Tag: ಆರಿಫ್ ಮೊಹಮ್ಮದ್ ಖಾನ್

  • ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್

    ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್

    ಉಡುಪಿ: ಇಲ್ಲಿನ ಶ್ರೀ ಕೃಷ್ಣ ಮಠದಲ್ಲಿ (Krishna Matha) ಒಂದು ತಿಂಗಳ ಕಾಲ ನಡೆದ ಶ್ರೀ ಕೃಷ್ಣ ಮಾಸೋತ್ಸವ ಸಮಾರೋಪ ಸಮಾರಂಭದಲ್ಲಿ ಕೇರಳ (Kerala) ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ (Arif Mohammed Khan) ಭಾಗವಹಿಸಿದರು. ಎರಡು ದಿನದ ಉಡುಪಿ (Udupi) ಪ್ರವಾಸ ಮಾಡಿದ ಆರಿಫ್ ಮೊಹಮ್ಮದ್ ಖಾನ್ ಕೊಲ್ಲೂರು ಮೂಕಾಂಬಿಕೆ ಹಾಗೂ ಉಡುಪಿಯ ಶ್ರೀ ಕೃಷ್ಣದೇವರ ದರ್ಶನ ಪಡೆದರು.

    ಪರ್ಯಾಯ ಶ್ರೀ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ, ಆರಿಫ್ ಮೊಹಮ್ಮದ್ ಖಾನ್ ಅವರನ್ನು ಸನ್ಮಾನಿಸಿದರು. ಈ ವೇಳೆ ಶ್ರೀ ಕೃಷ್ಣ ಮಠದ ಇತಿಹಾಸ ಪುರಾಣಗಳ ಬಗ್ಗೆ ಆರಿಫ್ ಮೊಹಮ್ಮದ್ ಖಾನ್ ಸ್ವಾಮೀಜಿಯವರಿಂದ ಮಾಹಿತಿ ಪಡೆದುಕೊಂಡರು. ಇದನ್ನೂ ಓದಿ: ಅಂಡರ್ 19 ಕ್ರಿಕೆಟ್ ತಂಡಕ್ಕೆ ಆಯ್ಕೆ| ಎಲ್ಲಾ ಕನ್ನಡಿಗರಿಗೆ ನಮಸ್ಕಾರ : ಸಮಿತ್ ದ್ರಾವಿಡ್ ಮೊದಲ ಪ್ರತಿಕ್ರಿಯೆ

    ಬಳಿಕ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ನಮ್ಮ ಧರ್ಮಗಳು ಬೇರೆ ಆಗಿರಬಹುದು. ಆದರೆ ನಾವೆಲ್ಲರೂ ಭಾರತೀಯರು ಮತ್ತು ಒಂದೇ ಸಂಸ್ಕೃತಿಯವರು. ಭಿನ್ನ-ಭಿನ್ನ ಹೆಸರಿನಲ್ಲಿ ದೇವರನ್ನು ಪೂಜಿಸಿದರೂ ಕೊನೆಗೆ ನಮ್ಮೆಲ್ಲರ ಪ್ರಾರ್ಥನೆ ಕೇಶವನಿಗೆ ಸಲ್ಲುವುದು. ವಿವಿಧತೆಯಲ್ಲಿ ಏಕತೆ ನಮ್ಮ ಸಂಸ್ಕೃತಿಯ ಆತ್ಮ ಎಂದು ಬಣ್ಣಿಸಿದರು. ಇದನ್ನೂ ಓದಿ: ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ – ಹಾರಂಗಿ ಜಲಾಶಯದಿಂದ 11,800 ಕ್ಯುಸೆಕ್ ನೀರು ಹೊರಕ್ಕೆ

  • ಮುಸ್ಲಿಮರು ಶಿಕ್ಷಣದಲ್ಲಿ ಹಿಂದುಳಿದರೆ ದೇಶಕ್ಕೇ ತೊಂದರೆ- ಆರಿಫ್ ಮೊಹಮ್ಮದ್ ಖಾನ್

    ಮುಸ್ಲಿಮರು ಶಿಕ್ಷಣದಲ್ಲಿ ಹಿಂದುಳಿದರೆ ದೇಶಕ್ಕೇ ತೊಂದರೆ- ಆರಿಫ್ ಮೊಹಮ್ಮದ್ ಖಾನ್

    ನವದೆಹಲಿ: ಮುಸ್ಲಿಮರು ಶಿಕ್ಷಣದಲ್ಲಿ (Muslim Education) ಹಿಂದುಳಿದರೆ ದೇಶಕ್ಕೇ ತೊಂದರೆಯಾಗುತ್ತದೆ ಎಂದು ಕೇರಳ (Kerala) ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ (Arif Mohammed Khan) ಎಚ್ಚರಿಸಿದ್ದಾರೆ.

    ದೆಹಲಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನಮ್ಮ ಹಿನ್ನಡೆಗೆ ನಾವೇ (ಮುಸ್ಲಿಮರೇ) ಕಾರಣ. ಏಕೆಂದರೆ ನಾವು ನಮ್ಮ ಮೇಲಿನ ಆರೋಪವನ್ನು ಮತ್ತೊಬ್ಬರ ಮೇಲೆ ಹೊರಿಸಲು ಪ್ರಯತ್ನಿಸುವುದಿಲ್ಲ. ಅದಕ್ಕಾಗಿ ಹಿಂದುಳಿದಿದ್ದೇವೆ. ಮುಸ್ಲಿಮರು ಶಿಕ್ಷಣದಲ್ಲಿ (Muslim Education) ಹಿಂದುಳಿದರೆ ಇಡೀ ದೇಶಕ್ಕೆ ತೊಂದರೆಯಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಇನ್ನೋವಾ, ಆಟೋ ಡಿಕ್ಕಿ- ಬಾಲಕ ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ

    ಆಧುನಿಕ ಶಿಕ್ಷಣ ಇಸ್ಲಾಂಗೆ ವಿರುದ್ಧವಾಗಿ ಪರಿಗಣಿಸಲಾಗಿದೆ. ಆದ್ದರಿಂದ ಮುಸ್ಲಿಮರು ಶಿಕ್ಷಣ ಮುಂದುವರಿಸದೇ ನಿಷೇಧಿಸಲು ನಿರ್ಧರಿಸುತ್ತಿದ್ದಾರೆ. ಹೊರತಾಗಿ ಕಳಿಸಿದ್ರೆ ಅಂಥರವ ವಿರುದ್ಧ ಅವರೇ ಕ್ರಮ ತೆಗೆದುಕೊಳ್ತಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 16 ವರ್ಷಗಳ ಹಿಂದೆ ಪತಿ, ಈಗ ಪತ್ನಿ – ದಂಪತಿ ಜೀವನ ವಿಮಾನ ದುರಂತದಲ್ಲಿ ಅಂತ್ಯ

    ಧಾರ್ಮಿಕ ಕಾರಣಗಳಿಗಾಗಿ `ಫತ್ವಾ’ಗಳನ್ನ ಎಂದಿಗೂ ಬಳಸಲಾಗುವುದಿಲ್ಲ. ಕುರಾನ್‌ನಲ್ಲಿ 200 ನಿದರ್ಶನಗಳಿವೆ. ಆ ಪ್ರಕಾರ ಯಾರು ಸರಿ, ಯಾರು ತಪ್ಪು ಎಂದು ಯಾರೊಬ್ಬರೂ ನಿರ್ಧಿರಿಸಲು ಸಾಧ್ಯವಿಲ್ಲ. ಆದ್ರೆ ಈಗ `ಫತ್ವಾ’ಗಳನ್ನ ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮದರಸಾಗಳಲ್ಲಿ ಮಕ್ಕಳಿಗೆ ರುಂಡ ಕತ್ತರಿಸುವ ಕಾನೂನನ್ನೇ ಬೋಧಿಸಲಾಗುತ್ತಿದೆ – ಆರಿಫ್ ಖಾನ್ ಕಿಡಿ

    ಮದರಸಾಗಳಲ್ಲಿ ಮಕ್ಕಳಿಗೆ ರುಂಡ ಕತ್ತರಿಸುವ ಕಾನೂನನ್ನೇ ಬೋಧಿಸಲಾಗುತ್ತಿದೆ – ಆರಿಫ್ ಖಾನ್ ಕಿಡಿ

    ತಿರುವನಂತಪುರಂ: ರುಂಡ ಕತ್ತರಿಸಬೇಕು ಎನ್ನುವುದು ಮುಸ್ಲಿಂ ದೊರೆಗಳು ಮಾಡಿದ ಕಾನೂನು. ಇದೇ ಕಾನೂನನ್ನು ಮದರಸಾಗಳಲ್ಲಿ ಮಕ್ಕಳಿಗೆ ಬೋಧಿಸಲಾಗುತ್ತಿದೆ ಎಂದು ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಕಿಡಿ ಕಾರಿದ್ದಾರೆ.

