Tag: ಆರ್ಥಿಕ ನಷ್ಟ

  • ಇರಾನ್ ಹಾರ್ಮುಝ್ ಜಲಸಂಧಿ ಬಂದ್ ಮಾಡಿದ್ರೆ ಭಾರತಕ್ಕೆ ಭಾರೀ ನಷ್ಟ: ಹಿರಿಯ ಪ್ರಾಧ್ಯಾಪಕ ಎಸ್.ಆರ್ ಕೇಶವ್

    ಇರಾನ್ ಹಾರ್ಮುಝ್ ಜಲಸಂಧಿ ಬಂದ್ ಮಾಡಿದ್ರೆ ಭಾರತಕ್ಕೆ ಭಾರೀ ನಷ್ಟ: ಹಿರಿಯ ಪ್ರಾಧ್ಯಾಪಕ ಎಸ್.ಆರ್ ಕೇಶವ್

    ಬೆಂಗಳೂರು: ಇರಾನ್ (Iran) ಹಾರ್ಮುಝ್ ಜಲಸಂಧಿ (Hormuz Strait) ಬಂದ್ ಮಾಡಿದ್ರೆ ಭಾರತಕ್ಕೆ ಭಾರೀ ನಷ್ಟವಾಗಲಿದೆ, ಆರ್ಥಿಕತೆಗೂ ಹೊಡೆತ ಬೀಳಲಿದೆ ಎಂದು ಅರ್ಥಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕ ಎಸ್.ಆರ್ ಕೇಶವ್ (SR Keshav) ಹೇಳಿದ್ದಾರೆ.

    ಇರಾನ್‌-ಇಸ್ರೇಲ್‌ ನಡುವೆ ಸಂಘರ್ಷ (Israel Iran Conflict) ತೀವ್ರಗೊಂಡಿದ್ದು, ಭಾರತದ ಆರ್ಥಿಕತೆ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ ಎಂಬ ಚರ್ಚೆಗಳು ನಡೆಯುತ್ತಿವೆ. ಸಂಘರ್ಷ ಮುಂದುವರಿದ್ರೆ ಅಥವಾ ಇರಾನ್‌ ಮುಂದಿನ ಕ್ರಮ ಭಾರತದ (India) ಮೇಲೆ ಏನು ಪರಿಣಾಮಗಳು ಬೀರಬಹುದು ಅನ್ನೋ ಕುರಿತು ಎಸ್. ಆರ್ ಕೇಶವ್ ಮಾತನಾಡಿದ್ದಾರೆ.

    ಆಮದು-ರಫ್ತಿನ ಪ್ರಮುಖ ಮಾರ್ಗ
    ಇರಾನ್ ಹಾರ್ಮುಝ್ ಜಲಸಂಧಿ ಬಂದ್ ಮಾಡಿದ್ರೆ ಕಷ್ಟವಾಗುತ್ತದೆ. ಸಹಜವಾಗಿಯೇ ವಿಶ್ವದಲ್ಲಿ ಯಾವುದೇ ಯುದ್ಧವಾದ್ರೂ ವಿಶ್ವದ ಎಲ್ಲಾ ದೇಶಗಳಿಗೂ ಪರಿಣಾಮ ಬೀರುತ್ತೆ. ಅದೇ ರೀತಿ ಇಸ್ರೇಲ್-ಇರಾನ್ ಯುದ್ಧ ಸುದೀರ್ಘವಾದಷ್ಟು ಭಾರತಕ್ಕೆ ಲಾಸ್. ಏಕೆಂದ್ರೆ ಭಾರತದ 80% ರಷ್ಟು ಕಚ್ಚಾ ತೈಲವನ್ನ (Crude oil) ಆಮದು ಮಾಡಿಕೊಳ್ಳುತ್ತೆ. ಹಾರ್ಮೂಝ್ ಜಲಸಂಧಿ ಮಾರ್ಗದಿಂದಲೇ ಭಾರತಕ್ಕೆ ಆಮದು ಆಗಬೇಕು. ಭಾರತದಿಂದ ರಫ್ತಾಗುವ ಎಲ್ಲ ವಸ್ತುಗಳು ಸಹ ಈ ಜಲಸಂಧಿಯಿಂದಲೇ ಹೋಗಬೇಕು ಎಂದು ವಿವರಿಸಿದ್ರು.

