Tag: ಆರ್‍ಆರ್‍ಆರ್ ಸಿನಿಮಾ

  • ಲಂಡನ್‌ನಲ್ಲಿ ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್- ಜ್ಯೂ.ಎನ್‌ಟಿಆರ್ ಆಕ್ರೋಶ

    ಲಂಡನ್‌ನಲ್ಲಿ ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್- ಜ್ಯೂ.ಎನ್‌ಟಿಆರ್ ಆಕ್ರೋಶ

    ‘ಆರ್‌ಆರ್‌ಆರ್’ (RRR) ಚಿತ್ರದ ಲೈವ್ ಕಾನ್ಸರ್ಟ್ ಕಾರ್ಯಕ್ರಮ ಲಂಡನ್‌ನಲ್ಲಿ ಮೇ 11ರಂದು ಅದ್ಧೂರಿಯಾಗಿ ಜರುಗಿದ್ದು, ಜ್ಯೂ.ಎನ್‌ಟಿಆರ್ ಕೂಡ ಭಾಗವಹಿಸಿದ್ದರು. ಈ ವೇಳೆ, ನಟನೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಫ್ಯಾನ್ಸ್ ಮುಗಿಬಿದ್ದಿದ್ದಾರೆ. ಅಭಿಮಾನಿಗಳ ಅತೀರೇಕದ ವರ್ತನೆಗೆ ಕಂಡು ನಟ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ರಾಕೇಶ್ ಅಕಾಲಿಕ ಮರಣ ನೋವು ತಂದಿದೆ: ಯೋಗರಾಜ್ ಭಟ್

    ಲಂಡನ್‌ನ ರಾಯಲ್ ಆಲ್ಬರ್ಟ್ ಹಾಲ್‌ನಲ್ಲಿ ‘ಆರ್‌ಆರ್‌ಆರ್’ ಚಿತ್ರದ ಲೈವ್ ಕಾನ್ಸರ್ಟ್ ನಡೆದಿದೆ. ಜ್ಯೂ.ಎನ್‌ಟಿಆರ್ (Jr.NTR) ಕೂಡ ಭಾಗಿಯಾಗಿ ಎಂಜಾಯ್ ಮಾಡಿದ್ದಾರೆ. ಕಾರ್ಯಕ್ರಮದ ಬಳಿಕ ನಟನ ಜೊತೆಗೆ ಸೆಲ್ಫಿಗಾಗಿ ಫ್ಯಾನ್ಸ್ ಮುಗಿಬಿದ್ದಿದ್ದಾರೆ. ನಿಮ್ಮೆಲ್ಲರಿಗೂ ಫೋಟೋ ತೆಗೆದುಕೊಳ್ಳಲು ಅವಕಾಶ ಕೊಡುತ್ತೇನೆ ಆತುರಪಡಬೇಡಿ ಎಂದು ತಾಳ್ಮೆಯಿಂದಲೇ ಹೇಳಿದ್ದಾರೆ. ನಟನ ಮಾತಿಗೆ ಕ್ಯಾರೇ ಎನ್ನದೇ ನಟನತ್ತ ಗುಂಪು ಗುಂಪಾಗಿ ಕೆಲ ಅಭಿಮಾನಿಗಳು ಸೇರಿದ್ದಾರೆ. ಹೀಗಾಗಿ ಜ್ಯೂ.ಎನ್‌ಟಿಆರ್ ಕೋಪದಿಂದಲೇ ರಿಯಾಕ್ಟ್ ಮಾಡಿದ್ದಾರೆ. ಬಳಿಕ ಬಾಡಿಗಾರ್ಡ್ ಸಹಾಯದಿಂದ ಸ್ಥಳದಿಂದ ನಟ ತೆರಳಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಇದನ್ನೂ ಓದಿ:ರಾಕೇಶ್ ಸಾವಿನ ಸುದ್ದಿ ಅರಗಿಸಿಕೊಳ್ಳೋಕೆ ಆಗ್ತಿಲ್ಲ: ‘ಬಿಗ್ ಬಾಸ್’ ಲೋಕೇಶ್ ಭಾವುಕ

    ‘ಆರ್‌ಆರ್‌ಆರ್’ ಚಿತ್ರ 2022ರಲ್ಲಿ ಸಿನಿಮಾ ರಿಲೀಸ್ ಆಗಿತ್ತು. ರಾಜಮೌಳಿ ನಿರ್ದೇಶನದಲ್ಲಿ ರಾಮ್ ಚರಣ್, ಜ್ಯೂ.ಎನ್‌ಟಿಆರ್, ಆಲಿಯಾ ಭಟ್ ನಟಿಸಿದ್ದರು.

    ಪ್ರಸ್ತುತ ಪ್ರಶಾಂತ್ ನೀಲ್ ಜೊತೆಗಿನ ಹೊಸ ಸಿನಿಮಾದಲ್ಲಿ ತಾರಕ್ ಬ್ಯುಸಿಯಾಗಿದ್ದಾರೆ. ವಿಭಿನ್ನ ಪಾತ್ರದಲ್ಲಿ ನಟ ಕಾಣಿಸಿಕೊಳ್ತಿದ್ದಾರೆ.

  • G20 Summit: ‘ಆರ್‌ಆರ್‌ಆರ್‌’ ಚಿತ್ರವನ್ನು ಹೊಗಳಿದ ಬ್ರೆಜಿಲ್‌ ಅಧ್ಯಕ್ಷ

    G20 Summit: ‘ಆರ್‌ಆರ್‌ಆರ್‌’ ಚಿತ್ರವನ್ನು ಹೊಗಳಿದ ಬ್ರೆಜಿಲ್‌ ಅಧ್ಯಕ್ಷ

    ಚಿತ್ರೋದ್ಯಮ ಕಂಡ ಅದ್ಭುತ ನಿರ್ದೇಶಕ ರಾಜಮೌಳಿ ನಿರ್ದೇಶನದ ‘ಆರ್‌ಆರ್‌ಆರ್ (RRR) ಸಿನಿಮಾ ಆಸ್ಕರ್ ಪ್ರಶಸ್ತಿ ಬಾಚಿಕೊಂಡಿತ್ತು. 2022ರಲ್ಲಿ ತೆರೆಕಂಡ ಈ ಸಿನಿಮಾಗೆ ಈಗಲೂ ಪ್ರಶಂಸೆ ವ್ಯಕ್ತವಾಗುತ್ತಿದೆ. ಜಿ20 ಶೃಂಗಸಭೆಯಲ್ಲಿ ಬ್ರೆಜಿಲ್ ಅಧ್ಯಕ್ಷ ‘ಆರ್‌ಆರ್‌ಆರ್’ ಚಿತ್ರವನ್ನು ಹಾಡಿ ಹೊಗಳಿದ್ದಾರೆ. ಈ ಕುರಿತ ವಿಡಿಯೋ ಸಖತ್ ವೈರಲ್ ಆಗುತ್ತಿದೆ.

