Tag: ಆಸ್ಟ್ರೆಲಿಯಾ

  • ಆಸ್ಟ್ರೇಲಿಯಾದಲ್ಲಿ ಮತ್ತೆ ಖಲಿಸ್ತಾನಿಯರ ಅಟ್ಟಹಾಸ – ತ್ರಿವರ್ಣಧ್ವಜ ಹಿಡಿದ ಭಾರತೀಯರ ಮೇಲೆ ದಾಳಿ

    ಆಸ್ಟ್ರೇಲಿಯಾದಲ್ಲಿ ಮತ್ತೆ ಖಲಿಸ್ತಾನಿಯರ ಅಟ್ಟಹಾಸ – ತ್ರಿವರ್ಣಧ್ವಜ ಹಿಡಿದ ಭಾರತೀಯರ ಮೇಲೆ ದಾಳಿ

    ಸಿಡ್ನಿ: ಆಸ್ಟ್ರೇಲಿಯಾದಲ್ಲಿ ( Australia) ತ್ರಿವರ್ಣಧ್ವಜ (Tricolour) ಹಿಡಿದ ಭಾರತೀಯರ (Indians) ಮೇಲೆ ಖಲಿಸ್ತಾನಿ (Khalistan) ಬೆಂಬಲಿಗರು ದಾಳಿ ನಡೆಸಿದ್ದಾರೆ.

    ಈ ವೀಡಿಯೋವನ್ನು ಬಿಜೆಪಿ (BJP) ಮುಖಂಡ ಮಂಜಿಂದರ್ ಸಿಂಗ್ ಸಿರ್ಸಾ ಹಂಚಿಕೊಂಡಿದ್ದಾರೆ. ಸಮಾಜ ವಿರೋಧಿ ಚಟುವಟಿಕೆಯನ್ನು ಎದುರಿಸಬೇಕು ಎಂದು ಬರೆದುಕೊಂಡಿದ್ದಾರೆ.

    ಆಸ್ಟ್ರೇಲಿಯಾದಲ್ಲಿ ಖಲಿಸ್ತಾನಿ ಉಗ್ರರು ನಡೆಸುತ್ತಿರುವ ಭಾರತ ವಿರೋಧಿ ಚಟುವಟಿಕೆಗಳನ್ನು ಖಂಡಿಸುತ್ತೇನೆ. ಈ ಚಟುವಟಿಕೆಗಳಿಂದ ದೇಶದ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ತರಲು ಪ್ರಯತ್ನಿಸುತ್ತಿರುವ ಸಮಾಜ ವಿರೋಧಿ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಟ್ವೀಟ್ ಮಾಡಿದ್ದಾರೆ.

    ವೀಡಿಯೋದಲ್ಲಿ ಏನಿದೆ?: ಖಲಿಸ್ತಾನಿ ಧ್ವಜವನ್ನು ಬೀಸುತ್ತಿರುವ ಗುಂಪೊಂದು ತ್ರಿವರ್ಣ ಧ್ವಜವನ್ನು ಹೊತ್ತ ಭಾರತೀಯರ ಮೇಲೆ ದಾಳಿ ನಡೆಸಿದೆ. ಖಲಿಸ್ತಾನಿ ಪರದ ತಂಡ ರಾಡ್‍ಗಳನ್ನು ಹಿಡಿದು ಮತ್ತೊಂದು ಗುಂಪಿನ ಮೇಲೆ ಹಲ್ಲೆ ನಡೆಸಿದೆ. ಅಷ್ಟೇ ಅಲ್ಲದೇ ಈ ವೇಳೆ ತ್ರಿವರ್ಣ ಧ್ವಜವನ್ನು ರಸ್ತೆಗೆ ಎಸೆದಿದ್ದಾರೆ.

    ಘಟನೆ ವೇಳೆ ಐವರು ಗಾಯಗೊಂಡಿದ್ದಾರೆ. ಗಾಯಗೊಂಡಿರುವ ಐವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ (Hospital) ದಾಖಲಿಸಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್, ಜೆಡಿಎಸ್‌ನಲ್ಲಿ ಗುರುತಿಸಿಕೊಂಡಿದ್ದ ಮುಸ್ಲಿಂ ಮಹಿಳೆಯರು ರೆಡ್ಡಿ ಪಕ್ಷಕ್ಕೆ ಸೇರ್ಪಡೆ

    ದಾಳಿಯನ್ನು ಖಂಡಿಸಿರುವ ವಿಕ್ಟೋರಿಯಾ ಪೊಲೀಸರು, ಹಿಂಸಾತ್ಮಕ ದಾಳಿಯ ನಂತರ ಇಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಬಂಧಿತ ಇಬ್ಬರು ವ್ಯಕ್ತಿಗಳು ತಮ್ಮ 30 ರ ಹರೆಯದವರಾಗಿದ್ದಾರೆ ಎಂದು ತಿಳಿಸಿದರು.

