Tag: ಆರೋಪ

  • ಗಂಗಾವತಿ ಪೊಲೀಸ್ ಠಾಣೆ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

    ಗಂಗಾವತಿ ಪೊಲೀಸ್ ಠಾಣೆ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

    ಕೊಪ್ಪಳ: ಪೊಲೀಸ್ ಠಾಣೆಯ ಮುಂದುಗಡೆ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿದೆ.

    ಈ ಹಿಂದೆ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದ ಪ್ರಧಾನ ಅರ್ಚಕ ವಿದ್ಯಾದಾಸ್ ಬಾಬಾ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆ ಎನ್ನಲಾದ ಫೋಟೋ ವೈರಲ್ ಆಗಿತ್ತು. ಈ ಫೋಟೋದಲ್ಲಿ ಕಾಣಿಸಿ ಕೊಂಡಿದ್ದ ಮಹಿಳೆಯೇ ಆತ್ಮಹತ್ಯೆಗೆ ಯತ್ನಿಸಿದ್ದು, ತಮ್ಮ ಮೇಲಿನ ಆರೋಪದಿಂದ ಎರಡು ತಿಂಗಳಿನಿಂದ ತೀವ್ರ ಮನನೊಂದು ಗುರುವಾರ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

    ಈ ಮೊದಲು ಮಾಧ್ಯಮದೊಂದಿಗೆ ಮಾತನಾಡಿದ ಅವರು, 15 ವರ್ಷಗಳಿಂದ ನಾನು ಅಲ್ಲಿ ಕೆಲಸ ಮಾಡುತ್ತಿದ್ದೇನೆ. ಆದರೆ ನನ್ನ ಮೇಲೆ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ಬಾಬಾ ಹಾಗೂ ನನ್ನ ನಡುವೆ ಯಾವುದೇ ಅಕ್ರಮ ಸಂಬಂಧವಿಲ್ಲ. ಗ್ರಾಮಸ್ಥರ ಭಯದಿಂದ ಕಳೆದ 2 ತಿಂಗಳಿಂದ ನಮ್ಮ ಕುಟುಂಬದೊಂದಿಗೆ ಗ್ರಾಮ ತೊರೆದಿದ್ದೇನೆ. ಆದರೆ ಈಗ ಮತ್ತೆ ಗ್ರಾಮಕ್ಕೆ ಹಿಂದಿರುಗಿದರೆ ಕೊಲೆ ಮಾಡುವ ಬೆದರಿಕೆ ಹಾಕುತ್ತಿದ್ದಾರೆ. ವ್ಯವಸ್ಥಿತ ಸಂಚಿನ ಮೂಲಕ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ಇದರ ಹಿಂದೆ ದೇವಸ್ಥಾನದ ಕೆಲಸಗಾರರ ಕೈವಾಡವಿದೆ ಎಂದು ಆರೋಪಿಸಿದ್ದರು.

    ಈ ಸುಳ್ಳು ಆರೋಪ ನನ್ನ ಮಗಳ ಭವಿಷ್ಯದ ಮೇಲೆಯೂ ಪರಿಣಾಮ ಬೀರಿದೆ. ಬಾಬಾ ಹಾಗೂ ಅವರ ನಡುವಿನ ಒಳ ಜಗಳಕ್ಕೆ ಬಡ ಕುಟುಂಬವಾದ ನಮ್ಮನ್ನು ಬಲಿಪಶು ಮಾಡುವುದು ಎಷ್ಟು ಸರಿ ಎಂದು ಅವರು ಬೇಸರ ವ್ಯಕ್ತಪಡಿಸಿದರು.

  • ಭಕ್ತರಿಂದ ಹಣ ಸುಲಿಗೆ ಮಾಡ್ತಿದ್ಯಾ ಕುಕ್ಕೆ ದೇಗುಲ ಸಮಿತಿ?

    ಭಕ್ತರಿಂದ ಹಣ ಸುಲಿಗೆ ಮಾಡ್ತಿದ್ಯಾ ಕುಕ್ಕೆ ದೇಗುಲ ಸಮಿತಿ?

    ಮಂಗಳೂರು: ರಾಜ್ಯದ ಹೆಸರಾಂತ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ಸರ್ಪ ಸಂಸ್ಕಾರ ಸೇವೆಗೆ ಭಕ್ತರಿಂದ ಅಧಿಕ ಹಣ ವಸೂಲಿ ಮಾಡಲಾಗುತ್ತಿದೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ.

    ಈ ಕುರಿತು ಬಿಜೆಪಿ ಹಾಗೂ ಭಜರಂಗ ದಳ ಸಂಘಟನೆ ಪ್ರತಿಭಟನೆ ನಡೆಸಿದ್ದು, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿರುವ ಕೃಷ್ಣಮೂರ್ತಿ ಭಟ್ ಅವರ ರಾಜೀನಾಮೆಗೆ ಆಗ್ರಹಿಸಿದೆ.

    ಏನಿದು ಆರೋಪ?
    ಹಾಸನ ಮೂಲದ ಭಕ್ತರ ಗುಂಪು ಡಿಸೆಂಬರ್ 20 ರಂದು ಸರ್ಪ ಸಂಸ್ಕಾರ ಸೇವೆ ಮಾಡಿಸಿದ್ದರು. ಇವರಿಗೆ ಆನ್ ಲೈನ್ ನಲ್ಲಿ ಅವಕಾಶ ಸಿಗದ ಕಾರಣ, ದೇವಸ್ಥಾನದಲ್ಲಿ ಉದ್ಯೋಗದಲ್ಲಿರುವ ಹಾಸನ ಮೂಲದ ವ್ಯಕ್ತಿಯ ಹೆಸರಿನಲ್ಲಿ ಸೇವೆಯನ್ನು ಬುಕಿಂಗ್ ಮಾಡಲಾಗಿತ್ತು. ಹೆಸರಿನ ಮುಂಭಾಗ ವ್ಯವಸ್ಥಾಪನಾ ಸಮಿತಿ ಸದಸ್ಯ ಕೃಷ್ಣಮೂರ್ತಿ ಭಟ್ ಹೆಸರನ್ನು ಶಿಫಾರಸು ಆಗಿ ನಮೂದಿಸಲಾಗಿತ್ತು. ಆದರೆ ಸೇವೆಯಾದ ಬಳಿಕ ಆ ಗುಂಪಿನಿಂದ ಕೃಷ್ಣಮೂರ್ತಿ ಭಟ್ ನಿಗದಿಗಿಂತ ಅಧಿಕ ಮೊತ್ತವನ್ನು ವಸೂಲು ಮಾಡಿದೆ ಎಂದು ಆರೋಪಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಭಕ್ತರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ದೇವಸ್ಥಾನದಲ್ಲಿ ನಡೆಯುತ್ತಿರುವ ಅವ್ಯವಹಾರ ಆರೋಪ ಪ್ರಸ್ತುತ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿಯಲ್ಲಿ ಕಾಂಗ್ರೆಸ್, ಬಿಜೆಪಿ ವಾಕ್ಸಮರಕ್ಕೆ ವೇದಿಕೆಯಾಗಿದೆ. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಕೃಷ್ಣಮೂರ್ತಿ ಅವರ ರಾಜೀನಾಮೆ ಪಡೆಯದೇ ಇದ್ದರೆ ಉಗ್ರ ಹೋರಾಟ ನಡೆಸುವುದಾಗಿ ಬಿಜೆಪಿ, ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ನಾಯಕರು ಎಚ್ಚರಿಕೆ ನೀಡಿದ್ದಾರೆ.