    ಜಿ20 (G20 Summit) ಶೃಂಗಸಭೆ ದೆಹಲಿಯಲ್ಲಿ ಸೆಪ್ಟೆಂಬರ್ 9 ಮತ್ತು 10ರಂದು ನಡೆದಿದೆ. ವಿವಿಧ ದೇಶದ ಗಣ್ಯರು ಆಗಮಿಸಿದ್ದರು. ಈ ಕಾರ್ಯಕ್ರಮದಲ್ಲಿ ಬ್ರೆಜಿಲ್ ಅಧ್ಯಕ್ಷ ಲೂಯಿಸ್ ಇನಾಸಿಯೋ ಲೂಲಾ ದೆ ಸೆಲ್ವಾ (Luiz Inácio Lula Da Silva) ಕೂಡ ಭಾಗವಹಿಸಿದ್ದರು. ಅವರು ‘ಆರ್‌ಆರ್‌ಆರ್’ ಚಿತ್ರದ ಬಗ್ಗೆ ಮಾತನಾಡಿದ್ದಾರೆ. ಅವರು ಈ ಚಿತ್ರವನ್ನು ಬಾಯ್ತುಂಬ ಹೊಗಳಿದ್ದಾರೆ.ಇದನ್ನೂ ಓದಿ:ರಮೇಶ್ ಅರವಿಂದ್ ಹುಟ್ಟುಹಬ್ಬದಂದು ಫ್ಯಾನ್ಸ್‌ಗೆ ಗುಡ್ ನ್ಯೂಸ್

    ‘ಆರ್‌ಆರ್‌ಆರ್’ (RRR) ಮೂರು ಗಂಟೆಯ ಫೀಚರ್ ಸಿನಿಮಾ. ಹಲವು ಫನ್ನಿ ದೃಶ್ಯ ಇದೆ. ಅದ್ಭುತ ನೃತ್ಯವಿದೆ. ಬ್ರಿಟಿಷರ ಆಡಳಿತದ ಬಗ್ಗೆ ತೀವ್ರ ಟೀಕೆಯೂ ಇದೆ ಈ ಚಿತ್ರ ವಿಶ್ವಾದ್ಯಂತ ಬ್ಲಾಕ್‌ಬಸ್ಟರ್ ಸಿನಿಮಾ ಆಗಬೇಕು ನನ್ನ ಅಭಿಪ್ರಾಯ. ಭಾರತದ ಬಗ್ಗೆ ಯಾರೇ ಪ್ರಸ್ತಾಪಿಸಿದರೂ ನೀವು ಆರ್‌ಆರ್‌ಆರ್ ಸಿನಿಮಾ ನೋಡಿದ್ದೀರಾ ಎಂದು ಕೇಳುತ್ತಾರೆ. ಚಿತ್ರದ ನಿರ್ದೇಶಕರು ಮತ್ತು ಕಲಾವಿದರನ್ನು ನಾನು ಅಭಿನಂದಿಸುತ್ತೇನೆ. ಈ ಸಿನಿಮಾ ನನ್ನನ್ನು ಮೋಡಿ ಮಾಡಿದೆ ಎಂದಿದ್ದಾರೆ.

    ‘ಆರ್‌ಆರ್‌ಆರ್’ ಚಿತ್ರಕ್ಕೆ ವಿ.ವಿಜೇಂದ್ರ ಪ್ರಸಾದ್ ಬರೆದ ಕಥೆಗೆ ರಾಜಮೌಳಿ (Rajamouli) ನಿರ್ದೇಶನ ಮಾಡಿದ್ದರು. ಜ್ಯೂ.ಎನ್‌ಟಿಆರ್, ಆಲಿಯಾ ಭಟ್(Aliaa Bhatt), ರಾಮ್ ಚರಣ್(Ram Charan), ಅಜಯ್ ದೇವಗನ್, ಶ್ರೀಯಾ ಶರಣ್ ನಟಿಸಿದ್ದರು.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮುದ್ದು ಮಗಳ ವಿಡಿಯೋ ಹಂಚಿಕೊಂಡ ‘ಆರ್‌ಆರ್‌ಆರ್’ ಹೀರೋ ರಾಮ್ ಚರಣ್

    ಮುದ್ದು ಮಗಳ ವಿಡಿಯೋ ಹಂಚಿಕೊಂಡ ‘ಆರ್‌ಆರ್‌ಆರ್’ ಹೀರೋ ರಾಮ್ ಚರಣ್

    ‘ಆರ್‌ಆರ್‌ಆರ್’ (RRR) ಸಿನಿಮಾದ ಸೂಪರ್ ಸ್ಟಾರ್ ರಾಮ್‌ಚರಣ್ (Ram Charan) ಅವರು ಮುದ್ದು ಮಗಳು ಮನೆಗೆ ಬಂದಿರುವ ಸಂತಸದಲ್ಲಿದ್ದಾರೆ. ಕಳೆದ ಜೂನ್ 20ಕ್ಕೆ ಪತ್ನಿ ಉಪಾಸನಾ (Upasana) ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಮಗಳು ಹುಟ್ಟಿ ಒಂದು ತಿಂಗಳ ನಂತರ ಈಗ ಪುತ್ರಿಯ ಮುದ್ದಾದ ವೀಡಿಯೋ ಹಂಚಿಕೊಂಡಿದ್ದಾರೆ.

    ಗ್ಲೋಬಲ್ ಸ್ಟಾರ್ ರಾಮ್ ಚರಣ್ ಅವರ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಮದುವೆಯಾಗಿ 11 ವರ್ಷಗಳ ನಂತರ ಮೊದಲ ಮಗುವಿನ ಆಗಮನ ಸಂತಸದಲ್ಲಿದ್ದಾರೆ. ಇತ್ತೀಚಿಗಷ್ಟೇ ಕ್ಲಿನ್ ಕಾರ ಕೊನಿಡೆಲಾ(Klin Kaara Konidela) ಎಂದು ಮಗಳಿಗೆ ನಾಮಕರಣ ಮಾಡಿದ್ದಾರೆ.

    ಮೆಗಾಸ್ಟಾರ್ ಚಿರಂಜೀವಿ ಪುತ್ರ (Megastar Chiranjeevi) ರಾಮ್ ಚರಣ್ ತೇಜ ಅವರು ‘ಮಹಾತೀರ’ ಚಿತ್ರದ ಮೂಲಕ ಪದಾರ್ಪಣೆ ಮಾಡಿ ಇಂದು ಸೌತ್ ಸೂಪರ್ ಸ್ಟಾರ್ ಆಗಿ ಬೆಳೆದಿದ್ದಾರೆ. ಅವರು ನಟಿಸಿದ ‘ಆರ್‌ಆರ್‌ಆರ್’ ಚಿತ್ರವು ಈ ವರ್ಷದ ಆಸ್ಕರ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಅವರು 2012ರಲ್ಲಿ ಅಪೋಲೋ ಹಾಸ್ಪಿಟಲ್ಸ್ ಗ್ರೂಪ್‌ನ ಅಧ್ಯಕ್ಷ ಪ್ರತಾಪ್ ಸಿ. ರೆಡ್ಡಿ ಅವರ ಮೊಮ್ಮಗಳು ಉಪಾಸನಾ ಕಾಮಿನೇನಿ ಅವರನ್ನು ವಿವಾಹವಾದರು.

