Tag: ಆರೋಪ

  • ಕನ್ನಡ, ಕನ್ನಡಿಗರನ್ನೇ ಮರೆತು ಬಿಟ್ಟರಾ ‘ಕೆಜಿಎಫ್ 2’ ನಿರ್ದೇಶಕ ಪ್ರಶಾಂತ್ ನೀಲ್ : ಏನಿದು ಹೊಸ ಆರೋಪ?

    ಕನ್ನಡ, ಕನ್ನಡಿಗರನ್ನೇ ಮರೆತು ಬಿಟ್ಟರಾ ‘ಕೆಜಿಎಫ್ 2’ ನಿರ್ದೇಶಕ ಪ್ರಶಾಂತ್ ನೀಲ್ : ಏನಿದು ಹೊಸ ಆರೋಪ?

    ಕೆಜಿಎಫ್ ನಂತರ ಪ್ರಶಾಂತ್ ನೀಲ್ ತೆಲುಗಿಗೆ ಹಾರಿದಾಗಲೇ ಒಂದಷ್ಟು ವಿರೋಧಗಳನ್ನು ಅವರು ಎದುರಿಸಬೇಕಾಯಿತು. ಕನ್ನಡದಲ್ಲೇ ಮೊಲದ ಸಿನಿಮಾ ಮಾಡಿ, ಕನ್ನಡದಲ್ಲೇ ಸಕ್ಸಸ್ ಕಂಡು, ದಿಢೀರ್ ಅಂತ ಬೇರೆ ಭಾಷೆಗೆ ಹೋಗುವುದು ಎಷ್ಟು ಸರಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಹಲವರು ಚರ್ಚೆ ಮಾಡಿದರು. ಭಾರತೀಯ ಸಿನಿಮಾ ರಂಗ ಒಂದೇ ಆಗಿರುವಾಗ, ಕನ್ನಡದ ಪ್ರತಿಭೆಯೊಬ್ಬರು ಬೇರೆ ಭಾಷೆಯಲ್ಲಿ ಸಿನಿಮಾ ಮಾಡುವುದು ತಪ್ಪೇನು ಅಂತ ಕೆಲವರು ಪ್ರಶ್ನೆ ಮಾಡಿದರು. ಕೆಲವರು ಇನ್ನಷ್ಟು ಸಿನಿಮಾಗಳನ್ನು ನೀಲ್ ಇಲ್ಲಿಯೇ ಮಾಡಬಹುದಿತ್ತು ಎಂದು ಕಾಮೆಂಟ್ ಮಾಡಿದರು.

    ಕೆಜಿಎಫ್ 2 ಮತ್ತೆ ಹಿಟ್ ಆಗುತ್ತಿದ್ದಂತೆಯೇ ಪ್ರಶಾಂತ್ ನೀಲ್ ಮೇಲಿನ ಮುನಿಸನ್ನು ಮರೆತು, ಮತ್ತೆ ಅವರನ್ನು ಗೌರವಿಸಿದರು. ಇದೀಗ ಅದೇ ಪ್ರಶಾಂತ್ ನೀಲ್ ಮೇಲೆ ಮತ್ತೆ ಕೆಲ ಕನ್ನಡಿಗರು ಮುನಿಸಿಕೊಂಡಿದ್ದಾರೆ. ಕಾರಣ ತಮಿಳು ಸಿನಿಮಾ. ಕಮಲ್ ಹಾಸನ್ ನಟನೆಯ ವಿಕ್ರಮ್ ಸಿನಿಮಾ ಕನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ರಿಲೀಸ್ ಆಗಿದೆ. ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗಿದೆ. ಇದೇ ಸಮಯದಲ್ಲೇ ಚಾರ್ಲಿ 777 ಸಿನಿಮಾ ಕೂಡ ರಿಲೀಸ್ ಆಗಿ, ಅದಕ್ಕೂ ಕೂಡ ಉತ್ತಮ ಪ್ರತಿಕ್ರಿಯೆ ಫಲಿತಾಂಶ ಸಿಕ್ಕಿದೆ. ಪ್ರಶಾಂತ್ ನೀಲ್ ತಮಿಳಿನ ವಿಕ್ರಮ್ ಸಿನಿಮಾ ಹೊಗಳಿ, ಕನ್ನಡದ ಯಾವ ಚಿತ್ರಗಳ ಬಗ್ಗೆಯೂ ಅವರು ಮಾತನಾಡುವುದಿಲ್ಲ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ:Breaking-ಬಿಗ್ ಬಾಸ್ ಸೀಸನ್ 8 ಶೂಟಿಂಗ್ ಶುರು: ಪ್ರೊಮೋ ಚಿತ್ರೀಕರಣದಲ್ಲಿ ಸುದೀಪ್ ಭಾಗಿ

    ಕನ್ನಡದ ಹಲವು ಸಿನಿಮಾಗಳು ಕೂಡ ಯಶಸ್ವಿ ಪ್ರದರ್ಶನ ಕಾಣುತ್ತಿವೆ. ಬಾಕ್ಸ್ ಆಫೀಸಿನಲ್ಲೂ ಗೆಲ್ಲುತ್ತಿವೆ. ಉತ್ತಮ ಕಂಟೆಂಟ್ ಹೊಂದಿರುವ ಚಿತ್ರ ಎಂಬ ಪ್ರಶಂಸೆಗೂ ಕಾರಣವಾಗುತ್ತಿವೆ. ಬೇರೆ ಬೇರೆ ಸಿನಿಮಾ ರಂಗ ಸಿಲೆಬ್ರಿಟಿಗಳು ಕನ್ನಡ ಸಿನಿಮಾಗಳನ್ನು ಹಾಡಿ ಹೊಗಳುತ್ತಿದ್ದಾರೆ. ಆದರೆ, ಪ್ರಶಾಂತ್ ನೀಲ್ ಆ ಸಿನಿಮಾಗಳ ಬಗ್ಗೆ ಒಂದೇ ಒಂದು ಮಾತುಗಳನ್ನೂ ಆಡದೇ, ತಮಿಳು ಸಿನಿಮಾ ಬಗ್ಗೆ  ಮೆಚ್ಚುಗೆಯ ಮಾತುಗಳನ್ನು ಆಡುತ್ತಾರೆ. ಕನ್ನಡ, ಕನ್ನಡಿಗರ ಮೇಲೆ ಯಾಕೆ ಇಷ್ಟೊಂದು ತಾತ್ಸಾರ ಎಂದು ಸೋಷಿಯಲ್ ಮೀಡಿಯಾದಲ್ಲಿ ಹಲವರು ಪ್ರಶ್ನೆ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕಂಗನಾ ರಣಾವತ್ ಗೆ ಚಿತ್ರ ಸಾಹಿತಿ ಜಾವೇದ್ ಅಖ್ತರ್ ರಿಂದ ಬೆದರಿಕೆ ಆರೋಪ

    ಕಂಗನಾ ರಣಾವತ್ ಗೆ ಚಿತ್ರ ಸಾಹಿತಿ ಜಾವೇದ್ ಅಖ್ತರ್ ರಿಂದ ಬೆದರಿಕೆ ಆರೋಪ

    ಬಾಲಿವುಡ್ ನ ಚಿತ್ರ ಸಾಹಿತಿ ಜಾವೇದ್ ಅಖ್ತರ್ ಮತ್ತು ಕಂಗನಾ ರಣಾವತ್ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ವಾಹಿನಿಯೊಂದರಲ್ಲಿ ತಮ್ಮ ಬಗ್ಗೆ ಅವಹೇಳನಕಾರಿಯಾಗಿ ಕಂಗನಾ ಮಾತನಾಡಿದ್ದಾರೆ ಎಂದು ಜಾವೇದ್ ಅಖ್ತರ್ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಪ್ರಕರಣ ಕೋರ್ಟ್ ಮೆಟ್ಟಿಲು ಏರಿತ್ತು. ಹಾಗಾಗಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಕಂಗನಾಗೆ ನೋಟಿಸ್ ಜಾರಿ ಆಗಿತ್ತು.

