Tag: ಆರೋಗ್ಯ ಸಮಸ್ಯೆ

  • ಕೊಡಗಿನಲ್ಲಿ ನಡೆಯುತ್ತಿದೆ ಅಕ್ರಮ ಗಣಿಗಾರಿಕೆ – ಸುತ್ತಮುತ್ತಲಿನ ಪ್ರದೇಶದ ಜನಕ್ಕೆ ಕಾಡ್ತಿದೆ ಶ್ವಾಸಕೋಶದ ಸಮಸ್ಯೆ!

    ಕೊಡಗಿನಲ್ಲಿ ನಡೆಯುತ್ತಿದೆ ಅಕ್ರಮ ಗಣಿಗಾರಿಕೆ – ಸುತ್ತಮುತ್ತಲಿನ ಪ್ರದೇಶದ ಜನಕ್ಕೆ ಕಾಡ್ತಿದೆ ಶ್ವಾಸಕೋಶದ ಸಮಸ್ಯೆ!

    ಮಡಿಕೇರಿ: ಅದು ಪ್ರಕೃತಿಯ ತವರು ಕೊಡಗು (Kodagu), ದೇಶ ವಿದೇಶಗಳ ಜನರು ನಿತ್ಯ ಈ ಊರಿಗೆ ಭೇಟಿ ನೀಡಿ ಪ್ರಕೃತಿಯ ಮಡಿಲಲ್ಲಿ ದಿನ ಕಳೆಯುತ್ತಾರೆ. ಬೆಟ್ಟಗುಡ್ಡಗಳ ಹಸಿರಿನ ವಾತಾವರಣ ಕಂಡು ಖುಷಿಯಿಂದ ತೆರಳುತ್ತಾರೆ. ಇದರಿಂದಾಗಿ ಇತ್ತೀಚಿನ ವರ್ಷಗಳಲ್ಲಿ ಪ್ರವಾಸೋದ್ಯಮ (Tourism) ಚಟುವಟಿಕೆಗಳು ಹೆಚ್ಚಾಗುತ್ತಿದೆ. ಇಂತಹ ಕೊಡಗಿನಲ್ಲಿ ಕೆಲ ದುರುಳರು ಹಣದ ಆಸೆಗೆ ಬೃಹತ್ ಬೆಟ್ಟಗಳನ್ನೇ ನಾಶ ಮಾಡಲು ಹೊರಟಿದ್ದಾರೆ. ಇಡೀ ಬೆಟ್ಟ ಪ್ರದೇಶವನ್ನೇ ರಕ್ಕಸನ ಬಾಯಿಯಂತೆ ನುಂಗುತ್ತಿದ್ದಾರೆ. ಹೀಗಾಗಿ ಆ ಊರ ಸುತ್ತಮುತ್ತ ಪ್ರದೇಶಗಳಲ್ಲಿ ವಾಸ ಮಾಡುವ ಜನರು ದಿನ ಕಳೆದಂತೆ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ ಅನ್ನೋ ಆರೋಪವೂ ಕೇಳಿಬಂದಿದೆ.

    ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ನೇರುಗಳಲೆ ಪಂಚಾಯತಿ ವ್ಯಾಪ್ತಿಯ ಯಲಕನೂರು ಹಾಗೂ ಹೊಸಳ್ಳಿ ಗ್ರಾಮದಲ್ಲಿ ಕೆಲ ದುರುಳರು ಪ್ರಕೃತಿಯ ಒಡಲಿಗೆ ಕೈಹಾಕಿದ್ದಾರೆ. ಲಾರಿ, ಇಟಾಚಿಗಳನ್ನ ಬಳಸಿಕೊಂಡು ಹಗಲು ರಾತ್ರಿ ಎನ್ನದೇ ಬಾರಿ ಸ್ಫೋಟಕಗಳನ್ನು ಸಿಡಿಸಿ ಅಕ್ರಮವಾಗಿ ಗಣಿಗಾರಿಕೆ (Illegal Mining) ನಡೆಸುತ್ತಿದ್ದಾರೆ. ಇದರಿಂದ ಹಲವಾರು ಜನರು ಅನಾರೋಗ್ಯ ಸಮಸ್ಯೆ ಎದುರಿಸಬೇಕಾಗಿದೆ.

    ಊರಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುಮಾರು 17ಕ್ಕೂ ಹೆಚ್ಚು ಕಲ್ಲು ಕೊರೆಗಳು ಇದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಇತ್ತಿಷ್ಟು ಜಾಗದಲ್ಲಿ ಗಣಿಗಾರಿಕೆ ನಡೆಸುತ್ತೇವೆ ಅಂತ ಅನುಮತಿ ಪಡೆದಿದ್ದಾರೆ. ಆದ್ರೆ ಕಲ್ಲುಗಣಿಗಾರಿಕೆ ನಡೆಸುತ್ತಿರುವರು ಇಲಾಖೆಯ ಕೆಲ ಮಾನದಂಡಗಳನ್ನ ಗಾಳಿಗೆ ತೂರಿ ಪ್ರಕೃತಿ ಮಾತೆಯ ಭೂಗರ್ಭವನ್ನೇ ಸೀಳುತ್ತಿದ್ದಾರೆ. ಹಗಲು ರಾತ್ರಿ ಎನ್ನದೇ ಭಾರೀ ಸ್ಫೋಟಕಗಳನ್ನ ಸಿಡಿಸಿ ಗಣಿ ಕೆಲಸ ನಡೆಸುತ್ತಿದ್ದಾರೆ. ಮೀಸಲು ಅರಣ್ಯ ಪ್ರದೇಶವನ್ನ ಬೀಡದೇ ಮನಸ್ಸೋ ಇಚ್ಚೆ ಗಣಿಗಾರಿಕೆ ನಡೆಸುತ್ತಿದ್ದಾರೆ. ಇದು ಸುತ್ತಮುತ್ತ ನೆಲೆಸಿರುವ ಪ್ರದೇಶದ ಜನರನ್ನೂ ಆತಂಕ್ಕೆ ದೂಡಿದೆ.

    ಇನ್ನೂ ಈ ಊರಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇರುವ ಹಲವು ಕಲ್ಲುಗಣಿಗಾರಿಕೆ ಅಕ್ರಮವಾಗಿದೆ. ಅವೈಜ್ಞಾನಿಕ ನಿರ್ವಹಣೆಯಿಂದಾಗಿ ಊರಿನ ವಾತಾವರಣ ಕಲುಷಿತಗೊಂಡು ಗ್ರಾಮದ ಶೇ.90ರಷ್ಟು ಮಂದಿಗೆ ಶ್ವಾಸಕೋಶದ ತೊಂದರೆ ಎದುರಾಗಿದೆ. ಹೀಗಾಗಿ ಕಲ್ಲುಗಣಿಗಾರಿಕೆ ತಕ್ಷಣ ನಿಲ್ಲಿಸಬೇಕು, ಇಲ್ಲದಿದ್ದಲ್ಲಿ ದಯಾಮರಣ ನೀಡಿ ಎಂದು ಗ್ರಾಮಸ್ಥರು ವಿವಿಧ ಇಲಾಖಾ ಅಧಿಕಾರಿಗಳ ಎದುರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