     

  • ಸಿಎಂ ಸಿದ್ದರಾಮಯ್ಯ ಒಂದು ರಾತ್ರಿಯ ಭೋಜನ ಕೂಟಕ್ಕೆ ಬೆಳ್ಳಿ ತಟ್ಟೆ ಬಳಕೆ, 10 ಲಕ್ಷ ರೂ. ಖರ್ಚು!

    ಸಿಎಂ ಸಿದ್ದರಾಮಯ್ಯ ಒಂದು ರಾತ್ರಿಯ ಭೋಜನ ಕೂಟಕ್ಕೆ ಬೆಳ್ಳಿ ತಟ್ಟೆ ಬಳಕೆ, 10 ಲಕ್ಷ ರೂ. ಖರ್ಚು!

    ಕಲಬುರಗಿ: ಕಳೆದ ಡಿಸೆಂಬರ್ 17 ರಂದು ಕಲಬುರಗಿಯಲ್ಲಿ ನಡೆದ ಸಾಧನಾ ಸಮಾವೇಶ ಮುಗಿದ ನಂತರ ಸಿಎಂ ಸಿದ್ದರಾಮಯ್ಯದ ಹಾಗೂ ಸಹೋದ್ಯೋಗಿಗಳ ಭೋಜನಕ್ಕೆ ಬೆಳ್ಳಿ ತಟ್ಟೆಯನ್ನು ಬಳಕೆ ಮಾಡಲಾಗಿದ್ದು, ಈ ಭೋಜನ ಕೂಟಕ್ಕಾಗಿ ಸುಮಾರು 10ಲಕ್ಷ ರೂ. ಖರ್ಚು ಮಾಡಲಾಗಿದೆ ಎಂದು ಕಲಬುರುಗಿ ಬಿಜೆಪಿ ಘಟಕದ ಮಾಜಿ ಜಿಲ್ಲಾಧ್ಯಕ್ಷ ರಾಜಕುಮಾರ್ ತೇಲ್ಕೂರ ಆರೋಪ ಮಾಡಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಧನಾ ಸಮಾವೇಶ ಮುಗಿದ ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಸಹೋದ್ಯೋಗಿಗಳಿಗೆ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ ಪಾಟೀಲ್ ಅವರ ಪರವಾಗಿ ಜಿಲ್ಲಾಡಳಿತ ಐವಾನ್ ಇ ಶಾಹಿ ಗೆಸ್ಟ್ ಹೌಸ್ ನಲ್ಲಿ ಭೋಜನ ವನ್ನು ಏರ್ಪಡಿಸಿತ್ತು. ಈ ವೇಳೆ ಎಲ್ಲರಿಗೂ ಬೆಳ್ಳಿ ತಟ್ಟೆಯಲ್ಲಿ ಊಟ ನೀಡಿಲಾಗಿದೆ. ಪ್ರತಿಯೊಬ್ಬರ ಊಟಕ್ಕೆ ಜಿಲ್ಲಾಡಳಿತ ತಲಾ 800 ರೂಪಾಯಿ ಖರ್ಚು ಮಾಡಿದೆ. ಈ ಮೂಲಕ ಸಾರ್ವಜನಿಕರ ಹಣವನ್ನು ಜಿಲ್ಲಾಡಳಿತ ಪೋಲು ಮಾಡಿದೆ. ಬೆಳ್ಳಿ ತಟ್ಟೆಯಲ್ಲಿ ಊಟ ಮಾಡುವ ಮೂಲಕ ಈ ನಾಯಕರು ಸಾಮಾನ್ಯ ಜನತೆಗೆ ಏನು ಸಂದೇಶ ಸಾರಲು ಹೊರಟಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

    ಜಿಲ್ಲಾಡಳಿತ ಆಯೋಜಿಸಿದ್ದ ಭೋಜನ ಕೂಟದಲ್ಲಿ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್, ಶರಣ್ ಪ್ರಕಾಶ್ ಪಾಟೀಲ್, ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಮಾಜಿ ಸಚಿವ ಶರಣಬಸಪ್ಪ ದರ್ಶನಾಪುರ, ಅಳಂದ ಶಾಸಕ ಬಿ.ಆರ್.ಪಾಟೀಲ್ ಮೊದಲಾದವರು ಅಂದು ಸಿಎಂ ಜೊತೆ ಭೋಜನ ಸವಿದಿದ್ದಾರೆ.

    ಆದರೆ ಈ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾಡಳಿತ ಅಧಿಕಾರಿಗಳು, ಸಿಎಂ ಅವರ ಭೋಜನ ಕೂಟವನ್ನು ಜಿಲ್ಲೆಯ ಕಾಂಗ್ರೆಸ್ ಶಾಸಕರು ಏರ್ಪಡಿಸಿದ್ದು, ಅದಕ್ಕೆ ಜಿಲ್ಲಾಡಳಿತ ಯಾವುದೇ ಹಣ ನೀಡಿಲ್ಲ. ಇನ್ನು ಸಿಎಂ ಅವರಿಗೆ ನೀಡಿದ್ದು ಬೆಳ್ಳಿ ಲೇಪನದ ತಟ್ಟೆ ಅಷ್ಟೇ ಎಂದು ಸ್ಪಷ್ಟನೆ ನೀಡಿದ್ದಾರೆ.

  • 2ಜಿ ಕೂಪದಿಂದ ಕನಿಮೋಳಿ ಹೊರಬರಲು ಶ್ರೀಕೃಷ್ಣ, ಮುಖ್ಯಪ್ರಾಣರೇ ಕಾರಣ : ಶೀರೂರು ಶ್ರೀ

    2ಜಿ ಕೂಪದಿಂದ ಕನಿಮೋಳಿ ಹೊರಬರಲು ಶ್ರೀಕೃಷ್ಣ, ಮುಖ್ಯಪ್ರಾಣರೇ ಕಾರಣ : ಶೀರೂರು ಶ್ರೀ

    ಉಡುಪಿ: 2ಜಿ ಹಗರಣದ ಬಲೆಯಿಂದ ಕರುಣಾನಿಧಿ ಪುತ್ರಿ ಕನಿಮೋಳಿ ಹೊರಬಂದಾಗಿದೆ. ಸಿಬಿಐ ವಿಶೇಷ ಕೋರ್ಟ್ ಕನಿಮೋಳಿಯನ್ನು ಖುಲಾಸೆ ಮಾಡಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ರಾಜಕೀಯ ಗರಿಗೆದರಿದೆ. ಆದರೆ 2 ಜಿ ಭ್ರಷ್ಟಚಾರ ಆರೋಪದಿಂದ ಕನಿಮೋಳಿ ಅವರು ಹೊರ ಬರಲು ಸಾಧ್ಯವೇ ಇಲ್ಲ ಎಂದು ವಿಶ್ಲೇಷಿಸಲಾಗಿದ್ದ ಎಲ್ಲರಿಗೂ ಅಚ್ಚರಿಯಾಗಿದ್ದು, ಇದಕ್ಕೆ ಪ್ರಮುಖ ಕಾರಣ ಉಡುಪಿ ಶ್ರೀ ಕೃಷ್ಣನೇ ಎನ್ನುವ ವಾದ ಹುಟ್ಟಿಕೊಂಡಿದೆ.

