Tag: ಆರ್ ಆರ್ ಆರ್

  • ಜಪಾನ್ ಭೂಕಂಪದಿಂದ ಪಾರಾದ ರಾಜಮೌಳಿ & ಟೀಮ್

    ಜಪಾನ್ ಭೂಕಂಪದಿಂದ ಪಾರಾದ ರಾಜಮೌಳಿ & ಟೀಮ್

    ಆರ್.ಆರ್.ಆರ್ (RRR) ಸಿನಿಮಾದ ವಿಶೇಷ ಪ್ರದರ್ಶನ ಜಪಾನ್ (Japan) ನಲ್ಲಿ ನಡೆಯುತ್ತಿದೆ. ನಿರ್ದೇಶಕ ರಾಜಮೌಳಿ (Rajamouli), ಅವರ ಪುತ್ರ ಕಾರ್ತಿಕೇನ್ ಸೇರಿದಂತೆ ಚಿತ್ರತಂಡದ ಹಲವು ಸದಸ್ಯರು ಜಪಾನ್‌ನಲ್ಲಿ ಬೀಡು ಬಿಟ್ಟಿದ್ದಾರೆ. ಈ ಸಂದರ್ಭದಲ್ಲಿ ಅವರು ಭೂಕಂಪನದ (Earthquake) ಅನುಭವಕ್ಕೆ ತುತ್ತಾಗಿದ್ದಾರೆ. ಆ ಅನುಭವವನ್ನು ರಾಜಮೌಳಿ ಪುತ್ರ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ.

    ಭೂಕಂಪ ಆದಾಗ ರಾಜಮೌಳಿ ಮತ್ತು ಟೀಮ್ ಖಾಸಗಿ ಹೋಟೆಲ್‍ ನ 28ನೇ ಮಹಡಿಯಲ್ಲಿ ವಾಸ್ತವ್ಯ ಹೂಡಿದ್ದರು. ಭೂಕಂಪವಾದಾಗ ಕಟ್ಟಡ ಅಲುಗಾಡಿದ ಅನುಭವ ಕೂಡ ಆಗಿದೆ. ಅಲ್ಲಿ ಭೂಕಂಪದ ತೀವ್ರತೆ ಮತ್ತು ಅಲರ್ಟ್ ಕುರಿತಾಗಿಯೂ ಅವರು ಬರೆದುಕೊಂಡಿದ್ದಾರೆ. ಭೂಕಂಪ ಆಗುವುದಕ್ಕೂ ಮುನ್ನ ಮೊಬೈಲ್ ಗೆ ಅಲರ್ಟ್ ಬಂದಿರುವ ಮೆಸೇಜ್ ಕೂಡ ಹಾಕಿದ್ದಾರೆ.

     

    ಆರ್.ಆರ್.ಆರ್ ಸಿನಿಮಾದ ವಿಶೇಷ ಪ್ರದರ್ಶನವು ಜಪಾನ್‌ನಲ್ಲಿ ಹಲವು ದಿನಗಳಿಂದ ನಡೆಯುತ್ತಿದೆ. ಸಿನಿಮಾ ಕುರಿತಂತೆ ರಾಜಮೌಳಿ ನೋಡುಗರ ಜೊತೆ ಸಾಕಷ್ಟು ವಿಷಯಗಳನ್ನು ಹಂಚಿಕೊಂಡಿದ್ದಾರೆ. ಅಲ್ಲದೇ, ಮುಂದಿನ ಪ್ರಾಜೆಕ್ಟ್ ಬಗ್ಗೆಯೂ ಒಂದಷ್ಟು ವಿಷಯ ರಿವಿಲ್ ಮಾಡಿದ್ದಾರೆ.

  • RRR ಸಿನಿಮಾಟೋಗ್ರಾಫರ್ ಸೆಂಥಿಲ್ ಕುಮಾರ್ ರ ಪತ್ನಿ ನಿಧನ

    RRR ಸಿನಿಮಾಟೋಗ್ರಾಫರ್ ಸೆಂಥಿಲ್ ಕುಮಾರ್ ರ ಪತ್ನಿ ನಿಧನ

    ಭಾರತಕ್ಕೆ ಆಸ್ಕರ್ ತಂದು ಕೊಟ್ಟ ಹಾಗೂ ವಿಶ್ವ ಮಟ್ಟದಲ್ಲಿ ಸಖತ್ ಸುದ್ದಿ ಮಾಡಿದ್ದ ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ (RRR) ಸಿನಿಮಾದ ಸಿನಿಮಾಟೋಗ್ರಾಫರ್ ಸೆಂಥಿಲ್ ಕುಮಾರ್ (Senthil Kumar) ಅವರ ಪತ್ನಿ ನಿಧನರಾಗಿದ್ದಾರೆ. ಯೋಗ ಕೋಚ್ ಕೂಡ ಆಗಿದ್ದ ಅವರ ಪತ್ನಿ ರೂಹಿ (Ruhi) ಅನಾರೋಗ್ಯದಿಂದಾಗಿ ಇಹಲೋಕ ತ್ಯಜಿಸಿದ್ದಾರೆ.

    ಅನಾರೋಗ್ಯದ ಕಾರಣದಿಂದಾಗಿ ರೂಹಿ ಅವರನ್ನು ಸಿಕಂದರಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ರೂಹಿ ನಿಧನರಾಗಿದ್ದಾರೆ (Passed away) ಎಂದು ಸ್ಥಳಿಯ ಮಾಧ್ಯಮಗಳು ವರದಿ ಮಾಡಿವೆ. 2009ರಲ್ಲಿ ಸೆಂಥಿಲ್ ಮತ್ತು ರೂಹಿ ಹೊಸ ಜೀವನಕ್ಕೆ ಕಾಲಿಟ್ಟದ್ದರು. ಈ ಜೋಡಿಗೆ ಇಬ್ಬರು ಮಕ್ಕಳಿದ್ದಾರೆ.

     

    ಕೋವಿಡ್ ಗೆ ತುತ್ತಾದ ನಂತರ ರೂಹಿ ಹಲವಾರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ. ನಿರಂತರವಾಗಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೂ, ಅವರ ಆರೋಗ್ಯ ಸುಧಾರಿಸಲಿಲ್ಲ ಎಂದು ಹೇಳಲಾಗುತ್ತಿದೆ. ಕೊನೆಗೂ ಅಂಗಾಂಗ ವೈಫಲ್ಯದಿಂದಾಗಿ ರೂಹಿ ಸಾವು ಕಂಡಿದ್ದಾರೆ.