    ಕಲ್ಲುಗಣಿಗಾರಿಕೆಯಿಂದ ಜನಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದ್ದು, ಭಾರೀ ಸಮಸ್ಯೆ ಸೃಷ್ಟಿಯಾಗಿದೆ. ಅತೀ ಹೆಚ್ಚು ಭಾರದ ವಾಹನಗಳ ಸಂಚಾರದಿಂದ ರಸ್ತೆಗಳು ಹದಗೆಟ್ಟಿದ್ದು, ಜನರ ಬದುಕು ದುಸ್ತರವಾಗಿದೆ. ಸಂಜೆ ವೇಳೆ ಕೋರೆಗಳಲ್ಲಿ ಭಾರೀ ಸ್ಫೋಟಗಳನ್ನು ಬಳಸಲಾಗುತ್ತಿದೆ. ಇಲ್ಲಿನ ಮನೆಗಳೂ ಸಾಕಷ್ಟು ಬಿರುಕುಬಿಟ್ಟಿವೆ. ಜೀವನವೇ ನರಕವಾಗಿದೆ ಗ್ರಾಮಸ್ಥರು ಅಧಿಕಾರಿಗಳೆದುರು ಅಳಲು ತೋಡಿಕೊಂಡಿದ್ದಾರೆ. ಆದ್ರೆ ಇದ್ಯಾವುದಕ್ಕೂ ಕಿವಿಗೊಡದೆ ಅಧಿಕಾರಿಗಳು ತಮ್ಮ ಪಾಡಿಗೆ ಇದ್ದಾರೆ. ಇನ್ನೂ ಕೆಲವರು ಗ್ರಾಮಸ್ಥರಿಗೆ ಹಣ ನೀಡಿ ಇಲ್ಲಿ ಯಾವ್ದೇ ಸಮಸ್ಯೆ ಇಲ್ಲವೆಂದು ಹೇಳುವಂತೆ ಹೇಳಿಕೊಟ್ಟಿದ್ದಾರೆ ಅಂತ ʻಪಬ್ಲಿಕ್‌ ಟಿವಿʼ ರಿಯಾಲಿಟಿ ಚೆಕ್‌ ವೇಳೆ ಯುವಕನೊಬ್ಬ ಹೇಳಿಕೊಂಡಿದ್ದಾನೆ.

  • ಏನಾಯಿತು ಕಮಲ್ ಹಾಸನ್ ಪುತ್ರಿಗೆ? ಆರೋಗ್ಯ ಸಮಸ್ಯೆ ಹಂಚಿಕೊಂಡ ಶ್ರುತಿ ಹಾಸನ್

    ಏನಾಯಿತು ಕಮಲ್ ಹಾಸನ್ ಪುತ್ರಿಗೆ? ಆರೋಗ್ಯ ಸಮಸ್ಯೆ ಹಂಚಿಕೊಂಡ ಶ್ರುತಿ ಹಾಸನ್

    ಮಿಳಿನ ಖ್ಯಾತ ನಟ ಕಮಲ್ ಹಾಸನ್ ಪುತ್ರಿ, ನಟಿ ಶ್ರುತಿ ಹಾಸನ್ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರಂತೆ. ಈ ಕುರಿತು ಅವರೇ ಸ್ವತಃ ಇನ್ಸ್ಟಾದಲ್ಲಿ ಬರೆದುಕೊಂಡು ಪೋಸ್ಟ್ ಮಾಡಿದ್ದಾರೆ. ಹಲವು ತಿಂಗಳುಗಳಿಂದ ಆ ಸಮಸ್ಯೆಯಿಂದ ಅವರು ಬಳಲುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಅಲ್ಲದೇ, ಅದಕ್ಕೆ ಟ್ರೀಟ್ ಮೆಂಟ್ ತಗೆದುಕೊಳ್ಳುವುದರ ಜೊತೆಗೆ ನಿತ್ಯ ವ್ಯಾಯಾಮ ಮಾಡುತ್ತಿರುವುದಾಗಿಯೂ ಅವರು ಹೇಳಿಕೊಂಡಿದ್ದಾರೆ.

