Tag: ಆಸ್ಕರ್ ಫೆರ್ನಾಂಡಿಸ್

  • ಅಗಲಿದ ಕಾಂಗ್ರೆಸ್ ನಾಯಕ ಆಸ್ಕರ್‌ಗೆ ಉಡುಪಿ ಬಿಜೆಪಿ ಕಚೇರಿಯಲ್ಲಿ ಶ್ರದ್ಧಾಂಜಲಿ

    ಅಗಲಿದ ಕಾಂಗ್ರೆಸ್ ನಾಯಕ ಆಸ್ಕರ್‌ಗೆ ಉಡುಪಿ ಬಿಜೆಪಿ ಕಚೇರಿಯಲ್ಲಿ ಶ್ರದ್ಧಾಂಜಲಿ

    ಉಡುಪಿ: ಅಗಲಿದ ಕಾಂಗ್ರೆಸ್ ಹಿರಿಯ ನಾಯಕ, ಕೇಂದ್ರ ಮಾಜಿ ಸಚಿವ, ರಾಜ್ಯಸಭಾ ಸದಸ್ಯ ಆಸ್ಕರ್  ಫೆರ್ನಾಂಡಿಸ್ ಅವರಿಗೆ ಉಡುಪಿ ಬಿಜೆಪಿ ಕಚೇರಿಯಲ್ಲಿ ಭಾರತೀಯ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ಮೂಲಕ ಹೊಸ ತಲೆಮಾರಿನ ರಾಜಕೀಯ ನಾಯಕರು ಹಿರಿಯರು ಹಾಕಿದ್ದ ಸಂಪ್ರದಾಯವನ್ನು ಮುಂದುವರೆಸಿದ್ದಾರೆ.

    ಚುನಾವಣೆ ಸಂದರ್ಭ ರಾಜಕೀಯ, ಚುನಾವಣೆ ನಂತರ ನಾವೆಲ್ಲರೂ ಜನಪ್ರತಿನಿಧಿಗಳು. ಎಲೆಕ್ಷನ್ ಟೈಮಲ್ಲಿ ಕೆಸರೆರಚಾಟ ಚುನಾವಣೆ ಗೆದ್ದ ಮೇಲೆ ಮಿತ್ರತ್ವ. ಉಡುಪಿಯಲ್ಲಿ ಈ ಸಂಪ್ರದಾಯ ಇನ್ನೂ ಚಾಲ್ತಿಯಲ್ಲಿದೆ. ಕಾಂಗ್ರೆಸ್ ನ ಹಿರಿಯ ನಾಯಕ ಸುದೀರ್ಘ ನಾಲ್ಕು ದಶಕಗಳ ಕಾಲ ರಾಜಕೀಯವನ್ನೇ ಜೀವನ ಮಾಡಿಕೊಂಡಿದ್ದ ಆಸ್ಕರ್ ಫೆರ್ನಾಂಡಿಸ್ ಕೊನೆಯುಸಿರೆಳೆದಿದ್ದಾರೆ. ಉಡುಪಿ ಶಾಸಕರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಆಸ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

    ಉಡುಪಿ ಶಾಸಕ ಕೆ. ರಘುಪತಿ ಭಟ್ ನುಡಿನಮನ ಸಲ್ಲಿಸಿ, ನಮ್ಮ ವಿರೋಧ ಪಕ್ಷದವರಾದರೂ ಆಸ್ಕರ್ ಫೆರ್ನಾಂಡಿಸ್ ಉಡುಪಿಗೆ ನೀಡಿದ ಸೇವೆ ಸ್ಮರಿಸಬೇಕಾಗಿದೆ. ಇಂಥ ಸಂಸ್ಕೃತಿ ಉಡುಪಿ ಜಿಲ್ಲೆಯಲ್ಲಿ ಬಿಟ್ಟರೆ ಬೇರೆಲ್ಲೂ ಕಾಣಲು ಸಾಧ್ಯವಿಲ್ಲ. ರಾಜಕೀಯ ಸಿದ್ಧಾಂತವನ್ನು ಬಿಡದೇ ಬೇರೆ ಪಕ್ಷದ ಹಿರಿಯರು ನಿಧನರಾದಾಗ ಅವರಿಗೆ ನಮ್ಮ ಪಕ್ಷದ ಕಚೇರಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸುವುದು ನಮ್ಮ ಕರ್ತವ್ಯ. ಕಾರ್ಮಿಕ ಸಂಘಟನೆಗಳಿಂದ ಬೆಳೆದ ನಾಯಕರಾದ ಆಸ್ಕರ್, ಯಾವತ್ತೂ ಹಗೆತನದ ರಾಜಕೀಯ ಮಾಡಿದವರಲ್ಲ. ಕಾಂಗ್ರೆಸ್ ಕಾರ್ಯಕರ್ತರು ಮಾಡಿದಾಗಲೂ ಆಸ್ಕರ್ ಅದನ್ನು ಬೆಂಬಲಿಸಿಲ್ಲ. ಡಾ.ಆಚಾರ್ಯ ಜೊತೆ ಆತ್ಮೀಯ ಸಂಬಂಧ ಹೊಂದಿದ್ದರು. ಇದನ್ನೂ ಓದಿ:  BJP, RSS ನಕಲಿ ಹಿಂದುಗಳು, ಧರ್ಮವನ್ನು ಬಳಸಿಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

