Tag: ಆಲಮಟ್ಟಿ ಡ್ಯಾಂ

  • UKP 3ನೇ ಹಂತ| ಮುಳುಗಡೆ ಸಂತ್ರಸ್ತರಿಗೆ 40 ಲಕ್ಷ ಪರಿಹಾರ – ಯಾರಿಗೆ ಎಷ್ಟು ಸಿಗುತ್ತೆ?

    UKP 3ನೇ ಹಂತ| ಮುಳುಗಡೆ ಸಂತ್ರಸ್ತರಿಗೆ 40 ಲಕ್ಷ ಪರಿಹಾರ – ಯಾರಿಗೆ ಎಷ್ಟು ಸಿಗುತ್ತೆ?

    ಬೆಂಗಳೂರು: ಕೃಷ್ಣ ಮೇಲ್ದಂಡೆ ಯೋಜನೆ (Upper Krishna Project) ಮೂರನೇ ಹಂತದಲ್ಲಿ ಬಾಗಲಕೋಟೆ (Bagalkote) ಜಿಲ್ಲೆಯ ಆಲಮಟ್ಟಿ ಡ್ಯಾಂ (Almatti Dam) ಎತ್ತರ ಹೆಚ್ಚಳ ಯೋಜನೆ ಸಂಬಂಧ ರೈತರಿಗೆ ಪರಿಹಾರ ನೀಡುವ ವಿಚಾರದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ಇಂದು ಮಹತ್ವದ ತೀರ್ಮಾನ ಕೈಗೊಂಡಿದೆ. ಇದಕ್ಕಾಗಿಯೆ ವಿಶೇಷ ಸಚಿವ ಸಂಪುಟ ಸಭೆ ಇಂದು ನಡೆದಿದ್ದು ಸಭೆಯಲ್ಲಿ ರೈತರ ಭೂ ಪರಿಹಾರಕ್ಕೆ ದರ ನಿಗದಿ ಮಾಡಲಾಗಿದೆ.

    ಮುಳಗಡೆ ವ್ಯಾಪ್ತಿಯಲ್ಲಿ ನೀರಾವರಿ ಜಮೀನಿಗೆ ಎಕರೆಗೆ 40 ಲಕ್ಷ ರೂ., ಒಣ ಭೂಮಿಗೆ ಎಕರೆಗೆ 30 ಲಕ್ಷ ರೂ. ನಿಗದಿ ಮಾಡಲಾಗಿದೆ. ಅದರಂತೆ ಕೆನಾಲ್ ಭಾಗದಲ್ಲಿ ನೀರಾವರಿ ಜಮೀನಿಗೆ ಎಕರೆಗೆ 30 ಲಕ್ಷ ರೂ. ಒಣ ಭೂಮಿಗೆ 25 ಲಕ್ಷ ರೂ. ದರ ನಿಗದಿ ಮಾಡಲಾಗಿದೆ.

    ಸಿಎಂ ಸಿದ್ದರಾಮಯ್ಯ ಮಾತನಾಡಿ, ಡ್ಯಾಂ ಎತ್ತರಿಸಲು 75 ಸಾವಿರ ಎಕರೆಗೂ ಹೆಚ್ಚು ಜಮೀನು ಮುಳುಗಡೆ ಆಗಲಿದೆ. 5 ಲಕ್ಷ ಹೆಕ್ಟೇರ್‌ಗೂ ಹೆಚ್ಚಿನ ಜಾಗಕ್ಕೆ ನೀರಾವರಿ ಸೌಲಭ್ಯ ಸಿಗಲಿದೆ. ಬರಡು ಭೂಮಿಗೆ ನೀರು ಕೊಟ್ಟಂತೆ ಆಗಲಿದೆ ಎಂದರು. ಇದನ್ನೂ ಓದಿ: ಎಸ್‌ಟಿಗೆ ಕುರುಬ ಮಹತ್ವದ ಸಭೆ ಕರೆದ ವಾಲ್ಮೀಕಿ ಸಮುದಾಯ


    ಡಿಸಿಎಂ ಡಿಕೆ ಶಿವಕುಮಾರ್‌ ಮಾತನಾಡಿ, ಇವತ್ತು ಐತಿಹಾಸಿಕ ತೀರ್ಮಾನಕ್ಕೆ ಬಂದಿದ್ದೇವೆ. ಸುಮಾರು ಹತ್ತು ಸುತ್ತಿನ ಸಭೆಗಳು ನಡೆಸಿದ್ದೇವೆ. ಪುನರ್ವಸತಿಗಾಗಿ ಹೊಸ ಪಾಲಿಸಿ, ಪರಿಹಾರ ಪ್ಯಾಕೇಜ್ ಪರ್ಯಾಯ ವ್ಯವಸ್ಥೆಗೆ ತೀರ್ಮಾನ. ಸೆಕ್ಷನ್ 51 ಅನ್ವಯ ಪ್ರಾಧಿಕಾರ ರಚನೆ ಮಾಡಿ ಹಾಲಿ, ನಿವೃತ್ತ ನ್ಯಾಯಾಧೀಶರ ನೇಮಕ ಮಾಡಲಾಗುವುದು ಎಂದು ತಿಳಿಸಿದರು

