Tag: ಆರ್ ಆರ್ ಆರ್

  • ರಾಮ್ ಚರಣ್ ಅದೃಷ್ಟವನ್ನೇ ಬದಲಿಸಿದ ಆರ್.ಆರ್.ಆರ್ ಚಿತ್ರ

    ರಾಮ್ ಚರಣ್ ಅದೃಷ್ಟವನ್ನೇ ಬದಲಿಸಿದ ಆರ್.ಆರ್.ಆರ್ ಚಿತ್ರ

    ಲಾಸ್ ಎಂಜಲೀಸ್ ನಿಂದ ವಾರಂಗಲ್ ವರೆಗೆ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಕ್ರೇಜ್ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಎಸ್. ಎಸ್ ರಾಜಮೌಳಿ ನಿರ್ದೇಶನದ ‘ಆರ್ ಆರ್ ಆರ್’ ಚಿತ್ರದ ಅಮೋಘ ಅಭಿನಯದ ಮೂಲಕ ರಾಮ್ ಚರಣ್ ಭಾರತವನ್ನು ಜಾಗತಿಕ ಮಟ್ಟದಲ್ಲಿ ಹೆಮ್ಮೆ ಪಡುವಂತೆ ಮಾಡಿದ್ದಾರೆ. ಆರ್ ಆರ್ ಆರ್ ನಂತರ ರಾಮ್ ಚರಣ್ ಕ್ರೇಜ್ ಹಾಗೂ ಅಭಿಮಾನಿ ಬಳಗ ಕೂಡ ದೊಡ್ಡದಾಗಿದ್ದು, ಅವರ ಮುಂದಿನ ಸಿನಿಮಾಗಳಿಗಾಗಿ ಎದುರು ನೋಡುತ್ತಿದ್ದಾರೆ.

    ಮೆಗಾ ಪವರ್ ಸ್ಟಾರ್ ಮುಂದಿನ ಸಿನಿಮಾ ಬಗ್ಗೆ ಎಲ್ಲರಲ್ಲೂ ಕುತೂಹಲ ಮೂಡಿದೆ. ಖ್ಯಾತ ನಿರ್ದೇಶಕ ಶಂಕರ್ ನಿರ್ದೇಶನದ ಸಿನಿಮಾದಲ್ಲಿ ರಾಮ್ ಚರಣ್ ನಟಿಸುತ್ತಿದ್ದಾರೆ. ಇಬ್ಬರ ಕಾಂಬಿನೇಶನ್ ಮೇಲೆ ಮೆಗಾ ಫ್ಯಾಮಿಲಿ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಬಿಗ್ ಬಜೆಟ್ ನಲ್ಲಿ ಆಕ್ಷನ್ ಎಂಟರ್ಟೈನರ್ ಸಬ್ಜೆಕ್ಟ್ ಸಿನಿಮಾ ನಿರ್ಮಾಣವಾಗುತ್ತಿದ್ದು, ಬಾಲಿವುಡ್ ಬೆಡಗಿ ಕಿಯಾರ ಅಡ್ವಾಣಿ ರಾಮ್ ಚರಣ್ ಜೊತೆ ಸ್ಕ್ರೀನ್ ಶೇರ್ ಮಾಡುತ್ತಿದ್ದಾರೆ. ಇದೇ ವರ್ಷ ಸಿನಿಮಾ ಬಿಡುಗಡೆಯಾಗುವ ಸಾದ್ಯತೆಯೂ ಇದೆ. ಸದ್ಯದ್ಲಲೇ ಈ ಚಿತ್ರದ ಟೈಟಲ್ ಕೂಡ ರಿವೀಲ್ ಆಗಲಿದೆ. ಖ್ಯಾತ ನಿರ್ಮಾಪಕ ದಿಲ್ ರಾಜು ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ನಡಿ ಈ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ `ಹೃದಯಂ’ ಚಿತ್ರದ ನಟಿ ಕಲ್ಯಾಣಿ ಸಹೋದರ ಸಿದ್ಧಾರ್ಥ್

    ಈ ಸಿನಿಮಾ ನಂತರ ಬುಚ್ಚಿ ಬಾಬು ಸನಾ ನಿರ್ದೇಶನದಲ್ಲಿ ವೆಂಕಟ ಸತೀಶ್ ಕಿಲಾರು ನಿರ್ಮಾಣದ ಚಿತ್ರದಲ್ಲಿ ರಾಮ್ ಚರಣ್ ನಟಿಸುತ್ತಿದ್ದಾರೆ. ಜೆರ್ಸಿ ಸಿನಿಮಾ ಖ್ಯಾತಿಯ ಗೌತಮ್ ತಿನ್ನನೂರಿ ಸಿನಿಮಾಗೂ ಮೆಗಾ ಪವರ್ ಸ್ಟಾರ್ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಒಟ್ನಲ್ಲಿ, ಆರ್ ಆರ್ ಆರ್ ಬಾಕ್ಸ್ ಆಫೀಸ್ ನಲ್ಲೂ ದಾಖಲೆ ಬರೆಯೋದ್ರ ಜೊತೆಗೆ ಮೆಗಾ ಪವರ್ ಸ್ಟಾರ್ ಕೆರಿಯರ್ ಗೂ ಹೊಸ ಮೆರಗು ನೀಡಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಾಮಿನೇಷನ್ ಲಿಸ್ಟ್ ನಲ್ಲಿ ಇಲ್ಲ ‘ದಿ ಕಾಶ್ಮೀರ್ ಫೈಲ್ಸ್’ : ಬಾಯ್ಕಾಟ್ ಆಸ್ಕರ್ ಎಂದ ಫ್ಯಾನ್ಸ್

    ನಾಮಿನೇಷನ್ ಲಿಸ್ಟ್ ನಲ್ಲಿ ಇಲ್ಲ ‘ದಿ ಕಾಶ್ಮೀರ್ ಫೈಲ್ಸ್’ : ಬಾಯ್ಕಾಟ್ ಆಸ್ಕರ್ ಎಂದ ಫ್ಯಾನ್ಸ್

    ಕ್ಯಾಲಿಫೋರ್ನಿಯಾದ ಬೆವರ್ಲಿ ಹಿಲ್ಸ್ ನಲ್ಲಿ ನಡೆದ ಆಸ್ಕರ್ ಪ್ರಶಸ್ತಿಯ ನಾಮ ನಿರ್ದೇಶನ ಘೋಷಣೆ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆದಿದೆ. ಭಾರತೀಯ ಕಾಲಮಾನದ ಪ್ರಕಾರ ನಿನ್ನೆ ಸಂಜೆ 7 ಗಂಟೆಯ ಹೊತ್ತಿಗೆ ಈ ಪ್ರಕ್ರಿಯೆ ನಡೆದಿದ್ದು ಭಾರತದ ಹಲವು ಸಿನಿಮಾಗಳ ನಾಮಿನೇಷನ್ ಲಿಸ್ಟ್ ನಲ್ಲಿ ಕಾಣಿಸಿಕೊಳ್ಳಲಿವೆ ಎಂದು ನಿರೀಕ್ಷಿಸಲಾಗಿತ್ತು. ಅದರಲ್ಲೂ ದಿ ಕಾಶ್ಮೀರ್ ಫೈಲ್ ನಾಮ ನಿರ್ದೇಶನ ಪಟ್ಟಿಯಲ್ಲಿ ಇರಲಿದೆ ಎಂದೇ ನಂಬಲಾಗಿತ್ತು. ನಂಬಿಕೆ ಹುಸಿಯಾಗಿದೆ.