    ಆದರೆ ಕನಿಮೋಳಿ ಪ್ರಕರಣಕ್ಕೂ ಉಡುಪಿ ಶ್ರೀ ಕೃಷ್ಣ ಮಠಕ್ಕೂ ಏನು ಸಂಬಂಧ ಎಂಬ ಮಾಹಿತಿ ತಿಳಿಯಬೇಕಾದರೆ ಆರು ವರ್ಷಗಳ ಹಿಂದಿನ ಘಟನೆ ತೆರೆದುಕೊಳ್ಳುತ್ತದೆ. ಆ ಸಂದರ್ಭದಲ್ಲಿ ಉಡುಪಿ ಶ್ರೀಕೃಷ್ಣನ ಪೂಜಾಧಿಕಾರವನ್ನು ಶೀರೂರು ಮಠಾಧೀಶ ಲಕ್ಷ್ಮೀವರ ತೀರ್ಥರು ನೋಡಿಕೊಳ್ಳುತ್ತಿದ್ದರು.

    ಈ ಕುರಿತು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿರುವ ಶೀರೂರು ಶ್ರೀಗಳು, ಆರು ವರ್ಷದ ಹಿಂದೆ ಕನಿಮೋಳಿಯವರ ತಾಯಿ ರಜತಿ ಅವರು ಮಠಕ್ಕೆ ಬಂದಿದ್ದರು. ತಮ್ಮ ಕುಟುಂಬದಲ್ಲಿ ಗೊಂದಲಗಳಾಗಿದೆ. ತನ್ನ ಮಗಳಿಗೆ ಮಾಡದ ತಪ್ಪಿಗೆ ಶಿಕ್ಷೆಯಾಗಿ ಜೈಲು ಸೇರಿದ್ದಾಳೆ. ಹೀಗಾಗಿ ದೇವರಲ್ಲಿ ವಿಶೇಷ ಪ್ರಾರ್ಥನೆ ನಡೆಸಲು ಕೇಳಿಕೊಂಡಿದ್ದರು ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ರಜತಿ ಅವರಿಗೆ ಧೈರ್ಯ ತುಂಬಿದ್ದ ಶ್ರೀಗಳು ತಪ್ಪು ಮಾಡದಿದ್ದರೆ ದೇವರ ಅನುಗ್ರಹ ನಿಮ್ಮ ಮೇಲೆ ಇರುತ್ತದೆ. ಅವರ ಮನವಿಯಂತೆ ಪೂಜೆಯ ಸಂದರ್ಭ ದೇವರಲ್ಲಿ ಪ್ರಾರ್ಥನೆಯನ್ನು ಮಾಡಿಕೊಂಡಿದ್ದೆವು. ಇದೀಗ ಕನಿಮೋಳಿ ಅವರು ಆರೋಪ ಮುಕ್ತರಾಗಿದ್ದಾರೆ ಎಂದು ವಿವರಿಸಿದರು.

    ಉಡುಪಿಯಲ್ಲಿ ಶ್ರೀಕೃಷ್ಣ ಭಕ್ತರ ಕಣ್ಮಣಿ, ಆದರೂ ಮಠದೊಳಗೆ ಮುಖ್ಯಪ್ರಾಣ ಅಂದರೆ ಆಂಜನೇಯ ದೇವರು ಹೆಚ್ಚು ಶಕ್ತಿಯನ್ನು ಹೊಂದಿದ್ದಾರೆ ಎಂಬ ನಂಬಿಕೆ ಇದೆ. ಕೃಷ್ಣ ಮುಖ್ಯಪ್ರಾಣರಿಗೆ ಮಾಡಿದ ಪ್ರಾರ್ಥನೆ ಫಲ ನೀಡಿದೆ. ಕರುಣಾನಿಧಿ ಕುಟುಂಬ ಹರಕೆ ತೀರಿಸಲು ಮತ್ತೆ ಉಡುಪಿಗೆ ಬರಬಹುದು ಎಂಬ ನಿರೀಕ್ಷೆಯಿದೆ ಎಂದು ಶ್ರೀ ಶೀರೂರು ಸ್ವಾಮೀಜಿ ಹೇಳಿದರು.

    ಹರಕೆ ಹೊತ್ತಿದ್ದರೆ, ದೇವರಲ್ಲಿ ಪ್ರಾರ್ಥನೆ ಮಾಡಿಕೊಂಡ ವೇಳೆ ಮತ್ತೆ ಬರುವುದಾಗಿ ಹೇಳಿಕೊಂಡಿದ್ದರೆ ಮತ್ತೆ ಉಡುಪಿಗೆ ಬಂದು ಕೃಷ್ಣಮುಖ್ಯಪ್ರಾಣರ ಸನ್ನಿಧಿಗೆ ಭೇಟಿಕೊಡಬೇಕು ಎಂಬ ನಂಬಿಕೆ ಭಕ್ತರಲ್ಲಿ ಇದೆ.

     

  • ಆರೋಪ ಕೇಳಿ ಶಾಕ್ ಆಗಿದೆ- ಸಾಧು ಕೋಕಿಲ

    ಆರೋಪ ಕೇಳಿ ಶಾಕ್ ಆಗಿದೆ- ಸಾಧು ಕೋಕಿಲ

    ಬೆಂಗಳೂರು: ಮಸಾಜ್ ಸೆಂಟರ್ ನಲ್ಲಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನುವ ಯುವತಿಯ ಆರೋಪವನ್ನು ಸಂಗೀತ ನಿರ್ದೇಶಕ, ನಟ ಸಾಧು ಕೋಕಿಲ ಅವರು ತಿರಸ್ಕರಿಸಿದ್ದಾರೆ.

    ಈ ಕುರಿತು ಪಬ್ಲಿಕ್ ಟಿವಿ ಯೊಂದಿಗೆ ದೂರವಾಣಿ ಮೂಲಕ ಮಾತನಾಡಿ ಸ್ಪಷ್ಟನೆ ನೀಡಿದ ಅವರು, ನಾನು ಬೇರೆ ಚಿತ್ರದ ಸಂಗೀತ ನಿರ್ದೇಶನಕ್ಕಾಗಿ ಚೆನ್ನೈಗೆ ತೆರಳಿದ್ದೇನೆ. ಈ ಸುದ್ದಿ ಕೇಳಿ ಶಾಕ್ ಆಗಿದೆ. ಆದರೆ ನಾನು ಯಾವುದೇ ಮಸಾಜ್ ಪಾರ್ಲರ್ ಗೆ ಹೋಗಲ್ಲ, ಆಕೆ ಯಾರೆಂದು ಗೊತ್ತಿಲ್ಲ ಎಂದರು.

    ಯುವತಿ ಆರೋಪದ ಕುರಿತು ನನ್ನ ಕುಟುಂಬ ಸದಸ್ಯರು ಮಾಹಿತಿ ನೀಡಿದರು. ಆದರೆ ನಾವು ಕಲಾವಿದರಾಗಿರುವುದರಿಂದ ಹೆಚ್ಚು ಹೊರಗಡೆ ತೆರಳಲು ಸಾಧ್ಯವಾಗುವುದಿಲ್ಲ. ಅದ್ದರಿಂದ ನಾನು ಅವರನ್ನು ಮನೆಗೆ ಕರೆಸಿಕೊಳ್ಳುತ್ತೇನೆ. ಘಟನೆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಯಾರು? ಏನು? ಎಂಬ ಮಾಹಿತಿ ಇಲ್ಲ. ಬೆಂಗಳೂರಿಗೆ ಹಿಂದುರಿದ ತಕ್ಷಣ ಘಟನೆ ಕುರಿತು ಮಾಹಿತಿ ಪಡೆದು ಪ್ರತಿಕ್ರಿಯೆ ನೀಡುವುದಾಗಿ ತಿಳಿಸಿದರು. ಇದನ್ನೂ ಓದಿ: ನನ್ನ ಮೇಲಿನ ಆರೋಪ ಅಚ್ಚರಿ, ದಿಗ್ಭ್ರಮೆ ಉಂಟು ಮಾಡಿದೆ: ನಟ ಮಂಡ್ಯ ರಮೇಶ್

    ನಟ ಜಗ್ಗೇಶ್ ಟ್ವೀಟ್: ಸಂಗೀತ ನಿರ್ದೇಶಕ, ನಟ ಸಾಧು ಕೋಕಿಲ ಹಾಗೂ ನಟ ಮಂಡ್ಯ ರಮೇಶ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಜಗ್ಗೇಶ್ ಟ್ವೀಟ್ ಮಾಡಿ ಧೈರ್ಯ ಹೇಳಿದ್ದಾರೆ.

