Tag: ಆಲಮಟ್ಟಿ ಅಣೆಕಟ್ಟು

  • ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಿಸಲು ಕ್ರಮವಹಿಸಬೇಕು: ಕಾರಜೋಳ

    ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಿಸಲು ಕ್ರಮವಹಿಸಬೇಕು: ಕಾರಜೋಳ

    ಬೆಂಗಳೂರು: ಆಲಮಟ್ಟಿ ಅಣೆಕಟ್ಟನ್ನು ಎತ್ತರಿಸುವ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಕ್ರಮವಹಿಸಬೇಕು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ವಿಧಾನಸಭೆಯಲ್ಲಿ ಇಂದು ತಿಳಿಸಿದರು.

    ಕೃಷ್ಣಾ ನ್ಯಾಯಾಧೀಕರಣ ಅಂತಿಮ ಐತೀರ್ಪು ಗೆಜೆಟ್ ಅಧಿಸೂಚನೆ ಪ್ರಕಟಣೆಯಾದ ನಂತರ ಯೋಜನೆಯ ವಿವರವಾದ ವರದಿಗೆ ಸಕ್ಷಮ ಪ್ರಾಧಿಕಾರಗಳ ತಿರುವಳಿ ಮೂಲಕ ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 519.60 ಮೀ.ದಿಂದ 524.256 ಮೀ.ಗೆ ಎತ್ತರಿಸುವ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ:  ಭದ್ರಾವತಿ ಕ್ಷೇತ್ರದ ಅಭ್ಯರ್ಥಿ ಘೋಷಣೆ ಮಾಡಿದ ಹೆಚ್‍ಡಿಕೆ

    ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಆಗಸ್ಟ್ 25 ರಂದು ನವದೆಹಲಿಗೆ ಭೇಟಿ ನೀಡಿದ್ದೇವು. ಆ ವೇಳೆ ಕೇಂದ್ರ ಸರ್ಕಾರದ ಜಲಶಕ್ತಿ ಸಚಿವಾಲಯದ ಮಾನ್ಯ ಕೇಂದ್ರ ಜಲಸಂಪನ್ಮೂಲ ಸಚಿವರನ್ನು ಭೇಟಿ ಮಾಡಿ ಕೃಷ್ಣಾ ನ್ಯಾಯಾಧೀಕರಣದ ತೀರ್ಪುನ್ನು ಆದ್ಯತೆ ಮೇರೆಗೆ ಗೆಜೆಟ್ ಪ್ರಕಟಣೆ ಮಾಡುವಂತೆ ಕೋರಲಾಗಿದೆ ಎಂದು ತಿಳಿಸಿದರು.

     

    ಕೇಂದ್ರ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಬಾಕಿ ಇರಿಸಿ ರಾಜ್ಯವು ಸಲ್ಲಿಸಿರುವ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ವಿವರವಾದ ಯೋಜನಾ ವರದಿಯ ಅಪ್ರೈಸಲ್ ಕಾರ್ಯವನ್ನು ಕೈಗೆತ್ತಿಕೊಳ್ಳುವಂತೆ ಕೇಂದ್ರ ಜಲ ಆಯೋಗಕ್ಕೆ ನಿರ್ದೇಶನ ನೀಡಲು ಈ ಸಂದರ್ಭದಲ್ಲಿ ಮನವಿ ಮಾಡಲಾಯಿತು ಎಂದು ಬಸವನಬಾಗೇವಾಡಿ ಶಾಸಕ ಶಿವಾನಂದ ಎಸ್.ಪಾಟೀಲ್ ಅವರ ಪ್ರಶ್ನೆಗೆ ಉತ್ತರವಾಗಿ ತಿಳಿಸಿದರು. ಇದನ್ನೂ ಓದಿ:  ಸರ್ಕಾರದ ಅವೈಜ್ಞಾನಿಕ ನೀತಿಗಳಿಂದ ಗಣಿಗಾರಿಕೆ ಪ್ರದೇಶದಲ್ಲಿ ಸ್ಪೋಟಕ್ಕೆ ಜೀವಗಳು ಬಲಿ

    2013 ರಿಂದ 2019ರವರೆಗೆ ಕಾಂಗ್ರೆಸ್ ಸರ್ಕಾರ ಮತ್ತು ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಏನು ಮಾಡಲಿಲ್ಲ. ಮಹಾರಾಷ್ಟ್ರದೊಂದಿಗೆ ಮಾತನಾಡಿ ಕೃಷ್ಣಾ ಜಲವಿವಾದದ ವಿಷಯದಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಜಂಟಿಯಾಗಿ ಪ್ರಮಾಣ ವಚನ ಸಲ್ಲಿಸಿದ್ದೇವೆ ಎಂದು ಟಾಂಗ್ ಕೊಟ್ಟರು.