    ಕ್ಯಾಬಿನೆಟ್ ನಿರ್ಧಾರ ಏನು?
    519.6 ಮೀಟರ್‌ನಿಂದ 524.25 ಮೀಟರ್‌ಗೆ ಆಲಮಟ್ಟಿ ಡ್ಯಾಮ್ ಎತ್ತರಕ್ಕೆ ತೀರ್ಮಾನ.
    ಯೋಜನೆಗೆ ಅಂದಾಜು ಒಟ್ಟು 70 ಸಾವಿರ ಕೋಟಿ ರೂ. ಖರ್ಚು
    3 ವರ್ಷದಲ್ಲಿ ಭೂ ಸ್ವಾಧೀನ ಪ್ರಕ್ರಿಯೆ ಅಂತಿಮ
    ಒಟ್ಟು 5 ಲಕ್ಷ ಹೆಕ್ಟೇರ್ ಕೃಷಿ ಪ್ರದೇಶಕ್ಕೆ ನೀರಾವರಿ ಸೌಲಭ್ಯ
    ಒಟ್ಟು 1.33 ಲಕ್ಷ ಎಕರೆ ಜಮೀನು ಯೋಜನೆ ಆಗಲಿದ್ದು 75,532 ಎಕರೆ ಜಾಗ ಮುಳುಗಡೆಯಾಗಲಿದೆ.
    ನಾಲೆ ನಿರ್ಮಾಣಕ್ಕೆ ಬೇಕಾದ ಜಾಗ 51,837 ಎಕರೆ
    ಪುನರ್ವಸತಿಗಾಗಿ ಬೇಕಾಗಿರುವ ಜಾಗ 6,439 ಎಕರೆ
    ಈ ಯೋಜನೆಯಿಂದ ಸ್ಥಳಾಂತರ ಆಗಲಿವೆ 20 ಗ್ರಾಮಗಳು

  • ಆಲಮಟ್ಟಿ ಅಣೆಕಟ್ಟು ಎತ್ತರಿಸುವ ಬದ್ಧತೆ ನಮ್ಮ ಸರ್ಕಾರಕ್ಕೆ ಇದೆ: ಡಿಕೆಶಿ

    ಆಲಮಟ್ಟಿ ಅಣೆಕಟ್ಟು ಎತ್ತರಿಸುವ ಬದ್ಧತೆ ನಮ್ಮ ಸರ್ಕಾರಕ್ಕೆ ಇದೆ: ಡಿಕೆಶಿ

    – ಒಂದು ವಾರದಲ್ಲಿ ಭೂಸ್ವಾಧೀನಕ್ಕೆ ಪರಿಹಾರ ಮೊತ್ತ ಘೋಷಣೆ

    ವಿಜಯಪುರ: ಆಲಮಟ್ಟಿ ಅಣೆಕಟ್ಟು ಎತ್ತರವನ್ನು 518 ಮೀ.ನಿಂದ 524 ಮೀ. ಎತ್ತರಿಸುವ ಬಗ್ಗೆ ಆದ್ಯತೆ ಮತ್ತು ಬದ್ಧತೆ ನಮ್ಮ ಸರ್ಕಾರಕ್ಕಿದೆ. ಮುಂದಿನ ಒಂದು ವಾರದೊಳಗೆ ಭೂಸ್ವಾಧೀನಕ್ಕೆ ನಿಗದಿ ಮಾಡಿರುವ ಬೆಲೆ ಘೋಷಣೆ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

    ಆಲಮಟ್ಟಿ ಅಣೆಕಟ್ಟಿನಲ್ಲಿ ಕೃಷ್ಣಾ ನದಿಗೆ ಶನಿವಾರ ಬಾಗಿನ ಅರ್ಪಣೆ ನಂತರ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಯವರು ಹಾಗೂ ಯೋಜನೆ ವ್ಯಾಪ್ತಿಯ ಜನಪ್ರತಿನಿಧಿಗಳ ಸಭೆ ನಡೆಸಿ ಬೆಲೆ ನಿಗದಿ ತೀರ್ಮಾನ ಮಾಡಲಾಗುವುದು. ಯಾವುದೇ ಮೇಲ್ಮನವಿ ಇಲ್ಲದಂತೆ ಒಂದೇ ಹಂತದ ಒಪ್ಪಿತ ಭೂಸ್ವಾಧೀನಕ್ಕೆ ಮುಖಂಡರು, ಜನಪ್ರತಿನಿಧಿಗಳು ಒಪ್ಪಿಗೆ ನೀಡಬೇಕು. ಪುನರ್ವಸತಿ ಬಗ್ಗೆ ಪ್ರತ್ಯೇಕ ತೀರ್ಮಾನ ಮಾಡಲಾಗುವುದು. ಸಮುದ್ರಕ್ಕೆ ಹೋಗುತ್ತಿರುವ ನೀರನ್ನು ನಮ್ಮ ಜನರಿಗೆ ನೀರಾವರಿ ಕಲ್ಪಿಸುವುದು ನಮ್ಮ ಸಂಕಲ್ಪ. ಇದನ್ನು ಇದೇ ಅವಧಿಯಲ್ಲಿ ಮಾಡಲು ಮುಂದಾಗಿದ್ದೇವೆ ಎಂದರು. ಇದನ್ನೂ ಓದಿ: ಹಿಂದೂಗಳ ಸಂಖ್ಯೆ ಹೆಚ್ಚಾಗದಿದ್ರೆ ಭಾರತ, ಪಾಕ್ ಆಗುತ್ತೆ: ಕಲ್ಲಡ್ಕ ಪ್ರಭಾಕರ ಭಟ್