    ಜಾವೇದ್ ಅಖ್ತರ್ ಹೂಡಿರುವ ಮಾನನಷ್ಟ ದಾವೆಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾದ ಕಂಗನಾ ರಣಾವತ್, ತಮಗೆ ಜಾವೇದ್ ಅಖ್ತರ್ ಅವರಿಂದ ಜೀವ ಬೆದರಿಕೆಯಿದೆ ಎಂದು ಆರೋಪ ಮಾಡಿದ್ದಾರೆ. ಮೆಟ್ರೊಪಾಲಿಟಿನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರಾಗಿದ್ದ ಕಂಗನಾ ‘ಜಾವೇದ್ ಅವರಿಗೆ ನಾನು ಅಪಮಾನ ಮಾಡಿಲ್ಲ. ನನ್ನ ಸಹೋದರಿ ಕೂಡ ಅಂತಹ ಕೆಲಸಕ್ಕೆ ಕೈ ಹಾಕಿಲ್ಲ. ಆದರೂ, ನನ್ನ ವಿರುದ್ಧ ಅವರು ಬೆದರಿಕೆ ಹಾಕಿದ್ದಾರೆ’ ಎಂದು ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ:ತೆಲುಗಿನ ಮಹೇಶ್ ಬಾಬುಗೆ ತಂದೆಯಾಗಿ ನಟಿಸ್ತಾರಾ ರಿಯಲ್ ಸ್ಟಾರ್ ಉಪೇಂದ್ರ

    ನ್ಯಾಯಾಲಯಕ್ಕೆ ಹಾಜರಾದ ನಂತರ, ತಮ್ಮ ಹೇಳಿಕೆಯನ್ನು ದಾಖಲಿಸುವಾಗ ತಮ್ಮ ಸಹೋದರಿ ಮತ್ತು ತಮ್ಮ ವಕೀಲರು ಮಾತ್ರ ಇರಬೇಕು ಎಂದು ಮನವಿ ಮಾಡಿದರು ಕಂಗನಾ ರಣಾವತ್. ಅದಕ್ಕೆ ನ್ಯಾಯಾಲಯವು ಪುರಸ್ಕರಿಸಿತು. ನ್ಯಾಯಾಲಯದ ಮುಂದೆ ಗಂಭೀರ ಆರೋಪವನ್ನೂ ಮಾಡಿರುವ ಕಂಗನಾ ‘ಜಾವೇದ್ ಅವರ ಮಾತು ನನ್ನನ್ನು ಆತ್ಮಹತ್ಯೆಗೆ ಪ್ರಚೋದಿಸಿದೆ ಎಂದೂ ಹೇಳಿದ್ದಾರೆ. ಜಾವೇದ್ ಮತ್ತು ಕಂಗನಾ ನಡುವಿನ ವಾಗ್ವಾದವನ್ನೂ ಅವರು ಹೇಳಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪೊಲೀಸ್ ಕಸ್ಟಡಿಯಲ್ಲಿ ಮಹಿಳೆಗೆ ಚಿತ್ರಹಿಂಸೆ – 4 ಪೊಲೀಸ್ ಅಧಿಕಾರಿಗಳು ಅಮಾನತು

    ಪೊಲೀಸ್ ಕಸ್ಟಡಿಯಲ್ಲಿ ಮಹಿಳೆಗೆ ಚಿತ್ರಹಿಂಸೆ – 4 ಪೊಲೀಸ್ ಅಧಿಕಾರಿಗಳು ಅಮಾನತು

    ಚೆನ್ನೈ: ಕಳ್ಳತನದ ಆರೋಪದ ಮೇಲೆ ಮಹಿಳೆಯೊಬ್ಬಳಿಗೆ ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ್ದಕ್ಕೆ 4 ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

    ತಮಿಳುನಾಡಿನಲ್ಲಿ ಮತ್ತೊಂದು ಕಸ್ಟಡಿ ಚಿತ್ರಹಿಂಸೆ ಪ್ರಕರಣ ಬೆಳಕಿಗೆ ಬಂದಿದ್ದು, ಈ ಬಾರಿ ತೂತುಕುಡಿ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ತನ್ನ ನೆರೆಹೊರೆಯವರ ಚಿನ್ನಾಭರಣಗಳನ್ನು ಕದ್ದಿದ್ದಾಳೆ ಎಂಬ ಶಂಕೆಯ ಮೇಲೆ ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಲಾಗಿದೆ ಎಂಬ ಆರೋಪ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಮೂವರು ಮಹಿಳಾ ಪೊಲೀಸ್ ಅಧಿಕಾರಿಗಳು ಮತ್ತು ಸಬ್ಇನ್ಸ್‌ಪೆಕ್ಟರ್ ಮುತ್ತುಮಲೈ ಅವರನ್ನು ಅಮಾನತುಗೊಳಿಸಲಾಗಿದೆ. ಇದನ್ನೂ ಓದಿ: ನವಜೋತ್‌ ಸಿಂಗ್‌ ಸಿಧುಗೆ 1 ವರ್ಷ ಜೈಲು ಶಿಕ್ಷೆ

    ಸುಮತಿ (42) ಕಸ್ಟಡಿಯೊಳಗೆ ಚಿತ್ರಹಿಂಸೆಗೊಳಗಾದ ಮಹಿಳೆ. ತೂತುಕುಡಿ ಜಿಲ್ಲೆಯ ಮುತ್ತಯ್ಯಪುರಂ ಗ್ರಾಮದಲ್ಲಿ ಘಟನೆ ವರದಿಯಾಗಿದೆ. ಈ ಹಿಂದೆ ಪ್ರಭಾಕರನ್ (45) ತಮಗೆ ಸೇರಿದ ಚಿನ್ನಾಭರಣಗಳನ್ನು ಕಳ್ಳತನ ಮಾಡಲಾಗಿದೆ ಎಂದು ದೂರು ನೀಡಿದ್ದರು. ಈ ಹಿನ್ನೆಲೆ ಮಹಿಳೆಯನ್ನು ಪೊಲೀಸ್ ಅಧಿಕಾರಿಗಳು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡಿದ್ದರು.

