Tag: ಆರ್.ಎಲ್.ಜಾಲಪ್ಪ

  • ಚೆಕ್‌ ಬೌನ್ಸ್‌ ಕೇಸ್‌ – ಮಾಜಿ ಸಚಿವ ಜಾಲಪ್ಪ ಪುತ್ರಗೆ ಜೈಲು ಶಿಕ್ಷೆ

    ಚೆಕ್‌ ಬೌನ್ಸ್‌ ಕೇಸ್‌ – ಮಾಜಿ ಸಚಿವ ಜಾಲಪ್ಪ ಪುತ್ರಗೆ ಜೈಲು ಶಿಕ್ಷೆ

    ಬೆಂಗಳೂರು: ಚೆಕ್‌ ಬೌನ್ಸ್‌ (Check Bounce) ಪ್ರಕರಣದಲ್ಲಿ ಮಾಜಿ ಸಚಿವ ಆರ್ ಎಲ್ ಜಾಲಪ್ಪ (RL Jalappa) ಅವರ ಪುತ್ರ ನರಸಿಂಹಮೂರ್ತಿಗೆ ಕೋರ್ಟ್‌ ಜೈಲು ಶಿಕ್ಷೆ ವಿಧಿಸಿದೆ.

    ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (Special Courts for MPs/MLAs) ನರಸಿಂಹಮೂರ್ತಿ (Narasimha Murthy) 6 ತಿಂಗಳು ಜೈಲು ಶಿಕ್ಷೆ, 20 ಲಕ್ಷ ರೂ. ದಂಡ ವಿಧಿಸಿ ಆದೇಶ ಪ್ರಕಟಿಸಿದೆ. ಇದನ್ನೂ ಓದಿ: ಇಂದು ಕೇರಳಕ್ಕೆ ತೆರಳಲಿದ್ದಾನೆ ಬೆಂಗಳೂರು ಬಾಂಬ್‌ ಸ್ಫೋಟದ ಆರೋಪಿ ಮದನಿ

     

    ಪ್ರಕಾಶ್ ಕುಮಾರ್ ಎಂಬುವವರ ಪುತ್ರಿಗೆ ಸೀಟ್ ಕೊಡಿಸಲು ನರಸಿಂಹಮೂರ್ತಿ 45 ಲಕ್ಷ ರೂ. ಹಣವನ್ನು ಪಡೆದಿದ್ದರು. ಮೆಡಿಕಲ್‌ ಸೀಟ್‌ ಸಿಗದ ಕಾರಣ 45 ಲಕ್ಷ ರೂ.ಗೆ ಚೆಕ್‌ ನೀಡಿದ್ದರು. ಆದರೆ ಈ ಚೆಕ್‌ ಬೌನ್ಸ್‌ ಆಗಿತ್ತು. ಮೆಡಿಕಲ್ ಸೀಟ್ ಕೊಡಿಸುವುದಾಗಿ ಹೇಳಿ ವಂಚನೆ ಮಾಡಿದ್ದಕ್ಕೆ ಚೆಕ್‌ ಬೌನ್ಸ್‌ ಪ್ರಕರಣ ದಾಖಲಾಗಿತ್ತು.

    ಶಿಕ್ಷೆ ಪ್ರಮಾಣವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಕೆಗೆ ಕೋರ್ಟ್‌ 2 ತಿಂಗಳು ಕಾಲಾವಕಾಶ ನೀಡಿದೆ.

