Tag: ಆಶೀಶ್ ಮಿಶ್ರಾ

  • ರೈತರ ಮೇಲೆ ಜೀಪ್ ಹತ್ತಿಸಿದ ಮತ್ತೊಂದು ವೀಡಿಯೋ ಲಭ್ಯ – ಇಂದು ಸುಪ್ರೀಂನಲ್ಲಿ ವಿಚಾರಣೆ

    ರೈತರ ಮೇಲೆ ಜೀಪ್ ಹತ್ತಿಸಿದ ಮತ್ತೊಂದು ವೀಡಿಯೋ ಲಭ್ಯ – ಇಂದು ಸುಪ್ರೀಂನಲ್ಲಿ ವಿಚಾರಣೆ

    ಲಕ್ನೋ: ಉತ್ತರಪ್ರದೇಶದ ಲಖೀಂಪುರ್ ಖೇರಿಯಲ್ಲಿ ರೈತರ ಮೇಲೆ ಕೇಂದ್ರ ಸಚಿವ ಅಜಯ್ ಮಿಶ್ರಾನ ಮಗ ಮಹೀಂದ್ರ ಜೀಪ್ ಹತ್ತಿಸಿದ್ದ ಹೊಸ ವೀಡಿಯೋ ಲಭ್ಯವಾಗಿದೆ.

    ಅತೀ ವೇಗದಲ್ಲಿದ್ದ ಮಹೀಂದ್ರ ಜೀಪ್‍ನ್ನು ಕಪ್ಪು ಬಾವುಟ ಹಿಡಿದು ನಡೆದುಹೋಗ್ತಿದ್ದ ರೈತರ ಮೇಲೆ ಹತ್ತಿಸಲಾಗಿದೆ. ಆ ಜೀಪ್ ಹಿಂದೆ ಇನ್ನೊಂದು ಕಾರು ಕೂಡಾ ಅತೀ ವೇಗದಲ್ಲಿ ನುಗ್ಗಿದೆ. ಜೀಪ್ ಹತ್ತಿಸಿದ ಪರಿಣಾಮ ನಾಲ್ವರು ರೈತರು ಪ್ರಾಣ ಕಳೆದುಕೊಂಡಿದ್ದಾರೆ. ಆ ಜೀಪ್‍ನಿಂದ ಇಳಿದು ಓಡಿಹೋಗ್ತಿರುವ ದೃಶ್ಯವೂ ಲಭ್ಯ ಆಗಿದೆ. ಇದನ್ನೂ ಓದಿ: ಚಾಲಕನ ಮೇಲೆ ದಾಳಿಯಾದಾಗ ನಿಯಂತ್ರಣ ತಪ್ಪಿ ಕಾರು ರೈತರ ಮೇಲೆ ಹರಿದಿದೆ: ಮಿಶ್ರಾ

    ಜೀಪ್ ಹತ್ತಿಸಿದ್ದರಿಂದ ಆಕ್ರೋಶಗೊಂಡ ರೈತರ ಗುಂಪು ಬಿಜೆಪಿ ಕಾರ್ಯಕರ್ತರಿದ್ದ ಜೀಪಿನ ಮೇಲೆ ಪ್ರತಿದಾಳಿ ನಡೆಸಿದೆ. ಲಖೀಂಪುರ್ ಖೇರಿ ಹಿಂಸಾಚಾರದ ಬಗ್ಗೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ತ್ರಿಸದಸ್ಯ ಪೀಠ ಇಂದು ವಿಚಾರಣೆ ನಡೆಸಲಿದೆ. ಇದನ್ನೂ ಓದಿ: ಹತ್ಯೆ ಸ್ಥಳದಲ್ಲಿ ನನ್ನ ಮಗ ಇದ್ದಿದ್ದು ನಿಜವಾದ್ರೆ ರಾಜೀನಾಮೆ ನೀಡುತ್ತೇನೆ: ಅಜಯ್ ಮಿಶ್ರಾ

    ಲಖೀಂಪುರ್‍ಖೇರಿಯಲ್ಲಿ ಮೃತರ ರೈತರ ಕುಟುಂಬವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ನಾಯಕಿ ಪ್ರಿಯಾಂಕ ಗಾಂಧಿ ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್‍ಮಿಶ್ರಾ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡ್ಬೇಕು ಎಂದಿರುವ ಪ್ರಿಯಾಂಕ, ‘ಎಫ್‍ಐಆರ್ ಇಲ್ಲದೆಯೇ ನಮ್ಮನ್ನು ಅರೆಸ್ಟ್ ಮಾಡುವುದಾದ್ರೆ ಮಂತ್ರಿ ಮಗ ಆಶಿಶ್ ಮಿಶ್ರಾನನ್ನು ಯಾಕೆ ಬಂಧಿಸ್ತಿಲ್ಲ’ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಲಖೀಂಪುರದಲ್ಲಿ ನಾಲ್ವರು ರೈತರನ್ನು ಕೊಂದ ಪ್ರಕರಣ – ಇನ್ನೂ ಅರೆಸ್ಟ್ ಆಗಿಲ್ಲ ಮಂತ್ರಿ ಮಗ

  • ಚಾಲಕನ ಮೇಲೆ ದಾಳಿಯಾದಾಗ ನಿಯಂತ್ರಣ ತಪ್ಪಿ ಕಾರು ರೈತರ ಮೇಲೆ ಹರಿದಿದೆ: ಮಿಶ್ರಾ

    ಚಾಲಕನ ಮೇಲೆ ದಾಳಿಯಾದಾಗ ನಿಯಂತ್ರಣ ತಪ್ಪಿ ಕಾರು ರೈತರ ಮೇಲೆ ಹರಿದಿದೆ: ಮಿಶ್ರಾ

    – ಮಗನ ಪರ ಮತ್ತೆ ತಂದೆ ಬ್ಯಾಟಿಂಗ್

    ನವದೆಹಲಿ: ಚಾಲಕನ ಮೇಲೆ ದಾಳಿಯಾದಾಗ ನಿಯಂತ್ರಣ ತಪ್ಪಿದ ಕಾರು ಸ್ಥಳದಲ್ಲಿದ್ದ ರೈತರ ಮೇಲೆ ಹರಿದಿದೆ ಎಂದು ಕೇಂದ್ರ ಸಚಿವ ಅಜಯ್ ಮಿಶ್ರಾ ಸಮರ್ಥನೆ ಮಾಡಿಕೊಂಡಿದ್ದಾರೆ.