    ರಾಜಾಸ್ಥಾನದ ಉದಯಪುರದಲ್ಲಿ ಹಿಂದೂ ವ್ಯಕ್ತಿಯ ರುಂಡ ಕತ್ತರಿಸಿದ ಘಟನೆಗೆ ದೇಶಾದ್ಯಂತ ಖಂಡನೆ ವ್ಯಕ್ತವಾಗುತ್ತಿದೆ. ಪ್ರಮುಖ ಸಿನಿ ತಾರೆಯರೂ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಈ ಬೆನ್ನಲ್ಲೇ ಕೇರಳದ ರಾಜ್ಯಪಾಲರಾದ ಆರಿಫ್ ಮೊಹಮ್ಮದ್ ಖಾನ್ ಖಂಡನೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬುದ್ದಿ ಹೇಳಲು ಬಂದವರಿಗೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಭೂಪ

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಉದಯಪುರದಂತಹ ಘಟನೆಗಳಿಗೆ ಮದರಸಾ ಶಿಕ್ಷಣವೇ ಕಾರಣ. ಇಂತಹ ಶಿಕ್ಷಣ ಮಕ್ಕಳಿಗೆ ಅಗತ್ಯವಿಲ್ಲ. ಮುಸ್ಲಿಂ ಲಾ(ಮುಸ್ಲಿಂ ಕಾನೂನು), ಖುರಾನ್‌ನಲ್ಲಿಯೂ ರುಂಡ ಕತ್ತರಿಸಬೇಕೆಂಬ ಕಾನೂನು ಇಲ್ಲ. ಇದು ಮುಸ್ಲಿಂ ದೊರೆಗಳು ಮಾಡಿದ ಕಾನೂನು. ಆಗ ಮುಸ್ಲಿಂ ಧರ್ಮಕ್ಕೆ ವಿರುದ್ಧವಾಗಿ ನಡೆದರೆ ರುಂಡ ಕತ್ತರಿಸುವ ಅಧಿಕಾರ ಇತ್ತು. ಇದೇ ಕಾನೂನನ್ನು ಮದರಸಾಗಳಲ್ಲಿ ಬೋಧಿಸಲಾಗುತ್ತದೆ ಎಂದು ಮದರಸಾ ಶಿಕ್ಷಣದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಮದರಸಾ ಶಿಕ್ಷಣವು ಸಂಕುಚಿತ ಹಾಗೂ ಧರ್ಮಾಧಾರಿತ ಶಿಕ್ಷಣವಾಗಿದೆ. ಮಕ್ಕಳಲ್ಲಿ ವಿಷಬೀಜ ಬಿತ್ತುವ ಕೆಲಸವನ್ನೂ ಮಾಡುತ್ತಿದೆ. ಇಲ್ಲಿ ಧರ್ಮಾಂಧತೆ ಬೋಧಿಸಲಾಗುತ್ತಿದೆ. ಇದರ ಪರಿಣಾಮವೇ ಉದಯಪುರದಲ್ಲಿ ನಡೆದ ಹತ್ಯೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಸರ್ಕಾರಿ ಕಾಲೇಜಿನಲ್ಲಿ ಪಿಯು ಓದುವ ವಿದ್ಯಾರ್ಥಿನಿಯರಿಗೆ ಗುಡ್‌ನ್ಯೂಸ್‌ – ಯಾವುದೇ ಫೀಸ್‌ ಕಟ್ಟುವ ಅಗತ್ಯವಿಲ್ಲ

    ಆಧುನಿಕ ಶಿಕ್ಷಣ ಮಕ್ಕಳ ಹಕ್ಕು: ಚಿಕ್ಕ ಮಕ್ಕಳಲ್ಲೇ ವಿಷ ಬೀಜ ಬಿತ್ತುವುದರಿಂದ ಅವರ ಮನಸ್ಸಿನಲ್ಲಿ ಗಾಢ ಪರಿಣಾಮ ಬೀರುತ್ತಿದೆ. 14 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ನೀಡುವ ವಿದ್ಯಾಭ್ಯಾಸವು ಧರ್ಮಾಧಾರಿತ ಆಗಿರಬಾರದು. ಇದು ಮಕ್ಕಳ ಹಕ್ಕಾಗಿದೆ. ಆಧುನಿಕ ಶಿಕ್ಷಣ ಪಡೆಯುವುದು ಅವರ ಹಕ್ಕು ಎಂದು ಪ್ರತಿಪಾದಿಸಿದ್ದಾರೆ.

