Tag: ಆಲಿಯಾ

  • ಬಹಿರಂಗ ಪತ್ರ ಬರೆದು ಮತ್ತೆ ಗಂಭೀರ ಆರೋಪ ಮಾಡಿದ ನಟ ನವಾಜುದ್ದೀನ್ ಪತ್ನಿ

    ಬಹಿರಂಗ ಪತ್ರ ಬರೆದು ಮತ್ತೆ ಗಂಭೀರ ಆರೋಪ ಮಾಡಿದ ನಟ ನವಾಜುದ್ದೀನ್ ಪತ್ನಿ

    ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ (Nawazuddin Siddiqui) ಮತ್ತು ಅವರ ಪತ್ನಿ ಆಲಿಯಾ (Alia)  ಜಗಳ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ. ಒಬ್ಬರಿಗೊಬ್ಬರು ಆರೋಪ ಪ್ರತ್ಯಾರೋಪಗಳನ್ನು ಮಾಡುತ್ತಿದ್ದವರು, ಇದೀಗ ಆ ಜಗಳದಲ್ಲಿ ತಮ್ಮ ಅಪ್ರಾಪ್ತ ಮಗಳನ್ನೂ ಎಳೆದು ತಂದಿದ್ದಾರೆ. ನವಾಜುದ್ದೀನ್ ಪತ್ನಿ ಆಲಿಯಾ ಬರೆದ ಬಹಿರಂಗ ಪತ್ರದಲ್ಲಿ ಸಿದ್ದಿಕಿ ಮ್ಯಾನೇಜರ್ ತಮ್ಮ ಪುಟ್ಟ ಮಗಳ ಜೊತೆ ಕೆಟ್ಟದಾಗಿ ನಡೆದುಕೊಂಡ ಎಂದು ಹೇಳಿಕೊಂಡಿದ್ದಾರೆ.

    ನವಾಜುದ್ದೀನ್ ಸಿದ್ದಿಕಿ ಮತ್ತು ಪತ್ನಿ ಆಲಿಯಾ ಸದ್ಯ ದೂರ ದೂರವಿದ್ದಾರೆ. ಡಿವೋರ್ಸ್ (Divorced) ಕೂಡ ಆಗಿದೆ ಎಂದು ಹೇಳಲಾಗುತ್ತಿದೆ. ಮಕ್ಕಳು ಯಾರ ಜೊತೆ ಇರಬೇಕು ಎನ್ನುವುದರ ಬಗ್ಗೆ ಕೋರ್ಟಿನಲ್ಲಿ ನ್ಯಾಯ ತೀರ್ಮಾನ ಆಗಬೇಕಿದೆಯಂತೆ. ಹಾಗಾಗಿ ಮಕ್ಕಳು ತನ್ನೊಂದಿಗೆ ಇರಬೇಕು ಎನ್ನುವುದು ಆಲಿಯಾ ವಾದ. ಆದರೆ, ಅದಕ್ಕೆ ನವಾಜುದ್ದೀನ್ ಒಪ್ಪುತ್ತಿಲ್ಲ. ಈ ವಿಚಾರವಾಗಿ ಆಲಿಯಾ ಗಂಭೀರ ಆರೋಪ ಮಾಡಿದ್ದು, ನವಾಜುದ್ದೀನ್ ಅಪಾಯಕಾರಿ ತಂದೆ, ಬೇಜವಾಬ್ದಾರಿ ಮನುಷ್ಯ. ಅವರ ಮ್ಯಾನೇಜರ್ ಕೂಡ ಸರಿಯಿಲ್ಲ’ ಎಂದು ಆರೋಪ ಮಾಡಿದ್ದಾರೆ.

    ಪತ್ನಿಯ ಯಾವ ಮಾತಿಗೂ ಈವರೆಗೂ ಪ್ರತಿಕ್ರಿಯಿಸದ ನವಾಜುದ್ದೀನ್, ಇದೇ ಮೊದಲ ಬಾರಿಗೆ ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತು ಸುದೀರ್ಘವಾಗಿ ಬರೆದುಕೊಂಡಿದ್ದಾರೆ. ಅಸಲಿಯಾಗಿ ಆಲಿಯಾ ನನ್ನ ಪತ್ನಿಯಲ್ಲ, ಆಕೆ ಡಿವೋರ್ಸ್ ತಗೆದುಕೊಂಡಿದ್ದಾಳೆ. ಆದರೆ, ಆಕೆ ಈಗ ಕೇವಲ ನನ್ನ ಮಕ್ಕಳ ತಾಯಿಯಷ್ಟೇ ಎಂದು ಬರೆದುಕೊಂಡಿದ್ದಾರೆ. ತಿಂಗಳಿಗೆ ಸರಾಸರಿ ಹತ್ತು ಲಕ್ಷ ರೂಪಾಯಿ ಕೊಟ್ಟಿದ್ದೇನೆ. ದುಡ್ಡಿನ ದಾಹಕ್ಕೆ ಆಲಿಯಾ ಆರೋಪಿಸುತ್ತಿದ್ದಾಳೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಬರ್ತ್‌ಡೇ ಸಂಭ್ರಮದ ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್

    ಇನ್ಸ್ಟಾಗ್ರಾಮ್ ಮೂಲಕ ಸಂಸಾರದ ಅನೇಕ ವಿಷಯಗಳನ್ನೂ ಹಂಚಿಕೊಂಡಿರುವ ನವಾಜುದ್ದೀನ್, ‘ಆಲಿಯಾ ಸಿನಿಮಾ ಮಾಡಲು ಕೋಟಿ ಕೋಟಿ ಕಳೆದುಕೊಂಡದ್ದೇನೆ. ಮಕ್ಕಳೊಂದಿಗೆ ಆಕೆ ಚೆನ್ನಾಗಿರಲಿ ಎನ್ನುವ ಕಾರಣಕ್ಕಾಗಿ ದುಬಾರಿ ಫ್ಲ್ಯಾಟ್ ಕೊಡಿಸಿದ್ದೇನೆ. ಅಲ್ಲದೇ, ಮಕ್ಕಳಿಗಾಗಿ ದುಬೈನಲ್ಲೂ ಅಪಾರ್ಟ್ಮೆಂಟ್ ನೀಡಿದ್ದೇನೆ. ಅಲ್ಲಿ ಅವಳೂ ಇದ್ದಳು. ಇಷ್ಟೆಲ್ಲ ಮಾಡಿದರೂ, ನನ್ನ ಮೇಲೆ ಆರೋಪ ಮಾಡಿದ್ದಾಳೆ’ ಎಂದು ಬರೆದುಕೊಂಡಿದ್ದಾರೆ.

    ಆಲಿಯಾ ಮಾಧ್ಯಮಗಳ ಮುಂದೆ ತಮ್ಮ ಮಾನ ಹರಾಜು ಮಾಡುತ್ತಿರುವ ಕುರಿತಾಗಿಯೂ ಅವರು ಹೇಳಿಕೊಂಡಿದ್ದು, ತಮ್ಮ ಭಾವನೆಗಳ ಜೊತೆ ಅವರು ಆಟವಾಡುತ್ತಿದ್ದಾರೆ ಎಂದು ದೂರಿದ್ದಾರೆ. ಏಕಪಕ್ಷೀಯ ರೀತಿಯ ವಿಡಿಯೋಗಳನ್ನು ಹಾಕುತ್ತಿರುವವರ ಕುರಿತಾಗಿಯೂ ಅವರು ಮಾತನಾಡಿದ್ದಾರೆ. ಮಕ್ಕಳಿಗಾಗಿ ಇವೆಲ್ಲವನ್ನೂ ಸಹಿಸಿಕೊಳ್ಳುತ್ತಿರುವುದಾಗಿ ನವಾಜುದ್ದೀನ್ ಹೇಳಿಕೊಂಡಿದ್ದಾರೆ.