    ರಾಮ್ ಚರಣ್ ಜೊತೆ ಮದುವೆಯಾದಾಗ ಉಪಾಸನಾ ಸಾಕಷ್ಟು ಟೀಕೆಗಳನ್ನು ಎದುರಿಸಿದ್ದರು. ‘ಮಗಧೀರ’ ಚಿತ್ರದ ನಂತರ ರಾಮ್ ಚರಣ್ ಖ್ಯಾತಿ ಉತ್ತುಂಗದಲ್ಲಿದ್ದ ಸಮಯ. ಇವರನ್ನು ಮದುವೆಯಾದ ಉಪಾಸನಾ ಅವರಿಗೆ ಸ್ವಲ್ಪವೂ ಸೂಕ್ತವಲ್ಲ ಎಂದು ಹಲವರು ಹೇಳಿದ್ದರು. ಮದುವೆಯಾಗಿ ಹಲವು ವರ್ಷಗಳಾದರೂ ಅವರು ಇನ್ನೂ ಮಕ್ಕಳಾಗಿಲ್ಲ ಎಂಬ ವಿಚಾರವಾಗಿ ಅನೇಕ ಟೀಕೆಗಳನ್ನು ಎದುರಿಸಿದರು. ಕೆಲವು ವರ್ಷಗಳ ಹಿಂದೆ ಉಪಾಸನ ಅವರನ್ನು ತಡವಾಗಿ ಗರ್ಭಧಾರಣೆಯ ಬಗ್ಗೆ ಪ್ರಶ್ನಿಸಲಾಯಿತು. ಅದಕ್ಕೆ ರಾಮ್‌ಚರಣ್ ಪತ್ನಿ ಪ್ರತಿಕ್ರಿಯೆ ನೀಡಿದ್ದರು. ವೃತ್ತಿಪರವಾಗಿ ಒಂದೊಳ್ಳೆಯ ಸ್ಥಾನಕ್ಕೆ ಹೋದ ಮೇಲೆ ಮಗು ಹೊಂದುವ ಬಗ್ಗೆ ಯೋಚನೆ ಮಾಡುತ್ತೇವೆ ಎಂದು ಹೇಳಿದ್ದರು. ಇದನ್ನೂ ಓದಿ:‘ಸಲಾರ್’ ಪಾರ್ಟ್‌ 2 ಬರೋದು ಪಕ್ಕಾ- ಬಾಯ್ಬಿಟ್ಟ ಜಗಪತಿ ಬಾಬು

    ಈಗ 11 ವರ್ಷಗಳ ನಂತರ ರಾಮ್ ಚರಣ್- ಉಪಾಸನಾ ಬದುಕಲ್ಲಿ ಮುದ್ದು ಮಗಳ ಆಗಮನವಾಗಿದೆ. ಮೆಗಾಸ್ಟಾರ್ ಕುಟುಂಬದಲ್ಲಿ ಮಗಳು ಹುಟ್ಟಿದ ದಿನ ಖುಷಿ ಹೇಗಿತ್ತು. ರಾಮ್ ಚರಣ್- ಉಪಾಸನಾ ತಮ್ಮ ಸಂತಸದ ಬಗ್ಗೆ ಈ ವೀಡಿಯೋ ಮೂಲಕ ಹಂಚಿಕೊಂಡಿದ್ದಾರೆ. ಮಗಳ ವೀಡಿಯೋ ರಿವೀಲ್ ಮಾಡಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹೊಸ ಸಿನಿಮಾ ಮುನ್ನ ಫ್ಯಾಮಿಲಿ ಜೊತೆ ರಾಜಮೌಳಿ ಟ್ರಿಪ್

    ಹೊಸ ಸಿನಿಮಾ ಮುನ್ನ ಫ್ಯಾಮಿಲಿ ಜೊತೆ ರಾಜಮೌಳಿ ಟ್ರಿಪ್

    ‘ಆರ್‌ಆರ್‌ಆರ್’ (RRR Film) ಸಿನಿಮಾದ ಸಕ್ಸಸ್ ನಂತರ ರಾಜಮೌಳಿ (Rajamouli), ಮಹೇಶ್ ಬಾಬು ಜೊತೆ ಹೊಸ ಸಿನಿಮಾ ಮಾಡುವ ಬಗ್ಗೆ ಪ್ಲ್ಯಾನ್ ನಡೆಯುತ್ತಿದೆ. ಹೀಗಿರುವಾಗ ಸಿನಿಮಾ ಆರಂಭಕ್ಕೂ ಮುನ್ನವೇ ರಾಜಮೌಳಿ ಅವರು ತಮ್ಮ ಕುಟುಂಬದ ಜೊತೆ ಪ್ರವಾಸಕ್ಕೆ ಹೋಗಿದ್ದಾರೆ. ಈ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

    ಜ್ಯೂ.ಎನ್‌ಟಿಆರ್, ರಾಮ್ ಚರಣ್ (Ram Charan) ನಟನೆಯ ‘ಆರ್‌ಆರ್‌ಆರ್’ (RRR) ಸಿನಿಮಾ ಬಾಕ್ಸಾಫೀಸ್ ಗಲ್ಲಾಪೆಟ್ಟಿಗೆಯಲ್ಲಿ ಶೇಕ್ ಮಾಡಿತ್ತು. ಕೋಟಿ ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಮೂಲಕ ಹಿಸ್ಟರಿ ಕ್ರಿಯೇಟ್ ಮಾಡಿತ್ತು. ಆಸ್ಕರ್ ಅವಾರ್ಡ್ ಸೇರಿದಂತೆ ಹಲವು ಪ್ರಶಸ್ತಿಗಳು ಚಿತ್ರಕ್ಕೆ ಲಭಿಸಿತು. ಇದೀಗ ತಮ್ಮ ಮುಂದಿನ ಚಿತ್ರಕ್ಕೆ ಯೋಜನೆಯನ್ನ ರಾಜಮೌಳಿ ರೂಪಿಸುತ್ತಿದ್ದಾರೆ. ಸಿನಿಮಾ ಕೆಲಸ ಶುರುವಾಗುವ ಮುನ್ನ ತಮಿಳುನಾಡಿನ ತೂತುಕುಡಿಗೆ ಜಕ್ಕಣ್ಣ ಫ್ಯಾಮಿಲಿ ಬೀಡು ಬಿಟ್ಟಿದ್ದಾರೆ.

    ಪ್ರತಿಬಾರಿ ಒಂದು ಸಿನಿಮಾ ಮುಗಿದ ಬಳಿಕ ಫ್ಯಾಮಿಲಿ ಜೊತೆ ರಜೆಯ ಮಜಾ ಸವಿದು ಮತ್ತೆ ಹೊಸ ಸಿನಿಮಾ ಬಗ್ಗೆ ರಾಜಮೌಳಿ ಕೈ ಹಾಕುತ್ತಾರೆ. ಈ ವಿಚಾರವನ್ನು ಸಾಕಷ್ಟು ಸಂದರ್ಶನಗಳಲ್ಲಿ ಹೇಳಿಕೊಂಡಿದ್ದಾರೆ. ಸದ್ಯ ಜಕ್ಕಣ್ಣನ ಫ್ಯಾಮಿಲಿ ರೆಸಾರ್ಟ್‌ವೊಂದರಲ್ಲಿ ಬೀಡುಬಿಟ್ಟಿದೆ. ಅಲ್ಲಿ ಗಿಡಗಳನ್ನು ನೆಟ್ಟಿರುವ ಫೋಟೊ, ತೂಗುಯ್ಯಾಲೆಯಲ್ಲಿ ಫ್ಯಾಮಿಲಿ ಜೊತೆ ಜಕ್ಕಣ್ಣ ಇರುವ ಮತ್ತೊಂದು ಫೋಟೂ ವೈರಲ್ ಆಗ್ತಿದೆ. ಇದನ್ನೂ ಓದಿ:ಕಿಚ್ಚನ ಮುಂದಿನ ಚಿತ್ರಕ್ಕೆ ಹೊಸ ನಿರ್ದೇಶಕ: ಅವರನ್ನ ಬಿಟ್ಟು ಇವರಾರು?

