ಬಾಲಿವುಡ್ ನಟಿ ಐಶ್ವರ್ಯಾ ರೈ (Aishwarya Rai) ಪುತ್ರಿ ಆರಾಧ್ಯ (Aradhya) ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಮಗಳ ಬರ್ತ್ಡೇಯನ್ನು ವಿಶೇಷವಾಗಿ ನಟಿ ಆಚರಿಸಿದ್ದಾರೆ. ಮಗಳು ಆರಾಧ್ಯ ಬರ್ತ್ಡೇ ಸಂಭ್ರಮದಲ್ಲಿ ಅಭಿಷೇಕ್ ಭಾಗಿಯಾಗದೇ ಇರೋದು ನೆಟ್ಟಿಗರ ಚರ್ಚೆಗೆ ಗ್ರಾಸವಾಗಿದೆ. ಅಭಿಷೇಕ್ ಮತ್ತು ಐಶ್ವರ್ಯಾಗೆ ಡಿವೋರ್ಸ್ ಆಗಿದ್ಯಾ? ಎಂಬ ಅನುಮಾನ ಅಭಿಮಾನಿಗಳಲ್ಲಿ ಮೂಡಿದೆ. ಇದನ್ನೂ ಓದಿ:ಗುಂಪು ಕಟ್ಟಿಕೊಂಡು ಬರಲ್ಲ, ಸಿಂಗಲ್ ಸಿಂಹದ ರೀತಿ ಹೊಡೆಯುತ್ತೇನೆ: ಗುಡುಗಿದ ಚೈತ್ರಾ
ನಟಿ ಐಶ್ವರ್ಯಾ ಹಂಚಿಕೊಂಡ ಪೋಸ್ಟ್ನಲ್ಲಿ, ಅಜ್ಜ ದಿವಂಗತ ಕೃಷ್ಣರಾಜ್ ರೈ ಫೋಟೋಗೆ ಮುಂದೆ ಗೌರವದಿಂದ ಆರಾಧ್ಯ ನಮಸ್ಕರಿಸಿದ್ದಾರೆ. ಇನ್ನೊಂದು ಫೋಟೋದಲ್ಲಿ ಬೃಂದ್ಯಾ ರೈ ಜೊತೆ ನಟಿ, ಆರಾಧ್ಯ ಪೋಸ್ ಕೊಟ್ಟಿದ್ದಾರೆ. ಆರಾಧ್ಯರ ಬಾಲ್ಯದ ಫೋಟೋ, ಬರ್ತ್ಡೇ ಆಚರಣೆಯ ಫೋಟೋವನ್ನು ಹಂಚಿಕೊಂಡಿದ್ದಾರೆ.
ನನ್ನ ಮಗಳಿಗೆ ಹುಟ್ಟುಹಬ್ಬದ ಶುಭಾಶಯಗಳು. ಇಬ್ಬರೂ ನನ್ನ ಜೀವನದ ಶಾಶ್ವತ ಪ್ರೀತಿ, ಅಪ್ಪ- ಅಜ್ಜ ಮತ್ತು ನನ್ನ ಪ್ರೀತಿಯ ಆರಾಧ್ಯ. ನನ್ನ ಹೃದಯ ನೀನು ಎಂದು ಬರೆದುಕೊಂಡಿದ್ದಾರೆ. ಐಶ್ವರ್ಯಾ ಹಂಚಿಕೊಂಡಿರುವ ಪೋಸ್ಟ್ನಲ್ಲಿ ಅಭಿಷೇಕ್ ಮತ್ತು ಬಚ್ಚನ್ ಪರಿವಾರದವರು ಇಲ್ಲದೇ ಇರೋದು ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ. ಇಲ್ಲಿ ಏನೋ ಸರಿಯಿಲ್ಲ. ಐಶ್ವರ್ಯಾ ಮತ್ತು ಅಭಿಷೇಕ್ (Abhishek Bachchan) ಜೊತೆಯಾಗಿಲ್ಲ ಎಂದೆಲ್ಲಾ ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ.
ಬಾಲಿವುಡ್ ನಟಿ ಐಶ್ವರ್ಯ ರೈ ಬಚ್ಚನ್ (Aishwarya Rai) ಪುತ್ರಿ ಆರಾಧ್ಯ (Aradhya Bachchan) ನಯಾ ಲುಕ್ ನೋಡಿದ್ರೆ ನಿಜಕ್ಕೂ ನೀವು ಬೆರಗಾಗುತ್ತೀರಾ. ಅಷ್ಟರ ಮಟ್ಟಿಗೆ ಆರಾಧ್ಯ ಬದಲಾಗಿದ್ದಾರೆ. ಅಮ್ಮನಂತೆಯೇ ಮಗಳು ಮುದ್ದಾಗಿದ್ದಾರೆ. ಸದ್ಯ ಬಚ್ಚನ್ ಕುಟುಂಬದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.
ಮುಖೇಶ್ ಅಂಬಾನಿ ಮಗ ಅನಂತ್ ಪ್ರೀ-ವೆಡ್ಡಿಂಗ್ ಕಾರ್ಯಕ್ರಮದಲ್ಲಿ ಅಭಿಷೇಕ್ ಬಚ್ಚನ್- ಐಶ್ವರ್ಯ ರೈ ಜೊತೆ ಮಗಳು ಆರಾಧ್ಯ ಕೂಡ ಹಾಜರಿ ಹಾಕಿದ್ದು, ಕಾರ್ಯಕ್ರಮದಲ್ಲಿ ಎಂಜಾಯ್ ಮಾಡಿದ್ದಾರೆ.
