Tag: ಆರ್.ಅಶೊಕ್

  • ಕೋವಿಡ್ ಮೃತರ ಕುಟುಂಬಕ್ಕೆ ರಾಜ್ಯದಿಂದ 1 ಲಕ್ಷ, ಕೇಂದ್ರದಿಂದ 50 ಸಾವಿರ ಪರಿಹಾರ: ಆರ್.ಅಶೋಕ್

    ಕೋವಿಡ್ ಮೃತರ ಕುಟುಂಬಕ್ಕೆ ರಾಜ್ಯದಿಂದ 1 ಲಕ್ಷ, ಕೇಂದ್ರದಿಂದ 50 ಸಾವಿರ ಪರಿಹಾರ: ಆರ್.ಅಶೋಕ್

    – ಅರ್ಜಿ ಸಲ್ಲಿಕೆಗೆ ಈ ಕೆಳಗಿನ ದಾಖಲೆಗಳು ಅಗತ್ಯ

    ಬೆಂಗಳೂರು: ಕೊರೊನಾದಿಂದ ಮೃತಪಟ್ಟ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ 1 ಲಕ್ಷ ರೂ. ಹಾಗೂ ಕೇಂದ್ರ ಸರ್ಕಾರದಿಂದ 50 ಸಾವಿರ ರೂ.ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೊಕ್ ತಿಳಿಸಿದರು. ಇದೇ ವೇಳೆ ಅರ್ಜಿ ಸಲ್ಲಿಕೆಗೆ ಯಾವೆಲ್ಲ ದಾಖಲೆಗಳು ಬೇಕು ಎಂಬುದನ್ನು ಸಹ ವಿವರಿಸಿದರು.

    ವಿಧಾನಸೌಧದಲ್ಲಿ ಮಾತನಾಡಿದ ಅವರು, ಕೋವಿಡ್ ನಿಂದ ಮೃತಪಟ್ಚ ಕುಟುಂಬಗಳಿಗೆ ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ವಿಪತ್ತು ನಿರ್ವಹಣಾ ವಿಭಾಗದಿಂದ ಪರಿಹಾರ ಕೊಡುತ್ತೇವೆ. ರಾಜ್ಯ ಸರ್ಕಾರದಿಂದ 1 ಲಕ್ಷ ರೂಪಾಯಿ, ಈ ಪರಿಹಾರ ಬಿಪಿಎಲ್ ಕಾರ್ಡ್ ಇದ್ದವರಿಗೆ ಮಾತ್ರ. ಕೇಂದ್ರ ಸರ್ಕಾರ ಸಹ 50 ಸಾವಿರ ರೂ. ಪರಿಹಾರ ಘೋಷಿಸಿದೆ. ಇದು ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ಹೊಂದಿದ ಎಲ್ಲರಿಗೂ ಸಿಗಲಿದೆ. ಬಿಪಿಎಲ್ ಕಾರ್ಡ್ ಇರುವವರಿಗೆ ಒಟ್ಟು 1.50 ಲಕ್ಷ ರೂ. ಹಣ ಬರುತ್ತದೆ. ಎಪಿಎಲ್ ಕಾರ್ಡ್ ಹೊಂದಿದವರಿಗೆ ಕೇಂದ್ರ ಸರ್ಕಾರದ 50 ಸಾವಿರ ರೂ.ಪರಿಹಾರ ಮಾತ್ರ ಬರುತ್ತದೆ ಎಂದರು. ಇದನ್ನೂ ಓದಿ:

    ಅರ್ಜಿ ಸಲ್ಲಿಕೆಗೆ ಯಾವೆಲ್ಲ ದಾಖಲೆ ಬೇಕು?
    ಕೋವಿಡ್ ಸೋಂಕಿತರ ವರದಿಯ ಬಿ.ಯು ನಂಬರ್ ಬೇಕು. ಮೃತ ವ್ಯಕ್ತಿಯ ಮರಣ ಪತ್ರ, ಆಧಾರ್ ಪ್ರತಿ, ಮೃತ ವ್ಯಕ್ತಿಯ ಬಿಪಿಎಲ್ ಕಾರ್ಡ್, ಗುರುತಿನ ಚೀಟಿ, ಅರ್ಜಿದಾರರ ಬ್ಯಾಂಕ್ ಅಕೌಂಟ್ ವಿವರ ಕೊಡಬೇಕು. ಅರ್ಜಿದಾರರ ಸ್ವಯಂ ಘೋಷಣಾ ಫಾರಂ-2 ನೀಡಬೇಕು, ಕುಟುಂಬದ ಉಳಿದವರಿಗೆ ಕೊಡಬೇಕಾದರೆ ಫಾರಂ-3 ಅರ್ಜಿ ಕೊಡಬೇಕು. ಅರ್ಜಿಗಳನ್ನು ಜಿಲ್ಲಾಧಿಕಾರಿ, ತಹಶಿಲ್ದಾರರ್ ಗೆ ಸಲ್ಲಿಸಬಹುದು ಎಂದು ತಿಳಿಸಿದರು.

