Tag: ಆರ್ ಟಿ ಐ

  • ಮಾಹಿತಿ ನೀಡದ ತಹಶೀಲ್ದಾರ್​​ಗೆ 15 ಸಾವಿರ ದಂಡ

    ಮಾಹಿತಿ ನೀಡದ ತಹಶೀಲ್ದಾರ್​​ಗೆ 15 ಸಾವಿರ ದಂಡ

    ಮಂಡ್ಯ: ಆರ್.ಟಿ.ಐ ಮೂಲಕ ಸಲ್ಲಿಸಿದ್ದ ಅರ್ಜಿಗೆ ಎರಡೂವರೆ ವರ್ಷಗಳಾದರೂ ಮಾಹಿತಿ ನೀಡದ ಕಾರಣ ತಹಶೀಲ್ದಾರ್ ಗೀತಾ ಅವರಿಗೆ ಮಾಹಿತಿ ಹಕ್ಕು ಆಯೋಗ 15 ಸಾವಿರ ರೂಪಾಯಿ ದಂಡ ವಿಧಿಸಿದೆ.

    ಸದ್ಯ ಹೊಸಕೋಟೆಯ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿರುವ ಗೀತಾ ಈ ಹಿಂದೆ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ರು. ಈ ವೇಳೆ ಎನ್.ಶಿವರಾಮಂ ಎಂಬುವರು ಮದ್ದೂರು ತಾಲೂಕಿನ ಮಾರಸಿಂಗನಹಳ್ಳಿ ಗ್ರಾಮದ ದೇವೇಗೌಡ ಬಿನ್ ಕೆಂಚೇಗೌಡ ಅವರಿಗೆ ಮಂಜೂರು ಮಾಡಲಾಗಿದ್ದ ಜಮೀನಿನ ಸಾಗುವಳಿ ಚೀಟಿ ಮತ್ತು ಸಾಗುವಳಿ ಚೀಟಿ ವಿತರಣಾ ಸಹಿತ ನಕಲು ಪ್ರತಿ ನೀಡುವಂತೆ 2017ರ ಜೂನ್ 27 ರಂದು ಮಾಹಿತಿ ಕಾಯ್ದೆ ಅಡಿ ಅರ್ಜಿ ಸಲ್ಲಿಸಿದ್ದರು.

    ಸಾರ್ವಜನಿಕ ಮಾಹಿತಿ ಅಧಿಕಾರಿಯಾದ ತಹಶೀಲ್ದಾರ್ ಯಾವುದೇ ಮಾಹಿತಿ ನೀಡದ ಕಾರಣ ಅರ್ಜಿದಾರರು ಈ ಬಗ್ಗೆ ಮಾಹಿತಿ ಆಯೋಗಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಮಾಹಿತಿ ಆಯೋಗದ ನೇತೃತ್ವದಲ್ಲಿ ನಡೆದ ವಿಚಾರಣೆ ವೇಳೆ ಅರ್ಜಿದಾರರಿಗೆ ಮುಂದಿನ ದಿನಾಂಕದೊಳಗೆ ಮಾಹಿತಿ ನೀಡಬೇಕೆಂದು ಮಾಹಿತಿ ಆಯುಕ್ತರಾದ ಎಸ್.ಎಸ್.ಪಾಟೀಲ್ ತಹಶೀಲ್ದಾರ್ ಗೀತಾ ಅವರಿಗೆ ಆದೇಶಿಸಿದ್ದರು.

