Tag: ಆರೋಪ

  • ಸಿಎಂ ಆರೋಪ ಸಾಬೀತಾದ್ರೆ, ನನ್ನೆಲ್ಲಾ ಆಸ್ತಿಯನ್ನು ಕೊಡಗು ಸಂತ್ರಸ್ತರಿಗೆ ನೀಡ್ತೀನಿ: ಜಿಮ್ ಸೋಮ

    ಸಿಎಂ ಆರೋಪ ಸಾಬೀತಾದ್ರೆ, ನನ್ನೆಲ್ಲಾ ಆಸ್ತಿಯನ್ನು ಕೊಡಗು ಸಂತ್ರಸ್ತರಿಗೆ ನೀಡ್ತೀನಿ: ಜಿಮ್ ಸೋಮ

    ಹಾಸನ: ಸಿಎಂ ಕುಮಾರಸ್ವಾಮಿಯವರ ರಾಜ್ಯ ಸರ್ಕಾರವನ್ನು ಉರುಳಿಸಲು ಬಿಜೆಪಿ ಕೈಹಿಡಿದಿದ್ದೇನೆ ಎನ್ನುವ ಆರೋಪ ಸಾಬೀತಾದರೆ ನನ್ನ ಎಲ್ಲ ಆಸ್ತಿಯನ್ನು ಕೊಡಗು ಸಂತ್ರಸ್ತರಿಗೆ ನೀಡುತ್ತೇನೆ ಎಂದು ಜಿಮ್ ಸೋಮ ಅಲಿಯಾಸ್ ನಾರ್ವೆ ಸೋಮಶೇಖರ್ ಹೇಳಿದ್ದಾರೆ.

    ಅರಸೀಕೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಕುಮಾರಸ್ವಾಮಿಯವರ ಬಳಿಯೇ ಎಲ್ಲಾ ಇಲಾಖೆಗಳಿವೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಲಿ. ನಾನು ಅಕ್ರಮವಾಗಿ ಹಣ ಸಂಪಾದಿಸಿದ್ದರ ಬಗ್ಗೆ ಸಾಬೀತುಪಡಿಸಲಿ. ಸಾಬೀತಾದರೆ ನಾನು ರಾಜಕೀಯದಿಂದ ನಿವೃತ್ತಿಯಾಗುತ್ತೇನೆ. ಸುಖಾಸುಮ್ಮನೆ ನನ್ನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ. ಸರ್ಕಾರ ಬೀಳಿಸುವ ಯಾವುದೇ ಪ್ರಯತ್ನಕ್ಕೆ ನಾನು ಕೈ ಹಾಕುವುದು ಇಲ್ಲ, ಮುಂದೆಯೂ ಮಾಡಲ್ಲ ಕುಮಾರಸ್ವಾಮಿ ಬಳಿ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು.

    ಈಗಾಗಲೇ ಸಿಎಂ ಅವರಿಗೆ 48 ಗಂಟೆಗಳ ಕಾಲಾವಕಾಶವನ್ನು ನೀಡಿದ್ದೇನೆ. ಅವರು ಮಾಡಿರುವ ಆರೋಪ ಸಾಬೀತುಪಡಿಸದಿದ್ದರೆ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ. ಆರೋಪ ಸಾಬೀತಾದಲ್ಲಿ ನನ್ನ ಎಲ್ಲಾ ಆಸ್ತಿಯನ್ನು ಕೊಡಗು ಸಂತ್ರಸ್ತರಿಗೆ ನೀಡುತ್ತೇನೆ. ನನ್ನ ಈ ಮಾತಿಗೆ ನಾನು ಬದ್ಧನಾಗಿದ್ದೇನೆ. ಆಪರೇಷನ್ ಕಮಲದ ಬಗ್ಗೆ ನನಗೆ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

    ಅರಸೀಕೆರೆಯಲ್ಲಿ ನಡೆದ ಬಿಎಸ್‍ವೈ ಆಪ್ತ ಸಂತೋಷ್ ನಿಶ್ಚಿತಾರ್ಥದಲ್ಲಿ ಸಿ.ಪಿ ಯೋಗೇಶ್ವರ್, ಜಿಮ್ ಸೋಮ ಹಾಗೂ ಉದಯ್ ಗೌಡ ಭಾಗವಹಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಹೇಳಿದ್ದು 520, ವಿತರಣೆಯಾಗಿದ್ದು 257 – ಉಳಿದ ಸೀರೆ ಎಲ್ಲಿ ಹೋಯ್ತು: ಅಧಿಕಾರಿಗಳಿಗೆ ಮಹಿಳೆಯರಿಂದ ತರಾಟೆ

    ಹೇಳಿದ್ದು 520, ವಿತರಣೆಯಾಗಿದ್ದು 257 – ಉಳಿದ ಸೀರೆ ಎಲ್ಲಿ ಹೋಯ್ತು: ಅಧಿಕಾರಿಗಳಿಗೆ ಮಹಿಳೆಯರಿಂದ ತರಾಟೆ

    ದಾವಣಗೆರೆ: ರೇಷ್ಮೆ ಸೀರೆ ಅಂದರೆ ಯಾವ ಮಹಿಳೆಯರಿಗೆ ಇಷ್ಟವಾಗಲ್ಲ ಹೇಳಿ. ಅದರಲ್ಲೂ 15 ಸಾವಿರ ರೂ. ಮೌಲ್ಯದ ಸೀರೆ ಡಿಸ್ಕೌಂಟ್ ಬೆಲೆಯಲ್ಲಿ ಸಿಗುತ್ತೆ ಅಂದರೆ ನಾರಿಮಣಿಯರು ಸುಮ್ಮನಿರುತ್ತರಾ? ನಾ ಮುಂದು ತಾ ಮುಂದೆ ಅಂತ ಸೀರೆಗಾಗಿ ಮುಗಿ ಬೀಳುತ್ತಾರೆ. ಆದರೆ ಇಂದು ದಾವಣಗೆರೆಯಲ್ಲಿ ಡಿಸ್ಕೌಂಟ್ ಸೀರೆಗೆ ಮುಗಿಬಿದ್ದಿದ್ದ ಮಹಿಳೆಯರಿಗೆ ಸಿಕ್ಕಿದ್ದು ಮಾತ್ರ ನಿರಾಸೆ.

    ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ (ಕೆಎಸ್‍ಐಸಿ) ವತಿಯಿಂದ ವರಮಹಾಲಕ್ಷ್ಮಿ ಹಬ್ಬಕ್ಕೆ ಕಡಿಮೆ ಬೆಲೆಗೆ ಸೀರೆ ವಿತರಣೆ ಮಾಡಲಾಗುತಿತ್ತು. ದಾವಣಗೆರೆ ನಗರದ ರೋಟರಿ ಬಾಲ ಭವನದಲ್ಲಿ ರೇಷ್ಮೆ ಸೀರೆ ವಿತರಣೆ ಸಿದ್ಧತೆ ನಡೆಸಲಾಗಿತ್ತು. ಹೀಗಾಗಿ ನೂರಾರು ಮಂದಿ ಮಹಿಳೆಯರು ಸರತಿ ಸಾಲಿನಲ್ಲಿ ನಿಂತು ಕಾಯುತ್ತಿದ್ದರು. ಆದರೆ ಸರತಿ ಸಾಲಿನಲ್ಲಿ ನಿಂತರೂ ಸೀರೆ ಸಿಗದ ವೇಳೆ ಮಹಿಳೆಯರು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ. ಈ ವೇಳೆ ಪೊಲೀಸರು ಮಹಿಳೆಯರನ್ನು ನಿಯಂತ್ರಿಸಲು ಹರ ಸಾಹಸ ಪಟ್ಟಿದ್ದಾರೆ.

    ನಗರದಲ್ಲಿ 520 ಸೀರೆ ವಿತರಣೆ ಮಾಡುವುದಾಗಿ ಅಧಿಕಾರಿಗಳು ಹೇಳಿದ್ದರು. ಆದರೆ ಇದರಲ್ಲಿ ಕೇವಲ 257 ಸೀರೆ ಮಾತ್ರ ನೀಡಲಾಗಿದೆ. ಉಳಿದ ಸೀರೆಗಳು ಏನಾದವು ಎಂದು ಪ್ರಶ್ನೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಸಅಧಿಕಾರಿಗಳು ಅವುಗಳನ್ನು ಮಾರಾಟ ಮಾಡಿದ್ದಾರೆ ಎಂದು ಮಹಿಳೆಯರು ಆರೋಪ ಮಾಡಿದ್ದಾರೆ.

