Tag: ಆರ್ ಕೆ ಸಿಂಗ್

  • ಸಾಲದ ಸುಳಿಗೆ ಸಿಲುಕಲಿವೆ – ಉಚಿತ ವಿದ್ಯುತ್‌ ನೀಡುವ ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ

    ಸಾಲದ ಸುಳಿಗೆ ಸಿಲುಕಲಿವೆ – ಉಚಿತ ವಿದ್ಯುತ್‌ ನೀಡುವ ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ

    ನವದೆಹಲಿ: ಸಾಲ ಮಾಡಿ ಜನರಿಗೆ ಉಚಿತ ವಿದ್ಯುತ್‌ (Free Electricity) ನೀಡುವ ರಾಜ್ಯಗಳು ಸಾಲದ ಸುಳಿಗೆ ಸಿಲುಕಲಿವೆ ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.

    ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿರುವ ಕೇಂದ್ರ ಇಂಧನ ಸಚಿವ ಆ‌ರ್.ಕೆ. ಸಿಂಗ್ (RK Singh), ಪಂಜಾಬ್‌ನಂತಹ ರಾಜ್ಯಗಳು ಸಾಲದ ಹಣದಲ್ಲಿ ವಿದ್ಯುತ್ ಖರೀದಿಸಿ ಜನರಿಗೆ ಉಚಿತವಾಗಿ ನೀಡುತ್ತಿವೆ. ರಾಜ್ಯ ಸರ್ಕಾರದ ಬಳಿಯೇ ಸಾಕಷ್ಟು ಹಣವಿದ್ದರೆ ಇಂತಹ ಜನಪ್ರಿಯ ಯೋಜನೆಗಳನ್ನು ಜಾರಿಗೊಳಿಸುವುದು ಸರಿ. ಆದರೆ, ಸಾಲ ಮಾಡಿ ವಿದ್ಯುತ್ ನೀಡಿದರೆ ಅದಕ್ಕೆ ಸರ್ಕಾರಗಳು ಬೆಲೆ ತೆರಬೇಕಾಗುತ್ತದೆ. ಏಕೆಂದರೆ ವಿದ್ಯುತ್ ತಯಾರಿಸಲು ಖರ್ಚು ತಗಲುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಸಮಾಜವಾದಿ ಪಕ್ಷದ ಅಭ್ಯರ್ಥಿ ಕಾಜಲ್ ನಿಶಾದ್ ಆಸ್ಪತ್ರೆಗೆ ದಾಖಲು

    ಬೇರೆಲ್ಲಾ ಉತ್ಪನ್ನಗಳಂತೆ ವಿದ್ಯುತ್ ತಯಾರಿಸಲು ಕೂಡ ಹಣ ಬೇಕು. 2022 ರಲ್ಲಿ ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷ (AAP) ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತಿ ಮನೆಗೆ 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಸೇರಿದಂತೆ ಹಲವಾರು ಜನಪರ ಕ್ರಮಗಳನ್ನು ಕೈಗೊಂಡಿದೆ. ಇದರಿಂದ ಪಂಜಾಬ್‌ನ ಎಎಪಿ ಸರ್ಕಾರದ (Punjab Government) ಈಗಾಗಲೇ 2 ವರ್ಷಗಳಲ್ಲಿ 47,000 ಕೋಟಿ ರೂಪಾಯಿಗಳಷ್ಟು ಸಾಲ ಪಡೆದುಕೊಂಡಿದೆ. ಜನರಿಗೆ ಯಾವುದೇ ರಾಜ್ಯ ಸರ್ಕಾರ ವಿದ್ಯುತ್ತನ್ನು ಉಚಿತವಾಗಿ ನೀಡುತ್ತದೆಯಾದರೆ ಅಷ್ಟು ಹಣ ರಾಜ್ಯ ಸರ್ಕಾರದ ಬಳಿಯೇ ಇರಬೇಕು. ಸಾಲ ಮಾಡಿ ಹಣ ತಂದು ಜನರಿಗೆ ಉಚಿತ ವಿದ್ಯುತ್‌ ನೀಡಿದರೆ ಖಂಡಿತ ಸಾಲದ ಸುಳಿಯಲ್ಲಿ ಸಿಲುಕಬೇಕಾಗುತ್ತದೆ ಎಂದು ಹೇಳಿದ್ದಾರೆ. ಈ ಮೂಲಕ ಕರ್ನಾಟಕ ರಾಜ್ಯ ಸರ್ಕಾರಕ್ಕೂ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.