    ಕೇಂದ್ರ ಸರ್ಕಾರದ ಪರಿಹಾರದ ಹಣ ಆರ್‍ಟಿಜಿಎಸ್ ಮೂಲಕ ಅಕೌಂಟ್ ಗೆ ಹೋಗುತ್ತದೆ. ಈ ಕಮಿಟಿಯಲ್ಲಿ ಜಿಲ್ಲಾಧಿಕಾರಿ, ವೈದ್ಯಾಧಿಕಾರಿ, ಸದಸ್ಯ ಕಾರ್ಯದರ್ಶಿ ಇರುತ್ತಾರೆ. ಬೆಂಗಳೂರು ಪಾಲಿಕೆಯಲ್ಲಿ ವಲಯ ಜಂಟಿ ಆಯುಕ್ತರು ಇರುತ್ತಾರೆ. ಆರೋಗ್ಯ ಇಲಾಖೆಯಿಂದ ಪರಿಶೀಲಿಸಿ ನಿರ್ಧಾರ ಮಾಡುತ್ತಾರೆ ಎಂದು ಮಾಹಿತಿ ನೀಡಿದರು.

    ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆಯಲ್ಲಿ ವ್ಯತ್ಯಾಸದ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಅದು ಅವರ ಆರೋಪ ಅಷ್ಟೇ, ಯಾರೆಲ್ಲ ಸಾವನ್ನಪ್ಪಿದ್ದಾರೆ ಅವರ ಮಾಹಿತಿ ಇದೆ, ಡಾಕ್ಟರ್ ಸರ್ಟಿಫಿಕೇಟ್ ಸಹ ಇರುತ್ತೆ. ತಹಶೀಲ್ದಾರ್ ಹಾಗೂ ರೆವಿನ್ಯೂ ಅಧಿಕಾರಿಗಳ ಬಳಿ ವರದಿ ಇರುತ್ತದೆ. ಬೋಗಸ್ ಆಗಲು ಅವಕಾಶ ಇರಲ್ಲ. ಆಸ್ಪತ್ರೆಯಿಂದ ಕೋಡ್ ನಂಬರ್ ಇರುತ್ತೆ. ಕಾಂಗ್ರೆಸ್ ಗೆ ಆರೋಪ ಮಾಡುವ ಚಟ ಇದೆ ಎಂದು ತಿರುಗೇಟು ನೀಡಿದರು.

    ಮತಾಂತರ ಮಾಡುವವರೆಲ್ಲ ಅವರೆಲ್ಲ ದೇಶ ದ್ರೋಹಿಗಳು, ನೆಲದ ಸಂಸ್ಕೃತಿ ಹಾಳು ಮಾಡಲು ಮತಾಂತರ ಮಾಡುತ್ತಿದ್ದಾರೆ. ಮತಾಂತರ ನಿಷೇಧ ಕಾಯ್ದೆ ತರಬೇಕು. ಯಾವುದೋ ದೇಶದ ದುಡ್ಡನ್ನು ತಂದು ಹೀಗೆ ಮಾಡುತ್ತಿದ್ದಾರೆ. ಸಿಎಂ ಹಾಗೂ ಗೃಹ ಇಲಾಖೆ ಜೊತೆಗೆ ಮಾತಾಡುತ್ತೇನೆ. ಸೂಕ್ತ ಕಾಯ್ದೆ ತರಬೇಕು. ನಮ್ಮ ಸರ್ಕಾರ ಇರೋದಕ್ಕೆ ಇದೆಲ್ಲ ಆಚೆ ಬರುತ್ತಿದೆ ಎಂದರು.