    ಅವರೊಬ್ಬ ಮಾನವೀಯ ಗುಣವಿದ್ದ ನಾಯಕ ಎಂದು ಗುಣಗಾನ ಮಾಡಿದರು. ನನ್ನ ವೈಯಕ್ತಿಕ ಜೀವನದಲ್ಲಿ ದುರ್ಘಟನೆ ಆದಾಗ ಸಾಂತ್ವನ ಹೇಳಿದ್ದರು. ಕಾಂಗ್ರೆಸ್ ಪಕ್ಷದವರು ನನ್ನನ್ನು ಟೀಕಿಸಿದಾಗಲೂ ಮಾನವೀಯ ಗುಣ ತೋರಿದ್ದರು. ಮಾನಸಿಕ ವೇದನೆಯಲ್ಲಿದ್ದಾಗ ನನ್ನ ಬಳಿಗೇ ಬಂದು ಸಾಂತ್ವನ ಹೇಳಿ, ಸಹಾಯ ಬೇಕಾದರೆ ಕೇಳಿ ಎಂದಿದ್ದರು. ಅವರ ಸಹಾಯಕ್ಕಿಂತಲೂ ಸಾಂತ್ವನದಿಂದ ನಾನು ಹಗುರಾಗಿದ್ದೆ. ಅತ್ಯಂತ ಒಳ್ಳೆಯ ಗುಣ ಹೊಂದಿದ್ದರು. ಅದೇ ಕಾರಣಕ್ಕೆ ಬೆಂಗಳೂರಿಂದ ಬಂದು ಅಂತಿಮ ದರ್ಶನ ಪಡೆದಿದ್ದೇನೆ ಎಂದು ಭಟ್ ಹೇಳಿದರು. ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ ಶ್ರದ್ಧಾಂಜಲಿ ಅರ್ಪಿಸಿ, ವಿರೋಧಿಗಳನ್ನು ಪ್ರೀತಿಸುವ ಗುಣ ಹೊಂದಿದ್ದರು. ಹಿಂದುತ್ವದ ವಿಶ್ವಾಸ ಮತ್ತು ಗೌರವವನ್ನು ಹೊಂದಿದ್ದರು. ಪಕ್ಷ ಮತ್ತು ನಾಯಕತ್ವದ ಮೇಲಿನ ನಿಷ್ಠೆಯನ್ನು ಆಸ್ಕರ್ ಅವರಿಂದ ಕಲಿಯಬೇಕು ಎಂದು ಹೇಳಿದರು. ಇದನ್ನೂ ಓದಿ:  ಬೆಲೆ ಏರಿಕೆಯಿಂದ ಜನ ಕಷ್ಟ ಪಡುವುದನ್ನೇ ಅಚ್ಚೇ ದಿನ್ ಅನ್ನೋದಾ: ಸಿದ್ದರಾಮಯ್ಯ

    ಡಾ. ವಿ.ಎಸ್. ಆಚಾರ್ಯರು ನಿಧನರಾದಾಗ ದಿಲ್ಲಿಯಲ್ಲಿದ್ದ ಆಸ್ಕರ್, ಕಾಂಗ್ರೆಸ್ ನಾಯಕರಿಗೆ ಕರೆ ಮಾಡಿ, ಕಾಂಗ್ರೆಸ್ ಭವನದಲ್ಲಿ ಡಾ. ಆಚಾರ್ಯರ ಭಾವಚಿತ್ರ ಇರಿಸಿ, ಶ್ರದ್ಧಾಂಜಲಿ ಸಲ್ಲಿಸುವಂತೆ ಸೂಚಿಸಿದ್ದರು. ಇಂದು ಆಸ್ಕರ್ ನಿಧನರಾದಾಗ ಸಚಿವ ಸುನೀಲ್ ಕುಮಾರ್ ಅವರು ಬಿಜೆಪಿ ನಾಯಕರಿಗೆ ಕರೆ ಮಾಡಿ, ಆಸ್ಕರ್ ಅವರಿಗೆ ಬಿಜೆಪಿ ಕಚೇರಿಯಲ್ಲಿ ಶ್ರದ್ಧಾಂಜಲಿ ಅರ್ಪಿಸಲು ಸೂಚಿಸಿದ್ದಾರೆ.

  • ಫೆರ್ನಾಂಡಿಸ್‍ರಷ್ಟು ಸಜ್ಜನ ದೇಶದುದ್ದಗಲ ಎಲ್ಲೂ ಇಲ್ಲ- ಡಿಕೆಶಿ ಗುಣಗಾನ

    ಫೆರ್ನಾಂಡಿಸ್‍ರಷ್ಟು ಸಜ್ಜನ ದೇಶದುದ್ದಗಲ ಎಲ್ಲೂ ಇಲ್ಲ- ಡಿಕೆಶಿ ಗುಣಗಾನ

    ಉಡುಪಿ: ಆಸ್ಕರ್ ಫೆರ್ನಾಂಡಿಸ್ ರಂತಹ ಸಜ್ಜನ ರಾಜಕಾರಣಿ ದೇಶದ ಉದ್ದಗಲ ಎಲ್ಲೂ ಇಲ್ಲ. ಆಸ್ಕರ್ ಒಬ್ಬ ಅಜಾತಶತ್ರು ರಾಜಕಾರಣಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೆನೆದರು.

    ಆಸ್ಕರ್ ಫೆರ್ನಾಂಡಿಸ್ ಅವರ ಅಂತಿಮ ದರ್ಶನ ಪಡೆದು, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಸ್ಕರ್ ಅವರ ಪಕ್ಷದ ಮೇಲಿದ್ದ ಪ್ರಾಮಾಣಿಕತೆ, ನಿಷ್ಠೆ ದೇಶ ಮೆಚ್ಚುವಂತಹದ್ದು. ಪಕ್ಷ ಸದೃಢ ಆಗಿದ್ದಾಗ ಎಲ್ಲರೂ ಮುಂದೆ ಬಂದು ನಾಯಕತ್ವ ವಹಿಸುತ್ತಾರೆ. ಸಂಕಷ್ಟ ಕಾಲದಲ್ಲಿ ಎರಡು ಬಾರಿ ಅಧ್ಯಕ್ಷರಾಗಿ ಅವರು ಕಾರ್ಯ ನಿರ್ವಹಿಸಿದ್ದರು. ಆಸ್ಕರ್ ಕೇಂದ್ರಕ್ಕೂ ರಾಜ್ಯಕ್ಕೂ ಇದ್ದ ದೊಡ್ಡ ರಾಜಕೀಯ ಕೊಂಡಿ. ಬೆಂಗಳೂರು ಮೈಸೂರು ದಶಪಥ ರಸ್ತೆಗೆ ಆಸ್ಕರ್ ಕಾರಣ. ಅವರ ಮುತುವರ್ಜಿಯಿಂದ ಈ ಬೃಹತ್ ಯೋಜನೆ ಕಾರ್ಯರೂಪಕ್ಕೆ ಬಂದಿತು ಎಂದರು. ಇದನ್ನೂ ಓದಿ: ಆಸ್ಕರ್ ಫೆರ್ನಾಂಡಿಸ್ ಪಾರ್ಥಿವ ಶರೀರದ ಮುಂದೆ ಭಗವದ್ಗೀತೆ, ಬೈಬಲ್, ಕುರಾನ್ ಸಮಾಗಮ