12 ವರ್ಷದ ಆರಾಧ್ಯ ಬೇಬಿ ಪಿಂಕ್ ಡ್ರೆಸ್ನಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಕೂದಲನ್ನು ಇಳಿ ಬಿಟ್ಟು ಅಮ್ಮನ ಜೊತೆ ಬರುವಾಗ ಎಲ್ಲರ ಕಣ್ಣುಗಳು ಮಾಜಿ ವಿಶ್ವಸುಂದರಿಗಿಂತ ಆರಾಧ್ಯ ಮೇಲೆಯೇ ಇತ್ತು.
ಬಹಳ ಖುಷಿಯಿಂದ ನಗುತ್ತ ಪಾಪಾರಾಜಿಗಳತ್ತ ನೋಡುತ್ತ ಕ್ಯಾಮೆರಾ ಸ್ಮೈಲ್ ಮಾಡಿ ಮುಂದೆ ಹೋಗಿದ್ದಾರೆ. ಅಂಬಾನಿ ಮನೆ ಮಗನ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಜಾಮ್ನಗರಕ್ಕೆ ಗುಡ್ ಬೈ ಹೇಳಿದ್ದಾರೆ.
ಅನಂತ್- ರಾಧಿಕಾ ಹಲವು ವರ್ಷಗಳಿಂದ ಪರಿಚಿತರು. ಆ ಪರಿಚಯವೇ ಪ್ರೀತಿಗೆ ತಿರುಗಿ ಇದೀಗ ಮದುವೆಯ ಮುದ್ರೆ ಒತ್ತಲು ಈ ಜೋಡಿ ಸಜ್ಜಾಗಿದ್ದಾರೆ. ಗುರುಹಿರಿಯರ ಸಮ್ಮತಿಯ ಮೇರೆಗೆ ಈ ಜೋಡಿ ಮದುವೆಯಾಗುತ್ತಿದ್ದಾರೆ.
ಅನಂತ್ ಮತ್ತು ರಾಧಿಕಾ ಮದುವೆ ಇದೇ ಜೂನ್ 12ಕ್ಕೆ ಫಿಕ್ಸ್ ಆಗಿದೆ. ಮಾರ್ಚ್ 1ರಿಂದ 3ರವರೆಗೆ ಅದ್ಧೂರಿಯಾಗಿ ತೆರೆಬಿದ್ದಿದೆ. ಅನಂತ್ ಪ್ರೀ-ವೆಡ್ಡಿಂಗ್ ಕಾರ್ಯಕ್ರಮದಲ್ಲಿ ಸಂಗೀತ, ನೃತ್ಯ ಹೀಗೆ ವಿವಿಧ ರೀತಿಯ ಪ್ರದರ್ಶನಗಳು ರಂಗೇರಿದ್ದು, ದೇಶ-ವಿದೇಶದ ಸೆಲೆಬ್ರಿಟಿಗಳು ಭಾಗಿಯಾಗಿದ್ದರು.
ತೆಲುಗಿನ ಖ್ಯಾತ ನಟ ವಿಜಯ್ ದೇವರಕೊಂಡ (Vijay Devarakonda) ಮತ್ತು ಸಮಂತಾ (Samantha) ಕಾಂಬಿನೇಷನ್ ನ ‘ಖುಷಿ’ (Khushi) ಸಿನಿಮಾದ ಟ್ರೈಲರ್ (Trailer) ರಿಲೀಸ್ ಕಾರ್ಯಕ್ರಮ ಇತ್ತೀಚೆಗಷ್ಟೇ ಹೈದರಾಬಾದ್ ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಹಲವಾರು ವಿಷಯಗಳನ್ನು ಹಂಚಿಕೊಂಡರ ವಿಜಯ್ ದೇವರಕೊಂಡ. ಸಮಂತಾ ಈ ಸಿನಿಮಾದಲ್ಲಿ ಆರಾಧ್ಯ ಹೆಸರಿನ ಪಾತ್ರ ಮಾಡಿದ್ದು, ಸಿನಿಮಾ ಕಥೆ ಕೇಳಿದಾಗ ಮೊದಲು ನೆನಪಾಗಿದ್ದ ನಟಿ ಸಮಂತಾ ಎಂದರು ವಿಜಯ್.
‘ಖುಷಿ’ ಸಿನಿಮಾದ ಟ್ರೈಲರ್ ಮೆಚ್ಚುಗೆಗೆ ಪಾತ್ರವಾಗಿದ್ದು ಕಾಶ್ಮೀರಕ್ಕೆ ಹೋಗುವ ಕ್ರಿಶ್ಚಿಯನ್ ಯುವಕ ವಿಪ್ಲವ್ ಹಾಗೂ ಮುಸ್ಲಿಂ ಯುವತಿ ಬೇಗಂ ಭೇಟಿಯಾಗುತ್ತದೆ. ಆಕೆಯನ್ನು ನೋಡಿ ನಾಯಕ ಪ್ರೀತಿಯಲ್ಲಿ ಬೀಳುತ್ತಾನೆ. ನಂತರ ಆಕೆ ಮುಸ್ಲಿಂ ಅಲ್ಲ ಬ್ರಾಹ್ಮಣ ಕುಟುಂಬದ ಯುವತಿ ಅನ್ನೋದು ಗೊತ್ತಾಗುತ್ತದೆ. ಅಂದರೆ ಇದು ಕ್ರಿಶ್ಚಿಯನ್ ಯುವಕ ಹಾಗೂ ಹಿಂದೂ ಯುವತಿಯ ಪ್ರೇಮಕಥೆ ಅನ್ನೋದು ಅರ್ಥವಾಗುತ್ತದೆ.