    ಆರೋಪದ ಸತ್ಯಾಂಶ ತಿಳಿಯಲು ಪಾರ್ಲರ್ ನ ಸಿಸಿಟಿವಿ ದೃಶ್ಯವಳಿಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಬೇಕು. ಆಗ ರಮೇಶ್ ಅವರು ಆಪಾದನೆಯಿಂದ ಪಾರಾಗುತ್ತಾರೆ ಎಂಬ ಆಶಾಭಾವನೆ ಇದೆ. ಬರಿ ಬಾಯಿ ಮಾತಿನ ಆರೋಪಗಳಿಗೆ ಮಹತ್ವ ಕೊಡಬೇಡಿ. ಇತ್ತೀಚೆಗೆ ಸುಳ್ಳು ಆಪಾದನೆ, ಕಾನೂನು ದುರ್ಬಳಕೆ ಹೆಚ್ಚಾಗುತ್ತಿದೆ. ಆರೋಪ ಸುಳ್ಳಾದರೆ ಯಾರೇ ಆದರು ಕಠಿಣ ಕ್ರಮ ಕೈಗೊಳ್ಳಬೇಕು. ಧೈರ್ಯದಿಂದಿರಿ ರಮೇಶ್ ದೇವರಿದ್ದಾರೆ. ಸತ್ಯ ಹೊರಬರುತ್ತೆ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಸ್ಟಾರ್ ಮಸಾಜ್ : ಮಂಡ್ಯ ರಮೇಶ್, ಸಾಧು ವಿರುದ್ಧ ಯುವತಿಯಿಂದ ದೂರು

    https://www.youtube.com/watch?v=dpHAGiEYHLY

  • ನನ್ನ ಮೇಲಿನ ಆರೋಪ ಅಚ್ಚರಿ, ದಿಗ್ಭ್ರಮೆ ಉಂಟು ಮಾಡಿದೆ: ನಟ ಮಂಡ್ಯ ರಮೇಶ್

    ನನ್ನ ಮೇಲಿನ ಆರೋಪ ಅಚ್ಚರಿ, ದಿಗ್ಭ್ರಮೆ ಉಂಟು ಮಾಡಿದೆ: ನಟ ಮಂಡ್ಯ ರಮೇಶ್

    ಮೈಸೂರು: ಮಸಾಜ್ ಸೆಂಟರ್ ನಲ್ಲಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನುವ ಯುವತಿಯ ಆರೋಪವನ್ನು ನಟ ಮಂಡ್ಯ ರಮೇಶ್ ತಿರಸ್ಕರಿಸಿದ್ದಾರೆ.

    ಈ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ಅವರು, ನನ್ನ ಮೇಲಿನ ಲೈಂಗಿಕ ಆರೋಪದ ಕುರಿತು ಮೊದಲ ಬಾರಿ ಕೇಳಿದ ಸಂದರ್ಭದಲ್ಲಿ ನನಗೆ ಅಚ್ಚರಿ ಹಾಗೂ ದಿಗ್ಭ್ರಮೆ ಉಂಟಾಯಿತು. ಕರ್ನಾಟಕದ ಜನತೆ ನನ್ನನ್ನು ಇಷ್ಟು ಪ್ರೀತಿಸುತ್ತಾರೆ ಅವರೆಲ್ಲಾ ನನ್ನನ್ನು ಅನುಮಾನಿಸುವ ಹಾಗೇ ಆಗಿದೆ. ಇದು ಮನಸ್ಸಿಗೆ ತುಂಬಾ ನೋವಾಗಿದೆ ಎಂದು ಹೇಳಿದರು.

    ನಾನು ಇಲ್ಲಿಯವರೆಗೆ ಒಮ್ಮೆ ಮಾತ್ರ ಅಲ್ಲಿ ಭೇಟಿ ನೀಡಿದ್ದೆ, ಆದರೆ ನಾನು ಆ ಯುವತಿಯನ್ನು ನೋಡಿಯೇ ಇಲ್ಲ. ಆದರೆ ಮಸಾಜ್ ಸೆಂಟರ್ ಮಾಲೀಕ ರಾಜೇಶ್ ನನ್ನ ನಡುವೆ ಪರಿಚಯವಿದೆ. ಆತನನ್ನು 6-7 ವರ್ಷಗಳಿಂದ ಮೈಸೂರಿನಲ್ಲಿ ನೋಡಿದ್ದೆ, ಅಲ್ಲದೇ ಆತನ ಅಂಗಡಿ ಉದ್ಘಾಟನೆ ಮಾಡಲು ತೆರಳಿದ್ದೆ. ಆದರೆ ಆತ ಇಂತಹ ಕೆಲಸ ಮಾಡುತ್ತಾನೆ ಎಂಬುದನ್ನು ಅಚ್ಚರಿ ಮೂಡಿಸಿದೆ ಎಂದರು.

    ನಾನು ಮೈಸೂರಿನಲ್ಲಿ ಹಲವು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೆ. ಹಾಗೇ ಆತನ ಅಂಗಡಿ ಉದ್ಘಾಟನೆ ತೆರಳಿದ್ದೆ. ಮಂಡ್ಯ ರಮೇಶ್ ಬರುತ್ತಾರೆ ಎಂಬ ವಿಷಯವನ್ನು ಈ ರೀತಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ನನ್ನ ಗುರುಗಳು ಕಾರಂತರು ಇಂತಹ ಆರೋಪಗಳನ್ನು ಎದುರಿಸುವ ಶಕ್ತಿ ನೀಡಿದ್ದಾರೆ. ಆದರೆ ನನ್ನ ಕುಟುಂಬ ಮೇಲಿನ ಬೀರುವ ಪ್ರಭಾವ, ನೋವು ಎಲ್ಲವೂ ತನಗೆ ಹೆಚ್ಚು ನೋವು ಮಾಡಿದೆ ಎಂದರು.

