Tag: ಆಳಂದ

  • ಬಯಲು ಬಹಿರ್ದೆಸೆಗೆ ತೆರಳಿದ್ದ ಬಾಲಕಿಯನ್ನು ರೇಪ್‌ ಮಾಡಿ ಕೊಲೆ

    ಬಯಲು ಬಹಿರ್ದೆಸೆಗೆ ತೆರಳಿದ್ದ ಬಾಲಕಿಯನ್ನು ರೇಪ್‌ ಮಾಡಿ ಕೊಲೆ

    – ಆರೋಪಿಗಳ ಬಂಧನಕ್ಕೆ ತಂಡ ರಚನೆ

    ಕಲಬುರಗಿ: ಬಯಲು ಬಹಿರ್ದೆಸೆಗೆ ತೆರಳಿದ 14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ(Rape) ಮಾಡಿ ಕೊಲೆ(Murder) ಮಾಡಿರುವ ಅಮಾನವೀಯ ಕೃತ್ಯ ಕಲಬುರಗಿ(Kalaburagi) ಜಿಲ್ಲೆಯ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಅಫಜಲಪುರ ತಾಲೂಕಿನ ಬಾಲಕಿ ಆಳಂದ ತಾಲೂಕಿನ ಗ್ರಾಮದಲ್ಲಿರುವ ಅತ್ತೆ ಮನೆಯಿಂದ ಶಾಲೆಗೆ ಹೋಗುತ್ತಿದ್ದಳು. ಮಂಗಳವಾರ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಬಹಿರ್ದೆಸೆಗೆ ಎಂದು ಹೊರ ಹೋಗಿದ್ದ ಬಾಲಕಿ ಸುಮಾರು ಹೊತ್ತು ಕಳೆದರೂ ಬಂದಿರಲಿಲ್ಲ. ಗಾಬರಿಗೊಂಡ ಬಾಲಕಿ ಕುಟುಂಬಸ್ಥರು, ಗ್ರಾಮಸ್ಥರು ಹುಡುಕಾಟ ನಡೆಸಿದಾಗ ಗ್ರಾಮದ ಹೊರವಲಯದ ಕಬ್ಬಿನ ಗದ್ದೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಮೈಮೇಲೆ ಎಳೆದಾಡಿ ತರಚಿದ ಗಾಯಗಳಾಗಿದ್ದು ವೇಲ್‌ನಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಲಾಗಿದೆ.

    ಮೇಲ್ನೋಟಕ್ಕೆ ಕಬ್ಬಿನ ಗದ್ದೆಗೆ ಎಳೆದೊಯ್ದು ಅತ್ಯಾಚಾರವೆಸಗಿ ನಂತರ ಕೊಲೆಗೈದಿರುವ ವಿಚಾರ ಪೊಲೀಸ್ ಪ್ರಾಥಮಿಕ ತನಿಖೆಯಿಂದ ಬಯಲಾಗಿದೆ. ಇದನ್ನೂ ಓದಿ: ಹೂಡಿಕೆದಾರರಿಗೆ ‘ಕಾಂತಾರ’ ಸಿನಿಮಾದ ಉದಾಹರಣೆ ನೀಡಿದ ಕೇಂದ್ರ ಸಚಿವ ಪಿಯೂಶ್ ಗೋಯಲ್

    9ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿ ದೀಪಾವಳಿ ರಜೆಗೆ ತನ್ನ ಸ್ವಗ್ರಾಮಕ್ಕೆ ತೆರಳಿ, ನ.3 ರಿಂದ ಪರೀಕ್ಷೆ ಇರುವ ಕಾರಣ ಮಂಗಳವಾರ ಮರಳಿ ಬಂದಿದ್ದಳು. ಹೀಗೆ ಬಂದವಳು ಬಯಲು ಬಹಿರ್ದೆಸೆಗೆ ಹೋದಾಗ ದುಷ್ಕರ್ಮಿಗಳು ಅಮಾನವೀಯ ಕೃತ್ಯ ನಡೆಸಿದ್ದಾರೆ. ಸ್ಥಳಕ್ಕೆ ಕಲಬುರಗಿ ಎಸ್ಪಿ ಇಶಾ ಪಂತ್ ಸೇರಿ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ಕುರಿತು ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಾಮುಕರ ಬಂಧನಕ್ಕೆ ಬಲೆ ಬೀಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪತ್ನಿಯನ್ನ ಕೊಲೆಗೈದು, ಮೂರು ದಿನ ಶವದ ಜೊತೆಗೆ ಮಲಗಿದ್ದ ಪತಿ ಅರೆಸ್ಟ್

