Tag: ಆರೂರು ಜಗದೀಶ್

  • ಅನಿರುದ್ಧ ಬ್ಯಾನ್ : ಕಿರುತೆರೆ ನಿರ್ಮಾಪಕರ ಸಂಘದಿಂದ ಖಡಕ್ ನಿರ್ಧಾರ

    ಅನಿರುದ್ಧ ಬ್ಯಾನ್ : ಕಿರುತೆರೆ ನಿರ್ಮಾಪಕರ ಸಂಘದಿಂದ ಖಡಕ್ ನಿರ್ಧಾರ

    ಜೊತೆ ಜೊತೆಯಲಿ ಧಾರಾವಾಹಿಯಿಂದ ಕೊನೆಗೂ ಅನಿರುದ್ದ ಹೊರ ನಡೆಯುವುದು ನಿಶ್ಚಿತವಾಗಿದೆ. ಮತ್ತೆ ಆ ಧಾರಾವಾಹಿಯಲ್ಲಿ ಅವರನ್ನು ತಗೆದುಕೊಳ್ಳಬಾರದು ಹಾಗೂ ಬೇರೆ ಯಾವುದೇ ಧಾರಾವಾಹಿ, ರಿಯಾಲಿಟಿ ಶೋಗಳಲ್ಲಿ ಅನಿರುದ್ಧ ಅವರನ್ನು ಆಯ್ಕೆ ಮಾಡಿಕೊಳ್ಳಬಾರದು ಎಂದು ಕಿರುತೆರೆ ನಿರ್ಮಾಪಕರ ಸಂಘವು ನಿರ್ಧಾರ ತಗೆದುಕೊಂಡಿದೆ. ಜೊತೆ ಜೊತೆಯಲಿ ಧಾರಾವಾಹಿ ನಿರ್ಮಾಪಕ ಆರೂರು ಜಗದೀಶ್ ನೀಡಿದ ದೂರಿನ ಮೇರೆಗೆ ಇಂಥದ್ದೊಂದು ನಿರ್ಧಾರ ತಗೆದುಕೊಳ್ಳುವುದಾಗಿ ನಿರ್ಮಾಪಕರ ಸಂಘದ ಅಧ್ಯಕ್ಷ ಭಾಸ್ಕರ್ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿ ಡಿಜಿಟಲ್ ಜೊತೆ ಮಾತನಾಡಿರುವ ನಿರ್ಮಾಪಕರ ಸಂಘದ ಅಧ್ಯಕ್ಷ ಭಾಸ್ಕರ್ , ‘ಅನಿರುದ್ಧ ಅವರ ಮೇಲೆ ನಿರ್ಮಾಪಕರು ದೂರು ನೀಡಿದ್ದರು. ಅದನ್ನು ಪರಿಶೀಲಿಸಿ ಮಹತ್ವದ ನಿರ್ಧಾರವೊಂದನ್ನು ತಗೆದುಕೊಂಡಿದ್ದೇನೆ. ಅವರನ್ನು ಬ್ಯಾನ್ ಮಾಡಿದ್ದೇವೆ ಎಂದು ಹೇಳುತ್ತಿಲ್ಲ. ಆದರೆ, ಮುಂದೆ ಯಾರೂ ಅವರನ್ನು ಧಾರಾವಾಹಿಗಾಗಲಿ, ರಿಯಾಲಿಟಿ ಶೋಗಾಗಿ ಆಯ್ಕೆ ಮಾಡಿಕೊಳ್ಳಬಾರದು ಎಂದು ನಿರ್ಧಾರ ಮಾಡಿದ್ದೇವೆ. ಈ ಕುರಿತು ವಾಹಿನಿಗೂ ತಿಳಿಸಿದ್ದೇವೆ’ ಅಂದರು. ಇದನ್ನೂ ಓದಿ: ಫಸ್ಟ್‌ ಟೈಮ್ ಮುದ್ದಾದ ಎರಡೂ ಮಕ್ಕಳ ಮುಖ ತೋರಿಸಿದ ನಟಿ ಅಮೂಲ್ಯ