    ಇದೇ ಪ್ರಕರಣದಲ್ಲಿ ಆರೋಪ ಮಾಡಲಾಗಿರುವ ನಟ ಸಾಧು ಕೋಕಿಲ ಅವರನ್ನು ಭೇಟಿ ಮಾಡಿ ಒಂದು ವರ್ಷವಾಗಿದೆ. ಪ್ರೇಮಬರಹ ಸಿನಿಮಾ ವೇಳೆ ಭೇಟಿ ಮಾಡಿದ್ದು, ನಂತರದಲ್ಲಿ ಅವರ ನನ್ನ ಭೇಟಿ ನಡೆದಿಲ್ಲ. ಈ ಮಧ್ಯೆ ಅವರನ್ನು ಒಂದು ಕಾರ್ಯಕ್ರಮದಲ್ಲಿ ಮಾತ್ರ ಭೇಟಿ ಮಾಡಿದ್ದೆ ಅಷ್ಟೇ. ಆದರೆ ಅವರು ನಾನು ಸೇರಿ ಮಸಾಜ್ ಸೆಂಟರ್ ಗೆ ತೆರಳಿದ ಆರೋಪ ಸುಳ್ಳು. ಸಾಧುಕೋಕಿಲ ಅವರು ಸಿನಿಮಾ ಮೂಲಕ ಪರಿಚಯವಾದ ಕಲಾವಿದ, ಆದರೆ ಅವರ ನನ್ನ ನಡುವೆ ಅಷ್ಟು ಅಪ್ತತೆ ಇಲ್ಲ. ಆದರೆ ಅವರನ್ನು ನಾನು ತುಂಬಾ ಗೌರವಿಸುತ್ತೇನೆ ಎಂದರು. ಇದನ್ನೂ ಓದಿ: ಸ್ಟಾರ್ ಮಸಾಜ್ : ಮಂಡ್ಯ ರಮೇಶ್, ಸಾಧು ವಿರುದ್ಧ ಯುವತಿಯಿಂದ ದೂರು

    ಯಾಕೆ ನನ್ನ ಮೇಲೆ ಈ ರೀತಿಯ ಆರೋಪ ಬಂದಿದೆ ಗೊತ್ತಿಲ್ಲ. ನಾನು ಕೋಟಿ ಕೋಟಿ ಗಳಿಸುವ ನಟನಲ್ಲ. ನಾನೊಬ್ಬ ನಾಟಕ ಕಲಾವಿದ. ಈಗಲೂ ನಾನು ಬಾಡಿಗೆ ಮನೆಯಲ್ಲಿ ವಾಸವಾಗಿದ್ದೇನೆ. ಯಾಕೆ ನನ್ನ ವಿರುದ್ಧ ಈ ಆರೋಪ ಬಂದಿದೆ ಎನ್ನುವುದು ತಿಳಿದು ಬಂದಿಲ್ಲ.

    ರಂಗದಲ್ಲಿ ನಾನು ಬಣ್ಣ ಹಚ್ಚಿ ನಟನೆ ಮಾಡುವ ಶಕ್ತಿ ಇದೆ ಆದರೆ ನಿಜ ಜೀವನದಲ್ಲಿ ಈ ರೀತಿ ನಾಟಕ ನಡೆಸಲು ಬರುವುದಿಲ್ಲ. ಕತೆ, ಸಂಗೀತ, ಕಲೆ, ಸಾಹಿತ್ಯ, ರಂಗಭೂಮಿಯಲ್ಲಿ ಕೆಲಸ ಮಾಡಿದ್ದೇನೆ. ಇಂತಹ ವ್ಯಕ್ತಿತ್ವ ಹೊಂದಿದ್ದರೆ ನಾನು ರಂಗಭೂಮಿಯಲ್ಲಿ ನಟಿಸಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಈ ಸಮಯದಲ್ಲೂ ಕನ್ನಡದ ಅಭಿಮಾನಿಗಳು ನನಗೆ ಬೆಂಬಲ ಸೂಚಿಸಿದ್ದಾರೆ. ಅದು ನನಗೆ ಹೆಚ್ಚಿನ ಬಲ ನೀಡಿದೆ. ಆದರೆ ಈ ಪ್ರಕರಣದಲ್ಲಿರುವ ಸತ್ಯಾಂಶಗಳ ಕುರಿತು ತನಿಖೆ ನಡೆಸಲು ಸಹಕಾರ ನೀಡುತ್ತೇನೆ. ಆದರೆ ನಾನು ಅಭಿಮಾನಿಗಳಿಗೆ ಉತ್ತರ ನೀಡಬೇಕು ನೀಡಿದ್ದೇನೆ. ನಾನು ರಂಗಭೂಮಿಯಲ್ಲಿ ಇನ್ನೂ 30 ವರ್ಷಗಳ ಸೇವೆ ನೀಡಬೇಕಿದೆ ಎಂದು ಹೇಳಿದರು.

    https://www.youtube.com/watch?v=V5-24VOVog4

    https://www.youtube.com/watch?v=xm-cMvGLmvQ

  • ಗೃಹಿಣಿ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್- ಅಕ್ರಮ ಸಂಬಂಧ ಹೊಂದಿದ್ದ ಪ್ರಿಯಕರನಿಂದಲೇ ಕೊಲೆ?

    ಗೃಹಿಣಿ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್- ಅಕ್ರಮ ಸಂಬಂಧ ಹೊಂದಿದ್ದ ಪ್ರಿಯಕರನಿಂದಲೇ ಕೊಲೆ?

    ಬಳ್ಳಾರಿ: ಕಳೆದ ಒಂದು ವಾರದ ಹಿಂದೆ ಬಳ್ಳಾರಿಯ ಹುಸೇನ್ ನಗರದ ಗೃಹಿಣಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯೊಂದಿಗೆ ಆಕ್ರಮ ಸಂಬಂಧ ಹೊಂದಿದ್ದ ಪ್ರಿಯಕರನೇ ಆಕೆಯನ್ನು ಕೊಲೆ ಮಾಡಿದ್ದಾನೆ ಎನ್ನುವ ಆರೋಪ ಕೇಳಿಬಂದಿದೆ.

    ಬಳ್ಳಾರಿ ಹುಸೇನ್ ನಗರದ ನಿವಾಸಿಯಾದ ಲೀಲಾವತಿ ಕಳೆದ ಒಂದು ವಾರದ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದರು. ಈ ಕುರಿತು ಲೀಲಾವತಿ ಅವರ ಸಹೋದರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ತನ್ನ ಸಹೋದರಿಯನ್ನು ರಾಮು ಎಂಬ ವ್ಯಕ್ತಿಯೇ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ.

    ರಾಮು ಕಳೆದ ಮೂರು ವರ್ಷಗಳ ಹಿಂದೆ ಲೀಲಾವತಿ ಪತಿ ಬಸವರಾಜರನ್ನು ಕೊಲೆ ಮಾಡಿದ ಬಗ್ಗೆ 6 ತಿಂಗಳ ಶಿಕ್ಷೆ ಅನುಭವಿಸಿದ್ದ. ಲೀಲಾವತಿಗಾಗಿ ಆಕೆಯ ಗಂಡನನ್ನು ಕೊಲೆ ಮಾಡಿದ್ದ ರಾಮು, ಇದೀಗ ಇನ್ನೊಂದು ಮದುವೆಯಾಗಲು ಈಗ ಆಕೆಯನ್ನೇ ಕೊಲೆ ಮಾಡಿದ್ದಾನೆಂದು ಸಂಬಂಧಿಕರು ಆರೋಪಿಸಿದ್ದಾರೆ.

    ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಲೀಲಾವತಿ ಸಹೋದರಿ ವಸಂತಿ, ತಮ್ಮ ಸಹೋದರಿಯನ್ನು ಕೊಲೆ ಮಾಡಲಾಗಿದೆ ಎಂದು ರಾಮು ಎಂಬುವರ ವಿರುದ್ಧ ದೂರು ನೀಡಿದರೆ ಪೊಲೀಸರು ಸ್ವೀಕರಿಸುತ್ತಿಲ್ಲ. ಕೇವಲ ನಾಪತ್ತೆ ಪ್ರಕರಣವನ್ನು ಮಾತ್ರ ದಾಖಲಿಸಿಕೊಂಡು ಪ್ರಕರಣವನ್ನು ಮುಚ್ಚಿ ಹಾಕುವ ಯತ್ನ ಮಾಡಲಾಗುತ್ತಿದೆ. ಹೀಗಾಗಿ ತಮಗೇ ನ್ಯಾಯ ಕೊಡಿಸಿ ಎಂದು ಒತ್ತಾಯಿಸಿದ್ದಾರೆ.