    ಪತ್ನಿಯನ್ನ ಕೊಲೆಗೈದು, ಮೂರು ದಿನ ಶವದ ಜೊತೆಗೆ ಮಲಗಿದ್ದ ಪತಿ ಅರೆಸ್ಟ್

    ಕಲಬುರಗಿ: ಪತಿಯೊಬ್ಬ ತನ್ನ ಪತ್ನಿಯನ್ನ ಕೊಲೆಗೈದು ಮೃತದೇಹವನ್ನು ಮಂಚದ ಕೆಳಗೆ ಮೂರು ದಿನ ಮುಚ್ಚಿಟ್ಟಿದ್ದ ಅಮಾನವೀಯ ಘಟನೆ ಆಳಂದ ತಾಲೂಕಿನಲ್ಲಿ ನಡೆದಿದೆ.

    ಆಳಂದ ತಾಲೂಕಿನ ಮಾದನಹಿಪ್ಪರಗಾ ಗ್ರಾಮದ ಸಂಗೀತಾ ಸಕ್ಕರಗಿ (35) ಕೊಲೆಯಾದ ಪತ್ನಿ. ಶ್ರೀಶೈಲ್ ಸಕ್ಕರಗಿ (45) ಕೊಲೆಗೈದ ಪಾಪಿ ಪತಿ. ಮಾದನಹಿಪ್ಪರಗಾ ಗ್ರಾಮದ ಮನೆಯಲ್ಲಿ ಶ್ರೀಶೈಲ್ ಶನಿವಾರ ಕೃತ್ಯ ಎಸಗಿದ್ದಾನೆ. ಶವ ಕೊಳೆತ ವಾಸನೆ ಬಂದಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ.

    ಶ್ರೀಶೈಲ್ 15 ವರ್ಷಗಳ ಹಿಂದೆಯೇ ಸಂಗೀತಾಳನ್ನು ಮದುವೆಯಾಗಿದ್ದರು. ಮಾದನಹಿಪ್ಪರಗಾ ಗ್ರಾಮದಲ್ಲಿ ಇಬ್ಬರು ಕೂಲಿ ಮಾಡಿಕೊಂಡು ಸಂತೋಷವಾಗಿದ್ದರು. ಮದುವೆಯಾಗಿ 15 ವರ್ಷ ಕಳೆದರೂ ಮಕ್ಕಳಾಗಲಿಲ್ಲ ಎನ್ನುವ ಕೊರಗು ದಂಪತಿಗೆ ಇತ್ತು. ಇತ್ತೀಚಗೆ ಶ್ರೀಶೈಲ್ ಅದೇ ಗ್ರಾಮದ ಮಹಿಳೆಯೊಬ್ಬಳ ಜೊತೆ ಸಂಬಂಧ ಬೆಳೆಸಿದ್ದ. ಇವರಿಬ್ಬರ ಸಂಬಂಧ ಸಂಗೀತಾಳಿಗೆ ಗೊತ್ತಿದ್ದರು ಕೂಡ ಗೊತ್ತಿಲ್ಲದಂತೆ ಇದ್ದಳು. ಅದನ್ನೇ ದುರುಪಯೋಗಪಡಿಸಿಕೊಂಡಿದ್ದ ಪಾಪಿ ಪತಿ ಶ್ರೀಶೈಲ ಪ್ರತಿನಿತ್ಯ ಮದ್ಯ ಕುಡಿದು ಮನೆಗೆ ಬಂದು ಸಂಗೀತಾಳಿಗೆ ಚಿತ್ರಹಿಂಸೆ ಕೊಡುತ್ತಿದ್ದ. ಶನಿವಾರವೂ ಕಂಠಪೂರ್ತಿ ಕುಡಿದು ಮನೆಗೆ ಬಂದಿದ್ದ ಶ್ರೀಶೈಲ್ ಹೆಂಡತಿಯೊಂದಿಗೆ ಗಲಾಟೆ ಮಾಡಲು ಶುರು ಮಾಡಿದ್ದ. ಬಳಿಕ ಜಗಳ ವಿಕೋಪಕ್ಕೆ ತೆರಳಿ ಹೆಂಡತಿಯನ್ನ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.

