Tag: ಆರೋಗ್ಯ ಸಚಿವೆ

  • Video Viral | ಪ್ರೆಸ್‌ ಮೀಟ್‌ ನಡೆಯುತ್ತಿದ್ದಾಗಲೇ ಕುಸಿದು ಬಿದ್ದ ಸ್ವೀಡನ್‌ನ ನೂತನ ಆರೋಗ್ಯ ಸಚಿವೆ

    Video Viral | ಪ್ರೆಸ್‌ ಮೀಟ್‌ ನಡೆಯುತ್ತಿದ್ದಾಗಲೇ ಕುಸಿದು ಬಿದ್ದ ಸ್ವೀಡನ್‌ನ ನೂತನ ಆರೋಗ್ಯ ಸಚಿವೆ

    – ಅಧಿಕಾರ ವಹಿಸಿಕೊಂಡ ಕೆಲವೇ ಗಂಟೆಗಳಲ್ಲಿ ಘಟನೆ

    ಸ್ಟಾಕ್‌ಹೋಮ್: ಪ್ರೆಸ್‌ ಮೀಟ್‌ ನಡೆಯುತ್ತಿದ್ದ ವೇಳೆ ಸ್ವೀಡನ್‌ನ ನೂತನ ಆರೋಗ್ಯ ಸಚಿವೆ ಎಲಿಸಬೆಟ್ ಲ್ಯಾನ್ (Elisabet Lann) ವೇದಿಕೆಯಲ್ಲೇ ಕುಸಿದು ಬಿದ್ದ ಘಟನೆ ನಡೆದಿದೆ. ಲ್ಯಾನ್‌ ಅಧಿಕಾರ ವಹಿಸಿಕೊಂಡ ಕೆಲವೇ ಗಂಟೆಗಳಲ್ಲಿ ಈ ಘಟನೆ ಸಂಭವಿಸಿದಿದೆ.

    ಸುದ್ದಿಗೋಷ್ಠಿಯಲ್ಲಿ (Press Conference) 48 ವರ್ಷದ ಎಲಿಸಬೆಟ್ ಲ್ಯಾನ್, ಸ್ವೀಡಿಷ್ ಪ್ರಧಾನಿ ಉಲ್ಫ್ ಕ್ರಿಸ್ಟರ್ಸನ್ ಹಾಗೂ ಕ್ರಿಶ್ಚಿಯನ್ ಡೆಮಾಕ್ರಟಿಕ್ ಪಕ್ಷದ ನಾಯಕಿ ಎಬ್ಬಾ ಬುಷ್ ಪಕ್ಕದಲ್ಲಿ ನಿಂತಿದ್ದರು. ಪತ್ರಕರ್ತರು ಪ್ರಶ್ನೆ ಕೇಳುತ್ತಿರುವಾಗಲೇ ವೇದಿಕೆಯಿಂದ ಗಾಜಿನ ಪೋಡಿಯಂ ಸಮೇತ ಕುಸಿದುಬಿದ್ದಿದ್ದಾರೆ. ಇದನ್ನೂ ಓದಿ: ಸ್ಪೇನ್‌ನಲ್ಲಿ ಬೀಚ್‌ಗಳನ್ನು ಬಂದ್‌ ಮಾಡಿಸಿದ ನೀಲಿ ಡ್ರ್ಯಾಗನ್‌ – ಏನಿದರ ವಿಶೇಷ? 

    16 ಸೆಕೆಂಡುಗಳ ವಿಡಿಯೋ ವೈರಲ್‌
    ಎಲಿಸಬೆಟ್ ಲ್ಯಾನ್ ನೂತನ ಆರೋಗ್ಯ ಸಚಿವೆಯಾಗಿ (Swedish New Health Minister) ಅಧಿಕಾರ ಸ್ವೀಕರಿಸಿದ್ದರು. ಇದಾದ ಕೆಲವೇ ಗಂಟೆಗಳಲ್ಲಿ ಪ್ರೆಸ್‌ಮೀಟ್‌ ಆಯೋಜನೆ ಮಾಡಲಾಗಿತ್ತು. ಸುದ್ದಿಗೋಷ್ಠಿಯಲ್ಲಿ ಅಧಿಕಾರಿಯೊಬ್ಬರ ಮಾತುಗಳನ್ನು ಆಲಿಸುತ್ತಿದ್ದರು. ಹಾಗೆಯೇ ಮುಂದಕ್ಕೆ ಬಾಗುತ್ತಲೇ ಪೋಡಿಯಂ ಸಮೇತ ನೆಲಕ್ಕೆ ಕುಸಿದು ಬಿದ್ದರು. ಈ ದೃಶ್ಯ 16 ಸೆಕೆಂಡುಗಳ ವಿಡಿಯೋನಲ್ಲಿ ಸೆರೆಯಾಗಿದೆ. ಸೋಷಿಯಲ್‌ ಮೀಡಿಯಾದಲ್ಲೂ ವಿಡಿಯೋ ವೈರಲ್‌ ಆಗಿದೆ.

    ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸಚಿವರನ್ನ ಸಹ ಅಧಿಕಾರಿಗಳು ಹಾಗೂ ವೇದಿಕೆ ಮುಂಭಾಗದಲ್ಲಿದ್ದ ಪತ್ರಕರ್ತರು ಆಕೆಯನ್ನ ಮೇಲೆತ್ತಿ ಕೂರಿಸಿದ್ದಾರೆ. ಸ್ವಲ್ಪ ನೀರು ಕುಡಿಸಿ ವಿಶ್ರಾಂತಿ ಕೊಡಿಸಿದ್ದಾರೆ. ಲ್ಯಾನ್ ಸ್ವಲ್ಪ ಸಮಯದ ನಂತರ ಮತ್ತೆ ಸುದ್ದಿಗೋಷ್ಠಿಗೆ ಹಾಜರಾಗಿ ಅನೇಕ ವಿಷಯ ಪ್ರಸ್ತಾಪಿಸಿದ್ದಾರೆ. ಇದನ್ನೂ ಓದಿ: ಕತಾರ್‌ ಮೇಲೆ ಇಸ್ರೇಲ್‌ ಏರ್‌ಸ್ಟ್ರೈಕ್‌; ಹಮಾಸ್‌ ನಾಯಕನ ಪುತ್ರ ಸೇರಿ 6 ಮಂದಿ ಬಲಿ – ಟಾಪ್‌ ಲೀಡರ್‌ ಪಾರು