    ಕೇವಲ ಅನಿರುದ್ಧ ಮಾತ್ರವಲ್ಲ, ಅನೇಕ ಕಲಾವಿದರು ಹೀಗೆಯೇ ನಿರ್ಮಾಪಕರಿಗೆ ತೊಂದರೆ ಕೊಡುತ್ತಲೇ ಇದ್ದಾರೆ. ಅವರನ್ನು ಸರಿದಾರಿಗೆ ತರಲು ಏನಾದರೂ ಒಂದು ಕಠಿಣ ಕ್ರಮವನ್ನು ತಗೆದುಕೊಳ್ಳಲೇಬೇಕು. ನಿರ್ಮಾಪಕರಿಗೆ ತೊಂದರೆ ಆದರೆ, ಅನೇಕರಿಗೆ ಅದರಿಂದ ಕೆಟ್ಟ ಪರಿಣಾಮ ಬೀರುತ್ತದೆ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು. ಅನಿರುದ್ಧ ಘಟನೆಯು ಇತರರಿಗೆ ಪಾಠವಾಗಬೇಕು ಎನ್ನುತ್ತಾರೆ ಭಾಸ್ಕರ್.

    ಅನಿರುದ್ಧ ವಿಚಾರವಾಗಿ ಈಗಾಗಲೇ ಜೀ ಕನ್ನಡ ವಾಹಿನಿಯೊಂದಿಗೆ ಮಾತನಾಡಿರುವುದಾಗಿ ಭಾಸ್ಕರ್ ತಿಳಿಸಿದರು. ಈಗಾಗಲೇ ಹಲವು ಬಾರಿ ವಾಹಿನಿಯು ಕೂಡ ಅನಿರುದ್ಧ ಮತ್ತು ನಿರ್ಮಾಪಕರ ನಡುವೆ ರಾಜಿ  ಸಂಧಾನ ಮಾಡಿದೆಯಂತೆ. ಆದರೂ, ಅದು ಸರಿ ಹೋಗದೇ ಇರುವ ಕಾರಣಕ್ಕಾಗಿ ಅನಿವಾರ್ಯವಾಗಿ ಇಂಥದ್ದೊಂದು ಕ್ರಮ ತಗೆದುಕೊಳ್ಳಬೇಕಾಗಿದೆ ಎನ್ನುತ್ತಾರೆ ಭಾಸ್ಕರ್.

    Live Tv
    [brid partner=56869869 player=32851 video=960834 autoplay=true]

  • ಅನಿರುದ್ಧ ಇಲ್ಲದೇ ಶೂಟಿಂಗ್ ಮುಂದುವರೆಸಿದ ‘ಜೊತೆ ಜೊತೆಯಲಿ’ ಸೀರಿಯಲ್ ಡೈರೆಕ್ಟರ್

    ಅನಿರುದ್ಧ ಇಲ್ಲದೇ ಶೂಟಿಂಗ್ ಮುಂದುವರೆಸಿದ ‘ಜೊತೆ ಜೊತೆಯಲಿ’ ಸೀರಿಯಲ್ ಡೈರೆಕ್ಟರ್

    ಜೊತೆ ಜೊತೆಯಲಿ ಧಾರಾವಾಹಿಯಿಂದ ಅನಿರುದ್ಧ ಅವರನ್ನು ಕೈ ಬಿಟ್ಟು ಶೂಟಿಂಗ್ ಮುಂದುವರೆಸಿದ್ದಾರಂತೆ ನಿರ್ದೇಶಕರು. ಈ ಧಾರಾವಾಹಿಯ ಪ್ರಧಾನ ನಿರ್ದೇಶಕರು ಮತ್ತು ನಿರ್ಮಾಪಕರು ಆಗಿರುವ ಆರೂರು ಜಗದೀಶ್, ಇಂದು ಕೂಡ ಚಿತ್ರೀಕರಣವನ್ನು ಮುಂದುವರೆಸಿದ್ದಾರಂತೆ. ಈ ನಡುವೆ ಅನಿರುದ್ಧ ನಿರ್ವಹಿಸುತ್ತಿದ್ದ ಪಾತ್ರಕ್ಕಾಗಿ ಹೊಸ ಕಲಾವಿದರನ್ನೂ ಹುಡುಕುತ್ತಿದ್ದಾರಂತೆ.

