ಕಲಬುರಗಿ: ಆಳಂದ (Aland) ವೋಟ್ ಚೋರಿ (Vote Theft) ಪ್ರಕರಣ ಸಂಬಂಧ ಎಸ್ಐಟಿ (SIT) ತನಿಖೆ ಚುರುಕುಗೊಂಡ ಬೆನ್ನಲ್ಲೇ ಕಲಬುರಗಿಯ (Kalaburagi) ಎರಡು ಕ್ಷೇತ್ರಗಳಲ್ಲಿ ವೋಟ್ ಚೋರಿ ನಡೆದಿದ್ಯಾ ಎಂಬ ಅನುಮಾನ ವ್ಯಕ್ತವಾಗಿದೆ.
ಕಲಬುರಗಿ ಜಿಲ್ಲೆಯ ಆಳಂದದಲ್ಲಿ ವೋಟ್ ಚೋರಿ ಪ್ರಕರಣ ಸಂಬಂಧ ಎಸ್ಐಟಿ ಅಧಿಕರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಆಳಂದ ತಾಲೂಕು ಬಿಟ್ಟು ಕಲಬುರಗಿ ಜಿಲ್ಲೆಯ ಇನ್ನೂ ಎರಡು ಕ್ಷೇತ್ರಗಳಲ್ಲಿ ಕೂಡ ವೋಟ್ ಚೋರಿ ನಡೆದಿದ್ಯಾ ಎಂಬ ಅನುಮಾನ ಶುರುವಾಗಿದೆ. ಈ ಬಗ್ಗೆ ಎಸ್ಐಟಿಗೆ ದಾಖಲೆ ಲಭ್ಯವಾಗಿದೆ. ಹೀಗಾಗಿ ಆ ಎರಡು ಕ್ಷೇತ್ರಗಳಲ್ಲಿ ತನಿಖೆ ನಡೆಸಲು ಎಸ್ಐಟಿ ಅಧಿಕಾರಿಗಳು ಸಜ್ಜಾಗಿದ್ದಾರೆ.ಇದನ್ನೂ ಓದಿ: ‘ವೋಟ್ ಚೋರಿ’ ಪ್ರಕರಣ | ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಮನೆ, ಬಾರ್ ಮೇಲೆ ಎಸ್ಐಟಿ ದಾಳಿ
ಕಲಬುರಗಿಯ ಸಿಎ ಮೂಲಕ ಡೇಟಾ ಆಪರೇಟರ್ ಅಕ್ರಂ, ಅಸ್ಲಂ ಎಂಬುವವರಿಗೆ ಹಣ ಸಂದಾಯವಾಗಿತ್ತು. ಬಳಿಕ ಸಿಎ ಮನೆ ಮೇಲೆ ದಾಳಿ ಮಾಡಿ, 2 ಲ್ಯಾಪ್ ಟಾಪ್ಗಳನ್ನು ಎಸ್ಐಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದರು. ಇದೀಗ ಲ್ಯಾಪ್ಟಾಪ್ ಸಾಕ್ಷ್ಯಗಳ ಆಧಾರದ ಮೇಲೆ ಎಸ್ಐಟಿ ಅಧಿಕಾರಿಗಳು ಮುಂದಿನ ಕಾರ್ಯಚರಣೆ ನಡೆಸಿದ್ದಾರೆ.
ಬೆಂಗಳೂರು: ಬಿಜೆಪಿ (BJP) ಅವರಿಂದ ಮತಗಳ್ಳತನ ಆಗುತ್ತಿದೆ ಎಂದು ನಾವು ಹೇಳಿದ್ವಿ. ಈಗ ಸಾರ್ವಜನಿಕವಾಗಿ ಮಾಹಿತಿ ಬರುತ್ತಿದೆ. ಒಂದು ವೋಟು ಡಿಲೀಟ್ ಮಾಡೋಕೆ 80 ರೂ. ತೆಗೆದುಕೊಂಡಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ (Priyank Kharge) ಟಾಂಗ್ ಕೊಟ್ಟಿದ್ದಾರೆ.
ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಅವರು, ಆಳಂದ ಫೈಲ್ಸ್ ಬಗ್ಗೆ ಎಸ್ಐಟಿ ತನಿಖೆ ಮುಗಿದಿಲ್ಲ, ಇನ್ನೂ 10 ದಿನ, ವಾರ ಆಗಬಹುದು. ಹಲವು ಸಾಕ್ಷಿಗಳು ಸಿಕ್ಕಿವೆ ಎನ್ನಲಾಗಿದೆ. ದಾಖಲೆ ಮುಂದಿಟ್ಟು ಚುನಾವಣಾ ಆಯೋಗವನ್ನ ಕೇಳುತ್ತೇವೆ, ದಾಖಲೆ ಕೊಟ್ಟು ಮಾತಾಡ್ತೀವಿ. ಇದು ಆಳಂದದ ಪ್ರಶ್ನೆ ಅಲ್ಲ, ಇಡೀ ವ್ಯವಸ್ಥೆಯ ಪ್ರಶ್ನೆ ಎಂದು ತಿರುಗೇಟು ನೀಡಿದ್ದಾರೆ.ಇದನ್ನೂ ಓದಿ: ಕಾಂಗ್ರೆಸ್ನಲ್ಲಿ ಜೋರಾದ ಉತ್ತರಾಧಿಕಾರಿ ಕದನ – ಯತೀಂದ್ರ ವಿರುದ್ಧ ಶಿಸ್ತುಕ್ರಮವೋ? ಸಿಎಂ ಪುತ್ರ ಅಂತ ಎಚ್ಚರಿಕೆಯೋ?
