Tag: ಆವ್ಯನ್ ದೇವ್

  • ನಿಖಿಲ್ ಕುಮಾರ್ ಸ್ವಾಮಿ ಮಗನ ಹೆಸರು ಆವ್ಯಾನ್ ದೇವ್ : ಅರ್ಥ ಬಲು ರೋಚಕ

    ನಿಖಿಲ್ ಕುಮಾರ್ ಸ್ವಾಮಿ ಮಗನ ಹೆಸರು ಆವ್ಯಾನ್ ದೇವ್ : ಅರ್ಥ ಬಲು ರೋಚಕ

    ಟ, ಯುವರಾಜಕಾರಣಿ ನಿಖಿಲ್ ಕುಮಾರ್ ಸ್ವಾಮಿ ಅವರು ತಮ್ಮ ಪುತ್ರನಿಗೆ ಆವ್ಯಾನ್ ದೇವ್ ಎಂದು ಹೆಸರಿಟ್ಟಿದ್ದಾರೆ. ಈ ರೀತಿಯ ಹೆಸರನ್ನು ನಾಮಕರಣ ಮಾಡುತ್ತಿದ್ದಂತೆಯೇ ಅರ್ಥ ಹುಡುಕುವುದರಲ್ಲಿ ಅಭಿಮಾನಿಗಳು ಬ್ಯುಸಿಯಾಗಿದ್ದರು. ಬಾಲಿವುಡ್ ನಟಿ ದಿಯಾ ಮಿರ್ಜಾ ಕೂಡ ತಮ್ಮ ಮಗನಿಗೆ ಆವ್ಯಾನ್ ಅಜಾದ್ ಎಂದು ಹೆಸರಿಟ್ಟಿರುವ ಕಾರಣಕ್ಕಾಗಿ ಅಭಿಮಾನಿಗಳು ಕನ್ ಫ್ಯೂಸ್ ಕೂಡ ಆಗಿದ್ದರು.

    ಆವ್ಯಾನ್ ದೇವ್ ಅಂದರೆ, ಅದು ದೇವರ ಹೆಸರು. ಗಣಪತಿಯ ಮತ್ತೊಂದು ಹೆಸರು ಕೂಡ. ಅಲ್ಲದೇ, ಅದೃಷ್ಟದಿಂದ ಜನಿಸಿದವನು ಎಂಬ ಅರ್ಥವನ್ನೂ ಇದು ಸೂಚಿಸುತ್ತದೆ. ಹಾಗಾಗಿ ಇಂಥದ್ದೊಂದು ಹೆಸರಿಟ್ಟಿದ್ದಾರೆ. ಮಗುವಿಗೆ ಒಂಬತ್ತು ತಿಂಗಳು ತುಂಬಿರುವ ಸಂದರ್ಭದಲ್ಲಿ ನಿಖಿಲ್ ಮತ್ತು ರೇವತಿ ದಂಪತಿ ತಮ್ಮ ಮಗುವಿಗೆ ಮುದ್ದಾದ ಹೆಸರಿಟ್ಟಿದ್ದಾರೆ. ಇದನ್ನೂ ಓದಿ : ಚಿರಂಜೀವಿ ನಟನೆಯ ‘ಆಚಾರ್ಯ’ ಸಿನಿಮಾ ಸೋಲು : ಹೊಣೆಹೊತ್ತು ಹಣ ಮರಳಿಸಿದ್ರಾ ನಿರ್ದೇಶಕ ಶಿವ

    ಈ ಸಂದರ್ಭದಲ್ಲಿ ಆವ್ಯಾನ್ ದೇವ್ ಬಿಳಿ ಬಣ್ಣದ ಶರ್ಟ್ ಮತ್ತು ಪಂಚೆಯಲ್ಲಿ ಮಿಂಚುತ್ತಿದ್ದನು. ಮಾಜಿ ಪ್ರಧಾನಿ ಮತ್ತು ಆವ್ಯಾನ್ ಮುತ್ತಾತ ದೇವೇಗೌಡರು ಮೊಮ್ಮಗನಿಗೆ ಮುತ್ತು ಕೊಡುವ ಮೂಲಕ ಶುಭಹಾರೈಸಿದರೆ, ನಿಖಿಲ್ ತಾಯಿ ಮೊಮ್ಮಗನಿಗಾಗಿ ಬಂಗಾರದ ಹಲವು ಆಭರಣಗಳನ್ನು ತಂದಿದ್ದರು.