    ಯುಪಿಎ ಸರ್ಕಾರದ ಅವಧಿಯಲ್ಲಿ ಆಸ್ಕರ್ ಫೆರ್ನಾಂಡಿಸ್ ಕಾರ್ಮಿಕ ಸಚಿವರಾಗಿ ಕೆಲಸ ಮಾಡಿದ್ದಾರೆ. ಈ ಸಂದರ್ಭದಲ್ಲಿ ಆಸ್ಕರ್ ಫೆರ್ನಾಂಡಿಸ್ ಒಂದು ಯೋಜನೆಯನ್ನು ಜಾರಿಗೆ ತಂದು, ಕಾರ್ಮಿಕರ ಮಕ್ಕಳು ಎಂಬಿಬಿಎಸ್ ಓದಲು ಕಾರಣರಾದರು. ಇಂದಿಗೂ ಕೂಡ ಬಡ ಮಕ್ಕಳು ಎಂಬಿಬಿಎಸ್ ವಿದ್ಯಾಭ್ಯಾಸವನ್ನು ಮಾಡುತ್ತಿದ್ದಾರೆ ಎಂದು ನೆನಪಿಸಿಕೊಂಡರು. ಇದನ್ನೂ ಓದಿ: ಆಸ್ಕರ್ ಆತ್ಮ ಸ್ವರ್ಗ ಸಾಮ್ರಾಜ್ಯ ತಲುಪಿದೆ – ಉಡುಪಿ ಬಿಷಪ್ ಪ್ರಾರ್ಥನೆ

    ಫೆರ್ನಾಂಡಿಸ್ ರ ರಾಜಕೀಯ ಜೀವನದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲದ ವ್ಯಕ್ತಿತ್ವ. ಆಸ್ಕರ್ ನಿಧನದಿಂದ ರಾಷ್ಟ್ರ ಕಾಂಗ್ರೆಸ್‍ಗೆ ನಷ್ಟ ಆಗಿದೆ. ಅಗಲಿನ ಆತ್ಮಕ್ಕೆ ಚಿರಶಾಂತಿಗಾಗಿ ಪ್ರಾರ್ಥನೆ ಮಾಡುತ್ತೇನೆ. ಆಸ್ಕರ್ ಕುಟುಂಬಕ್ಕೆ ಭಗವಂತ ಶಕ್ತಿ ನೀಡಲಿ ಎಂದು ಡಿಕೆಶಿ ಪ್ರಾರ್ಥನೆ ಮಾಡಿದರು.

  • ಆಸ್ಕರ್ ಆತ್ಮ ಸ್ವರ್ಗ ಸಾಮ್ರಾಜ್ಯ ತಲುಪಿದೆ – ಉಡುಪಿ ಬಿಷಪ್ ಪ್ರಾರ್ಥನೆ

    ಆಸ್ಕರ್ ಆತ್ಮ ಸ್ವರ್ಗ ಸಾಮ್ರಾಜ್ಯ ತಲುಪಿದೆ – ಉಡುಪಿ ಬಿಷಪ್ ಪ್ರಾರ್ಥನೆ

    ಉಡುಪಿ: ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥಿವ ಶರೀರ ಇಂದು ಬೆಳಗ್ಗೆ ಮಂಗಳೂರಿನಿಂದ ಉಡುಪಿಗೆ ಆಗಮಿಸಿತು. ಉಡುಪಿ ಶೋಕ ಮಾತಾ ಇಗರ್ಜಿಗೆ ಕರೆತಂದು ಸದ್ಗತಿಗಾಗಿ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು.

    ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅಂತಿಮ ನಮನ ಸಲ್ಲಿಸಿದರು. ಬಳಿಕ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ.ಜೆರಾಲ್ಡ್ ಐಸಾಕ್ ಲೋಬೊ ನೇತೃತ್ವದಲ್ಲಿ ಬಲಿಪೂಜೆ ನೆರವೇರಿಸಿ, ಧರ್ಮಪ್ರಾಂತ್ಯದ ಪರವಾಗಿ ಅಂತಿಮ ಗೌರವ ಸಲ್ಲಿಸಲಾಯಿತು. ಈ ಹಿನ್ನೆಲೆಯಲ್ಲಿ ಚರ್ಚ್ ಆವರಣದಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಯಿತು. ಇದನ್ನೂ ಓದಿ:  ಮನೆಗಳ ಹಕ್ಕು ಪತ್ರ ಕೊಡಿಸಲು ಒತ್ತಾಯ – ರೈತ ಸಂಘದಿಂದ ಹಾಸನದಲ್ಲಿ ಪ್ರತಿಭಟನೆ

    ಉಡುಪಿ ಧರ್ಮ ಪ್ರಾಂತ್ಯ ಬಿಷಪ್ ಜೆರಾಲ್ಡ್ ಐಸಾಕ್ ಲೋಬೋ ಮಾತನಾಡಿ, ನಿಧನರಾದವರ ಹೆಸರಿನಲ್ಲಿ ನಾವು ಚರ್ಚ್ ಹಾಲ್ ನಲ್ಲಿ ಬಲಿ ಪೂಜೆಯನ್ನು ನೆರವೇರಿಸಿದ್ದೇವೆ. ಕ್ರೈಸ್ತ ಧರ್ಮದಲ್ಲಿ ಅಂತಿಮ ನಮನಕ್ಕೆ ಬಹಳ ಪ್ರಾಮುಖ್ಯತೆ ಇದೆ. ಜೀವಿತಾವಧಿಯಲ್ಲಿ ವ್ಯಕ್ತಿ ಜೀವನದಲ್ಲಿ ತಪ್ಪು ಮಾಡಿದ್ದರೆ ಅದಕ್ಕೆ ದೇವರಲ್ಲಿ ಸಾಮೂಹಿಕವಾಗಿ ಕ್ಷಮೆ ಕೋರಲಾಗುತ್ತದೆ. ಮನುಷ್ಯ ಮಾಡಿದ ನ್ಯೂನ್ಯತೆಗಳನ್ನು ನೀಗಿಸಿ ಆತ್ಮ ಪರಮಾತ್ಮನಲ್ಲಿ ಲೀನವಾಗಲಿ. ಆಸ್ಕರ್ ಗೆ ಸ್ವರ್ಗ ಸಾಮ್ರಾಜ್ಯ ನೀಡಲಿ ಎಂದು ಪ್ರಾರ್ಥನೆ ಮಾಡಿದ್ದೇವೆ. ಕುಟುಂಬಕ್ಕಾಗಿ ವಿಶೇಷವಾಗಿ ದೇವರಲ್ಲಿ ಪ್ರಾರ್ಥಿಸಲಾಗಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲಿ ಎಂದು ಅವರಿಗೋಸ್ಕರ ನಾವೆಲ್ಲ ಬೇಡಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ:  ಪರೀಕ್ಷಾ ಕೇಂದ್ರದಲ್ಲೇ ವಿದ್ಯಾರ್ಥಿನಿಗೆ ಕೀ ಆನ್ಸರ್- 8 ಜನರು ಅರೆಸ್ಟ್