    ಗೀತಾ ಅವರು ಆಯೋಗ ನೀಡಿದ್ದ ದಿನಾಂಕದಂದು ಸಹ ಮಾಹಿಯನ್ನು ನೀಡಿರಲಿಲ್ಲ. ಇದಲ್ಲದೇ ತಹಶೀಲ್ದಾರ್ ಗೀತಾ ಅವರು ಆಯೋಗಕ್ಕೆ ಖುದ್ದಾಗಿ ಹಾಜರಾಗಬೇಕೆಂದು ತಿಳಿಸಿದ್ದರು. ಆದರೆ ಸೂಕ್ತ ಕಾರಣ ನೀಡದೇ ಗೀತಾ ಅವರು ಗೈರು ಹಾಜರಾಗಿ ಆಯೋಗದ ಆದೇಶವನ್ನು ಉಲ್ಲಂಘನೆ ಮಾಡಿದ್ದರು. ಹೀಗಾಗಿ ಮಾಹಿತಿ ಹಕ್ಕು ಆಯುಕ್ತರು ತಹಶೀಲ್ದಾರ್ ಗೀತಾಗೆ 15 ಸಾವಿರ ರೂ. ಸಾವಿರ ದಂಡವನ್ನು ವಿಧಿಸಿದ್ದಾರೆ. ಈ ದಂಡವನ್ನು ಅವರ ಪ್ರತಿ ತಿಂಗಳ ಸಂಬಳದಲ್ಲಿ ಮೂರು ಕಂತುಗಳಲ್ಲಿ 5 ಸಾವಿರ ರೂಪಾಯಿಯಂತೆ ಒಟ್ಟು 15 ಸಾವಿರ ರೂಪಾಯಿಗಳನ್ನು ಕಡಿತಗೊಳಿಸಿ ಸರ್ಕಾರದ ಲೆಕ್ಕ ಶೀರ್ಷಿಕೆಗೆ ಜಮಾ ಮಾಡುವಂತೆ ಆದೇಶ ಹೊರಡಿಸಿದ್ದಾರೆ.

  • ಕಾಂಗ್ರೆಸ್ ಅವಧಿಯಲ್ಲಿ ನಡೆದ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಮಾಹಿತಿಯಿಲ್ಲ – ರಕ್ಷಣಾ ಸಚಿವಾಲಯ

    ಕಾಂಗ್ರೆಸ್ ಅವಧಿಯಲ್ಲಿ ನಡೆದ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಮಾಹಿತಿಯಿಲ್ಲ – ರಕ್ಷಣಾ ಸಚಿವಾಲಯ

    ನವದೆಹಲಿ: ಕಾಂಗ್ರೆಸ್ ಅವಧಿಯಲ್ಲಿ ನಡೆದಿರುವ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಯಾವುದೇ ಸುಳಿವುಗಳು ನಮಗೆ ದೊರೆತಿಲ್ಲ ಎಂದು ಭಾರತದ ರಕ್ಷಣಾ ಸಚಿವಾಲಯ (ಎಂ.ಒ.ಡಿ) ಸ್ಪಷ್ಟಪಡಿಸಿದೆ.

    ಕಾಶ್ಮೀರ ಮೂಲದ ರೋಹಿತ್ ಚೌಧರಿ ಎಂಬವರು ಮಾಹಿತಿ ಹಕ್ಕು ಕಾಯಿದೆ (ಆರ್.ಟಿ.) ಯ ಆಡಿಯಲ್ಲಿ 2004 ರಿಂದ 2014ರ ವರೆಗೆ ನಡೆದ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಮಾಹಿತಿ ನೀಡಬೇಕು ಎಂದು ರಕ್ಷಣಾ ಸಚಿವಾಯಲಕ್ಕೆ ಪತ್ರ ಬರೆದಿದ್ದರು. ಈ ಪತ್ರಕ್ಕೆ ಇಂದು ಉತ್ತರಿಸಿರುವ ಸಚಿವಾಲಯ, 2004 ರಿಂದ 2014ರ ವರೆಗೆ ನಡೆದ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ನಮಗೆ ಯಾವುದೇ ಮಾಹಿತಿಗಳು ಲಭ್ಯವಿಲ್ಲ ಎಂದು ಹೇಳಿದೆ.