    ಸಂಗೀತಾಳನ್ನು ಕೊಲೆ ಮಾಡಿದ ಪಾಪಿ ಪತಿ ಆಕೆಯ ಮೃತದೇಹವನ್ನು ಮೂಟೆಕಟ್ಟಿ ತನ್ನ ಮನೆಯ ಮಂಚದ ಕೆಳಗೆ ಬಚ್ಚಿಟ್ಟಿದ್ದ. ಬಳಿಕ ಏನೂ ಆಗಿಲ್ಲ ಎನ್ನುವ ರೀತಿಯಲ್ಲಿ ಶ್ರೀಶೈಲ್ ಇದ್ದ. ದುರಂತವೆಂದರೆ ಮನೆಯಲ್ಲೇ ಪತ್ನಿಯ ಶವವನ್ನು ಇಟ್ಟು ತನ್ನದೆ ಗ್ರಾಮದಲ್ಲಿ ಸಾವನ್ನಪ್ಪಿದ್ದ ಮತ್ತೊಬ್ಬನ ಅಂತ್ಯಸಂಸ್ಕಾರಕ್ಕೆ ತೆರಳಿ ಅಂತ್ಯಸಂಸ್ಕಾರ ಮುಗಿಸಿ ವಾಪಸ್ ಮನೆಗೆ ಬಂದು ಸ್ನಾನ ಮಾಡಿದ್ದ. ಅಷ್ಟೇ ಅಲ್ಲದೆ ಆರೋಪಿಯು ತನ್ನ ಪತ್ನಿಯ ಶವದ ಜೊತೆಗೆ ಮನೆಯಲ್ಲೆ ಮೂರು ದಿನ ಮಲಗಿದ್ದ.

    ಸಂಗೀತಾ ಮೂರು ದಿನಗಳಿಂದ ಕಾಣದೆ ಇರುವುದರಿಂದ ಶ್ರೀಶೈಲ್‌ನನ್ನು ಅಕ್ಕ ಪಕ್ಕದ ಮನೆಯವರು ವಿಚಾರಿಸಿದ್ದರು. ಆದರೆ ಆರೋಪಿಯು, ಪತ್ನಿ ತವರು ಮನೆಗೆ ಹೋಗಿದ್ದಾಳೆ ಎಂದು ಕತೆ ಕಟ್ಟಿದ್ದ. ಅದಾದ ಬಳಿಕ ಮನೆಯಿಂದ ಮೃತದೇಹ ಕೊಳೆತ ವಾಸನೆ ಬರಲು ಆರಂಭಿಸಿತು. ಇದಕ್ಕೆ ಮತ್ತೊಂದು ಕತೆ ಕಟ್ಟಿದ ಶ್ರೀಶೈಲ್, ತಾನು ಮದ್ಯ ಕುಡಿದು ಮನೆಯಲ್ಲೇ ವಾಂತಿ ಮಾಡಿಕೊಂಡಿರುವುದಾಗಿ ಹೇಳಿದ್ದ. ಆರೋಪಿಯ ನಡೆಯ ಬಗ್ಗೆ ಶಂಕೆ ವ್ಯಕ್ತಪಡಿಸಿದ ಸ್ಥಳೀಯರು ಮಂಗಳವಾರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಮನೆಯಲ್ಲಿ ಪರಿಶೀಲನೆ ನಡೆಸಿದಾಗ ಸಂಗೀತಾ ಮೃತದೇಹ ಪತ್ತೆಯಾಗಿದೆ.

    ಈ ಸಂಬಂಧ ಮಾದನಹಿಪ್ಪರಗಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಶ್ರೀಶೈಲ್‌ನನ್ನ ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.

  • ಬೀದಿಗೆ ಬಂದ ಕಲಬುರಗಿಯ ಹೊಸಮಠದ ಜಗಳ

    ಬೀದಿಗೆ ಬಂದ ಕಲಬುರಗಿಯ ಹೊಸಮಠದ ಜಗಳ

    ಕಲಬುರಗಿ: ತೊಗರಿ ಕಣಜ ಕಲಬುರಗಿಯಲ್ಲಿ ಮಠದ ಪೀಠಕ್ಕಾಗಿ ದಶಕದ ಹಿಂದೆ ರಕ್ತದೋಕುಳಿ ಹರಿದಿದ್ದು ಇತಿಹಾಸ. ಇದೀಗ ಅದೇ ಸಾಲಿಗೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ನರೋಣಾ ಗ್ರಾಮದ ಹೊಸಮಠ ಇದೀಗ ಸುದ್ದಿಯಲ್ಲಿದೆ. ಅಕ್ಟೋಬರ್ 29ರಂದು ಈ ಮಠದ ಪೀಠಾಧಿಪತಿಯಾಗಲು ಶ್ರೀ ಚೆನ್ನಮಲ್ಲದೇವರು ಸಜ್ಜಾಗಿದ್ದಾರೆ.