    ಮತ್ತೊಂದು ಕಡೆ ಪ್ರಿನ್ಸ್ ಮಹೇಶ್ ಬಾಬು ಕಾಂಬಿನೇಷನ್‌ನಲ್ಲಿ ಜಕ್ಕಣ್ಣ ಮಾಡಲಿರುವ ಸಿನಿಮಾ ಪ್ರೀ ಪ್ರೊಡಕ್ಷನ್ ಕೆಲಸ ನಡೀತಿದೆ. ಇತ್ತೀಚೆಗೆ ರಾಜಮೌಳಿ ತಂದೆ ಬರಹಗಾರ ವಿಜಯೇಂದ್ರ ಪ್ರಸಾದ್ ಮಾತನಾಡಿ ಜುಲೈ ಅಂತ್ಯದ ವೇಳೆಗೆ ಸ್ಕ್ರಿಪ್ಟ್ ರಾಜಮೌಳಿ ಕೈಗೆ ಕೊಡುತ್ತೇನೆ ಎಂದಿದ್ದಾರೆ. ಸದ್ಯ ಜಕ್ಕಣ್ಣ ವಕೇಷನ್‌ಗೆ ಹೋಗಿರುವುದು ನೋಡಿದರೆ ಶೀಘ್ರದಲ್ಲೇ ಸಿನಿಮಾ ಕೆಲಸ ಆರಂಭಿಸುವ ಸುಳಿವು ಸಿಕ್ತಿದೆ.

    ‘ಗುಂಟೂರು ಖಾರಂ’ ಸಿನಿಮಾ ಕೆಲಸದ ಬಳಿಕ ಮಹೇಶ್ ಬಾಬು- ರಾಜಮೌಳಿ ಒಟ್ಟಿಗೆ ಕೆಲಸ ಮಾಡಲಿದ್ದಾರೆ. ಸದ್ಯ ಪೂಜಾ ಹೆಗ್ಡೆ ಸಿನಿಮಾದಿಂದ ಹೊರನಡೆದ ಮೇಲೆ ಬೇರೇ ನಟಿಯ ಎಂಟ್ರಿಯಾಗಿದೆ. ಶ್ರೀಲೀಲಾ ಲೀಡ್ ರೋಲ್‌ನಲ್ಲಿ ಕಾಣಿಸಿಕೊಳ್ಳುತ್ತಾರೆ ಎಂದು ಹೇಳಲಾಗುತ್ತಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭಾರತದ ಮಣ್ಣಿಗೆ ಘನತೆಯಿದೆ- G20 ಸಭೆಯಲ್ಲಿ ರಾಮ್ ಚರಣ್‌ ಮಾತು

    ಭಾರತದ ಮಣ್ಣಿಗೆ ಘನತೆಯಿದೆ- G20 ಸಭೆಯಲ್ಲಿ ರಾಮ್ ಚರಣ್‌ ಮಾತು

    ‘ಆರ್‌ಆರ್‌ಆರ್’ (RRR) ಸಿನಿಮಾದ ಸಕ್ಸಸ್ ನಂತರ ದೇಶದೆಲ್ಲೆಡೆ ರಾಮ್ ಚರಣ್ (Ram Charan) ಸದ್ದು ಮಾಡ್ತಿದ್ದಾರೆ. ಸದ್ಯ ಜಿ20 ಶೃಂಗ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಈ ಮೂಲಕ ನಟ ರಾಮ್ ಚರಣ್ ಗಮನ ಸೆಳೆದಿದ್ದಾರೆ. ಈ ಸಭೆಯಲ್ಲಿ ಭಾರತದ ಸಿನಿಮಾ (Indian Films) ಮತ್ತು ಸಂಸ್ಕೃತಿ (Culture) ಬಗ್ಗೆ ನಟ ಮಾತನಾಡಿದ್ದಾರೆ.

    ಮೆಗಾಸ್ಟಾರ್ ಚಿರಂಜೀವಿ ಪುತ್ರ ರಾಮ್ ಚರಣ್ ಅವರು ಸದ್ಯ ‘ಗೇಮ್ ಚೇಂಜರ್’ (Game Changer) ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ‘ಆರ್‌ಆರ್‌ಆರ್’ ಸಿನಿಮಾದ ಯಶಸ್ಸಿನ ನಂತರ ಸ್ಕ್ರಿಪ್ಟ್ ಸೆಲೆಕ್ಷನ್‌ನಲ್ಲಿ ಸಖತ್ ಚ್ಯೂಸಿಯಾಗಿದ್ದಾರೆ.

    ಭಾರತೀಯ ಚಿತ್ರರಂಗದ ಸ್ಟಾರ್ ಆಗಿ ಮಿಂಚ್ತಿರುವ ರಾಮ್ ಚರಣ್, ಶ್ರೀನಗರದಲ್ಲಿ ನಡೆದ ಜಿ20 (G20) ಸಭೆಯಲ್ಲಿ ರಾಮ್ ಚರಣ್ ಭಾಗವಹಿಸಿದ್ದಾರೆ. ಭಾರತದ ಸಿನಿಮಾ- ಸಂಸ್ಕೃತಿ ಬಗ್ಗೆ ಮಾತನಾಡಿದ್ದಾರೆ. ನನಗೆ ಭಾರತವನ್ನು ಇನ್ನಷ್ಟು ಶೋಧಿಸುವ ಆಸೆಯಿದೆ. ಭಾರತದ ಮಣ್ಣಿಗೆ ಘನತೆಯಿದೆ. ಇಲ್ಲಿನ ಭಾವನೆಗಳ ಕುರಿತು ಜನರಿಗೆ ತಲುಪಿಸುವ ಆಸೆಯಿದೆ ಎಂದಿದ್ದಾರೆ. ಇದನ್ನೂ ಓದಿ:‘ಕೆರಾಡಿ’ ಹೆಸರಿನಲ್ಲಿ ಹೊಸ ಉದ್ಯಮಕ್ಕೆ ರಿಷಬ್‌ ಶೆಟ್ಟಿ ಎಂಟ್ರಿ

     

    View this post on Instagram

     

    A post shared by Ram Charan (@alwaysramcharan)

    ಒಂದು ಸಿನಿಮಾವನ್ನು ಶೂಟ್ ಮಾಡಲು ಅದ್ಭುತ ಜಾಗವೆಂದರೆ ಅದು ಕಾಶ್ಮೀರ. ನನ್ನ ತಂದೆ ಸಾಕಷ್ಟು ಸಿನಿಮಾಗಳನ್ನ ಕಾಶ್ಮೀರದಲ್ಲಿಯೇ ಶೂಟ್ ಮಾಡಿದ್ದಾರೆ. 95 ವರ್ಷಗಳಿಂದ ಚಿತ್ರರಂಗ ಇಲ್ಲಿಯೇ ಚಿತ್ರೀಕರಣ ಮಾಡುತ್ತಿದೆ. ಕಾಶ್ಮೀರ ಶೋಧಿಸಲು 95 ವರ್ಷ ಸಾಲದು ಎಂದು ಕಾಶ್ಮೀರ ಬಗ್ಗೆ ಬಣ್ಣಿಸಿ ರಾಮ್ ಚರಣ್ ಮಾತನಾಡಿದ್ದಾರೆ.‌ ಒಟ್ನಲ್ಲಿ  ರಾಮ್‌ ಚರಣ್‌ ಮಾತಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿದ್ದಾರೆ.

  • ಮಹಾಭಾರತ ಸಿನಿಮಾ ಮಾಡುವ ಕನಸಿನ ಯೋಜನೆ ಬಗ್ಗೆ ರಾಜಮೌಳಿ ಮಾಸ್ಟರ್‌ ಪ್ಲ್ಯಾನ್

    ಮಹಾಭಾರತ ಸಿನಿಮಾ ಮಾಡುವ ಕನಸಿನ ಯೋಜನೆ ಬಗ್ಗೆ ರಾಜಮೌಳಿ ಮಾಸ್ಟರ್‌ ಪ್ಲ್ಯಾನ್

    ಗಧೀರ, ಬಾಹುಬಲಿ, ಬಾಹುಬಲಿ 2, ಆರ್‌ಆರ್‌ಆರ್ (RRR) ಸಿನಿಮಾಗಳನ್ನ ಚಿತ್ರರಂಗಕ್ಕೆ ಕೊಡುಗೆಯಾಗಿ ಕೊಟ್ಟಿರುವ ರಾಜಮೌಳಿ ಅವರು ಇದೀಗ ತಮ್ಮ ಕನಸಿನ ಯೋಜನೆ ಬಗ್ಗೆ ಬಾಯ್ಬಿಟ್ಟಿದ್ದಾರೆ. RRR ನಂತರ ಮಹಾಭಾರತ (Mahabharatha) ಮಾಡುವ ಬಗ್ಗೆ ರಾಜಮೌಳಿ ರಿಯಾಕ್ಟ್ ಮಾಡಿದ್ದಾರೆ.

