Tag: ಆರ್ ಕೆ ನಗರ

  • ತಮಿಳುನಾಡು ಉಪಚುನಾವಣೆ: ಶಶಿಕಲಾ ಆಪ್ತ ಟಿಟಿವಿ ದಿನಕರನ್ ಜಯಭೇರಿ

    ತಮಿಳುನಾಡು ಉಪಚುನಾವಣೆ: ಶಶಿಕಲಾ ಆಪ್ತ ಟಿಟಿವಿ ದಿನಕರನ್ ಜಯಭೇರಿ

    ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಸಾವಿನಿಂದ ತೆರವುಗೊಂಡಿದ್ದ ರಾಧಾಕೃಷ್ಣ ನಗರ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಎಐಎಡಿಎಂಕೆ ಬಂಡಾಯ ಎದ್ದು ಸ್ಪರ್ಧಿಸಿದ್ದ ಶಶಿಕಲಾ ಆಪ್ತ ಪಕ್ಷೇತರ ಅಭ್ಯರ್ಥಿ ಟಿಟಿವಿ ದಿನಕರನ್ 40,707 ಮತಗಳ ಅಂತರದಿಂದ ಜಯಗಳಿಸಿದ್ದಾರೆ.

    ಭಾನುವಾರ ಬೆಳಗ್ಗೆ ಆರಂಭವಾದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಆರಂಭದಿಂದಲೂ ಭಾರಿ ಮುನ್ನಡೆ ಕಾಯ್ದುಕೊಂಡಿದ್ದ ದಿನಕರನ್ ಮತ ಏಣಿಕೆ ಮುಕ್ತಾಯದ ವೇಳೆಗೆ 89,013 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಪಡೆದಿದ್ದಾರೆ.

    ದಿನಕರನ್ ಗೆಲುವುನಿಂದ ತಮಿಳುನಾಡಿನ ಮುಖ್ಯಮಂತ್ರಿ ಪಳನಿಸ್ವಾಮಿ ಮತ್ತು ಉಪಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಅವರಿಗೆ ಮುಖಭಂಗವಾಗಿದ್ದು ಎಐಎಡಿಎಂಕೆಯಿಂದ ಸ್ಪರ್ಧೆ ಮಾಡಿದ್ದ ಮಧುಸೂದನ್ ಅವರಿಗೆ ಸೋಲಾಗಿದೆ.

    ಚುನಾವಣೆ ಗೆಲುವಿನ ಬಗ್ಗೆ ಪ್ರತಿಕ್ರಿಯೆ ನೀಡಿರುವ ಟಿಟಿವಿ ದಿನಕರನ್, ದಿವಂಗತ ನಾಯಕಿ ಜಯಲಲಿತಾ ಅವರ ನಿಜವಾದ ರಾಜಕೀಯ ಅನುಯಾಯಿ ತಾನೇ ಎಂದು ಹೇಳಿದ್ದಾರೆ. ಅಲ್ಲದೇ ಇನ್ನು ಮೂರು ತಿಂಗಳುಗಳಲ್ಲಿ ತಮಿಳುನಾಡಿನ ಸರ್ಕಾರ ಪತನವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಚುನಾವಣೆಯಲ್ಲಿ ತಮಗೆ ಮತ ನೀಡಿ ಆಯ್ಕೆ ಮಾಡಿರುವ ಜನತೆ ಹಾಗೂ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ್ದಾರೆ.

    ದಿನಕರನ್ ವಿರುದ್ಧ ಸ್ಪರ್ಧಿಸಿದ್ದ ಎಐಎಡಿಎಂಕೆ ಯ ನಾಯಕ ಮಧುಸೂಧನ್ 48,306 ಮತಗಳು ಹಾಗೂ ಡಿಎಂಕೆ ನಾಯಕ ಮರುಥು ಗಣೇಶ್ 24,651 ಮತಗಳನ್ನು ಗಳಿಸಿದ್ದಾರೆ. ಇನ್ನು ವಿಶೇಷವಾಗಿ ಚುನಾವಣೆಯಲ್ಲಿ 2,373 ನೋಟಾ ಮತಗಳು ಚಲಾವಣೆಯಾಗಿದ್ದು, ನಂತರ ಸ್ಥಾನದಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿದ್ದ ಕರು ನಾಗರಾಜನ್ ಕೇವಲ 1,417 ಮತಗಳನ್ನು ಪಡೆದಿದ್ದಾರೆ. ಇದನ್ನೂ ಓದಿ: ತಮಿಳುನಾಡು ಚುನಾವಣೆಯ ದಿಕ್ಕನ್ನೆ ಬದಲಾಯಿಸುವ ಶಕ್ತಿ ಫೋಟೋ, ವಿಡಿಯೋಗಳಿಗಿದೆ!