    ಈಗಾಗಲೇ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಶ್ರುತಿ ಹಾಸನ್, ಒಳ್ಳೆಯ ಗಾಯಕಿ ಕೂಡ. ಈಗ ‍ಪ್ರಭಾಸ್ ಜೊತೆ ಸಲಾರ್ ಸಿನಿಮಾದ ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದಾರೆ. ಈ ನಡುವೆಯೇ ಅವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ವಿಚಾರವನ್ನೂ ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ತಾವು ಪಿಸಿಓಡಿಯಿಂದ ಬಳಲುತ್ತಿರುವುದಾಗಿ ಹೇಳಿದ್ದಾರೆ. ಅದರಿಂದ ಆಚೆ ಬರುವುದಕ್ಕೆ ಸಾಕಷ್ಟು ಶ್ರಮ ಪಡುತ್ತಿರುವುದಾಗಿಯೂ ಹೇಳಿದ್ದಾರೆ. ಇದನ್ನೂ ಓದಿ:`ರಾ ರಾ ರಕ್ಕಮ್ಮ’ ನಂತರ ನಾಳೆ ಮತ್ತೊಂದು ಸಾಂಗ್ ರಿಲೀಸ್: ವಿಕ್ರಾಂತ್ ರೋಣ

    ನಾನು ಎಂಡೊಮೆಟ್ರಿಯೋಸಿಸ್ ನೊಂದಿಗೆ ಹಾರ್ಮೋನ್ ಸಮಸ್ಯೆಗಳನ್ನು ಎದುರಿಸುತ್ತಿರುವೆ. ಇದೊಂದು ನೈಸರ್ಗಿಕ ಕ್ರಿಯೆ ಎಂದು ನನಗೆ ಗೊತ್ತಿದ್ದರೂ, ಅದರೊಂದಿಗೆ ಹೋರಾಟ ಮಾಡಲೇಬೇಕಿದೆ. ಶೂಟಿಂಗ್ ನಡುವೆಯೂ ನಿತ್ಯ ವ್ಯಾಯಾಮ ಮಾಡುತ್ತೇನೆ. ಸರಿಯಾದ ಊಟ ಮತ್ತು ವೇಳೆಗೆ ಸರಿಯಾಗಿ ನಿದ್ದೆ ಮಾಡಬೇಕಿದೆ. ಸದಾ ಸಂತೋಷದಿಂದ ಇರುವುದೇ ಇದಕ್ಕೆ ಪರಿಹಾರ ಎಂದು ಹಲವರು ಸೂಚಿಸಿದ್ದಾರೆ. ಹಾಗಾಗಿ ನಾನು ಸದಾ ಲವಲವಿಕೆಯಿಂದ ಇರುವೆ ಎಂದು ಹೇಳಿಕೊಂಡಿದ್ದಾರೆ ಶ್ರುತಿ ಹಾಸನ್.