    ಭಾರತೀಯ ಸಿನಿಮಾರಂಗದಲ್ಲಿ ತಮ್ಮದೇ ಭಿನ್ನ ಶೈಲಿಯಲ್ಲಿ ಗುರುತಿಸಿಕೊಂಡವರು ರಾಜಮೌಳಿ. ಒಂದು ಸಿನಿಮಾ ಮಾಡ್ತಿದ್ದಾರೆ ಅಂದರೆ ಸಾಕಷ್ಟು ವರ್ಷಗಳ ತಯಾರಿಯೊಂದಿಗೆ ರಾಜಮೌಳಿ ಅಖಾಡಕ್ಕೆ ಇಳಿಯುತ್ತಾರೆ. ಹಾಗಾಗಿ ಸಕ್ಸಸ್‌ಫುಲ್ ನಿರ್ದೇಶಕನಾಗಿ ರಾಜಮೌಳಿ ಗುರುತಿಸಿಕೊಂಡಿದ್ದಾರೆ. ಇದನ್ನೂ ಓದಿ:‘ಹಾಸಿಗೆಯಲ್ಲಿ ರೋಷನ್ ಇರಬೇಕು’ ಡೈಲಾಗ್ ಬಿಟ್ಟ ನಿಹಾರಿಕಾ ವಿರುದ್ಧ ಕಿಡಿಕಾರಿದ ನೆಟ್ಟಿಗರು

    ಖ್ಯಾತ ನಿರ್ದೇಶಕ ರಾಜಮೌಳಿಗೆ ಕಾರ್ಯಕ್ರಮವೊಂದರಲ್ಲಿ ಮಹಾಭಾರತವನ್ನ ತೆರೆಯ ಮೇಲೆ ತರುವ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ನಿಮ್ಮ ಕನಸಿನ ಪ್ರಾಜೆಕ್ಟ್ ಮಹಾಭಾರತ ಕುರಿತಾಗಿ ಈ ಹಿಂದೆ ಮಾತನಾಡಿದ್ದೀರಿ, ಒಂದು ವೇಳೆ ನೀವು ಚಿತ್ರವನ್ನು ಮಾಡುವುದಾದರೆ ಎಷ್ಟು ಭಾಗಗಳಲ್ಲಿ ಚಿತ್ರವನ್ನು ತೆರೆಗೆ ತರುತ್ತಿರಾ? ಎಂಬ ಪ್ರಶ್ನೆಯನ್ನು ಕೇಳಲಾಗಿತ್ತು.

    ಇದಕ್ಕೆ ಉತ್ತರಿಸಿದ ರಾಜಮೌಳಿ, ಈ ಚಿತ್ರವನ್ನು ಮಾಡುವ ಮೊದಲು ದೇಶದ ಎಲ್ಲ ಆವೃತ್ತಿಗಳಲ್ಲಿ ಸಿಗುವ ಮಹಾಭಾರತವನ್ನು ಓದಿ ಅರ್ಥೈಸಿಕೊಳ್ಳಲು ಕನಿಷ್ಠ ಒಂದು ವರ್ಷ ಸಮಯಾವಕಾಶ ಬೇಕು. ಅದನ್ನು ಫಿಲ್ಮ್ ರೀತಿ ಮಾಡಬೇಕಾದರೆ ಕನಿಷ್ಠ 10 ಭಾಗಗಳನ್ನಾಗಿ ಮಾಡಬೇಕು. ಆದರೆ ನಿಖರವಾಗಿ ಎಷ್ಟು ಆಗುತ್ತದೆ ಅಂತ ಗೊತ್ತಿಲ್ಲ ಎಂದಿದ್ದಾರೆ. ಇನ್ನು, ಈ ವಿಷಯವನ್ನು ಕೇಳಿದ್ದೆ ತಡ ಅಭಿಮಾನಿಗಳು, ರಾಜ್‌ಮೌಳಿ ನಿರ್ದೇಶನದಲ್ಲಿ ಹೇಗೆ ಮಹಾಭಾರತ ಮೂಡಿ ಬರಬಹುದೆಂದು ಎಂದು ಎದುರು ನೋಡ್ತಿದ್ದಾರೆ.

  • ತಂದೆ ರಾಜಮೌಳಿ ಬಗ್ಗೆ ಸೀಕ್ರೆಟ್‌ ಬಿಚ್ಚಿಟ್ಟ ಕಾರ್ತಿಕೇಯ

    ತಂದೆ ರಾಜಮೌಳಿ ಬಗ್ಗೆ ಸೀಕ್ರೆಟ್‌ ಬಿಚ್ಚಿಟ್ಟ ಕಾರ್ತಿಕೇಯ

    ‘ಆರ್‌ಆರ್‌ಆರ್’ (RRR) ಸಿನಿಮಾದ ಮಾಸ್ಟರ್ ಮೈಂಡ್ ರಾಜಮೌಳಿ (Rajamouli) ಅವರು ಸದಾ ಸಿನಿಮಾ ವಿಚಾರವಾಗಿಯೇ ಹೆಚ್ಚು ಸುದ್ದಿ ಮಾಡುತ್ತಾರೆ. ಆದರೆ ತಮ್ಮ ವೈಯಕ್ತಿಕ ಬದುಕಿನ ಬಗ್ಗೆ ಅವರೆಲ್ಲೂ ಹೆಚ್ಚಾಗಿ ಮಾತನಾಡುವುದಿಲ್ಲ. ನಿರ್ದೇಶಕ ರಾಜಮೌಳಿ- ರಮಾ ದಂಪತಿ ಪುತ್ರ ಕಾರ್ತಿಕೇಯ (Karthikeya) ಅವರು ತಮ್ಮ ತಂದೆ ರಾಜಮೌಳಿ ಬಗ್ಗೆ ಮಾತನಾಡಿದ್ದಾರೆ.