    ಇಂದು ಬೆಂಗಳೂರಿನ ಜೆಪಿ ನಗರದ ವೆಂಕಟೇಶ್ವರ ದೇವಸ್ಥಾನದಲ್ಲಿ ನಿಖಿಲ್ ಕುಮಾರ್ ಸ್ವಾಮಿ ಪುತ್ರನಿಗೆ ಶಾಸ್ತ್ರೋಕ್ತವಾಗಿ ನಾಮಕರಣ ಶಾಸ್ತ್ರ ನಡೆಯಿತು. ಬೆಳಗ್ಗೆ 10.30 ರಿಂದ 12.20ರವರೆಗೂ ನಡೆಯುವ ಶುಭ ಲಗ್ನದಲ್ಲಿ ಮಗುವಿಗೆ ನಾಮಕರಣ ಮಾಡಲಾಗಿದೆ.

  • ಕ್ಯಾಮೆರಾ ಮುಂದೆ ನಿಖಿಲ್ ಕುಮಾರ್ ಸ್ವಾಮಿ ಪುತ್ರ ಆವ್ಯನ್ ದೇವ್

    ಕ್ಯಾಮೆರಾ ಮುಂದೆ ನಿಖಿಲ್ ಕುಮಾರ್ ಸ್ವಾಮಿ ಪುತ್ರ ಆವ್ಯನ್ ದೇವ್

    ಟ, ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರ್ ಸ್ವಾಮಿ ಪುತ್ರ ಆವ್ಯನ್ ದೇವ್ ಇದೇ ಮೊದಲ ಬಾರಿಗೆ ಮಾಧ್ಯಮಗಳ ಕ್ಯಾಮೆರಾ ಮುಂದೆ ಬಂದಿದ್ದಾರೆ. ತಮ್ಮ ಮಗನ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ನಿಖಿಲ್ ಕುಮಾರ ಸ್ವಾಮಿ ಈವರೆಗೂ ಹಾಕಿದ್ದರೂ, ಮುಖ ತೋರಿಸಿರಲಿಲ್ಲ. ಅಲ್ಲದೇ, ಮಾಧ್ಯಮಗಳ ಕ್ಯಾಮೆರಾಗೆ ಸಿಕ್ಕಿರಲಿಲ್ಲ. ಇದೇ ಮೊದಲ ಬಾರಿಗೆ ಮಾಧ್ಯಮಗಳ ಕ್ಯಾಮೆರಾ ಮುಂದೆ ಮಗನನ್ನು ಕೂರಿಸಿದ್ದಾರೆ ನಿಖಿಲ್.

    ಇಂದು ಬೆಂಗಳೂರಿನ ಜೆಪಿ ನಗರದ ವೆಂಕಟೇಶ್ವರ ದೇವಸ್ಥಾನದಲ್ಲಿ ನಿಖಿಲ್ ಕುಮಾರ್ ಸ್ವಾಮಿ ಪುತ್ರನಿಗೆ ಶಾಸ್ತ್ರೋಕ್ತವಾಗಿ ನಾಮಕರಣ ಶಾಸ್ತ್ರ ನಡೆಯಿತು. ಬೆಳಗ್ಗೆ 10.30 ರಿಂದ 12.20ರವರೆಗೂ ನಡೆಯುವ ಶುಭ ಲಗ್ನದಲ್ಲಿ ಮಗುವಿಗೆ ನಾಮಕರಣ ಮಾಡಲಾಗಿದೆ. ಇದನ್ನೂ ಓದಿ: ನಯನತಾರಾ- ವಿಘ್ನೇಶ್ ಶಿವನ್ ಮದುವೆಗೆ ಕ್ಷಣ ಗಣನೆ

    ಪ್ರಪೌತ್ರ ಜನನ ಶಾಂತಿ, ನಾಮಕರಣ ಹಾಗೂ ಕನಕಾಭಿಷೇಕ ಕಾರ್ಯಕ್ರಮವನ್ನು ಇದೇ ಸಂದರ್ಭದಲ್ಲಿ ನಡೆದಿದ್ದು, ದೊಡ್ಡ ಗೌಡರ ಕುಟುಂಬವು ಮೊಮ್ಮಗನಿಗೆ ಆವ್ಯನ್ ದೇವ್ ಎಂದು ಹೆಸರಿಟ್ಟಿದ್ದಾರೆ.  ನಿಖಿಲ್ ಮತ್ತು ರೇವತಿ ದಂಪತಿಯ ಈ ಮಗುವಿಗೆ ಈಗ ಒಂಬತ್ತು ತಿಂಗಳು. ಇದನ್ನೂ ಓದಿ : ಚಿರಂಜೀವಿ ನಟನೆಯ ‘ಆಚಾರ್ಯ’ ಸಿನಿಮಾ ಸೋಲು : ಹೊಣೆಹೊತ್ತು ಹಣ ಮರಳಿಸಿದ್ರಾ ನಿರ್ದೇಶಕ ಶಿವ