    ಈ ಸಂಬಂಧ ಲೀಲಾವತಿ ಸಂಬಂಧಿಕರು ಇಂದು ಮಹಿಳಾ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

     

  • ಹುಸ್ಕೂರು ಪಂಚಾಯ್ತಿ ವ್ಯಾಪ್ತಿಯ ಕಾಮಗಾರಿಯಲ್ಲಿ ಅವ್ಯವಹಾರ ಆರೋಪ ಸುಳ್ಳು- ಅಧ್ಯಕ್ಷರ ಸ್ಪಷ್ಟನೆ

    ಹುಸ್ಕೂರು ಪಂಚಾಯ್ತಿ ವ್ಯಾಪ್ತಿಯ ಕಾಮಗಾರಿಯಲ್ಲಿ ಅವ್ಯವಹಾರ ಆರೋಪ ಸುಳ್ಳು- ಅಧ್ಯಕ್ಷರ ಸ್ಪಷ್ಟನೆ

    ಬೆಂಗಳೂರು: ನಗರದ ಹೊರವಲಯ ನೆಲಮಂಗಲ ಸಮೀಪದ ಹುಸ್ಕೂರು ಪಂಚಾಯ್ತಿ ವ್ಯಾಪ್ತಿಯ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಕೆಲ ಸದಸ್ಯರು ಆರೋಪ ಮಾಡಿದ್ದಕ್ಕೆ ಸಂಬಂಧಿಸಿದಂತೆ ಅಧ್ಯಕ್ಷ ಸೋಮಶೇಖರ್ ಸ್ಪಷ್ಟನೆ ನೀಡಿದ್ದಾರೆ.

    ಈ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿರುವ ಪಂಚಾಯ್ತಿ ಅಧ್ಯಕ್ಷ ಸೋಮಶೇಖರ್, ಪಂಚಾಯ್ತಿ ಕಾಮಗಾರಿಯ ಬಿಲ್ ನಲ್ಲಿ ಅವ್ಯವಹಾರ ಆರೋಪ ನಿರಾಧಾರ. ನಾನು ಯಾವುದೇ ಅವ್ಯವಹಾರ ಮಾಡಿಲ್ಲ. ರಾಜಕೀಯ ಪ್ರೇರಿತ ಹುನ್ನಾರದಿಂದ ನನ್ನ ಮೇಲೆ ಆರೋಪ ಮಾಡಲಾಗಿದೆ. ಆರೋಪ ಸಾಬೀತಾದರೆ ಪಂಚಾಯ್ತಿಯಿಂದ ಹೊರನಡೆಯುವೆ ಎಂದಿದ್ದಾರೆ.

    ನನ್ನ ಅಭಿವೃದ್ಧಿ ಕೆಲಸಗಳನ್ನ ಸಹಿಸಲಾಗದೆ ರಾಜಕೀಯ ಪ್ರೇರಿತವಾಗಿ ಇಲ್ಲಸಲ್ಲದ ಆರೋಪಗಳನ್ನ ಮಾಡಿ ಹುನ್ನಾರ ನಡೆಸುತ್ತಿದ್ದಾರೆ. ಸದಸ್ಯ ಲೋಕೇಶ್ ಮಾಡಿರುವ ಆರೋಪಗಳು ಸುಳ್ಳು ಎಂದು ತಿಳಿಸಿದ್ದಾರೆ.

    ಅಲ್ಲದೆ ಪಂಚಾಯಿತಿ ಅಧ್ಯಕ್ಷನಾದ ದಿನದಿಂದ ಜನರಿಗೆ ಅಗತ್ಯವಿರುವ ಸಮಾಜಮುಖಿ ಕಾರ್ಯಗಳು, ಮೂಲಭೂತ ಸೌಕರ್ಯಗಳನ್ನ ಒದಗಿಸುವ ನಿಟ್ಟಿನಲ್ಲಿ ಕೆಲಸ ಮಡುತಿದ್ದು, ಪಂಚಾಯ್ತಿಯ ಎಲ್ಲ ಸದಸ್ಯರು ಸಾಮರಸ್ಯದಿಂದ ಕೆಲಸ ಮಾಡುತ್ತಿರುವುದಾಗಿ ಹೇಳಿದ್ದಾರೆ.

    ಹೀಗಾಗಿ ಕೇವಲ ರಾಜಕೀಯ ದುರುದ್ದೇಶದಿಂದ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿ ನನ್ನ ಮನಸ್ಸಿಗೆ ನೋವುಂಟು ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

  • ಮಹಿಳಾ ಭಕ್ತರಿಗೆ ಅಂಜನಾದ್ರಿ ಪರ್ವತದ ಪ್ರಧಾನ ಅರ್ಚಕರಿಂದ ಲೈಂಗಿಕ ಕಿರುಕುಳ?

    ಮಹಿಳಾ ಭಕ್ತರಿಗೆ ಅಂಜನಾದ್ರಿ ಪರ್ವತದ ಪ್ರಧಾನ ಅರ್ಚಕರಿಂದ ಲೈಂಗಿಕ ಕಿರುಕುಳ?

    ಕೊಪ್ಪಳ: ವಿಶ್ವ ಪ್ರಸಿದ್ಧ ಅಂಜನಾದ್ರಿ ಪರ್ವತದ ಪ್ರಧಾನ ಅರ್ಚಕ ವಿದ್ಯಾದಾಸ ಬಾಬಾ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ.

    ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಬಾಬಾರನ್ನು ಈಗ ಅರ್ಚಕ ಸ್ಥಾನದಿಂದ ಕೆಳಗಿಳಿಸಲು ಟ್ರಸ್ಟ್ ನಿರ್ಣಯ ಕೈಗೊಂಡಿದೆ.

    ಕೊಪ್ಪಳದ ಗಂಗಾವತಿ ಅಂಜನಾದ್ರಿ ಪರ್ವತಕ್ಕೆ ಇತ್ತೀಚೆಗೆ ದೇಶ ವಿದೇಶದಿಂದ ಅಸಂಖ್ಯಾತ ಭಕ್ತರು ಆಗಮಿಸುತ್ತಿದ್ದು, ದೇವಾಲಯಕ್ಕೆ ಆಗಮಿಸುವ ಮಹಿಳಾ ಭಕ್ತರ ಜೊತೆ ವಿದ್ಯಾದಾಸ ಬಾಬಾ ಅಸಭ್ಯವಾಗಿ ವರ್ತಿಸ್ತಿದ್ದಾರೆ. ಜೊತೆಗೆ ಅನೈತಿಕ ಚಟುವಟಿಕೆ ಗಳಿಗೆ ಅರ್ಚಕರು ಪ್ರೋತ್ಸಾಹ ನೀಡುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಅಲ್ಲದೇ ದೇವಾಲಯದ ಸುತ್ತಮುತ್ತಲಿನ ಭಕ್ತರೊಂದಿಗೂ ಅಸಭ್ಯ ವರ್ತಿಸುತ್ತಿದ್ದು, ವಿನಾಕಾರಣ ಜಗಳವಾಡುತ್ತಾರೆ ಎಂದು ಆರೋಪಿಸಲಾಗಿದೆ.