ಇಬ್ಬರ ಮನೆಯಲ್ಲೂ ಮದುವೆಗೆ ಒಪ್ಪುವುದಿಲ್ಲ. ನಾಯಕಿಯ ತಂದೆಯಂತೂ ಇವರಿಬ್ಬರು ಮದುವೆ ಆದರೆ ಭಾರೀ ಸಮಸ್ಯೆಗಳಾಗುತ್ತದೆ ಎಂದು ಭವಿಷ್ಯ ನುಡಿಯುತ್ತಾನೆ. ಆದರೆ ಅದನ್ನೆಲ್ಲಾ ಮೀರಿ ಇಬ್ಬರು ಮದುವೆ ಆಗಿ ಒಂದು ವರ್ಷ ನಾವು ಆದರ್ಶ ದಂಪತಿಗಳಾಗಿ ಬದುಕಿ ತೋರಿಸುತ್ತೇವೆ ಎಂದು ಸವಾಲು ಹಾಕಿ ಮದುವೆ ಆಗುತ್ತಾರೆ. ಮದುವೆ ನಂತರ ಇಬ್ಬರ ನಡುವೆ ನಡೆಯುವ ಜಗಳ ಶುರುವಾಗುತ್ತದೆ. ಆಗಿದ್ದರೆ ಮುಂದೇನಾಗುತ್ತದೆ ಅನ್ನೋವುದನ್ನು ನೀವು ಸಿನಿಮಾದಲ್ಲಿ ನೋಡಬೇಕು. ಇದನ್ನೂ ಓದಿ:ನಾನಿನ್ನೂ ಸಿಂಗಲ್, ದಿಶಾ ಜೊತೆಗಿನ ಬ್ರೇಕಪ್ ಬಗ್ಗೆ ಟೈಗರ್ ಶ್ರಾಫ್ ಸ್ಪಷ್ಟನೆ
ರೊಮ್ಯಾಂಟಿಕ್ ಎಂಟರ್ಟೈನರ್ ಸಿನಿಮಾವಾಗಿರುವ ಖುಷಿಗೆ ಶಿವ ನಿರ್ವಣ ಆಕ್ಷನ್ ಕಟ್ ಹೇಳಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ಸಂಸ್ಥೆ ಬಹಳ ಅದ್ಧೂರಿಯಾಗಿ ಸಿನಿಮಾ ನಿರ್ಮಾಣ ಮಾಡಿದೆ. ಜಯರಾಂ, ಸಚಿನ್ ಖೇಡೇಕರ್, ಮುರಳಿ ಶರ್ಮಾ, ಜ್ಯೂಲಿ ಲಕ್ಷ್ಮಿ, ಅಲಿ, ರೋಹಿಣಿ, ವೆನ್ನೆಲಾ ಕಿಶೋರ್ ಸೇರಿದಂತೆ ದೊಡ್ಡ ತಾರಾಗಣ ಚಿತ್ರದಲ್ಲಿದೆ.
ವಿಜಯ್ ದೇವರಕೊಂಡ ಹಾಗೂ ಸಮಂತಾ ನಟನೆಯ ‘ಖುಷಿ’ ಪ್ಯಾನ್ ಇಂಡಿಯಾ ಸಿನಿಮಾ. ತೆಲುಗು ಸೇರಿದಂತೆ ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿಯೂ ಬಿಡುಗಡೆಯಾಗಲಿದೆ. ಸೆಪ್ಟೆಂಬರ್ 1ರಂದು ವಿಶ್ವಾದ್ಯಂತ ಚಿತ್ರ ತೆರೆಗೆ ಬರಲಿದೆ. ಹೇಷಂ ವಾಹೆಬ್ ಸಂಗೀತ, ಜಿ ಮುರಳಿ ಛಾಯಾಗ್ರಹಣ, ಪ್ರವೀಣ್ ಪುಡಿ ಸಂಕಲನ ಚಿತ್ರಕ್ಕಿದೆ.
ತೆಲುಗಿನ ಖ್ಯಾತ ನಟ ವಿಜಯ್ ದೇವರಕೊಂಡ ಮದುವೆ (Marriage) ವಿಚಾರ ಹಲವು ಬಾರಿ ಚರ್ಚೆಗೆ ಬಂದಿದೆ. ಅದರಲ್ಲೂ ಕನ್ನಡತಿ ರಶ್ಮಿಕಾ ಮಂದಣ್ಣ ಜೊತೆ ಲವ್ವಿಡವ್ವಿ ವಿಚಾರ ಬಂದಾಗೆಲ್ಲ ಮದುವೆ ಬಗ್ಗೆ ಪ್ರಶ್ನೆಗಳನ್ನು ಮಾಡಲಾಗಿದೆ. ಇದೇ ಮೊದಲ ಬಾರಿಗೆ ವಿಜಯ್ ದೇವರಕೊಂಡ ತಮ್ಮ ಮದುವೆಯ ಬಗ್ಗೆ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ. ತಮ್ಮ ಮದುವೆಗೆ ಹೇಗಿರಬೇಕು ಎಂದು ಅವರು ಹೇಳಿಕೊಂಡಿದ್ದಾರೆ.