    ಈಗಾಗಲೇ ಆಮದು, ರಫ್ತು ಎರಡಲ್ಲೂ ಭಾರತಕ್ಕೆ ನಷ್ಟ ಶುರುವಾಗಿದೆ. ಇಸ್ರೇಲ್‌ ಜೊತೆಗಿನ ಸಂಘರ್ಷ ತೀವ್ರವಾದ ಬೆನ್ನಲ್ಲೇ ಇರಾನ್ ಜೊತೆಗೆ ವಹಿವಾಟು ಕಡಿಮೆ ಆಗಿದೆ. ಜೊತೆಗೆ ಸೌದಿ ಅರೇಬಿಯಾ, ಯುಎಇ, ಅರಬ್ ದೇಶಗಳಿಂದ ಸಾಗಣಿಕೆಗೆ ಈ ಜಲಸಂಧಿಯಲ್ಲೇ ಬರಬೇಕು. ಎಲ್ಲಾ ಆಮದು ಬರೋದಕ್ಕೆ ಈ ಜಲಸಂಧಿ ಮಾರ್ಗವೇ ಹತ್ತಿರವಾಗುತ್ತೆ. ಯೂರೋಪ್ ದೇಶಗಳಿಗೆ ಭಾರತ ರಪ್ತು ಮಾಡೋದಕ್ಕೂ ಈ ಮಾರ್ಗವೇ ಮುಖ್ಯ. ಹಾಗಾಗಿ ಇರಾನ್ ಹಾರ್ಮುಝ್ ಜಲಸಂಧಿ ಬಂದ್ ಮಾಡಿದ್ರೇ ಭಾರತಕ್ಕೆ ಭಾರೀ ನಷ್ಟವಾಗುತ್ತದೆ ಎಂದು ತಿಳಿಸಿದರು.

    ಜೊತೆಗೆ ಏಷ್ಯಾ ದೇಶಗಳ ಸಂಪರ್ಕಕ್ಕೂ ನೇರ ಹೊಡೆತ ಬೀಳುತ್ತೆ. ಭಾರತ ಮಾತ್ರವಲ್ಲ ಬಹುತೇಕ ಎಲ್ಲ ಏಷ್ಯಾ ರಾಷ್ಟ್ರಗಳಿಗೆ ಹೊಡೆತ ಬೀಳುತ್ತೆ. ಸದ್ಯದ ಪರಿಸ್ಥಿಯಲ್ಲಿ ಇರಾನ್‌ಗೆ ಚೀನಾ ಬೇಕಿದೆ, ಇಸ್ರೇಲ್‌ಗೆ ಅಮೆರಿಕ ಬೇಕಿದೆ ಎಂದು ಮಾಹಿತಿ ನೀಡಿದರು.

  • ಜಿಮ್‍ನಲ್ಲೇ ಜಿಮ್ ಟ್ರೈನರ್ ಆತ್ಮಹತ್ಯೆ

    ಜಿಮ್‍ನಲ್ಲೇ ಜಿಮ್ ಟ್ರೈನರ್ ಆತ್ಮಹತ್ಯೆ

    – ಮಿಸ್ಟರ್ ಕೊಪ್ಪ ದೇಹದಾಢ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

    ಚಿಕ್ಕಮಗಳೂರು: 26 ವರ್ಷದ ಜಿಮ್ ಟ್ರೈನರ್ ಜಿಮ್‍ನಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರದಲ್ಲಿ ನಡೆದಿದೆ.

