Tag: ಆರ್ಚರ್

  • ಈ ವರ್ಷ ಆಡದೇ ಇದ್ದರೂ ಆರ್ಚರ್‌ಗೆ ಮುಂಬೈ 8 ಕೋಟಿ ನೀಡಿದ್ದು ಯಾಕೆ: ರಿವೀಲ್‌ ಮಾಡಿದ ಆಕಾಶ್‌ ಅಂಬಾನಿ

    ಈ ವರ್ಷ ಆಡದೇ ಇದ್ದರೂ ಆರ್ಚರ್‌ಗೆ ಮುಂಬೈ 8 ಕೋಟಿ ನೀಡಿದ್ದು ಯಾಕೆ: ರಿವೀಲ್‌ ಮಾಡಿದ ಆಕಾಶ್‌ ಅಂಬಾನಿ

    ಬೆಂಗಳೂರು: ಈ ವರ್ಷ ಐಪಿಎಲ್‌ ಆಡದೇ ಇದ್ದರೂ ಜೋಫ್ರಾ ಆರ್ಚರ್‌ ಅವರನ್ನು ಮುಂಬೈ ಇಂಡಿಯನ್ಸ್‌ 8 ಕೋಟಿ ರೂ. ಖರೀದಿಸಿದ್ದು ಯಾಕೆ ಎಂಬ ಪ್ರಶ್ನೆಗೆ ಮಾಲಕಿ ನೀತಾ ಅಂಬಾನಿ ಪುತ್ರ ಆಕಾಶ್‌ ಅಂಬಾನಿ ತಿಳಿಸಿದ್ದಾರೆ.

    ವರ್ಚುಯಲ್‌ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲ ದಿನದ ಹರಾಜಿನ ನಂತರ ಉಳಿದಿರುವ ವೇಗದ ಬೌಲರ್‌ಗಳ ಪೈಕಿ ಜೋಫ್ರಾ ಆರ್ಚರ್ ಖರೀದಿಸುವ ಬಗ್ಗೆ ಚರ್ಚೆ ಮಾಡಿ ನಿರ್ಧಾರ ಮಾಡಿದೆವು. ಈ ವರ್ಷ ಅವರು ಲಭ್ಯ ಇರುವುದಿಲ್ಲ. ಫಿಟ್‌ ಆದಾಗ ಬುಮ್ರಾ, ಆರ್ಚರ್‌ ಜೋಡಿ ಬೌಲಿಂಗ್‌ನಲ್ಲಿ ನಮಗೆ ಬಲ ತುಂಬಬಹುದು ಎಂದು ಹೇಳಿದ್ದಾರೆ.

    ಶನಿವಾರ ರಾತ್ರಿಯೇ ಆರ್ಚರ್‌ ಅವರನ್ನು ಖರೀದಿಸುವ ಬಗ್ಗೆ ನಿರ್ಧಾರ ಮಾಡಲಾಯಿತು. ತಂಡಕ್ಕೆ ವೇಗದ ಬೌಲರ್‌ ಬೇಕು ಎಂದಾಗ ನಮ್ಮ ಆಯ್ಕೆ ಆರ್ಚರ್‌ ಆಗಿತ್ತು. ಈ ಕಾರಣಕ್ಕೆ ಬಜೆಟ್‌ ಅನ್ನು ಮೊದಲೇ ಸಿದ್ಧಪಡಿಸಿ ಶನಿವಾರ ರಾತ್ರಿಯೇ ಫೈನಲ್‌ ಮಾಡಿದ್ದೆವು ಎಂದು ತಿಳಿಸಿದರು. ಇದನ್ನೂ ಓದಿ: ಐಪಿಎಲ್ ಹರಾಜು ಅಂತ್ಯ – ಫ್ರಾಂಚೈಸ್‍ಗಳಿಗೆ ಬೇಡವಾದ ಸ್ಟಾರ್ ಆಟಗಾರರು

    ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲಿ ಸಮತೋಲನ ಹೊಂದಿರುವ ಮುಂಬೈ 5 ಬಾರಿ ಚಾಂಪಿಯನ್‌ ಆಗಿದೆ. ಹೀಗಾಗಿ 2023ರ ಐಪಿಎಲ್‌ ಅನ್ನು ಗಮನದಲ್ಲಿಟ್ಟುಕೊಂಡು ಆರ್ಚರ್‌ ಅವರನ್ನು ಖರೀದಿ ಮಾಡಿದೆ.