ಫ್ರೀ ಆಂಡ್ ಫೇರ್ ಎಲೆಕ್ಷನ್ ಅಂತಾರೆ, ಫ್ರೀನೂ ಇಲ್ಲ. ಫೇರ್ ಕೂಡ ಇಲ್ಲ. ಹಣ ಕೊಟ್ಟು ಕೊಂಡುಕೊಳ್ತಾರೆ ಅಂದ್ರೆ ಹೇಗೆ? ಚುನಾವಣಾ ಆಯೋಗ ಈ ಬಗ್ಗೆ ಉತ್ತರಿಸಬೇಕು ಎಂದು ಆಗ್ರಹಿಸಿದ್ದಾರೆ.
ಇನ್ನು ಸಚಿವ ಎಂ.ಬಿ.ಪಾಟೀಲ್ ಕೂಡ ಪ್ರತಿಕ್ರಿಯಿಸಿದ್ದು, ರಾಹುಲ್ ಗಾಂಧಿ ಏನು ಹೇಳಿದ್ರು? ಏನು ಆರೋಪ ಮಾಡಿದ್ರು ಎಂದು ಈಗ ಗೊತ್ತಾಗ್ತಿದೆ. ಒಂದು ವೋಟ್ ಚೋರಿಗೆ 80 ರೂಪಾಯಿ ಅಂತೆ. ಪ್ರತಿ ಸಲ ಸಾಕ್ಷಿ ಕೊಡಿ, ಸಾಕ್ಷಿ ಕೊಡಿ ಅಂತಿದ್ದರು. ಅವರಿಗೆ ಅಫಿಡವಿಟ್ ನೀವು ಕೇಳ್ತೀರಾ? ಈಗ ಬಿಜೆಪಿ ಹಾಗೂ ಎಲೆಕ್ಷನ್ ಕಮಿಷನ್ ಹೇಳಲಿ. ನವೆಂಬರ್ ಕ್ರಾಂತಿ ಅಲ್ಲ, ಈಗ ಎಲೆಕ್ಷನ್ ಕಮಿಷನ್ ಕ್ರಾಂತಿ ಎಂಧು ಟಕ್ಕರ್ ಕೊಟ್ಟಿದ್ದಾರೆ.ಇದನ್ನೂ ಓದಿ: ಆಳಂದ ವೋಟ್ ಚೋರಿ ಕೇಸಲ್ಲಿ ಯಾರೇ ಇದ್ರೂ ಸರ್ಕಾರ ಕ್ರಮ ತೆಗೆದುಕೊಳ್ಳಲಿ – ರವಿಕುಮಾರ್
* ಇಸಿಗೆ ಪ್ರಮಾಣಪತ್ರದ ಮೂಲಕ ದೂರು ಕೊಡುತ್ತಿಲ್ಲವೇಕೆ ಎಂದು ಪ್ರಶ್ನೆ
ಬೆಂಗಳೂರು: ತಮ್ಮ ಮತಗಳ್ಳತನ (Vote Theft) ಆರೋಪದ ಕುರಿತು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಚುನಾವಣಾ ಆಯೋಗಕ್ಕೆ ಪ್ರಮಾಣಪತ್ರದ ಮೂಲಕ ದೂರು ಕೊಡುತ್ತಿಲ್ಲವೇಕೆ? ಹಿಟ್ ಆಂಡ್ ರನ್ ಮಾಡುವುದೇ ಇವರ ಉದ್ದೇಶವೇ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ (CT Ravi) ಅವರು ಪ್ರಶ್ನಿಸಿದ್ದಾರೆ.