ಸಮಂತಾ ಮತ್ತು ವಿಜಯ್ ನಟನೆಯ ಖುಷಿ ಸಿನಿಮಾದ ಹಾಡೊಂದು ಬಿಡುಗಡೆಯಾಗಿದೆ. ‘ಆರಾಧ್ಯ..’ (Aradhya) ಎಂದು ಶುರುವಾಗುವ ಹಾಡಿನಲ್ಲಿ ಸಮಂತಾ ಜೊತೆ ವಿಜಯ್ ಖುಷಿ ಖುಷಿಯಾದ ಕ್ಷಣಗಳನ್ನು ಕಳೆದಿದ್ದಾರೆ. ತುಂಟಾಟ, ರೊಮ್ಯಾನ್ಸ್, ಪ್ರೀತಿ, ಪ್ರೇಮ ಹೀಗೆ ಎಲ್ಲವೂ ಹದವಾಗಿ ಬೆರೆತಿದೆ. ಈ ಹಾಡನ್ನು ತೋರಿಸುವ ಮೂಲಕ ವಿಜಯ್, ನನ್ನ ಮದುವೆ ಮತ್ತು ಜೀವನ ಹೀಗೆಯೇ ಇರಬೇಕು ಎಂದು ಹೇಳಿಕೊಂಡಿದ್ದಾರೆ.
ಮದುವೆ ಬಗ್ಗೆ ನನಗೂ ನನ್ನದೇ ಆದ ಕನಸುಗಳು ಇವೆ. ಈ ಕನಸುಗಳು ಥೇಟ್ ಖುಷಿ ಸಿನಿಮಾದ ಹಾಡಿನಂತಿದೆ. ಒಂದು ವೇಳೆ ಮದುವೆ ಅಂತಾದರೆ, ಈ ಹಾಡಿನಂತಿಯೇ ನನ್ನ ಬದುಕು ಕೂಡ ಇರಲಿದೆ ಎಂದು ಮದುವೆ ವಿಚಾರ ಮಾತನಾಡಿದ್ದಾರೆ. ತಮ್ಮದೇ ಸಿನಿಮಾದ ಪಾತ್ರವೊಂದನ್ನು ಕನಸಾಗಿ ಅವರು ಸ್ವೀಕರಿಸಿದ್ದಾರೆ.
ಈ ಹಿಂದೆ ವಿಜಯ್ ದೇವರಕೊಂಡ ಹುಟ್ಟುಹಬ್ಬದ (Birthday) ದಿನದಂದು ಸ್ಪೆಷಲ್ ಆಗಿ ಖುಷಿ ಸಿನಿಮಾದ ಮೊದಲ ಹಾಡು (Song) ರಿಲೀಸ್ ಮಾಡಲಾಗಿತ್ತು. ‘ನನ್ನ ರೋಜಾ ನೀನೇ’ (Nanna Roja Neene) ಎಂಬ ಮೆಲೋಡಿ ಟ್ರ್ಯಾಕ್ ಬಿಡುಗಡೆಯಾಗಿದ್ದು, ಕೇಳುಗರನ್ನು ಇಂಪ್ರೆಸ್ ಮಾಡಿತ್ತು. ಈ ಹಾಡು ಕೂಡ ಅಷ್ಟೇ ಬ್ಯೂಟಿಫುಲ್ ಆಗಿ ಮೂಡಿ ಬಂದಿತ್ತು.
ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿರುವ ಈ ಹಾಡಿಗೆ ಹೇಶಾಮ್ ಅಬ್ದುಲ್ ವಹಾಬ್ ಧ್ವನಿಯಾಗುವುದರ ಜೊತೆಗೆ ಟ್ಯೂನ್ ಹಾಕಿದ್ದಾರೆ. ಲವರ್ ಬಾಯ್ ಆಗಿ ವಿಜಯ್ ದೇವರಕೊಂಡ (Vijay Devarakonda) ಕಾಣಿಸಿಕೊಂಡಿದ್ದು, ಸಮಂತಾ (Samantha) ನಾಯಕಿಯಾಗಿ ಅಭಿನಯಿಸಿದ್ದಾರೆ. ಕಾಶ್ಮೀರ ಭಾಗದಲ್ಲಿ ಇಡೀ ಸಾಂಗ್ ಅನ್ನು ಚಿತ್ರೀಕರಿಸಲಾಗಿದೆ. ಇದನ್ನೂ ಓದಿ:ಕಣ್ಣು ಕುಕ್ಕುವಂತೆ ಪಡ್ಡೆಹುಡುಗರ ನಿದ್ದೆಗೆಡಿಸಿದ ಸೇಸಮ್ಮ ನಯಾ ಲುಕ್
ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಯಾರಾಗಿರುವ ಖುಷಿ ಸಿನಿಮಾ ತೆಲುಗು, ಕನ್ನಡ, ಹಿಂದಿ, ಮಲಯಾಳಂ ಹಾಗೂ ತಮಿಳು ಭಾಷೆಯಲ್ಲಿಯೂ ತೆರೆಗೆ ಬರಲಿದೆ. ಮೈತ್ರಿ ಮೂವಿ ಬ್ಯಾನರ್ ಅಡಿಯಲ್ಲಿ ಅದ್ಧೂರಿಯಾಗಿ ನಿರ್ಮಿಸಿರುವ ಈ ಚಿತ್ರಕ್ಕೆ ಮಜಿಲಿ ಹಿಟ್ ನಿರ್ದೇಶಕ ಶಿವ ನಿರ್ವಣ (Shiva Nirvana) ನಿರ್ದೇಶಿಸುತ್ತಿದ್ದಾರೆ. ನವೀನ್ ಯೆರ್ನೇನಿ ಮತ್ತು ಯಲಮಂಚಿಲಿ ಜಂಟಿಯಾಗಿ ನಿರ್ಮಿಸುತ್ತಿದ್ದಾರೆ.