    ಶ್ರೀ ಚೆನ್ನಮಲ್ಲದೇವರು ಪೀಠಾಧಿಪತಿ ಆಗೋದನ್ನು ಈ ಮಠದ ಮೂಲ ಮಠವಾದ ಶ್ರೀಗುರುಬಸವೇಶ್ವರ ಬ್ರಹನ್ಮಠದ ಭಕ್ತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಸ್ವಾಮೀಜಿಯ ಮೇಲೆ ಲೈಂಗಿಕ ಕಿರುಕುಳದ ಆರೋಪವಿದೆ. ಹೀಗಾಗಿ ಮಠದ ಪೀಠ ಸ್ವಿಕರಿಸಲು ಸ್ವಾಮೀಜಿಯನ್ನು ಬಿಡಲ್ಲ ಅಂತಿದ್ದಾರೆ.

    ಒಂದೆಡೆ ಚೆನ್ನಮಲ್ಲದೇವರು ಸ್ವಾಮೀಜಿಗೇ ವಿರೋಧವಿದ್ರೆ, ಇತ್ತ ನರೋಣಾ ಗ್ರಾಮದ ಜನ ಶ್ರೀಗಳ ಬೆನ್ನಿಗೆ ನಿಂತಿದ್ದಾರೆ. ಮೂಲ ಮಠದ ವಿರೋಧ ಕುರಿತು ಚೆನ್ನಮಲ ಸ್ವಾಮೀಜಿಯನ್ನು ಕೇಳಿದ್ರೆ, ನಾನೇ ಮೂಲ ಮಠದ ಸ್ವಾಮಿ ಆಗಬೇಕಿತ್ತು. ಆದರೆ ಷಡ್ಯಂತ್ರ ಮಾಡಿ ನನ್ನ ಮೇಲೆ ಇಲ್ಲ-ಸಲ್ಲದ ಆರೋಪ ಮಾಡಲಾಗುತ್ತಿದೆ. ಇದರ ಹಿಂದೆ ಇನ್ನಿತರ ಮಠಾಧೀಶರ ಕೈವಾಡವಿದೆ ಎಂದು ಶ್ರೀ ಚೆನ್ನಮಲ್ಲದೇವರು ಆರೋಪಿಸುತ್ತಾರೆ.

    ಮೂಲ ಮಠ ಮತ್ತು ಶಾಖಾ ಮಠದ ಜಗಳದಿಂದ ಇದೀಗ ಗ್ರಾಮದಲ್ಲಿ ಆತಂಕ ಮೂಡಿದೆ. ಈ ಎರಡು ಮಠಗಳ ಜಗಳ ತಾರಕಕೆರುವ ಮುನ್ನ ಜಿಲ್ಲಾಡಳಿತ ಎಚ್ಚೆತ್ತುಕೊಳ್ಳಬೇಕಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೈ ಪರ ಪ್ರಚಾರ ಮಾಡಿದ್ದಕ್ಕೆ ಬಿಜೆಪಿ ಕಾರ್ಯಕರ್ತರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

    ಕೈ ಪರ ಪ್ರಚಾರ ಮಾಡಿದ್ದಕ್ಕೆ ಬಿಜೆಪಿ ಕಾರ್ಯಕರ್ತರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

    ಕಲಬುರಗಿ: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದ ಯವಕನ ಮೇಲೆ ಬಿಜೆಪಿ ಕಾರ್ಯಕರ್ತರು ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ತಡಕಲ್ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಮಹೇಶ್ ಮದನಕರ್(22) ಎಂಬ ಯುವಕ, ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಆಳಂದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಬಿ ಆರ್ ಪಾಟೀಲ್ ಪರ ಗ್ರಾಮದಲ್ಲಿ ಪ್ರಚಾರ ಮಾಡಿದ್ದ. ಇದರಿಂದ ಕೆರಳಿದ್ದ ಬಿಜೆಪಿ ಕಾರ್ಯಕರ್ತರಾದ ರಾಜು ಹಾಗೂ ತಿಪ್ಪಣ್ಣ ಎಂಬವರ ಮಹೇಶನನ್ನು ಹುಡುಕಿಕೊಂಡು ಹೋಗಿ ಕೊಡಲಿಯಿಂದ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