    ಮುಳುಗಡೆ ಜಮೀನುಗಳಿಗೆ ಉದಾರ ಮನಸ್ಸಿನಿಂದ ಪರಿಹಾರ ನೀಡಬೇಕು. ಕಾಲುವೆಗಳು ಹಾದು ಹೋಗುವ ಕಡೆ ರೈತರಿಗೆ ಅನುಕೂಲವಾಗುವುದರಿಂದ ಇಂತಿಷ್ಟೇ ಪರಿಹಾರ ಬೇಕು ಎನ್ನುವ ಬೇಡಿಕೆಯಿಲ್ಲ ಎಂದು ಶಾಸಕರಾದ ಯಶವಂತರಾಯ ಗೌಡ ಪಾಟೀಲರು ಅಭಿಪ್ರಾಯ ತಿಳಿಸಿದ್ದಾರೆ. ಶಿವಾನಂದ ಪಾಟೀಲರು, ಎಂ.ಬಿ.ಪಾಟೀಲರು ಸಹ ತಮ್ಮ ಸಲಹೆಗಳನ್ನು ನೀಡಿದ್ದಾರೆ. ನಾವು ಕೇಂದ್ರದ ಮೇಲೆ ಹಾಕುತ್ತಿರುವ ಒತ್ತಡ ನೋಡಿದರೆ, ಯಾವ ಕ್ಷಣದಲ್ಲಿ ಬೇಕಾದರೂ ಅಧಿಸೂಚನೆ ಹೊರಡಿಸಬಹುದು. ನಮ್ಮ ಪಾಲು ನಮಗೆ ಸಿಗಲೇಬೇಕು. ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ ಜಿಲ್ಲೆಯ ಜನರು ಸಹಕಾರ ನೀಡಬೇಕು. ನಾವು ಎಲ್ಲಾ ಪಕ್ಷದ ಶಾಸಕರ ಜೊತೆ ಚರ್ಚೆ ಮಾಡಿ ಅಭಿಪ್ರಾಯ ಸಂಗ್ರಹಿಸಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಗಂಡನನ್ನು ಹೊಡೆದು ಕೊಲ್ಲುವಾಗ ಎದುರಲ್ಲೇ ಇದ್ದ ಸೋನಮ್ – ಹನಿಮೂನ್‌ ಕೊಲೆ ಕೇಸ್‌ ಚಾರ್ಜ್‌ಶೀಟ್‌ನಲ್ಲೇನಿದೆ?

    ಈ ವಿಚಾರವಾಗಿ ಅಧಿಸೂಚನೆ ಹೊರಡಿಸಬೇಕು ಎಂದು ಕೇಂದ್ರ ಜಲಶಕ್ತಿ ಸಚಿವರನ್ನು ಮುಖ್ಯಮಂತ್ರಿಯವರು, ನಾನು ಹಾಗೂ ಸಣ್ಣ ನೀರಾವರಿ ಸಚಿವರು ಮನವಿ ಮಾಡಿದ್ದೆವು. ನಾನು ಸುಮಾರು ಐದು ಬಾರಿ ಭೇಟಿ ಮಾಡಿ ಪ್ರಸ್ತಾವನೆ ಸಲ್ಲಿಸಿದ್ದೇವೆ. ಪ್ರಧಾನಿಯವರ ಗಮನಕ್ಕೂ ಇದನ್ನು ತರಲಾಗಿತ್ತು. ಎರಡು ಬಾರಿ ಇದರ ಬಗ್ಗೆ ಸಂಬಂಧಪಟ್ಟ ರಾಜ್ಯಗಳ ಸಭೆ ಕರೆಯಲಾಗಿತ್ತು. ಆಂಧ್ರಪ್ರದೇಶದವರು ಒಮ್ಮೆ ಮಹಾರಾಷ್ಟ್ರದವರು ಮತ್ತೊಮ್ಮೆ ಸಭೆಯನ್ನು ಮುಂದಕ್ಕೆ ಹಾಕಿಸಿದರು ಎನ್ನುವ ಮಾಹಿತಿಯಿದೆ ಎಂದು ಹೇಳಿದರು. ಇದನ್ನೂ ಓದಿ: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ – ಇಬ್ಬರು ಯುವಕರ ಬಂಧನ