    ಪ್ರಾರ್ಥನೆಯ ಬಳಿಕ ಬ್ರಹ್ಮಗಿರಿಯ ಆಸ್ಕರ್ ಮನೆಗೆ ಮೃತದೇಹ ಕರೆದೊಯ್ಯಲಾಯಿತು. ಮಣಿಪಾಲ ಕ್ರೈಸ್ಟ್ ಚರ್ಚ್‍ನ ಧರ್ಮಗುರು ಫೆಡ್ರಿಕ್ ಧಾರ್ಮಿಕ ವಿಧಿಗಳನ್ನು ನೆರವೇರಿಸಿದರು. ಈ ವೇಳೆ ಪತ್ನಿ ಬ್ಲೋಸಂ ಫೆರ್ನಾಂಡಿಸ್, ಸಹೋದರಿಯರಾದ ಜುಡಿತ್ ಶ್ರೇಷ್ಠ, ಸಾಲಿಯಟ್ ಮತ್ತು ಮರಿಯಟ್, ಮಕ್ಕಳು ಓಶನ್ ಮತ್ತು ಓಶಾನಿ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ವಿನಯ ಕುಮಾರ್ ಸೊರಕೆ, ಶಾಸಕ ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಚಂದ್ರಶೆಟ್ಟಿ, ಮಾಜಿ ಶಾಸಕ ಜೆ.ಆರ್.ಲೋಬೊ, ಐವನ್ ಡಿಸೋಜ, ಎಂ.ಎ.ಗಫೂರ್ ಮೊದಲಾದವರು ಹಾಜರಿದ್ದರು. ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ, ಬಿಜೆಪಿ ನಾಯಕರು ಅಂತಿಮ ದರ್ಶನ ಪಡೆದರು. ಇದನ್ನೂ ಓದಿ:  ಬೆಂಗಳೂರು ಹೋಟೆಲಿನಲ್ಲಿ ಅಗ್ನಿ ಅವಘಡಕ್ಕೆ ಬೊಲೇರೋ ವಾಹನ ಕಾರಣ?

  • 5 ದಶಕದಿಂದ ರಾಷ್ಟ್ರ ರಾಜಧಾನಿ, ರಾಜ್ಯದ ಕಾಂಗ್ರೆಸ್ಸಿನ ಬಹುದೊಡ್ಡ ಕೊಂಡಿಯಾಗಿದ್ದ ಆಸ್ಕರ್ ಇನ್ನು ನೆನಪು ಮಾತ್ರ

    5 ದಶಕದಿಂದ ರಾಷ್ಟ್ರ ರಾಜಧಾನಿ, ರಾಜ್ಯದ ಕಾಂಗ್ರೆಸ್ಸಿನ ಬಹುದೊಡ್ಡ ಕೊಂಡಿಯಾಗಿದ್ದ ಆಸ್ಕರ್ ಇನ್ನು ನೆನಪು ಮಾತ್ರ

    ಮಂಗಳೂರು: ಕಳೆದ ಐದು ದಶಕಗಳಿಂದ ರಾಷ್ಟ್ರ ರಾಜಧಾನಿ ಮತ್ತು ರಾಜ್ಯದ ಕಾಂಗ್ರೆಸ್ ನಡುವೆ ಇದ್ದ ಬಹುದೊಡ್ಡ ಕೊಂಡಿ ಕಳಚಿದೆ. ಹಿರಿಯ ನಾಯಕ, ಕೇಂದ್ರ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ಇಹಲೋಕ ತ್ಯಜಿಸಿದ್ದಾರೆ. ಅಜಾತಶತ್ರುವನ್ನು ಕಳೆದುಕೊಂಡ ಇಡೀ ರಾಜಕೀಯ ವಲಯ ಕಂಬನಿ ಮಿಡಿದಿದೆ.

    ಮೃದು ವ್ಯಕ್ತಿತ್ವ ಮೇಲೆ ಮಾಸದ ನಗು… ಅಜಾತ ಶತ್ರು ರಾಜಕಾರಣಿ ಆಸ್ಕರ್ ಫೆರ್ನಾಂಡಿಸ್ ಇಹಲೋಕದ ಯಾತ್ರೆ ಮುಗಿಸಿದ್ದಾರೆ. ಐದು ಬಾರಿ ಲೋಕಸಭೆ ಮತ್ತು ನಾಲ್ಕು ಬಾರಿ ರಾಜ್ಯಸಭೆಗೆ ಆಯ್ಕೆಯಾಗುವ ಮೂಲಕ ಕರ್ನಾಟಕ ಕಾಂಗ್ರೆಸ್ಸಿನಿಂದ ದೆಹಲಿಯಲ್ಲಿ ಛಾಪು ಮೂಡಿಸಿದ ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ತನ್ನ ಬದುಕಿನ ಜೈತ್ರಯಾತ್ರೆಯನ್ನು ಕೊನೆಗೊಳಿಸಿದ್ದಾರೆ. ರಾಜಕೀಯ ವಿರೋಧಿ ಗಳಿಂದಲೂ ಗೌರವಿಸಲ್ಪಟ್ಟಿದ್ದ ಆಸ್ಕರ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸುಮಾರು ಎರಡು ತಿಂಗಳುಗಳ ಕಾಲ ಜೀವನ್ಮರಣದ ನಡುವೆ ಹೋರಾಟ ನಡೆಸಿದ ಆಸ್ಕರ್ ಪರಮಾತ್ಮನಲ್ಲಿ ಲೀನರಾಗಿದ್ದಾರೆ. ಇದನ್ನೂ ಓದಿ: ಆಸ್ಕರ್ ಫರ್ನಾಂಡಿಸ್ ನಡೆದು ಬಂದ ಹಾದಿ