    ಸದ್ಯ ನೂತನ ಸಚಿವರು ಕುಸಿದುಬಿದ್ದ ಬಗ್ಗೆ ನಿಖರ ಕಾರಣ ತಿಳಿದಿಲ್ಲ. ಮೇಲ್ನೋಟಕ್ಕೆ ಕಡಿಮೆ ರಕ್ತದೊತ್ತಡದಿಂದ (ಲೋ ಬಿಪಿ) ಸಂಭವಿಸಿರಬಹುದು ಎಂದು ತಿಳಿಸಿರುವುದಾಗಿ ವರದಿಯಾಗಿದೆ. ಇದನ್ನೂ ಓದಿ: ನೇಪಾಳ ಧಗ ಧಗ – ಉದ್ರಿಕ್ತರಿಂದ ಮನೆಗೆ ಬೆಂಕಿ, ಮಾಜಿ ಪ್ರಧಾನಿ ಪತ್ನಿ ಸಾವು

  • ಭಾರತೀಯ ಗರ್ಭಿಣಿ ಪ್ರವಾಸಿ ಸಾವು- ಪೋರ್ಚುಗಲ್‍ನ ಆರೋಗ್ಯ ಸಚಿವೆ ರಾಜೀನಾಮೆ

    ಭಾರತೀಯ ಗರ್ಭಿಣಿ ಪ್ರವಾಸಿ ಸಾವು- ಪೋರ್ಚುಗಲ್‍ನ ಆರೋಗ್ಯ ಸಚಿವೆ ರಾಜೀನಾಮೆ

    ಲಿಸ್ಬನ್: ಭಾರತೀಯ ಗರ್ಭಿಣಿ ಪ್ರವಾಸಿಯೊಬ್ಬರು ಆಸ್ಪತ್ರೆಯಲ್ಲಿ ಹಾಸಿಗೆ ಲಭ್ಯತೆಯಿಲ್ಲದೇ ಪೋರ್ಚುಗಲ್‍ನಲ್ಲಿ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಆರೋಗ್ಯ ಸಚಿವೆ ಮಾರ್ಟಾ ಟೆಮಿಡೊ ರಾಜೀನಾಮೆ ನೀಡಿದ್ದಾರೆ.

    ತುರ್ತು ಪ್ರಸೂತಿ ಸೇವೆಗಳನ್ನು ತಾತ್ಕಾಲಿಕವಾಗಿ ಮುಚ್ಚಿದ್ದರಿಂದಾಗಿ ಹಾಸಿಗೆಯ ಕೊರತೆ ಉಂಟಾಗಿತ್ತು. ಇದರಿಂದಾಗಿ 34 ವರ್ಷದ ಭಾರತೀಯ ಗರ್ಭಿಣಿಯನ್ನು ಬೇರೆ ಆಸ್ಪತ್ರೆಗೆ ವರ್ಗಾಯಿಸುವ ಸಮಯದಲ್ಲಿ ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರವು ತೀವ್ರ ಟೀಕೆಗೆ ಒಳಗಾಗಿದೆ. ಹೀಗಾಗಿ ಆರೋಗ್ಯ ಸಚಿವೆ ರಾಜೀನಾಮೆ ನೀಡಿದ್ದಾರೆ.

    ಈ ವೇಳೆ ಆರೋಗ್ಯ ಸಚಿವೆ ಮಾರ್ಟಾ ಟೆಮಿಡೊ ಮಾತನಾಡಿ, ಇನ್ನೂ ಮುಂದೆ ಯಾವುದೇ ಷರತ್ತುಗಳನ್ನು ಹೊಂದಿಲ್ಲ. ರಾಜೀನಾಮೆಯನ್ನು ಪ್ರಧಾನಮಂತ್ರಿ ಅವರು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು. ಈ ರಾಜೀನಾಮೆಯನ್ನು ಲಿಸ್ಬನ್‍ನಲ್ಲಿ ಗರ್ಭಿಣಿ ಸಾವನ್ನಪ್ಪಿದ 5 ಗಂಟೆಯ ನಂತರ ಘೋಷಿಸಲಾಗಿದೆ. ಇದನ್ನೂ ಓದಿ: ಬ್ಲೇಡ್‍ನಿಂದ ಸಾವರ್ಕರ್ ಫ್ಲೆಕ್ಸ್ ಹರಿದ ಕಿಡಿಗೇಡಿಗಳು!

    crime

    ಘಟನೆಯೇನು?: 31 ವಾರಗಳ ಗರ್ಭಿಣಿಯಾಗಿದ್ದ ಭಾರತೀಯ ಮಹಿಳೆಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅಲ್ಲಿ ಅತಿದೊಡ್ಡ ಆರೋಗ್ಯ ಸೌಲಭ್ಯಗಳಲ್ಲಿ ಒಂದಾದ ಸಾಂಟಾ ಮಾರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಆಕೆಯ ಆರೋಗ್ಯ ಸ್ಥಿತಿಯನ್ನು ಸ್ಥಿರಗೊಳಿಸಲಾಯಿತು. ಆದರೆ ನವಜಾತ ಶಿಶುಗಳ ವಿಭಾಗ ತುಂಬಿದ್ದರಿಂದ ಗರ್ಭಿಣಿಯನ್ನು ಡಿ ಸಾಂಟಾ ಮರಿಯಾ ಆಸ್ಪತ್ರೆಯಿಂದ ಸಾವೊ ಫ್ರಾನ್ಸಿಸ್ಕೊ ಕ್ಸೇವಿಯರ್ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. ಆದರೆ ಮಾರ್ಗಮಧ್ಯೆ ಆಕೆ ಹೃದಯ ಸ್ತಂಭನದಿಂದ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಮೋದಿ ಆಡಳಿತದ ವಿರುದ್ಧ ಕೆಸಿಆರ್ ಕಿಡಿ

    Live Tv
    [brid partner=56869869 player=32851 video=960834 autoplay=true]