    ಈ ಬಾರಿಯ ಆಸ್ಕರ್ ಪ್ರಶಸ್ತಿಗಾಗಿ ಕನ್ನಡದ ಸಿನಿಮಾಗಳಾದ ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ, ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಚಿತ್ರಗಳು ಕೂಡ ಇದ್ದವು. ಜೊತೆಗೆ ತೆಲುಗು ಸಿನಿಮಾ ರಂಗದಿಂದ ಆರ್.ಆರ್.ಆರ್, ತಮಿಳಿನಿಂದ ಇರುವಿನ್ ನಿಲಳ್ ಹಾಗೂ ರಾಕೆಟ್ರಿ ದಿ ನಂಭಿ ಎಫೆಕ್ಟ್ ಚಿತ್ರಗಳು ಸ್ಪರ್ಧೆ ಮಾಡುತ್ತಿವೆ. ಹಿಂದಿಯಿಂದ ಗಂಗೂಬಾಯಿ ಕಾಠಿಯಾವಾಡಿ ಹಾಗೂ ದಿ ಕಾಶ್ಮೀರ್ ಫೈಲ್ಸ್ ಸಿನಿಮಾಗಳಿವೆ. ಗುಜರಾತಿನಿಂದ ಛೆಲ್ಲೋ ಶೋ, ಚಿತ್ರವೊಂದನ್ನು ಕಳುಹಿಸಲಾಗಿದೆ. ಮಿ ವಸಂತ್ ರಾವ್, ದಿ ನೆಕ್ಸ್ಸಟ್ ಮಾರ್ನಿಂಗ್, ತುಜೆ ಸಾಥಿ ಕಹಿ ಸೇರಿದಂತೆ ಭಾರತದಿಂದಲೇ ಹಲವು ಚಿತ್ರಗಳು ಸ್ಪರ್ಧಾ ಕಣದಲ್ಲಿದ್ದವು. ಆದರೆ, ಈ ಸಿನಿಮಾಗಳ ಪೈಕಿ ಕೇವಲ ಮೂರು ಚಿತ್ರಗಳು ನಾಮಿನೇಷನ್ ಪಟ್ಟಿಯಲ್ಲಿವೆ.

    ರಾಜಮೌಳಿ ನಿರ್ದೇಶನದಲ್ಲಿ ಮೂಡಿ ಬಂದ ಆರ್.ಆರ್.ಆರ್ ಸಿನಿಮಾದ ನಾಟು ನಾಟು ಹಾಡು ಮತ್ತು ಆಲ್ ದಟ್ ಬ್ರೀಥ್ಸ್, ದಿ ಎಲಿಫೆಂಟ್ ವಿಸ್ಪರ್ಸ್‍ ಕಿರುಚಿತ್ರಗಳು ನಾಮ ನಿರ್ದೇಶನಗೊಂಡಿವೆ. ಆದರೆ, ದಿ ಕಾಶ್ಮೀರ್ ಫೈಲ್ಸ್ ಇಲ್ಲ ಎನ್ನುವ ಕಾರಣಕ್ಕಾಗಿ ಅನೇಕರು ಸೋಷಿಯಲ್ ಮೀಡಿಯಾದಲ್ಲಿ ಬಾಯ್ಕಾಟ್ ಆಸ್ಕರ್ ಹ್ಯಾಶ್ ಟ್ಯಾಗ್ ಮೂಲಕ ಬಹಿಷ್ಕರಿಸಿ ಎಂದು ಅಭಿಮಾನ ನಡೆಸಿದ್ದಾರೆ. ಇದನ್ನೂ ಓದಿ: ಕೊಡವ ಶೈಲಿಯಲ್ಲಿ ಮಿಂಚಿದ ನಟಿ ಶುಭ್ರ ಅಯ್ಯಪ್ಪ- ವಿಶಾಲ್ ಜೋಡಿ

    ಈ ಬಾರಿಯ ಪ್ರಶಸ್ತಿಗಾಗಿ ಒಟ್ಟು ಮುನ್ನೂರು ಸಿನಿಮಾಗಳನ್ನು ಆಯ್ಕೆ ಮಾಡಲಾಗಿತ್ತು.  ಮುನ್ನೂರು ಸಿನಿಮಾಗಳಲ್ಲಿ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ನಾಮಿನೇಷನ್ ಗೆ ಆಯ್ಕೆಯಾದ ಸಿನಿಮಾಗಳಲ್ಲಿ ಮತ್ತೆ ಆಸ್ಕರ್ ಪ್ರಶಸ್ತಿಗಾಗಿ ಆಯ್ಕೆ ನಡೆಯುತ್ತದೆ. ಆಸ್ಕರ್ ಪ್ರಶಸ್ತಿಗೆ ಆಯ್ಕೆಯಾದ ಸಿನಿಮಾಗಳನ್ನು ಮಾರ್ಚ್ 12ರಂದು ಘೋಷಿಸಲಾಗುವುದು. ಇಂದು ಕೇವಲ ನಾಮ ನಿರ್ದೇಶನಗೊಂಡ ಸಿನಿಮಾಗಳನ್ನು ಮಾತ್ರ ಘೋಷಿಸಲಾಗುತ್ತದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರಾಜಮೌಳಿ ಹತ್ಯೆಗೆ ಸ್ಕೆಚ್ ಹಾಕಿದ ಡೈರೆಕ್ಟರ್ಸ್ : ಬಾಯ್ಬಿಟ್ಟ ವರ್ಮಾ

    ರಾಜಮೌಳಿ ಹತ್ಯೆಗೆ ಸ್ಕೆಚ್ ಹಾಕಿದ ಡೈರೆಕ್ಟರ್ಸ್ : ಬಾಯ್ಬಿಟ್ಟ ವರ್ಮಾ

    ರಾಜಮೌಳಿ (Rajamouli) ಅವರೇ ದಯವಿಟ್ಟು ನಿಮ್ಮ ಭದ್ರತೆಯನ್ನು ಹೆಚ್ಚಿಸಿಕೊಳ್ಳಿ. ಅನೇಕರು ನಿಮ್ಮ ಮೇಲೆ ಅಸೂಯೆ ಪಡುತ್ತಿದ್ದಾರೆ. ನಿಮ್ಮನ್ನು ಕೊಲ್ಲಲೆಂದೇ ನಿರ್ದೇಶಕರು ಒಂದು ಗುಂಪನ್ನಾಗಿ ಮಾಡಿಕೊಂಡಿದ್ದಾರೆ. ಆ ಗುಂಪಿನಲ್ಲಿ ನಾನೂ ಇದ್ದೇನೆ. ಇದೀಗ ನಾನು ನಾಲ್ಕು ಪೆಗ್‍ ತಗೆದುಕೊಂಡಿದ್ದೇನೆ ಹಾಗಾಗಿ ಸತ್ಯ ನುಡಿಯುತ್ತಿದ್ದೇನೆ ಎಂದು ಹೇಳುವ ಮೂಲಕ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (Ram Gopal Verma) ಒಂದು ಕ್ಷಣ ರಾಜಮೌಳಿ ಅಭಿಮಾನಿಗಳನ್ನು ದಂಗಾಗಿಸಿದ್ದರು.