    ಜಯಲಲಿತಾ ನಿಧನದಿಂದ ತೆರವಾಗಿದ್ದ ಆರ್.ಕೆ. ನಗರ ವಿಧಾನಸಭಾ ಕ್ಷೇತ್ರಕ್ಕೆ ಈ ವರ್ಷದ 12 ರಂದು ಉಪಚುನಾವಣೆ ನಡೆಯಬೇಕಿತ್ತು. ಈ ಚುನಾವಣೆಯಲ್ಲಿ ದಿನಕರನ್ ಮತದಾರರಿಗೆ ಹಣ ಹಂಚಲು ಪಕ್ಷದ ನಾಯಕರು ತಮ್ಮ ಖಾತೆಗಳಿಂದ 89 ಕೋಟಿ ರೂ. ಹಣ ವರ್ಗಾವಣೆ ಮಾಡಿದ್ದಾರೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿತ್ತು. ಭಾರೀ ಪ್ರಮಾಣದಲ್ಲಿ ಹಣ ಹಂಚಿಕೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಉಪಚುನಾವಣೆಯನ್ನು ರದ್ದುಗೊಳಿಸಿತ್ತು.

  • ಜಯಾ ಕ್ಷೇತ್ರದಲ್ಲಿ ಹಣದ ಹೊಳೆ – ಅಕ್ರಮ ಬಯಲು ಬೆನ್ನಲ್ಲೇ ಉಪ ಚುನಾವಣೆ ರದ್ದು

    ಜಯಾ ಕ್ಷೇತ್ರದಲ್ಲಿ ಹಣದ ಹೊಳೆ – ಅಕ್ರಮ ಬಯಲು ಬೆನ್ನಲ್ಲೇ ಉಪ ಚುನಾವಣೆ ರದ್ದು

    ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ನಿಧನ ಬಳಿಕ ತೆರವಾಗಿದ್ದ ಆರ್ ಕೆ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಬುಧವಾರ ನಡೆಯಬೇಕಿದ್ದು, ಆದ್ರೆ ಕೇಂದ್ರ ಚುನಾವಣಾ ಆಯೋಗ ಇದನ್ನು ರದ್ದುಗೊಳಿಸಿದೆ.

    ಯಾಕಂದ್ರೆ ಈ ಕ್ಷೇತ್ರದಲ್ಲಿ ಉಪ ಚುನಾವಣೆಗಾಗಿ ಹಣದ ಹೊಳೆಯೇ ಹರಿದಿತ್ತು. ಈ ಸಂಬಂಧ ಮಹತ್ವದ ದಾಖಲೆಗಳು ಸಿಕ್ಕ ಹಿನ್ನೆಲೆಯಲ್ಲಿ ಚುನಾವಣೆಯನ್ನು ರದ್ದುಗೊಳಿಸಲಾಗಿದೆ.

    ಶುಕ್ರವಾರವಷ್ಟೇ ಆದಾಯ ತೆರಿಗೆ ಇಲಾಖೆ ಅಣ್ಣಾ ಡಿಎಂಕೆ ಸರ್ಕಾರದ ಆರೋಗ್ಯ ಸಚಿವ ವಿಜಯ್ ಭಾಸ್ಕರ್ ನಿವಾಸ ಮತ್ತು ಕಚೇರಿಗಳಲ್ಲಿ ಶೋಧ ಕೈಗೊಂಡಿತ್ತು. ಈ ವೇಳೆ ಪಕ್ಷದ ಪರವಾಗಿ ಒಬ್ಬೊಬ್ಬ ಮತದಾರನಿಗೆ ತಲಾ 4 ಸಾವಿರ ರೂಪಾಯಿ ಹಂಚಿರುವ ಬಗ್ಗೆ ಸ್ಫೋಟಕ ಮಾಹಿತಿ ಲಭ್ಯವಾಗಿತ್ತು.

    ಬರೋಬ್ಬರೀ 89 ಕೋಟಿ ರೂಪಾಯಿಯಷ್ಟು ಹಣವನ್ನು ಚೆಲ್ಲಿದ್ದಾರೆ ಅನ್ನೋದ್ರ ಬಗ್ಗೆ ದಾಖಲೆಗಳು ಲಭ್ಯವಾಗಿದ್ದವು. ಸಚಿವರ ಆಪ್ತರ ಬಳಿಯಿಂದ 5 ಕೋಟಿ ರೂಪಾಯಿ ನಗದನ್ನು ವಶಪಡಿಸಿಕೊಳ್ಳಲಾಗಿತ್ತು. ಈ ಎಲ್ಲಾ ಮಾಹಿತಿಗಳನ್ನು ಪರಿಶೀಲಿಸಿದ ಆಯೋಗ ಉಪ ಚುನಾವಣೆ ರದ್ದು ಮಾಡುವ ನಿರ್ಧಾರ ಕೈಗೊಂಡಿದೆ. ಈ ನಡುವೆ ವಿಚಾರಣೆಗೆ ಹಾಜರಾಗಿ ಖುದ್ದು ವಿವರಣೆ ನೀಡುವಂತೆ ಆದಾಯ ತೆರಿಗೆ ಇಲಾಖೆ ಸಚಿವ ವಿಜಯ್ ಭಾಸ್ಕರ್‍ಗೆ ಸಮನ್ಸ್ ಜಾರಿ ಮಾಡಿದೆ.

    ಕ್ಷೇತ್ರದಲ್ಲಿ ವಿವಿಧ ಪಕ್ಷಗಳಿಂದ ಒಟ್ಟು 62 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.