    ಮಾಧ್ಯಮಗಳ ಜೊತೆ ಮಾತನಾಡಿರುವ ಆರೂರು ಜಗದೀಶ್, ‘ಜೊತೆ ಜೊತೆಯಲಿ ಧಾರಾವಾಹಿಗೆ ಕಥೆಯೇ ಹೀರೋ ಹಾಗೂ ಹಿರೋಯಿನ್. ಯಾರೇ ಇರಲಿ, ಇರದೇ ಇರಲಿ ಧಾರಾವಾಹಿ ನಡೆಯಲೇಬೇಕು. ಈ ಧಾರಾವಾಹಿ ನಂಬಿಕೊಂಡು ನನ್ನನ್ನೂ ಸೇರಿದಂತೆ ಹಲವರು ಇದ್ದಾರೆ. ಹಾಗಾಗಿ ಚಿತ್ರೀಕರಣ ಮುಂದುವರೆಸಲೇಬೇಕಿದೆ’ ಎಂದು ಹೇಳಿಕೊಂಡಿದ್ದಾರೆ. ಹಾಗಾಗಿ ಅನಿರುದ್ಧ ಅವರು ವಾಪಸ್ಸು ಬರದೇ ಇದ್ದರೂ, ಯಾರೇ ಬಂದರೂ ಶೂಟಿಂಗ್ ನಡೆಯಲಿದೆ ಎನ್ನುವ ಸ್ಪಷ್ಟ ಸಂದೇಶವನ್ನು ರವಾನಿಸಿದ್ದಾರೆ. ಇದನ್ನೂ ಓದಿ: ಕೊನೆಗೂ ಶಿವಣ್ಣ, ಅನುಶ್ರೀ ಭೇಟಿಯಾಗಿ ಆಸೆ ಈಡೇರಿಸಿಕೊಂಡ ಕಾಫಿನಾಡು ಚಂದು

    ನಿನ್ನೆ ನಡೆಯುತ್ತಿದ್ದ ಶೂಟಿಂಗ್ ನಲ್ಲಿ ಅನಿರುದ್ಧ ಅವರೇ ಬಿಟ್ಟು ಹೋಗಿರುವುದರಿಂದ, ಅವರನ್ನು ಧಾರಾವಾಹಿ ತಂಡ ಮತ್ತೆ ಕರೆಯುವುದು ಅನುಮಾನ ಎನ್ನಲಾಗುತ್ತಿದೆ. ಆದರೆ, ಆರೂರು ಜಗದೀಶ್ ಮತ್ತು ಅನಿರುದ್ಧ ಕೂಡಿಸಿಕೊಂಡು ವಾಹಿನಿಯು ಮಾತನಾಡಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ವಾಹಿನಿಯ ಮಧ್ಯಸ್ಥಿಕೆಯಲ್ಲಿ ಈ ಜೋಡಿ ಮತ್ತೆ ಒಂದಾಗಲಿದೆಯಾ ಅನ್ನುವ ಕುತೂಹಲ ಕೂಡ ಮೂಡಿದೆ. ಈಗಾಗಲೇ ಹಲವಾರು ಬಾರಿ ಇದೇ ರೀತಿಯಲ್ಲೇ ಮನಸ್ತಾಪ ಆಗಿರುವುದರಿಂದ ಧಾರಾವಾಹಿ ನಿರ್ಮಾಪಕರು ಇದಕ್ಕೆ ಒಪ್ಪುತ್ತಾರಾ ಎನ್ನುವ ಪ್ರಶ್ನೆಯೂ ಮೂಡಿದೆ.