ಯಲಹಂಕದ ಸಿಂಗನಾಯಕನಹಳ್ಳಿಯ ರಮಡ ರೆಸಾರ್ಟ್ನಲ್ಲಿ ಇಂದು ಮಾಧ್ಯಮಗಳ ಜೊತೆ ಆಳಂದದಲ್ಲಿ (Alanda) ಮತದಾರರ ಪಟ್ಟಿಯಿಂದ ಹೆಸರು ತೆಗೆದ ಆರೋಪದ ಬಗ್ಗೆ ಮಾತನಾಡಿದರು. ಚುನಾವಣಾ ಆಯೋಗ ಒಂದು ಸಾಂವಿಧಾನಿಕ ಸಂಸ್ಥೆ. ಯಾವುದಾದರೂ ದೂರಿದ್ದರೆ ಅಫಿಡವಿಟ್ ಮೂಲಕ ಸಲ್ಲಿಸಲು ತಿಳಿಸಿದ್ದರು. ರಾಹುಲ್ ಗಾಂಧಿ ಅವರು 100ಕ್ಕೂ ಹೆಚ್ಚು ಚುನಾವಣೆಯ ನೇತೃತ್ವವಹಿಸಿ 8-9 ಕಡೆ ಯಶಸ್ಸು ಕಂಡಿದ್ದಾರೆ. ಸುಮಾರು ಶೇ.92ರಷ್ಟು ವೈಫಲ್ಯ ಅವರದು. ತಮ್ಮ ಚುನಾವಣಾ ವೈಫಲ್ಯವನ್ನು ಅವರು ಚುನಾವಣಾ ಆಯೋಗದ ಹೆಗಲಿಗೆ ಕಟ್ಟಲು ಹೊರಟಿದ್ದಾರಾ ಎಂದು ಆಗ್ರಹಿಸಿದರು. ಇದನ್ನೂ ಓದಿ: `ಆಳಂದ ಫೈಲ್ಸ್’ | ರಾಹುಲ್ ಗಾಂಧಿ ಆರೋಪಕ್ಕೆ ಕರ್ನಾಟಕ ಚುನಾವಣಾ ಆಯೋಗ ಹೇಳಿದ್ದೇನು?
ಅವರದ್ದು ಆಧಾರಸಹಿತ ಆರೋಪವಾಗಿದ್ದರೆ ಆಧಾರದ ಜೊತೆ ಪ್ರಮಾಣಪತ್ರದೊಂದಿಗೆ ದೂರು ಸಲ್ಲಿಸಲಿ. ಸಂವಿಧಾನ ಮತ್ತು ಸಾಂವಿಧಾನಿಕ ಸಂಸ್ಥೆ ಮೇಲೆ ನಂಬಿಕೆ ಇದ್ದರೆ, ಕಾನೂನುಬದ್ಧವಾಗಿ ದೂರು ಕೊಡಬೇಕು. ಅವರಿಗೆ ತಮ್ಮ ವೈಫಲ್ಯವನ್ನು ಬೇರೆಯವರ ತಲೆಗೆ ಕಟ್ಟುವ ದುರುದ್ದೇಶ ಇದ್ದಂತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಚುನಾವಣಾ ಆಯೋಗವು ದೆಹಲಿ, ಬೆಂಗಳೂರು ಕಚೇರಿ ಹೊಂದಿದ್ದು, ರಾಜ್ಯಮಟ್ಟದ ಆಡಳಿತದ ಮೇಲೆ ಅವಲಂಬಿತವಾಗಿದೆ. ಜಿಲ್ಲಾಧಿಕಾರಿ, ತಹಸೀಲ್ದಾರ್ ನೇತೃತ್ವ, ಕಂದಾಯ ಇನ್ಸ್ಪೆಕ್ಟರ್ ನೇತೃತ್ವ, ಬೂತ್ ಮಟ್ಟದ ಅಧಿಕಾರಿಯಾಗಿ ಬಹುತೇಕ ಶಾಲಾ ಶಿಕ್ಷಕರು, ಕಂದಾಯ ಇಲಾಖೆ, ಬಿಬಿಎಂಪಿ ನೌಕರರ ಮೇಲೆ ಅವಲಂಬಿತವಾಗಿದೆ. ಇವರ ಆರೋಪ ಯಾರ ಮೇಲೆ? ಅವರ ಮೇಲೆ ಆರೋಪವಾದರೆ ಇವರಿಗೆ ಯಾರ ಮೇಲೂ ನಂಬಿಕೆ ಇಲ್ಲ ಎಂಬುದನ್ನು ಅದು ತೋರಿಸುತ್ತದೆ ಎಂದು ಟೀಕಿಸಿದರು.
ಬೆಂಗಳೂರು: ರಾಹುಲ್ ಗಾಂಧಿ (Rahul Gandhi) ಅವರ ಮತಗಳ್ಳತನ ಆರೋಪದ ಜೊತೆಗೆ ನಾನು ದೃಢವಾಗಿ ನಿಲ್ಲುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.
