Tag: ಆರೋಪ

  • ಅತ್ಯಾಚಾರ ಆರೋಪ ಒಡ್ಡಿ 10 ಲಕ್ಷ ರೂ. ಬೇಡಿಕೆ ಇಟ್ಟ ಮಹಿಳೆ ಅರೆಸ್ಟ್

    ಅತ್ಯಾಚಾರ ಆರೋಪ ಒಡ್ಡಿ 10 ಲಕ್ಷ ರೂ. ಬೇಡಿಕೆ ಇಟ್ಟ ಮಹಿಳೆ ಅರೆಸ್ಟ್

    ಲಕ್ನೋ: ಅತ್ಯಾಚಾರ ಆರೋಪದ ಬೆದರಿಕೆ ಒಡ್ಡಿ 10 ಲಕ್ಷ ರೂ. ಬೇಡಿಕೆ ಇಟ್ಟಿದ್ದ ಮಹಿಳೆಯನ್ನು ಗ್ರೇಟರ್ ನೋಯ್ಡಾದಲ್ಲಿ ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ.

    ಸುರಜ್‍ಪುರ್ ಪೊಲೀಸ್ ಠಾಣೆ ವ್ಯಾಪ್ತಿಯ ಲಖ್ನಾವಳಿ ಗ್ರಾಮದ ಮಹಿಳೆ ಬಂಧಿತ ಆರೋಪಿ. ಸಂತ್ರಸ್ತ ವ್ಯಕ್ತಿ ಭಾನುವಾರ ಸುರಜ್‍ಪುರ್ ಠಾಣೆಯಲ್ಲಿ ದೂರು ದಾಖಲಿಸಿದ್ದ. ತನಿಖೆ ಆರಂಭಿಸಿದ್ದ ಪೊಲೀಸ್ ಆಕೆಯನ್ನು ಬಂಧಿಸಿದ್ದಾರೆ.

    ಏನಿದು ಪ್ರಕರಣ?:
    ಅತ್ಯಾಚಾರ ಆರೋಪದಡಿ ನಿನ್ನ ವಿರುದ್ಧ ಪೊಲೀಸರಿಗೆ ದೂರು ನೀಡುತ್ತೇನೆ ಎಂದು ಬಂಧಿತ ಮಹಿಳೆ ತನ್ನ ಸ್ನೇಹಿತನಿಗೆ ಬೆದರಿಕೆ ಹಾಕಿದ್ದಳು. ಇದಕ್ಕೆ ಹೆದರಿದ್ದ ವ್ಯಕ್ತಿಯಿಂದ ವಿವಿಧ ಸಂದರ್ಭದಲ್ಲಿ ಮಹಿಳೆಯು ಹಣ ವಸೂಲಿ ಮಾಡುತ್ತಿದ್ದಳು. ಕೆಲ ದಿನಗಳ ಹಿಂದೆ ಮತ್ತೆ 10 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

    ಮಹಿಳೆ ಕಳುಹಿಸಿದ್ದ ಮೆಸೇಜ್‍ಗಳನ್ನು ಸಂತ್ರಸ್ತ ವ್ಯಕ್ತಿ ಪೊಲೀಸರಿಗೆ ತೋರಿಸಿ, ಭಾನುವಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಹಿಳೆಯನ್ನು ಬಂಧಿಸಿ ವಿಚಾರಣೆ ನಡೆಸಿ, ಬಳಿಕ ಕೋರ್ಟ್ ಗೆ ಒಪ್ಪಿಸಿದ್ದಾರೆ. ಮಹಿಳೆ ವಿರುದ್ಧ ಐಪಿಸಿ ಸೆಕ್ಷನ್ 388 (ಬೆದರಿಕೆ ಆರೋಪ) ಮತ್ತು 506 (ಜೀವಬೆದರಿಕೆ) ಅಡಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನ್ಯಾಯ ಕೇಳಲು ಬಂದಿದ್ದ ಮಹಿಳೆಗೆ ಭ್ರಷ್ಟಾಚಾರದಿಂದ ವ್ಯವಸ್ಥೆ ಬೆತ್ತಲೆಯಾಗಿದೆ ನನ್ನಿಂದ ಆಗಲ್ಲ ಅಂದಿದ್ರು ಉಗ್ರಪ್ಪ!

    ನ್ಯಾಯ ಕೇಳಲು ಬಂದಿದ್ದ ಮಹಿಳೆಗೆ ಭ್ರಷ್ಟಾಚಾರದಿಂದ ವ್ಯವಸ್ಥೆ ಬೆತ್ತಲೆಯಾಗಿದೆ ನನ್ನಿಂದ ಆಗಲ್ಲ ಅಂದಿದ್ರು ಉಗ್ರಪ್ಪ!

    ಬಳ್ಳಾರಿ: ರಾಜ್ಯದ 5 ಕ್ಷೇತ್ರಗಳಲ್ಲಿ ಉಪಚುನಾವಣೆ ಪ್ರಚಾರ ಜೋರಾಗಿ ಸಾಗುತ್ತಿದೆ. ಈ ಬೆನ್ನಲ್ಲೇ ಬಳ್ಳಾರಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಶಿವಮೊಗ್ಗ ಮೂಲದ ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದು, ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಜೊತೆಗೆ ಬಿಜೆಪಿಯವರಿಗೆ ಮಹಿಳೆಯ ಆರೋಪ ಹೊಸ ಅಸ್ತ್ರವಾಗಿ ಪರಿಣಮಿಸಲಿದೆ.

    ಮಹಿಳೆಯೊಬ್ಬರು ಇಂದು ಸುದ್ದಿಗೋಷ್ಠಿ ಮೂಲಕ ಬಳ್ಳಾರಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಅವರ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ನನ್ನ ಮಗಳಿಗೆ ಆಗಿರುವ ಅನ್ಯಾಯದ ವಿರುದ್ಧ ಹೋರಾಡುವಾಗ, ನಮ್ಮ ವ್ಯವಸ್ಥೆ ಭ್ರಷ್ಟಾಚಾರದಿಂದ ಬೆತ್ತಲೆಯಾಗಿದೆ. ನೀವು ರಾಜಿ ಮಾಡಿಕೊಳ್ಳಿ ಎಂದು ಉಗ್ರಪ್ಪ ಅಂದು ಸಲಹೆ ನೀಡಿದ್ದರು ಎಂದು ಮಹಿಳೆ ದೂರಿದ್ದಾರೆ.

    ಏನಿದು ಪ್ರಕರಣ?:
    ನನ್ನ ಮಗಳ ಮೇಲೆ ಚಿಕ್ಕಪ್ಪನೇ ಲೈಂಗಿಕ ದೌರ್ಜನ್ಯ ನಡೆಸಿದ್ದ. ಆತನನ್ನು ಪೋಕ್ಸೋ ಕಾಯ್ದೆ ಅಡಿ ಪೊಲೀಸರು ಬಂಧಿಸಿದ್ದರು. ಆರೋಪಿ ಜೈಲಿನಿಂದ ಹೊರ ಬರಲು 9 ಬಾರಿ ಜಾಮೀನಿಗೆ ಬೇಡಿಕೆ ಇಟ್ಟಿದ್ದ. ಆದರೂ ಆತನಿಗೆ ಜಾಮೀನು ಸಿಕ್ಕಿರಲಿಲ್ಲ. ಪ್ರಕರಣದ ವಿಚಾರವಾಗಿ ನಾನು ಮಹಿಳಾ ಮತ್ತು ಮಕ್ಕಳ ದೌರ್ಜನ್ಯ ತಡೆ ಸಮಿತಿ ಅಧ್ಯಕ್ಷರಾಗಿರುವ ವಿ.ಎಸ್.ಉಗ್ರಪ್ಪ ಅವರನ್ನು 2016ರಲ್ಲಿ ಭೇಟಿ ಮಾಡಿದ್ದೆ. ಮೊದಲಿಗೆ ನನಗೆ ಸಹಾಯ ಮಾಡಿದರು. ಆದರೆ ನಂತರದಲ್ಲಿ ಸರಿಯಾದ ಮಾರ್ಗದರ್ಶನ ನೀಡಲೇ ಇಲ್ಲ ಎಂದು ಮಹಿಳೆ ಆರೋಪಿಸಿದರು.