    ಮೇ 4ರಂದು ಮದುವೆ ಮಂಟಪದಲ್ಲಿರುವ ವಧುವಿನ ಕೊಠಡಿಯಲ್ಲಿದ್ದ 4ರಿಂದ 5 ಕೆಜಿ ಮೌಲ್ಯದ ಚಿನ್ನಾಭರಣಗಳು ನಾಪತ್ತೆಯಾಗಿದ್ದವು. ಮೇ 7ರಂದು ಸುಮತಿ ಅವರನ್ನು ವಿಚಾರಣೆಗೆ ಕರೆದೊಯ್ದಾಗ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಲಾಗಿತ್ತು. ಇದನ್ನೂ ಓದಿ: ಶಿವಲಿಂಗದ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ AIMIM ನಾಯಕ ಅರೆಸ್ಟ್

    ಮಹಿಳೆಯನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಮುತ್ತಯ್ಯಪುರಂ ಪೊಲೀಸ್ ಅಧಿಕಾರಿಗಳು, ಪೊಲೀಸ್ ಠಾಣೆಯಲ್ಲಿ ಮಹಿಳೆಗೆ ಚಿತ್ರಹಿಂಸೆ ನೀಡಿದ್ದಾರೆ. ನಂತರ ಸುಮತಿ ತೂತುಕುಡಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು.

    ಘಟನೆಯ ನಂತರ ಸುಮತಿ ತೂತುಕುಡಿ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ), ಬಾಲಾಜಿ ಸರವಣನ್ ಅವರಿಗೆ ಅಧಿಕೃತ ದೂರು ದಾಖಲಿಸಿದ್ದಾರೆ. ವಿಚಾರಣೆಯ ನಂತರ, ಸಂತ್ರಸ್ತೆ ಸುಮತಿಯನ್ನು ಎಫ್‍ಐಆರ್ ಅಥವಾ ಔಪಚಾರಿಕ ದೂರು ಇಲ್ಲದೆ ಠಾಣೆಯಲ್ಲಿ ಇರಿಸಲಾಗಿದೆ ಎಂದು ತಿಳಿದು ಬಂದಿದೆ.

    ದೂರಿನ ಮೇರೆಗೆ ಎಸ್‍ಪಿ ತಕ್ಷಣ ಕ್ರಮ ಕೈಗೊಂಡು ಮೂವರು ಮಹಿಳಾ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದಾರೆ. ಮರ್ಸಿನಾ, ಕಲ್ಪನಾ ಮತ್ತು ಉಮಾ ಮಹೇಶ್ವರಿ. ಮತ್ತೊಬ್ಬ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದ್ದು, (ಎಸ್ಪಿ) ಮುತ್ತುಮಲೈ ಅವರನ್ನು ಅಮಾನತುಗೊಳಿಸಿದ್ದಾರೆ.

  • 11 ವರ್ಷದ ಬಾಲಕನ ಮೇಲೆ ಮದರಸಾದ ಮುಫ್ತಿಯಿಂದ ಅತ್ಯಾಚಾರ ಆರೋಪ!

    11 ವರ್ಷದ ಬಾಲಕನ ಮೇಲೆ ಮದರಸಾದ ಮುಫ್ತಿಯಿಂದ ಅತ್ಯಾಚಾರ ಆರೋಪ!

    ಲಕ್ನೋ: 11 ವರ್ಷದ ಬಾಲಕನ ಮೇಲೆ ಮದರಸಾದ ಮುಫ್ತಿಯೊಬ್ಬ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಮಾವನ ತಾಲೂಕಿನಲ್ಲಿ ನಡೆದಿದೆ.

    ಸತ್ಲದ ನಿವಾಸಿಯಾದ ಮದರಸಾದ ಮುಫ್ತಿ ಅಬ್ದುಲ್ ಕಲಾಂ ಶಿಕ್ಷಣದ ಹೆಸರಿನಲ್ಲಿ ಮೂಲತಃ ಸಹರಾನ್‍ಪುರದ ಸಂತ್ರಸ್ತ ಬಾಲಕನಿಗೆ ದೌರ್ಜನ್ಯ ಎಸಗುತ್ತಿದ್ದರು ಎನ್ನಲಾಗಿದೆ. ಈದ್ ಹಬ್ಬದಂದು ಮನೆಗೆ ತೆರಳಿದ್ದ 11 ವರ್ಷದ ಬಾಲಕ ತನ್ನ ಕುಟುಂಬಸ್ಥರಿಗೆ 7 ತಿಂಗಳ ನಂತರ ನೋವಿನ ಬಗ್ಗೆ ಹೇಳಿಕೊಂಡಿದ್ದಾನೆ.

    ಈ ಕುರಿತು ಸಂತ್ರಸ್ತ ಬಾಲಕನ ತಂದೆ ಶನಿವಾರ ಪೊಲೀಸ್ ಠಾಣೆಗೆ ಆಗಮಿಸಿ ಆರೋಪಿ ವಿರುದ್ಧ ದೂರು ದಾಖಲಿಸಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸದ್ಯ ಮುಫ್ತಿ ತಲೆಮರೆಸಿಕೊಂಡಿದ್ದಾನೆ.

    ಮುಫ್ತಿ, ಮೀರತ್‍ನ ಮಾವಾನಾದ ಇಕ್ರಮ್ ನಗರ ಫರೀದ್ ಕಾಲೋನಿಯಲ್ಲಿರುವ ಮದರಸಾದ ನಿರ್ದೇಶಕನಾಗಿದ್ದಾನೆ. ಅವನು ಮಕ್ಕಳಿಗೆ ತರಬೇತಿ ನೀಡುತ್ತಿದ್ದು, ಸುತ್ತಮುತ್ತಲಿನ ಪ್ರದೇಶದ ಜೊತೆಗೆ ಇತರ ಹಲವು ಜಿಲ್ಲೆಗಳ ಮಕ್ಕಳು ಸಹ ಈ ಮದರಸಾದಲ್ಲಿ ಉಳಿದುಕೊಂಡು ಶಿಕ್ಷಣ ಪಡೆಯುತ್ತಿದ್ದಾರೆ. ಇದರಲ್ಲಿ ಸಂತ್ರಸ್ತ ಬಾಲಕನೂ ಇದ್ದಾನೆ. ಬಾಲಕನು ಸುಮಾರು 7 ತಿಂಗಳ ಹಿಂದೆ ಮದರಸಾದಲ್ಲಿ ಓದಲು ಬಂದಿದ್ದರು ಎಂದು ತಿಳಿದು ಬಂದಿದೆ.

    ಈದ್ ಹಬ್ಬದಂದು ಸಂತ್ರಸ್ತ ಬಾಲಕ ಮನೆಗೆ ಹೋದಾಗ ಆರೋಪಿ ಮುಫ್ತಿಯ ಕೃತ್ಯವನ್ನು ತನ್ನ ಕುಟುಂಬದ ಸದಸ್ಯರಿಗೆ ತಿಳಿಸಿದ್ದಾನೆ. ಹಬ್ಬ ಮುಗಿದ ಬಳಿಕ ಶನಿವಾರ ಮಧ್ಯಾಹ್ನ ಬಾಲಕನನ್ನು ಮನೆಯವರು ಮದರಸಾಕ್ಕೆ ಕರೆದೊಯ್ದರು. ಆದರೆ ಈ ಆರೋಪ ಸುಳ್ಳು ಎನ್ನುತ್ತಿದ್ದಾರೆ ಮದರಸಾದವರು.

    police (1)

    ಕೊನೆಗೆ ಸಂಜೆಯ ವೇಳೆಗೆ ವಿಷಯ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ದೂರು ಸ್ವೀಕರಿಸಿದ ಪೊಲೀಸರು ಸಂತ್ರಸ್ತ ಬಾಲಕನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ. ಈ ಸಂಬಂಧ ಮುಫ್ತಿ ವಿರುದ್ಧ ಕೇಸ್ ದಾಖಲಾಗಿತ್ತು.