ಆಳಂದ (Aland) ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ ಎಂಬ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಆರೋಪದ ಬಗ್ಗೆ ತಮ್ಮ ಎಕ್ಸ್ (X) ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ನಾನು ರಾಹುಲ್ ಗಾಂಧಿ ಅವರ ಜೊತೆ ದೃಢವಾಗಿ ನಿಲ್ಲುತ್ತೇನೆ. ಭಾರತದ ಜನ ಪಾರದರ್ಶಕತೆ, ನ್ಯಾಯಸಮ್ಮತತೆಗೆ ಅರ್ಹರು. ಆದರೆ ಮತದಾರರನ್ನು ಗುರಿಯಾಗಿಸಿಕೊಂಡು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಗುಪ್ತ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದಿದ್ದಾರೆ.ಇದನ್ನೂ ಓದಿ: EC ಮೊಬೈಲ್ ಸಂಖ್ಯೆ, ಐಪಿ ವಿಳಾಸ ನೀಡಿದ್ರೂ ಕರ್ನಾಟಕದ ಸಿಐಡಿ ಏನು ಮಾಡುತ್ತಿದೆ: ಅನುರಾಗ್ ಠಾಕೂರ್ ಪ್ರಶ್ನೆ
ಕಾಂಗ್ರೆಸ್ನ ಬಲಿಷ್ಠ ಬೂತ್ಗಳಲ್ಲಿ ಕಾನೂನುಬದ್ಧ ಮತಗಳನ್ನು ಅಳಿಸಲು ಸಾಫ್ಟ್ವೇರ್, ಹೊರಗಿನವರ ಹಸ್ತಕ್ಷೇಪ ಬಳಕೆ ಆಳಂದ ಕ್ಷೇತ್ರದ ಸಾಕ್ಷಿಗಳಿಂದ ಗೊತ್ತಾಗುತ್ತದೆ. ಇದು ಆಘಾತಕಾರಿ. ಜನರ ಧ್ವನಿಯನ್ನು ಅಡಗಿಸಲು ಉದ್ದೇಶಪೂರ್ವಕ ಮತ್ತು ಯೋಜಿತ ಪ್ರಯತ್ನವಾಗಿದೆ. ನಾವು ನಮ್ಮ ಧ್ವನಿ ಎತ್ತುವುದನ್ನ, ದಾಖಲೆಗಳನ್ನ ಬಹಿರಂಗಪಡಿಸುವುದನ್ನ ಮುಂದುವರಿಸುತ್ತೇವೆ, ವೋಟ್ ಚೋರಿ ಫ್ಯಾಕ್ಟರಿ ಎಂದು ಬರೆದುಕೊಂಡಿದ್ದಾರೆ.
I stand firmly with Shri @RahulGandhi in exposing the systematic attempts to manipulate our elections. The people of India deserve transparency and fairness, not hidden operations that target voters and undermine democracy.
ಗುರುವಾರ (ಸೆ.18) ನವದೆಹಲಿಯಲ್ಲಿ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಸುದ್ದಿಗೋಷ್ಠಿ ನಡೆಸಿ ಗಂಭೀರ ಆರೋಪ ಮಾಡಿದ್ದಾರೆ. ಆಳಂದ ಕ್ಷೇತ್ರದಲ್ಲಿ 2023ರ ಎಲೆಕ್ಷನ್ ವೇಳೆ 6018 ಮತದಾರರನ್ನ ಡಿಲೀಟ್ ಮಾಡಲು ಯತ್ನಿಸಿದ್ದರು ಎಂದು ದೂರಿದ್ದಾರೆ. ಬೇರೆ ರಾಜ್ಯಗಳ ಫೋನ್ ನಂಬರ್ ಬಳಕೆ ಮಾಡಲಾಗಿದೆ. ಕಾಂಗ್ರೆಸ್ ವೋಟ್ಗಳನ್ನೇ ಟಾರ್ಗೆಟ್ ಮಾಡಲಾಗಿದೆ. ಸೂರ್ಯಕಾಂತ್ ಹೆಸರು ಬಳಸಿ 14 ನಿಮಿಷದಲ್ಲಿ 12 ವೋಟ್ ಡಿಲೀಟ್ ಮಾಡಲಾಗಿದೆ. ಕಾಂಗ್ರೆಸ್ ಬಲವಾಗಿರುವ ಬೂತ್ಗಳನ್ನೇ ಟಾರ್ಗೆಟ್ ಮಾಡಿ ಮತಗಳ್ಳತನ ಮಾಡಲಾಗಿದೆ ಎಂದಿದ್ದಾರೆ.ಇದನ್ನೂ ಓದಿ: ಸಾಫ್ಟ್ವೇರ್ ಬಳಸಿ ಆಳಂದದಲ್ಲಿ 6018 ಮತದಾರರು ಡಿಲೀಟ್: ರಾಹುಲ್ ಗಾಂಧಿ ಬಾಂಬ್