    ನಂತರದ ದಿನಗಳಲ್ಲಿ ಏಕಾಂಗಿ ಹೋರಾಟ ನಡೆಸಿದ್ದೆ. ಒಂದು ದಿನ ಉಗ್ರಪ್ಪ ಅವರು ಬೆಳವಂಗಲ ಬಳಿ ಕರೆದುಕೊಂಡು ಹೋಗಿದ್ದರು. ಆಗ ಕೇಸ್ ವಾಪಸ್ ತೆಗೆದುಕೊಳ್ಳಿ ಅಂತ ಉಗ್ರಪ್ಪ ಬೇಡಿಕೆ ಇಟ್ಟರು. ಅಷ್ಟೇ ಅಲ್ಲದೆ ಹೈಕಮಾಂಡ್‍ನಿಂದ ಒತ್ತಡವಿದೆ. ನೀವು ಪ್ರಕರಣವನ್ನು ಹಿಂದಕ್ಕೆ ಪಡೆಯಲೇ ಬೇಕು. ನಮ್ಮ ವ್ಯವಸ್ಥೆ ಭ್ರಷ್ಟಾಚಾರದಿಂದ ಬೆತ್ತಲೆಯಾಗಿದೆ. ಈ ಪ್ರಕರಣದಲ್ಲಿ ಸಹಾಯ ಮಾಡಲು ಸಾಧ್ಯವಿಲ್ಲ. ನಾನು ಪೋಸ್ಟ್ ಮ್ಯಾನ್ ಅಷ್ಟೇ. ನಿಮ್ಮ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕೇಸ್ ವಾಪಸ್ ತೆಗೆದುಕೊಳ್ಳಿ ಎಂದು ಉಗ್ರಪ್ಪ ತಿಳಿಸಿದ್ದರು ಅಂತ ಮಹಿಳೆ ದೂರಿದರು.

    ನ್ಯಾಯಕ್ಕಾಗಿ ಕಳೆದ ಒಂದೂವರೆ ವರ್ಷದಿಂದ ನಾನು ಹೋರಾಟ ಮಾಡುತ್ತಿರುವೆ. ಈಗ ಮಾಧ್ಯಮಗಳ ಮುಂದೆ ನಿಂತಿರುವೆ. ನನಗೆ ನ್ಯಾಯ ಬೇಕು. ಒಂದು ಪುಟ್ಟ ಮಗುವಿಗೆ ನ್ಯಾಯ ಕೊಡಿಸಲು ಸಾಧ್ಯವಾಗದ ಉಗ್ರಪ್ಪನವರು ಹೇಡಿಯಂತೆ ನಡೆದುಕೊಂಡಿದ್ದಾರೆ. ಇಂತವರನ್ನ ಬಳ್ಳಾರಿಯಲ್ಲಿ ಚುನಾವಣೆಗೆ ನಿಲ್ಲಿಸಿದ್ದಾರೆ. ಬಳ್ಳಾರಿ ಮತದಾರರು ಇಂಥ ನಾಯಕರನ್ನು ಆಯ್ಕೆ ಮಾಡಿ ಕಳಿಸಬೇಕಾ ಅಂತ ಯೋಚನೆ ಮಾಡಲಿ ಎಂದು ಕಿಡಿಕಾರಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • 2ನೇ ಪತ್ನಿ ಮೇಲೆ ಹಲ್ಲೆ ಮಾಡಿದ್ದಕ್ಕೆ ಆತ್ಮಹತ್ಯೆ ಮಾಡಿಕೋ ಎಂದ ಪತಿ!

    2ನೇ ಪತ್ನಿ ಮೇಲೆ ಹಲ್ಲೆ ಮಾಡಿದ್ದಕ್ಕೆ ಆತ್ಮಹತ್ಯೆ ಮಾಡಿಕೋ ಎಂದ ಪತಿ!

    ಧಾರವಾಡ: 2ನೇ ಪತ್ನಿ ಮೇಲೆ ಹಲ್ಲೆ ಮಾಡಿದ್ದಕ್ಕೆ ಆತ್ಮಹತ್ಯೆ ಮಾಡು ಎಂದು ಪತಿ ನನಗೆ ಕಿರುಕುಳ ನೀಡುತ್ತಿದ್ದಾನೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ.

    ಧಾರವಾಡ ನಗರದ ಗಣೇಶನಗರದ ಅಲ್ಲಾವುದ್ದಿನ್ ಬಳೆಗಾರ ತನ್ನ ಮೊದಲನೇ ಪತ್ನಿ ಜಾಹಿದಾ ಮೇಲೆ ಹಲ್ಲೆ ಎಸಗಿದ ಆರೋಪ ಕೇಳಿ ಬಂದಿದೆ. ಜಾಹಿದಾ ಈ ಆರೋಪ ಮಾಡಿದ್ದು, ಸದ್ಯ ಆಕೆ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಪತಿ ಅಲ್ಲಾವುದ್ದಿನ್ ಎರಡನೇ ಪತ್ನಿಯನ್ನು ನಾನು ಬಿಡಬೇಕಾದರೆ 12 ಲಕ್ಷ ರೂ. ತರಲು ಒತ್ತಾಯ ಮಾಡುತ್ತಿದ್ದಾನೆ. ಅಷ್ಟೇ ಅಲ್ಲದೇ ನಾನು ಆತ್ಮಹತ್ಯೆ ಮಾಡಿಕೊಳ್ಳುವಂತೆ ಅಲ್ಲಾವುದ್ದಿನ್ ಎರಡು ದಿನಗಳಿಂದ ಒತ್ತಾಯ ಮಾಡುತ್ತಿದ್ದಾನೆ ಎಂದು ಜಾಹಿದಾ ಆರೋಪಿಸಿದ್ದಾರೆ.

    ಕಳೆದ 7 ವರ್ಷಗಳ ಹಿಂದೆ ಧಾರವಾಡ ನಗರದ ಮನಕಿಲ್ಲಾ ಬಡಾವಣೆಯ ಜಾಹಿದಾಳನ್ನು ಮದುವೆಯಾಗಿದ್ದ ಅಲ್ಲಾವುದಿನ್‍ಗೆ ಇಬ್ಬರು ಮಕ್ಕಳಿದ್ದಾರೆ. ಇವರಿಬ್ಬರ ನಡುವೆ ಸಂಸಾರ ಚೆನ್ನಾಗಿ ನಡೆಯದ ಕಾರಣ ಇವರಿಬ್ಬರು ಬೇರೆಯಾಗಿದ್ದರು.

    ಕಂಪ್ಯೂಟರ್ ಸೆಂಟರ್ ನಡೆಸುತ್ತಿದ್ದ ಅಲ್ಲಾವುದ್ದಿನ್ ಕಳೆದ ವಾರ ಮತ್ತೊಂದು ಮದುವೆಯಾಗಿದ್ದ. ಈ ಹಿನ್ನೆಲೆಯಲ್ಲಿ ಮೊದಲ ಪತ್ನಿ ಜಾಹಿದಾ ಪ್ರಶ್ನಿಸಿಲು ಹೋದಾಗ ಜಗಳ ಆರಂಭವಾಗಿ ಪತಿ, ಎರಡನೇ ಪತ್ನಿ ಜೊತೆ ಹೊಡೆದಾಟ ನಡೆದಿತ್ತು.