    ಈ ಬಗ್ಗೆ ಮತ್ತೆ ಕೇಂದ್ರ ಜಲಶಕ್ತಿ ಸಚಿವರ ಗಮನ ಸೆಳೆದಾಗ ಅವರು ‘ಗಾಬರಿಯಾಗಬೇಡಿ, ತಾಂತ್ರಿಕ ವಿಚಾರದ ಕಾರಣಕ್ಕೆ ಸಭೆ ಮುಂದಕ್ಕೆ ಹಾಕಲಾಯಿತು. ಮತ್ತೊಮ್ಮೆ ಸಭೆ ಕರೆಯುವುದಾಗಿ’ ಆಶ್ವಾಸನೆ ನೀಡಿದ್ದಾರೆ. ಅಣೆಕಟ್ಟು ಎತ್ತರ ಹೆಚ್ಚಳ ಕುರಿತಂತೆ ಯಾವುದೇ ತಕರಾರುಗಳು ಇಲ್ಲವೆಂದು ಮಹಾರಾಷ್ಟ್ರದವರು ಈ ಹಿಂದೆ ತಿಳಿಸಿದ್ದರು ಎಂದು ಎಂ.ಬಿ.ಪಾಟೀಲರು ಹೇಳಿದ್ದಾರೆ ಎಂದರು. ಇದನ್ನೂ ಓದಿ: ಸಿದ್ದರಾಮಯ್ಯಗೆ ಇವಿಎಂಗಳ ಮೇಲೆ ನಂಬಿಕೆ ಇಲ್ಲದಿದ್ರೆ ರಾಜೀನಾಮೆ ಕೊಟ್ಟು ಸರಿಯಿಲ್ಲ ಅಂತ ಹೇಳಲಿ: ಬೊಮ್ಮಾಯಿ

    ರೈತರ ಭೂಮಿ ಸ್ವಾಧೀನಕ್ಕೆ ಒಳಪಡಿಸಿಕೊಳ್ಳುವ ಬಗ್ಗೆ ಅನೇಕ ಸಭೆಗಳನ್ನು ನಡೆಸಲಾಗಿದೆ. ಬಸವರಾಜ ಬೊಮ್ಮಾಯಿ ಅವರ ಕಾಲದಲ್ಲಿ ಇಂತಿಷ್ಟು ಪರಿಹಾರವೆಂದು ನಿಗದಿ ಮಾಡಲಾಗಿತ್ತು. ಇದರಿಂದ ರೈತರಿಗೆ ಅನುಕೂಲವಾಗುತ್ತಿಲ್ಲ ಎಂದು ಅನೇಕ ಜನಪ್ರತಿನಿಧಿಗಳು ಒತ್ತಡ ಹಾಕಿ ಇದನ್ನು ನಿಲ್ಲಿಸಿದರು. ಇತ್ತೀಚೆಗೆ ಆಲಮಟ್ಟಿ ಭಾಗದ ಜನಪ್ರತಿನಿಧಿಗಳ, ಸಚಿವರ, ರೈತರ ಸಭೆ ನಡೆಸಿ ಅದರ ತೀರ್ಮಾನವನ್ನು ಮುಖ್ಯಮಂತ್ರಿಯವರ ಗಮನಕ್ಕೆ ತರಲಾಗಿದೆ ಎಂದು ನುಡಿದರು. ಇದನ್ನೂ ಓದಿ: ಬಿಡದಿ ಇಂಟಿಗ್ರೇಟೆಡ್ ಟೌನ್‌ಶಿಪ್‌ಗೆ ರೈತರ ಸ್ವಾಗತ – 1.5 ಕೋಟಿಯಿಂದ 2.5 ಕೋಟಿ ರೂ. ಪರಿಹಾರಕ್ಕೆ ಸಂತಸ

    ಪರಿಹಾರದ ವಿಚಾರವಾಗಿ ಸುಮಾರು 20 ಸಾವಿರ ರೈತರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಅನೇಕ ವಕೀಲರು ರೈತರನ್ನ ತಪ್ಪು ದಾರಿಗೆ ಎಳೆಯಲು ಪ್ರಯತ್ನಿಸುತ್ತಿದ್ದಾರೆ. ಇದರಿಂದ ಯಾರಿಗೂ ಸಹ ಅನುಕೂಲವಾಗುವುದಿಲ್ಲ ಎನ್ನುವುದನ್ನು ರೈತರು ಅರಿಯಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಪ್ರಾಮಾಣಿಕರಾಗಿದ್ರೆ ಸೆಂಥಿಲ್‌ ಸಿಎಂ ಬಳಿ ಮಾತಾಡಿ ಸಿಬಿಐ, ಎನ್ಐಎಗೆ ಕೊಡಲಿ : ರೆಡ್ಡಿ ಸವಾಲು