    ವಿದ್ಯುತ್ ಉಚಿತವಾಗಿ ಸಿಗೋದಿಲ್ಲ ಎಂದು ನಾನು ರಾಜ್ಯಗಳಿಗೆ ಹೇಳುತ್ತಲೇ ಬಂದಿದ್ದೇನೆ. ಆದರೂ ಅವು ವಿದ್ಯುತ್ತನ್ನು ಉಚಿತವಾಗಿ ನೀಡುತ್ತವೆಯಾದರೆ ಅದಕ್ಕೆ ಬೆಲೆ ತೆರಬೇಕಾಗುತ್ತದೆ. ಈಗಾಗಲೇ ಸಾಲದಲ್ಲಿರುವ ರಾಜ್ಯಗಳು ಉಚಿತ ವಿದ್ಯುತ್‌ನಂತಹ ಜನಪ್ರಿಯ ಯೋಜನೆಗಳಿಗಾಗಿ ಇನ್ನಷ್ಟು ಸಾಲ ಮಾಡುತ್ತಿವೆ. ಹೀಗೆ ಸಾಲದ ಸುಳಿಗೆ ರಾಜ್ಯವನ್ನು ಸಿಲುಕಿಸಬಾರದು. ಉಚಿತಗಳಿಂದಾಗಿಯೇ ಅನೇಕ ರಾಜ್ಯ ಸರ್ಕಾರಗಳು ಸಾಲದ ಸುಳಿಯಲ್ಲಿ ಸಿಲುಕುತ್ತಿವೆ ಎಂದೂ ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಯುಗಾದಿ ಹಬ್ಬಕ್ಕೆ ಸುಲಭವಾಗಿ ಮಾಡಿ ಮಾವಿನಕಾಯಿ ಚಿತ್ರಾನ್ನ

  • ಎಸ್ಕಾಂಗಳಿಗೆ ಮೋದಿ ಸರ್ಕಾರದಿಂದ ಶಾಕ್: ಲೋಡ್‍ಶೆಡ್ಡಿಂಗ್ ಮಾಡಿದರೆ ಬೀಳುತ್ತೆ ಭಾರೀ ದಂಡ!

    ಎಸ್ಕಾಂಗಳಿಗೆ ಮೋದಿ ಸರ್ಕಾರದಿಂದ ಶಾಕ್: ಲೋಡ್‍ಶೆಡ್ಡಿಂಗ್ ಮಾಡಿದರೆ ಬೀಳುತ್ತೆ ಭಾರೀ ದಂಡ!

    ಪಾಟ್ನಾ: ದೇಶಾದ್ಯಂತ ವಿದ್ಯುತ್ ವಿತರಿಸುವ ಸಂಸ್ಥೆಗಳು ಅಥವಾ ಎಸ್ಕಾಂಗಳು ಲೋಡ್ ಶೆಡ್ಡಿಂಗ್ ಮಾಡಿದರೆ ದಂಡ ಪಾವತಿ ಮಾಡಬೇಕು ಎಂದು ಇಂಧನ ಸಚಿವರಾದ ಆರ್ ಕೆ ಸಿಂಗ್‍ರವರು ಬಿಹಾರ್ ನ  ಪಾಟ್ನಾದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