    ಲಸಿತ್ ಮಲಿಂಗ ವಿದಾಯದ ಬಳಿಕ ಮುಂಬೈ ಇಂಡಿಯನ್ಸ್ ಹಲವು ವಿದೇಶಿ ಬೌಲರ್‌ಗಳನ್ನು ಖರೀದಿ ಮಾಡಿದೆ. ಆದರೆ ಯಾರೂ ಅಷ್ಟೊಂದು ಯಶಸ್ವಿಯಾಗಿಲ್ಲ. ಹೀಗಾಗಿ ಬುಮ್ರಾ, ಆರ್ಚರ್‌ ಜೋಡಿ ಒಂದಾದರೆ ಬೌಲಿಂಗ್‌ನಲ್ಲಿ ಬ್ಯಾಟ್ಸ್‌ಮನ್‌ಗಳನ್ನು ಕಟ್ಟಿ ಹಾಕಬಹುದು ಎಂಬ ಲೆಕ್ಕಾಚಾರವನ್ನು ಮುಂಬೈ ಹಾಕಿಕೊಂಡಿದೆ.  ಇದನ್ನೂ ಓದಿ: ಮೋದಿಯಿಂದ ದೀಪ ಹಚ್ಚುವಂತೆ ಕರೆ – ವೈರಲ್ ಆಯ್ತು ಜೋಫ್ರಾ ಆರ್ಚರ್ ನುಡಿದಿದ್ದ ಭವಿಷ್ಯ

    ಗಾಯಗೊಂಡಿರುವ ಜೋಫ್ರಾ ಆರ್ಚರ್ 2021ರ ಐಪಿಎಲ್ ಟೂರ್ನಿಯಿಂದಲೂ ಹೊರಗುಳಿದಿದ್ದರು. ಟಿ20 ವಿಶ್ವಕಪ್ ಟೂರ್ನಿ ಕಾರಣ ಜೋಫ್ರಾ ಐಪಿಎಲ್ ಟೂರ್ನಿಯಿಂದ ದೂರ ಉಳಿದಿದ್ದರು. ಇದು ರಾಜಸ್ಥಾನ ರಾಯಲ್ಸ್ ತಂಡಕ್ಕೆ ಭಾರೀ ಹೊಡೆತ ನೀಡಿತ್ತು.

    ಐಪಿಎಲ್ ಟೂರ್ನಿಯಲ್ಲಿ ಒಟ್ಟು 35 ಪಂದ್ಯಗಳನ್ನು ಆಡಿರುವ ಜೋಫ್ರಾ ಆರ್ಚರ್ 46 ವಿಕೆಟ್ ಪಡೆದಿದ್ದಾರೆ. 15 ರನ್ ನೀಡಿ 3 ವಿಕೆಟ್ ಕಬಳಿಸಿರುವುದು ಜೋಫ್ರಾ ಅತ್ಯುತ್ತಮ ಸಾಧನೆಯಾಗಿದೆ. ಇಂಗ್ಲೆಂಡ್ ಪರ 12 ಟಿ20 ಪಂದ್ಯ ಆಡಿರುವ ಜೋಫ್ರಾ ಆರ್ಚರ್ 14 ವಿಕೆಟ್ ಉರುಳಿಸಿದ್ದಾರೆ. 13 ಟೆಸ್ಟ್ ಪಂದ್ಯ ಹಾಗೂ 17 ಏಕದಿನ ಪಂದ್ಯವನ್ನೂ ಆಡಿದ್ದಾರೆ.  ಇದನ್ನೂ ಓದಿ: ಐಪಿಎಲ್ ಹರಾಜು ಅಂತ್ಯ – ಫ್ರಾಂಚೈಸ್‍ಗಳಿಗೆ ಬೇಡವಾದ ಸ್ಟಾರ್ ಆಟಗಾರರು

  • ತರಬೇತಿ ವೇಳೆ 14ರ ಬಾಲಕಿಯ ಕುತ್ತಿಗೆಗೆ ಚುಚ್ಚಿಕೊಳ್ತು ಬಾಣ!