ರೊಮ್ಯಾಂಟಿಕ್ ಲವ್ ಎಂಟರ್ಟೈನರ್ ಕಥಾಹಂದರ ಹೊಂದಿರುವ ಖುಷಿ ಸಿನಿಮಾ ಸೆಪ್ಟೆಂಬರ್ 1 ರಂದು ವಿಶ್ವಾದ್ಯಂತ ರಿಲೀಸ್ ಆಗಲಿದೆ. ಜಯರಾಮ್, ಮುರಳಿ ಶರ್ಮಾ, ಲಕ್ಷ್ಮೀ, ಅಲಿ, ವಿನ್ನಿಲ್ಲಾ ಕಿಶೋರ್, ರೋಹಿನಿ ಸೇರಿದಂತೆ ಹಲವರು ಚಿತ್ರದ ಭಾಗವಾಗಿದ್ದಾರೆ. ಹೇಷಂ ವಾಹೆಬ್ ಸಂಗೀತ, ಜಿ ಮುರಳಿ ಛಾಯಾಗ್ರಹಣ, ಪ್ರವೀಣ್ ಪುಡಿ ಸಂಕಲನ ಚಿತ್ರಕ್ಕಿದೆ.
ಬಾಲಿವುಡ್ (Bollywood) ಅಂಗಳದ ಹಿರಿಯ ನಟ ಅಮಿತಾಭ್ ಬಚ್ಚನ್ (Amitabh Bachchan) ಮೊಮ್ಮಗಳು ಹೈಕೋರ್ಟ್ ಮೆಟ್ಟಿಲೇರಿದ್ದಾಳೆ. ತನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ ವಿಚಾರಕ್ಕೆ ನೊಂದು ಆರಾಧ್ಯ ಕೋರ್ಟ್ ಮೆಟ್ಟಿಲೇರುವ ಘಟನೆ ಇದೀಗ ಬೆಳಕಿಗೆ ಬಂದಿದೆ.
ನಟ ಅಭಿಷೇಕ್- ಐಶ್ವರ್ಯ ರೈ ಪುತ್ರಿ ಆರಾಧ್ಯಗೆ (Aradhya) ಈಗಿನ್ನೂ 11 ವರ್ಷ. ಬಚ್ಚನ್ ಕುಟುಂಬದ ಕುಡಿ ಎನ್ನುವ ಕಾರಣಕ್ಕೆ ಹೆಚ್ಚು ಹೈಲೈಟ್ ಆಗುತ್ತಿದ್ದಾರೆ. ಆರಾಧ್ಯ ಹೆಸರಲ್ಲಿ ಅನೇಕ ಫ್ಯಾನ್ಪೇಜ್ಗಳು ಸಿದ್ಧಗೊಂಡಿವೆ. ಇದರ ಜೊತೆ ಕೆಲವು ಯೂಟ್ಯೂಬ್ ಚಾನೆಲ್ಗಳು ವೀವ್ಸ್ ಗಿಟ್ಟಿಸಿಕೊಳ್ಳಲು ಆರಾಧ್ಯ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ ಪ್ರಸಾರ ಮಾಡಿದ್ದವು. ಅವುಗಳ ವಿರುದ್ಧ ಆರಾಧ್ಯ ಈಗ ಕ್ರಮಕ್ಕೆ ಮುಂದಾಗಿದ್ದಾರೆ. ಇದನ್ನೂ ಓದಿ:ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವದಲ್ಲಿ ‘ಬ್ರಹ್ಮಕಮಲ’ ಚಿತ್ರ
ದೆಹಲಿ ಹೈಕೋರ್ಟ್ನಲ್ಲಿ ತಮ್ಮ ಬಗ್ಗೆ ಈ ರೀತಿ ಸುದ್ದಿ ಪ್ರಕಟ ಆಗದಂತೆ ತಡೆ ನೀಡಬೇಕು ಎಂದು ಆರಾಧ್ಯ ಮನವಿ ಮಾಡಿದ್ದಾಳೆ. ಈ ಪ್ರಕರಣದ ವಿಚಾರಣೆ ಇಂದು (ಏಪ್ರಿಲ್ 20) ನಡೆಯಲಿದೆ. ಸೆಲೆಬ್ರಿಟಿಗಳ ಬಗ್ಗೆ ಅನೇಕ ವದಂತಿಗಳ ಬಗ್ಗೆ ಸುದ್ದಿಯಾಗುತ್ತಲೇ ಇರುತ್ತದೆ. ಆದರೆ, ಅವರ ಮಕ್ಕಳ ಬಗ್ಗೆ ಈ ರೀತಿ ಸುಳ್ಳು ಸುದ್ದಿ ಹುಟ್ಟಿಕೊಂಡಾಗ ಅದನ್ನು ಒಪ್ಪಿಕೊಳ್ಳೋಕೆ ಬಚ್ಚನ್ ಕುಟುಂಬಕ್ಕೆ ಹಾಗೂ ಆರಾಧ್ಯಗೆ ಸಾಧ್ಯವಾಗಿಲ್ಲ. ಇಲ್ಲಸಲ್ಲದ ಸುಳ್ಳು ಸುದ್ದಿ ಬಿತ್ತರಿಸುವ ಖಾಸಗಿ ಯೂಟ್ಯೂಬರ್ಗಳಿಗೆ ಇದು ಎಚ್ಚರಿಕೆಯ ಗಂಟೆಯಾಗಿದೆ. ಇದರಿಂದ ನೊಂದು ಆರಾಧ್ಯ ಕೋರ್ಟ್ ಮೆಟ್ಟಿಲೇರಿದ್ದಾಳೆ.