  • ಸಿದ್ದರಾಮಯ್ಯ ಹೇಳುವುದೆಲ್ಲ ಸುಳ್ಳು: ಅಶೋಕ್

    ಸಿದ್ದರಾಮಯ್ಯ ಹೇಳುವುದೆಲ್ಲ ಸುಳ್ಳು: ಅಶೋಕ್

    ಹಾಸನ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವುದೆಲ್ಲ ಸುಳ್ಳು ಎಂದು ಕಂದಾಯ ಸಚಿವ ಆರ್.ಅಶೋಕ್ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.

    ನಗರದ ಹೊರವಲಯದಲ್ಲಿ ಒಕ್ಕಲಿಗರ ಸಮುದಾಯ ಭವನಕ್ಕೆ ಶಿಲಾನ್ಯಾಸ ನೆರವೇರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಹೇಳುವುದೆಲ್ಲ ಸುಳ್ಳು. ಅವರು ಐದು ವರ್ಷ ಇದ್ದಾಗ ಯಾಕೆ ಜಾತಿಗಣತಿಯನ್ನು ಬಿಡುಗಡೆ ಮಾಡಲಿಲ್ಲ. ಜಾತಿಗಣತಿಯ ಆಯುಕ್ತ ಇನ್ನು ವರದಿಗೆ ಸಹಿನೇ ಹಾಕಿಲ್ಲ. ಈಗ ಬಿಜೆಪಿ ಬಂದಿದೆ ಎಂದು ಸುಮ್ಮನೆ ಆರೋಪ ಮಾಡುತ್ತಿದ್ದಾರೆ. ಜಾತಿಗಣತಿ ಮಾಡಿಸಿದವರು ನಾವಲ್ಲ ಅವರು. ಸಿದ್ದರಾಮಯ್ಯ ಆಡುತ್ತಿರುವುದು ರಾಜಕೀಯದ ಕಪಟನಾಟಕ ಎಂದು ಹರಿಹಾಯ್ದರು. ಇದನ್ನೂ ಓದಿ: ನಾವು ಹಿಂದೂಗಳನ್ನು ಮತಾಂತರ ಮಾಡ್ತೇವೆ ಏನ್ ಮಾಡ್ತೀರಾ- ಚರ್ಚ್ ಫಾದರ್ ಅವಾಜ್

    ಈಗಲೇ ಕಾಂಗ್ರೆಸ್ ಕಾಣ್ತಾಯಿಲ್ಲ ಮುಂದಿನ ದಿನಗಳಲ್ಲಿ ಬ್ಯಾಟರಿ ಹಾಕಿ ಪಕ್ಷವನ್ನು ಹುಡುಕುವ ಪರಿಸ್ಥಿತಿ ಬರುತ್ತೆ. ಆರ್‍ಎಸ್‍ಎಸ್ ರಾಜಕೀಯ ಪಕ್ಷವಲ್ಲ. ಅದು ಒಂದು ಸಾರ್ವಜನಿಕ ಸಂಸ್ಥೆ. ನಾನು ಕೂಡ ಅಲ್ಲಿಂದಲೇ ಬಂದವನು. ಈ ವಿಷ್ಯದಲ್ಲಿ ಕಾಂಗ್ರೆಸ್ ನವರು ನಮಗೆ ಬುದ್ಧಿ ಹೇಳುವ ಅವಶ್ಯಕತೆ ಇಲ್ಲ. ಅವರಿಂದ ಬುದ್ಧಿ ಹೇಳಿಸಿಕೊಳ್ಳುವ ಅಗತ್ಯವೂ ನಮಗಿಲ್ಲ ಎನ್ನುವ ಮೂಲಕ ಎಚ್.ಸಿ.ಮಹದೇವಪ್ಪ ಅವರ ಮಾತಿಗೆ ತಿರುಗೇಟು ನೀಡಿದರು.

