ ಉಪೇಂದ್ರ, ಶಿಲ್ಪಾ ಶೆಟ್ಟಿ, ಮಾಲಾಶ್ರೀ (Malashree) ಜೊತೆಯಾಗಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳ ತಲೆಗೆ ಹುಳ ಬಿಟ್ಟಿದ್ದಾರೆ. ಈ ತಾರೆಯರ ಸಮಾಗಮದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಧ್ರುವ ಸರ್ಜಾ ನಟನೆಯ ‘ಕೆಡಿ’ (KD Film) ಸಿನಿಮಾದಲ್ಲಿ ಶಿಲ್ಪಾ ಶೆಟ್ಟಿ ನಟಿಸುತ್ತಿದ್ದಾರೆ. ಇದು ಹಳೆಯ ಸಮಾಚಾರ ಆದರೆ ಇವರ ಜೊತೆ ಉಪೇಂದ್ರ ದಂಪತಿ, ಮಾಲಾಶ್ರೀ ಮತ್ತು ‘ಕಾಟೇರ’ ಸುಂದರಿ ಆರಾಧನಾ ಕೂಡ ಕಾಣಿಸಿಕೊಂಡಿದ್ದಾರೆ. ಕೆಡಿ ಚಿತ್ರದ ನಿರ್ಮಾಪಕರು ಕೂಡ ಈ ವೇಳೆ ಹಾಜರಿ ಹಾಕಿದ್ದಾರೆ. ಹಾಗಾಗಿ ಯಾವ ವಿಚಾರವಾಗಿ ಎಲ್ಲರೂ ಒಟ್ಟಾಗಿದ್ದಾರೆ ಎಂದು ಈಗ ಚರ್ಚೆ ಶುರುವಾಗಿದೆ.

ಎಲ್ಲರೂ ಜೊತೆಯಾಗಿ ಹೊಸ ಸಿನಿಮಾ ಮಾಡ್ತಿದ್ದಾರಾ? ಅಥವಾ ಕೆಡಿ ಚಿತ್ರದ ಪಾರ್ಟಿಯಲ್ಲಿ ಜೊತೆಯಾದ್ರಾ ಎಂಬುದರ ಬಗ್ಗೆ ಕ್ಲ್ಯಾರಿಟಿ ಇಲ್ಲ. ಇದರ ಜೊತೆಗೆ ಧ್ರುವ ಸರ್ಜಾ ಪತ್ನಿ ಪ್ರೇರಣಾ ಕೂಡ ಶಿಲ್ಪಾ ಶೆಟ್ಟಿ ಜೊತೆಗಿನ ವಿಶೇಷ ಫೋಟೋ ಶೇರ್ ಮಾಡಿದ್ದಾರೆ. ಇದೀಗ ಸ್ಟಾರ್ ಕಲಾವಿದರು ಒಟ್ಟಾಗಿರೋದು ಫ್ಯಾನ್ಸ್ಗೆ ಖುಷಿ ಕೊಟ್ಟಿದೆ. ಇದನ್ನೂ ಓದಿ:ತಮಿಳಿನತ್ತ ರೂಪೇಶ್ ಶೆಟ್ಟಿ- ಯೋಗಿ ಬಾಬು ಜೊತೆ ‘ಬಿಗ್ ಬಾಸ್’ ವಿನ್ನರ್
ಅಂದಹಾಗೆ, ‘ಕೆಡಿ’ ಚಿತ್ರಕ್ಕೆ ಡೈರೆಕ್ಟರ್ ಪ್ರೇಮ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಸಿನಿಮಾದಲ್ಲಿ ಧ್ರುವ ಸರ್ಜಾ ಜೊತೆ ರೀಷ್ಮಾ ನಾಣಯ್ಯ, ರಮೇಶ್ ಅರವಿಂದ್, ರವಿಚಂದ್ರನ್, ಶಿಲ್ಪಾ ಶೆಟ್ಟಿ, ಸಂಜಯ್ ದತ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಸದ್ಯದಲ್ಲೇ ರಿಲೀಸ್ ಬಗ್ಗೆ ಹೆಚ್ಚಿನ ಮಾಹಿತಿ ಸಿಗಲಿದೆ.


