Tag: ಆಳ್ವಾಸ್ ಸಂಸ್ಥೆ

  • ಪ್ರಸಾದ ವಿಷ ದುರಂತ – ತಬ್ಬಲಿಯಾದ ಮೂವರು ಮಕ್ಕಳಿಗೆ ಆಳ್ವಾಸ್ ಆಸರೆ

    ಪ್ರಸಾದ ವಿಷ ದುರಂತ – ತಬ್ಬಲಿಯಾದ ಮೂವರು ಮಕ್ಕಳಿಗೆ ಆಳ್ವಾಸ್ ಆಸರೆ

    ಮಂಗಳೂರು: ಸುಳ್ವಾಡಿ ದೇವಸ್ಥಾನದಲ್ಲಿ ಪ್ರಸಾದದಲ್ಲಿ ವಿಷ ಪ್ರಾಶನ ಪ್ರಕರಣದ ದುರಂತದಲ್ಲಿ ತಂದೆ ತಾಯಿಯನ್ನು ಕಳೆದುಕೊಂಡಿರುವ ಮೂರು ಮಕ್ಕಳಿಗೆ ಆಳ್ವಾಸ್ ಸಂಸ್ಥೆ ಆಸರೆಯಾಗಲು ಮುಂದಾಗಿದೆ.

    ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆ ಮೂವರು ಮಕ್ಕಳನ್ನು ದತ್ತು ಪಡೆಯಲು ನಿರ್ಧಾರ ಮಾಡಿದ್ದು, ಮೂವರು ಮಕ್ಕಳ ವಿದ್ಯಾಭ್ಯಾಸದ ಸಂಪೂರ್ಣ ಖರ್ಚನ್ನು ಭರಿಸಲು ಆಳ್ವಾಸ್ ಸಂಸ್ಥೆ ತೀರ್ಮಾನ ಮಾಡಿದೆ. ಅಷ್ಟೇ ಅಲ್ಲದೇ ಉಚಿತ ಶಿಕ್ಷಣ ನೀಡುವುದಾಗಿ ಘೋಷಣೆ ಮಾಡಿದೆ. ಇದನ್ನೂ ಓದಿ: ಅಂದು ತಂದೆ, ಇಂದು ತಾಯಿ – ದೇವಿ ಪ್ರಸಾದದಿಂದ ಮಕ್ಕಳು ಅನಾಥರಾದ್ರು!

    ಮಾಧ್ಯಮಗಳಲ್ಲಿ ಸುಳ್ವಾಡಿ ದೇವಾಲಯ ವಿಷಪ್ರಸಾದದ ಸುದ್ದಿ ಪ್ರಸಾರವಾಗುತ್ತಿತ್ತು. ಇದನ್ನು ನೋಡಿದ ಆಳ್ವಾಸ್ ಮುಖ್ಯಸ್ಥ ಡಾ. ಮೋಹನ್ ಆಳ್ವಾ ಅವರು ಸ್ಪಂದಿಸಿದ್ದು, ದುರಂತದಿಂದ ಅನಾಥರಾಗಿರುವ ಮೂವರು ಮಕ್ಕಳನ್ನು ದತ್ತು ಪಡೆಯುತ್ತೇವೆ. ಅವರ ತಂದೆ-ತಾಯಿ ಜಾಗದಲ್ಲಿ ನಿಂತು ಅವರು ವಿದ್ಯಾಭ್ಯಾಸದ ಖರ್ಚನ್ನು ಭರಿಸುತ್ತೇವೆ. ಈಗ ಅವರು ಕಲಿಯುತ್ತಿದ್ದ ಸ್ಥಳದಿಂದ ನಮ್ಮ ಸಂಸ್ಥೆಗೆ ವರ್ಗಾವಣೆ ಮಾಡಿಸಿಕೊಳ್ಳುತ್ತೇವೆ. ಬಳಿಕ ಅವರ ವಿದ್ಯಾಭ್ಯಾಸ ಮುಗಿಸಿ, ಉದ್ಯೋಗ ಪಡೆಯುವವರೆಗೂ ನಾವು ಮೂವರ ಮಕ್ಕಳ ಜವಬ್ದಾರಿಯನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

    ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಮಾರಮ್ಮ ದೇವಾಯಲದಲ್ಲಿ ವಿಷಪ್ರಸಾದ ದುರಂತಕ್ಕೆ ಕೋಟೆಪುದೆ ಗ್ರಾಮದ ಕೃಷ್ಣ ನಾಯಕ್ ಮೃತಪಟ್ಟಿದ್ದರು. ಆದರೆ ಇಂದು ಅವರು ಪತ್ನಿ ಮೈಲಿಬಾಯಿ ಕೂಡ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈಗ ತಂದೆ-ತಾಯಿ ಇಬ್ಬರನ್ನು ಕಳೆದುಕೊಂಡಿರುವ ಮೂವರು ಮಕ್ಕಳು ಅನಾಥರಾಗಿದ್ದಾರೆ. ಕೃಷ್ಣ ನಾಯ್ಕ್ ಮತ್ತು ಮೈಲಿಬಾಯಿ ದಂಪತಿಗೆ ಹೆಣ್ಣು ಮಕ್ಕಳಿಬ್ಬರು ಮತ್ತು ಒಬ್ಬ ಮಗನಿದ್ದಾನೆ. ಇಬ್ಬರು ಹೆಣ್ಣು ಮಕ್ಕಳು ನರ್ಸಿಂಗ್ ಮಾಡುತ್ತಿದ್ದು, ಮಗ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾನೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಆರ್‍ಟಿಐ ಕಾಯ್ದೆಯಡಿ ಬಯಲಾಯ್ತು ಆಳ್ವಾಸ್ ಸಂಸ್ಥೆಯ ಸ್ಫೋಟಕ ರಹಸ್ಯ