    Live Tv

  • ಕೇರಳ ರಾಜ್ಯಪಾಲರಿಂದ ವರದಕ್ಷಿಣೆ ವಿರುದ್ಧ ನಾಳೆ ಧರಣಿ

    ಕೇರಳ ರಾಜ್ಯಪಾಲರಿಂದ ವರದಕ್ಷಿಣೆ ವಿರುದ್ಧ ನಾಳೆ ಧರಣಿ

    ತಿರುವನಂತಪುರ: ಕೇರಳ ರಾಜ್ಯದಲ್ಲಿ ವರದಕ್ಷಿಣೆ ಕಿರುಕುಳದಿಂದ ಮಹಿಳೆಯರು ಸಾವನ್ನಪ್ಪುತ್ತಿರು ಪ್ರಕರಣ ಹೆಚ್ಚಾಗುತ್ತಿರುವುದನ್ನು ಮನಗಂಡು ಕೇರಳ ರಾಜ್ಯಪಾಲರಾದ ಆರಿಫ್ ಮೊಹಮ್ಮದ್ ಖಾನ್ ಸ್ವತಃ ವರದಕ್ಷಿಣೆ ಪಿಡುಗಿನ ವಿರುದ್ಧ ನಾಳೆ ಒಂದು ದಿನ ಧರಣಿ ನಡೆಸಲು ಸಿದ್ಧರಾಗಿದ್ದಾರೆ.

    ಕೇರಳದಲ್ಲಿ ಕಳೆದ ಕೆಲ ವರ್ಷಗಳಿಂದ ವರದಕ್ಷಿಣೆ ವಿಚಾರವಾಗಿ ಮನಸ್ಥಾಪ ಬಂದು ಹಲವು ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡಿರುವ ಮತ್ತು ಕಿರುಕುಳದಿಂದಾಗಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗುತ್ತಿದೆ. ರಾಜ್ಯದಲ್ಲಿ ವರದಕ್ಷಿಣೆ ಪಿಡುಗಿಗೆ ಮಹಿಳೆಯರು ಬಲಿಯಾಗುತ್ತಿರುವುದನ್ನು ಖಂಡಿಸಿ ಮತ್ತು ವರದಕ್ಷಿಣೆ ಪಿಡುಗಿನ ಬಗ್ಗೆ ಅರಿವನ್ನು ಮೂಡಿಸುವ ಉದ್ದೇಶದಿಂದ ಸ್ವತಃ ರಾಜ್ಯದ ರಾಜ್ಯಪಾಲರಾದ ಖಾನ್ ಅವರು ಒಂದು ದಿನದ ಧರಣಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಧರಣಿ ಕೇರಳದ ಗಾಂಧಿ ಭವನದಲ್ಲಿ ನಡೆಯಲಿದ್ದು, ಕಳೆದ ಒಂದು ತಿಂಗಳ ಹಿಂದೆಯೆ ಖಾನ್ ಅವರು ಈ ಕುರಿತು ವಾಗ್ದಾನ ಮಾಡಿದ್ದರು ಇದೀಗ ನಾಳೆ ಧರಣಿಗೆ ಮುಂದಾಗಿದ್ದಾರೆ. ಇದನ್ನೂ ಓದಿ: ವರದಕ್ಷಿಣೆಗಾಗಿ ಪತ್ನಿಯನ್ನೇ ಕೊಂದ ಪತಿ

    ಕಳೆದ ತಿಂಗಳು ಕೇರಳದಲ್ಲಿ ವೈದ್ಯಕೀಯ ವಿದ್ಯಾರ್ಥಿಯೊರ್ವಳಿಗೆ ಆಕೆಯ ಗಂಡ ವರದಕ್ಷಿಣೆಯಾಗಿ ದುಬಾರಿ ಕಾರಿಗೆ ಬೇಡಿ ಇಟ್ಟು, ಬಳಿಕ ಆಕೆಗೆ ಕಿರುಕುಳ ನೀಡಿ ಆಕೆ ಸಾವನ್ನಪ್ಪಿದ ಬಗ್ಗೆ ವರದಿಯಾಗಿತ್ತು. ಈ ಸಂದರ್ಭ ಖಾನ್, ಅವರು ಸ್ವಯಂ ಸೇವಕ ಸಂಘಗಳು ಇತರ ಸಂಘ ಸಂಸ್ಥೆಗಳು ರಾಜ್ಯದಲ್ಲಿ ವರದಕ್ಷಿಣೆ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಬೇಕೆಂದಿದ್ದರು.