    ಈ ವಿಷಯವನ್ನು ವರ್ಮಾ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು, ಮೊದ ಮೊದಲು ಎಲ್ಲರೂ ಇದನ್ನು ಗಂಭೀರವಾಗಿಯೇ ತಗೆದುಕೊಂಡಿದ್ದರು. ಆನಂತರ ಸರಣಿಯವಾಗಿ ವರ್ಮಾ ಸೋಷಿಯಲ್ ಮೀಡಿಯಾದಲ್ಲಿ ಹಲವು ವಿಷಯಗಳನ್ನು ಬರೆದುಕೊಂಡಿದ್ದಾರೆ. ಹಾಗಾಗಿ ಇದು ತಮಾಷೆ ಮತ್ತು ರಾಜಮೌಳಿಯನ್ನು ಕಾಲು ಎಳೆಯುವ ತಂತ್ರ ಎಂದು ನಿಟ್ಟುಸಿರಿಟ್ಟಿದ್ದಾರೆ ಅಭಿಮಾನಿಗಳು. ಇದನ್ನೂ ಓದಿ: ಕೊಡವ ಶೈಲಿಯಲ್ಲಿ ಮಿಂಚಿದ ನಟಿ ಶುಭ್ರ ಅಯ್ಯಪ್ಪ- ವಿಶಾಲ್ ಜೋಡಿ

    ಸರಣಿಯ ಟ್ವೀಟ್ ನಲ್ಲಿ ರಾಜಮೌಳಿಯನ್ನು ಹೊಗಳಿರುವ ವರ್ಮಾ, ಅವರನ್ನು ದಾದಾ ಸಾಹೇಬ್ ಫಾಲ್ಕೆಗೆ ಹೋಲಿಸಿದ್ದಾರೆ. ಭಾರತೀಯ ಸಿನಿಮಾ ರಂಗದ ದಿಗ್ಗಜ ನಿರ್ದೇಶಕರನ್ನೂ ದಾಟಿಕೊಂಡು ಮುಂದೆ ಹೋಗಿದ್ದೀರಿ ಎಂದಿದ್ದಾರೆ. ಈ ಸ್ಥಾನದಲ್ಲಿ ನೀವು ಇರುತ್ತೀರಿ ಎಂದು ನಾನು ಅಂದುಕೊಂಡಿರಲಿಲ್ಲ ಎಂದು ಅಚ್ಚರಿಯನ್ನೂ ವ್ಯಕ್ತ ಪಡಿಸಿದ್ದಾರೆ. ಅಲ್ಲದೇ, ನಿಮ್ಮ ಕಿರುಬೆರಳನ್ನು ಒಂದು ಸಲ ಚೀಪಬೇಕು ಎಂದು ಯತ್ವಾತದ್ವಾ ಹೊಗಳಿದ್ದಾರೆ ರಾಮ್ ಗೋಪಾಲ್ ವರ್ಮಾ.

    ಇತ್ತೀಚೆಗಷ್ಟೇ ರಾಜಮೌಳಿ ಹಾಲಿವುಡ್ ನಿರ್ದೇಶಕರನ್ನು ಭೇಟಿ ಮಾಡಿದ್ದರು. ಅವರು ಆರ್.ಆರ್.ಆರ್ (RRR) ಸಿನಿಮಾ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದರು. ಅಲ್ಲದೇ, ಈ ಸಿನಿಮಾದ ಹಾಡಿಗಾಗಿ ಗೋಲ್ಡನ್ ಗ್ಲೋಬ್ ಪ್ರಶಸ್ತಿ ಕೂಡ ಬಂದಿತ್ತು. ಇದೀಗ ಆಸ್ಕರ್ ಪ್ರಶಸ್ತಿಯ ರೇಸ್‍ ನಲ್ಲೂ ಕೂಡ ಆರ್.ಆರ್.ಆರ್ ಸಿನಿಮಾವಿದೆ. ಈ ಹಿನ್ನೆಲೆಯಲ್ಲಿ ವರ್ಮಾ ಮೆಚ್ಚುಗೆಯ ಮಾತುಗಳ ಮೂಲಕ ಅಭಿನಂದಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಂಜೆ 7ಕ್ಕೆ ‘ಆಸ್ಕರ್’ ನಾಮಿನೇಷನ್ ಲಿಸ್ಟ್ ಪ್ರಕಟ: ಕನ್ನಡ ಸಿನಿಮಾಗಳಿಗೆ ಸಿಗಲಿದೆಯಾ ಅವಕಾಶ?

    ಸಂಜೆ 7ಕ್ಕೆ ‘ಆಸ್ಕರ್’ ನಾಮಿನೇಷನ್ ಲಿಸ್ಟ್ ಪ್ರಕಟ: ಕನ್ನಡ ಸಿನಿಮಾಗಳಿಗೆ ಸಿಗಲಿದೆಯಾ ಅವಕಾಶ?

    ಕ್ಯಾಲಿಫೋರ್ನಿಯಾದ ಬೆವರ್ಲಿ ಹಿಲ್ಸ್ ನಲ್ಲಿ ಇಂದು ಆಸ್ಕರ್ (Oscar) ಪ್ರಶಸ್ತಿಯ ನಾಮ ನಿರ್ದೇಶನ (Nomination) ಘೋಷಣೆ ಕಾರ್ಯಕ್ರಮ ನಡೆಯಲಿದೆ. ಭಾರತೀಯ ಕಾಲಮಾನದ ಪ್ರಕಾರ ಇಂದು ಸಂಜೆ 7 ಗಂಟೆಯ ಹೊತ್ತಿಗೆ ಈ ಪ್ರಕ್ರಿಯೆ ನಡೆಯಲಿದ್ದು, ಯಾವೆಲ್ಲ ಸಿನಿಮಾಗಳು ನಾಮಿನೇಷನ್ ಆಗಲಿವೆ ಎನ್ನುವ ಕುತೂಹಲ ಮೂಡಿದೆ. ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ, ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಚಿತ್ರಗಳು ಕೂಡ ಈ ಬಾರಿ ರೇಸ್ ನಲ್ಲಿ ಇರುವುದರಿಂದ ನಾಮ ನಿರ್ದೇಶನ ಪಟ್ಟಿಯಲ್ಲಿ ಇವುಗಳಿಗೆ ಸ್ಥಾನ ಸಿಗಲಿದೆಯಾ ಎಂದು ಕಾದು ನೋಡಬೇಕು.

    ಈ ಬಾರಿಯ ಪ್ರಶಸ್ತಿಗಾಗಿ ಒಟ್ಟು ಮುನ್ನೂರು ಸಿನಿಮಾಗಳನ್ನು ಆಯ್ಕೆ ಮಾಡಲಾಗಿದೆ. ಮುನ್ನೂರು ಸಿನಿಮಾಗಳಲ್ಲಿ ನಾಮಿನೇಷನ್ ಪ್ರಕ್ರಿಯೆ ನಡೆಯಲಿದೆ. ನಾಮಿನೇಷನ್ ಗೆ ಆಯ್ಕೆಯಾದ ಸಿನಿಮಾಗಳಲ್ಲಿ ಮತ್ತೆ ಆಸ್ಕರ್ ಪ್ರಶಸ್ತಿಗಾಗಿ ಆಯ್ಕೆ ನಡೆಯುತ್ತದೆ. ಆಸ್ಕರ್ ಪ್ರಶಸ್ತಿಗೆ ಆಯ್ಕೆಯಾದ ಸಿನಿಮಾಗಳನ್ನು ಮಾರ್ಚ್ 12ರಂದು ಘೋಷಿಸಲಾಗುವುದು. ಇಂದು ಕೇವಲ ನಾಮ ನಿರ್ದೇಶನಗೊಂಡ ಸಿನಿಮಾಗಳನ್ನು ಮಾತ್ರ ಘೋಷಿಸಲಾಗುತ್ತದೆ. ಇದನ್ನೂ ಓದಿ: ವಿನಯ್ ರಾಜ್‌ಕುಮಾರ್‌ಗೆ ನಾಯಕಿಯಾದ `ವಿಕ್ರಮ್’ ನಟಿ ಸ್ವಾತಿಷ್ಟ ಕೃಷ್ಣನ್