    ತರಬೇತಿ ವೇಳೆ 14ರ ಬಾಲಕಿಯ ಕುತ್ತಿಗೆಗೆ ಚುಚ್ಚಿಕೊಳ್ತು ಬಾಣ!

    ಕೋಲ್ಕತ್ತಾ: ತರಬೇತಿ ವೇಳೆ 14 ವರ್ಷ ವಯಸ್ಸಿನ ಬಾಲಕಿಯ ಕುತ್ತಿಗೆಯ ಬಲಭಾಗದಲ್ಲಿ ಬಾಣವೊಂದು ಚುಚ್ಚಿಕೊಂಡ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.

    ಈ ಘಟನೆ ಪಶ್ಚಿಮ ಬಂಗಾಳದ ಬಿರ್ಭಮ್ ಜಿಲ್ಲೆಯಲ್ಲಿರೋ ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ನಡೆದಿದೆ. ಬಾಲಕಿ ಫಝಿಲಾ ಖತುನ್‍ಗೆ ಬಾಣ ಚುಚ್ಚಿಕೊಂಡಿತ್ತು. ಸದ್ಯ ಶಸ್ತ್ರ ಚಿಕಿತ್ಸೆಯ ಮೂಲಕ ಬಾಲಕಿಯ ಕುತ್ತಿಗೆಯಲ್ಲಿ ಚುಚ್ಚಿಕೊಂಡಿದ್ದ ಬಾಣವನ್ನು ಹೊರತೆಗೆಯಲಾಗಿದೆ ಅಂತ ಬೊಲ್ಪುರ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

    ಏನಿದು ಘಟನೆ?: ನಾವು ನಾಲ್ಕು ಮಂದಿ ತರಬೇತಿ ಪಡೆಯುತ್ತಿದ್ದೆವು. ಇಬ್ಬರು ಅಭ್ಯಾಸ ಮುಗಿಸಿದ್ದರು. ನಾನು ಮತ್ತು ಫಝಿಲಾ ಅಭ್ಯಾಸ ಮಾಡುತ್ತಿದ್ದೆವು. ನಾನು ಬಾಣ ಬಿಟ್ಟ ವೇಳೆ ಫಝಿಲಾ ಅಚಾನಕ್ ಆಗಿ ಎದುರು ಬಂದಳು. ಪರಿಣಾಮ ಚೂಪಾದ ಬಾಣ ಆಕೆಯ ಕುತ್ತಿಗೆ ಹೊಕ್ಕಿತು ಅಂತ ಜ್ಯುವೆಲ್ ಶೇಕ್ ಮಾಧ್ಯಮಕ್ಕೆ ತಿಳಿಸಿದ್ದಾಳೆ.

    ಶಸ್ತ್ರ ಚಿಕಿತ್ಸೆ ಬಳಿಕ ಬಾಲಕಿ ಫಝಿಲಾ ಮಾತನಾಡಿದ್ದು, ಜ್ಯುವೆಲ್ ಅಭ್ಯಾಸ ಮಾಡುತ್ತಿದ್ದುದನ್ನು ನಾನು ಗಮನಿಸಲಿಲ್ಲ. ನಾನು ತುಂಬಾ ಹತ್ತಿರ ಹೋದ ಕಾರಣ ಬಾಣ ಚುಚ್ಚಿಕೊಳ್ತು. ಈ ವೇಳೆ ಸ್ಥಳದಲ್ಲಿ ಯಾವ ತರಬೇತುದಾರರೂ ಇರಲಿಲ್ಲ ಅಂತ ಹೇಳಿದ್ದಾಳೆ.

    ಬಾಲಕಿ ಅಪಾಯದಿಂದ ಪಾರಾಗಿದ್ದಾಳೆ ಎಂದು ವೈದ್ಯರು ಹೇಳಿದ್ದಾರೆ.