    ನಾಳೆ ಕೇರಳದಲ್ಲಿ ಗಾಂಧಿ ತತ್ವ ಅನುಸರಿಸುವ ಹಲವು ಸಂಘ ಸಂಸ್ಥೆಗಳು ವರದಕ್ಷಿಣೆ ಪಿಡುಗಿನ ಬಗ್ಗೆ ಅರಿವನ್ನು ಮೂಡಿಸಿ, ಧರಣಿ ನಡಸಲು ಮುಂದಾಗಿವೆ. ಈ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಭಾಗಿಯಾಗುತ್ತಿದ್ದಾರೆ.

  • ಪೌರತ್ವ ಕಾಯ್ದೆ ಪರ ಮಾತು – ಕೇರಳ ರಾಜ್ಯಪಾಲರ ಭಾಷಣಕ್ಕೆ ವಿರೋಧ, ವೇದಿಕೆಯಲ್ಲಿ ಪ್ರತಿಭಟನೆ

    ಪೌರತ್ವ ಕಾಯ್ದೆ ಪರ ಮಾತು – ಕೇರಳ ರಾಜ್ಯಪಾಲರ ಭಾಷಣಕ್ಕೆ ವಿರೋಧ, ವೇದಿಕೆಯಲ್ಲಿ ಪ್ರತಿಭಟನೆ

    ತಿರುವನಂತಪುರ: ಕಣ್ಣೂರು ವಿಶ್ವವಿದ್ಯಾಲಯದಲ್ಲಿ ನಡೆದ ಭಾರತೀಯ ಇತಿಹಾಸ ಕಾಂಗ್ರೆಸ್ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮದ ವೇಳೆ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರ ಭಾಷಣಕ್ಕೆ ಅಪಸ್ವರ ಕೇಳಿಬಂದಿದೆ.

    ರಾಜ್ಯಪಾಲರು ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ಮಾತನಾಡಿದ್ದಾರೆ ಎಂದು ಕಣ್ಣೂರು ವಿಶ್ವವಿದ್ಯಾಲಯದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅತಿಥಿ, ಇತಿಹಾಸ ತಜ್ಞ ಇರ್ಫಾನ್ ಹಬೀಬ್ ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಭಾಷಣ ಮಾಡುವುದನ್ನು ಅರ್ಧಕ್ಕೇ ತಡೆದಿದ್ದಾರೆ.

    ಇತಿಹಾಸ ತಜ್ಞ ಇರ್ಫಾನ್ ಹಬೀಬ್ ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ. ಖಾನ್ ಅವರು ಅವರ ಭಾಷಣದಲ್ಲಿ ರಾಜಕೀಯ ಭಾಷಣದಂತೆ ಗಣ್ಯರ ಹೇಳಿಕೆಗಳನ್ನು ತಮ್ಮ ಭಾಷಣದಲ್ಲಿ ಬಳಸಿದ್ದಾರೆ ಎಂದು ಇರ್ಫಾನ್ ಆರೋಪಿಸಿದ್ದಾರೆ.

    ಈ ವೇಳೆ ರಾಜ್ಯಪಾಲರು ಇದಕ್ಕೆ ಉತ್ತರಿಸಿ, ನೀವು ಒಂದು ಅಜೆಂಡಾ ಇಟ್ಟುಕೊಂಡು ಬಂದಿದ್ದೀರಿ. ಹೀಗೆ ಕಿರುಚಾಡುವ ಮೂಲಕ ನನ್ನನ್ನು ಸುಮ್ಮನಿರಿಸಲು ಸಾಧ್ಯವಿಲ್ಲ. ಅಲ್ಲದೆ ಪ್ರತಿಭಟನಾಕಾರರು ಅಸಹಿಷ್ಣುತೆಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

    ಇದಕ್ಕೆ ಪ್ರತಿಯಾಗಿ ಕಾರ್ಯಕ್ರಮದಲ್ಲಿಯೇ ಇರ್ಫಾನ್ ಕೂಗಾಡಿದ್ದು, ಈ ಕುರಿತು ವಿಡಿಯೋದಲ್ಲಿ ದಾಖಲಾಗಿದೆ. ಖಾನ್ ಅವರೇ ಅಜೆಂಡಾ ಹೊಂದಿದ್ದಾರೆ. ಆದರೆ ಇದು ಪಾಕಿಸ್ತಾನವಲ್ಲ ಭಾರತ ಎಂದು ಕೂಗಿದ್ದಾರೆ.