    ಕನ್ನಡದಿಂದ ಕಾಂತಾರ (Kantara)ಮತ್ತು ವಿಕ್ರಾಂತ್ ರೋಣ (Vikrant Rona) ಸ್ಪರ್ಧೆಯಲ್ಲಿ ಇದ್ದರೆ, ತೆಲುಗು ಸಿನಿಮಾ ರಂಗದಿಂದ ಆರ್.ಆರ್.ಆರ್ (RRR), ತಮಿಳಿನಿಂದ ಇರುವಿನ್ ನಿಲಳ್ ಹಾಗೂ ರಾಕೆಟ್ರಿ ದಿ ನಂಭಿ ಎಫೆಕ್ಟ್ ಚಿತ್ರಗಳು ಸ್ಪರ್ಧೆ ಮಾಡುತ್ತಿವೆ. ಹಿಂದಿಯಿಂದ ಗಂಗೂಬಾಯಿ ಕಾಠಿಯಾವಾಡಿ ಹಾಗೂ ದಿ ಕಾಶ್ಮೀರ್ ಫೈಲ್ಸ್ ಸಿನಿಮಾಗಳಿವೆ. ಗುಜರಾತಿನಿಂದ ಛೆಲ್ಲೋ ಶೋ, ಚಿತ್ರವೊಂದನ್ನು ಕಳುಹಿಸಲಾಗಿದೆ. ಮಿ ವಸಂತ್ ರಾವ್, ದಿ ನೆಕ್ಸ್ಸಟ್ ಮಾರ್ನಿಂಗ್, ತುಜೆ ಸಾಥಿ ಕಹಿ ಸೇರಿದಂತೆ  ಭಾರತದಿಂದಲೇ ಹಲವು ಚಿತ್ರಗಳು ಸ್ಪರ್ಧಾ ಕಣದಲ್ಲಿ ಇವೆ. ಇವುಗಳಲ್ಲಿ ಯಾವೆಲ್ಲ ಚಿತ್ರಗಳು ನಾಮಿನೇಷನ್ ಸುತ್ತಿಗೆ ಅರ್ಹತೆ ಪಡೆಯುತ್ತವೆ ಎನ್ನುವುದು ಸಂಜೆ 7 ಗಂಟೆಯ ನಂತರ ಗೊತ್ತಾಗಲಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಎರಡು ಬಾರಿ ‘ಆರ್.ಆರ್.ಆರ್’ ಸಿನಿಮಾ ನೋಡಿದ ಅವತಾರ್ ಚಿತ್ರ ನಿರ್ದೇಶಕ

    ಎರಡು ಬಾರಿ ‘ಆರ್.ಆರ್.ಆರ್’ ಸಿನಿಮಾ ನೋಡಿದ ಅವತಾರ್ ಚಿತ್ರ ನಿರ್ದೇಶಕ

    ಗತ್ತಿನ ಅತ್ಯುತ್ತಮ ಸಿನಿಮಾ ನಿರ್ದೇಶಕರ ಸಾಲಿನಲ್ಲಿ ಮೊದಲು ಕಾಣಿಸಿಕೊಳ್ಳುವುದು ‘ಅವತಾರ್’ (Avatar) ಖ್ಯಾತಿಯ ಜೇಮ್ಸ್ ಕ್ಯಾಮರೂನ್ (James Cameron). ಇವರನ್ನು ಜಗತ್ತಿನ ಸಿನಿಮಾ ರಂಗ ವಿಶ್ವವಿದ್ಯಾಲಯ ಎಂದೇ ಕರೆಯುತ್ತದೆ. ಇವರು ಮಾಡಿದ ಸಿನಿಮಾಗಳಿಗೆ ಜನರು ಯಾವತ್ತಿಗೂ ಮನ್ನಣೆ ಕೊಡುತ್ತಲೇ ಬಂದಿದ್ದಾರೆ. ಅತೀ ಹೆಚ್ಚು ಬಜೆಟ್ ನಲ್ಲಿ ಇವರ ಚಿತ್ರಗಳು ನಿರ್ಮಾಣವಾಗುತ್ತದೆ. ಲಾಭವನ್ನೂ ಹಾಗೆಯೇ ತಂದುಕೊಡುತ್ತವೆ. ಇಂತಹ ಮಹಾನ್ ನಿರ್ದೇಶಕರು, ರಾಜಮೌಳಿ (Rajamouli) ನಿರ್ದೇಶನದ ಆರ್.ಆರ್.ಆರ್ (RRR) ಸಿನಿಮಾವನ್ನು ಎರಡು ಬಾರಿ ನೋಡಿದ್ದಾರಂತೆ.

    ಈ ವಿಷಯವನ್ನು ಸ್ವತಃ ರಾಜಮೌಳಿ ಅವರೇ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಫೋಟೋ ಕೂಡ ಶೇರ್ ಮಾಡಿದ್ದಾರೆ. ‘ಆರ್.ಆರ್.ಆರ್ ಸಿನಿಮಾವನ್ನು ತಾವು ಎರಡು ಬಾರಿ ನೋಡಿದ್ದಲ್ಲೇ, ತಮ್ಮ ಪತ್ನಿಗೂ ನೋಡುವಂತೆ ಸಲಹೆ ನೀಡಿದ್ದು, ನನಗೆ ಸಿಕ್ಕ ಮಹಾನ್ ಗೌರವ. ಹತ್ತು ನಿಮಷಗಳ ಕಾಲ ಸಿನಿಮಾ ಬಗ್ಗೆ ವಿಶ್ಲೇಷಿಸಿದ್ದನ್ನು ನಾನು ಮರೆಯುವುದಕ್ಕೆ ಸಾಧ್ಯವೇ ಇಲ್ಲ’ ರಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಸಚಿವ ಸುಧಾಕರ್‌ರನ್ನ ಹಾಡಿ ಹೊಗಳಿದ ರಮ್ಯಾ: ಕೈಗೆ ನಟಿ ಬೈ ಹೇಳಿ ಬಿಜೆಪಿ ಸೇರ್ಪಡೆ?

    ಜಗತ್ತಿನ ಅತ್ಯುತ್ತಮ ನಿರ್ದೇಶಕರಲ್ಲಿ ರಾಜಮೌಳಿ ಕೂಡ ಒಬ್ಬರು ಎಂದು ಜೇಮ್ಸ್ ಕ್ಯಾಮರೂನ್ ಗುಣಗಾನ ಮಾಡಿದ್ದಾರಂತೆ. ಈ ಮಾತು ರಾಜಮೌಳಿ ಅವರಲ್ಲಿ ಮತ್ತಷ್ಟ ಸಂಭ್ರಮ ತಂದಿದೆ. ‘ನಿಮ್ಮೊಂದಿಗೆ ನಾನೂ ಇದ್ದೇನೆ ಎನ್ನುವುದೇ ಖುಷಿ. ಇಬ್ಬರಿಗೂ ಧನ್ಯವಾದಗಳು ಎಂದು ರಾಜಮೌಳಿ ಅವರು ಫೋಟೋ ಜೊತೆ ಬರೆದುಕೊಂಡಿದ್ದಾರೆ. ಆ ಕ್ಷಣವನ್ನು ಇನ್ನೂ ನನ್ನಿಂದ ನಂಬಲು ಸಾಧ್ಯವಾಗುತ್ತಿಲ್ಲ ಎಂದು ಭಾವನೆಯನ್ನು ಇವರು ಹಂಚಿಕೊಂಡಿದ್ದಾರೆ. ಇಂಥದ್ದೊಂದು ಅವಕಾಶ ಸಿಕ್ಕಿದ್ದು ಕ್ರಿಟಿಕ್ಸ್ ಅವಾರ್ಡ್ ಕಾರ್ಯಕ್ರಮದಲ್ಲಿ ಎನ್ನುವ ಮಾಹಿತಿಯನ್ನೂ ರಾಜಮೌಳಿ ಹಂಚಿಕೊಂಡಿದ್ದಾರೆ.