  • ಚುನಾವಣೆ ಸಂದರ್ಭ ಮಾತ್ರವಲ್ಲ, ನಿರಂತರವಾಗಿ ಜನರ ಯೋಗಕ್ಷೇಮ ವಿಚಾರಿಸಬೇಕು: ಆರ್.ಅಶೋಕ್

    ಚುನಾವಣೆ ಸಂದರ್ಭ ಮಾತ್ರವಲ್ಲ, ನಿರಂತರವಾಗಿ ಜನರ ಯೋಗಕ್ಷೇಮ ವಿಚಾರಿಸಬೇಕು: ಆರ್.ಅಶೋಕ್

    ಬೆಂಗಳೂರು: ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಆಟೋ ಡ್ರೈವರ್ ಗಳು, ಶಿಕ್ಷಕರು, ಅರ್ಚಕರಿಗೆ ಇಂದು ಕಂದಾಯ ಸಚಿವ ಆರ್.ಅಶೋಕ್ ದಿನಸಿ ಕಿಟ್ ಗಳನ್ನು ವಿತರಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಕೋವಿಡ್ ವ್ಯಾಪಿಸಿದ ಸಂದರ್ಭದಿಂದಲೂ ಕ್ಷೇತ್ರದ ಜನರಿಗೆ ನಿರಂತರವಾಗಿ ನೆರವು ನೀಡಲಾಗುತ್ತಿದೆ. ಕ್ಷೇತ್ರದಲ್ಲಿ ಯಾರೂ ಉಪವಾಸ ಇರುವಂತೆ ಆಗಬಾರದು. ಲಾಕ್‍ಡೌನ್ ಸಮಯದಲ್ಲಿ ಲಕ್ಷಾಂತರ ಜನರಿಗೆ ಉಚಿತವಾಗಿ ಊಟ ನೀಡಲಾಗಿದೆ. ಹೀಗಾಗಿ ನಾನು ನನ್ನ ಜನರ ಜೊತೆ ಸದಾ ನಿಲ್ಲುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಕಲಬುರಗಿ, ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಜೊತೆಗೆ ಮೈತ್ರಿ ಸಾಧ್ಯತೆ: ಸಚಿವ ಅಶೋಕ್

    ಎಲ್ಲ ವರ್ಗದ ಜನರಿಗೆ ದಿನಸಿ ಕಿಟ್ ಗಳನ್ನು ವಿತರಿಸಲಾಗಿದೆ. ಲಾಕ್ ಡೌನ್ ತೆರವುಗೊಳಿಸಿದ ನಂತರವೂ ಕ್ಷೇತ್ರದ ಜನರಿಗೆ ಸತತವಾಗಿ ನೆರವು ನೀಡಲಾಗುತ್ತಿದೆ. ಇಲ್ಲಿಯವರೆಗೂ ಪೌರಕಾರ್ಮಿಕರಿಗೆ, ಆಟೋ ಡ್ರೈವರ್ ಗಳಿಗೆ, ಕೇಬಲ್, ಗ್ಯಾಸ್, ನ್ಯೂಸ್ ಪೇಪರ್, ಹಾಲು ವ್ಯಾಪಾರಿಗಳಿಗೆ, ಮೆಕ್ಯಾನಿಕ್ ಮತ್ತು ಎಲೆಕ್ಟ್ರಿಷಿಯನ್ ಸೇರಿದಂತೆ ಹಲವು ವರ್ಗದವರಿಗೆ ದಿನಸಿ ಕಿಟ್ ಮತ್ತು ಇನ್ನಿತರೆ ನೆರವು ನೀಡಲಾಗಿದೆ. ಕೇವಲ ಚುನಾವಣೆಯ ಸಂದರ್ಭದಲ್ಲಿ ಮಾತ್ರ ಅವರ ಬಳಿ ಹೋಗುವುದಲ್ಲ. ನಿರಂತರವಾಗಿ ಅವರ ಯೋಗಕ್ಷೇಮ ವಿಚಾರಿಸಬೇಕು. ಆ ಕೆಲಸವನ್ನ ಮಾಡುತ್ತಿದ್ದೇನೆ ಎಂದರು.