    ಈ ಘಟನೆ ನಂತರ ಹಿರಿಯರು ಮಧ್ಯಪ್ರವೇಶಿಸಿ ಪೊಲೀಸರ ಸಮ್ಮುಖದಲ್ಲಿ ಸಮಸ್ಯೆಯನ್ನು ಇತ್ಯರ್ಥಗೊಳಿಸಿದ್ದರು. ಆದರೆ ಈಗ ಮತ್ತೆ ಇವರ ನಡುವೆ ಜಗಳ ಆರಂಭವಾಗಿದ್ದು, ಈ ಜಗಳ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಮೆರಿಕದಿಂದ ಶೃತಿ ಹರಿಹರನ್‍ಗೆ ಹಣ ಸಂದಾಯ: ಪ್ರಮೋದ್ ಮುತಾಲಿಕ್

    ಅಮೆರಿಕದಿಂದ ಶೃತಿ ಹರಿಹರನ್‍ಗೆ ಹಣ ಸಂದಾಯ: ಪ್ರಮೋದ್ ಮುತಾಲಿಕ್

    ದಾವಣಗೆರೆ: ನಟ ಅರ್ಜುನ್ ಸರ್ಜಾ ಅವರ ಮೇಲಿನ ಮೀಟೂ ಆರೋಪವನ್ನು ನಾನು ಒಪ್ಪುವುದಿಲ್ಲ. ಅವರು ಲೈಂಗಿಕ ಕಿರುಕುಳ ಮಾಡುವಂತಹ ವ್ಯಕ್ತಿ ಅಲ್ಲ. ಅಮೆರಿಕದಿಂದ ಶೃತಿ ಹರಿಹರನ್ ಅವರಿಗೆ ಹಣ ಸಂದಾಯವಾಗಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗಂಭೀರ ಆರೋಪ ಮಾಡಿದ್ದಾರೆ.

    ನಗರದಲ್ಲಿ ಇಂದು ಮಾತನಾಡಿದ ಅವರು, ಮೀಟೂ ಅಭಿಯಾನ ಇಂದು ಶೋಷಿತ ಮಹಿಳೆಯರಿಗೆ ಧ್ವನಿ ನೀಡಿದೆ. ಮೀಟೂ ಅಭಿಯಾನಕ್ಕೆ ನನ್ನ ಬೆಂಬಲವೂ ಇದೆ. ಆದರೆ ಇಂದು ನಟ ಅರ್ಜುನ್ ಸರ್ಜಾ ರಂತಹ ಸಭ್ಯರ ಮೇಲೆ ಶೃತಿ ಹರಿಹರನ್ ಅವರು ಆರೋಪ ಮಾಡಿರುವುದು ಕುತಂತ್ರದ ಭಾಗವಾಗಿದೆ ಎಂದರು.

    ಅರ್ಜುನ್ ಸರ್ಜಾರ ಅವರ ಹಿನ್ನೆಲೆ ನನಗೆ ಗೊತ್ತಿದೆ. ಅವರ ಚಟುವಟಿಕೆ ಹಾಗೂ ಸಮಾಜ ಮುಖಿ ಕಾರ್ಯಗಳನ್ನು ಗಮನಿಸಿದ ವೇಳೆ ಇದು ಸ್ಪಷ್ಟವಾಗುತ್ತದೆ. ಈಗಾಗಲೇ ಆರೋಪದ ಹಿಂದಿನ ಕುತಂತ್ರಗಳನ್ನು ಅರ್ಜುನ್ ಸರ್ಜಾ ಆಪ್ತ ಕಾರ್ಯದರ್ಶಿ ಪ್ರಶಾಂತ್ ಸಂಬರ್ಗಿ ಅವರು ತಿಳಿಸಿರುವಂತೆ ಅಮೆರಿಕದಿಂದ ಹಣ ಸಂದಾಯವಾಗಿವ ಆರೋಪ ಇದೆ. ಶೃತಿ ಅವರು ಬೇರೆಯವರ ಮಾತು ಕೇಳಿ ಅಥವಾ ಯಾವುದೋ ಆಮಿಷಕ್ಕೆ ಒಳಗಾಗಿ ಈ ರೀತಿ ಆರೋಪ ಮಾಡುವುದು ಸರಿಯಲ್ಲ. ಇಂದು ಶೃತಿ ಅವರಿಗೆ ಹಣ ಬರುತ್ತಿರುವುದು ನೂರಕ್ಕೆ ನೂರರಷ್ಟು ನಾನು ಒಪ್ಪುತ್ತೇನೆ. ನಮ್ಮ ಬೆಂಬಲ ಅರ್ಜುನ್ ಸರ್ಜಾ ಅವರಿಗೆ ಇರಲಿದೆ ಎಂದರು.

    ಇಂತಹ ಕುತಂತ್ರಗಳು ಹಿಂದು ಸಂಪ್ರದಾಯದ ಮೇಲೆ ನಡೆಯುತ್ತಿರುವ ದಾಳಿಗಳಾಗಿದ್ದು, ಶಬರಿಮಲೆಯಿಂದ ಹಿಡಿದು ದೇಶದಲ್ಲಿ ಪ್ರಮುಖವಾಗಿ ಹಿಂದು ಧರ್ಮ ಪರ ಗುರುತಿಸಿಕೊಂಡಿರುವ ವ್ಯಕ್ತಿಗಳ, ಹಿಂದೂ ಧರ್ಮ ಹಾಗೂ ಸಂಸ್ಕೃತಿಯ ಮೇಲೆ ವ್ಯವಸ್ಥಿತವಾಗಿ ಮಾಡುತ್ತಿರುವ ಆರೋಪ ಎಂದು ಗುಡುಗಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಚೇತನ್ ಫೈರ್ ಸಂಸ್ಥೆಯಿಂದ ಪ್ರಿಯಾಂಕ ಉಪೇಂದ್ರ ಎಕ್ಸಿಟ್!

    ಚೇತನ್ ಫೈರ್ ಸಂಸ್ಥೆಯಿಂದ ಪ್ರಿಯಾಂಕ ಉಪೇಂದ್ರ ಎಕ್ಸಿಟ್!

    ಬೆಂಗಳೂರು: ನಟ ಚೇತನ್ ಒಡೆತನದ ಫೈರ್ ಸಂಸ್ಥೆಯಲ್ಲಿ ಫೈರ್ ಆಗಿದೆ. ಸ್ಯಾಂಡಲ್‍ವುಡ್‍ನಲ್ಲಿ ಕಳೆದ ವಾರದಿಂದ ನಡೆಯುತ್ತಿರುವ ವಿವಾದದಿಂದಾಗಿ, ನಟಿ ಪ್ರಿಯಾಂಕ ಉಪೇಂದ್ರ ಅವರು ಚೇತನ್ ಒಡೆತನದ ಸಂಸ್ಥೆಗೆ ರಾಜೀನಾಮೆ ಕೊಡಲು ನಿರ್ಧರಿಸಿದ್ದಾರೆ.