  • ಆರ್.ಎಲ್ ಜಾಲಪ್ಪ ವಿರುದ್ಧ ಸ್ಪರ್ಧಿಸಿ ಸೋತಿದ್ದರು  ಹಿರಿಯ ನಟ ಶ್ರೀನಿವಾಸ್ ಮೂರ್ತಿ

    ಆರ್.ಎಲ್ ಜಾಲಪ್ಪ ವಿರುದ್ಧ ಸ್ಪರ್ಧಿಸಿ ಸೋತಿದ್ದರು ಹಿರಿಯ ನಟ ಶ್ರೀನಿವಾಸ್ ಮೂರ್ತಿ

    ಸ್ಯಾಂಡಲ್ ವುಡ್ ನ ಹಿರಿಯ ನಟ ಶ್ರೀನಿವಾಸ್ ಮೂರ್ತಿ (Srinivas Murthy) ಚುನಾವಣೆಗೆ ಸ್ಪರ್ಧಿಸಿದ್ದರು ಎನ್ನುವ ವಿಚಾರ ತುಂಬಾ ಜನಕ್ಕೆ ಗೊತ್ತಿಲ್ಲ. ಸರ್ವೆ ಇಲಾಖೆಯಲ್ಲಿ ಸೆಕೆಂಡ್ ಡಿವಿಷನ್ ಕ್ಲರ್ಕ್ ಆಗಿದ್ದ ಶ್ರೀನಿವಾಸ್ ಮೂರ್ತಿ ಅವರನ್ನು ಎಂ.ಎಲ್.ಎ ಎಲೆಕ್ಷನ್ ಗೆ ನಿಲ್ಲಿಸಿದ್ದು ಬೇರೆ ಯಾರೂ ಅಲ್ಲ, ಹೆಚ್.ಡಿ ದೇವೇಗೌಡರು (H.D. Devegowda). ಈ ರೋಚಕ ವಿಷಯವನ್ನು ಸ್ವತಃ ಶ್ರೀನಿವಾಸ್ ಮೂರ್ತಿ ಅವರೇ ಹಂಚಿಕೊಂಡಿದ್ದಾರೆ.

    ಅದು 1973ರ ಸಮಯ. ಆಗ ಶ್ರೀನಿವಾಸ್ ಮೂರ್ತಿ ಅವರು ಸರ್ವೆ ಇಲಾಖೆಯಲ್ಲಿ ಎಸ್.ಡಿ.ಸಿ ಆಗಿದ್ದರು. ಜೊತೆಗೆ ಸಿನಿಮಾದಲ್ಲೂ ನಟಿಸುತ್ತಿದ್ದರು. ಶ್ರೀನಿವಾಸ್ ಮೂರ್ತಿ ಅವರ ಜನಪ್ರಿಯತೆ ಹಾಗೂ ಅವರದ್ದೇ ಜಾತಿಯ ಜನರು ಹೆಚ್ಚಿರುವ ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲಿಸಬೇಕು ಎಂದು ದೇವೇಗೌಡ ಲೆಕ್ಕಾಚಾರವಾಗಿತ್ತು. ಅದರಂತೆ ಶ್ರೀನಿವಾಸ್ ಮೂರ್ತಿ ಅವರ ತಾವು ಮಾಡುತ್ತಿದ್ದ ಕೆಲಸಕ್ಕೆ ರಾಜೀನಾಮೆ ನೀಡಿ ಚುನಾವಣೆಗೆ ಸ್ಪರ್ಧಿಸಿದ್ದರು.

    ಈ ಕುರಿತು ಮಾತನಾಡಿರುವ ಶ್ರೀನಿವಾಸ್ ಮೂರ್ತಿ, ‘ಸರ್ವೆ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದವನನ್ನು ರಾಜೀನಾಮೆ ಕೊಡಿಸಿ ದೊಡ್ಡಬಳ್ಳಾಪುರ (Doddaballapur) ಕ್ಷೇತ್ರದಲ್ಲಿ ಎಂ.ಎಲ್.ಎ ಗೆ ನಿಲ್ಲಿಸಿದರು. ನಮ್ಮದೇ ಜಾತಿಯವರು ವೋಟು ಹಾಕುತ್ತಾರೆ ಎನ್ನುವ ಲೆಕ್ಕಾಚಾರ ದೇವೇಗೌಡರದ್ದಾಗಿತ್ತು. ರಾಜಕೀಯ ಅನುಭವ ಇಲ್ಲದ್ದಾಗಿದ್ದರಿಂದ ಸೋಲಬೇಕಾಯಿತು’ ಎಂದಿದ್ದಾರೆ. ಇದನ್ನೂ ಓದಿ:ಸಿದ್ದರಾಮಯ್ಯನವರು ಮತ್ತೆ ಸಿಎಂ ಆಗ್ಬೇಕು – ದುನಿಯಾ ವಿಜಯ್

    ಅಂದಹಾಗೆ ಶ್ರೀನಿವಾಸ್ ಮೂರ್ತಿಯವರು ಸ್ಪರ್ಧಿಸಿದ್ದು ಆರ್.ಎಲ್ ಜಾಲಪ್ಪ  (R.L. Jalappa) ಎದುರಾಗಿ. ಆ ವೇಳೆಯಲ್ಲಿ ಜಾಲಪ್ಪನವರು ಆ ಕ್ಷೇತ್ರದ ಜನರಿಗೆ ಬೇಕಾಗಿದ್ದೆಲ್ಲವನ್ನೂ ಮಾಡಿಕೊಟ್ಟಿದ್ದರು. ಅದರಲ್ಲೂ ನೇಕಾರರೇ ಅಲ್ಲಿ ಹೆಚ್ಚಿನ ಮತದಾರರು. ಅವರಿಗೂ ಸಾಕಷ್ಟು ಸಹಾಯ ಮಾಡಿದ್ದರು. ಹೀಗಾಗಿ ಶ್ರೀನಿವಾಸ್ ಮೂರ್ತಿ ಅವರಿಗೆ ಬೀಳಬೇಕಾಗಿದ್ದ ವೋಟು, ಜಾಲಪ್ಪನವರಿಗೆ ಬಿದ್ದಿದ್ದವು.