    ಗೋಲ್ಡನ್ ಗ್ಲೋಬ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜಮೌಳಿ ಅವರು ಮತ್ತೋರ್ವ ಹೆಸರಾಂತ ನಿರ್ದೇಶಕ ಸ್ಟೀಲ್ ಬರ್ಗ್ (Steelberg) ಅವರನ್ನು ಭೇಟಿ ಮಾಡಿದ್ದರು. ದೇವರನ್ನೇ ನಾನು ನೋಡಿದೆ ಎಂದು ಅವರು ಬರೆದುಕೊಂಡಿದ್ದರು. ಒಂದೇ ವಾರದಲ್ಲಿ ಇಬ್ಬರು ಖ್ಯಾತ ನಿರ್ದೇಶಕರನ್ನು ಭೇಟಿ ಮಾಡುವ ಮೂಲಕ ರಾಜಮೌಳಿ ಡಬಲ್ ಸಂಭ್ರಮದಲ್ಲಿ ಮಿಂದೆದ್ದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ದೇವರನ್ನು ಭೇಟಿಯಾದರಂತೆ ನಿರ್ದೇಶಕ ರಾಜಮೌಳಿ

    ದೇವರನ್ನು ಭೇಟಿಯಾದರಂತೆ ನಿರ್ದೇಶಕ ರಾಜಮೌಳಿ

    ಆರ್.ಆರ್.ಆರ್ ಸಿನಿಮಾದ ನಾಟು ನಾಟು ಹಾಡಿಗೆ ಗೋಲ್ಡನ್ ಗ್ಲೋಬ್ಸ್ ಪ್ರಶಸ್ತಿ ಪಡೆದು ಬೀಗುತ್ತಿರುವ ನಿರ್ದೇಶಕ ರಾಜಮೌಳಿ, ಅದೇ ಖುಷಿಯಲ್ಲೇ ಒಂದು ಪೋಸ್ಟ್ ಮಾಡಿದ್ದಾರೆ. ಕೊನೆಗೂ ನಾನು ದೇವರನ್ನು ಭೇಟಿ ಮಾಡಿದೆ ಎಂದು ಅವರು ಬರೆದುಕೊಂಡಿದ್ದಾರೆ. ಆ ದೇವರು ಯಾರು ಎನ್ನುವುದಕ್ಕಾಗಿ ಫೋಟೋವನ್ನೂ ಅವರು ಹಂಚಿಕೊಂಡಿದ್ದಾರೆ. ದೇವರ ಜೊತೆ ಕೆಲ ಹೊತ್ತು ಕಳೆದು ಸಂಭ್ರಮಿಸಿದ್ದಾರೆ.

    ಅಂದಹಾಗೆ ರಾಜಮೌಳಿ ದೇವರು ಅಂತ ಕರೆದದ್ದು ಹಾಲಿವುಡ್ ಖ್ಯಾತ ನಿರ್ದೇಶಕ ಸ್ಟೀವನ್ ಸ್ಟೀಲ್ ಬರ್ಗ್ ಅವರನ್ನು. ಹಾಲಿವುಡ್ ನಲ್ಲಿ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಸ್ಟೀವನ್, ರಾಜಮೌಳಿ ಅವರ ಅತ್ಯಂತ ಹೆಮ್ಮೆ ನಿರ್ದೇಶಕರಂತೆ. ಅನೇಕ ಬಾರಿ ಇವರ ಕುರಿತು ರಾಜಮೌಳಿ ಹೇಳಿಕೊಂಡಿದ್ದಾರೆ. ಅವಕಾಶ ಸಿಕ್ಕರೆ ಅವರ ಜೊತೆ ಕೆಲಸ ಮಾಡುವುದಾಗಿಯೂ ಈ ಹಿಂದೆ ಹೇಳಿಕೊಂಡಿದ್ದರು. ತಮ್ಮ ಆರಾಧ್ಯ ನಿರ್ದೇಶಕನನ್ನು ಪ್ರಶಸ್ತಿ ಪ್ರದಾನ ಸಮಾರಂಭದ ನಂತರ ರಾಜಮೌಳಿ ಭೇಟಿ ಮಾಡಿದ್ದಾರೆ. ಇದನ್ನೂ ಓದಿ:‘ಮಠ’ ಚಿತ್ರ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಬಂಧನ

    ಇದೇ ಸಮಾರಂಭದಲ್ಲಿ ಸ್ಟೀವನ್ ಸ್ಟೀಲ್ ಬರ್ಗ್ ಕೂಡ ಎರಡು ಪ್ರಶಸ್ತಿಗಳನ್ನು ಬಾಚಿಕೊಂಡಿದ್ದಾರೆ. ಇವರ ನಿರ್ದೇಶನದ ಫ್ಯಾಬೆಲ್ಮ್ಯಾನ್ಸ್ ಸಿನಿಮಾ ಎರಡು ಪ್ರಶಸ್ತಿಗಳನ್ನು ಪಡೆದಿದೆ. ಈ ಸಿನಿಮಾಗೆ ಅತ್ಯುತ್ತಮ ಸಿನಿಮಾ ಮತ್ತು ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಗಳು ಸಂದಿವೆ. ಸ್ಟೀವನ್ ಜೊತೆ ಫೋಟೋ ಕೂಡ ತಗೆಸಿಕೊಂಡಿರುವ ರಾಜಮೌಳಿ, ಆ ಫೋಟೋಗಳನ್ನು ಅಭಿಮಾನಿಗಳಿಗಾಗಿ ಹಂಚಿಕೊಂಡಿದ್ದಾರೆ.

    ರಾಜಮೌಳಿ ನಿರ್ದೇಶನದಲ್ಲಿ ಮೂಡಿ ಬಂದಿರುವ ಆರ್.ಆರ್.ಆರ್ ಸಿನಿಮಾಗೆ ಎಂ.ಎಂ. ಕೀರವಾಣಿ ಸಂಗೀತ ನಿರ್ದೇಶನ ಮಾಡಿದ್ದಾರೆ. ಇವರ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದಿರುವ ನಾಟು ನಾಟು ಹಾಡು, ಈ ಬಾರಿ ಗೋಲ್ಡನ್ ಗ್ಲೋಬ್ಸ್ ಪ್ರಶಸ್ತಿ ಪಡೆದಿದೆ. ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಿನಿಮಾ ಟೀಮ್ ತಮ್ಮ ಕುಟುಂಬದೊಂದಿಗೆ ಹಾಜರಿತ್ತು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಗಾಯಕ ಅದ್ನಾನ್ ಸಾಮಿಗೆ ಸಖತ್ತಾಗಿ ತಿರುಗೇಟು ನೀಡಿದ ನಟಿ ರಮ್ಯಾ

    ಗಾಯಕ ಅದ್ನಾನ್ ಸಾಮಿಗೆ ಸಖತ್ತಾಗಿ ತಿರುಗೇಟು ನೀಡಿದ ನಟಿ ರಮ್ಯಾ

    ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ (R.R.R) ಸಿನಿಮಾದ ‘ನಾಟು ನಾಟು’ ಹಾಡಿಗೆ ಗೋಲ್ಡನ್ ಗ್ಲೋಬ್ ಪ್ರಶಸ್ತಿ ಘೋಷಣೆ ಆಗುತ್ತಿದ್ದಂತೆಯೇ ಭಾರತಕ್ಕೆ ಭಾರತವೇ ಸಂಭ್ರಮಿಸಿತು. ಪ್ರಧಾನಿ ನರೇಂದ್ರ ಮೋದಿ ಸಮೇತ ಚಿತ್ರತಂಡಕ್ಕೆ ಶುಭಾಶಯ ಕೋರಿದರು. ಹಾಗೆಯೇ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ (Jagan Mohan Reddy) ಕೂಡ ತಮ್ಮ ರಾಜ್ಯದ ಸಿನಿಮಾವೊಂದು ಅಂಥದ್ದೊಂದು ಪ್ರಶಸ್ತಿ ಪಡೆದಾಗ ಸಹಜವಾಗಿಯೇ ಖುಷಿ ಆಗಿತ್ತು. ಹಾಗಾಗಿಯೇ ಅವರು ಅಭಿಮಾನದಿಂದ ಟ್ವೀಟ್ ಮಾಡಿದ್ದರು.