ಮುಂಬೈ: ಬಾಲಿವುಡ್ ನಟಿ ಐಶ್ವರ್ಯಾ ರೈ, ಪತಿ ಅಭಿಷೇಕ್ ಬಚ್ಚನ್ ಮತ್ತು ಮಗಳು ಆರಾಧ್ಯ ಶುಕ್ರವಾರ ರಾತ್ರಿ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ.
ಪ್ಯಾರಿಸ್ ಫ್ಯಾಷನ್ ವೀಕ್ ಆಯೋಜಿಸಿದ್ದ ಔಟ್ ಡೋರ್ ರನ್ ವೇ ಶೋನ ಲೆ ಡಿಫಿಲೀ ಲೋರಿಯನ್ ಪ್ಯಾರಿಸ್ನ ನಾಲ್ಕನೇ ಆವೃತ್ತಿಗೆ ಕುಟುಂಬ ಸಮೇತ ಐಶ್ವರ್ಯಾ ರೈ ಪ್ಯಾರೀಸ್ಗೆ ಹಾರಿದ್ದಾರೆ. ಸುಮಾರು ಎರಡು ವರ್ಷಗಳ ಬಳಿಕ ಐಶ್ವರ್ಯಾ ರೈ ಇದೇ ಮೊದಲ ಬಾರಿಗೆ ಪ್ರವಾಸ ಕೈಗೊಂಡಿದ್ದಾರೆ.
ಈ ವೇಳೆ ಕ್ಯಾಮೆರಾ ಕಣ್ಣಿಗೆ ಕಾಣಿಸಿಕೊಂಡ ಮಗಳ ಕೈ ಹಾಗೂ ಲಗೇಜ್ ಹಿಡಿದುಕೊಂಡು ಮುಂದೆ ಸಾಗಿದರು. ಅಭಿಷೇಕ್ ಬಚ್ಚನ್ ಗ್ರೆ ಕಲರ್ ಡ್ರೆಸ್ ತೊಟ್ಟಿದ್ದರೆ, ಐಶ್ವರ್ಯಾ ರೈ ಬ್ಲ್ಯಾಕ್ ಆ್ಯಂಡ್ ಬ್ಲ್ಯಾಕ್ ಡ್ರೆಸ್ನಲ್ಲಿ ಮಿಂಚಿದ್ದರು.
ಬೆಂಗಳೂರು: ಬಾಲಿವುಡ್ ನಟಿ ಐಶ್ವರ್ಯ ರೈ ಬಚ್ಚನ್ ಕುಟುಂಬ ಸಮೇತ ಇತ್ತೀಚೆಗಷ್ಟೇ ತಮ್ಮ ಸೋದರ ಸಂಬಂಧಿ ಶ್ಲೋಕ್ ಶೆಟ್ಟಿ ವಿವಾಹ ಸಮಾರಂಭಕ್ಕೆ ಬೆಂಗಳೂರಿಗೆ ಆಗಮಿಸಿದ್ದರು. ಈ ವೇಳೆ ಐಶ್ವರ್ಯ ರೈ ಹಾಗೂ ಅಭಿಷೇಕ್ರೊಂದಿಗೆ ಮುದ್ದಿನ ಮಗಳು ಆರಾಧ್ಯ, ಅಪ್ಪ ಅಭಿನಯಿಸಿದ್ದ ದೋಸ್ತಾನಾ ಸಿನಿಮಾದ ದೇಸಿ ಗರ್ಲ್ ಸಾಂಗ್ಗೆ ಸ್ಟೇಜ್ ಮೇಲೆ ಹೆಜ್ಜೆ ಹಾಕಿದ್ದಾರೆ. ಸದ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಹೌದು, ಹಲವು ದಿನಗಳ ಬಳಿಕ ಇತ್ತೀಚೆಗಷ್ಟೇ ನಟಿ ಐಶ್ವರ್ಯ ರೈ, ಅಭಿಷೇಕ್ ಬಚ್ಚನ್ ಮದುವೆ ಸಮಾರಂಭವೊಂದಕ್ಕೆ ಹಾಜರಾಗಿದ್ದರು. ಈ ವೇಳೆ ಬಚ್ಚನ್ ಕುಟುಂಬ ಡೇಸಿ ಗರ್ಲ್ ಹಾಡಿಗೆ ಡ್ಯಾನ್ಸ್ ಮಾಡಿದ್ದಾರೆ. ವಿಶೇಷವೆಂದರೆ ಒಂದೇ ವೇದಿಕೆಯಲ್ಲಿ ಅಭಿಷೇಕ್, ಐಶ್ವರ್ಯ ಜೊತೆ ಮಗಳು ಆರಾಧ್ಯ ಕೂಡ ಒಟ್ಟಿಗೆ ಡ್ಯಾನ್ಸ್ ಮಾಡಿದ್ದಾರೆ. ಈ ವೀಡಿಯೋದಲ್ಲಿ 9 ವರ್ಷದ ಆರಾಧ್ಯ ಡ್ಯಾನ್ಸ್ ಮಾಡುತ್ತಿರುವುದನ್ನು ನೋಡುತ್ತಿದ್ದರೆ ತಾಯಿಯಿಂದ ಈಗಲೇ ಮಗಳು ತರಬೇತಿ ಪಡೆದಿರುವಂತೆ ಕಾಣಿಸುತ್ತಿದೆ. ಅಲ್ಲದೆ ಮಗಳ ಡ್ಯಾನ್ಸ್ ನೋಡಿ ಐಶ್ವರ್ಯ ಆರಾಧ್ಯಳ ತಬ್ಬಿ ಮುದ್ದಾಡಿದ್ದಾರೆ.