    ಪದ್ಮನಾಭನಗರ ಕ್ಷೇತ್ರದ 18 ರಿಂದ 25 ವರ್ಷದ ಯುವಕರಿಗೆ ಉಚಿತವಾಗಿ ಲಸಿಕೆ ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮೂರನೇ ಅಲೆಗೆ ಈಗಾಗಲೇ ಸಿದ್ಧತೆಗಳು ನಡೆದಿವೆ. ಮಕ್ಕಳಿಗಾಗಿ ವಿಶೇಷ ಆಸ್ಪತ್ರೆಯನ್ನು ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ಧಪಡಿಸಲಾಗಿದೆ. ಚಿಕಿತ್ಸೆಗೆ ಅಗತ್ಯವಿರುವ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದೆ. ಮಕ್ಕಳ ಜೊತೆಗೆ ಅವರ ಪಾಲಕರು ಉಳಿದುಕೊಳ್ಳಲು ಸಹ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

  • 83 ತಾಲೂಕುಗಳು ಪ್ರವಾಹಪೀಡಿತ ಎಂದು ಘೋಷಣೆ: ಆರ್.ಅಶೋಕ್

    83 ತಾಲೂಕುಗಳು ಪ್ರವಾಹಪೀಡಿತ ಎಂದು ಘೋಷಣೆ: ಆರ್.ಅಶೋಕ್

    ಬೆಂಗಳೂರು: ಈ ಹಿಂದೆ 61 ತಾಲೂಕುಗಳು ಪ್ರವಾಹ ಪೀಡಿತವೆಂದು ಘೋಷಣೆ ಮಾಡಲಾಗಿತ್ತು. ಮಳೆ ಹೆಚ್ಚಾಗಿ ಇದೀಗ ಮತ್ತೆ ಹಾನಿಯಾಗಿದೆ. ಹೀಗಾಗಿ ಹೊಸದಾಗಿ 22, ಒಟ್ಟು 83 ತಾಲೂಕುಗಳನ್ನು ಪ್ರವಾಹ ಪೀಡಿತವೆಂದು ಘೋಷಣೆ ಮಾಡಿದ್ದೇವೆ ಎಂದು ಕಂದಾಯ ಸಚಿವ ಆರ್.ಅಶೊಕ್ ತಿಳಿಸಿದ್ದಾರೆ.

    ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ, ಚಿಕ್ಕಮಗಳೂರು, ಕಡೂರು, ತರಿಕೆರೆ, ಸೂಪ, ಬಬಲೇಶ್ವರ, ಕೊಲ್ಹಾರ, ಮುದ್ದೆಬಿಹಾಳ, ಮೂಡಿಗೆರೆ ಹಾಗೂ ಹೊಸನಗರಗಳನ್ನ ಪ್ರವಾಹ ಪೀಡಿತವೆಂದು ಘೋಷಿದ್ದೇವೆ. ಪ್ರವಾಹ ಪೀಡಿತ ಸ್ಥಳಗಳಿಗೆ ಒಂದೆರಡು ಬಾರಿ ನಾನು ಭೇಟಿ ನೀಡಿದ್ದೇನೆ. ಪ್ರವಾಹ ಸಂದರ್ಭಗಳಲ್ಲಿ ಮುನ್ನೆಚ್ಚರಿಕೆ ತೆಗೆದುಕೊಂಡಿದ್ದೇವೆ. ಸಿಡಿಲಿನಿಂದ ಹಲವರು ಸಾಯುತ್ತಿದ್ದಾರೆ. ಅದರ ಎಚ್ಚರಿಕೆ ಬಗ್ಗೆ ಯೋಜನೆ ಇದೆ. ಒಂದೂವರೆ ಕಿ.ಮೀ.ವರೆಗೆ ಕೇಳಿಸುವಷ್ಟು ಅಲರ್ಟ್ ಮಾಡಲಾಗುತ್ತದೆ. ಮೈಕ್ ಸಿಸ್ಟಂ ಮೂಲಕ ಅಲರ್ಟ್ ಮಾಡಲಾಗುತ್ತದೆ. ಗ್ರಾಮಪಂಚಾಯಿತಿಗಳಲ್ಲಿ ಅಲರ್ಟ್ ಆಗಲಿದೆ. ಶೀಘ್ರವೇ ಈ ಹೊಸ ಸಿಸ್ಟಂನ್ನು ಅಳವಡಿಕೆ ಮಾಡುತ್ತೇವೆ ಎಂದು ವಿವರಿಸಿದರು. ಇದನ್ನೂ ಓದಿ: ರೈತನ ಮಗಳನ್ನು ಗುರುತಿಸಿ ಪ್ರಧಾನಿ ಮೋದಿ ಕೃಷಿ ಖಾತೆ ನೀಡಿದ್ದಾರೆ: ಶೋಭಾ ಕರಂದ್ಲಾಜೆ