ರಾಕ್ಲೈನ್ ವೆಂಕಟೇಶ್ ನಿರ್ಮಾಣದ ‘ಕಾಟೇರ’ ಸಿನಿಮಾ ಸಕ್ಸಸ್ ಕಂಡಿರೋ ಬೆನ್ನಲ್ಲೇ ಮಾಧ್ಯಮದ ಜೊತೆ ದರ್ಶನ್ ಮಾತನಾಡಿದ್ದಾರೆ. ಜಾತಿ ಒಳಗೊಂಡಂತೆ ಸಿನಿಮಾದ ಒಳಗೆ ಮತ್ತಷ್ಟು ಭಿನ್ನ ಕಥೆ ಇದೆ. ಕಥೆ ಸೆಲೆಕ್ಷನ್ ಹೇಗೆ ಮಾಡಿದ್ರಿ ಎಂದು ದರ್ಶನ್ಗೆ (Darshan) ಕೇಳಲಾಯಿತು.
‘ಕಾಟೇರ’ (Katera Film) ಕಥೆ ಕೇಳುವಾಗ ಚಂದಮಾಮನ ಕಥೆ ಕೇಳಿದಂತೆ ಕೇಳಿದ್ದೀನಿ. ಸಿನಿಮಾದಲ್ಲಿ ಒಳ್ಳೆಯ ಮೆಸೇಜ್ ಇದೆ. ಇವತ್ತು ಜನ ಮಾತನಾಡೋದೇನು? ಗಂಡಸು ಬೆವರು ಸುರಿಸಬೇಕು. ಜೊಲ್ಲು ಸುರಿಸಬಾರದು ಅಂತಾರೆ. ಇದರಲ್ಲಿ ಅದೆಷ್ಟು ಅರ್ಥ ಇದೆ. ಸಮಾಜದಲ್ಲಿ ನಮ್ಮ ಸುತ್ತಮುತ್ತ ನಡೆಯುತ್ತಿರುವ ಕಥೆನೇ ಇದು ಎಂದು ದರ್ಶನ್ ಮಾತನಾಡಿದ್ದಾರೆ.

‘ಕಾಟೇರ’ ಸಿನಿಮಾವನ್ನು ಮಗಳ ಜೊತೆಯೇ ಮಾಲಾಶ್ರೀ (Malashree) ವೀಕ್ಷಿಸಿ ಸಿನಿಮಾ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ತುಂಬಾ ಖುಷಿ ಆಗಿದೆ ಮಗಳ ಆ್ಯಕ್ಟಿಂಗ್ ನೋಡಿ, ಏನು ಹೇಳಬೇಕು ಗೊತ್ತಾಗುತ್ತಿಲ್ಲ. ಒಂದೇ ಸಿನಿಮಾದಲ್ಲಿ ಎಲ್ಲಾ ತರಹ ನಟಿಸಿ ತೋರಿದ್ದಾಳೆ. ತುಂಬಾ ಖುಷಿ ಆಗ್ತಿದೆ. ಅವಳಿಗೆ ಸಿನಿಮಾರಂಗದಲ್ಲಿ ಫ್ಯೂಚರ್ ಇದೆ ಎಂದು ಮಾಲಾಶ್ರೀ ಭಾವುಕರಾಗಿದ್ದಾರೆ.




ನಟಿ ಮಾಲಾಶ್ರೀ ಪಡ್ಡೆಹುಡುಗರ ಕನಸಿನ ರಾಣಿಯಾಗಿ ಮರೆದವರು. ಇಂದಿಗೂ ಸಿನಿಮಾಗಳಲ್ಲಿ ನಟಿಸುತ್ತಾ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಇದೀಗ ಜ್ಯೂ.ಮಾಲಾಶ್ರೀ ಆರಾಧಾನಾ (Aradhana Ram) ಕೂಡ ಸಿನಿಮಾಗೆ ಎಂಟ್ರಿ ಕೊಡ್ತಿದ್ದಾರೆ. ಈ ಬೆನ್ನಲ್ಲೇ ದೇವರ ಸನ್ನಿಧಿಗೆ ಮಾಲಾಶ್ರೀ-ಆರಾಧಾನಾ ಭೇಟಿ ನೀಡಿದ್ದಾರೆ. 5ಕ್ಕೂ ಹೆಚ್ಚು ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದಾರೆ.







‘ಕಾಟೇರ’ ಸಿನಿಮಾದಲ್ಲಿ ಮೊದಲಿನಿಂದ ಕಡೆ ತನಕ ಅಶ್ಲೀಲತೆ ಇಲ್ಲ. ಸಭ್ಯವಾದ ಸಂಭಾಷನೆ ಇದೆ. ಚಿತ್ರಕ್ಕೆ ಏನೂ ಬೇಕೋ ನಿರ್ಮಾಪಕರು ಒದಗಿಸಿದ್ದಾರೆ. ಇದು ಒಬ್ಬರ ಸಿನಿಮಾ ಅಲ್ಲ, ಪ್ಲೇಟ್ ತೊಳೆಯೋನಿಂದ ಹಿಡಿದು ಎಲ್ಲರಿಗೂ ಈ ಸಿನಿಮಾ ಸೇರಲಿದೆ ಎಂದು ನಟ ಮಾತನಾಡಿದ್ದರು.