    ಕಾರ್ತಿಕೇಯ ಅವರು ಚಿತ್ರರಂಗದಲ್ಲಿ ತಮ್ಮದೇ ಶೈಲಿನಲ್ಲಿ ಗುರುತಿಸಿಕೊಂಡಿದ್ದಾರೆ. ನಿರ್ದೇಶಕ-ನಿರ್ಮಾಪಕನಾಗಿ ಕೆಲಸ ಮಾಡಿದ್ದಾರೆ. ಕಾರ್ತಿಕೇಯ ಅವರು ರಾಜವೌಳಿ ಅವರ ಸ್ವಂತ ಮಗ ಅಲ್ಲ ಎಂಬುದು ಸಾಕಷ್ಟು ಜನರಿಗೆ ತಿಳಿದಿಲ್ಲ. ರಾಜಮೌಳಿ- ರಮಾ ಜೋಡಿ ಪ್ರೀತಿಸಿ ಮದುವೆಯಾಗಿದ್ದರು. ಅವರ ಮದುವೆಗೂ ಮುನ್ನವೇ 8 ವರ್ಷಗಳ ಹಿಂದೆ ಕಾರ್ತಿಕೇಯ ಹುಟ್ಟಿದ್ದರು. ಈ ಹಿಂದೆ ರಾಜಮೌಳಿ ಅವರ ಮದುವೆ ಪ್ರಪೋಸಲ್‌ನ ರಮಾ ತಿರಸ್ಕರಿಸಿದರು. ಆದರೆ ರಾಜಮೌಳಿ ಅವರು, ಕಾರ್ತಿಕೇಯ ತೋರುತ್ತಿದ್ದ ಪ್ರೀತಿ ಕಂಡು ಮದುವೆಗೆ ರಮಾ ಸಮ್ಮತಿ ನೀಡಿದ್ದರು. ನನ್ನ ತಾಯಿನ ಮದುವೆ ಆಗೋಕು ಮೊದಲೇ ರಾಜವಳಿ ಅವರ ಪರಿಚಯವಿತ್ತು. ಆಗಲೇ ರಾಜಮೌಳಿ ಅವರನ್ನ ತಂದೆ ಎಂದು ಫಿಕ್ಸ್ ಆಗಿದ್ದೆ ಎಂದು ಸಂದರ್ಶನವೊಂದರಲ್ಲಿ ಕಾರ್ತಿಕೇಯ ಹೇಳಿದ್ದಾರೆ. ಇದನ್ನೂ ಓದಿ:ಮದುವೆಗೂ ಮುನ್ನ ನಟಿ ಇಲಿಯಾನ ಮಗು : ಬೆಂಬಲಿಸಿದ ತಾಯಿ

    ನಿಮ್ಮ ಅಮ್ಮ ಸಿಂಗಲ್ ಮದರ್. ಆ ಸಮದಲ್ಲಿ ರಾಜಮೌಳಿ ಅವರು ಬಂದು ಅವರನ್ನು ಮದುವೆ ಆಗುತ್ತೀನಿ ಅಂದಾಗ ನಿಮಗೆ ಹೇಗನಿಸಿತು ಎಂದು ಕಾರ್ತಿಕೇಯಗೆ ಸಂದರ್ಶನದಲ್ಲಿ ಪ್ರಶ್ನೆ ಕೇಳಲಾಗಿದೆ. ಅಮ್ಮ, ರಾಜಮೌಳಿ ಅವರು ಮದುವೆ ಆಗುವುದಕ್ಕೆ ಒಂದು ವರ್ಷ ಮುಂಚಿನಿಂದಲೂ ನಮ್ಮ ಮನೆಗೆ ಬರುತ್ತಿದ್ದರು. ನನ್ನನ್ನು ಅಮ್ಮನನ್ನು ಡಿನ್ನರ್‌ಗೆ ಕರೆದುಕೊಂಡು ಹೋಗುತ್ತಿದ್ದರು. ಅವರು ಶೂಟಿಂಗ್ ಬ್ಯುಸಿಯಲ್ಲಿ ಬರದೇ ಇದ್ದರೆ ನಾನೇ ಫೋನ್ ಮಾಡಿ ಯಾಕೆ ಬಂದಿಲ್ಲ ಎಂದು ಕೇಳುತ್ತಿದ್ದೆ, ಸಂಬಂಧಿಕರೇ ಆಗಿದ್ದರಿಂದ ರಾಜಮೌಳಿ ಅವರು ಮೊದಲಿನಿಂದಲೂ ಗೊತ್ತಿತ್ತು.

    ಆದರೆ ಮದುವೆಗೂ ಒಂದು ವರ್ಷ ಮೊದಲು ಮನೆಗೆ ಹೆಚ್ಚು ಬರುತ್ತಿದ್ದರು. ನನಗೆ ಆಗ 8ರಿಂದ 9 ವರ್ಷ ವಯಸ್ಸು. ಅಮ್ಮ, ನಾನು ಅವರೊಟ್ಟಿಗೆ ಹೊರಗೆ ಹೋಗುತ್ತಿದ್ದೆವು. ಆಗಲೇ ನನಗೆ ತಂದೆಯ ವೈಬ್ ಬಂದುಬಿಟ್ಟಿತ್ತು. ಒಬ್ಬ ತಂದೆ ರೀತಿ ಫೀಲ್ ಆಗುತ್ತಿತ್ತು. ಮೈಂಡ್‌ನಲ್ಲಿ ತಂದೆ ಅಂತ ಫಿಕ್ಸ್ ಆಗಿಬಿಟ್ಟಿದ್ದೆ. ಅವರನ್ನು ಬಿಡಬೇಕು ಎಂದು ಅನ್ನಿಸಲಿಲ್ಲ ಎಂದು ಕಾರ್ತಿಕೇಯ ವಿವರಿಸಿದ್ದಾರೆ.

  • ದುಬೈನಲ್ಲಿ ರಾಮ್‌ ಚರಣ್ ಪತ್ನಿ ಉಪಾಸನಾ ಬೇಬಿ ಶವರ್‌ ಸಂಭ್ರಮ

    ದುಬೈನಲ್ಲಿ ರಾಮ್‌ ಚರಣ್ ಪತ್ನಿ ಉಪಾಸನಾ ಬೇಬಿ ಶವರ್‌ ಸಂಭ್ರಮ

    ಟಾಲಿವುಡ್ (Tollywood) ಸ್ಟಾರ್ ರಾಮ್ ಚರಣ್ (Ram Charan) ಕುಟುಂಬದಲ್ಲಿ ಸಂತಸ ಮನೆ ಮಾಡಿದೆ. ಜ್ಯೂನಿಯರ್ ರಾಮ್ ಚರಣ್ (Jr.ntr) ಮನೆಗೆ ಬರಲು ದಿನಗಣನೆ ಶುರುವಾಗಿದೆ. ಸದ್ಯ ಚರಣ್ ಪತ್ನಿ ಉಪಾಸನಾ (Upasana) ಬೇಬಿ ಶವರ್ (Baby Shower) ಪಾರ್ಟಿಯನ್ನ ದುಬೈನಲ್ಲಿ ಅದ್ದೂರಿಯಾಗಿ ನಡೆದಿದೆ.

    ಮದುವೆಯಾಗಿ 10 ವರ್ಷಗಳ ನಂತರ ತಾಯಿಯಾಗುತ್ತಿರುವ ಉಪಾಸನಾ ಚೊಚ್ಚಲ ಮಗು ಆಗಮನವಾಗುತ್ತಿರುವ ಖುಷಿಯಲ್ಲಿದ್ದಾರೆ. ಸದ್ಯ RRR ಚಿತ್ರದ ಹಾಡಿಗೆ ಆಸ್ಕರ್ ಸಿಕ್ಕ ಸಂತಸದ ಬೆನ್ನಲ್ಲೇ ಪತ್ನಿಯ ಬೇಬಿ ಶವರ್ ಪಾರ್ಟಿ ಮಾಡುವ ಮೂಲಕ ಸಂಭ್ರಮಿಸಿದ್ದಾರೆ.