    ಚಂಡಮಾರುತದ ಅಬ್ಬರದ ಬಗ್ಗೆಯೂ ಅಲರ್ಟ್ ಮಾಡಲಾಗುತ್ತದೆ. ಇದನ್ನು ಕರಾವಳಿ ಭಾಗದ 40 ಕಡೆ ಅನುಷ್ಠಾನ ಮಾಡುತ್ತೇವೆ. ಅಲಾರಾಂ ಸಿಸ್ಟಂಗಳನ್ನ ಮಾಡುತ್ತೇವೆ. ಕೇಂದ್ರ ಸರ್ಕಾರದಿಂದ ಇದಕ್ಕೆ ಹಣ ಬರಲಿದೆ. ಒಂದೊಂದು ಸಿಸ್ಟಂಗೆ 12 ಕೋಟಿ ಖರ್ಚಾಗುತ್ತದೆ. ಆರೇಳು ಕಿ.ಮೀ.ವರೆಗೆ ಇದು ಸೈರನ್ ಮಾಡಲಿದೆ. ಚಂಡಮಾರುತಗಳ ಸುಳಿವನ್ನು ನೀಡಲಿದೆ. ಇದು ಕರಾವಳಿ ಭಾಗದ ಜನರಿಗೆ, ಮೀನುಗಾರರಿಗೆ ಇದು ಹೆಚ್ಚು ಉಪಯೋಗವಾಗಲಿದೆ ಎಂದು ತಿಳಿಸಿದರು.

    ಕಡೆಗೂ ಮೂಡಿಗೆರೆಯನ್ನು ನೆರೆ ಪೀಡಿತ ಪ್ರದೇಶದ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ. ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು ಏಕಾಂಗಿಯಾಗಿ ವಿಧಾನಸೌಧದಲ್ಲಿ ಪ್ರತಿಭಟನೆ ಮಾಡಿದ್ದರು. ಈ ವೇಳೆ ಸರ್ಕಾರ ಭರವಸೆ ನೀಡಿತ್ತು.

    ಬೆಂಗಳೂರಿನಲ್ಲೂ 50ಕ್ಕೂ ಹೆಚ್ಚು ರಸ್ತೆಗಳಲ್ಲಿ ನೀರು ನಿಲ್ಲುತ್ತಿದೆ. ಅಧಿಕಾರಿಗಳಿಗೆ ಇದರ ಬಗ್ಗೆ ಸೂಚಿಸಿದ್ದೇನೆ. ನೀರು ನಿಲ್ಲುವ ಡ್ರೈನ್ ಬಗ್ಗೆ ಸೂಚಿಸಿದ್ದೇನೆ. ಜೊತೆಗೆ ಸಮಸ್ಯೆ ಪರಿಹಾರಕ್ಕೂ ಸೂಚಿಸಿದ್ದೇನೆ, ನೀರು ನಿಲ್ಲುವ ಜಾಗಗಳ ಬಗ್ಗೆ ಕೇಳಿದ್ದೇನೆ. ತುರ್ತು ಕಾಮಗಾರಿ ಮುಗಿಸುವ ಬಗ್ಗೆ ಸೂಚಿಸಲಾಗಿದೆ. ಬೆಂಗಳೂರಿನಲ್ಲಿ ಕಾಮಗಾರಿ ನಿರಂತರವಾಗಿ ನಡೆಯುತ್ತದೆ. ಮಿತಿಯೊಳಗೆ ಕಾಮಗಾರಿ ಮಾಡುತ್ತಿಲ್ಲ. ನಿರಂತರವಾಗಿ ಕೆಲಸ ನಡೆಯುತ್ತಲೇ ಇರುತ್ತದೆ ಎಂದರು. ಕಮರ್ಷಿಯಲ್ ಸ್ಟ್ರೀಟ್ ನಲ್ಲಿ ಕಳಪೆ ಕಾಮಗಾರಿ ನಡೆದಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಕಲರಿಂಗ್ ಮಾಡುವುದು ಸರಿಯಾಗಿಲ್ಲ. ಕಳಪೆ ಕಾಮಗಾರಿ ಬಗ್ಗೆ ಕ್ರಮ ಕೈಗೊಳ್ಳತ್ತೇನೆ ಎಂದು ತಿಳಿಸಿದರು.