    ಮೃತನನ್ನ ಜಯಪುರ ಸಮೀಪದ ದೂಬ್ಳ ಗ್ರಾಮದ ಸುನಿಲ್ ಎಂದು ಗುರುತಿಸಲಾಗಿದೆ. ಮೃತ ಸುನಿಲ್ ಜಯಪುರದಲ್ಲಿ ಜಿಮ್ ಇಟ್ಟುಕೊಂಡು, 30 ರಿಂದ 40 ಜನ ಯುವಕರಿಗೆ ಜಿಮ್ ಬಗ್ಗೆ ಟ್ರೈನಿಂಗ್ ಕೊಡುತ್ತಿದ್ದ. ಕಳೆದ ನಾಲ್ಕೈದು ತಿಂಗಳಿಂದ ಕೊರೊನಾ ಹಿನ್ನೆಲೆಯಲ್ಲಿ ಜಿಮ್ ಕ್ಲೋಸ್ ಮಾಡಲಾಗಿತ್ತು. ಆದರೆ ಸುನೀಲ್ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಎಂದು ಹೇಳಲಾಗುತ್ತಿದೆ.

    ಅಷ್ಟೇ ಅಲ್ಲದೇ ಆರ್ಥಿಕ ಪರಿಸ್ಥಿತಿಯನ್ನ ಸುಧಾರಿಸಲು ಜಿಮ್ ಟ್ರೈನರ್ ಸುನಿಲ್ ಕಳೆದ ಮೂರು ತಿಂಗಳಿಂದ ಆಟೋ ಓಡಿಸುತ್ತಿದ್ದನು. ಆರ್ಥಿಕ ನಷ್ಟ ಹಾಗೂ ಕಷ್ಟದಿಂದ ಮಾನಸಿಕವಾಗಿ ಕುಗ್ಗಿದ್ದರಿಂದ ಭಾನುವಾರ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗಿದೆ.

    ಜಿಮ್ ಟ್ರೈನರ್ ಸುನಿಲ್ ಆರೋಗ್ಯವಾಗಿ ಕಟ್ಟುಮಸ್ತಾಗಿದ್ದ. ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ದೇಹದಾಢ್ಯ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿದ್ದನು. ಕಳೆದ ವರ್ಷ ಮಿಸ್ಟರ್ ಕೊಪ್ಪ ದೇಹದಾಢ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿ ಮಿಸ್ಟರ್ ಕೊಪ್ಪ ಎಂಬ ಕೀರ್ತಿಗೂ ಪಾತ್ರನಾಗಿದ್ದನು. ಇದೀಗ 26ನೇ ವರ್ಷಕ್ಕೆ ಆತ್ಮಹತ್ಯೆಗೆ ಶರಣಾಗಿರೋದು ಸ್ಥಳೀಯರಲ್ಲಿ ಆಶ್ಚರ್ಯ ಮೂಡಿಸಿದೆ.

    ಘಟನೆ ಸ್ಥಳಕ್ಕೆ ಜಯಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

  • ಕೊರೊನಾ ಲಾಕ್‍ಡೌನ್ ದೇಶದ ಆರ್ಥಿಕತೆಗೆ 30 ಲಕ್ಷ ಕೋಟಿ ರೂ. ನಷ್ಟ- ಎಸ್‍ಬಿಐ

    ಕೊರೊನಾ ಲಾಕ್‍ಡೌನ್ ದೇಶದ ಆರ್ಥಿಕತೆಗೆ 30 ಲಕ್ಷ ಕೋಟಿ ರೂ. ನಷ್ಟ- ಎಸ್‍ಬಿಐ

    ನವದೆಹಲಿ: ಕೊರೊನಾ ಲಾಕ್‍ಡೌನ್‍ನಿಂದಾಗಿ ಈವರೆಗೂ ಭಾರತದ ಆರ್ಥಿಕತೆಗೆ 30 ಲಕ್ಷ ಕೋಟಿ ರೂಪಾಯಿಯಷ್ಟು ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

    ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (ಎಸ್‍ಬಿಐ) ಸಂಶೋಧನಾ ವರದಿಯ ಪ್ರಕಾರ, ರಾಷ್ಟ್ರೀಯ ಅಂಕಿ ಅಂಶಗಳ ಸಂಘಟನೆ (ಎನ್‍ಎಸ್‍ಒ) ಮೇ 29 ರಂದು ನಾಲ್ಕನೇ ತ್ರೈಮಾಸಿಕದ ಜಿಡಿಪಿ ಬೆಳವಣಿಗೆಯ ವರದಿ ಬಿಡುಗಡೆಗೊಳಿಸಲಿದೆ. ಮೂರನೇ ತ್ರೈಮಾಸಿಕದಲ್ಲಿ ಜಿಡಿಪಿ ಶೇ. 4.7ರಷ್ಟಿತ್ತು. ಆದರೆ ಕೊರೊನಾ ಹೊಡೆತದಿಂದ ಜಿಡಿಪಿ ಮತ್ತೆ ಕುಸಿತ ಕಾಣಲಿದೆ ಎನ್ನಲಾಗುತ್ತಿದೆ.

    ಕೊರೊನಾ ಲಾಕ್‍ಡೌನ್‍ನಿಂದ ಮಹಾರಾಷ್ಟ್ರಕ್ಕೆ ಶೇಕಡಾ 11.6ರಷ್ಟು ನಷ್ಟವಾಗಿದ್ದರೆ, ತಮಿಳುನಾಡಿಗೆ ಶೇ.9.4ರಷ್ಟು, ಗುಜರಾತ್ ಶೇ.8.6ರಷ್ಟು, ಉತ್ತರಪ್ರದೇಶಕ್ಕೆ ಶೇ.8.3ರಷ್ಟು ಮತ್ತು ಕರ್ನಾಟಕಕ್ಕೆ ಶೇ.6.7ರಷ್ಟು ನಷ್ಟವಾಗಿದೆ. ಈ ಐದು ರಾಜ್ಯಗಳಿಗೆ ಆಗಿರುವ ನಷ್ಟವೇ 11 ಲಕ್ಷ ಕೋಟಿ ರೂಪಾಯಿಯಷ್ಟು. ಅಂದರೆ ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದ 20 ಲಕ್ಷ ಕೋಟಿ ಪ್ಯಾಕೇಜ್‍ನ ಶೇಕಡಾ 40ರಷ್ಟು ಈ ಮೊತ್ತವಾಗಿದೆ. ಮುಂದಿನ ವರ್ಷದ ಮಾರ್ಚ್ 31ರ ವೇಳೆಗೆ 10.4 ಲಕ್ಷ ಕೋಟಿ ರೂಪಾಯಿಯಷ್ಟು ನೇರ ತೆರಿಗೆ ಆದಾಯ ಖೋತಾ ಆಗಲಿದೆ ಎಂದು ಅಂದಾಜಿಸಲಾಗಿದೆ.

    ಭಾರತವು ಸ್ವಾತಂತ್ರ್ಯಾನಂತರ ಮೂರು ಆರ್ಥಿಕ ಹಿಂಜರಿತಗಳನ್ನು ಎದುರಿಸಿದ್ದು, ನಾಲ್ಕನೆಯ ಹಿಂಜರಿತ ಸಮೀಪಿಸಿದೆ ಎಂದು ‘ಕ್ರಿಸಿಲ್’ ಎಚ್ಚರಿಸಿದೆ. ಕಳೆದ 69 ವರ್ಷಗಳಲ್ಲಿ ಭಾರತ ಕೇವಲ 3 ಸಲ ಮಾತ್ರ ಆರ್ಥಿಕ ಹಿಂಜರಿತ ಎದುರಿಸಿದೆ. 1958, 1966 ಮತ್ತು 1980ರಲ್ಲಿ ಹಿಂಜರಿತವಾಗಿದೆ ಎಂದು ತಿಳಿಸಿದೆ.