    ಬೀಚ್ ಬಳಿ ಗ್ರ್ಯಾಂಡ್ ಡೆಕೋರೆಷನ್ ಮಾಡಿ, ಅದ್ದೂರಿಯಾಗಿ ಸೆಲೆಬ್ರೆಟ್ ಮಾಡಿದ್ದಾರೆ. ರಾಮ್ ಚರಣ್- ಉಪಾಸನಾ ಜೊತೆ ಇಡೀ ಕುಟುಂಬದವರು ಕೂಡ‌ ಬೇಬಿ ಶವರ್‌ ಪಾಟಿಯಲ್ಲಿ ಭಾಗಿಯಾಗಿದ್ದಾರೆ. ಉಪಾಸನಾ ಸಹೋದರಿ ಅನುಷ್‌ಪಲಾ & ಸಿಂಧೂರಿ ರೆಡ್ಡಿ ಈ ಪಾರ್ಟಿಯನ್ನ ಆಯೋಜನೆ ಮಾಡಿದ್ದಾರೆ. ಸೆಲೆಬ್ರೇಷನ್ ವೀಡಿಯೋವನ್ನ ಉಪಾಸನಾ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಇದನ್ನೂ ಓದಿ:ಕಿಚ್ಚ ಸುದೀಪ್ ನಡೆಗೆ ಅಚ್ಚರಿಯಲ್ಲ, ನೋವು ತಂದಿದೆ : ಪ್ರಕಾಶ್ ರಾಜ್

    ರಾಮ್ ಚರಣ್ RRR, ಸಕ್ಸಸ್ ನಂತರ ‘ಗೇಮ್ ಚೇಂಜರ್’ ಸಿನಿಮಾದಲ್ಲಿ ಆಕ್ಟ್ ಮಾಡ್ತಿದ್ದಾರೆ. ಚರಣ್-ಕಿಯಾರಾ ಕಾಂಬೋದಲ್ಲಿ ಸಿನಿಮಾ ಮೂಡಿ ಬರುತ್ತಿದೆ. ಈ ಚಿತ್ರವನ್ನ ಶಂಕರ್ ನಿರ್ದೇಶನ ಮಾಡಿದ್ದಾರೆ.

  • `ನಾಟು ನಾಟು’ ಸಾಂಗ್ ಆಸ್ಕರ್ ಗೆಲ್ಲೋಕೆ ನಾನೇ ಕಾರಣ: ಅಜಯ್ ದೇವಗನ್

    `ನಾಟು ನಾಟು’ ಸಾಂಗ್ ಆಸ್ಕರ್ ಗೆಲ್ಲೋಕೆ ನಾನೇ ಕಾರಣ: ಅಜಯ್ ದೇವಗನ್

    ರಾಜಮೌಳಿ (Rajamouli) ನಿರ್ದೇಶನದ RRR ಸಿನಿಮಾದ `ನಾಟು ನಾಟು’ (Naatu Naatu Song)  ಹಾಡಿಗೆ ಆಸ್ಕರ್ ಬಂದಿರೋದು ವಿಶ್ವದೆಲ್ಲೆಡೆಯಿಂದ ಪ್ರಶಂಸೆಯ ಮಹಾಪೂರವೇ ಹರಿದು ಬರುತ್ತಿದೆ. ನಾಟು ನಾಟು ಸಾಂಗ್ ಆಸ್ಕರ್ ಗೆದ್ದಿರೋದ್ದಕ್ಕೆ ಇಡೀ ತಂಡದ ಶ್ರಮವಿದೆ. ಹೀಗಿರುವಾಗ ಹಿಂದಿ ನಟ ಅಜಯ್ ದೇವಗನ್ ಅವರು ʻನಾಟು ನಾಟು ಆಸ್ಕರ್ ಗೆದ್ದಿದ್ದಕ್ಕೆ ನಾನೇ ಕಾರಣʼ ಎಂದು ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ದೇವರಾಜ್ ನಟನೆಯ ‘ವೀರಂ’ ಟ್ರೈಲರ್ ರಿಲೀಸ್

    ಬಾಲಿವುಡ್ ನಟ ಅಜಯ್ ದೇವಗನ್ (Ajay Devgan) ನಟಿಸಿ, ನಿರ್ದೇಶಿಸಿರುವ `ಭೋಲಾ’ (Bhola) ಸಿನಿಮಾ ಮಾರ್ಚ್ 30ರಂದು ತೆರೆಗೆ ಅಪ್ಪಳಿಸಲು ಸಜ್ಜಾಗಿದೆ. ಸದ್ಯ ಈ ಸಿನಿಮಾದ ಪ್ರಚಾರ ಕಾರ್ಯಕ್ರಮದಲ್ಲಿ ನಟ ಬ್ಯುಸಿಯಾಗಿದ್ದಾರೆ. ಇದೀಗ ಸಂದರ್ಶನವೊಂದರಲ್ಲಿ ನಾಟು ನಾಟು ಹಾಡಿನ ಬಗ್ಗೆ ಅಜಯ್ ದೇವಗನ್ ತಮಾಷೆ ಮಾಡಿದ್ದಾರೆ.

    `ನಾಟು ನಾಟು’ ಹಾಡು ಆಸ್ಕರ್ ಗೆಲ್ಲೋಕೆ ಹಲವು ವಿಚಾರ ಕಾರಣ ಆಗಿದೆ. ಚಿತ್ರದ ಸಂಗೀತವೂ ಕಮಾಲ್ ಮಾಡಿದೆ. ಒಟ್ಟಾರೆ ಹಾಡಿನಲ್ಲಿರುವ ಪ್ರತಿ ವಿಚಾರವೂ ಆಸ್ಕರ್ ಗೆಲ್ಲೋಕೆ ಸಹಕಾರಿ ಆಗಿದೆ. ಈಗ ಅಜಯ್ ದೇವಗನ್ ಈ ವಿಚಾರದಲ್ಲಿ ಜೋಕ್ ಮಾಡಿದ್ದಾರೆ. ನಾಟು ನಾಟು’ ಆಸ್ಕರ್ ಗೆಲ್ಲೋಕೆ ನಾನೇ ಕಾರಣ, ಏಕೆಂದರೆ ನಾನು ಆ ಹಾಡಿನಲ್ಲಿ ಡ್ಯಾನ್ಸ್ ಮಾಡಿಲ್ಲವಲ್ಲ ಎಂದಿದ್ದಾರೆ. ಈ ಮೂಲಕ ತಮಗೆ ಡ್ಯಾನ್ಸ್ ಮಾಡೋಕೆ ಬರಲ್ಲ ಎಂದಿದ್ದಾರೆ.

    ಇದೀಗ ಅಜಯ್ ದೇವಗನ್ ಅವರ ಜೋಕ್ ಅಭಿಮಾನಿಗಳಿಗೆ ಇಷ್ಟವಾಗಿದೆ. ಮೊದಲ ಬಾರಿಗೆ ಅವರು ನಗೋದನ್ನ ನೋಡಿದೆವು ಎಂದು ಫ್ಯಾನ್ಸ್ ಕಾಮೆಂಟ್ ಮಾಡಿದ್ದಾರೆ.

  • ಆಸ್ಕರ್ ಇವೆಂಟ್‌ನಲ್ಲಿ ಭಾಗಿಯಾಗಲು ಭಾರಿ ಮೊತ್ತ ಖರ್ಚು ಮಾಡಿದ ರಾಜಮೌಳಿ ಆ್ಯಂಡ್ ಟೀಂ

    ಆಸ್ಕರ್ ಇವೆಂಟ್‌ನಲ್ಲಿ ಭಾಗಿಯಾಗಲು ಭಾರಿ ಮೊತ್ತ ಖರ್ಚು ಮಾಡಿದ ರಾಜಮೌಳಿ ಆ್ಯಂಡ್ ಟೀಂ

    ಭಾರತಕ್ಕೆ ಆಸ್ಕರ್ ಅವಾರ್ಡ್ (Oscars 2023) ಬರುವಂತೆ ಮಾಡಿರುವ ಸ್ಟಾರ್ ನಿರ್ದೇಶಕ ರಾಜಮೌಳಿ (Rajamouli) ಅವರ ಶ್ರಮ ಸಾಕಷ್ಟಿದೆ. ಅಷ್ಟೇ ಅಲ್ಲದೇ, ಇಡೀ RRR ಚಿತ್ರದ ತಂಡದ ಟೀಂ ವರ್ಕ್ ಎಂದೇ ಹೇಳಬಹುದು. ಈ ಸಿನಿಮಾವನ್ನ ಆಸ್ಕರ್‌ಗೆ ನಾಮಿನೇಟ್ ಮಾಡಿಸಲು ನಡೆಸಿದ ಕ್ಯಾಂಪೇನ್‌ಗಾಗಿ ಕೋಟಿ ಕೋಟಿ ಖರ್ಚು ಮಾಡಿದ್ದ ರಾಜಮೌಳಿ ಆ್ಯಂಡ್ ಟೀಂ ಆಸ್ಕರ್ ಸಮಾರಂಭದಲ್ಲಿ ಸಹ ದೊಡ್ಡ ಮೊತ್ತದ ಹಣವನ್ನೇ ತೆತ್ತಿದ್ದಾರೆ.