    ಸೀರೆ ಪಡೆಯಲು ಆಧಾರ್ ಕಾರ್ಡ್ ನೀಡಿ ನೋಂದಣಿ ಮಾಡಿಸಿಕೊಂಡವರಿಗೆ ಸೀರೆ ವಿತರಣೆಗೆ ಸಿದ್ಧತೆ ಮಾಡಲಾಗಿತ್ತು. ಜೊತೆಗೆ ನೋಂದಣಿ ಮಾಡಿದ ಮಹಿಳೆಯರಿಗೆ ಟೋಕನ್ ನೀಡಿ ಸೀರೆ ವಿತರಣೆ ಮಾಡಲು ವ್ಯವಸ್ಥೆ ಮಾಡಲಾಗಿತ್ತು. ಆದರೆ ಸೀರೆ ವಿತರಣೆಯಲ್ಲಿ ಲೋಪ ಮಾಡಲಾಗಿದೆ ಎಂಬ ಮಹಿಳೆಯರ ಆರೋಪ ಸುಳ್ಳು. ಅಧಿಕಾರಿಗಳು ನಮಗೆ ಕೇವಲ 257 ಸೀರೆಗಳನ್ನು ಮಾತ್ರ ವಿತರಣೆ ಮಾಡಲು ಸೂಚನೆ ನೀಡಿದ್ದಾರೆ. ಅದರಂತೆ ನಾವು ನೀಡಿದ್ದೇವೆ ಎಂದು ಕೆಎಸ್‍ಐಸಿ ವ್ಯವಸ್ಥಾಪಕ ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕ್ರಿಕೆಟ್ ದೇವರ ವಿರುದ್ಧವೂ ನಾಲಿಗೆ ಹರಿಬಿಟ್ಟ ಶ್ರೀರೆಡ್ಡಿ!

    ಕ್ರಿಕೆಟ್ ದೇವರ ವಿರುದ್ಧವೂ ನಾಲಿಗೆ ಹರಿಬಿಟ್ಟ ಶ್ರೀರೆಡ್ಡಿ!

    – ಹೈದ್ರಾಬಾದ್‍ನಲ್ಲಿ ಚಾರ್ಮಿಂಗ್ ಹುಡುಗಿ ಜೊತೆ ಸಚಿನ್ ರೊಮ್ಯಾನ್ಸ್ ಮಾಡಿದ್ರಂತೆ?

    ಹೈದರಾಬಾದ್: ಚಿತ್ರರಂಗದಲ್ಲಿ ನಡೆಯುತ್ತಿರುವ ಕಾಸ್ಟಿಂಗ್ ಕೌಚ್ ಬಗ್ಗೆ ನಡು ರಸ್ತೆಯಲ್ಲಿ ಬಟ್ಟೆಬಿಚ್ಚಿ ಪ್ರತಿಭಟನೆ ನಡೆಸಿದ್ದ ಟಾಲಿವುಡ್ ನಟಿ ಸದ್ಯ ಟೀಂ ಇಂಡಿಯಾ ಮಾಜಿ ನಾಯಕ ಸಚಿನ್ ತೆಂಡೂಲ್ಕರ್ ಅವರನ್ನು ಟಾರ್ಗೆಟ್ ಮಾಡಿ ಗಂಭೀರ ಆರೋಪ ಮಾಡಿದ್ದಾರೆ.

    ಈ ಕುರಿತು ತಮ್ಮ ಫೇಸ್‍ಬುಕ್‍ನಲ್ಲಿ ಶ್ರೀರೆಡ್ಡಿ ವಿವಾದಿತ ಸ್ಟೇಟಸ್ ಹಾಕಿದ್ದು, ಸಚಿನ್ ತೆಂಡೂಲ್ಕರ್ ಹೈದರಾಬಾದ್‍ಗೆ ಆಗಮಿಸಿದ ವೇಳೆ ಹುಡುಗಿ ಜೊತೆ ಸಚಿನ್ ರೊಮ್ಯಾನ್ಸ್ ಮಾಡುತ್ತಿದ್ದರು. ಅಲ್ಲದೇ ಹೈದರಾಬಾದ್‍ನಲ್ಲಿ ಹೈ ಪ್ರೊಫೈಲ್ ಹೊಂದಿರುವ ಚಾಮುಂಡೇಶ್ವರ್ ಸ್ವಾಮಿ ಅವರಿಗೆ ಮಧ್ಯವರ್ತಿಯಾಗಿದ್ದರು. ಖ್ಯಾತನಾಮ ಪಡೆದಿರುವವರು ರೊಮ್ಯಾನ್ಸ್ ಚೆನ್ನಾಗಿ ಮಾಡುತ್ತಾರೆ ಅಲ್ವಾ ಎಂದು ಪ್ರಶ್ನೆ ಮಾಡಿ ಎಂದು ಬರೆದುಕೊಂಡಿದ್ದಾರೆ.

    ಸದ್ಯ ಶ್ರೀರೆಡ್ಡಿಗೆ ಸ್ಟೇಟಸ್ ಗೆ ಕಿಡಿಕಾರಿದ ನೆಟ್ಟಿಗರು ದುರುದ್ದೇಶದಿಂದ ಬಿಟ್ಟಿ ಪ್ರಚಾರಕ್ಕಾಗಿ ಇಂತಹ ಸ್ಟೇಟಸ್ ಹಾಕಲಾಗುತ್ತಿದೆ ಎಂದು ತರಾಟೆ ತೆಗೆದುಕೊಂಡಿದ್ದಾರೆ. ಈ ಹಿಂದೆಯೂ ಟಾಲಿವುಡ್, ಕಾಲಿವುಡ್ ಸೇರಿದಂತೆ ಹಲವು ಸಿನಿಮಾ ರಂಗಗಳ ಸ್ಟಾರ್ ನಟರು, ನಿರ್ದೇಶಕರು ಹಾಗೂ ಕಲಾವಿದರ ಕುರಿತು ಇಂತಹದ್ದೇ ಆರೋಪ ಮಾಡಿದ್ದ ಶ್ರೀ ರೆಡ್ಡಿ ಕೆಲ ಸಾಕ್ಷ್ಯಗಳನ್ನು ನೀಡಿದ್ದರು. ಆದರೆ ಸಚಿನ್‍ರ ಮೇಲಿನ ಆರೋಪಕ್ಕೆ ಯಾವುದೇ ರೀತಿಯ ಸಾಕ್ಷ್ಯವನ್ನು ನೀಡಿಲ್ಲ.

    ಕೆಲ ದಿನಗಳ ಹಿಂದೆಯಷ್ಟೇ ನಟ, ನಿದೇರ್ಶಕ, ನಿರ್ಮಾಪಕ, ಡಾನ್ಸ್ ಮಾಸ್ಟರ್ ರಾಘವ ಲಾರೆನ್ಸ್ ವಿರುದ್ಧವೂ ಆರೋಪ ಮಾಡಿದ್ದ ಶ್ರೀರೆಡ್ಡಿ ಫೋಟೋವೊಂದನ್ನು ಪೋಸ್ಟ್ ಮಾಡಿದ್ದರು. ಅಲ್ಲದೇ ಈ ಕುರಿತು ಪ್ರತಿಕ್ರಿಯೆ ನೀಡಿದ್ದ ನಿದೇರ್ಶಕ ಲಾರೆನ್ಸ್, ಹೆಣ್ಣು ಮಕ್ಕಳನ್ನು ಎಷ್ಟು ಗೌರವಿಸುತ್ತೆನೆ ಎಂಬುವುದಕ್ಕೆ ನಮ್ಮ ಅಮ್ಮನಿಗಾಗಿ ನಿರ್ಮಾಣ ಮಾಡಿರುವ ದೇವಾಲಯವೇ ಸಾಕ್ಷಿ. ಅಮ್ಮನಿಗೆ ನೀಡುವ ಗೌರವವನ್ನು ಎಲ್ಲಾ ಮಹಿಳೆಯರಿಗೂ ನೀಡುತ್ತೆನೆ ಎಂದು ಸ್ಪಷ್ಟನೆ ನೀಡಿದ್ದರು. ಉಳಿದಂತೆ ಬಿಗ್ ಸ್ಟಾರ್ ಗಳಾದ ರಾಣಾ ದಗ್ಗುಬಾಟಿ ಸಹೋದರ ಸೇರಿದಂತೆ ಹಲವರ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದರು. ಈ ವೇಳೆ ಕೆಲ ಸಹಕಲಾವಿದರು ಕೂಡ ಶ್ರೀರೆಡ್ಡಿಗೆ ವಿರುದ್ಧ ಪ್ರತ್ಯಾರೋಪಗಳನ್ನು ಮಾಡಿದ್ದರು.