    ತೀವ್ರ ರಕ್ತಸ್ರಾವದಿಂದ ಮಹೇಶ್ ಅಲ್ಲೆ ಕುಸಿದು ಬಿದ್ದಿದ್ದಾನೆ. ತಕ್ಷಣವೇ ಮಹೇಶನನ್ನು ಸ್ಥಳೀಯರು ಕಲಬುರಗಿ ಜಿಲ್ಲಾಸ್ಪತ್ರೆ ದಾಖಲಿಸಿದ್ದಾರೆ. ಈ ಘಟನೆ ಕುರಿತಂತೆ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಈ ಕುರಿತಂತೆ ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.

  • ಸಾಮಾಜಿಕ ಹೋರಾಟಗಾರ ಟಿ.ಜೆ.ಅಬ್ರಾಹಂಗೆ ಸುಪ್ರೀಂನಿಂದ 25 ಲಕ್ಷ ರೂ. ದಂಡ

    ಸಾಮಾಜಿಕ ಹೋರಾಟಗಾರ ಟಿ.ಜೆ.ಅಬ್ರಾಹಂಗೆ ಸುಪ್ರೀಂನಿಂದ 25 ಲಕ್ಷ ರೂ. ದಂಡ

    ಬೆಂಗಳೂರು: ಸಾರ್ವಜನಿಕಾ ಹಿತಾಸಕ್ತಿ ಅರ್ಜಿ(ಪಿಐಎಲ್)ಯನ್ನು ದುರ್ಬಳಕೆ ಮಾಡಿದ್ದಕ್ಕೆ ಸಾಮಾಜಿಕ ಹೋರಾಟಗಾರ ಟಿ.ಜೆ.ಅಬ್ರಾಹಂ ಅವರಿಗೆ ಸುಪ್ರೀಂ ಕೋರ್ಟ್ 25 ಲಕ್ಷ ರೂ. ದಂಡ ವಿಧಿಸಿದೆ.

    ಕಲಬುರಗಿ ಜಿಲ್ಲೆಯ ಆಳಂದದಲ್ಲಿ ಮಿನಿ ವಿಧಾನ ಸೌಧ ನಿರ್ಮಾಣ ಮಾಡುವ ಸಂಬಂಧ ಅಬ್ರಾಹಂ ಪಿಐಎಲ್ ಸಲ್ಲಿಸಿದ್ದರು. ಖಾಸಗಿಯವರು ಜಾಗ ನೀಡಿದ್ದರೂ ಸರ್ಕಾರಿ ಜಾಗದಲ್ಲಿ ಮಿನಿ ವಿಧಾನ ಸೌಧ ನಿರ್ಮಾಣ ಮಾಡಲಾಗುತ್ತಿದೆ ಎಂದು ಅಬ್ರಾಹಂ ಪಿಐಎಲ್‍ನಲ್ಲಿ ದೂರಿದ್ದರು.

    ವಿಚಾರಣೆ ನಡೆಸಿದ ನ್ಯಾ. ದೀಪಕ್ ಮಿಶ್ರಾ ನೇತೃತ್ವದ ಪೀಠ ಪಿಐಎಲ್ ದುರ್ಬಳಕೆ ಮಾಡಿದ್ದೀರಿ ಎಂದು ಅಭಿಪ್ರಾಯ ವ್ಯಕ್ತಪಡಿಸಿ 25 ಲಕ್ಷ ರೂ. ದಂಡ ವಿಧಿಸಿದೆ. ಅಷ್ಟೇ ಅಲ್ಲದೇ ಈ ದಂಡವನ್ನು ಎರಡು ವಾರದಲ್ಲಿ ಕಟ್ಟುವಂತೆ ಸೂಚಿಸಿದೆ. ಪ್ರಕರಣ ಸಂಬಂಧಪಟ್ಟಂತೆ ರಾಜ್ಯದ ಪರ ಅಡ್ವೋಕೇಟ್ ಜನರಲ್ ಮಧುಸೂದನ್ ವಾದ ಮಂಡಿಸಿದ್ದರು.