ಬೆಂಗಳೂರು: ಆಳಂದ ಕ್ಷೇತ್ರದಲ್ಲಿ ಅಕ್ರಮ ಆಗಿರೋದು ಸತ್ಯ ಎಂದು ಸಚಿವ ಶರಣ ಪ್ರಕಾಶ್ ಪಾಟೀಲ್ (Sharana Prakash Patil) ಅವರು ರಾಹುಲ್ ಗಾಂಧಿ ಆರೋಪವನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಈ ಹಿಂದೆ ಬಿ.ಆರ್.ಪಾಟೀಲ್ ಆಳಂದದಲ್ಲಿ ಅಕ್ರಮ ಆಗಿತ್ತು ಅಂತ ಕಂಪ್ಲೇಂಟ್ ಕೊಟ್ಟಿದ್ದರು. ನಾನು, ಪ್ರಿಯಾಂಕ್ ಎಲೆಕ್ಷನ್ ಕಮೀಷನ್ಗೆ ದೂರು ಕೊಟ್ಟಿದ್ದೆವು. ವೋಟ್ ಎನ್ ರೋಲ್ ಮಾಡೋಕೆ ದೂರು ಕೊಡಲಾಗಿತ್ತು. ಅಕ್ರಮದ ಆರೋಪ ಮಾಡಿದಾಗ ಅದನ್ನ ಸ್ಟಾಪ್ ಮಾಡಿದ್ದರು. ಆದರೆ ಯಾವುದೇ ಆಕ್ಷನ್ ತೆಗೆದುಕೊಳ್ಳಲಿಲ್ಲ. ರಾಹುಲ್ ಗಾಂಧಿಯವರ ಮಾತು ಸತ್ಯವಿದೆ ಎಂದು ಹೇಳಿದ್ದಾರೆ.ಇದನ್ನೂ ಓದಿ: ಸಾಫ್ಟ್ವೇರ್ ಬಳಸಿ ಆಳಂದದಲ್ಲಿ 6018 ಮತದಾರರು ಡಿಲೀಟ್: ರಾಹುಲ್ ಗಾಂಧಿ ಬಾಂಬ್
ಗುರುವಾರ (ಸೆ.18) ನವದೆಹಲಿಯಲ್ಲಿ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಸುದ್ದಿಗೋಷ್ಠಿ ನಡೆಸಿ ಗಂಭೀರ ಆರೋಪ ಮಾಡಿದ್ದಾರೆ. ಆಳಂದ ಕ್ಷೇತ್ರದಲ್ಲಿ 2023ರ ಎಲೆಕ್ಷನ್ ವೇಳೆ 6018 ಮತದಾರರನ್ನ ಡಿಲೀಟ್ ಮಾಡಲು ಯತ್ನಿಸಿದ್ದರು ಎಂದು ದೂರಿದ್ದಾರೆ. ಬೇರೆ ರಾಜ್ಯಗಳ ಫೋನ್ ನಂಬರ್ ಬಳಕೆ ಮಾಡಲಾಗಿದೆ. ಕಾಂಗ್ರೆಸ್ ವೋಟ್ಗಳನ್ನೇ ಟಾರ್ಗೆಟ್ ಮಾಡಲಾಗಿದೆ. ಸೂರ್ಯಕಾಂತ್ ಹೆಸರು ಬಳಸಿ 14 ನಿಮಿಷದಲ್ಲಿ 12 ವೋಟ್ ಡಿಲೀಟ್ ಮಾಡಲಾಗಿದೆ. ಕಾಂಗ್ರೆಸ್ ಬಲವಾಗಿರುವ ಬೂತ್ಗಳನ್ನೇ ಟಾರ್ಗೆಟ್ ಮಾಡಿ ಮತಗಳ್ಳತನ ಮಾಡಲಾಗಿದೆ ಎಂದಿದ್ದಾರೆ.
ಕಲಬುರಗಿ: ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ಕೋರ್ಟ್ ಆರೋಪಿಗೆ ಗಲ್ಲು ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.
2023ರ ಜು.15ರಂದು ಆಳಂದ ತಾಲ್ಲೂಕಿನ ಗ್ರಾಮವೊಂದರ ಬಾಲಕಿ ಪುಸ್ತಕವೊಂದನ್ನು ತರಲು ಮತ್ತೊಂದು ಗ್ರಾಮಕ್ಕೆ ನಡೆದುಕೊಂಡು ಹೋಗುತ್ತಿದ್ದಳು. ಈ ವೇಳೆ ಅಪರಾಧಿ ಗುಂಡೇರಾವ ಬಾಲಕಿಯನ್ನು ಬಲವಂತವಾಗಿ ಕಬ್ಬಿನ ಗದ್ದೆಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದ. ಬಳಿಕ ಉಸಿರುಗಟ್ಟಿಸಿ ಸಾಯಿಸಿ, ಪಕ್ಕದ ಹೊಲದಲ್ಲಿದ್ದ ಬಾವಿಯೊಂದರಲ್ಲಿ ಶವವನ್ನು ಬೀಸಾಡಿ ಹೋಗಿದ್ದ. ಈ ಕುರಿತು ಆಳಂದ ತಾಲ್ಲೂಕಿನ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ತನಿಖಾಧಿಕಾರಿ ಭಾಸು ಚವ್ಹಾಣ ನೇತೃತ್ವದಲ್ಲಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಅವರು ಪೋಕ್ಸೊ ಕಾಯ್ದೆಯಡಿ ಆರೋಪಿಗೆ ಗಲ್ಲು ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ, ಆದೇಶ ಹೊರಡಿಸಿದ್ದಾರೆ. ಅಲ್ಲದೆ, ಕಾನೂನು ಪ್ರಾಧಿಕಾರದ ವತಿಯಿಂದ 4 ಲಕ್ಷ ರೂ. ಪರಿಹಾರವನ್ನು ಮೃತ ಬಾಲಕಿಯ ತಾಯಿಗೆ ನೀಡಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ ಬಿ.ತುಪ್ಪದ ಅವರು ವಾದ ಮಂಡಿಸಿದ್ದರು.