    ಸಂಸ್ಥೆಯಲ್ಲಿ ಆಂತರಿಕ ಸಮಸ್ಯೆ ಉಂಟಾಗಿದ್ದು ಪ್ರಿಯಾಂಕ ಉಪೇಂದ್ರ ಜೊತೆ, ಹಲವು ಸದಸ್ಯರು ಸಂಸ್ಥೆಯಿಂದ ಹೊರಬರುವುದಕ್ಕೆ ನಿರ್ಧರಿಸಿದ್ದಾರೆ. ಜೊತೆಗೆ ನಟಿ ರೂಪಾ ಅಯ್ಯರ್ ರೇಖಾರಾಣಿ ಕೂಡ ಸಂಸ್ಥೆಯಿಂದ ಹೊರಬರುತ್ತಾರೆ ಅನ್ನುವ ಸುದ್ದಿ ಹಬ್ಬಿದೆ. ಮಹಿಳೆಯರ ಒಳಿತಿಗಾಗಿ ಹುಟ್ಟಿಕೊಂಡ ಫೈರ್ ಸಂಸ್ಥೆ ರಾಜಕೀಯ, ಜಾತಿಪರ ತಳುಕು ಹಾಕಿಕೊಂಡಿದೆ. ಹೀಗಾಗಿ ಪ್ರಿಯಾಂಕ ಉಪೇಂದ್ರ ಜೊತೆ, ಇತರೇ ಸದಸ್ಯರು ವಾಪಸ್ ಆಗೋಕೆ ನಿರ್ಧರಿಸಿದ್ದಾರೆ.

    ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಪ್ರಿಯಾಂಕ, ಹೆಣ್ಣು ಮಕ್ಕಳಿಗೆ ಆಗುತ್ತಿರುವ ದೌರ್ಜನ್ಯದ ವಿರುದ್ಧ ಧನಿ ಎತ್ತಲು ನಾವು ಈ ಸಂಸ್ಥೆಯನ್ನು ಶುರು ಮಾಡಿದ್ದೆವು. ಆದರೆ ಮುಂದಿನ ದಿನಗಳಲ್ಲಿ ಈ ಸಂಸ್ಥೆ ಬೇರೆ ರೂಪವನ್ನು ತಾಳುತ್ತಿವೆ. ಹೀಗಾಗಿ ನಾನು ಅಧ್ಯಕ್ಷೆಯಾಗಿ ಪೂರ್ತಿ ತನ್ನನ್ನು ತಾನು ತೊಡಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಷ್ಟೇ ಅಲ್ಲದೇ ಶೃತಿ ಹರಿಹರನ್ ಅವರು ಈ ಬಗ್ಗೆ ಫೇಸ್‍ಬುಕ್‍ನಲ್ಲಿ ಬರೆದು ಮಾರನೆ ದಿನವೇ ಪತ್ರಿಕಾಗೋಷ್ಠಿ ಕರೆದಿದ್ದಾರೆ. ನಾವು ಇಲ್ಲದ ವೇಳೆ ಪತ್ರಿಕಾಗೋಷ್ಠಿ ಮಾಡಿದ್ದಾರೆ ಇದು ನನಗೆ ಸರಿ ಅನ್ನಿಸುತ್ತಿಲ್ಲ. ಹೀಗಾಗಿ ನಾನು ರಾಜೀನಾಮೆ ಕೊಡಬೇಕೆಂದುಕೊಂಡಿದ್ದೇನೆ ಎಂದು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮೀಟೂ ಪ್ರಕರಣವನ್ನು ದಿಕ್ಕು ತಪ್ಪಿಸಲು ನನ್ನ ವಿರುದ್ಧ ಆರೋಪ: ಚೇತನ್

    ಮೀಟೂ ಪ್ರಕರಣವನ್ನು ದಿಕ್ಕು ತಪ್ಪಿಸಲು ನನ್ನ ವಿರುದ್ಧ ಆರೋಪ: ಚೇತನ್

    ಬೆಂಗಳೂರು: ನನಗೆ ಕೆಟ್ಟ ಹೆಸರು ತರಲು ನನ್ನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ನಟ ಚೇತನ್ ಹೇಳಿದ್ದಾರೆ.

    ಅರ್ಜುನ್ ಸರ್ಜಾ ವಿರುದ್ಧ ಸೇಡು ತೀರಿಸಿಕೊಳ್ಳಲು ಶೃತಿ ಹರಿಹರನ್ ಪರವಾಗಿ ಚೇತನ್ ಮತಾನಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಅವರು, ನ್ಯಾಯಕ್ಕಾಗಿ, ಸಮಾಜದ ಒಳಿತಿಗಾಗಿ ಮತ್ತು ಉತ್ತಮ ಚಿತ್ರರಂಗಕ್ಕಾಗಿ ಹೋರಾಡುವ ಚಳುವಳಿಯನ್ನು ನಿಲ್ಲಿಸುವ ಪ್ರಯತ್ನವನ್ನು ಕೆಲವರು ಮಾಡುತ್ತಿದ್ದಾರೆ. 10 ಲಕ್ಷ ರೂ. ಹಣವನ್ನ ಮುಂಗಡವಾಗಿ ಪಡೆದಿರುವ ವಿಚಾರವನ್ನ ಕೆಲವರು ಟ್ವಿಸ್ಟ್ ಮಾಡಿ ನನ್ನ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು. ಇದನ್ನು ಓದಿ: ಚೇತನ್ ಯಾರು – ಸಾರಾ ಗೋವಿಂದು ಗರಂ

    ಅರ್ಜುನ್ ಸರ್ಜಾ ಅವರು ನನಗೆ ಕೆಲ ವರ್ಷಗಳಿಂದ ಪರಿಚಯ. ಅವರ ಜೊತೆ ನಾನು ಪ್ರೇಮ ಬರಹ ಚಿತ್ರವನ್ನ ಮಾಡಲು ಒಪ್ಪಿಕೊಂಡಿದ್ದು ನಿಜ. ಈ ಚಿತ್ರದ ಸಂಬಂಧ ಫೋಟೋ ಸೆಶನ್, ಪ್ರೀ ಶೂಟ್ ಸಹ ನಡೆದಿತ್ತು. ಆದರೆ ಕಾರಣಾಂತರಗಳಿಂದ ಪ್ರೇಮ ಬರಹ ಸಿನಿಮಾವನ್ನ ನಾನು ಮಾಡಲಿಕ್ಕೆ ಆಗಲಿಲ್ಲ. ಅವತ್ತಿನಿಂದ ಇಲ್ಲಿಯವರೆಗೂ ಸರ್ಜಾ ಅವರ ಜೊತೆ ನಾನು ಸಂಪರ್ಕದಲ್ಲಿ ಇದ್ದೇನೆ. ಶೂಟಿಂಗ್ ಸಮಯದಲ್ಲಿ ಸರ್ಜಾ ಅವರು ಬಹಳ ಪ್ರೊಫೆಶನಲ್ ಆಗಿ ನಡೆದುಕೊಂಡಿದ್ದಾರೆ. ಅವರ ಕುಟುಂಬದವರು ಸಹ ನನ್ನ ಜೊತೆ ಒಳ್ಳೆಯ ರೀತಿಯಲ್ಲಿ ನಡೆದುಕೊಂಡಿದ್ದಾರೆ ಎಂದು ಹೇಳಿದರು. ಇದನ್ನು ಓದಿ:  ನನ್ನ ಜೊತೆ ಅರ್ಜುನ್ ಸರ್ಜಾ ಕೆಟ್ಟದಾಗಿ ನಡೆದುಕೊಂಡಿಲ್ಲ: ನಟಿ ತಾರಾ

    ಅರ್ಜುನ್ ಸರ್ಜಾ ಅವರು ನನಗೆ ಯಾವತ್ತೂ ಹಣವನ್ನು ಹಿಂದಿರುಗಿಸುವಂತೆ ಇಲ್ಲಿಯವರೆಗೆ ಕೇಳಲಿಲ್ಲ. ಆದರೆ ಮುಂಬರುವ ಸಿನಿಮಾದಲ್ಲಿ ನಾವಿಬ್ಬರು ಕೆಲಸ ಮಾಡಲು ನಿರ್ಧರಿಸಿದ್ದೇವೆ. ಮುಂಗಡ ಹಣವನ್ನು ತೆಗೆದುಕೊಂಡ ತಕ್ಷಣವೇ ಯಾರು ಸಿನಿಮಾ ಮಾಡಲು ರೆಡಿಯಾಗಿರಲ್ಲ. ಕೆಲವೊಮ್ಮೆ ಹಣ ಪಡೆದು 6 ತಿಂಗಳ ಬಳಿಕವೂ ಕೆಲಸ ಮಾಡುತ್ತಾರೆ ಎಂದರು.