    ಜಗನ್ ಮೋಹನ್ ರೆಡ್ಡಿ ಮಾಡಿರುವ ಟ್ವೀಟ್ ನಲ್ಲಿ, ‘ರಾಜ್ಯದ ಬಾವುಟವನ್ನು ಆಕಾಶದೆತ್ತರಕ್ಕೆ ಹಾರಿಸಿದ ಆರ್.ಆರ್.ಆರ್ ಟೀಮ್‍ ಗೆ ಧನ್ಯವಾದಗಳು’ ಎಂದು ತಿಳಿಸಿದ್ದರು. ರಾಜ್ಯದ ಬಾವುಟ ಎಂದು ಟ್ವೀಟ್ ಮಾಡಿದ್ದಕ್ಕೆ ಗಾಯಕ ಅದ್ನಾನ್ ಸಾಮಿ (Adnan Sami)  ಆಕ್ಷೇಪ ವ್ಯಕ್ತಪಡಿಸಿ. ಮೊದಲು ದೇಶ, ಆಮೇಲೆ ರಾಜ್ಯ. ತೆಲುಗು ಬಾವುಟ ಎಂದು ಬರೆದು ವಿಭಜಿಸಬೇಡಿ’ ಎಂದು ಪ್ರತಿಕ್ರಿಯೆ ನೀಡಿದ್ದರು. ಇದು ಭಾರೀ ಚರ್ಚೆಗೂ ಕಾರಣವಾಗಿತ್ತು. ಪರ ವಿರೋಧದ ಪ್ರತಿಕ್ರಿಯೆ ಕೇಳಿ ಬಂತು.  ಇದನ್ನೂ ಓದಿ: ನಾನು ಆಡಿದ ಮಾತು ತಪ್ಪಾಗಿ ಅರ್ಥೈಸಿಕೊಳ್ಳಲಾಗುತ್ತಿದೆ: ವಿವಾದಗಳ ಬಗ್ಗೆ ರಶ್ಮಿಕಾ ಪ್ರತಿಕ್ರಿಯೆ

     

    ಅದ್ವಾನ್ ಸಾಮಿ ಮಾಡಿದ ಟ್ವೀಟ್ ಗೆ ಸ್ಯಾಂಡಲ್ ವುಡ್ ‍ಕ್ವೀನ್ ರಮ್ಯಾ (Ramya) ತಿರುಗೇಟು ನೀಡಿದ್ದು, ‘ನೀವು ಹೇಳಿದಂತೆ ನಾವು ಭಾರತೀಯರು ನಿಜ. ಆದರೆ, ನಾವು ತೆಲುಗು, ಕನ್ನಡಿಗರು, ತಮಿಳಿಗರು. ನಮ್ಮದೇ ಆದ ಭಾಷೆ, ಬಾವುಟ ಹೊಂದಿದ್ದೇವೆ. ನಾವೆಲ್ಲರೂ ಭಾರತೀಯರು ಜೊತೆಗೆ ವಿವಿಧ ಸಂಸ್ಕೃತಿ, ವಿವಿಧತೆಯಲ್ಲಿ ಏಕತೆಯನ್ನು ಹೊಂದಿದವರು’ ಎಂದು ಉತ್ತರಿಸಿದ್ದಾರೆ. ನಮ್ಮ ಅಸ್ಮಿತೆಯ ಬಗ್ಗೆಯೂ ಅವರು ಮಾತನಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಗೋಲ್ಡನ್ ಗ್ಲೋಬ್ಸ್ ಪ್ರಶಸ್ತಿ ಪಡೆದ ಆರ್.ಆರ್.ಆರ್ ತಂಡಕ್ಕೆ ಮೋದಿ ಅಭಿನಂದನೆ

    ಗೋಲ್ಡನ್ ಗ್ಲೋಬ್ಸ್ ಪ್ರಶಸ್ತಿ ಪಡೆದ ಆರ್.ಆರ್.ಆರ್ ತಂಡಕ್ಕೆ ಮೋದಿ ಅಭಿನಂದನೆ

    ಹಾಲಿವುಡ್ ಪ್ರತಿಷ್ಠಿತ ಗೋಲ್ಡನ್ ಗ್ಲೋಬ್ಸ್ ‍ಪ್ರಶಸ್ತಿ ಪಡೆದಿರುವ ಆರ್.ಆರ್.ಆರ್ ಸಿನಿಮಾ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಸಿನಿಮಾದ ಸಂಗೀತ ನಿರ್ದೇಶಕ ಎಂ.ಎಂ. ಕೀರವಾಣಿ ಪ್ರಶಸ್ತಿ ಪಡೆಯುತ್ತಿರುವ ವಿಡಿಯೋವನ್ನು ಶೇರ್ ಮಾಡಿರುವ ಮೋದಿ, ‘ಈ ಪ್ರತಿಷ್ಠಿತ ಗೌರವವು ಪ್ರತಿಯೊಬ್ಬ ಭಾರತೀಯನು ಹೆಮ್ಮೆ ಪಡುವಂತೆ ಮಾಡಿದೆ. ರಾಜಮೌಳಿ, ಕೀರವಾಣಿ, ರಾಮ್ ಚರಣ್, ಜ್ಯೂನಿಯರ್ ಎನ್.ಟಿ.ಆರ್ ಹಾಗೂ ಇಡೀ ತಂಡಕ್ಕೆ ಅಭಿನಂದನೆಗಳು’ ಎಂದು ಟ್ವಿಟ್ ಮಾಡಿದ್ದಾರೆ.

    ಸದ್ಯ ಆಸ್ಕರ್ ಅಂಗಳದಲ್ಲಿ ಪ್ರಶಸ್ತಿಯ ಕನಸು ಕಾಣುತ್ತಿರುವ ಆರ್.ಆರ್.ಆರ್ ಸಿನಿಮಾ ತಂಡಕ್ಕೆ ಅನಿರೀಕ್ಷಿತ ಪ್ರಶಸ್ತಿಯೊಂದು ಸಂದಿದ್ದು, ಈ ಸಿನಿಮಾದ ‘ನಾಟು ನಾಟು’ ಹಾಡಿಗೆ ಬಂದಿದೆ. ಮೊನ್ನೆಯಷ್ಟೇ ನ್ಯಾಷನಲ್ ಬೋರ್ಡ್ ಆಫ್ ರಿವ್ಯೂ ಪ್ರಶಸ್ತಿಯನ್ನೂ ಬಾಚಿಕೊಂಡಿದ್ದ ಸಿನಿಮಾ, ಈ ಸಲ ಬಂಗಾರದ ಪದಕವನ್ನೇ ಬೇಟೆಯಾಡಿದೆ. ಇದನ್ನೂ ಓದಿ:‘ಪಠಾಣ್’ ದೇಶಭಕ್ತಿ ಸಾರುವ ಸಿನಿಮಾ : ನಟ ಶಾರುಖ್ ಖಾನ್

    ಗೋಲ್ಡನ್ ಗ್ಲೋಬ್ಸ್ ಪ್ರಶಸ್ತಿಯ ಬೆಸ್ಟ್ ಒರಿಜನಲ್ ಸಾಂಗ್ ಕೆಟಗರಿಯಲ್ಲಿ ‘ನಾಟು ನಾಟು’ ಹಾಡಿಗೆ ಈ ಪ್ರಶಸ್ತಿ ಬಂದಿದ್ದು, ಯುನೈಟೆಡ್ ಸ್ಟೇಟ್ಸ್ ನ ಬೆವೆರ್ಲಿ ಹಿಲ್ಸ್ ನಲ್ಲಿ ನಡೆಯುತ್ತಿರುವ ಸಮಾರಂಭದಲ್ಲಿ ಈ ಗೌರವವನ್ನು ಸಂಗೀತ ನಿರ್ದೇಶಕ ಎಂ.ಎಂ. ಕೀರವಾಣಿ ಈ ಪ್ರಶಸ್ತಿಯನ್ನು ಪಡೆದರು. ಸಮಾರಂಭದಲ್ಲಿ ರಾಜಮೌಳಿ, ಜ್ಯೂನಿಯರ್ ಎನ್.ಟಿ.ಆರ್ ಹಾಗೂ ರಾಮ್ ಚರಣ್ ಕುಟುಂಬ ಕೂಡ ಭಾಗಿಯಾಗಿತ್ತು.