  • ನವಾಜುದ್ದೀನ್ ಸಿದ್ದಿಕಿ ಪರ ಬ್ಯಾಟಿಂಗ್ ಮಾಡಿದ ಕಂಗನಾ ರಣಾವತ್

    ನವಾಜುದ್ದೀನ್ ಸಿದ್ದಿಕಿ ಪರ ಬ್ಯಾಟಿಂಗ್ ಮಾಡಿದ ಕಂಗನಾ ರಣಾವತ್

    ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ (Nawazuddin Siddiqui) ಮತ್ತು ಇವರ ಹೆಂಡತಿಯ ಜಗಳ ನಾನಾ ರೂಪ ಪಡೆದುಕೊಳ್ಳುತ್ತಿದೆ. ಒಬ್ಬರಿಗೊಬ್ಬರು ಆರೋಪ ಪ್ರತ್ಯಾರೋಪಗಳನ್ನು ಮಾಡುತ್ತಿದ್ದಾರೆ. ಮೊನ್ನೆಯಷ್ಟೇ ಹೆಂಡತಿಯ ವಿರುದ್ಧ ಹಲವು ಪೋಸ್ಟ್ ಗಳನ್ನು ಸಿದ್ದಿಕಿ ಹಾಕಿದ್ದರು. ಹಲವು ದಿನಗಳ ನಂತರ ಮೌನ ಮುರಿದಿದ್ದರು. ನವಾಜುದ್ದೀನ್ ಹಲವು ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದಂತೆಯೇ ನಟಿ ಕಂಗನಾ ರಣಾವತ್ (Kangana Ranaut) ಪ್ರಕರಣದಲ್ಲಿ ಪ್ರವೇಶ ಮಾಡಿದ್ದಾರೆ. ಮೌನ ಯಾವತ್ತು ನೋವನ್ನುಂಟು ಮಾಡುತ್ತಿದೆ. ಎಲ್ಲವನ್ನೂ ಹಂಚಿಕೊಂಡಿದ್ದೀರಿ. ನಿಮ್ಮೊಂದಿಗೆ ನಾನಿದ್ದೇನೆ ಎಂದು ಹೇಳಿದ್ದಾರೆ.

    ನವಾಜುದ್ದೀನ್ ಸಿದ್ದಿಕಿ ಹಾಗೂ ಪತ್ನಿ ಆಲಿಯಾ (Alia) ನಡುವಿನ ಜಗಳ ಅಕ್ಷರಶಃ ಆಡಿಕೊಳ್ಳುವಂತಾಗಿದೆ. ನವಾಜುದ್ದೀ ನ್ ಮೇಲೆ ಪತ್ನಿ ಆಲಿಯಾ ಅನೇಕ ರೋಪಗಳನ್ನು ಮಾಡಿದ್ದರು. ಅತ್ತೆಯ ಕಿರುಕುಳ ಸೇರಿದಂತೆ, ತನಗೆ ಅನ್ನ ನೀರು ಕೊಡದೇ ಕೂಡಿ ಹಾಕಲಾಗಿತ್ತು ಎಂದೆಲ್ಲ ಹೇಳಿದ್ದರು. ತಮ್ಮಿಂದ ಮಕ್ಕಳನ್ನು ಕಿತ್ತುಕೊಳ್ಳುವ ಪ್ರಯತ್ನ ಮಾಡಲಾಗುತ್ತಿದೆ ಎಂದೂ ಅವರು ಆರೋಪಿಸಿದ್ದರು. ಇದನ್ನೂ ಓದಿ:ಬರ್ತ್‌ಡೇ ಬಗ್ಗೆ ಅಪ್‌ಡೇಟ್ ನೀಡಿದ ರಾಧಿಕಾ ಪಂಡಿತ್

    ಪತ್ನಿಯ ಯಾವ ಮಾತಿಗೂ ಈವರೆಗೂ ಪ್ರತಿಕ್ರಿಯಿಸದ ನವಾಜುದ್ದೀನ್, ಇದೇ ಮೊದಲ ಬಾರಿಗೆ ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತು ಸುದೀರ್ಘವಾಗಿ ಬರೆದುಕೊಂಡಿದ್ದಾರೆ. ಅಸಲಿಯಾಗಿ ಆಲಿಯಾ ನನ್ನ ಪತ್ನಿಯಲ್ಲ, ಆಕೆ ಡಿವೋರ್ಸ್ ತಗೆದುಕೊಂಡಿದ್ದಾಳೆ. ಆದರೆ, ಆಕೆ ಈಗ ಕೇವಲ ನನ್ನ ಮಕ್ಕಳ ತಾಯಿಯಷ್ಟೇ ಎಂದು ಬರೆದುಕೊಂಡಿದ್ದಾರೆ. ತಿಂಗಳಿಗೆ ಸರಾಸರಿ ಹತ್ತು ಲಕ್ಷ ರೂಪಾಯಿ ಕೊಟ್ಟಿದ್ದೇನೆ. ದುಡ್ಡಿನ ದಾಹಕ್ಕೆ ಆಲಿಯಾ ಆರೋಪಿಸುತ್ತಿದ್ದಾಳೆ ಎಂದು ಹೇಳಿಕೊಂಡಿದ್ದಾರೆ.

    ಇನ್ಸ್ಟಾಗ್ರಾಮ್ ಮೂಲಕ ಸಂಸಾರದ ಅನೇಕ ವಿಷಯಗಳನ್ನೂ ಹಂಚಿಕೊಂಡಿರುವ ನವಾಜುದ್ದೀನ್, ‘ಆಲಿಯಾ ಸಿನಿಮಾ ಮಾಡಲು ಕೋಟಿ ಕೋಟಿ ಕಳೆದುಕೊಂಡದ್ದೇನೆ. ಮಕ್ಕಳೊಂದಿಗೆ ಆಕೆ ಚೆನ್ನಾಗಿರಲಿ ಎನ್ನುವ ಕಾರಣಕ್ಕಾಗಿ ದುಬಾರಿ ಫ್ಲ್ಯಾಟ್ ಕೊಡಿಸಿದ್ದೇನೆ. ಅಲ್ಲದೇ, ಮಕ್ಕಳಿಗಾಗಿ ದುಬೈನಲ್ಲೂ ಅಪಾರ್ಟ್ಮೆಂಟ್ ನೀಡಿದ್ದೇನೆ. ಅಲ್ಲಿ ಅವಳೂ ಇದ್ದಳು. ಇಷ್ಟೆಲ್ಲ ಮಾಡಿದರೂ, ನನ್ನ ಮೇಲೆ ಆರೋಪ ಮಾಡಿದ್ದಾಳೆ’ ಎಂದು ಬರೆದುಕೊಂಡಿದ್ದಾರೆ.

    ಆಲಿಯಾ ಮಾಧ್ಯಮಗಳ ಮುಂದೆ ತಮ್ಮ ಮಾನ ಹರಾಜು ಮಾಡುತ್ತಿರುವ ಕುರಿತಾಗಿಯೂ ಅವರು ಹೇಳಿಕೊಂಡಿದ್ದು, ತಮ್ಮ ಭಾವನೆಗಳ ಜೊತೆ ಅವರು ಆಟವಾಡುತ್ತಿದ್ದಾರೆ ಎಂದು ದೂರಿದ್ದಾರೆ. ಏಕಪಕ್ಷೀಯ ರೀತಿಯ ವಿಡಿಯೋಗಳನ್ನು ಹಾಕುತ್ತಿರುವವರ ಕುರಿತಾಗಿಯೂ ಅವರು ಮಾತನಾಡಿದ್ದಾರೆ. ಮಕ್ಕಳಿಗಾಗಿ ಇವೆಲ್ಲವನ್ನೂ ಸಹಿಸಿಕೊಳ್ಳುತ್ತಿರುವುದಾಗಿ ನವಾಜುದ್ದೀನ್ ಹೇಳಿಕೊಂಡಿದ್ದಾರೆ.