    ಭಕ್ತರಿಂದ ದೇವಾಲಯಕ್ಕೆ ಇಲ್ಲಿಯವರೆಗೆ ಲಕ್ಷಾಂತರ ರೂ. ಹಣ ದೇಣಿಗೆಯಾಗಿ ಬಂದಿದೆ. ಆದರೆ ವಿದ್ಯಾದಾಸ ಬಾಬಾ ಲೆಕ್ಕ ನೀಡುತ್ತಿಲ್ಲ. ಇದರಿಂದ ಅಂಜನಾದ್ರಿ ಪರ್ವತ ಚಾರಿಟೇಬಲ್ ರಿಲಿಜಿಯಿಸ್ ಟ್ರಸ್ಟ್ ಸದಸ್ಯರು ಸಭೆ ಸೇರಿ ಅರ್ಚಕರ ನಡೆಯನ್ನು ಖಂಡಿಸಿದ್ದಾರೆ. ಇದೀಗ ವಿದ್ಯಾದಾಸ ಬಾಬಾರನ್ನು ಅರ್ಚಕ ಹುದ್ದೆಯಿಂದ ಕೆಳಗಿಳಿಸಿ ಬ್ರಾಹ್ಮಣ ಪಂಡಿತರೊಬ್ಬರನ್ನು ಅರ್ಚಕರನ್ನಾಗಿ ನೇಮಿಸುವ ಬಗ್ಗೆ ಸಭೆಯಲ್ಲಿ ನಿರ್ಣಯ ಕೈಗೊಂಡಿದ್ದಾರೆ.

    ವಿದ್ಯಾದಾಸ ಬಾಬಾ 2009 ರಲ್ಲಿ ಪ್ರಧಾನ ಅರ್ಚಕರಾಗಿ ನೇಮಕಗೊಂಡಿದ್ದರು. ಈಗಾಗಲೇ ದೇವಾಲಯದ ಪೂಜಾ ವಿಷಯವಾಗಿ ತುಳಸಿದಾಸಬಾಬಾ, ವಿದ್ಯಾದಾಸಬಾಬಾ ನಡುವೆ ಕಲಹ ಏರ್ಪಟಿದ್ದು, ಈ ಕುರಿತು ಕೋರ್ಟ್‍ನಲ್ಲಿ ಪ್ರಕರಣ ವಿಚಾರಣೆ ಹಂತದಲ್ಲಿದೆ. ಪ್ರಸ್ತುತ ವಿದ್ಯಾದಾಸಬಾಬಾರನ್ನು ಪ್ರಧಾನ ಅರ್ಚಕ ಹುದ್ದೆಯಿಂದ ಕೆಳಗಿಳಿಸಿದ್ದರಿಂದ ಪೂಜಾ ವಿವಾದ ಪ್ರಕರಣ ತಾರ್ಕಿಕ ಅಂತ್ಯ ಕಂಡಂತಾಗಿದೆ.

     

    https://www.youtube.com/watch?v=6ddrM4Fje_M

     

  • ಭಾರತವನ್ನು ಟೀಕಿಸಲು ಹೋಗಿ  ತನ್ನ ಮಾನವನ್ನು ತಾನೇ ಹರಾಜು ಹಾಕಿತು ಪಾಕಿಸ್ತಾನ!

    ಭಾರತವನ್ನು ಟೀಕಿಸಲು ಹೋಗಿ ತನ್ನ ಮಾನವನ್ನು ತಾನೇ ಹರಾಜು ಹಾಕಿತು ಪಾಕಿಸ್ತಾನ!

    ನ್ಯೂಯಾರ್ಕ್: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತದ ವಿರುದ್ಧ ಆರೋಪಗಳನ್ನು ಮಾಡಲು ಹೋಗಿ ತನ್ನ ಮಾನವನ್ನೇ ಹರಾಜು ಹಾಕಿ ನಗೆಪಾಟಲಿಗೆ ಪಾಕಿಸ್ತಾನ ಗುರಿಯಾಗಿದೆ.

    ವಿಶ್ವ ಸಂಸ್ಥೆಯ 72ನೇ ಮಹಾ ಅಧಿವೇಶನದಲ್ಲಿ ಭಾರತದ ವಿದೇಶಾಂಗ ಇಲಾಖೆ ಸಚಿವೆ ಸುಷ್ಮಾ ಸ್ವರಾಜ್ ಪಾಕಿಸ್ತಾನದ ನೈಜ ಬಣ್ಣವನ್ನು ತೆರೆದಿಟ್ಟಿದ್ದರು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಭಾರತ ಭಯೋತ್ಪಾದನೆಯ ತವರು ನೆಲ ಎಂಬ ಆರೋಪವನ್ನು ಮಾಡಿತ್ತು. ಆದರೆ ಈ ಆರೋಪವನ್ನು ಮಾಡಿದ ಕೆಲವೇ ಗಂಟೆಗಳಲ್ಲಿ ಪಾಕಿಸ್ತಾನ ಮಾನ ವಿಶ್ವಸಂಸ್ಥೆಯಲ್ಲಿ ತನ್ನ ಅಧಿಕಾರಿಯ ಮೂಲಕ ಹರಾಜು ಆಗಿದೆ.

    ಪಾಕಿಸ್ತಾನ ಪ್ರತಿನಿಧಿ ಮಲೇಹಾ ಲೋಧಿ ಭಾರತದಲ್ಲಿ ಹೇಗೆ ಹಿಂಸಾಚಾರ ನಡೆಯುತ್ತಿದೆ ಎನ್ನುವುದನ್ನು ವಿಶ್ವಕ್ಕೆ ತೋರಿಸಲು ಪೆಲೆಟ್ ಗನ್‍ನಿಂದ ಗಾಯಗೊಂಡಿದ್ದ ಯುವತಿ ಫೋಟೋವನ್ನು ಪ್ರದರ್ಶಿಸಿದ್ದರು. ಆದರೆ ಈ ಫೋಟೋ ಗಾಜಾ ಯುದ್ಧ ಸಂದರ್ಭದಲ್ಲಿನ ಫೋಟೋ ಎಂದು ಮಾಧ್ಯಮಗಳು ಪ್ರಕಟಿಸುವ ಮೂಲಕ ಪಾಕ್ ನೈಜ ಬಣ್ಣವನ್ನು ಬಯಲು ಮಾಡಿವೆ.

    ಗಾಜಾ ಯುದ್ಧದ ಸಂದರ್ಭದಲ್ಲಿ ದಾವಿ ಅಬು ಜೊಮ್(17) ಯುವತಿ ಗಾಯಗೊಂಡಿದ್ದಳು. ಈ ಫೋಟೋವನ್ನು ಪಾಕ್ ಅಧಿಕಾರಿ ಪ್ರದರ್ಶಿಸಿದ ಬಳಿಕ ವಿಶ್ವದಾದ್ಯಂತ ಪಾಕ್ ವಿರುದ್ಧ ಟೀಕೆಗಳು ವ್ಯಕ್ತವಾಗುತ್ತಿದೆ.