    ಏನಿದು ಪ್ರಕರಣ?: ಅಳಂದ ಪಟ್ಟಣದ ಸಮೀಪ ನಗರದ ವ್ಯಕ್ತಿಯೊಬ್ಬರು ಸರ್ವೆ ನಂ. 264 ರ ಜಾಗದಲ್ಲಿ ಮಿನಿವಿಧಾನ ಸೌಧ ನಿರ್ಮಾಣ ಮಾಡಲು ದಾನವಾಗಿ ನೀಡಿದ್ದರು. ಆದರೆ ನಗರದಿಂದ 8 ಕಿ.ಮೀ. ದೂರದಲ್ಲಿರುವ 8 ಕಿ.ಮೀ ದೂರದಲ್ಲಿ ಸೇರಿದ ಸರ್ವೆ ನಂ 696 ರಲ್ಲಿ ಸೌಧ ನಿರ್ಮಾಣ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದರು.

     

  • ನವಿಲು ರಕ್ಷಿಸಲು  ಹೋಗಿ ಮಾಜಿ ಸಚಿವ ರೇವುನಾಯಕ್ ಬೆಳಮಗಿ ಕಾರು ಸೇತುವೆಗೆ ಡಿಕ್ಕಿ

    ನವಿಲು ರಕ್ಷಿಸಲು ಹೋಗಿ ಮಾಜಿ ಸಚಿವ ರೇವುನಾಯಕ್ ಬೆಳಮಗಿ ಕಾರು ಸೇತುವೆಗೆ ಡಿಕ್ಕಿ

    ಕಲಬುರಗಿ: ಮಾಜಿ ಸಚಿವ ರೇವುನಾಯಕ್ ಬೆಳಮಗಿ ಅವರ ಕಾರು ಶನಿವಾರ ರಾತ್ರಿ ಅಪಘಾತಕೊಳ್ಳಗಾಗಿದ್ದು, ಬೆಳಮಗಿ ಅವರು ಪ್ರಾಣಾಪಯದಿಂದ ಪಾರಾಗಿದ್ದಾರೆ.

    ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ ಬಳಿ ಮಾಜಿ ಸಚಿವರ ಕಾರು ಅಪಘಾತಕ್ಕೆ ಒಳಗಾಗಿದೆ. ಕಲಬುರಗಿಯಿಂದ ಬೆಳಮಗಿ ಬರುವ ವೇಳೆಯಲ್ಲಿ ರಸ್ತೆಯಲ್ಲಿ ನವಿಲು ಬಂದಿದೆ. ನವಿಲನ್ನು ತಪ್ಪಿಸಲು ಹೋದ ಚಾಲಕ ಪಕ್ಕದ ಸೇತುವೆಗೆ ಕಾರನ್ನು ಡಿಕ್ಕಿ ಹೊಡೆಸಿದ್ದಾನೆ.

    ಬೆಳಮಗಿ ಅವರ ತಲೆ ಮತ್ತು ಬೆನ್ನಿಗೆ ಸಣ್ಣ ಪ್ರಮಾಣದ ಗಾಯಗಳಾಗಿವೆ. ಸದ್ಯ ಬೆಳಮಗಿ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರ್ಯಕರ್ತರು ಆತಂಕ ಪಡುವ ಅವಶ್ಯಕತೆಯಿಲ್ಲ. ನಾನು ಚೆನ್ನಾಗಿದ್ದೇನೆ ಎಂದು ಮಾಜಿ ಸಚಿವ ರೇವುನಾಯಕ್ ಬೆಳಮಗಿ ಹೇಳಿದ್ದಾರೆ.

    ಈ ಸಂಬಂಧ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

  • ಮಠಕ್ಕೆ ಬಂದ ಭಕ್ತೆಯನ್ನೇ ಪಟಾಯಿಸಿ ಕೈ ಕೊಟ್ಟ ಕಾಮಿ ಸ್ವಾಮೀಜಿ

    ಮಠಕ್ಕೆ ಬಂದ ಭಕ್ತೆಯನ್ನೇ ಪಟಾಯಿಸಿ ಕೈ ಕೊಟ್ಟ ಕಾಮಿ ಸ್ವಾಮೀಜಿ

    ಕಲಬುರಗಿ: ಮಠಕ್ಕೆ ಭಕ್ತೆಯಾಗಿ ಬಂದ ಭಕ್ತಳನ್ನೆ ಪಟಾಯಿಸಿ ಮದುವೆಯಾಗಿ ನಂತರ ಕೈ ಕೊಟ್ಟ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಸರಸಂಭಾ ಮಠದ ಪ್ರಕಾಶ್ ಪುರಾಣಿಕ್ ಮಹಿಳೆಯನ್ನು ವಂಚಿಸಿ ಈಗ ಅರೆಸ್ಟ್ ಆಗಿದ್ದಾನೆ.