    Live Tv

  • ಏನಾಯ್ತು ಅಮಿತಾಭ್ ಬಚ್ಚನ್‌ಗೆ? – ಆತಂಕದಲ್ಲಿ ಅಭಿಮಾನಿಗಳು

    ಏನಾಯ್ತು ಅಮಿತಾಭ್ ಬಚ್ಚನ್‌ಗೆ? – ಆತಂಕದಲ್ಲಿ ಅಭಿಮಾನಿಗಳು

    ನೆನ್ನೆ ರಾತ್ರಿ 10.14ಕ್ಕೆ ಟ್ವೀಟ್ ಮಾಡುವ ಮೂಲಕ ಅಭಿಮಾನಿಗಳ ಆತಂಕ ಹೆಚ್ಚಿಸಿದ್ದಾರೆ ಬಾಲಿವುಡ್ ನ ಬಿಗ್ ಬಿ ಅಮಿತಾಭ್ ಬಚ್ಚನ್. ಅವರು ಆ ರೀತಿಯಲ್ಲಿ ಯಾಕೆ ಟ್ವೀಟ್ ಮಾಡಿದರು? ಅವರ ಆರೋಗ್ಯದಲ್ಲಿ ಸಮಸ್ಯೆಯಾಗಿದೆಯಾ? ಅರ್ಥವೇ ಆಗದಂತೆ ಮಾಡಿರುವ ಟ್ವೀಟ್ ಹಿಂದಿರುವ ಉದ್ದೇಶವೇನು ಎನ್ನುವ ಪ್ರಶ್ನೆಯೊಂದಿಗೆ ಆತಂಕ ವ್ಯಕ್ತಪಡಿಸಿದ್ದಾರೆ ಅಮಿತಾಭ್ ಅಭಿಮಾನಿಗಳು. ಅಲ್ಲದೇ, ಏನಾಗಿದೆ ಅಂತ ಬೇಗ ಹೇಳಿ ದೇವರೆ? ಎಂದು ಮರುಟ್ವೀಟ್ ಮಾಡಿದ್ದಾರೆ ಸಾಕಷ್ಟು ಅಭಿಮಾನಿಗಳು. ಇದನ್ನೂ ಓದಿ : ಕಂಠೀರವ ಸ್ಟುಡಿಯೋ ಆವರಣದಲ್ಲಿ 14 ಅಡಿ ಎತ್ತರದ ಅಂಬರೀಶ್ ಪ್ರತಿಮೆ

    ಆರೋಗ್ಯದ ವಿಷಯದಲ್ಲಿ ಅಮಿತಾಭ್ ಬಚ್ಚನ್ ಪದೇ ಪದೇ ಸುದ್ದಿಯಾಗುತ್ತಿದ್ದಾರೆ. ಒಂದೊಂದು ಬಾರಿ ಅವರೇ ತಮಗಾದ  ಆರೋಗ್ಯ ಸಮಸ್ಯೆಯನ್ನು ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಂಡರೆ, ಮತ್ತಷ್ಟು ಬಾರಿ ಸುಳ್ಳು ಸುದ್ದಿಗಳು ಹಬ್ಬಿವೆ. ಆದರೆ, ಈ ಬಾರಿ ಸ್ವತಃ ಅಮಿತಾಭ್ ಅವರೇ, “heart pumping .. concerned .. and the hope” ಎಂದು ಟ್ವೀಟ್ ಮಾಡುವ ಮೂಲಕ ಅಭಿಮಾನಿಗಳ ಎದೆ ಬಡಿತ ಹೆಚ್ಚಿಸಿದ್ದಾರೆ. ಇದನ್ನೂ ಓದಿ : ಉಪಗ್ರಹವಾದ ಪುನೀತ್ ರಾಜ್ ಕುಮಾರ್: 100 ಸಾಹಸಿ ಮಕ್ಕಳ ಕೆಲಸವಿದು

    ಅವರು ಟ್ವೀಟ್ ಮಾಡುತ್ತಿದ್ದಂತೆಯೇ ಲಕ್ಷಾಂತರ ಅಭಿಮಾನಿಗಳು ಅದಕ್ಕೆ ಪ್ರತಿಕ್ರಿಯಿಸಿದ್ದಾರೆ. ಮರು ಟ್ವೀಟ್ ಮಾಡಿದ್ದಾರೆ. ಆಗಿರುವ ಸಮಸ್ಯೆಯನ್ನು ಹೇಳಿಕೊಳ್ಳಿ ಎಂದು ಮನವಿ ಮಾಡಿದ್ದಾರೆ. ಆದರೆ, ಅಮಿತಾಭ್ ಈವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹಾಗಾಗಿ ಇನ್ನೂ ಅವರ ಅಭಿಮಾನಿಗಳು ಆತಂಕದಲ್ಲೇ ಇದ್ದಾರೆ.