    ಉಡುಪಿಯ ಮುನ್ಸಿಪಾಲಿಟಿಯಿಂದ ರಾಜಕೀಯ ಆರಂಭಿಸಿ ದೆಹಲಿಯ ಸಂಸತ್ ಭವನದವರೆಗೆ ಆಸ್ಕರ್ ಅವರು ನಡೆದು ಹೋದ ದಾರಿ ಬಲು ದೊಡ್ಡದು. ದೆಹಲಿ ರಾಜಕೀಯವಲಯದಲ್ಲಿ ಕರ್ನಾಟಕದ ಅಧಿಕೃತ ಪ್ರತಿನಿಧಿಯಂತೆ ಇದ್ದ ಆಸ್ಕರ್ ಇಲ್ಲಿನ ಕಾರ್ಯಕರ್ತರಿಗೆ ಆಸ್ಕರ್ ಅಣ್ಣ ಎಂದೇ ಚಿರಪರಿಚಿತ. ಗಾಂಧಿ ಕುಟುಂಬಕ್ಕೆ ಅತಿ ಆಪ್ತನಾಗಿದ್ದ ಆಸ್ಕರ್ ಕಟ್ಟಕಡೆಯ ಕಾರ್ಯಕರ್ತನಿಗೂ ಕೈಗೆ ಸಿಗುತ್ತಿದ್ದರು. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಫೆರ್ನಾಂಡಿಸ್ ಜುಲೈ 19ರಂದು ಮನೆಯಲ್ಲಿ ಯೋಗ ಮಾಡುತ್ತಿದ್ದ ಸಂದರ್ಭ ಕುಸಿದು ಬಿದ್ದು ತಲೆಗೆ ಏಟು ಮಾಡಿಕೊಂಡಿದ್ದರು. ಮೆದುಳಿನಲ್ಲಿ ರಕ್ತಸ್ರಾವವಾಗಿ ಕೋಮಕ್ಕೆ ಜಾರಿದ್ದರು. ಆಸ್ಕರ್ ನಿಧನಕ್ಕೆ ರಾಜ್ಯ ರಾಷ್ಟ್ರಮಟ್ಟದ ನಾಯಕರು ಕಂಬನಿ ಮಿಡಿದಿದ್ದಾರೆ.  ಇದನ್ನೂ ಓದಿ: ಕಾಂಗ್ರೆಸ್ ಮುಖಂಡ ಆಸ್ಕರ್ ಫರ್ನಾಂಡಿಸ್ ಇನ್ನಿಲ್ಲ

    ಯೋಗ, ಈಜು, ಯಕ್ಷಗಾನ, ಹುಲಿ ವೇಷ ಆಯುರ್ವೇದ ಹೀಗೆ ಆಸ್ಕರ್ ಫರ್ನಾಂಡಿಸ್ ಅವರದ್ದು ಒಂದು ವರ್ಣರಂಜಿತ ಜೀವನ. ಉಡುಪಿಯ ಮದರ್ ಆಫ್ ಸಾರೋಸ್ ಚರ್ಚ್‍ನಲ್ಲಿ ಮಂಗಳವಾರ ವಿಶೇಷ ಪ್ರಾರ್ಥನೆ, ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅಂತಿಮದರ್ಶನ ನಡೆಯಲಿದೆ. ಬಳಿಕ ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿಗೆ ಆಸ್ಕರ್ ಫರ್ನಾಂಡಿಸ್ ಅವರ ಮೃತದೇಹವನ್ನ ರವಾನೆ ಮಾಡಲಾಗುತ್ತಿದ್ದು, ಕೇಂದ್ರದ ರಾಜ್ಯದ ಹಿರಿಯ ನಾಯಕರು ಅಂತಿಮ ದರ್ಶನ ಮಾಡಲಿದ್ದಾರೆ. ಇದನ್ನೂ ಓದಿ: ಆಸ್ಕರ್ ಫರ್ನಾಂಡಿಸ್ ನಿಧನ- ನಾಳೆ ಉಡುಪಿ ಚರ್ಚ್‍ನಲ್ಲಿ ವಿಶೇಷ ಪ್ರಾರ್ಥನೆ

  • ಆಸ್ಕರ್ ಫೆರ್ನಾಂಡಿಸ್‍ಗೆ ಶಸ್ತ್ರಚಿಕಿತ್ಸೆ ಯಶಸ್ವಿ

    ಆಸ್ಕರ್ ಫೆರ್ನಾಂಡಿಸ್‍ಗೆ ಶಸ್ತ್ರಚಿಕಿತ್ಸೆ ಯಶಸ್ವಿ

    ಮಂಗಳೂರು: ಕಾಂಗ್ರೆಸ್ಸಿನ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಅವರಿಗೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ.

    ಸದ್ಯ ಆಸ್ಕರ್ ಅವರು ಮಂಗಳೂರಿನ ಯೆನಪೋಯ ಆಸ್ಪತ್ರೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ಮೆದುಳಿನ ರಕ್ತನಾಳ ಹೆಪ್ಪುಗಟ್ಟಿ ಪ್ರಜ್ಞೆ ಕಳೆದುಕೊಂಡಿದ್ದರು. ಹೀಗಾಗಿ ವೈದ್ಯರು ತಡರಾತ್ರಿ ಮೆದುಳಿನ ರಕ್ತನಾಳದ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಡಾ.ದಿವಾಕರ್ ರಾವ್ ಹಾಗೂ ಡಾ. ಸುನೀಲ್ ಶೆಟ್ಟಿ ಅವರಿಂದ ಶಸ್ತ್ರಚಿಕಿತ್ಸೆ ನಡೆದಿದ್ದು, ಹೆಪ್ಪುಗಟ್ಟಿದ ರಕ್ತ ಶಸ್ತ್ರಚಿಕಿತ್ಸೆಯ ಮೂಲಕ ತೆರವುಗೊಳಿಸಲಾಗಿದೆ.