    RRR Lyrical Video Natu Natu 3

    ಈ ಪ್ರಶಸ್ತಿಗಾಗಿ ಘಟಾನುಘಟಿ ಹಾಡುಗಳೇ ಸ್ಪರ್ಧಾ ಕಣದಲ್ಲಿದ್ದವು. ಕೆರೊಲಿನ್, ಸಿಯೋ ಪಾ, ಹೋಲ್ಡ್ ಮೈ ಹ್ಯಾಂಡ್, ಲಿಫ್ಟ್ ಮಿ ಅಪ್ ರೀತಿಯ ಹಾಡುಗಳು ಈ ಪ್ರಶಸ್ತಿಗಾಗಿ ನಾಮಿನೇಟ್ ಆಗಿದ್ದವು. ಈ ಎಲ್ಲ ಹಾಡುಗಳ ಜನಪ್ರಿಯತೆಯನ್ನು ಹಿಂದಿಕ್ಕೆ ನಾಟು ನಾಟು ಹಾಡು ಪ್ರಶಸ್ತಿ ಪಡೆದಿದೆ. ಈ ಪ್ರಶಸ್ತಿ ಪಡೆದ ದಕ್ಷಿಣದ ಭಾರತದ ಮೊದಲ ಸಿನಿಮಾ ಎನ್ನುವ ಹೆಗ್ಗಳಿಕೆಗೂ ಪಾತ್ರವಾಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಆರ್.ಆರ್.ಆರ್ ಸಿನಿಮಾದ ನಾಟು ನಾಟು ಹಾಡಿಗೆ ಗೋಲ್ಡನ್ ಗ್ಲೋಬ್ ಪ್ರಶಸ್ತಿ

    ಆರ್.ಆರ್.ಆರ್ ಸಿನಿಮಾದ ನಾಟು ನಾಟು ಹಾಡಿಗೆ ಗೋಲ್ಡನ್ ಗ್ಲೋಬ್ ಪ್ರಶಸ್ತಿ

    ದ್ಯ ಆಸ್ಕರ್ ಅಂಗಳದಲ್ಲಿ ಪ್ರಶಸ್ತಿಯ ಕನಸು ಕಾಣುತ್ತಿರುವ ಆರ್.ಆರ್.ಆರ್ ಸಿನಿಮಾ ತಂಡಕ್ಕೆ ಅನಿರೀಕ್ಷಿತ ಪ್ರಶಸ್ತಿಯೊಂದು ಸಂದಿದೆ. ಹಾಲಿವುಡ್ ನ ಪ್ರತಿಷ್ಠಿತ ಪ್ರಶಸ್ತಿ ಗೋಲ್ಡನ್ ಗ್ಲೋಬ್ಸ್ ಪ್ರಶಸ್ತಿಯು ಆರ್.ಆರ್.ಆರ್ ಸಿನಿಮಾದ ‘ನಾಟು ನಾಟು’ ಹಾಡಿಗೆ ಬಂದಿದೆ. ಮೊನ್ನೆಯಷ್ಟೇ ನ್ಯಾಷನಲ್ ಬೋರ್ಡ್ ಆಫ್ ರಿವ್ಯೂ ಪ್ರಶಸ್ತಿಯನ್ನೂ ಬಾಚಿಕೊಂಡಿದ್ದ ಸಿನಿಮಾ, ಈ ಸಲ ಬಂಗಾರದ ಪದಕವನ್ನೇ ಬೇಟೆಯಾಡಿದೆ.

    ಗೋಲ್ಡನ್ ಗ್ಲೋಬ್ಸ್ ಪ್ರಶಸ್ತಿಯ ಬೆಸ್ಟ್ ಒರಿಜನಲ್ ಸಾಂಗ್ ಕೆಟಗರಿಯಲ್ಲಿ ‘ನಾಟು ನಾಟು’ ಹಾಡಿಗೆ ಈ ಪ್ರಶಸ್ತಿ ಬಂದಿದ್ದು, ಯುನೈಟೆಡ್ ಸ್ಟೇಟ್ಸ್ ನ ಬೆವೆರ್ಲಿ ಹಿಲ್ಸ್ ನಲ್ಲಿ ನಡೆಯುತ್ತಿರುವ ಸಮಾರಂಭದಲ್ಲಿ ಈ ಗೌರವವನ್ನು ಸಂಗೀತ ನಿರ್ದೇಶಕ ಎಂ.ಎಂ. ಕೀರವಾಣಿ ಈ ಪ್ರಶಸ್ತಿಯನ್ನು ಪಡೆದರು. ಸಮಾರಂಭದಲ್ಲಿ ರಾಜಮೌಳಿ, ಜ್ಯೂನಿಯರ್ ಎನ್.ಟಿ.ಆರ್ ಹಾಗೂ ರಾಮ್ ಚರಣ್ ಕುಟುಂಬ ಕೂಡ ಭಾಗಿಯಾಗಿತ್ತು. ಇದನ್ನೂ ಓದಿ: `ಜೈಲರ್’ ರಜನಿಕಾಂತ್‌ಗೆ ಮೋಹನ್ ಲಾಲ್ ಸಾಥ್

    ಈ ಪ್ರಶಸ್ತಿಗಾಗಿ ಘಟಾನುಘಟಿ ಹಾಡುಗಳೇ ಸ್ಪರ್ಧಾ ಕಣದಲ್ಲಿದ್ದವು. ಕೆರೊಲಿನ್, ಸಿಯೋ ಪಾ, ಹೋಲ್ಡ್ ಮೈ ಹ್ಯಾಂಡ್, ಲಿಫ್ಟ್ ಮಿ ಅಪ್ ರೀತಿಯ ಹಾಡುಗಳು ಈ ಪ್ರಶಸ್ತಿಗಾಗಿ ನಾಮಿನೇಟ್ ಆಗಿದ್ದವು. ಈ ಎಲ್ಲ ಹಾಡುಗಳ ಜನಪ್ರಿಯತೆಯನ್ನು ಹಿಂದಿಕ್ಕೆ ನಾಟು ನಾಟು ಹಾಡು ಪ್ರಶಸ್ತಿ ಪಡೆದಿದೆ. ಈ ಪ್ರಶಸ್ತಿ ಪಡೆದ ದಕ್ಷಿಣದ ಭಾರತದ ಮೊದಲ ಸಿನಿಮಾ ಎನ್ನುವ ಹೆಗ್ಗಳಿಕೆಗೂ ಪಾತ್ರವಾಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಆರ್.ಆರ್.ಆರ್ ಸಿನಿಮಾ ಬಗ್ಗೆ ಕಟು ಟೀಕೆ ಮಾಡಿದ ಬಾಲಿವುಡ್ ನಟ ನಾಸೀರುದ್ದೀನ್ ಶಾ ಪತ್ನಿ