     

    ಸರ್ವೋಚ್ಛ ನ್ಯಾಯಾಲಯದ 2011 ಸೆಪ್ಟೆಂಬರ್ 16ರ ತೀರ್ಪಿನಂತೆ ಕೃಷ್ಣಾ ನ್ಯಾಯಾಧೀಕರಣ-2ರ ಅಂತಿಮ ತೀರ್ಪನ್ನು ಗೆಜೆಟ್ ಪ್ರಕಟಣೆ ಮಾಡದಂತೆ ಕೇಂದ್ರ ಸರ್ಕಾರಕ್ಕೆ ಆದೇಶಿಸಲಾಗಿದೆ. ಕೃಷ್ಣಾ ನ್ಯಾಯಾಧೀಕರಣ-2ರ ತೀರ್ಪಿನ ಕುರಿತಾಗಿ ಕರ್ನಾಟಕ, ತೆಲಂಗಾಣ ಮತ್ತು ಆಂಧ್ರ ಪ್ರದೇಶದ ರಾಜ್ಯಗಳು ಸರ್ವೋಚ್ಚ ನ್ಯಾಯಾಲಯದಲ್ಲಿ ಸಲ್ಲಿಸಿರುವ ವಿಶೇಷ ಅನುಮತಿ ಅರ್ಜಿಗಳು ಇತ್ಯರ್ಥವಾಗಬೇಕಿದೆ ಎಂದಿದ್ದಾರೆ. ಇದನ್ನೂ ಓದಿ:  ಶಾರುಖ್ ಅಭಿಮಾನಿಗೆ ಕೊನೆಗೂ ಸುಪ್ರೀಂನಲ್ಲಿ ಸಿಕ್ತು ಜಯ

    ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಮಾರ್ಪಡಿಸುವಂತೆ ಮತ್ತು ನ್ಯಾಯಾಧೀಕರಣ ತೀರ್ಪನ್ನು ಗೆಜೆಟ್ ಪ್ರಕಟಣೆ ಮಾಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ 2019ರ ಫೆಬ್ರವರಿ 18 ರಂದು ಸುಪ್ರೀಂಗೆ ರಾಜ್ಯ ಸರ್ಕಾರವು ಮಧ್ಯಕಾಲಿನ ಅರ್ಜಿಯನ್ನು ಸಲ್ಲಿಸಿದೆ. ಸದರಿ ಅರ್ಜಿಯಲ್ಲಿ ಕೇಂದ್ರ ಸರ್ಕಾರವನ್ನು ಪ್ರತಿವಾದಿಯಾಗಿ ಅನುಮತಿ ಕೋರಿ 2020ರ ಜನವರಿ 23 ರಂದು ಅರ್ಜಿ ಸಲ್ಲಿಸಲಾಗಿದೆ ಎಂದು ಸಚಿವರು ವಿವರವಾಗಿ ಉತ್ತರಿಸಿದರು.