    ಲಖೀಂಪುರ ಖೇರಿ ಪ್ರಕರಣ ಸಂಬಂಧ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಅವರು, ಮಗ ಆಶಿಶ್ ಮಿಶ್ರಾ ಪರ ಮತ್ತೆ ಹೇಳಿಕೆಯನ್ನು ನೀಡಿದ್ದಾರೆ. ಘಟನೆ ನಡೆದ ಸಂದರ್ಭದಲ್ಲಿ ನನ್ನ ಮಗ ಅಲ್ಲಿ ಇರಲಿಲ್ಲ ಎಂದು ಮತ್ತೆ ಪುನರುಚ್ಛರಿಸಿರುವ ಅಜಯ್ ಮಿಶ್ರಾ, ಕಾರು ಕಂಟ್ರೋಲ್ ತಪ್ಪಿದ್ದರಿಂದ ಈ ಅವಘಢ ಸಂಭವಿಸಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹತ್ಯೆ ಸ್ಥಳದಲ್ಲಿ ನನ್ನ ಮಗ ಇದ್ದಿದ್ದು ನಿಜವಾದ್ರೆ ರಾಜೀನಾಮೆ ನೀಡುತ್ತೇನೆ: ಅಜಯ್ ಮಿಶ್ರಾ

    ಪ್ರಕರಣ ಸಂಬಂಧ ಈ ಹಿಂದೆ ಮಾತನಾಡಿದ್ದ ಅಜಯ್ ಮಿಶ್ರಾ, ಘಟನೆ ನಡೆದ ವೇಳೆ ನನ್ನ ಮಗ ಕಾರಿನಲ್ಲಿ ಇರಲಿಲ್ಲ. ಒಂದು ವೇಳೆ ಆತ ಸ್ಥಳದಲ್ಲಿ ಇದ್ದಿದ್ದು ನಿಜವಾಗಿದ್ದರೆ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಇದೀಗ ಮತ್ತೆ ಹೇಳಿಕೆ ನೀಡುವ ಮೂಲಕ ಮಗನನ್ನು ಅಪ್ಪ ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಲಖೀಂಪುರದಲ್ಲಿ ನಾಲ್ವರು ರೈತರನ್ನು ಕೊಂದ ಪ್ರಕರಣ – ಇನ್ನೂ ಅರೆಸ್ಟ್ ಆಗಿಲ್ಲ ಮಂತ್ರಿ ಮಗ

    ದುರ್ಘನೆ ನಡೆದ ಸಂದರ್ಭದಲ್ಲಿ ನನ್ನ ಮಗ ಕಾರಿನಲ್ಲಿ ಇರಲಿಲ್ಲ. ಪ್ರತಿಭಟನೆ ನಡೆಸುತ್ತಿದ್ದ ರೈತರು ಕಾರಿನ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಚಾಲಕನಿಗೂ ಗಾಯಗಳಾಗಿತ್ತು. ಗಾಯಗೊಂಡಿದ್ದರಿಂದ ಚಾಲಕ ಕಾರಿನ ನಿಯಂತ್ರಣ ಕಳೆದುಕೊಂಡಿದ್ದಾನೆ. ಪರಿಣಾಮ ಸ್ಥಳದಲ್ಲಿದ್ದ ರೈತರ ಮೇಲೆ ಕಾರು ಹರಿದಿದೆ. ಅವಘಡದಲ್ಲಿ ಜೀವ ಕಳೆದುಕೊಂಡು ರೈತರ ಬಗ್ಗೆ ನನಗೂ ಮರುಕವಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಲು ನಾನು ಒತ್ತಾಯಿಸುತ್ತೇನೆ ಎಂದು ಅಜಯ್ ಮಿಶ್ರಾ ಹೇಳಿದ್ದಾರೆ.

    ಒಟ್ಟಾರೆ ಪ್ರಕರಣ ಸಂಬಂಧ ಅಜಯ್ ಮಿಶ್ರಾ ಪುತ್ರ ಆಶೀಶ್ ಮಿಶ್ರಾ ವಿರುದ್ಧ ಲಖೀಂಪುರ್ ಖೇರಿ ಠಾಣೆಯ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ. ಆದರೆ ಇದುವರೆಗೆ ಆರೋಪಿಯ ಬಂಧನವಾಗಿಲ್ಲ. ಸದ್ಯ ಇದನ್ನು ವಿರೋಧ ಪಕ್ಷಗಳು ಪ್ರಶ್ನಿಸುತ್ತಿವೆ. ಇದನ್ನೂ ಓದಿ: ರೈತರ ಮೇಲೆ ವಾಹನ ಹತ್ತಿಸಿದ ವೀಡಿಯೋ ಲಭ್ಯ- ಅಜಯ್ ಮಿಶ್ರಾ ಪುತ್ರನ ವಿರುದ್ಧ ಕೊನೆಗೂ FIR