  • ‘ಕಿರುಕುಳ ನೀಡೋ ಉದ್ದೇಶದಿಂದಲೇ ಐಟಿ ದಾಳಿ’- ಐಟಿ ಶೋಧದ ಬಳಿಕ ಜಾಲಪ್ಪ ಅಳಿಯ ಜಿ.ಎಚ್.ನಾಗರಾಜ್ ಆರೋಪ

    ‘ಕಿರುಕುಳ ನೀಡೋ ಉದ್ದೇಶದಿಂದಲೇ ಐಟಿ ದಾಳಿ’- ಐಟಿ ಶೋಧದ ಬಳಿಕ ಜಾಲಪ್ಪ ಅಳಿಯ ಜಿ.ಎಚ್.ನಾಗರಾಜ್ ಆರೋಪ

    ಚಿಕ್ಕಬಳ್ಳಾಪುರ: ನಮಗೆ ಕಿರುಕುಳ ನೀಡಲು ಉದ್ದೇಶಪೂರ್ವಕವಾಗಿಯೇ ಐಟಿ ದಾಳಿ ನಡೆಸಲಾಗಿದೆ ಎಂದು ಮಾಜಿ ಕೇಂದ್ರ ಸಚಿವ ಆರ್.ಎಲ್.ಜಾಲಪ್ಪ ಸೋದರ ಅಳಿಯ ಜಿ.ಎಚ್.ನಾಗರಾಜ್ ಆರೋಪಿಸಿದ್ದಾರೆ.

    ಐಟಿ ದಾಳಿ ಬಳಿಕ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಜಿ.ಎಚ್.ನಾಗರಾಜ್, ನಮ್ಮ ಮನೆಯಲ್ಲಿ ಸಿಕ್ಕಿರುವುದು 12 ಲಕ್ಷ ರೂ. ಹಣ. ಅದರಲ್ಲಿ ಅಕೌಂಟ್ ಸರಿಯಾಗಿ ನಿರ್ವಹಿಸಿಲ್ಲ ಎಂದು 10 ಲಕ್ಷ ರೂ. ಹಣವನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ಹೋಗಿದ್ದಾರೆ. ಅದನ್ನು ಹೊರತು ಪಡಿಸಿದರೆ ಬೇರೇನೂ ಇಲ್ಲ. ನಮ್ಮ ಮನೆಯ ಮೇಲೆ ನಡೆಯುತ್ತಿರುವ ಮೂರನೇ ದಾಳಿ ಇದಾಗಿದೆ ಎಂದರು.

    ಈ ಐಟಿ ದಾಳಿ ಬೇಕಂತಲೇ ನಮಗೆ ಕಿರುಕುಳ ನೀಡುಲು ನಡೆಸಿದ್ದಾರೆ. ಸಣ್ಣ ವಿಷಯವನ್ನ ಕೇವಲ ಒಂದು ದಿನದಲ್ಲಿ ಮುಗಿಯಬೇಕಾದ ಐಟಿ ವಿಚಾರಣೆಯನ್ನ ಮೂರು ದಿನಗಳ ಕಾಲ ಕೇಳಿದ್ದನ್ನೇ ಕೇಳಿ-ಕೇಳಿ, ಕೆದಕಿ-ಕೆದಕಿ ವಿಚಾರಣೆ ನಡೆಸಿದರು ಎಂದು ಐಟಿ ಅಧಿಕಾರಿಗಳ ಕಾರ್ಯವೈಖರಿಗೆ ಜಿ.ಎಚ್.ನಾಗರಾಜ್ ಅಸಮಾಧಾನ ಹೊರಹಾಕಿದರು.

    ಐಟಿ ಅಧಿಕಾರಿಗಳ ವಿಚಾರಣೆಗೆ ನಾನು ಸಂಪೂರ್ಣ ಸಹಕಾರ ನೀಡಿದ್ದು, ನಮ್ಮ ಮನೆ ಹಾಗೂ ಆಸ್ಪತ್ರೆಯಲ್ಲಿ ಏನೂ ಸಿಕ್ಕಿಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು. ಇದೇ ತಿಂಗಳ 15 ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ತಿಳಿಸಿದರು.