    ಶ್ರೀರೆಡ್ಡಿ ಆರೋಪಕ್ಕೆ ಚಿತ್ರರಂಗ ಮಾತ್ರವಲ್ಲವೇ ಹಲವು ಅಭಿಮಾನಿಗಳು ಶಾಕ್‍ಗೆ ಒಳಗಾಗಿದ್ದು, ಇದುವರೆಗೂ ಶ್ರೀರೆಡ್ಡಿ ತನ್ನ ಆರೋಪದ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅಲ್ಲದೇ ಸಚಿನ್ ಕೂಡ ಈ ಕುರಿತು ಇದುವರೆಗೂ ಪ್ರತಿಕ್ರಿಯೆ ನೀಡಿಲ್ಲ. ಅದರೆ ಸದ್ಯ ಶ್ರೀರೆಡ್ಡಿ ಸದ್ಯ ತೆಂಡೂಲ್ಕರ್ ವಿರುದ್ಧ ಆರೋಪ ಮಾಡಿ ಸಚಿನ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

     ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಉಡುಪಿ ಪೊಲೀಸರು ಬಿಜೆಪಿಯ ಏಜೆಂಟರು- ಜಿಲ್ಲಾ ಕಾಂಗ್ರೆಸ್ ಆರೋಪ

    ಉಡುಪಿ ಪೊಲೀಸರು ಬಿಜೆಪಿಯ ಏಜೆಂಟರು- ಜಿಲ್ಲಾ ಕಾಂಗ್ರೆಸ್ ಆರೋಪ

    ಉಡುಪಿ: ಭಾರತ್ ಬಂದ್ ವೇಳೆ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಮೇಲೆ, ನಗರಸಭಾ ಸದಸ್ಯರ ಮೇಲೆ ಬಿಜೆಪಿ ಗೂಂಡಾಗಳು ಮತ್ತು ಪೊಲೀಸ್ ಅಧಿಕಾರಿಗಳು ದೌರ್ಜನ್ಯ ನಡೆಸಿದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್‍ನಿಂದ ಆರೋಪಿಸಿದೆ.

    ಈ ಘಟನೆಯಿಂದ ಕಾಂಗ್ರೆಸ್ ಪಕ್ಷ ಧೃತಿಗೆಟ್ಟಿಲ್ಲ. ಬಿಜೆಪಿಯವರ ಗೂಂಡಾಗಿರಿ ಮತ್ತು ಪೊಲೀಸ್ ಅಧಿಕಾರಿಗಳ ದೌರ್ಜನ್ಯ ಎದುರಿಸಲು ಕಾಂಗ್ರೆಸ್ ಸದಾ ಸಿದ್ದವಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಹೇಳಿದ್ದಾರೆ.

    ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿರುವ ಪ್ರಖ್ಯಾತ್ ಶೆಟ್ಟಿ, ಕಾಂಗ್ರೆಸ್ ಒಂದು ರಾಷ್ಟ್ರೀಯ ಪಕ್ಷವಾಗಿದ್ದು ಎಂದೂ ಕೂಡ ಹಿಂಸೆ ಪ್ರಚೋದನೆ ನೀಡುವ ಕೆಲಸ ಮಾಡಿದ ಉದಾಹರಣೆಗಳಿಲ್ಲ. ರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಏರಿಕೆ ವಿರುದ್ಧ ಭಾರತ್ ಬಂದ್ ಕರೆ ನೀಡಿದ್ದು, ಅದರ ಪ್ರಯುಕ್ತ ಜಿಲ್ಲೆಯಲ್ಲಿ ಕೂಡ ನಾಗರಿಕರಿಂದ ಉತ್ತಮವಾದ ಬೆಂಬಲ ವ್ಯಕ್ತವಾಗಿತ್ತು. ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಂದ್ ಗೆ ಬೆಂಬಲಿಸುವಂತೆ ಮನವಿ ಮಾಡಿದ ಹಿನ್ನಲೆಯಲ್ಲಿ ನಾಗರಿಕರು ಸಹಕರಿಸಿ ಸ್ವಯಂ ಪ್ರೇರಿತರಾಗಿ ಬಂದ್ ಮಾಡಿದ ವೇಳೆ ಬಿಜೆಪಿಗರು ಮಧ್ಯೆ ಬಂದು ಜನರನ್ನು ಕೆರಳಿಸುವ ಕೆಲಸ ಮಾಡಿರುವುದು ಅವರ ಹತಾಶೆ ಭಾವನೆಯನ್ನು ತೋರಿಸುತ್ತದೆ ಎಂದರು.

    ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದ ವೇಳೆ ಬಿಜೆಪಿಗರು ಹಲವು ಬಾರಿ ಬಂದ್ ನಡೆಸಿದ್ದಾರೆ. ಎಂದೂ ನಾವು ತಡೆದಿಲ್ಲ. ಯಾವುದೇ ಸಂದರ್ಭದಲ್ಲಿ ಕೂಡ ಕಾಂಗ್ರೆಸ್ ಪಕ್ಷ ವಿರೋಧ ವ್ಯಕ್ತಪಡಿಸಿಲ್ಲ. ಉದ್ದೇಶ ಪೂರ್ವಕವಾಗಿ ಗಲಭೆ ಸೃಷ್ಟಿಸುವ ನಿಟ್ಟಿನಲ್ಲಿ ಬಿಜೆಪಿಗರು ಮಧ್ಯ ಪ್ರವೇಶಿಸಿ ಬಂದ್ ಹಾಳು ಮಾಡುವ ಪ್ರಯತ್ನ ಮಾಡಿದ್ದಾರೆ ಎಂದು ದೂರಿದರು. ಈ ಸಮಯದಲ್ಲಿ ರಕ್ಷಣೆ ನೀಡಬೇಕಾಗಿದ್ದ ಪೋಲಿಸರು ಕೂಡ ಬಿಜೆಪಿ ಪಕ್ಷದ ಏಜೆಂಟರಂತೆ ವರ್ತಿಸಿರುವುದು ಖಂಡನೀಯ ಎಂದು ಹೇಳಿದರು.

    ಪ್ರತಿಭಟನೆಯ ವೇಳೆ ಶಾಂತಿ, ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಉಡುಪಿ ಪೋಲಿಸರು ಸಂಪೂರ್ಣ ವಿಫಲರಾಗಿದ್ದು, ಅವರುಗಳ ದೌರ್ಜನ್ಯವನ್ನು ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತದೆ. ಕಾಂಗ್ರೆಸ್ ಪಕ್ಷ ಇಂತಹ ಘಟನೆಯಿಂದ ಧೃತಿಗೆಟ್ಟಿಲ್ಲ ಬದಲಾಗಿ ಮುಂದೆಯೂ ಕೂಡ ಬಿಜೆಪಿಗರ ಗೂಂಡಾಗಿರಿಗೆ ಮತ್ತು ಪೋಲಿಸರ ದೌರ್ಜನ್ಯಕ್ಕೆ ಸೂಕ್ತ ಉತ್ತರ ನೀಡಲು ಶಕ್ತರಿದ್ದೇವೆ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಪೆಂಡಿಕ್ಸ್ ಇಲ್ಲದಿದ್ರೂ ಹಣದ ಆಸೆಗೆ ಆಪರೇಷನ್- ಮಿಮ್ಸ್ ವೈದ್ಯರ ವಿರುದ್ಧ ಗಂಭೀರ ಆರೋಪ

    ಅಪೆಂಡಿಕ್ಸ್ ಇಲ್ಲದಿದ್ರೂ ಹಣದ ಆಸೆಗೆ ಆಪರೇಷನ್- ಮಿಮ್ಸ್ ವೈದ್ಯರ ವಿರುದ್ಧ ಗಂಭೀರ ಆರೋಪ

    ಮಂಡ್ಯ: ಅಪೆಂಡಿಕ್ಸ್ ಇಲ್ಲದಿದ್ದರೂ ಹಣದಾಸೆಯಿಂದ ಮಂಡ್ಯ ಮಿಮ್ಸ್ ಆಸ್ಪತ್ರೆ ವೈದ್ಯ ಗೋಪಾಲಕೃಷ್ಣ ಆಪರೇಷನ್ ಮಾಡಲು ಮುಂದಾಗಿದ್ದಾರೆ ಎಂದು ಆರ್‌ಟಿಐ ಕಾರ್ಯಕರ್ತ ಕೇಶವಮೂರ್ತಿ ವೈದ್ಯರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನಗೆ ಅಪೆಂಡಿಕ್ಸ್ ಇಲ್ಲದಿದ್ದರೂ ವೈದ್ಯರು ಆಪರೇಷನ್ ಮಾಡಲು ಮುಂದಾಗಿದ್ದಾರೆ. ಅದ್ದರಿಂದ ಅವರು ಮಾಧ್ಯಮ ಮುಂದೆಯೇ ಬಹಿರಂಗವಾಗಿ ಆಪರೇಷನ್ ಮಾಡಲಿ ಎಂದು ಸವಾಲು ಹಾಕಿದ್ದಾರೆ.