    ವೈದ್ಯರುಗಳ ಪರಿಶ್ರಮದಿಂದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಶೀಘ್ರ ಪ್ರಜ್ಞೆ ಮರುಕಳಿಸುವ ನಿರೀಕ್ಷೆ ಇದೆ. ಕಳೆದ ಭಾನುವಾರ ಮನೆಯಲ್ಲಿ ಯೋಗ ಮಾಡುವ ಸಂದರ್ಭದಲ್ಲಿ ಜಾರಿ ಬಿದ್ದಿದ್ದರು. ಆದರೆ ದೊಡ್ಡ ಪ್ರಮಾಣದಲ್ಲಿ ಗಾಯವಾಗಿಲ್ಲವೆಂದು ನಿರ್ಲಕ್ಷ್ಯ ವಹಿಸಿದ್ದರು. ಆ ಬಳಿಕ ಮಾಮೂಲಿ ಚಿಕಿತ್ಸೆಗೆಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ತೆರಳಿದ್ದ ವೇಳೆ ತಲೆಯ ಒಳಭಾಗಕ್ಕೆ ಏಟು ಬಿದ್ದಿರುವುದು ಬೆಳಕಿಗೆ ಬಂದಿತ್ತು.

  • ಧರ್ಮಸ್ಥಳದ ಪ್ರಸಾದ ನೀಡಿ ಆಸ್ಕರ್ ಫೆರ್ನಾಂಡಿಸ್ ಚೇತರಿಕೆಗೆ ಪ್ರಾರ್ಥಿಸಿದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ

    ಧರ್ಮಸ್ಥಳದ ಪ್ರಸಾದ ನೀಡಿ ಆಸ್ಕರ್ ಫೆರ್ನಾಂಡಿಸ್ ಚೇತರಿಕೆಗೆ ಪ್ರಾರ್ಥಿಸಿದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ

    ಮಂಗಳೂರು: ಮಂಗಳೂರಿನ ಯೆನೆಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಆಸ್ಕರ್ ಫೆರ್ನಾಂಡಿಸ್ ಅವರನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

    ಆಸ್ಪತ್ರೆಗೆ ಭೇಟಿ ನೀಡಿದ ವೀರೇಂದ್ರ ಹೆಗ್ಗಡೆ ಅವರು ಆಸ್ಕರ್ ಫೆರ್ನಾಂಡಿಸ್ ಅವರಿಗೆ ಧರ್ಮಸ್ಥಳ ಮಂಜುನಾಥ ದೇವರ ಪ್ರಸಾದವನ್ನು ನೀಡಿ ಶೀಘ್ರ ಚೇತರಿಕೆಗೆ ಪ್ರಾರ್ಥಿಸಿದರು. ಬಳಿಕ ಕುಟುಂಬ ವರ್ಗದವರು ಮತ್ತು ವೈದ್ಯರೊಂದಿಗೆ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು. ಇದನ್ನೂ ಓದಿ: ಆಸ್ಕರ್ ಫೆರ್ನಾಂಡಿಸ್ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ, ಡಿಕೆಶಿ

    ಈ ಸಂದರ್ಭದಲ್ಲಿ ಮಾತನಾಡಿದ ವೀರೇಂದ್ರ ಹೆಗ್ಗಡೆ ಅವರು, ಆಸ್ಕರ್ ಫೆರ್ನಾಂಡಿಸ್ ರವರು ಇಂದಿರಾಗಾಂಧಿ, ರಾಜೀವ್ ಗಾಂಧಿಯವರಿಗೆ ಆಪ್ತರಾಗಿದ್ದರು. ರಾಜ್ಯಕ್ಕೆ ಬಹಳಷ್ಟು ಸೇವೆ ಮಾಡಿದ್ದಾರೆ. ಅವರಿಗೆ ಧರ್ಮಸ್ಥಳ ಮಂಜುನಾಥ ದೇವರ ಪ್ರಸಾದ ಹಾಕಿ, ಶುಭಹಾರೈಸಿ ಬಂದಿದ್ದೇನೆ. ವೈದ್ಯರ ವರದಿ ಪ್ರಕಾರ, ಅವರ ಮೆದುಳು ಇನ್ನೂ ಚುರುಕಾಗಿದೆ. ಪಕ್ಷಾತೀತವಾಗಿ ಕರ್ನಾಟಕ ಹಾಗೂ ತುಳುನಾಡಿನ ಜನತೆ ಅವರ ಆರೋಗ್ಯಕ್ಕಾಗಿ ಪ್ರಾರ್ಥನೆ ಮಾಡುತ್ತಿದ್ದೇವೆ ಅವರು ಶೀಘ್ರ ಗುಣಮುಖರಾಗಲಿ ಎಂದು ವೀರೇಂದ್ರ ಹೆಗ್ಗಡೆ ಹಾರೈಸಿದರು. ಇದನ್ನೂ ಓದಿ: ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲು

  • ಚರ್ಚ್, ದೇವಸ್ಥಾನದಲ್ಲಿ ಗಳಗಳನೆ ಕಣ್ಣೀರಿಟ್ಟ ಜನಾರ್ದನ ಪೂಜಾರಿ

    ಚರ್ಚ್, ದೇವಸ್ಥಾನದಲ್ಲಿ ಗಳಗಳನೆ ಕಣ್ಣೀರಿಟ್ಟ ಜನಾರ್ದನ ಪೂಜಾರಿ

    ಮಂಗಳೂರು: ಕಾಂಗ್ರೆಸ್‍ನ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವರಾದ ಜನಾರ್ದನ ಪೂಜಾರಿ ಇಂದು ದೇವಸ್ಥಾನ ಹಾಗೂ ಚರ್ಚ್ ನಲ್ಲಿ ಗಳಗಳನೆ ಅತ್ತುಬಿಟ್ಟರು.

    ಜನಾರ್ದನ ಪೂಜಾರಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ಆರೋಗ್ಯಕ್ಕಾಗಿ ಪ್ರಾರ್ಥಿಸಲು ಚರ್ಚ್ ಗೆ ತೆರಳಿದ್ದರು. ಈ ವೇಳೆ ಅಲ್ಲಿ ಆಸ್ಕರ್ ಅವರನ್ನು ಕಂಡು ಪೂಜಾರಿ ಅವರು ಬೇಸ್ತು ಬಿದ್ದರು.