  • ಆರೋಗ್ಯ ಸಚಿವೆಯನ್ನು ‘ಕೋವಿಡ್ ರಾಣಿ’ ಎಂದಿದ್ದಕ್ಕೆ ಕ್ಷಮೆ ಕೇಳಲ್ಲ: ಕೇರಳ ಕೈ ನಾಯಕ

    ಆರೋಗ್ಯ ಸಚಿವೆಯನ್ನು ‘ಕೋವಿಡ್ ರಾಣಿ’ ಎಂದಿದ್ದಕ್ಕೆ ಕ್ಷಮೆ ಕೇಳಲ್ಲ: ಕೇರಳ ಕೈ ನಾಯಕ

    ತಿರುವನಂತಪುರಂ: ಕೇರಳದ ಆರೋಗ್ಯ ಸಚಿವೆಯನ್ನು ‘ಕೋವಿಡ್ ರಾಣಿ’ ಎಂದಿದ್ದಕ್ಕೆ ಕ್ಷಮೆ ಕೇಳಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಎಂ. ರಾಮಚಂದ್ರನ್ ಅವರು ಹೇಳಿದ್ದಾರೆ.

    ಶುಕ್ರವಾರ ಮಾತನಾಡಿದ್ದ ರಾಮಚಂದ್ರನ್, ಕೇರಳದ ಆರೋಗ್ಯ ಸಚಿವೆ ಕೆ.ಕೆ ಶೈಲಜಾ ಅವರು ಕೋವಿಡ್ ರಾಣಿ ಎಂಬ ಬಿರುದು ಪಡೆಯಲು ಮುಂದಾಗಿದ್ದಾರೆ ಎಂದು ಹೇಳುವ ಮೂಲಕ ವಿವಾದಕ್ಕೆ ಸಿಲುಕಿದ್ದರು. ಇದಾದ ನಂತರ ಕೈ ನಾಯಕನ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿ ಬಹಿರಂಗವಾಗಿ ಕ್ಷಮೆ ಕೇಳುವಂತೆ ಆಗ್ರಹಿಸಲಾಗಿತ್ತು.

    ಈಗ ಈ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಂ ರಾಮಚಂದ್ರನ್, ನಾನು ಏನು ಹೇಳಿದ್ದೇನೆ ಅದು ಸರಿ. ನಾನು ಯಾರನ್ನೂ ಅವಮಾನ ಮಾಡಿಲ್ಲ. ನಾನು ಹೇಳಿದ್ದರ ಪರವಾಗಿ ನಾನು ನಿಲ್ಲುತ್ತೇನೆ. ನಾನು ಯಾರನ್ನೂ ಕ್ಷಮೆ ಕೇಳಲು ಹೋಗುವುದಿಲ್ಲ. ಕೆಲ ವಿದೇಶಿ ಮಾಧ್ಯಮಗಳು ಅವರನ್ನು ‘ರಾಕ್‍ಸ್ಟಾರ್’ ಮತ್ತು ಕೊರೊನಾವನ್ನು ಕೊಂದವರು ಎಂದು ಬಣ್ಣಿಸುತ್ತಾರೆ. ಹಾಗೆಯೇ ನಾನು ಕೂಡ ರಾಣಿಗೆ ಹೊಲಿಸಿದ್ದೇನೆ ಅದರಲ್ಲೇನು ತಪ್ಪಿದೆ ಎಂದು ಪ್ರಶ್ನೆ ಮಾಡಿದ್ದಾರೆ.

    ನಾನು ಒಂದು ಹೆಣ್ಣಿನ ವಿರುದ್ಧ ಹೇಳಿಕೆಯನ್ನು ನೀಡುವ ವ್ಯಕ್ತಿಯಲ್ಲ. ನಾನು ಯಾವಾಗಲೂ ಮಹಿಳೆಯರ ಕಲ್ಯಾಣ ಮತ್ತು ಗೌರವಕ್ಕಾಗಿ ಮುಂದೆ ನಿಲ್ಲುವಂತಹ ವ್ಯಕ್ತಿ. ಹೀಗಾಗಿ ನಾನು ಕ್ಷಮೆ ಕೇಳಲ್ಲ ಎಂದು ರಾಮಚಂದ್ರನ್ ತಮ್ಮನ್ನು ತಾವು ಸಮರ್ಥಿಸಿಕೊಂಡಿದ್ದಾರೆ. ಕೈ ನಾಯಕ ಈ ಹೇಳಿಕೆ ಸರಿಯಿಲ್ಲ. ಒಂದು ಪಕ್ಷದ ನಾಯಕನಾಗಿ ಒಂದು ಮಹಿಳೆಯ ಬಗ್ಗೆ ಈ ರೀತಿಯ ಕೀಳು ಮಟ್ಟದ ಹೇಳಿಕೆ ನೀಡಬಾರದು. ಅವರು ಕ್ಷಮೆ ಕೇಳಲೇ ಬೇಕು ಎಂದು ಕೇರಳದ ಕೆಲ ನಾಯಕರು ಆಗ್ರಹಿಸಿದ್ದರು.

    ಎಂ.ರಾಮಚಂದ್ರನ್ ಹೇಳಿದ್ದೇನು?
    ಆರೋಗ್ಯ ಸಚಿವೆ ಶೈಲಜಾ ಕೋವಿಡ್ ರಾಣಿ ಎಂಬ ಬಿರುದು ಪಡೆಯಲು ಮುಂದಾಗಿದ್ದಾರೆ. ಈ ಹಿಂದೆ ರಾಮಚಂದ್ರನ್, ನಿಫಾ ವೈರಸ್ ವೇಳೆಯೂ ಇದೇ ರೀತಿಯಲ್ಲಿ ಹೇಳಿಕೆ ನೀಡಿದ್ದರು. ಆರೋಗ್ಯ ಸಚಿವೆ ಶೈಲಜಾ ಟೀಚರ್, ಕೋಝಿಕೋಡ್ ನಲ್ಲಿ `ಅತಿಥಿ ಕಲಾವಿಧೆ’ ಆಗಿದ್ದರು. ನಿಫಾ ರಾಜಕುಮಾರಿ ಆಗಲು ಸಚಿವರು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದರು.