  • ಆಲಮಟ್ಟಿ ಎತ್ತರದಿಂದ ಮುಳುಗಲಿರುವ ಜಮೀನುಗಳ ಮಾರ್ಗಸೂಚಿ ದರ ಪರಿಷ್ಕರಿಸಲು ಸಿಎಂಗೆ ಒತ್ತಾಯ

    ಆಲಮಟ್ಟಿ ಎತ್ತರದಿಂದ ಮುಳುಗಲಿರುವ ಜಮೀನುಗಳ ಮಾರ್ಗಸೂಚಿ ದರ ಪರಿಷ್ಕರಿಸಲು ಸಿಎಂಗೆ ಒತ್ತಾಯ

    ಬೆಂಗಳೂರು: ಆಲಮಟ್ಟಿ ಎತ್ತರದಿಂದ ಮುಳುಗಲಿರುವ ಜಮೀನುಗಳ ಮಾರ್ಗಸೂಚಿ ದರ ಪರಿಷ್ಕರಿಸಲು ಸಿಎಂಗೆ ರೈತರು ಒತ್ತಾಯ ಮಾಡಿದ್ದಾರೆ. ಈ ವಿಚಾರವಾಗಿ ರೈತರ ನಿಯೋಗಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಕಾರಾತ್ಮಕವಾಗಿ ಸ್ಪಂದನೆ ನೀಡಿದ್ದಾರೆ.

    ಯುಕೆಪಿ 3ನೇ ಹಂತದಲ್ಲಿ ಮುಳುಗಡೆಯಾಗುವ ಬಬಲೇಶ್ವರ ತಾಲೂಕಿನ ಎಲ್ಲಾ ಜಮೀನುಗಳಿಗೆ ಏಕರೂಪ ಪರಿಹಾರ ಒದಗಿಸಲು ಕೋರಿ ರೈತರ ನಿಯೋಗ ಇಂದು ಮುಖ್ಯಮಂತ್ರಿಗಳನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿತು. ಈ ವೇಳೆ ರೈತರ ನಿಯೋಗಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಕಾರಾತ್ಮಕವಾಗಿ ಸ್ಪಂದನೆ ನೀಡಿದ್ದು, ನಮ್ಮ ಬೇಡಿಕೆ ಈಡೇರಿಸುವ ಭರವಸೆ ದೊರೆತಿದೆ ಎಂದು ರಾಜ್ಯ ಬಾರ್ ಕೌನ್ಸಿಲ್ ಅಧ್ಯಕ್ಷ ರಾಜೇಂದ್ರ ದೇಸಾಯಿ ತಿಳಿಸಿದ್ದಾರೆ. ಇದನ್ನೂ ಓದಿ:  5 ಮುಖ್ಯ ನ್ಯಾಯಮೂರ್ತಿಗಳ ವರ್ಗಾವಣೆ, 8 ನ್ಯಾಯಮೂರ್ತಿಗಳ ಪದೋನ್ನತಿಗೆ ಕೊಲಿಜಿಯಂ ಶಿಫಾರಸು

    ಆಲಮಟ್ಟಿ ಆಣೆಕಟ್ಟು 524.256ಮೀ ಎತ್ತರಿಸಿ, ನೀರು ನಿಲ್ಲಿಸಿದಾಗ ಅಂದಾಜು 75 ಸಾವಿರ ಎಕರೆ ಪ್ರದೇಶದಷ್ಟು ಜಮೀನು ಮುಳುಗಡೆಯಾಗಲಿದೆ. ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ 14 ಗ್ರಾಮಗಳು ಮುಳುಗಡೆಯಾಗಲಿವೆ. ಈ ಹಿಂದೆ 2015-16ರಲ್ಲಿ ಮಾರ್ಗಸೂಚಿ ಬೆಲೆಯನ್ನು ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಗ್ರಾಮಗಳಿಗೆ ನಿಗದಿಪಡಿಸಿರುತ್ತಾರೆ. ಆದರೆ ಬಾಗಲಕೋಟೆಯ ಜಮಖಂಡಿ ಮತ್ತು ಬೀಳಗಿ ತಾಲೂಕಿನ ಮಾರ್ಗಸೂಚಿ ದರ ಪರಿಷ್ಕರಣೆ ಮಾಡಿರುತ್ತಾರೆ. ಅದರಂತೆ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ 14 ಗ್ರಾಮಗಳ ಜಮೀನುಗಳ ಮಾರ್ಗಸೂಚಿ ಪರಿಷ್ಕರಣೆ ಮಾಡಿ ಎಲ್ಲಾ ರೈತರಿಗೆ ನ್ಯಾಯ ದೊರಕಿಸಲು ಕೋರಿ ಮಾಜಿ ಸಚಿವ, ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ್ ಅವರ ನೇತೃತದಲ್ಲಿ ಮುಖ್ಯಮಂತ್ರಿಗಳನ್ನು ಇಂದು ಭೇಟಿ ಮಾಡಿದ್ದಾಗ ಅವರಿಂದ ಸಕಾರಾತ್ಮಕ ಭರವಸೆ ದೊರೆತಿದೆ ಎಂದರು. ಇದನ್ನೂ ಓದಿ:  ಮಕ್ಕಳ ನಿರ್ಲಕ್ಷ್ಯ- ಬೇಸತ್ತ ವೃದ್ಧ ತಂದೆ, ತಾಯಿ ಆತ್ಮಹತ್ಯೆ