  • ಮುದುಕರಂತೆ ಕಾಣುತ್ತಿದ್ದಾರೆ ವಯಸ್ಕರು, ಕಂದು ಬಣ್ಣಕ್ಕೆ ತಿರುಗುತ್ತಿದೆ ಮಕ್ಕಳ ಹಲ್ಲುಗಳು

    ಮುದುಕರಂತೆ ಕಾಣುತ್ತಿದ್ದಾರೆ ವಯಸ್ಕರು, ಕಂದು ಬಣ್ಣಕ್ಕೆ ತಿರುಗುತ್ತಿದೆ ಮಕ್ಕಳ ಹಲ್ಲುಗಳು

    – ನೀರಿದ್ದರೂ ಕುಡಿಯಲು ಕಾಡುತ್ತಿದೆ ಭಯ
    – ದುಡಿದ ದುಡ್ಡೆಲ್ಲಾ ಆಸ್ಪತ್ರೆ ಪಾಲಾದರೂ ಸಿಗದ ಆರೋಗ್ಯ
    – ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೇ ಜನರ ಪಾಲಿನ ವಿಲನ್‍ಗಳು

    ರಾಯಚೂರು: ಕೃಷ್ಣಾ ತುಂಗಭದ್ರಾ ಎರಡು ನದಿಗಳಿದ್ದರೂ ಕುಡಿಯುವ ನೀರಿನ ಭೀಕರ ಸಮಸ್ಯೆ ಎದುರಿಸುತ್ತಿರುವ ಬಿಸಿಲನಾಡು ರಾಯಚೂರು ಜಿಲ್ಲೆಯಲ್ಲಿ, ಕೆಲವೆಡೆ ನೀರೇ ದೊಡ್ಡ ಸಮಸ್ಯೆಯಾಗಿದೆ. ಈ ನಡುವೆ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ಜನ ನೀರು ಕುಡಿಯಲು ಹೆದರುತ್ತಿದ್ದಾರೆ.

    ಗ್ರಾಮದಲ್ಲಿ ಮಧ್ಯವಯಸ್ಕರು ಮುದುಕರಂತೆ ಕಾಣುತ್ತಾರೆ, ನಡು ವಯಸ್ಸಿನಲ್ಲಿಯೇ ಇವರಿಗೆ ಕೀಲು, ಮೊಣಕಾಲು ನೋವು ಕಾಣಿಸಿಕೊಳ್ಳುತ್ತದೆ. ಈ ಗ್ರಾಮದಲ್ಲಿನ ಮಕ್ಕಳ ಹಲ್ಲುಗಳಂತೂ ಆರು ವರ್ಷಕ್ಕೆ ಕಂದು ಬಣ್ಣಕ್ಕೆ ತಿರುಗುತ್ತವೆ. ಅಷ್ಟೇ ಅಲ್ಲದೇ ಇಡೀ ಗ್ರಾಮಸ್ಥರು ಒಂದಿಲ್ಲ ಒಂದು ನೋವಿನಿಂದ ನರಳುತ್ತಿದ್ದಾರೆ.

    ಸರಿಸುಮಾರು 400 ಜನ ಇರುವ ಗ್ರಾಮದಲ್ಲಿ ನೀರಿನಿಂದಾಗಿ ಅರ್ಧಕ್ಕಿಂತ ಹೆಚ್ಚು ಜನರಿಗೆ ಕುಳಿತರೆ ನಿಲ್ಲಲು ಆಗುತ್ತಿಲ್ಲ. ನಿಂತರೆ ಕುಳಿತುಕೊಳ್ಳಲು ಆಗದ ಸ್ಥಿತಿ ಅನುಭವಿಸುತ್ತಿದ್ದಾರೆ. ಬಹುತೇಕರ ಮೊಣಕಾಲುಗಳು ಸೊಟ್ಟಗಾಗಿದೆ. ಕೆಲವರಿಗೆ ನಡೆದಾಡಲು ಸಹ ಬರುತ್ತಿಲ್ಲ. ಚಿಕ್ಕ ಮಕ್ಕಳ ಹಲ್ಲುಗಳ ಕಂದು ಬಣ್ಣಕ್ಕೆ ತಿರುಗಿವೆ. ಬೋರ್‍ವೆಲ್ ನೀರನ್ನೇ ನಂಬಿರುವ ಗ್ರಾಮಸ್ಥರಿಗೆ ಫ್ಲೋರೈಡ್ ಸಮಸ್ಯೆ ವಿಪರೀತವಾಗಿ ಕಾಡುತ್ತಿದೆ. ಹೀಗಾಗಿ ಈ ನೀರನ್ನು ಕುಡಿದು ನಿತ್ಯ ನರಳುತ್ತಿದ್ದೇವೆ ನಮ್ಮ ಕಷ್ಟ ಕೇಳುವವರು ಯಾರೂ ಇಲ್ಲ ಎಂದು ಗ್ರಾಮಸ್ಥರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