  • ಆಸ್ತಿಯಲ್ಲಿ ಪಾಲು ಕೊಡದಿದ್ದಕ್ಕೆ ಮೂವರು ಮಕ್ಕಳೊಂದಿಗೆ ಬೆಂಕಿಹಚ್ಚಿಕೊಂಡ ತಾಯಿ

    ಆಸ್ತಿಯಲ್ಲಿ ಪಾಲು ಕೊಡದಿದ್ದಕ್ಕೆ ಮೂವರು ಮಕ್ಕಳೊಂದಿಗೆ ಬೆಂಕಿಹಚ್ಚಿಕೊಂಡ ತಾಯಿ

    ಅಮರಾವತಿ: ಮಹಿಳೆಯೊಬ್ಬರು ತನ್ನ ಮೂವರು ಮಕ್ಕಳೊಂದಿಗೆ ಸ್ವತಃ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಎಲಮಂಚಿಲಿ ಗ್ರಾಮದಲ್ಲಿ ನಡೆದಿದೆ.

    ಮೃತರನ್ನು ಚಿಂಟು ಚಿನಮಣಿ (45), ಅವರ ಪುತ್ರಿ ಜಾಹ್ನವಿ (18) ಎಂದು ಗುರುತಿಸಲಾಗಿದೆ. ಮಹಿಳೆ ಮತ್ತು ಆಕೆಯ ಮಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಮಗಳಿಗೆ ಗಂಭೀರವಾಗಿ ಸುಟ್ಟಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಕೆದಕಿದ್ದ ಎಂಇಎಸ್ ಮುಖಂಡನ ವಿರುದ್ಧ FIR ದಾಖಲು

    crime

    ಕುಟುಂಬದಲ್ಲಿ ಆಸ್ತಿವಿವಾದ ಏರ್ಪಟ್ಟಿದ್ದು, ಇದು ತಾರಕಕ್ಕೇರಿದ್ದರಿಂದ ಆಸ್ಪತ್ರೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಇದನ್ನೂ ಓದಿ: ಪತಿ ಕಣ್ಣೆದುರೇ ಪ್ರಿಯಕರನೊಂದಿಗೆ ಪತ್ನಿ ಸೆಕ್ಸ್ – ಸ್ಕ್ರೂಡ್ರೈವರ್‌ನಿಂದ ಇಬ್ಬರನ್ನು ಇರಿದು ಕೊಂದ

    ಚಿನಮಣಿ ಅವರ ಅತ್ತೆ ಆಸ್ತಿಯಲ್ಲಿ ತನ್ನ ಪಾಲು ನೀಡಲು ನಿರಾಕರಿಸಿದ್ದಾರೆ. ಆಕೆ, ಆಸ್ತಿಯ ಬಹುಪಾಲನ್ನು ತನ್ನ ಮಗಳಿಗೆ ನೀಡಿ, ಉಳಿದ ಪಾಲನ್ನು ಮಗನಿಗೆ ನಿಡಲು ಬಯಸಿದ್ದಳು. ಇದರಿಂದಾಗಿ ಅತೃಪ್ತಿಗೊಂಡ ಚಿನಮಣಿ ಆಹತ್ಮಹತ್ಯೆಯ ದಾರಿ ಹಿಡಿದಿದ್ದಾರೆ. ಎಂದು ಜಾಲ್ಮುರು ಎಸ್‌ಐ ಪಾರಿ ನಾಯ್ಡು ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.

  • ಒಂಟಿ ಮಹಿಳೆ ಮೇಲೆ ಹಲ್ಲೆ ಮಾಡಿದ ರೌಡಿಶೀಟರ್

    ಒಂಟಿ ಮಹಿಳೆ ಮೇಲೆ ಹಲ್ಲೆ ಮಾಡಿದ ರೌಡಿಶೀಟರ್

    ಧಾರವಾಡ: ರೌಡಿಶೀಟರ್‌ನೊಬ್ಬ ಒಂಟಿ ಮಹಿಳೆ ಮೇಲೆ ಹಲ್ಲೆ ನಡೆಸಿದ ಘಟನೆ ಹುಬ್ಬಳ್ಳಿಯ ಲಿಂಗರಾಜ ನಗರದಲ್ಲಿರುವ ಅಪಾರ್ಟ್ಮೆಂಟ್‌ನಲ್ಲಿ ನಡೆದಿದೆ.

    ಲಕ್ಷ್ಮೀ ಎಂಬವರ ಮೇಲೆ 4 ಜನರ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ. ಮನೆ ಖಾಲಿ ಮಾಡುವ ವಿಚಾರಕ್ಕೆ ಅಪಾರ್ಟ್ಮೆಂಟ್‌ಗೆ ನುಗ್ಗಿ ಮಹಿಳೆ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಬಾಲಕೃಷ್ಣ ನಾಯಕ, ಶಕ್ತಿರಾಜ ದಾಂಡೇಲಿ, ರಾಹುಲ್, ಹಾಗೂ ಇನ್ನೋರ್ವನಿಂದ ಈ ಹಲ್ಲೆ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆಗೈದ ಮಹಿಳೆ ಅರೆಸ್ಟ್

    ಲಕ್ಷ್ಮೀಯವರು ಅಪಾರ್ಟ್ಮೆಂಟ್‌ ಖರೀದಿ ಮಾಡಿ ಮಾಲೀಕನಿಗೆ ಹಣ ನೀಡಿರಲಿಲ್ಲ. ಹಣ ನೀಡದ ಹಿನ್ನೆಲೆ ಮಾಲೀಕನಿಂದ ಕೋರ್ಟ್‍ಗೆ ದೂರು ದಾಖಲಾಗಿತ್ತು. ಕೋರ್ಟ್‍ನಲ್ಲಿ ಕೇಸ್ ಇರುವಾಗಲೇ ನಾಲ್ವರಿಂದ ಅಪಾರ್ಟ್ಮೆಂಟ್‌ನಲ್ಲಿದ್ದ ಮಹಿಳೆ ಮೇಲೆ ದಾಳಿ ನಡೆದಿದೆ. ಇದನ್ನೂ ಓದಿ: ನೆಟ್ಟಿಗರಿಂದ ಟ್ರೋಲ್ ಆಯ್ತು ಎಸ್‍ಆರ್‌ಹೆಚ್ ಹೊಸ ಜೆರ್ಸಿ

    ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಲ್ಲೆ ನಡೆಸಿ ದೈಹಿಕ ಹಿಂಸೆ ನೀಡಿದ್ದಾರೆಂದು ಕೇಸ್ ದಾಖಲಾಗಿದೆ. ಮನೆ ಖಾಲಿ ಮಾಡು ಅಂತ ಹೇಳಿದ್ದಲ್ಲದೆ, ಮೈಮೇಲಿದ್ದ ಬಂಗಾರವನ್ನ ತೆಗೆದುಕೊಂಡು ಹೋಗಿದ್ದಾರೆಂದು ಆರೋಪಿಸಿದ್ದಾರೆ.