    ಮೋದಿ ವಿರೋಧಿಗಳು ಮತ್ತು ಎಡಪಂಥೀಯರು ಸೇರಿ ಶೃತಿ ಹರಿಹರನ್ ಪರವಾಗಿ ಮಾತನಾಡುತ್ತಿದ್ದಾರೆ ಎನ್ನುವ ಆರೋಪಕ್ಕೆ, ನಾನು ಈ ವಿಚಾರದಲ್ಲಿ ರಾಜಕೀಯವಾಗಿ ಯಾವುದೇ ಕೆಲಸ ಮಾಡುತ್ತಿಲ್ಲ. ನಮ್ಮ ಸಂಘಟನೆಯಲ್ಲಿರುವ ವ್ಯಕ್ತಿಗಳೆಲ್ಲರಿಗೂ ಅವರದ್ದೇ ಆದ ಆಲೋಚನೆಗಳು ಮತ್ತು ಅಭಿಪ್ರಾಯಗಳು ಇರುತ್ತದೆ. ಆದರೆ ಎಲ್ಲರ ಗುರಿ ಸಮಾಜದಲ್ಲಿ ಉತ್ತಮ ಚಿತ್ರರಂಗವನ್ನು ಕಟ್ಟುವುದು ಮತ್ತು ಎಲ್ಲರ ಸಮಾನತೆಗಾಗಿ ಹೋರಾಟ ನಡೆಸುವುದು. ನಾವು ಕೇವಲ ಪುರುಷ ಪ್ರಧಾನ ವ್ಯವಸ್ಥೆ ವಿರುದ್ಧ, ಶೋಷಣೆಯ ವಿರುದ್ಧ ಮತ್ತು ನೊಂದವರ ಪರವಾಗಿ ಹೋರಾಟ ನಡೆಸುತ್ತೇವೆ. ಇದರಲ್ಲಿ ಸಮಸ್ಯೆ ಇದ್ದರೆ ನಮ್ಮ ಜೊತೆ ಚರ್ಚೆ ನಡೆಸಲಿ ಎಂದು ಚೇತನ್ ಹೇಳಿದರು.

    ನಟಿ ಶೃತಿ ವಿಚಾರಕ್ಕೆ ಬಂದರೆ, ನಮ್ಮ ಫೈರ್ ಸಂಸ್ಥೆಯಿಂದ ಅವರಿಗೆ ನಾವು ಕಾನೂನುಬದ್ಧ ಬೆಂಬಲವನ್ನ ಕೊಟ್ಟಿದ್ದೇವೆ. ಆದರೆ ಈ ಸಂಬಂಧ ನಾವು ಯಾವುದೇ ವಿಚಾರಣೆಯನ್ನ ನಡೆಸುತ್ತಿಲ್ಲ. ಕೇಸ್ ದಾಖಲಿಸುವುದು ಬಿಡುವುದು ಅವರ ತೀರ್ಮಾನ ಎಂದರು. ಇದನ್ನು ಓದಿ:  ಸರ್ಜಾ ವಿರುದ್ಧ ಸೇಡಿಗಾಗಿ ಶೃತಿ ಹರಿಹರನ್ ಪರ ನಿಂತ್ರಾ ನಟ ಚೇತನ್?

    ನನ್ನ ವಿರುದ್ಧ ಫಿಲಂ ಚೇಂಬರ್ ನಲ್ಲಿ ದೂರು ದಾಖಲಾಗಿದೆ ಎನ್ನುವ ಸುದ್ದಿಯನ್ನು ನಾನು ಕೇಳಲ್ಪಟ್ಟೆ. ಆದರೆ ಇದೂವರೆಗೂ ನನಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.  ಇದನ್ನು ಓದಿ:  ಶೃತಿ ಹರಿಹರನ್ #MeToo ಹಿಂದಿನ ಅಸಲಿ ಕಹಾನಿ ಬಿಚ್ಚಿಟ್ಟ ಭಾಮಾ ಹರೀಶ್

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://youtu.be/h6ZAuzr4cXg

    https://youtu.be/nOoBTT1xkpE

  • ಮುತ್ತಪ್ಪ ರೈಗೆ ಸಿಸಿಬಿಯಿಂದ ನೋಟಿಸ್

    ಮುತ್ತಪ್ಪ ರೈಗೆ ಸಿಸಿಬಿಯಿಂದ ನೋಟಿಸ್

    ಬೆಂಗಳೂರು: ಆಯುಧ ಪೂಜೆಯಂದು ಶಸ್ತಾಸ್ತ್ರಗಳನ್ನ ಇಟ್ಟು ಪೂಜೆ ಮಾಡಿದ್ದ ಜಯ ಕರ್ನಾಟಕ ಸಂಘಟನೆಯ ಮುಖ್ಯಸ್ಥ ಮುತ್ತಪ್ಪ ರೈ ಅವರಿಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

    ಇತ್ತೀಚಿಗಷ್ಟೆ ಸಿಸಿಬಿಯ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕಾರ ಮಾಡಿಕೊಂಡಿರುವ ಅಲೋಕ್ ಕುಮಾರ್ ಮುತ್ತಪ್ಪ ರೈ ಅವರಿಗೆ ನೋಟಿಸ್ ಕಳಿಸಿದ್ದಾರೆ. ಇಷ್ಟೊಂದು ಆಯುಧಗಳಿಗೆ ಸರ್ಕಾರದಿಂದ ಅನುಮತಿ ಇದೆಯೇ? ನಿಮ್ಮ ಮೇಲೆ ಏಕೆ ಕ್ರಮ ಕೈಗೊಳ್ಳಬಾರದು ಎಂದು ಪ್ರಶ್ನಿಸಿ ಸಿಸಿಬಿ ನೋಟಿಸ್ ಜಾರಿ ಮಾಡಿದೆ. ನೋಟಿಸ್ ಜಾರಿಯಾದ 24 ಗಂಟೆಯ ಒಳಗಡೆ ಮುತ್ತಪ್ಪ ರೈ ಸಿಸಿಬಿ ಮುಂದೆ ಹಾಜರಾಗಿ ವಿವರಣೆ ನೀಡಬೇಕಾಗುತ್ತದೆ.

    ಆಯುಧ ಪೂಜೆಯಂದು ಮುತ್ತಪ್ಪ ರೈ ಗನ್, ಪಿಸ್ತೂಲ್, ರಿವಾಲ್ವಾರ್, ಡ್ಯಾಗರ್ ಗೆ ಪೂಜೆ ಮಾಡಿದ್ದರು. ಶಸ್ತಾಸ್ತ್ರಗಳನ್ನ ಇಟ್ಟು ಪೂಜೆ ಮಾಡಿದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದನ್ನ ಕಂಡ ಜನರು ಪೊಲೀಸರಿಗೆ ಪ್ರಶ್ನೆಗಳ ಸುರಿಮಳೆ ಹರಿಸಿದ್ದರು. ಇದರ ಬೆನ್ನಲ್ಲೇ ಶಸ್ತ್ರಾಸ್ತ್ರ ಕಾಯ್ದೆಯ ಅಡಿಯಲ್ಲಿ ಸಿಸಿಬಿ ನೋಟಿಸ್ ಜಾರಿ ಮಾಡಿದೆ.