    ಅಣೆಕಟ್ಟು ಎತ್ತರ ಹೆಚ್ಚಳ ಯೋಜನೆಯನ್ನು ಬಜೆಟ್‌ನಲ್ಲಿ ಘೋಷಣೆ ಮಾಡಿ ನಮ್ಮ ಸರ್ಕಾರ ಬದ್ಧತೆ ಮೆರೆದಿದೆ. ಈ ವರ್ಷ 100 ಟಿಎಂಸಿಗೂ ಹೆಚ್ಚು ನೀರು, ಕೆಲವೊಮ್ಮೆ 400 ಟಿಎಂಸಿಗೂ ಹೆಚ್ಚು ನೀರು ಸಮುದ್ರ ಸೇರಿದ ಉದಾಹರಣೆಯಿದೆ. ವರುಣನ ಕೃಪೆಯಿಂದ ಆಲಮಟ್ಟಿ ಅಣೆಕಟ್ಟು ತುಂಬಿ ಎಲ್ಲರಿಗೂ ಸಂತಸ ಉಂಟು ಮಾಡಿದೆ ಎಂದು ಹೇಳಿದರು. ಇದನ್ನೂ ಓದಿ:  ಧರ್ಮಸ್ಥಳ ಕೇಸ್ | ಅಣ್ಣಾಮಲೈ ವಿಚಾರಣೆ ಯಾಕಿಲ್ಲ? – ಸಸಿಕಾಂತ್ ಸೆಂಥಿಲ್

  • ಮಹಾರಾಷ್ಟ್ರದ ತಕರಾರಿನ ಹಿಂದೆ ಬರೀ ರಾಜಕೀಯ ದುರುದ್ದೇಶ: ಎಂ.ಬಿ ಪಾಟೀಲ್

    ಮಹಾರಾಷ್ಟ್ರದ ತಕರಾರಿನ ಹಿಂದೆ ಬರೀ ರಾಜಕೀಯ ದುರುದ್ದೇಶ: ಎಂ.ಬಿ ಪಾಟೀಲ್

    – ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಳದಿಂದ ಸಾಂಗ್ಲಿ, ಕೊಲ್ಲಾಪುರ ಜಿಲ್ಲೆಗಳಲ್ಲಿ ಪ್ರವಾಹ ಎನ್ನುವುದು ಅರ್ಥಹೀನ

    ಬೆಂಗಳೂರು: ಕರ್ನಾಟಕವು ಆಲಮಟ್ಟಿ ಅಣೆಕಟ್ಟನ್ನು ಎತ್ತರಿಸುವುದರಿಂದ ಸಾಂಗ್ಲಿ ಮತ್ತು ಕೊಲ್ಲಾಪುರ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗುತ್ತದೆ ಎನ್ನುವ ಮಹಾರಾಷ್ಟ್ರದ ತಕರಾರಿಗೆ ಅರ್ಥವಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ (M B Patil) ಕಿಡಿಕಾರಿದ್ದಾರೆ.

    ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆಲಮಟ್ಟಿ ಅಣೆಕಟ್ಟನ್ನು (Alamatti Dam) ನಾವು ಕಟ್ಟುವುದಕ್ಕೂ ಮೊದಲೇ ಸಾಂಗ್ಲಿಯಲ್ಲಿ (Sangli) 1964, 1976, 1994 ಮತ್ತು 1997ರಲ್ಲಿ ಭೀಕರ ಪ್ರವಾಹ ಸೃಷ್ಟಿಯಾಗಿತ್ತು. ಸುಪ್ರೀಂ ಕೋರ್ಟ್ ಕೂಡ ಅಣೆಕಟ್ಟಿನ ಎತ್ತರವನ್ನು 524.256 ಮೀ.ಗೆ ನಾವು ಏರಿಸಬಹುದು ಎಂದು 2000ದಲ್ಲೇ ಹೇಳಿದೆ. ಇದಾದ ಮೇಲೂ ಮಹಾರಾಷ್ಟ್ರವು (Maharashtra) ನಮಗೆ ವಿರುದ್ಧವಾಗಿ 2005 ರಲ್ಲಿ ನ್ಯಾಯಾಧಿಕರಣಕ್ಕೆ ಹೋಯಿತು. ಆದರೆ, ಅದರ ಮಧ್ಯಂತರ ಮನವಿಯಲ್ಲೂ ತಿರಸ್ಕೃತಗೊಂಡಿದೆ ಎಂದಿದ್ದಾರೆ. ಇದನ್ನೂ ಓದಿ: ಹೆಚ್‌ಎನ್ ವ್ಯಾಲಿ ನೀರನ್ನ ಸಂಪುಟ ಸದಸ್ಯರಿಗೆ ಕುಡಿಸಿ ಶುದ್ಧತೆ ಸಾಬೀತುಪಡಿಸಲಿ: ಸಚಿವ ಸುಧಾಕರ್‌ಗೆ ಸಂಸದ ಸುಧಾಕರ್‌ ಸವಾಲ್‌