    ಕೇಂದ್ರ ಇಂಧನ ಸಚಿವರಾದ ಆರ್ ಕೆ ಸಿಂಗ್‍ರವರು ಮಂಗಳವಾರ ಕೇಂದ್ರ ಸರ್ಕಾರದ 4 ವರ್ಷಗಳ ಸಾಧನೆ ಕುರಿತು 7 ರಾಜ್ಯದ ರಾಜಧಾನಿಗಳ ಪತ್ರಕರ್ತರ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದರು. ಈ ವೇಳೆ ದೇಶಾದ್ಯಂತ ಇರುವ ಎಲ್ಲಾ ವಿದ್ಯುತ್ ವಿತರಣಾ ಸಂಸ್ಥೆಗಳೇ ಲೋಡ್ ಶೆಡ್ಡಿಂಗ್ ಮಾಡಿದರೆ ಇದರಿಂದಾಗುವ ನಷ್ಟವನ್ನು ಖುದ್ದು ಸಂಸ್ಥೆಗಳೇ ಭರಿಸಬೇಕು ಎಂದು ತಿಳಿಸಿದ್ದಾರೆ.

    ದೇಶದಲ್ಲಿ ಶೇ.15ರಷ್ಟು ಆರ್ಥಿಕ ನಷ್ಟ ವಿದ್ಯುತ್ ಕಡಿತದಿಂದಾಗಿ ಸಂಭವಿಸುತ್ತಿದೆ. ಇದು ದೇಶದ ಬೆಳವಣಿಗೆಗೆ ಮಾರಕವಾಗಿದೆ. ವಿದ್ಯುತ್ ಕಡಿತದಿಂದಾಗಿ ಶೇ.15 ಹಾಗೂ ಅದಕ್ಕಿಂತ ಹೆಚ್ಚಿನ ನಷ್ಟ ಉಂಟಾದರೆ ಆ ನಷ್ಟವನ್ನು ವಿದ್ಯುತ್ ವಿತರಣಾ ಸಂಸ್ಥೆಗಳೇ ಪಾವತಿ ಮಾಡಬೇಕು ಎಂದು ಹೇಳಿದ್ದಾರೆ.

    ಕೇಂದ್ರ ಸರ್ಕಾರವು ಸಿದ್ದ ಪಡಿಸುತ್ತಿರುವ ನೂತನ ಇಂಧನ ನೀತಿಯಲ್ಲಿ ಈ ವಿಚಾರವನ್ನು ಸೇರ್ಪಡೆ ಮಾಡಲಾಗಿದೆ ಎಂದು ತಿಳಿಸಿದ್ದು. ಈ ಯೋಜನೆಗೆ ಸಾರ್ವಜನಿಕರಿಂದ ಮಾಹಿತಿ ಮತ್ತು ಸಲಹೆಗಳನ್ನು ಪಡೆದುಕೊಂಡು ಮುಂದಿನ ಹಣಕಾಸು ವರ್ಷದಲ್ಲಿ ಈ ನೂತನ ನೀತಿಯನ್ನು ಜಾರಿಗೊಳಿಸಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

     

    ದೇಶದಲ್ಲಿ ದಿನೇ ದಿನೇ ಏರಿಕೆಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಕುರಿತು ಮಾತನಾಡಿದ ಅವರು ಶೀಘ್ರವಾಗಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಬಿಹಾರ ಹಾಗೂ ಇತರೆ ರಾಜ್ಯಗಳಲ್ಲಿ ಹೆಚ್ಚಿನ ರೈತರು ಡೀಸೆಲ್ ಪಂಪ್‍ಗಳನ್ನ ಬಳಸುತ್ತಿದ್ದಾರೆ. ಡೀಸೆಲ್‍ಗೆ ಪರ್ಯಾಯವಾಗಿ ಸೋಲಾರ್ ಪಂಪ್‍ಸೆಟ್‍ಗಳನ್ನು ಬಳಕೆ ಮಾಡಲು ರೈತರಿಗೆ ಕುಸುಮ್ ಯೋಜನೆಯನ್ನು ಜಾರಿಗೊಳಿಸಿದ್ದೇವೆಂದು ಮಾಹಿತಿ ನೀಡಿದ್ದಾರೆ. ರೈತರ ಅಗತ್ಯತೆಗೆ ತಕ್ಕಂತೆ ಸರ್ಕಾರ ಸೂಕ್ತ ಕ್ರಮ ಕೈಗೊಳುತ್ತದೆ ಎಂದು ಈ ವೇಳೆ ತಿಳಿಸಿದ್ದಾರೆ.