    ಕಳೆದ ನಾಲ್ಕೈದು ವರ್ಷದಿಂದ ವಿಪರೀತವಾಗಿ ಕೀಲು ಬೇನೆಯಿಂದ ಗ್ರಾಮದ ಜನರು ನರಳಾಡುತ್ತಿದ್ದಾರೆ. ಸದಾ ಒಂದಿಲ್ಲೊಂದು ಕಾಯಿಲೆಗೆ ತುತ್ತಾಗಿ ಆಸ್ಪತ್ರೆಗೆ ಖರ್ಚುಮಾಡುತ್ತಿದ್ದಾರೆ. ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವಿಲ್ಲ. ಹೀಗಾಗಿ ಶುದ್ಧ ನೀರಿಗಾಗಿ ಪಕ್ಕದ ಮೂರು ಕಿ.ಮೀ ದೂರದ ಮಲ್ಲೇದೇವರಗುಡ್ಡ ಅಥವಾ ಜಾಗೀರ ಜಾಡಲದಿನ್ನಿಗೆ ಜನರು ಹೋಗಿ ನೀರು ತರುತ್ತಿದ್ದಾರೆ.

    ಸಮಸ್ಯೆಯ ಬಗ್ಗೆ ಜಿಲ್ಲಾ ಪಂಚಾಯ್ತಿ ಅಧಿಕಾರಿಗಳಿಗೆ ಕೇಳಿದಾಗ, ಮಳೆಯಿಲ್ಲದೆ ಅಂತರ್ಜಲ ಕುಸಿದು ಸಮಸ್ಯೆ ಹೆಚ್ಚಾಗಿದೆ. ಆದ್ಯತೆ ಮೇರೆಗೆ ಕುಡಿಯುವ ನೀರಿನ ಘಟಕಗಳನ್ನ ಸ್ಥಾಪಿಸುವುದಾಗಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮಹ್ಮದ್ ಯೂಸೂಫ್ ಭರವಸೆ ನೀಡಿದ್ದಾರೆ. ಆದರೆ ಜಿಲ್ಲೆಯಲ್ಲಿ ಒಂದೆಡೆ ನೀರಿಲ್ಲ ಇನ್ನೊಂದೆಡೆ ನೀರಿದ್ದರೂ ಕುಡಿಯಲು ಯೋಗ್ಯವಿಲ್ಲ. ಈ ಮಧ್ಯೆ ಜಿಲ್ಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಬಹಳಷ್ಟು ಸ್ಥಗಿತಗೊಂಡಿವೆ. ಅಧಿಕ ಫ್ಲೋರೈಡ್ ಅಂಶವಿರುವ ನೀರು ಕುಡಿದು ಜನತೆ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಅಧಿಕಾರಿಗಳು ಎಚ್ಚೆತ್ತುಕೊಂಡು ಗ್ರಾಮಸ್ಥರ ಕಷ್ಟಕ್ಕೆ ಸ್ಪಂದಿಸಬೇಕು ಎಂದು ಜನರು ಮನವಿ ಮಾಡಿಕೊಂಡಿದ್ದಾರೆ.