    ಆಲಮಟ್ಟಿ ಅಣೆಕಟ್ಟಿನ ಕಾರಣದಿಂದಾಗಿಯೇ ಮಹಾರಾಷ್ಟ್ರದ ಸಾಂಗ್ಲಿ ಮತ್ತು ಕೊಲ್ಲಾಪುರ (Kollapura) ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗುತ್ತದೆ ಎಂಬ ವಾದವನ್ನು ನ್ಯಾಯಮಂಡಳಿಯು ಪುರಸ್ಕರಿಸಿಲ್ಲ. ಈ ಸಂಬಂಧವಾಗಿ ನ್ಯಾಯಾಧಿಕರಣವು 2010 ಮತ್ತು 2013ರಲ್ಲಿ ಕೂಡ ವಿಸ್ತೃತ ವರದಿ ನೀಡಿದೆ. ಈ ವಿಚಾರದಲ್ಲಿ ಹಿಪ್ಪರಗಿ ಜಲಾಶಯವನ್ನೂ ಪರಿಗಣಿಸಿದೆ. ಜೊತೆಗೆ, ಕೃಷ್ಣಾ ನೀರು ಹಂಚಿಕೆ ಸಂಬಂಧ ರಚಿಸಲಾದ ಎರಡನೆಯ ನ್ಯಾಯಾಧಿಕರಣವು ನೀಡಿರುವ ತೀರ್ಪನ್ನು ಇದುವರೆಗೂ ಯಾವ ರಾಜ್ಯಗಳೂ ಪ್ರಶ್ನಿಸಿಲ್ಲ. ಹೀಗಿರುವಾಗ, ಈಗ ಇದ್ದಕ್ಕಿದ್ದಂತೆ ತಕರಾರು ತೆಗೆಯುವುದರ ಹಿಂದಿನ ಉದ್ದೇಶ ಯಾರಿಗಾದರೂ ಅರ್ಥವಾಗುತ್ತದೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಆಟೋದಲ್ಲಿ ಬಂದು ಅಂಗಡಿ ಮುಂದಿದ್ದ ಉಪ್ಪಿನ ಮೂಟೆ ಕದ್ದ ಕಳ್ಳರು

    ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಿಸಿದರೆ ತನಗೆ ನೀರು ಬರುವುದಿಲ್ಲ ಎಂದು ಆಂಧ್ರಪ್ರದೇಶ ಕೂಡ (ವಿಭಜನೆಗೂ ಮುನ್ನ) ಆಕ್ಷೇಪ ಮಾಡಿತ್ತು. ಆದರೆ, ಅವರ ವಾದ ಕೂಡ ಬಿದ್ದು ಹೋಗಿದೆ. ಈಗ ನಾವು ಅಣೆಕಟ್ಟಿನ ಎತ್ತರಕ್ಕೆ ಮುಂದಾಗಿರುವುದನ್ನು ಮರುಪರಿಶೀಲಿಸಲು ಮಹಾರಾಷ್ಟ್ರವು ಆಗ್ರಹಿಸಿರುವುದು ರಾಜಕೀಯ ದುರುದ್ದೇಶದಿಂದ ಕೂಡಿದೆ. 5 ವರ್ಷಗಳ ಕಾಲ ನೀರಾವರಿ ಸಚಿವನಾಗಿದ್ದ ನನಗೆ ಇದರ ಬಗ್ಗೆ ಸ್ಪಷ್ಟ ತಿಳಿವಳಿಕೆ ಇದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಾಮಾಜಿಕ ಮಾಧ್ಯಮದಲ್ಲಿ ನೀಡುವ ಮಾಹಿತಿ ನಿಖರ, ನಿಷ್ಪಕ್ಷಪಾತವಾಗಿರಬೇಕು – ಇ.ಡಿ ಕಿವಿಹಿಂಡಿದ ದೆಹಲಿ ಕೋರ್ಟ್

    ಸಾಂಗ್ಲಿ ಜಿಲ್ಲೆಯಲ್ಲಿ ಜಲಾನಯನ ಪ್ರದೇಶಗಳು ವಿಪರೀತ ಒತ್ತುವರಿಯಾಗಿವೆ. ಇದಕ್ಕೆ ಸಂಬಂಧಿಸಿದ ವರದಿ ನನ್ನ ಬಳಿ ಇದೆ. ಅಲ್ಲಿನ ಸರ್ಕಾರ ಈ ಸಮಸ್ಯೆಯನ್ನು ಬಗೆಹರಿಸುವ ಕಡೆಗೆ ಗಮನ ಕೊಡಬೇಕು. ಅದನ್ನು ಬಿಟ್ಟು ನಮಗೆ ಅಡ್ಡಗಾಲು ಹಾಕಬಾರದು. ನನ್ನಲ್ಲಿರುವ ದಾಖಲೆಗಳನ್ನು ನಾನು ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್ ಅವರಿಗೂ ಕೊಡುತ್ತೇನೆ. ನಾವು ಇದಕ್ಕೆ ವಿವರವಾಗಿ ತಕ್ಕ ಉತ್ತರ ಕೊಡುತ್ತೇವೆ ಎಂದು ತಿಳಿಸಿದ್ದಾರೆ.