    ಇಂದು ಸಂಧಾನ ನಡೆಯುವ ಸಾಧ್ಯತೆಯಿದ್ದು, ಧಾರಾವಾಹಿ ತಂಡದೊಂದಿಗೆ ಮಾತನಾಡುವುದಾಗಿ ಈಗಾಗಲೇ ಅನಿರುದ್ಧ ಹೇಳಿಕೊಂಡಿದ್ದಾರೆ. ಒಂದು ವೇಳೆ ಧಾರಾವಾಹಿಯಿಂದ ಕೈ ಬಿಟ್ಟರೆ, ಪತ್ರಿಕಾಗೋಷ್ಠಿ ಮಾಡುವುದಾಗಿಯೂ ತಿಳಿಸಿದ್ದಾರೆ. ಆದರೆ, ಈ ಕುರಿತು ಮಾತನಾಡಲು ನಿರ್ಮಾಪಕ ಕಂ ನಿರ್ದೇಶಕ ಆರೂರು ಜಗದೀಶ್ ನಿರಾಕರಿಸಿದ್ದಾರೆ. ಅನಿರುದ್ಧ ಅವರ ನಡೆ ನೋಡಿಕೊಂಡು ಪ್ರತಿಕ್ರಿಯೆ ನೀಡಲಿದ್ದೇನೆ ಎಂದೂ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಜೊತೆ ಜೊತೆಯಲಿ ಟೀಮ್ ನನ್ನ ಹೊರ ಹಾಕಿದರೆ, ಪ್ರೆಸ್ ಮೀಟ್ ಮಾಡಿ ಉತ್ತರ ಕೊಡುವೆ : ನಟ ಅನಿರುದ್ಧ

    ಜೊತೆ ಜೊತೆಯಲಿ ಟೀಮ್ ನನ್ನ ಹೊರ ಹಾಕಿದರೆ, ಪ್ರೆಸ್ ಮೀಟ್ ಮಾಡಿ ಉತ್ತರ ಕೊಡುವೆ : ನಟ ಅನಿರುದ್ಧ

    ಟ ಅನಿರುದ್ಧ ಜನಪ್ರಿಯ ಧಾರಾವಾಹಿಯಿಂದ ಹೊರ ನಡೆದ ಸುದ್ದಿ ನಿನ್ನೆಯಿಂದಲೂ ಸಖತ್ ಸದ್ದು ಮಾಡುತ್ತಿದೆ. ಧಾರಾವಾಹಿಯಿಂದ ಅನಿರುದ್ಧ ಅವರೇ ಹೊರ ನಡೆದಿದ್ದಾರೆ ಎಂದು ಒಂದು ಕಡೆ ಸುದ್ದಿ ಆಗುತ್ತಿದ್ದರೆ, ಧಾರಾವಾಹಿ ತಂಡವೇ ಅವರನ್ನು ಹೊರ ಕಳುಹಿಸುತ್ತಿದೆ ಎಂದೂ ಹೇಳಲಾಗುತ್ತಿದೆ. ಆದರೆ, ಎರಡೂ ಕಡೆ ಈ ಕುರಿತು ಸ್ಪಷ್ಟತೆ ಇಲ್ಲ. ಧಾರಾವಾಹಿ ತಂಡದ ಸದಸ್ಯರು ಈ ಕುರಿತು ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಆದರೆ, ಅನಿರುದ್ಧ ಈ ಬೆಳವಣಿಗೆ ಕುರಿತು ಮಾತನಾಡಿದ್ದಾರೆ.