ಕಲಬುರಗಿ: ಕಳ್ಳರು ತಮ್ಮ ಕೈ ಚಳಕ ತೋರಿಸಿ ಒಂದೇ ರಾತ್ರಿಯಲ್ಲಿ 6 ಮನೆಗಳಿಗೆ ಕನ್ನ ಹಾಕಿ 4.87 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಕಲುಬುರಗಿಯ (Kalaburagi) ಆಳಂದ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಬುಧವಾರ ತಡರಾತ್ರಿ ಗ್ರಾಮದ ಬಸವರಾಜ ಬಿರಾದಾರ್ ಎಂಬುವವರು ಮಹಾರಾಷ್ಟ್ರದ ಸಂಬಂಧಿಕರ ಮನೆಗೆ ಹೋಗಿದ್ದರು. ಈ ವೇಳೆ ಅವರ ಮನೆಯ ಅಲ್ಮೇರಾದಲ್ಲಿದ್ದ 4.87 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಕಳವು ಮಾಡಿದ್ದಾರೆ. ಅದೇ ರೀತಿ ಬೆಂಗಳೂರಿಗೆ ವಲಸೆ ಹೋಗಿರುವ ಐದು ಮನೆಗಳ ಬೀಗ ಮುರಿದು ಚಿನ್ನಾಭರಣ ದೋಚಿದ್ದಾರೆ. ಬಳಿಕ ಮನೆಗಳಲ್ಲಿನ ಸಾಮಗ್ರಿಗಳನ್ನು ಎಲ್ಲೆಂದರಲ್ಲಿ ಎಸೆದು ಖದೀಮರು ಪರಾರಿಯಾಗಿದ್ದಾರೆ. ಇದನ್ನೂ ಓದಿ: ಕೂಡಲೇ ಶರಣಾಗಿ ಇಲ್ದಿದ್ರೆ ಕಾರ್ಯಾಚರಣೆ ಮಾಡ್ತೇವೆ- ಕಾಡಲ್ಲಿ ಅವಿತಿರುವ ನಕ್ಸಲರಿಗೆ ಪ್ರಣಬ್ ಮೊಹಂತಿ ಎಚ್ಚರಿಕೆ
ಕಲಬುರಗಿ: ವಿವಾದಿತ ಆಳಂದ ಲಾಡ್ಲೆ ಮಶಾಕ್ ದರ್ಗಾದಲ್ಲಿ (Ladle Mashak Dargah Aland) ಮುಸ್ಲಿಮರ ಪ್ರಾರ್ಥನೆಯ ಬಳಿಕ ಇದೀಗ ಶಿವಲಿಂಗ ಪೂಜೆಯನ್ನು ನೆರವೇರಿಸಲಾಗಿದೆ.
ದರ್ಗಾದಲ್ಲಿರುವ ರಾಘವ ಚೈತನ್ಯ ಶಿವಲಿಂಗಕ್ಕೆ ಶಿವರಾತ್ರಿ ನಿಮಿತ್ತ ಪೂಜೆಗೆ ನ್ಯಾಯಾಲಯ ಗ್ರೀನ್ ಸಿಗ್ನಲ್ ನೀಡಿದೆ. ಈ ಹಿನ್ನಲೆ ಇಂದು ಸಂಜೆ ಆಂದೋಲಾ ಶ್ರೀಗಳ ನೇತೃತ್ವದಲ್ಲಿ 15 ಮಂದಿ ಹಿಂದೂಗಳು ದರ್ಗಾದ ಆವರಣದಲ್ಲಿರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ್ದಾರೆ. ರುದ್ರಾಭಿಷೇಕ, ಗಣೇಶ ಪೂಜೆ, ಗಂಗಾ ಪೂಜೆ, ಸಹಸ್ರ ಬಿಲ್ವಾರ್ಚನೆ ಹಾಗೂ ಮಹಾಮಂಗಳಾರತಿ ಹೀಗೆ ಸುಮಾರು 1 ಗಂಟೆಗಳ ಕಾಲ ಶಿವಲಿಂಗಕ್ಕೆ ಪೂಜೆ ನೆರವೇರಿದೆ.