     

    ಮಲೇಹಾ ಲೋಧಿ ಹೇಳಿದ್ದು ಏನು?
    ಸುಷ್ಮಾ ಸ್ವರಾಜ್ ಅವರಿಗೆ ತಿರುಗೇಟು ನೀಡಿದ ಲೋಧಿ ಏಷ್ಯಾ ಖಂಡದಲ್ಲಿ ಭಾರತ ಭಯೋತ್ಪದನೆಯ ತವರು ನೆಲ ಎಂಬ ಆರೋಪವನ್ನು ಮಾಡಿದರು. ಭಾರತದ ವಿವಿಧ ಭಾಗಗಳಲ್ಲಿ ಭಯೋತ್ಪಾದನ ನೆಲೆಗಳಿವೆ ಎಂದಿದ್ದಾರೆ.

    ಸುಷ್ಮ ಸ್ವರಾಜ್ ಅವರು ಶನಿವಾರ ಪಾಕಿಸ್ತಾನದಲ್ಲಿ ನೆಲೆಯುರಿರುವ ಭಯೋತ್ಪಾದನ ಸಂಸ್ಥೆಗಳಾದ ಲಷ್ಕರ್ ಎ ತೋಯ್ಬಾ, ಜೈಷ್ ಎ ಮೊಹಮ್ಮದ್, ಹಿಜ್ಜುಲ್ ಮುಜಾಹಿದೀನ್, ಹಕ್ಕಾನಿಯಂತಹ ಹಲವು ಸಂಘಟನೆಗಳ ಕುರಿತು ವಿಸ್ತಾರವಾದ ಮಾಹಿತಿಯನ್ನು ನೀಡಿದ್ದರು.

    https://www.youtube.com/watch?v=lviT78WtYig

    ಈ ಕುರಿತು ಪ್ರತಿಕ್ರಿಯಿಸಿರುವ ಲೋಧಿ, ಅಂತರಾಷ್ಟ್ರೀಯ ಸಂಸ್ಥೆಗಳು ಭಾರತ ಹಾಗೂ ಪಾಕಿಸ್ತಾನದ ನಡುವೆ ಶಾಂತಿ ಹಾಗೂ ಸೌರ್ಹದತೆಯನ್ನು ಬಯಸಿದರೆ, ಭಾರತವು ಗಡಿಯಲ್ಲಿ ಉಂಟುಮಾಡುತ್ತಿರುವ ಪ್ರಚೋದನೆ ಹಾಗೂ ಅಕ್ರಮಾಣಕಾರಿ ಪ್ರವೃತ್ತಿಯನ್ನು ಸಂಪೂರ್ಣವಾಗಿ ಕೊನೆಗೊಳಿಸಬೇಕು. ಅಲ್ಲದೇ ಭಾರತದ ನೆಲದಲ್ಲಿ ಭಯೋತ್ಪಾದನೆಗೆ ನೀಡುತ್ತಿರುವ ಬೆಂಬಲವನ್ನು ನಿಲ್ಲಿಸಬೇಕು ಎಂದು ಹೇಳಿದರು.

    ಈ ಸಂದರ್ಭದಲ್ಲಿ ಭಾರತದ ರಕ್ಷಣಾ ಸಲಹೆಗಾರ ಅಜಿತ್ ದೋವಲ್ ಪಾಕ್ ಆಕ್ರಮಿತ ಕಾಶ್ಮೀರದ ಬಾಲುಚಿಸ್ತಾನ ವಿಷಯದಲ್ಲಿ ಮಧ್ಯ ಪ್ರವೇಶಿಸುವ ಕುರಿತು ಸಹ ಪಾಕಿಸ್ತಾನದಿಂದ ಆಕ್ಷೇಪ ವ್ಯಕ್ತಪಡಿಸಿತು.

    ಯಾವುದೇ ಸಮಸ್ಯೆಯನ್ನು ಎರಡು ದೇಶಗಳು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳದಿದ್ದರೆ ಇದರ ವಿಚಾರಣೆಯನ್ನು ನಡೆಸುವ ಅಧಿಕಾರ ವಿಶ್ವಸಂಸ್ಥೆ ಮತ್ತು ಅಂತರಾಷ್ಟ್ರೀಯ ಸಂಸ್ಥೆಗಳಿಗಿದೆ. ಆದರೆ ಇಂತಹ ನಿಯಮಗಳು ಸಮಯಕ್ಕೆ ಸರಿಯಾಗಿ ಕೈಗೊಳ್ಳಲಾಗುತ್ತಿಲ್ಲ. ನ್ಯಾಯಲಯಕ್ಕೆ ಯಾವುದೇ ಅಂತಿಮ ದಿನವಿರುದಿಲ್ಲ. ಹಾಗೆಯೇ ಮಾನವಿಯತೆಯನ್ನು ಸಮಯದ ಅಧಾರವಾಗಿ ಮಾರಾಟ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು. ಭಾರತವು ವಿಶ್ವ ಸಂಸ್ಥೆಯ ನಿರ್ಧಾರಗಳಿಗೆ ವಿರುದ್ಧವಾಗಿದೆ ಎಂದು ಆರೋಪಿಸಿದರು.

    ಇದೇ ಸಂದರ್ಭದಲ್ಲಿ ಭಾರತದ ಆರೋಪಗಳನ್ನು ತಳ್ಳಿ ಹಾಕಿದ ಅವರು ವಿಶ್ವ ಸಂಸ್ಥೆಯೇ ಭಯೋತ್ಪಾದನೆಯ ವ್ಯಾಖ್ಯಾನವನ್ನು ನೀಡಬೇಕು ಎಂದು ಕೋರಿದರು. ಭಾರತವು ತನ್ನ ನೆರೆಯ ದೇಶಗಳ ಮೇಲೆ ದಾಳಿಯನ್ನು ಮಾಡಲು ಭಯೋತ್ಪಾದನೆಯನ್ನು ಮಾಡಲು ಪೋಷಣೆ ಮಾಡುತ್ತಿದೆ. ಪಾಕಿಸ್ತಾನದ ವಿವಿಧೆಡೆ ವಿದ್ವಾಂಸಕ ಕೃತ್ಯಗಳನ್ನು ನಡೆಸಲು ಯೋಜನೆ ರೂಪಿಸಿದೆ. ಈ ಎಲ್ಲಾ ಅಂಶಗಳನ್ನು ಗಮನಿಸಿದರೆ ಭಾರತವು ಭಯೋತ್ಪಾದನೆಯ ತವರು ನೆಲ ಎಂಬ ಸ್ಪಷ್ಟವಾಗುತ್ತದೆ. ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ಎಂಬುವುದು ವಿಶ್ವ ದೊಡ್ಡ ಬುಟಾಟಿಕೆಯಾಗಿದೆ. ಫ್ಯಾಸಿಸ್ಟ್ ಸಿದ್ಧಾಂತವನ್ನು ಅನುಸರಿಸುವ ಮೂಲಕ ಭಾರತ ತನ್ನ ಅಡಳಿತವನ್ನು ನಡೆಸುತ್ತಿದೆ ಎಂದರು.

    ಪಾಕಿಸ್ತಾನದ ಸ್ಥಾಪಕ ಜಿನ್ನಾ ಅವರ ಕುರಿತ ಹೇಳಿಕೆಗಳನ್ನು ನಿರಾಕರಿಸಿದ ಲೋಧಿ, ಪಾಕಿಸ್ತಾನ ಜಮ್ಮು ಕಾಶ್ಮೀರ ವಿಚಾರವಾಗಿ ಶಾಂತಿ ಹಾಗೂ ಸುವ್ಯವಸ್ಥೆಯನ್ನು ಕಾಪಾಡಲು ಮಾತುಕತೆಗೆ ಸಿದ್ಧ ಎಂದು ತಿಳಿಸಿದರು.