    ಮನೆಯಲ್ಲೇ ಸಣ್ಣ ಪುಟ್ಟ ಮನಸ್ತಾಪಗಳು ಆಗುತ್ತವೆ. ಹಾಗೆಯೇ ಶೂಟಿಂಗ್ ಸೆಟ್ ನಲ್ಲೂ ಆಗಿವೆ ಎಂದು ಹೇಳುವ ಮೂಲಕ ಸದ್ಯ ಯಾವುದೂ ಸರಿಯಿಲ್ಲ ಎನ್ನುವುದನ್ನು ಪರೋಕ್ಷವಾಗಿಯೇ ಒಪ್ಪಿಕೊಂಡಿದ್ದಾರೆ. ಧಾರಾವಾಹಿಯಿಂದ ತಮ್ಮನ್ನು ಹೊರ ಹಾಕುತ್ತಿದ್ದಾರೆ ಎನ್ನುವ ವಿಷಯ ಗೊತ್ತಿಲ್ಲವೆಂದು ಸ್ಪಷ್ಟ ಪಡಿಸಿದ್ದಾರೆ. ವಾಹಿನಿಯಾಗಲಿ ಅಥವಾ ಧಾರಾವಾಹಿ ತಂಡವಾಗಲಿ, ಈ ಕುರಿತು ಮಾತನಾಡಲು ತಮ್ಮನ್ನು ಸಂಪರ್ಕಿಸಿಲ್ಲ ಎಂದಿರುವ ಅವರು, ಈ ಸುದ್ದಿಯ ಕುರಿತಾಗಿ ಮಾತನಾಡಲು ಚಾನೆಲ್ ಗೆ ಹೋಗುತ್ತಿರುವುದಾಗಿಯೂ ತಿಳಿಸಿದ್ದಾರೆ. ಇದನ್ನೂ ಓದಿ: ಕೊನೆಗೂ ಶಿವಣ್ಣ, ಅನುಶ್ರೀ ಭೇಟಿಯಾಗಿ ಆಸೆ ಈಡೇರಿಸಿಕೊಂಡ ಕಾಫಿನಾಡು ಚಂದು

    ಧಾರಾವಾಹಿಯಿಂದ ಹೊರ ನಡೆಯುವ ವಿಚಾರದಲ್ಲಿ ಸ್ಪಷ್ಟತೆ ಇಲ್ಲದೇ ಇರುವ ಕಾರಣಕ್ಕಾಗಿ ತಂಡದೊಂದಿಗೆ ಮಾತನಾಡುವುದಾಗಿ ತಿಳಿಸಿರುವ ಅನಿರುದ್ಧ, ಒಂದು ವೇಳೆ ಆ ರೀತಿಯಲ್ಲಿ ಏನಾದರೂ ನಡೆದರೆ, ಪತ್ರಿಕಾಗೋಷ್ಠಿ ಮಾಡಿಯೇ ಎಲ್ಲ ವಿಷಯವನ್ನೂ ತಿಳಿಸುವುದಾಗಿ ಹೇಳಿಕೊಂಡಿದ್ದಾರೆ. ಈ ಎಲ್ಲ ನಿರ್ಧಾರವೂ ಧಾರಾವಾಹಿ ತಂಡದ ಮೇಲೆಯೇ ನಿಂತಿದೆ ಎಂದು ಅನಿರುದ್ಧ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕ್ಯಾಮೆರಾಗೆ ಕೈ ಮುಗಿದು ಜೊತೆ ಜೊತೆಯಲಿ ಸೀರಿಯಲ್ ನಿಂದ ಹೊರ ನಡೆದ ಅನಿರುದ್ಧ?: ಶೂಟಿಂಗ್ ಸೆಟ್ ನಲ್ಲಿ ಆಗಿದ್ದೇನು?

    ಕ್ಯಾಮೆರಾಗೆ ಕೈ ಮುಗಿದು ಜೊತೆ ಜೊತೆಯಲಿ ಸೀರಿಯಲ್ ನಿಂದ ಹೊರ ನಡೆದ ಅನಿರುದ್ಧ?: ಶೂಟಿಂಗ್ ಸೆಟ್ ನಲ್ಲಿ ಆಗಿದ್ದೇನು?