  • ಪದೇ ಪದೇ ಭೂಕಂಪಕ್ಕೆ ಆಲಮಟ್ಟಿ ಡ್ಯಾಂ ಕಾರಣ: ಶಿವಾನಂದ ಪಾಟೀಲ್

    ಪದೇ ಪದೇ ಭೂಕಂಪಕ್ಕೆ ಆಲಮಟ್ಟಿ ಡ್ಯಾಂ ಕಾರಣ: ಶಿವಾನಂದ ಪಾಟೀಲ್

    ವಿಜಯಪುರ: ಜಿಲ್ಲೆಯಲ್ಲಿ ಪದೇ ಪದೇ ಆಗುತ್ತಿರುವ ಭೂಕಂಪಕ್ಕೆ ಆಲಮಟ್ಟಿ ಡ್ಯಾಂ ಕಾರಣ. ನನ್ನ ಅನುಭವದ ಪ್ರಕಾರ ಇದು ನನ್ನ ಊಹೆ ಎಂದು ಶಾಸಕ ಶಿವಾನಂದ ಪಾಟೀಲ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮರಿ ಖರ್ಗೆ ಹೆಸರು ಗಂಡೋ, ಹೆಣ್ಣೋ ಎಂಬ ಕ್ಲಾರಿಟಿ ಇಲ್ಲ: ಪ್ರತಾಪ್ ಸಿಂಹ

    ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೋಯ್ನಾ ಡ್ಯಾಂ ಆದಾಗ ಸುತ್ತಮುತ್ತನಲ್ಲಿ ಈ ರೀತಿ ಆಗಿದ್ದನ್ನು ನಾವು ಕೇಳಿದ್ದೇವೆ.ಎನ್‍ಟಿಪಿಸಿಗೂ ಭೂಕಂಪಕ್ಕು ಸಂಬಂಧವಿಲ್ಲ. ನನ್ನ ಪ್ರಕಾರ ಇದು ಆಲಮಟ್ಟಿ ಡ್ಯಾಂ ನಿಂದಾಗಿ ಆಗುತ್ತಿದೆ ಎಂದರು. ಇದನ್ನೂ ಓದಿ: ವಿಜಯಪುರದಲ್ಲಿ ಮತ್ತೆ ಸರಣಿ ಭೂಕಂಪದ ಅನುಭವ


    ರಾಜ್ಯ ಸರ್ಕಾರ ಮೂರು ಬಾರಿ ತಜ್ಞರ ತಂಡ ಕಳುಹಿಸಿದೆ. ಆದರೆ ಅದರ ಫೈನಲ್ ವರದಿ ಬಂದಿಲ್ಲ. ಅವರ ವರದಿ ಬಂದ ಮೇಲೆ ಇದರ ಬಗ್ಗೆ ಮಾತನಾಡುವುದು ಸೂಕ್ತ. ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಇದರ ಬಗ್ಗೆ ಗಮನ ಸೆಳೆಯುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಡಿಕೆ ಅಂತ ಘೋಷಣೆ ಕೂಗಿವದರು ಪಕ್ಷ ದ್ರೋಹಿಗಳು ಹೊರಗೆ ಹೋಗಿ: ಡಿಕೆಶಿ ಗರಂ

  • ಆಲಮಟ್ಟಿ ಡ್ಯಾಂ 524 ಅಡಿಗೆ ಎತ್ತರಿಸಲು ಕ್ರಮ: ಸಿಎಂ ಬೊಮ್ಮಾಯಿ

    ಆಲಮಟ್ಟಿ ಡ್ಯಾಂ 524 ಅಡಿಗೆ ಎತ್ತರಿಸಲು ಕ್ರಮ: ಸಿಎಂ ಬೊಮ್ಮಾಯಿ

    ಹಾವೇರಿ: ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಆಲಮಟ್ಟಿ ಜಲಾಶಯವನ್ನು 524 ಅಡಿಗೆ ಏರಿಕೆ ಮಾಡಲು ತಜ್ಞರ ತಂಡದ ಜತೆ ದೆಹಲಿಯಲ್ಲಿ ಚರ್ಚಿಸುತ್ತೇನೆ. ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿದೆ. ಆದಷ್ಟು ಬೇಗ ನೋಟಿಫಿಕೇಷನ್ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

    ಹಾವೇರಿ ಜಿಲ್ಲೆಯಲ್ಲಿ ಮರಣ ಪ್ರಮಾಣ ಏರಿಕೆ ಸಂಬಂಧ ತಜ್ಞರ ವರದಿ ಬಂದಿದ್ದು, ಆರೋಗ್ಯ ಇಲಾಖೆಯ ವೈಫಲ್ಯ ಸಾಬೀತಾಗಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ ಅವರು, ಇದು ಹಾವೇರಿ ಜಿಲ್ಲೆಗೆ ಮಾತ್ರ ಸಂಬಂಧಿಸಿದ್ದಲ್ಲ. ಇಡೀ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಕೋವಿಡ್ ಬಂದಾಗ ಹಲವಾರು ಸಮಸ್ಯೆಗಳು ಉಂಟಾಗಿವೆ. ತಜ್ಞರು ಕೆಲವು ಸಲಹೆ, ಸೂಚನೆ ನೀಡಿದ್ದಾರೆ. ಆರೋಗ್ಯ ಇಲಾಖೆಯನ್ನು ಉನ್ನತೀಕರಣಗೊಳಿಸಲು ಕ್ರಮ ಕೈಗೊಳ್ಳುತ್ತೇವೆ ಎಂದು ಮಾಹಿತಿ ನೀಡಿದರು.