    ಡಾಕ್ಟರ್ ಗೋಪಾಲಕೃಷ್ಣ ಅವರ ಬಳಿ ಯಾರೇ ಹೊಟ್ಟೆನೋವು ಎಂದು ಹೇಳಿಕೊಂಡು ಹೋದರೂ ಅವರಿಗೆ ಅಪೆಂಡಿಕ್ಸ್ ಇದೆ ಎಂದು ಹಣ ಕೇಳುತ್ತಾರೆ ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ಪರೀಕ್ಷಿಸುವ ಸಲುವಾಗಿ ನಾನು ಅವರ ಬಳಿ ಸುಳ್ಳು ಹೇಳಿಕೊಂಡು ಹೊಟ್ಟೆ ನೋವು ಎಂದು ಹೋಗಿದ್ದೆ. ನನ್ನನ್ನು ಖಾಸಗಿ ಸ್ಕ್ಯಾನಿಂಗ್ ಸೆಂಟರ್‍ನಲ್ಲಿ ತಪಾಸಣೆ ಮಾಡಿಸಿ, ನಿಮಗೆ ಅಪೆಂಡಿಕ್ಸ್ ಇದೆ ಎಂದು ಸುಳ್ಳು ಹೇಳಿ ಆಪರೇಷನ್ ಮಾಡಲು 5 ಸಾವಿರ ಖರ್ಚಾಗುತ್ತೆ ಎಂದು ಡಾಕ್ಟರ್ ಗೋಪಾಲಕೃಷ್ಣ ಹೇಳಿದ್ದರು. ಅಷ್ಟೇ ಅಲ್ಲದೇ ನನ್ನ ಬಳಿ ಒಂದೂವರೆ ಸಾವಿರ ಹಣ ಮುಂಗಡ ಪಡೆದು, ಆಪರೇಷನ್ ಮಾಡುವ ದಿನ ಉಳಿದ ಮೂರೂವರೆ ಸಾವಿರ ಹಣ ನೀಡುವಂತೆ ಹೇಳಿದ್ದಾರೆ ಎಂದು ಕೇಶವಮೂರ್ತಿ ಆರೋಪ ಮಾಡಿದ್ದಾರೆ.

    ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಪರೀಕ್ಷೆ ನಡೆಸಲು ಸೌಲಭ್ಯವಿದ್ದರೂ ರೋಗಿಗಳನ್ನು ಖಾಸಗಿ ಸ್ಕ್ಯಾನಿಂಗ್ ಸೆಂಟರ್‍ಗೆ ಪರೀಕ್ಷೆ ಮಾಡಿಸಿಕೊಳ್ಳಲು ಕಳುಹಿಸುತ್ತಾರೆ. ಅಷ್ಟೇ ಅಲ್ಲದೇ ಡಾಕ್ಟರ್ ಗೋಪಾಲಕೃಷ್ಣ ಮತ್ತು ನಾನು ಅಪೆಂಡಿಕ್ಸ್ ಆಪರೇಷನ್ ಬಗ್ಗೆ ಮಾತನಾಡಿರುವುದು ಹಾಗೂ ನಾನು ಅವರಿಗೆ ದುಡ್ಡು ಕೊಟ್ಟಿರುವುದನ್ನು ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದೇನೆ. ಈ ಬಗ್ಗೆ ದಾಖಲೆಗಳ ಸಮೇತ ಜಿಲ್ಲಾಧಿಕಾರಿ ಮಂಜುಶ್ರೀ, ಮಿಮ್ಸ್ ನಿರ್ದೇಶಕರಾದ ಪ್ರಕಾಶ್ ಹಾಗೂ ಉಸ್ತುವಾರಿ ಸಚಿವ ಪುಟ್ಟರಾಜು ಅವರಿಗೆ ದೂರು ಸಲ್ಲಿಸಿದ್ದೇನೆ ಎಂದು ತಿಳಿಸಿದರು.

    ಒಂದೊಮ್ಮೆ ನನಗೆ ಅಪೆಂಡಿಕ್ಸ್ ಇದ್ದರೆ ಮಾಧ್ಯಮದ ಎದುರು ಬಹಿರಂಗವಾಗಿ ಆಪರೇಷನ್ ಮಾಡಲಿ ಎಂದು ದೂರುದಾರ ಕೇಶವಮೂರ್ತಿ ತಿಳಿಸಿದ್ದಾರೆ. ಆದರೆ ಎಲ್ಲ ಆರೋಪಗಳನ್ನು ನಿರಾಕರಿಸಿರುವ ವೈದ್ಯ ಗೋಪಾಲಕೃಷ್ಣ, ನನ್ನ ಹೆಸರಿಗೆ ಕಪ್ಪು ಚುಕ್ಕೆ ತರುವ ಉದ್ದೇಶದಿಂದ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ದರ್ಶನ್ ಜೂನಿಯರ್ ಕಲಾವಿದನ ಮೇಲೆ ಹಲ್ಲೆ ಮಾಡಿಲ್ಲ: ನಿರ್ಮಾಪಕಿ ಶೈಲಜಾ ನಾಗ್

    ದರ್ಶನ್ ಜೂನಿಯರ್ ಕಲಾವಿದನ ಮೇಲೆ ಹಲ್ಲೆ ಮಾಡಿಲ್ಲ: ನಿರ್ಮಾಪಕಿ ಶೈಲಜಾ ನಾಗ್

    ಬೆಂಗಳೂರು: ‘ಯಜಮಾನ’ ಚಿತ್ರದ ಚಿತ್ರೀಕರಣದ ವೇಳೆ ಚಾಲೆಜಿಂಗ್ ಸ್ಟಾರ್ ದರ್ಶನ್ ಜೂನಿಯರ್ ಕಲಾವಿದನ ಮೇಲೆ ಹಲ್ಲೆ ನಡೆಸಿಲ್ಲ ಎಂದು ನಿರ್ಮಾಪಕಿ ಶೈಲಜಾ ನಾಗ್ ಹೇಳಿದ್ದಾರೆ.

    ಯಜಮಾನ ಸಿನಿಮಾ ಚಿತ್ರೀಕರಣದ ವೇಳೆ ಸಹ ಕಲಾವಿದ ಶಿವಶಂಕರ್ ಎಂಬವರು ಮೊಬೈಲ್‍ನಲ್ಲಿ ಸೆರೆಹಿಡಿಯುತ್ತಿದ್ದರು. ಈ ವೇಳೆ ಚಿತ್ರತಂಡ ಸಾಕಷ್ಟು ಬಾರಿ ಎಚ್ಚರಿಕೆ ನೀಡಿದರೂ ಶೂಟಿಂಗ್ ರೆಕಾರ್ಡ್ ಮಾಡಿದ್ದಕ್ಕೆ ದರ್ಶನ್ ಹೊಡೆದಿದ್ದಾರೆ ಎನ್ನುವ ವಿಚಾರಕ್ಕೆ ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ಅವರು, ನಾವು ಖಾಸಗಿ ಸ್ಟುಡಿಯೋವೊಂದರಲ್ಲಿ ಹಾಡಿನ ಚಿತ್ರೀಕರಣವೊಂದು ಮಾಡುತ್ತಿದ್ದೇವು. ಈ ಚಿತ್ರದ ಹಾಡಿಗಾಗಿ 450ಕ್ಕೂ ಹೆಚ್ಚು ನೃತ್ಯಗಾರರು ಹಾಗೂ ಸಹ ಕಲಾವಿದರು ಬಂದಿದ್ದಾರೆ. ಅದರಲ್ಲಿ ಒಬ್ಬ ಸಹ ಕಲಾವಿದ ಬೆಳಗ್ಗೆಯಿಂದ ಎರಡು ಬಾರಿ ಮೊಬೈಲ್‍ನಲ್ಲಿ ಚಿತ್ರೀಕರಣವನ್ನು ಸೆರೆಹಿಡಿದಿದ್ದ. ಹೀಗೆ ಸಹ ಕಲಾವಿದ ಮೊಬೈಲಿನಲ್ಲಿ ಚಿತ್ರೀಕರಿಸುವಾಗ ಚಿತ್ರತಂಡದಲ್ಲಿ ಆತನನ್ನು ಎಚ್ಚರಿಸಿದ್ದರು. ಈ ರೀತಿ ಮಾಡಬೇಡ ನಿನ್ನನ್ನು ಹಣ ನೀಡಿ ಅಭಿನಯಕ್ಕೆ ಕರೆಸಿಕೊಂಡಿದ್ದೇವೆ. ನೀನು ಈ ರೀತಿ ಮಾಡಬೇಡ ಎಂದು ಹೇಳಿದರೂ ಆತ ಪದೇ ಪದೇ ಈ ರೀತಿ ಮಾಡುತ್ತಿದ್ದನು ಎಂದು ವಿವರಿಸಿದರು.