    ಜೊತೆ ಜೊತೆಯಲಿ ಸೀರಿಯಲ್ ನಿಂದ ಅನಿರುದ್ಧ ಹೊರ ನಡೆದ ಸುದ್ದಿ ಧಾರಾವಾಹಿ ಲೋಕದಲ್ಲಿ ಕೋಲಾಹಲ ಉಂಟು ಮಾಡಿದೆ. ಈ ಧಾರಾವಾಹಿ ಅನಿರುದ್ಧ ಅವರಿಗೆ ವೃತ್ತಿ ಜೀವನದಲ್ಲಿ ದೊಡ್ಡದೊಂದು ಬ್ರೇಕ್ ನೀಡಿದ್ದು ಸುಳ್ಳಲ್ಲ. ಅವರ ಮೂಲ ಹೆಸರನ್ನು ಮರೆತು, ಅನಿರುದ್ಧ ಅವರನ್ನು ಆರ್ಯವರ್ಧನ್ ಹೆಸರಿನಿಂದಲೇ ಅಭಿಮಾನಿಗಳು ಕರೆಯುವಷ್ಟು ದೊಡ್ಡ ಮಟ್ಟದಲ್ಲಿ ಅವರಿಗೆ ಹೆಸರು ತಂದುಕೊಟ್ಟಿತ್ತು. ಹೆಸರು ಮಾತ್ರವಲ್ಲ ಕೈ ತುಂಬಾ ಸಂಬಳವನ್ನೂ ಅದು ನೀಡಿತ್ತು.

    ಈ ಮಧ್ಯೆ ಧಾರಾವಾಹಿ ತಂಡಕ್ಕೂ ಮತ್ತು ಅನಿರುದ್ಧ ಅವರಿಗೆ ಮನಸ್ತಾಪವಾಗಿ, ನಿನ್ನೆಯಷ್ಟೇ ಶೂಟಿಂಗ್ ಗೆ ಬಂದಿದ್ದ ಅನಿರುದ್ಧ ಕ್ಯಾಮೆರಾಗೆ ಕೈ ಮುಗಿದು, ಶೂಟಿಂಗ್ ಸ್ಥಳದಿಂದ ಹೊರ ನಡೆದಿದ್ದಾರೆ ಎನ್ನುತ್ತಿವೆ ಮೂಲಗಳು. ಈ ಮನಸ್ತಾಪ ನಿನ್ನೆಯಷ್ಟೇ ಆದದ್ದು ಅಲ್ಲವಂತೆ. ಹಲವು ದಿನಗಳಿಂದ ಧಾರಾವಾಹಿ ತಂಡಕ್ಕೂ ಮತ್ತು ಅನಿರುದ್ಧ ಅವರಿಗೂ ಮುಸುಕಿನ ಗುದ್ದಾಟ ನಡೆದೇ ಇತ್ತಂತೆ. ನಿನ್ನೇ ಅದು ಸ್ಪೋಟವಾಗಿ ಧಾರಾವಾಹಿ ಸೆಟ್ ನಿಂದ ಹೊರ ಹೋಗುವಂತೆ ಮಾಡಿದೆ. ಇದನ್ನೂ ಓದಿ:ರಾಜ್ಯಪಾಲರಾಗ್ತಾರಾ ಸೂಪರ್ ಸ್ಟಾರ್ ರಜನಿಕಾಂತ್?

    ಧಾರಾವಾಹಿಯ ತಂಡದ ಸದಸ್ಯರು ಹೇಳುವಂತೆ, ಅನಿರುದ್ಧ ಅವರು ಹಲವು ತಿಂಗಳಿಂದ ತಂಡದೊಂದಿಗೆ ಕಿರಿಕಿರಿ ಮಾಡುತ್ತಲೇ ಇದ್ದರಂತೆ. ಶೂಟಿಂಗ್ ಗೆ ತಡವಾಗಿ ಬರುವುದು, ಡೇಟ್ ಕೊಡದೇ ಇರುವುದು ಹಾಗೂ ಬರೆದು ಡೈಲಾಗ್ ಅನ್ನು ಹೇಳದೇ ಇರುವುದು ಹೀಗೆ ನಾನಾ ರೀತಿಯ ತೊಂದರೆಗಳನ್ನು ಮಾಡುತ್ತಲೇ ಇದ್ದರಂತೆ. ನಿನ್ನೆ ಕೂಡ ಇದನ್ನೇ ಮಾಡಿದ್ದರಿಂದ, ನಿರ್ಮಾಪಕರಿಗೂ ಮತ್ತು ಅನಿರುದ್ಧ ಮಧ್ಯೆ ಸಣ್ಣದೊಂದು ಗಲಾಟೆ ಕೂಡ ಆಗಿದೆಯಂತೆ.