  • ಕೇರಳದಲ್ಲಿ ನಿಯಂತ್ರಣಕ್ಕೆ ಬಂದ ಕೊರೊನಾ- 63ನೇ ವಯಸ್ಸಿನಲ್ಲಿ ಶೈಲಜಾ ಕಾರ್ಯಕ್ಕೆ ಜನಮೆಚ್ಚುಗೆ

    ಕೇರಳದಲ್ಲಿ ನಿಯಂತ್ರಣಕ್ಕೆ ಬಂದ ಕೊರೊನಾ- 63ನೇ ವಯಸ್ಸಿನಲ್ಲಿ ಶೈಲಜಾ ಕಾರ್ಯಕ್ಕೆ ಜನಮೆಚ್ಚುಗೆ

    – ಹಾಟ್‍ಸ್ಟಾಟ್ ಕೇರಳದಲ್ಲಿ ಸೋಂಕು ಹಿಡಿತಕ್ಕೆ ಬರಲು ಕಾರಣವೇನು?
    – ಕೇರಳದ 8 ಜಿಲ್ಲೆಗಳು ಕೊರೊನಾ ರಹಿತ

    ತಿರುವನಂತಪುರಂ: ಭಾರತದಲ್ಲಿ ಮೊದಲ ಕೊರೊನಾ ಪ್ರಕರಣ ದಾಖಲಾಗಿದ್ದ ಕೇರಳದಲ್ಲಿ ಈಗ ಕೊರೊನಾ ಹಿಡಿತಕ್ಕೆ ಬಂದಿದೆ. ಕೊರೊನಾ ವೈರಸ್ ನ ಹಾಟ್‍ಸ್ಟಾಟ್ ಆಗಿದ್ದ ಕೇರಳ ಅಲ್ಲಿನ ಆರೋಗ್ಯ ಸಚಿವೆ ಕೆಕೆ ಶೈಲಜಾ ಅವರ ದಿಟ್ಟ ಕಾರ್ಯದಿಂದ ಕೊರೊನಾ ಮುಕ್ತವಾಗುತ್ತಿದೆ.

    ಕಳೆದ ವರ್ಷ ಡಿಸೆಂಬರ್ ನಲ್ಲಿ ಚೀನಾದ ವುಹಾನ್ ಪ್ರದೇಶದಲ್ಲಿ ಕಾಣಿಸಿಕೊಂಡ ಕೊರೊನಾ ಇಂದು ವಿಶ್ವಕ್ಕೆ ಮಹಾಮಾರಿಯಾಗಿ ಕಾಡುತ್ತಿದೆ. ಭಾರತದಲ್ಲಿ ಈ ಸೋಂಕು ಮೊದಲಿಗೆ ಕಾಣಿಸಿಕೊಂಡಿದ್ದು ಕೇರಳದಲ್ಲಿ, ಚೀನಾದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗೆ ಈ ಸೋಂಕು ಜನವರಿ 30ರಂದು ಭಾರತದಲ್ಲಿ ಮೊದಲಿಗೆ ಪತ್ತೆಯಾಗಿತ್ತು. ಇದಾದ ನಂತರ ಕೇರಳ ಕೊರೊನಾ ಹಾಟ್‍ಸ್ಟಾಟ್ ಆಗಿತ್ತು.

    ಈ ಹಿಂದೆಯಿಂದಲೂ ಈ ರೀತಿಯ ಪರಿಸ್ಥಿತಿಯನ್ನು ಬಹಳ ಎದುರಿಸಿದ್ದ ಕೇರಳ, ನಿಫಾ, ಹೆಚ್1ಎನ್1, ಚಿಕನ್‍ಗುನ್ಯಾನಂತಹ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಿ ಗೆದ್ದಿತ್ತು. ಈ ಅನುಭವದಿಂದಲೇ ಕೇರಳ ಜನವರಿ 24ರಂದೇ ಕೊರೊನಾ ಕಂಟ್ರೋಲ್ ರೂಂ ಅನ್ನು ಓಪನ್ ಮಾಡಿತ್ತು. ಭಾರತದಲ್ಲಿ ಕೊರೊನಾ ಪ್ರಭಾವ ಹೆಚ್ಚಾಗುವುದಕ್ಕೂ ಮುನ್ನವೇ ಜನರನ್ನು ಐಸೋಲೇಟ್ ಮಾಡಲು ಶುರು ಮಾಡಿತ್ತು. ಜೊತೆಗೆ ಎನ್ 95 ಮಾಸ್ಕ್ ಗಳು ಮತ್ತು ಪಿಪಿಇ ಕಿಟ್‍ಗಳ ಖರೀದಿಗೆ ಮುಂದಾಗಿತ್ತು.

    ದಿಟ್ಟ ನಿರ್ಧಾರ ತೆಗೆದುಕೊಂಡ ಶೈಲಜಾ:
    ಇಂದು ಕೇರಳದಲ್ಲಿ ಕೊರೊನಾ ಹಿಡಿತಕ್ಕೆ ಬರಲು ಕಾರಣ ಅಲ್ಲಿನ ಕೊರೊನಾ ವಾರಿಯರ್ಸ್ ಮತ್ತು ಆರೋಗ್ಯ ಸಚಿವೆ ಕೆಕೆ ಶೈಲಜಾ ಅವರ ದಿಟ್ಟ ನಿರ್ಧಾರಗಳು. ಮೊದಲ ಕೊರೊನಾ ಪ್ರಕರಣ ದಾಖಲಾಗುತ್ತಿದ್ದಂತೆ ಎಚ್ಚೆತ್ತಿದ್ದ ಶೈಲಜಾ ಅವರು, ಮೂರು ಕಾರ್ಯಸೂಚಿಗಳನ್ನು ಜಾರಿಗೆ ತಂದಿದ್ದರು. ಸರ್ಕಾರಿ ಆಸ್ಪತ್ರೆಗಳು ರೋಗಿಗಳ ಸ್ನೇಹಿಯಾಗಿರಬೇಕು. ಹೈಟೆಕ್ ಆಗಿರಬೇಕು. ಹಣವಿಲ್ಲದ ಅಥವಾ ಕಡಿಮೆ ದುಡ್ಡಿಗೆ ಚಿಕಿತ್ಸೆ ನೀಡಬೇಕು ಎಂದು ಮೂರು ಕಾರ್ಯಸೂಚಿಗಳನ್ನು ಮಾಡಿಕೊಂಡಿದ್ದರು.