    1959ರ ಶಸ್ತ್ರಾಸ್ತ್ರ ಕಾಯ್ದೆಯ ಪ್ರಕಾರ ಯಾವುದೇ ಶಸ್ತ್ರಾಸ್ತ್ರಗಳನ್ನ ವ್ಯಕ್ತಿಗಳು ಹೊಂದಿರಬೇಕಾದರೇ ಪರವಾನಿಗೆ ಪಡೆದಿರಬೇಕು. ಪರವಾನಿಗೆ ಹೊಂದದೇ ಶಸ್ತ್ರಾಸ್ತ್ರಗಳನ್ನ ಹೊಂದಿದ್ದರೆ ಅದು ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಶಿಕ್ಷಾರ್ಹ ಅಪರಾಧವಾಗುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸ್ಯಾಂಡಲ್ ವುಡ್ ನಲ್ಲಿ ಮತ್ತೊಂದು #MeToo- ಅರ್ಜುನ್ ಸರ್ಜಾ ವಿರುದ್ಧ ಶೃತಿ ಹರಿಹರನ್ ಆರೋಪ

    ಸ್ಯಾಂಡಲ್ ವುಡ್ ನಲ್ಲಿ ಮತ್ತೊಂದು #MeToo- ಅರ್ಜುನ್ ಸರ್ಜಾ ವಿರುದ್ಧ ಶೃತಿ ಹರಿಹರನ್ ಆರೋಪ

    ಬೆಂಗಳೂರು: ನಟಿ ಸಂಜನಾ ಗಲ್ರಾಣಿ ಅವರ #MeToo ಆರೋಪದ ಬೆನ್ನಲ್ಲೇ ಇದೀಗ ಶೃತಿ ಹರಿಹರನ್ ಕೂಡ ಫೇಮಸ್ ನಟನ ವಿರುದ್ಧವೇ ಆರೋಪವೊಂದನ್ನು ಮಾಡಿದ್ದಾರೆ.

    ಹೌದು. ನಟಿ ಶೃತಿ ಹರಿಹರನ್ ಅವರು ನಟ ಅರ್ಜುನ್ ಸರ್ಜಾ ಅವರ ವಿರುದ್ಧ ಈ ಆರೋಪ ಎಸಗಿದ್ದಾರೆ. ಮ್ಯಾಗಜೀನ್‍ವೊಂದರ ಸಂದರ್ಶನದ ವೇಳೆ ನಟ ಅರ್ಜುನ್ ವಿರುದ್ಧ ಆರೋಪ ಮಾಡಿದ ಶೃತಿ ಹರಿಹರನ್, ವಿಸ್ಮಯ ಚಿತ್ರೀಕರಣದ ವೇಳೆ ತನ್ನ ಮೇಲಾದ ಲೈಂಗಿಕ ಕಿರುಕುಳವಾದ ಅನುಭವವನ್ನು ಬಿಚ್ಚಿದ್ದಾರೆ. ಇದನ್ನೂ ದಿನ:  50ಕ್ಕೂ ಹೆಚ್ಚು ಕಿಸ್ಸಿಂಗ್ ಸೀನ್ ಮಾಡಿಸಿದ್ರು- ಸ್ಯಾಂಡಲ್‍ವುಡ್ ನಿರ್ದೇಶಕನ ವಿರುದ್ಧ ಸಂಜನಾ #Metoo ಆರೋಪ

    ಆರೋಪವೇನು?:
    ಕಳೆದ ವರ್ಷ ‘ವಿಸ್ಮಯ’ ಅನ್ನೋ ಸಿನಿಮಾವೊಂದನ್ನು ನಾನು ಮಾಡಿದ್ದೆ. ಚಿತ್ರದಲ್ಲಿ ಅರ್ಜುನ್ ಅರ್ಜಾ ಅವರು ನನ್ನ ಸಹನಟನಾಗಿ ಅಭಿನಯಿಸಿದ್ದರು. ‘ವಿಸ್ಮಯ’ ಸಿನಿಮಾಕ್ಕೂ ಮೊದಲು ನಾನು ಹಲವು ಸಿನಿಮಾಗಳನ್ನು ಮಾಡಿದ್ದೇನೆ. ಹಲವು ನಟರ ಜೊತೆಯೂ ಅಭಿನಯಿಸಿದ್ದೇನೆ. ಇಂದಿಗೂ ನನಗೆ ಬೇರೆ ನಟರ ಜೊತೆ ನಟಿಸುವಾಗ ಯಾವ ತೊಂದರೆಗಳೂ ಆಗಿಲ್ಲ. ಚಿತ್ರೀಕರಣದ ಸಂದರ್ಭದಲ್ಲಿ ನಾವು ಪರಸ್ಪರ ಗೌರವದಿಂದಲೇ ನಡೆದುಕೊಳ್ಳುತ್ತಿದ್ದೇವು. ನಾಯಕ-ನಾಯಕಿಯ ನಡುವಿನ ಪ್ರಣಯದ ದೃಶ್ಯಗಳನ್ನು ಚಿತ್ರೀಕರಿಸುವ ಸಂದರ್ಭಗಳಲ್ಲಿಯೂ ಕಲಾವಿದರ ನಡುವೆ ಬಹುಸೂಕ್ಷ್ಮವಾದ ಒಂದು ಗಡಿ ರೇಖೆ ಇರುತ್ತದೆ. ಅದನ್ನು ಮೀರಿ ನಾವು ನಡೆದುಕೊಳ್ಳುತ್ತಿರಲಿಲ್ಲ. ಒಂದು ವೇಳೆ ಆ ರೇಖೆಯನ್ನು ದಾಟಿದ್ರೆ ಹೆಣ್ಣಿಗೆ ಇರುಸು ಮುರುಸು ಉಂಟಾಗಲು ಆರಂಭವಾಗುತ್ತದೆ. ‘ವಿಸ್ಮಯ’ ಚಿತ್ರದ ಶೂಟಿಂಗ್ ವೇಳೆ ಆಗಿದ್ದು ಇದೇ. ಚಿತ್ರೀಕರಣದ ವೇಳೆ ನಟ ಅರ್ಜುನ್ ಸರ್ಜಾ ಅವರು ಗಡಿರೇಖೆ ದಾಟಿದ್ದರು ಅಂತ ಅವರು ಘಟನೆಯ ಮೆಲುಕು ಹಾಕಿದ್ರು. ಇದನ್ನೂ ದಿನ:   #MeToo ಸುಳಿಯಲ್ಲಿ ಕೇಂದ್ರ ಸಚಿವ ಸದಾನಂದಗೌಡ!