    ನಿನ್ನೆ ಶೂಟಿಂಗ್ ಸ್ಪಾಟ್ ನಿಂದ ಹೊರ ಹೋದ ಅನಿರುದ್ಧ ಅವರನ್ನು ಮನವೊಲಿಸುವ ಪ್ರಯತ್ನಕ್ಕಿಂತ, ಅವರ ಪಾತ್ರಕ್ಕೆ ಬೇರೆ ಕಲಾವಿದರನ್ನು ಹುಡುಕುವ ಕೆಲಸ ಈಗಾಗಲೇ ನಡೆದಿದೆಯಂತೆ. ಈ ವಿಷಯದ ಕುರಿತು ವಾಹಿನಿಯೊಂದಿಗೆ ಮಾತನಾಡಿದ್ದಾರೆ ಎನ್ನಲಾಗುತ್ತದೆ. ಹೊಸ ಕಲಾವಿದರನ್ನು ಹುಡುಕಲು ವಾಹಿನಿಯೂ ಗ್ನೀನ್ ಸಿಗ್ನಲ್ ಕೊಟ್ಟಿದೆ ಎಂದು ಹೇಳಲಾಗುತ್ತಿದೆ. ಅನಿರುದ್ಧ ಬದಲಾಗಿ ಬೇರೆ ಕಲಾವಿದರನ್ನೇ ಇಟ್ಟುಕೊಂಡು ಮುಂದಿನ ದಿನಗಳಲ್ಲಿ ಶೂಟ್ ಮಾಡಲಾಗುತ್ತಿದೆ ಎನ್ನುತ್ತಿವೆ ಮೂಲಗಳು.

    Live Tv
    [brid partner=56869869 player=32851 video=960834 autoplay=true]

  • ‘ಜೊತೆ ಜೊತೆಯಲಿ’ ಸೀರಿಯಲ್ ನಿಂದ ಅನಿರುದ್ಧ ಔಟ್ : ಕೆಟಿವಿಎಗೆ ಕಂಪ್ಲೆಂಟ್ ಬಂದಿಲ್ಲ ಎಂದ ಅಧ್ಯಕ್ಷ ಶಿವಕುಮಾರ್

    ‘ಜೊತೆ ಜೊತೆಯಲಿ’ ಸೀರಿಯಲ್ ನಿಂದ ಅನಿರುದ್ಧ ಔಟ್ : ಕೆಟಿವಿಎಗೆ ಕಂಪ್ಲೆಂಟ್ ಬಂದಿಲ್ಲ ಎಂದ ಅಧ್ಯಕ್ಷ ಶಿವಕುಮಾರ್

    ಜೀ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿಯಿಂದ ಆರ್ಯವರ್ಧನ್ ಪಾತ್ರಧಾರಿ, ವಿಷ್ಣುವರ್ಧನ್ ಅವರ ಅಳಿಯ ಅನಿರುದ್ಧ ಅವರನ್ನು ಕೈ ಬಿಡಲಾಗಿದೆ ಎನ್ನುವ ಸುದ್ದಿ ಭಾರೀ ಸದ್ದು ಮಾಡುತ್ತಿದೆ. ಶೂಟಿಂಗ್ ಸ್ಪಾಟ್ ನಲ್ಲೇ ಅವರು ನಿರ್ಮಾಪಕ ಕಂ ನಿರ್ದೇಶಕರ ಜೊತೆ ಕಿರಿಕ್ ಮಾಡಿಕೊಂಡರು ಅನ್ನುವ ಕಾರಣಕ್ಕಾಗಿ ಈ ರೀತಿ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಲಾಗುತ್ತಿದೆ. ಹಲವು ಬಾರಿ ಇದೇ ರೀತಿ ಅನಿರುದ್ಧ ಅವರು ತಂಡದೊಂದಿಗೆ ನಡೆದುಕೊಂಡಿದ್ದಾರೆ ಅನ್ನುವ ಕಾರಣಕ್ಕಾಗಿಯೇ ಕಿರುತೆರೆಯಿಂದಲೇ ಅವರನ್ನು ಬ್ಯಾನ್ ಮಾಡಲಾಗುತ್ತಿದೆ ಎನ್ನುವ ಸುದ್ದಿಯೂ ಹರಡಿದೆ.