    ಆಸ್ಕರ್ ಅಂಗಳದಲ್ಲಿ ಭಾರತದ ಎರಡು ಸಿನಿಮಾ ಆಸ್ಕರ್ ಅವಾರ್ಡ್ (Oscars 2023) ಪಡೆದು ಗೆದ್ದು ಬೀಗಿದೆ. ಹೀಗಿರುವಾಗ RRR ಚಿತ್ರದ `ನಾಟು ನಾಟು’ (Naatu Naatu) ಸಾಂಗ್‌ನ ನಾಮಿನೇಟ್ ಮಾಡಿಸಲು ಭರ್ಜರಿ ಕ್ಯಾಂಪೇನ್ ಮಾಡಿದ್ದರು. ಅದಕ್ಕಾಗಿ ಹಣದ ಹೊಳೆಯನ್ನೇ ಹರಿಸಿದ್ದರು. ಆದರೆ ಮತ್ತೊಂದು ಅಚ್ಚರಿಯ ಮಾಹಿತಿ ಸಿಕ್ಕಿದೆ. ರಾಜಮೌಳಿ ಚಿತ್ರತಂಡ ತಮ್ಮ ಕುಟುಂಬದ ಜೊತೆ ಆಸ್ಕರ್ ಅವಾರ್ಡ್‌ನಲ್ಲಿ ಭಾಗಿಯಾಗಲು ಲಕ್ಷ ಲಕ್ಷ ರೂಪಾಯಿ ಖರ್ಚು ಮಾಡಿದ್ದಾರೆ. ಇದನ್ನೂ ಓದಿ: ಉರಿಗೌಡ- ನಂಜೇಗೌಡ ಚಿತ್ರ: ಚುಂಚಶ್ರೀ ಭೇಟಿಯಾಗಲಿರುವ ಮುನಿರತ್ನ

    ಆಸ್ಕರ್ ನಾಮಿನೇಟ್ ಆದವರಿಗಷ್ಟೆ ಪ್ರಶಸ್ತಿಯ ಆಯೋಜಕರಾದ ಅಕಾಡೆಮಿ ಆಫ್ ಮೋಷನ್ ಪಿಕ್ಚರ್ಸ್ ಆರ್ಟ್ ಆಂಡ್ ಸೈನ್ಸ್ ನವರು ಟಿಕೆಟ್ ಕಳಿಸುತ್ತಾರೆ. ಹಾಗಾಗಿ ನಾಮಿನೇಟ್ ಆಗಿದ್ದ ಸಂಗೀತ ನಿರ್ದೇಶಕ ಎಂ.ಎಂ ಕೀರವಾಣಿ ಮತ್ತು ಚಿತ್ರ ಸಾಹಿತಿ ಚಂದ್ರಭೋಸ್ ಹಾಗೂ ಅವರ ಕುಟುಂಬದವರಿಗಷ್ಟೆ ವಿಮಾನ ಟಿಕೆಟ್ ಹಾಗೂ ಆಸ್ಕರ್ ಹಾಲ್‌ಗೆ ಉಚಿತ ಎಂಟ್ರಿ ನೀಡಲಾಗಿತ್ತು. ರಾಜಮೌಳಿ, ರಾಮ್ ಚರಣ್, ತಾರಕ್ ಅವರ ಕುಟುಂಬಗಳಿಗೆ ಟಿಕೆಟ್ ನೀಡಿರಲಿಲ್ಲ. ಅವರುಗಳು ಸ್ವಂತ ಖರ್ಚಿನಲ್ಲಿಯೇ ಆಸ್ಕರ್ ಸಮಾರಂಭದಲ್ಲಿ ಭಾಗವಹಿಸಿದ್ದರು.

    ಆಸ್ಕರ್ ಸಮಾರಂಭ ವೀಕ್ಷಿಸಲು, ರೆಡ್ ಕಾರ್ಪೆಟ್ ಇವೆಂಟ್‌ನಲ್ಲಿ ಭಾಗವಹಿಸಲು ಮತ್ತು ಇನ್ನಿತರೆಗಳಿಗೆ ಭಾರಿ ದೊಡ್ಡ ಮೊತ್ತದ ಟಿಕೆಟ್ ಅನ್ನು ಖರೀದಿಸಬೇಕಾಗುತ್ತದೆ. ಈ ಹಿಂದಿಗಿಂತಲೂ ಈ ಬಾರಿ ಟಿಕೆಟ್ ಬೆಲೆ ಹೆಚ್ಚು ನಿಗದಿಪಡಿಸಲಾಗಿತ್ತು. ಹಾಗಾಗಿ ರಾಜಮೌಳಿ ಬರೋಬ್ಬರಿ 25000 ಡಾಲರ್ ನೀಡಿ ಟಿಕೆಟ್ ಖರೀದಿ ಮಾಡಿದ್ದರಂತೆ. ಭಾರತದ ರೂಪಾಯಿ ಲೆಕ್ಕದಲ್ಲಿ ಒಂದು ಟಿಕೆಟ್‌ಗೆ ಜಕ್ಕಣ್ಣ 20.60 ಲಕ್ಷ ಹಣ ತೆತ್ತಿದ್ದಾರೆ. ರಾಜಮೌಳಿಯವರು ತಮ್ಮ ಪತ್ನಿ ಹಾಗೂ ಪುತ್ರ ಹಾಗೂ ಸೊಸೆಯೊಡನೆ ಇವೆಂಟ್‌ಗೆ ಹೋಗಿದ್ದರಾದ್ದರಿಂದ ಸುಮಾರು 80 ಲಕ್ಷಕ್ಕೂ ಹೆಚ್ಚು ಮೊತ್ತವನ್ನು ಕೇವಲ ಟಿಕೆಟ್‌ಗೆ ಖರ್ಚು ಮಾಡಿದ್ದಾರೆ.

    20 ಲಕ್ಷ ಒಬ್ಬ ವ್ಯಕ್ತಿಗೆ ನೀಡಿದ್ದರೂ ಸಹ ಅದು ವಿಐಪಿ ಟಿಕೆಟ್ ಆಗಿರಲಿಲ್ಲ ವಿಐಪಿ ಟಿಕೆಟ್ ಪಡೆಯಲು 40 ಲಕ್ಷಕ್ಕಿಂತಲೂ ಹೆಚ್ಚು ಹಣ ತೆರಬೇಕಿತ್ತು. ಇದೇ ಕಾರಣಕ್ಕೆ ರಾಜಮೌಳಿ ಹಾಗೂ ಅವರ ಕುಟುಂಬ ಸದಸ್ಯರು ಆಸ್ಕರ್ ನಡೆಯುತ್ತಿದ್ದ ಹಾಲ್‌ನ ಕೊನೆಯ ಸಾಲಿನಲ್ಲಿ ಕೂತು ಇವೆಂಟ್ ಅನ್ನು ವೀಕ್ಷಿಸಿದ್ದರು.