  • ಆಲಿಯಾ ನನ್ನ ಪತ್ನಿಯಲ್ಲ, ನನ್ನ ಮಕ್ಕಳ ತಾಯಿ ಅಷ್ಟೆ: ನಟ ನವಾಜುದ್ದೀನ್ ಸಿದ್ದಿಕಿ

    ಆಲಿಯಾ ನನ್ನ ಪತ್ನಿಯಲ್ಲ, ನನ್ನ ಮಕ್ಕಳ ತಾಯಿ ಅಷ್ಟೆ: ನಟ ನವಾಜುದ್ದೀನ್ ಸಿದ್ದಿಕಿ

    ಬಾಲಿವುಡ್ ನ ಪ್ರತಿಭಾವಂತ ನಟ ನವಾಜುದ್ದೀನ್ ಸಿದ್ದಿಕಿ (Nawazuddin Siddiqui) ಹಾಗೂ ಪತ್ನಿ ಆಲಿಯಾ (Alia) ನಡುವಿನ ಜಗಳ ಅಕ್ಷರಶಃ ಆಡಿಕೊಳ್ಳುವಂತಾಗಿದೆ. ನವಾಜುದ್ದೀ ನ್ ಮೇಲೆ ಪತ್ನಿ ಆಲಿಯಾ ಅನೇಕ ರೋಪಗಳನ್ನು ಮಾಡಿದ್ದರು. ಅತ್ತೆಯ ಕಿರುಕುಳ ಸೇರಿದಂತೆ, ತನಗೆ ಅನ್ನ ನೀರು ಕೊಡದೇ ಕೂಡಿ ಹಾಕಲಾಗಿತ್ತು ಎಂದೆಲ್ಲ ಹೇಳಿದ್ದರು. ತಮ್ಮಿಂದ ಮಕ್ಕಳನ್ನು ಕಿತ್ತುಕೊಳ್ಳುವ ಪ್ರಯತ್ನ ಮಾಡಲಾಗುತ್ತಿದೆ ಎಂದೂ ಅವರು ಆರೋಪಿಸಿದ್ದರು.

    ಪತ್ನಿಯ ಯಾವ ಮಾತಿಗೂ ಈವರೆಗೂ ಪ್ರತಿಕ್ರಿಯಿಸದ ನವಾಜುದ್ದೀನ್, ಇದೇ ಮೊದಲ ಬಾರಿಗೆ ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತು ಸುದೀರ್ಘವಾಗಿ ಬರೆದುಕೊಂಡಿದ್ದಾರೆ. ಅಸಲಿಯಾಗಿ ಆಲಿಯಾ ನನ್ನ ಪತ್ನಿಯಲ್ಲ, ಆಕೆ ಡಿವೋರ್ಸ್ (Divorced) ತಗೆದುಕೊಂಡಿದ್ದಾಳೆ. ಆದರೆ, ಆಕೆ ಈಗ ಕೇವಲ ನನ್ನ ಮಕ್ಕಳ ತಾಯಿಯಷ್ಟೇ ಎಂದು ಬರೆದುಕೊಂಡಿದ್ದಾರೆ. ತಿಂಗಳಿಗೆ ಸರಾಸರಿ ಹತ್ತು ಲಕ್ಷ ರೂಪಾಯಿ ಕೊಟ್ಟಿದ್ದೇನೆ. ದುಡ್ಡಿನ ದಾಹಕ್ಕೆ ಆಲಿಯಾ ಆರೋಪಿಸುತ್ತಿದ್ದಾಳೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಬ್ಯಾಕ್‌ಲೆಸ್ ಫೋಟೋ ಶೇರ್‌, ಇಂಟರ್‌ನೆಟ್‌ಗೆ ಬೆಂಕಿ ಹಚ್ಚಿದ `ಸಲಾರ್’ ನಟಿ

    ಇನ್ಸ್ಟಾಗ್ರಾಮ್ ಮೂಲಕ ಸಂಸಾರದ ಅನೇಕ ವಿಷಯಗಳನ್ನೂ ಹಂಚಿಕೊಂಡಿರುವ ನವಾಜುದ್ದೀನ್, ‘ಆಲಿಯಾ ಸಿನಿಮಾ ಮಾಡಲು ಕೋಟಿ ಕೋಟಿ ಕಳೆದುಕೊಂಡದ್ದೇನೆ. ಮಕ್ಕಳೊಂದಿಗೆ ಆಕೆ ಚೆನ್ನಾಗಿರಲಿ ಎನ್ನುವ ಕಾರಣಕ್ಕಾಗಿ ದುಬಾರಿ ಫ್ಲ್ಯಾಟ್ ಕೊಡಿಸಿದ್ದೇನೆ. ಅಲ್ಲದೇ, ಮಕ್ಕಳಿಗಾಗಿ ದುಬೈನಲ್ಲೂ (Dubai) ಅಪಾರ್ಟ್ಮೆಂಟ್ ನೀಡಿದ್ದೇನೆ. ಅಲ್ಲಿ ಅವಳೂ ಇದ್ದಳು. ಇಷ್ಟೆಲ್ಲ ಮಾಡಿದರೂ, ನನ್ನ ಮೇಲೆ ಆರೋಪ ಮಾಡಿದ್ದಾಳೆ’ ಎಂದು ಬರೆದುಕೊಂಡಿದ್ದಾರೆ.

    ಆಲಿಯಾ ಮಾಧ್ಯಮಗಳ ಮುಂದೆ ತಮ್ಮ ಮಾನ ಹರಾಜು ಮಾಡುತ್ತಿರುವ ಕುರಿತಾಗಿಯೂ ಅವರು ಹೇಳಿಕೊಂಡಿದ್ದು, ತಮ್ಮ ಭಾವನೆಗಳ ಜೊತೆ ಅವರು ಆಟವಾಡುತ್ತಿದ್ದಾರೆ ಎಂದು ದೂರಿದ್ದಾರೆ. ಏಕಪಕ್ಷೀಯ ರೀತಿಯ ವಿಡಿಯೋಗಳನ್ನು ಹಾಕುತ್ತಿರುವವರ ಕುರಿತಾಗಿಯೂ ಅವರು ಮಾತನಾಡಿದ್ದಾರೆ. ಮಕ್ಕಳಿಗಾಗಿ ಇವೆಲ್ಲವನ್ನೂ ಸಹಿಸಿಕೊಳ್ಳುತ್ತಿರುವುದಾಗಿ ನವಾಜುದ್ದೀನ್ ಹೇಳಿಕೊಂಡಿದ್ದಾರೆ.