    ಏನಿದು ಪ್ರಕರಣ?
    ಮಠಕ್ಕೆ ಬಂದ ಭಕ್ತೆಯನ್ನು ಮಠದ ಪೀಠಾಧಿಪತಿಯಾದ ಪ್ರಕಾಶ್ ಪುರಾಣಿಕ ಮುತ್ಯಾ ಯುವತಿಯನ್ನು ಪ್ರೀತಿಸಲು ಆರಂಭಿಸಿದ್ದ. ಈ ಪ್ರೀತಿ ಮದುವೆಯ ಸಂಬಂಧಕ್ಕೆ ತಿರುಗಿ 2010 ರಲ್ಲಿ ಇಬ್ಬರು ಶ್ರೀಶೈಲಕ್ಕೆ ಹೋಗಿ ಮದುವೆಯಾಗಿದ್ದರು. 7 ವರ್ಷ ಚೆನ್ನಾಗಿ ಸಂಸಾರ ನಡೆಸಿದ ಪ್ರಕಾಶ್ ಮುತ್ಯ ಇತ್ತೀಚಿಗೆ ಯುವತಿಗೇ ಕೈ ಕೊಟ್ಟು ಮೊಬೈಲ್ ಸ್ವೀಚ್ ಆಫ್ ಮಾಡಿ ಪರಾರಿಯಾಗಿದ್ದ.

    7 ವರ್ಷ ಸಂಸಾರ ಮಾಡಿದ್ರರೂ ಸ್ವಾಮೀಜಿ ಮಹಾನಂದಳಿಗೆ ಮಕ್ಕಳಾಗದಂತೆ ಔಷಧಿ ನೀಡಿದ್ದಾನೆ. ಅಷ್ಟೇ ಅಲ್ಲ ಮಹಾನಂದಳಿಗಾಗಿ ಕಲಬುರಗಿ ನಗರದಲ್ಲಿ ಕಟ್ಟಿಸಿದ ಮನೆ ಸಹ ಸ್ವಾಮೀಜಿ ಇದೀಗ ಭಕ್ತರ ಹೆಸರಿನಲ್ಲಿ ನೋಂದಾಯಿಸಿದ್ದಾನೆ. ಅಷ್ಟೇ ಅಲ್ಲದೇ ಯುವತಿಗೇ ಮನೆ ಬಿಡುವಂತೆ ರೌಡಿಗಳ ಮೂಲಕ ಹೆದರಿಸುತ್ತಿದ್ದಾನೆ. ಹೀಗಾಗಿ ಕೂಡಲೇ ಪ್ರಕಾಶ್ ಮುತ್ಯಾನ ವಿರುದ್ಧ ಕ್ರಮಕ್ಕೆ ದಲಿತ ಸಂಘಟನೆ ಆಗ್ರಹಿಸಿವೆ.

    ಈ ಕುರಿತು ಕಲಬುರಗಿ ನಗರದ ಎಂ.ಬಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಕಾಮಿ ಸ್ವಾಮಿಯನ್ನು ಬಂಧಿಸಿದ್ದಾರೆ.

     