    ಆರ್.ಆರ್.ಆರ್ ಸಿನಿಮಾ ಬಗ್ಗೆ ಕಟು ಟೀಕೆ ಮಾಡಿದ ಬಾಲಿವುಡ್ ನಟ ನಾಸೀರುದ್ದೀನ್ ಶಾ ಪತ್ನಿ

    ಬಾಲಿವುಡ್ ಸಿನಿಮಾ ರಂಗದ ಹಿರಿಯ ಕಲಾವಿದೆ ಹಾಗೂ ನಟ ನಾಸೀರುದ್ದೀನ್ ಶಾ (Naseeruddin Shah) ಪತ್ನಿ ರತ್ನಾ ಪಠಾಕ್ ಶಾ (Ratna Pathak Shah) ‘ಆರ್.ಆರ್.ಆರ್’ (RRR) ಸಿನಿಮಾ ಬಗ್ಗೆ ಕಟು ಟೀಕೆ ಮಾಡಿದ್ದಾರೆ. ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗಿ ಆಗಿದ್ದ ಅವರು ‘ಆರ್.ಆರ್.ಆರ್ ರೀತಿಯ ಸಿನಿಮಾಗಳು ನಮ್ಮನ್ನು ಮತ್ತಷ್ಟು ಹಿಂದಕ್ಕೆ ಕರೆದುಕೊಂಡು ಹೋಗುತ್ತವೆ. ನಾವೆಲ್ಲರೂ ಮುಂದೆ ನೋಡುತ್ತಿರುವಾಗ, ನಮ್ಮನ್ನು ಈ ಚಿತ್ರ ಹಿಂದಕ್ಕೆ ಕರೆದುಕೊಂಡು ಹೋಗುತ್ತಿದೆ’ ಎಂದು ಹೇಳಿದ್ದಾರೆ. ಸಿನಿಮಾ ಗೆದ್ದಿದ್ದರೂ, ಅದು ಅಹಂಕಾರವನ್ನು ತೋರಿಸುತ್ತದೆ’ ಎಂದಿದ್ದಾರೆ.
    RRR NEW SONG ONE

    ಆರ್.ಆರ್.ಆರ್ ಸಿನಿಮಾದ ಕಥೆಯ ಕುರಿತು ಈ ರೀತಿಯ ಹೇಳಿಕೆಯನ್ನು ನೀಡಿರುವ ಅವರು, ಚಿತ್ರಕರ್ಮಿಗಳು ಈ ಸಿನಿಮಾವನ್ನು ವಿಮರ್ಶೆ ದೃಷ್ಟಿಯಿಂದ ನೋಡಲೇ ಇಲ್ಲವೆಂದು ವಿಷಾದವನ್ನೂ ಅವರು ವ್ಯಕ್ತ ಪಡಿಸಿದ್ದಾರೆ. ಈ ರೀತಿಯ ಸಿನಿಮಾಗಳನ್ನು ವಿಮರ್ಶೆ ಮಾಡದೇ ಇದ್ದರೆ, ಅಹಂಕಾರ ಹೊತ್ತುಕೊಂಡಿರುವ ಅವರು ತಾವು ಮಾಡಿದ್ದೇ ಶ್ರೇಷ್ಠವೆಂದು ಭಾವಿಸುತ್ತಾರೆ ಎಂದು ನಿರ್ದೇಶಕ ರಾಜಮೌಳಿಯನ್ನು (Rajamouli) ಕುಟುಕಿದ್ದಾರೆ. ವಿಮರ್ಶೆಗಳು ಏನೇ ಬಂದರೂ, ಅದನ್ನು ಮುಕ್ತವಾಗಿ ತಗೆದುಕೊಳ್ಳಬೇಕು ಎಂದು ಸಲಹೆಯನ್ನೂ ನೀಡಿದ್ದಾರೆ.

    ಸಿನಿಮಾ ಬಗ್ಗೆ ಏನೇ ಟೀಕೆ ಟಿಪ್ಪಣಿಗಳು ಬಂದರೂ, ಈ ವರ್ಷ ತೆರೆಕಂಡು ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿರುವ ‘ಆರ್.ಆರ್.ಆರ್’ ಸಿನಿಮಾಗೆ ಫಿಲಡೆಲ್ಫಿಯಾ ಫಿಲ್ಮ್ ಕ್ರಿಟಿಕ್ಸ್ ಸರ್ಕಲ್ ಆನ್ಯುವಲ್ ಅವಾರ್ಡ್’ನಲ್ಲಿ ಮೂರು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಮೊನ್ನೆಯಷ್ಟೇ ಈ ಸಿನಿಮಾ ನಾಮನಿರ್ದೇಶನಕ್ಕೆ ಆಯ್ಕೆಯಾಗಿದ್ದನ್ನು ಚಿತ್ರತಂಡ ಹಂಚಿಕೊಂಡಿತ್ತು. ಇದೀಗ ಮೂರು ಪ್ರಶಸ್ತಿಗಳನ್ನು ಅದು ಪಡೆದುಕೊಂಡಿದೆ. ಈ ವಿಷಯವನ್ನು ಸ್ವತಃ ಚಿತ್ರತಂಡವೇ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದೆ.

    ಫಿಲಡೆಲ್ಫಿಯಾ ಫಿಲ್ಮ್ ಕ್ರಿಟಿಕ್ಸ್ ಸರ್ಕಲ್ ಆನ್ಯುವಲ್ ಅವಾರ್ಡ್ ಸಂಸ್ಥೆಯು ಆರ್.ಆರ್.ಆರ್ ಸಿನಿಮಾಗೆ ಅತ್ಯುತಮ್ಮ ವಿದೇಶಿ ಸಿನಿಮಾ, ಅತ್ಯುತ್ತಮ ಸಂಗೀತ ಸಂಯೋಜನೆ ಮತ್ತು ಅತ್ಯುತ್ತಮ ಛಾಯಾಗ್ರಹಣ ವಿಭಾಗದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಲಾಗಿದೆ. ಈ ಪ್ರಶಸ್ತಿಗಳನ್ನು ನೀಡಿರುವ ಸಂಸ್ಥೆಗೆ ರಾಜಮೌಳಿ ಅಂಡ್ ಟೀಮ್ ಧನ್ಯವಾದಗಳನ್ನು ಅರ್ಪಿಸಿದೆ. ಇದನ್ನೂ ಓದಿ: ನಟಿ ಉರ್ಫಿ ಜಾವೇದ್ ಗೆ ‘ಲಾರಿಂಜೈಟಿಸ್’ ಖಾಯಿಲೆ: ಆಸ್ಪತ್ರೆಗೆ ದಾಖಲು

    ಆರ್.ಆರ್.ಆರ್ ಸಿನಿಮಾ ಐದು ವಿಭಾಗಗಳಲ್ಲಿ ನಾಮಿನೇಷನ್ ಪಟ್ಟಿಯಲ್ಲಿತ್ತು. ಅದರಲ್ಲಿ ಮೂರು ಪ್ರಶಸ್ತಿಗಳನ್ನು ಅದು ಬಾಚಿದೆ. ಅಲ್ಲದೇ ಈ ಬಾರಿಯ ಆಸ್ಕರ್ ಪ್ರಶಸ್ತಿಗೂ ಆರ್.ಆರ್.ಆರ್ ಸಿನಿಮಾ ಸ್ಪರ್ಧೆಯಲ್ಲಿದೆ. ಇನ್ನೂ ಅನೇಕ ಪ್ರಶಸ್ತಿಗಳಲ್ಲಿ ಚಿತ್ರ ಸ್ಪರ್ಧೆ ಮಾಡುತ್ತಿದೆ. ಅದರಲ್ಲೂ ಆಸ್ಕರ್ ಮೇಲೆ ಕಣ್ಣಿಟ್ಟು ಚಿತ್ರತಂಡ ಕೂತಿರುವುದರಿಂದ ಆ ಪ್ರಶಸ್ತಿ ಸಿಗುತ್ತಾ ಎನ್ನುವ ಕುತೂಹಲ ಕೂಡ ಮೂಡಿದೆ.

    Live Tv
    [brid partner=56869869 player=32851 video=960834 autoplay=true]