    ಈ ವಿಚಾರದ ಬಗ್ಗೆ ಮಾತನಾಡಿರುವ ಶೈಲಜಾ ಅವರು, ಈ ಸಮಯದಲ್ಲಿ ಪ್ರಾಥಮಿಕ ಆರೋಗ್ಯ ಘಟಕಗಳು ಬಹಳ ಮುಖ್ಯ. ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ, ಈಗ ನಮ್ಮಲ್ಲಿ ಗ್ರಾಮೀಣ ಪ್ರದೇಶದಲ್ಲೂ ಪರೀಕ್ಷಾ ಪ್ರಯೋಗಾಲಯಗಳನ್ನು ಮಾಡಲಾಗಿದೆ. ಅವು ವಿವಿಧ ರೋಗಗಳನ್ನು ಆರಂಭಿಕವಾಗಿಯೇ ಕಂಡುಹಿಡಿಯಲು ಸಮರ್ಥವಾಗಿವೆ. ನಮ್ಮಲ್ಲಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳು ಹೊಸ ಉಪಕರಣಗಳನ್ನು ಹೊಂದಿವೆ ಮತ್ತು ಉತ್ತಮ ಮೂಲಸೌಕರ್ಯಗಳನ್ನು ಹೊಂದಿವೆ ಎಂದು ತಿಳಿಸಿದ್ದಾರೆ.

    2018ರಲ್ಲಿ ನಿಫಾ ವೈರಸ್ ಬಂದಾಗಿನಿಂದ ನಮ್ಮ ಸರ್ಕಾರ ವೈದ್ಯಕೀಯ ಸಿಬ್ಬಂದಿಗೆ ನಿಯಮಿತ ತರಬೇತಿಯನ್ನು ಜಾರಿಗೆ ತಂದಿತು. ಇದು ಈಗ ಕೊರೊನಾ ತಡೆಗಟ್ಟುವಲ್ಲಿ ನಮಗೆ ಸಹಾಯವಾಯಿತು. ನಮ್ಮ ವೈದ್ಯಕೀಯ ಸಿಬ್ಬಂದಿ ಸಾಂಕ್ರಾಮಿಕ ರೋಗದ ವಿರುದ್ಧ ಏಕಾಏಕಿ ತಯಾರಿಗಾಗಿ ಅಣಕು ಡ್ರಿಲ್‍ಗಳನ್ನು ಸಹ ಮಾಡಿದ್ದರು. ಅವರ ಕಾರ್ಯದಿಂದ ನಾವು ಇಂದು ಕೊರೊನಾ ವಿರುದ್ಧ ಪ್ರಬಲವಾಗಿ ಹೋರಾಡುತ್ತಿದ್ದೇವೆ. ನಮ್ಮ ಈ ಕೆಲಸ ಖಂಡಿತವಾಗಿಯೂ ವ್ಯವಸ್ಥೆಯನ್ನು ಬಲಪಡಿಸಿತು ಎಂದು ಹೇಳಿದ್ದಾರೆ.

    ನಾವು ಕೆಲಸ ಮಾಡುವಾಗ ನಾವೇಲ್ಲ ಒಂದೇ ಎಂಬ ಭಾವನೆಯನ್ನು ಮೂಡಿಸಿಕೊಂಡಿದ್ದೆವು. ದಿನ ಕೆಳಮಟ್ಟದ ಆರೋಗ್ಯ ಸಿಬ್ಬಂದಿಯಿಂದ ಹಿಡಿದು ಎಲ್ಲರ ಜೊತೆ ವಿಡಿಯೋ ಕಾನ್ಫೆರೆನ್ಸ್ ಮಾಡುತ್ತಿದ್ದೇವು. ಆಶಾ ಕಾರ್ಯಕರ್ತೆಯರು ಜಿಲ್ಲಾ ಆರೋಗ್ಯಾಧಿಕಾರಿಗಳ ಜೊತೆ ದಿನಲೂ ನಾನು ಮಾತನಾಡುತ್ತಿದ್ದೆ. ಮಾಹಿತಿ ಪಡೆಯುತ್ತಿದ್ದೆ. ನಾವು ಹೀಗೆ ಕೆಳಹಂತದಿಂದ ಮಾಹಿತಿ ಪಡೆದುಕೊಂಡಿದ್ದು, ಕೆಲಸ ಮಾಡಲು ನಮಗೆ ಸಲಭವಾಗತ್ತದೆ ಎಂದು ಶೈಲಜಾ ಅವರು ಅಭಿಪ್ರಾಯ ಪಟ್ಟಿದ್ದಾರೆ.

    63 ವರ್ಷದ ಕೆಕೆ ಶೈಲಜಾ ಅವರಿಗೆ ಗಂಡ ಮತ್ತು ಇಬ್ಬರು ಮಕ್ಕಳು ಇದ್ದಾರೆ. ಈ ವಯಸ್ಸಿನಲ್ಲೂ ಪ್ರತಿದಿನ 8 ರಿಂದ 9 ಗಂಟೆಗಳ ಕಾಲ ಸಭೆ ಮತ್ತು ವಿಡಿಯೋ ಕಾನ್ಫೆರೆನ್ಸ್ ನಿರತರಾಗಿರುತ್ತಾರೆ. ಇದರ ಜೊತೆಗೆ ಮನೆಯಲ್ಲಿ ಇದ್ದರೆ ರಾತ್ರಿಯ ವೇಳೆಯೂ ಕೂಡ ಯಾವುದೇ ಕರೆ ಬರಲಿ ಮಾತನಾಡುತ್ತಾರೆ ಎಂದು ಅವರ ಮನೆಯವರು ಹೇಳಿದ್ದಾರೆ. 63ನೇ ವಯಸ್ಸಿನಲ್ಲೂ ತನ್ನ ರಾಜ್ಯಕ್ಕಾಗಿ ದುಡಿಯುತ್ತಿರುವ ಶೈಲಜಾ ಅವರ ಕಾರ್ಯಕ್ಕೆ ಎಲ್ಲಡೆಯಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ.