    ಈ ಹಿನ್ನೆಲೆ ನೊಂದ ಮಹಿಳೆಯು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

  • ರಾಜಕೀಯ ನಾಯಕರ ಹೆಸರು ಬಳಸಿ ಸೈಟ್ ಖರೀದಿ – ಲಕ್ಷ ಲಕ್ಷ ಹಣ ವಂಚನೆ ಆರೋಪ

    ರಾಜಕೀಯ ನಾಯಕರ ಹೆಸರು ಬಳಸಿ ಸೈಟ್ ಖರೀದಿ – ಲಕ್ಷ ಲಕ್ಷ ಹಣ ವಂಚನೆ ಆರೋಪ

    ನೆಲಮಂಗಲ(ಬೆಂಗಳೂರು): ದೊಡ್ಡ ದೊಡ್ಡ ರಾಜಕಾರಣಿಗಳ ಹೆಸರು ಹೇಳಿಕೊಂಡು ಲಕ್ಷ, ಲಕ್ಷ ಹಣ ವಂಚನೆ ಮಾಡಿರುವ ಆರೋಪವೊಂದು ಕೇಳಿಬಂದಿದೆ.

    ಹೌದು. ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ದಾಸನಪುರ ಗ್ರಾಮದಲ್ಲಿ ಈ ಆರೋಪ ಕೇಳಿಬಂದಿದೆ. ಯೋಗನರಸಿಂಹ ಎಂಬವರು ಈ ಆರೋಪ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಮತ್ತು ರೇಣುಕಾಚಾರ್ಯ ಹೆಸರೇಳಿಕೊಂಡು ವ್ಯಕ್ತಿ ಮೋಸ ಮಾಡಿದ್ದಾನೆ ಎಂದು ಆರೋಪ ಮಾಡಿದ್ದಾರೆ.

    ತನ್ನ ಪತ್ನಿ ಹೆಸರಿಗೆ ಸೇರಿದ ಖಾಲಿ ನಿವೇಶನವನ್ನು ಬಿಜೆಪಿ ಮುಖಂಡ ರವಿಕುಮಾರ್ ಎಂಬವರಿಗೆ ರಿಜಿಸ್ಟರ್ ಮಾಡಿಕೊಟ್ಟು ಉಳಿಕೆ 12 ಲಕ್ಷದ ಡಿಡಿ ನೀಡಿದ್ದು ಆ ಡಿಡಿ ಕೂಡ ನಕಲು ಎಂದು ಯೋಗನರಸಿಂಹ ಆರೋಪ ಮಾಡ್ತಿದ್ದಾರೆ. ಲಕ್ಷ ಲಕ್ಷ ವಂಚನೆ ಮಾಡಿರುವ ವಿಚಾರಕ್ಕೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದರು ಸಹ ಯಾವುದೇ ಕ್ರಮ ಕೈಗೊಂಡಿಲ್ಲ. ಇದನ್ನೂ ಓದಿ: ಹಿಂದೂಗಳಿಲ್ಲದೆ ಭಾರತವಿಲ್ಲ, ಭಾರತವಿಲ್ಲದೆ ಹಿಂದೂಗಳಿಲ್ಲ: ಮೋಹನ್ ಭಾಗವತ್

    ತನ್ನ ರಾಜಕೀಯ ಪ್ರಭಾವದಿಂದ ಒತ್ತಡ ಹಾಕಿಸಿದ್ದಾನೆ ಎಂದು ಆರೋಪಿಸಿದ್ದಾರೆ. ಕೂಡಲೇ ಅಧಿಕಾರಿಗಳು ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡಿ ಬಡವರಿಗೆ ಸಹಾಯ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ವಾರದಲ್ಲಿ ಮೂರನೇ ಬಾರಿ ಗೌತಮ್‌ ಗಂಭೀರ್‌ಗೆ ಐಸಿಸ್‌ನಿಂದ ಕೊಲೆ ಬೆದರಿಕೆ

  • ಐವರ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಶಂಕರ್, ಇಬ್ಬರು ಅಳಿಯಂದಿರ ವಿರುದ್ಧ ದೂರು ದಾಖಲು

    ಐವರ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಶಂಕರ್, ಇಬ್ಬರು ಅಳಿಯಂದಿರ ವಿರುದ್ಧ ದೂರು ದಾಖಲು

    ಬೆಂಗಳೂರು: ಒಂದೇ ಕುಟುಂಬದ ಐವರು ಆತ್ಮಹತ್ಯೆ ಪ್ರಕರಣ ಕ್ಷಣಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಒಂದೇ ಕುಟುಂಬದ ಐವರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಪೊಲೀಸರು ಮನೆ ಯಜಮಾನ ಶಂಕರ್ ಸಮ್ಮುಖದಲ್ಲಿ ಸ್ಥಳ ಮಹಜರು ನಡೆಸಿದರು. ಈ ವೇಳೆ ಪೊಲೀಸರಿಗೆ ಮೂರು ಡೆತ್ ನೋಟ್ ಲಭ್ಯವಾಗಿದೆ. ಇದರ ಆಧಾರದ ಮೇಲೆ ಮನೆ ಯಜಮಾನ ಶಂಕರ್, ಅಳಿಯಂದಿರಾದ ಪ್ರವೀಣ್, ಶ್ರೀಕಾಂತ್ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡು ವಿಚಾರಣೆಗೆ ಕರೆದುಕೊಂಡು ಹೋಗಿದ್ದಾರೆ.

    ಆತ್ಮಹತ್ಯೆಗೆ ಪ್ರಚೋದನೆ ಆರೋಪದ ಮೇಲೆ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿದ್ದಾರೆ. ಆತ್ಮಹತ್ಯೆಗೆ ಮುನ್ನ ಡೆತ್ ನೋಟ್‍ನಲ್ಲಿ ಶಂಕರ್ ಹಾಗೂ ಪ್ರವೀಣ್, ಶ್ರೀಕಾಂತ್ ಕಿರುಕುಳದ ಬಗ್ಗೆ ಉಲ್ಲೇಖ ಮಾಡಲಾಗಿತ್ತು. ಮೃತ ಸಿಂಚನಗೆ ಎರಡು ಸಾರಿ ಅಬಾರ್ಷನ್ ಮಾಡಿಸಿದ್ದಾರೆ ಎಂದು ಗಂಡನ ಮನೆಯವರು ಆರೋಪ ಮಾಡಿದ್ದಾರೆ. ಈ ಎಲ್ಲ ಆಧಾರದ ಮೇಲೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

    ಮನೆಯ ಹಾಲ್‍ನ ಎಂಟ್ರಿಯಲ್ಲಿ ಸಿಸಿಟಿವಿ ಹಾಕಲಾಗಿದೆ. ಸಿಸಿಟಿಯ ಸಂಪೂರ್ಣ ಕಂಟ್ರೋಲ್ ಶಂಕರ್ ಮೊಬೈಲ್ ನಲ್ಲಿತ್ತು. 64 ಜಿಬಿಯ ಮೆಮೊರಿ ಕಾರ್ಡ್ ಹಾಕಲಾಗಿದೆ. ಅದು ಫುಲ್ ಆಗಿ ಭಾನುವಾರದ ನಂತರದ ಚಟುವಟಿಕೆಗಳು ಸಿಕ್ಕಿಲ್ಲ.