    ಚಿತ್ರದಲ್ಲಿ ನಾನು ಅವರ ಹೆಂಡತಿಯಾಗಿ ನಟಿಸುತ್ತಿದ್ದೆ, ಅದರ ಪ್ರ್ಯಾಕ್ಟೀಸ್ ಮಾಡುತ್ತಿದ್ದೆವು. ಆಗ ಸರ್ಜಾ ‘ಇನ್ನೊಂಚೂರು ಹೀಗೆ ಪ್ರಾಕ್ಟೀಸ್ ಮಾಡಬಹುದಲ್ವಾ?’ ಅಂತ ಹೇಳಿ ಅವರು ನನ್ನನ್ನು ಜೋರಾಗಿ ತಬ್ಬಿಕೊಂಡರು. ಅವರ ಆ ಅಪ್ಪುಗೆಯಿಂದ ಒಮ್ಮೆಲೆ ನಾನು ತಬ್ಬಿಬ್ಬಾಗಿದ್ದು, ಆ ವರ್ತನೆ ತುಂಬಾನೇ ಅಸಹ್ಯವಾಗಿತ್ತು. ಇದರಿಂದ ನನಗೆ ಇರಿಸು ಮುರುಸು ಉಂಟಾಗಿದ್ದು, ಕೂಡಲೇ ನಿರ್ದೇಶಕರ ಬಳಿ ತೆರಳಿ ‘ಇನ್ನು ಮುಂದೆ ನಾನು ರಿಹರ್ಸಲ್ ಗೆ ಬರಲ್ಲ, ಬರೀ ಶೂಟಿಂಗ್ ಗಷ್ಟೇ ಕರೆಯಿರಿ’ ಅಂತ ಹೇಳಿ ಬಂದುಬಿಟ್ಟೆ. ಆ ಬಳಿಕ ನಾನು ಬರೀ ಶೂಟಿಂಗ್ ಗೆ ಮಾತ್ರ ಹೋಗಿ ಬರುತ್ತಿದ್ದೆ ಅಂತ ಶೃತಿ ಹೇಳಿದ್ರು. ಇದನ್ನೂ ದಿನ: #MeToo ಅಭಿಯಾನವನ್ನ ಕೆಲವರು ಪ್ರಚಾರಕ್ಕೆ ಬಳಸಿಕೊಳ್ತಿದ್ದಾರೆ: ನಟಿ ರಾಗಿಣಿ

    ಇಷ್ಟೆಲ್ಲಾ ಆದ್ರೂ ಅರ್ಜುನ್ ಸರ್ಜಾ ಮಾತ್ರ ವಿಚಲಿತನಾದಂತೆ ಕಾಣಲಿಲ್ಲ. ಯಾಕಂದ್ರೆ ಅದಾದ ಬಳಿಕ ಅವರು ನನ್ನ ಜೊತೆ ಮಾತನಾಡುವಾಗಲೂ ಬಳಸಿದ ಭಾಷೆ ಸಭ್ಯವಾಗಿರಲಿಲ್ಲ. ಪದೇ ಪದೇ ಡಿನ್ನರ್ ಗೆ ಕರೆಯುತ್ತಿದ್ದರು. ‘ರೆಸಾರ್ಟ್ ಗೆ ಹೋಗೋಣ ಬಾ’ ಎಂದು ಕರೆಯಲು ಆರಂಭಿಸಿದ್ರು. ಹೀಗೆ ಕರೆಯುವಾಗ ನಾನು ನೇರವಾಗಿ ‘ಇಲ್ಲ, ನಾನು ಬರಲ್ಲ’ ಅಂತ ಹೇಳುತ್ತಿದ್ದೆನು. ನನ್ನ ಈ ಮಾತುಗಳನ್ನೂ ಅವರು ಗಂಭೀರವಾಗಿ ತೆಗೆದುಕೊಳ್ಳುತ್ತಿರಲಿಲ್ಲ. ‘ನೋ ಅಂದ್ರೆ ನೋ’ ಎಂಬುದರ ಅರ್ಥವೇ ಅವರಿಗೆ ಆಗುತ್ತಿಲ್ಲವಲ್ಲ ಅಂತ ನನಗೆ ನಿಜವಾಗಿಯೂ ಅಚ್ಚರಿಯಾಗುತ್ತಿತ್ತು. ಯಾಕಂದ್ರೆ ಅವರಿಗೆ ಹೀಗೆ ಕರೆದಾಗ ಯಾರೂ `ನೋ’ ಅಂತ ಹೇಳಿರಲಿಲ್ಲವೋ ಏನೋ, ಅದಕ್ಕೆ ಅವರು ನನ್ನ ನೇರ ಮಾತುಗಳನ್ನು ಕಡೆಗಣಿಸುತ್ತಿದ್ದರು ಅಂತ ಅವರು ತನಗಾದ ಅನುಭವವನ್ನು ಬಿಚ್ಚಿಟ್ಟರು. ಇದನ್ನೂ ದಿನ:  #MeToo ಅಭಿಯಾನ – ರವಿಚಂದ್ರನ್ ಬಗ್ಗೆ ಸತ್ಯ ಬಿಚ್ಚಿಟ್ಟ ಖುಷ್ಬೂ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮರ್ಮಾಂಗವನ್ನ ಕತ್ತರಿಸಿಕೊಂಡು ಆಸ್ಪತ್ರೆಗೆ ದಾಖಲಾದ ಸಾಧು!

    ಮರ್ಮಾಂಗವನ್ನ ಕತ್ತರಿಸಿಕೊಂಡು ಆಸ್ಪತ್ರೆಗೆ ದಾಖಲಾದ ಸಾಧು!

    ಲಕ್ನೋ: 45 ವರ್ಷದ ಸಾಧು ಒಬ್ಬರು ಬ್ಲೇಡ್‍ನಿಂದ ತಮ್ಮ ಮರ್ಮಾಂಗವನ್ನು ಕತ್ತರಿಸಿಕೊಂಡಿರುವ ವಿಚಿತ್ರ ಘಟನೆ ಉತ್ತರ ಪ್ರದೇಶ ರಾಜ್ಯದ ಬಾಂದಾ ಜಿಲ್ಲೆಯ ಕಾಮಸಿನ್ ನಗರದಲ್ಲಿ ನಡೆದಿದೆ.

    ಮದನಿ ಬಾಬಾ ಮರ್ಮಾಂಗ ಕತ್ತರಿಸಿಕೊಂಡ ಸಾಧು. ಮದನಿ ಬಾಬಾ ಕಳೆದ ಹಲವು ವರ್ಷಗಳಿಂದ ಕಾಮಸಿನ್ ನಗರದ ಸರ್ಕಾರಿ ನಿವೇಶನದಲ್ಲಿ ಗುಡಿಸಲು ಹಾಕಿಕೊಂಡು ಜೀವನ ನಡೆಸುತ್ತಿದ್ದರು. ಗುರುವಾರ ನಗರದ ಕೆಲ ಮಹಿಳೆಯರು ಸಾಧು ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ. ಆರೋಪದಿಂದ ಮನನೊಂದು ಸಾಧು ರಾತ್ರಿ ಬ್ಲೇಡ್ ನಿಂದ ಮರ್ಮಾಂಗವನ್ನು ಕತ್ತರಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ರೇಪಿಸ್ಟ್ ಕಾಮಿ ಸ್ವಾಮೀಜಿಯ ಮರ್ಮಾಂಗವನ್ನೇ ಕಟ್ ಮಾಡಿದ್ಳು ಯುವತಿ!