    ಶೈಲಜಾ ಅವರ ಕಾರ್ಯಕ್ಷಮತೆಯಿಂದ ಇಂದು ಕೇರಳದ 8 ಜಿಲ್ಲೆಗಳು ಕೊರೊನಾ ಮುಕ್ತವಾಗಿವೆ. ಕೇರಳದಲ್ಲಿ ಕೊರೊನಾ ಹಾಟ್‍ಸ್ಟಾಟ್ ಆಗಿದ್ದ ಕಾಸರಗೋಡು, ಕೋಜಿಕೋಡ್, ಪಾಲಕ್ಕಾಡ್, ಅಲಾಪ್ಪುಜಾ, ಕೊಟ್ಟಾಯಂ, ಇಡುಕ್ಕಿ, ಪಥನಮತ್ತತ್ತ ಮತ್ತು ತಿರುವನಂತಪುರಂ ಜಿಲ್ಲೆಗಳು ಕೊರೊನಾ ರಹಿತ ಜಿಲ್ಲೆಗಳಾಗಿವೆ. ಜೊತೆಗೆ ಕೇರಳದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಕಮ್ಮಿ ಆಗುತ್ತಿದ್ದು, ಸೋಂಕಿನಿಂದ ಗಣಮುಖರಾಗುತ್ತಿರುವವರ ಸಂಖ್ಯೆ ಜಾಸ್ತಿಯಾಗಿದೆ.

    ಕೇರಳದಲ್ಲಿ ಕೊರೊನಾ ಕಾಣಿಸಿಕೊಂಡದಿಂದ ಇಲ್ಲಿಯವರೆಗೆ ಸುಮಾರು 512 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಕೇವಲ ಮೂರು ಜನರು ಸಾವನ್ನಪ್ಪಿದ್ದಾರೆ. ಜೊತೆಗೆ ಈಗ ಕೇವಲ 20 ಜನರು ಕೊರೊನಾ ಚಿಕತ್ಸೆ ಪಡೆಯುತ್ತಿದ್ದು, ಇನ್ನುಳಿದ 488 ಜನರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಚ್ ಆಗಿದ್ದಾರೆ. ಇಲ್ಲಿಯವರೆಗೂ ಸುಮಾರು 37,464 ಸ್ಯಾಂಪಲ್‍ಗಳನ್ನು ಪರೀಕ್ಷೆ ಮಾಡಿದ್ದು, ಅದರಲ್ಲಿ 36,630 ಸ್ಯಾಂಪಲ್ಸ್ ಗಳು ನೆಗೆಟಿವ್ ಬಂದಿವೆ.

    ಇದರ ಜೊತೆಗೆ ಕೆಕೆ ಶೈಲಜಾ ಅವರು, ಬೇರೆ ಪ್ರದೇಶದಿಂದ ಕೇರಳಕ್ಕೆ ಬಂದವರು ಕಡ್ಡಾಯವಾಗಿ ಕೊರೊನಾ ಪರೀಕ್ಷೆಗೆ ಒಳಪಡಬೇಕು. ಪರೀಕ್ಷೆಯಲ್ಲಿ ಕೊರೊನಾದ ಒಂದು ಲಕ್ಷಣ ಕಂಡುಬಂದರೂ ಅವರು ಕೋವಿಡ್ ಆಸ್ಪತ್ರೆಗೆ ದಾಖಲಾಗಬೇಕು. ಒಂದು ವೇಳೆ ಪರೀಕ್ಷೆಯಲ್ಲಿ ಲಕ್ಷಣ ಕಂಡುಬಾರದೆ ಇದ್ದರೇ ಅವರು 14 ದಿನಗಳ ಕಾಲ ಹೋಂ ಕ್ವಾರಂಟೈನ್‍ನಲ್ಲಿ ಇರಬೇಕು ಎಂದು ನಿಯಮ ಮಾಡಿದ್ದಾರೆ.

  • ಇಂಗ್ಲೆಂಡಿನಲ್ಲಿ ಕೊರೊನಾ ಅರಿವು ಮೂಡಿಸುತ್ತಿದ್ದ ಆರೋಗ್ಯ ಸಚಿವೆಗೆ ಬಂತು ಸೋಂಕು

    ಇಂಗ್ಲೆಂಡಿನಲ್ಲಿ ಕೊರೊನಾ ಅರಿವು ಮೂಡಿಸುತ್ತಿದ್ದ ಆರೋಗ್ಯ ಸಚಿವೆಗೆ ಬಂತು ಸೋಂಕು

    ಲಂಡನ್: ದೇಶದ ಜನತೆಗೆ ಕೊರೊನಾ ಬಗ್ಗೆ ಅರಿವು ಮೂಡಿಸುತ್ತಿದ್ದ ಇಂಗ್ಲೆಂಡ್ ಆರೋಗ್ಯ ಸಚಿವೆಗೂ ಕೊರೊನಾ ವೈರಸ್ ಬಂದಿರುವುದು ಹೆಲ್ತ್ ಚೆಕಪ್ ವೇಳೆ ದೃಢಪಟ್ಟಿದೆ.

    ಇಂಗ್ಲೆಂಡ್‍ನ ಆರೋಗ್ಯ ಸಚಿವೆ ನಾಡಿನ್ ಡೋರಿಸ್‍ಗೆ ಕೊರೊನಾ ವೈರಸ್ ಇರುವುದು ದೃಢಪಟ್ಟಿದೆ. ವಿಷಯ ತಿಳಿದು ಬಂದ ಕೂಡಲೇ ಸ್ವತಃ ನಾಡಿನ್ ಡೋರಿಸ್ ಅವರೇ ಮನೆಯಿಂದ ಹೊರಗೆ ಬರೆದೇ ಗೃಹ ಬಂಧನದಲ್ಲಿದ್ದಾರೆ.

    ನಾಡಿನ್ ಡೋರಿಸ್ ಅವರಿಗೆ ಕಳೆದ ಗುರುವಾರ ರೋಗದ ಲಕ್ಷಣಗಳು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಪರೀಕ್ಷೆಗೆ ಒಳಪಡಿಸಿದಾಗ ಅವರಿಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿದೆ. ಆದರೆ ರೋಗದ ಲಕ್ಷಣ ಕಾಣಿಸಿಕೊಂಡ ದಿನವೇ ನಾಡಿನ್ ಅವರು ಇಂಗ್ಲೆಂಡ್ ಪ್ರಧಾನ ಮಂತ್ರಿಯವರು ಆಯೋಜನೆ ಮಾಡಿದ್ದ ಒಂದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಆದ್ದರಿಂದ ಅವರ ಬಳಿ ಸಂಪರ್ಕದಲ್ಲಿ ಇದ್ದ ಎಲ್ಲರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.

    ಈ ಬಗ್ಗೆ ಟ್ವೀಟ್ ಮಾಡಿರುವ ನಾಡಿನ್ ಡೋರಿಸ್ ಅವರು, ನನಗೆ ಕೊರೊನಾ ಇರುವುದು ತಿಳಿದ ನಂತರ ಗುಣಮುಖರಾಗಿ ಎಂದು ಶುಭಕೊರಿದ ಎಲ್ಲರಿಗು ಧನ್ಯವಾದಗಳು. ಮುಂದೆ ಎಲ್ಲ ಸರಿ ಹೋಗುತ್ತದೆ. ಆದರೆ ನನ್ನ ಜೊತೆಯಲ್ಲೇ ಇದ್ದ ನನ್ನ 84 ವರ್ಷದ ಅಮ್ಮನಿಗೆ ಕೂಡ ಇಂದು ಕೆಮ್ಮು ಕಾಣಿಸಿಕೊಂಡಿದೆ. ಆಕೆಯನ್ನು ನಾಳೆ ವೈದ್ಯರು ಪರೀಕ್ಷಿಸಲಿದ್ದಾರೆ. ಎಲ್ಲರೂ ಸುರಕ್ಷಿತವಾಗಿರಿ ಮತ್ತು ಎಲ್ಲರೂ ಸದಾ ಕೈಗಳನ್ನು ತೊಳಿದುಕೊಳ್ಳುತ್ತಿರಿ ಎಂದು ಬರೆದುಕೊಂಡಿದ್ದಾರೆ.

    ಡಿಸೆಂಬರ್ ತಿಂಗಳಲ್ಲಿ ಚೀನಾದಲ್ಲಿ ಕಾಣಿಸಿಕೊಂಡ ಈ ವೈರಸ್ ಈಗ ವಿಶ್ವದೆಲ್ಲೆಡೆ ಕಾಣಿಸಿಕೊಂಡಿದೆ. ಚೀನಾದಲ್ಲಿ 80,778 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಭಾರತದಲ್ಲಿ ಸುಮಾರು 61 ಮಂದಿಗೆ ಕೊರೊನಾ ತಗುಲಿದ್ದು, ಕರ್ನಾಟಕದಲ್ಲಿ 4 ಮಂದಿ ಕೊರೊನಾ ತುತ್ತಾಗಿರುವುದು ದೃಢಪಟ್ಟಿದೆ. ಇತ್ತ ಕರ್ನಾಟಕ ಮತ್ತು ಮಹಾರಾಷ್ಟ್ರ ಸೇರಿ ಒಟ್ಟು 14 ಹೊಸ ಕೊರೊನಾ ಸೋಂಕಿತ ಪ್ರಕರಣಗಳು ವರದಿಯಾಗಿದೆ.

    ಇತ್ತ ಇರಾನ್‍ನಲ್ಲಿ ಕೂಡ ಕೊರೊನಾ ಮರಣಮೃದಂಗ ಬಾರಿಸುತ್ತಿದೆ. 291 ಮಂದಿ ಮಹಾಮಾರಿ ಕೊರೊನಾಗೆ ಬಲಿಯಾಗಿದ್ದು, 8,042 ಮಂದಿಗೆ ಸೋಂಕು ತಗುಲಿದೆ. ಈ ಮಧ್ಯೆ ಇರಾನ್‍ನಲ್ಲಿ ಇದ್ದ 58 ಭಾರತೀಯರನ್ನು ಭಾರತೀಯ ವಾಯುಪಡೆ ತಾಯ್ನಾಡಿಗೆ ವಾಪಸ್ ಕರೆತಂದಿದೆ. ಮಹಾಮಾರಿ ಕೊರೊನಾಗೆ ಭಾರತೀಯರೊಬ್ಬರು ಸಾವನ್ನಪ್ಪಿದ್ದಾರೆ. ಭಾರತೀಯ ಮೂಲದ ಬ್ರಿಟನ್‍ನಲ್ಲಿದ್ದ ಮನೋಹರ್ ಕೃಷ್ಣ ಪ್ರಭು(80) ಮೃತರಾಗಿದ್ದಾರೆ. ಇವರು ವ್ಯಾಟ್‍ಫೋರ್ಡ್ ಜನರಲ್ ಆಸ್ಪತ್ರೆಯಲ್ಲಿ ಸೋಮವಾರ ಮೃತಪಟ್ಟಿದ್ದಾರೆ ಎಂದು ವೈದ್ಯರು ಖಚಿತ ಪಡಿಸಿದ್ದಾರೆ.

  • ಹೆಚ್‍ಐವಿ ಪೀಡಿತ ಮಕ್ಕಳನ್ನು ತಬ್ಬಿ ಮುದ್ದಾಡಿದ್ದ ಸುಷ್ಮಾ ಸ್ವರಾಜ್

    ಹೆಚ್‍ಐವಿ ಪೀಡಿತ ಮಕ್ಕಳನ್ನು ತಬ್ಬಿ ಮುದ್ದಾಡಿದ್ದ ಸುಷ್ಮಾ ಸ್ವರಾಜ್

    ನವದೆಹಲಿ: ಮಂಗಳವಾರ ರಾತ್ರಿ ಹೃದಯಾಘಾತದಿಂದ ಮೃತಪಟ್ಟ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು 2003ರಲ್ಲಿ ಹೆಚ್‍ಐವಿ ಪೀಡಿತ ಮಕ್ಕಳನ್ನು ತಬ್ಬಿ ಮುದ್ದಾಡಿದ್ದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

    2003ರಲ್ಲಿ ಕೇಂದ್ರ ಆರೋಗ್ಯ ಸಚಿವೆಯಾಗಿದ್ದ ಸುಷ್ಮಾ ಸ್ವರಾಜ್ ಹೆಚ್‍ಐವಿ ರೋಗದ ಬಗ್ಗೆ ಜನರಲ್ಲಿ ಇರುವ ಮೂಢನಂಬಿಕೆಯನ್ನು ಹೋಗಲಾಡಿಸಲು, ಹೆಚ್‍ಐವಿ ಪೀಡಿತ ಮಕ್ಕಳನ್ನು ತಬ್ಬಿ ಮುದ್ದಾಡಿದ್ದರು. ಈ ಮೂಲಕ ಮುಟ್ಟುವುದು ಮತ್ತು ತಬ್ಬಿಕೊಳ್ಳುವುದರಿಂದ ಹೆಚ್‍ಐವಿ ಹರಡುವುದಿಲ್ಲ ಎಂದು ಜನರಿಗೆ ಸಂದೇಶ ನೀಡಿದ್ದರು.

    ಈಗ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದು, ಪಿಯೂ ನಾಯರ್ ಎಂಬುವರು ಈ ಫೋಟೋವನ್ನು ಟ್ವಿಟ್ಟರ್‍ ನಲ್ಲಿ ಹಾಕಿ “ಹಳೇಯ ಫೋಟೋ, ಸುಷ್ಮಾ ಜೀ ಹೆಚ್‍ಐವಿ ಪೀಡಿತ ಇಬ್ಬರು ಕೇರಳದ ಮಕ್ಕಳನ್ನು ಅಪ್ಪಿಕೊಂಡಿದ್ದಾರೆ. ಅ ಮಕ್ಕಳಿಗೆ ತಮ್ಮ ತಾಯಿಯಿಂದ ಕಾಯಿಲೆ ಬಂದಿದೆ (ಮಕ್ಕಳ ಪೋಷಕರು ಹೆಚ್‍ಐವಿ ಕಾರಣದಿಂದ ಮೃತ ಪಟ್ಟಿದ್ದರು) ಈ ಮಕ್ಕಳಿಂದ ಹೆಚ್‍ಐವಿ ಹರಡುತ್ತದೆ ಎಂಬ ಕಾರಣಕ್ಕೆ ಶಾಲೆಯಿಂದ ಹೊರಹಾಕಲಾಗಿತ್ತು” ಎಂದು ಬರೆದುಕೊಂಡಿದ್ದಾರೆ.

    ಈ ಮಕ್ಕಳನ್ನು ಭೇಟಿಯಾಗಿದ್ದ ಸುಷ್ಮಾ ಸ್ವರಾಜ್ ಅವರು ಮಕ್ಕಳಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಸರ್ಕಾರ ಯೋಚನೆಗಳನ್ನು ಪ್ರಸ್ತಾಪ ಮಾಡಿದ್ದರು. ನಂತರ ಅ ಮಕ್ಕಳನ್ನು ಅಂದಿನ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರು ಭೇಟಿಯಾಗಿ ಅ ಇಬ್ಬರು ಹೆಚ್‍ಐವಿ ಪೀಡಿತ ಮಕ್ಕಳನ್ನು ಶಾಲೆ ಸೇರಿಸುವ ವ್ಯವಸ್ಥೆ ಮಾಡಿದ್ದರು.

    ಇದಾದ ನಂತರ ಸುಷ್ಮಾ ಸ್ವರಾಜ್ ಅವರು ಅ ಇಬ್ಬರು ಮಕ್ಕಳ ಶಿಕ್ಷಣದ ಬಗ್ಗೆ ಖಚಿತಪಡಿಸಿಕೊಂಡು. ಈ ರೀತಿಯ ಮಕ್ಕಳಿಗಾಗಿ ವಿಶೇಷ ಬೋಧಕರನ್ನು ನೇಮಿಸಬೇಕು. ದೇಶದ ವಿವಿಧ ಭಾಗಗಳಲ್ಲಿ ಈ ರೀತಿ ಹೆಚ್‍ಐವಿ ಪೀಡಿತ ಮಕ್ಕಳು ಇದ್ದಾರೆ. ಅವರಿಗೂ ಶಿಕ್ಷಣ ಕೊಡಿಸಬೇಕು ಎಂದು ಹೇಳಿದ್ದರು.

    ಇಂದು ಈ ವಿಚಾರದ ಬಗ್ಗೆ ಮಾತನಾಡಿರುವ ಹೆಚ್‍ಐವಿ ಪೀಡಿತ ಮಕ್ಕಳ ಅಜ್ಜಿ ಸಲ್ಲಮ್ಮ “ಸುಷ್ಮಾ ಸ್ವರಾಜ್ ಅವರ ಅಪ್ಪುಗೆಯಿಂದ ನನ್ನ ಮೊಮ್ಮಕ್ಕಳ ಜೀವನ ಸಂಪೂರ್ಣ ಬದಲಾಗಿದೆ. ಅವರ ವಿದ್ಯಾಭ್ಯಾಸಕ್ಕೆಂದು ನಮಗೆ ತಿಂಗಳಿಗೊಮ್ಮೆ ಬೆಂಬಲ ರೂಪದಲ್ಲಿ ಹಣ ಬರುತ್ತಿದೆ. ನಾವು ಅವಳನ್ನು ಎಂದಿಗೂ ಮರೆಯುವುದಿಲ್ಲ” ಎಂದು ಹೇಳಿದ್ದಾರೆ.

    ಇಂದು ಅವರ ಸಾವಿನ ಸುದ್ದಿ ಕೇಳಿ ಕಂಬನಿ ಮಿಡಿದ ಸಲ್ಲಮ್ಮ, ನನ್ನ ಇಬ್ಬರು ಹೆಚ್‍ಐವಿ ಪೀಡಿತ ಮೊಮ್ಮಕ್ಕಳ ಮೇಲೆ ಅವರು ದಯೆ ತೋರಿಸದೆ ಇದ್ದರೆ 2003ರಲ್ಲೆ ನನ್ನ ಮತ್ತು ನನ್ನ ಮೊಮ್ಮಕ್ಕಳ ಜೀವನ ಮುಗಿದು ಹೋಗುತಿತ್ತು ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ. ಹೆಚ್‍ಐವಿ ಪೀಡಿತ ಈ ಇಬ್ಬರು ಮಕ್ಕಳಲ್ಲಿ ಹೆಣ್ಣು ಮಗು 2010ರಲ್ಲಿ ಸಾವನ್ನಪ್ಪಿದ್ದು. ಯುವಕನಿಗೆ 23 ವರ್ಷವಾಗಿದೆ.