  • ನನ್ನ ಮತ್ತು ಮಕ್ಕಳನ್ನು ಬೀದಿಗೆ ತಳ್ಳಿದ: ನವಾಜುದ್ದೀನ್ ವಿರುದ್ಧ ಪತ್ನಿ ಕಣ್ಣೀರು

    ನನ್ನ ಮತ್ತು ಮಕ್ಕಳನ್ನು ಬೀದಿಗೆ ತಳ್ಳಿದ: ನವಾಜುದ್ದೀನ್ ವಿರುದ್ಧ ಪತ್ನಿ ಕಣ್ಣೀರು

    ಬಾಲಿವುಡ್ (Bollywood)  ನಟ ನವಾಜುದ್ದೀನ್ ಸಿದ್ದಿಕಿ (Nawazuddin Siddiqui) ಸಂಸಾರದ ಸಮಸ್ಯೆ ಬೀದಿಯಲ್ಲಿ ರಂಪಾಟವಾಗುತ್ತಿದೆ. ನಟನ ವಿರುದ್ಧ ಪತ್ನಿ ಆಲಿಯಾ (Wife Aaliya) ಸಾಲು ಸಾಲು ಆರೋಪ ಮಾಡಿದ್ದಾರೆ. ನವಾಜುದ್ದೀನ್‌ನಿಂದ ಬೀದಿಗೆ ಬಂದಿರೋದಾಗಿ ಪತ್ನಿ ವೀಡಿಯೋ ಮೂಲಕ ಅಳಲು ತೋಡಿಕೊಂಡಿದ್ದಾರೆ.

    ನಟ-ನಟಿಯರ ಬದುಕು ಅಭಿಮಾನಿಗಳಿಗೆ ನಿದರ್ಶನವಾಗಬೇಕು. ಆದರೆ ಅವರೇ ಬದುಕೇ ಇದೀಗ ಮೂರಾಬಟ್ಟೆ ಆಗಿದೆ. ನಟ ನವಾಜುದ್ದೀನ್ ಸಿದ್ದಿಕಿ ದಾಂಪತ್ಯ ಕಲಹ ಅಕ್ಷರಶಃ ಬೀದಿಗೆ ಬಂದಿದೆ. ನವಾಜುದ್ದೀನ್ ಪತ್ನಿ ಆಲಿಯಾ ಗಂಭೀರ ಆರೋಪಗಳನ್ನು ಮಾಡುತ್ತಿದ್ದಾರೆ. ಇದೀಗ ಬೀದಿಯಲ್ಲಿ ನಿಂತು ವಿಡಿಯೋ ಮಾಡಿ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ.

    ಕಳೆದ ಕೆಲವು ತಿಂಗಳಿಂದ ಅಲಿಯಾ ಪತಿ ಮತ್ತು ಅವರ ಕುಟುಂಬದ ವಿಚಾರ ಬೀದಿ ರಂಪಾಟವಾಗಿದೆ. ಇದೀಗ ತನ್ನನ್ನು ಮತ್ತು ಮಕ್ಕಳನ್ನು ಬೀದಿಗೆ ಹಾಕಿದ್ದಾನೆ ಎಂದು ವಿಡಿಯೋ ಮೂಲಕ ನಟನ ಪತ್ನಿ ಬಹಿರಂಗಪಡಿಸಿದ್ದಾರೆ. ಕಳೆದ ವಾರ ಆಲಿಯಾ ಮತ್ತು ಇಬ್ಬರು ಮಕ್ಕಳಾದ ಶೋರಾ ಮತ್ತು ಯಾನಿ ಅವರೊಂದಿಗೆ ನವಾಜುದ್ದೀನ್ ಅವರ ಅಂಧೇರಿ ಬಂಗಲೆಯಲ್ಲಿ ಉಳಿದುಕೊಂಡಿರುವುದಾಗಿ ಹೇಳಿದ್ದರು. ಅಲ್ಲಿ ಯಾವುದೇ ಸೌಲಭ್ಯವಿಲ್ಲ, ಸ್ನಾನ ಮಾಡಲು ಬಿಡುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದರು. ಇದೀಗ ಮಕ್ಕಳನ್ನು ಮನೆಯಿಂದ ಹೊರಹಾಕಲಾಗಿದೆ ಎಂದು ಆರೋಪಿಸಿ ವಿಡಿಯೋ ಮಾಡಿದ್ದಾರೆ.

     

    View this post on Instagram

     

    A post shared by Aaliya Siddiqui (@aaliyanawazuddin)

    ತನ್ನ ಬಂಗಲೆ ಪ್ರವೇಶಿಸದಂತೆ ನವಾಜುದ್ದೀನ್ ಬಾಡಿಗಾರ್ಡ್ ನಿಯೋಜಿಸಿದ್ದಾರೆ ಎಂದು ಹೇಳಿದ್ದಾರೆ. ಇಬ್ಬರು ಮಕ್ಕಳೊಂದಿಗೆ ನವಾಜುದ್ದೀನ್ ಮನೆ ಮುಂದೆ ರಸ್ತೆಯಲ್ಲಿ ನಿಂತಿದ್ದಾರೆ. ಮಗ ಯಾನಿಯನ್ನು ಹತ್ತಿರದಲ್ಲೇ ಪಕ್ಕದಲ್ಲೇ ನಿಲ್ಲಿಸಿಕೊಂಡಿದ್ದಾರೆ ಮಗಳು ಶೋರಾ ಜೋರಾಗಿ ಅಳುತ್ತಿದ್ದಾಳೆ. ಇಬ್ಬರೂ ಮಕ್ಕಳನ್ನು ಸಹ ಬಂಗಲೆಯಿಂದ ಹೊರಹಾಕಿದ್ದಾರೆ. ಮನೆಯೊಳಗೆ ಪ್ರವೇಶಿಸಲು ಬಿಡುತ್ತಿಲ್ಲ ಎಂದು ವಿಡಿಯೋದಲ್ಲಿ ಹೇಳಿದ್ದಾರೆ. ನನ್ನ ಬಳಿ ಕೇವಲ 81 ರೂಪಾಯಿ ಇದೆ. ನಾವು ಎಲ್ಲಿಯೂ ಹೋಗಿಲ್ಲ ಎಂದಿದ್ದಾರೆ. ಎಲ್ಲಿಗೆ ಹೋಗಬೇಕು, ಮುಂದೆ ಎನು ಎಂಬುದು ಗೊತ್ತಿಲ್ಲ. ನವಾಜ್ ಅವರು ಯಾಕೆ ಹೀಗೆ ವರ್ತಿಸುತ್ತಿದ್ದಾರೆ ಎಂಬುದು ತಿಳಿದಿಲ್ಲ. ಆದರೆ ಅವರು ತೀರಾ ಕೆಳಮಟ್ಟಕ್ಕೆ ಇಳಿದಿದ್ದಾರೆ ಎಂದು ಆಲಿಯಾ ಹೇಳಿದ್ದಾರೆ.

  • ನಟ ನವಾಜುದ್ದೀನ್ ಸಿದ್ದಿಕಿ ವಿರುದ್ಧ ರೇಪ್ ಕೇಸ್ ದಾಖಲಿಸಿದ ಪತ್ನಿ

    ನಟ ನವಾಜುದ್ದೀನ್ ಸಿದ್ದಿಕಿ ವಿರುದ್ಧ ರೇಪ್ ಕೇಸ್ ದಾಖಲಿಸಿದ ಪತ್ನಿ

    ಬಾಲಿವುಡ್ ಖ್ಯಾತ ನಟ ನವಾಜುದ್ದೀನ್ ಸಿದ್ದಿಕಿ (Nawazuddin Siddiqui) ಮತ್ತು ಪತ್ನಿ ಆಲಿಯಾ (Alia) ನಡುವಿನ ಗಲಾಟೆ ಹೊಸದೇನೂ ಅಲ್ಲ. ಆ ಜಗಳಕ್ಕೆ ಇದೀಗ ಹೊಸ ತಿರುವು ಸಿಕ್ಕಿದ್ದು, ಸ್ವತಃ ಗಂಡನ ವಿರುದ್ಧವೇ ನಟನ ಪತ್ನಿ ಆಲಿಯಾ ರೇಪ್ (Rape) ಕೇಸ್ ದಾಖಲಿಸಿದ್ದಾರೆ. ಈ ಕುರಿತು ಅವರು ಸಾಮಾಜಿಕ ಜಾಲತಾಣದಲ್ಲಿ ಹಲವು ವಿಚಾರಗಳನ್ನೂ ಹಂಚಿಕೊಂಡಿದ್ದಾರೆ. ತಮ್ಮ ಹಿಂದಿನ ದಿನಗಳನ್ನು ನೆನಪಿಸಿಕೊಂಡು ಕಣ್ಣೀರು ಹಾಕಿದ್ದಾರೆ.