    ಪ್ರಕರಣ ಹಿನ್ನೆಲೆ ಏನು?: ಸಾಮೂಹಿಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಂದು ಸ್ಥಳ ಮಹಜರು ಮಾಡಿದ್ದು, ಈ ವೇಳೆ ಮೂರು ಜನ ಬರೆದಿರುವ ಡೆತ್ ನೋಟ್‍ಗಳು ಪತ್ತೆಯಾಗಿವೆ. ಮೂವರೂ ತಮ್ಮ ತಂದೆ ಶಂಕರ್ ವಿರುದ್ಧವೇ ಆರೋಪ ಮಾಡಿದ್ದಾರೆ.

    ತಿಗಳರಪಾಳ್ಯದ ಮನೆಯಲ್ಲಿ ಎಸಿಪಿ, ಇನ್‌ಸ್ಪೆಕ್ಟರ್‌ಗಳ ನೇತೃತ್ವದಲ್ಲಿ ಸ್ಥಳ ಮಹಜರು ನಡೆಸಲಾಗಿದ್ದು, ಹತ್ತಕ್ಕೂ ಹೆಚ್ಚು ಅಧಿಕಾರಿಗಳು ಮನೆಯಲ್ಲಿ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಮನೆ ಮಾಲೀಕ ಶಂಕರ್, ಇಬ್ಬರು ಅಳಿಯಂದಿರು, ಒಬ್ಬ ಸಂಬಂಧಿಕ ಸಹ ಇದ್ದರು. ಪರಿಶೀಲನೆ ವೇಳೆ ಮಧುಸಾಗರ್, ಸಿಂಚನ, ಸಿಂಧುರಾಣಿ ಮೂವರ ಡೆತ್ ನೋಟ್‍ಗಳು ಪತ್ತೆಯಾಗಿವೆ. ಮೂವರು ಸಹ ಅಪ್ಪನ ವಿರುದ್ಧ ಆರೋಪ ಮಾಡಿದ್ದು, ತಂದೆಯ ಅನೈತಿಕ ಸಂಬಂಧ, ದೌರ್ಜನ್ಯ ನಡೆಸಿರುವ ಬಗ್ಗೆ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಕೌಟುಂಬಿಕ ಕಲಹದಿಂದ್ಲೇ ಸಾಮೂಹಿಕ ಆತ್ಮಹತ್ಯೆ – ದುರಂತಕ್ಕೆ ಪತ್ನಿಯೇ ಕಾರಣವೆಂದ ಪತಿ ಶಂಕರ್

    ಸಾವಿನ ಸಂಬಂಧ ಕೆಲ ಸಾಕ್ಷ್ಯಗಳು ಲ್ಯಾಪ್ ಟಾಪ್‍ನಲ್ಲಿ ಇರುವ ಶಂಕೆ ಇದೆ. ಹೀಗಾಗಿ ಅವುಗಳನ್ನು ಸಹ ಪೊಲೀಸರು ವಶಕ್ಕೆ ಪಡೆದಿದ್ದಾರೆ. 9 ತಿಂಗಳ ಮಗುವನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಸಿಂಧುರಾಣಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಸಹ ಸಾಕ್ಷ್ಯ ಲಭ್ಯವಾಗಿದೆ ಎನ್ನಲಾಗಿದೆ. ಮನೆಯ ರೂಮ್‍ಗಳಲ್ಲಿ ಅಲ್ಲಲ್ಲಿ ನೋಟುಗಳು ಹರಿದು ಬಿದ್ದಿದ್ದವು. ಬಹುತೇಕ ಎಲ್ಲರೂ ಶಂಕರ್ ಮೇಲೆಯೇ ಆರೋಪ ಮಾಡಿದ್ದಾರೆ. ಅಪ್ಪ ಸರಿಯಿಲ್ಲ ಎಂದು ದೂರಿದ್ದಾರೆ. ಇದನ್ನೂ ಓದಿ:  ಬೆಂಗ್ಳೂರಲ್ಲಿ ಒಂದೇ ಕುಟುಂಬದ ಐವರು ಸಾವು ಪ್ರಕರಣ- ಐದು ದಿನ ಅನ್ನ, ನೀರಿಲ್ಲದೆ ಬದುಕುಳಿದ ಎರಡೂವರೆ ವರ್ಷದ ಕಂದಮ್ಮ

    ಡೆತ್ ನೋಟ್‍ನಲ್ಲಿ ಏನಿದೆ?: ಅಪ್ಪನಿಗೆ ಅನೈತಿಕ ಸಂಬಂಧ ಇತ್ತು, ಇದರಿಂದ ಸಂಸಾರದಲ್ಲಿ ಗಲಾಟೆಗಳು ನಡೆಯುತ್ತಿದ್ದವು. ಅಪ್ಪ ಸರಿಯಾಗಿ ಇದ್ದಿದ್ದರೆ ನಾವ್ಯಾಕೆ ಸಾಯುವ ಯೋಚನೆ ಮಾಡಬೇಕಿತ್ತು. ನಾವೆಲ್ಲ ಸಾಯುವುದಕ್ಕೆ ಅಪ್ಪ ಅಕ್ರಮ ಸಂಬಂಧ ಹೊಂದಿರುವುದೇ ಕಾರಣ ಎಂದು ಮಧುಸಾಗರ್ ಡೆತ್ ನೋಟ್‍ನಲ್ಲಿ ಬರೆದಿದ್ದಾರೆ. ಅಪ್ಪ ಮತ್ತು ಪತಿಯಂದಿರು ಕಿರುಕುಳ ಕೊಡುತ್ತಿದ್ದರು. ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಮಾಡಿದೆವು. ಗಂಡನ ಮನೆಯಲ್ಲೂ ಸುಖ ಸಿಗಲಿಲ್ಲ, ತವರು ಮನೆಯಲ್ಲೂ ಸುಖ ಸಿಗಲಿಲ್ಲ, ಇನ್ಯಾವ ಖುಷಿಗೆ ಬದುಕಬೇಕು. ಮಕ್ಕಳು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯಗಳು ಇಲ್ಲಿಗಾದ್ರೂ ಕೊನೆಯಾಗಲಿ ಎಂದು ಸಿಂಚನ, ಸಿಂಧುರಾಣಿ ಡೆತ್ ನೋಟ್ ಬರೆದಿದ್ದಾರೆ ಎಂದು ಪೊಲೀಸ್ ಮೂಲಗಳು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿವೆ.

  • ಇದು ನನ್ನ ವಿರುದ್ಧದ ವ್ಯವಸ್ಥಿತ ಪಿತೂರಿಯ ಮುಂದುವರಿದ ಭಾಗ: ರೋಹಿಣಿ ಸಿಂಧೂರಿ

    ಇದು ನನ್ನ ವಿರುದ್ಧದ ವ್ಯವಸ್ಥಿತ ಪಿತೂರಿಯ ಮುಂದುವರಿದ ಭಾಗ: ರೋಹಿಣಿ ಸಿಂಧೂರಿ

    ಮೈಸೂರು: ಮೈಸೂರಿನ ನಿರ್ಗಮಿತ ಡಿಸಿ ರೋಹಿಣಿ ಸಿಂಧೂರಿ ವಿರುದ್ಧ ಶಾಸಕ ಸಾರಾ ಮಹೇಶ್ ಮಾಡಿದ್ದ ಕಿಕ್ ಬ್ಯಾಕ್ ಆರೋಪಕ್ಕೆ ರೋಹಿಣಿ ಸಿಂಧೂರಿ ಸ್ಪಷ್ಟೀಕರಣ ನೀಡಿದ್ದು, ನನ್ನ ಮೇಲೆ ಸತ್ಯಕ್ಕೆ ದೂರವಾದ ಆರೋಪ ಮಾಡಲಾಗಿದೆ. ಇದು ನನ್ನ ವಿರುದ್ಧ ನಡೆಯುತ್ತಿರುವ ವ್ಯವಸ್ಥಿತವಾದ ಪಿತೂರಿಯ ಮುಂದುವರಿದ ಭಾಗ ಎಂದು ತಿರುಗೇಟು ನೀಡಿದ್ದಾರೆ.