ಪೂಜೆ ಬಳಿಕ ಬಿಜೆಪಿ ಮುಖಂಡ ಹರ್ಷಾನಂದ ಗುತ್ತೇದಾರ್ ಪ್ರತಿಕ್ರಿಯಿಸಿ, ನಾವು ಸತತ ಮೂರು ವರ್ಷದಿಂದ ಸಹ ರಾಘವ ಚೈತನ್ಯ ಪೂಜೆ ಮಾಡಿದ್ದೇವೆ. ದುರಂತ ಅಂದ್ರೆ ನಮ್ಮ ಧರ್ಮದ ಶಿವಲಿಂಗ ಪೂಜೆಗೆ ನ್ಯಾಯಾಲಯಕ್ಕೆ ಹೋಗಬೇಕಾದ ಪರಿಸ್ಥಿತಿಯಿದೆ. ಹೀಗಾಗಿ ನ್ಯಾಯಾಲಯಕ್ಕೆ ನಾನು ಅಭಿನದಂನೆ ಸಲ್ಲಿಸುತ್ತೇನೆ. ನಮ್ಮ ಹೋರಾಟ ಈಗ ನಿರಂತರ ಆಗಿರುತ್ತದೆ. ಕೆಲ ಜಿಹಾದಿ ಮನಸ್ಥಿತಿ ಇರುವ ಹಿನ್ನೆಲೆ ಇಷ್ಟು ಬಂದೋಬಸ್ತ್ ಮಾಡಬೇಕಾಗುತ್ತದೆ. ರಾಘವ ಚೈತನ್ಯರ ಇತಿಹಾಸ ತೆಗೆದು ನ್ಯಾಯಾಲಯದಲ್ಲಿ ಸಲ್ಲಿಸಿ ದೇವಾಲಯ ನಿರ್ಮಾಣ ಮಾಡಲು ಅನುಮತಿಗೆ ಹೋರಾಟ ನಡೆಸುತ್ತೇವೆ ಎಂದರು. ಇದನ್ನೂ ಓದಿ: Congress 1st Lok Sabha List: ಮತ್ತೆ ವಯನಾಡಿನಿಂದಲೇ ಅದೃಷ್ಟ ಪರೀಕ್ಷೆಗಿಳಿದ ರಾಗಾ!
ಇತ್ತ ಮುಸ್ಲಿಮರಿಗೂ ಸಹ 12.30 ರಿಂದ 3.30ರವರೆಗೆ ಪ್ರಾರ್ಥನೆಗೆ ಕೋರ್ಟ್ ಅವಕಾಶ ನೀಡಿದೆ. ಹೀಗಾಗಿ ಅಹಿತಕರ ಘಟನೆ ನಡೆಯದಂತೆ ದರ್ಗಾದ ಸುತ್ತಲೂ 1500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ 12 ಮಂದಿ ಮುಸ್ಲಿಮರು ಲಾಡ್ಲೆ ಮಶಾಕ್ ದರ್ಗಾದಲ್ಲಿ ಪ್ರಾರ್ಥನೆ ಮುಗಿಸಿ ವಾಪಸ್ ಆಗಿದ್ದಾರೆ. ಪ್ರಾರ್ಥನೆ ಬಳಿಕ ದರ್ಗಾ ಕಮಿಟಿಯ ಅಧ್ಯಕ್ಷ ಮೋಯಿಜ್ ಅನ್ಸರಿ, ಮೊಹಮದ್ ಅಫಜಲ್ ಅನ್ಸಾರಿ ಪ್ರತಿಕ್ರಿಯಿಸಿ, ನಮಗೆ ಹಾಗೂ ಹಿಂದೂಗಳಿಗೆ 15 ಜನರಂತೆ ಪ್ರಾರ್ಥನೆ ಹಾಗೂ ಪೂಜೆ ಕೋರ್ಟ್ ಆದೇಶ ನೀಡಿತ್ತು. ಅದರಂತೆ ನಾವು ಇಂದು 12 ಮಂದಿ ಪ್ರಾರ್ಥನೆ ಮಾಡಿ ವಾಪಸ್ ಬಂದಿದ್ದೇವೆ. ನಾವು ಆಳಂದನಲ್ಲಿ ಹಿಂದೂ-ಮುಸ್ಲಿಮರು ಎಲ್ಲರೂ ಅಣ್ಣ-ತಮ್ಮರ ಹಾಗೆ ಇದ್ದೇವೆ. ಆದರೆ ಕೆಲವರ ರಾಜಕೀಯದಿಂದ ಗಲಾಟೆ ಆಗಿ ಇವಾಗ ಪೊಲೀಸ್ ಭದ್ರತೆ ನೀಡಬೇಕಾಗಿದೆ ಎಂದರು.
ನಾವು ಎಲ್ಲರು ಒಂದಾಗೆ ಇದ್ದೇವೆ. ಮತ್ತೆ ಒಟ್ಟಿಗೆ ಇರುತ್ತೇವೆ. ಆದರೆ ಇವಾಗ ಚುನಾವಣೆ ಬರ್ತಿದೆ, ಹಾಗಾಗಿ ಇಲ್ಲದೊಂದು ಸಮಸ್ಯೆ ಕ್ರಿಯೇಟ್ ಮಾಡ್ತಾರೆ. ಆದರೆ ಆಳಂದನಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ಇದ್ದೇವೆ ಎಂದು ಅವರು ಸ್ಪಷ್ಟಪಡಿಸಿದರು.