    ನವಾಜುದ್ದೀನ್ ಸಿದ್ದಿಕಿ ಕುಟುಂಬ ತಮ್ಮ ಮೇಲೆ ಸತತವಾಗಿ ಹಲ್ಲೆ ಮಾಡಿದೆ. ಊಟ, ನೀರು ಕೊಡದೇ ಹಿಂಸಿಸಿದೆ ಎಂದು ಈ ಹಿಂದೆ ಮಾಧ್ಯಮಗಳ ಜೊತೆ ತಮ್ಮ ನೋವುಗಳನ್ನು ಹೇಳಿಕೊಂಡಿದ್ದರು ಆಲಿಯಾ. ಇದೀಗ ತಮ್ಮ ಮೇಲೆ ನವಾಜ್ ಅತ್ಯಾಚಾರ ಮಾಡಿದ್ದಾರೆ ಎಂದು ಅವರು ಪೊಲೀಸ್ ದೂರು ದಾಖಲಿಸಿದ್ದಾರೆ. ತಮ್ಮನ್ನು ಮನೆಯಿಂದ ಆಚೆ ಹಾಕಲು ಏನೆಲ್ಲ ತಂತ್ರಗಳನ್ನು ಅವರು ಹೂಡಿದ್ದರು ಎಂದು ಬಹಿರಂಗವಾಗಿಯೇ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ನಾನೇನು ಖಾಸಗಿ ಭಾಗಗಳನ್ನ ತೋರಿಸುತ್ತಿಲ್ಲ; ನೀವೇಕೆ ವರಿ ಮಾಡ್ತೀರಿ – ನೆಟ್ಟಿಗರ ವಿರುದ್ಧ ಸಿಡಿದ ಉರ್ಫಿ

    ತಮ್ಮ ಮಕ್ಕಳನ್ನು ನವಾಜುದ್ದೀನ್ ಕರೆದುಕೊಂಡು ಹೋಗಲು ಪ್ರಯತ್ನಿಸುತ್ತಿದ್ದಾರೆ. ಸಮಾಜದ ಮುಂದೆ ತಾವು ಮಹಾನ್ ವ್ಯಕ್ತಿ ಎಂದು ತೋರಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಅತಿ ಹಿಂಸೆಯನ್ನೂ ನನಗೆ ನೀಡಿದ್ದಾರೆ. ಹಾಗಾಗಿ ನಾನು ವರ್ಸೋವಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ. ಯಾವುದೇ ಕಾರಣಕ್ಕೂ ನನ್ನ ಮಕ್ಕಳನ್ನು ಅವನಿಗೆ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ ಎಂದು ಅವರು ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

    ಈಗಾಗಲೇ ತಮ್ಮ ಮಕ್ಕಳನ್ನು ತಮಗೆ ಕೊಡಬೇಕು ಎಂದು ನವಾಜುದ್ದೀನ್ ಕೋರ್ಟ್ ಮೊರೆ ಹೋಗಿದ್ದಾರೆ. ಈ ಕುರಿತು ಆಲಿಯಾ ಮಾತನಾಡಿದ್ದು, ಹುಟ್ಟಿದಾಗಿಂದ ಈವರೆಗೂ ಮಕ್ಕಳ ಬಗ್ಗೆ ಕಾಳಜಿ ತೋರಿಸದೇ ಇರುವವನು, ಈಗೇಕೆ ಇಷ್ಟೊಂದು ಪ್ರೀತಿ ಬಂದಿದೆ ಎಂದು ಅರ್ಥವಾಗುತ್ತಿಲ್ಲ. ನನ್ನಿಂದ ಯಾವುದೇ ಕಾರಣಕ್ಕೂ ಮಕ್ಕಳನ್ನು ದೂರ ಮಾಡುವುದಕ್ಕೆ ಆಗುವುದಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ.

  • ಆಲಿಯಾ ಭಟ್, ರಣ್‌ಬೀರ್‌ಗೆ ವಿಭಿನ್ನ ರೀತಿಯಲ್ಲಿ ಶುಭಕೋರಿದ ಕಾಂಡೋಮ್ ಕಂಪನಿ

    ಆಲಿಯಾ ಭಟ್, ರಣ್‌ಬೀರ್‌ಗೆ ವಿಭಿನ್ನ ರೀತಿಯಲ್ಲಿ ಶುಭಕೋರಿದ ಕಾಂಡೋಮ್ ಕಂಪನಿ

    ನಿನ್ನೆಯಷ್ಟೇ ತಾನು ಪ್ರೆಗ್ನೆಂಟ್ ಆಗಿರುವ ವಿಚಾರವನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದ ಆಲಿಯಾ ಭಟ್ ಗೆ ಡುರೆಕ್ಸ್ ಕಾಂಡೋಮ್ ಕಂಪನಿ ವಿಚಿತ್ರ ರೀತಿಯಲ್ಲಿ ಹಾರೈಸಿದೆ. ಆಲಿಯಾ ಭಟ್ ಮತ್ತು ರಣ್‌ಬೀರ್‌ ಕಪೂರ್ ದಂಪತಿಗೆ ಫನ್ನಿಯಾಗಿಯೇ ಶುಭಾಶಯ ಕೋರಿದೆ. ಕೋಟ್ಯಂತರ ಜನರು ಇವರಿಗೆ ವಿಶ್ ಮಾಡಿದ್ದರೂ, ಕಾಂಡೋಮ್ ಕಂಪನಿಯ ಶುಭಾಶಯ ಮಾತ್ರ ಸಖತ್ ವೈರಲ್ ಆಗಿದೆ. ಅಲ್ಲದೇ ಕಂಪೆನಿಗೂ ಕೂಡ ಒಳ್ಳೆದಾಗಲಿ ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ.