    ವಾಟ್ಸ್ ಅಪ್ ಗ್ರೂಪ್ ನಲ್ಲಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ರೋಹಿಣಿ ಸಿಂಧೂರಿ, ನನ್ನ ಮೇಲೆ ಸತ್ಯಕ್ಕೆ ದೂರವಾದ ಆರೋಪ ಮಾಡಲಾಗಿದೆ. ಇದು ನನ್ನ ವಿರುದ್ಧ ನಡೆಯುತ್ತಿರುವ ವ್ಯವಸ್ಥಿತವಾದ ಪಿತೂರಿಯ ಮುಂದುವರಿದ ದಾಳಿ. ತಾವು ಮಾಡಿರುವ ಅಕ್ರಮ ಮುಚ್ಚಿಕೊಳ್ಳಲು ಮತ್ತು ಮಾಡಿರುವ ಅಕ್ರಮಗಳ ಬಗ್ಗೆ ಯಾವ ಅಧಿಕಾರಿಯೂ ತನಿಖೆಗೆ ಮುಂದಾಗಬಾರದೆಂದು ಹೆದರಿಸುವ ತಂತ್ರದ ಭಾಗ ಇದು. ಇದಕ್ಕೆ ಯಾವ ಅಧಿಕಾರಿಗಳು ಹೆದರದೆ ಇರುವ ಸತ್ಯ ಬಹಿರಂಗಪಡಿಸಬೇಕೆಂದು ಗುಡುಗಿದ್ದಾರೆ. ಇದನ್ನೂ ಓದಿ: ರೋಹಿಣಿ ಸಿಂಧೂರಿಯಿಂದ 6 ಕೋಟಿ ಅಕ್ರಮ: ಸಾರಾ ಮಹೇಶ್ ಆರೋಪ

    ಬಟ್ಟೆ ಬ್ಯಾಗ್ ಖರೀದಿ ಮಾಡಿರುವುದು ಕರ್ನಾಟಕ ಕೈ ಮಗ್ಗ ಅಭಿವೃದ್ಧಿ ಪ್ರಾಧಿಕಾರದಲ್ಲಿ. ಇದು ಸರ್ಕಾದ ಅಧೀನ ಸಂಸ್ಥೆ. ನನ್ನ ಅವಧಿಯಲ್ಲಿ ಒಂದೇ ಒಂದು ಪೈಸೆಯೂ ಹಣ ಬಿಡುಗಡೆಯಾಗಿಲ್ಲ. ಇದರಲ್ಲಿ ಅಕ್ರಮ ಹೇಗೆ ಬರುತ್ತೆ? ನನ್ನ ಮೇಲಿನ ಎಲ್ಲಾ ಆರೋಪಗಳು ಸುಳ್ಳು. ಇದರಲ್ಲಿ ಸತ್ಯದ ಒಂದಂಶವೂ ಇಲ್ಲ. ಮೈಸೂರನ್ನು ಪ್ಲಾಸ್ಟಿಕ್ ಮುಕ್ತ ಮಾಡುವ ಉದ್ದೇಶದಿಂದ ಸ್ಥಳೀಯ ಸಂಸ್ಥೆಗಳಿಗೆ ಉಚಿತವಾಗಿ ಬಟ್ಟೆ ಬ್ಯಾಗ್ ನೀಡಲು ಕರ್ನಾಟಕ ಕೈ ಮಗ್ಗ ಅಭಿವೃದ್ಧಿ ಪ್ರಾಧಿಕಾರಕ್ಕೆ ತಿಳಿಸಲಾಗಿತ್ತು. ಅವರೇ ದರ ನಿಗದಿ ಮಾಡಿ ಪತ್ರ ಕಳಿಸಿದ್ದರು. ಅದರಂತೆ ಅರ್ಡರ್ ನೀಡಲಾಗಿದೆ. ಹೇಳಿ ಕೇಳಿ ಕರ್ನಾಟಕ ಕೈ ಮಗ್ಗ ಅಭಿವೃದ್ಧಿ ನಿಗಮ ರಾಜ್ಯ ಸರ್ಕಾರದ ಅಧೀನ ಸಂಸ್ಥೆ. ಇಂತಹ ಸಂಸ್ಥೆ ಜೊತೆಗಿನ ಅಧಿಕೃತ ವ್ಯವಹಾರದಲ್ಲಿ ಕಿಕ್ ಬ್ಯಾಕ್ ಪ್ರಶ್ನೆ ಎಲ್ಲಿಂದ ಬರುತ್ತೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮೈಸೂರಿನಲ್ಲಿ ಮತ್ತೊಂದು ಪ್ರಕರಣ – ಕಾಲೇಜು ವಿದ್ಯಾರ್ಥಿನಿ ಮೇಲೆ ಹಲ್ಲೆ, ಅತ್ಯಾಚಾರ ಯತ್ನ

  • ಠಾಣೆಗೆ ಮುತ್ತಿಗೆ ಹಾಕಿದ ಆಫ್ರಿಕಾ ಪ್ರಜೆಗಳ ವಿರುದ್ಧ ಲಾಠಿಚಾರ್ಜ್

    ಠಾಣೆಗೆ ಮುತ್ತಿಗೆ ಹಾಕಿದ ಆಫ್ರಿಕಾ ಪ್ರಜೆಗಳ ವಿರುದ್ಧ ಲಾಠಿಚಾರ್ಜ್

    – ವಶದಲ್ಲಿದ್ದ ಡ್ರಗ್ಸ್ ಕೇಸ್ ಆರೋಪಿ ಸಾವು
    – ಪೊಲೀಸರ ಮೇಲೆ ಹಲ್ಲೆಗೆ ಯತ್ನ

    ಬೆಂಗಳೂರು: ಆಫ್ರಿಕಾ ದೇಶದ ಪ್ರಜೆ ಸಾವನ್ನಪ್ಪಿದ್ದಕ್ಕೆ ಠಾಣೆಗೆ ಮುತ್ತಿಗೆ ಹಾಕಿ ಗುಂಡಾವರ್ತನೆ ತೋರಿದ್ದಕ್ಕೆ ಆಫ್ರಿಕಾ ಪ್ರಜೆಗಳ ವಿರುದ್ಧ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.

    ಜಾನ್ ಅಲಿಯಾಸ್ ಜೋಯಲ್ ಶಿಂದನಿ ಮಾಲು(27) ಸಾವನ್ನಪ್ಪಿದ ಆರೋಪಿ. ಈತ ಡ್ರಗ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿ ಜೆ.ಸಿ.ನಗರ ಪೊಲೀಸರ ವಶದಲ್ಲಿದ್ದನು. ಆರೋಗ್ಯದಲ್ಲಿ ಏರುಪೇರಾಗಿದ್ದ ಹಿನ್ನೆಲೆಯಲ್ಲಿ ಪೊಲೀಸರ ವಶದಲ್ಲಿದ್ದ ಈತನನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ.