    ಆಸ್ಕರ್ ಫೆರ್ನಾಂಡಿಸ್ ಆರೋಗ್ಯದಲ್ಲಿ ಏರುಪೇರಾಗಿದೆ ಎನ್ನುವ ಮಾಹಿತಿ ತಿಳಿದ ಪೂಜಾರಿಯವರು ದಿಢೀರನೆ ದೇವಸ್ಥಾನ, ಚರ್ಚ್ ಗಳಲ್ಲಿ ವಿಶೇಷ ಪ್ರಾರ್ಥನೆಗೆ ತೆರಳಿದ್ದರು. ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ ಕ್ಷೇತ್ರದಲ್ಲಿ ಪ್ರಾರ್ಥನೆ ನೆರವೇರಿಸಿದ ಪೂಜಾರಿ, ಅಲ್ಲಿ ಆಸ್ಕರ್ ನೆನೆದು ಗಳಗಳನೆ ಅತ್ತಿದ್ದೂ ಆಗಿತ್ತು. ಬಳಿಕ ನಗರದ ರೊಸಾರಿಯೋ ಚರ್ಚ್ ಗೆ ಪ್ರಾರ್ಥನೆಗಾಗಿ ತೆರಳಿದ ಸಂದರ್ಭದಲ್ಲಿ ಸ್ವತಃ ಆಸ್ಕರ್ ಫೆರ್ನಾಂಡಿಸ್ ಚರ್ಚ್ ನಲ್ಲಿರುವುದನ್ನು ಕಂಡು ಪೂಜಾರಿ ಒಂದು ಕ್ಷಣ ವಿಚಲಿತರಾದರು.

    ಬಳಿಕ ಆಸ್ಕರ್ ಜೊತೆಗೆ ಚರ್ಚ್ ನಲ್ಲಿ ಪ್ರಾರ್ಥನೆ ನಡೆಸಿದ ಪೂಜಾರಿ ಅವರು ಪರಸ್ಪರ ಆಲಿಂಗಿಸಿಕೊಂಡರು. ಆಸ್ಕರ್ ಅವರಿಗೆ ಹುಷಾರಿಲ್ಲ ಎಂದು ಪೂಜಾರಿಯವರಿಗೆ ಯಾರೋ ಸುಳ್ಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಸ್ವತಃ ಅನಾರೋಗ್ಯದಿಂದ ಬಳಲುತ್ತಿರುವ ಪೂಜಾರಿ, ದೇವರಲ್ಲಿ ಪ್ರಾರ್ಥನೆ ನೆರವೇರಿಸಲು ಮಂಗಳೂರಿಗೆ ಆಗಮಿಸಿದ್ದರು. ಎದ್ದು ನಡೆಯಲಾಗದ ಸ್ಥಿತಿಯಲ್ಲಿರುವ ಜನಾರ್ದನ ಪೂಜಾರಿ ಅವರು, ತಮಗಿಂತ ಕಿರಿಯರಾಗಿರುವ ಆಸ್ಕರ್ ಆರೋಗ್ಯಕ್ಕಾಗಿ ಪ್ರಾರ್ಥಿಸಲು ತೆರಳುವಂತೆ ಮಾಡಿದ್ದು ಯಾರೆಂಬ ವಿಚಾರ ಈಗ ಚರ್ಚೆಗೆ ಗ್ರಾಸವಾಗಿದೆ.

  • ರಾಹುಲ್ ಗಾಂಧಿ ಪ್ರವಾಸ ಮಾಡಿದ್ರೆ ಬಿಜೆಪಿಗೆ ಟೆನ್ಶನ್ ಯಾಕೆ- ಆಸ್ಕರ್ ಫೆರ್ನಾಂಡಿಸ್ ಪ್ರಶ್ನೆ

    ರಾಹುಲ್ ಗಾಂಧಿ ಪ್ರವಾಸ ಮಾಡಿದ್ರೆ ಬಿಜೆಪಿಗೆ ಟೆನ್ಶನ್ ಯಾಕೆ- ಆಸ್ಕರ್ ಫೆರ್ನಾಂಡಿಸ್ ಪ್ರಶ್ನೆ

    ಉಡುಪಿ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ಕೊಟ್ಟಲ್ಲೆಲ್ಲಾ ಬಿಜೆಪಿಗೆ ಲಾಭ ಅಂತ ಹೇಳುತ್ತಾರೆ. ಹಾಗಾದ್ರೆ ರಾಹುಲ್ ಪ್ರವಾಸ ಮಾಡಿದ್ರೆ ಬಿಜೆಪಿಗೆ ಟೆನ್ಶನ್ ಯಾಕೆ ಅಂತ ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ಪ್ರಶ್ನಿಸಿದ್ದಾರೆ.

    ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಹುಲ್ ಪ್ರವಾಸದ ವೇಳೆ ಅಭೂತಪೂರ್ವ ಜನಬೆಂಬಲ ಸಿಕ್ಕಿದೆ. ಸರ್ಕಾರದ ಕೆಲಸ ಜನರ ಮನಸ್ಸು, ಹೃದಯ, ಕರುಳನ್ನು ತಲುಪಿದೆ. ರಾಹುಲ್ ರಾಜ್ಯಕ್ಕೆ ಬಂದ್ರೆ ಬಿಜೆಪಿಗೆ ಲಾಭ ಆಗೋದಾದ್ರೆ ಪ್ರಧಾನಿ ಮೋದಿ, ಅಮಿತ್ ಶಾ ಬಂದ್ರೆ ಕಾಂಗ್ರೆಸ್ಸಿಗೆ ಲಾಭವಾಗುತ್ತಾ? ಅಂತ ಆಸ್ಕರ್ ಪ್ರಶ್ನೆ ಮಾಡಿದರು.

    ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮೀನುಗಾರರ ಸಮಾವೇಶ ಮಾಡುತ್ತಾರೆ. ಕರಾವಳಿ ಮೀನುಗಾರರು ಸಂಕಷ್ಟದಲ್ಲಿದ್ದಾರೆ. ಸಮಾವೇಶ ಮಾಡುವ ಜೊತೆ ಮೀನುಗಾರರಿಗೆ ಎಲ್ಲಾ ವಿಚಾರದಲ್ಲೂ ಸಂಪೂರ್ಣ ಸಹಕಾರ ಕೊಡಿ ಎಂದು ಹೇಳಿದರು.

    ರಾಹುಲ್ ಗಾಂಧಿ ದೇವಸ್ಥಾನ ಭೇಟಿ ವಿಚಾರದಲ್ಲಿ ವಿಪಕ್ಷಗಳು ಟೀಕಿಸುತ್ತವೆ. ಟೀಕೆ ಮಾಡುವುದು ಅವರ ಕೆಲಸ ಎಂದು ಹೇಳಿದರು.

  • ಕೈ ನಾಯಕರ ವಿರುದ್ಧ ಬಿಜೆಪಿ ಪ್ರತಿಭಟನೆಗೆ ಕೌಂಟರ್ ನೀಡಲು ಈ ವಿಚಾರ ಮುಂದಿಟ್ಟು ಪ್ರತಿಭಟಿಸಲಿದೆ ಕಾಂಗ್ರೆಸ್

    ಕೈ ನಾಯಕರ ವಿರುದ್ಧ ಬಿಜೆಪಿ ಪ್ರತಿಭಟನೆಗೆ ಕೌಂಟರ್ ನೀಡಲು ಈ ವಿಚಾರ ಮುಂದಿಟ್ಟು ಪ್ರತಿಭಟಿಸಲಿದೆ ಕಾಂಗ್ರೆಸ್

    ಬೆಂಗಳೂರು: ಐಟಿ ದಾಳಿಗೆ ಒಳಗಾದ ಕೈ ನಾಯಕರ ವಿರುದ್ಧ ಪ್ರತಿಭಟನೆಗೆ ಮುಂದಾಗಿರುವ ಬಿಜೆಪಿಗೆ ಪ್ರತಿಯಾಗಿ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ರಾಜ್ಯದಲ್ಲಿ ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ.

    ನಗರದಲ್ಲಿ ಐಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಮಾತನಾಡಿ, ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿಯವರೇ ದಾರಿ ಮಾಡಿ ಕೊಡುತ್ತಿದ್ದಾರೆ. ಗುಜರಾತ್ ನಲ್ಲಿ ನಮ್ಮ ಶಾಸಕರನ್ನು ಖರಿದೀಸಲು ಮುಂದಾದ ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ ಎಂದು ಅವರು ಹೇಳಿದರು.

    ಕಾಂಗ್ರೆಸ್ ಶಾಸಕರನ್ನು ಬಿಜೆಪಿಯವರು ಖರೀದಿಸಲು ಹೋಗಿದ್ದು, ಪ್ರಜಾಪ್ರಭುತ್ವದ ವಿರೋಧಿ ಬೆಳವಣಿಗೆಯಾಗಿದೆ. ಬಿಜೆಪಿಯವರು ಇಲ್ಲಿ ಐಟಿ ದಾಳಿ ಆಗಿರುವ ತಮ್ಮ ನಾಯಕರ ವಿರುದ್ಧ ಪ್ರತಿಭಟನೆ ನಡೆಸಲಿ. ಅಮಿತ್ ಶಾ ಮೊದಲು ಗುಜರಾತ್ ರಾಜ್ಯದ ಕಡೆ ಗಮನ ಹರಿಸಲಿ ಎಂದು ಅವರು ವಾಗ್ದಾಳಿ ನಡೆಸಿದರು.

    ಕರ್ನಾಟಕದ ಮಾದರಿಯನ್ನು ಕೇಂದ್ರ ಸರಕಾರ ಅನುಸರಿಸಿ ಶಾದಿ ಶಗೂನ್ ಜಾರಿ ಮಾಡುತ್ತಿರುವುದು ಸ್ವಾಗತಾರ್ಹ. ಹಸಿವು ಮುಕ್ತ ಭಾರತ, ಹಸಿವು ಮುಕ್ತ ಕರ್ನಾಟಕ ಕಾಂಗ್ರೆಸ್ ಗುರಿಯಾಗಿದ್ದು, ಇಂದಿರಾ ಕ್ಯಾಂಟೀನ್ ಕಾರ್ಯಕ್ರಮ ಮೂಲಕ ಬಡವರಿಗೆ ಆಹಾರ ಪೂರೈಕೆ ಆಗಲಿದೆ. ಇದು ನಮ್ಮ ಸರ್ಕಾರದ ದೊಡ್ಡ ಹೆಜ್ಜೆಯಾಗಿದ್ದು ಈ ಯೋಜನೆ ಜಾರಿಗೆ ತಂದ ಸರ್ಕಾರಕ್ಕೆ ಅಭಿನಂದನೆಗಳು ಎಂದು ಆಸ್ಕರ್ ಫೆರ್ನಾಂಡಿಸ್ ಹೊಗಳಿದರು.

    ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಾರ್ನಿಂಗ್‍ಗೆ ಫುಲ್ ಆ್ಯಕ್ವೀವ್ ಆಗಿರುವ ಬಿಜೆಪಿ ನಾಯಕರು ಈ ಶುಕ್ರವಾರದಿಂದಲೇ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಮುಂದಿನ ಶುಕ್ರವಾರದಿಂದ ಸತತ ಒಂದು ವಾರ ಕಾಲ, ಐಟಿ ದಾಳಿಗೆ ಒಳಗಾದ ಇಂಧನ ಸಚಿವ ಡಿ ಕೆ ಶಿವಕುಮಾರ್, ಸಚಿವ ರಮೇಶ್ ಜಾರಕಿಹೊಳಿ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಪ್ರತಿಭಟನೆ ಮಾಡುತ್ತೇವೆ. ಪಂಜಿನ ಮೆರವಣಿಗೆ, ಬೈಕ್‍ರ್ಯಾಲಿ ಮೂಲಕ ಜನ ಜಾಗೃತಿ ಮೂಡಿಸುವುದಾಗಿ ಎಂದು ರಾಜ್ಯಾಧ್ಯಕ್ಷ ಯಡಿಯೂರಪ್ಪ ಘೋಷಣೆ ಮಾಡಿದ್ದರು.