    ಆ ಸಹ ಕಲಾವಿದನನ್ನು ಪದೇ ಪದೇ ಎಚ್ಚರಿಸಿದ್ದರೂ ಈ ರೀತಿ ಮಾಡಿದ್ದನ್ನು ನೋಡಿ ಗಂಭೀರವಾಗಿ ಆತನನ್ನು ಎಚ್ಚರಿಸಿದ್ದೇವು. ನಮ್ಮ ತಂಡದಲ್ಲಿ ಯಾರೇ ಇರಲಿ ನಾವು ಅವರನ್ನು ಮೊಬೈಲಿನಲ್ಲಿ ಚಿತ್ರೀಕರಿಸಬೇಡಿ ಎಂದು ಎಚ್ಚರಿಸುತ್ತೇವೆ. ಚಿತ್ರಮಂದಿರದಲ್ಲಿ ತೋರಿಸುವ ಸಲುವಾಗಿ ನಾವು ಹಾಡನ್ನು ಚಿತ್ರೀಕರಿಸುತ್ತಿದ್ದೇವೆ. ಆದರೆ ಸಹ ಕಲಾವಿದ ಈ ರೀತಿ ಮಾಡುವುದರಿಂದ ಎಲ್ಲರೂ ತಮ್ಮ ಮೊಬೈಲಿನಲ್ಲೇ ಹಾಡನ್ನು ನೋಡಿದರೆ, ನಾವು ಚಿತ್ರೀಕರಣ ಮಾಡುವುದು ಯಾವುದೇ ಉಪಯೋಗವಿರುದಿಲ್ಲ. ಹಾಗಾಗಿ ನಾವು ಅದನ್ನು ವಿರೋಧಿಸಿದ್ದೇವು. ಆತನನ್ನು ತಡೆದದ್ದೇ ತಪ್ಪು ಎಂದರೆ ಅದೇ ತಪ್ಪಾಗುತ್ತದೆ ಎಂದು ತಿಳಿಸಿದರು.

    ನಮ್ಮ ಚಿತ್ರತಂಡದಲ್ಲಿರುವ ಎಲ್ಲರೂ ಆತನನ್ನು ಎಚ್ಚರಿಸಿದ್ದರು. ಸ್ಟುಡಿಯೋಗೆ ಬಾಡಿಗೆ ಕಟ್ಟಿ, ಸೆಟ್ ಹಾಕಿ ಹಾಡಿನ ಚಿತ್ರೀಕರಣ ಮಾಡುವಾಗ ಆತ ನಮ್ಮದೇ ಚಿತ್ರವನ್ನು ಚಿತ್ರೀಕರಣ ಮಾಡಿದರೆ ನಾವು ಅದನ್ನು ಪ್ರಶ್ನಿಸಲೇ ಬೇಕಾಗುತ್ತದೆ. ಹಾಗಾಗಿ ಚಿತ್ರತಂಡದಲ್ಲಿರುವವರು ಎಲ್ಲರೂ ಆತನನ್ನು ಪ್ರಶ್ನಿಸಿದ್ದಾರೆ. ಸದ್ಯ ಈಗ ಯಾವುದೇ ಸಮಸ್ಯೆಯಿಲ್ಲದೇ ಚಿತ್ರದ ಹಾಡಿನ ಚಿತ್ರೀಕರಣ ನಡೆಯುತ್ತಿದೆ. ದರ್ಶನ್ ಅವರೇ ಈ ಹಾಡಿಗೆ ಡ್ಯಾನ್ಸ್ ಮಾಡುತ್ತಿದ್ದರು. ಈ ವೇಳೆ ದರ್ಶನ್ ಆ ಸಹ ಕಲಾವಿದನನ್ನು, “ಅಪ್ಪ, ನೀನು ಮೊಬೈಲ್ ಇಳಿಸು. ಎಲ್ಲರು ಬೆಳಗ್ಗೆಯಿಂದಲೂ ಎರಡು ಬಾರಿ ನಿನ್ನನ್ನು ಎಚ್ಚರಿಸುತ್ತಿದ್ದಾರೆ. ಈ ರೀತಿ ಮಾಡಬೇಡ” ಎಂದು ದರ್ಶನ್ ಹೇಳಿದರೆ ಹೊರತು ಆತನ ಮೇಲೆ ಹಲ್ಲೆ ಮಾಡಿಲ್ಲ ಎಂದು ಯಜಮಾನ ನಿರ್ಮಾಪಕಿ ಹಲ್ಲೆ ನಡೆದಿದೆ ಎನ್ನಲಾದ ಸುದ್ದಿಗೆ ಸ್ಪಷ್ಟನೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಎಸ್‍ಪಿ ಡಿವೈಎಸ್‍ಪಿ ನಡುವೆ ಹಗ್ಗ-ಜಗ್ಗಾಟ..!

    ಎಸ್‍ಪಿ ಡಿವೈಎಸ್‍ಪಿ ನಡುವೆ ಹಗ್ಗ-ಜಗ್ಗಾಟ..!

    ಬೆಂಗಳೂರು: ಹಿರಿಯ ಅಧಿಕಾರಿಗಳು ಕಿರಿಯ ಅಧಿಕಾರಿಗಳಿಗೆ ಕಿರುಕುಳ ನೀಡಿರುವ ಪ್ರಕರಣಗಳನ್ನು ನೋಡಿರುತ್ತೇವೆ. ಆದರೆ ಮಹಿಳಾ ಎಸ್.ಪಿ ಒಬ್ಬರು ತನ್ನ ಕಿರಿಯ ಅಧಿಕಾರಿಗಳಿಗೆ ಚಿತ್ರಹಿಂಸೆ ನೀಡುತ್ತಿರು ಆರೋಪಕ್ಕೆ ಗುರಿಯಾಗಿದ್ದು, ವರ್ತನೆ ಖಂಡಿಸಿ ಎಸ್‍ಪಿ ಕಚೇರಿ ಮುಂದೆಯೇ ಡಿವೈಎಸ್‍ಪಿ ಪ್ರತಿಭಟನೆ ನಡೆಸಿದ್ದಾರೆ.

    ರೈಲ್ವೇ ಎಸ್.ಪಿ ಚೈತ್ರಾ ಅವರ ವಿರುದ್ಧ ಇಂತಹ ಆರೋಪ ಕೇಳಿ ಬರುತ್ತಿದ್ದು, ತಮ್ಮ ಕೆಳಹಂತದ ಅಧಿಕಾರಿಗಳಿಗೆ ಬಾಯಿಗೆ ಬಂದಂತೆ ಬೈಯುವುದು ಅಷ್ಟೇ ಅಲ್ಲದೆ, ಕುಟುಂಬದ ಸದಸ್ಯರನ್ನು ಅವಾಚ್ಯ ಪದಗಳಿಂದ ಬೈಯುತ್ತಾರೆ. ಅಷ್ಟೇ ಅಲ್ಲದೆ ಚೈತ್ರಾ ಅವರಿಗೆ ರಾಜಕೀಯ ಬೆಂಬಲ ಇದೆ ಅಂತಾ ಹೀಗೆ ವರ್ತಿಸುತ್ತಿದ್ದಾರೆ ಎನ್ನಲಾಗಿದೆ.

    ಚೈತ್ರಾ ಅವರ ನಡೆಯಿಂದಾಗಿ ಬೇಸತ್ತ, ರೈಲ್ವೇ ಡಿವೈಎಸ್‍ಪಿ ಶ್ರೀನಿವಾಸ್ ರೆಡ್ಡಿ ಎಸ್‍ಪಿ ಕೊಠಡಿ ಮುಂದೆ ಕುಳಿತು ಪ್ರತಿಭಟಿಸಿದ್ದಾರೆ. ರಜೆ ಕೇಳಿದರೆ ಸಕಾಲಕ್ಕೆ ಕೊಡುವುದಿಲ್ಲ. ಎಲ್ಲರಿಗೂ ಓಓಡಿ ಮಾಡುವಂತೆ ಹಿಂಸೆ ಕೊಡುತ್ತಾರೆ. ಮಾನಸಿಕವಾಗಿ ಕಿರುಕುಳ ಕೊಡುತ್ತಿದ್ದಾರೆ ಎಂದು ಶ್ರೀನಿವಾಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಚೈತ್ರಾ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಎಡಿಜಿಪಿ ಎನ್ ಶಿವಕುಮಾರ್ ಅವರಿಗೆ ಶ್ರೀನಿವಾಸ ರೆಡ್ಡಿ ಮೌಖಿಕವಾಗಿ ದೂರು ನೀಡಿದ್ದಾರೆ.