    ಪರಮೇಶ್ವರ್ ಆಪ್ತ ಸಹಾಯಕ ರಮೇಶ್ ಆತ್ಮಹತ್ಯೆ ಸುದ್ದಿ ಕೇಳಿ ಅಘಾತ ವ್ಯಕ್ತಪಡಿಸಿದ ಜಿ.ಎಚ್.ನಾಗರಾಜ್, ಇದೊಂದು ಹೇಯಕೃತ್ಯ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಸಂತಾಪ ಸೂಚಿಸಿದರು. ಅಲ್ಲದೇ ಮಾಜಿ ಸಚಿವ ಡಿಕೆ ಶಿವಕುಮಾರ್ ಅದ್ಯಾವ ರೀತಿ ಇವರ ದಾಳಿ ತಡೆದಯಕೊಂಡರೋ ಎಂದು ಅಚ್ಚರಿ ವ್ಯಕ್ತಪಡಿಸಿದರು.

    https://www.youtube.com/watch?v=h8eKCo5zXfI

  • ಚಿಕ್ಕಬಳ್ಳಾಪುರದಲ್ಲಿಯೂ ‘ಕೈ’ಗೆ ಐಟಿ ಈಟಿ

    ಚಿಕ್ಕಬಳ್ಳಾಪುರದಲ್ಲಿಯೂ ‘ಕೈ’ಗೆ ಐಟಿ ಈಟಿ

    ಚಿಕ್ಕಬಳ್ಳಾಪುರ: ಬೆಂಗಳೂರಿನಲ್ಲಿ ಮಾಜಿ ಡಿಸಿಎಂ ಜಿ.ಪರಮೇಶ್ವರ್ ನಿವಾಸದ ಮೇಲೆ ಐಟಿ ದಾಳಿ ನಡೆದರೆ ಇತ್ತ ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಂಸದ ಆರ್.ಎಲ್.ಜಾಲಪ್ಪ ಪುತ್ರ ರಾಜೇಂದ್ರ ಮತ್ತು ಸೋದರಳಿಯ ಜಿ.ಎಚ್ ನಾಗರಾಜ್ ಮನೆ ಮೇಲೆ ದಾಳಿ ನಡೆದಿದೆ. 10 ಮಂದಿ ಐಟಿ ಅಧಿಕಾರಿಗಳ ತಂಡದಿಂದ ಜಿ.ಎಚ್.ನಾಗರಾಜ್ ವಿಚಾರಣೆ ನಡೆಯುತ್ತಿದೆ.

    ದೊಡ್ಡಬಳ್ಳಾಪುರದ ಸೋಮೇಶ್ಚರ ಬಡಾವಣೆಯಲ್ಲಿರುವ ರಾಜೇಂದ್ರ ನಿವಾಸದ ಮೇಲೆ ಐವರು ಅಧಿಕಾರಿಗಳಿಂದ ದಾಳಿ ನಡೆದಿದೆ. ರಾಜೇಂದ್ರ ದೊಡ್ಡಬಳ್ಳಾಪುರದಲ್ಲಿರುವ ಜಾಲಪ್ಪ ಇಂಜಿನಿಯರಿಂಗ್ ಕಾಲೇಜು ಮುಖ್ಯಸ್ಥರಾಗದ್ದಾರೆ. ಜಿ.ಎಚ್.ನಾಗರಾಜ್ ಹಾಲಿ ಕಾಂಗ್ರೆಸ್ ಮುಖಂಡರಾಗಿದ್ದು, ಆರ್ ಎಲ್ ಜಾಲಪ್ಪ ಆಸ್ಪತ್ರೆಯ ಕಾರ್ಯದರ್ಶಿಯೂ ಆಗಿದ್ದಾರೆ.

    ಕೋಲಾರದ ಹೊರವಲಯದಲ್ಲಿರುವ ಆರ್.ಎಲ್.ಜಾಲಪ್ಪ ಆಸ್ಪತ್ರೆ ಮತ್ತು ದೇವರಾಜ ಅರಸು ಮೆಡಿಕಲ್ ಕಾಲೇಜುಗಳ ಮೇಲೆ ಹತ್ತಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಾಲೇಜು ಮತ್ತು ಆಸ್ಪತ್ರೆಯ ಕಚೇರಿಯ ಒಳಗಡೆ ಯಾರನ್ನು ಬಿಡದೇ ಅಧಿಕಾರಿಗಳು ದಾಖಲಾತಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.