    ಆರ್‍ಟಿಐ ಕಾಯ್ದೆಯಡಿ ಬಯಲಾಯ್ತು ಆಳ್ವಾಸ್ ಸಂಸ್ಥೆಯ ಸ್ಫೋಟಕ ರಹಸ್ಯ

    ಮಂಗಳೂರು: ರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ್ತಿ ಕಾವ್ಯ ಪೂಜಾರಿ ನಿಗೂಢ ಸಾವಿನ ಬಳಿಕ ಆಳ್ವಾಸ್ ಶಿಕ್ಷಣ ಸಂಸ್ಥೆಯ ಗ್ರಹಚಾರ ಮತ್ತಷ್ಟು ಕೆಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಆತ್ಮಹತ್ಯೆ, ಅಸಹಜ ಸಾವು ಹೊಸದೇನಲ್ಲ ಅನ್ನೋ ಮಾಹಿತಿ ಲಭ್ಯವಾಗಿದೆ.

    ಎಂಟು ವರ್ಷಗಳಲ್ಲಿ ಬರೋಬ್ಬರಿ ಹತ್ತು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಅಂತಾ ವಿದ್ಯಾರ್ಥಿ ಸಂಘಟನೆ ಎಸ್‍ಎಫ್‍ಐ ಜಿಲ್ಲಾಧ್ಯಕ್ಷ ನಿತಿನ್ ಕುತ್ತಾರ್ ಆರ್‍ಟಿಐ ಅಡಿ ಪಡೆದ ಮಾಹಿತಿಯಿಂದ ಗೊತ್ತಾಗಿದೆ. 2008ರಿಂದ 2016ರವರೆಗೆ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ 10 ವಿದ್ಯಾರ್ಥಿಗಳ ಆತ್ಮಹತ್ಯೆ ಮತ್ತು ಅಸಹಜ ಸಾವಿನ ಬಗ್ಗೆ ಕೇಸ್‍ಗಳು ದಾಖಲಾಗಿವೆ.

    ಇದನ್ನೂ ಓದಿ: ಕಾವ್ಯಾ ಅಸಹಜವಾಗಿ ಸಾವನ್ನಪ್ಪಿದ್ದಾಳೆ: ಉಗ್ರಪ್ಪ ಕಾಲೇಜಿಗೆ ಭೇಟಿ ನೀಡಿದಾಗ ಸಿಕ್ಕಿರೋ ಸ್ಫೋಟಕ ಮಾಹಿತಿ ಇಲ್ಲಿದೆ

    ಇದರಲ್ಲಿ 8 ಆತ್ಮಹತ್ಯೆ ಮತ್ತು 2 ಅಸಹಜ ಸಾವು ಪ್ರಕರಣ ಸೇರಿದೆ. ಇಬ್ಬರು ಕುಸಿದು ಬಿದ್ದು ಸತ್ತಿದ್ದಾರೆ ಎಂದಷ್ಟೇ ಬರೆಯಲಾಗಿದೆ. ಆದ್ರೆ ಯಾವ ಕಾರಣದಿಂದ ಕುಸಿದು ಬಿದ್ದರು ಅನ್ನೋ ಬಗ್ಗೆ ಸ್ಪಷ್ಟತೆ ತನಿಖೆಯಲ್ಲಿ ಸಿಕ್ಕಿಲ್ಲ. ವಿಚಿತ್ರ ಅಂದ್ರೆ ಮೃತ ವಿದ್ಯಾರ್ಥಿಗಳೆಲ್ಲಾ ಹೊರ ಜಿಲ್ಲೆಯವರಾಗಿದ್ದಾರೆ.

     ಇದನ್ನೂ ಓದಿ: ವಿದ್ಯಾರ್ಥಿನಿ ಕಾವ್ಯಶ್ರೀ ನಿಗೂಢ ಸಾವು ಪ್ರಕರಣ: ಆಳ್ವಾಸ್ ಬೆನ್ನಿಗೆ ನಿಂತ ಎಚ್‍ಡಿಕೆ

    ಈ ಪಕ್ರರಣಗಳು ಸಾಕಷ್ಟು ಸದ್ದು ಮಾಡಲಿಲ್ಲ ಅನ್ನೋ ಮಾತು ಕೇಳಿಬರುತ್ತಿದೆ. ಆದ್ರೆ ಕಾವ್ಯ ಪೂಜಾರಿ ಸ್ಥಳೀಯ ವಿದ್ಯಾರ್ಥಿನಿಯಾಗಿರೋ ಕಾರಣ ಆಕೆಯ ನಿಗೂಢ ಸಾವಿನ ಬಗ್ಗೆ ಸಿಬಿಐ ತನಿಖೆಗೆ ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿದೆ.

    ಇದನ್ನೂ ಓದಿ: ಬಿಗ್ ಬುಲೆಟಿನ್ ನಲ್ಲಿ ಕಾವ್ಯ ಶ್ರೀ ಪ್ರಕರಣದ ಬಿಗ್ ಚರ್ಚೆ – ತನಿಖೆಗೆ ಸಹಕರಿಸುವೆ ಎಂದ ಮೋಹನ್ ಆಳ್ವ

    https://www.youtube.com/watch?v=75vzrVm8Z6w

    https://www.youtube.com/watch?v=BgvrrloxXoQ

    https://www.youtube.com/watch?v=9upWi0NOWqw