  • ನನಗೆ ಮಕ್ಕಳಿರೋದು ಸಾಬೀತಾದರೆ ಪೀಠ ತ್ಯಾಗ ಮಾಡುತ್ತೇನೆ: ಪೇಜಾವರ ಶ್ರೀ

    ನನಗೆ ಮಕ್ಕಳಿರೋದು ಸಾಬೀತಾದರೆ ಪೀಠ ತ್ಯಾಗ ಮಾಡುತ್ತೇನೆ: ಪೇಜಾವರ ಶ್ರೀ

    ಚೆನ್ನೈ: ನನ್ನ ವಿರುದ್ಧ ಶೀರೂರು ಶ್ರೀಗಳು ಮಾಡಿದ್ದಾರೆ ಎನ್ನಲಾದ ಆರೋಪ ಸಾಬೀತಾದರೆ ನಾನು ಪೀಠ ತ್ಯಾಗ ಮಾಡುತ್ತೇನೆ ಎಂದು ಪೇಜಾವರಶ್ರೀಗಳು ಹೇಳಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ನಾನು ಯಾವುದೇ ಪರೀಕ್ಷೆ ಅಥವಾ ವಿಚಾರಣೆ ಎದುರಿಸಲು ಸಿದ್ಧ ಎಂದು ಹೇಳಿದ್ದಾರೆ. ಶೀರೂರು ಶ್ರೀಗಳ ಸಾವಿನ ಬಳಿಕ ದಿನಕ್ಕೊಂದು ವಿಚಾರಗಳು ಬೆಳಕಿಗೆ ಬರುತ್ತಿದ್ದು, ಇದರಲ್ಲಿ ಪೇಜಾವರ ಶ್ರೀಗಳು ಹಣಕ್ಕಾಗಿ ಬೇಡಿಕೆಯಿಟ್ಟಿದ್ದಾರೆ ಎಂಬ ವಾಟ್ಸಪ್ ಆಡಿಯೋ ಕೂಡಾ ಬಹಿರಂಗವಾಗಿತ್ತು. ಈ ಹಿನ್ನೆಲೆಯಲ್ಲಿ ಸದ್ಯ ಪೇಜಾವರಶ್ರೀಗಳು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

    ಪೇಜಾವರ ಶ್ರೀಗಳ ಹೇಳಿಕೆಯಲ್ಲೇನಿದೆ..?: ಇಡೀ ಪ್ರಕರಣಕ್ಕೆ ಸಂಬಂಧಿಸಿದಂತೆ ಪೇಜಾವರ ಶ್ರೀಗಳು ಒಂದು ಪುಟದ ಹೇಳಿಕೆಯನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ. ಅದರ ಪೂರ್ಣ ರೂಪ ಇಂತಿದೆ.

    ಶೀರೂರು ಮಠದ ಗತಿಸಿದ ಶ್ರೀ ಲಕ್ಷ್ಮೀವರತೀರ್ಥರ ಆಪ್ತವರ್ಗವು ಬಹಿರಂಗಗೊಳಿಸಿದ ಆಡಿಯೋದಲ್ಲಿ ತಾರುಣ್ಯದಲ್ಲಿ ನನಗೆ ಸ್ತ್ರೀ ಸಂಗವಿತ್ತು. ಪದ್ಮಾ ಎಂಬ ಹೆಣ್ಣು ಮಗಳು ತಮಿಳುನಾಡಿನಲ್ಲಿದ್ದಾಳೆಂಬ ಶುದ್ಧ ಸುಳ್ಳು ಸಂಗತಿಯನ್ನು ಉಲ್ಲೇಖಿಸಲಾಗಿದೆ. ಡಿಸೆಂಬರ್‍ನಲ್ಲಿ ಇವರೇ ಕಳುಹಿಸಿರಬಹುದಾದ ಪತ್ರದಲ್ಲಿ ಅವನು ಗಂಡು ಮಗನೆಂದು ಅವನ ಕುಲನಾಮವನ್ನು ಉಲ್ಲೇಖಿಸಲಾಗಿದೆ. ಈ ವ್ಯತ್ಯಾಸದಿಂದ ಇದು ಕಲ್ಪನೆಯೆಂದು ಗೊತ್ತಾಗುತ್ತದೆ. ಇದನ್ನು ನಮ್ಮ ದೇಶದ ಯಾರೂ ನಂಬುವುದಿಲ್ಲವೆಂದು ನನಗೆ ಗೊತ್ತಿದೆ. ಈ ಬಗ್ಗೆ ಯಾವ ವಿಚಾರಣೆ ಹಾಗೂ ಪರೀಕ್ಷೆಯನ್ನು ಎದುರಿಸಲು ನಾನು ಸಿದ್ಧನಿದ್ದೇನೆ. ಇದು ಬರೇ ಸುಳ್ಳು ಆರೋಪ.

    ಇದನ್ನು ಸಿದ್ದಪಡಿಸಲು ಸಾಧ್ಯವೇ ಇಲ್ಲ. ಇದು ಸಿದ್ಧವಾದರೆ ನಾನು ತಕ್ಷಣ ಪೀಠ ತ್ಯಾಗ ಮಾಡುವೆನು. ಲಕ್ಷೀವರ ತೀರ್ಥರ ನಿಧನದ ನಂತರ ಅವರ ಅವ್ಯವಹಾರದ ಬಗ್ಗೆ ಹೇಳಿಕೆ ಸರಿಯಿಲ್ಲವೆಂದು ಕೆಲವರು ಆಕ್ಷೇಪಿಸಿದ್ದಾರೆ. ಲಕ್ಷೀವರತೀರ್ಥರಿಗೆ ವಿಠಲ ದೇವರನ್ನು ಯಾಕೆ ಕೊಟ್ಟಿಲ್ಲ? ಅವರ ಅಂತ್ಯದರ್ಶನಕ್ಕೆ ಯಾಕೆ ಹೋಗಿಲ್ಲ ಮುಂತಾದ ಪ್ರಶ್ನೆ, ಆಕ್ಷೇಪವನ್ನು ಮಾದ್ಯಮದವರು ಮಾಡಿದ್ದರಿಂದ ಅದಕ್ಕೆ ಉತ್ತರವಾಗಿ ಅವರು ಸನ್ಯಾಸಧರ್ಮವನ್ನು ಪೂರ್ಣವಾಗಿ ಉಲ್ಲಂಘಿಸಿದ್ದಾರೆಂಬುದನ್ನು ಅನಿವಾರ್ಯವಾಗಿ ನಾನು ವಿವರಿಸ ಬೇಕಾಯಿತು.