  • RRR ಸಿನಿಮಾದ ಐರಿಶ್ ನಟ ರೇ ಸ್ಟೀವನ್ಸನ್ ನಿಧನ

    RRR ಸಿನಿಮಾದ ಐರಿಶ್ ನಟ ರೇ ಸ್ಟೀವನ್ಸನ್ ನಿಧನ

    ಭಾರತೀಯ ಸಿನಿಮಾ ರಂಗದ ಹೆಮ್ಮೆಯಾಗಿರುವ ಆರ್.ಆರ್.ಆರ್ (RRR) ಸಿನಿಮಾ ತಂಡದಿಂದ ಶಾಕಿಂಗ್ ನ್ಯೂಸ್ ಬಂದಿದ್ದು, ಅದನ್ನು ಅರಗಿಸಿಕೊಳ್ಳುವುದು ಕಷ್ಟ ಎಂದಿದ್ದಾರೆ ನಿರ್ದೇಶಕ ರಾಜಮೌಳಿ (Rajamouli). ಈ ಸಿನಿಮಾದಲ್ಲಿ ಬ್ರಿಟಿಷ್ ಅಧಿಕಾರಿಯ ಪಾತ್ರ ಮಾಡಿದ್ದ ಐರಿಶ್ ನಟ ರೇ ಸ್ಟೀವನ್ಸನ್ (Ray Stevenson) ನಿಧನವಾಗಿದ್ದಾರೆ. ಈ ಕುರಿತಂತೆ ರಾಜಮೌಳಿ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ.

    ರೇ ನಿಧನದ (passed away) ಸುದ್ದಿಯನ್ನು ರಾಜಮೌಳಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ‘ರೇ ಅವರ ಎನರ್ಜಿ ಹಾಗೂ ಅವರು ಸೆಟ್ ನಲ್ಲಿ ತರುತ್ತಿದ್ದ ವೈಬ್ರೆನ್ಸ್ ಬಗ್ಗೆ ಬರೆದುಕೊಂಡಿದ್ದಾರೆ. ಅವರ ಜೊತೆ ಕೆಲಸ ಮಾಡಿದ ಖುಷಿ ತಾವತ್ತೂ ನನ್ನೊಂದಿಗೆ ಇರುತ್ತದೆ. ನನ್ನ ಫ್ರಾರ್ಥನೆ ಅವರ ಕುಟುಂಬದ ಜೊತೆ ಇರಲಿದೆ’ ಎಂದು ಅವರು ಸಂತಾಪ ವ್ಯಕ್ತ ಪಡಿಸಿದ್ದಾರೆ. ಇದನ್ನೂ ಓದಿ:ರೆಡ್ ಕಲರ್ ಡ್ರೆಸ್‌ನಲ್ಲಿ ಬೋಲ್ಡ್ ಆಗಿ ಕಾಣಿಸಿಕೊಂಡ ಸಾನ್ಯ ಅಯ್ಯರ್

    ಐರ್ಲೆಂಡ್ ಮೂಲದ ರೇ ಹಾಲಿವುಡ್ ಸಿನಿಮಾಗಳಾದ ದಿ ವಾರ್ ಜೋನ್, ಕಿಂಗ್ ಆಥರ್ ಸೇರಿದಂತೆ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದಾರೆ. ಫೇಮಸ್ ಶೋಗಳಾದ ರೆಮೋ, ಅಶೋಕಾ ಸೀರಿಸ್ ನಲ್ಲೂ ಅವರು ಕಾಣಿಸಿಕೊಂಡಿದ್ದಾರೆ. ಮೇ 21ರಂದು ರೇ ನಿಧನರಾಗಿದ್ದು, ಅವರಿಗೆ 58 ವರ್ಷ ವಯಸ್ಸಾಗಿತ್ತು. ನಿಧನಕ್ಕೆ ನಿಖರವಾದ ಮಾಹಿತಿ ದೊರೆತಿಲ್ಲ. ಆದರೆ, ನಿಧನದ ಸುದ್ದಿಯನ್ನು ಅವರ ಕುಟುಂಬ ಖಚಿತ ಪಡಿಸಿದೆ.

  • ಆಸ್ಕರ್ ಪ್ರಶಸ್ತಿಗಾಗಿ ಖರ್ಚು ಮಾಡಿದ್ದು 80 ಕೋಟಿಯಲ್ಲ, 8 ಕೋಟಿ: ರಾಜಮೌಳಿ ಪುತ್ರನ ಹೇಳಿಕೆ

    ಆಸ್ಕರ್ ಪ್ರಶಸ್ತಿಗಾಗಿ ಖರ್ಚು ಮಾಡಿದ್ದು 80 ಕೋಟಿಯಲ್ಲ, 8 ಕೋಟಿ: ರಾಜಮೌಳಿ ಪುತ್ರನ ಹೇಳಿಕೆ

    ತೆಲುಗಿನ ಆರ್.ಆರ್.ಆರ್ (RRR) ಸಿನಿಮಾದ ನಾಟು ನಾಟು ಹಾಡಿಗೆ ಆಸ್ಕರ್ (Oscar) ಪ್ರಶಸ್ತಿ ಬಂದದ್ದು ಒಂದು ಕಡೆ ಸಂಭ್ರಮವಾಗಿದ್ದರೆ ಮತ್ತೊಂದು ಕಡೆ ಈ ಪ್ರಶಸ್ತಿಗಾಗಿ ಸಿನಿಮಾ ತಂಡ ಮಾಡಿದ ಖರ್ಚಿನ ಬಗ್ಗೆ ಸಾಕಷ್ಟು ಅಪಸ್ವರ ಕೇಳಿ ಬಂದಿತ್ತು. ಕೇವಲ ಒಂದು ಪ್ರಶಸ್ತಿಗಾಗಿ ರಾಜಮೌಳಿ 80 ಕೋಟಿ ರೂಪಾಯಿಯನ್ನು ಖರ್ಚು ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

    ಅದರಲ್ಲೂ ತೆಲುಗಿನ ಹಿರಿಯ ನಿರ್ದೇಶಕರೊಬ್ಬರು ‘ಆಸ್ಕರ್ ಪ್ರಶಸ್ತಿಗಾಗಿ ಮಾಡಿದ ಖರ್ಚಿನಲ್ಲಿ ನಾನು ನಾಲ್ಕು ಸಿನಿಮಾ ಮಾಡುತ್ತಿದ್ದೆ’ ಎಂದು ಹೇಳಿಕೆಯನ್ನೂ ನೀಡಿದ್ದರು. ಅಲ್ಲದೇ, ಇದೇ ಸಿನಿಮಾದ ನಿರ್ಮಾಪಕ ದಾನಯ್ಯ ಕೂಡ ಅನುಮಾನ ಪಡುವ ರೀತಿಯಲ್ಲೇ ಮಾತನಾಡಿ, ಆಸ್ಕರ್ ಖರ್ಚಿನ ಭಾರವನ್ನು ಮತ್ತಷ್ಟು ಹೆಚ್ಚು ಮಾಡಿದ್ದರು. ಈ ಎಲ್ಲ ಕಾರಣದಿಂದಾಗಿಯೇ ಇಷ್ಟೊಂದು ಖರ್ಚು ಮಾಡುವುದು ಬೇಕಿತ್ತಾ? ಎನ್ನುವ ಪ್ರಶ್ನೆ ಕೂಡ ಎದ್ದಿತ್ತು. ಇದನ್ನೂ ಓದಿ: ಜೀವನವನ್ನ ಕೊನೆ ಮಾಡ್ಕೋಬೇಕು ಅಂದ್ಕೊಂಡಿದ್ದೆ ಅವ್ರು ಉಳಿಸಿದ್ರು: ರಮ್ಯಾ

    ಆಸ್ಕರ್ ಪ್ರಶಸ್ತಿಗಾಗಿ ಮಾಡಿದ ಖರ್ಚಿನ ಬಗ್ಗೆ ದೊಡ್ಡ ಪ್ರಮಾಣದಲ್ಲೇ ಚರ್ಚೆ ನಡೆದಿದ್ದರೂ, ಈ ಕುರಿತು ಒಂದೇ ಒಂದು ಹೇಳಿಕೆ ನೀಡಿರಲಿಲ್ಲ ರಾಜಮೌಳಿ (Rajamouli). ಹಿರಿಯ ನಿರ್ದೇಶಕರೊಬ್ಬರು ಕಾಮೆಂಟ್ ಮಾಡಿದ್ದರೂ, ಅದಕ್ಕೆ ಪ್ರತಿಕ್ರಿಯೆ ನೀಡಿರಲಿಲ್ಲ. ಇದೀಗ ರಾಜಮೌಳಿ ಅವರ ಪುತ್ರ ಎಸ್.ಎಸ್.ಕಾರ್ತಿಕೇನ್ (SS Karthikena) ಇದೇ ಮೊದಲ ಬಾರಿಗೆ ಖರ್ಚಿನ ಕುರಿತು ಮಾತನಾಡಿದ್ದಾರೆ. ಸುದ್ದಿಯಾದಷ್ಟು ನಾವು ಖರ್ಚು ಮಾಡಿಲ್ಲ ಎಂದು ಹೇಳಿಕೊಂಡಿದ್ದಾರೆ.

    ‘ಆಸ್ಕರ್ ಪ್ರಶಸ್ತಿಗಾಗಿ ಒಂದಷ್ಟು ಖರ್ಚು ಮಾಡಲೇಬೇಕಿತ್ತು. ಪ್ರಚಾರ, ಸಿನಿಮಾ ಸ್ಕ್ರೀನ್ ಅಂತೆಲ್ಲ ಇರುತ್ತದೆ.  ಹಾಗಾಗಿ ನಾವು ಅಂದುಕೊಂಡಿದ್ದು 5 ಕೋಟಿ ಖರ್ಚಾಗುತ್ತದೆ ಎಂದು. ಆದರೆ, ಹೆಚ್ಚುವರಿಯಾಗಿ 3.5 ಕೋಟಿ ಖರ್ಚಾಗಿದೆ. ಎಂಟೂವರೆ ಕೋಟಿಯನ್ನು ಆಸ್ಕರ್ ‍ಪ್ರಶಸ್ತಿಯ ಪ್ರಚಾರಕ್ಕಾಗಿ ಖರ್ಚು ಮಾಡಲಾಗಿದೆ. ಅದಕ್ಕಿಂತ ಚಿತ್ರರಂಗದ ದಿಗ್ಗಜರು ಸಿನಿಮಾ ಒಪ್ಪಿಕೊಂಡಿದ್ದಾರೆ. ಮೆಚ್ಚಿದ್ದಾರೆ. ಅದನ್ನು ಯಾವತ್ತೂ ದುಡ್ಡಿನಿಂದ ಖರೀದಿಸಲು ಆಗಲ್ಲ’ ಎಂದಿದ್ದಾರೆ ರಾಜಮೌಳಿ ಪುತ್ರ.

  • ಒಂದು ಆಸ್ಕರ್ ಪ್ರಶಸ್ತಿಗೆ 80 ಕೋಟಿ ಖರ್ಚು : ಆರ್.ಆರ್.ಆರ್ ನಿರ್ಮಾಪಕ ಪ್ರತಿಕ್ರಿಯೆ

    ಒಂದು ಆಸ್ಕರ್ ಪ್ರಶಸ್ತಿಗೆ 80 ಕೋಟಿ ಖರ್ಚು : ಆರ್.ಆರ್.ಆರ್ ನಿರ್ಮಾಪಕ ಪ್ರತಿಕ್ರಿಯೆ

    ನಾಟು ನಾಟು ಹಾಡಿಗೆ ಆಸ್ಕರ್ (Oscar) ಪ್ರಶಸ್ತಿ ಬರುವುದಕ್ಕಾಗಿ ಚಿತ್ರತಂಡ ಬರೋಬ್ಬರಿ 80 ಕೋಟಿ ಖರ್ಚು ಮಾಡಿದೆ ಎಂಬ ಆರೋಪ ಆರ್.ಆರ್.ಆರ್ (R.R.R) ಚಿತ್ರತಂಡದ ಮೇಲಿದೆ. ನಿರ್ದೇಶಕ ರಾಜಮೌಳಿ (Rajamouli) ಈ ಪರಿ ಹಣವನ್ನು ನಿರ್ಮಾಪಕರಿಂದ ಖರ್ಚು ಮಾಡಿಸಿದ್ದಾರೆ ಎಂದು ಹೇಳಲಾಗುತ್ತಿತ್ತು. ಒಂದೇ ಒಂದು ಆಸ್ಕರ್ ಪ್ರಶಸ್ತಿಗಾಗಿ ಅಷ್ಟೊಂದು ಹಣ ಖರ್ಚು ಮಾಡುವ ಜರೂರತ್ತಾದರೂ ಏನಿತ್ತು ಎಂದೂ ಪ್ರಶ್ನೆ ಮಾಡಲಾಗಿತ್ತು.

    ಅದರಲ್ಲೂ ತೆಲುಗಿನ ನಿರ್ದೇಶಕರೊಬ್ಬರು ‘ಆಸ್ಕರ್ ಪ್ರಶಸ್ತಿಗಾಗಿ ರಾಜಮೌಳಿ ಮಾಡಿದ ಖರ್ಚಿನಲ್ಲಿ ನಾನು ನಾಲ್ಕು ಚಿತ್ರಗಳನ್ನು ತಯಾರಿಸುತ್ತಿದ್ದೆ’ ಎಂದು ಹೇಳುವ ಮೂಲಕ ಉರಿವ ಬೆಂಕಿಗೆ ತುಪ್ಪ ಸುರಿದಿದ್ದರು. ಈಗ ಈ ಎಲ್ಲ ಆರೋಪಗಳಿಗೆ ನಿರ್ಮಾಪಕ ದಾನಯ್ಯ (Danaiah) ಉತ್ತರಿಸಿದ್ದಾರೆ. ಅವರು ಆಸ್ಕರ್ ಸಮಾರಂಭದಲ್ಲಿ ಭಾಗಿ ಆಗದೇ ಇದ್ದರೂ, ಎದ್ದಿರುವ ಚರ್ಚೆಗೆ ಪ್ರತಿಕ್ರಿಯೆ ನೀಡಿದ್ದಾರೆ.

    ಮಾಧ್ಯಮವೊಂದರ ಜೊತೆ ಮಾತನಾಡಿರುವ ಸಿನಿಮಾದ ನಿರ್ಮಾಪಕ ದಾನಯ್ಯ, ಅಷ್ಟೊಂದು ಹಣ ಖರ್ಚು ಮಾಡಿದ್ದೇವೆ ಎನ್ನುವುದು ಸುಳ್ಳು. ಒಂದು ಪ್ರಶಸ್ತಿಗಾಗಿ 80 ಕೋಟಿ ರೂಪಾಯಿಯನ್ನು ಯಾರೂ ಖರ್ಚು ಮಾಡುವುದಿಲ್ಲ. ಅದರಿಂದ ಯಾವುದೇ ಉಪಯೋಗ ಕೂಡ ಇಲ್ಲ. ನಾನಂತೂ ಪ್ರಶಸ್ತಿಗಾಗಿ ಹಣವನ್ನು ನೀಡಿಲ್ಲ. ಉಳಿದ ವಿಚಾರ ನನಗೆ ಗೊತ್ತಿಲ್ಲ’ ಎಂದು ಹೇಳಿಕೆ ನೀಡಿದ್ದಾರೆ.

    ಆರ್.ಆರ್.ಆರ್ ಗೆಲುವಿನ ನಂತರ ರಾಜಮೌಳಿ ಮತ್ತು ದಾನಯ್ಯ ನಡುವೆ ಸಂಬಂಧ ಅಷ್ಟೊಂದು ಚೆನ್ನಾಗಿಲ್ಲ ಎಂದು ಕೇಳಿ ಬಂದಿತ್ತು. ಹಾಗಾಗಿಯೇ ರಾಜಮೌಳಿ ಭಾಗಿಯಾದ ಯಾವ ಕಾರ್ಯಕ್ರಮದಲ್ಲೂ ದಾನಯ್ಯ ಕಾಣಿಸಿಕೊಳ್ಳಲಿಲ್ಲ. ಗೋಲ್ಡನ್ ಗ್ಲೋಬ್, ಆಸ್ಕರ್ ಪ್ರಶಸ್ತಿ ಸಮಾರಂಭದಲ್ಲೂ ಅವರು ಇರಲಿಲ್ಲ. ಆದರೂ, ಸಂದರ್ಶನದಲ್ಲಿ ರಾಜಮೌಳಿ ಬಗ್ಗೆ ದಾನಯ್ಯ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

  • ‘ನಾಟು ನಾಟು’ ಹಾಡಿಗೆ ಸಾವಿರಾರು ಟೆಸ್ಲಾ ಕಾರು ಡಾನ್ಸ್

    ‘ನಾಟು ನಾಟು’ ಹಾಡಿಗೆ ಸಾವಿರಾರು ಟೆಸ್ಲಾ ಕಾರು ಡಾನ್ಸ್

    ವಿಶ್ವದ ಪ್ರತಿಷ್ಠಿತ ಕಾರು ಕಂಪೆನಿ ಟೆಸ್ಲಾ (Tesla Car) ‘ನಾಟು ನಾಟು’ (Natu Natu) ಹಾಡಿಗೆ ವಿಶೇಷ ಗೌರವ ಸೂಚಿಸುವುದಕ್ಕಾಗಿ ತನ್ನ ಕಾರುಗಳನ್ನು ಬಳಸಿಕೊಂಡು ಲೈಟ್ ಮೂಲಕ ಡಾನ್ಸ್ (Dance)ಮಾಡಿಸಿದೆ. ನಾಟು ನಾಟು ಹಾಡಿಗೆ ಕಾರುಗಳ ಲೈಟ್‍ ಗಳು ಡಾನ್ಸ್ ಮಾಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

    ಸಾವಿರಾರು ಕಾರುಗಳನ್ನು ಸಾಲು ಸಾಲಾಗಿ ನಿಲ್ಲಿಸಿ, ನಾಟು ನಾಟು ಹಾಡನ್ನು ಪ್ಲೇ ಮಾಡಲಾಗುತ್ತದೆ. ಕಾರಿನ ವಿಶೇಷ ಲೈಟ್‍ ಗಳು ಮ್ಯೂಸಿಕ್ ಗೆ ತಕ್ಕಂತೆ ಆಫ್ ಮತ್ತು ಆನ್ ಆಗುತ್ತವೆ. ಅದೊಂದು ರೀತಿಯಲ್ಲಿ ನೋಡುವುದಕ್ಕೆ ಹಬ್ಬದಂತೆ ಕಾಣುತ್ತದೆ. ಮ್ಯೂಸಿಕ್  ತಾಳಕ್ಕೆ ಸಖತ್ತಾಗಿಯೇ ಕಾರುಗಳು ಡಾನ್ಸ್ ಮಾಡುತ್ತವೆ.

    ಈ ವಿಡಿಯೋವನ್ನು ಆರ್.ಆರ್.ಆರ್ ಟ್ವಿಟ್ಟರ್ ಖಾತೆಯಿಂದ ಶೇರ್ ಮಾಡಲಾಗಿದ್ದು, ಟೆಸ್ಲಾ ಕಂಪೆನಿಯ ಒಡೆಯ ಎಲನ್ ಮಸ್ಕ್ ಈ ವಿಡಿಯೋವನ್ನು ಮೆಚ್ಚಿದ್ದಾರೆ. ಹಾರ್ಟ್ ಸಿಂಬಲ್ ಹಾಕಿದ್ದಾರೆ. ಅಲ್ಲದೇ, ನಾಟು ನಾಟು ಹಾಡಿನ ಬಗ್ಗೆಯೂ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಇದು ಆಸ್ಕರ್ ಪ್ರಶಸ್ತಿಗಾಗಿ ನೀಡಿದ ಗೌರವ ಎಂದು ಹೇಳಿಕೊಂಡಿದ್ದಾರೆ.

    ರಾಜಮೌಳಿ ನಿರ್ದೇಶನದಲ್ಲಿ ಮೂಡಿ ಬಂದ ‘ಆರ್.ಆರ್.ಆರ್’ ಸಿನಿಮಾದ ನಾಟು ನಾಟು ಹಾಡಿಗೆ ಈ ಬಾರಿಯ ಆಸ್ಕರ್ ಪ್ರಶಸ್ತಿ ಬಂದ ಬೆನ್ನಲ್ಲೇ ಟೆಸ್ಲಾ ಕಂಪೆನಿ ಸಖತ್ ಐಡ್ಯಾ ಮಾಡಿದೆ. ಕುಣಿಯುವ ಲೈಟ್ ಮೂಲಕ ಗೌರವವನ್ನು ಸೂಚಿಸಿದೆ. ಈ ವಿಡಿಯೋಗೆ ಭಾರೀ ಲೈಕ್ಸ್ ಮತ್ತು ಕಾಮೆಂಟ್ ಕೂಡ ಬರುತ್ತಿವೆ.

  • ‘ಆಸ್ಕರ್’ ಪಡೆದ ನಂತರ ತವರಿಗೆ ಬಂದ ಜ್ಯೂನಿಯರ್ ಎನ್.ಟಿ.ಆರ್ : ಅದ್ಧೂರಿ ಸ್ವಾಗತ

    ‘ಆಸ್ಕರ್’ ಪಡೆದ ನಂತರ ತವರಿಗೆ ಬಂದ ಜ್ಯೂನಿಯರ್ ಎನ್.ಟಿ.ಆರ್ : ಅದ್ಧೂರಿ ಸ್ವಾಗತ

    ಳೆದೊಂದು ವಾರದಿಂದ ಅಮೆರಿಕಾದಲ್ಲಿ ಬೀಡು ಬಿಟ್ಟಿದ್ದ ಆರ್.ಆರ್.ಆರ್ (RRR) ಚಿತ್ರತಂಡ ಆಸ್ಕರ್ (Oscar) ಪ್ರಶಸ್ತಿ ಸಮಾರಂಭ ಮುಗಿಸಿಕೊಂಡು ಇಂದು ಬೆಳಗ್ಗೆ ಹೈದರಾಬಾದ್ ಗೆ (Hyderabad) ಆಗಮಿಸಿದೆ. ಹೈದರಬಾದ್ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿರುವ ವಿಷಯವನ್ನು ತಿಳಿದ ಅಭಿಮಾನಿಗಳು ಏರ್ ಪೋರ್ಟ್ ಮುಂದೆ ಜಮಾಯಿಸಿದ್ದರು. ಜ್ಯೂನಿಯರ್ ಎನ್.ಟಿ.ಆರ್ (Jr NTR), ರಾಮ್ ಚರಣ್ ತೇಜ ಸೇರಿದಂತೆ ಹಲವರಿಗೆ ಜಯಘೋಷ ಹಾಕಿ, ಅಭಿನಂದಿಸಿದ್ದರು. ಮುಗಿ ಬಿದ್ದು ಸೆಲ್ಫಿ ಕೂಡ ತಗೆದುಕೊಂಡರು.

    ನಾಟು ನಾಟು (Natu Natu) ಹಾಡಿಗೆ ಆಸ್ಕರ್ ಪ್ರಶಸ್ತಿ ಸಿಗುತ್ತಿದ್ದಂತೆಯೇ ಜಗತ್ತೇ ಆರ್.ಆರ್.ಆರ್ ತಂಡವನ್ನು ಅಭಿನಂದಿಸಿದೆ. ಈ ನಡುವೆ ಆರ್.ಆರ್.ಆರ್ ಅನ್ನು ವಿರೋಧಿಸಿದ್ದ ಹಲವರಿಗೆ ಪ್ರಶ್ನೆ ಕೇಳುವ ಮೂಲಕ ಟಾಂಗ್ ಕೊಡುವ ಪ್ರಯತ್ನವನ್ನೂ ಮಾಡಿದ್ದಾರೆ ನಟ ಪ್ರಕಾಶ್ ರೈ ಮತ್ತು ರಮ್ಯಾ. ‘ನಾಟು ನಾಟು’ ಹಾಡಿಗೆ ಆಸ್ಕರ್ ಬರುತ್ತಿದ್ದಂತೆಯೇ ಮತ್ತೆ ಬಾಲಿವುಡ್ ಮೇಲೆ ಹಲವರು ಮುಗಿ ಬಿದ್ದಿದ್ದಾರೆ. ಪ್ರಕಾಶ್ ರೈ ಸೇರಿದಂತೆ ಕೆಲ ನಟರು ಆಸ್ಕರ್ ‍ಪ್ರಶಸ್ತಿಯನ್ನಿಟ್ಟುಕೊಂಡು ಬೇರೆ ಬೇರೆ ರೀತಿಯಲ್ಲಿ ಟಾಂಗ್ ನೀಡುತ್ತಿದ್ದಾರೆ. ಆರ್.ಆರ್.ಆರ್ ಸಿನಿಮಾವನ್ನು ಬ್ಯಾನ್ ಮಾಡಬೇಕು ಎಂದವರ ವಿರುದ್ಧ ವಾಗ್ದಾಳಿ ಮಾಡಿರುವ ಅವರು, ಆಸ್ಕರ್ ಪ್ರಶಸ್ತಿ ಬಂದಿದ್ದಕ್ಕೆ ಈಗ ಏನ್ ಹೇಳ್ತೀರಾ? ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ನನ್ನ ಸಾವಿಗೆ ಇವರೇ ಕಾರಣವೆಂದು ಸೂಸೈಡ್‌ ನೋಟ್‌ ಬರೆದಿಟ್ಟ ʻವರ್ಷಧಾರೆʼ ನಟಿ ಪಾಯಲ್‌

    ನಟಿ ರಮ್ಯಾ ಕೂಡ ಹಿಂದಿ ಹೇರಿಕೆ ಹಾಗೂ ಬಾಲಿವುಡ್ ಬಗ್ಗೆ ವಿಭಿನ್ನವಾದ ರೀತಿಯಲ್ಲೇ ಟ್ವೀಟ್ ಮಾಡಿದ್ದು, ಹಿಂದಿ ಮಾತಾಡಲ್ಲ ಎಂದು ವೈರಲ್ ಆಗಿದ್ದ ಆಟೋಡ್ರೈವರ್ ವಿಡಿಯೋವನ್ನು ಹಂಚಿಕೊಂಡಿದ್ದಾರೆ.  ಭಾರತ ಹಲವು ಭಾಷೆಗಳನ್ನು, ನಾನಾ ರೀತಿಯ ಸಂಸ್ಕೃತಿಯನ್ನು ಹೊಂದಿರುವ ದೇಶ. ಯಾರೂ ಯಾರ ಮೇಲೆ ಹೇರಿಕೆ ಸಲ್ಲ. ಭಾರತ ಅಂದರೆ ಬಾಲಿವುಡ್ ಅಲ್ಲ, ಭಾರತ ಅಂದರೆ ಹಿಂದಿಯಲ್ಲ’ ಎಂದು ಟಾಂಗ್ ನೀಡಿದ್ದಾರೆ.

    ಭಾಷಾ ವಿಚಾರವಾಗಿ ನಟಿ ರಮ್ಯಾ ಆಗಾಗ್ಗೆ ಗಟ್ಟಿ ಧ್ವನಿಯಲ್ಲಿ ಮಾತನಾಡುತ್ತಲೇ ಇರುತ್ತಾರೆ. ಅದರಲ್ಲೂ ದಕ್ಷಿಣ ಸಿನಿಮಾಗಳ ಬಗ್ಗೆಯೂ ಮೆಚ್ಚುಗೆ ನುಡಿಗಳನ್ನು ಆಡಿದ್ದಾರೆ. ನಾಟು ನಾಟು ತೆಲುಗಿನ ಸಿನಿಮಾ. ಆಸ್ಕರ್ ವೇದಿಕೆಯ ಮೇಲೆ ತೆಲುಗು ಗೀತೆಯನ್ನೇ ಹಾಡಿದ್ದು ಎಂದು ಬರೆಯುವ ಮೂಲಕ ಹಿಂದಿ ಹೇರಿಕೆಯನ್ನು ಬೇರೆ ಬೇರೆ ರೀತಿಯಲ್ಲಿ ವಿರೋಧಿಸಿದ್ದಾರೆ. ರಮ್ಯಾ ಟ್ವೀಟ್ ಗೆ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿದೆ.

  • Special- ‘ಆಸ್ಕರ್’ ಬೆನ್ನಲ್ಲೇ ಮತ್ತೆ 50 ಲಕ್ಷ ಜನ ‘ನಾಟು ನಾಟು’ ವೀಡಿಯೋ ನೋಡಿದ್ರು

    Special- ‘ಆಸ್ಕರ್’ ಬೆನ್ನಲ್ಲೇ ಮತ್ತೆ 50 ಲಕ್ಷ ಜನ ‘ನಾಟು ನಾಟು’ ವೀಡಿಯೋ ನೋಡಿದ್ರು

    ರಾಜಮೌಳಿ ನಿರ್ದೇಶನದಲ್ಲಿ ಮೂಡಿ ಬಂದ ‘ಆರ್.ಆರ್.ಆರ್’ (R.R.R) ಸಿನಿಮಾದ ‘ನಾಟು ನಾಟು’ (Natu Natu) ಹಾಡಿಗೆ ಆಸ್ಕರ್ (Oscar) ಪ್ರಶಸ್ತಿ ಘೋಷಣೆ ಆಗುತ್ತಿದ್ದಂತೆಯೇ ಈ ಹಾಡನ್ನು ನೋಡಿದವರ ಸಂಖ್ಯೆ 50 ಲಕ್ಷ ದಾಟಿದೆ. ಕೇವಲ ಭಾರತದಲ್ಲಿ ಮಾತ್ರವಲ್ಲ, ವಿದೇಶಿಗರು ಕೂಡ ಈ ಹಾಡನ್ನು ಹುಡುಕಿ ವೀಕ್ಷಿಸಿದ್ದಾರೆ. ಕಳೆದ ನಲವತ್ತೆಂಟು ಗಂಟೆಯಲ್ಲಿ 55 ಲಕ್ಷಕ್ಕೂ ಹೆಚ್ಚು ಜನರು ಈ ಹಾಡನ್ನು ವೀಕ್ಷಿಸಿದ್ದರೆ, 24 ಗಂಟೆಯಲ್ಲಿ 35 ಲಕ್ಷಕ್ಕೂ ಹೆಚ್ಚು ಜನರು ಈ ಹಾಡನ್ನು ಕಣ್ತುಂಬಿಕೊಂಡಿದ್ದಾರೆ.

    ನಿನ್ನೆ ಬೆಳಗ್ಗೆ (ಮಾರ್ಚ್ 13) ಲಹರಿ ಚಾನೆಲ್ (Lahari Music) ನಲ್ಲಿ 125 ಮಿಲಿಯನ್ ವೀಕ್ಷಣೆ ಇತ್ತು. ಈಗಿನವರೆಗೆ 128 ಮಿಲಿಯನ್ ಆಗಿದೆ. ಈ ಕುರಿತು ಮಾಹಿತಿಯನ್ನು ಹಂಚಿಕೊಂಡ ಲಹರಿ ಸಂಸ್ಥೆಯ ವೇಲು, ‘ನಾಟು ನಾಟು ಹಾಡು ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿದೆ. ಟಿ ಸೀರಿಸ್ ಮತ್ತು ಲಹರಿ ಮ್ಯೂಸಿಕ್ ಎರಡರಲ್ಲೂ ಹಾಡನ್ನು ವೀಕ್ಷಿಸಬಹುದಾಗಿದೆ. ಅತೀ ಹೆಚ್ಚು ತೆಲುಗಿನಲ್ಲೇ ಈ ಹಾಡನ್ನು ನೋಡಿದ್ದಾರೆ. ಗ್ಲೋಡನ್ ಗ್ಲೋಬ್ ಪ್ರಶಸ್ತಿ ಬಂದಾಗಲೂ ಹೆಚ್ಚಿನ ಸಂಖ್ಯೆಯಲ್ಲಿ ಈ ಹಾಡನ್ನು ವೀಕ್ಷಿಸಿದ್ದರು. ಆಸ್ಕರ್ ಬಂದ ನಂತರವೂ ನೋಡಿದ್ದಾರೆ’ ಎನ್ನುತ್ತಾರೆ. ಇದನ್ನೂ ಓದಿ: ಪುನೀತ್ ಜನ್ಮ ದಿನದಂದು ಓಟಿಟಿಯಲ್ಲಿ ‘ಗಂಧದ ಗುಡಿ’

    ನಾಟು ನಾಟು ಹಾಡು ಆಸ್ಕರ್ ಪ್ರಶಸ್ತಿ ಪಡೆಯುವ ಮೂಲಕ ಜಗತ್ತಿನಾದ್ಯಂತ ಸುದ್ದಿ ಮಾಡಿದೆ. ಸೋಷಿಯಲ್ ಮೀಡಿಯಾದಲ್ಲೂ ಅದು ಟ್ರೆಂಡ್ ಸೃಷ್ಟಿಸಿದೆ. ರಾಜಮೌಳಿ ನಿರ್ದೇಶನದಲ್ಲಿ ಮೂಡಿ ಬಂದ ಆರ್.ಆರ್.ಆರ್ ಸಿನಿಮಾದ ಗೀತೆ ಇದಾಗಿದ್ದು,  ಎಂ.ಎಂ.ಕೀರವಾಣಿ ಅವರ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದಿದೆ. ಜ್ಯೂನಿಯರ್ ಎನ್.ಟಿ.ಆರ್ ಹಾಗೂ ರಾಮ್ ಚರಣ್ ಈ ಹಾಡಿಗೆ ಸಖತ್ ಸ್ಟೆಪ್ ಹಾಕಿದ್ದರೆ, ಈ ಹಾಡಿನ ಮ್ಯೂಸಿಕ್ ಹಕ್ಕನ್ನು ಕನ್ನಡದ ಹೆಮ್ಮೆಯ ಲಹರಿ ಸಂಸ್ಥೆ ಪಡೆದುಕೊಂಡಿದೆ.

    ಕನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ಈ ಹಾಡು ರಿಲೀಸ್ ಆಗಿದ್ದು, ಮೂಲ ಚಿತ್ರಸಾಹಿತ್ಯವನ್ನು ಚಂದ್ರಬೋಸ್ ಬರೆದಿದ್ದಾರೆ. ಕಲಾಭೈರವ ಹಾಗೂ ಸಿಪ್ಲಿಗಂಜ ಹಾಡಿದ್ದಾರೆ. ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲಿ ಈ ಹಾಡು ಮೂಡಿ ಬಂದಿದೆ. ಇಂತಹ ಹಾಡಿಗೆ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಯು ಸಂದಿದೆ. ರಾಜಮೌಳಿ ನಿರ್ದೇಶನದಲ್ಲಿ ಮೂಡಿ ಬಂದ ಆರ್.ಆರ್.ಆರ್ ಚಿತ್ರದ ಈ ಹಾಡು ಆಸ್ಕರ್ ತರುವ ಭರವಸೆಯನ್ನೂ ಮೂಡಿಸಿತ್ತು. ಆಸ್ಕರ್ ವೇದಿಕೆಯ ಮೇಲೆ ಈ ಹಾಡನ್ನು ಗಾಯಕರಾದ ಸಿಪ್ಲಿಗಂಜ ಹಾಗೂ ಕಾಲಭೈರವ ಹಾಡಿದ್ದರು. ಅಮೆರಿಕಾದ ನಟ, ಡಾನ್ಸರ್ ಲಾರೆನ್ ಗೋತ್ಲಿಬ್ ನೃತ್ಯ ಮಾಡಿದ್ದರು.

  • ಆಸ್ಕರ್ ಪ್ರಶಸ್ತಿ ಪ್ರದಾನಕ್ಕೆ ಕ್ಷಣಗಣನೆ : ಭಾರತದ ಯಾವ ಚಿತ್ರಕ್ಕೆ ಸಿಗತ್ತೆ ಆಸ್ಕರ್?

    ಆಸ್ಕರ್ ಪ್ರಶಸ್ತಿ ಪ್ರದಾನಕ್ಕೆ ಕ್ಷಣಗಣನೆ : ಭಾರತದ ಯಾವ ಚಿತ್ರಕ್ಕೆ ಸಿಗತ್ತೆ ಆಸ್ಕರ್?

    ಪ್ರತಿಷ್ಠಿತ ಆಸ್ಕರ್ (Oscars) ಪ್ರಶಸ್ತಿ ಪ್ರದಾನ ಸಮಾರಂಭ ಕ್ಷಣಗಣನೆ ಶುರುವಾಗಿದೆ. ಅಮೆರಿಕಾದ ಕಾಲಮಾನ ಪ್ರಕಾರ ಇಂದು ರಾತ್ರಿಯಿಂದಲೇ ಕಾರ್ಯಕ್ರಮ ಶುರುವಾಗಲಿದೆ. (ಭಾರತೀಯ ಕಾಲಮಾನ ಪ್ರಕಾರ ನಾಳೆ ಬೆಳಗ್ಗೆ 6.30) ಅಮೆರಿಕಾದ ಲಾಸ್ ಏಂಜಲೀಸ್‍ ( Los Angeles)  ಡಾಲ್ಬಿ ಥಿಯೇಟರ್ ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಜಗತ್ತಿನ ಹೆಸರಾಂತ ಕಲಾವಿದರು ಹಾಗೂ ತಂತ್ರಜ್ಞರು ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮವನ್ನು ನೋಡುವುದಕ್ಕಾಗಿಯೇ ಜಗತ್ತಿನ ಮೂಲೆ ಮೂಲೆಗಳಿಂದ ಸಿನಿಮಾ ಪ್ರೇಮಿಗಳು ಆಗಮಿಸುತ್ತಾರೆ.

    ಈ ವರ್ಷದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾರತೀಯರು ಹೆಮ್ಮೆ ಪಡುವಂತಹ ಅನೇಕ ಸಂಗತಿಗಳು ನಡೆಯಲಿವೆ. ಇದೇ ಮೊದಲ ಬಾರಿಗೆ ಪ್ರತಿಷ್ಠಿತ ಈ ವೇದಿಕೆಯಲ್ಲಿ ಆರ್.ಆರ್.ಆರ್ ಸಿನಿಮಾದ ನಾಟು ನಾಟು ಹಾಡಿಗೆ ಜ್ಯೂನಿಯರ್ ಎನ್.ಟಿ.ಆರ್ ಹಾಗೂ ರಾಮ್ ಚರಣ್ ಹೆಜ್ಜೆ ಹಾಕಲಿದ್ದಾರೆ. ಈಗಾಗಲೇ ಇಬ್ಬರೂ ಕಲಾವಿದರು ಅಮೆರಿಕಾದಲ್ಲೇ ಬೀಡು ಬಿಟ್ಟಿದ್ದಾರೆ. ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ರಾಮ್ ಚರಣ್ (Ram Charan) ಬಂದಿದ್ದು, ಅಭಿಮಾನಿಗಳು ಮುಗಿಬಿದ್ದು ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ. ಇದೀಗ ಓದಿ: ಹೊಸ ಫೋಟೋಶೂಟ್‌ನಲ್ಲಿ ಮಿಂಚಿದ `ಕಾಂತಾರ’ ಶಿವನ ಹುಡುಗಿ

    ಅಲ್ಲದೇ, ಆರ್.ಆರ್.ಆರ್ ಸಿನಿಮಾದ ನಾಟು ನಾಟು ಗೀತೆಯೂ ಕೂಡ ಆಸ್ಕರ್ ರೇಸ್ ನಲ್ಲಿದೆ. ಹೀಗಾಗಿ ನಿರ್ದೇಶಕ ರಾಜಮೌಳಿ ಸೇರಿದಂತೆ ಚಿತ್ರತಂಡ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದೆ. ಭಾರತದಿಂದ ಒಂದು ಸಿನಿಮಾ ಮತ್ತು ಎರಡು ಡಾಕ್ಯುಮೆಂಟರಿಗಳು ಪ್ರಶಸ್ತಿಯ ಕಣದಲ್ಲಿದೆ. ಬಾಲಿವುಡ್ ನಟಿ ದೀಪಿಕಾ ಪಡುಕೋಣೆ (Deepika Padukone) ಈ ಕಾರ್ಯಕ್ರಮದ ನಿರೂಪಣೆ ಮಾಡಲಿದ್ದಾರೆ.

    ಪ್ರಶಸ್ತಿ ಪ್ರದಾನ ಸಮಾರಂಭಕ್ಕೂ ಮುನ್ನ ರಾಮ್ ಚರಣ್ ಅಭಿಮಾನಿಗಳ ಜೊತೆ ಬೆರೆಯುವುದಾಗಿ ಮಾತುಕೊಟ್ಟಿದ್ದರು. ಅದರಂತೆ ಅಭಿಮಾನಿಗಳ ಜೊತೆ ಒಂದಷ್ಟು ಹೊತ್ತು ಕಳೆದಿದ್ದಾರೆ. ನೆಚ್ಚಿನ ನಟನನ್ನು ಭೇಟಿ ಮಾಡಲು ಸಾವಿರಾರು ಅಭಿಮಾನಿಗಳು ನೆರೆದಿದ್ದು ವಿಶೇಷ. ಎಲ್ಲರೊಂದಿಗೂ ಖುಷಿಯಿಂದಲೇ ಫೋಟೋಗೂ ಪೋಸ್ ನೀಡಿದ್ದಾರೆ ರಾಮ್ ಚರಣ್. ಆ ಫೋಟೋಗಳು ಕೂಡ ವೈರಲ್ ಆಗಿವೆ.

  • ‘ಆಸ್ಕರ್’ ಪ್ರಶಸ್ತಿಗಾಗಿ 80 ಕೋಟಿ ಖರ್ಚು ಮಾಡಿದ ರಾಜಮೌಳಿ : ತೆಲುಗು ನಿರ್ದೇಶಕ ಕಿಡಿಕಿಡಿ

    ‘ಆಸ್ಕರ್’ ಪ್ರಶಸ್ತಿಗಾಗಿ 80 ಕೋಟಿ ಖರ್ಚು ಮಾಡಿದ ರಾಜಮೌಳಿ : ತೆಲುಗು ನಿರ್ದೇಶಕ ಕಿಡಿಕಿಡಿ

    ಬಾರಿ ಆಸ್ಕರ್ (Oscar) ಪ್ರಶಸ್ತಿ ಗೆದ್ದೇ ಗೆಲ್ಲುತ್ತೇವೆ ಎನ್ನುವ ಧಾವಂತದಲ್ಲಿದೆ ಆರ್.ಆರ್.ಆರ್ (RRR) ಚಿತ್ರತಂಡ. ಈ ಪ್ರಶಸ್ತಿಯಲ್ಲಿ ಭಾಗಿಯಾಗಲು ಹಲವು ನಿಯಮಗಳಿದ್ದು ಆ ಎಲ್ಲ ನಿಯಮಗಳನ್ನು ಪೂರೈಸಿ, ಇದೀಗ ಅಂತಿಮ ಹಂತವನ್ನೂ ಅದು ತಲುಪಿದೆ. ಮಾರ್ಚ್ 12ಕ್ಕೆ ಪ್ರಶಸ್ತಿ ಘೋಷಣೆ ಮತ್ತು ಪ್ರದಾನ ಸಮಾರಂಭವೂ ನಡೆಯಲಿದ್ದು, ಈ ವೇದಿಕೆಯ ಮೇಲೆ ಆರ್.ಆರ್.ಆರ್ ಚಿತ್ರದ ನಾಯಕರಾದ ಜ್ಯೂನಿಯರ್ ಎನ್.ಟಿ.ಆರ್ (Jr. NTR,) ಹಾಗೂ ರಾಮ್ ಚರಣ್ (Ram Charan) ‘ನಾಟು ನಾಟು’ ಗೀತೆಗೆ ಹೆಜ್ಜೆ ಹಾಕಲಿದ್ದಾರೆ. ಈ ಹಾಡೇ ಅಂತಿಮ ಸುತ್ತಿಗೆ ಆಯ್ಕೆಯೂ ಆಗಿದೆ.

    ಆರ್.ಆರ್.ಆರ್ ಸಿನಿಮಾದ ಹಾಡಿಗೆ ಆಸ್ಕರ್ ಬರಲಿ ಎಂದು ದೇಶಕ್ಕೆ ದೇಶವೇ ಪ್ರಾರ್ಥಿಸುತ್ತಿದ್ದರೆ, ತೆಲುಗಿನ ಹಿರಿಯ ನಿರ್ದೇಶಕ ತಮ್ಮಾರೆಡ್ಡಿ (Thamarreddy Bharadwaj) ಚಿತ್ರತಂಡದ ವಿರುದ್ಧ ಕಿಡಿಕಾರಿದ್ದಾರೆ. ಆಸ್ಕರ್ ಪ್ರಶಸ್ತಿಯನ್ನು ಪಡೆಯಲೆಂದು ಆರ್.ಆರ್.ಆರ್ ಚಿತ್ರದ ನಿರ್ದೇಶಕ ರಾಜಮೌಳಿ (Rajamouli) ಬರೋಬ್ಬರಿ 80 ಕೋಟಿ ಖರ್ಚು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಮೊತ್ತದಲ್ಲಿ ತಾವು ಹತ್ತು ಸಿನಿಮಾಗಳನ್ನು ತಯಾರಿಸುತ್ತಿದ್ದೆ ಎಂದಿದ್ದಾರೆ. ಇದನ್ನೂ ಓದಿ: ಎಮೋಷನಲ್ ನಿಂದನೆ ಬಗ್ಗೆ ಮೌನ ಮುರಿದ ಮೇಘನಾ ರಾಜ್

    ‘ನಾನು ಆರೋಪ ಮಾಡುತ್ತಿಲ್ಲ. ನನಗೆ ಗೊತ್ತಿರುವವರೇ ಹೇಳಿರುವಂತೆ ಆಸ್ಕರ್ ಪ್ರಶಸ್ತಿಗಾಗಿ ರಾಜಮೌಳಿ ಮತ್ತು ತಂಡ ನೀರಿನಂತೆ ಹಣ ಖರ್ಚು ಮಾಡಿದ್ದಾರೆ. ಎಂಬತ್ತು ಕೋಟಿ ಖರ್ಚಾಗಿದೆ ಎಂದು ಹೇಳಲಾಗುತ್ತಿದೆ. ಅಲ್ಲಿ ಸಿನಿಮಾ ಬಿಡುಗಡೆ, ಪ್ರಚಾರ, ತಂಡದ ಖರ್ಚು ಮತ್ತು ಆಸ್ಕರ್ ಪ್ರಶಸ್ತಿಗಾಗಿ ಮಾಡಬೇಕಾದ ಖರ್ಚು ಹೀಗೆ ಕೋಟಿ ಕೋಟಿ ಸುರಿದಿದ್ದಾರೆ. ಇಷ್ಟು ಹಣ ಖರ್ಚು ಮಾಡಿ ಪ್ರಶಸ್ತಿ ಪಡೆಯಬೇಕಾ?’ ಎಂದು ಅವರು ತಮ್ಮಾರೆಡ್ಡಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದಾರೆ.

    ಕನ್ನಡದ ಕೆಜಿಎಫ್ 2 ಚಿತ್ರಕ್ಕೆ ನೂರು ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಆಸ್ಕರ್ ಪ್ರಶಸ್ತಿಗಾಗಿ ಆರ್.ಆರ್.ಆರ್ ಎಂಬತ್ತು ಕೋಟಿ ಖರ್ಚು ಮಾಡಿದ್ದಾರೆ. ಇಪ್ಪತ್ತು ಕೋಟಿ ಸೇರಿಸಿದ್ದರೆ ಮತ್ತೊಂದು ಕೆಜಿಎಫ್ ಮಾದರಿಯ ಚಿತ್ರ ಮಾಡಬಹುದಿತ್ತು ಎಂದು ತಮ್ಮಾರೆಡ್ಡಿ ಲೇವಡಿ ಮಾಡಿದ್ದಾರೆ. ಇವರ ಮಾತು ತೆಲುಗು ಸಿನಿಮಾ ರಂಗದಲ್ಲಿ ಸಂಚಲನ ಮೂಡಿಸಿದೆ.