     ರಣ್‌ಬೀರ್‌ ನಟನೆಯ ‘ಏ ದಿಲ್ ಹೇ ಮುಷ್ಕಿಲ್’ ಚಿತ್ರದ ಪಾಪ್ಯುಲರ್ ಹಾಡಿನ ಸಾಲಾದ ಚನ್ನ ಮರೆಯಾ ಹಾಡಿನ ಸಾಲನ್ನೇ ಬಳಸಿಕೊಂಡು ಕಾಂಡೋಮ್ ಕಂಪನಿ ‘ಮೆಹಫಿಲ್ ಮೇ ತೇರಿ, ಹಮ್ ತೋ ಕ್ಲೀಯರ್ಲಿ ನಹಿ ಥೆ’ ಎಂದಿದೆ. ಅಂದರೆ, ನಿಮ್ಮ ಖುಷಿಯ ಕ್ಷಣದಲ್ಲಿ ನಾವಂತೂ ಖಂಡಿತ ಇರಲಿಲ್ಲ’ ಎಂದು ಕಾಲೆಳೆದಿದೆ. ಅಲ್ಲದೇ, ಮನೆಗೆ ಬರುತ್ತಿರುವ ಹೊಸ ಅತಿಥಿಗೂ ಅದು ಶುಭಾಶಯ ತಿಳಿಸಿದೆ. ಇದನ್ನೂ ಓದಿ:ಆ್ಯಸಿಡ್ ಸಂತ್ರಸ್ತೆಗೆ ನಟ ಕಿಚ್ಚ ಸುದೀಪ್ ನೋಡುವಾಸೆ : ನೋವಿನ ನಡುವೆಯೂ ನಾಲ್ಕು ಬಾರಿ ಸುದೀಪ್ ಹೆಸರು ಹೇಳಿದ ಯುವತಿ

    ಕಾಂಡೋಮ್ ಕಂಪೆನಿ ಶುಭಾಶಯ ಮಾತ್ರವಲ್ಲ, ಹೆಚ್ಚಿನ ಸಂಖ್ಯೆಯಲ್ಲಿ ಮೀಮ್ಸ್ ಗಳು ಕೂಡ ಹರಿದಾಡಿದವು. ಬಾಲಿವುಡ್ ನ ಬಹುತೇಕ ನಟ ನಟಿಯರು ಮತ್ತು ನಿರ್ದೇಶಕರು ಈ ಜೋಡಿಗೆ ಶುಭಾಶಯ ಕೋರಿದ್ದಾರೆ. ಅದರಲ್ಲೂ ಕರಣ್ ಜೋಹಾರ್, ಬೇಬಿಗೊಂದು ಬೇಬಿ ಎಂದು ಪಂಚ್ ಲೈನ್ ಮೂಲಕ ಹಾರೈಸಿದ್ದಾರೆ.

    Live Tv

  • ಆಲಿಯಾ ಭಟ್ -ರಣ್‌ಬೀರ್ ಕಪೂರ್ ಫಸ್ಟ್ ಲವ್ ಶುರುವಾಗಿದ್ದು ಹೇಗೆ.?

    ಆಲಿಯಾ ಭಟ್ -ರಣ್‌ಬೀರ್ ಕಪೂರ್ ಫಸ್ಟ್ ಲವ್ ಶುರುವಾಗಿದ್ದು ಹೇಗೆ.?

    ಬಾಲಿವುಡ್ ಅಂಗಳದ `ಲವ್ ಬರ್ಡ್ಸ್’ ಆಲಿಯಾ ಭಟ್ ಮತ್ತು ರಣ್‌ಬೀರ್ ಕಪೂರ್ ಇತ್ತೀಚೆಗಷ್ಟೇ ಹಸೆಮಣೆ ಏರಿದ್ದರು. ಈಗ ಈ ಜೋಡಿಯ ಕುರಿತು ಅಚ್ಚರಿಯ ವಿಚಾರದ ಕುರಿತು ಆಲಿಯಾ ಮಾತನಾಡಿದ್ದಾರೆ. ರಣ್‌ಬೀರ್ ಜೊತೆಗಿನ ತಮ್ಮ ಮೊದಲ ಭೇಟಿಯ ಕುರಿತು ಸಂದರ್ಶನವೊಂದರಲ್ಲಿ ಆಲಿಯಾ ತಿಳಿಸಿದ್ದಾರೆ.

    ಕರಣ್ ಜೋಹರ್ ನಿರ್ದೇಶನದ `ಸ್ಟುಡೆಂಟ್ ಆಫ್ ದಿ ಇಯರ್’ ಚಿತ್ರದ ಮೂಲಕ ಬಾಲಿವುಡ್‌ಗೆ ಪರಿಚಿತರಾದ ರಾಧೆ ಆಲಿಯಾ ಭಟ್ ಇದೀಗ ಚಿತ್ರರಂಗಕ್ಕೆ ಬಂದು ಒಂದು ದಶಕ ಕಳೆದಿದೆ. 2 ಸ್ಟೇಟ್ಸ್, ಹೈವೆ, ಡಿಯರ್ ಜಿಂದಗಿ, ಆರ್‌ಆರ್‌ಆರ್, ಗಂಗೂಬಾಯಿ ಕಾಥಿಯಾವಾಡಿ, ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡ್ರು. ಇದೀಗ ಹಾಲಿವುಡ್ ರಂಗದಲ್ಲೂ ಗುರುತಿಸಿಕೊಳ್ಳಲು ಸಜ್ಜಾಗಿದ್ದಾರೆ. ಇತ್ತೀಚೆಗಷ್ಟೇ ರಣ್‌ಬೀರ್ ಮತ್ತು ಆಲಿಯಾ ಹಸೆಮಣೆ ಏರಿದ್ದರು. ಸಂದರ್ಶನವೊಂದರಲ್ಲಿ ತಮ್ಮ ಮತ್ತು ರಣ್‌ಬೀರ್ ಭೇಟಿ ಹೇಗೆ ಆಯ್ತು ಎಂಬುದನ್ನ ರಿವೀಲ್ ಮಾಡಿದ್ದಾರೆ. ಇದನ್ನೂ ಓದಿ:ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರನಿಗಾಗಿ ಒಂದಾದ ಸ್ಯಾಂಡಲ್ ವುಡ್ ಸ್ಟಾರ್ಸ್

    ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ರಣ್‌ಬೀರ್ ನಟನೆಯ `ಬ್ಲ್ಯಾಂಕ್‌ʼ ಚಿತ್ರದ ಸೆಟ್‌ನಲ್ಲಿ ಆಲಿಯಾ ಮೊದಲ ಭೇಟಿಯಾಗಿದ್ದು, ಆಲಿಯಾಗಿನ್ನು 11 ವರ್ಷವಾಗಿತ್ತು. ರಣ್‌ಬೀರ್ ಜತೆ ಮಿನಿ ಫೋಟೋಶೂಟ್ ಮಾಡಿದ್ದು, ಅಲ್ಲಿ ಆತನ ಹೆಗಲ ಮೇಲೆ ತಲೆ ಹಾಕಿದ್ದೇನೆ ಎಂದು ಆಲಿಯಾ ತಿಳಿಸಿದ್ದಾರೆ. ಆ ಸಮಯದಲ್ಲಿಯೇ ರಣ್‌ಬೀರ್ ನೀವು ಫ್ಲರ್ಟಿಂಗ್ ಮಾಡುತ್ತಿದ್ದೀರಿ ಎಂದು ಸಂಜಯ್ ಈಗಲೂ ಹೇಳುತ್ತಾರೆ. ಆದರೆ ಆ ಸಮಯದಲ್ಲಿ ಫ್ಲರ್ಟಿಂಗ್ ಎಂದರೆ ಎನು ಎಂದು ನನಗೆ ತಿಳಿದಿರಲಿಲ್ಲ ಎಂದು ಹೇಳಿಕೊಂಡಿದ್ದಾರೆ. ಸದ್ಯ ಈ ಜೋಡಿ `ಬ್ರಹ್ಮಾಸ್ತ್ರ’ ಚಿತ್ರದ ಪ್ರಚಾದ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ.