    ಹಿಂದಿನ ಪಲಿಮಾರು ಸ್ವಾಮಿಗಳಾದ ರಘುವಲ್ಲಭ ತೀರ್ಥರು, ಹಿಂದಿನ ಶೀರೂರು ಸ್ವಾಮಿಗಳಾದ ಮನೋಜ್ಞ ತೀರ್ಥರು, ಸುಬ್ರಹ್ಮಣ್ಯ ಮಠದ ಸ್ವಾಮಿಗಳಾದ ವಿದ್ಯಾಭೂಷಣರು ಪೀಠ ತ್ಯಾಗ ಮಾಡಲು ನನ್ನ ಪಾತ್ರವೇನೂ ಇಲ್ಲ. ಅವರನ್ನು ಪೀಠದಲ್ಲಿ ಉಳಿಸಲು ಎಲ್ಲಾ ಪ್ರಯತ್ನ ಮಾಡಿದ್ದೇನೆ. ಅವರಾಗಿ ಸ್ವೇಚ್ಛೆಯಿಂದ ಹೋಗಿದ್ದಾರೆ. ಅದಕ್ಕಾಗಿ ನನ್ನನ್ನು ಹಂತಕನನ್ನಾಗಿ ದೂಷಿಸುವುದು ಸರ್ವಥಾ ತಪ್ಪು. ರಘುವಲ್ಲಭರಿಗೆ 5 ಲಕ್ಷ ರೂ. ಕೊಟ್ಟಿರುವೆನೆಂದು ಆರೋಪಿಸುವುದೂ ಪೂರ್ಣ ಸುಳ್ಳು. ಅವರಿಗೆ ಇದಕ್ಕಾಗಿ ಒಂದು ಪೈಸೆ ಕೂಡ ಕೊಟ್ಟಿಲ್ಲ. ವಿಶ್ವ ವಿಜಯರನ್ನು ನಾನು ಕಳುಹಿಸಿಯೇ ಇಲ್ಲ. ಅವರಾಗಿಯೇ ಹೋದರು. ಹೋದರೆ ಅನೇಕ ಸಮಸ್ಯೆಯಾಗುವುದೆಂದು ನಾನು ಹೇಳಿದ್ದೆ. ಆದರೂ ಹೋದರು. ಬಂದ ಮೇಲೆ ಸೂಕ್ತ ವ್ಯವಸ್ಥೆಯನ್ನು ಮಾಡುವುದಾಗಿಯೂ ಹೇಳಿದೆ. ಆದರೆ ಅವರು ನನಗೆ ತಿಳಿಸದೇ ಪೀಠ ತ್ಯಾಗ ಮಾಡಿದ್ದಾರೆ. ವ್ಯಾಸರಾಜ ಸ್ವಾಮಿಗಳ ಆಶ್ರಮ, ಸುವಿದ್ಯೇಂದ್ರರ ಆಶ್ರಮ ಸ್ವೀಕಾರ ಮತ್ತು ಪೀಠ ತ್ಯಾಗದಲ್ಲಿ ನನ್ನ ಪಾತ್ರ ಕಿಂಚಿತ್ತು ಇಲ್ಲ. ಆದರೂ ಇದೆಲ್ಲವುಗಳಿಗೂ ನಾನೇ ಕಾರಣವೆಂದು ದೂಷಿಸುವುದು ಸರ್ವಾಥಾ ಸರಿಯಲ್ಲ. ಶೀರೂರು ಸ್ವಾಮಿಗಳಿಂದ ನಾನು ಯಾವುದೇ ರೀತಿಯ ಹಣವನ್ನು ಅಪೇಕ್ಷಿಸಲೂ ಇಲ್ಲ, ಕೇಳಲೂ ಇಲ್ಲ. ಇದೆಲ್ಲದರ ಬಗ್ಗೆಯೂ ಬಹಿರಂಗ ವಿಚಾರಣೆಗೆ ನಾನು ಯಾವಾಗಲೂ ಸಿದ್ಧ.

     

    ಡಿವಿಆರ್ ಎಲ್ಲಿ?: ಇನ್ನು ಶೀರೂರು ಶ್ರೀಗಳು ನೆಲೆಸಿದ್ದ ಮೂಲಮಠದ ಸಿಸಿಟಿವಿಯ ಡಿವಿಆರ್ ನಾಪತ್ತೆಯಾಗಿರುವ ಅಂಶ ಬೆಳಕಿಗೆ ಬಂದಿದ್ದು, ಪ್ರಕರಣ ಮತ್ತಷ್ಟು ನಿಗೂಢವಾಗುತ್ತಿದೆ. ಶ್ರೀಗಳು ಆಸ್ಪತ್ರೆಗೆ ದಾಖಲಾದ ದಿನವೇ ಡಿವಿಆರ್ ನಾಪತ್ತೆಯಾಗಿದೆ. ಅಷ್ಟೇ ಅಲ್ಲ ಶೀರೂರು ಮೂಲಮಠದಿಂದ ಇನ್ನು ಕೆಲ ವಸ್ತುಗಳು ಕಾಣೆಯಾಗಿವೆ. ಉದ್ದೇಶಪೂರ್ವಕವಾಗಿ ಡಿವಿಆರ್ ತೆಗೆದುಕೊಂಡು ಹೋಗಿದ್ದಾರಾ ಅಥವಾ ಸಿಸಿಟಿವಿ ಬರಿ ಪ್ರದರ್ಶನಕ್ಕೆ ಮಾತ್ರ ಅಳವಡಿಸಲಾಗಿತ್ತಾ ಎಂಬುವುದರ ಕುರಿತು ಎಸ್‍ಪಿ ಲಕ್ಷ್ಮಣ್ ನಿಂಬರ್ಗಿ ನೇತೃತ್ವದಲ್ಲಿ ತನಿಖೆ ಮುಂದುವರೆದಿದೆ.

    ಇದೇ ವೇಳೆ ಇನ್ನೆರಡು ದಿನಗಳಲ್ಲಿ ಶ್ರೀಗಳ ಮರಣೋತ್ತರ ಪರೀಕ್ಷೆಯ ತಾತ್ಕಾಲಿಕ ವರದಿ ಬರಲಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿದೆ. ಈ ನಡುವೆ ಪಟ್ಟದ ದೇವರ ವಾಪಸ್ ಗಾಗಿ ಶಿರೂರು ಶ್ರೀಗಳು ಸಲ್ಲಿಸಿದ್ದ ಕೇವಿಯಟ್ ಅರ್ಜಿ ಸ್ವಾಮೀಜಿಗಳ ಸಾವಿನಿಂದಾಗಿ ಅನೂರ್ಜಿತವಾಗಿದೆ. ಹೀಗಾಗಿ ಕೃಷ್ಣ ಮಠದ ಆರು ಮಠಾಧೀಶರಿಗೆ ಬಿಗ್ ರಿಲೀಫ್ ಸಿಕ್ಕಿದೆ.

  • ಮಠಾಧಿಪತಿ ಮೇಲೆ ಆರೋಪ ಮಾಡುವುದು ಸರಿಯಲ್ಲ – ಪೇಜಾವರ ಶ್ರೀ

    ಮಠಾಧಿಪತಿ ಮೇಲೆ ಆರೋಪ ಮಾಡುವುದು ಸರಿಯಲ್ಲ – ಪೇಜಾವರ ಶ್ರೀ

    ಹುಬ್ಬಳ್ಳಿ: ಕಳೆದ ಎರಡು ವರ್ಷಗಳಿಂದ ಶಿರೂರು ಶ್ರೀಗಳು ಆನಾರೋಗ್ಯದ ಸಮಸ್ಯೆಯಿಂದ ಆಸ್ಪತ್ರೆಯಲ್ಲಿ ಹೆಚ್ಚಿನ ಸಮಯ ಕಳೆದಿದ್ದಾರೆ. ಆದರೆ ಅವರ ಸಾವಿನ ಕುರಿತು ಮಠಾಧಿಪತಿಗಳ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.

    ಶಿರೂರು ಲಕ್ಷ್ಮೀವರತೀರ್ಥ ಶ್ರೀಗಳ ಅಗಲಿಕೆ ಕುರಿತು ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶ್ರೀಗಳ ಅಗಲಿಕೆ ನೋವು ತಂದಿದೆ. ಆದರೆ ಸ್ವಾಮೀಜಿಗಳು ಯಾರನ್ನು ಕೊಲೆ ಮಾಡುವುದಿಲ್ಲಾ. ಅವರದು ಒಂದು ಸಹಜ ಸಾವು ಎಂದು ಪೇಜಾವರ ಶ್ರೀಗಳು ಹೇಳಿದರು.

    ಸಾವಿನ ಸಂಶಯದ ಕುರಿತ ಮಾಧ್ಯಮಗಳ ಪ್ರಶ್ನೆಗೆ, ವಿಷ ಪ್ರಾಶನ ಯಾರು ಮಾಡುತ್ತಾರೆ ಎಂದು ಪ್ರಶ್ನಿಸಿದ ಪೇಜಾವರ ಶ್ರೀ ಗಳು, ಶಿರೂರು ಸ್ವಾಮೀಜಿಗಳಿಗೆ ವಿಷ ನೀಡುವ ಪ್ರಮೇಯವೇ ಇಲ್ಲ. ಸ್ವಾಮಿಗಳು ಯಾರನ್ನು ಕೊಲೆ ಮಾಡುವುದಿಲ್ಲ. ಅಲ್ಲದೆ ಅವರನ್ನು ಕೊಲೆ ಮಾಡಿ ಪಟ್ಟಕ್ಕೆ ಏರುವ ಉದ್ದೇಶ ಯಾರಿಗೂ ಇಲ್ಲ. ಕಾರಣ ಇಲ್ಲದೆ ಯಾರ ಮೇಲು ಸುಮ್ಮನೆ ಆರೋಪ ಮಾಡಬಾರದು. ಶ್ರೀಗಳ ಕೊಲೆ ಎಂಬುದು ಶುದ್ಧ ಸುಳ್ಳು. ಅವರದು ಒಂದು ಸಹಜ ಸಾವು. ಅವರ ಸಾವಿನ ಹಿಂದೆ ಸಂಶಯ ಮಾಡುವುದು ಸರಿಯಲ್ಲಾ. ಕಳೆದ ಒಂದು ವರ್ಷದಿಂದ ಅನಾರೋಗ್ಯ ಪೀಡಿತರಾಗಿದ್ದರು, ಕಳೆದ ಎರಡು ಮೂರ ವರ್ಷಗಳ ಹಿಂದಿನಿಂದ ಪೂಜೆ ಮಾಡುವುದನ್ನು ಸಹ ಬಿಟ್ಟಿದ್ದಾರೆ. ಹೀಗಾಗಿ ಅವರ ಸಾವಿನ ಹಿಂದೆ ಅನುಮಾನ ವ್ಯಕ್ತಪಡಿಸುವುದು ಸರಿಯಲ್ಲಾ ಎಂದರು.