    ಆಸ್ಟ್ರೇಲಿಯಾದಲ್ಲಿ ಹಿಂದೂ ದೇವಾಲಯಗಳನ್ನು ಧ್ವಂಸಗೊಳಿಸಿದ ಕೆಲವೇ ವಾರಗಳ ನಂತರ ಈ ಘಟನೆ ನಡೆದಿದೆ. ಮೆಲ್ಬೋರ್ನ್‍ನಲ್ಲಿ ಕಳೆದ ಕೆಲವು ವಾರಗಳಲ್ಲಿ ಖಲಿಸ್ತಾನ್ ಪರ ಮತ್ತು ಭಾರತ ವಿರೋಧಿ ಘೋಷಣೆಗಳಿಂದ ಮೂರು ದೇವಾಲಯಗಳನ್ನು ವಿರೂಪಗೊಳಿಸಲಾಗಿದೆ. ಇದನ್ನೂ ಓದಿ: ಇಂದಿರಾ ಕ್ಯಾಂಟೀನ್‍ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ – ವಾಟರ್ ಬಿಲ್ ಕಟ್ಟದಿದ್ದಕ್ಕೆ ಕನೆಕ್ಷನ್ ಕಟ್

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ವಿಮಾನ ನಿಲ್ದಾಣದಲ್ಲಿ ಗುಂಡಿನ ದಾಳಿ

    ವಿಮಾನ ನಿಲ್ದಾಣದಲ್ಲಿ ಗುಂಡಿನ ದಾಳಿ

    ಸಿಡ್ನಿ: ಆಸ್ಟ್ರೇಲಿಯಾದ ಕ್ಯಾನ್‍ಬೆರಾ ವಿಮಾನ ನಿಲ್ದಾಣದ ಚೆಕ್ ಇನ್ ಪ್ರದೇಶದಲ್ಲಿ ಬಂದೂಕುಧಾರಿಯೊಬ್ಬ ಐದು ಬಾರಿ ಗುಂಡಿನ ದಾಳಿ ನಡೆಸಿದ ಘಟನೆ ನಡೆದಿದೆ.

    ಘಟನೆಗೆ ಸಂಬಂಧಿಸಿ ಓರ್ವನನ್ನು ವಶಕ್ಕೆ ಪಡೆಯಲಾಗಿದೆ. ಜೊತೆಗೆ ಆತನ ಬಳಿ ಇದ್ದ ಬಂದೂಕನ್ನು ವಶಪಡಿಸಿಕೊಳ್ಳಲಾಗಿದೆ. ಕೃತ್ಯದ ವೀಡಿಯೋ ಸಿಸಿಟಿವಿಯಲ್ಲಿ ದಾಖಲಾಗಿದೆ. ಈ ವೇಳೆ ಒಬ್ಬನೇ ಘಟನೆಗೆ ಕಾರಣ ಎನ್ನುವುದರ ಬಗ್ಗೆ ಸುಳಿವು ದೊರೆತಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಹಾನಿ ಆಗಿಲ್ಲ. ಇದನ್ನೂ ಓದಿ: ಸಿಧು ಮೂಸೆವಾಲಾ ಹತ್ಯೆ ಹಿಂದೆ ಆಪ್ತ ಸ್ನೇಹಿತರೂ ಸೇರಿದ್ದಾರೆ: ತಂದೆ ಆರೋಪ

    ಮುನ್ನೆಚ್ಚರಿಕೆ ಕ್ರಮವಾಗಿ ಕ್ಯಾನ್‍ಬೆರಾ ವಿಮಾನ ನಿಲ್ದಾಣದ ಟರ್ಮಿನಲ್‍ನಿಂದ ತೆರವು ಮಾಡಲಾಗಿದ್ದು, ವಿಮಾನ ನಿಲ್ದಾಣದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟವನ್ನು ನಿಲ್ಲಿಸಲಾಗಿತ್ತು. ಇನ್ನೂ ಕೆಲವು ವಿಮಾನಗಳು ಪ್ರಯಾಣಿಕರೊಂದಿಗೆ ರನ್‍ವೇಯಲ್ಲಿ ಸ್ಥಗಿತಗೊಂಡಿದ್ದವು. ಕೆಲವು ಗಂಟೆಗಳ ನಂತರ ವಿಮಾನ ಕಾರ್ಯಾಚರಣೆಗಳು ಪುನಾರಂಭಗೊಂಡವು. ಇದನ್ನೂ ಓದಿ: ಕೊನೆ ಉಸಿರಿರೋವರೆಗೂ ಮಂಡ್ಯದ ಸೊಸೆಯಾಗಿರುವೆ: ಸುಮಲತಾ ಅಂಬರೀಶ್

    Live Tv
    [brid partner=56869869 player=32851 video=960834 autoplay=true]