    ಈ ಕಾರ್ಯಕ್ರಮಕ್ಕೆ ಕೇವಲ ಕುಟುಂಬಸ್ಥರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಹಾಗಾಗಿ ದೇವೇಗೌಡರ ಕುಟುಂಬ ಮತ್ತು ಅವರ ಆಪ್ತರು ಮಾತ್ರ ಭಾಗಿಯಾಗಿದ್ದಾರೆ.  ಮಗು ನಾಮಕರಣಕ್ಕೆ ವಿವಿಧ ಹೂಗಳಿಂದ ಸಿಂಗಾರ ಗೊಂಡಿದ್ದು, ಬೆಳ್ಳಿ ತೊಟ್ಟಿಲಲ್ಲಿ ಮಗುವಿನ ನಾಮಕರಣ ಶಾಸ್ತ್ರ ನಡೆದಿದೆ.

  • ನಿಖಿಲ್ ಕುಮಾರ್ ಸ್ವಾಮಿ ಪುತ್ರನಿಗೆ ಇಟ್ಟ ಹೆಸರೇನು? ಆ ಹೆಸರಿನ ಅರ್ಥ ಏನು?

    ನಿಖಿಲ್ ಕುಮಾರ್ ಸ್ವಾಮಿ ಪುತ್ರನಿಗೆ ಇಟ್ಟ ಹೆಸರೇನು? ಆ ಹೆಸರಿನ ಅರ್ಥ ಏನು?

    ಇಂದು ಬೆಂಗಳೂರಿನ ಜೆಪಿ ನಗರದ ವೆಂಕಟೇಶ್ವರ ದೇವಸ್ಥಾನದಲ್ಲಿ ನಟ, ಯುವರಾಜಕಾರಣಿ ನಿಖಿಲ್ ಕುಮಾರ್ ಸ್ವಾಮಿ ಪುತ್ರನಿಗೆ ಶಾಸ್ತ್ರೋಕ್ತವಾಗಿ ನಾಮಕರಣ ಶಾಸ್ತ್ರ ನಡೆಯುತ್ತಿದೆ. ಬೆಳಗ್ಗೆ 10.30 ರಿಂದ 12.20ರವರೆಗೂ ನಡೆಯುವ ಶುಭ ಲಗ್ನದಲ್ಲಿ ಮಗುವಿಗೆ ನಾಮಕರಣ ಮಾಡುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ಇದನ್ನೂ ಓದಿ: ಹೇಗಿದ್ದೀರಾ, ಚೆನ್ನಾಗಿದ್ದೀರಾ? ಎಂದು ಕೇಳುವುದನ್ನೇ ನಿಲ್ಲಿಸಿ ಬಿಟ್ಟಿದ್ದೆ : ಧ್ರುವ ಸರ್ಜಾ

    ಪ್ರಪೌತ್ರ ಜನನ ಶಾಂತಿ, ನಾಮಕರಣ ಹಾಗೂ ಕನಕಾಭಿಷೇಕ ಕಾರ್ಯಕ್ರಮವನ್ನು ಇದೇ ಸಂದರ್ಭದಲ್ಲಿ ನಡೆಯುತ್ತಿದ್ದು, ದೊಡ್ಡ ಗೌಡರ ಕುಟುಂಬವು ಮೊಮ್ಮಗನಿಗೆ ಆವ್ಯನ್ ದೇವ್ ಎಂದು ಹೆಸರಿಡಲು ನಿರ್ಧರಿಸಿದ್ದಾರಂತೆ.  ನಿಖಿಲ್ ಮತ್ತು ರೇವತಿ ದಂಪತಿಯ ಈ ಮಗುವಿಗೆ ಈಗ ಒಂಬತ್ತು ತಿಂಗಳು. ಇದನ್ನೂ ಓದಿ: ಚಿರು ಮಗನನ್ನು ನಾನೇ ಲಾಂಚ್ ಮಾಡುತ್ತೇನೆ : ಅರ್ಜುನ್ ಸರ್ಜಾ

    ಈ ಕಾರ್ಯಕ್ರಮಕ್ಕೆ ಕೇವಲ ಕುಟುಂಬಸ್ಥರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಹಾಗಾಗಿ ದೇವೇಗೌಡರ ಕುಟುಂಬ ಮತ್ತು ಅವರ ಆಪ್ತರು ಮಾತ್ರ ಭಾಗಿಯಾಗಿದ್ದಾರೆ.  ಮಗು ನಾಮಕರಣಕ್ಕೆ ವಿವಿಧ ಹೂಗಳಿಂದ ಸಿಂಗಾರ ಗೊಂಡಿದ್ದು, ಬೆಳ್ಳಿ ತೊಟ್ಟಿಲಲ್ಲಿ ಮಗುವಿನ ನಾಮಕರಣ ಶಾಸ್ತ್ರ ನಡೆಯಲಿದೆ.