    ವಶದಲ್ಲಿದ್ದ ಜಾನ್ ಸಾವನ್ನಪ್ಪಿರುವ ಹಿನ್ನೆಲೆ ಜೆಸಿ ನಗರ ಪೊಲೀಸ್ ಠಾಣೆಗೆ ವಿದೇಶಿ ಪ್ರಜೆಗಳು ಇಂದು ಸಂಜೆ ಮುತ್ತಿಗೆ ಹಾಕಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ದಾಂಧಲೆಗೆ ಯತ್ನಿಸಿದ್ದಾರೆ.

    ಪೊಲೀಸರು ಹಲ್ಲೆಗೈದು ಕೊಲೆ ಮಾಡಿದ್ದಾರೆ ಎಂದು ನೈಜಿರೀಯಾ ಪ್ರಜೆಗಳು ಪೊಲೀಸರ ಮೇಲೆ ಕೊಲೆ ಆರೋಪ ಮಾಡಿದ್ದಾರೆ. ಪೊಲೀಸರನ್ನ ಆಫ್ರಿಕನ್ ಪ್ರಜೆಗಳು ಅವಾಚ್ಯವಾಗಿ ಬೈದು, ಕೆಟ್ಟದಾಗಿ ಪೊಲೀಸರನ್ನು ಗುರಿಯಾಗಿಸಿ ಸನ್ನೆ, ಬೆಂಕಿ ಕಡ್ಡಿ ಗೀರಿ ಗುಂಡಾವರ್ತನೆ ತೋರಿದ್ದಾರೆ.

    ಪೊಲೀಸರು ಹೇಳಿದ್ದೇನು?
    ರಾತ್ರಿ 10:30 ಕ್ಕೆ ಡ್ರಗ್ ಪೆಡ್ಲರ್ ಬಗ್ಗೆ ಮಾಹಿತಿ ಸಿಕ್ಕಿತ್ತು. ಪಿಎಸ್‍ಐ ರಘುಪತಿ ಮಾಹಿತಿಯನ್ನು ಆಧರಿಸಿ ಆರೋಪಿಯನ್ನು ರಾತ್ರಿ 12:30ಕ್ಕೆ ವಶಕ್ಕೆ ಪಡೆಯಲಾಯ್ತು. ಬಂಧನ ಮಾಡುವ ಸಂದರ್ಭದಲ್ಲಿ ಎಸ್ಕೇಪ್ ಆಗಲು ಪ್ರಯತ್ನ ಮಾಡಿದ್ದ. ಆದರೆ ಪಿಎಸ್‍ಐ ಸಿಬ್ಬಂದಿಯೊಂದಿಗೆ ಆತನ ಬಂಧನ ಮಾಡಲಾಯ್ತು. ಬಳಿಕ 2:15 ಕ್ಕೆ ವಶಪಡಿಸಿಕೊಂಡ ಡ್ರಗ್ಸ್ ಸಮೇತ ಆತನ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದೆವು. ಆದರೆ ಸ್ವಲ್ಪ ಹೊತ್ತಿನ ಬಳಿಕ ಆರೋಪಿಗೆ ಎದೆ ನೋವು ಪ್ರಾರಂಭವಾಯ್ತು. ತಕ್ಷಣವೇ ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಯ್ತು. ಆದರೆ 6:45 ರ ಹೊತ್ತಿಗೆ ಆತನಿಗೆ ಹೃದಯಾಘಾತ ಆಗಿ ಸಾವನ್ನಪ್ಪಿದ್ದಾನೆ ಎಂದು ಡಿಸಿಪಿ ಧರ್ಮೇಂದ್ರ ಮೀನಾ ಸ್ಪಷ್ಟನೆ ನೀಡಿದ್ದಾರೆ.

    ನಮ್ಮ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ. ಅವರ ಮೇಲೆ ಎಫ್ ಐಆರ್ ಮಾಡಿ ಬಂಧಿಸುತ್ತೇವೆ. ಇದು ತುಂಬಾ ಸೂಕ್ಷ್ಮ ವಿಚಾರವಾಗಿದೆ. ನಮ್ಮ ಮಹಿಳಾ ಸಿಬ್ಬಂದಿ ಮೇಲೆ ಕೂಡ ಹಲ್ಲೆಗೆ ಯತ್ನಿಸಿ ಅವಾಚ್ಯವಾಗಿ ಬೈದಿದ್ದಾರೆ. ಸದ್ಯ ಎಷ್ಟು ಜನ ಸಿಕ್ಕಿದ್ದಾರೆ ಅಂತಾ ಗೊತ್ತಾಗಬೇಕಿದೆ. ಗಲಾಟೆ ಮಾಡಿದ ಯಾರನ್ನು ಬಿಡಲ್ಲ. ನಿನ್ನೆ ರಾತ್ರಿ ಆಫ್ರಿಕನ್ ಪ್ರಜೆ ಅರೆಸ್ಟ್ ಮಾಡಿದ್ದಾರೆ. 5 ಗಂಟೆ ವೇಳೆಗೆ ಹೃದಯಾಘಾತವಾಗಿದೆ. ನಾವು ಆಸ್ಪತ್ರೆಗೆ ಸೇರಿಸುವ ವೇಳೆ ಸಾವನ್ನಪ್ಪಿದ್ದಾನೆ. ನಮ್ಮ ಪೊಲೀಸರು ಆ ವ್ಯಕ್ತಿಯ ಮೇಲೆ ಹಲ್ಲೆ ಮಾಡಿಲ್ಲ ಎಂದು ತಿಳಿಸಿದ್ದಾರೆ.

    ಲಾಠಿಚಾರ್ಜ್:
    ಪೊಲೀಸರ ಮೇಲೆ ಕೂಗಾಟ, ತಳ್ಳಾಟ ಮಾಧ್ಯಮಗಳ ಮೇಲೂ ಹಲ್ಲೆಗೆ ಯತ್ನ ಮಾಡಿದ್ದಾರೆ. ಚಪ್ಪಾಳೆ ತಟ್ಟುವ ಮೂಲಕ ಪೊಲೀಸರ ಮೇಲೆ ಗಲಾಟೆ ಮಾಡುತ್ತಾ ಮಹಿಳಾ ಸಿಬ್ಬಂದಿ ಮೇಲೆ ಪ್ರತಿಭಟನಾಕಾರರು ಎಗರಿದ್ದಾರೆ. ಪ್ರತಿಭಟನಾಕಾರರನ್ನ ಚದುರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಅಟ್ಟಾಡಿಸಿಕೊಂಡು ಪೊಲೀಸರು ಲಾಠಿ ಬೀಸಿದ್ದಾರೆ. ರಸ್ತೆ ರಸ್ತೆಗಳಲ್ಲಿ ನುಗ್ಗಿ ಪೊಲೀಸ್ ಲಾಠಿ ಏಟು ಕೊಟ್ಟಿದ್ದಾರೆ. ಆದರೆ ಬಹುತೇಕರು ಓಡಿ ಎಸ್ಕೇಪ್ ಆಗಿದ್ದಾರೆ.