ಕಲಬುರಗಿ: ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬುದರ ಕುರಿತು ಚರ್ಚೆ ನಡೆಯುತ್ತಿದೆ. ಇದೀಗ ಸಿದ್ದರಾಮಯ್ಯ ಅವರ ಆಪ್ತ ಮಾಜಿ ಉಪ ಸಭಾಪತಿ ಬಿಆರ್ ಪಾಟೀಲ್ (BR Patil) ಸಿದ್ದರಾಮಯ್ಯ ಅವರಿಗಾಗಿ ಕ್ಷೇತ್ರ ತ್ಯಾಗ ಮಾಡಲು ಸಿದ್ಧ ಎನ್ನುವ ಮೂಲಕ ಆಳಂದ (Aland) ಕ್ಷೇತ್ರಕ್ಕೆ ಆಹ್ವಾನವಿಟ್ಟಿದ್ದಾರೆ.
ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಳಂದ ಮತಕ್ಷೇತ್ರದಿಂದ ಸ್ಪರ್ಧೆ ಮಾಡಿದರೆ ಅವರನ್ನು ಸಂತೋಷದಿಂದ ಸ್ವಾಗತಿಸುತ್ತೇನೆ. ಬರಿ ನಾಮೀನೇಷನ್ ಫೈಲ್ ಮಾಡಿ ಹೋದರೆ ಸಾಕು. ಅವರನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ನನ್ನದು ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಯುಗಾದಿ ಹಬ್ಬದಂದು ಮತ್ತೆ ಮುನ್ನೆಲೆಗೆ ಬಂತು ಹಲಾಲ್ ಬಾಯ್ಕಾಟ್ ಅಭಿಯಾನ
ಕಲಬುರಗಿ: ಮೊಬೈಲ್ನಲ್ಲಿ ಅಶ್ಲೀಲ ದೃಶ್ಯಗಳನ್ನು ನೋಡಿ ಪ್ರಚೋದನೆಗೊಂಡ ಅಪ್ರಾಪ್ತನೊಬ್ಬ 14 ವರ್ಷದ ಬಾಲಕಿಯನ್ನು ಅತ್ಯಾಚಾರ(Rape) ಮಾಡಿ ಹತ್ಯೆಗೈದ(Murder) ಶಾಕಿಂಗ್ ಘಟನೆ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಅಫಜಲಪುರ ತಾಲೂಕಿನ ಬಾಲಕಿ ಆಳಂದ ತಾಲೂಕಿನ ಗ್ರಾಮದಲ್ಲಿರುವ ಅತ್ತೆ ಮನೆಯಿಂದ ಶಾಲೆಗೆ ಹೋಗುತ್ತಿದ್ದಳು. ಮಂಗಳವಾರ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಬಹಿರ್ದೆಸೆಗೆ ಎಂದು ಹೊರ ಹೋಗಿದ್ದ ಬಾಲಕಿ ಸುಮಾರು ಹೊತ್ತು ಕಳೆದರೂ ಬಂದಿರಲಿಲ್ಲ. ಗಾಬರಿಗೊಂಡ ಬಾಲಕಿ ಕುಟುಂಬಸ್ಥರು, ಗ್ರಾಮಸ್ಥರು ಹುಡುಕಾಟ ನಡೆಸಿದಾಗ ಗ್ರಾಮದ ಹೊರವಲಯದ ಕಬ್ಬಿನ ಗದ್ದೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಮೈಮೇಲೆ ಎಳೆದಾಡಿ ತರಚಿದ ಗಾಯಗಳಾಗಿದ್ದು ವೇಲ್ನಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಲಾಗಿದೆ.
ಕಣ್ಣೀರಿಟ್ಟಿರುವ ಎಸ್ಪಿ ಇಶಾ ಪಂತ್, ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿತ್ತು. ಪೊಲೀಸರು ಕೂಡಲೇ ಕಾರ್ಯಾಚರಣೆ ನಡೆಸಿ 16 ವರ್ಷದ ಬಾಲಕನನ್ನು ಬಂಧಿಸಿದ್ದಾರೆ. 24 ಗಂಟೆಯ ಒಳಗಡೆ ಆರೋಪಿಯನ್ನು ಬಂಧಿಸಿದ್ದಕ್ಕೆ ಪೊಲೀಸರಿಗೆ 1 ಲಕ್ಷ ರೂ. ನಗದು ಬಹುಮಾನವನ್ನು ಘೋಷಿಸಲಾಗಿದೆ ಎಂದು ತಿಳಿಸಿದರು.
ಬಾಲಕಿಯನ್ನು ಒಂಟಿಯಾಗಿ ನೋಡಿದ ಬಾಲಕ ಅತ್ಯಾಚಾರ ನಡೆಸಿದ ನಂತರ ಕಲ್ಲಿನಿಂದ ಹೊಡೆದು ವೇಲ್ ನಿಂದ ಕತ್ತು ಹಿಸುಕಿ ಬಾಲಕ ಕೊಲೆ ಮಾಡಿದ್ದಾನೆ. ಅತ್ಯಾಚಾರ ಖಂಡಿಸಿ ಕಲಬುರಗಿ, ಆಳಂದದಲ್ಲಿ ಪ್ರತಿಭಟನೆ ನಡೆಸಿರುವ ಜನ, ಆರೋಪಿಗಳನ್ನು ಗಲ್ಲಿಗೇರಿಸಬೇಕೆಂದು ಆಗ್ರಹಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]