    Live Tv

  • ಕೊನೆ ಕ್ಷಣದಲ್ಲಿ ಹಾಲ್ ಟಿಕೆಟ್ ಪಡೆದು ಪರೀಕ್ಷಾ ಕೇಂದ್ರಕ್ಕೆ ಹಾಜರಾದ  ಹಿಜಬ್‌ ಹೋರಾಟಗಾರ್ತಿಯರು

    ಕೊನೆ ಕ್ಷಣದಲ್ಲಿ ಹಾಲ್ ಟಿಕೆಟ್ ಪಡೆದು ಪರೀಕ್ಷಾ ಕೇಂದ್ರಕ್ಕೆ ಹಾಜರಾದ ಹಿಜಬ್‌ ಹೋರಾಟಗಾರ್ತಿಯರು

    ಉಡುಪಿ: ರಾಜ್ಯಾದ್ಯಂತ ಇಂದಿನಿಂದ ದ್ವಿತಿಯ ಪಿಯುಸಿ ವಾಣಿಜ್ಯ ವಿಭಾಗದ ಪರೀಕ್ಷೆ ಆರಂಭವಾಗಿದ್ದು, ಉಡುಪಿಯ ಹಿಜಬ್‌ ಹೋರಾಟಗಾರ್ತಿಯರಾದ ಆಲಿಯಾ ಅಸಾದಿ ಮತ್ತು ರೇಷಂ ಹಾಲ್‌ ಟಿಕೆಟ್‌ ಪಡೆದಿದ್ದಾರೆ.

    ಮಹಿಳಾ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿಯರಾದ ಅಲ್ಮಾಸ್ ಎ ಹೆಚ್, ಹಜ್ರಾ ಶಿಫಾ, ಅಲಿಯಾ ಅಸಾದಿ, ಅಲಿಯಾ ಬಾನು ಮತ್ತು ರೇಷಂ ತರಗತಿಯಲ್ಲಿ ಹಿಜಬ್ ಧರಿಸಲು ಅನುಮತಿ ಕೋರಿ ಪ್ರತಿಭಟಿಸಿದ್ದರು. ಆರು ಮಂದಿ ಹಿಜಬ್ ಹೋರಾಟಗಾರ್ತಿಯರ ಪೈಕಿ ಇಬ್ಬರು ಪ್ರಥಮ ಪಿಯುಸಿ ಹಾಗೂ ಇನ್ನುಳಿದ ನಾಲ್ವರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾಗಿದ್ದಾರೆ.

    ಇಂದು ದ್ವಿತೀಯ ಪಿಯುಸಿಯ ಕಾಮರ್ಸ್ ವಿಭಾಗದ ಪರೀಕ್ಷೆ ನಡೆದಿದ್ದು, ನಾಲ್ವರ ಪೈಕಿ ಇಬ್ಬರಿಗೆ ಪರೀಕ್ಷೆ ಇತ್ತು. ಇಂದು ಅಲಿಯಾ ಅಸಾದಿ ಮತ್ತು ರೇಷಂ ಪರೀಕ್ಷೆ ಇತ್ತು.ಇಂದು ಬೆಳಗ್ಗೆ ಕೊನೆ ಕ್ಷಣದಲ್ಲಿ ಕಾಲೇಜಿಗೆ ಆಗಮಿಸಿದ ಆಲಿಯಾ, ರೇಷಂ ಹಾಲ್ ಟಿಕೆಟ್ ಪಡೆದಿದ್ದಾರೆ. ಇದನ್ನೂ ಓದಿ: ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದ ಮುಸ್ಕಾನ್ ಸೆಮಿಸ್ಟರ್ ಪರೀಕ್ಷೆಗೆ ಗೈರು

    ಕಾಮರ್ಸ್ ವಿಭಾಗದ ಪರೀಕ್ಷೆ ಕೇಂದ್ರ ಉಡುಪಿ ವಿದ್ಯೋದಯ ಕಾಲೇಜಿನಲ್ಲಿದೆ. ಕಾಲೇಜಿನ ಒಳಗಡೆ ಪರೀಕ್ಷೆ ಬರೆಯುವಾಗ ಮಾತ್ರ ಹಿಜಬ್ ತೆಗೆಯಲು ಆದೇಶವಿದೆ. ಹೀಗಾಗಿ ಹಲವಾರು ಮುಸ್ಲಿಮ್ ವಿದ್ಯಾರ್ಥಿನಿಯರು ಕೇಂದ್ರಕ್ಕೆ ಬುರ್ಕಾ, ಹಿಜಬ್ ಧರಿಸಿಕೊಂಡು ಆಗಮಿಸಿದ್ದಾರೆ. ಸದ್ಯ ಬಂದಿರುವ ಮಾಹಿತಿ ಪ್ರಕಾರ ಆಲಿಯಾ, ರೇಷಂ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಿದ್ದಾರೆ. ಪರೀಕ್ಷೆ ಬರೆಯುತ್ತಾರಾ ಇಲ್ಲವೋ ಎನ್ನುವುದು ತಿಳಿದು ಬಂದಿಲ್ಲ.

  • ರಣ್‌ಬೀರ್ -ಆಲಿಯಾ ರಿಸೆಪ್ಷನ್‌ಗೆ ಬಚ್ಚನ್ ಕುಟುಂಬಕ್ಕೆ ಆಹ್ವಾನವಿರಲಿಲ್ಲವೇಕೆ?

    ರಣ್‌ಬೀರ್ -ಆಲಿಯಾ ರಿಸೆಪ್ಷನ್‌ಗೆ ಬಚ್ಚನ್ ಕುಟುಂಬಕ್ಕೆ ಆಹ್ವಾನವಿರಲಿಲ್ಲವೇಕೆ?

    ಬಾಲಿವುಡ್ ಗಲ್ಲಿ ಗಲ್ಲಿಯಲ್ಲೂ ಈಗ ಒಂದೇ ಸುದ್ದಿ, ರಣ್‌ಬೀರ್ ಆಲಿಯಾ ಮದುವೆ ವಿಚಾರ. ಏಪ್ರಿಲ್ 14ಕ್ಕೆ ರಣ್‌ಬೀರ್ ಮತ್ತು ಆಲಿಯಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈಗ ಇಬ್ಬರು ಸ್ಟಾರ್‌ಗಳು ಮದುವೆಯ ಬಳಿಕ ಒಪ್ಪಿಕೊಂಡಿದ್ದ ಚಿತ್ರಗಳತ್ತ ಬ್ಯುಸಿಯಾಗಿದ್ದಾರೆ. ಆದರೆ ಈಗ ಬಿಟೌನ್‌ನಲ್ಲಿ ಹೊಸ ವಿಚಾರವೊಂದು ಸಿಕ್ಕಾಪಟ್ಟೆ ಚರ್ಚೆಯಾಗ್ತಿದೆ. ರಣ್‌ಬೀರ್ ಮತ್ತು ಆಲಿಯಾ ರಿಸೆಪ್ಷನ್‌ನಲ್ಲಿ ಬಚ್ಚನ್ ಕುಟುಂಬಕ್ಕೆ ಯಾಕೆ ಆಹ್ವಾನವಿರಲಿಲ್ಲ ಅಂತಾ ಭಾರೀ ಚರ್ಚೆ ಆಗುತ್ತಿದೆ.