    2016 ಸೆಪ್ಟಂಬರ್ 29 ರಂದು ಉತ್ತರ ಕಾಶ್ಮೀರದ ಉರಿಯಲ್ಲಿ ನಡೆಸಿದ ಸರ್ಜಿಕಲ್ ಸ್ಟ್ರೈಕ್ ಬಿಟ್ಟರೆ ನಮಗೆ 2004 ರಿಂದ 2014ರ ಅವಧಿಯಲ್ಲಿ ನಡೆದ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಯಾವ ರೀತಿಯ ಮಾಹಿತಿಗಳೂ ಸಿಕಿಲ್ಲ ಎಂದು ಹೇಳಿದೆ. ಈ ಬಗ್ಗೆ ಮಾತನಾಡಿರುವ ರೋಹಿತ್ ಚೌಧರಿ, ಕಾಂಗ್ರೆಸ್ ನಾಯಕರು ಜನರಿಗೆ ಸುಳ್ಳು ಹೇಳುತ್ತಿದ್ದಾರೆ. ಯುಪಿಎ ಆಡಳಿತದ ಅವಧಿಯಲ್ಲಿ ಯಾವುದೇ ಸರ್ಜಿಕಲ್ ಸ್ಟ್ರೈಕ್ ಆಗಿಲ್ಲ ಎಂದು ಹೇಳಿದ್ದಾರೆ.

    ಕಾಂಗ್ರೆಸ್ ಇತ್ತೀಚೆಗೆ ತಮ್ಮ ಆಡಳಿತದ ಅವಧಿಯಲ್ಲಾದ 6 ಸರ್ಜಿಕಲ್ ಸ್ಟ್ರೈಕ್‍ಗಳ ಬಗ್ಗೆ ಚಿತ್ರಗಳ ಸಮೇತ ವಿವರಗಳನ್ನು ಬಿಡುಗಡೆ ಮಾಡಿತ್ತು. ನಮ್ಮ ಅವಧಿಯಲ್ಲೂ ಸರ್ಜಿಕಲ್ ಸ್ಟ್ರೈಕ್‍ಗಳು ನಡೆದಿವೆ. ಆದರೆ ನಾವು ಅದನ್ನು ಪ್ರಚಾರಕ್ಕೆ ಬಳಸಿಕೊಂಡಿಲ್ಲ ಎಂದು ಪರೋಕ್ಷವಾಗಿ ಪ್ರಧಾನಿ ಮೋದಿ ಅವರಿಗೆ ಟಾಂಗ್ ನೀಡಿದ್ದರು.

    ಇದಕ್ಕೆ ಪ್ರತಿಕ್ರಿಸಿದ ಮೋದಿ ಸಮಾವೇಶವೊಂದರಲ್ಲಿ ಕಾಂಗ್ರೆಸ್‍ನವರು ಕಾಗದ ಚೂರು ಮತ್ತು ವಿಡಿಯೋ ಗೇಮ್‍ಗಳಲ್ಲಿ ಮಾತ್ರ ಸರ್ಜಿಕಲ್ ಸ್ಟ್ರೈಕ್ ಮಾಡಬಲ್ಲರು ಎಂದು ಕುಟುಕಿದ್ದರು. ಇದನ್ನು ಓದಿ: ಕಾಂಗ್ರೆಸ್ ಪೇಪರ್‌ನಲ್ಲಿ ಮಾತ್ರ ಸರ್ಜಿಕಲ್ ಸ್ಟ್ರೈಕ್ ಮಾಡಿ ಮೀಟೂ ಅಂತ ಹೇಳ್ತಿದೆ: ಮೋದಿ

  • ಪತಿಯ ಸಂಬಳವನ್ನು ತಿಳಿಯುವ ಹಕ್ಕು ಪತ್ನಿಗಿದೆ: ಹೈಕೋರ್ಟ್

    ಪತಿಯ ಸಂಬಳವನ್ನು ತಿಳಿಯುವ ಹಕ್ಕು ಪತ್ನಿಗಿದೆ: ಹೈಕೋರ್ಟ್

    ಭೋಪಾಲ್: ಪತ್ನಿಗೆ ತನ್ನ ಗಂಡನಿಗೆ ಸಂಬಳ ಎಷ್ಟಿದೆ ಎನ್ನುವುದನ್ನು ತಿಳಿದುಕೊಳ್ಳುವ ಹಕ್ಕಿದೆ ಎಂದು ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದೆ.

    ಪತಿಯಿಂದ ದೂರವಾಗಿರುವ ಪತ್ನಿ ಗಂಡನ ಸಂಬಳದ ಮಾಹಿತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ಜಿಲ್ಲಾ ನ್ಯಾಯಾಲಯ ಮತ್ತು ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ರದ್ದಾಗಿತ್ತು. ಈಗ ಹೈಕೋರ್ಟ್ ದ್ವಿಸದಸ್ಯ ಪೀಠ ಈ ಆದೇಶವನ್ನು ರದ್ದುಗೊಳಿಸಿ ಪತ್ನಿ ಪರವಾಗಿ ತೀರ್ಪು ಪ್ರಕಟಿಸಿದೆ.

    ಏನಿದು ಪ್ರಕರಣ?
    ಬಿಎಸ್‍ಎನ್‍ಎಲ್ ಉದ್ಯೋಗಿ ಪವನ್ ಜೈನ್ ನಿಂದ ಬೇರೆಯಾದ ಸುನಿತಾ ಜೈನ್ ಕುಟುಂಬ ನಿರ್ವಹಣೆಗೆ 7 ಸಾವಿರ ರೂ. ನಿರ್ವಹಣಾ ಭತ್ಯೆಯನ್ನು ಪಡೆಯುತ್ತಿದ್ದರು. ಪತಿಯ ಸಂಬಳ ತಿಂಗಳಿಗೆ 2 ಲಕ್ಷ ರೂ. ಇರುವ ಕಾರಣ ತನಗೆ ಇನ್ನು ಹೆಚ್ಚು ನಿರ್ವಹಣಾ ಭತ್ಯೆ ಸಿಗಬೇಕು ಎಂದು ಜಿಲ್ಲಾ ನ್ಯಾಯಾಲಯದಲ್ಲಿ ಪತಿಯ ಸಂಬಳದ ಮಾಹಿತಿಯನ್ನು ಕೋರಿ ಅರ್ಜಿಯನ್ನು ಸಲ್ಲಿಸಿದರು.

    ಈ ಅರ್ಜಿಯನ್ನು ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಮಾಹಿತಿ ಹಕ್ಕಿನ ಅಡಿಯಲ್ಲಿ ಬಿಎಸ್‍ಎನ್‍ಎಲ್ ಸಂಸ್ಥೆಗೆ ಮಾಹಿತಿ ಕೋರಿ ಅರ್ಜಿ ಕೇಳಿದ್ದರು. ಮಾಹಿತಿ ಕೊಡಲು ಬಿಎಸ್‍ಎನ್‍ಎಲ್ ಸಂಸ್ಥೆ ನಿರಾಕರಿಸಿತು. ನಂತರ ಪತ್ನಿ ಕೇಂದ್ರ ಮಾಹಿತಿ ಆಯೋಗಕ್ಕೆ ದೂರು ನೀಡಿದರು. ಸುನಿತಾ ಜೈನ್ ಅರ್ಜಿಯನ್ನು ಪುರಸ್ಕರಿಸಿದ ಕೇಂದ್ರ ಮಾಹಿತಿ ಆಯೋಗ ಸಂಬಳದ ಮಾಹಿತಿಯನ್ನು ನೀಡುವಂತೆ ಬಿಎಸ್‍ಎನ್‍ಎಲ್ ಗೆ ಆದೇಶವನ್ನು ನೀಡಿತ್ತು. ಆಯೋಗದ ಆದೇಶವನ್ನು ಪ್ರಶ್ನಿಸಿ ಪವನ್ ಹೈ ಕೋರ್ಟ್‍ನಲ್ಲಿ ಪ್ರಶ್ನಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಏಕ ಸದಸ್ಯ ಪೀಠ ಆಯೋಗದ ಆದೇಶವನ್ನು ರದ್ದು ಮಾಡಿತ್ತು.

    ಏಕಸದಸ್ಯ ಪೀಠದ ಆದೇಶವನ್ನು ಪತ್ನಿ ದ್ವಿಸದ್ಯ ಪೀಠದಲ್ಲಿ ಪ್ರಶ್ನಿಸಿದರು. ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಸ್ ಕೆ ಸೇಥ್ ಹಾಗೂ ನಂದಿತಾ ದುಬೆ ಅವರನ್ನು ಒಳಗೊಂಡ ದ್ವಿ ಸದಸ್ಯ ಪೀಠ ಪತಿ ಸಂಬಳದ ಮಾಹಿತಿಯನ್ನು ಪತ್ನಿಗೆ ತಿಳಿಯುವ ಹಕ್ಕಿದೆ ಎಂದು ಹೇಳಿ ಏಕಸದಸ್ಯ ಪೀಠದ ಆದೇಶವನ್ನು ರದ್ದುಗೊಳಿಸಿದರು.

  • ಕೇಜ್ರಿವಾಲ್ ಕಛೇರಿಯಲ್ಲಿ ಮೂರು ವರ್ಷದಲ್ಲಿ ಚಹಾ,ತಿಂಡಿಗಾಗಿ 1.03 ಕೋಟಿ ರೂ ಖರ್ಚು

    ಕೇಜ್ರಿವಾಲ್ ಕಛೇರಿಯಲ್ಲಿ ಮೂರು ವರ್ಷದಲ್ಲಿ ಚಹಾ,ತಿಂಡಿಗಾಗಿ 1.03 ಕೋಟಿ ರೂ ಖರ್ಚು

    ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಛೇರಿಯಲ್ಲಿ ಮೂರು ವರ್ಷದಲ್ಲಿ ಚಹಾ ಮತ್ತು ತಿಂಡಿಗಾಗಿ 1.03 ಕೋಟಿ ರೂ ಗಳನ್ನು ಖರ್ಚು ಮಾಡಲಾಗಿರುವ ವಿಚಾರ ಮಾಹಿತಿ ಹಕ್ಕು ಕಾಯ್ದೆಯ ಅಡಿ ಬಯಲಾಗಿದೆ.

    2015-16 ರಲ್ಲಿ 23.12 ಲಕ್ಷ ರೂ., 2016-17 ರಲ್ಲಿ 46.54 ಲಕ್ಷ ರೂ., 2017-18 ಆರ್ಥಿಕ ವರ್ಷದಲ್ಲಿ 33.36 ಲಕ್ಷ ರೂ. ಗಳನ್ನು ಚಹಾ ಮತ್ತು ತಿಂಡಿಗಾಗಿ ಖರ್ಚು ಮಾಡಲಾಗಿದೆ ಎಂದು ಆರ್ ಟಿ ಐ ಕಾರ್ಯಕರ್ತ ಹೇಮಂತ್ ಸಿಂಗ್ ಗೌನ್ಯ ತಿಳಿಸಿದ್ದಾರೆ.

    ಇದು ದುಂದು ವೆಚ್ಚವಾಗಿದ್ದು ಇದೇ ಹಣವನ್ನು ಒಪ್ಪತ್ತು ಊಟಕ್ಕೂ ಇಲ್ಲದವರಿಗೆ ವಿನಿಯೋಗಿಸಬಹುದು. ಈ ವೆಚ್ಚವನ್ನು ತಗ್ಗಿಸಿ ಒಳ್ಳೆಯ ಕೆಲಸಗಳಿಗೆ ಸರ್ಕಾರ ಬಳಸುತ್ತದೆ ಅಂತಾ ಅಂದು ಕೊಂಡಿದ್ದೇನೆ ಎಂದು ಹೇಮಂತ್ ಅಭಿಪ್ರಾಯಪಟ್ಟಿದ್ದಾರೆ.