    ಈ ಸಂದರ್ಭದಲ್ಲಿ ಎಂ.ಬಿ.ಪಾಟೀಲ್ ಅವರು ರೈತರ ಬೇಡಿಕೆಯನ್ನು ಮುಖ್ಯಮಂತ್ರಿಗಳಿಗೆ ವಿವರಿಸಿದರು. ಈ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರು ಉಪಸ್ಥಿತರಿದ್ದು, ರೈತರ ಮನವಿಯನ್ನು ಆಲಿಸಿದರು.

    ಈ ಸಂದರ್ಭದಲ್ಲಿ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಶಶಿಕಾಂತಗೌಡ ಪಾಟೀಲ್, ಉಪಾಧ್ಯಕ್ಷ ಎಚ್.ಆರ್.ಬಿರಾದಾರ, ಜಿ.ಪಂ ಮಾಜಿ ಅಧ್ಯಕ್ಷ ಬಸವರಾಜ್ ದೇಸಾಯಿ, ತಾಲೂಕು ಪಂಚಾಯತ ಮಾಜಿ ಅಧ್ಯಕ್ಷ ಶ್ರೀಶೈಲ ಸುಳ್ಳದ, ಭೀಮನಗೌಡ ಪಾಟೀಲ್, ರಾಮನಗೌಡ ಪಾಟೀಲ್, ವೆಂಕಟೇಶ ನಿಡೋಣಿ, ಸುಭಾಸ ಪಾಟೀಲ್, ಸಂಗನಗೌಡ ಪಾಟೀಲ್, ಸಂಗಣ್ಣ ಹುಣಸಿಕಟ್ಟಿ, ಶಿವಾನಂದ ಕಳ್ಳಿಗುದ್ದಿ, ಹಣಮಂತ ಮುದಕರೆಡ್ಡಿ, ವೆಂಕಣ್ಣ ಬಿರಾದಾರ, ರಮೇಶ ಗಡದಾನಿ, ವಿಠ್ಠಲ ಶೇಬಾನಿ, ಸುರೇಶ ಪೂಜಾರಿ, ಗೋವಿಂದಪ್ಪ ಶಿರಬೂರ, ಮಹೇಶ್ ಯರಗಟ್ಟಿ, ಸುರೇಶ್ ಬಿರಾದಾರ, ಸುರೇಶ್ ಕೊಡಬಾಗಿ, ಸುನೀಲ್‍ಗೌಡ ಪಾಟೀಲ್, ಮಹಾದೇವ ಮಾಸರೆಡ್ಡಿ, ವಿಜಯ್ ಸುತಗುಂಡಿ, ವೆಂಕಪ್ಪ ಚಿಕ್ಕಗಲಗಲಿ, ಅರವಿಂದ್ ಗುರಡ್ಡಿ, ವಿಠ್ಠಲ ಪೋತರೆಡ್ಡಿ, ಗಿರೀಶ್ ಪಾಟೀಲ್ ಸೇರಿದಂತೆ ಚಿಕ್ಕಗಲಗಲಿ, ಜೈನಾಪುರ, ಲಿಂಗದಳ್ಳಿ, ಹಂಗರಗಿ, ಬೆಳ್ಳುಬ್ಬಿ, ಬಬಲಾದ, ದೇವರಗೆಣ್ಣೂರ, ಕಣಬೂರ, ಹೊಸೂರ, ಸುತಗುಂಡಿ, ಜಂಬಗಿ, ಶಿರಬೂರ, ಮಂಗಳೂರ, ತಾಜಪೂರ ಗ್ರಾಮದ ರೈತರು ಉಪಸ್ಥಿತರಿದ್ದರು.