  • ಶಾಸಕರ ಚೇಲಾಗಳ ಕಾಮದಾಟ ಪ್ರಸಾರ: ಪಬ್ಲಿಕ್ ಟಿವಿಗೆ ಬಿ.ಆರ್.ಪಾಟೀಲ್ ಧಮ್ಕಿ

    ಶಾಸಕರ ಚೇಲಾಗಳ ಕಾಮದಾಟ ಪ್ರಸಾರ: ಪಬ್ಲಿಕ್ ಟಿವಿಗೆ ಬಿ.ಆರ್.ಪಾಟೀಲ್ ಧಮ್ಕಿ

    ಕಲಬುರಗಿ: ಇಂದು ಬೆಳಗ್ಗೆ ತಮ್ಮ ಮಾಜಿ ಪಿಎ ದೇವೆಂದ್ರ ಎಂಬವರ ಕಾಮದಾಟವನ್ನು ಟಿವಿಯಲ್ಲಿ ವರದಿ ಪ್ರಸಾರ ಮಾಡಿದಕ್ಕೆ ಕೆಜಿಪಿ ಪಕ್ಷದ ಆಳಂದ ಶಾಸಕ ಬಿ.ಆರ್.ಪಾಟೀಲ್ ಪಬ್ಲಿಕ್ ಟಿವಿಗೆ ಧಮ್ಕಿ ಹಾಕಿದ್ದಾರೆ.

    ಪಬ್ಲಿಕ್ ಟಿವಿಯ ವರದಿಗಾರನಿಗೆ ಮಾನ ಮರ್ಯಾದೆ ಬಿಟ್ಟು ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ್ದಾರೆ. ನಮ್ಮ ಪಬ್ಲಿಕ್ ಟಿವಿ ವರದಿಗಾರ ಪ್ರವೀಣ್ ಜೊತೆ ಫೋನಿನಲ್ಲಿ ಮಾತನಾಡುವಾಗ ನಾನೇನು ನಿಮ್ಮ ಹೆಂಡ್ತಿ ಹಾಗೂ ಅವರ ಹೆಂಡ್ತಿಯನ್ನು ಗುತ್ತಿಗೆ ತೊಗೊಂಡಿದ್ದೀನಾ? ಬೆಳಗ್ಗೆ ಏನು ನ್ಯೂಸ್ ಮಾಡಿದಿಯಾ? ಒಂದು ಗಂಟೆಯಲ್ಲಿ ನಾನು ಆಫೀಸಿಗೆ ಬರ್ತಿನಿ. ನೀನಿರಬೇಕು ಬಂದು ನೋಡ್ತಿನಿ ಎಂದು ಅವಾಜ್ ಹಾಕಿದ್ದಾರೆ.

    ಈ ವೇಳೆ ನಮ್ಮ ಪ್ರತಿನಿಧಿ ನನ್ನ ಹತ್ತಿರ ನೀವು ಶಿಫಾರಸ್ಸು ಮಾಡಿರುವ ಲೆಟರ್ ಇದೆ. ಬೇಕಾದರೆ ನಾನು ನಿಮಗೆ ಬೇಕಾದ್ರೆ ವಾಟ್ಸಪ್ ಮಾಡುತ್ತೇನೆ ಎಂದು ಹೇಳಿದ್ದಕೆ ಅವಾಚ್ಯ ಶಬ್ಧಗಳಿಂದ ಮಾತನಾಡುವ ಮೂಲಕ ತಮ್ಮ ನೈತಿಕ ಮಟ್ಟವನ್ನು ರಾಜ್ಯದ ಜನತೆಗೆ ತೋರಿಸಿದ್ದಾರೆ.

    ಬಿ.ಆರ್.ಪಾಟೀಲ್ ಅವರ ಮಾಜಿ ಪಿಎ ದೇವೆಂದ್ರ ಬಿರದಾರ ಎಂಬವರು ಕಲಬುರಗಿ ಶಾಲೆಯೊಂದರ ಸುನಿತಾ ಶಿಕ್ಷಕಿಯ ಜೊತೆಗಿನ ಪ್ರೇಮ ಪ್ರಸಂಗವನ್ನು ಇಂದು ಬೆಳಗ್ಗೆ ವರದಿ ಮಾಡಲಾಗಿತ್ತು. ಇದರಿಂದ ಕೋಪಗೊಂಡ ಬಿ.ಆರ್.ಪಾಟೀಲ್ ಪಬ್ಲಿಕ್ ಟಿವಿಯ ವರದಿಗಾರ ಪ್ರವೀಣ್ ರೆಡ್ಡಿಯವರಿಗೆ ಅವಾಜ್ ಹಾಕಿದ್ದಾರೆ.

    ಇದನ್ನೂ ಓದಿ: ಕಲಬುರಗಿ: ಕಾಮದಾಟಕ್ಕೆ ಪ್ರಿಯಕರನನ್ನ ಶಾಲೆಗೆ ಕರೆಸಿದ ಶಿಕ್ಷಕಿ!

    https://www.youtube.com/watch?v=VFCmV6wDYS8