    ಪ್ರತಿಭಟನೆ ಬಗ್ಗೆ ತಲೆ ಕೆಡಿಸಿಕೊಳ್ಳದೆ ರಾಜ್ಯಪಾಲರು ತಮ್ಮ ಭಾಷಣವನ್ನು ಮುಂದುವರಿಸಿದ್ದು, ಮೌಲಾನಾ ಆಜಾದ್ ಅವರು ವಿಭಜನೆಯ ಕೊಳೆಯನ್ನು ಅಳಿಸಿ ಹಾಕಿದ್ದಾರೆ. ಆದರೆ ಈ ನಿಟ್ಟಿನಲ್ಲಿ ಇನ್ನೂ ಕೆಲವು ರಸ್ತೆ ಗುಂಡಿಗಳು ಉಳಿದಿವೆ. ಅದರಲ್ಲಿ ನೀರು ಸಂಗ್ರಹವಾಗಿದ್ದರಿಂದ ಇದೀಗ ಗಬ್ಬು ನಾರುತ್ತಿದೆ ಎಂದು ತಿಳಿಸಿದ್ದಾರೆ.

    ಇದಕ್ಕೆ ಅಸಮಾಧಾನಗೊಂಡ ಇರ್ಫಾನ್, ನಿಮ್ಮಿಂದ ದುರ್ವಾಸನೆ ಬರುತ್ತಿದೆ ಎಂದು ರಾಜ್ಯಪಾಲರಿಗೆ ತಿರುಗೇಟು ನೀಡಿ, ಮೌಲಾನಾ ಆಜಾದ್ ಅವರು ನಿಮ್ಮೆಲ್ಲರಿಗೂ ಇದನ್ನು ಹೇಳಿದ್ದಾರೆ ಎಂದು ಉತ್ತರಿಸಿದ್ದಾರೆ.

    ಘಟನೆ ನಂತರ ರಾಜ್ಯಪಾಲರು ಈ ಕುರಿತು ಟ್ವೀಟ್ ಮಾಡಿ, ತಮ್ಮ ಭಾಷಣಕ್ಕೆ ಅಡ್ಡಿ ಪಡಿಸಿ ಪ್ರತಿಭಟಿಸಲು ಮುಂದಾದ ಇರ್ಫಾನ್ ಹಬೀಬ್ ಅವರ ಹೇಳಿಕೆ ಕುರಿತು ತಿಳಿಸಿದ್ದಾರೆ. ನನ್ನ ಭಾಷಣಕ್ಕೆ ಅಡ್ಡಿ ಪಡಿಸಿ, ಸ್ವಾತಂತ್ರ್ಯ ಪೂರ್ವ ಕಾಂಗ್ರೆಸ್ ನಾಯಕ ಮೌಲಾನಾ ಆಜಾದ್ ಬದಲಿಗೆ ಗೋಡ್ಸೆ ಅವರ ಹೆಸರನ್ನು ಉಲ್ಲೇಖಿಸುವಂತೆ ಕೂಗಿದರು ಎಂದು ಟ್ವೀಟಿನಲ್ಲಿ ತಿಳಿಸಿದ್ದಾರೆ.

    ನಾನು ಭಾಷಣ ಮಾಡುವ ಮುನ್ನ ಮಾತನಾಡಿದ್ದ ಅತಿಥಿಗಳು ಎತ್ತಿದ್ದ ಅಂಶಗಳಿಗೆ ನಾನು ಉತ್ತರ ನೀಡುತ್ತಿದ್ದೆ. ಸಂವಿಧಾನವನ್ನು ರಕ್ಷಿಸುವುದು ನನ್ನ ಕರ್ತವ್ಯ. ಹೀಗಾಗಿ ನಾನು ಭಾಷಣದಲ್ಲಿ ಪ್ರಸ್ತಾಪ ಮಾಡಿದ್ದು ಕೆಲವರಿಗೆ ಇಷ್ಟವಾಗದ್ದಕ್ಕೆ ಗಲಾಟೆ ಎಬ್ಬಿಸಿದ್ದಾರೆ ಎಂದು ರಾಜ್ಯಪಾಲರು ಹೇಳಿದ್ದಾರೆ.