  • ನಮ್ಮ ನಾಡಿನ ನೀರೇ ನಮ್ಮ ಪಾಲಿಗಿಲ್ಲ- ತೆಲಂಗಾಣಕ್ಕೆ ಹರಿಯುತ್ತೆ ಕೃಷ್ಣೆ ನೀರು

    ನಮ್ಮ ನಾಡಿನ ನೀರೇ ನಮ್ಮ ಪಾಲಿಗಿಲ್ಲ- ತೆಲಂಗಾಣಕ್ಕೆ ಹರಿಯುತ್ತೆ ಕೃಷ್ಣೆ ನೀರು

    ವಿಜಯಪುರ: ಜಿಲ್ಲೆಯಲ್ಲಿ ಹನಿ ನೀರಿಗೂ ತತ್ವಾರ. ಆದರೆ ಪಕ್ಕದ ರಾಜ್ಯಕ್ಕೆ ಇಲ್ಲಿನ ಡ್ಯಾಂನಿಂದ ನೀರು ಬಿಡಲು ಸರ್ಕಾರ ಆದೇಶಿಸಿದೆ. ಕೃಷ್ಣೆಯ ನೀರನ್ನು ಬೇರೊಂದು ರಾಜ್ಯಕ್ಕೆ ಬಿಡುವ ಮೂಲಕ ಸಚಿವರು ಕೂಡ ಜಿಲ್ಲೆಯ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

    ವಿಜಯಪುರ- ಬಾಗಲಕೋಟೆ ಜಿಲ್ಲೆಯ ಮಕ್ಕಳ ನೀರಿನ ದಾಹ ತಣಿಯದಿದ್ದರೂ ಚಿಂತೆಯಿಲ್ಲ ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸಲಾಗಿದೆ. ಅವಳಿ ಜಿಲ್ಲೆಯಲ್ಲಿ ಹನಿನೀರಿಗೂ ತತ್ವಾರ ಎದುರಾಗಿ ಪ್ರತಿಯೊಬ್ಬರು ಕುಡಿಯುವ ನೀರಿಗಾಗಿ ಪರಿತಪಿಸುತ್ತಿದ್ದಾರೆ. ಆದರೂ ಆಲಮಟ್ಟಿಯಿಂದ ನಾರಾಯಣಪುರ ಡ್ಯಾಂಗೆ 2 ಟಿಎಂಸಿ ನೀರನ್ನ ಜಲಾಶಯಕ್ಕೆ ಹರಿಸಲಾಗಿದೆ.

    ಜಿಲ್ಲೆಯ ಜನರಿಗೆ ನೀರು ಕೊಡದಿದ್ದರಿಂದ ಜೋಳ, ಗೋಧಿ ಮೊದಲಾದ ಬೆಳೆಗಳು ರೈತನ ಕೈಗೆ ಬರಲಿಲ್ಲ. ರೈತರು ಪ್ರತಿಭಟನೆ ನಡೆಸಿ ಹಿಂಗಾರು ಹಂಗಾಮಿಗೆ ಕಾಲುವೆಗಳಿಂದ ನೀರು ಹರಿಸುವಂತೆ ಒತ್ತಾಯಿಸಿದ್ದರು. ಆದರೆ ರೈತರ ಈ ಬೇಡಿಕೆಯನ್ನು ಸರ್ಕಾರ ಮನ್ನಿಸದೇ ಮತ್ತೊಂದು ರಾಜ್ಯಕ್ಕೆ ನೀರು ಹರಿಸುತ್ತಿರುವುದು ಜಿಲ್ಲೆಯ ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ ಎಂದು ರೈತ ಸದಾಶಿವ ಹೇಳಿದ್ದಾರೆ.

    ಅವಳಿ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು ಹೇಳಿದ್ದಾರೆ. ಕೊಯ್ನಾ ಜಲಾಶಯದಿಂದ ನೀರು ತರಿಸಿಕೊಳ್ಳಲು ಗಂಭೀರ ಆಸಕ್ತಿ ತಾಳದ ರಾಜ್ಯ ಸರ್ಕಾರ ಈಗ ತೆಲಂಗಾಣಕ್ಕೆ ನೀರು ಬಿಡುವ ವಿಷಯದಲ್ಲಿ ವಿಶೇಷ ಆಸಕ್ತಿ ತೋರಿಸಿ ಅನ್ನದಾತರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.