    ಆಗಸ್ಟ್ 21ರಂದು ಆಲಮಟ್ಟಿ ಡ್ಯಾಂಗೆ ಮುಖ್ಯಮಂತ್ರಿಗಳು ಭೇಟಿ ನೀಡಿ ಕೃಷ್ಣೆಗೆ ಬಾಗಿನ ಅರ್ಪಿಸಿದ್ದರು. ಸಿಎಂ ಆಗಮನ ಹಿನ್ನೆಲೆ ಆಲಮಟ್ಟಿ ಆಣೆಕಟ್ಟಿ ವಧುವಿನಂತೆ ಕಂಗೊಳಿಸುತ್ತಿತ್ತು. ಇದನ್ನೂ ಓದಿ: 1ರಿಂದ 8ನೇ ತರಗತಿ ಶಾಲೆಗಳ ಆರಂಭ – ಆ 30 ರಂದು ಸಿಎಂ ನೇತೃತ್ವದಲ್ಲಿ ಸಭೆ

  • ಆಲಮಟ್ಟಿ ಡ್ಯಾಂ ಭರ್ತಿ: ರೈತರ ಮೊಗದಲ್ಲಿ ಸಂತಸ

    ಆಲಮಟ್ಟಿ ಡ್ಯಾಂ ಭರ್ತಿ: ರೈತರ ಮೊಗದಲ್ಲಿ ಸಂತಸ

    ವಿಜಯಪುರ: ಉತ್ತರ ಕರ್ನಾಟಕದ ಜೀವ ನದಿ ಕೃಷ್ಣೆ ತುಂಬಿ ಹರಿಯುತ್ತಿದೆ. ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಲಾಲ್‍ಬಹದ್ದೂರ್ ಶಾಸ್ತ್ರಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ.

    ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಜಲಾಶಯ ತುಂಬಿದ್ದು, ಜನರಲ್ಲಿ ಹರ್ಷ ತಂದಿದೆ. ಗರಿಷ್ಠ 519.60 ಮೀಟರ್ ಎತ್ತರದ ಡ್ಯಾಂನಲ್ಲಿ 519.60 ಮೀಟರ್ ನೀರು ಸಂಗ್ರಹವಾಗಿದೆ.

    ಇನ್ನು ಒಳ ಹರಿವು 35,672 ಕ್ಯೂಸೆಕ್ ಇದ್ದು, 12 ಕ್ರೆಸ್ಟ್ ಗೇಟ್‍ಗಳಿಂದ 35,672 ಕ್ಯೂಸೆಕ್ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ. ಜಿಲ್ಲೆಯಲ್ಲಿ ಮಳೆ ಇಲ್ಲದಿದ್ದರೂ ಜಲಾಶಯ ಭರ್ತಿಯಾಗಿದ್ದು, ರೈತರಲ್ಲಿ ಮತ್ತು ಜನರಲ್ಲಿ ಕೊಂಚ ಸಂತಸ ಮೂಡಿಸಿದೆ.

    ಕ್ಯೂಸೆಕ್ ಟಿಎಂಸಿ ಎಂದರೆ ಎಷ್ಟು?
    ಕ್ಯೂಸೆಕ್ ಎಂಬುದು cubic foot per second ಹೃಸ್ವರೂಪ. ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯೂಸೆಕ್ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ. 11,524 ಕ್ಯೂಸೆಕ್ ನೀರು 24 ಗಂಟೆಯ ಕಾಲ ನಿರಂತರ ಹರಿದರೆ ಒಂದು ಟಿಎಂಸಿ ಎಂದು ಕರೆಯಲಾಗುತ್ತದೆ. 10 ಸಾವಿರ ಕ್ಯೂಸೆಕ್ ನೀರು 24 ಗಂಟೆ ನಿರಂತರ ಹರಿದರೆ 0.864 ಟಿಎಂಸಿ ಅಡಿ ಆಗುತ್ತದೆ. 35.87 ಅಡಿ ಅಳದಷ್ಟು ನೀರನ್ನು ಒಂದು ಚದರ ಮೈಲಿ ಪ್ರದೇಶದಲ್ಲಿ ಸಂಗ್ರಹಿಸಿದರೆ ಒಂದು ಟಿಎಂಸಿ ಅಡಿ ಆಗುತ್ತದೆ.