    ಮದನಿ ಬಾಬಾರನ್ನ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ದೇಹದಿಂದ ಮರ್ಮಾಂಗ ಶೇ.80 ರಷ್ಟು ಬೇರೆಯಾಗಿದೆ. ಸದ್ಯ ಸಾಧು ಅವರ ಆರೋಗ್ಯ ಗಂಭೀರವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಗೆ ಸಂಬಂಧಿಸಿದಂತೆ ಸಾಧು ಮದನಿ ಬಾಬಾರಿಗೆ ಮಾನಸಿಕವಾಗಿ ಕಿರುಕುಳ ನೀಡಿದ ಆರೋಪದ ಮೇರೆಗೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ:  ಯುವತಿ ಅಲ್ಲ, ನನ್ನ ಮರ್ಮಾಂಗವನ್ನು ನಾನೇ ಕತ್ತರಿಸಿದೆ: ಕಾಮಿ ಸ್ವಾಮೀಜಿ 

    2017ರಲ್ಲಿ ರಾಜಸ್ಥಾನದ 30 ವರ್ಷದ ಸ್ವಯಂಘೋಷಿತ ದೇವಮಾನವ ಸಂತೋಷ್ ದಾಸ್ ಅಕ್ರಮ ಸಂಬಂಧದ ಆರೋಪಕ್ಕೆ ಮನನೊಂದು ಮರ್ಮಾಂಗವನ್ನು ಕಟ್ ಮಾಡಿಕೊಂಡಿದ್ದ ಘಟನೆ ನಡೆದಿತ್ತು. ಕೇರಳದಲ್ಲಿ 23 ವರ್ಷದ ಕಾನೂನು ವಿದ್ಯಾರ್ಥಿನಿಯ ಆತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶ್ರೀ ಹರಿ ಅಲಿಯಾಸ್ ಗಣೇಶಾನಂದ ತೀರ್ಥಪಾದ ಸ್ವಾಮಿ ಮರ್ಮಾಂಗ ಕತ್ತರಿಸಿಕೊಂಡಿದ್ದ ಪ್ರಕರಣ ದೇಶಾದ್ಯಂತ ಸದ್ದು ಮಾಡಿತ್ತು. ಇದನ್ನೂ ಓದಿ: ಅಕ್ರಮ ಸಂಬಂಧ ಆರೋಪಕ್ಕೆ ಮನನೊಂದು ಸ್ವಾಮೀಜಿ `ಅದನ್ನೇ’ ಕಟ್ ಮಾಡ್ಕೊಂಡ!

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಗಂಡನನ್ನು ಬಿಡಿಸಲು ಲಂಚ ಕೇಳಿದ್ದರಂತೆ ಪೊಲೀಸರು

    ಗಂಡನನ್ನು ಬಿಡಿಸಲು ಲಂಚ ಕೇಳಿದ್ದರಂತೆ ಪೊಲೀಸರು

    ಬೆಂಗಳೂರು: ವಿಚಾರಣೆಗೆಂದು ನನ್ನ ಗಂಡನನ್ನ ಠಾಣೆಗೆ ಕರೆಸಿ ಏಕಾಏಕಿ ಬಂಧಿಸಿಟ್ಟು, ಈಗ ಆತನನ್ನು ಬಿಡುಗಡೆಗೊಳಿಸಲು ಪೊಲೀಸರು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಸಂತ್ರಸ್ತ ಮಹಿಳೆಯೊಬ್ಬರು ಗಂಭೀರ ಆರೋಪ ಮಾಡುತ್ತಿದ್ದಾರೆ.

    ಬೆಂಗಳೂರು ಹೊರವಲಯ ಬಾಗಲಗುಂಟೆ ಪೊಲೀಸರ ವಿರುದ್ಧ ಈ ಆರೋಪ ಕೇಳಿ ಬಂದಿದ್ದು, ಕಳೆದ ಮೂರು ದಿನಗಳ ಹಿಂದೆ ನಿಮ್ಮ ಮೇಲೆ ದೂರು ಬಂದಿದೆ ವಿಚಾರಣೆ ನಡೆಸಬೇಕು ಎಂದು ಸಂತ್ರಸ್ತೆ ಲಕ್ಷ್ಮೀಯ ಗಂಡ ಮಂಜುನಾಥ್ ಎಂಬವರನ್ನು ಪೊಲೀಸ್ ಠಾಣೆಗೆ ಕರೆಸಿದ್ದರಂತೆ. ವಿಚಾರಣೆಯ ನೆಪವೊಡ್ಡಿ ಬಂಧಿಸಿದ್ದಾರೆ ಎನ್ನಲಾಗಿದೆ. ಈ ಕುರಿತು ಮರುದಿನ ಪೊಲೀಸ್ ಠಾಣೆಯಲ್ಲಿ ವಿಚಾರಿಸಿದಾಗ ನಿನ್ನ ಗಂಡನನ್ನು ಕಳುಹಿಸಬೇಕೆಂದರೆ ಬರೋಬ್ಬರಿ 25,000 ಹಣ ಕೇಳಿದರಂತೆ ಇಲ್ಲ ಅಂದದಕ್ಕೆ, ಎಷ್ಟಾಗುತ್ತೋ ಅಷ್ಟು ಕೊಟ್ಟು, ಎಲ್ಲಾ ಸೆಟ್ಲು ಮಾಡಿಕೊಂಡು ಹೋಗಿ ಎನ್ನುವುದರೊಂದಿಗೆ, 5,000 ರೂ. ಹಣ ಕೊಡು ಎಂದು ಬೇಡಿಕೆ ಇಟ್ಟಿದ್ದರು ಎಂದು ಮಹಿಳೆ ಆರೋಪಿಸಿದ್ದಾರೆ.

    ಠಾಣೆಗೆ ಹೋದ ವೇಳೆ ಮಹಿಳೆ ಎನ್ನುವುದನ್ನು ನೋಡದೆ ಅವಾಚ್ಯ ಶಬ್ಧಗಳಿಂದ ನಿಂದಿನೆ ಮಾಡಿದ್ದಾರೆ. ಅಲ್ಲದೆ ಮೂರು ದಿನಗಳ ನಂತರ ಕೇಳಿದಾಗ, ನಿನ್ನ ಗಂಡನ ಮೇಲೆ ಎಫ್‍ಐಆರ್ ದಾಖಲಿಸಿಕೊಂಡು ಜೈಲಿಗೆ ಕಳಿಸಿದ್ದೇವೆ ಎಂದು ಹೇಳುತ್ತಾರೆ. ಮೂರು ದಿನಗಳಿಂದ ಗಂಡನನ್ನು ಕಾಣದ ಮಹಿಳೆ, ಪೊಲೀಸರು ತೋರಿರುವ ನಡೆಯಿಂದ ಬೇಸತ್ತು ನನ್ನ ಗಂಡನನ್ನು ಕೊಡಿಸಿ ಎಂದು ಅಂಗಲಾಚಿದ್ದಾರೆ.

    ಮಂಜುನಾಥನಿಗೆ ದೂರುದಾರೆ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಇತ್ತು ಎನ್ನಲಾಗಿದೆ. ಅವಳು ಈತನನ್ನು ಬಿಟ್ಟು ಮತ್ತೊಬ್ಬನ ಜೊತೆ ಸಂಸಾರ ಮಾಡುವುದಾಗಿ ತಿಳಿಸಿದ್ದು, ಈತ ಅದನ್ನು ನಿರಾಕರಿಸಿದ್ದಾನೆ. ಹೀಗಾಗಿ ದೂರುದಾರೆ ಮಹಿಳೆ ತನ್ನ ಮತ್ತೊಂದು ಹೊಸ ಸಂಬಂಧಕ್ಕೆ ಧಕ್ಕೆ ಉಂಟಾಗಬಾರದು ಎಂದು ಮಂಜುನಾಥನ ವಿರುದ್ಧ ದೂರು ನೀಡಿ ಠಾಣೆಗೆ ಕಳುಹಿಸಿದ್ದಾರೆ ಎನ್ನಲಾಗಿದೆ. ದೂರುದಾರೆ ದೂರು ನೀಡುವ ಮೊದಲು ಮಂಜುನಾಥನಿಗೆ ಫೋನ್ ಮಾಡಿ, ತನ್ನ ಮತ್ತೊಂದು ಸಂಬಂಧದ ಬಗ್ಗೆ ನಿವೇದನೆ ಮಾಡಿಕೊಂಡಿರುವ ಆಡಿಯೋ ಸಹ ಲಭಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv