Tag: ಆರ್.ಆರ್.ಆರ್ ಸಿನಿಮಾ

  • ಆರ್‌ಆರ್‌ಆರ್‌ ಸಕ್ಸಸ್ ಪಾರ್ಟಿ- ರಾಕಿ ಸಾವಂತ್ ಸೊಂಟದಲ್ಲಿ ಗನ್

    ಆರ್‌ಆರ್‌ಆರ್‌ ಸಕ್ಸಸ್ ಪಾರ್ಟಿ- ರಾಕಿ ಸಾವಂತ್ ಸೊಂಟದಲ್ಲಿ ಗನ್

    ಬಾಲಿವುಡ್ ಮಂದಿಗಾಗಿಯೇ ಆರ್.ಆರ್.ಆರ್ ಸಿನಿಮಾ ತಂಡ ಸಕ್ಸಸ್ ಪಾರ್ಟಿ ಆಯೋಜನೆ ಮಾಡಿತ್ತು. ಈ ಸಂದರ್ಭದಲ್ಲಿ ಆರ್.ಆರ್.ಆರ್ ಸಿನಿಮಾ ತಂಡ ಮತ್ತು ಬಾಲಿವುಡ್ ಅನೇಕ ಕಲಾವಿದರು ಮತ್ತು ತಂತ್ರಜ್ಞರು ಭಾಗಿಯಾಗಿದ್ದರು. ಆಮೀರ್ ಖಾನ್, ಕರಣ್ ಜೋಹಾರ್, ಜಾವೇದ್ ಅಖ್ತರ್, ದಿ ಕಾಶ್ಮೀರ್ ಫೈಲ್ಸ್ ನಟ ದರ್ಶನ್ ಸಿಂಗ್, ತುಷಾರ್ ಕಪೂರ್ ಹೀಗೆ ಬಾಲಿವುಡ್ ದಿಗ್ಗಜರೇ ಈ ಪಾರ್ಟಿಗೆ ಬಂದಿದ್ದರು. ಯಾರೇ ದಿಗ್ಗಜರು ಬಂದಿದ್ದರೂ, ಅಲ್ಲಿ ಫಳಫಳ ಹೊಳೆದದ್ದು ಮಾತ್ರ ಮಾದಕ ನಟಿ ರಾಕಿ ಸಾವಂತ್. ಇದನ್ನೂ ಓದಿ : ಶಕ್ತಿಧಾಮ ವಿದ್ಯಾಶಾಲೆಗೆ ಶಂಕುಸ್ಥಾಪನೆ – ಜೀವ ಇರೋತನಕ ಇಲ್ಲಿನ ಮಕ್ಕಳ ಜತೆ ಇರುತ್ತೇನೆ: ಶಿವಣ್ಣ

    ಪಾರ್ಟಿಗೆ ಅವರು ಬಂದಿದ್ದ ಲುಕ್ಕೇ ವಿಭಿನ್ನವಾಗಿತ್ತು. ತುಂಬಾ ಬೋಲ್ಡ್ ಆಗಿ ಕಾಣುವಂತಹ ರೆಡ್ ಡ್ರೆಸ್ ನಲ್ಲಿ ರಾಕಿ ಆಗಮಿಸಿ, ಎಲ್ಲರ ಗಮನ ಸೆಳೆದರು. ಬರೀ ಕಾಸ್ಟ್ಯೂಮ್ ಮಾತ್ರವಲ್ಲ, ಗೋಲ್ಡನ್ ಕಲರ್ ನಿಂದ ಹೆಣೆಯಲ್ಪಟ್ಟ ಕೇಶ ವಿನ್ಯಾಸ ಮತ್ತು ಸೊಂಟದಲ್ಲಿ ಹಾಕಿಸಿಕೊಂಡಿದ್ದ ರಿವಲ್ವಾರ್ ಟ್ಯಾಟೋ ಕ್ಯಾಮೆರಾಗಳು ಕಣ್ಣಿಗೆ ಆಹಾರವಾಗಿದ್ದಂತೂ ಸುಳ್ಳಲ್ಲ. ಹಾಗಂತ ರಾಕಿ ಸುಮ್ಮನೆ ಕುಳಿತುಕೊಳ್ಳಲಿಲ್ಲ. ಅಲ್ಲಿಗೆ ಬಂದಿದ್ದ ಅಷ್ಟೂ ಸಿಲಿಬ್ರಿಟಿಗಳ ಜತೆ ಫೋಟೋ ತಗೆಸಿಕೊಂಡರು. ತಮಾಷೆ ಮಾಡಿಕೊಂಡು ಇಡೀ ಪಾರ್ಟಿಗೆ ಕಳೆ ತಂದಿದ್ದಾರೆ. ಇದನ್ನೂ ಓದಿ: RGV ನಿರ್ದೇಶನದ ಲೆಸ್ಬಿಯನ್ ಸಿನಿಮಾ ಬಿಡುಗಡೆ ಮುಂದೂಡಿಕೆ

    ರಾಕಿಯ ಉತ್ಸಾಹ ಕಂಡು ಎಲ್ಲರೂ ದಂಗಾಗಿದ್ದರು. ಅಲ್ಲದೇ, ತಾನು ಸೊಂಟದಲ್ಲಿ ಬರೆಯಿಸಿಕೊಂಡಿದ್ದ ಗನ್ ಟ್ಯಾಟೋವನ್ನು ಎಲ್ಲರಿಗೂ ತೋರಿಸುವುದೇ ಆ ಸಂದರ್ಭದಲ್ಲಿ ಅವರ ಕಾಯಕವಾಗಿತ್ತು. ಬಂದವರಿಗೆಲ್ಲ ಟ್ಯಾಟೋ ತೋರಿಸಿ, ಮನರಂಜನೆ ನೀಡುತ್ತಿದ್ದರು ರಾಕಿ ಸಾವಂತ್. ಇದನ್ನೂ ಓದಿ: ನನ್ನ ಹತ್ತಿರ ಡೇಂಜರ್ಸ್ ಹುಡುಗೀರು ಇದ್ದಾರೆ- ರಾಜಮೌಳಿಗೆ ರಾಮ್ ಗೋಪಾಲ್ ವರ್ಮಾ ಹೀಗಂದಿದ್ಯಾಕೆ..?

    ಈಗಾಗಲೇ ಆರ್.ಆರ್.ಆರ್ ಸಿನಿಮಾ ವಿಶ್ವದಾದ್ಯಂತ ಭಾರೀ ಗೆಲುವು ಕಂಡಿದೆ. ಇನ್ನೇನು ಸದ್ಯದಲ್ಲೇ 1000 ಕೋಟಿ ಕ್ಲಬ್ ಕೂಡ ಸೇರಲಿದೆ. ಹಿಂದಿಯಲ್ಲೂ ಭರ್ಜರಿ ಹಿಟ್ ಆಗಿದೆ. ಹಾಗಾಗಿ ಇಡೀ ತಂಡ ಬಾಲಿವುಡ್ ಮಂದಿಗೆ ಪಾರ್ಟಿ ಆಯೋಜನೆ ಮಾಡಿತ್ತು. ರಾಮ್ ಚರಣ್ ತೇಜ್, ರಾಜಮೌಳಿ, ಜೂನಿಯರ್ ಎನ್.ಟಿ.ಆರ್ ಸೇರಿದಂತೆ ಆರ್.ಆರ್.ಆರ್ ಚಿತ್ರ ತಂಡವೇ ಅಲ್ಲಿತ್ತು.

  • ಆರ್.ಆರ್.ಆರ್ ಸಿನಿಮಾದಲ್ಲಿ ಹೀರೋ ಯಾರು? ವಿಲನ್ ಯಾರು? : ರಾಜಮೌಳಿ ಕೊಟ್ಟರು ಉತ್ತರ

    ಆರ್.ಆರ್.ಆರ್ ಸಿನಿಮಾದಲ್ಲಿ ಹೀರೋ ಯಾರು? ವಿಲನ್ ಯಾರು? : ರಾಜಮೌಳಿ ಕೊಟ್ಟರು ಉತ್ತರ

    ದೇ ಮೊದಲ ಬಾರಿಗೆ ತೆಲುಗಿನ ಇಬ್ಬರೂ ಸ್ಟಾರ್ ನಟರು ಒಂದಾಗಿ ‘ಆರ್.ಆರ್.ಆರ್’ ಸಿನಿಮಾ ಮಾಡಿದ್ದಾರೆ. ಜ್ಯೂ.ಎನ್.ಟಿ.ಆರ್ ಮತ್ತು ರಾಮ್ ಚರಣ್ ತೇಜ ಅವರಿಗೆ ಅವರದ್ದೇ ಆದ ಅಭಿಮಾನಿ ಬಳಗವಿದೆ. ಈ ಇಬ್ಬರೂ ಕಲಾವಿದರ ಅಭಿಮಾನಿಗಳಿಗೆ ಒಬ್ಬರನ್ನು ಕಂಡರೆ ಒಬ್ಬರಿಗೆ ಆಗುತ್ತಿರಲಿಲ್ಲ. ಆದರೆ, ರಾಜಮೌಳಿ ಈ ಸಿನಿಮಾದಲ್ಲಿ ಇಬ್ಬರನ್ನೂ ಒಟ್ಟಾಗಿಸಿಕೊಂಡು ಸಿನಿಮಾ ಮಾಡಿದ್ದಾರೆ. ಹಾಗಾಗಿ ಈ ಸಿನಿಮಾದಲ್ಲಿ ಯಾರು ಹೀರೋ, ಯಾರು ವಿಲನ್ ಎಂಬ ಚರ್ಚೆ ಶುರುವಾಗಿದೆ.

    ಇಂದು ಆರ್.ಆರ್.ಆರ್ ಚಿತ್ರತಂಡ ಕರ್ನಾಟಕಕ್ಕೆ ಆಗಮಿಸಿದೆ. ಇಂದು ಚಿಕ್ಕಬಳ್ಳಾಪುರದಲ್ಲಿ ನಡೆಯುತ್ತಿರುವ ಪ್ರಿ  ರಿಲೀಸ್ ಇವೆಂಟ್ ನಲ್ಲಿ ಭಾಗವಹಿಸುತ್ತಿದೆ. ಅದಕ್ಕೂ ಮುನ್ನ ಮಾಧ್ಯಮ ಗೋಷ್ಠಿಯಲ್ಲಿ ಚಿತ್ರತಂಡ ಹಲವು ವಿಷಯಗಳನ್ನು ಹಂಚಿಕೊಂಡಿದೆ. ಈ ಸಿನಿಮಾದಲ್ಲಿ ಇಬ್ಬರೂ ನಾಯಕರಾ? ಅಥವಾ ಒಬ್ಬರು ವಿಲನ್ ಮತ್ತೊಬ್ಬರು ಹೀರೋನಾ ಎಂಬ ಪ್ರಶ್ನೆ ನಿರ್ದೇಶಕರಿಗೆ ಎದುರಾಗಿದೆ. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ ಮಾದರಿಯಲ್ಲಿ ಯಾವೆಲ್ಲ ಚಿತ್ರಗಳು ಬರಬೇಕು : ಪ್ರಕಾಶ್ ರೈ ಲಿಸ್ಟ್ ನೋಡಿ

    ಸಿನಿಮಾದ ಟ್ರೇಲರ್ ನೋಡಿದರೆ, ಒಬ್ಬರು ಖಳನಟರಂತೆ ಮತ್ತೊಬ್ಬರು ನಟರಂತೆ ಬಿಂಬಿಸಲಾಗಿದೆ. ಹೀಗಾಗಿ ಅಭಿಮಾನಿಗಳಿಗೆ ಯಾರು, ಯಾವ ಪಾತ್ರ ಮಾಡಿದ್ದಾರೆ ಎನ್ನುವ  ಕುತೂಹಲ ಹೆಚ್ಚಾಗಿದೆ. ಹೀಗಾಗಿ ನಿರ್ದೇಶಕ ರಾಜಮೌಳಿಗೆ ಮಾಧ್ಯಮದವರು ಈ ಪ್ರಶ್ನೆಯನ್ನು ಕೇಳಿದರು. ಅದಕ್ಕೆ ನಿರ್ದೇಶಕರಿಂದ ಬಂದ ಉತ್ತರ ಮಜವಾಗಿದೆ. ಈ ಸಿನಿಮಾದಲ್ಲಿ ಹೀರೋ ಯಾರು? ವಿಲನ್ ಯಾರು? ಎಂದು ಕೇಳಲಾದ ಪ್ರಶ್ನೆಗೆ, ಜಾಣತನದಿಂದಲೇ ಉತ್ತರ ನೀಡಿದ್ದಾರೆ ರಾಜಮೌಳಿ. ‘ಈ ಪ್ರಶ್ನೆಗೆ ಜ್ಯೂನಿಯರ್ ಎನ್.ಟಿ.ಆರ್ ಮತ್ತು ರಾಮ್ ಚರಣ್ ತೇಜ ಅವರೇ ಉತ್ತರಿಸಬೇಕು’ ಎಂದು ಜಾರಿಕೊಂಡರು.

    ಕೂಡಲೇ ಈ ಪ್ರಶ್ನೆಗೆ ಉತ್ತರಸಿದ ಜೂನಿಯರ್ ಎನ್.ಟಿ.ಆರ್. ನಾವಿಬ್ಬರೂ ವಿಲನ್. ಜತೆಗೆ ರಾಜಮೌಳಿ ಅವರೂ ವಿಲನ್ ಎಂದು ಹಾಸ್ಯ ಚಟಾಕಿ ಹಾರಿಸಿದರು. ಅಲ್ಲಿಗೆ ಇಬ್ಬರಲ್ಲ ಒಬ್ಬರು ನೆಗೆಟಿವ್ ಶೇಡ್ ರೀತಿಯ ಪಾತ್ರವನ್ನು ಮಾಡಿದ್ದಾರೆ ಎನ್ನುವುದು ಖಾತ್ರಿಯಾಗಿದೆ. ಇದನ್ನೂ ಓದಿ : ನವೀನ್ ಸಜ್ಜು ಹೀರೋ: ಯಾರಿವ ಮುತ್ತು ವಿತ್? Exclusive Photos

    ಆರ್.ಆರ್.ಆರ್. ಸಿನಿಮಾದ ಬಗ್ಗೆಯೂ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಇದೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದರಿಂದ ಸಾವಿರಾರು ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆಯಂತೆ. ದೇಶದಲ್ಲಿ ಮಾತ್ರವಲ್ಲ, ವಿದೇಶದಲ್ಲೂ ಸಿನಿಮಾ ಬಿಡುಗಡೆ ಆಗುತ್ತಿದೆ. ರಾಮ್ ಚರಣ್ ತೇಜ್ ಮತ್ತು ಜ್ಯೂನಿಯರ್ ಎನ್.ಟಿ.ಆರ್ ಕಾಂಬಿನೇಷನ್ ನ ಮೊದಲ ಸಿನಿಮಾವಿದು. ಆಲಿಯಾ ಭಟ್ ನಾಯಕಿಯಾಗಿ ನಟಿಸಿದ್ದಾರೆ. ಈಗಾಗಲೇ ಎಂ.ಎಂ.ಕೀರವಾಣಿ ಸಂಗೀತ  ಸಂಯೋಜನೆಯಲ್ಲಿ ಮೂಡಿ ಬಂದ ಹಾಡುಗಳು ಹಿಟ್ ಆಗಿವೆ. ಟ್ರೇಲರ್ ಕೂಡ ಭರವಸೆ ಮೂಡಿಸಿದೆ. ಸಿನಿಮಾ ಬಗ್ಗೆಯೂ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.

  • ಇಂದು ಚಿಕ್ಕಬಳ್ಳಾಪುರದಲ್ಲಿಆರ್.ಆರ್.ಆರ್ ಮೆಗಾ ಪ್ರೀ ರಿಲೀಸ್ ಇವೆಂಟ್ : ಏನೆಲ್ಲ ವಿಶೇಷ?

    ಇಂದು ಚಿಕ್ಕಬಳ್ಳಾಪುರದಲ್ಲಿಆರ್.ಆರ್.ಆರ್ ಮೆಗಾ ಪ್ರೀ ರಿಲೀಸ್ ಇವೆಂಟ್ : ಏನೆಲ್ಲ ವಿಶೇಷ?

    ರಾಜಮೌಳಿ ನಿರ್ದೇಶನದ ‘ಆರ್.ಆರ್.ಆರ್’ ಸಿನಿಮಾದ ಕನ್ನಡ ಅವತರಣಿಕೆಯ ಮೆಗಾ ಪ್ರೀ ರಿಲೀಸ್ ಇವೆಂಟ್ ಇಂದು ಚಿಕ್ಕಬಳ್ಳಾಪುರದಲ್ಲಿ ನಡೆಯುತ್ತಿದೆ. ಹಾಗಾಗಿ ಕಲಾವಿದರ ದಂಡೇ ಅಲ್ಲಿ ಸೇರಲಿದೆ. ಸಿನಿಮಾದ ನಟರು ಮತ್ತು ಕಾರ್ಯಕ್ರಮದಲ್ಲಿ ಭಾಗಿ ಆಗಲು ಬರುತ್ತಿರುವ  ನೆಚ್ಚಿನ ನಟರನ್ನು ನೋಡುವುದಕ್ಕಾಗಿ ಅಭಿಮಾನಿಗಳು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ಕಾಯುತ್ತಿದ್ದಾರೆ. ಏರ್ ಪೋರ್ಟ್ಗೆ ಅಭಿಮಾನಿಗಳ ಸಾಗರವೇ ಹರಿದು ಬಂದಿದ್ದರಿಂದ, ಅಲ್ಲಿನ ಸಿಬ್ಬಂದಿಗೆ ಮತ್ತೊಂದು ಟೆನ್ ಷನ್ ಶುರುವಾಗಿದೆ.

    ಇಂದು ಸಂಜೆ 06 ಗಂಟೆಗೆ ಆರಂಭವಾಗಲಿರುವ ಪ್ರೀ ರಿಲೀಸ್ ಇವೆಂಟ್, ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ ನೂರಕ್ಕೂ ಹೆಚ್ಚು ಎಕರೆ ವಿಸ್ತೀರ್ಣದಲ್ಲಿ ಜಾಗದಲ್ಲಿ ನಡೆಯುತ್ತಿದೆ. ಸಿನಿಮಾದ ನಾಯಕ ನಟರಾದ ಜ್ಯೂ.ಎನ್‍ಟಿಆರ್, ರಾಮ್ ಚರಣ್ ಹಾಗೂ ನಿರ್ದೇಶಕ ರಾಜಮೌಳಿ, ಆಲಿಯಾ ಭಟ್ ಸೇರಿದಂತೆ ಬಹುತೇಕ ತಾರಾಗಣವೇ ಕಾರ್ಯಕ್ರಮದಲ್ಲಿ ಹಾಜರಿರಲಿದೆ. ಇದನ್ನೂ ಓದಿ : ಪುನೀತ್ ಹುಟ್ಟು ಹಬ್ಬಕ್ಕೆ ವಿಶ್ ಮಾಡದ ರಶ್ಮಿಕಾ ಮಂದಣ್ಣ ಮತ್ತೆ ನೆಟ್ಟಿಗರು ಗರಂ

    ಕಳೆದ ರಾತ್ರಿಯೇ ಬೆಂಗಳೂರಿಗೆ ಕೆಲವು ನಟರು ಆಗಮಿಸಿದ್ದರಿಂದ ಕೇಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಟರನ್ನ ನೋಡಲು ಏರ್ಪೋರ್ಟ್ ನಲ್ಲಿ ಅಭಿಮಾನಿಗಳು ಜಮಾಯಿಸಿದ್ದರು. ನೆಚ್ಚಿನ ನಟರನ್ನು ಸಂಭ್ರಮದಿಂದ ಬರಮಾಡಿಕೊಂಡರು. ಇದನ್ನೂ ಓದಿ: ಪುನೀತ್ ಗೆ ಮರಣೋತ್ತರ ‘ ಸಹಕಾರ ರತ್ನ’ ಪ್ರಶಸ್ತಿ: ಸಚಿವ ಎಸ್.ಟಿ.ಸೋಮಶೇಖರ್ ಘೋಷಣೆ

    ಕೇವಲ ಸಿನಿಮಾ ನಟರು ಮಾತ್ರವಲ್ಲ, ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವರ ಸುಧಾಕರ್ ಸೇರಿದಂತೆ ಕೆಲ ರಾಜಕಾರಣಿಗಳು ಕೂಡ ಭಾಗಿ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಕಾರ್ಯಕ್ರಮವನ್ನು ಅಗಲಿದ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಅರ್ಪಿಸುವುದಾಗಿ ಚಿತ್ರತಂಡ ಹೇಳಿಕೊಂಡಿದೆ. ಹಾಗಾಗಿ ಟನ ಶಿವರಾಜ್ ಕುಮಾರ್ ಕೂಡ ಭಾಗಿ ಆಗುವ ಸಾಧ್ಯತೆಯಿದೆ. ಇದನ್ನೂ ಓದಿ : ದಾಖಲೆ ಬರೆದ ಜೇಮ್ಸ್ – ಎರಡೇ ದಿನದಲ್ಲಿ 100 ಕೋಟಿ ಕ್ಲಬ್ ಸೇರಿದ ಪುನೀತ್ ಚಿತ್ರ

    ಈಗಾಗಲೇ ಲಕ್ಷಾಂತರ ಮಂದಿಗೆ ಆಸನ ವ್ಯವಸ್ಥೆ ಕಲ್ಪಿಸಲಾಗಿದ್ದು, ಇಡೀ ದೇಶದಲ್ಲೇ ಅತಿ ದೊಡ್ಡದಾದ ಇವೆಂಟ್ ಇದಾಗಿದೆ. ಭದ್ರತೆ ಮತ್ತು ಸರ್ವ ಸಿದ್ಧತೆಯನ್ನು ಮಾಡಿಕೊಂಡು ಇವೆಂಟ್ ಮಾಡಲಾಗುತ್ತಿದೆ ಎಂದಿದೆ ಚಿತ್ರತಂಡ.

  • ಬೆಂಗಳೂರಿನಿಂದ ಗಡಿಭಾಗಕ್ಕೆ ಆರ್.ಆರ್.ಆರ್ ಅದ್ಧೂರಿ ಕಾರ್ಯಕ್ರಮ ಶಿಫ್ಟ್

    ಬೆಂಗಳೂರಿನಿಂದ ಗಡಿಭಾಗಕ್ಕೆ ಆರ್.ಆರ್.ಆರ್ ಅದ್ಧೂರಿ ಕಾರ್ಯಕ್ರಮ ಶಿಫ್ಟ್

    ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಪ್ರೀ ರಿಲೀಸ್ ಕನ್ನಡ ಇವೆಂಟ್ ಬೆಂಗಳೂರಿನಲ್ಲಿ ಮಾಡುವುದಾಗಿ ಈ ಹಿಂದೆ ಘೋಷಣೆ ಆಗಿತ್ತು. ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ಇವೆಂಟ್ ಮಾಡುವ ಕುರಿತು ಚಿತ್ರತಂಡವೇ ಹೇಳಿತ್ತು. ಕೋವಿಡ್ ನಿಯಮ ಪಾಲನೆಯ ಕಾರಣದಿಂದಾಗಿ ಕಾರ್ಯಕ್ರಮ ಆಗಲಿಲ್ಲ. ಇದೀಗ ಅದೇ ಇವೆಂಟ್ ಬೆಂಗಳೂರಿನಿಂದ ಶಿಫ್ಟ್ ಆಗಿದೆ. ಮಾರ್ಚ್ 19ರಂದು ಸಿನಿಮಾದ ಪ್ರೀ ರಿಲೀಸ್ ಕನ್ನಡ ಇವೆಂಡ್ ಆಂಧ್ರದ ಗಡಿಭಾಗವಾದ ಚಿಕ್ಕ ಬಳ್ಳಾಪುರದಲ್ಲಿ ನಡೆಯಲಿದೆ. ಇದನ್ನೂ ಓದಿ : ದೌರ್ಜನ್ಯ ಖಂಡಿಸಿ, ಭಾವನಾ ಮೆನನ್ ಬೆಂಬಲಕ್ಕೆ ನಿಂತ ತಮಿಳು ನಟ ಸೂರ್ಯ

    ಬೆಂಗಳೂರಿನಲ್ಲಿ ಮಾಡಲು ಹೊರಟಿದ್ದ ಇವೆಂಟ್ ಅಲ್ಲಿಗೆ ಶಿಫ್ಟ್ ಆಗಲು ಕಾರಣ ಟ್ರಾಫಿಕ್ ಜಾಮ್ ಎನ್ನುತ್ತಿದೆ ಚಿತ್ರತಂಡ. ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಕಾರ್ಯಕ್ರಮ ಮಾಡಲು ಹೋದರೆ, ಸಾರ್ವಜನಿಕರಿಗೆ ಹಲವು ರೀತಿಯಲ್ಲಿ ತೊಂದರೆ ಆಗುತ್ತದೆ. ಹಾಗಾಗಿ ಚಿಕ್ಕ ಬಳ್ಳಾಪುರದಲ್ಲಿ ಮಾಡಲು ನಿರ್ಧಾರ ತಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ : ರಕ್ಷಿತ್ ಶೆಟ್ಟಿ ‘777 ಚಾರ್ಲಿ’ ಸಿನಿಮಾ ಏನಾಯ್ತು? ಗುಡ್ ನ್ಯೂಸ್ ಕೊಡುತ್ತಂತೆ ಚಿತ್ರತಂಡ

    ಕನ್ನಡ ಮತ್ತು ತೆಲುಗಿನ ಖ್ಯಾತ ಗಣ್ಯರೆಲ್ಲ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮುಖ್ಯ ಅತಿಥಿಯಾಗಿ ಶಿವರಾಜ್ ಕುಮಾರ್ ಅವರನ್ನು ಆಹ್ವಾನಿಸಲಾಗಿದೆಯಂತೆ. ಇದನ್ನೂ ಓದಿ : ಜೊತೆ ಜೊತೆಯಲಿ ಅನಿರುದ್ಧಅವರ ಮೊದಲ ಪತ್ನಿ ನಟಿ ಸೋನು ಗೌಡ

    ನಾನಾ ಕಾರಣಗಳಿಂದಾಗಿ ಈ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಇದೇ ಮೊದಲ ಬಾರಿಗೆ ಜ್ಯೂನಿಯರ್ ಎನ್.ಟಿ.ಆರ್ ಮತ್ತು ರಾಮ್ ಚರಣ್ ತೇಜ್ ಜೊತೆಯಾಗಿ ನಟಿಸಿದ್ದಾರೆ. ಇಬ್ಬರ ಫ್ಯಾನ್ಸ್ ಮಧ್ಯ ಆಗಾಗ್ಗೆ ಸ್ಟಾರ್ ವಾರ್ ನಡೆಯುತ್ತಿತ್ತು. ಹೀಗಾಗಿ ಇಬ್ಬರೂ ಅಭಿಮಾನಿಗಳು ಒಟ್ಟಿಗೆ ಸಿನಿಮಾ ನೋಡುವುದು ಇದೊಂದು ಸಿನಿಮಾದ ಐತಿಹಾಸಿಕ ದಾಖಲೆ ಎಂದು ಬಣ್ಣಿಸಲಾಗುತ್ತಿದೆ.