    ಬುಧವಾರ ಬೆಳಗ್ಗೆ ಫುಡ್ ಪಾಯ್ಸನ್ ಹಿನ್ನೆಲೆಯಲ್ಲಿ ಮಣಿಪಾಲದ ಕೆಎಂಸಿಗೆ ದಾಖಲಾಗಿದ್ದ ಶ್ರೀಗಳು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದರು. ಕಳೆದ ಕೆಲ ತಿಂಗಳುಗಳಿಂದ ಶ್ರೀಗಳಿಗೆ ಆಗಾಗ ಆರೋಗ್ಯ ಸಮಸ್ಯೆ ಎದುರಾಗಿಗುತ್ತಲೇ ಇತ್ತು. ಈ ಹಿಂದೆ ಥೈರಾಯ್ಡ್ ಸಮಸ್ಯೆ ಇದ್ದಿದ್ದರಿಂದ ಶಿರೂರು ಶ್ರೀಗಳಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ನಂತರದ ದಿನಗಳಲ್ಲಿ ಪದೇ ಪದೇ ಆಸ್ಪತ್ರೆಗಳಿಗೆ ಚೆಕಪ್ ಗೆ ತೆರಳುತ್ತಿದ್ದ ಶ್ರೀಗಳು ಒಮ್ಮೆ ಗುಣಮುಖರಾದ್ರೆ ಮತ್ತೊಮ್ಮೆ ಅನಾರೋಗ್ಯಕ್ಕೆ ಈಡಾಗುತ್ತಲೇ ಇದ್ದರು.

  • ಮೊದಲ ಪತ್ನಿಯನ್ನು ಬಿಟ್ಟು ಕಾಲೇಜು ಯುವತಿಯನ್ನು ಮದ್ವೆಯಾದ ಬಿಜೆಪಿ ಶಾಸಕ!

    ಮೊದಲ ಪತ್ನಿಯನ್ನು ಬಿಟ್ಟು ಕಾಲೇಜು ಯುವತಿಯನ್ನು ಮದ್ವೆಯಾದ ಬಿಜೆಪಿ ಶಾಸಕ!

    – ಬಿಜೆಪಿ ಶಿಸ್ತು ಸಮಿತಿಗೆ ಪತ್ನಿಯಿಂದ ದೂರು

    ಶ್ರೀನಗರ: ಜಮ್ಮು ಕಾಶ್ಮೀರ ಬಿಜೆಪಿ ಶಾಸಕರೊಬ್ಬರ ಪತ್ನಿ ತಮ್ಮ ಪತಿ ಕಾಲೇಜು ಯುವತಿಯೊಂದಿಗೆ ಮದುವೆಯಾಗಿರುವುದಾಗಿ ಆರೋಪ ಮಾಡಿ, ಬಿಜೆಪಿ ಶಿಸ್ತು ಸಮಿತಿಗೆ ದೂರು ನೀಡಿದ್ದಾರೆ.

    ಜಮ್ಮು ಜಿಲ್ಲೆಯ ಶಾಸಕ ಗಗನ್ ಭಗತ್ ವಿರುದ್ಧ ಪತ್ನಿ ಮೋನಿಕಾ ಶರ್ಮಾ ಈ ಆರೋಪ ಮಾಡಿದ್ದು, 19 ವರ್ಷದ ಕಾಲೇಜು ಯುವತಿಯೊಂದಿಗೆ ಮದುವೆಯಾಗಿ ಆಕೆಯೊಂದಿಗೆ ವಾಸಿಸುತ್ತಿದ್ದಾರೆ ಎಂದು ದೂರಿದ್ದಾರೆ.

    ಸದ್ಯ ಶಾಸಕ ಪತ್ನಿ ಆರೋಪದೊಂದಿಗೆ ಕಾಲೇಜು ಯುವತಿಯ ತಂದೆಯೂ ಸಹ ತಮ್ಮ ಮಗಳನ್ನು ಪಂಜಾಬ್ ಕಾಲೇಜಿನಿಂದ ಅಪಹರಣ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ಈ ಆರೋಪಗಳನ್ನು ಯುವತಿ ಹಾಗೂ ಶಾಸಕ ಗಗನ ಭಗತ್ ನಿರಾಕರಿಸಿದ್ದು, ತಮ್ಮ ರಾಜಕೀಯ ಜೀವನಕ್ಕೆ ಕಪ್ಪು ಚುಕ್ಕೆ ತರಲು ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

    ಅಂದಹಾಗೇ 13 ವರ್ಷಗಳ ಹಿಂದೆ ಶಾಸಕ ಗಗನ್ ಭಗತ್ ಹಾಗೂ ಮೋನಿಕಾ ಶರ್ಮಾ ಮದುವೆಯಾಗಿರುವುದಾಗಿ ತಿಳಿಸಿದ್ದು, ಸದ್ಯ ಶಾಸಕರ ವಿರುದ್ಧ ಪ್ರಧಾನಿ ಮೋದಿ ಸೇರಿದಂತೆ ಪಕ್ಷದ ಹಿರಿಯ ನಾಯಕರಿಗೆ ಶರ್ಮಾ ದೂರು ನೀಡಿದ್ದಾರೆ. ಅಲ್ಲದೇ ಈ ಹಿಂದೆ ತಮ್ಮ ದೈನಂದಿನ ಜೀವನ ನಿರ್ವಹಣೆಗಾಗಿ ಮಾಸಿಕ 1 ಲಕ್ಷ ರೂ. ಹಣ ನೀಡುವುದಾಗಿ ಗಗನ್ ಭಗತ್ ಹೇಳಿದ್ದರು. ಆದರೆ ಇದುವರೆಗೂ ಯಾವುದೇ ಹಣವನ್ನು ನೀಡಿಲ್ಲ. ಇದರಿಂದ ನನಗೆ ಹಾಗೂ ಮಕ್ಕಳಿಗೆ ತೀವ್ರ ಸಮಸ್ಯೆಯಾಗಿದೆ ಎಂದು ದೂರಿದ್ದಾರೆ.

    ಜಮ್ಮು ಕಾಶ್ಮೀರದ ಬಿಜೆಪಿ ಮಹಿಳಾ ಘಟಕದ ಕಾರ್ಯದರ್ಶಿಯಾಗಿರುವ ನಾನು ತನ್ನ ಕುಟುಂಬ ಒಳಿತಿಗಾಗಿ ಒಂದು ವರ್ಷದಿಂದ ಈ ಕುರಿತು ಮಾಹಿತಿ ಬಹಿರಂಗ ಪಡಿಸಿಲ್ಲ. ತನಗೆ 12 ವರ್ಷದ ಮಗ ಹಾಗೂ 4 ವರ್ಷದ ಮಗಳು ಇದ್ದಾರೆ. ಪತಿ ವಿರುದ್ಧ ಆರೋಪದ ಕುರಿತು ಸಾಕ್ಷಿ ನೀಡಲು ತಮ್ಮ ಬಳಿ ಆಧಾರಗಳು ಇದ್ದು, ಅವುಗಳನ್ನು ಬಿಜೆಪಿ ಶಿಸ್ತು ಸಮಿತಿಗೆ ನೀಡಿದ್ದಾಗಿ ಹೇಳಿದ್ದಾರೆ. ಅಲ್ಲದೇ ಕಳೆದ ಎರಡು ದಿನಗಳ ಹಿಂದೆ ಈ ಆಧಾರಗಳನ್ನು ಸಮಿತಿಗೆ ನೀಡದಿರಲು ಗಗನ್ ಭಗತ್ ತಮ್ಮ ಬಳಿ ಮನವಿ ಮಾಡಿದ್ದಾಗಿ ತಿಳಿಸಿದ್ದಾರೆ.

    ತಮ್ಮ ಪತಿ ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದು, ಅವರು ಇಂತಹ ಕೆಲಸ ಮಾಡಿ ಸಮಾಜಕ್ಕೆ ಯಾವ ಸಂದೇಶ ನೀಡುತ್ತಾರೆ. ಆದರೆ ಅವರು ಮದುವೆಯಾಗುವುದಕ್ಕೆ ಯಾವುದೇ ಆಕ್ಷೇಪವಿಲ್ಲ. ಅದನ್ನು ಬಹಿರಂಗ ಪಡಿಸಲಿ ಎಂದು ತಿಳಿಸಿದ್ದಾರೆ.