ವೀಡಿಯೋದಲ್ಲಿ ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯ ಸಂಪ್ರದಾಯಿಕ ಉಡುಪು ಧರಿಸಿದ್ದಾರೆ. ಇದೀಗ ಬಚ್ಚನ ಕುಟುಂಬದ ಡ್ಯಾನ್ಸ್ ವೀಡಿಯೋ ಬಿ-ಟೌನ್ನಲ್ಲಿ ಭಾರೀ ಸದ್ದು ಮಾಡುತ್ತಿದ್ದು, ವೀಡಿಯೋಗೆ ಅಭಿಮಾನಿಗಳಿಂದ ಕಮೆಂಟ್ಗಳ ಸುರಿಮಳೆಯೇ ಹರಿದು ಬರುತ್ತಿದೆ. ಆರಾಧ್ಯ ಪಿಂಕ್ ಕಲರ್ ಲೆಹೆಂಗಾದಲ್ಲಿ ಮಿಂಚಿದ್ದಾರೆ. ಆರಾಧ್ಯ ಡ್ಯಾನ್ಸ್ ಮಾಡಿದ ಹಾಡು 2008ರಲ್ಲಿ ತೆರೆಕಂಡ ದೋಸ್ತಾನಾ ಸಿನಿಮಾದ ಡೇಸಿ ಗರ್ಲ್ ಹಾಡಗಿದ್ದು, ಈ ಸಿನಿಮಾದಲ್ಲಿ ನಟ ಅಭಿಷೇಕ್ ಬಚ್ಚನ್, ಪ್ರಿಯಾಂಕ ಚೋಪ್ರಾ, ಜಾನ್ ಅಬ್ರಹಾಂ ಅಭಿನಯಿಸಿದ್ದರು.
ಮುಂಬೈ: ಸೊಸೆ ಐಶ್ವರ್ಯಾ ರೈ ಮತ್ತು ಮೊಮ್ಮಗಳು ಆರಾಧ್ಯ ಕೋವಿಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಸಂತಸದ ವಿಷಯ ಕೇಳಿ ಬಿಗ್ ಬಿ ಅಮಿತಾಬ್ ಬಚ್ಚನ್ ಕಣ್ಣೀರಿಟ್ಟಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅಮಿತಾಬ್ ಬಚ್ಚನ್, ಮೊಮ್ಮಗಳು ಮತ್ತು ಸೊಸೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಸುದ್ದಿ ಕೇಳಿದ ಕೂಡಲೇ ಕಣ್ಣಂಚಲಿ ನೀರು ಬಂತು. ಓ ದೇವರೆ ನಿನ್ನ ಕೃಪೆ ಹೀಗೆ ಇರಲಿ ಎಂದು ಭಾವನಾತ್ಮಕವಾಗಿ ಕೆಲ ಸಾಲುಗಳನ್ನು ಬರೆದುಕೊಂಡಿದ್ದಾರೆ.
T 3607 – T 3607 – अपनी छोटी बिटिया , और बहुरानी को ,अस्पताल से मुक्ति मिलने पर ; मैं रोक ना पाया अपने आंसू 🙏 प्रभु तेरी कृपा अपार , अपरम्पार 🙏🙏
ಸೋಮವಾರ ಸಂಜೆ ಪುತ್ರಿ ಮತ್ತು ಪತ್ನಿ ಮುಂಬೈನ ನಾನಾವತಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿರುವ ವಿಷಯವನ್ನು ಅಭಿಷೇಕ್ ಬಚ್ಚನ್ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದರು. “ನಿಮ್ಮ ನಿರಂತರ ಪ್ರಾರ್ಥನೆ ಮತ್ತು ಶುಭಾಶಯಗಳಿಗೆ ಧನ್ಯವಾದಗಳು. ಐಶ್ವರ್ಯ ಮತ್ತು ಆರಾಧ್ಯ ಇಬ್ಬರಿಗೂ ಕೋವಿಡ್ ನೆಗೆಟಿವ್ ಬಂದಿದೆ. ಅವರು ಆಸ್ಪತ್ರೆಯಿಂದ ಡಿಸ್ಚಾಜ್ ಆಗಿದ್ದು, ಈಗ ಮನೆಯಲ್ಲಿದ್ದಾರೆ. ನಾನು ಮತ್ತು ನನ್ನ ತಂದೆ ವೈದ್ಯಕೀಯ ಸಿಬ್ಬಂದಿಯ ಆರೈಕೆಯಲ್ಲಿ ಆಸ್ಪತ್ರೆಯಲ್ಲಿದ್ದೇನೆ” ಎಂದು ಟ್ವೀಟ್ ಮಾಡುವ ಮೂಲಕ ಅಭಿಷೇಕ್ ಬಚ್ಚನ್ ತಿಳಿಸಿದ್ರು.
Thank you all for your continued prayers and good wishes. Indebted forever. 🙏🏽 Aishwarya and Aaradhya have thankfully tested negative and have been discharged from the hospital. They will now be at home. My father and I remain in hospital under the care of the medical staff.
ಜುಲೈ 11ರಂದು ಅಭಿಷೇಕ್ ಬಚ್ಚನ್ ಮತ್ತು ಅಮಿತಾಬ್ ಬಚ್ಚನ್ ಇಬ್ಬರಿಗೂ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿತ್ತು. ಮರುದಿನ ಅಂದ್ರೆ ಐಶ್ವರ್ಯಾ ಮತ್ತು ಆರಾಧ್ಯಗೂ ಸೋಂಕು ಖಚಿತವಾಗಿತ್ತು. ಹಾಗಾಗಿ ಎಲ್ಲರೂ ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದರು.
ಮುಂಬೈ: ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಪುತ್ರಿ ಆರಾಧ್ಯ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇತ್ತೀಚೆಗಷ್ಟೆ ನಟಿ ಐಶ್ವರ್ಯಾ ರೈ ಮತ್ತು ಆರಾಧ್ಯ ಇಬ್ಬರಿಗೂ ಕೊರೊನಾ ಪಾಸಿಟಿವ್ ಬಂದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಇದೀಗ ಅವರು ಕೋವಿಡ್ ಡೆಸ್ಟ್ ಮಾಡಿಸಿದ್ದು, ವರದಿಯಲ್ಲಿ ನೆಗೆಟಿವ್ ಬಂದಿದೆ. ಅಲ್ಲದೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಕೂಡ ಆಗಿದ್ದಾರೆ. ಈ ಬಗ್ಗೆ ಅಭಿಷೇಕ್ ಬಚ್ಚನ್ ಟ್ವಿಟ್ಟರ್ ಮೂಲಕ ಸ್ಪಷ್ಟಪಡಿಸಿದ್ದಾರೆ.
“ನಿಮ್ಮ ನಿರಂತರ ಪ್ರಾರ್ಥನೆ ಮತ್ತು ಶುಭಾಶಯಗಳಿಗೆ ಧನ್ಯವಾದಗಳು. ಐಶ್ವರ್ಯ ಮತ್ತು ಆರಾಧ್ಯ ಇಬ್ಬರಿಗೂ ಕೋವಿಡ್ ನೆಗೆಟಿವ್ ಬಂದಿದೆ. ಅವರು ಆಸ್ಪತ್ರೆಯಿಂದ ಡಿಸ್ಚಾಜ್ ಆಗಿದ್ದು, ಈಗ ಮನೆಯಲ್ಲಿದ್ದಾರೆ. ನಾನು ಮತ್ತು ನನ್ನ ತಂದೆ ವೈದ್ಯಕೀಯ ಸಿಬ್ಬಂದಿಯ ಆರೈಕೆಯಲ್ಲಿ ಆಸ್ಪತ್ರೆಯಲ್ಲಿದ್ದೇನೆ” ಎಂದು ಟ್ವೀಟ್ ಮಾಡುವ ಮೂಲಕ ಅಭಿಷೇಕ್ ಬಚ್ಚನ್ ತಿಳಿಸಿದ್ದಾರೆ.
ಜು. 11 ರಂದು ಹಿರಿಯ ನಟ ಅಮಿತಾಬ್ ಬಚ್ಚನ್ ಮತ್ತು ಅವರ ಪುತ್ರ ಅಭಿಷೇಕ್ ಬಚ್ಚನ್ಗೆ ಮೊದಲು ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಇದಾದ ನಂತರ ನಟಿ ಐಶ್ವರ್ಯಾ ರೈ ಅವರಿಗೂ ಮತ್ತು ಪುತ್ರಿ ಆರಾಧ್ಯ ಬಚ್ಚನ್ ಅವರಿಗೂ ಕೊರೊನಾ ಪಾಸಿಟಿವ್ ಬಂದಿತ್ತು. ಹೀಗಾಗಿ ಎಲ್ಲರೂ ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.
Thank you all for your continued prayers and good wishes. Indebted forever. 🙏🏽 Aishwarya and Aaradhya have thankfully tested negative and have been discharged from the hospital. They will now be at home. My father and I remain in hospital under the care of the medical staff.
ಮುಂಬೈ: ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಪುತ್ರಿ ಆರಾಧ್ಯಗೂ ಕೊರೊನಾ ಸೋಂಕು ತಗುಲಿದೆ.
ಶನಿವಾರ ರಾತ್ರಿ ಬಿಗ್ ಬಿ ಅಮಿತಾಬ್ ಬಚ್ಚನ್ ತಮಗೆ ಸೋಂಕು ತಗುಲಿರುವ ಬಗ್ಗೆ ಟ್ವಿಟ್ಟರ್ ಮೂಲಕ ಅಭಿಮಾನಿಗಳಿಗೆ ಮಾಹಿತಿ ನೀಡಿದ್ದರು. ತಂದೆ ಅಮಿತಾಬ್ ಬಚ್ಚನ್ ಬಳಿಕ ಟ್ವೀಟ್ ಮಾಡಿದ್ದ ಅಭಿಷೇಕ್ ತಮ್ಮ ವರದಿಯೂ ಪಾಸಿಟಿವ್ ಬಂದಿದೆ ಎಂದು ತಿಳಿಸಿದ್ದರು. ಇದೀಗ ಐಶ್ವರ್ಯಾ ಮತ್ತು ಆರಾಧ್ಯಗೂ ಸೋಂಕು ತಗುಲಿರುವುದು ಖಚಿತವಾಗಿದೆ.
ಅಭಿಷೇಕ್ ಮತ್ತು ಅಮಿತಾಬ್ ಬಚ್ಚನ್ ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅಭಿಮಾನಿಗಳು ಆತಂಕಕ್ಕೆ ಒಳಗಾಗೋದು ಬೇಡ. ನಾವು ಆದಷ್ಟು ಬೇಗ ಗುಣಮುಖರಾಗಿ ಬರುತ್ತೇವೆ ಎಂದು ಬಚ್ಚನ್ ಕುಟುಂಬ ಹೇಳಿದೆ. ಇನ್ನು ಬಿಗ್ ಬಿ ಪತ್ನಿ ಜಯಾ ಬಚ್ಚನ್ ವರದಿ ನೆಗೆಟಿವ್ ಬಂದಿದೆ.