    ಈ ಪ್ರಕರಣದ ಕುರಿತಂತೆ ಈಗಾಗಲೇ ಕರ್ನಾಟಕ ಟೆಲಿವಿಷನ್ ಅಸೋಷಿಯೇಷನ್ಗೆ ಕಂಪ್ಲೆಂಟ್ ಕೂಡ ಮಾಡಿದ್ದು ಅನಿರುದ್ಧ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ ಎನ್ನುವ ಮಾತೂ ಕೇಳಿ ಬಂದಿತ್ತು. ಈ ಕುರಿತು ಪಬ್ಲಿಕ್ ಟಿವಿ ಡಿಜಿಟಲ್ ಜೊತೆ ಮಾತನಾಡಿದ ಕರ್ನಾಟಕ ಟೆಲಿವಿಷನ್ ಅಸೋಷಿಯೇಷನ್ ಅಧ್ಯಕ್ಷ ಎಸ್.ವಿ. ಶಿವಕುಮಾರ್, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ದೂರು ಬಂದಿಲ್ಲ ಎಂದು ತಿಳಿಸಿದ್ದಾರೆ. ಈ ವಿಷಯದ ಕುರಿತು ಯಾವುದೇ ಮಾಹಿತಿ ಕೂಡ ತಮಗೆ ಗೊತ್ತಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. ಇದನ್ನೂ ಓದಿ:ರಾಜ್ಯಪಾಲರಾಗ್ತಾರಾ ಸೂಪರ್ ಸ್ಟಾರ್ ರಜನಿಕಾಂತ್?

    “ಒಂದು ಸೀರಿಯಲ್ ನಿಂದ ಕಲಾವಿದರು ಬದಲಾಗುವುದು ಕಾಮನ್. ಆದರೆ, ಜೊತೆ ಜೊತೆಯಲಿ ಸೀರಿಯಲ್ ನಲ್ಲಿ ಏನಾಗಿದೆ ಎನ್ನುವುದು ಗೊತ್ತಿಲ್ಲ. ಕರ್ನಾಟಕ ಟೆಲಿವಿಷನ್ ಅಸೋಷಿಯೇಷನ್ ಗೂ ಯಾವುದೇ ದೂರು ಕೂಡ ಬಂದಿಲ್ಲ. ಹಾಗೇನಾದರೂ ಬಂದರೆ, ಕೂರಿಸಿ ಮಾತನಾಡುತ್ತೇವೆ. ಉದ್ಯಮದ ಉಳುವಿಗಾಗಿಯೇ ನಮ್ಮ ಸಂಘಟನೆ ಇರುವುದು. ವೈಯಕ್ತಿಕವಾಗಿ ಜೊತೆ ಜೊತೆಯಲಿ ಧಾರಾವಾಹಿಯ ನಿರ್ದೇಶಕರು, ನಿರ್ಮಾಪಕರು ಹಾಗೂ ನಟ ಅನಿರುದ್ಧ ಅವರು ಹಲವು ವರ್ಷಗಳಿಂದ ಪರಿಚಿತರು. ಹಾಗೆ ಆಗಿರಲಿಕ್ಕಿಲ್ಲ ಎಂದು ಭಾವಿಸುವೆ’ ಎಂದಿದ್ದಾರೆ ಎಸ್.ವಿ. ಶಿವಕುಮಾರ್.

    Live Tv
    [brid partner=56869869 player=32851 video=960834 autoplay=true]