    ರಣ್‌ಬೀರ್ ಮತ್ತು ಆಲಿಯಾ ಪ್ರೀತಿಸಿ, ಹಿರಿಯರ ಸಮ್ಮತಿಯ ಮೇರೆಗೆ ಕಳೆದ ವಾರವಷ್ಟೇ ಹಸೆಮಣೆ ಏರಿದ್ದರು. ಮದುವೆಯಲ್ಲಿ ಕುಟುಂಬಸ್ಥರು ಆಪ್ತರಿಗಷ್ಟೇ ಆಹ್ವಾನವಿತ್ತು. ನಂತರ ಏಪ್ರಿಲ್ 16ರಂದು ನಡೆದ ರಿಸೆಪಕ್ಷನ್‌ನಲ್ಲಿ ಹಿಂದಿ ಚಿತ್ರರಂಗದ ಗಣ್ಯರಿಗೆ, ಸೆಲೆಬ್ರೆಟಿಗಳಿಗೆ ಆಹ್ವಾನ ನೀಡಲಾಗಿತ್ತು. ಆದರೆ ಬಚ್ಚನ್ ಕುಟುಂಬಕ್ಕೆಯೇಕೆ ಆಹ್ವಾನವಿರಲಿಲ್ಲ. ಬಿಗ್‌ಬಿ ಮಗಳು ಶ್ವೇತಾ ಬಚ್ಚನ್ ರಣ್‌ಬೀರ್ ಕಪೂರ್ ಅವರ ಸಂಬಂಧಿಯಾಗಿದ್ದು, ಅವರಿಗೆ ಇನ್‌ವೈಟ್ ಮಾಡಿದ್ದರೆ, ಉಳಿದ ಕುಟುಂಬದ ಸದಸ್ಯರಿಗೆ ಕರೆಯದೇ ಇರೋದು ಅಚ್ಚರಿ ಮೂಡಿಸಿದೆ.

    ಬಚ್ಚನ್ ಕುಟುಂಬಕ್ಕೆ ಕರೆಯದೇ ಇರುವುದು ಅಚ್ಚರಿ ಮೂಡಿಸಿದ್ದರೆ, ಇನ್ನೊಂದ್ ಕಡೆ `ಸಾವರಿಯಾ’ ಚಿತ್ರದ ಮೂಲಕ ರಣ್‌ಬೀರ್‌ ಕಪೂರ್ ಜರ್ನಿ ಶುರು ಮಾಡಿದ್ದರು. ಈ ಚಿತ್ರದ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರು ಕೂಡ ರಿಸೆಪ್ಷನ್‌ನಲ್ಲಿ ಗೈರಾಗಿದ್ದರು. ಇತ್ತೀಚಿಗೆ ನಟಿ ಆಲಿಯಾ ಕೂಡ `ಗಂಗೂಬಾಯಿ ಕಾಠಿಯಾವಾಡಿ’ ಚಿತ್ರದಲ್ಲಿ ನಟಿಸಿದ್ದರು. ಇದನ್ನೂ ಓದಿ:ಪಟಾಕ ಪೋರಿ ನಭಾ ಮಸ್ತ್ ಮಸ್ತ್ ಫೋಟೋಶೂಟ್

    ಒಟ್ನಲ್ಲಿ ಅಮಿತಾಭ್‌ ಬಚ್ಚನ್ ಕುಟುಂಬ ಮತ್ತು ನಿರ್ದೇಶಕ ಬನ್ಸಾಲಿ ಅವರಿಗೆ ರಣ್‌ಬೀರ್ ಮತ್ತು ಆಲಿಯಾ ರಿಸೆಪಕ್ಷನ್‌ಗೆ ಆಹ್ವಾನ ಇಲ್ಲದೇ ಇರುವುದು ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ. ಇವರಿಬ್ಬರ ನಡುವಿನ ಸ್ನೇಹ ಸಂಬಂಧದ ಬಗ್ಗೆ ಸಾಕಷ್ಟು ಕುತೂಹಲ ಹುಟ್ಟು ಹಾಕಿದೆ.‌

  • ಮನಾಲಿಗೆ ಹೊರಟ ರಣ್‌ಬೀರ್ ಕಪೂರ್ ಆದರೆ ಹನಿಮೂನ್‌ಗಾಗಿ ಅಲ್ಲ!

    ಮನಾಲಿಗೆ ಹೊರಟ ರಣ್‌ಬೀರ್ ಕಪೂರ್ ಆದರೆ ಹನಿಮೂನ್‌ಗಾಗಿ ಅಲ್ಲ!

    ಬಾಲಿವುಡ್‌ನಲ್ಲಿ ಸದ್ಯ ಸೌಂಡ್ ಮಾಡ್ತಿರೋ ಸುದ್ದಿ ಅಂದ್ರೆ ರಣ್‌ಬೀರ್ ಕಪೂರ್ ಮತ್ತು ಆಲಿಯಾ ಭಟ್ ಮದುವೆ ವಿಚಾರ. ಏಪ್ರಿಲ್ 14ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸತಿ ಪತಿಗಳಾಗಿ ಖುಷಿಯಿಂದ ಜೀವನ ನಡೆಸುತ್ತಿರೋ ನವಜೋಡಿಗೆ ಹನಿಮೂನ್‌ಗೆ ಹೋಗೋ ಪ್ಲ್ಯಾನ್ ಇಲ್ಲವಂತೆ.

    ಬಿಟೌನ್‌ನ ಕ್ಯೂಟ್ ಕಪಲ್ ಆಲಿಯಾ ರಣ್‌ಬೀರ್ ಹನಿಮೂನ್‌ಗೆ ಹೋಗೋ ಪ್ಲ್ಯಾನ್ ಇಲ್ಲವಂತೆ. ಯಾಕಂದ್ರೆ ಇಬ್ಬರಿಗೂ ಇರೋ ವರ್ಕ್ ಕಮೀಟ್ಮೆಂಟ್‌ನಿಂದ ಈಗಾಗಲೇ ಒಪ್ಪಿಕೊಂಡಿರುವ ಚಿತ್ರಗಳನ್ನ ಕೈಗೆತ್ತಿಕೊಳ್ಳಲು ಈ ಸ್ಟಾರ್ ಜೋಡಿ ನಿರ್ಧಾರ ಮಾಡಿದ್ದಾರೆ.

    ranbir alia

    ಬ್ಯಾಕ್ ಟು ವರ್ಕ್ ಟೈಮ್ ಅಂತಾ ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ `ಅನಿಮಲ್’ ಸಿನಿಮಾದ ಶೂಟಿಂಗ್‌ಗೆ ಮಾನಾಲಿಗೆ ಹೋಗಲು ರಣ್‌ಬೀರ್ ರೆಡಿಯಾಗಿದ್ದಾರೆ. ಏಪ್ರಿಲ್ 22ರಿಂದ `ಅನಿಮಲ್’ ಚಿತ್ರದ ಶೂಟಿಂಗ್ ಶುರುವಾಗಲಿದೆಯಂತೆ. ಇನ್ನೊಂದ್ ಕಡೆ ಆಲಿಯಾ ನಟನೆಯ `ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಶೂಟಿಂಗ್ ಕೂಡ ಸದ್ಯದಲ್ಲೇ ಶುರುವಾಗಲಿದೆ. ಇದನ್ನೂ ಓದಿ:RRR ಚಿತ್ರದಲ್ಲಿ ಕರ್ನಾಟಕದ ಪ್ರಕೃತಿ ರೆಡ್ಡಿ ಹಾಡಿದ ಕೊಮ್ಮ ಉಯ್ಯಾಲ ಹಾಡು ರಿಲೀಸ್

    `ಅನಿಮಲ್’ ಚಿತ್ರದ ಶೂಟಿಂಗ್ ಜತೆಗೆ ʻಲವ್ ರಂಜನ್ʼ ಚಿತ್ರದ ಕೂಡ ಇರಲಿದ್ದು, ನವಜೋಡಿ ಸದ್ಯ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅಂದ್ಹಾಗೆ `ಅನಿಮಲ್’ ಚಿತ್ರದಲ್ಲಿ ರಣ್‌ಬೀರ್‌ಗೆ ಜೋಡಿಯಾಗಿ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ನಟಿಸಲಿದ್ದಾರೆ. ಇನ್ನು ನಟ ರಣ್‌ಬೀರ್ ಮತ್ತು ಆಲಿಯಾ ವರ್ಕ್ ಕಮೀಟ್ಮೆಂಟ್ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.